Suvendu Adhikari: "ಅಲ್ಪಸಂಖ್ಯಾತ ಮೋರ್ಚಾದ ಅವಶ್ಯಕತೆ ಇಲ್ಲ..ರದ್ದು ಮಾಡಿ"- ಸುವೆಂದು ಅಧಿಕಾರಿ ವಿವಾದ - Vistara News

ದೇಶ

Suvendu Adhikari: “ಅಲ್ಪಸಂಖ್ಯಾತ ಮೋರ್ಚಾದ ಅವಶ್ಯಕತೆ ಇಲ್ಲ..ರದ್ದು ಮಾಡಿ”- ಸುವೆಂದು ಅಧಿಕಾರಿ ವಿವಾದ

Suvendu Adhikari: ನಮ್ಮ ಪಕ್ಷದ ಮೂಲ ಗುರಿ ಸಬ್ಕಾ ಸಾಥ್‌ ಸಬ್ಕಾ ವಿಕಾಸ್‌. ನಾನು ರಾಷ್ಟ್ರೀಯವಾದಿ ಮುಸ್ಲಿಮರ ಜೊತೆಗೂ ಮಾತನಾಡಿದ್ದೇನೆ. ಇನ್ನು ಮುಂದೆ ನಮ್ಮ ಪಕ್ಷದ ಗುರಿ ನಮ್ಮ ಜೊತೆ ಯಾರು ಇರುತ್ತಾರೋ ನಾವು ಅವರ ಜೊತೆ ಇರುತ್ತೇವೆ ಎಂಬುದಾಗಿ ಬದಲಾಗಬೇಕು. ಇನ್ನು ಮುಂದೆ ಅಲ್ಪ ಸಂಖ್ಯಾತ ಮೋರ್ಛಾದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Suvendu Adhikari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ(West Bengal)ದಲ್ಲಿ ಬಿಜೆಪಿ(BJP) ಕಳಪೆ ಪ್ರದರ್ಶನಕ್ಕೆ ಅಲ್ಪಸಂಖ್ಯಾತರ ಬೆಂಬಲದ ಕೊರತೆಯೇ ಪ್ರಮುಖ ಕಾರಣ. ಹೀಗಾಗಿ ಅಲ್ಪಸಂಖ್ಯಾತ ಮೋರ್ಚಾ(Minority Morcha)ವನ್ನು ರದ್ದುಗೊಳಿಸಬೇಕೆಂದು ಕರೆ ನೀಡುವ ಮೂಲಕ ಹಿರಿಯ ಬಿಜೆಪಿ ನಾಯಕ ಸುವೆಂದು ಅಧಿಕಾರಿ(Suvendu Adhikari) ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಅಲ್ಪ ಸಂಖ್ಯಾತ ಮೋರ್ಚಾವನ್ನು ರದ್ದುಗೊಳಿಸುವಂತೆ ಕರೆ ನೀಡಿದ್ದಾರೆ.

ನಮ್ಮ ಪಕ್ಷದ ಮೂಲ ಗುರಿ ಸಬ್ಕಾ ಸಾಥ್‌ ಸಬ್ಕಾ ವಿಕಾಸ್‌. ನಾನು ರಾಷ್ಟ್ರೀಯವಾದಿ ಮುಸ್ಲಿಮರ ಜೊತೆಗೂ ಮಾತನಾಡಿದ್ದೇನೆ. ಇನ್ನು ಮುಂದೆ ನಮ್ಮ ಪಕ್ಷದ ಗುರಿ ನಮ್ಮ ಜೊತೆ ಯಾರು ಇರುತ್ತಾರೋ ನಾವು ಅವರ ಜೊತೆ ಇರುತ್ತೇವೆ ಎಂಬುದಾಗಿ ಬದಲಾಗಬೇಕು. ಇನ್ನು ಮುಂದೆ ಅಲ್ಪ ಸಂಖ್ಯಾತ ಮೋರ್ಚಾದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಇನ್ನು ಸುವೆಂಧು ಅಧಿಕಾರಿ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್‌ ಮತ್ತು ತೃಣಮೂಲ ಕಾಂಗ್ರೆಸ್‌ ಬಿಜೆಪಿ ಅಲ್ಪಸಂಖ್ಯಾತ ವಿರೋಧಿ ಪಕ್ಷ ಎಂದು ಕಿಡಿಕಾರಿವೆ. ಇದರ ಬೆನ್ನಲ್ಲೇ ಸುವೆಂಧು ಅಧಿಕಾರಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

