New Parliament Building: ರಾಷ್ಟ್ರಪತಿ ಅವರಿಂದಲೇ ಸಂಸತ್‌ ಭವನ ಉದ್ಘಾಟನೆ ಕೋರಿ ಅರ್ಜಿ; ತಿರಸ್ಕರಿಸಿದ ಕೋರ್ಟ್ - Vistara News

ದೇಶ

New Parliament Building: ರಾಷ್ಟ್ರಪತಿ ಅವರಿಂದಲೇ ಸಂಸತ್‌ ಭವನ ಉದ್ಘಾಟನೆ ಕೋರಿ ಅರ್ಜಿ; ತಿರಸ್ಕರಿಸಿದ ಕೋರ್ಟ್

New Parliament Building: ನೂತನ ಸಂಸತ್‌ ಭವನವನ್ನು ರಾಷ್ಟ್ರಪತಿ ಅವರೇ ಉದ್ಘಾಟಿಸುವಂತೆ ನಿರ್ದೇಶನ ನೀಡಬೇಕು ಎಂದು ಅಡ್ವೊಕೇಟ್‌ ಸಿ.ಆರ್.ಜಯಾ ಸುಕಿನ್‌ ಎಂಬುವರು ಅರ್ಜಿ ಸಲ್ಲಿಸಿದ್ದರು.

VISTARANEWS.COM


on

Supreme Court On Article 370
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ನೂತನ ಸಂಸತ್‌ ಭವನದ ಉದ್ಘಾಟನೆ (New Parliament Building) ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಹಾಗೂ ಪಿ.ಎಸ್.ನರಸಿಂಹ ಅವರ ಪೀಠವು, “ಏಕೆ ಈ ಅರ್ಜಿ ಸಲ್ಲಿಸಲಾಗಿದೆ ಎಂಬುದೇ ತಿಳಿಯುತ್ತಿಲ್ಲ. ಸಂವಿಧಾನದ 32ನೇ ವಿಧಿ ಅನ್ವಯ ಈ ಅರ್ಜಿಯು ವಿಚಾರಣೆಗೆ ಅರ್ಹವಲ್ಲ” ಎಂದು ತಿಳಿಸಿತು

ಅಡ್ವೊಕೇಟ್ ಸಿ.ಆರ್‌. ಜಯಾ ಸುಕಿನ್‌ ಅವರು ಸುಪ್ರೀಂ ಕೋರ್ಟ್‌ಗೆ ಗುರುವಾರ ಅರ್ಜಿ ಸಲ್ಲಿಸಿದ್ದರು. “ಸಂವಿಧಾನದ 79ನೇ ವಿಧಿ ಪ್ರಕಾರ, ಸಂಸತ್ತಿನಲ್ಲಿ ಎರಡು ಸದನಗಳು ಇರಬೇಕು ಹಾಗೂ ಒಬ್ಬ ರಾಷ್ಟ್ರಪತಿ ಇರಬೇಕು ಎಂಬ ನಿಯಮವಿದೆ. ಆದರೆ, ಲೋಕಸಭೆ ಸಚಿವಾಲಯ ಹಾಗೂ ಕೇಂದ್ರ ಸರ್ಕಾರವು 79ನೇ ವಿಧಿಯನ್ನು ಉಲ್ಲಂಘಿಸಿವೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಹೇಗಿದೆ ನೋಡಿ ನೂತನ ಸಂಸತ್‌ ಭವನ

“ನೂತನ ಸಂಸತ್‌ ಭವನದ ಉದ್ಘಾಟನೆಗೆ ರಾಷ್ಟ್ರಪತಿ ಅವರನ್ನು ಆಹ್ವಾನಿಸದಿರುವ ಮೂಲಕ ಕೇಂದ್ರ ಸರ್ಕಾರವು ಮಹೋನ್ನತ ಹುದ್ದೆಗೆ ಅವಮಾನ ಮಾಡಲಾಗಿದೆ” ಎಂದು ಜಯಾ ಸುಕಿನ್‌ ವಾದ ಮಂಡಿಸಿದರು. ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ಅರ್ಜಿಯನ್ನು ವಜಾಗೊಳಿಸಬೇಕು. ಹಾಗೊಂದು ವೇಳೆ, ಅರ್ಜಿದಾರರೇ ಹಿಂಪಡೆಯಲು ಅವಕಾಶ ನೀಡಿದರೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತಾರೆ” ಎಂದರು. ಕೊನೆಗೆ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತು.

