ರಾಹುಲ್​ ಗಾಂಧಿಗೆ ಹಿನ್ನಡೆ; ದೋಷಿ ಎಂಬ ತೀರ್ಪಿಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸೂರತ್​ ಸೆಷನ್ಸ್ ಕೋರ್ಟ್​ - Vistara News

ದೇಶ

ರಾಹುಲ್​ ಗಾಂಧಿಗೆ ಹಿನ್ನಡೆ; ದೋಷಿ ಎಂಬ ತೀರ್ಪಿಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸೂರತ್​ ಸೆಷನ್ಸ್ ಕೋರ್ಟ್​

2019ರಲ್ಲಿ ಮೋದಿ ಉಪನಾಮಕ್ಕೆ ಮಾಡಿದ್ದ ಅಪಮಾನ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಒಂದರ ಬೆನ್ನಿಗೆ ಒಂದರಂತೆ ಸೋಲಾಗುತ್ತಿದೆ. ಈಗ ಸೆಷನ್ಸ್​ ಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ.

VISTARANEWS.COM


on

Surat sessions court dismissed Rahul Gandhi Plea for a stay on his conviction
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: 2019ರಲ್ಲಿ ಮೋದಿ ಉಪನಾಮಕ್ಕೆ ಅವಮಾನ ಮಾಡಿದ ಕೇಸ್​​ನಲ್ಲಿ ಸೂರತ್​ ಕೋರ್ಟ್​​ನಿಂದ ದೋಷಿ ಎಂದು ಪರಿಗಣಿತರಾಗಿ, ಸಂಸದನ ಸ್ಥಾನವನ್ನೂ ಕಳೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಯವರು ‘ಕೆಳ ನ್ಯಾಯಾಲಯ ತಮಗೆ ನೀಡಿದ್ದ ಶಿಕ್ಷೆಗೆ ತಡೆ ನೀಡುವಂತೆ ಸೂರತ್​ ಸೆಷನ್ಸ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈಗ ಅಲ್ಲಿಯೂ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ. ಅವರ ಅರ್ಜಿಯನ್ನು ಸೆಷನ್ಸ್​ ಕೋರ್ಟ್​ ವಜಾಗೊಳಿಸಿದೆ. ಇದು ರಾಹುಲ್ ಗಾಂಧಿಯವರಿಗೆ ಸಂಕಷ್ಟ ತಂದಿಟ್ಟಿದ್ದು, ಅವರೀಗ ಮತ್ತೆ ಮೇಲ್ಮನವಿ ಸಲ್ಲಿಸಬೇಕಾಗಿದೆ.

2019ರ ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿಯವರು ಕೋಲಾರದಲ್ಲಿ ಮಾತನಾಡಿ, ‘ಎಲ್ಲ ಕಳ್ಳರ ಉಪನಾಮವೂ ಮೋದಿ ಎಂದೇ ಇರುತ್ತದೆ’ ಎಂದು ಹೇಳಿದ್ದರು. ಅವರ ಈ ಹೇಳಿಕೆ ವಿರುದ್ಧ ತಿರುಗಿಬಿದ್ದಿದ್ದ ಗುಜರಾತ್​ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸೂರತ್​ ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕೇಸ್​ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಾರ್ಚ್​ 23ರಂದು ತೀರ್ಪು ನೀಡಿ ‘ಮೋದಿ ಉಪನಾಮಕ್ಕೆ ಅಪಮಾನ ಮಾಡಿದ್ದ ಕೇಸ್​ನಲ್ಲಿ ರಾಹುಲ್ ಗಾಂಧಿಯವರು ದೋಷಿ ಎಂದು ಪರಿಗಣಿಸಿ, ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಅದರ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಸಂಸದನ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇನ್ನು ರಾಹುಲ್ ಗಾಂಧಿಗೆ 30 ದಿನಗಳ ಜಾಮೀನು ನೀಡಿದ್ದ ಕಾರಣ ಅವರು ಶಿಕ್ಷೆಯಿಂದ ಪಾರಾಗಲು ಸೂರತ್ ಸೆಷನ್ಸ್​ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ, ‘ಸೂರತ್​ನ ಕೆಳ ನ್ಯಾಯಾಲಯ ಕೊಟ್ಟಿದ್ದ ತೀರ್ಪಿಗೆ ತಡೆ ನೀಡುವಂತೆ’ ಕೋರಿದ್ದರು. ಆದರೆ ಇಲ್ಲಿಯೂ ಸೋಲಾಗಿದೆ.