“ನನ್ನ ಹೇಳಿಕೆಯನ್ನು ಸಂದರ್ಭದಿಂದ ಹೊರಗಿಟ್ಟು ನೋಡಲಾಗ್ತಿದೆ. ಅದು ಅಲ್ಲದೇ ತಪ್ಪಾಗಿ ಅರ್ಥೈಸಲಾಗುತ್ತಿದೆ. ರಾಷ್ಟ್ರೀಯವಾದಿಗಳು ಈ ರಾಷ್ಟ್ರ ಮತ್ತು ಬಂಗಾಳದ ಪರವಾಗಿ ನಿಲ್ಲುತ್ತಾರೆ ಮತ್ತು ನಾವು ಅವರೊಂದಿಗೆ ಇರಬೇಕು ಎಂದು ನಾನು ಸ್ಪಷ್ಟಪಡಿಸುತ್ತೇನೆ. ನಮ್ಮೊಂದಿಗೆ ನಿಲ್ಲದವರು ರಾಷ್ಟ್ರ ಮತ್ತು ಬಂಗಾಳದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಾರೆ. ಮಮತಾ ಬ್ಯಾನರ್ಜಿಯವರಂತೆ ನಾವು ಜನರನ್ನು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರು ಎಂದು ವಿಭಜಿಸಬಾರದು. ಎಲ್ಲರನ್ನೂ ಭಾರತೀಯರು ಎಂಬಂತೆ ಕಾಣಬೇಕು. ಪ್ರಧಾನಿ ನರೇಂದ್ರ ಮೋದಿ ಸಬ್ಕಾ ಸಾಥ್‌, ಸಬ್ಕಾ ವಿಕಾಸ್‌ ಮತ್ತು ಸಬ್ಕಾ ಪ್ರಯಾಸ್‌ ಎಂಬುದಕ್ಕೆ ಕರೆ ಕೊಟ್ಟಿದ್ದಾರೆ. ಅದರಂತೆ ಎಲ್ಲರೂ ನಡೆಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಕರ್ನಾಟಕದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಇದಕ್ಕೆ ಖಾಸಗಿ ಕಂಪನಿಗಳ ಪ್ರಮುಖರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸ್ಥಳೀಯರಿಂದ ಸಂತಸ ವ್ಯಕ್ತವಾಗಿದೆ. ಈ ಕಾಯಿದೆಯ ಹಿನ್ನೆಲೆ ಮುನ್ನೆಲೆ ಏನೇನು ಎಂಬ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Jobs Reservation
Koo

ರಾಜ್ಯದ ಖಾಸಗಿ ಕೈಗಾರಿಕೆಗಳು (Private industry) ಹಾಗೂ ಇತರೆ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50 ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಮೀಸಲಾತಿ (Karnataka Jobs Reservation) ಕಡ್ಡಾಯಗೊಳಿಸಿರುವ ಕರಡು ಮಸೂದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramiah) ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ (karnataka Cabinet meeting) ಅನುಮೋದನೆ ನೀಡಿಲಾಗಿದ್ದು, ಇದಕ್ಕೆ ಉದ್ಯಮ ರಂಗದ ಪ್ರಮುಖರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ಈ ಕಾಯಿದೆ ಜಾರಿಯಾದರೆ ಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯ ಸಿಗಲಿದೆ ಎಂಬ ಸಂತಸ ಸ್ಥಳೀಯ ಯುವ ಜನತೆಯಿಂದ ವ್ಯಕ್ತವಾಗುತ್ತಿದೆ.

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಮೂರು ವರ್ಷಗಳ ಆನಂತರವೂ ಉದ್ಯಮಕ್ಕೆ ಈ ಸಮಸ್ಯೆ ಎದುರಾದರೆ ತರಬೇತಿಯ ಅನಂತರವೂ ಸಾಕಷ್ಟು ಸೂಕ್ತ ಸ್ಥಳೀಯರು ಲಭ್ಯವಾಗದೇ ಇದ್ದರೆ ವಿಚಾರಣೆಯ ಅನಂತರ ಉದ್ಯಮವನ್ನು ಮೀಸಲಾತಿ ನಿಬಂಧನೆಗಳಿಂದ ವಿನಾಯಿತಿ ನೀಡುವ ಸರ್ಕಾರದ ಅಧಿಕಾರವನ್ನು ಮಸೂದೆ ಒದಗಿಸುತ್ತದೆ. ವೃತ್ತಿಪರರನ್ನು ನೇಮಿಸಿಕೊಳ್ಳಲು ಕಂಪೆನಿಗಳಿಗೆ ಅವಕಾಶವನ್ನು ಒದಗಿಸುತ್ತದೆ. ಆದರೆ ಈ ಅವಕಾಶ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 25ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 50ರಷ್ಟು ಸ್ಥಳೀಯರನ್ನು ಭರ್ತಿ ಮಾಡಿದರೆ ಮಾತ್ರ ಸಿಗುತ್ತದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

Karnataka Jobs Reservation


ಸ್ಥಳೀಯರು ಅಂದರೆ ಯಾರು?

ಕರ್ನಾಟಕದಲ್ಲಿ ಹುಟ್ಟಿರುವ, 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವ, ಕನ್ನಡ ಭಾಷೆಯನ್ನು ಓದುವುದು ಮತ್ತು ಬರೆಯುವುದನ್ನು ಚೆನ್ನಾಗಿ ತಿಳಿದಿರುವವರನ್ನು ಸ್ಥಳೀಯರು ಎಂದು ಮಸೂದೆಯಲ್ಲಿ ವ್ಯಾಖ್ಯಾನಿಸಲಾಗಿದೆ.
ಈ ಕಾನೂನಿನ ಅಡಿಯಲ್ಲಿ ಪ್ರಯೋಜನವನ್ನು ಬಯಸುವವರು ಕನ್ನಡ ಮಾಧ್ಯಮದಲ್ಲಿ ಹಿರಿಯ, ಮಾಧ್ಯಮಿಕ ಹಂತದಲ್ಲಿ ಓದಿರುವವರು ರಾಜ್ಯ ಸರ್ಕಾರದ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ತೇರ್ಗಡೆಗೊಳಿಸಬೇಕು.

