Terrorists Killed: ಬಾರಾಮುಲ್ಲಾದಲ್ಲಿ ಇಬ್ಬರು ಲಷ್ಕರೆ ತೊಯ್ಬಾ ಉಗ್ರರ ಹತ್ಯೆ; ಶಸ್ತ್ರಾಸ್ತ್ರ ವಶ - Vistara News

ದೇಶ

Terrorists Killed: ಬಾರಾಮುಲ್ಲಾದಲ್ಲಿ ಇಬ್ಬರು ಲಷ್ಕರೆ ತೊಯ್ಬಾ ಉಗ್ರರ ಹತ್ಯೆ; ಶಸ್ತ್ರಾಸ್ತ್ರ ವಶ

ಎನ್​ಕೌಂಟರ್​​ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರನ್ನು ಶಕೀರ್​ ಮಜೀದ್​ ನಜರ್​ ಮತ್ತು ಹನಾನ್​ ಅಹ್ಮದ್​ ಸೇಹ್​ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಶೋಪಿಯಾನ್​ ಜಿಲ್ಲೆಯ ನಿವಾಸಿಗಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Terrorists killed in encounter In Baramulla of Jammu Kashmir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಬ್ಬರು ಲಷ್ಕರೆ ತೊಯ್ಬಾ ಸಂಘಟನೆಯ ಉಗ್ರರನ್ನು (LeT Terrorists killed) ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಬಾರಾಮುಲ್ಲಾದ ವನಿಗಂ ಪಯೀನ್ ಕ್ರೀರಿ ಎಂಬಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ (Security Forces) ಕಾರ್ಯಾಚರಣೆ ನಡೆಸಿದ್ದರು. ಆ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿದು, ಉಗ್ರರಿಗಾಗಿ ಹುಡುಕಾಟ ನಡೆಸುತ್ತಿದ್ದರು. ಆದರೆ ಅಡಗಿದ್ದ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದಾಗ ಮರುದಾಳಿ ನಡೆಸಿ, ಇಬ್ಬರನ್ನು ಕೊಲ್ಲಲಾಗಿದೆ. ಮೃತರಾದ ಉಗ್ರರಿಂದ ಎಕೆ47 ರೈಫಲ್​, ಪಿಸ್ತೂಲ್​ ಮತ್ತಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಎನ್​ಕೌಂಟರ್​​ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರನ್ನು ಶಕೀರ್​ ಮಜೀದ್​ ನಜರ್​ ಮತ್ತು ಹನಾನ್​ ಅಹ್ಮದ್​ ಸೇಹ್​ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಶೋಪಿಯಾನ್​ ಜಿಲ್ಲೆಯ ನಿವಾಸಿಗಳಾಗಿದ್ದರು. ಎಂದು ಕಾಶ್ಮೀರ ಎಡಿಜಿಪಿ ವಿಜಯ್​ ಕುಮಾರ್ ತಿಳಿಸಿದ್ದಾರೆ. ಇವರಿಬ್ಬರನ್ನು ಕೊಲ್ಲುವುದಕ್ಕೂ ಮೊದಲು ಬುಧವಾರ ಕುಪ್ವಾರಾ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಸಿಬ್ಬಂದಿ ಹೊಡೆದುರುಳಿಸಿದ್ದಾರೆ.

ಇದನ್ನೂ ಓದಿ: ಪೂಂಚ್​ನಲ್ಲಿ ಸೇನಾ ವಾಹನದ ಮೇಲೆ ಉಗ್ರದಾಳಿ ಪ್ರಕರಣ; 12 ಮಂದಿ ವಶಕ್ಕೆ; ಸ್ಥಳದಲ್ಲಿ ಬೀಡುಬಿಟ್ಟ ಶ್ವಾನದಳ, ಡ್ರೋನ್​

ಬುಧವಾರ ಕುಪ್ವಾರಾದ ಮಚ್ಚಲ್​ ವಲಯದ ಬಳಿ ಉಗ್ರರು ಗಡಿ ನಿಯಂತ್ರಣಾ ರೇಖೆಯನ್ನು ನುಸುಳಿ ಬರುವ ಸಾಧ್ಯತೆ ದಟ್ಟವಾಗಿದೆ ಎಂದು ಮಾಹಿತಿ ಸಿಕ್ಕಿತ್ತು. ಅದು ದುರ್ಗಮ ಪ್ರದೇಶವಾಗಿದ್ದರಿಂದ ಭಾರತೀಯ ಸೇನೆ ಮತ್ತು ವಿಶೇಷ ಆಪರೇಶನ್​ ಗ್ರೂಪ್​ (SOG)ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಮೇ 1ರಿಂದಲೇ ಆ ಜಾಗದಲ್ಲಿ ಸೈನಿಕರು ಹೈ ಅಲರ್ಟ್​​ನಲ್ಲಿದ್ದರು. ಮೇ 3ರಂದು ಇಬ್ಬರನ್ನು ಕೊಲ್ಲಾಗಿದೆ ಎಂದು ರಕ್ಷಣಾ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

