ನರೇಂದ್ರ ಮೋದಿ ವಿರುದ್ಧ ಸಂಚು ಮಾಡಿದ್ದ ತೀಸ್ತಾ ಸೆಟಲ್ವಾಡ್​ಗೆ ಇಲ್ಲ ಜಾಮೀನು; ಶರಣಾಗಿ ಎಂದ ಹೈಕೋರ್ಟ್​ - Vistara News

ದೇಶ

ನರೇಂದ್ರ ಮೋದಿ ವಿರುದ್ಧ ಸಂಚು ಮಾಡಿದ್ದ ತೀಸ್ತಾ ಸೆಟಲ್ವಾಡ್​ಗೆ ಇಲ್ಲ ಜಾಮೀನು; ಶರಣಾಗಿ ಎಂದ ಹೈಕೋರ್ಟ್​

ಕಳೆದ ವರ್ಷ ತೀಸ್ತಾ ಅವರಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಹೀಗಾಗಿ ಅವರು ಬಂಧನದಿಂದ ಪಾರಾಗಿದ್ದರು.

VISTARANEWS.COM


on

Teesta Setalvad Gets Interim Protection
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

2002ರ ಗುಜರಾತ್‌ ಗಲಭೆಯಲ್ಲಿ ನರೇಂದ್ರ ಮೋದಿ (Narendra Modi) ಮತ್ತು ಇತರ ಬಿಜೆಪಿ ನಾಯಕರನ್ನು ಸಿಲುಕಿಸಲು ಸಂಚು ರೂಪಿಸಿದ ಆರೋಪ ಹೊತ್ತಿರುವ ಸಾಮಾಜಿಕ ಕಾರ್ಯಕರ್ತತೆ ತೀಸ್ತಾ ಸೆಟಲ್ವಾಡ್‌ (Teesta Setalvad) ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ (Gujarat High Court)​ ತಿರಸ್ಕರಿಸಿದೆ. ಅಷ್ಟೇ ಅಲ್ಲ ‘ಕೂಡಲೇ ಶರಣಾಗಿ’ ಎಂದೂ ತೀಸ್ತಾರಿಗೆ ಆದೇಶಿಸಿದೆ. 2002ರಲ್ಲಿ ಗುಜರಾತ್​​ನಲ್ಲಿ ನಡೆದಿದ್ದ ಗುಜರಾತ್​ ಗಲಭೆ (2002 Gujarat Riots Case) ಕೇಸ್​ನಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು ಸಿಲುಕಿಸಿ, ಅವರಿಗೆ ಶಿಕ್ಷೆ ಕೊಡಲಿಸಲು ಈ ತೀಸ್ತಾ ಸೆಟಲ್ವಾಡ್ ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

2002ರಲ್ಲಿ ನಡೆದ ಗುಜರಾತ್‌ ಗುಲ್ಬರ್ಗ್‌ ಸೊಸೈಟಿ ಗಲಭೆಯಲ್ಲಿ ನರೇಂದ್ರ ಮೋದಿ ಸೇರಿ ಇನ್ನಿತರ ಹಲವು ಹಿರಿಯ ನಾಯಕರ ಪಾತ್ರವೇನೂ ಇಲ್ಲ ಎಂದು ಗುಜರಾತ್‌ ಎಸ್‌ಐಟಿ ಕ್ಲೀನ್‌ಚಿಟ್‌ ಕೊಟ್ಟಿತ್ತು. ಆದರೆ ಆ ಕ್ಲೀನ್‌ಚಿಟ್‌ ಪ್ರಶ್ನಿಸಿ ಹಿರಿಯ ಕಾಂಗ್ರೆಸ್‌ ಸಂಸದ ಎಹ್ಸಾನ್‌ ಜಫ್ರಿ (ಗುಜರಾತ್‌ ಗಲಭೆಯಲ್ಲಿ ಮೃತಪಟ್ಟವರು) ಪತ್ನಿ ಜಕಿಯಾ ಜಫ್ರಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಕಳೆದ ವರ್ಷ ಜೂನ್​ ತಿಂಗಳಲ್ಲಿ ಈ ಕೇಸ್​ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್​ ಎಸ್​ಐಟಿ ನೀಡಿದ್ದ ಕ್ಲೀನ್​ಚಿಟ್​​ನ್ನು ಎತ್ತಿಹಿಡಿದಿತ್ತು. ಅಷ್ಟೇ ಅಲ್ಲ ಅರ್ಜಿ ವಿಚಾರಣೆ ವೇಳೆ ‘ತೀಸ್ತಾ ಸೆಟಲ್ವಾಡ್​ ಮತ್ತು ನಿವೃತ್ತ ಐಪಿಎಸ್‌ ಅಧಿಕಾರಿಗಳಾದ ಆರ್‌ಬಿ ಶ್ರೀಕುಮಾರ್‌ ಮತ್ತು ಸಂಜೀವ್ ಭಟ್​ ಅವರ ಹೆಸರು ಉಲ್ಲೇಖಿಸಿ, ಗುಜರಾತ್‌ ಗಲಭೆ ವಿಚಾರದಲ್ಲಿ ಹಲವು ಮಾದರಿಯ ಸುಳ್ಳು ಸಾಕ್ಷಿಗಳು, ತಪ್ಪಾದ ಮಾಹಿತಿಗಳಿಂದಲೇ ದೊಡ್ಡಮಟ್ಟದ ಪಿತೂರಿ ನಡೆಸಿದ್ದು ಕಾಣಿಸುತ್ತದೆ. ಆದರೆ ಹೀಗೆ ಕಟ್ಟಿದ್ದ ಸುಳ್ಳಿನ ಮನೆ, ಕಾರ್ಡ್‌ಹೌಸ್‌ನಂತೆ ಉದುರಿಬಿದ್ದಿದೆ. ಪಿತೂರಿಯಲ್ಲಿ ಕೈಜೋಡಿಸಿದವರೆಲ್ಲ ಕೋರ್ಟ್‌ ಕಟಕಟೆಯಲ್ಲಿ ನಿಲ್ಲಬೇಕು. ಅವರೆಲ್ಲರೂ ಕಾನೂನು ಕ್ರಮ ಎದುರಿಸಬೇಕು’ ಎಂದು ಹೇಳಿತ್ತು. ಅದಾದ ಮೇಲೆ ಗುಜರಾತ್ ಪೊಲೀಸರು ತೀಸ್ತಾ ಸೆಟಲ್ವಾಡ್ ಮತ್ತು ಇನ್ನಿಬ್ಬರು ನಿವೃತ್ತ ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು.