60 ಸಾವಿರ ಕಾರ್ಮಿಕರಿಗೆ ಸನ್ಮಾನ

ನೂತನ ಸಂಸತ್‌ ಭವನದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 60 ಸಾವಿರ ಕಾರ್ಮಿಕರನ್ನು ಸನ್ಮಾನಿಸಲಿದ್ದಾರೆ. “ಸುಮಾರು 60,000 ಶ್ರಮ ಯೋಗಿಗಳು ಈ ಸಂಸತ್ ಭವನದ ನಿರ್ಮಾಣವನ್ನು ದಾಖಲೆ ಸಮಯದಲ್ಲಿ ಪೂರ್ಣಗೊಳಿಸಲು ಕೊಡುಗೆ ನೀಡಿದ್ದಾರೆ. ಮೇ 28ರಂದು ಪ್ರಧಾನಿ ಮೋದಿ ನೂತನ ಸಂಸತ್ ಭವನವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿಯವರು ಈ ಕಾರ್ಮಿಕರನ್ನು (ಶ್ರಮ ಯೋಗಿಗಳು) ಗೌರವಿಸಲಿದ್ದಾರೆ” ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಇದನ್ನೂ ಓದಿ: New Parliament Building: ಹೊಸ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ…

ಮೇ 28ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರ ಉಪಸ್ಥಿತಿಯಲ್ಲಿ ನೂತನ ಸಂಸತ್‌ ಭವನವನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಕಾರಣ ಸುಮಾರು 20 ಪ್ರತಿಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

Bhagwant Mann: ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು 2022ರಲ್ಲಿ ಡಾ. ಗುರುಪ್ರೀತ್‌ ಕೌರ್‌ ಅವರನ್ನು ಮದುವೆಯಾಗಿದ್ದರು. ಈಗ ಈ ದಂಪತಿಗೆ ಮೊದಲ ಮಗು ಜನಿಸಿದೆ.

VISTARANEWS.COM


on

Bhagwant Mann
Koo

ಚಂಡೀಗಢ: ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ (Bhagwant Mann) ಅವರು 50ನೇ ವಯಸ್ಸಿನಲ್ಲಿ ಮತ್ತೊಮ್ಮೆ ತಂದೆಯಾಗಿದ್ದಾರೆ. ಭಗವಂತ್‌ ಮಾನ್‌ ಹಾಗೂ ಡಾ.ಗುರುಪ್ರೀತ್‌ ಕೌರ್‌ (Dr. Gurpreet Kaur) ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಭಗವಂತ್‌ ಮಾನ್‌ ಅವರು ಈ ಸಂತಸವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನನಗೆ ಹೆಣ್ಣುಮಗು ಜನಿಸಿದೆ” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದು, ಸಾವಿರಾರು ಜನ ಪಂಜಾಬ್‌ ಮುಖ್ಯಮಂತ್ರಿಗೆ (Punjab CM) ಅಭಿನಂದನೆ ಸಲ್ಲಿಸಿದ್ದಾರೆ.

“ದೇವರು ನನಗೆ ಮಗಳನ್ನು ಉಡುಗೊರೆಯಾಗಿ ನೀಡಿದ್ದಾನೆ. ತಾಯಿ ಹಾಗೂ ಮಗಳು ಆರೋಗ್ಯದಿಂದ ಇದ್ದಾರೆ” ಎಂಬುದಾಗಿ ಭಗವಂತ್‌ ಮಾನ್‌ ಪೋಸ್ಟ್‌ ಮಾಡಿದ್ದಾರೆ. ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎಂದು ತಿಳಿದುಬಂದಿದೆ. ಗುರುಪ್ರೀತ್‌ ಕೌರ್‌ ಅವರನ್ನು ಬುಧವಾರ (ಮಾರ್ಚ್‌ 27) ಮೊಹಾಲಿಯ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ (ಮಾರ್ಚ್‌ 28) ಬೆಳಗ್ಗೆ ಹೆರಿಗೆಯಾಗಿದೆ.

