The Kerala Story: ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಸಿನಿಮಾಕ್ಕೆ ನಿಷೇಧ; ಮಮತಾ ಬ್ಯಾನರ್ಜಿ ಆದೇಶ - Vistara News

ದೇಶ

The Kerala Story: ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಸಿನಿಮಾಕ್ಕೆ ನಿಷೇಧ; ಮಮತಾ ಬ್ಯಾನರ್ಜಿ ಆದೇಶ

ಸಿನಿಮಾ ಬಿಡುಗಡೆಗೂ ಮುನ್ನವೇ ಅನೇಕರು ವಿವಿಧ ಹೈಕೋರ್ಟ್, ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿ, ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಕೋರಿದ್ದರು. ಆದರೆ ಫಲಪ್ರದವಾಗಿರಲಿಲ್ಲ

VISTARANEWS.COM


on

The Kerala Story Ban By CM Mamata Banerjee In West Bengal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಿ ಕೇರಳ ಸ್ಟೋರಿ (The Kerala Story) ಸಿನಿಮಾವನ್ನು ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಿಷೇಧಿಸಲಾಗಿದೆ (The Kerala Story Ban in West Bengal). ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಪ್ರದರ್ಶನ ರದ್ದುಗೊಳಿಸುತ್ತಿರುವುದಾಗಿ ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಘೋಷಣೆ ಮಾಡಿದ್ದಾರೆ. ದಿ ಕೇರಳ ಸ್ಟೋರಿ ಟ್ರೇಲರ್ ಬಿಡುಗಡೆಯಾದಾಗಿನಿಂದಲೂ ವಿವಾದ ಸೃಷ್ಟಿಸಿದೆ. ಕೇರಳದ ಸಾವಿರಾರು ಹಿಂದು/ಕ್ರಿಶ್ಚಿಯನ್ ಹುಡುಗಿಯರನ್ನು ಸಿರಿಯಾ-ಅಫ್ಘಾನಿಸ್ತಾನಕ್ಕೆ ಕರೆದುಕೊಂಡು ಇಸ್ಲಾಮ್​ಗೆ ಮತಾಂತರ ಮಾಡುವ, ಲವ್​ ಜಿಹಾದ್​ಗೆ ಒಳಪಡಿಸುವ, ಐಸಿಸ್ ಭಯೋತ್ಪಾದನಾ ಸಂಘಟನೆಗೆ ಸೇರಿಸುವ ಕತೆಗಳನ್ನು ಒಳಗೊಂಡಿರುವ ದಿ ಕೇರಳ ಸ್ಟೋರಿ ಮೇ 5ರಂದು ದೇಶಾದ್ಯಂತ ಬಿಡುಗಡೆಯಾಗಿದೆ.

ಸಿನಿಮಾ ಬಿಡುಗಡೆಗೂ ಮುನ್ನವೇ ಅನೇಕರು ವಿವಿಧ ಹೈಕೋರ್ಟ್, ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿ, ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಕೋರಿದ್ದರು. ಆದರೆ ಫಲಪ್ರದ ವಾಗಿರಲಿಲ್ಲ. ಆದರೆ ದೇಶಕ್ಕೆ ಒಂದು ದಾರಿಯಾದರೆ ಪಶ್ಚಿಮ ಬಂಗಾಳಕ್ಕೇ ಮತ್ತೊಂದು ದಾರಿ ಎಂಬಂತೆ ವರ್ತಿಸುವ ಮಮತಾ ಬ್ಯಾನರ್ಜಿ ಈ ವಿಚಾರದಲ್ಲೂ ಅದನ್ನೇ ಮಾಡಿದ್ದಾರೆ. ಚಿತ್ರ ಬಿಡುಗಡೆಯಾದ ಮೂರು ದಿನಗಳ ಬಳಿಕ ಅದರ ಪ್ರದರ್ಶನವನ್ನು ಪಶ್ಚಿಮ ಬಂಗಾಳದಲ್ಲಿ ಬ್ಯಾನ್ ಮಾಡಿದ್ದಾರೆ. ‘ಪಶ್ಚಿಮ ಬಂಗಾಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ, ಕೋಮುಗಲಭೆ, ದ್ವೇಷದ ಘಟನೆಗಳು ನಡೆಯದಂತೆ ತಡೆಯಲು ಚಿತ್ರ ಪ್ರದರ್ಶನ ರದ್ದುಗೊಳಿಸಲಾಗಿದೆ’ ಎಂದು ಹೇಳಿರುವ ಮಮತಾ ಬ್ಯಾನರ್ಜಿ, ರಾಜ್ಯದ ಒಂದೇ ಒಂದು ಸ್ಥಳದಲ್ಲಿಯೂ ದಿ ಕೇರಳ ಸ್ಟೋರಿ ಪ್ರದರ್ಶನಗೊಳ್ಳುತ್ತಿಲ್ಲ ಎಂಬುದನ್ನು ಖಾತರಿಪಡಿಸಿಕೊಳ್ಳಿ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಇದಕ್ಕೂ ಮುನ್ನ ದಿ ಕೇರಳ ಸ್ಟೋರಿ ಬಗ್ಗೆ ಮಾತನಾಡಿದ್ದ ಸಿಎಂ ಮಮತಾ ಬ್ಯಾನರ್ಜಿ ‘ದಿ ಕಾಶ್ಮೀರಿ ಫೈಲ್ಸ್ ಬಿಡುಗಡೆಯಾದಾಗ ಅದರ ಪ್ರದರ್ಶನಕ್ಕೆ ಬಿಜೆಪಿ ಹಣ ಸಂದಾಯ ಮಾಡಿತ್ತು. ಅದೇ ಮಾದರಿಯಲ್ಲಿ ಈಗ ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿಯನ್ನು ದೊಡ್ಡಮಟ್ಟದಲ್ಲಿ ಪ್ರದರ್ಶನ ಮಾಡಿಸಲೂ ಪ್ರಯತ್ನ ಮಾಡುತ್ತಿದೆ’ ಎಂದು ಹೇಳಿದ್ದರು. ಈ ಹೇಳಿಕೆ ನೀಡಿ ಕೆಲವೇ ಹೊತ್ತಲ್ಲಿ ಚಿತ್ರವನ್ನೇ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ವಿಸ್ತಾರ Explainer: The Kerala Story: ದಿ ಕಾಶ್ಮೀರ್ ಫೈಲ್ ಬಳಿಕ ಮತ್ತೊಂದು ಸಿನಿ ಸಂಚಲನ: ವಿಶ್ವಾದ್ಯಂತ ತೆರೆಗೆ

