Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ Vistara News
Connect with us

ದೇಶ

Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ

Odisha Train Accident: ಅಪಘಾತ ನಡೆದ ಬಹನಗ ರೈಲು ನಿಲ್ದಾಣ ಬಳಿಯ ಜಾಗದಲ್ಲಿ ಮತ್ತೆ ಹಳಿ ಜೋಡಣೆ ಮಾಡಲಾಗಿದೆ. ರೈಲು ಸಂಚಾರ ಮತ್ತೆ ಆರಂಭವಾಗಿದ್ದು, ಚಲಿಸುತ್ತಿದ್ದ ರೈಲಿಗೆ ಅಶ್ವಿನಿ ವೈಷ್ಣವ್‌ ಅವರು ಕೈ ಮುಗಿದಿದ್ದಾರೆ.

VISTARANEWS.COM


on

Train movement resumes in Odisha
ರೈಲು ಸಂಚಾರ ಬಳಿಕ ರೈಲಿನತ್ತ ಕೈಬೀಸಿದ ಅಶ್ವಿನಿ ವೈಷ್ಣವ್. (ಚಿತ್ರ- ANI)
Koo

ಭುವನೇಶ್ವರ: ಒಡಿಶಾದ ಬಾಲಾಸೋರ್‌ ಜಿಲ್ಲೆ ಬಹನಗ ರೈಲು ನಿಲ್ದಾಣದ ಬಳಿ ತ್ರಿವಳಿ ರೈಲು ಅಪಘಾತ ಸಂಭವಿಸಿ 288 ಜನ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಎರಡು ದಿನದಿಂದ ಅಪಘಾತ ನಡೆದ ಸ್ಥಳವು ಮಸಣದಂತಾಗಿತ್ತು. ಹೆಣಗಳ ರಾಶಿ ಬಿದ್ದಿದ್ದವು. ರೈಲು ಹಳಿಗಳ ಮೇಲೆ ಬೋಗಿಗಳು ಬಿದ್ದ ಚಿತ್ರ ಭಯ ಹುಟ್ಟಿಸುವಂತಿದ್ದವು. ಆದರೆ, ಅಪಘಾತ ನಡೆದು 51 ಗಂಟೆಯಲ್ಲಿಯೇ ಚಿತ್ರಣ ಬದಲಾಗಿದ್ದು, ರೈಲು ಸಂಚಾರ ಆರಂಭವಾಗದೆ.

ಹೌದು, ಅಪಘಾತ ನಡೆದ ಸ್ಥಳದಿಂದ ಶವಗಳನ್ನು ತೆಗೆದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇದಾದ ಬಳಿಕ ಜೆಸಿಬಿಗಳ ಮೂಲಕ ಬಿದ್ದ ಬೋಗಿಗಳನ್ನು ತೆರವುಗೊಳಿಸಿದ್ದು, ಸಾವಿರಾರು ಸಿಬ್ಬಂದಿಯು ಅಪಘಾತ ನಡೆದು 51 ಗಂಟೆಯಲ್ಲಿಯೇ ಎಲ್ಲ ಹಳಿಗಳನ್ನು ಜೋಡಿಸಿ, ಮತ್ತೆ ರೈಲುಗಳು ಸಂಚಾರ ಮಾಡಲು ಅನುಕೂಲ ಮಾಡಿದ್ದಾರೆ. ಈಗ ಅಪಘಾತ ನಡೆದ ಸ್ಥಳದಲ್ಲಿ ರೈಲುಗಳ ಓಡಾಟ ಆರಂಭವಾಗಿದೆ.

