ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಪಾಕಿಸ್ತಾನದಿಂದ ನುಸುಳಿದ್ದ 2 ಲಷ್ಕರೆ ಉಗ್ರರ ಹತ್ಯೆ - Vistara News

ದೇಶ

ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಪಾಕಿಸ್ತಾನದಿಂದ ನುಸುಳಿದ್ದ 2 ಲಷ್ಕರೆ ಉಗ್ರರ ಹತ್ಯೆ

ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಹೊಂಚು ಹಾಕಿದ್ದ ಇಬ್ಬರು ಲಷ್ಕರೆ ಉಗ್ರರನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ. ಉಗ್ರರಲ್ಲೊಬ್ಬ ಪಾಕಿಸ್ತಾನದಿಂದ ನುಸುಳಿದ್ದ.

VISTARANEWS.COM


on

Kashmir Encounter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಅಮರನಾಥ ಯಾತ್ರೆಗೆ ಅಡ್ಡಿಪಡಿಸುವ ಉದ್ದೇಶದಿಂದ ಪಾಕಿಸ್ತಾನದಿಂದ ನುಸುಳಿದ್ದ ಲಷ್ಕರೆ ತೈಬಾದ ಉಗ್ರ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಜಮ್ಮು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.

ಈ ಉಗ್ರರು ಜೂನ್‌ 30ರಿಂದ ಆರಂಭವಾಗುವ ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಹೊಂಚು ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ. ಕಾರ್ಯಾಚರಣೆಯ ವೇಳೆಯಲ್ಲಿ ಒಬ್ಬ ಪೊಲೀಸ್‌ಗೆ ಗಾಯವಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಈ ಎನ್‌ಕೌಂಟರ್‌ ಅನ್ನು ಉಗ್ರ ದಮನ ಕಾರ್ಯಾಚರಣೆಯಲ್ಲಿನ ದೊಡ್ಡ ಯಶಸ್ಸು ಎಂದು ಕಾಶ್ಮೀರ ಇನ್ಸ್‌ಪೆಕ್ಟರ್‌ ಜನರಲ್‌ ವಿಜಯ್‌ ಕುಮಾರ್‌ ತಿಳಿಸಿದ್ದಾರೆ. ಹತರಾದ ಉಗ್ರರಲ್ಲಿ ಒಬ್ಬಾತ ಪಾಕಿಸ್ತಾನದ ಫೈಸಲಾಬಾದ್‌ ನಿವಾಸಿ, ಉಗ್ರ ಅಬ್ದುಲ್ಲ ಗೌಜ್ರಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸ್ಥಳೀಯ ಉಗ್ರ ಅದಿಲ್‌ ಹುಸೇನ್‌ ಆಗಿದ್ದಾನೆ.

ಘಟನೆ ನಡೆದ ಸ್ಥಳದಲ್ಲಿ ಎರಡು ಎಕೆ-47 ರೈಫಲ್‌ಗಳು, ಇತರ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

Lok Sabha Election: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಜೆಡಿ ಸೀಟು ಹಂಚಿಕೆ ಮಾಡಿಕೊಂಡಿವೆ. ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರಗಳು ಎಂಬ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Rahul Gandhi And Tejashwi Yadav
Koo

ಪಟನಾ: ಲೋಕಸಭೆ ಚುನಾವಣೆಗೆ (Lok Sabha Election) ಇಂಡಿಯಾ ಒಕ್ಕೂಟವೂ (India Bloc) ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅಥವಾ ಮಹಾಘಟಬಂಧನದ ಪಕ್ಷಗಳು ಸೀಟು ಹಂಚಿಕೆ ಮಾಡಿಕೊಂಡಿವೆ. ಆರ್‌ಜೆಡಿಯು (RJD) 26 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಇನ್ನು ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಎಡ ಪಕ್ಷವು ಐದು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿವೆ. ಇದರೊಂದಿಗೆ ಇಂಡಿಯಾ ಒಕ್ಕೂಟದಲ್ಲಿ ಬಿಹಾರದಲ್ಲಿ ಒಮ್ಮತ ಮೂಡಿದಂತಾಗಿದೆ.