2 ವರ್ಷದ ಹಿಂದೆ ಮದುವೆ

ಪಂಜಾಬ್‌ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಭಗವಂತ್‌ ಮಾನ್‌ ಅವರು ಎರಡನೇ ಮದುವೆಯಾಗಿದ್ದರು. ಡಾ.ಗುರುಪ್ರೀತ್‌ ಕೌರ್‌ ಹಾಗೂ ಭಗವಂತ್‌ ಮಾನ್‌ ಅವರ ಮದುವೆಯು 2022ರ ಜುಲೈ 7ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಅತ್ಯಂತ ಆತ್ಮೀಯರ ಉಪಸ್ಥಿತಿಯಲ್ಲಿ ಸರಳವಾಗಿ ನೆರವೇರಿತ್ತು. ಗುರುಪ್ರೀತ್‌ ಕೌರ್‌ ಅವರು ಮೂಲತಃ ಹರಿಯಾಣದ ಕುರುಕ್ಷೇತ್ರದ ಪಿಹೋವಾ ಗ್ರಾಮದವರು. ಪ್ರಸಕ್ತ ಪಂಜಾಬ್‌ನ ರಾಜಪುರದಲ್ಲಿ ನೆಲೆಸಿದ್ದಾರೆ. ಕೃಷಿ ಹಿನ್ನೆಲೆಯ ಕುಟುಂಬದ ಮೂರನೇ ಮಗಳು ಈಕೆ. ಇಡೀ ಕುಟುಂಬವೇ ಈ ಹರಿಯಾಣದಿಂದ ರಾಜಪುರಕ್ಕೆ ಶಿಫ್ಟ್‌ ಆಗಿದೆ.

ಇದನ್ನೂ ಓದಿ: 51ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ!

ಭಗವಂತ್ ಮಾನ್​ ಮೊದಲನೇ ಪತ್ನಿ ಇಂದ್ರಪ್ರೀತ್‌ ಕೌರ್‌ ಅಮೆರಿಕದಲ್ಲಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಈ ಇಬ್ಬರು ಮಕ್ಕಳು ಭಗವಂತ್ ಮಾನ್ ಪಂಜಾಬ್‌ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 23 ವರ್ಷ ಮಗಳು ಸೀರತ್‌ ಕೌರ್‌ ಮಾನ್‌ ಮತ್ತು 17 ವರ್ಷದ ಮಗ ದಿಲ್ಶಾನ್‌ ಸಿಂಗ್‌ ಮಾನ್‌. ಇಬ್ಬರೂ ಅಮೆರಿಕದಲ್ಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಗವಂತ್‌ ಮಾನ್‌ ಅವರ ಮೊದಲ ಪುತ್ರಿಯು ತಂದೆಯ ವಿರುದ್ಧವೇ ಹಲವು ಆರೋಪಗಳನ್ನು ಮಾಡಿದ್ದರು. ಆ ವಿಡಿಯೊ ಭಾರಿ ವೈರಲ್‌ ಆಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಹೋಳಿ ಹೆಸರಲ್ಲಿ ಸ್ಕೂಟಿ ಮೇಲೆಯೇ ಕಾಮದೋಕುಳಿ; ಯುವತಿಯರಿಗೆ 80 ಸಾವಿರ ರೂ. ದಂಡ!

ಕಳೆದ ಸೋಮವಾರ (ಮಾರ್ಚ್‌ 25) ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಇಬ್ಬರು ಯುವತಿಯರು ಚಲಿಸುವ ಸ್ಕೂಟಿಯ ಮೇಲೆಯೇ ರೊಮ್ಯಾನ್ಸ್‌ ಮಾಡಿದ್ದರು. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

VISTARANEWS.COM


on

Holi Girls
Koo

ನೊಯ್ಡಾ: ಹೋಳಿ ಹಬ್ಬದ ದಿನ ಪರಸ್ಪರ ಬಣ್ಣ ಹಚ್ಚಿಕೊಂಡು ಸಂಭ್ರಮಿಸುವ (Holi Celebrations) ಬದಲು ನೊಯ್ಡಾದಲ್ಲಿ ಚಲಿಸುವ ಸ್ಕೂಟಿಯ ಮೇಲೆಯೇ ಹೋಳಿ ಆಚರಣೆ ನೆಪದಲ್ಲಿ ರೊಮ್ಯಾನ್ಸ್‌ ಮಾಡಿದ (Noida Viral Video) ಇಬ್ಬರು ಯುವತಿಯರಿಗೆ ನೊಯ್ಡಾ ಟ್ರಾಫಿಕ್‌ ಪೊಲೀಸರು (Noida Traffic Police) ಮತ್ತೆ 47,500 ರೂ. ದಂಡ ವಿಧಿಸಿದ್ದಾರೆ. ಮೊದಲು ವಿಡಿಯೊ ವೈರಲ್‌ ಆಗುತ್ತಲೇ ಇಬ್ಬರು ಯುವತಿಯರು ಹಾಗೂ ಸ್ಕೂಟಿ ಚಾಲನೆ ಮಾಡುತ್ತಿದ್ದ ಯುವಕನಿಗೆ 33 ಸಾವಿರ ರೂ. ದಂಡ ವಿಧಿಸಿದ್ದರು. ಈಗ ಮತ್ತೆ 47,500 ದಂಡ ವಿಧಿಸಲಾಗಿದ್ದು, ಒಟ್ಟು 80,500 ರೂ. ದಂಡ ಬಿದ್ದಂತಾಗಿದೆ.