Narendra Modi: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ (Lok Sabha Election 2024)ಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ(Congress manifesto)ಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪುನರುಚ್ಚರಿಸಿದ್ದಾರೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

“ಮಾಧ್ಯಮಗಳು ಪ್ರತಿಯೊಂದು ರಾಜಕೀಯ ಪಕ್ಷದ ಪ್ರಣಾಳಿಕೆಗಳನ್ನು ಅಧ್ಯಯನ ನಡೆಸುತ್ತವೆ. ನಾನು ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸುವುದನ್ನು ಕಾಯುತ್ತಿದ್ದೆ. ನಾನು ಮೊದಲ ದಿನವೇ ಪ್ರಣಾಳಿಕೆಯ ಬಗ್ಗೆ ಮಾತನಾಡಿದ್ದೆ. ಪ್ರಣಾಳಿಕೆಯನ್ನು ಗಮನಿಸಿದ ಕೂಡಲೇ ಅದರಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂದು ನಾನು ಕಂಡುಕೊಂಡಿದ್ದೆ. ಮಾಧ್ಯಮಗಳು ಈ ವಿಚಾರ ತಿಳಿದು ಆಘಾತಕ್ಕೊಳಗಾಗಬಹುದು ಎಂದು ಭಾವಿಸಿದ್ದೆʼʼ ಎಂದು ಮೋದಿ ಹೇಳಿದ್ದಾರೆ.

“ಇದು ವ್ಯವಸ್ಥೆಯ ದೊಡ್ಡ ಹಗರಣವೆಂದು ನನಗೆ ತಿಳಿಯಿತು. ಪ್ರಣಾಳಿಕೆಯಲ್ಲಿನ ದುಷ್ಕೃತ್ಯಗಳನ್ನು ಯಾರಾದರೂ ಹೊರತರುತ್ತಾರೆ ಎಂದು ನಾನು 10 ದಿನಗಳವರೆಗೆ ಕಾಯುತ್ತಿದ್ದೆ. ಯಾಕೆಂದರೆ ಅದನ್ನು ನಿಷ್ಪಕ್ಷಪಾತವಾಗಿ ಹೊರತಂದರೆ ಉತ್ತಮ. ಅಂತಿಮವಾಗಿ ಈ ಸತ್ಯಗಳನ್ನು ನಾನೇ ಹೊರತರಬೇಕೆಂದು ನಿರ್ಧರಿಸಿದೆʼʼ ಎಂದು ಅವರು ವಿವರಿಸಿದ್ದಾರೆ.

ಸಂಪತ್ತು ಮರುಹಂಚಿಕೆ

ಮುಸ್ಲಿಮರಿಗೆ ಸಂಪತ್ತನ್ನು ಮರುಹಂಚಿಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನುವ ವಿಚಾರ ಅಷ್ಟೊಂದು ಅಪಾಯಕಾರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ತಮ್ಮ ಚುನಾವಣಾ ಪ್ರಚಾರವನ್ನು ಸೂಕ್ಷ್ಮವಾಗಿ ಗಮನಿಸುವಂತೆ ಕರೆ ನೀಡಿದರು. “ನನ್ನ ಇಡೀ ಚುನಾವಣಾ ಪ್ರಚಾರವು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ ಎನ್ನುವುದನ್ನು ನೀವು ಗಮನಿಸಿರಬಹುದು. ನಾವು ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದೇವೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ನಮ್ಮ ಸರ್ಕಾರ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸಿದೆ. ನೋಡಿ, ಕೆಟ್ಟದ್ದನ್ನು ಮಾಡಲು ಯಾವುದೇ ಸರ್ಕಾರವನ್ನು ರಚಿಸುವುದಿಲ್ಲ. ಸರ್ಕಾರ ಜನರಿಗೆ ಒಳ್ಳೆಯದನ್ನು ಮಾಡಲು ಬಯಸುತ್ತದೆ. ಕೆಲವು ಜನರಿಗೆ ಇತರರಿಗೆ ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದೆ. ಕೆಲವರು ನಮಗೂ ಒಳಿತಾಗಲಿ ಎಂದು ಕಾಯುತ್ತಾರೆ. ಕಷ್ಟಪಟ್ಟು ಕೆಲಸ ಮಾಡುವುದರಿಂದ ಒಳ್ಳೆಯದಾಗುತ್ತದೆ ಎನ್ನುವುದನ್ನು ನಾನು ನಂಬುತ್ತೇನೆʼʼ ಎಂದು ಮೋದಿ ತಿಳಿಸಿದ್ದಾರೆ.