ಇದನ್ನೂ ಓದಿ: Odisha Train Accident : ಟಿಕೆಟ್ ರಹಿತ ಪ್ರಯಾಣಿಕರಿಗೂ ಪರಿಹಾರ

36 ಗಂಟೆ ಸ್ಥಳದಲ್ಲೇ ಇದ್ದ ಅಶ್ವಿನಿ ವೈಷ್ಣವ್‌

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಅಪಘಾತ ನಡೆದ ಬಳಿಕದ 51 ಗಂಟೆಯಲ್ಲಿ 36 ಗಂಟೆ ಅಪಘಾತ ನಡೆದ ಸ್ಥಳದಲ್ಲಿಯೇ ಇದ್ದು ಜನರ ರಕ್ಷಣೆಯ ಮೇಲುಸ್ತುವಾರಿ ನೋಡಿಕೊಂಡಿದ್ದಾರೆ. ಹಾಗೆಯೇ, ರಕ್ಷಣಾ ಕಾರ್ಯಾಚರಣೆ ಬಳಿಕವೂ ಅದೇ ಸ್ಥಳದಲ್ಲಿದ್ದು, ಮತ್ತೆ ರೈಲುಗಳ ಸಂಚಾರಕ್ಕೆ ಮಾಡಬೇಕಾದ ವ್ಯವಸ್ಥೆ ಮಾಡಿದ್ದಾರೆ. ಅಧಿಕಾರಿಗಳಿಗೆ ಹಲವು ನಿರ್ದೇಶನ ನೀಡಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಹಳಿಗಳ ದುರಸ್ತಿಯಾಗಿ, ಮತ್ತೆ ರೈಲು ಸಂಚರಿಸಿದ ಬಳಿಕವೇ ಅವರು ಅಲ್ಲಿಂದ ನಿರ್ಗಮಿಸಿದ್ದಾರೆ. ರೈಲು ಸಂಚಾರ ಆರಂಭವಾದ ಬಳಿಕ ಲೋಕೋ ಪೈಲಟ್‌ಗೆ ಕೈ ಬೀಸುವ ಜತೆಗೆ, ರೈಲಿಗೆ ಕೈಮುಗಿದಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದೆ.

ಇನ್ನು ಭೀಕರ ಅಪಘಾತದಲ್ಲಿ ಸಿಲುಕಿರುವ ಪ್ಯಾಸೆಂಜರ್ ರೈಲುಗಳಲ್ಲಿ ಪ್ರಯಾಣಿಸಿದ್ದ ಟಿಕೆಟ್ ರಹಿತ ಪ್ರಯಾಣಿಕರಿಗೂ ಪರಿಹಾರ ನೀಡಲಾಗುವುದು ಎಂದು ರೈಲ್ವೆ ಇಲಾಖೆ ಭಾನುವಾರ ತಿಳಿಸಿದೆ. ಇದು ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿದೆ ಎಂದು ಅಧಿಕಾರಿಗಳು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. “ಪ್ರಯಾಣಿಕರು ಟಿಕೆಟ್ ಇಲ್ಲದೇ ಪ್ರಯಾಣ ಮಾಡಿದ್ದರೂ ಅವರಿಗೆ ಪರಿಹಾರ ನೀಡಲಾಗುವುದು” ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಹೇಳಿದ್ದಾರೆ.

ಅದೇ ರೀತಿ ಸುದ್ದಿಗಾರರೊಂದಿಗೆ ಮಾತನಾಡಿದ ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ ಸದಸ್ಯ ಜಯ ವರ್ಮಾ ಸಿನ್ಹಾ, ಆಸ್ಪತ್ರೆಗಳಲ್ಲಿ ದಾಖಲಾದ ಪ್ರತಿಯೊಬ್ಬ ಗಾಯಾಳುವಿಗೆ ತಮ್ಮ ಸಂಬಂಧಿಕರು ಅಥವಾ ಆಪ್ತರನ್ನು ಪತ್ತೆ ಹಚ್ಚುವುದಕ್ಕೆ ನೆರವಾಲು ಸ್ಕೌಟ್ ಅಥವಾ ಗೈಡ್ಸ್​​ ನೆರವು ನೀಡಲಾಗಿದೆ ಎಂಬುದಾಗಿ ಹೇಳಿದ್ದಾರೆ.

ಸಹಾಯವಾಣಿ ಸಂಖ್ಯೆ 139 ಲಭ್ಯವಿದೆ. ಈ ಸಂಪರ್ಕ ಸಂಖ್ಯೆ ಮೂಲಕ ಹಿರಿಯ ರೈಲ್ವೆ ಅಧಿಕಾರಿಗಳು ಕರೆಗಳಿಗೆ ಉತ್ತರಿಸುತ್ತಿದ್ದಾರೆ. ಸಾಧ್ಯವಾದಷ್ಟು ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರ್ಮಾ ಇದೇ ವೇಳೆ ಮಾಹಿತಿ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ

Maharashtra News: ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಮರಣ ಮೃದಂಗ ಬಾರಿಸುತ್ತಿರುವ ಮಧ್ಯೆಯೇ ಸಂಭಾಜಿನಗರದ ಮತ್ತೊಂದು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಸಾಯುತ್ತಿರುವ ಪ್ರಕರಣಗಳು ವರದಿಯಾಗಿವೆ.