ನೋಯ್ಡಾದಲ್ಲಿ ಕಳೆದ ಸೋಮವಾರ (ಮಾರ್ಚ್‌ 25) ಯುವಕನು ಸ್ಕೂಟರ್ ಚಾಲನೆ ಮಾಡುತ್ತಿದ್ದರೆ, ಹುಡುಗಿಯರು ಚಲಿಸುತ್ತಿರುವ ಸ್ಕೂಟರ್​ನಲ್ಲಿ ಪರಸ್ಪರ ಎದುರು ಬದುರಾಗಿ ಕುಳಿತು ಅಶ್ಲೀಲ ನೃತ್ಯ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ವಿಡಿಯೊವನ್ನು ಚಿತ್ರೀಕರಿಸಿದ್ದಾನೆ, ಆದಾಗ್ಯೂ, ವಿಡಿಯೊ ಚಿತ್ರೀಕರಿಸಿದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ವೈರಲ್ ಆಗಿರುವ ವೀಡಿಯೊದಲ್ಲಿ, ಇಬ್ಬರು ಹುಡುಗಿಯರು ಸ್ಕೂಟರ್​ನ ಹಿಂಭಾಗ ಕುಳಿತು ಬಾಲಿವುಡ್ ಹಾಡು “ಮೊಹೆ ರಂಗ್ ಲಗಾಡೆ” ಗೆ ನೃತ್ಯ ಮಾಡಿದ್ದಾರೆ. ಹುಡುಗಿಯರು ನೃತ್ಯ ಮಾಡುತ್ತಿದ್ದಾರೆಯೇ, ಅಶ್ಲೀಲ ಕೆಲಸದಲ್ಲಿ ತೊಡಗಿದ್ದಾರೆಯೇ ಅಥವಾ ಪ್ರಣಯದಲ್ಲಿ ತೊಡಗಿದ್ದಾರೆಯೇ ಎಂದು ವಿವರಿಸುವುದು ಅಸಾಧ್ಯ. ವಿಡಿಯೊ ನೋಡಿಯೇ ನಿರ್ಧಾರ ಮಾಡಬೇಕಾಗುತ್ತದೆ. ಆದರೆ, ಯಾರು ಕೂಡ ಈ ಯುವತಿಯರ ವರ್ತನೆಯನ್ನು ಸಮರ್ಥನೆ ಮಾಡಿಕೊಳ್ಳಲು ಸಾಧ್ಯವಿಲ್ಲ.

ದೆಹಲಿ ಮೆಟ್ರೋದಲ್ಲೂ ಯುವತಿಯರ ಹುಚ್ಚಾಟ

ದೆಹಲಿಯ ಮೆಟ್ರೋದಲ್ಲಿಯೂ ಇಬ್ಬರು ಯುವತಿಯರು ಹೋಳಿ ಆಚರಣೆ ಮಾಡುವ ನೆಪದಲ್ಲಿ ರೊಮ್ಯಾನ್ಸ್‌ ಮಾಡಿದ ವಿಡಿಯೊ ವೈರಲ್‌ ಆಗಿದೆ. ಚಲಿಸುವ ಮೆಟ್ರೋದಲ್ಲಿಯೇ ಪರಸ್ಪರ ಬಣ್ಣ ಹಚ್ಚುವ ಯುವತಿಯರು, ತಬ್ಬಿ ಮುದ್ದಾಡಿದ ವಿಡಿಯೊ ವೈರಲ್‌ ಆಗುತ್ತಲೇ ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Rohit Sharma Holi Celebration: ಹೋಳಿ ಆಡಿ ಸಂಭ್ರಮಿಸಿದ ರೋಹಿತ್​ ಶರ್ಮ; ವಿಡಿಯೊ ವೈರಲ್

