Supreme Court SC ST Quota: ಪರಿಶಿಷ್ಟ ಜಾತಿ- ಪಂಗಡ ಒಳಮೀಸಲಾತಿ ಕಾನೂನುಬದ್ಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು - Vistara News

ದೇಶ

Supreme Court SC ST Quota: ಪರಿಶಿಷ್ಟ ಜಾತಿ- ಪಂಗಡ ಒಳಮೀಸಲಾತಿ ಕಾನೂನುಬದ್ಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Supreme Court Sc St Quota: 2004ರಲ್ಲಿ ಐವರು ನ್ಯಾಯಮೂರ್ತಿಗಳ ಪೀಠವು ಒಳಮೀಸಲಾತಿಗೆ ವಿರೋಧವಾಗಿ ತೀರ್ಪು ನೀಡಿತ್ತು. ಇದೀಗ 7ಸದಸ್ಯರ ಪೀಠ ಮಹತ್ವದ ತೀರ್ಪು ನೀಡಿದೆ.

VISTARANEWS.COM


on

Supreme Court Sc St Quota
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪರಿಶಿಷ್ಟ ಜಾತಿ(SC) ಮತ್ತು ಪರಿಶಿಷ್ಟ ಪಂಗಡ(ST)ಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ (Supreme Court SC ST Quota, SC ST Sub- Classifications) ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್‌ (Supreme Court) ಇಂದು ನೀಡಿದೆ. ಆ ಮೂಲಕ 2004ರಲ್ಲಿ ಇವಿ ಚಿನ್ನಯ್ಯ ವರ್ಸಸ್‌ ಆಂಧ್ರ ಪ್ರದೇಶ ಸರ್ಕಾರ ಪ್ರಕರಣದಲ್ಲಿ ನೀಡಲಾಗಿದ್ದ ತೀರ್ಪನ್ನು ರದ್ದುಗೊಳಿಸಿದೆ.

2004ರಲ್ಲಿ ಐವರು ನ್ಯಾಯಮೂರ್ತಿಗಳ ಪೀಠವು ಒಳಮೀಸಲಾತಿ ಅಥವಾ ಉಪ-ವರ್ಗೀಕರಣವನ್ನು ಅನುಮತಿಸಲಾಗುವುದಿಲ್ಲ ಎಂದು ತೀರ್ಪು ನೀಡಿತ್ತು. ಏಕೆಂದರೆ SC / ST ಗಳು ಏಕರೂಪದ ಒಂದೇ ವರ್ಗ ಎಂದು ಹೇಳಿತ್ತು. ಇದೇ ಪ್ರಕರಣವನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಫೆ.8ರಂದು ಈ ತೀರ್ಪನ್ನು ಕಾಯ್ದಿರಿಸಿ ಆದೇಶ ಹೊರಡಿಸಿತ್ತು. ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ವಿಚಾರಣೆಗೆ ಬಂದಿದ್ದು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಇದ್ದ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ.

ಎಸ್‌ಸಿ/ಎಸ್‌ಟಿ ಸಮುದಾಯಗಳಲ್ಲಿ ಹೆಚ್ಚು ಅನುಕೂಲವಾಗಿರುವ ಗುಂಪುಗಳ ಮಕ್ಕಳು ಮೀಸಲಾತಿಯನ್ನು ಪಡೆಯುವುದನ್ನು ಮುಂದುವರಿಸಬೇಕೇ ಎಂಬ ಪ್ರಶ್ನೆಯನ್ನು ಉನ್ನತ ನ್ಯಾಯಾಲಯವು ಪರಿಶೋಧಿಸಿತು. ನ್ಯಾಯಾಲಯವು ಈ ವರ್ಗಗಳೊಳಗಿನ ಏಕರೂಪತೆಯ ಕಲ್ಪನೆಯನ್ನು ಸಹ ಪರಿಶೀಲಿಸಿತು. ಕೇಂದ್ರ ಸರ್ಕಾರವು ಎಸ್‌ಸಿ ಮತ್ತು ಎಸ್‌ಟಿಗಳ ಉಪವರ್ಗೀಕರಣದ ಪರವಾಗಿದೆ ಎಂದು ವರದಿ ಸಲ್ಲಿಸಿತ್ತು.

2020 ರಲ್ಲಿ ಸ್ಟೇಟ್ ಆಫ್ ಪಂಜಾಬ್ ವರ್ಸಸ್‌ ದೇವಿಂದರ್ ಸಿಂಗ್ ಪ್ರಕರಣದಲ್ಲಿ ಪಂಚ ಸದಸ್ಯ ಪೀಠವು ಈ ವಿಚಾರವನ್ನು ಸಪ್ತ ಸದಸ್ಯ ಪೀಠಕ್ಕೆ ವರ್ಗಾಯಿಸಿತ್ತು. ಈ ವೇಳೆ2004ರಲ್ಲಿ ಇ.ವಿ.ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ರಾಜ್ಯ ಸರ್ಕಾರದ ಪ್ರಕರಣದಲ್ಲಿ ಉಪ-ವರ್ಗೀಕರಣವನ್ನು ಅನುಮತಿಸಲಾಗುವುದಿಲ್ಲ ಎಂದು ಸಮನ್ವಯ ಪೀಠ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂಬುದನ್ನು ನ್ಯಾಯಪೀಠ ಗಮನಿಸಿತ್ತು.

3 ದಿನಗಳ ಕಾಲ ನಡೆದ ಸುದೀರ್ಘ ವಿಚಾರಣೆಯಲ್ಲಿ ನ್ಯಾಯಾಲಯವು ಅಸ್ಪೃಶ್ಯತೆಯ ಸಾಮಾಜಿಕ ಇತಿಹಾಸ, ಸಂವಿಧಾನ ರಚನೆಕಾರರ ದೃಷ್ಟಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪರಿಕಲ್ಪನೆ, ಭಾರತದಲ್ಲಿ ಮೀಸಲಾತಿಯ ಉದ್ದೇಶ ಮತ್ತು ಅದನ್ನು ಮುಂದುವರಿಸುವಲ್ಲಿ 341ನೇ ವಿಧಿಯ ಮಹತ್ವವನ್ನು ಚರ್ಚಿಸಿತ್ತು.