ಇನ್ನು ತಮಿಳುನಾಡಿನ ಹಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಈಗಾಗಲೇ ದಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನ ಸ್ಥಗಿತಗೊಂಡಿದೆ. ವಿವಾದಿತ ಸಿನಿಮಾವನ್ನು ನಾವು ಪ್ರದರ್ಶನ ಮಾಡುವುದಿಲ್ಲ ಎಂದು ರಾಜ್ಯದ ವಿವಿಧ ಮಲ್ಟಿಪ್ಲೆಕ್ಸ್​​ಗಳ ಮಾಲೀಕರು ಹೇಳಿದ್ದಾರೆ ಎಂದು ತಮಿಳುನಾಡು ಥಿಯೇಟರ್​ ಮತ್ತು ಮಲ್ಟಿಪ್ಲೆಕ್ಸ್​ ಮಾಲೀಕರ ಸಂಘದ ಅಧ್ಯಕ್ಷ ಎಂ.ಸುಬ್ರಹ್ಮಣಿಯಂ ಅವರು ಭಾನುವಾರ ಹೇಳಿಕೆ ಬಿಡುಗಡೆ ಮಾಡಿದ್ದರು. ಇನ್ನೊಂದೆಡೆ ಈ ಸಿನಿಮಾವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತ ಎಂದು ಘೋಷಿಸಲಾಗಿದೆ.

ಇದನ್ನೂ ಓದಿ: The Kerala Story: ʻದಿ ಕಾಶ್ಮೀರ್ ಫೈಲ್ಸ್‌ʼ ದಾಖಲೆಯನ್ನು ಮುರಿಯಲಿದೆಯೇ ʻದಿ ಕೇರಳ ಸ್ಟೋರಿʼ: ತಜ್ಞರು ಹೇಳೋದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Viral News: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸ್ಥಳೀಯರು ತಕ್ಕ ಪಾಠ ಕಲಿಸಿದ್ದಾರೆ. ಮೊಬೈಲ್‌ ಅಂಗಡಿ ಇಟ್ಟುಕೊಂಡಿರುವ ಆರೋಪಿ ಅಥರುದ್ದೀನ್‌ ರೀಚಾರ್ಜ್‌ಗಾಗಿ ತನ್ನ ಬಳಿಗೆ ಬರುವ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ. ಈ ಬಗ್ಗೆ ಸಂತ್ರಸ್ತ ಅಪ್ರಾಪ್ತ ಬಾಲಕಿಯೊಬ್ಬರ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಇನ್ನು ಈತನ ವರ್ತನೆ ಬಗ್ಗೆ ಅನುಮಾನಗೊಂಡಿದ್ದ ಸ್ಥಳೀಯರು ಅಂಗಡಿಗೆ ದಾಳಿ ನಡೆಸಿ ಆತನಿಗೆ ಥಳಿಸಿದ್ದಾರೆ. ಸದ್ಯ ಘಟನೆಯ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral News
Koo

ಡೆಹ್ರಾಡೂನ್: ಒಂದಷ್ಟು ಜನರ ಗುಂಪು ಮೊಬೈಲ್‌ ಅಂಗಡಿಯಾತನನ್ನು ರಸ್ತೆಗೆಳೆದು ಸರಿಯಾಗಿ ಥಳಿಸುತ್ತಾರೆ. ಮಹಿಳೆಯರೂ ಆತನಿಗೆ ಧರ್ಮದೇಟು ನೀಡುತ್ತಾರೆ. ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಈ ಘಟನೆಯ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಅಷ್ಟಕ್ಕೂ ಜನರ ಗುಂಪು ಯಾಕೆ ಮೊಬೈಲ್‌ ಅಂಗಡಿಯಾತನನ್ನು ಥಳಿಸಿದ್ದು? ಏನಿದು ಘಟನೆ? ನಿಮ್ಮ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Viral News).