ಇದನ್ನೂ ಓದಿ: ಗುಜರಾತ್​ ಗಲಭೆ​; ನರೇಂದ್ರ ಮೋದಿಯನ್ನು ಮರಣ ದಂಡನೆಗೆ ಸಿಲುಕಿಸುವುದೇ ತೀಸ್ತಾ ಸೆಟಲ್ವಾಡ್​ ಸಂಚಾಗಿತ್ತು !

ಆಗಿನಿಂದಲೂ ತೀಸ್ತಾ ಸೆಟಲ್ವಾಡ್​ರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ. ಕಳೆದ ವರ್ಷ ತೀಸ್ತಾ ಅವರಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಹೀಗಾಗಿ ಅವರು ಬಂಧನದಿಂದ ಪಾರಾಗಿದ್ದರು. ಈ ಮಧ್ಯಂತರ ಜಾಮೀನು ಅವಧಿ ಮುಗಿಯುವ ಮುನ್ನ ನಿರೀಕ್ಷಣಾ ಜಾಮೀನು ಪಡೆದು ಮತ್ತೆ ಬಂಧನದಿಂದ ಪಾರಾಗುವ ಸಲುವಾಗಿ ತೀಸ್ತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲೀಗ ಹಿನ್ನಡೆಯಾಗಿದೆ.

ತೀಸ್ತಾ ಸೆಟಲ್ವಾಡ್​ ಬಗೆಗಿನ ಇನ್ನಷ್ಟು ಸುದ್ದಿಗಳು:

1. ಗುಜರಾತ್‌ ಗಲಭೆ ಕೇಸ್‌; ತೀಸ್ತಾ ಸೆಟಲ್ವಾಡ್‌, ಶ್ರೀಕುಮಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

2. ವಿದೇಶಿ ದೇಣಿಗೆ ಪ್ರಕರಣ; ಗುಜರಾತ್‌ ಎಟಿಎಸ್‌ನಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಬಂಧನ

3.2007ರಲ್ಲಿ ತೀಸ್ತಾ ಸೆಟಲ್ವಾಡ್‌ಗೆ ಪದ್ಮ ಪುರಸ್ಕಾರ ದೊರೆತಿದ್ದು ಹೇಗೆ? ಯಾಕೆ?; ಎಸ್‌ಐಟಿ ವರದಿ ಇದು !

4. ಗುಜರಾತ್‌ ಗಲಭೆ: ತೀಸ್ತಾ ಸೆಟಲ್ವಾಡ್‌ ಪಿತೂರಿಗೆ ಬೆಂಬಲಿಸಿದ್ದು ಕಾಂಗ್ರೆಸ್‌ ನಾಯಕ ಅಹ್ಮದ್‌ ಪಟೇಲ್‌ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Terrorist Attack :ಕಳೆದ ಎರಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಪ್ರಕರಣ ಇದಾಗಿದೆ. ಮೊದಲಿಗೆ ರಿಯಾಸಿಯಲ್ಲಿ ಹಿಂದೂ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆದು ಒಂಬತ್ತು ಪ್ರಯಾಣಿಕರು ಸಾವನ್ನಪ್ಪಿದ್ದರೆ, ಮಂಗಳವಾರ ರಾತ್ರಿ ಎರಡು ಕಡೆ ದಾಳಿಯಾಗಿದೆ.

VISTARANEWS.COM


on

Terroris Attack
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಪಾಕ್​ ಬೆಂಬಲಿತ ಉಗ್ರರ ಅಟ್ಟಹಾಸ (Terrorist Attack 🙂 ಜೋರಾಗಿದೆ. ಮಂಗಳವಾರ ರಾತ್ರಿ ಇಲ್ಲಿ ದೋಡಾದಲ್ಲಿ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಘಟನೆಯಲ್ಲಿ ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (ಎಸ್ಪಿಒ) ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಅದಕ್ಕಿಂತ ಮೊದಲು ಕಥುವಾದಲ್ಲಿ ಭಯೋತ್ಪಾದಕರು ಹಾರಿಸಿದ ಗುಂಡಿಗೆ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಇಲ್ಲಿ ಸಿಆರ್​ಪಿಎಫ್​ ಪೇದೆ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಪ್ರಕರಣ ಇದಾಗಿದೆ. ಮೊದಲಿಗೆ ರಿಯಾಸಿಯಲ್ಲಿ ಹಿಂದೂ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆದು ಒಂಬತ್ತು ಪ್ರಯಾಣಿಕರು ಸಾವನ್ನಪ್ಪಿದ್ದರೆ, ಮಂಗಳವಾರ ರಾತ್ರಿ ಎರಡು ಕಡೆ ದಾಳಿಯಾಗಿದೆ.