ಈ ಒಳಮೀಸಲಾತಿಯ ಲಾಭವೇನು?

ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ. ಆದರೆ ಉಪ-ವರ್ಗೀಕರಣವನ್ನು ನೀಡುವಾಗ, ರಾಜ್ಯವು ಉಪ-ವರ್ಗಕ್ಕೆ 100% ಮೀಸಲಾತಿಯನ್ನು ಮೀಸಲಿಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಲ್ಲದೆ, ರಾಜ್ಯವು ಪ್ರಾಯೋಗಿಕ ದತ್ತಾಂಶದ ಆಧಾರದ ಮೇಲೆ ಉಪ-ವರ್ಗೀಕರಣದ ಪ್ರಾತಿನಿದ್ಯ ನೀಡಬಹುದಾಗಿದೆ. ಹೆಚ್ಚು ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡುವುದು ರಾಜ್ಯದ ಕರ್ತವ್ಯ ಎಂದಿದೆ. SC/ST ವರ್ಗದ ಕೆಲವೇ ಜನರು ಮೀಸಲಾತಿಯನ್ನು ಅನುಭವಿಸುತ್ತಿದ್ದಾರೆ. ಈ ವಿಚಾರವನ್ನು ಅಲ್ಲಗಳೆಯುವಂತಿಲ್ಲ. SC/ST ಗಳಲ್ಲಿ ಶತಮಾನಗಳಿಂದ ಹೆಚ್ಚು ದಬ್ಬಾಳಿಕೆಯನ್ನು ಎದುರಿಸುತ್ತಿರುವ ಇನ್ನೂ ಹಿಂದುಳಿದ ವರ್ಗಗಳಿವೆ ಎಂದು ಕೋರ್ಟ್‌ ಹೇಳಿದೆ.

ಇದನ್ನೂ ಓದಿ: OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Wayanad Landslide: ವಯನಾಡಿನ ದುರಂತ ಕಥೆ: ಬದುಕಿಗಾಗಿ ಸೌದಿಗೆ ತೆರಳಿದವ ಉಳಿದ; ಕುಟುಂಬವಿಡೀ ಮಣ್ಣು ಪಾಲಾಯ್ತು

Wayanad Landslide: ವಯನಾಡಿನಲ್ಲಿ ಮಣ್ಣು ಜರಿದು ಇಡೀ ಊರುಗಳನ್ನೇ ನಾಮಾವಶೇಷ ಮಾಡಿದ್ದು, ಮೃತಪಟ್ಟವರ ಸಂಖ್ಯೆ 270 ದಾಟಿದೆ. ಒಬ್ಬೊಬ್ಬರದ್ದು ಒಂದೊಂದು ನೋವಿನ ಕಥೆ. ಅದರಲ್ಲಿಯೂ ಕುಟುಂಬಸ್ಥರನ್ನೆಲ್ಲ ಕಳೆದುಕೊಂಡ ಜಿಷ್ಣು ಎನ್ನುವ 26 ವರ್ಷದ ಯುವಕನ ಸ್ಥಿತಿ ಕಣ್ಣಂಚಿನಲ್ಲಿ ನೀರು ತರಿಸುತ್ತದೆ. ಮನೆಯ ಜತೆಗೆ ಪಾಲಕರು, ಒಟಹುಟ್ಟಿದವರು, ಅಜ್ಜಿಯನ್ನು ಪ್ರವಾಹ ಕೊಚ್ಚಿಕೊಂಡು ಹೋಗಿದ್ದು, ಸದ್ಯ ಸಹೋದರ ಮಾತ್ರ ಉಳಿದಿದ್ದಾನೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ರಾಜ್ಯದಲ್ಲಿ ಸಂಭವಿಸಿದ ಅತೀ ಭೀಕರ ಭೂಕುಸಿತಕ್ಕೆ ಕೇರಳ ತತ್ತರಿಸಿದ ಹೋಗಿದೆ. ವಯನಾಡಿನಲ್ಲಿ ಮಣ್ಣು ಜರಿದು ಇಡೀ ಊರುಗಳನ್ನೇ ನಾಮಾವಶೇಷ ಮಾಡಿದ್ದು, ಮೃತಪಟ್ಟವರ ಸಂಖ್ಯೆ 270 ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಅವಶೇಷಗಳಡಿ ಹುಡುಕಾಟ ಮುಂದುವರಿದಿದೆ. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದೆ. ಒಬ್ಬೊಬ್ಬರದ್ದು ಒಂದೊಂದು ನೋವಿನ ಕಥೆ. ಅದರಲ್ಲಿಯೂ ಕುಟುಂಬಸ್ಥರನ್ನೆಲ್ಲ ಕಳೆದುಕೊಂಡ ಜಿಷ್ಣು ಎನ್ನುವ 26 ವರ್ಷದ ಯುವಕನ ಸ್ಥಿತಿ ಕಣ್ಣಂಚಿನಲ್ಲಿ ನೀರು ತರಿಸುತ್ತದೆ. ಮನೆಯ ಜತೆಗೆ ಪಾಲಕರು, ಒಟಹುಟ್ಟಿದವರು, ಅಜ್ಜಿಯನ್ನು ಪ್ರವಾಹ ಕೊಚ್ಚಿಕೊಂಡು ಹೋಗಿದ್ದು, ಸದ್ಯ ಸಹೋದರ ಮಾತ್ರ ಉಳಿದಿದ್ದಾನೆ.

ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಜಿಷ್ಣು ಸದ್ಯ ಊರಿಗೆ ಮರಳಿದ್ದಾರೆ. ಅವರ ಮನೆ ಇದ್ದ ಜಾಗದಲ್ಲಿ ಈಗ ಉಳಿದಿರುವುದು ಸ್ಮಶಾನ ಮೌನ ಮತ್ತು ಕೆಸರು ಮಾತ್ರ. ಹೌದು, ಮನೆಯ ಜತೆಗೇ ಮನೆಯವರನ್ನೂ ಭೀಕರ ಪ್ರವಾಹ ಹೊತ್ತುಕೊಂಡು ಹೋಗಿದೆ. ಜಿಷ್ಣು ಅವರ ಮನೆಯವರು ಆಶ್ರಯ ಪಡೆದಿದ್ದ ಸಂಬಂಧಿಕರ ಮನೆಯೂ ಕೊಚ್ಚಿಕೊಂಡು ಹೋಗಿದೆ. ಈ ಸತ್ಯವನ್ನು ಜಿಷ್ಣುಗೆ ಇನ್ನೂ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಸದ್ಯ ಅವರ ಪಾಲಿಗೆ ಕಿರಿಯ ಸಹೋದರ ಮಾತ್ರ ಉಳಿದಿದ್ದಾನೆ.

ಕಣ್ಣೀರ ಕಥೆ

ಅತೀ ಹೆಚ್ಚು ದುರಂತ ಬಾಧಿತ ಮುಂಡಕೈ ನಿವಾಸಿ ಜಿಷ್ಣು ರಂಜನ್‌ ಸೌದಿ ಅರೇಬಿಯಾದ ಖಾಸಗಿ ಕಂಪೆನಿಯೊಂದರ ಉದ್ಯೋಗಿ. ಮುಂಡಕೈಯ ಪುಂಜಿರಿವಟ್ಟಂನಲ್ಲಿರುವ ಅವರ ಮನೆಯಲ್ಲಿ ತಂದೆ ರಾಜನ್‌, ತಾಯಿ ಮರುತೈ, ಒಡಹುಟ್ಟಿದವರಾದ ಜಿನು (27), ಜಿಬಿನ್‌ (18), ಆ್ಯಂಡ್ರಿಯಾ (16), ಜಿನು ಅವರ ಪತ್ನಿ ಪ್ರಿಯಾಂಕಾ (25) ಮತ್ತು ಅಜ್ಜಿ ನಾಗಮ್ಮ ವಾಸವಾಗಿದ್ದರು. ಇದೀಗ ಅವರೆಲ್ಲ ಮೃತಪಟ್ಟಿದ್ದಾರೆ. ಶಿಜು (25) ಒಬ್ಬನೇ ದುರಂತದಿಂದ ಪಾರಾಗಿದ್ದಾನೆ. ಮುಂಡಕೈ ಭಾಗದಲ್ಲಿ ಜುಲೈ 28ರಂದು ಸಣ್ಣ ಮಟ್ಟಿನ ಭೂಕುಸಿತ ಉಂಟಾಗಿತ್ತು. ಇದನ್ನು ಅರಿತ ಸೌದಿ ಅರೇಬಿಯಾದಲ್ಲಿದ್ದ ಜಿಷ್ಣು ಗಾಬರಿಯಿಂದ ಮನೆಯವರಿಗೆ ಕರೆ ಮಾಡಿದ್ದರು. ಆದರೆ ಸಂಪರ್ಕ ಸಿಕ್ಕಿರಲಿಲ್ಲ.

ಇನ್ನಷ್ಟು ಗಾಬರಿಗೊಂಡ ಅವರು ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಲೇ ಇದ್ದರು. ಜುಲೈ 30ರ ಸಂಜೆ ತನಕವೂ ಮನೆಯವರ ಸಂಪರ್ಕ ಸಾಧ್ಯವಾಗಿರಲಿಲ್ಲ. ಆಗಲೇ ಅವರಿಗೆ ಮನೆ ಕುಸಿದು ಬಿದ್ದಿರುವ ಬಗ್ಗೆ ತಿಳಿದು ಬಂದಿತ್ತು. ಜತೆಗೆ ಮನೆಯವರು ಸಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದರು ಎನ್ನುವ ವಿಚಾರ ತಿಳಿದು ಸ್ವಲ್ಪ ಸಮಾಧಾನಪಟ್ಟುಕೊಂಡಿದ್ದರು. ಆದರೆ ಭೂಕುಸಿತದಿಂದ ಎರಡೂ ಮನೆಯವರು ಕೊಚ್ಚಿಕೊಂಡು ಹೋಗಿದ್ದರು.

ಇದ್ಯಾವುದರ ಅರಿವು ಇರದ ಜಿಷ್ಣು ನಿರಂತರವಾಗಿ ಮನೆಗೆ ಕರೆ ಮಾಡಲು ಯತ್ನಿಸುತ್ತಲೇ ಇದ್ದರು. ಕೊನೆಗೆ ಪರಿಚಯಸ್ಥರಿಗೆ ಕರೆ ಮಾಡಿದರು. ಆದರೆ ಅವರಿಂದಲೂ ನಿಖರ ಮಾಹಿತಿ ದೊರೆಯಲಿಲ್ಲ. ಜುಲೈ 30ರಂದು ಸಂಜೆ ವೇಳೆಗೆ ತಂದೆ ರಾಜನ್‌ ಅವರ ಮೃತದೇಹ ದೊರೆತಿರುವ ಸುದ್ದಿ ಜಿಷ್ಣುಗೆ ಬರಸಿಡಿಲಂತೆ ಅಪ್ಪಳಿಸಿತು. ಜತೆಗೆ ಜಿನು ಮತ್ತು ತಾಯಿಯ ಅವರ ಮೃತದೇಹವೂ ಪತ್ತೆಯಾಗಿದ್ದರ ಬಗ್ಗೆ ಮಾಹಿತಿ ಲಭಿಸಿತು. ಕೊನೆಗೆ ಶಿಜು ಮಾತ್ರ ಬದುಕುಳಿದಿರುವ ವಿಚಾರ ತಿಳಿದ್ದಿದ್ದು ಕೂಡಲೇ ಊರಿಗೆ ಮರಳಿದ್ದಾರೆ. ಎರಡು ವರ್ಷಗಳ ಹಿಂದೆ ಭೂಕುಸಿತದಿಂದ ಈ ಕುಟುಂಬ ಕೂದಲೆಳೆ ಅಂತರದಿಂದ ಅಪಾಯದಿಂದ ಪಾರಾಗಿತ್ತು.

