ಇಂದು ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ - Vistara News

ದೇಶ

ಇಂದು ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

Article 370: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುವ ಆರ್ಟಿಕಲ್ 370 ಅನ್ನು ಕೇಂದ್ರ ಸರ್ಕಾರವು 2019ರಲ್ಲಿ ರದ್ದು ಮಾಡಿತ್ತು. ಈ ನಿರ್ಧಾರವನ್ನು ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

VISTARANEWS.COM


on

Supreme Court verdict on Article 370 and Know about this article
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ವಿಶೇಷ ಸ್ಥಾನಮಾನ (Special Status) ಕಲ್ಪಿಸುವ ಆರ್ಟಿಕಲ್ 370 ರದ್ದು (Article 370) ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ (Supreme Court) ಡಿ.11, ಸೋಮವಾರ ತೀರ್ಪು ಪ್ರಕಟಿಸಲಿದೆ(Judgment Day). ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ಸಾಂವಿಧಾನಿಕ ಪೀಠವು ದೀರ್ಘ ಅವಧಿಯಿಂದ ಈ ಅರ್ಜಿಗಳ ವಿಚಾರಣೆ ನಡೆಸಿದೆ.

ಸೆಪ್ಟೆಂಬರ್ 5 ರಂದು ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. 16 ದಿನಗಳ ಕಾಲ ಸಮಗ್ರ ವಿಚಾರಣೆಗೆ ಸಾಕ್ಷಿಯಾಯಿತು. ಅರ್ಜಿದಾರರು ಮತ್ತು ಸರ್ಕಾರ ಇಬ್ಬರೂ ತಮ್ಮ ವಾದಗಳನ್ನು ಮಂಡಿಸಿದರು, ಆರ್ಟಿಕಲ್ 370 ಅನ್ನು ರದ್ದುಗೊಳಿಸಲು ಬಳಸಿದ ಕಾರ್ಯವಿಧಾನದ ಸಾಂವಿಧಾನಿಕತೆಯನ್ನು ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವವನ್ನು ನಂತರದ ರದ್ದತಿಯನ್ನು ಪರಿಶೀಲಿಸಲಾಯಿತು. ಅಂತಿಮವಾಗಿ ಸೋಮವಾರ ತೀರ್ಪು ಹೊರ ಬೀಳಲಿದೆ. ಈ ಆರ್ಟಿಕಲ್ 370 ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಏನಿದು ಆರ್ಟಿಕಲ್ 370?

ಆರ್ಟಿಕಲ್ 370 ಭಾರತೀಯ ಸಂವಿಧಾನದಲ್ಲಿ ಅವಿಭಜಿತ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಪ್ರಮುಖ ನಿಬಂಧನೆಯಾಗಿದೆ. 1949 ಜುಲೈ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಮಧ್ಯಂತರ ಪ್ರಧಾನ ಮಂತ್ರಿ ಶೇಖ್ ಅಬ್ದುಲ್ಲಾ ಅವರು ಭಾರತೀಯ ಸಂವಿಧಾನ ಸಭೆಯೊಂದಿಗೆ ಮಾತುಕತೆಗಳನ್ನು ನಡೆಸಿ, ಅಂತಿಮವಾಗಿ 370 ನೇ ವಿಧಿಯನ್ನು ಅಳವಡಿಸಲಾಯಿತು. ಆ ವಿಧಿಯ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಲಾಯಿತು. ಉದಾಹರಣೆಗೆ ರಾಜ್ಯವು ತನ್ನದೇ ಆದ ಸಂವಿಧಾನವನ್ನು ಹೊಂದಲು ಅವಕಾಶ ನೀಡಿತು, ಪ್ರತ್ಯೇಕ ಧ್ವಜ ಮತ್ತು ಭಾರತ ಸರ್ಕಾರದ ಸೀಮಿತ ನ್ಯಾಯವ್ಯಾಪ್ತಿಯನ್ನು ಕಲ್ಪಿಸಿತು.