ಕಳೆದ ರಾತ್ರಿ ಕಥುವಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್​ಪಿಎಫ್) ಗೆ ಸೇರಿದ ಜವಾನರೊಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಭಯೋತ್ಪಾದಕನನ್ನು ಸಹ ಹೊಡೆದುರುಳಿಸಲಾಗಿದೆ ಎನ್ನಲಾಗಿದೆ. ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಅವರು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ದೋಡಾ ಘಟನೆಯ ಬಗ್ಗೆ ಮಾತನಾಡಿದ ಅವರು, ಕಳೆದ ರಾತ್ರಿ ಚಟ್ಟರ್ಗಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ ತಂಡದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದರು. ಈ ಬಾರಿ ದಾಳಿ ನಡೆಯುತ್ತಿರು ಪ್ರದೇಶ ಭಯೋತ್ಪಾದನಾ ದಾಳಿಯಿಂದ ಮುಕ್ತ ಪ್ರದೇಶ ಎನ್ನಲಾಗಿದೆ.

ಇಬ್ಬರು ಭಯೋತ್ಪಾಕರು ಭಾಗಿ

ನಿನ್ನೆ ಸಂಜೆ ಕಥುವಾ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಭಾಗಿಯಾಗಿದ್ದಾರೆ. ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಥುವಾದ ಹಿರಾನಗರ್ ಪ್ರದೇಶದಲ್ಲಿ ಉಗ್ರರನ್ನು ಬೇಟೆಯಾಡಲು ಭದ್ರತಾ ಪಡೆಗಳು ಈಗ ಡ್ರೋನ್​ಗಳನ್ನು ಬಳಸುತ್ತಿವೆ.

ಭಯೋತ್ಪಾದಕರು ಹಲವಾರು ಮನೆಗಳಿಂದ ನೀರು ಕೇಳಿದ್ದರು. ಇದು ಗ್ರಾಮಸ್ಥರ ಅನುಮಾನಗಳನ್ನು ಹೆಚ್ಚಿಸಿತು ಮತ್ತು ಕೆಲವು ಗ್ರಾಮಸ್ಥರು ಎಚ್ಚರಿಕೆ ನೀಡಿದಾಗ ಗುಂಡು ಹಾರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ ಜೈನ್, ಕಥುವಾ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದರು.

ಇದನ್ನೂ ಓದಿ: Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

“ಅನೇಕ ಜನರು ಗಾಯಗೊಂಡಿದ್ದಾರೆ ಮತ್ತು ಮೂವರು ಸಾವನ್ನಪ್ಪಿದ್ದಾರೆ ಎಂಬ ವದಂತಿಗಳಿವೆ. ಆದರೆ ಒಬ್ಬ ನಾಗರಿಕ ಮಾತ್ರ ಗಾಯಗೊಂಡಿದ್ದಾನೆ, ಇದನ್ನು ಹೊರತುಪಡಿಸಿ ಒತ್ತೆಯಾಳುಗಳನ್ನು ಬಂಧಿಸಿಡಲಾಗಿದೆ ಮತ್ತು ಸಾವಿನ ಬಗ್ಗೆ ಎಲ್ಲಾ ಮಾಹಿತಿಗಳು ವದಂತಿಗಳಾಗಿವೆ” ಎಂದು ಅವರು ಹೇಳಿದರು.

ಕಥುವಾ ದಾಳಿಯನ್ನು “ಹೊಸ ಒಳನುಸುಳುವಿಕೆ” ಎಂದು ಕರೆದ ಅವರು, ಪಾಕಿಸ್ತಾನದತ್ತ ಬೊಟ್ಟು ಮಾಡಿದರು.

ನಮ್ಮ ನೆರೆಹೊರೆಯವರು ಯಾವಾಗಲೂ ನಮ್ಮ ದೇಶದ ಶಾಂತಿಯುತ ವಾತಾವರಣವನ್ನು ಹಾನಿಗೊಳಿಸಲು ಪ್ರಯತ್ನಿಸುತ್ತಾರೆ. ಇದು (ಹಿರಾನಗರ್ ಭಯೋತ್ಪಾದಕ ದಾಳಿ) ಹೊಸ ಒಳನುಸುಳುವಿಕೆಯಂತೆ ತೋರುತ್ತದೆ ಎಂದು ಅವರು ಹೇಳಿದರು.

ಎರಡು ದಿನಗಳ ಹಿಂದೆ ರಿಯಾಸಿಯಲ್ಲಿ ಶಿವ ಖೋರಿ ಗುಹಾ ದೇವಾಲಯಕ್ಕೆ ತೆರಳುತ್ತಿದ್ದ ಬಸ್ ಮೇಲೆ ದಾಳಿ ನಡೆದಿತ್ತು. ಬಸ್ ಚಾಲಕ ಪ್ರಯಾಣಿಕರನ್ನು ಇಳಿಸಲು ನಿರಾಕರಿಸಿದ ನಂತರ ಭಯೋತ್ಪಾದಕರು ಗುಂಡು ಹಾರಿಸಿದರು, ಆದರೆ ನಿಯಂತ್ರಣ ಕಳೆದುಕೊಂಡು ಕಮರಿಗೆ ಬಿದ್ದರು ಎಂದು ಬಸ್ ಕಂಪನಿಯ ವ್ಯವಸ್ಥಾಪಕರು ತಿಳಿಸಿದ್ದಾರೆ. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಬು ಹಮ್ಜಾ ನಿರ್ದೇಶನದ ಮೇರೆಗೆ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ಆರೋಗ್ಯ

Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

Bird Flu: ದೇಶದಲ್ಲಿ H9N2 ವೈರಸ್‌ ಸೋಂಕಿನಿಂದ ಹರಡುವ ಹಕ್ಕಿ ಜ್ವರ (Bird Flu)ದ ಎರಡನೇ ಪ್ರಕರಣ ಕಾಣಿಸಿಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (World Health Organization – WHO) ಮಂಗಳವಾರ ಮಾಹಿತಿ ನೀಡಿದೆ. ಪಶ್ಚಿಮ ಬಂಗಾಳದ ನಾಲ್ಕು ವರ್ಷದ ಮಗುವಿಗೆ H9N2 ವೈರಸ್‌ ಸೋಂಕಿನಿಂದ ಹಕ್ಕಿಜ್ವರ ಕಾಣಿಸಿಕೊಂಡಿದೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

VISTARANEWS.COM


on

Bird Flu
Koo

ನವದೆಹಲಿ: ದೇಶದಲ್ಲಿ H9N2 ವೈರಸ್‌ ಸೋಂಕಿನಿಂದ ಹರಡುವ ಹಕ್ಕಿ ಜ್ವರ (Bird Flu)ದ ಎರಡನೇ ಪ್ರಕರಣ ಕಾಣಿಸಿಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (World Health Organization – WHO) ಮಂಗಳವಾರ ಮಾಹಿತಿ ನೀಡಿದೆ. ಪಶ್ಚಿಮ ಬಂಗಾಳದ ನಾಲ್ಕು ವರ್ಷದ ಮಗುವಿಗೆ H9N2 ವೈರಸ್‌ ಸೋಂಕಿನಿಂದ ಹಕ್ಕಿಜ್ವರ ಕಾಣಿಸಿಕೊಂಡಿದೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

ತೀವ್ರ ಉಸಿರಾಟದ ತೊಂದರೆಗಳು, ಹೆಚ್ಚಿನ ಜ್ವರ ಮತ್ತು ಕಿಬ್ಬೊಟ್ಟೆಯ ಸೆಳೆತದಿಂದಾಗಿ ಮಗುವನ್ನು ಫೆಬ್ರವರಿಯಲ್ಲಿ ಸ್ಥಳೀಯ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿತ್ತು. ಇದೀಗ ಮೂರು ತಿಂಗಳ ನಂತರ ಮಗುವನ್ನು ಡಿಸ್‌ಚಾರ್ಜ್‌ ಮಾಡಲಾಗಿದೆ ಎಂದು ಹೇಳಿದೆ.

ಮಗು ತನ್ನ ಮನೆಯಲ್ಲಿದ್ದ ಕೋಳಿಗಳೊಂದಿಗೆ ಒಡನಾಟ ಹೊಂದಿತ್ತು. ಅದಾಗ್ಯೂ ಹಕ್ಕಿಜ್ವರ ಲಕ್ಷಣಗಳಿರುವ ಬೇರೆ ಪ್ರಕರಣ ಯಾವುದೂ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಇದು ಭಾರತದಿಂದ ವರದಿಯಾದ ಎರಡನೇ H9N2 ವೈರಸ್‌ ಸೋಂಕಿನ ಪ್ರಕರಣವಾಗಿದ್ದು, 2019ರಲ್ಲಿ ಮೊದಲನೆಯ ಪ್ರಕರಣ ಕಂಡು ಬಂದಿತ್ತು. H9N2 ವೈರಸ್ ಸಾಮಾನ್ಯವಾಗಿ ಕಡಿಮೆ ಪ್ರಮಾಣದ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಆದರೆ ನಿರ್ಲಕ್ಷ್ಯ ಮಾಡುವುದು ಸಲ್ಲ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಾರೆ.

ಆತಂಕ ಸೃಷ್ಟಿಸಿದ ಚೀನಾ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಚೀನಾದಲ್ಲಿ ಎಚ್‌9ಎನ್‌2 (ಏವಿಯನ್ ಇನ್ಫ್ಲುಯೆನ್ಸ ವೈರಸ್-ಹಕ್ಕಿ ಜ್ವರದ ವೈರಾಣು) ಪ್ರಕರಣಗಳಲ್ಲಿ ದಿಢೀರ್‌ ಏರಿಕೆ ಕಂಡುಬಂದು ಆತಂಕ ಸೃಷ್ಟಿಯಾಗಿತ್ತು. ಚೀನಾದಲ್ಲಿ ಮಾನವರಲ್ಲಿ ಎಚ್‌9ಎನ್‌2 ಪತ್ತೆಯಾದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಹಕ್ಕಿ ಜ್ವರದ ವಿರುದ್ಧ ಸನ್ನದ್ಧತಾ ಕ್ರಮಗಳ ಬಗ್ಗೆ ಚರ್ಚಿಸಲು ʻಡಿಜಿಎಚ್ಎಸ್ʼ ಅಧ್ಯಕ್ಷತೆಯಲ್ಲಿ ಸಭೆ ನಡೆಸಿತ್ತು. ಭಾರತದಲ್ಲಿಯೂ ಸೋಂಕು ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: Health Update: ಮಕ್ಕಳಲ್ಲಿ ಹೆಚ್ಚುತ್ತಿದೆ ಜ್ವರ ಬಾಧೆ; ಮುನ್ನೆಚ್ಚರಿಕೆ ಇರಲಿ, ಆತಂಕ ಬೇಡ