ಇಬ್ಬರು ಯುವತಿಯರು ದೆಹಲಿ ಮೆಟ್ರೋ ಹತ್ತಿದ್ದಾರೆ. ರೈಲು ಚಲಿಸುತ್ತಲೇ ಕೆಳಗೆ ಕುಳಿತ ಅವರು ಪರಸ್ಪರ ಬಣ್ಣ ಹಚ್ಚಿಕೊಂಡಿದ್ದಾರೆ. ಆಕೆಯ ಕೆನ್ನೆಗೆ ಈಕೆ, ಈಕೆಯ ಕೆನ್ನೆಗೆ ಆಕೆ ಬಣ್ಣ ಹಚ್ಚುವುದು, ಇಬ್ಬರೂ ಮಲಗಿ ರೊಮ್ಯಾನ್ಸ್‌ ಮಾಡುವುದು, ಮುದ್ದಾಡುವುದು, ಮುತ್ತು ಕೊಡುವುದು ಸೇರಿ ಬಹಿರಂಗವಾಗಿಯೇ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹುಚ್ಚಾಟವನ್ನು ಕಂಡ ಪ್ರಯಾಣಿಕರು, ಮನಸ್ಸಲ್ಲೇ ಹಿಡಿ ಶಾಪ ಹಾಕಿದ್ದಾರೆ. ಆದರೆ, ಪ್ರಯಾಣಿಕರು ಏನೆಂದುಕೊಳ್ಳುತ್ತಾರೋ, ಅವರಿಗೆ ತೊಂದರೆಯಾಗುತ್ತದೆಯೋ ಎಂಬುದರ ಪರಿವೇ ಇಲ್ಲದೆ ಇಬ್ಬರು ಯುವತಿಯರು ಹುಚ್ಚಾಟ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Congress: ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್‌ಗೆ ಶಾಕ್;‌ ಐಟಿ ತನಿಖೆಗೆ ತಡೆ ನೀಡಲು ಕೋರ್ಟ್‌ ನಕಾರ

Congress: ತೆರಿಗೆ ಪಾವತಿ ವಿಚಾರವಾಗಿ ಆದಾಯ ತೆರಿಗೆ ಇಲಾಖೆ ನಡೆಸುತ್ತಿರುವ ಮರು ಮೌಲ್ಯಮಾಪನ ಪ್ರಕ್ರಿಯೆಗೆ ತಡೆ ನೀಡುವಂತೆ ಕಾಂಗ್ರೆಸ್‌ ಮನವಿ ಮಾಡಿತ್ತು. ಆದರೆ, ಕಾಂಗ್ರೆಸ್‌ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ತಳ್ಳಿಹಾಕಿದೆ.

VISTARANEWS.COM


on

Rahul Gandhi And Mallikarjun Kharge
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಸೇರಿ ಹಲವು ಕಾರ್ಯ ಚಟುವಟಿಕೆಗಳಿಗಾಗಿ ರೈಲು ಟಿಕೆಟ್‌ ಬುಕ್‌ ಮಾಡಲು ಕೂಡ ದುಡ್ಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್‌ಗೆ (Congress) ಮತ್ತೊಂದು ಹಿನ್ನಡೆಯುಂಟಾಗಿದೆ. ತೆರಿಗೆ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ ವಿರುದ್ಧ ಆರಂಭಿಸಿರುವ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಗೆ (Tax Re-Assessment Proceeding) ತಡೆ ನೀಡುವಂತೆ ಕೋರಿದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ (Delhi High Court) ನಿರಾಕರಿಸಿದೆ.

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಬಿಜೆಪಿ ಸೇರಿ ಎಲ್ಲ‌ ಪಕ್ಷಗಳು, ಅಭ್ಯರ್ಥಿಗಳು ಅಬ್ಬರ ಪ್ರಚಾರ ಕೈಗೊಳ್ಳುತ್ತಿವೆ. ಆದರೆ, ತೆರಿಗೆ ಪಾವತಿ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ ಬ್ಯಾಂಕ್‌ ಖಾತೆಗಳನ್ನು ತಡೆಹಿಡಿದಿದೆ. ಇದರಿಂದಾಗಿ ಕಾಂಗ್ರೆಸ್‌ ಸಂಕಷ್ಟಕ್ಕೆ ಸಿಲುಕಿದೆ. ಇದರ ಬೆನ್ನಲ್ಲೇ, ಆದಾಯ ತೆರಿಗೆ ಇಲಾಖೆಯ ಪರಿಶೀಲನೆಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್‌ ಕೂಡ ನಿರಾಕರಿಸಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪ್ರಚಾರಕ್ಕೆ ಇನ್ನಷ್ಟು ತೊಂದರೆಯಾಗಲಿದೆ ಎಂದು ತಿಳಿದುಬಂದಿದೆ.