ಘಟನೆಯ ಹಿಂದೆ ಲವ್‌ ಜಿಹಾದ್‌ನ ಶಂಕೆ ವ್ಯಕ್ತವಾಗುತ್ತಿದೆ. ಹಲ್ಲೆಗೊಳಗಾದ ಮುಸ್ಲಿಂ ಯುವ ಲವ್‌ ಜಿಹಾದ್‌ಗೆ ಪ್ರಯತ್ನಿಸುತ್ತಿದ್ದ. ಅದನ್ನು ರೆಡ್‌ ಹ್ಯಾಂಡಾಗಿ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ (ಏಪ್ರಿಲ್ 25) ಈ ಘಟನೆ ನಡೆದಿದೆ.

ಅನಿಲ್ ಶರ್ಮಾ ಎನ್ನುವವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ 1.39 ನಿಮಿಷಗಳ ಈ ವಿಡಿಯೊ ಹಂಚಿಕೊಂಡಿದ್ದಾರೆ. “ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಘಟನೆ ಇದು. ಹಿಂದೂಗಳು ಮುಸ್ಲಿಮರಿಗೆ ಅಂಗಡಿಗಳನ್ನು ಬಾಡಿಗೆಗೆ ನೀಡುತ್ತಾರೆ. ಬಳಿಕ ಮುಸ್ಲಿಮರು ಲವ್‌ ಜಿಹಾದ್‌ ಆರಂಭಿಸುತ್ತಾರೆ. ಇಲ್ಲೂ ಆಗಿದ್ದು ಅದೇ. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ಆರೋಪಿ ಅಥರುದ್ದೀನ್‌ ರೀಚಾರ್ಜ್‌ಗಾಗಿ ತನ್ನ ಬಳಿಗೆ ಬರುವ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ” ಎಂದು ಅವರು ಬರೆದುಕೊಂಡಿದ್ದಾರೆ.

ಘಟನೆಯ ವಿವರ

ಈ ಪ್ರಕರಣವು ಹಲ್ದ್ವಾನಿಯ ಕೊಟ್ವಾಲಿಯಲ್ಲಿ ನಡೆದಿದೆ. ಅಲ್ಲಿ ವಾಸಿಸುವ ಮಹಿಳೆಯೊಬ್ಬರು ಏಪ್ರಿಲ್ 25ರಂದು ಪೊಲೀಸರಿಗೆ ದೂರು ನೀಡಿದ್ದು, ತನ್ನ 17 ವರ್ಷದ ಮಗಳು ಕೆಲವು ದಿನಗಳ ಹಿಂದೆ ಮೊಬೈಲ್ ಫೋನ್ ರೀಚಾರ್ಜ್ ಮಾಡಲು ಅಥರುದ್ದೀನ್‌ನ ‘ದೆಹಲಿ ಮೊಬೈಲ್ ಶಾಪ್’ ತೆರಳಿದ್ದಳು. ಬಳಿಕ ಆತ ಮಗಳ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ ಕಳುಹಿಸಲು ಆರಂಭಿಸಿದ್ದ ಎಂದು ಆರೋಪಿಸಿದ್ದರು. ಜತೆಗೆ ಮೆಸೇಜ್‌ನ ಸ್ಕ್ರೀನ್‌ ಶಾಟ್‌ ಒದಗಿಸಿದ್ದರು.

ಅಪ್ರಾಪ್ತ ಬಾಲಕಿ ಸಂದೇಶಗಳಲ್ಲಿ ಅಥರುದ್ದೀನ್‌ನನ್ನು ಪದೇ ಪದೆ ‘ಸಹೋದರ’ ಎಂದೇ ಕರೆದಿರುವುದು ಕಂಡು ಬಂದಿದೆ. ಆದಾಗ್ಯೂ ಅವನು ಆಕೆ ಸಹೋದರ ಎಂದು ಕರೆಯುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ. ಮಾತ್ರವಲ್ಲ ತನ್ನೊಂದಿಗೆ ಸ್ನೇಹ ಬೆಳೆಸಲು ಒತ್ತಾಯಿಸಿದ್ದ. ತನ್ನ ಕನಸಿನಲ್ಲಿ ನಿನ್ನನ್ನು ನೋಡಿದ್ದೇನೆ ಎಂದೂ ಪೂಸಿ ಹೊಡೆದಿದ್ದ. ತನ್ನನ್ನು ಸಿಖ್ ಎಂದು ಉಲ್ಲೇಖಿಸುವ ಮೂಲಕ ಅಪ್ರಾಪ್ತ ಬಾಲಕಿಯನ್ನು ಮೋಸಗೊಳಿಸಲು ಪ್ರಯತ್ನಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇಲ್ಲಿಗೇ ಮುಗಿದಿಲ್ಲ

ಅಥರುದ್ದೀನ್‌ ಕಿರುಕುಳ ಅಲ್ಲಿಗೆ ನಿಂತಿರಲಿಲ್ಲ. ಆತ ಅವಳನ್ನು ಕಾಲೇಜು ನಿಲ್ದಾಣದವರೆಗೂ ಹಿಂಬಾಲಿಸಿದ್ದ. ಜತೆಗೆ ದಾರಿಯಲ್ಲಿ ಅವಳ ಕೈಯನ್ನು ಹಿಡಿಯಲು ಪ್ರಯತ್ನಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆತನ ಕಿರುಕುಳದಿಂದ ಮಗಳು ಭಯಗೊಂಡಿದ್ದಾಳೆ ಮತ್ತು ಮಾನಸಿಕ ಖಿನ್ನತೆಗೆ ಜಾರಿದ್ದಾಳೆ. ಸರಿಯಾಗಿ ಊಟವನ್ನೂ ಮಾಡುತ್ತಿಲ್ಲ ಎಂದು ಮಹಿಳೆ ಬಹಿರಂಗಪಡಿಸಿದ್ದಾರೆ. ದೂರಿನಲ್ಲಿ ಮುಸ್ಲಿಂ ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಅಥರುದ್ದೀನ್‌ನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ಆರಂಭವಾಗಿದೆ.