ಇದನ್ನೂ ಓದಿ: ಸೆಷನ್ಸ್​ ಕೋರ್ಟ್​​ನಲ್ಲಿ ರಾಹುಲ್ ಗಾಂಧಿ ವಿಚಾರಣೆ ಇಂದು; ದುರಹಂಕಾರದ ಕೊಳಕು ಪ್ರದರ್ಶನ ಎಂದು ಪ್ರತಿ ಅರ್ಜಿ ಸಲ್ಲಿಸಿರುವ ಪೂರ್ಣೇಶ್​ ಮೋದಿ

ಶಿಕ್ಷೆಗೆ ತಡೆಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಹೆಚ್ಚುವರಿ ಸೆಷನ್ಸ್​ ಜಡ್ಜ್​ ಆರ್​ಪಿ ಮೊಗೇರಾ ಅವರು ಏಪ್ರಿಲ್​ 13ರಂದು ವಿಚಾರಣೆ ನಡೆಸಿ, ಏಪ್ರಿಲ್​ 20ಕ್ಕೆ ಶಿಕ್ಷೆ ಕಾಯ್ದಿರಿಸಿದ್ದರು. ರಾಹುಲ್‌ ಗಾಂಧಿ ಪರ ವಾದ ಮಂಡಿಸಿದ ಚೀಮಾ, “ರಾಹುಲ್‌ ಗಾಂಧಿ ಅವರು ನೀಡಿದ ಹೇಳಿಕೆಯನ್ನು ಕೂಲಂಕಷವಾಗಿ ಪರಿಶೀಲಿಸಬೇಕಿದೆ. ಅವರು ಆಡಿದ ಮಾತುಗಳನ್ನು ಬೇರೆ ಅರ್ಥದಲ್ಲಿ ಬಿಂಬಿಸಲಾಗಿದೆ. ನರೇಂದ್ರ ಮೋದಿ ಅವರನ್ನು ಟೀಕಿಸಿದ್ದನ್ನೇ ಮಾನಹಾನಿ ರೀತಿ ಬಿಂಬಿಸಲಾಗಿದೆ. ಹಾಗಾಗಿ, ಸೂರತ್‌ ನ್ಯಾಯಾಲಯದ ತೀರ್ಪಿನ ಮರುಪರಿಶೀಲನೆ ಅಗತ್ಯವಿದೆ” ಎಂದು ಹೇಳಿದ್ದರು. ವಾದ-ಪ್ರತಿವಾದವನ್ನೆಲ್ಲ ಆಲಿಸಿದ್ದ ಜಡ್ಜ್​ ತೀರ್ಪು ಕೊಟ್ಟಿರಲಿಲ್ಲ. ಇಂದು ಆ ಅರ್ಜಿಯನ್ನೇ ವಜಾಗೊಳಿಸಿದ್ದಾರೆ. ಈ ಮೂಲಕ ಶಿಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Girl Saved Mother : ಬುದ್ಧಿವಂತ ಬಾಲಕಿ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಕಾಪಾಡಿದ 7 ವರ್ಷದ ಪುತ್ರಿ

ಅಲ್ಲಿನ ಅಭಯಂ 181 ಸಹಾಯವಾಣಿ ಅಧಿಕಾರಿಗಳ ಪ್ರಕಾರ, ಮಣಿಕಟ್ಟು ಸೀಳಿ ಬಿದ್ದಿರುವ ನಂತರ ತಾಯಿಗೆ ತೀವ್ರ ರಕ್ತಸ್ರಾವವಾಗುತ್ತಿದೆ ಎಂದು ಬಾಲಕಿಯೊಬ್ಬಳು ಕರೆ ಮಾಡಿದ್ದಾಳೆ. ತಕ್ಷಣ ಅವರ ಅಲ್ಲಿಗೆ ಹೋಗಿದ್ದಾಗ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಅವರು ಮಹಿಳೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ್ದಾರೆ.