ಬಡವರಿಗಾಗಿ 4 ಕೋಟಿ ಮನೆ

ತಮ್ಮ ಸರ್ಕಾರ ಜನರಿಗಾಗಿ ಕೈಗೊಂಡ ಉಪಕ್ರಮಗಳನ್ನು ವಿವರಿಸಿದ ಪಿಎಂ ಮೋದಿ, “ನಾವು ಬಡವರಿಗಾಗಿ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ನೀವು ಚುನಾವಣಾ ಪ್ರಚಾರಕ್ಕೆ ಹೋದಾಗ ಇನ್ನೂ ವಸತಿ ರಹಿತರಾಗಿರುವ ಜನರ ಪಟ್ಟಿಯನ್ನು ಸಿದ್ಧಪಡಿಸಿ ನನಗೆ ನೀಡಿ ಎಂದು ನಾನು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದೇನೆ. ನನ್ನ ಮೂರನೇ ಅವಧಿ ಪ್ರಾರಂಭವಾದ ಕೂಡಲೇ ಆದ್ಯತೆ ಮೇರೆಗೆ ನಾನು ಈ ಕೆಲಸ ಮುಂದುವರಿಸುತ್ತೇನೆʼʼ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ʼʼನಾನು ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದೇನೆ. ಈಗ ಆಯುಷ್ಮಾನ್ ಭಾರತ್ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿಕೊಂಡಿದೆ. ಇದು ಜನರಿಗೆ ಆರೋಗ್ಯದ ಭರವಸೆ ನೀಡುತ್ತದೆ. ಸುಮಾರು 55 ಕೋಟಿ ಮಂದಿಗೆ ಇದು ನೆರವಾಗುತ್ತದೆ. ಮೋದಿ ಸರ್ಕಾರ ನಿಮ್ಮೊಂದಿಗಿದೆ ಎಂಬ ಭರವಸೆ ಇದು. ಯಾವುದೇ ವರ್ಗ, ಸಮಾಜ, ಹಿನ್ನೆಲೆಗೆ ಸೇರಿದ 70 ವರ್ಷಕ್ಕಿಂತ ಮೇಲಿನ ಪುರುಷ ಅಥವಾ ಮಹಿಳೆಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ. ಜತೆಗೆ ನಾವು ಈ ಪ್ರಯೋಜನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ತೃತೀಯ ಲಿಂಗಿಗಳಿಗೆ ಅವರ ವಯಸ್ಸು ಯಾವುದೇ ಇರಲಿ ನಾವು ನೆರವು ನೀಡಲು ಬದ್ಧʼʼ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: BJP Manifesto: ಬಿಜೆಪಿ ಪ್ರಣಾಳಿಕೆ; ರೈತನಿಗೆ ಮೊದಲ ಪ್ರತಿ ನೀಡಿದ ಮೋದಿ, 14 ಗ್ಯಾರಂಟಿ ಘೋಷಣೆ

ಬ್ಯಾಂಕಿಂಗ್‌ ವ್ಯವಸ್ಥೆ

“ನಮ್ಮ ದೇಶದಲ್ಲಿ ಬ್ಯಾಂಕುಗಳ ಸ್ಥಿತಿ ಕಳಪೆಯಾಗಿತ್ತು. ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಹಣ ನೀಡಿದ್ದರೂ ಬ್ಯಾಂಕುಗಳಲ್ಲಿ ಅವರ ಹೆಸರಿನಲ್ಲಿ ಖಾತೆ ತೆರೆದಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ 52 ಕೋಟಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಯಿತು. ಅನೇಕರು ಅದರ ಲಾಭವನ್ನು ಪಡೆದುಕೊಂಡರು. ಹಲವರಿಗೆ ಜನ್ ಧನ್ ಖಾತೆ ಮತ್ತು ನೇರ ಲಾಭ ವರ್ಗಾವಣೆಯ ಮೂಲಕ ಪ್ರಯೋಜನ ಲಭಿಸಿತು. 36 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವು ಜನರ ಖಾತೆಗಳಿಗೆ ನೇರ ವರ್ಗಾವಣೆಯಾಗಿದೆʼʼ ಎಂದು ತಿಳಿಸಿದ್ದಾರೆ.