ಭಾರತೀಯ ಸಂವಿಧಾನ ಆರ್ಟಿಕಲ್ 1, ಜಮ್ಮು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಮೂಲಕ ಜಾರಿ ಮಾಡಲು ಅವಕಾಶ ಕಲ್ಪಿಸುತ್ತಿದೆ ಎಂದು ಆರ್ಟಿಕಲ್ 370(1)(ಸಿ)ನಲ್ಲಿ ತಿಳಿಸಲಾಗಿದೆ. ಆರ್ಟಿಕಲ್ 1 ಒಕ್ಕೂಟ ಎಂದು ಹೇಳುತ್ತದೆ. ಅದರರ್ಥ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಭಾರತೀಯ ಒಕ್ಕೂಟಕ್ಕೆ ಬಂಧಿಸುವ ವಿಧಿ 370 ಆಗಿದೆ. ರಾಷ್ಟ್ರಪತಿಗಳ ಆದೇಶದ ಮೂಲಕ 370 ನೇ ವಿಧಿಯನ್ನು ತೆಗೆದುಹಾಕಬಹುದಾದರೂ, ಹೊಸ ಕಾನೂನುಗಳನ್ನು ಮಾಡದ ಹೊರತು ಅದು ರಾಜ್ಯವನ್ನು ಭಾರತದಿಂದ ಸ್ವತಂತ್ರವಾಗಿರುವಂತೆ ನೋಡಿಕೊಳ್ಳುತ್ತದೆ.

370ನೇ ವಿಧಿ ರದ್ದು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವು ರಾಷ್ಟ್ರಪತಿ ಆದೇಶದ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು 2019 ಆಗಸ್ಟ್ 5ರಂದು ರದ್ದು ಮಾಡಿತು. ಅಲ್ಲದೇ, ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಕೇಂದ್ರಾಡಳಿತ ಪ್ರದೇಶಗಳನ್ನು ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ರಾಜ್ಯವು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಶಾಸಕಾಂಗವನ್ನು ಹೊಂದಿದ್ದರೆ, ಲಡಾಖ್ ಶಾಸಕಾಂಗವನ್ನು ಹೊಂದಿರುವುದಿಲ್ಲ.

ಅರ್ಜಿದಾರರ ವಾದವೇನು?

ಆರ್ಟಿಕಲ್ 370 ರದ್ಧತಿ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಗುರುತಿನ ಮೇಲೆ ಪ್ರಭಾರ ಬೀರಲಿದೆ. ಜೊತೆಗೆ ಈ ಪ್ರದೇಶದ ಪ್ರದೇಶದ ಸ್ವಾಯತ್ತತೆ ಮತ್ತು ಜನಸಂಖ್ಯಾ ಸಂಯೋಜನೆಗೆ ಅದರ ಸಂಭಾವ್ಯ ಪರಿಣಾಮಗಳ ಬಗ್ಗೆ ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನೆಲೆಯಲ್ಲೇ ಅರ್ಜಿದಾರರು ಆರ್ಟಿಕಲ್ 370 ರದ್ಧತಿಯು ಸಂವಿಧಾನಬಾಹಿರವಾಗಿದೆ ಎಂದು ವಾದಿಸಿದರು.

ಪೂರ್ಣ ಪ್ರಮಾಣದ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಕೇಂದ್ರ ಸರ್ಕಾರವು ತನಗಿರುವ ಅಖಂಡ ಬಹುಮತ ಮತ್ತು ಕಾರ್ಯನಿರ್ವಾಹಕ ಆದೇಶಗಳನ್ನು ದುರುಪಯೋಗ ಮಾಡಿಕೊಂಡಿದೆ. ಇದು ಒಕ್ಕೂಟ ವ್ಯವಸ್ಥೆ ಮತ್ತು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದ ನಡೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಮತ್ತೊಂದೆಡೆ, ಹಿರಿಯ ವಕೀಲ ಕಪಿಲ್ ಸಿಬಲ್, 1957ರಲ್ಲಿ ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆಯನ್ನು ವಿಸರ್ಜನೆ ಮಾಡಿದ ಬಳಿಕ, ಆರ್ಟಿಕಲ್ 370ಗೆ ಶಾಶ್ವತ ಸ್ವರೂಪವನ್ನು ಪಡೆದುಕೊಂಡಿದೆ ಎಂಬ ಅಂಶವನ್ನು ಕೋರ್ಟ್ ಗಮನಕ್ಕೆ ತಂದರು. ಹಾಗಾಗಿಯೇ, ಸಂವಿಧಾನ ತಿದ್ದುಪಡಿಗೆ ಸಂಸತ್ತಿಗೆ ಅಧಿಕಾರ ನೀಡುವ ಆರ್ಟಿಕಲ್ 368 ಅನ್ನು, 370 ವಿಧಿ ರದ್ಧತಿಗೆ ಬಳಸಿದ ಕ್ರಮವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ವಾದವೇನು?

ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಉಳಿದ ಭಾಗಗಳೊಂದಿಗೆ ಏಕೀಕರಣಕ್ಕೆ ಅಡ್ಡಿಪಡಿಸುತ್ತದೆ. ಈ ಪ್ರದೇಶದ ಅಭಿವೃದ್ಧಿಯನ್ನು ಸೀಮಿತಗೊಳಿಸುತ್ತದೆ ಎಂಬ ಕಾರಣಕ್ಕಾಗಿ ರದ್ದುಗೊಳಿಸಲಾಯಿತು ಎಂದು ಕೇಂದ್ರ ಸರಕಾರವು ತನ್ನ ವಾದವನ್ನು ಮಂಡಿಸಿತು. ರದ್ಧು ನಿರ್ಧಾರವು ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ, ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಉತ್ತೇಜಿಸಲು ಮತ್ತು ಪ್ರದೇಶದಲ್ಲಿ ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ವಾದಿಸಲಾಯಿತು. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣವಾಗಿ ಅನ್ವಯವಾಗದ ರಾಷ್ಟ್ರೀಯ ಕಾನೂನುಗಳು ಮತ್ತು ಕಾರ್ಯಕ್ರಮಗಳ ಅನ್ವಯಕ್ಕೆ ಇದು ಅನುಕೂಲವಾಗುತ್ತದೆ.

ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಏಕತೆಯ ಭಾಗವಾಗಿ ಮಾಡಲು 370 ಆರ್ಟಿಕಲ್ ರದ್ದು ಅಗತ್ಯವಾಗಿತ್ತು. ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆದುಕೊಂಡು ಬಳಿಕ ಅಂದರೆ, 2019ರ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ಭಾಗದಲ್ಲಿ ಚುನಾವಣೆ ನಡೆಸುವುದು ಬಾಕಿ ಇದೆ. ಪರಿಸ್ಥಿತಿ ಸುಧಾರಿಸಿದ ನಂತರ ಚುನಾವಣೆಯನ್ನು ನಡೆಸಲಾಗುವುದು ಮತ್ತು ರಾಜ್ಯದ ಸ್ಥಾನಮಾನಗಳನ್ನು ನೀಡಲಾಗುತ್ತದೆ ಎಂದು ವಾದಿಸಿತು.

370 ರದ್ದತಿ ಬಳಿಕ ಕಾಶ್ಮೀರದಲ್ಲಿ ಭಯೋತ್ಪಾದನೆ (ಶೇ. 45.2), ಒಳನುಸುಳುವಿಕೆ (ಶೇ. 90.2), ಕಲ್ಲು ತೂರಾಟದ ಘಟನೆಗಳು (ಶೇ. 97.2), ಮತ್ತು ಭದ್ರತಾ ಸಿಬ್ಬಂದಿ ಸಾವು (ಶೇ. 65.9) ಕಡಿಮೆಯಾಗಿವೆ ಅಂಶವನ್ನು ಕೇಂದ್ರ ಸರ್ಕಾರವು ಕೋರ್ಟ್‌ ಗಮನಕ್ಕೆ ತಂದಿದೆ.

ಸಂವಿಧಾನ ಪೀಠದ ಪರಿಶೀಲನೆ ಏನು?

ಆರ್ಟಿಲ್ 370 ರದ್ಧತಿಯ ಕುರಿತಾದ ಎಲ್ಲ ಆಯಾಮಗಳನ್ನು, ಸಾಂವಿಧಾನಿಕ ನಿಲುವುಗಳನ್ನು ಪೀಠ ಪರಿಶೀಲಿಸಿದೆ. ಅಂದರೆ, ಜಮ್ಮು ಮತ್ತು ಕಾಶ್ಮೀರದ ಮೇಲೆ ರಾಷ್ಟ್ರಪತಿ ಆಡಳಿತ, ಸಂಸತ್ತಿನ ಒಪ್ಪಿಗೆ, ರಾಜ್ಯ ಮರು ಸಂಘಟನೆಯಂಥ ಘಟನೆಗಳನ್ನು ಸಂವಿಧಾನ ಪೀಠವು ಪರಿಶೀಲಿಸಿದೆ.