VISTARANEWS.COM


on

girl Saved Mother
Koo

ಅಹಮದಾಬಾದ್​​: ಅಪ್ಪನ ದೌರ್ಜನ್ಯಕ್ಕೆ ಒಳಗಾಗಿ ಆತ್ಮಹತ್ಯಗೆ ಯತ್ನಿಸುತ್ತಿದ್ದ ತನ್ನ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಸಮಯ ಪ್ರಜ್ಞೆ ಹಾಗೂ ಚಾತುರ್ಯದ (Girl Saved Mother ) ಮೂಲಕ ಬದುಕುಳಿಸಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. ಅಂದ ಹಾಗೆ ಬಾಲಕಿಗೆ ನೆರವಾಗಿದ್ದು ಆಕೆ ತರಗತಿಯಲ್ಲಿ ಕಲಿತ ಪಾಠ. ಅಂದರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿಗೆ ಕರೆ ಮಾಡಬೇಕು ಎಂಬ ಶಿಕ್ಷಕರ ಹಿತನುಡಿ. ಹಾಗೆಯೇ ಕೈಯ ರಕ್ತನಾಳ ಕತ್ತರಿಸಿಕೊಂಡು ಅಸ್ವಸ್ಥಗೊಂಡು ಬಿದ್ದಿದ್ದ ತಾಯಿಯನ್ನು ನೋಡಿಯೂ ಗಾಬರಿಯಾಗದ ಆಕೆ ಸಹಾಯವಾಣಿಗೆ ಕರೆ ಮಾಡಿ ಆಂಬ್ಯುಲೆನ್ಸ್ ಕರೆಸಿ ಪ್ರಾಣ ಉಳಿಸಿದ್ದಾಳೆ.

ಕಳೆದ ಗುರುವಾರ ರಾತ್ರಿ ಘಟನೆ ನಡೆದಿದೆ ಎಂದು ಗುಜರಾತ್​ನ ಅಭಯಂ 181 ಸಹಾಯವಾಣಿ ಅಧಿಕಾರಿಗಳು ಹೇಳಿದ್ದಾರೆ. ಮಣಿಕಟ್ಟು ಸೀಳಿ ಬಿದ್ದಿರುವ ತಾಯಿಗೆ ತೀವ್ರ ರಕ್ತಸ್ರಾವವಾಗುತ್ತಿದೆ ಎಂದು ಬಾಲಕಿಯೊಬ್ಬಳು ಕರೆ ಅವರಿಗೆ ಕರೆ ಮಾಡಿದ್ದರು ತಕ್ಷಣ ಅವರ ಅಲ್ಲಿಗೆ ಹೋಗಿದ್ದಾಗ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಅವರು ಮಹಿಳೆಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ್ದಾರೆ.

ಆತ್ಮಹತ್ಯೆ ಮಾಡಲು ಮುಂದಾಗಿರುವ ಮಹಿಳೆಯ ಗಂಡ ಅಪರಾಧವೊಂದರಲ್ಲಿ ಜೈಲು ಸೇರಿದ್ದ. ಅಲ್ಲಿಂದ ಬಿಡುಗಡೆಯಾಗಿ ಬಂದ ಬಳಿಕವೂ ಸಣ್ಣ ವಿಷಯಗಳಿಗೆ ಜಗಳವಾಡಲು ಪ್ರಾರಂಭಿಸಿದ್ದ. ಆಗಾಗ್ಗೆ ನಡೆಯುವ ಜಗಳಗಳಿಂದ ಬೇಸತ್ತ ಮಹಿಳೆ ತನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದಳು. ಪುತ್ರಿಯ ಸಮಯೋಚಿತ ಕರೆಯಿಂದ ಅವರೀಗ ಬದುಕಿದ್ದರೆ. ಶಾಲೆಯಲ್ಲಿ ಪಡೆದ ತರಬೇತಿಯನ್ನು ನೆನಪು ಮಾಡಿಕೊಂಡ ಬಾಲಕಿ ನಮ್ಮ ಸಹಾಯವಾಣಿ ಮತ್ತು 108 ಆಂಬ್ಯುಲೆನ್ಸ್ ಸೇವೆಗಳ ತುರ್ತು ಸಂಖ್ಯೆಗಳನ್ನು ನೆನಪಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಲಿಬಿಲಿಗೊಳ್ಳದ ಬಾಲಕಿ