ಇದನ್ನೂ ಓದಿ: Wayanad Landslide: ಕುರ್ಚಿಯಲ್ಲಿ ಕುಳಿತ.. ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆ; ಇದು ಸ್ಮಶಾನ ಸದೃಶ್ಯ ವಯನಾಡಿನ ಭೀಕರ ದೃಶ್ಯ

Continue Reading

ದೇಶ

Wayanad Landslide: ಕುರ್ಚಿಯಲ್ಲಿ ಕುಳಿತ.. ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆ; ಇದು ಸ್ಮಶಾನ ಸದೃಶ್ಯ ವಯನಾಡಿನ ಭೀಕರ ದೃಶ್ಯ

Wayanad Landslide: ಮುಂಡಕ್ಕೈ ಎಂಬಲ್ಲಿನ ಮನೆಯೊಂದರಲ್ಲಿ ಕುರ್ಚಿಗಳ ಮೇಲೆ ಕುಳಿತಿದ್ದ ಸ್ಥಿತಿಯಲ್ಲಿ ಮೂರು ಶವಗಳು ಪತ್ತೆಯಾಗಿವೆ. ಇನ್ನು ಚೂರಲ್ಮಲಾದಲ್ಲಿ ಕುಸಿದು ಬಿದ್ದಿದ್ದ ಮನೆಯ ಅವಶೇಷದಡಿಯಿಂದ ಪುಟ್ಟ ಕಂದಮ್ಮನ ಶವವನ್ನು ಹೊರತೆಗೆಯಲಾಗಿದೆ.

VISTARANEWS.COM


on

Wayanad Landslide
Koo

ವಯನಾಡ್‌: ದೇವರನಾಡು ಕೇರಳ(Kerala)ದ ವಯನಾಡ್‌(Wayanad Landslide) ಅಕ್ಷರಶಃ ಸ್ಮಶಾನವಾಗಿ ಬದಲಾಗಿದೆ. ಎಲ್ಲೆಂದರಲ್ಲಿ ಮಣ್ಣು, ನೀರು, ಬೃಹತ್ ಬಂಡೆಗಳು, ಬುಡಮೇಲಾದ ಮರಗಳು, ಕಟ್ಟಡಗಳ ಅವಶೇಷಗಳೇ ಕಣ್ಣು ಹಾಯಿಸಿದಷ್ಟು ದೂರಕ್ಕೆ ಕಾಣುತ್ತಿವೆ. ಈ ನಡುವೆ ಅವಶೇಷದಡಿಯಲ್ಲಿ ಸಿಲುಕಿದ ಜೀವಗಳು ಮತ್ತು ಮೃತದೇಹಗಳ ಪತ್ತೆ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ(Rescue Operation) ನಡೆಯುತ್ತಿದೆ.ರಕ್ಷಣಾ ಕಾರ್ಯಾಚರಣೆ ವೇಳೆ ಸಿಕ್ಕಿರುವ ಮೃತದೇಹಗಳು ಎಂಥವರ ಕಣ್ಣಲ್ಲೂ ಕಣ್ಣೀರು ಬರಿಸುವಂತಿದೆ.

ರಕ್ಷಣಾ ಕಾರ್ಯಕರ್ತರು ನೆಲದಡಿಯಲ್ಲಿರುವ ಮನೆಗಳನ್ನು ನೆಲಸಮಗೊಳಿಸಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರತಿ ಮನೆಯಲ್ಲೂ ಹೃದಯ ವಿದ್ರಾವಕ ದೃಶ್ಯಗಳು ಕಂಡುಬರುತ್ತಿವೆ ಎಂದು ರಕ್ಷಣಾ ಕಾರ್ಯಚರಣೆಯಲ್ಲಿ ಭಾಗಿಯಾಗಿದ ವ್ಯಕ್ತಿಯೊಬ್ಬ ಹೇಳಿದ್ದಾರೆ. ಮುಂಡಕ್ಕೈ ಎಂಬಲ್ಲಿನ ಮನೆಯೊಂದರಲ್ಲಿ ಕುರ್ಚಿಗಳ ಮೇಲೆ ಕುಳಿತಿದ್ದ ಸ್ಥಿತಿಯಲ್ಲಿ ಮೂರು ಶವಗಳು ಪತ್ತೆಯಾಗಿವೆ. ಇನ್ನು ಚೂರಲ್ಮಲಾದಲ್ಲಿ ಕುಸಿದು ಬಿದ್ದಿದ್ದ ಮನೆಯ ಅವಶೇಷದಡಿಯಿಂದ ಪುಟ್ಟ ಕಂದಮ್ಮನ ಶವವನ್ನು ಹೊರತೆಗೆಯಲಾಗಿದೆ.

ಮತ್ತೊಂದು ಮನೆಯಲ್ಲಿ ಮಕ್ಕಳು ಸೇರಿದಂತೆ ಐದಾರು ಜನ ಒಟ್ಟಿಗೆ ಅಪ್ಪಿಕೊಂಡ ಸ್ಥಿತಿಯಲ್ಲಿ ಮೃತದೇಹಗಳನ್ನು ಪತ್ತೆಯಾಗಿದ್ದು, ಆ ದೃಶ್ಯವನ್ನು ಅವರ ಇಡೀ ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಜನರು ಜೀವಂತವಾಗಿದ್ದಾರೆ ಎಂದು ನಂಬಲಾಗಿದೆ. ಅವರನ್ನು ಆದಷ್ಟು ಬೇಗ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೇನೆ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಕಟ್ಟಡದ ಅವಶೇಷಗಳ ನಡುವೆ ಶೋಧ ನಡೆಸಲಾಗುತ್ತಿದೆ. ಮೃತರ ಸಂಖ್ಯೆ ಕ್ಷಣ ಕ್ಷಣಕ್ಕೆ ಏರಿಕೆಯಾಗುತ್ತಿದೆ.