ಐಟಿ ಇಲಾಖೆಯ ಕ್ರಮವನ್ನು ಕಾಂಗ್ರೆಸ್‌ ಖಂಡಿಸಿದೆ. “ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಬ್ಯಾಂಕ್‌ ಖಾತೆಗಳನ್ನು ತಡೆಹಿಡಿಯಲಾಗಿದೆ. ಇದು ಗಂಭೀರವಾದ ಪ್ರಕರಣವಾಗಿದೆ. ಇದು ಕಾಂಗ್ರೆಸ್‌ಅನ್ನು ಮಾತ್ರ ಹತ್ತಿಕ್ಕುವ ಪ್ರಯತ್ನವಲ್ಲ, ಇಡೀ ಪ್ರಜಾಪ್ರಭುತ್ವವನ್ನೇ ಹತ್ತಿಕ್ಕುವ ಪ್ರಯತ್ನ. ವಿತ್ತೀಯವಾಗಿ ಕಾಂಗ್ರೆಸ್‌ಅನ್ನು ಮುಗಿಸಲು ನರೇಂದ್ರ ಮೋದಿ ಅವರು ವ್ಯವಸ್ಥಿತವಾಗಿ ಪ್ರಯತ್ನಿಸುತ್ತಿದ್ದಾರೆ. ಜನರಿಂದ ಸಂಗ್ರಹಿಸಿದ ಕಾಂಗ್ರೆಸ್‌ನ ಹಣವನ್ನು ತಡೆಹಿಡಿಯಲಾಗಿದೆ. ನಮ್ಮ ಪಕ್ಷದ ಬ್ಯಾಂಕ್‌ ಖಾತೆಯಿಂದ ಹಣ ವಿತ್‌ಡ್ರಾ ಮಾಡಲಾಗಿದೆ” ಎಂದು ಇದಕ್ಕೂ ಮೊದಲು ಸೋನಿಯಾ ಗಾಂಧಿ ಆರೋಪಿಸಿದ್ದರು.

ಇದನ್ನೂ ಓದಿ: ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ದುಡ್ಡಿಲ್ಲ; ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟ ರಹಸ್ಯ ಇದು!

ಆದಾಯ ತೆರಿಗೆ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ನ ಹಲವು ಖಾತೆಗಳಿಗೆ ತಡೆಹಿಡಿದಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ ಪಕ್ಷದ ಹಲವು ಖಾತೆಗಳಿಂದ ಆದಾಯ ತೆರಿಗೆ ಇಲಾಖೆಯು 65 ಕೋಟಿ ರೂಪಾಯಿ ವಿತ್‌ಡ್ರಾ ಮಾಡಿದೆ. ನವದೆಹಲಿಯ ಬ್ಯಾಂಕ್ ಆಫ್ ಬರೋಡಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ ಐಟಿ ಇಲಾಖೆಯು ಹಣ ವಿತ್‌ಡ್ರಾ ಮಾಡಿದೆ. ಕಾಂಗ್ರೆಸ್‌ನ ಮೂರು ಬ್ಯಾಂಕ್ ಖಾತೆಗಳಿಂದ 60.25 ಕೋಟಿಯನ್ನು ಡಿಮ್ಯಾಂಡ್ ಡ್ರಾಫ್ಟ್‌ಗಳ ರೂಪದಲ್ಲಿ ತೆಗೆದುಕೊಳ್ಳಲಾಗಿದೆ. ಭಾರತೀಯ ಯುವ ಕಾಂಗ್ರೆಸ್‌ನ ಖಾತೆಯಿಂದ 5 ಕೋಟಿ ರೂ. ಪಡೆಯಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

2017-18ರ ಹಣಕಾಸು ವರ್ಷ ಅಂದರೆ 2018-19ರ ಮೌಲ್ಯಮಾಪನ ವರ್ಷದಲ್ಲಿ ಕಾಂಗ್ರೆಸ್ 45 ದಿನಗಳ ತಡವಾಗಿ ತನ್ನ ಬ್ಯಾಂಕ್‌ ಖಾತೆಗಳ ವಿವರಗಳನ್ನು ಸಲ್ಲಿಸಿತ್ತು. ವಿಳಂಬ ತೆರಿಗೆ ಪಾವತಿಯ ಹಿನ್ನೆಲೆಯಲ್ಲಿ ಆದಾಯ ತೆರಿಗೆ, ಕಾಂಗ್ರೆಸ್‌ ಖಾತೆಗಳನ್ನು ಸೀಜ್‌ ಮಾಡಿತ್ತು. ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ ಬೆನ್ನಿಗೆ ನ್ಯಾಯ ಮಂಡಳಿಯ ಮೊರೆ ಹೋದ ಕಾಂಗ್ರೆಸ್‌, ಬ್ಯಾಂಕ್‌ ಖಾತೆಗಳನ್ನು ಚಾಲ್ತಿ ಮಾಡುವಂತೆ ಮನವಿ ಮಾಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

NET Scores: ಪಿಎಚ್‌.ಡಿ ಪ್ರವೇಶಾತಿಗೆ ನೆಟ್‌ ಅಂಕಗಳ ಪರಿಗಣನೆಗೆ ಯುಜಿಸಿ ಅಸ್ತು; ಸಿಇಟಿ ಇನ್ನಿರಲ್ಲ

NET Scores: ಪಿಎಚ್‌.ಡಿ ಪ್ರವೇಶಾತಿ ವೇಳೆ ಪ್ರವೇಶ ಪರೀಕ್ಷೆ ಬದಲು ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಅನುಮತಿ ನೀಡಿದೆ.