VISTARANEWS.COM


on

Edited by

Maharashtra News, another hospital witnessed for 10 patients death
Koo

ಮುಂಬೈ: ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರದ (Maharashtra) ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ರೋಗಿಗಳ ಸಾವು ವರದಿಯಾಗುತ್ತಿರುವ ಬೆನ್ನಲ್ಲೇ ಸಂಭಾಜಿನಗರದ ಘಾಟಿ ಆಸ್ಪತ್ರೆಯಲ್ಲಿ (Ghati Hospital) 24 ಗಂಟೆಯಲ್ಲಿ 10ಕ್ಕಿಂತ ಹೆಚ್ಚು ರೋಗಿಗಳು ಮೃತಪಟ್ಟಿದ್ದಾರೆ. ಈ ಹಿಂದೆ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ (Nanded Government hospital) 48 ಗಂಟೆಯಲ್ಲಿ ಶಿಶುಗಳು ಸೇರಿದಂತೆ 34 ರೋಗಿಗಳು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರವು, ತನಿಖೆಗೆ ಸಮಿತಿಯನ್ನು (Probe Committee) ರಚಿಸುವುದಾಗಿ ಘೋಷಣೆ ಮಾಡಿದೆ(Maharashtra News).

ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಜರಗುತ್ತಿರುವ ಘಟನೆಗಳು ಭಯಾನಕವಾಗಿವೆ. ಅದೇ ರೀತಿ ಘಾಟಿ ಆಸ್ಪತ್ರೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ. ಇಬ್ಬರು ಮಕ್ಕಳು ಸೇರಿದಂತೆ 8 ರೋಗಿಗಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ನಾಂದೇಡ್ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಮೃತಪಟ್ಟಿದ್ದಾರೆಂಬ ವರ್ತಮಾನವಿದೆ. ಇದೆಲ್ಲವೂ ಭಯಾನಕವಾಗಿದೆ ಎಂದು ಶಿವಸೇನೆಯ ನಾಯಕ ಆದಿತ್ಯ ಠಾಕ್ರೆ ಅವರು ಟ್ವೀಟ್ ಮಾಡಿದ್ದಾರೆ.

ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಸರಣಿ ಸಾವು

ಮಹಾರಾಷ್ಟ್ರದ (Maharashtra) ನಾಂದೇಡ್ ಜಿಲ್ಲೆಯ (Nanded District) ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 12 ಶಿಶು (Newborns) ಸೇರಿ 24 ರೋಗಿಗಳು ಮೃತಪಟ್ಟ ಘಟನೆಯು ಮಹಾರಾಷ್ಟ್ರದಲ್ಲಿ ಭಾರೀ ಆಕ್ರೋಶಕ್ಕೆಕಾರಣವಾಗಿತ್ತು. ಇದರ ಬೆನ್ನಲ್ಲೇ ಮತ್ತೆ 7 ರೋಗಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಅವಘಡಕ್ಕೆ ಸರ್ಕಾರಿ ಆಸ್ಪತ್ರೆ ಎದುರಿಸುತ್ತಿರುವ ಸಿಬ್ಬಂದಿ ಹಾಗೂ ಔಷಧಗಳ ಕೊರತೆಯ ಕಾರಣ ಎಂದು ನಾಂದೇಡ್ ಶಂಕರ್ ರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯ ಡೀನ್ ಹೇಳಿದ್ದಾರೆ(Shankarrao Chavan Government Hospital Dean). ಮೃತಪಟ್ಟ 12 ವಯಸ್ಕರ ಪೈಕಿ ಹೆಚ್ಚಿನವರು ಹಾವು ಕಡಿತಕ್ಕೊಳಗಾದವರಿದ್ದಾರೆ ಎಂದು ಅವರು ತಿಳಿಸಿದ್ದರು.

ಈ ಸುದ್ದಿಯನ್ನೂ ಓದಿ: Maharashtra: ಔಷಧ ಕೊರತೆ, ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 12 ಶಿಶುಗಳು ಸೇರಿ 24 ರೋಗಿಗಳ ಸಾವು!

ಕಳೆದ 24 ಗಂಟೆಗಳಲ್ಲಿ ಆರು ಗಂಡು ಮತ್ತು ಆರು ಹೆಣ್ಣು ಶಿಶುಗಳು ಸಾವನ್ನಪ್ಪಿವೆ. ಹನ್ನೆರಡು ವಯಸ್ಕರು ವಿವಿಧ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ, ಈ ಪೈಕಿ ಹೆಚ್ಚಿನವರು ಹಾವು ಕಡಿತದಿಂದ ಬಳಲುತ್ತಿದ್ದರು. ವಿವಿಧ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದರಿಂದ ಆಸ್ಪತ್ರೆಯು ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಅವರು ಆಸ್ಪತ್ರೆಯ ಡೀನ್ ಹೇಳಿದ್ದರು.