ಮಳೆ ಮತ್ತು ಪ್ರವಾಹದ ಶಕ್ತಿ ಕಡಿಮೆಯಾಗಿದ್ದು, ರಕ್ಷಣಾ ಕಾರ್ಯಕರ್ತರಿಗೆ ನೆಮ್ಮದಿ ನೀಡಿದೆ. ಆದರೆ, ಈ ಪ್ರದೇಶದಲ್ಲಿ ಕೆಸರು, ಜವುಗು ತುಂಬಿರುವುದರಿಂದ ಎಲ್ಲಿಯೂ ನಿಲ್ಲಲು ಸಾಧ್ಯವಾಗುತ್ತಿಲ್ಲ. ಇದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡಚಣೆಯಾಗಿದೆ. ದೊಡ್ಡ ಬಂಡೆಗಳನ್ನು ಸ್ಥಳಾಂತರಿಸಲು ಹೆಚ್ಚಿನ ಯಂತ್ರೋಪಕರಣಗಳು ಸಿಗುವುದಿಲ್ಲ ಎಂಬುದು ಸಮಸ್ಯೆಯಾಗಿದೆ.

ಸುಮಾರು 400 ಮನೆಗಳನ್ನು ಹೊಂದಿದ್ದ ಮುಂಡಕ್ಕೈನಲ್ಲಿ ಈಗ ಕೇವಲ ಮೂವತ್ತು ಮನೆಗಳು ಉಳಿದಿವೆ. ಎಷ್ಟು ಮಂದಿ ಜೀವಂತವಾಗಿದ್ದಾರೆ ಅಥವಾ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇಲ್ಲ. ಕೆಲವರು ತಮ್ಮ ಕಾಣೆಯಾದ ಪ್ರೀತಿಪಾತ್ರರನ್ನು ಹುಡುಕಲು ಆಸ್ಪತ್ರೆಗಳನ್ನು, ದುರಂತದ ಪ್ರದೇಶಗಳಲ್ಲಿ ಅಲೆದಾಡುತ್ತಿದ್ದಾರೆ.

ಹಲವರು ಇಲ್ಲಿಯವರೆಗೆ ದುಡಿದಿದ್ದನ್ನೆಲ್ಲ ಕಳೆದುಕೊಂಡು ಪ್ರಸ್ತುತ ನಿರಾಶ್ರಿತ ಶಿಬಿರಗಳಲ್ಲಿದ್ದಾರೆ. ಅದರೊಂದಿಗೆ ಅವರು ತಮ್ಮ ಕುಟುಂಬ ಮತ್ತು ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಬದಲಾಯಿಸಲು ಅವರ ಬಳಿ ಬಟ್ಟೆಯೂ ಇಲ್ಲ. ಅವರ ಮುಂದಿನ ಜೀವನ ಹೇಗೆ ಎಂಬುದೇ ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿದೆ. ಇನ್ನು ರಕ್ಷಣಾ ಸ್ಥಳಗಳ ಒಂದೊಂದು ದೃಶ್ಯ ಮನ ಕಲುಕುವಂತಿದೆ.

ಇದನ್ನೂ ಓದಿ: Wayanad Landslide: “ಧಾರ್ಮಿಕ ಸಂಘಟನೆಗಳ ಒತ್ತಡದಿಂದ ವಯನಾಡಿನಲ್ಲಿ ಭೂಮಿ ಒತ್ತುವರಿ ತೆರವು ಸಾಧ್ಯವಾಗ್ತಿಲ್ಲ”- ತೇಜಸ್ವಿ ಸೂರ್ಯ ಕಿಡಿ

Continue Reading

ಪ್ರಮುಖ ಸುದ್ದಿ

Supreme Court Sc St Quota: ಎಸ್‌ಸಿ ಎಸ್‌ಟಿ ಒಳಮೀಸಲು; ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಕೇಂದ್ರದಿಂದ ರಾಜ್ಯ ಸರ್ಕಾರದ ಅಂಗಳಕ್ಕೆ ಬಂದ ಚೆಂಡು

Supreme Court Sc St Quota: ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿಯಡಿ, ರಾಜ್ಯ ಸರ್ಕಾರಗಳಿಗೆ ಒಳಮೀಸಲು ನೀಡುವ ಅಧಿಕಾರವಿದೆಯಾ ಎಂಬ ಸೂಕ್ಷ್ಮ ಸಂಗತಿಯ ವಿಚಾರಣೆಯನ್ನು ನಡೆಸಿದ ಸರ್ವೋಚ್ಚ ನ್ಯಾಯಾಲಯ ಇದೀಗ ರಾಜ್ಯ ಸರ್ಕಾರಗಳಿಗೆ ಈ ಹೊಣೆ ಹೊರಿಸಿ ತೀರ್ಪಿತ್ತಿದೆ.

VISTARANEWS.COM


on

Supreme Court SC ST Quota
Koo

ಬೆಂಗಳೂರು: ಎಸ್‌ಸಿ- ಎಸ್‌ಟಿ ಸಮುದಾಯಗಳ ಒಳಮೀಸಲು (Supreme Court SC ST Quota) ಪ್ರಸ್ತಾಪವನ್ನು ಕೇಂದ್ರ ಸರ್ಕಾರದ ಹೆಗಲಿಗೆ ವರ್ಗಾಯಿಸಿ ಪಾರಾಗಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಸುಪ್ರೀಂ ಕೋರ್ಟ್‌ ತೀರ್ಪು ಶಾಕ್‌ ನೀಡಿದೆ. ಒಳಮೀಸಲು (SC ST Reservation Sub-Classification) ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್‌ (Supreme Court) ನೀಡಿರುವ ತೀರ್ಪಿನಿಂದಾಗಿ, ಚೆಂಡು ಮತ್ತೆ ರಾಜ್ಯ ಸರ್ಕಾರದ ಅಂಗಳದಲ್ಲಿ ಬಂದು ಬಿದ್ದಿದೆ.

ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿಯಡಿ, ರಾಜ್ಯ ಸರ್ಕಾರಗಳಿಗೆ ಒಳಮೀಸಲು ನೀಡುವ ಅಧಿಕಾರವಿದೆಯಾ ಎಂಬ ಸೂಕ್ಷ್ಮ ಸಂಗತಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯದ 7 ಸದಸ್ಯರ ಪೀಠ ಕಳೆದ ವರ್ಷ ಆರಂಭಿಸಿತ್ತು.. ಕರ್ನಾಟಕವೂ ಸೇರಿದಂತೆ ಇಡೀ ದೇಶದ ಮೇಲೆ ಪರಿಣಾಮ ಬೀರುವ ಅರ್ಜಿ ವಿಚಾರಣೆಯನ್ನು, ಸರ್ವೋಚ್ಚ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠ ಕೈಗೆತ್ತಿಕೊಂಡಿತ್ತು. ಇದೀಗ ರಾಜ್ಯ ಸರ್ಕಾರಗಳಿಗೆ ಈ ಹೊಣೆ ಹೊರಿಸಿ ಕೋರ್ಟ್‌ ತೀರ್ಪಿತ್ತಿದೆ.

2020ರಲ್ಲಿ ಪಂಚಸದಸ್ಯರ ಪೀಠ, ಪ್ರಕರಣವನ್ನು ಸಪ್ತಸದಸ್ಯರ ಬೃಹತ್ ಪೀಠಕ್ಕೆ ವರ್ಗಾಯಿಸಲು ಶಿಫಾರಸು ಮಾಡಿತ್ತು. ಪಂಜಾಬ್ ಸರ್ಕಾರ, ತನ್ನ ಪರಿಶಿಷ್ಟ ಜಾತಿ-ಪಂಗಡಗಳ 2006ರ ಕಾಯ್ದೆಯಡಿ, ವಾಲ್ಮೀಕಿಗಳು ಮತ್ತು ಮಝಾಬಿ ಸಿಖ್ಖರಿಗೆ ಶೇ.50 ಒಳಮೀಸಲು ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಶುರುವಾಗಿತ್ತು. ಇದರ ವಿರುದ್ಧ ಹಲವರು ಪಂಜಾಬ್ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಉಚ್ಚ ನ್ಯಾಯಾಲಯ ಈ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಇದು ಅಸಾಂವಿಧಾನಿಕ, ಸಂವಿಧಾನದ 14ನೇ ವಿಧಿಯನ್ನು (ಸಮಾನತೆಯ ಹಕ್ಕು) ಉಲ್ಲಂಘಿಸುತ್ತದೆ. ಮಾತ್ರವಲ್ಲ 2004ರಲ್ಲಿ ಇ.ವಿ.ಚಿನ್ನಯ್ಯ ಮತ್ತು ಆಂಧ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ, ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿತ್ತು.

ಇದನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ, 2011ರಂದು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಐವರು ಸದಸ್ಯರ ಸರ್ವೋಚ್ಚ ಪೀಠ, 7 ಸದಸ್ಯರ ವಿಸ್ತೃತ ಪೀಠಕ್ಕೆ ಅರ್ಜಿಯನ್ನು ವರ್ಗಾಯಿಸಿತ್ತು. ಕೋರ್ಟ್‌, ಪಂಜಾಬ್‌ ಸರಕಾರದ ಪರ ತೀರ್ಪು ನೀಡಿದೆ. ಅಂದರೆ, ಉಪವರ್ಗೀಕರಣ ನೀಡುವ ಅಧಿಕಾರ ರಾಜ್ಯ ಸರಕಾರಗಳಿಗೆ ಇದೆ ಎಂದರ್ಥವಾಗುತ್ತದೆ. ಇದೂ ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಹಾಗೆಯೇ ಕೇಂದ್ರ ಸರಕಾರಕ್ಕೂ ಅನ್ವಯವಾಗಲಿದೆ.

ಕೇಂದ್ರಕ್ಕೆ ಶಿಫಾರಸು ಮಾಡಿದ ರಾಜ್ಯ ಸರಕಾರ

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕೆಂದು ಪರಿಶಿಷ್ಟ ಎಡಗೈ ಸಮುದಾಯದ ಸಚಿವರು, ಮುಖಂಡರು ಪಟ್ಟು ಹಿಡಿದಿದ್ದರು.

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಒಳ ಮೀಸಲಾತಿ ಜಾರಿ ಮಾಡಲಾಗುವುದು ಎಂದು ಪಕ್ಷದ ನಾಯಕರು ಭರವಸೆ ನೀಡಿದ್ದರು. ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಒಳಮೀಸಲು ಬಗ್ಗೆ ಒತ್ತಡ ಹೆಚ್ಚಾಗಿತ್ತು. ʼಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಯಾವುದೇ ಅಧಿಕಾರ ಇಲ್ಲ. ಕೇಂದ್ರ ಸರ್ಕಾರವು ಸಂವಿಧಾನದ 341ನೇ ವಿಧಿಗೆ ಹೊಸತಾಗಿ ಖಂಡ (3) ಸೇರಿಸಿದರೆ ಮಾತ್ರ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಅವಕಾಶವಿದೆ. ಒಳ ಮೀಸಲಾತಿ ಕೇಂದ್ರದ ಅಧಿಕಾರ ವ್ಯಾಪ್ತಿಯಲ್ಲಿದೆʼ ಎಂದು ರಾಜ್ಯ ಸರ್ಕಾರ ಈ ಹಿಂದೆ ಪ್ರತಿಪಾದಿಸಿತ್ತು. ಇದೀಗ ಆ ವಾದ ಬಿದ್ದುಹೋಗಲಿದೆ.

ಮಾಧುಸ್ವಾಮಿ ಸಮಿತಿ

ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಒಳ ಮೀಸಲಾತಿ ಕುರಿತು ಪರಿಶೀಲಿಸಿ ಶಿಫಾರಸು ಮಾಡಲು ಅಂದಿನ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಿತ್ತು. ಒಳ ಮೀಸಲಾತಿ ಕಲ್ಪಿಸುವ ಪ್ರಕ್ರಿಯೆಯು ಪರಿಶೀಲನೆಯಲ್ಲಿರುವಾಗಲೇ 2022ರಲ್ಲಿ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ ರೂಪಿಸಿದ ಸರ್ಕಾರ, ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ ಶೇ. 17ಕ್ಕೆ ಹೆಚ್ಚಿಸಿತು.