VISTARANEWS.COM


on

PhD Students
ಸಾಂದರ್ಭಿಕ ಚಿತ್ರ.
Koo

ನವದೆಹಲಿ: ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ (NET) ಉತ್ತಮ ಅಂಕ ಗಳಿಸಿ, ಪಿಎಚ್‌.ಡಿ ಪ್ರವೇಶಾತಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಸಿಹಿ ಸುದ್ದಿ ನೀಡಿದೆ. ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌.ಡಿ (PhD Admissions) ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಬದಲು ಅಭ್ಯರ್ಥಿಯು ನೆಟ್‌ನಲ್ಲಿ ಗಳಿಸಿದ ಅಂಕಗಳನ್ನು (NET Scores) ಪರಿಗಣಿಸಲು ಯುಜಿಸಿಯು ಅನುಮೋದನೆ ನೀಡಿದೆ. ಇದರಿಂದ ಪಿಎಚ್‌.ಡಿ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.

ಪ್ರಸಕ್ತ ಅಂದರೆ, 2024-25ನೇ ಶೈಕ್ಷಣಿಕ ಸಾಲಿನಿಂದಲೇ ಪಿಎಚ್‌.ಡಿ ಪ್ರವೇಶಾತಿ ವೇಳೆ ಸಿಇಟಿ ಬದಲಾಗಿ ನೆಟ್‌ ಅಂಕಗಳನ್ನೇ ಪರಿಗಣಿಸಬೇಕು ಎಂಬುದಾಗಿ ಯುಜಿಸಿಯು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ (NEP) ಅಡಿಯಲ್ಲಿಯೇ ಯುಜಿಸಿಯು ಈ ತೀರ್ಮಾನ ತೆಗೆದುಕೊಂಡಿದೆ. ಕಳೆದ ಮಾರ್ಚ್‌ 13ರಂದು ನಡೆದ ಸಭೆಯಲ್ಲಿ ಯುಜಿಸಿ ನೆಟ್‌ ಪರೀಕ್ಷೆಯ ನಿಬಂಧನೆಗಳ ಮರುಪರಿಶೀಲನೆ ಕುರಿತು ರಚಿಸಿದ ತಜ್ಞರ ಸಮಿತಿಯ ಶಿಫಾರಸುಗಳ ಅನ್ವಯ ಯುಜಿಸಿ ತೀರ್ಮಾನ ತೆಗೆದುಕೊಂಡಿದೆ. ಈ ಕುರಿತು ಅಧಿಸೂಚನೆಯನ್ನೂ ಹೊರಡಿಸಲಾಗಿದೆ.

ಮೂರು ಕೆಟಗರಿಗಳಾಗಿ ವಿಂಗಡಣೆ

ನೆಟ್‌ನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಮೂರು ಕೆಟಗರಿಗಳಾಗಿ ವಿಂಗಡಣೆ ಮಾಡಲಾಗಿದೆ. ಜೆಆರ್‌ಎಫ್‌ ಹಾಗೂ ಅಸಿಸ್ಟಂಟ್‌ ಪ್ರೊಫೆಸರ್‌ ಹುದ್ದೆಗಳಿಗೆ ಅರ್ಹತೆ ಪಡೆದ ನೆಟ್‌ ಅಭ್ಯರ್ಥಿಗಳು, ಜೆಆರ್‌ಎಫ್‌ ಇಲ್ಲದೆಯೇ ಪಿಎಚ್‌.ಡಿಗೆ ಪ್ರವೇಶ ಪಡೆದು ಅಸಿಸ್ಟಂಟ್‌ ಪ್ರೊಫೆಸರ್‌ ಹುದ್ದೆಗೆ ಅರ್ಹತೆ ಪಡೆದಿರುವವರು ಹಾಗೂ ಕೇವಲ ಪಿಎಚ್‌.ಡಿಗೆ ಪ್ರವೇಶ ಪಡೆದವರು ಎಂಬುದಾಗಿ ವಿಂಗಡಿಸಲಾಗಿದೆ.