ಇದನ್ನೂ ಓದಿ: Love jihad? : ಮೆಸೇಜ್‌ನಲ್ಲೇ ಹಿಂದು ಯುವತಿಯರನ್ನು ಸೆಳೆಯುತ್ತಿದ್ದ ಖದೀಮ ಫಯಾಜ್‌ಗೆ ಗೂಸಾ!

ಇತರರೊಂದಿಗೂ ಇದೇ ವರ್ತನೆ

ಘಟನೆ ಬಗ್ಗೆ ಬಜರಂಗ ದಳದ ಕಾರ್ಯಕರ್ತ ಜೋಗಿಂದರ್‌ ಸಿಂಗ್‌ ರಾಣಾ ಹೆಚ್ಚಿನ ಮಾಹಿತಿ ನೀಡಿದ್ದಾರೆ. ʼʼಆರೋಪಿ ಅಥರುದ್ದೀನ್‌ ಹಲ್ದ್ವಾನಿಯ ಮಖಾನಿ ರಸ್ತೆಯಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದಾನೆ. ಈತ ಸಂತ್ರಸ್ತೆಗಿಂತ 10 ವರ್ಷ ಹಿರಿಯವನು. ತನ್ನ ತಂಗಿಯ ವಯಸ್ಸಿನ ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ್ದಾನೆʼʼ ಎಂದು ಹೇಳಿದ್ದಾರೆ. ʼʼಅಲ್ಲದೆ ಅಂಗಡಿ ನಡೆಸಲು ಆತನ ಬಳಿ ಸೂಕ್ತ ದಾಖಲೆಗಳೇ ಇಲ್ಲ. ಅಲ್ಲದೆ ಆತನ ಮೊಬೈಲ್‌ನಲ್ಲಿ ಇನ್ನೂ ಅನೇಕ ಹಿಂದೂ ಹುಡುಗಿಯರ ಸಂಖ್ಯೆಗಳು ಕಂಡು ಬಂದಿವೆ. ಅವರೊಂದಿಗೆ ಅಶ್ಲೀಲವಾಗಿ ಚಾಟ್‌ ನಡೆಸಿರುವುದು ಕೂಡ ತಿಳಿದು ಬಂದಿದೆʼʼ ಎಂದು ಜೋಗಿಂದರ್‌ ಸಿಂಗ್‌ ರಾಣಾ ಹೇಳಿದ್ದಾರೆ.

Continue Reading

ಕ್ರೈಂ

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Gold Seized: ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಸುಮಾರು 70 ಲಕ್ಷ ರೂ. ಮೌಲ್ಯದ ಚಿನ್ನವನ್ನು ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಇಂಟೆಲಿಜೆನ್ಸ್ ಯೂನಿಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Gold Seized
Koo

ತಿರುಚಿರಾಪಳ್ಳಿ: ದುಬೈ ನಿಂದ (dubai) ಆಗಮಿಸಿದ ಪ್ರಯಾಣಿಕನೊಬ್ಬ ಗುದನಾಳದಲ್ಲಿ (Rectum) ಬಚ್ಚಿಟ್ಟುಕೊಂಡು ತಂದಿದ್ದ 24 ಕ್ಯಾರೆಟ್ ನ ಒಟ್ಟು 997 ಗ್ರಾಂ ಚಿನ್ನವನ್ನು (Gold Seized) ಶನಿವಾರ ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 70.58 ಲಕ್ಷ ರೂ. ಗಳಾಗಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ (Air India Express) ದುಬೈನಿಂದ ತಿರುಚ್ಚಿಗೆ (Trichy) ಆಗಮಿಸಿದ ಪ್ರಯಾಣಿಕ ಗುದನಾಳದಲ್ಲಿ ಮೂರು ಪ್ಯಾಕೆಟ್‌ಗಳಲ್ಲಿ ಚಿನ್ನವನ್ನು 1081 ಗ್ರಾಂ ಪೇಸ್ಟ್‌ ಮಾಡಿ ಬಚ್ಚಿಟ್ಟು ತಂದಿದ್ದು, ಆತನನ್ನು ಏರ್ ಇಂಟೆಲಿಜೆನ್ಸ್ ಯೂನಿಟ್ ನ ಅಧಿಕಾರಿಗಳು ವಶಕ್ಕೆ ಪಡೆದಿದ್ದರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.