ಡಿ.11ಕ್ಕೆ ತೀರ್ಪು ಪ್ರಕಟ

ಆರ್ಟಿಕಲ್ 370 ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ 23 ಅರ್ಜಿಗಳನ್ನು ದಾಖಲಾಗಿದ್ದವು. ದೂರಗಾಮಿ ಪರಿಣಾಮಗಳನ್ನು ಬೀರು ಮತ್ತು ಹೆಗ್ಗುರಾತಾಗಬಹುದಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೀರ್ಘ ಸಮಯದಿಂದ ನಡೆಸುತ್ತಾ ಬಂದಿದೆ. 16 ಮ್ಯಾರಥಾನ್ ದಿನಗಳ ವಿಚಾರಣೆಗಳು ಮತ್ತು ಎರಡೂ ಕಡೆಯವರು ಮಂಡಿಸಿದ ವಾದಗಳ ನಂತರ, ನ್ಯಾಯಾಲಯವು ಸೆಪ್ಟೆಂಬರ್ 5 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಸೋಮವಾರ ತೀರ್ಪು ಪ್ರಕಟಿಸಲಿದೆ. 370 ನೇ ವಿಧಿಯ ರದ್ದತಿಯನ್ನು ಸಂವಿಧಾನ ಮತ್ತು ಕಾನೂನು ತತ್ವಗಳಿಗೆ ಅನುಗುಣವಾಗಿ ನಡೆಸಲಾಗಿದೆಯೇ ಎಂದು ನಿರ್ಧರಿಸುವ ಅವರ ಈ ತೀರ್ಮಾನವು ಭಾರೀ ಮಹತ್ವವನ್ನು ಪಡೆದುಕೊಳ್ಳಲಿದೆ.

ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ದುಶ್ಯಂತ್ ದವೆ ಮತ್ತು ರಾಜೀವ್ ಧವನ್ ಸೇರಿದಂತೆ 18 ವಕೀಲರು ಕೇಂದ್ರದ ನಿರ್ಧಾರದ ಸಿಂಧುತ್ವವನ್ನು ಪ್ರಶ್ನಿಸಿ ವಾದ ಮಂಡಿಸಿದರೆ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಇತರ ಕಾನೂನು ತಜ್ಞರು ಕೇಂದ್ರವನ್ನು ಪ್ರತಿನಿಧಿಸಿ, ಕೇಂದ್ರದ ನಿರ್ಧಾರವು ಸಂಪೂರ್ಣವಾಗಿ ತಾರ್ಕಿಕ ಮತ್ತು ಸೂಕ್ತವಾಗಿದೆ ಎಂದು ವಾದ ಮಂಡಿಸಿದ್ದರು.

ಈ ಸುದ್ದಿಯನ್ನೂ ಓದಿ: Article 370: ರಾಷ್ಟ್ರಪತಿಯವರೇ ರಾಜ್ಯದ ಸ್ಥಾನ ನೀಡಬಹುದು; ಕಾಶ್ಮೀರ ವಿಷಯದಲ್ಲಿ ಸುಪ್ರೀಂ ಮಹತ್ವದ ಪ್ರಸ್ತಾಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Lok Sabha Speaker:ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆ ಎಂದು ಹೇಳಿದರು.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆ ಎಂದು ಹೇಳಿದರು.

ಸ್ವಾತಂತ್ರ್ಯದ 70 ವರ್ಷಗಳಲ್ಲಿ ನಡೆಯದ ಕೆಲಸಗಳು ನಿಮ್ಮ ಅಧ್ಯಕ್ಷತೆಯಲ್ಲಿ ಈ ಸದನದಲ್ಲಿ ಸಾಧ್ಯವಾಗಿವೆ. ಹಲವು ಮೈಲಿಗಲ್ಲುಗಳಿಗೆ ಈ ಸದನ ಸಾಕ್ಷಿಯಾಗಿತ್ತು. 17 ನೇ ಲೋಕಸಭೆಯ ಸಾಧನೆಗಳ ಬಗ್ಗೆ ದೇಶವು ಹೆಮ್ಮೆಪಡುತ್ತದೆ ಎಂದು ಹೇಳಿದರು.

ಇದು ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, “ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಿ ಭಾರತದ ಜನರನ್ನು ಪ್ರತಿನಿಧಿಸಲು ಅವಕಾಶ ನೀಡುವ ಮೂಲಕ, ನೀವು ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಸರಿಯಾಗಿ ನಿರ್ವಹಿಸುತ್ತೀರಿ ಎಂಬ ಬಗ್ಗೆ ನಮಗೆ ವಿಶ್ವಾಸವಿದೆ. ನಾನು ಮತ್ತೊಮ್ಮೆ ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ ಎಂದರು.