ಕಿಶನ್‌ ಗಂಜ್‌ ಹಾಗೂ ಪಟನಾ ಸಾಹಿಬ್‌ ಕ್ಷೇತ್ರಗಳು ಕಾಂಗ್ರೆಸ್‌ ಪಾಲಾಗಿವೆ. ಪೂರ್ಣಿಯಾ ಹಾಗೂ ಕಟಿಹಾರ್‌ನಲ್ಲಿ ಜೆಡಿಯು ಗೆಲುವು ಸಾಧಿಸಿದ್ದು, ಪೂರ್ಣಿಯಾದಲ್ಲಿ ಆರ್‌ಜೆಡಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮೊದಲು ಪೂರ್ಣಿಯಾ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ರಾಜ್ಯಸಭೆ ಸದಸ್ಯೆ ರಂಜೀತ್‌ ರಂಜನ್‌ ಅವರ ಪತಿ ಪಪ್ಪು ಯಾದವ್‌ ಅವರು ಇಲ್ಲಿ ಸ್ಪರ್ಧಿಸಲಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಪಪ್ಪು ಯಾದವ್‌ ಕೂಡ ಟಿಕೆಟ್‌ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಬಿಹಾರದಲ್ಲಿ ಲೋಕ ಸಭಾ ಚುನಾವಣೆಗೆ ಎನ್​ಡಿಎ ಬಣದ ಸೀಟು ಹಂಚಿಕೆ ಒಪ್ಪಂದ ನಡೆದಿದೆ. ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಿತ್ರ ಪಕ್ಷ ಜೆಡಿಯು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಪ್ರಕಟಿಸಿದ್ದಾರೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ 17, ಜೆಡಿಯು 16, ಎಲ್​ಜೆಪಿ (ರಾಮ್ ವಿಲಾಸ್) 5, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ತಲಾ 1 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ತಾವ್ಡೆ ಎಎನ್ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

ಬಿಹಾರದ ಯಾವ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧಿಸಲಿದೆ

  1. ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): ವೈಶಾಲಿ, ಹಾಜಿಪುರ, ಸಮಸ್ತಿಪುರ, ಖಗರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಎಲ್ಜೆಪಿ (ರಾಮ್ ವಿಲಾಸ್) ಸ್ಪರ್ಧಿಸಲಿದೆ.
  2. ಹಿಂದೂಸ್ತಾನಿ ಅವಾಮ್ ಮೋರ್ಚಾ ಗಯಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ
  3. ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಕರಕಾಟ್ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

LIC Offices: ಮಾರ್ಚ್‌ 30 ಹಾಗೂ 31ರಂದು ಬ್ಯಾಂಕ್‌ಗಳು ಮಾತ್ರವಲ್ಲ ಭಾರತೀಯ ಜೀವ ವಿಮಾ ನಿಗಮದ ಕಚೇರಿಗಳು ಕಾರ್ಯನಿರ್ವಹಿಸಲಿವೆ.

VISTARANEWS.COM


on

LIC
Koo

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಕೊನೆಯ ದಿನವು ಭಾನುವಾರವೇ ಇರುವುದರಿಂದ ಬ್ಯಾಂಕ್‌ಗಳು (Banks) ಶನಿವಾರ ಹಾಗೂ ಭಾನುವಾರವೂ (ಮಾರ್ಚ್‌ 30, 31) ಕಾರ್ಯನಿರ್ವಹಿಸಲಿವೆ. ಬ್ಯಾಂಕ್‌ಗಳು ಮಾತ್ರವಲ್ಲ, ಭಾರತೀಯ ಜೀವ ವಿಮಾನ ನಿಗಮದ (LIC Offices) ಕಚೇರಿಗಳು ಕೂಡ ಶನಿವಾರ ಹಾಗೂ ಭಾನುವಾರ ಕಾರ್ಯನಿರ್ವಹಿಸಲಿವೆ. ಮಾರ್ಚ್‌ 30 ಹಾಗೂ 31 ಪ್ರಸಕ್ತ ಹಣಕಾಸು ವರ್ಷದ (Fiscal Year) ಕೊನೆಯ ದಿನಗಳಾಗಿರುವ ಕಾರಣ ಗ್ರಾಹಕರಿಗೆ ತೊಂದರೆಯಾಗಬಾರದು ಎಂದು ವೀಕೆಂಡ್‌ನಲ್ಲೂ ಎಲ್‌ಐಸಿ ಕಚೇರಿಗಳು ಕಾರ್ಯನಿರ್ವಹಿಸಲಿವೆ.