ಚೆನ್ನೈ ನಲ್ಲಿ 1.25 ಕೆಜಿ ಚಿನ್ನ ವಶ

ಮತ್ತೊಂದು ಘಟನೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಂತಾರಾಷ್ಟ್ರೀಯ ಟರ್ಮಿನಲ್‌ನ ಆಗಮನದ ಲಾಂಜ್‌ನಲ್ಲಿರುವ ಶೌಚಾಲಯದಲ್ಲಿ 85 ಲಕ್ಷ ರೂಪಾಯಿ ಮೌಲ್ಯದ 1.25 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ರೆಸ್ಟ್ ರೂಂನಲ್ಲಿ ಕಸದ ತೊಟ್ಟಿಯಲ್ಲಿ ಪ್ಯಾಕೇಜ್ ಇರುವುದನ್ನು ಗಮನಿಸಿದ ಸ್ವಚ್ಛತಾ ಸಿಬ್ಬಂದಿ ಸಿಐಎಸ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಯಾವುದೇ ಸ್ಫೋಟಕ ವಸ್ತು ಇರಬಹುದೆಂದು ಪಾರ್ಸೆಲ್ ಅನ್ನು ಸ್ಕ್ಯಾನ್ ಮಾಡಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ ಒಳಗೆ ಅಡಗಿಸಿಟ್ಟ ಚಿನ್ನವನ್ನು ಪತ್ತೆ ಹಚ್ಚಿ ಅನಂತರ ಹೆಚ್ಚುವರಿ ತನಿಖೆಗಾಗಿ ಕಸ್ಟಮ್ಸ್ ಅಧಿಕಾರಿಗಳಿಗೆ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಪ್ರಯಾಣಿಕನೊಬ್ಬ ಮುಖ ಮುಚ್ಚಿಕೊಂಡು ಪಾರ್ಸೆಲ್ ಅನ್ನು ಡಸ್ಟ್‌ಬಿನ್‌ನಲ್ಲಿ ಹಾಕಿರುವುದನ್ನು ತೋರಿಸಿದೆ.

ಈ ವರ್ಷದ ಮಾರ್ಚ್‌ನಲ್ಲಿ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಎಐಯು ಅಧಿಕಾರಿಗಳು 410 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದರು.

ಸಿಂಗಾಪುರದಿಂದ ಬಂದಿದ್ದ ಪ್ರಯಾಣಿಕರೊಬ್ಬರಿಂದ 26.62 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. 24 ಕ್ಯಾರೆಟ್ ನ ಈ ಚಿನ್ನವು 330 ಗ್ರಾಂ ಆಗಿತ್ತು. ಪೇಸ್ಟ್ ರೂಪದಲ್ಲಿ ತರಲಾಗಿತ್ತು. 22 ಸಾವಿರ ಮೌಲ್ಯದ 80 ಗ್ರಾಂ ಚಿನ್ನವನ್ನು ಸಿಂಗಾಪುರದಿಂದ ತಿರುಚ್ಚಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಬಟ್ಟೆಯೊಳಗೆ ಬಚ್ಚಿಟ್ಟುಕೊಂಡು ತಂದಿದ್ದ.

ತಮಿಳುನಾಡಿನ ವಾಹನದಲ್ಲಿ ಬರುತ್ತಿದ್ದ ಚಿನ್ನಾಭರಣ ವಶಕ್ಕೆ

ಇತ್ತೀಚೆಗಷ್ಟೇ ಬೆಂಗಳೂರು ನಗರದಲ್ಲಿ ಭಾರಿ ಮೊತ್ತದ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. 7.999 ಕೆ.ಜಿ. ಚಿನ್ನಾಭರಣ ಹಾಗು 46.700 ಕೆಜಿ ಬೆಳ್ಳಿ ಸೇರಿ ಸುಮಾರು ಐದು ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ಬೆಂಗಳೂರಿನ ವಿವೇಕ್​ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೀಝ್​ ಮಾಡಲಾಗಿತ್ತು.

ವಿವೇಕ್ ​ನಗರದ ಗಾಂಧಿ ಪ್ರತಿಮೆ ಬಳಿ ಇರುವ ಚೆಕ್​ ಪೋಸ್ಟ್​ ಬಳಿ ಚುನಾವಣಾ ಅಧಿಕಾರಿಗಳು ವಾಹನ ಪರಿಶೀಲನೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ಈಶರ್​ ವಾಹನದಲ್ಲಿ ಚಿನ್ನಾಭರಣ ಸಿಕ್ಕಿತ್ತು.

ಒಂದೇ ಒಂದು ಪತ್ರವನ್ನು ಹಿಡಿದಿದ್ದ ಮೂವರು ವ್ಯಕ್ತಿಗಳು, ಗಾಡಿಯಲ್ಲಿ ಚಿನ್ನಾಭರಣವಿದ್ದು ಅದನ್ನು ನಗರದ ವಿವಿಧೆಡೆ ವಿತರಿಸಲು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ಹೇಳಿದ್ದರು.

ತಮಿಳುನಾಡಿನ ಉದ್ಯಮಿಯೊಬ್ಬನ ಸೂಚನೆಯ ಮೇರೆಗೆ ಹಾಗೂ ಆತ ಕೊಟ್ಟ ಫೋನ್​ ನಂಬರ್​ನಲ್ಲಿರುವ ವ್ಯಕ್ತಿಯನ್ನು ಸಂಪರ್ಕ​​ ಮಾಡಿ ಚಿನ್ನಾಭರಣ ತಲುಪಿಸಲು ಅವರು ಬಂದಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಿವೇಕ್ ​ನಗರ ಪೊಲೀಸರು ವಶಕ್ಕೆ ಪಡೆದಿದ್ದರು.