ಆಡಳಿತಾತ್ಮಕ, ಆಡಳಿತಾತ್ಮಕವಲ್ಲದ ಹುದ್ದೆಗಳು ಯಾವುದು?

ಆಡಳಿತಾತ್ಮಕ ಹುದ್ದೆಗಳೆಂದರೆ ನಿರ್ದೇಶಕರನ್ನು ಹೊರತುಪಡಿಸಿ ಮೇಲ್ವಿಚಾರಣೆ, ತಾಂತ್ರಿಕ, ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಪಾತ್ರಗಳಲ್ಲಿನ ಸ್ಥಾನಗಳನ್ನು ಒಳಗೊಂಡಿದೆ. ಆಡಳಿತಾತ್ಮಕವಲ್ಲದ ಹೊರಗುತ್ತಿಗೆ ಉದ್ಯೋಗಗಳು ಸೇರಿದಂತೆ ಕ್ಲೆರಿಕಲ್ ಹುದ್ದೆಗಳು, ಅರೆ ಮತ್ತು ನುರಿತ ಕೆಲಸಗಾರರಂತಹ ಎಲ್ಲಾ ಇತರ ಹುದ್ದೆಗಳನ್ನು ಸೇರಿಸಲಾಗಿದೆ.

ಇದನ್ನು ಯಾರು ಜಾರಿಗೆ ತರುತ್ತಾರೆ?

ಈ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರವು ಏಜೆನ್ಸಿಯನ್ನು ನೇಮಿಸುತ್ತದೆ. ಬಹುತೇಕ ಕಾರ್ಮಿಕ ಇಲಾಖೆಯೇ ಇದನ್ನು ನಿರ್ವಹಿಸಲಿದೆ. ವ್ಯವಸ್ಥಾಪಕ ಮತ್ತು ನಿರ್ವಾಹಕೇತರ ಹುದ್ದೆಗಳ ನೇಮಕಾತಿಗಳ ಕುರಿತು ವರದಿ ಪಡೆಯಲು, ಅನುಸರಣೆ ಇಲ್ಲದಿದ್ದಲ್ಲಿ ವಿಚಾರಣೆ ನಡೆಸಲು ಏಜೆನ್ಸಿಗೆ ಅಧಿಕಾರವಿದೆ. ಕ್ಲೈಮ್‌ಗಳನ್ನು ಪರಿಶೀಲಿಸಲು ಏಜೆನ್ಸಿಯು ಉದ್ಯೋಗದಾತರಿಂದ ಯಾವುದೇ ದಾಖಲೆಗಳನ್ನು ಪಡೆಯಬಹುದು. ಅಗತ್ಯಬಿದ್ದರೆ ಉದ್ಯಮದೊಳಗೆ ಪ್ರವೇಶಿಸಿ ಪರಿಶೀಲಿಸುವ ಅಧಿಕಾರವೂ ಸಂಸ್ಥೆಯ ಅಧಿಕಾರಿಗಳಿಗೆ ಇರುತ್ತದೆ. ಪ್ರಸ್ತಾವಿತ ಕಾನೂನಿನ ಅನುಷ್ಠಾನಕ್ಕಾಗಿ ಪ್ರಾಧಿಕಾರವು ಸಹಾಯಕ ಕಾರ್ಮಿಕ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ನೇಮಿಸಲಿದೆ.

Karnataka Jobs Reservation


ಕಾನೂನು ಪಾಲನೆಯಾಗದೇ ಇದ್ದರೆ?

ಪ್ರಸ್ತಾವಿತ ಕಾನೂನು ಸರಿಯಾಗಿ ಪಾಲನೆ ಆಗದೇ ಇದ್ದರೆ ಅಥವಾ ಕಾನೂನನ್ನು ಉಲ್ಲಂಘಿಸಿದರೆ ಕನಿಷ್ಠ 10,000 ರೂ.ನಿಂದ ಗರಿಷ್ಠ 25,000 ರೂ.ವರೆಗೆ ದಂಡವನ್ನು ನಿಗದಿಪಡಿಸಲಾಗಿದೆ. ಕಾನೂನಿನ ಉಲ್ಲಂಘನೆ ಮುಂದುವರಿದರೆ ದಂಡದ ಮೊತ್ತವನ್ನು 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗುತ್ತದೆ. ಜೈಲು ಶಿಕ್ಷೆಯ ಬಗ್ಗೆ ಉಲ್ಲೇಖವಿಲ್ಲ. ಮಸೂದೆಯು ಆರು ತಿಂಗಳವರೆಗೆ ಕಾಲಾವಕಾಶ ನೀಡಲಿದೆ.

ಏನು ಇದರ ಪರಿಣಾಮ?