ತಮ್ಮ ಸರ್ಕಾರದ ಕಾರ್ಯಕ್ಷಮತೆಯನ್ನು 2014ರ ಹಿಂದಿನ ಪರಿಸ್ಥಿತಿಗೆ ಹೋಲಿಸಿದ ಪ್ರಧಾನಿ ಮೋದಿ, “ನೋಡಿ 2014 ಕ್ಕಿಂತ ಮೊದಲು ದೇಶದ ಪರಿಸ್ಥಿತಿ ಹೇಗಿತ್ತು? ಆರ್ಥಿಕತೆ ದುರ್ಬಲವಾಗಿತ್ತು. ಇಂದು ನಾವು ಅದನ್ನು ಬದಲಾಯಿಸಿದ್ದೇವೆ. ಐಎಂಎಫ್‌ನಲ್ಲಿ ಈಗ ಚೀನಾ ಮತ್ತು ಭಾರತ ಸೇರಿದಂತೆ ವಿಶ್ವದ 150 ದೇಶಗಳ ಗುಂಪು ಇದೆ. ಇದನ್ನು ನಾವು ಅಭಿವೃದ್ಧಿಶೀಲ ದೇಶಗಳು ಅಥವಾ ಉದಯೋನ್ಮುಖ ಆರ್ಥಿಕತೆ ಹೊಂದಿರುವ ದೇಶಗಳು ಎಂದು ಕರೆಯಬಹುದುʼʼ ಎಂದು ಪ್ರಧಾನಿ ವಿವರಿಸಿದ್ದಾರೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

ಪಿತ್ರಾರ್ಜಿತ ಆಸ್ತಿ ತೆರಿಗೆ

ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಮೋದಿ ಪ್ರತಿಕ್ರಿಯಿಸಿ, “ಅಮೆರಿಕದಲ್ಲಿ ಸಂದರ್ಶನ ನೀಡಿದ ಅವರು ಪಿತ್ರಾರ್ಜಿತ ತೆರಿಗೆ ಬಗ್ಗೆ ಪ್ರಸ್ತಾವಿಸಿದರು. ನಿಮ್ಮ ಆಸ್ತಿಯ ಮೇಲೆ ಸುಮಾರು 55% ತೆರಿಗೆ ವಿಧಿಸುವ ಬಗ್ಗೆ ಹೇಳಿದರು. ಈಗ ನಾನು ಅಭಿವೃದ್ಧಿ ಮತ್ತು ಉತ್ತರಾಧಿಕಾರದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಆ ಪಿತ್ರಾರ್ಜಿತ ಆಸ್ತಿಯನ್ನು ಲೂಟಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಸುವುದು ನನ್ನ ಜವಾಬ್ದಾರಿ. ಈಗ ಈ ಬಗ್ಗೆ ನಿರ್ಧರಿಸಬೇಕಾದವರು ನೀವುʼʼ ಎಂದು ಮೋದಿ ಹೇಳಿದ್ದಾರೆ.

Continue Reading

Lok Sabha Election 2024

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Lok Sabha Election 2024: ಧಾನ ಮಂತ್ರಿ ನರೇಂದ್ರ ಮೋದಿ ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಸಂಸದ ಅಸಾದುದ್ದೀನ್ ಒವೈಸಿ, ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ. “ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆʼʼ ಎಂದು ಅವರು ಟೀಕಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಚುನಾವಣಾ ಕಣದಲ್ಲಿ (Lok Sabha Election 2024) ಪ್ರಮುಖ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಎಐಎಂಐಎಂ (AIMIM Hyderabad) ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ.

ʼʼಮುಸ್ಲಿಮರು ಹೆಚ್ಚು ಮಕ್ಕಳನ್ನು ಪಡೆಯುತ್ತಾರೆ ಎಂದು ಮೋದಿ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರಿಗೆ ಆರು ಜನ ಸಹೋದರರಿದ್ದಾರೆ. ಅಮಿತ್ ಶಾ ಅವರಿಗೆ ಆರು ಸಹೋದರಿಯರು ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸುಮಾರು 10-12 ಸಹೋದರಿಯರು ಮತ್ತು ಸಹೋದರರು ಇದ್ದಾರೆ” ಎಂದು ಒವೈಸಿ ಟೀಕಿಸಿದ್ದಾರೆ.

“ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆ. ಈ ದೇಶದಲ್ಲಿ ಮುಸ್ಲಿಮರು ಎಂದಿಗೂ ಬಹುಸಂಖ್ಯಾತರಾಗುವುದಿಲ್ಲ. ನರೇಂದ್ರ ಮೋದಿ, ಮುಸ್ಲಿಮರ ಬಗೆಗಿನ ಈ ಭಯವನ್ನು ನೀವು ಎಷ್ಟು ದಿನ ಮುಂದುವರಿಸುತ್ತೀರಿ?ʼʼ ಎಂದು ಚುನಾವಣಾ ರ‍್ಯಾಲಿಯಲ್ಲಿ ಓವೈಸಿ ಪ್ರಶ್ನಿಸಿದ್ದಾರೆ.