ಇದನ್ನೂ ಓದಿ: Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Continue Reading

ದೇಶ

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Asaduddin Owais: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದು, ವಿವಾದ ಎಬ್ಬಿಸಿದೆ. ಓವೈಸಿ ನಡೆಗೆ ಕಿಡಿಕಾರಿರುವ ಬಿಜೆಪಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದೆ. ಹಾಗಾದರೆ ಓವೈಸಿ ಸದಸ್ಯತ್ವ ರದ್ದಾಗುತ್ತ? ಕಾನೂನು ಏನು ಹೇಳುತ್ತದೆ? ಇಲ್ಲಿದೆ ವಿವರ.

VISTARANEWS.COM


on

Asaduddin Owais
Koo

ನವದೆಹಲಿ: ಎಐಎಂಐಎಂ (AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದು, ವಿವಾದ ಎಬ್ಬಿಸಿದೆ. ಓವೈಸಿ ನಡೆಗೆ ಕಿಡಿಕಾರಿರುವ ಬಿಜೆಪಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದೆ. ಹಾಗಾದರೆ ಓವೈಸಿ ಸದಸ್ಯತ್ವ ರದ್ದಾಗುತ್ತ? ಕಾನೂನು ಏನು ಹೇಳುತ್ತದೆ? ಮುಂತಾದ ಪ್ರಶ್ನೆಗೆ ಇಲ್ಲಿದೆ ಉತ್ತರ.

ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ ಕೊನೆಗೆ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್‌ನಿಂದ ಕಣಕ್ಕಿಳಿದಿದ್ದ ಓವೈಸಿ ತಮ್ಮ ಪ್ರಬಲ ಸ್ಪರ್ಧಿ ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ಅವರನ್ನು ಸೋಲಿಸಿ ಸತತ ಐದನೇ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದಾರೆ.

ಸಮರ್ಥಿಸಿಕೊಂಡ ಓವೈಸಿ

ʼಜೈ ಪ್ಯಾಲೆಸ್ತೀನ್​’ ಘೋಷಣೆಗೆ ಬಿಜೆಪಿ ತೀವ್ರ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಓವೈಸಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸದನದ ಹೊರಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲʼʼ ಎಂದಿದ್ದಾರೆ. “ಇತರ ಸದಸ್ಯರು ಸಹ ವಿವಿಧ ರೀತಿಯ ಘೋಷಣೆ ಕೂಗುತ್ತಾರೆ. ಅದು ಹೇಗೆ ತಪ್ಪಾಗುತ್ತದೆ? ನಾನು ಏನು ಹೇಳಬೇಕೋ ಅದನ್ನು ಹೇಳಿದೆ. ಪ್ಯಾಲೆಸ್ತೀನ್ ಬಗ್ಗೆ ಮಹಾತ್ಮ ಗಾಂಧಿ ಹೇಳಿದ್ದನ್ನು ಓದಿ” ಎಂದು ಓವೈಸಿ ಹೇಳಿದ್ದಾರೆ.

ಓವೈಸಿ ಅವರ ಪ್ರಮಾಣ ವಚನದ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪ್ರಮಾಣ ವಚನ ಸ್ವೀಕರಿಸಲು ವೇದಿಕೆಯತ್ತ ಸಾಗುತ್ತಿದ್ದ ಓವೈಸಿ ಅವರನ್ನು ಬಿಜೆಪಿ ಸಂಸದರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುವ ಮೂಲಕ ಪ್ರಚೋದಿಸಿದ್ದಾರೆ ಎಂದು ಕೆಲವರು ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಯಾವೆಲ್ಲ ಕಾರಣಕ್ಕೆ ಸದಸ್ಯತ್ವ ರದ್ದಾಗುತ್ತದೆ?

ಇದೀಗ ಓವೈಸಿ ಅವರ ಸದಸ್ಯತ್ವ ರದ್ದಾಗುತ್ತ ಎನ್ನುವ ಪ್ರಶ್ನೆ ಎದ್ದಿದೆ. ಕಾನೂನು ಪ್ರಕಾರ ಯಾವೆಲ್ಲ ಕಾರಣಗಳಿಗೆ ಸದಸ್ಯತ್ವ ರದ್ದುಪಡಿಸಲಾಗುತ್ತದೆ ಎನ್ನುವ ವಿವರ ಇಲ್ಲಿದೆ.

  • ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಯಾವುದೇ ಲಾಭದಾಯಕ ಹುದ್ದೆಯನ್ನು ಹೊಂದಿದ್ದರೆ
  • ನ್ಯಾಯಾಲಯವು ಅಭ್ಯರ್ಥಿಯನ್ನು ಮಾನಸಿಕ ಅಸ್ವಸ್ಥ ಎಂದು ಘೋಷಿಸಿದ್ದರೆ
  • ಸ್ವಯಂಪ್ರೇರಿತವಾಗಿ ವಿದೇಶಿ ಪೌರತ್ವವನ್ನು ಪಡೆದಿದ್ದರೆ
  • ಸಂಸತ್ತಿನ ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹಗೊಂಡಿದ್ದರೆ ಅಂತಹವರ ಸದಸ್ಯತ್ವ ರದ್ದುಗೊಳಿಸಲಾಗುತ್ತದೆ.

ಈ ಪ್ರಕರಣವನ್ನು ಲೋಕಸಭೆಯ ನೈತಿಕ ಸಮಿತಿಗೆ ಕಳುಹಿಸಲಾಗುವುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮಿತಿ ಸದಸ್ಯರು ತನಿಖೆ ನಡೆಸಿ ಓವೈಸಿ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಿದ್ದಾರೆ. ಅದಾಗ್ಯೂ ಓವೈಸಿ ಅವರ ಸದಸ್ಯತ್ವ ರದ್ದಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: Chhatrapal Singh Gangwar: ಪ್ರಮಾಣ ವಚನದ ವೇಳೆ ʼಜೈ ಹಿಂದೂ ರಾಷ್ಟ್ರʼ ಘೋಷಣೆ ಮೊಳಗಿಸಿದ ಬಿಜೆಪಿ ಸಂಸದ!

2018ರಲ್ಲಿ, ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಮೊಹಮ್ಮದ್ ಅಕ್ಬರ್ ಲೋನ್ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ʼಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆಯನ್ನು ಕೂಗಿದ್ದರು. ಇದರ ಹೊರತಾಗಿಯೂ ಅವರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿರಲಿಲ್ಲ.

Continue Reading

ದೇಶ

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

IRCTC: ಹೊಸ ನಿಯಮದ ಪ್ರಕಾರ ಒಬ್ಬ ವ್ಯಕ್ತಿ ತನ್ನ ಖಾತೆಯಿಂದ ಪ್ರತಿ ತಿಂಗಳು 12ವರೆಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದಾಗಿದೆ. ಖಾತೆದಾರರು ಆಧಾರ್-ದೃಢೀಕರಣವನ್ನು ಹೊಂದಿದ್ದರೆ, ಅವರು ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ವೈಯಕ್ತಿಕ ಬಳಕೆದಾರ ID ಗಳನ್ನು ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ಕೇವಲ ವೈಯಕ್ತಿಕ ಬಳಕೆಗಾಗಿ ಕಟ್ಟು ನಿಟ್ಟುಗೊಳಿಸಲಾಗಿದೆ. ಈ ಟಿಕೆಟ್‌ಗಳ ಯಾವುದೇ ವಾಣಿಜ್ಯ ಮಾರಾಟವನ್ನು ರೈಲ್ವೆ ಕಾಯಿದೆ, 1989 ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗುತ್ತದೆ.