ಸಾಮಾನ್ಯವಾಗಿ ಸಣ್ಣ ಮಕ್ಕಳು ಕಠಿಣ ಪರಿಸ್ಥಿತಿಯಲ್ಲಿ ಹೆಚ್ಚು ಗಲಿಬಿಲಿಗೆ ಒಳಗಾಗುತ್ತಾರೆ. ಅವರಿಗೆ ಮುಂದೇನು ಮಾಡಬೇಕು ಎಂಬ ಯೋಚನೆಯೇ ಇರುವುದಿಲ್ಲ. ಅಲ್ಲದೆ ಪರಿಸ್ಥಿತಿಯನ್ನು ನಿಯಂತ್ರಣ ಮಾಡಲು ಸಾಧ್ಯವಾಗದೇ ಜೋರಾಗಿ ಅಳುವುದಕ್ಕೆ ಆರಂಭಿಸುತ್ತಾರೆ. ಆದರೆ ಈ ಏಳು ವರ್ಷದ ಬಾಲಕಿ ಆ ರೀತಿ ಮಾಡಿಲ್ಲ. ತಾಯಿ ರಕ್ತ ಸಿಕ್ತ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿಯೂ ತಕ್ಷಣವೇ ಸಹಾಯವಾಣಿಗೆ ಕರೆ ಮಾಡಿದ್ದಾಳೆ. ಆಕೆಯ ಕರೆಯಿಂದಾಗಿ ಜೀವವೊಂದು ಉಳಿದಿದೆ.

ಬದುಕಿನ ಪಾಠ ಅಗತ್ಯ

ಆಧುನಿಕ ಜಗತ್ತಿನಲ್ಲಿ ಜನರಿಗೆ ತುರ್ತು ಪರಿಸ್ಥಿತಿಗಳು ಹೆಚ್ಚಾಗಿ ಎದುರಾಗುತ್ತವೆ. ಆದರೆ, ಬಹುತೇಕ ಸಂದರ್ಭದಲ್ಲಿ ಅವುಗಳನ್ನು ನಿರ್ವಹಿಸಲು ಸಾಧ್ಯವಾಗದೇ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತವೆ. ಹೀಗಾಗಿ ತುರ್ತು ಸಂದರ್ಭದಲ್ಲಿ ಪ್ರಾಣ ಉಳಿಸಲು ಅಥವಾ ಆ ಕ್ಷಣದಿಂದ ಬಚಾವಾಗಲು ಏನು ಮಾಡಬೇಕು ಎಂಬ ತರಬೇತಿ ಅಗತ್ಯವಾಗಿದೆ. ಅದರಲ್ಲೂ ಶಾಲಾ ಮಕ್ಕಳಿಗೆ ಈ ನಿಟ್ಟಿನಲ್ಲಿ ತರಬೇತಿ ಕಡ್ಡಾಯ.

ಇದನ್ನೂ ಓದಿ: Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಛಾಟಿತ ನಾಯಕ ಅರೆಸ್ಟ್‌

ಜನಜಂಗುಳಿ ತುಂಬಿರುವ ಪೇಟೆ ಮತ್ತು ಏಕಾಂಗಿಯಾಗಿರುವ ವೇಳೆ ನಾನಾ ಆತಂಕಗಳನ್ನು ಇಂದಿನ ಮಕ್ಕಳು ಎದುರಿಸುತ್ತಾರೆ. ಆದರೆ, ಅದನ್ನು ನಿಭಾಯಿಸಲು ಸಾಧ್ಯವಾಗದೇ ಮಕ್ಕಳು ದುರ್ಘಟನೆಗಳ ಬಲಿಪಶು ಆಗುತ್ತಾರೆ. ಹೀಗಾಗಿ ಶಾಲಾ ಹಂತದಲ್ಲಿಯೇ ಇಂಥ ಸಂದರ್ಭಗಳನ್ನು ನಿಭಾಯಿಸುವ ತಂತ್ರಗಳನ್ನು ಹೇಳಿಕೊಡಬೇಕಾಗುತ್ತದೆ.

ಶಾಲಾ ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಈಗ ಲೈಂಗಿಕ ದೌರ್ಜನ್ಯದ ವಿರುದ್ಧ ಹೇಗೆ ಹೋರಾಡಬೇಕು ಎಂಬ ಪಾಠವನ್ನು ಹೇಳಿಕೊಡಲಾಗುತ್ತದೆ. ಅದು ಬಹುತೇಕ ಸಾಫಲ್ಯ ಕಾಣುತ್ತಿದೆ. ಆದರೆ, ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಕೆಲವು ತಂತ್ರಗಳನ್ನು ಕೆಲವೊಂದು ಶಾಲೆಗಳಲ್ಲಿ ಮಾತ್ರ ಕಲಿಸಲಾಗುತ್ತದೆ. ಇಲ್ಲಿ ಗಂಡು ಹಾಗೂ ಹೆಣ್ಣು ಎಂಬ ಭೇದವಿಲ್ಲದೇ ಎಲ್ಲ ಮಕ್ಕಳಿಗೂ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಪಾಠ ಹೇಳಿಕೊಡಬೇಕಾದ ಅಗತ್ಯವಿದೆ.