ಅಪಾಯಕಾರಿ ಎಚ್5ಎನ್1 ಹಕ್ಕಿ ಜ್ವರ

ಇನ್ನು ಕೆಲವು ದಿನಗಳ ಹಿಂದೆ ಕೋವಿಡ್ ಸಾಂಕ್ರಾಮಿಕಕ್ಕಿಂತ ಅಪಾಯಕಾರಿಯಾಗಿರುವ ಎಚ್5ಎನ್1 ಹಕ್ಕಿ ಜ್ವರದ (H5N1 bird flu) ಕುರಿತು ಪಿಟ್ಸ್‌ಬರ್ಗ್‌ನ ಸಂಶೋಧಕರು ಎಚ್ಚರಿಕೆ ನೀಡಿದ್ದರು. ಆರೋಗ್ಯ ತಜ್ಞರು ಕೋವಿಡ್ ಸಾಂಕ್ರಾಮಿಕ ರೋಗಕ್ಕಿಂತ 100 ಪಟ್ಟು ವೇಗವಾಗಿ ಎಚ್5ಎನ್1 ಹಕ್ಕಿ ಜ್ವರದ ಹರಡುವ ಅಪಾಯವಿದೆ ಎಂದು ಹೇಳಿದ್ದು, ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಹಕ್ಕಿಜ್ವರ ಸಾಂಕ್ರಾಮಿಕ ರೋಗವು ವೇಗವಾಗಿ ಹರಡಲಿದ್ದು, ಹೆಚ್ಚಿನ ಸಾವು, ನೋವಿಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಇದು ಜಾಗತಿಕವಾಗಿ ಮತ್ತೊಂದು ಸಾಂಕ್ರಾಮಿಕದ ಅಪಾಯವನ್ನು ಉಂಟು ಮಾಡುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಪಿಟ್ಸ್‌ಬರ್ಗ್‌ನ ಪ್ರಮುಖ ಪಕ್ಷಿ ಜ್ವರ ಸಂಶೋಧಕ ಡಾ. ಸುರೇಶ್ ಕೂಚಿಪುಡಿ, ʼʼಬ್ರೀಫಿಂಗ್‌ನಲ್ಲಿ ಎಚ್5ಎನ್1 ಪಕ್ಷಿ ಜ್ವರವು ಮಾನವ ಸೇರಿದಂತೆ ವಿವಿಧ ಜಾತಿಯ ಪ್ರಾಣಿಗಳಿಗೂ ಸೋಂಕು ತಗುಲಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ವೇಗವಾಗಿ ಈ ಸೋಂಕು ಸಾಂಕ್ರಾಮಿಕ ರೋಗವಾಗುವ ಅಪಾಯವಿದೆ. ಹೀಗಾಗಿ ಶೀಘ್ರದಲ್ಲೇ ವಿಶ್ವಕ್ಕೆ ಮತ್ತೊಂದು ಸಾಂಕ್ರಾಮಿಕ ರೋಗವನ್ನು ಹರಡಲು ಈ ವೈರಸ್‌ ಕಾರಣವಾಗಬಹುದುʼʼ ಎಂದು ಹೇಳಿದ್ದರು.

Continue Reading

ಪ್ರವಾಸ

Nagarjuna Sagar: ನಾಗಾರ್ಜುನಸಾಗರದ ಈ ಸ್ಥಳಗಳು ವಾರಾಂತ್ಯ ಪ್ರವಾಸಕ್ಕೆ ಸೂಕ್ತ

ವಾರಾಂತ್ಯ ಬಂದಾಗ ಎಲ್ಲಾದರೂ ಹೋಗಬೇಕು ಅಂದುಕೊಳ್ಳುವವರಿಗೆ ನಾಗಾರ್ಜುನಸಾಗರ (Nagarjuna Sagar) ಹೇಳಿ ಮಾಡಿಸಿದ ಸ್ಥಳ. ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತ ಎಲ್ಲಾ ಜಂಜಡಗಳನ್ನು ನೀವು ಮರೆತು ಹೊಸ ಉತ್ಸಾಹವನ್ನು ತುಂಬಿಕೊಳ್ಳಬಹುದು. ನಾಗಾರ್ಜುನ ಸಾಗರದ ಸುತ್ತಮುತ್ತಲಿನ ಈ ಸ್ಥಳಗಳು ರಮಣೀಯವಾಗಿವೆ. ವಾರಾಂತ್ಯದ ಪ್ರವಾಸಕ್ಕೆ ಸೂಕ್ತವಾಗಿದೆ. ಈ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

Nagarjuna Sagar
Koo

ಬೆಂಗಳೂರು: ಪ್ರತಿದಿನ ದಿನ ಒತ್ತಡದ ಬದುಕು, ಕೆಲಸದಲ್ಲಿ ಮುಳುಗಿರುವ ಜನರು ವಾರಾಂತ್ಯದ (Nagarjuna Sagar)ವೇಳೆ ತಮ್ಮ ಕುಟುಂಬದ ಜೊತೆ ಮೋಜು ಮಸ್ತಿ ಮಾಡಲು ಬಯಸುತ್ತಾರೆ. ಅದಕ್ಕಾಗಿ ಟೂರ್, ಹೋಟೆಲ್ ಮುಂತಾದಕ್ಕೆ ಭೇಟಿ ನೀಡುತ್ತಾರೆ. ಹಾಗಾಗಿ ಅಂತವರು ವಾರಾಂತ್ಯದ ವೇಳೆಗೆ ಆಂಧ್ರಪ್ರದೇಶದಲ್ಲಿರುವ ನಾಗಾರ್ಜುನಸಾಗರದ ಈ ಸ್ಥಳಗಳಿಗೆ ಭೇಟಿ ನೀಡಿ. ನಾಗಾರ್ಜುನಸಾಗರ ಗದ್ದಲಗಳಿಂದ ಮುಕ್ತವಾದ ಪ್ರದೇಶವಾಗಿದೆ. ಇಲ್ಲಿ ಪ್ರಶಾಂತವಾದ ವಾತಾವರಣ ಹಾಗೂ ಅನೇಕ ಆಕರ್ಷಕ ಸ್ಥಳಗಳನ್ನು ಹೊಂದಿವೆ. ವಾರಾಂತ್ಯದ ಪ್ರವಾಸಕ್ಕೆ ಇದು ಸೂಕ್ತವಾದ ಸ್ಥಳ. ಪ್ರಕೃತಿ ಪ್ರೇಮಿಗಳಿಗೆ, ಇತಿಹಾಸಗಾರರಿಗೆ ಇದು ಹೇಳಿ ಮಾಡಿಸಿದ ಸ್ಥಳ. ಹಾಗಾಗಿ ನಾಗಾರ್ಜುನಸಾಗರಕ್ಕೆ ಬಂದಾಗ ಇಲ್ಲಿನ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಿ.