ʼನುಸುಳುಕೋರರುʼ ಎಂಬ ಪದ ಬಳಕೆಗೆ ಅವರು ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು 17 ಕೋಟಿ ಭಾರತೀಯ ಮುಸ್ಲಿಮರನ್ನು ಗುಸ್ಪೆಟಿಯಾ (ಒಳನುಸುಳುಕೋರರು) ಎಂದು ಕರೆದಿದ್ದಾರೆ. ನೀವು ಗುಸ್ಪೆಟಿಯಾ ಆಗಿದ್ದೀರಾ?” ಎಂದು ಪ್ರಶ್ನಿಸಿದ ಅವರು, “ದಲಿತರು ಮತ್ತು ಮುಸ್ಲಿಮರ ವಿರುದ್ಧ ಪ್ರಧಾನಿ ಮೋದಿ ದ್ವೇಷ ಹರಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಮಾಧವಿ ಲತಾ ವಿರುದ್ಧವೂ ವಾಗ್ದಾಳಿ

ಇದಕ್ಕೂ ಮುನ್ನ ಹೈದರಾಬಾದ್ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ವಿರುದ್ಧವೂ ಒವೈಸಿ ವಾಗ್ದಾಳಿ ನಡೆಸಿದ್ದಾರೆ. ʼʼಹೈದರಾಬಾದ್‌ನ ಓಲ್ಡ್ ಸಿಟಿಯ ಮಸೀದಿಯೊಂದರ ಮೇಲೆ ಬಾಣ ಹೂಡುವಂತೆ ಮಾಧವಿ ಲತಾ ಅವರು ಸನ್ನೆ ಮಾಡಿದ್ದಾರೆ. ಬಿಜೆಪಿಯ ಮೆರವಣಿಗೆಯ ವಿಡಿಯೊದಲ್ಲಿ ಇದು ಸ್ಪಷ್ಟವಾಗಿ ಕಂಡು ಬಂದಿದೆ. ಇದು ಮಸೀದಿಯ ಮೇಲೆ ಹೂಡಿದ ಬಾಣವಲ್ಲ, ಬದಲಾಗಿ ನಗರದಲ್ಲಿ ಶಾಂತಿಯನ್ನು ಹಾಳು ಮಾಡುವ ಉದ್ದೇಶಿತ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ.

ಮೋದಿ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ ʼʼದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ ಆಸ್ತಿಯನ್ನು ವಿತರಿಸುವುದಾಗಿ ಹೇಳಿದೆ. ಯಾರಿಗೆ? ಈ ಹಿಂದೆ, ಅವರ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ, ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. ಇದರರ್ಥ ಅವರು ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ಒಳನುಸುಳುವವರಿಗೆ ವಿತರಿಸುತ್ತಾರೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಒಪ್ಪುತ್ತೀರಾ?” ಎಂದು ಮೋದಿ ಕೇಳಿದ್ದರು. ಜತೆಗೆ ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನೂ ಅವರು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

Continue Reading

Lok Sabha Election 2024

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Parliament Flashback: ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ಹಾಗಾಗಿ ಅಲ್ಲಿ ಸೋಲುವ ಭಯದಿಂದ ಬಳ್ಳಾರಿಗೆ ಬಂದು ಸ್ಪರ್ಧಿಸಿದ್ದರು.

VISTARANEWS.COM


on

Parliament Flashback
Koo

ಬೆಂಗಳೂರು: 1999ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು. ಇದಕ್ಕೆ ಕಾರಣ ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಬಿಜೆಪಿಯ ಫೈರ್‌ ಬ್ರಾಂಡ್‌ ನಾಯಕಿ, ದಿಲ್ಲಿಯ ಮುಖ್ಯಮಂತ್ರಿಯೂ ಆಗಿದ್ದ ಸುಷ್ಮಾ ಸ್ವರಾಜ್‌ (Sushma Swaraj) ನಡುವಿನ ಮುಖಾಮುಖಿ (Parliament Flashback).

ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ರಾಜೀವ್‌ ಗಾಂಧಿ ಅವರ ಪರಮಾಪ್ತರಾಗಿದ್ದ ಕ್ಯಾಪ್ಟನ್‌ ಸತೀಶ್‌ ಶರ್ಮಾ ಅವರನ್ನು ಬಿಜೆಪಿ ಅಭ್ಯರ್ಥಿ ಡಾ. ಸಂಜಯ್‌ ಸಿಂಗ್‌ ಸೋಲಿಸಿದ್ದರು. ಹಾಗಾಗಿ ಅಲ್ಲಿ ಸುಲಭವಾಗಿ ಗೆಲ್ಲುವ ವಿಶ್ವಾಸ ಸೋನಿಯಾಗಿರಲಿಲ್ಲ. ಹಾಗಾಗಿ ಸೋನಿಯಾ ಗಾಂಧಿ ಹಿತೈಷಿಗಳೆಲ್ಲ ಸೇರಿ ಲೆಕ್ಕಾಚಾರ ಹಾಕಿ ಆರಿಸಿದ ಮತ್ತೊಂದು ಕ್ಷೇತ್ರವೇ ಬಳ್ಳಾರಿ.