ಈ ಆಸ್ಪತ್ರೆಯು ತೃತೀಯ ಹಂತದ ಆರೈಕೆ ಕೇಂದ್ರವಾಗಿದೆ. ಅಲ್ಲದೇ, 70ರಿಂದ 80 ಕಿ.ಮೀ ವ್ಯಾಪ್ತಿಯಲ್ಲಿನ ಏಕೈಕ ಸರ್ಕಾರಿ ಆಸ್ಪತ್ರೆಯಾಗಿದೆ. ಹಾಗಾಗಿ, ದೂರದ ಸ್ಥಳಗಳಿಂದ ರೋಗಿಗಳು ಈ ಆಸ್ಪತ್ರೆಗೆ ಆಗಮಿಸುತ್ತಾರೆ. ಹೀಗೆ, ರೋಗಿಗಳು ಸಂಖ್ಯೆ ಹೆಚ್ಚಳವಾದಾಗ ಅವರನ್ನು ಈ ಆಸ್ಪತ್ರೆಯಲ್ಲಿ ನಿರ್ವಹಣೆ ಮಾಡುವುದು ಕಷ್ಟ. ಆಗ ಸಮಸ್ಯೆಗಳು ಶುರುವಾಗುತ್ತವೆ ಎಂದು ಅವರು ತಿಳಿಸಿದ್ದಾರೆ. ಹಾಫ್ಕಿನ್ ಎಂಬ ಸಂಸ್ಥೆಯಿದ್ದು, ಇಲ್ಲಿಂದ ಔಷಧಿಗಳನ್ನು ಖರೀದಿಸಬೇಕು. ಆದರೆ ಈ ಸಂಸ್ಥೆಯಿಂದ ಔಷಧಗಳ ಖರೀದಿ ಸಾಧ್ಯವಾಗಿಲ್ಲ. ಆಗ ನಾವು ಸ್ಥಳೀಯವಾಗಿ ಔಷಧಗಳನ್ನು ಖರೀದಿಸಿ ರೋಗಿಗಳಿಗೆನೀಡಿದ್ದೇವೆ ಎಂದು ಡೀನ್ ಅವರು ತಿಳಿಸಿದ್ದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

Punjab Debt: 47,107 ಕೋಟಿ ರೂ. ಸಾಲದ ಪೈಕಿ ಅರ್ಧದಷ್ಟು ಬಡ್ಡಿ ಪಾವತಿಗೆ ಬಳಕೆ ಎಂದ ಪಂಜಾಬ್ ಸಿಎಂ

Punjab Debt: ಆಪ್ ಸರ್ಕಾರವು ಮಿತಿಮೀರಿ ಸಾಲ ಮಾಡುತ್ತಿದ್ದು, ಹಣದ ಬಳಕೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

VISTARANEWS.COM


on

Edited by

Bhagwant Mann
Koo

ನವದೆಹಲಿ: ಪಂಜಾಬ್‌ನಲ್ಲಿ (Punjab) ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿ (Aam Aadmi Party Government) ಸರ್ಕಾರವು, ಕಳೆದ ಒಂದೂವರೆ ವರ್ಷದಲ್ಲಿ ಮಾಡಿದ ಸಾಲದ ಪೈಕಿ ಅರ್ಧದಷ್ಟು ಹಣವನ್ನು ಬಡ್ಡಿಯನ್ನು ನೀಡಲು ಬಳಸುತ್ತಿರುವುದಾಗಿ ಹೇಳಿದೆ(Interest Payment). ಪಂಜಾಬ್‌ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ (Punjab Governor) ಅವರು ಸಾಲದ ಮಾಹಿತಿಯನ್ನು ನೀಡುವಂತೆ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕೋರಿದ್ದರು(CM Bhagwant Mann). ಇದಾದ ಮಾರನೇ ದಿನವಾಗಿ ಮೂರು ಪುಟಗಳ ಮಾಹಿತಿಯನ್ನು ನೀಡಿರುವ ಸಿಎಂ ಭಗವಂತ್ ಮಾನ್ ಅವರು, ಕಳೆದ ಒಂದೂವರೆ ವರ್ಷದಲ್ಲಿ ಪಂಜಾಬ್ ಸರ್ಕಾರವು 47,107.6 ಕೋಟಿ ರೂ. ಸಾಲ ಮಾಡಿದೆ. ಈ ಪೈಕಿ ಅರ್ಧದಷ್ಟು ಹಣವನ್ನು ಬಡ್ಡಿ ಪಾವತಿಸಲು ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.