ಪ್ರಸ್ತಾವಿತ ಈ ಕಾನೂನು ಜಾರಿಯಾದರೆ 1.5 ಮಿಲಿಯನ್ ಉದ್ಯೋಗಿಗಳನ್ನು ಹೊಂದಿರುವ 245 ಬಿಲಿಯನ್ ಡಾಲರ್ ಮೌಲ್ಯದ ಬೆಂಗಳೂರು ತಂತ್ರಜ್ಞಾನ ಉದ್ಯಮದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಗಲಿದೆ. ಯಾಕೆಂದರೆ ಇಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ಕನ್ನಡೇತರರು. ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂಬ ಕೂಗು ಮೊದಲಿನಿಂದಲೂ ಕೇಳಿ ಬರುತ್ತಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರವು ರಾಜ್ಯದ ಜಿಡಿಪಿಗೆ ಶೇ. 25ರಷ್ಟು ಕೊಡುಗೆ ನೀಡುತ್ತದೆ. ಸ್ಥಳೀಯರಿಗೆ ಮೀಸಲಾತಿ ಜಾರಿಗೆ ತಂದರೆ ಉನ್ನತ ಪ್ರತಿಭೆಗಳು, ಕುಶಲತೆ ಹೊಂದಿರುವವರು ಸಾಕಷ್ಟು ಸಂಖ್ಯೆಯಲ್ಲಿ ಸಿಗುತ್ತಿಲ್ಲ ಎಂದು ಖಾಸಗಿ ಕಂಪನಿಗಳು ಈ ಕಾಯಿದೆ ವಿರೋಧಿಸಿ ಬೇರೆ ರಾಜ್ಯಗಳಿಗೆ ವಲಸೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಹಿನ್ನಡೆ ಆಗಬಹುದು.

ರಾಜ್ಯ ಸರ್ಕಾರದ ಪ್ರಕಾರ ಬೆಂಗಳೂರು ಕರ್ನಾಟಕದ ಆರ್ಥಿಕತೆಗೆ ಶೇ. 43.86ರಷ್ಟು ಕೊಡುಗೆ ನೀಡುತ್ತಿದೆ. ಕಳೆದ ವರ್ಷ ಮಂಡಿಸಲಾದ 2022-23ರ ಬಜೆಟ್‌ನಲ್ಲಿ ರಾಜ್ಯ ಹಣಕಾಸು ಇಲಾಖೆಯ ಅಂದಾಜಿನ ಪ್ರಕಾರ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಶೇ. 7ರಷ್ಟು ಕೊಡುಗೆ ನೀಡುತ್ತಿದೆ. ಮಸೂದೆಯಲ್ಲಿನ ನಿರ್ಬಂಧಗಳು ಮುಂದಿನ ಐದು ವರ್ಷಗಳಲ್ಲಿ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಾಜ್ಯ ಸರ್ಕಾರದ ಯೋಜನೆಗಳ ಮೇಲೆ ಪರಿಣಾಮ ಬೀರಬಹುದು ಎನ್ನುತ್ತಾರೆ ಉದ್ಯಮ ತಜ್ಞರು.

Karnataka Jobs Reservation


ಬೇರೆ ರಾಜ್ಯಗಳಲ್ಲಿ ಈ ನಿರ್ಬಂಧ ಇದೆಯೇ?

ಭಾರತದ ಖಾಸಗಿ ವಲಯದಲ್ಲಿ ಉದ್ಯೋಗಗಳಲ್ಲಿ ಮೀಸಲಾತಿ ಕಾಯ್ದಿರಿಸಿದ ಮೊದಲ ರಾಜ್ಯಗಳಲ್ಲಿ ಆಂಧ್ರ ಪ್ರದೇಶ ಮತ್ತು ಹರಿಯಾಣ ಸೇರಿವೆ. ಎರಡೂ ರಾಜ್ಯಗಳು ಸಂಬಳದ ಮಿತಿಯೊಂದಿಗೆ ಉದ್ಯೋಗಗಳಿಗೆ ಮೀಸಲಾತಿಯನ್ನು ಒದಗಿಸಿವೆ. ಹರಿಯಾಣದಲ್ಲಿ 30,000 ರೂ. ಮಾಸಿಕ ವೇತನದ ಉದ್ಯೋಗಗಳಿಗೆ ಶೇ.75ರಷ್ಟು ಮೀಸಲಾತಿ ಅನ್ವಯಿಸುತ್ತದೆ. ಆಂಧ್ರದಲ್ಲಿ ಶೇ. 75ರಷ್ಟು ಮೀಸಲಾತಿಗೆ ಮಾಸಿಕ ವೇತನದ ಮಿತಿ 50,000 ರೂ. ಆಗಿದೆ.

ಕರ್ನಾಟಕ ಮಸೂದೆಯು ಸಂಬಳದ ಮಿತಿಯನ್ನು ವಿಧಿಸಿಲ್ಲ. ನಿರ್ದೇಶಕರನ್ನು ಹೊರತುಪಡಿಸಿ ಎಲ್ಲಾ ಖಾಸಗಿ ವಲಯದ ಉದ್ಯೋಗಗಳ ಮೇಲೆ ಕೋಟಾವನ್ನು ವಿಧಿಸುತ್ತದೆ. ಆದರೆ ಆಂಧ್ರಪ್ರದೇಶದಂತೆ ಕರ್ನಾಟಕವೂ ಸಹ ರಾಜ್ಯ ಶಾಸಕಾಂಗವು ಒಮ್ಮೆ ಅಂಗೀಕರಿಸಿದ ಕಾನೂನನ್ನು ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳನ್ನು ಒದಗಿಸಿದೆ.

ಇದನ್ನೂ ಓದಿ: Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

ಯಾವ ರೀತಿ ಎದುರಾಗಲಿದೆ ಕಾನೂನು ತೊಡಕುಗಳು?

ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಈ ಕಾನೂನಿಗೆ ಕಾನೂನು ತೊಡಕುಗಳು ಎದುರಾಗಬಹುದು. ಹರಿಯಾಣವು ಸ್ಥಳೀಯ ಅಭ್ಯರ್ಥಿಗಳಿಗೆ ರಾಜ್ಯ ಉದ್ಯೋಗ ಕಾಯಿದೆಯನ್ನು 2020ರಲ್ಲಿ ಜಾರಿಗೊಳಿಸಿತು. ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯರಿಗೆ 30,000 ರೂ. ವರೆಗಿನ ವೇತನಕ್ಕಾಗಿ ಶೇ. 75ರಷ್ಟು ಮೀಸಲಾತಿಯನ್ನು ಒದಗಿಸಿತು. ಬಳಿಕ ಅದನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಇದು ಕಾನೂನನ್ನು ಸಂವಿಧಾನದ ಭಾಗ IIIರಲ್ಲಿ ಭಾರತದಾದ್ಯಂತ ಉದ್ಯೋಗ ಸ್ವಾತಂತ್ರ್ಯವನ್ನು ಒದಗಿಸುವ ಸಂವಿಧಾನದ 14 ಮತ್ತು 19ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು 2022ರಲ್ಲಿ ಹೈಕೋರ್ಟ್ ಈ ಕಾಯಿದೆಯನ್ನು ವಜಾಗೊಳಿಸಿತ್ತು.

Continue Reading

ದೇಶ

UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

UP CM v/s DCM: ಜೆ ಪಿ ನಡ್ಡಾರ ಜೊತೆ ಕೇಶವ್‌ ಪ್ರಸಾದ್‌ ಭೇಟಿ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್‌ ಚೌಧರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿರುವುದು ಎಲ್ಲರ ಗಮನ ಸೆಳೆದಿದೆ. ಇನ್ನು ಭೂಪೇಂದ್ರ ಸಿಂಗ್ ಚೌಧರಿ, ಜೆಪಿ ನಡ್ಡಾ ಅವರನ್ನೂ ಸಹ ಭೇಟಿ ಮಾಡಿ ಪ್ರತ್ಯೇಕ ಸಭೆ ನಡೆಸಿದ್ದಾರೆ.

VISTARANEWS.COM


on

UP CM DCM
Koo

ಲಖನೌ: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ(UP CM v/s DCM) ಸ್ಫೋಟವಾಗಿದೆ. ಸಿಎಂ ಯೋಗಿ ಆದಿತ್ಯಾನಾಥ್‌(Yogi Adityanath) ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ(Keshav Prasad Mourya) ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರೀ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಅದೂ ಅಲ್ಲದೇ ಚುನಾವಣಾ ಹಿನ್ನಡೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡವಾಗಲಿದೆ ಎಂಬ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

ಇನ್ನು ಜೆ ಪಿ ನಡ್ಡಾರ ಜೊತೆ ಕೇಶವ್‌ ಪ್ರಸಾದ್‌ ಭೇಟಿ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್‌ ಚೌಧರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿರುವುದು ಎಲ್ಲರ ಗಮನ ಸೆಳೆದಿದೆ. ಇನ್ನು ಭೂಪೇಂದ್ರ ಸಿಂಗ್ ಚೌಧರಿ, ಜೆಪಿ ನಡ್ಡಾ ಅವರನ್ನೂ ಸಹ ಭೇಟಿ ಮಾಡಿ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಜೆಪಿ ನಡ್ಡಾ ಭೇಟಿಗೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಹಿರಂಗವಾಗಿ ಯೋಗಿ ಆದಿತ್ಯಾನಾಥ್‌ ವಿರುದ್ಧ ಕಿಡಿಕಾರಿದ್ದ ಮೌರ್ಯ “ಸರ್ಕಾರಕ್ಕಿಂತ ಸಂಘಟನೆ ದೊಡ್ಡದು. ನನ್ನ ಕಾರ್ಯಕರ್ತರ ನೋವು, ನನ್ನ ನೋವು ಕೂಡ. ಸಂಘಟನೆಗಿಂತ ಯಾರೂ ದೊಡ್ಡವರಲ್ಲ. ಕಾರ್ಯಕರ್ತರೇ ಹೆಮ್ಮೆ” ಎಂದು ಟ್ವೀಟ್ ಮಾಡಿತ್ತು. ಇದರ ಬೆನ್ನಲ್ಲೇ ಮೌರ್ಯ ಅವರ ದಿಲ್ಲಿ ಪ್ರವಾಸ ಸಂಚಲನ ಮೂಡಿಸಿತ್ತು.

ಕಳೆದ ಜೂನ್ 14ರಂದು ಲಖನೌದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಯ ಹಿನ್ನಡೆಗೆ ‘ಅತಿಯಾದ ಆತ್ಮವಿಶ್ವಾಸ’ ಕಾರಣ ಎಂದು ಸಿಎಂ ಯೋಗಿ ಆದಿತ್ಯನಾಥ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ರಾಜ್ಯ ಬಿಜೆಪಿಯ ಹಲವು ನಾಯಕರು, ಯೋಗಿ ಆದಿತ್ಯನಾಥ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ತಮ್ಮ ಸೋಲಿಗೆ ಯೋಗಿ ಅವರ ಆಡಳಿತ ಶೈಲಿಯೇ ಕಾರಣ ಎಂದು ಆರೋಪಿಸುತ್ತಿದ್ದರು.