Nagarjuna Sagar

ನಾಗಾರ್ಜುನಸಾಗರ ಅಣೆಕಟ್ಟು

ಇದು ವಿಶ್ವದ ಅತಿದೊಡ್ಡ ಕಲ್ಲಿನ ಅಣೆಕಟ್ಟುಗಳಲ್ಲಿ ಒಂದಾಗಿದೆ. ಇದನ್ನು ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಇಲ್ಲಿ ಅದ್ಭುತವಾದ ಪರಿಸರವಿದೆ. ಪ್ರವಾಸಿಗರು ಇಲ್ಲಿ ಖುಷಿಯಾಗಿ ವಾಕಿಂಗ್ ಮಾಡಬಹುದು. ಹಾಗೇ ಜಲಾಶಯದ ಮೇಲಿನ ಪ್ರಶಾಂತವಾದ ನೀರಿನಲ್ಲಿ ದೋಣಿ ವಿಹಾರ ಮಾಡುತ್ತಾ ಸುತ್ತಲಿನ ಬೆಟ್ಟ ಹಾಗೂ ಕಾಡುಗಳ ನೋಟವನ್ನು ಸವಿಯಬಹುದಾಗಿದೆ.

Weekend Getaway

ಎತ್ತಿಪೋತಲ ಜಲಪಾತ

ನಲ್ಲಮಲ ಬೆಟ್ಟದ ಹಸಿರಿನ ನಡುವೆ ನೆಲೆಸಿರುವ ಎತ್ತಿಪೋತಲ ಜಲಪಾತ ಪ್ರಕೃತಿ ಪ್ರಿಯರಿಗೆ ಇಷ್ಟವಾದ ಸ್ಥಳವಾಗಿದೆ. ಇಲ್ಲಿನ ಹಸಿರಾದ ಪರಿಸರದ ನಡುವೆ 70 ಅಡಿ ಎತ್ತರದಿಂದ ಧುಮುಕುವ ಜಲಪಾತ ಅದ್ಭುತ ನೋಟವನ್ನು ನೀಡುತ್ತದೆ. ಜಲಪಾತದ ಕೆಳಗಿರುವ ನೀರಿನಲ್ಲಿ ಪ್ರವಾಸಿಗರು ಸ್ನಾನ ಮಾಡಬಹುದಾಗಿದೆ. ಇಲ್ಲಿ ದಟ್ಟವಾದ ಕಾಡಿನ ನಡುವೆ ಚಾರಣ ಮಾಡಬಹುದು. ಇಲ್ಲಿ ಅನೇಕ ರೀತಿಯ ಪ್ರಾಣಿಗಳು ಮತ್ತು ಸಸ್ಯಗಳು ಕಂಡುಬರುತ್ತವೆ.

Weekend Getaway

ನಾಗಾರ್ಜುನಕೊಂಡ ದ್ವೀಪ

ಇಲ್ಲಿ ಕ್ರಿ.ಪೂ 3ನೇ ಶತಮಾನಕ್ಕೆ ಸೇರಿದ ಪ್ರಾಚೀನ ಬೌದ್ಧ ಅವಶೇಷಗಳನ್ನು ಅನ್ವೇಷಿಸಬಹುದಂತೆ. 3 ನೇ ಶತಮಾನದಲ್ಲಿ ಈ ದ್ವೀಪ ಬೌದ್ಧ ಧರ್ಮ ಮತ್ತು ಸಂಸ್ಕೃತಿಯನ್ನು ಕಲಿಯುವ ವಿದ್ಯೆ ಕೇಂದ್ರವಾಗಿತ್ತಂತೆ. ಹಾಗಾಗಿ ನಾವು ಇಲ್ಲಿ ಮಠಗಳು, ಸ್ತೂಪಗಳು ಮತ್ತು ಶಿಲ್ಪಗಳು ಇತ್ಯಾದಿಗಳ ಅವಶೇಷಗಳನ್ನು ಕಾಣಬಹುದಂತೆ. ಇದಲ್ಲದೇ ಇಲ್ಲಿಗೆ ಹೋಗಲು ದೋಣಿ ಸವಾರಿಯನ್ನು ಮಾಡಬೇಕಾಗುತ್ತದೆಯಂತೆ. ಇದು ಬಹಳ ಸಾಹಸಮಯವಾಗಿದೆಯಂತೆ.