ಏಕೆಂದರೆ 1952ರಿಂದ 1999ರವರೆಗೆ ನಡೆದ 12 ಚುನಾವಣೆಗಳಲ್ಲೂ ಕಾಂಗ್ರೆಸ್‌ ಬಳ್ಳಾರಿಯಲ್ಲಿ ಜಯ ಸಾಧಿಸಿತ್ತು.
ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿಗೆ ಬಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದರು. ಸೋನಿಯಾ ನಾಮಪತ್ರದ ಬೆನ್ನಿಗೇ ಸುಷ್ಮಾ ಸ್ವರಾಜ್‌ ಅವರನ್ನು ಕಣಕ್ಕಿಳಿಸಿ ಕಾಂಗ್ರೆಸ್‌ಗೆ ಬಿಜೆಪಿ ನಡುಕ ಹುಟ್ಟಿಸಿತು. ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಅವರ ಚುನಾವಣಾ ಪ್ರಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿತು. ವಿದೇಶಿ ಸೊಸೆ ಮತ್ತು ಸ್ವದೇಶಿ ಮಗಳ ನಡುವಿನ ಸ್ಪರ್ಧೆ ಎಂದೇ ಮಾಧ್ಯಮಗಳು ಬಣ್ಣಿಸಿದವು. ಸುಷ್ಮಾ ಸ್ವರಾಜ್‌ ಅವರು ಕನ್ನಡದಲ್ಲೇ ಭಾಷಣ ಮಾಡಿ ಅಚ್ಚರಿ ಮೂಡಿಸಿದರು. ಕಾಂಗ್ರೆಸ್‌ ಮತ್ತು ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಇಲ್ಲಿಗೆ ಬಂದು ಪ್ರಚಾರ ಮಾಡಿದರು. ಆದರೆ ಅಂತಿಮವಾಗಿ ಸೋನಿಯಾ ಗಾಂಧಿ ಅವರು 56,100 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಅತ್ತ ಅಮೇಠಿಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿ ಕ್ಷೇತ್ರ ತೊರೆದರು. ಸುಷ್ಮಾ ಸ್ವರಾಜ್‌ ಇಲ್ಲಿ ಸೋತರು. ಆದರೆ ಪ್ರತಿವರ್ಷ ವರ ಮಹಾಲಕ್ಷ್ಮೀ ಹಬ್ಬದ ದಿನ ಬಳ್ಳಾರಿಗೆ ಬಂದು ಪೂಜೆಯಲ್ಲಿ ಭಾಗಿಯಾಗುತ್ತಿದ್ದರು. ಅವರ ಸ್ಪರ್ಧೆ ಬಳ್ಳಾರಿಯಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಿತು. ಮುಂದೆ 2004, 2009, 20014 ಮತ್ತು 20019ರ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಜಯ ದಾಖಲಿಸಿದ್ದೇ ಇದಕ್ಕೆ ಸಾಕ್ಷಿ.

ಗುರುವಿಗೇ ಸೋಲಿನ ರುಚಿ ತೋರಿಸಿದ ಆಸ್ಕರ್‌ ಫೆರ್ನಾಂಡಿಸ್‌!

ಡಾ. ಟಿ.ಎ.ಪೈ ಅವರು ಖ್ಯಾತ ವೈದ್ಯ, ಶಿಕ್ಷಣ ತಜ್ಞ ಮತ್ತು ಅರ್ಥ ಶಾಸ್ತ್ರಜ್ಞರೆಂದು ಖ್ಯಾತಿ ಪಡೆದವರು. ಆಧುನಿಕ ಮಣಿಪಾಲದ ನಿರ್ಮಾತೃರು. ಇಂದು ಮಣಿಪಾಲ ಆರೋಗ್ಯ ಮತ್ತು ಶಿಕ್ಷಣದಲ್ಲಿ ವಿಶ್ವ ಪ್ರಸಿದ್ಧಿ ಪಡೆಯಲು ಡಾ. ಟಿ.ಎ. ಪೈ ಅವರೇ ಕಾರಣರು. ಇಂಥ ಶ್ರೇಯಸ್ಸಿನ ಪೈ ಅವರು 1977ರಲ್ಲಿ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪ್ರಚಂಡ ಜಯ ದಾಖಲಿಸಿದರು. ಆದರೆ ಇವರ ಬಗ್ಗೆ ವೈಯಕ್ತಿಕ ಕಾರಣಕ್ಕೆ ಮುನಿಸು ಹೊಂದಿದ್ದ ಇಂದಿರಾ ಗಾಂಧಿ ಅವರು 1980ರ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿದರು. ಅಷ್ಟೇ ಅಲ್ಲ ಇವರ ಶಿಷ್ಯರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಅವರಿಗೆ ಟಿಕೆಟ್‌ ನೀಡಿ ಅಚ್ಚರಿ ಮೂಡಿಸಿದರು.