ಮೇಲಿನ ಪ್ರಕರಣದಲ್ಲಿ ಬಾಲಕಿಗೆ ಸಹಾಯವಾಣಿಗೆ ಕರೆ ಮಾಡಬೇಕು ಎಂದು ಶಾಲೆಯಲ್ಲಿ ಹೇಳಿಕೊಟ್ಟಿದ್ದ ಕಾರಣ ಆಕೆಯ ತಾಯಿಯ ಪ್ರಾಣ ಉಳಿದಿದೆ. ಒಂದು ವೇಳೆ ಆಕೆ ಅಂಥದ್ದೊಂದು ಪರಿಸ್ಥಿತಿಯನ್ನು ಎದುರಿಸಲು ಸಿದ್ಧಗೊಳ್ಳದೇ ಹೋಗಿದ್ದರೆ ತಬ್ಬಲಿಯಾಗಬೇಕಾಗಿತ್ತು.

Continue Reading

ಪ್ರಮುಖ ಸುದ್ದಿ

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Narendra Modi: ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ.

VISTARANEWS.COM


on

Modi in Karnataka stay in Belagavi tomorrow and Huge gatherings at five places
Koo

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅಂತೆಯೇ ಮೊದಲು ಬೆಳಗಾಗಿಯಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ. ಈ ಸಭೆಯ ನೇರ ಪ್ರಸಾರವನ್ನು (Narendra Modi Live) ಇಲ್ಲಿ ವೀಕ್ಷಿಸಿ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ದೇಶ

Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

Usman Ghani: ರಾಜಸ್ತಾನದ ಬಾನಸ್ವರಾದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಪ್ರಧಾನಿ ಮೋದಿಯವರು ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದ್ದ ಉಸ್ಮಾನ್‌ ಘನಿಯನ್ನು ಬಂಧಿಸಲಾಗಿದೆ.

VISTARANEWS.COM


on

By

Koo

ರಾಜಸ್ಥಾನ:ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿ(Usman Ghani)ಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇತ್ತೀಚೆಗೆ ರಾಜಸ್ತಾನದ ಬಾನಸ್ವರಾದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಪ್ರಧಾನಿ ಮೋದಿ(Narendra Modi) ಯವರು ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಅವರನ್ನು ಪಕ್ಷದಿಂದ ಉಚ್ಛಾಟನೆ(Expelled) ಗೊಳಿಸಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದ ಮುಕ್ತ ಪ್ರಸಾದ್‌ ನಗರ ಪೊಲೀಸ್‌ ಠಾಣಾಧಿಕಾರಿ ಧೀರೇಂದ್ರೆ ಶೆಖಾವತ್‌, ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ದಿನವೇ ಅವರ ಬಂಧನಕ್ಕೆ ನಾವು ತೆರಳಿದ್ದೆವು. ಆದರೆ ಅವರು ದಿಲ್ಲಿಯಲ್ಲಿದ್ದರು. ಶನಿವಾರ ಅವರು ವಾಪಾಸ್ಸಾಗ್ತಿದ್ದಂತೆ ಅವರು ನೇರವಾಗಿ ಠಾಣೆಗೆ ಬಂದು ತಮ್ಮ ಬಂಧನಕ್ಕೆ ಪೊಲೀಸ್‌ ವಾಹನ ಕಳುಹಿಸಲು ನಿಮಗೆಷ್ಟು ಧೈರ್ಯ ಎಂದು ತಗಾದೆ ತೆಗೆದಿದ್ದರು. ನಮಗೆ ಅವರು ಯಾರೆಂಬುದೇ ಗೊತ್ತಿರಲಿಲ್ಲ. ಪೊಲೀಸ್‌ ಠಾಣೆಯ ಎದುರು ತಮ್ಮ ನೂರಾರು ಬೆಂಬಲಿಗರ ಜೊತೆಗೆ ಬಂದಿದ್ದ ಉಸ್ಮಾನ್‌ ಘನಿ, ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದರು. ಪೊಲೀಸ್‌ ಠಾಣೆ ಎದುರು ನಡೆಯುತ್ತಿದ್ದ ಹೈಡ್ರಾಮಾ ತಾರಕಕ್ಕೇರುತ್ತಿದ್ದಂತೆ ನಾವು ಅವರನ್ನು ಬಂಧಿಸಿದ್ದೇವೆ. ಅಲ್ಲದೇ ಸೆಕ್ಷನ್‌ 151 (ಶಾಂತಿ ಕದಲುವ ಯತ್ನ) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಎದುರು ಅವರನ್ನು ಹಾಜರು ಪಡಿಸುತ್ತೇವೆ ಎಂದು ಮಾಹಿತಿ ಕೊಟ್ಟರು.