2022 ಏಪ್ರಿಲ್ 1ರಿಂದ 2023ರ ಆಗಸ್ಟ್ 31ರ ವರೆಗೆ ಪಂಜಾಬ್ ಸರ್ಕಾರವು 47,107 ಕೋಟಿ ರೂಪಾಯಿಯನ್ನು ಸಾಲ ಮಾಡಿದೆ. ಈ ಮೊತ್ತವು, ಮಾರುಕಟ್ಟೆ ಸಾಲ ಮಾತ್ರವಲ್ಲದೇ, ಭಾರತ ಸರ್ಕಾರದಿಂದ ಅನುಮತಿಸಲಾದ ಬಾಹ್ಯ ನೆರವಿನ ಯೋಜನೆಯ ಸಾಲಗಳು ಮತ್ತು ಬಂಡವಾಳ ಸ್ವತ್ತುಗಳ ಸೃಷ್ಟಿಗೆ ವಿಶೇಷ ನೆರವಿನ ಅಡಿಯಲ್ಲಿ ನಬಾರ್ಡ್‌ನಿಂದ ದೀರ್ಘಾವಧಿಯ ಸಾಲ ಕೂಡ ಸೇರಿದೆ. ಒಟ್ಟು ಸಾಲದ ಪೈಕಿ 32,447 ಕೋಟಿ ರೂಪಾಯಿ 2022-23ರ ಹಣಕಾಸು ವರ್ಷದಲ್ಲಿ ಸಾಲವನ್ನು ತೆಗೆದುಕೊಂಡಿದ್ದರೆ, 14,660 ಕೋಟಿ ರೂಪಾಯಿಯನ್ನು ಪ್ರಸಕ್ತ ಸಾಲಿನ ಏಪ್ರಿಲ್ 1 ಮತ್ತು ಆಗಸ್ಟ್ 31ರ ನಡುವೆ ಸಾಲ ಪಡೆಯಲಾಗಿದೆ. ಒಟ್ಟು ಸಾಲದ ಪೈಕಿ 27016 ಕೋಟಿ ರೂಪಾಯಿಯನ್ನು ಸರಕಾರಿ ಸಾಲದ ಬಡ್ಡಿ ಪಾವತಿಗಾಗಿ ಬಳಸಲಾಗುತ್ತಿದೆ ಎಂದು ರಾಜ್ಯಪಾಲರಿಗ ಬರೆದ ಪತ್ರದಲ್ಲಿ ಸಿಎಂ ಭಗವಂತ್ ಮಾನ್ ಅವರು ತಿಳಿಸಿದ್ದಾರೆ.

ಪಂಜಾಬ್ ರಾಜ್ಯಪಾಲ ಪುರೋಹಿತ್ ಅವರು ಸೆಪ್ಟೆಂಬರ್ 21ರಂದು ಪತ್ರ ಬರೆದು, ತನ್ನ ಅವಧಿಯಲ್ಲಿ ಆಪ್ ಮಾಡಿರುವ 50 ಸಾವಿರ ಕೋಟಿ ರೂ. ಸಾಲದ ಬಳಕೆಯ ಮಾಹಿತಿ ನೀಡುವಂತೆ ಕೋರಿದ್ದರು. ನಿಮ್ಮ ಆಡಳಿತದಲ್ಲಿ ಪಂಜಾಬ್ ಸಾಲದ ಮೊತ್ತವು 50 ಸಾವಿರ ಕೋಟಿ ರೂ.ಗೆ ಏರಿಕೆಯಾಗಿದೆ. ಈ ಬೃಹತ್ ಮೊತ್ತ ಸಾಲದ ಬಳಕೆಯ ವಿವರಗಳನ್ನು ನನಗೆ ಒದಗಿಸಬಹುದು. ಇದರಿಂದ ಹಣವನ್ನು ಸರಿಯಾಗಿ ಬಳಸಲಾಗಿದೆ ಎಂದು ನಾನು ಪ್ರಧಾನಿಗೆ ಮನವರಿಕೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದರು.