ಸಂಪುಟ ಉಪ ಸಮಿತಿ 2011ರ ಜನಗಣತಿಯಂತೆ ಒಟ್ಟು 101 ಪರಿಶಿಷ್ಟ ಜಾತಿಗಳ ಜಾತಿವಾರು ಜನಸಂಖ್ಯೆಯನ್ನು ಪರಿಗಣಿಸಿ ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ, ಒಳ ಮೀಸಲಾತಿ ಅನುಷ್ಠಾನ ಮಾಡುವಂತೆ ಸಚಿವ ಸಂಪುಟ ಸಭೆಗೆ ಶಿಫಾರಸು ಮಾಡಿತ್ತು. ಗುಂಪುಗಳ ವರ್ಗೀಕರಣ, ಶೇಕಡವಾರು ಮೀಸಲಾತಿ ನಿಗದಿಪಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ನಿರ್ಣಯಿಸಿತ್ತು. 2023ರ ಮಾರ್ಚ್ 28 ಮತ್ತು 31ರಂದು ಈ ಪ್ರಸ್ತಾವ ಕೇಂದ್ರಕ್ಕೆ ಸಲ್ಲಿಸಲಾಗಿತ್ತು.

ಇದನ್ನೂ ಓದಿ: Supreme Court SC ST Quota: ಪರಿಶಿಷ್ಟ ಜಾತಿ- ಪಂಗಡ ಒಳಮೀಸಲಾತಿ ಕಾನೂನುಬದ್ಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Continue Reading

ದೇಶ

Heavy Rain: ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿ ಹೋಯ್ತು ಬಹುಮಹಡಿ ಕಟ್ಟಡ; ಭೀಕರ ದೃಶ್ಯ ಇಲ್ಲಿದೆ

Heavy Rain: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪಾರ್ವತಿ ನದಿ ಮೇರೆ ಮೀರಿ ಹರಿಯುತ್ತಿದ್ದು, ಬಹುಮಹಡಿ ಕಟ್ಟಡ ಕುಸಿದು ಬೀಳುತ್ತಿರುವ ಭಯಾನಕ ವಿಡಿಯೊ ವೈರಲ್‌ ಆಗಿದೆ. ಕುಲ್ಲುವಿನಲ್ಲಿ ಗುರುವಾರ ನದಿ ತೀರದ ಬಳಿ ಇದ್ದ ಕಟ್ಟಡವು ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದು ಕೆಲವೇ ಸೆಕೆಂಡುಗಳಲ್ಲಿ ರಭಸವಾಗಿ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಇದಾಗಿದೆ. ವಿಡಿಯೊದಲ್ಲಿ ಈ ಬಹುಮಹಡಿ ಕಟ್ಟಡ ಕ್ಷಣಾರ್ಧಲ್ಲಿಯೇ ನದಿಯಲ್ಲಿ ಕಣ್ಮರೆಯಾಗುತ್ತಿರುವುದು ಕಂಡು ಬಂದಿದೆ.

VISTARANEWS.COM


on

Heavy Rain
Koo

ಧರ್ಮಶಾಲಾ: ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಅಪಾರ ನಾಶ ನಷ್ಟ ಸಂಭವಿಸುತ್ತಿದೆ (Heavy Rain). ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ (Wayanad Landslide) ಊರಿಗೆ ಊರೇ ನಾಮವಶೇಷವಾಗಿದ್ದು, 250ಕ್ಕಿಂತ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ಮಧ್ಯೆ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ (Cloudburst)ವಾಗಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪಾರ್ವತಿ ನದಿ ಮೇರೆ ಮೀರಿ ಹರಿಯುತ್ತಿದ್ದು, ಬಹುಮಹಡಿ ಕಟ್ಟಡ ಕುಸಿದು ಬೀಳುತ್ತಿರುವ ಭಯಾನಕ ವಿಡಿಯೊ ವೈರಲ್‌ ಆಗಿದೆ (Viral Video).

ಕುಲ್ಲುವಿನಲ್ಲಿ ಗುರುವಾರ ನದಿ ತೀರದ ಬಳಿ ಇದ್ದ ಕಟ್ಟಡವು ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದು ಕೆಲವೇ ಸೆಕೆಂಡುಗಳಲ್ಲಿ ರಭಸವಾಗಿ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುವ ದೃಶ್ಯ ಇದಾಗಿದೆ. ವಿಡಿಯೊದಲ್ಲಿ ಈ ಬಹುಮಹಡಿ ಕಟ್ಟಡ ಕ್ಷಣಾರ್ಧಲ್ಲಿಯೇ ನದಿಯಲ್ಲಿ ಕಣ್ಮರೆಯಾಗುತ್ತಿರುವುದು ಕಂಡು ಬಂದಿದೆ. ತಕ್ಷಣ ಅಲ್ಲಿದ್ದವರು ಓಡಿ ಜೀವ ಉಳಿಸಿಕೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದ ನದಿಗಳ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದೆ.