ಅಖಿಲೇಶ್‌ ಯಾದವ್‌ ಗೆ ತಿರುಗೇಟು

ಏತನ್ಮಧ್ಯೆ, ಮೌರ್ಯ ಅವರ ಪೋಸ್ಟ್ ಅನ್ನೇ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ವ್ಯಂಗ್ಯವಾಡಿದೆ. ಈ ಬಗ್ಗೆ ಎಸ್ಪಿ ನಾಯಕ ಅಖಲೇಶ್‌ ಯಾದವ್‌ ಬಿಜೆಪಿಯನ್ನು ಟೀಕಿಸಿದ್ದರು. ಇದಕ್ಕೆ ಟಾಂಗ್‌ ಕೊಟ್ಟ, ಕೇಶವ್ ಪ್ರಸಾದ್ ಮೌರ್ಯ, ಇಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಬಲವಾಗಿದೆ ಮತ್ತು 2027 ರಲ್ಲಿ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ:Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Continue Reading

ಕರ್ನಾಟಕ

Pralhad Joshi: ಬೇಳೆ ದರ ಇಳಿಕೆಗೆ ಕೇಂದ್ರದಿಂದ ಕ್ರಮ: ಪ್ರಲ್ಹಾದ್‌ ಜೋಶಿ

Pralhad Joshi: ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ ಮತ್ತು ಉದ್ದು ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ- ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಸೂಚಿಸಿದ್ದಾರೆ.

VISTARANEWS.COM


on

Action to reduce pulses price says Union Minister Pralhad Joshi
Koo

ನವದೆಹಲಿ: ಬೇಳೆ-ಕಾಳು ಬೆಲೆ ಇಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆ ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ಈ ಬಗ್ಗೆ ತ್ವರಿತ ಕ್ರಮಕ್ಕೆ ಸಲಹೆ ನೀಡಿದ್ದಾರೆ.

ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ ಮತ್ತು ಉದ್ದು ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ- ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು.

ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದೂ ಸಚಿವರು ಇದೇ ವೇಳೆ ಹೇಳಿದರು.

ಇದನ್ನೂ ಓದಿ: Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

ಸಣ್ಣ ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ. ಆದರೆ, ದೊಡ್ಡ ದೊಡ್ಡ ವ್ಯಾಪಾರಿ ಮಳಿಗೆಗಳಲ್ಲಿ ಬೆಲೆ ಇಳಿಸದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈಗಾಗಲೇ ಬೇಳೆಗಳ ಬೆಲೆಯನ್ನು ಕೂಡಲೇ ಇಳಿಸುವಂತೆ ಈ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದಾರೆ

2025ಕ್ಕೆ ಜಿಡಿಪಿ ಶೇ.7ರಷ್ಟು ಬೆಳವಣಿಗೆ

ಐಎಂಎಫ್ ವರದಿ ಪರಿಷ್ಕರಿಸಿದ್ದು, 2025 ರಲ್ಲಿ ಭಾರತದ ಜಿಡಿಪಿ (GDP) ಬೆಳವಣಿಗೆ ಶೇ.7 ರಷ್ಟು ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಜಾಗತಿಕ ಆರ್ಥಿಕತೆಯ ಸಾಲಿನಲ್ಲಿ ಭಾರತ ಅಗ್ರ ಸ್ಥಾನದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಉನ್ನತ ಸ್ಥರಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂಬುದಕ್ಕೆ ಐಎಂಎಫ್‌ನ ಈ ವರದಿಯೇ ನಿದರ್ಶನ ಎಂದು ಜೋಶಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

ಭಾರತದ ಬೆಳವಣಿಗೆಯು ಆರ್ಥಿಕ ವರ್ಷ 2025 ರಲ್ಲಿ ಶೇ.7ರಷ್ಟು ಜಿಡಿಪಿ (GDP) ಬೆಳವಣಿಗೆಯ ಮುನ್ಸೂಚನೆ ನೀಡಿದ್ದು, ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಬಣ್ಣಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಡಿಸಿ ಆಫೀಸ್‌ನಲ್ಲಿ ಗೋಳಾಡುತ್ತಾ ನೆಲದಲ್ಲಿ ಹೊರಳಾಡಿದ ರೈತ; ವೈರಲಾಗ್ತಿದೆ ಈ ವಿಡಿಯೋ

Viral Video: ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ ಶಂಕರಲಾಲ್, ”ಭೂಮಾಫಿಯಾದಿಂದ ನನಗೆ ತೊಂದರೆಯಾಗಿದೆ, ತಹಸೀಲ್ದಾರ್ ತಪ್ಪು ಮಾಡುತ್ತಾರೆ, ರೈತರು ಅನುಭವಿಸುತ್ತಾರೆ, ಅವರು ತಪ್ಪು ಮಾಡುತ್ತಾರೆ, ಅದರ ಪರಿಣಾಮವನ್ನು ನಾನು ಅನುಭವಿಸುತ್ತೇನೆ, ನನಗೆ ಸರ್ಕಾರ ಮತ್ತು ಆಡಳಿತದ ಬಗ್ಗೆ ಅಸಮಾಧಾನವಿದೆ. ಇಲ್ಲಿ ನಾವು ಭ್ರಷ್ಟರಾಗಿದ್ದೇವೆ… ರೈತರಿಗೆ ವಂಚನೆಯಾಗುತ್ತಿದೆ ಎಂದು ಕೈ ಮುಗಿದು ನೆಲದಲ್ಲಿ ಹೊರಳಾಡಿದ್ದಾನೆ.