ಈ ಸುದ್ದಿಯನ್ನೂ ಓದಿ: Punjab CM | ದಿನಗೂಲಿ ಹೆಚ್ಚಳಕ್ಕೆ ಆಗ್ರಹಿಸಿ ಪಂಜಾಬ್ ಸಿಎಂ ಭಗವಂತ್ ಮಾನ್‌ ಮನೆಗೆ ದಲಿತ ಕೃಷಿ ಕಾರ್ಮಿಕರ ಮುತ್ತಿಗೆ

ಆಪ್ ಸರ್ಕಾರವು ಬೃಹತ್ ಮೊತ್ತದ ಹಣ ಬಳಕೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡಿಲ್ಲ ಮತ್ತು ಬೇಜವಾಬ್ದಾರಿಯಾಗಿ ವೆಚ್ಚ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ವಿಶೇಷವಾಗಿ ಕಾಂಗ್ರೆಸ್ ಪಕ್ಷವು ಆಪ್ ವಿರುದ್ಧ ಟೀಕೆ ಮಾಡಿತ್ತು. 2021-22ರ ಮುಕ್ತಾಯದ ಹೊತ್ತಿಗೆ ಪಂಜಾಬ್ ಸರ್ಕಾರವು 2.82 ಕೋಟಿ ರೂ. ಸಾಲ ಮಾಡಿತ್ತು. ಆ ಸಾಲದ ಮೊತ್ತವು 2022-23ರ ಹೊತ್ತಿಗೆ 3.12 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ದೇಶದ ಅತಿ ಹೆಚ್ಚು ಸಾಲ ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಪಂಜಾಬ್ ಕೂಡ ಒಂದಾಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

PM Narendra Modi: ಜಾತಿ ಗಣತಿಯಿಂದ ಹಿಂದೂಗಳಲ್ಲಿ ಒಡಕು ಮೂಡಿಸುತ್ತಿರುವ ಕಾಂಗ್ರೆಸ್: ಪ್ರಧಾನಿ ಮೋದಿ ವಾಗ್ದಾಳಿ

PM Narendra Modi: ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆಯನ್ನು ಎದುರಿಸಲಿರುವ ಛತ್ತೀಸ್‌ಗಢದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

VISTARANEWS.COM


on

Edited by

Congress is trying divided hindus Says PM narendra modi
Koo

ಜಗದಲ್‌ಪುರ, ಛತ್ತೀಸ್‌ಗಢ: ಜಾತಿ ಗಣತಿಯ (caste census) ಮೂಲಕ ಕಾಂಗ್ರೆಸ್ ಪಕ್ಷವು (Congress Party) ಹಿಂದೂಗಳಲ್ಲಿ ಒಡಕು ಮೂಡಿಸುತ್ತಿದೆ (Dividing Hindus) ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹೇಳಿದ್ದಾರೆ. ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ(Chhattisgarh Assembly Election) ನಡೆಯಲಿರುವ ಛತ್ತೀಸ್‌ಗಢ ಜಗದಲ್‌ಪುರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಸಂಪನ್ಮೂಲಗಳ ಮೇಲಿನ ಹಕ್ಕನ್ನು ಬಡವರು ಹೊಂದಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ನಿನ್ನೆ ರಾಜಸ್ಥಾನದಲ್ಲಿ ಮಾತನಾಡಿದ್ದ ಪ್ರಧಾನಿ ಅವರು, ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ಜಾತಿ ಗಣತಿಯ ಮೂಲಕ ಪ್ರತಿಪಕ್ಷಗಳು ದೇಶವನ್ನು ಒಡೆಯುವ ಸಂಚು ರೂಪಿಸಿವೆ ಎಂದು ಹೇಳಿದ್ದರು.

ಜನಸಂಖ್ಯೆ ಎಷ್ಟಿದೆಯೋ ಅಷ್ಟೇ ಹಕ್ಕು ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಛತ್ತೀಸ್‌ಗಢದ ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡುವ ಇತಿಹಾಸವು ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದು ಹೇಳಿದರು. ದೇಶದ ಅತಿದೊಡ್ಡ ಜನಸಂಖ್ಯೆ ಎಂದರೆ ಬಡವರು ಮಾತ್ರ. ಅವರಿಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.

ಈ ಹಿಂದೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಅಲ್ಪಸಂಖ್ಯಾತರದ್ದು ಎಂದು ಹೇಳಿದ್ದರು. ಈಗ ಕಾಂಗ್ರೆಸ್ ಪಕ್ಷವು ಹೆಚ್ಚು ಜನಸಂಖ್ಯೆಯನ್ನು ಹೊಂದಿದ ಸಮುದಾಯಕ್ಕೆ ಮೊದಲ ಹಕ್ಕು ಎಂದು ಹೇಳುತ್ತಿದೆ. ಹಾಗಾದರೆ, ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರ ಹಕ್ಕನ್ನು ಕಸಿದುಕೊಳ್ಳಲು ಹುನ್ನಾರ ನಡೆಸುತ್ತಿದೆಯೇ ಎಂದು ವ್ಯಂಗ್ಯವಾಗಿ ಕಾಂಗ್ರೆಸ್‌ ಪಕ್ಷಕ್ಕೆ ತಿವಿದರು.