Weekend Getaway

ಶ್ರೀಶೈಲಂ ವನ್ಯಜೀವಿ ಅಭಯಾರಣ್ಯ

ನಾಗಾರ್ಜುನ ಸಾಗರದಲ್ಲಿರುವ ಶ್ರೀಶೈಲಂ ವನ್ಯಜೀವಿ ಅಭಯಾರಣ್ಯ ಪ್ರಕೃತಿ ಹಾಗೂ ವನ್ಯಜೀವಿ ಪ್ರಿಯರಿಗೆ ಉತ್ತಮವಾದ ಸ್ಥಳವಾಗಿದೆ. ಇದು ನಲ್ಲಮಲ ಬೆಟ್ಟಗಳ ಭೂಪ್ರದೇಶದಲ್ಲಿ ಹರಡಿದೆ. ಇಲ್ಲಿ ಅನೇಕ ರೀತಿಯ ಪಕ್ಷಿಗಳು, ಹುಲಿಗಳು, ಚಿರತೆಗಳು ಮತ್ತು ಕರಡಿಯಂತಹ ಅನೇಕ ವಿಭಿನ್ನ ಪ್ರಾಣಿ ಪ್ರಭೇದಗಳು ಕಂಡುಬರುತ್ತದೆಯಂತೆ. ಹಾಗೇ ಇಲ್ಲಿ ವನ್ಯಜೀವಿಗಳನ್ನು ನೋಡಲು ಸಫಾರಿ ನಡಿಗೆಗಳನ್ನು ಆಯೋಜಿಸಲಾಗಿದೆಯಂತೆ.

Weekend Getaway

ನಾಗಾರ್ಜುನಸಾಗರ ವನ್ಯಜೀವಿ ಅಭಯಾರಣ್ಯ

ಇದು ಪ್ರಕೃತಿ ಹಾಗೂ ವನ್ಯಜೀವಿ ಪ್ರಿಯರಿಗೆ ಖುಷಿ ನೀಡುವ ಮತ್ತೊಂದು ಅದ್ಭುತವಾದ ಸ್ಥಳವಾಗಿದೆ. ಇಲ್ಲಿ ವಿವಿಧ ಸಸ್ಯ ಮತ್ತು ಪ್ರಾಣಿಗಳು ಕಂಡುಬರುತ್ತವೆಯಂತೆ. ಈ ಅಭಯಾರಣ್ಯ ಪೂರ್ವ ಘಟ್ಟಗಳ ಒರಟು ಭೂಪ್ರದೇಶದಲ್ಲಿ ಇದೆ. ಇಲ್ಲಿ ಹುಲಿಗಳು, ಚಿರತೆಗಳು, ಭಾರತೀಯ ಕಾಡೆಮ್ಮೆ ಮುಂತಾದ ಹಲವಾರು ಪ್ರಾಣಿಗಳ ಜೊತೆಗೆ ಸಸ್ಯಗಳನ್ನು ನೊಡಬಹುದಂತೆ. ಅಲ್ಲದೇ ಇಲ್ಲಿ ಸಂದರ್ಶಕರಿಗೆ ಸಫಾರಿ ನಡಿಗೆ ಅಥವಾ ಪಕ್ಷಿ ವೀಕ್ಷಣೆಯ ಮೂಲಕ ಈ ಪ್ರದೇಶವನ್ನು ಅನ್ವೇಷಣೆ ಮಾಡಲು ಅವಕಾಶವಿದೆಯಂತೆ.

ಇದನ್ನೂ ಓದಿ: Delhi Tour: ದೆಹಲಿಗೆ ಪ್ರವಾಸಕ್ಕೆ ಹೋದಾಗ ಮಿಸ್ ಮಾಡದೇ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಿ!

ಒಟ್ಟಾರೆ ನಾಗಾರ್ಜುನಸಾಗರ ವನ್ಯಜೀವಿ ಪ್ರಿಯರಿಗೆ, ಪ್ರಕೃತಿ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳ. ಹಾಗಾಗಿ ವಾರಾಂತ್ಯದಲ್ಲಿ ಇಲ್ಲಿಗೆ ಬರುವುದನ್ನು ಮರೆಯಬೇಡಿ.

Continue Reading

ಉದ್ಯೋಗ

Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Job Alert: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 116 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಟೆಕ್ನಿಶಿಯನ್ ಹುದ್ದೆ ಇದಾಗಿದ್ದು, ತಾತ್ಕಾಲಿಕ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್‌ ವಿಷಯಗಳಲ್ಲಿ ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಬಹು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 20.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ 116 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (HAL Recruitment 2024). ಟೆಕ್ನಿಶಿಯನ್ ಹುದ್ದೆ ಇದಾಗಿದ್ದು, ತಾತ್ಕಾಲಿಕ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್‌ ವಿಷಯಗಳಲ್ಲಿ ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಬಹು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 20 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮೆಕ್ಯಾನಿಕಲ್ 64 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್‌ ಎಂಜಿನಿಯರಿಂಗ್‌ ಇನ್‌ ಮೆಕ್ಯಾನಿಕಲ್‌ / ಪ್ರೊಡಕ್ಷನ್‌.
ಎಲೆಕ್ಟ್ರಿಕಲ್ 44 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್‌ ಎಂಜಿನಿಯರಿಂಗ್‌ ಇನ್‌ ಎಲೆಕ್ಟ್ರಿಕಲ್‌ / ಎಲೆಕ್ಟ್ರಿಕಲ್‌ & ಎಲೆಕ್ಟ್ರಾನಿಕ್ಸ್‌.
ಎಲೆಕ್ಟ್ರಾನಿಕ್ಸ್‌ 8 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್‌ ಎಂಜಿನಿಯರಿಂಗ್‌ ಇನ್‌ ಎಲೆಕ್ಟ್ರಾನಿಕ್ಸ್‌ / ಎಲೆಕ್ಟ್ರಿಕಲ್‌ & ಎಲೆಕ್ಟ್ರಾನಿಕ್ಸ್‌ / ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ / ಎಲೆಕ್ಟ್ರಾನಿಕ್ಸ್‌ & ಟೆಲಿಕಮ್ಯುನಿಕೇಷನ್‌.