Continue Reading

ವೈರಲ್ ನ್ಯೂಸ್

Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

Viral News: ಆಘಾತಕಾರಿ ಘಟನೆಯೊಂದರಲ್ಲಿ ಅತೀ ವೇಗವಾಗಿ ಸಾಗಿದ ಪಿಕ್‌ಅಪ್‌ ವಾಹನವೊಂದು ಸೈಕಲ್‌ ಸವಾರಿಗೆ ಗುದ್ದಿ ದೇಹವನ್ನು ಸುಮಾರು 2 ಕಿ.ಮೀ.ಯಷ್ಟು ದೂರು ರಸ್ತೆಯಲ್ಲಿ ಎಳೆದುಕೊಂಡು ಹೋಗಿದೆ. ಹರಿಯಾಣದ ರಾಷ್ಟ್ರೀಯ ಹೆದ್ದಾರಿ 9ರ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪಿಕ್‌ಅಪ್‌ ಚಾಲಕನಿಗೆ ಸ್ಥಳೀಯರು ಥಳಿಸಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

Viral News
Koo

ಚಂಡಿಗಢ: ಆಘಾತಕಾರಿ ಘಟನೆಯೊಂದರಲ್ಲಿ ಅತೀ ವೇಗವಾಗಿ ಸಾಗಿದ ಪಿಕ್‌ಅಪ್‌ ವಾಹನವೊಂದು ಸೈಕಲ್‌ ಸವಾರಿಗೆ ಗುದ್ದಿ ದೇಹವನ್ನು ಸುಮಾರು 2 ಕಿ.ಮೀ.ಯಷ್ಟು ದೂರು ರಸ್ತೆಯಲ್ಲಿ ಎಳೆದುಕೊಂಡು ಹೋಗಿದೆ. ಸದ್ಯ ಈ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದ್ದು, ನೆಟ್ಟಿಗರು ಶಾಕ್‌ಗೆ ಒಳಗಾಗಿದ್ದಾರೆ. ಹರಿಯಾಣದ ರಾಷ್ಟ್ರೀಯ ಹೆದ್ದಾರಿ 9ರ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿಕ್‌ಅಪ್‌ನ ಹಿಂದಿದ್ದ ವಾಹನವೊಂದರಲ್ಲಿದ್ದ ವ್ಯಕ್ತಿಗಳು ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಪಿಕ್‌ ಅಪ್‌ ಅನ್ನು ನಿಲ್ಲಿಸಿ ಚಾಲಕ ಮತ್ತು ಸಹಾಯಕನಿಗೆ ಥಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಕರ್ಮ್ಘರ್ ಗ್ರಾಮದ 50 ವರ್ಷದ ಗುರ್‌ನಾಮ್‌ ಸಿಂಗ್ ಎಂದು ಗುರುತಿಸಲಾಗಿದೆ. ಪನ್ನಿವಾಲಾ ಮೋಟಾದಿಂದ ತನ್ನ ಗ್ರಾಮಕ್ಕೆ ಸೈಕಲ್‌ನಲ್ಲಿ ಹಿಂದಿರುಗುತ್ತಿದ್ದಾಗ ಹೆದ್ದಾರಿಯ ಪೊಲೀಸ್ ಚೆಕ್‌ ಪಾಯಿಂಟ್‌ ಬಳಿ ಪಿಕ್‌ಅಪ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ವಾಹನದ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಬಳಿಕ ಪಿಕ್‌ಅಪ್‌ ಅವರನ್ನು ಎಳೆದುಕೊಂಡು ವೇಗವಾಗಿ ಸಾಗಿದೆ. ಪಿಕ್‌ಅಪ್‌ನ ಹಿಂದಿನ ಟ್ರಕ್ ಚಾಲಕ ಸಿಗ್ನಲ್ ಮಾಡಿದರೂ ನಿಲ್ಲಿಸಿಲ್ಲ.

ಅಂತಿಮವಾಗಿ ಟ್ರಕ್ ಚಾಲಕ ಪಿಕ್‌ಅಪ್‌ ಮುಂದೆ ಅಡ್ಡಲಾಗಿ ನಿಲ್ಲಿಸಬೇಕಾಯಿತು. ಈ ಮೂಲಕ ಪಿಕ್‌ಅಪ್‌ ಅನ್ನು ತಡೆಯುವಲ್ಲಿ ಯಶಸ್ವಿಯಾದರು. ನಂತರ ಅವರು ಗಾಯಗೊಂಡ ಸೈಕಲ್‌ ಸವಾರನನ್ನು ಪಿಕ್‌ಅಪ್‌ ಅಡಿಯಿಂದ ಹೊರಗೆ ಎಳೆದರು. ಈ ವೇಳೆ ಗುರ್‌ನಾಮ್‌ ಸಿಂಗ್ ವೈಯೆಲ್ಲ ರಕ್ಷಸಿಕ್ತವಾಗಿತ್ತು. ಏತನ್ಮಧ್ಯೆ ಸ್ಥಳದಲ್ಲಿದ್ದವರು ಕೋಪಗೊಂಡ ಪಿಕ್‌ಅಪ್‌ ಚಾಲಕ ಹೊಡೆದಿದ್ದಾರೆ. ಈ ದೃಶ್ಯಗಳೆಲ್ಲ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಗುರ್‌ನಾಮ್‌ ಸಿಂಗ್ ಅವರನ್ನು ಆಂಬ್ಯುಲೆನ್ಸ್‌ ಮೂಲಕ ಸಮೀಪದ ಆಸ್ಪತ್ರಗೆ ದಾಖಲಿಸಲಾಯಿತು. ಆದರೆ ಅವರ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಗುರ್‌ನಾಮ್‌ ಸಿಂಗ್ ಅವರ ಸಂಬಂಧಿಕರ ಹೇಳಿಕೆ ಆಧಾರದಲ್ಲಿ ಪಿಕ್‌ಅಪ್‌ ಚಾಲಕನ ವಿರುದ್ಧ ಕೊಲೆಯ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಘಟನೆ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