ಈ ಸುದ್ದಿಯನ್ನೂ ಓದಿ: PM Narendra Modi: ಪ್ರಧಾನಿ ಮೋದಿ ಗಿಫ್ಟ್ ನಿಮಗೂ ಬೇಕಾ? ಹಾಗಾದ್ರೆ, ಆನ್‌ಲೈನ್‌ ಹರಾಜಿನಲ್ಲಿ ಭಾಗವಹಿಸಿ

ಕಾಂಗ್ರೆಸ್ ಪಕ್ಷವು ದೇಶವನ್ನು ನಾಶ ಮಾಡುವ ಪಣ ತೊಟ್ಟಂತೆ ಕಾಣುತ್ತಿದೆ. ಹಿಂದೂಗಳನ್ನು ವಿಭಜಿಸಿ, ಸಮಾಜದಲ್ಲಿ ತಾರತಮ್ಯವನ್ನು ಹೆಚ್ಚಿಸುವ ಪ್ರಯತ್ನವನ್ನು ಮಾಡುತ್ತಿದೆ. 70 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು, ಬಡತನವನ್ನು ಬಿಟ್ಟು ದೇಶಕ್ಕೆ ಬೇರೇನೂ ಕೊಟ್ಟಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಈಗ ದೇಶವಿರೋಧಿಗಳ ಜತೆ ಸೇರಿಕೊಂಡಿದೆ. ದೇಶವನ್ನು ನಾಶ ಮಾಡಲು ಹೊರಟಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಮೂಲ ಕಾಂಗ್ರೆಸ್ ಜನರು ನಡೆಸುತ್ತಿಲ್ಲ. ಇದನ್ನೆಲ್ಲ ನೋಡಿದ ಕಾಂಗ್ರೆಸ್‌ನ ಹಿರಿಯ ನಾಯಕರು ಕೇಳಲೂ ಇಲ್ಲ, ಮಾತನಾಡುವ ಧೈರ್ಯವೂ ಇಲ್ಲ ಎಂದು ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ. ಈಗ ಕಾಂಗ್ರೆಸ್ ಅನ್ನು ಹೊರಗುತ್ತಿಗೆ ನೀಡಲಾಗಿದೆ ಎಂದು ಹೇಳಿದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

Delhi Earthquake: ದೆಹಲಿಯ ಸುತ್ತಮುತ್ತ ಪ್ರಬಲ ಭೂಕಂಪ; ಮನೆಯಿಂದ ಓಡಿ ಬಂದ ಜನ!

Delhi Earthquake: ದೆಹಲಿ ಹಾಗೂ ರಾಷ್ಟ್ರ ರಾಜಧಾನಿಯ ಹಲವೆಡೆ ಮಂಗಳವಾರ ಮಧ್ಯಾಹ್ನ ಭೂಮಿ ಕಂಪಿಸಿದೆ. ಭೂಕಂಪನದ ಅನುಭವವಾಗುತ್ತಲೇ ಜನ ಆತಂಕದಲ್ಲಿ ಮನೆಯಿಂದ ಹೊರಗೆ ಬಂದು ನಿಂತ ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡಿವೆ.

VISTARANEWS.COM


on

Edited by

Earthquake in Delhi
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ (NCR) ಹಲವೆಡೆ ಮಂಗಳವಾರ (ಅಕ್ಟೋಬರ್‌ 3) ಭೂಕಂಪ (Delhi Earthquake) ಸಂಭವಿಸಿದೆ. ರಿಕ್ಟರ್‌ ಮಾಪನದಲ್ಲಿ 4.6ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ (National Centre for Seismology) ಮಾಹಿತಿ ನೀಡಿದೆ.

ಮಧ್ಯಾಹ್ನ 2.20ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದ ಪರಿಣಾಮವು ದೇಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಉಂಟಾಗಿದೆ ಎಂದು ತಿಳಿಸಿದೆ. ಭೂಮಿಯ ಮೇಲ್ಮೈನ 5 ಕಿಲೋಮೀಟರ್‌ ಕೆಳಗೆ ಭೂಮಿ ನಲುಗಿದೆ ಎಂದು ಮಾಹಿತಿ ನೀಡಿದೆ.