VISTARANEWS.COM


on

IRCTC
Koo

ಹೊಸದಿಲ್ಲಿ: ನಮ್ಮ ಸ್ನೇಹಿತರಿಗೆ, ಸಂಬಂಧಿಕರಿಗೆ ಆನ್‌ಲೈನ್‌ನಲ್ಲಿ ರೈಲ್ವೆ ಟಿಕೆಟ್‌ ಬುಕ್ಕಿಂಗ್‌(Online Ticket Booking) ಮಾಡುವ ಅವಕಾಶವನ್ನು ತೆಗೆದು ಹಾಕಲಾಗಿದೆ ಎಂಬ ಸುದ್ದಿಯನ್ನು ರೈಲ್ವೇ ಸಚಿವಾಲಯ(Railway Ministry) ತಿರಸ್ಕರಿಸಿದೆ. ರೈಲ್ವೇ ಸಚಿವಾಲಯದ ವಕ್ತಾರ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಸುದ್ದಿ ಸುಳ್ಳು ಮತ್ತು ದಾರಿ ತಪ್ಪಿಸುವಂತ ವಿಚಾರ ಎಂದು ಸ್ಪಷ್ಟಪಡಿಸಿದೆ. ಬೇರೆ ಬೇರೆ ಸರ್‌ನೇಮ್‌ಗಳಿರುವವರೂ ಪರಸ್ಪರ ಟಿಕೆಟ್‌ ಬುಕ್ಕಿಂಗ್‌ ಮಾಡಿಕೊಳ್ಳಬಹುದು ಎಂದು ಹೇಳಿದೆ. ಇದರ ಜೊತೆಗೆ ರೈಲ್ವೇ ಇಲಾಖೆ(IRCTC) ವೆಬ್‌ಸೈಟ್‌ನಲ್ಲಿ ಇ ಟಿಕೆಟ್‌ ಬುಕ್ಕಿಂಗ್‌ ಮಾಡಲು ಕೆಲವೊಂದು ನಿಯಮಗಳನ್ನು ಜಾರಿಗೊಳಿಸಲಾಗಿದೆ. ಅದು ಸ್ನೇಹಿತರು, ಕುಟುಂಬಸ್ಥರ ಮತ್ತು ಸಂಬಂಧಿಕರಿಗೆ ವೈಯಕ್ತಿಕ ಯೂಸರ್‌ ಐಡಿ ಬಳಸಿ ಟಿಕೆಟ್‌ ಬುಕ್‌ ಮಾಡಬಹುದಾಗಿದೆ.

ಪ್ರತಿ ವ್ಯಕ್ತಿ ಎಷ್ಟು ಟಿಕೆಟ್‌ ಬುಕ್‌ ಮಾಡಬಹುದು?

ಹೊಸ ನಿಯಮದ ಪ್ರಕಾರ ಒಬ್ಬ ವ್ಯಕ್ತಿ ತನ್ನ ಖಾತೆಯಿಂದ ಪ್ರತಿ ತಿಂಗಳು 12ವರೆಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದಾಗಿದೆ. ಖಾತೆದಾರರು ಆಧಾರ್-ದೃಢೀಕರಣವನ್ನು ಹೊಂದಿದ್ದರೆ, ಅವರು ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ವೈಯಕ್ತಿಕ ಬಳಕೆದಾರ ID ಗಳನ್ನು ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ಕೇವಲ ವೈಯಕ್ತಿಕ ಬಳಕೆಗಾಗಿ ಕಟ್ಟು ನಿಟ್ಟುಗೊಳಿಸಲಾಗಿದೆ. ಈ ಟಿಕೆಟ್‌ಗಳ ಯಾವುದೇ ವಾಣಿಜ್ಯ ಮಾರಾಟವನ್ನು ರೈಲ್ವೆ ಕಾಯಿದೆ, 1989 ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗುತ್ತದೆ.

ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ ಮಾಡುವುದು ಹೇಗೆ?

  1. IRCTC ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ನಿಮ್ಮ ಖಾತೆಗೆ ಲಾಗ್ ಇನ್ ಮಾಡಿ.
    “ಬುಕ್ ಯುವರ್ ಟಿಕೆಟ್” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
    ಬೋರ್ಡಿಂಗ್ ಮತ್ತು ಡೆಸ್ಟಿನೇಶನ್‌ ವಿಳಾಸಗಳನ್ನು ಭರ್ತಿ ಮಾಡಿ.
    ಪ್ರಯಾಣದ ದಿನಾಂಕವನ್ನು ಆಯ್ಕೆಮಾಡಿ.
    ಪ್ರಯಾಣದ ವರ್ಗವನ್ನು ಆಯ್ಕೆಮಾಡಿ.
    ಲಭ್ಯವಿರುವ ರೈಲು ಆಯ್ಕೆಗಳನ್ನು ವೀಕ್ಷಿಸಿ.
    “ಬುಕ್ ನೌ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
    ಪ್ರಯಾಣಿಕರ ವಿವರಗಳನ್ನು ಭರ್ತಿ ಮಾಡಿ.
    ಮೊಬೈಲ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ.

ಟಿಕೆಟ್‌ ಕ್ಯಾನ್ಸಲ್‌ ಮಾಡೋದು ಹೇಗೆ?