ವಯೋಮಿತಿ

ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ-ಎನ್‌ಸಿಎಸ್‌ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಜುಲೈ 7ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಆಯ್ಕೆಯಾದವರಿಗೆ ಬೆಂಗಳೂರು (ಕರ್ನಾಟಕ), ಜೋಧಪುರ (ರಾಜಸ್ಥಾನ), ನಾಗತಲಾವ್ (ರಾಜಸ್ಥಾನ), ಭುವನೇಶ್ವರ್ (ಒಡಿಸ್ಸಾ), ಪೋರ್‌ಬಂದರ್‌ (ಗುಜರಾತ್), ರತ್ನಗಿರಿ (ಮಹಾರಾಷ್ಟ್ರ), ಶಿಕ್ರಾ-ಮುಂಬೈ (ಮಹಾರಾಷ್ಟ್ರ), ಕೊಚ್ಚಿ (ಕೇರಳ), ಪುದುಚೇರಿ, ಪರುಂಡು-ರಾಮೇಶ್ವರಂ, ಚೆನ್ನೈ, ಸೂಲೂರು (ತಮಿಳುನಾಡು), ದೇಗಾ ವೈಜಾಗ್, ತೇಜ್ಪುರ್ (ಅಸ್ಸಾಂ), ಮಿಸ್ಸಮರಿ (ಅಸ್ಸಾಂ), ದಿಂಜನ್ (ಅಸ್ಸಾಂ), ಲಿಕಾಬಲಿ (ಅಸ್ಸಾಂ), ಉಧಂಪುರ (ಜಮ್ಮು ಮತ್ತು ಕಾಶ್ಮೀರ), ಲೇಹ್, ಭಟಿಂಡಾ (ಪಂಜಾಬ್), ಮಾಮುನ್ (ಪಂಜಾಬ್), ಹಲ್ದ್ವಾನಿ (ಉತ್ತರಖಂಡ), ಟಿಬ್ರಿ (ಪಂಜಾಬ್) ಪೈಕಿ ಒಂದು ಕಡೆ ಪೋಸ್ಟಿಂಗ್‌ ನೀಡಲಾಗುತ್ತದೆ.

HAL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (halmro.formflix.com).
  • ಅಗತ್ಯ ಮಾಹಿತಿ ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಕ್ಯಾಪ್ಚಾ ನಮೂದಿಸಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಇದನ್ನು ಗಮನಿಸಿ

  • ಭಾರತೀಯ ನಾಗರಿಕರು ಮಾತ್ರ ಅಪ್ಲೈ ಮಾಡಬಹುದು
  • ಒಬ್ಬರು ಒಂದು ಪೋಸ್ಟ್‌ಗೆ ಮಾತ್ರ ಅರ್ಜಿ ಸಲ್ಲಿಸಬೇಕು.
  • ಒಮ್ಮೆ ಸಲ್ಲಿಸಿದ ಅರ್ಜಿಯನ್ನು ಮತ್ತೆ ತಿದ್ದಲು ಅವಕಾಶವಿಲ್ಲ.
  • ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು.
  • ಇವು ಖಾಯಂ ಹುದ್ದೆಗಳಲ್ಲ. ತಾತ್ಕಾಲಿಕ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ.

ಇದನ್ನೂ ಓದಿ: Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading
Advertisement
Terroris Attack
ಪ್ರಮುಖ ಸುದ್ದಿ8 mins ago

Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Actor Darshan Murder accusations Chetan Kumar Ahimsa react
ಸಿನಿಮಾ17 mins ago

Actor Darshan: ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು; ಚೇತನ್‌ ಅಹಿಂಸಾ!

Bird Flu
ಆರೋಗ್ಯ23 mins ago

Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

Actor Darshan 10 Biryani For Sent To Police Custody
ಸ್ಯಾಂಡಲ್ ವುಡ್29 mins ago

Actor Darshan: ಆರೋಪಿ ದರ್ಶನ್​ಗೆ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ತರಿಸಿದ್ದ ಪೊಲೀಸರು!

Chikkaballapur News
ಪ್ರಮುಖ ಸುದ್ದಿ30 mins ago

Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

Nagarjuna Sagar
ಪ್ರವಾಸ54 mins ago

Nagarjuna Sagar: ನಾಗಾರ್ಜುನಸಾಗರದ ಈ ಸ್ಥಳಗಳು ವಾರಾಂತ್ಯ ಪ್ರವಾಸಕ್ಕೆ ಸೂಕ್ತ

Actor Darshan
ಪ್ರಮುಖ ಸುದ್ದಿ58 mins ago

ರಾಜಮಾರ್ಗ ಅಂಕಣ : ನನ್ನ ಬದುಕೇ ಬೇರೆ, ನನ್ನ ಸಿನಿಮಾನೇ ಬೇರೆ ಅಂದರೆ ಹೀಗೇ ಆಗೋದು!

Job Alert
ಉದ್ಯೋಗ1 hour ago

Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Actor Darshan political leaders appeal to the CM and Home Minister not to twist case
ಸ್ಯಾಂಡಲ್ ವುಡ್1 hour ago

Actor Darshan : ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

Actor Darshan Renukaswamy Send His Photos To Pavitra Gowda
ಸ್ಯಾಂಡಲ್ ವುಡ್1 hour ago

Actor Darshan: ಪವಿತ್ರಾಗೆ ಮರ್ಮಾಂಗದ ಫೋಟೊ ಕಳುಹಿಸಿದ್ರಾ ರೇಣುಕಾಸ್ವಾಮಿ? ದರ್ಶನ್​ಗೆ ತಿಳಿದಿದ್ದು ಹೇಗೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ18 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ19 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ21 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ23 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