ಉತ್ತರಾಖಂಡದ ಡೆಹ್ರಾಡೂನ್‌, ಉತ್ತರ ಪ್ರದೇಶದ ನೊಯ್ಡಾ, ಹರಿಯಾಣ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗುತ್ತಲೇ ಜನ ಮನೆಯಿಂದ ಹೊರಗೆ ಬಂದಿದ್ದಾರೆ. ಅಪಾರ್ಟ್‌ಮೆಂಟ್‌ಗಳು, ಮನೆಗಳು ಸೇರಿ ಹಲವೆಡೆ ಜನ ಕಟ್ಟಡದ ಹೊರಗೆ ಬಂದು ನಿಂತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ತೀವ್ರ ಪ್ರಮಾಣದಲ್ಲಿಯೇ ಭೂಕಂಪ ಸಂಭವಿಸಿದರೂ ಯಾವುದೇ ಸಾವು-ನೋವು ಸಂಭವಿಸಿಲ್ಲ. ಹಾಗೆಯೇ, ದೊಡ್ಡ ದೊಡ್ಡ ಕಟ್ಟಡಗಳಿಗೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಭೂಕಂಪದ ಕುರಿತು ಸಾರ್ವಜನಿಕರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಕೆಲವರು ವಿಡಿಯೊಗಳನ್ನೇ ಶೇರ್‌ ಮಾಡಿದ್ದಾರೆ. ಮನೆಯಲ್ಲಿ ಫ್ಯಾನ್‌ಗಳು ಅಲುಗಾಡಿದ ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Google: ಭಾರತೀಯ ಬಳಕೆದಾರರಿಗೆ ಭೂಕಂಪ ಎಚ್ಚರಿಕೆ ಸಿಸ್ಟಮ್ ಫೀಚರ್ ಆರಂಭಿಸಿದ ಗೂಗಲ್

ಭೂಕಂಪ ಸಂಭವಿಸುತ್ತಲೇ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಎಚ್ಚರಿಸಿದರು. ಭೂಮಿಯ ಅನುಭವವಾಗುತ್ತಲೇ ಜನ ಮನೆಯಿಂದ ಹೊರಗೆ ಬರಬೇಕು. ಯಾರು ಕೂಡ ಎಲೆವೇಟರ್‌ಗಳನ್ನು ಬಳಸಬಾರದು. ಯಾವುದೇ ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಿ ಎಂದು ಪೋಸ್ಟ್‌ ಮಾಡಿದ್ದಾರೆ.

Continue Reading
Advertisement
caste census repot image
ಕರ್ನಾಟಕ9 mins ago

Caste Census Report : ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?

Sachin tendulkar
ಕ್ರಿಕೆಟ್11 mins ago

ICC World Cup 2023 : ಕ್ರಿಕೆಟ್​ ದೇವರು ಸಚಿನ್​ಗೆ ಕ್ರಿಕೆಟ್​​ ವಿಶ್ವಕಪ್​ನ ವಿಶೇಷ ಗೌರವ

Eid Milad procession
ಕರ್ನಾಟಕ33 mins ago

Sagara News: ಸಾಗರದಲ್ಲಿ ತಲ್ವಾರ್‌ ಝಳಪಿಸಿ, ಹಿಂದು ವಿರೋಧಿ ಘೋಷಣೆ; ಮೂವರ ಬಂಧನ

gandhi
ಬಾಲಿವುಡ್42 mins ago

Gandhi Jayanti: ಗಾಂಧಿ ಪಾತ್ರಕ್ಕಾಗಿ 30 ಕೆಜಿ ತೂಕ ಕಳೆದುಕೊಂಡಿದ್ದೆ; ಬೊಮನ್‌ ಇರಾನಿ

Maharashtra News, another hospital witnessed for 10 patients death
ದೇಶ47 mins ago

Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ

Arshad Nadeem
ಕ್ರೀಡೆ49 mins ago

Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ

rashmika
South Cinema1 hour ago

Rashmika Mandanna: ಮತ್ತೊಮ್ಮೆ ʼರಂಜಿತಮೆʼ, ʼಸಾಮಿʼ ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ!

Annu Rani
ಕ್ರೀಡೆ1 hour ago

Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ

Old Pension Scheme Madhu Bangarappa
ಕರ್ನಾಟಕ2 hours ago

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

No Rain Girl waiting For rain and holding Umbrella
ಉಡುಪಿ2 hours ago

karnataka weather forecast : ಮುಕ್ಕಾಲು ರಾಜ್ಯಕ್ಕೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ5 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ6 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ1 day ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ2 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