VISTARANEWS.COM


on

Viral Video
Koo

ಭೋಪಾಲ್‌: ಹರಿದ ಧೋತಿ ತೊಟ್ಟು, ದಯಮಾಡಿ ಪರಿಹಾರ ನೀಡಿ ಎಂದು ಬೇಡುತ್ತಾ ವೃದ್ಧನೋರ್ವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉರುಳಾಡುತ್ತಾ ಗೋಳಾಡುತ್ತಿರುವ ದೃಶ್ಯ ಎಂಥವರ ಮನಸ್ಸು ಕರಗುವಂತೆ ಮಾಡಿತ್ತು. ಈ ದೃಶ್ಯ ಕಂಡು ಬಂದಿದ್ದು ಮಧ್ಯಪ್ರದೇಶ(Madhya Pradesh)ದ ಮಂಡ್‌ಸೌರ್‌ನಲ್ಲಿ. ಸ್ಥಳೀಯ ಭೂ ಮಾಫಿಯಾಗೆ ಬಳಿಯಾಗಿ ಭೂಮಿ ಕಳೆದುಕೊಂಡು ರೈತ ಗೋಳಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ(Viral Video).

ಈ ಕುರಿತು ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ರೈತ ಶಂಕರಲಾಲ್‌ ಜಿಲ್ಲಾಧಿಕಾರಿ ಕಚೇರಿ ಸಭಾಂಗಣಕ್ಕೆ ತೆರಳಿ ಗಮನ ಸೆಳೆದರು. ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ ಶಂಕರಲಾಲ್, ”ಭೂಮಾಫಿಯಾದಿಂದ ನನಗೆ ತೊಂದರೆಯಾಗಿದೆ, ತಹಸೀಲ್ದಾರ್ ತಪ್ಪು ಮಾಡುತ್ತಾರೆ, ರೈತರು ಅನುಭವಿಸುತ್ತಾರೆ, ಅವರು ತಪ್ಪು ಮಾಡುತ್ತಾರೆ, ಅದರ ಪರಿಣಾಮವನ್ನು ನಾನು ಅನುಭವಿಸುತ್ತೇನೆ, ನನಗೆ ಸರ್ಕಾರ ಮತ್ತು ಆಡಳಿತದ ಬಗ್ಗೆ ಅಸಮಾಧಾನವಿದೆ. ಇಲ್ಲಿ ನಾವು ಭ್ರಷ್ಟರಾಗಿದ್ದೇವೆ… ರೈತರಿಗೆ ವಂಚನೆಯಾಗುತ್ತಿದೆ ಎಂದು ಕೈ ಮುಗಿದು ನೆಲದಲ್ಲಿ ಹೊರಳಾಡಿದ್ದಾನೆ.

ಘಟನೆ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ದಿಲೀಪ್ ಯಾದವ್, ‘ಸಾರ್ವಜನಿಕ ವಿಚಾರಣೆಯಲ್ಲಿ ಬರುವ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಪರಿಹರಿಸಲಾಗುತ್ತದೆ. ಮಂಗಳವಾರ ನಡೆದ ವಿಚಾರಣೆಗೆ ಹಲವು ಮಂದಿ ಹಾಜರಾಗಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಸಾಧ್ಯವಾದಷ್ಟು ಪರಿಹರಿಸಲಾಗಿದೆ ಎಂದ ಅವರು, ಹಿಂದಿನ ಸಾರ್ವಜನಿಕ ವಿಚಾರಣೆಗಳ ಪ್ರಕರಣಗಳನ್ನೂ ಪರಿಶೀಲಿಸಲಾಗಿದೆ ಎಂದರು.

ದೂರುದಾರರು ವಿವಾದಿತ ಭೂಮಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳೀಯ ಆಡಳಿತ ಸ್ಪಷ್ಟಪಡಿಸಿದೆ. ಸದ್ಯ ಶಂಕರ್ ಮತ್ತು ಅವರ ಕುಟುಂಬದವರು ಜಮೀನು ಹೊಂದಿದ್ದಾರೆ. ಈ ಹಿಂದೆ ಷೇರುದಾರರು ಮಾರಾಟ ಮಾಡಿದ ಅರ್ಧದಷ್ಟು ಭೂಮಿಯನ್ನು ಖರೀದಿದಾರರು ಸ್ವಾಧೀನಪಡಿಸಿಕೊಂಡಿಲ್ಲ. ಸ್ಥಳೀಯ ಆಡಳಿತ ನೀಡಿದ ದಾಖಲೆಗಳ ಆಧಾರದ ಮೇಲೆ ತಹಸೀಲ್ದಾರ್ ಸಲ್ಲಿಸಿದ ತನಿಖಾ ವರದಿ ಪ್ರಕಾರ, ಸುಖದ್ ಗ್ರಾಮದಲ್ಲಿ ವಿಸ್ತೀರ್ಣ ಸಂಖ್ಯೆ 604 ರಲ್ಲಿ 2.5 ಹೆಕ್ಟೇರ್ ಜಮೀನು ಇದ್ದು, ಸರ್ವೆ ಸಂಖ್ಯೆ 625 ರಲ್ಲಿ 1.01 ಹೆಕ್ಟೇರ್ ಇದೆ.