ಹೈದರಾಬಾದ್‌ನಲ್ಲಿಯೂ ನಡೆದಿತ್ತು

ಕೆಲವು ದಿನಗಳ ಹಿಂದೆ ಇಂತಹದ್ದೇ ಘಟನೆ ಹೈದರಾಬಾದ್‌ನಲ್ಲಿಯೂ ನಡೆದಿತ್ತು. ಬೈಕ್‌ ಸವಾರ ಅತ್ಯಂತ ಸಾಹಸಿಕವಾಗಿ ಅಂದು ಪಾರಾಗಿದ್ದ. ಆ ಘಟನೆಯ ವಿಡಿಯೊ ಕೂಡ ವೈರಲ್‌ ಆಗಿತ್ತು. ಅಂದು ವೇಗವಾಗಿ ಚಲಿಸುತ್ತಿದ್ದ ಲಾರಿ ಜನನಿಬಿಡ ರಸ್ತೆಯಲ್ಲಿ ತನ್ನ ಮುಂಭಾಗದ ಟೈರ್ ಕೆಳಗೆ ಮೋಟಾರ್ ಸೈಕಲ್ ಅನ್ನು ಎಳೆದುಕೊಂಡು ಹೋಗುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿತ್ತು. ಅದೃಷ್ಟವಶಾತ್‌ ಬೈಕ್‌ ಸವಾರ ಪಾರಾಗಿ ಲಾರಿಯ ಸ್ಟೆಪ್‌ನಲ್ಲಿ ನಿಂದುಕೊಂಡಿದ್ದ. ವೇಗವಾಗಿ ಸಾಗುತ್ತಿದ್ದ ಲಾರಿ ಬೈಕ್‌ ಅನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿತ್ತು. ಈ ವೇಳೆ ಬೈಕ್‌ ಮತ್ತು ರಸ್ತೆಯ ಘರ್ಷಣೆಯಿಂದ ಬೆಂಕಿ ಹತ್ತಿಕೊಳ್ಳುವುದು ಕೂಡ ವಿಡಿಯೊದಲ್ಲಿ ಸೆರೆಯಾಗಿತ್ತು. ಬಳಿಕ ಬೈಕ್‌ ಚೂರು ಚೂರಾಗಿತ್ತು. ಹಾಗಿದ್ದರೂ ಚಾಲಕ ಲಾರಿಯನ್ನು ನಿಲ್ಲಿಸಿರಲಿಲ್ಲ. ಲಾರಿಯ ಹಿಂದಿನಿಂದ ಬರುತ್ತಿದ್ದ ಪ್ರಯಾಣಿಕರು ವಿಡಿಯೊವನ್ನು ಸೆರೆ ಹಿಡಿದಿದ್ದರು. ಕೊನೆಗೆ ಲಾರಿ ಚಾಲಕ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

Continue Reading

ದೇಶ

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Ujjwal Nikam: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು 15ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲೂ, ಮುಂಬೈ ನಾರ್ತ್‌ ಸೆಂಟ್ರಲ್‌ ಕ್ಷೇತ್ರದಲ್ಲಿ ಹಾಲಿ ಸಂಸದೆ ಪೂನಂ ಮಹಾಜನ್‌ ಬದಲಿಗೆ 26/11ರ ಮುಂಬೈ ದಾಳಿ ಪ್ರಕರಣದಲ್ಲಿ ವಾದ ಮಂಡಿಸಿದ ವಕೀಲ ಉಜ್ವಲ್‌ ನಿಕಾಮ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

VISTARANEWS.COM


on

Ujjwal Nikam
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿಯು ಅಳೆದು-ತೂಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ. ಹೊಸಬರಿಗೆ ಆದ್ಯತೆ, ವಿವಾದ ಹೊಂದಿರುವ ನಾಯಕರಿಗೆ ಕೊಕ್‌, ಯುವಕರಿಗೆ ಮಣೆ ಸೇರಿ ಹಲವು ರೀತಿಯಲ್ಲಿ ಪ್ರಯೋಗ ಮಾಡುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಮುಂಬೈ ನಾರ್ತ್‌ ಸೆಂಟ್ರಲ್‌ ಲೋಕಸಭೆ ಕ್ಷೇತ್ರದಲ್ಲಿ ಹಾಲಿ ಸಂಸದೆ, ಬಿಜೆಪಿ ನಾಯಕ ಪ್ರಮೋದ್‌ ಮಹಾಜನ್‌ ಅವರ ಪುತ್ರಿ ಪೂನಂ ಮಹಾಜನ್‌ (Poonam Mahajan) ಅವರ ಬದಲಿಗೆ 26/11ರ ಮುಂಬೈ ಉಗ್ರ ದಾಳಿ (26/11 Mumbai Terror Attack) ವಕೀಲ ಉಜ್ವಲ್‌ ನಿಕಾಮ್‌ (Ujjwal Nikam) ಅವರಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು 15ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಉಜ್ವಲ್‌ ನಿಕಾಮ್‌ ಅವರಿಗೆ ಟಿಕೆಟ್‌ ನೀಡಿರುವುದು ಪ್ರಮುಖ ಘೋಷಣೆಯಾಗಿದೆ. ಉಜ್ವಲ್‌ ನಿಕಾಮ್‌ ಅವರು ಬಾಂಬೆ ಹೈಕೋರ್ಟ್‌ ವಕೀಲರಾಗಿದ್ದು, ಇವರು ಮುಂಬೈ ಭಯೋತ್ಪಾದಕ ದಾಳಿಯ ಬಳಿಕ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ (ಪಬ್ಲಿಕ್‌ ಪ್ರಾಸಿಕ್ಯೂಟರ್) ಮಂಡಿಸಿದ್ದರು. ಇವರೀಗ ಮುಂಬೈ ನಾರ್ತ್‌ ಸೆಂಟ್ರಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್‌ ಅವರನ್ನು ಎದುರಿಸಲಿದ್ದಾರೆ.