ಇಬ್ಬರ ಸಾವು

ಇದುವರೆಗೆ ಹಿಮಾಚಲ ಪ್ರದೇಶದಲ್ಲಿ ಮಳೆ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸುಮಾರು 30 ಮಂದಿ ನಾಪತ್ತೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಶಿಮ್ಲಾದಿಂದ 100 ಕಿ.ಮೀ. ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮತ್ತು ಮಂಡಿಯಲ್ಲಿ ಮೇಘಸ್ಫೋಟ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಹಿಮಾಚಲ ಪ್ರದೇಶಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಮುಂದಿನ 2-3 ದಿನಗಳವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ʼʼಶಿಮ್ಲಾ ಜಿಲ್ಲೆಯ ರಾಂಪುರದಲ್ಲಿ ನಡೆದ ಮೇಘಸ್ಫೋಟದ ನಂತರ ಇಬ್ಬರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಈ ಪ್ರದೇಶದ ರಸ್ತೆಗಳು ಮತ್ತು ಜಲವಿದ್ಯುತ್ ಯೋಜನೆಗೂ ಹಾನಿಯಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಮತ್ತು ರಾಜ್ಯ ಪೊಲೀಸ್‌ ತಂಡಗಳನ್ನು ರಕ್ಷಣಾ ಕಾರ್ಯಾಚರಣೆಯನ್ನು ನಿಯೋಜಿಸಲಾಗಿದೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿರಂತರ ಮಳೆಯಿಂದಾಗಿ ಭೂಕುಸಿತದ ಸಾಧ್ಯತೆ ಹೆಚ್ಚಾದ ಕಾರಣ ರಾಜ್ಯದ ಅನೇಕ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮಂಡಿಯಲ್ಲಿ 29, ಕುಲ್ಲುನಲ್ಲಿ 8, ಶಿಮ್ಲಾದಲ್ಲಿ 4 ಮತ್ತು ಕಾಂಗ್ರಾ ಮತ್ತು ಕಿನ್ನೌರ್‌ನಲ್ಲಿ ತಲಾ 2 ಸೇರಿದಂತೆ ಒಟ್ಟು 45 ರಸ್ತೆಗಳನ್ನು ಮುಚ್ಚಲಾಗಿದೆ ಎಂದು ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ. ಸುಮಾರು 215 ಟ್ರಾನ್ಸ್‌ಫಾರ್ಮರ್‌ಗಳು ಅಸ್ತವ್ಯಸ್ತಗೊಂಡಿರುವುದರಿಂದ ವಿದ್ಯುತ್ ಸರಬರಾಜಿನ ಮೇಲೂ ಪರಿಣಾಮ ಬೀರಿದೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 254ಕ್ಕೆ ಏರಿಕೆ; ಸೇನೆಯ ತಾತ್ಕಾಲಿಕ ಸೇತುವೆ ಬಹುತೇಕ ಪೂರ್ಣ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯಕ್ಕೆ 425 ಕೋಟಿ ರೂ.ಗಳ ನಷ್ಟವಾಗಿದೆ. ಜುಲೈ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಯಿಂದಾಗಿ 76 ರಸ್ತೆಗಳು ಬಂದ್ ಆಗಿದ್ದು, 34 ವಿದ್ಯುತ್ ಸರಬರಾಜು ಯೋಜನೆಗಳು ಮತ್ತು 69 ನೀರು ಸರಬರಾಜು ಯೋಜನೆಗಳು ಅಸ್ತವ್ಯಸ್ತಗೊಂಡಿದ್ದವು. ಇತ್ತ ದೆಹಲಿ ಮತ್ತು ಉತ್ತರಾಖಂಡದಲ್ಲಿ ಧಾರಾಕಾರ ಮಳೆ ಆರಂಭವಾಗಿದೆ.

Continue Reading
Advertisement
muda scam cm siddaramaiah
ಪ್ರಮುಖ ಸುದ್ದಿ5 mins ago

MUDA Scam: ಸಿಎಂಗೆ ಕಳಿಸಿದ ರಾಜ್ಯಪಾಲರ ನೋಟೀಸ್‌ ತಿರಸ್ಕರಿಸಿದ ಕ್ಯಾಬಿನೆಟ್‌, ಕಾನೂನು ಹೋರಾಟಕ್ಕೆ ನಿರ್ಣಯ

Wayanad Landslide
ದೇಶ27 mins ago

Wayanad Landslide: ವಯನಾಡಿನ ದುರಂತ ಕಥೆ: ಬದುಕಿಗಾಗಿ ಸೌದಿಗೆ ತೆರಳಿದವ ಉಳಿದ; ಕುಟುಂಬವಿಡೀ ಮಣ್ಣು ಪಾಲಾಯ್ತು

Viral Video
Latest32 mins ago

Viral Video: ಮೆಟ್ರೊದೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು! ವಿಡಿಯೊ ನೋಡಿ

Sexual Abuse
Latest45 mins ago

Sexual Abuse: ಟೋಸ್ಟ್‌ ನೀಡುವುದಾಗಿ ಕರೆದು ಬಾಲಕಿ ಮೇಲೆ ಅತ್ಯಾಚಾರ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ

Wayanad Landslide
ದೇಶ47 mins ago

Wayanad Landslide: ಕುರ್ಚಿಯಲ್ಲಿ ಕುಳಿತ.. ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆ; ಇದು ಸ್ಮಶಾನ ಸದೃಶ್ಯ ವಯನಾಡಿನ ಭೀಕರ ದೃಶ್ಯ

Paris Olympics:
ಕ್ರೀಡೆ54 mins ago

Paris Olympics: ಕಂಚಿನ ಪದಕ ಗೆದ್ದ ರೈಲ್ವೆ ಟಿಕೆಟ್ ಕಲೆಕ್ಟರ್ ಸ್ವಪ್ನಿಲ್‌ ಕುಸಾಲೆ

Condom Cause Cancer
Latest54 mins ago

Condom Cause Cancer: ಕಾಂಡೋಮ್, ಲೂಬ್ರಿಕೆಂಟ್‍ ಬಳಸಿದರೂ ಕ್ಯಾನ್ಸರ್‌! ಅಧ್ಯಯನ ವರದಿಯಲ್ಲಿ ಆಘಾತಕಾರಿ ಸಂಗತಿ

Supreme Court SC ST Quota
ಪ್ರಮುಖ ಸುದ್ದಿ1 hour ago

Supreme Court Sc St Quota: ಎಸ್‌ಸಿ ಎಸ್‌ಟಿ ಒಳಮೀಸಲು; ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಕೇಂದ್ರದಿಂದ ರಾಜ್ಯ ಸರ್ಕಾರದ ಅಂಗಳಕ್ಕೆ ಬಂದ ಚೆಂಡು

karnataka Rain
ಮಳೆ1 hour ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