2010 ರ ಡಿಸೆಂಬರ್ 31 ರಂದು ಮಾರಾಟ ಪತ್ರದ ಪ್ರಕಾರ ಈ ಭೂಮಿಯನ್ನು ಮಂದಸೌರ್ ನಿವಾಸಿ ನಾರಾಯಣ ರಾವ್ ಅವರ ಮಗ ಅಶ್ವಿನ್ ಎಂಬುವವರಿಗೆ ಮಾರಾಟ ಮಾಡಲಾಗಿದೆ. ಈ ಭೂಮಿಯನ್ನು ಹಸ್ತಾಂತರಿಸಲು ಅಂದಿನ ತಹಸೀಲ್ದಾರ್ ಸೀತಾಮೌ ಅವರು 2010 ರಲ್ಲಿ ಅನುಮೋದನೆ ನೀಡಿದರು. ಆದಾಗ್ಯೂ, ಮಾರಾಟವಾದ ಭೂಮಿ ಕರು ಲಾಲ್, ರಾಮಲಾಲ್, ಪ್ರಭು ಲಾಲ್, ಮಂಗಿ ಬಾಯಿ ಮತ್ತು ಪಾರ್ವತಿ ಬಾಯಿ ಅವರ ಸ್ವಾಧೀನದಲ್ಲಿ ಉಳಿದಿದೆ, ಅವರು ಅದನ್ನು ಅಶ್ವಿನ್‌ಗೆ ಹಸ್ತಾಂತರಿಸಲು ಸಿದ್ಧರಿಲ್ಲ.

ಇದನ್ನೂ ಓದಿ: Muharram 2024: ಏಕತೆಯ ಸಂದೇಶ ಸಾರುವ ಮುಹರ್ರಮ್ ಆಚರಣೆ

Continue Reading
Advertisement
Natasa Stankovic
ಕ್ರಿಕೆಟ್9 mins ago

Natasa Stankovic : ಹಾರ್ದಿಕ್​ ಪಾಂಡ್ಯಗೆ ಕೈಕೊಟ್ಟು ಸರ್ಬಿಯಾದಲ್ಲಿ ಜಾಲಿ ಟ್ರಿಪ್ ಹೊರಟ ನತಾಶಾ

Mattress Buying Guide
ಲೈಫ್‌ಸ್ಟೈಲ್32 mins ago

Mattress Buying Guide: ಹಾಸಿಗೆಗಳಲ್ಲಿ ಎಷ್ಟೊಂದು ವಿಧ? ಯಾವುದು ಸೂಕ್ತ ಆಯ್ಕೆ ಮಾಡಿಕೊಳ್ಳಿ

Karnataka Jobs Reservation
ಪ್ರಮುಖ ಸುದ್ದಿ42 mins ago

Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

Kapil Dev
ಕ್ರೀಡೆ1 hour ago

Kapil Dev : ಟಿ20 ವಿಶ್ವ ಕಪ್ ಚಾಂಪಿಯನ್ಸ್​ ಕೊಹ್ಲಿ, ರೋಹಿತ್ ಶ್ಲಾಘಿಸಿದ 1983ರ ವಿಶ್ವ ಕಪ್ ವಿಜೇತ ಕಪಿಲ್​ ದೇವ್​​

Hand Painted lehenga Fashion
ಫ್ಯಾಷನ್1 hour ago

Hand Painted lehenga Fashion: ವೆಡ್ಡಿಂಗ್‌ ಫ್ಯಾಷನ್‌ ಟ್ರೆಂಡ್‌ ಲಿಸ್ಟ್‌ಗೆ ಸೇರಿದ ರಾಧಿಕಾ ಮರ್ಚೆಂಟ್‌ ಹ್ಯಾಂಡ್‌ ಪೇಂಟೆಡ್‌ ಲೆಹೆಂಗಾ!

Karnataka Jobs Reservation
ರಾಜಕೀಯ1 hour ago

Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು?

UP CM DCM
ದೇಶ1 hour ago

UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

ಕ್ರೀಡೆ1 hour ago

KL Rahul : ಆಮಿರ್​ ಖಾನ್ ಮನೆ ಪಕ್ಕದಲ್ಲೇ 20 ಕೋಟಿ ಫ್ಲ್ಯಾಟ್ ಖರೀದಿಸಿದ ರಾಹುಲ್, ಅಥಿಯಾ ದಂಪತಿ

Raj B Shetty starrer roopanthara is releasing on July 26
ಕರ್ನಾಟಕ1 hour ago

Kannada New Movie: ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿದ ರಾಜ್ ಬಿ ಶೆಟ್ಟಿ ನಟನೆಯ ‘ರೂಪಾಂತರ’ ಚಿತ್ರ ಜು.26ಕ್ಕೆ ರಿಲೀಸ್‌

PR Seva Award for Media Connect in Bengaluru
ಕರ್ನಾಟಕ1 hour ago

Media Connect: ಮೀಡಿಯಾ ಕನೆಕ್ಟ್‌ಗೆ ಭರವಸೆಯ ಪಿಆರ್‌ ಸೇವಾ ಪ್ರಶಸ್ತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