ಯಾರಿವರು ಉಜ್ವಲ್‌ ನಿಕಾಮ್?

ಉಜ್ವಲ್‌ ನಿಕಾಮ್‌ ಅವರ ಹೆಸರು ಮುಂಬೈ ದಾಳಿ ಪ್ರಕರಣದಲ್ಲಿ ದೇಶಾದ್ಯಂತ ಪಸರಿಸಿದರೂ, ಅವರು ಪ್ರಮುಖ ಪ್ರಕರಣಗಳಲ್ಲಿ ವಾದ ಮಂಡಿಸಿದ್ದಾರೆ. 1993ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ, ಗುಲ್ಶನ್‌ ಕುಮಾರ್‌ ಕೊಲೆ ಪ್ರಕರಣ, 2013ರಲ್ಲಿ ಮುಂಬೈನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ವಾದ ಮಂಡಿಸಿದ್ದಾರೆ. ಅಷ್ಟೇ ಏಕೆ, ಹಾಲಿ ಸಂಸದೆ ಪೂನಂ ಮಹಾಜನ್‌ ಅವರ ತಂದೆ ಪ್ರಮೋದ್‌ ಮಹಾಜನ್‌ ಹತ್ಯೆ ಪ್ರಕರಣದಲ್ಲೂ ಉಜ್ವಲ್‌ ನಿಕಾಮ್‌ ಅವರು ವಾದ ಮಂಡಿಸಿದ್ದರು. ಇವರಿಗೆ 2016ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನೂ ನೀಡಿದೆ.

ಮುಂಬೈ ದಾಳಿ ಕರಾಳ ಅಧ್ಯಾಯ

ಮುಂಬೈನಲ್ಲಿರುವ ತಾಜ್​ ಹೋಟೆಲ್​ಗಳ ಮೇಲೆ 2008ರಲ್ಲಿ ನಡೆದ ಉಗ್ರ ದಾಳಿ ಇಂದಿಗೂ ನಮ್ಮ ಇತಿಹಾಸದಲ್ಲಿ ಕಪ್ಪುಚುಕ್ಕೆಯಾಗಿ ಉಳಿದಿದೆ. ಅದನ್ನೊಂದು ಕರಾಳ ದಿನವೆಂದೇ ಪರಿಗಣಿಸಲಾಗುತ್ತದೆ. ಅಂದು ಲಷ್ಕರೆ ತಯ್ಬಾ ಸಂಘಟನೆಯ 10 ಉಗ್ರರು ಸಮುದ್ರ ಮಾರ್ಗದ ಮೂಲಕ ಮುಂಬಯಿಗೆ ಬಂದು ಗುಂಡಿನ ದಾಳಿ ನಡೆಸಿದ್ದರು. ನವೆಂಬರ್ 26ರಿಂದ 29ರವರೆಗೆ ಭದ್ರತಾ ಪಡೆಗಳು-ಉಗ್ರರ ನಡುವಿನ ಹೋರಾಟ ನಡೆದಿತ್ತು. ಇದರಲ್ಲಿ ಆರು ಮಂದಿ ಅಮೇರಿಕದವರು ಸೇರಿ 166 ಮಂದಿ ಮೃತಪಟ್ಟಿದ್ದರು. ಹಲವು ಯೋಧರು ಕೂಡ ಹುತಾತ್ಮರಾಗಿದ್ದಾರೆ.

ಇದನ್ನೂ ಓದಿ: ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

Continue Reading
Advertisement
IPL 2024
ಕ್ರೀಡೆ5 mins ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Viral News
ವೈರಲ್ ನ್ಯೂಸ್15 mins ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Assault Case
ಕರ್ನಾಟಕ18 mins ago

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Srinivasa Prasad
ಕರ್ನಾಟಕ22 mins ago

Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ

Gold Seized
ಕ್ರೈಂ31 mins ago

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Virat Kohli
ಪ್ರಮುಖ ಸುದ್ದಿ43 mins ago

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

Illegal Cattle Trafficking 9 Accused Arrested in gangavathi
ಕರ್ನಾಟಕ44 mins ago

Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

Congress leader B K Hariprasad latest statement In Gangavathi
ಕೊಪ್ಪಳ46 mins ago

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Kalaburagi Lok Sabha Constituency Congress candidate Radhakrishna Doddamani election campaign
ಯಾದಗಿರಿ49 mins ago

Lok Sabha Election 2024: ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ, ನಿಮ್ಮೆಲ್ಲರ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Narendra Modi
ಕರ್ನಾಟಕ1 hour ago

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20244 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ8 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