ಪುರಸಭೆ ಸದಸ್ಯರಾಗಿ ಉಡುಪಿಗೆ ಸೀಮಿತರಾಗಿ ಓಡಾಡಿಕೊಂಡಿದ್ದ, ಲೋಕಸಭೆಯ ಕನಸೂ ಕಾಣದಿದ್ದ ಯುವಕ ಆಸ್ಕರ್‌ ಫೆರ್ನಾಂಡಿಸ್‌ ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್‌ ಆಗಿ ಬಿಟ್ಟರು. ಟಿ.ಎ. ಪೈ ಅವರು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಪಕ್ಷದಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಅಂದ ಹಾಗೆ ಈ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಎನ್ನುವುದು ಇಂದಿರಾ ಗಾಂಧಿ ಅವರ ವಿರುದ್ಧ ಬಂಡೆದ್ದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಸ್ಥಾಪಿಸಿದ ಪಕ್ಷವಾಗಿತ್ತು.

ಅಂದಿನ ಚುನಾವಣೆಯಲ್ಲಿ ಟಿ.ಎ.ಪೈ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು! ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ.ಎಸ್‌. ಆಚಾರ್ಯ ಎರಡನೇ ಸ್ಥಾನ ಪಡೆದರು. ಆಸ್ಕರ್‌ ಫೆರ್ನಾಂಡಿಸ್‌ ಸಂಸದರಾಗಿ ಆಯ್ಕೆಯಾದರು.
ಮುಂದಿನ 1984ರ ಚುನಾವಣೆಯಲ್ಲಿ ಆಸ್ಕರ್‌ ಫರ್ನಾಂಡಿಸ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನ್ಯಾ. ಕೆ.ಎಸ್‌. ಹೆಗ್ಡೆ ಅವರನ್ನೇ ಸೋಲಿಸಿದರು. ನ್ಯಾ. ಹೆಗ್ಡೆ ಅವರು 1977ರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಜನತಾ ಪರಿವಾರದ ಅಭ್ಯರ್ಥಿಯಾಗಿ ಗೆದ್ದಿದ್ದರು. ಹೀಗೆ ಆಸ್ಕರ್‌ ಫರ್ನಾಂಡಿಸ್‌ ನಿರಂತರ ನಾಲ್ಕು ಬಾರಿ ಉಡುಪಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು.

ಇದನ್ನೂ ಓದಿ: Parliament Flashback: ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದ ಕಾಂಗ್ರೆಸ್‌ ಕಿರುಕುಳದಿಂದಾಗಿ ಪ್ರಧಾನಿ ಹುದ್ದೆ ತೊರೆದಿದ್ದ ದೇವೇಗೌಡರು!

ಆದರೆ 1998ರಲ್ಲಿ ಬಿಜೆಪಿಯ ಐ.ಎಂ. ಜಯರಾಂ ಶೆಟ್ಟಿ ಅವರೆದುರು ಆಸ್ಕರ್‌ ಫೆರ್ನಾಂಡಿಸ್‌ ಸೋತು ಹೋದರು. ಮತ್ತೆಂದೂ ಅವರು ಲೋಕಸಭೆಗೆ ಸ್ಪರ್ಧಿಸಲು ಹೋಗಲಿಲ್ಲ. ಬದಲಿಗೆ ನಾಲ್ಕು ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದರು. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಆಪ್ತರಾಗಿದ್ದ ಆಸ್ಕರ್‌, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮುಖ ಖಾತೆಯನ್ನು ನಿರ್ವಹಿಸಿದ್ದರು. 2021ರಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದರು.

Continue Reading

ದೇಶ

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Drugs Smuggling: ಗುಜರಾತ್‌ ಕರಾವಳಿ ಪ್ರದೇಶದಲ್ಲಿ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಹಡಗನ್ನು ವಶಪಡಿಸಿಕೊಳ್ಳಲಾಗಿದೆ. 600 ಕೋಟಿ ರೂ. ಮೌಲ್ಯದ ಮಾದಕವಸ್ತುವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Drugs Smuggling
Koo

ಗಾಂಧಿನಗರ: ಗುಜರಾತ್‌ ಬಳಿಯ ಸಾಗರ ಪ್ರದೇಶದಲ್ಲಿ (Gujarat) ಮಹತ್ವದ ಕಾರ್ಯಾಚರಣೆಯೊಂದನ್ನು ನಡೆಸಲಾಗಿದ್ದು, ಪಾಕಿಸ್ತಾನದ ಹಡಗನ್ನು ತಡೆಯಲಾಗಿದೆ. ಹಡಗಿನಲ್ಲಿ 600 ಕೋಟಿ ರೂ. ಮೌಲ್ಯದ 14 ಕೆ.ಜಿ ಮಾದಕವಸ್ತು ಸಿಕ್ಕಿದ್ದು, ಅಕ್ರಮ ಸಾಗಣೆ ಹಿನ್ನೆಲೆಯಲ್ಲಿ ಪಾಕಿಸ್ತಾನದ (Pakistan) 14 ಜನರನ್ನು ಬಂಧಿಸಲಾಗಿದೆ. ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಮಾದಕವಸ್ತು ಸಾಗಣೆ (Drugs Smuggling) ಮಾಡಲಾಗುತ್ತಿರುವ ಕುರಿತು ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿದೆ.