ಉಸ್ಮಾನ್‌ ಘನಿ ಹೇಳಿದ್ದೇನು?

ಪತ್ರಕರ್ತರ ಜೊತೆ ಮಾತನಾಡುತ್ತಾ ಮುಸ್ಲಿಮರ ಬಳಿ ಹೋಗಿ ಬಿಜೆಪಿಗೆ ಮತ ನೀಡುವಂತೆ ಕೇಳೋಕೆ ಹೋದರೆ ಅವರು ಪ್ರಧಾನಿ ಮೋದಿ ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗಳ ಕುರಿತು ಕೇಳುತ್ತಾರೆ. ಅವರಿಗೆ ಕೊಡಲು ನನ್ನ ಬಳಿ ಉತ್ತರ ಇಲ್ಲ. ಅಲ್ಲದೇ ರಾಜಸ್ಥಾನದಲ್ಲಿ ಜಾಟ್‌ ಸಮುದಾಯ ಕೂಡ ಬಿಜೆಪಿ ವಿರುದ್ಧ ಕೋಪಗೊಂಡಿದೆ. ಚುರು ಮತ್ತು ಇತರೆ ಲೋಕಸಭಾ ಕ್ಷೇತ್ರಗಳಲ್ಲಿ ಜಾಟ್‌ ಸಮುದಾಯಗಳು ಬಿಜೆಪಿ ವಿರುದ್ಧ ಮತ ಚಲಾಯಿಸಿದೆ. ನನ್ನ ಈ ಹೇಳಿಕೆಗೆ ನನ್ನ ವಿರುದ್ಧ ಕ್ರಮ ಜರುಗಿಸಿದರೂ ತಲೆಗೆಡಿಸಿಕೊಳ್ಳಲ್ಲ ಎಂದು ಅವರು ಹೇಳಿಕೆ ಕೊಟ್ಟಿದ್ದರು.

ಇದನ್ನೂ ಓದಿ: Yogi Adityanath:”ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಬೀಫ್‌ ಸೇವನೆ ಹಕ್ಕು”- ಮತ್ತೆ ಗುಡುಗಿದ ಯೋಗಿ

ಇತ್ತೀಚೆಗೆ ದೆಹಲಿಯಲ್ಲೂ ಉಸ್ಮಾನ್‌ ಘನಿ ಪಕ್ಷ ವಿರೋಧಿ ಹೇಳಿಕೆ ಕೊಟ್ಟಿದ್ದರು. ಈ ಬಾರಿ ಬಿಜೆಪಿ ರಾಜಸ್ಥಾನದ ೨೫ ಸ್ಥಾನಗಳಲ್ಲಿ ಮೂರು-ನಾಲ್ಕು ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಮುಸ್ಲಿಂರು, ಜಾಟ್‌ ಸಮುದಾಯದ ಜನ ಪ್ರಧಾನಿ ಮೋದಿ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ಉಸ್ಮಾನ್‌ ಘನಿ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಘನಿ ಹೇಳಿಕೆಯಿಂದ ತೀವ್ರ ಮುಜುಗರಕ್ಕೀಡಾಗಿದ್ದ ಬಿಜೆಪಿ ಅವರನ್ನು ಉಚ್ಛಾಟಿಸಿತ್ತು.

Continue Reading

ರಾಜಕೀಯ

Yogi Adityanath:”ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಬೀಫ್‌ ಸೇವನೆ ಹಕ್ಕು”- ಮತ್ತೆ ಗುಡುಗಿದ ಯೋಗಿ

Yogi Adityanath:ಬೀಫ್‌ ಸೇವನೆಗೆ ಪ್ರೋತ್ಸಾಹ ಕೊಡುವುದೇ ಇಂಡಿಯಾ ಒಕ್ಕೂಟದ ಪ್ರಮುಖ ಉದ್ದೇಶ. ಗೋವನ್ನು ತಾಯಿ ಎಂಬಂತೆ ಪೂಜಿಸುವ ಹಿಂದೂಗಳು ಬೀಫ್‌ ಸೇವನೆಯನ್ನು ಬಲವಾಗಿ ವಿರೋಧಿಸುತ್ತಾರೆ. ಆದರೆ ಕಾಂಗ್ರೆಸ್‌ ಮಾತ್ರ ಈ ವಿಚಾರದಲ್ಲಿ ಮುಸ್ಲಿಮರಿಗೆ ವಿನಾಯಿತಿಯನ್ನು ಕೊಡುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ ಎಂದು ಕಿಡಿ ಕಾರಿದರು.