ಎರಡು ಹಾಗೂ ಮೂರನೇ ಕೆಟಗರಿಯಲ್ಲಿರುವವರು ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ಪಡೆದುಕೊಂಡ ಶೇ.70ರಷ್ಟು ಅಂಕಗಳು ಹಾಗೂ ಶೇ.30ರಷ್ಟು ಅಂಕಗಳನ್ನು ಸಂದರ್ಶನದ ಮೂಲಕ ಪರಿಗಣಿಸಿ ಪಿಎಚ್‌.ಡಿಗೆ ಪ್ರವೇಶಾತಿ ನೀಡಲಾಗುತ್ತದೆ. ಎರಡೂ ಕೆಟಗರಿಯಲ್ಲಿರುವವರಿಗೆ ನೆಟ್‌ ಅಂಕಗಳು ಒಂದು ವರ್ಷದವರೆಗೆ ಮಾನ್ಯತೆ ಪಡೆದಿರುತ್ತವೆ ಎಂದು ಯುಜಿಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Viral News: 4 ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪಡೆದ ವ್ಯಕ್ತಿಯ ಉದ್ಯೋಗ ತರಕಾರಿ ಮಾರಾಟ; ಕಾರಣವೇನು?

ಯುಜಿಸಿ ನೆಟ್‌ ಪರೀಕ್ಷೆಯನ್ನು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿಯು (NTA) ಪ್ರತಿ ವರ್ಷ ಜೂನ್‌ ಹಾಗೂ ಡಿಸೆಂಬರ್‌ನಲ್ಲಿ ನಡೆಸುತ್ತದೆ. “ನೂತನ ಶಿಕ್ಷಣ ನೀತಿ ಅಡಿಯಲ್ಲಿ ಪಿಎಚ್‌.ಡಿ ಪ್ರವೇಶಾತಿಗೆ ದೇಶಾದ್ಯಂತ ಒಂದೇ ಪ್ರವೇಶ ಪರೀಕ್ಷೆ ನಡೆಸಲು ಕೂಡ ತೀರ್ಮಾನಿಸಲಾಗಿದೆ. ಇದರಿಂದ ಅಭ್ಯರ್ಥಿಗಳಿಗೆ ಭಾರಿ ಅನುಕೂಲವಾಗಲಿದೆ” ಎಂದು ಯುಜಿಸಿ ಕಾರ್ಯದರ್ಶಿ ಪ್ರೊ.ಮನೀಶ್‌ ಆರ್.‌ ಜೋಶಿ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bengaluru News air pressure pipe
ಬೆಂಗಳೂರು40 mins ago

Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202442 mins ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Actor Darshan at Matinee Movie Team
ಸ್ಯಾಂಡಲ್ ವುಡ್45 mins ago

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

Drone Prathap prayag
ಸ್ಯಾಂಡಲ್ ವುಡ್49 mins ago

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Bhagwant Mann
ದೇಶ51 mins ago

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

kuwj awards
ಕರ್ನಾಟಕ54 mins ago

KUWJ Awards: ಕಾರ್ಯನಿರತ ಪತ್ರಕರ್ತರ ಸಂಘದ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ: ಪುರಸ್ಕೃತರ ಪಟ್ಟಿ ಇಲ್ಲಿದೆ

kalaburagi News Drone flying at kalaburagi Central University
ಕಲಬುರಗಿ1 hour ago

Kalaburagi News : ರಾತ್ರಿ ಹೊತ್ತಲ್ಲಿ ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಶಂಕಾಸ್ಪದ ಡ್ರೋನ್‌ ಹಾರಾಟ!

Lok Sabha Election 2024 Valmiki Samaj to support Pralhad Joshi says Prasannanandapuri Swamiji
Lok Sabha Election 20241 hour ago

Lok Sabha Election 2024: ಪ್ರಲ್ಹಾದ್‌ ಜೋಶಿಗೆ ವಾಲ್ಮೀಕಿ ಸಮಾಜದ ಬೆಂಬಲ: ಪ್ರಸನ್ನಾನಂದಪುರಿ ಸ್ವಾಮೀಜಿ

Holi Girls
ದೇಶ2 hours ago

ಹೋಳಿ ಹೆಸರಲ್ಲಿ ಸ್ಕೂಟಿ ಮೇಲೆಯೇ ಕಾಮದೋಕುಳಿ; ಯುವತಿಯರಿಗೆ 80 ಸಾವಿರ ರೂ. ದಂಡ!

Kangana Ranaut
ಬಾಲಿವುಡ್2 hours ago

Kangana Ranaut : ನಾನು, ಶಾರುಖ್‌ ಈ ಯುಗದ ಕೊನೆಯ ಸೂಪರ್‌ಸ್ಟಾರ್‌ಗಳು ಎಂದ ಕಂಗನಾ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202442 mins ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20242 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