ನಿಖರ ಮಾಹಿತಿ ಮೇರೆಗೆ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. “ಪಾಕಿಸ್ತಾನದ 14 ನಾಗರಿಕರನ್ನು ಬಂಧಿಸಲಾಗಿದ್ದು, ಮಾದಕವಸ್ತುವನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ಕರಾವಳಿ ರಕ್ಷಣಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಮಾದಕವಸ್ತು ಸಾಗಣೆ ಮಾಡುತ್ತಿದ್ದ ಹಡಗನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳು ಕರಾವಳಿ ರಕ್ಷಣಾ ಪಡೆಯ ಒಂದು ನೌಕೆ ಹಾಗೂ ವಿಮಾನವನ್ನು ಬಳಸಿಕೊಳ್ಳಲಾಗಿದೆ. ರಾಜರತನ್‌ ಎಂಬ ನೌಕೆಯ ಮೂಲಕ ಅಧಿಕಾರಿಗಳು ಬೆನ್ನತ್ತಿ ಪಾಕಿಸ್ತಾನದ ನೌಕೆಯನ್ನು ಹಿಡಿಯಲಾಗಿದೆ. ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಶಂಕಾಸ್ಪದ ಹಡಗನ್ನು ತಡೆದ, ಪರಿಶೀಲನೆ ನಡೆಸಿದಾಗ ಡ್ರಗ್ಸ್‌ ಜಾಲ ಬಯಲಾಗಿದೆ” ಎಂದು ತಿಳಿಸಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಗುಜರಾತ್‌ ಸಾಗರ ಪ್ರದೇಶದಲ್ಲಿ ಇರಾನ್‌ನಿಂದ ಸಾಗಿಸಲಾಗುತ್ತಿದ್ದ ಸುಮಾರು 3 ಸಾವಿರ ಕೆ.ಜಿ ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿತ್ತು. ನೌಕಾಪಡೆಯ ಪ್ರಕಾರ 3,089 ಕಿಲೋಗ್ರಾಂಗಳಷ್ಟು ಚರಸ್, 158 ಕೆಜಿ ಮೆಥಾಂಫೆಟಮೈನ್ ಮತ್ತು 25 ಕೆಜಿ ಮಾರ್ಫಿನ್ ಅನ್ನು ಒಳಗೊಂಡಿರುವ ಈ ಮಾದಕವಸ್ತು ವಶಪಡಿಸಿಕೊಳ್ಳುವಿಕೆಯು ಇತ್ತೀಚಿನ ದಿನಗಳಲ್ಲಿ ಬೃಹತ್‌ ಪ್ರಮಾಣದ್ದಾಗಿದೆ. ಪೋರಬಂದರ್‌ನ ಬಂದರಿನಲ್ಲಿ ನಡೆಸಿದ ಕಾರ್ಯಾಚರಣೆಯ ನಂತರ ಐವರು ವಿದೇಶಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿತ್ತು.

ಫೆಬ್ರವರಿ 27ರಂದು ಬಂಧಿತ ದೋಣಿ, ಸಿಬ್ಬಂದಿ ಮತ್ತು ನಿಷಿದ್ಧ ಮಾದಕ ವಸ್ತುಗಳನ್ನು ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲಾಯಿತು. ಕಣ್ಗಾವಲು ಕಾರ್ಯಾಚರಣೆಯ ಸಮಯದಲ್ಲಿ P8I LRMR ವಿಮಾನವು ಮಾಹಿತಿ ಸಂಗ್ರಹಿಸಿದ್ದು, ನಂತರ ಪ್ರತಿಕ್ರಿಯೆಯಾಗಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಅನುಮಾನಾಸ್ಪದ ದೋಣಿಯನ್ನು ಯಶಸ್ವಿಯಾಗಿ ಪ್ರತಿಬಂಧಿಸಿ ಸೆರೆಹಿಡಿಯಲಾಯಿತು.

ಇದನ್ನೂ ಓದಿ: Student Death: ಅಮೆರಿಕದಲ್ಲಿ ಡ್ರಗ್ಸ್‌ ಗ್ಯಾಂಗ್‌ನಿಂದ ಅಪಹೃತನಾದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

Continue Reading
Advertisement
love jihad
ಕರ್ನಾಟಕ32 mins ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ44 mins ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು1 hour ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ1 hour ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ1 hour ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ2 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ2 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ2 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ2 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20248 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202410 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202412 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202413 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ15 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