VISTARANEWS.COM


on

By

Lok Sabha Election 2024
Koo

ಲಕ್ನೋ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದರೆ ದೇಶಾದ್ಯಂತ ಬೀಫ್‌ ಸೇವನೆ ಹಕ್ಕನ್ನು ನೀಡುವುದೇ ಅದರ ಪ್ರಮುಖ ಗುರಿಯಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌ (Yogi Adityanath) ಆರೋಪಿಸಿದ್ದಾರೆ. ಲಕ್ನೋದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ(Congress Manifesto)ಗೆ ಬಗ್ಗೆ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ ಅವ್ರು, ಬೀಫ್‌ ಸೇವನೆಗೆ(Beef consumption) ಪ್ರೋತ್ಸಾಹ ಕೊಡುವುದೇ ಇಂಡಿಯಾ ಒಕ್ಕೂಟದ(INDIA) ಪ್ರಮುಖ ಉದ್ದೇಶ. ಗೋವನ್ನು ತಾಯಿ ಎಂಬಂತೆ ಪೂಜಿಸುವ ಹಿಂದೂಗಳು ಬೀಫ್‌ ಸೇವನೆಯನ್ನು ಬಲವಾಗಿ ವಿರೋಧಿಸುತ್ತಾರೆ. ಆದರೆ ಕಾಂಗ್ರೆಸ್‌ ಮಾತ್ರ ಈ ವಿಚಾರದಲ್ಲಿ ಮುಸ್ಲಿಮರಿಗೆ ವಿನಾಯಿತಿಯನ್ನು ಕೊಡುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ ಎಂದು ಕಿಡಿ ಕಾರಿದರು.

ಶುಕ್ರವಾರ ನಡೆದ ಚುನಾವಣಾ ಪ್ರಚಾರದಲ್ಲೂ ಕಾಂಗ್ರೆಸ್‌ ವಿರುದ್ಧ ಗುಡುಗಿದ್ದ ಯೋಗಿ, ಅಲ್ಪಸಂಖ್ಯಾತರಿಗೆ ಬೀಫ್‌ ಸೇವನೆಯ ಹಕ್ಕನ್ನು ನೀಡಲು ಕಾಂಗ್ರೆಸ್‌ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದರು. ಗಮನಾರ್ಹ ವಿಚಾರ ಅಂದರೆ, ಉತ್ತರಪ್ರದೇಶದಲ್ಲಿ ಈಗಾಗಲೇ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಲಾಗಿದ್ದು, ಅದನ್ನು ಉಲ್ಲಂಘಿಸಿದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹ 5 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ. ಇನ್ನು ಗೋವುಗಳ ಮೇಲೆ ಹಿಂಸಾಕೃತ್ಯಗಳಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ₹ 3 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ.

ಯೋಗಿ ಆದಿತ್ಯನಾಥ್ ಅವರು, ದೇಶದ ಮೇಲೆ ಶರಿಯಾ ಕಾನೂನನ್ನು ಹೇರಲು ಕಾಂಗ್ರೆಸ್ ಬಯಸಿದೆ ಎಂದು ಹೇಳಿದ್ದರು. “ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ. ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದರೆ, ಅವರು ಸರ್ಕಾರ ರಚಿಸಿದರೆ ಶರಿಯಾ ಕಾನೂನನ್ನು ಜಾರಿಗೆ ತರಲು ಉದ್ದೇಶಿಸಿರುವುದು ಗೊತ್ತಾಗುತ್ತದೆ” ಎಂದು ಯೋಗಿ ಆರೋಪಿಸಿದ್ದರು.