  1. IRCTC ವೆಬ್‌ಸೈಟ್‌ಗೆ ಹೋಗಿ ಮತ್ತು ನಿಮ್ಮ ಬಳಕೆದಾರಹೆಸರು ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ.
    “ನನ್ನ ಖಾತೆ” ವಿಭಾಗದ ಮೇಲೆ ಸುಳಿದಾಡಿ ಮತ್ತು ಡ್ರಾಪ್-ಡೌನ್ ಮೆನುವಿನಿಂದ “ಬುಕ್ ಮಾಡಿದ ಟಿಕೆಟ್ ಇತಿಹಾಸ” ಆಯ್ಕೆಮಾಡಿ.
    ನೀವು ರದ್ದುಗೊಳಿಸಲು ಬಯಸುವ ಬುಕಿಂಗ್ ಅನ್ನು ಹುಡುಕಿ ಮತ್ತು “ಟಿಕೆಟ್ ರದ್ದುಗೊಳಿಸು” ಆಯ್ಕೆಯನ್ನು ಕ್ಲಿಕ್ ಮಾಡಿ.
    ಒಂದು ಪಾಪ್-ಅಪ್ ವಿಂಡೋ ಕಾಣಿಸುತ್ತದೆ.
    ನೀವು ರದ್ದುಗೊಳಿಸಲು ಬಯಸುವ ಪ್ರಯಾಣಿಕರನ್ನು ಆಯ್ಕೆ ಮಾಡಿ ಮತ್ತು ಮುಂದಿನ ಪೆಟ್ಟಿಗೆಯನ್ನು ಪರಿಶೀಲಿಸಿ

ಇದನ್ನೂ ಓದಿ: Manoj Kalyane: ಬಿಜೆಪಿ ಮುಖಂಡ, ಮಧ್ಯ ಪ್ರದೇಶ ಸಚಿವರ ಆಪ್ತನ ಹತ್ಯೆ; ಬೈಕ್‌ನಲ್ಲಿ ಬಂದು ಗುಂಡಿನ ಮಳೆಗೆರೆದ ದುಷ್ಕರ್ಮಿಗಳು

Continue Reading

ದೇಶ

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Lok Sabha Speaker: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ ಭಾರೀ ಕುತೂಹಲ ಮೂಡಿಸಿದ್ದ ಚುನಾವಣೆಯಲ್ಲಿ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಯನ್ನು ಆಯ್ಕೆಯಾಗಿದ್ದರೂ ಅವರ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

ಕೊನೆ ಕ್ಷಣದಲ್ಲಿ ಸುರೇಶ್‌ಗೆ ಬೆಂಬಲ ಸೂಚಿಸಿದ ಟಿಎಂಸಿ

ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಮಂಗಳವಾರ ಆರೋಪಿಸಿತ್ತು. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿ ಇಂಡಿ ಬಣವನ್ನು ಆತಂಕಕ್ಕೆ ದೂಡಿತ್ತು. ಆದರೆ ಕೊನೆಕ್ಷಣದಲ್ಲಿ ಟಿಎಂಸಿ ಸದಸ್ಯರು ಸುರೇಶ್‌ ಅವರಿಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

ಏಳು ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ ಮತ್ತು ಕೇರಳದ ವಯನಾಡು ಸ್ಥಾನಕ್ಕೆ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕಾರಣ 535 ಸಂಸದರು ಇಂದು ಮತ ಚಲಾಯಿಸಿದ್ದರು. ಹೀಗಾಗಿ ಬಹುಮತಕ್ಕೆ 268 ಸದಸ್ಯರ ಬೆಂಬಲ ಅಗತ್ಯವಿತ್ತು. ಓಂ ಬಿರ್ಲಾ ಅವರಿಗೆ ಎನ್‌ಡಿಎ ಜತೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ, ಇತರರು ಬೆಂಬಲ ಸೂಚಿಸಿದ್ದರಿಂದ ಸುಲಭವಾಗಿ 300ಕ್ಕೆಂತ ಹೆಚ್ಚು ಮತ ಪಡೆದುಕೊಂಡರು.

Continue Reading
Advertisement
PGCET 2024
ಕರ್ನಾಟಕ11 mins ago

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

Liquor Price karnataka
ಕರ್ನಾಟಕ12 mins ago

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Lok Sabha Speaker
ದೇಶ28 mins ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್31 mins ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ39 mins ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

ಕಥೆಕೂಟ literature meet
ಕಲೆ/ಸಾಹಿತ್ಯ47 mins ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ50 mins ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್53 mins ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ1 hour ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