ಉತ್ತರ ಪ್ರದೇಶ ಸರ್ಕಾರವು 2020 ರಲ್ಲಿ ಗೋಹತ್ಯೆ ಕುರಿತು ಸುಗ್ರೀವಾಜ್ಞೆಯನ್ನು ಜಾರಿಗೊಳಿಸುವ ಮೂಲಕ ಕಾನೂನನ್ನು ರೂಪಿಸಿತು. ಗೋಹತ್ಯೆ ತಡೆ (ತಿದ್ದುಪಡಿ) ಕಾಯಿದೆ 2020 ರ ಮೂಲಕ, ಗೋ ಹತ್ಯೆ ಮತ್ತು ಗೋವುಗಳ ಅಕ್ರಮ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅನುಕೂಲವಾಗುವಂತಹ ಸೆಕ್ಷನ್‌ಗಳನ್ನು ಸೇರ್ಪಡೆ ಮಾಡಲಾಯಿತು. ಈ ಹೊಸ ಕಾನೂನಿನ ಪ್ರಕಾರ ಹಸುಗಳ ಕಳ್ಳಸಾಗಣಿಕೆ ಪ್ರಕರಣಗಳಲ್ಲಿ ಪುನರಾವರ್ತಿತ ಅಪರಾಧಿಗಳಿಗೆ ಶಿಕ್ಷೆಯನ್ನು ದ್ವಿಗುಣಗೊಳಿಸಬಹುದು ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದು.

ಇದನ್ನೂ ಓದಿ: Narendra Modi : ಇಂದು, ನಾಳೆ ರಾಜ್ಯದಲ್ಲಿ ಮೋದಿಯಿಂದ ಅಬ್ಬರದ ಪ್ರಚಾರ; ಬಹಿರಂಗ ಭಾಷಣದ ವಿವರ ಇಲ್ಲಿದೆ

ತಿದ್ದುಪಡಿ ಮಾಡಲಾದ ಕಾನೂನಿನ ಪ್ರಕಾರ, ಕಳ್ಳಸಾಗಣೆ ಮಾಡುತ್ತಿದ್ದ ಹಸು ಕಂಡುಬಂದರೆ, ಒಂದು ವರ್ಷದವರೆಗೆ ಅದರ ನಿರ್ವಹಣೆಗೆ ತಗಲುವ ವೆಚ್ಚವನ್ನು ಆರೋಪಿಯಿಂದ ವಸೂಲಿ ಮಾಡಲಾಗುತ್ತದೆ. ಹಸುಗಳು ಅಥವಾ ಅವುಗಳ ಮಾಂಸವನ್ನು ಸಾಗಿಸುವ ವಾಹನಗಳು, ಅವುಗಳ ಮಾಲೀಕರು ಅಥವಾ ಚಾಲಕರ ವಿರುದ್ಧ ಕ್ರಮಕ್ಕೆ ಸಂಬಂಧಿಸಿದಂತೆ ಹಿಂದಿನ ಕಾನೂನಿಗೆ ಸ್ಪಷ್ಟತೆ ಇರಲಿಲ್ಲ. ತಿದ್ದುಪಡಿ ಮಾಡಲಾದ ಕಾನೂನಿನ ಅಡಿಯಲ್ಲಿ, ಅವರನ್ನು ಸಹ ತಪ್ಪಿತಸ್ಥರೆಂದು ಪರಿಗಣಿಸಲಾಗುತ್ತದೆ. ಹೆಚ್ಚುವರಿಯಾಗಿ, ಚಾಲಕ ಮತ್ತು ನಿರ್ವಾಹಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಮತ್ತು ಅವರ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ. ಈ ಕಾನೂನಿನ ಅಡಿಯಲ್ಲಿ ಎಲ್ಲಾ ಅಪರಾಧಗಳು ಜಾಮೀನು ರಹಿತವಾಗಿರುತ್ತದೆ.

Continue Reading
Advertisement
Food Poisoning
ಪ್ರಮುಖ ಸುದ್ದಿ2 mins ago

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Manjummel Boys
ಮಾಲಿವುಡ್33 mins ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ40 mins ago

Girl Saved Mother : ಬುದ್ಧಿವಂತ ಬಾಲಕಿ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಕಾಪಾಡಿದ 7 ವರ್ಷದ ಪುತ್ರಿ

ವಿದೇಶ52 mins ago

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

Sahil Khan Arrested in Mahadev Betting App Case
ಬಾಲಿವುಡ್1 hour ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 hour ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ದೇಶ2 hours ago

Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

Car Accident
ಪ್ರಮುಖ ಸುದ್ದಿ2 hours ago

Car Accident : ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

Manvita Kamath Marriage Details Future Husband Arun
ಸ್ಯಾಂಡಲ್ ವುಡ್2 hours ago

Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

state JDS secretary R A Chabusab statement In Ripponpet
ಶಿವಮೊಗ್ಗ2 hours ago

Lok Sabha Election 2024: ಅತಿ ಹೆಚ್ಚು ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಗೆಲುವು: ಆರ್.ಎ. ಚಾಬುಸಾಬ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 hour ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202418 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ23 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