ವಿತ್ತೀಯ ವರ್ಷದ ಕೊನೆಯ ಎರಡು ದಿನಗಳಂದು ಆದಾಯ ತೆರಿಗೆ ಇಲಾಖೆ ಕಚೇರಿಗಳು ಕೂಡ ಕಾರ್ಯನಿರ್ವಹಿಸಲಿವೆ. ಹಣಕಾಸು ಚಟುವಟಿಕೆಯ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಕಚೇರಿಗಳು ಕೂಡ ತೆರೆದಿರಲಿವೆ. ಎಲ್‌ಐಸಿ ಕಚೇರಿಗಳ ಕಾರ್ಯನಿರ್ವಹಣೆ ಕುರಿತು ಎಲ್‌ಐಸಿಯೇ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Job Alert: ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಏ. 9ರೊಳಗೆ ಅರ್ಜಿ ಸಲ್ಲಿಸಿ

2023-24ರ ಹಣಕಾಸು ವರ್ಷದ (ಎಫ್​ಎ) ಕೊನೆಯ ದಿನ ಭಾನುವಾರ ಬರುವುದರಿಂದ ಈ ಸೂಚನೆ ಬಂದಿದೆ. ಅಧಿಕೃತ ಹೇಳಿಕೆಯಲ್ಲಿ, “2023-24ರ ಹಣಕಾಸು ವರ್ಷದಲ್ಲಿ ತೆರಿಗೆ ಪಾವತಿಗಳಿಗೆ ಸಂಬಂಧಿಸಿದ ಎಲ್ಲ ವಹಿವಾಟುಗಳನ್ನು ಲೆಕ್ಕಹಾಕಲು ಮಾರ್ಚ್ 31, 2024 ರಂದು (ಭಾನುವಾರ) ಸರ್ಕಾರಿ ರಸೀದಿಗಳು ಮತ್ತು ಪಾವತಿಗಳನ್ನು ವ್ಯವಹರಿಸುವ ಬ್ಯಾಂಕುಗಳ ಎಲ್ಲಾ ಶಾಖೆಗಳನ್ನು ವಹಿವಾಟುಗಳಿಗೆ ತೆರೆದಿಡಲು ಭಾರತ ಸರ್ಕಾರ ವಿನಂತಿಸಿದೆ” ಎಂದು ಆರ್​​ಬಿಐ ಹೇಳಿದೆ.

ಆರ್‌ಬಿಐನ ಏಜೆನ್ಸಿ ಬ್ಯಾಂಕುಗಳಾಗಿ ಪಟ್ಟಿ ಮಾಡಲಾದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ (ಪಿಎಸ್​ಬಿ) ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೆನರಾ ಬ್ಯಾಂಕ್ ಸೇರಿವೆ. ಅಂತೆಯೇ, ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ಮತ್ತು ಎಚ್​ಡಿಎಫ್​ಸಿ ಬ್ಯಾಂಕ್ ಲಿಮಿಟೆಡ್​ನಂತ ಖಾಸಗಿ ಬ್ಯಾಂಕುಗಳು ಏಜೆನ್ಸಿ ಬ್ಯಾಂಕಿಂಗ್ ಕಾರ್ಯಾಚರಣೆಗಳನ್ನ ನಡೆಸಲಿವೆ ಎಂದು ಮೂಲಗಳು ತಿಳಿಸಿವೆ.

ವಾರಾಂತ್ಯದಲ್ಲಿ ತೆರೆದಿರುವ ಬ್ಯಾಂಕ್​ಗಳ ವಿವರ ಇಲ್ಲಿದೆ

  • ಬ್ಯಾಂಕ್ ಆಫ್ ಬರೋಡಾ
  • ಬ್ಯಾಂಕ್ ಆಫ್ ಇಂಡಿಯಾ
  • ಬ್ಯಾಂಕ್ ಆಫ್ ಮಹಾರಾಷ್ಟ್ರ
  • ಕೆನರಾ ಬ್ಯಾಂಕ್
  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
  • ಇಂಡಿಯನ್ ಬ್ಯಾಂಕ್
  • ಇಂಡಿಯನ್ ಓವರ್ಸೀಸ್ ಬ್ಯಾಂಕ್
  • ಪಂಜಾಬ್ ಮತ್ತು ಸಿಂಧ್ ಬ್ಯಾಂಕ್
  • ಪಂಜಾಬ್ ನ್ಯಾಷನಲ್ ಬ್ಯಾಂಕ್
  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
  • ಯುಕೋ ಬ್ಯಾಂಕ್
  • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Bullet Train: ಬುಲೆಟ್‌ ರೈಲು ಓಡೋದು ಯಾವಾಗ? ರೈಲ್ವೆ ಸಚಿವ ಹೇಳೋದಿಷ್ಟು

Bullet Train: ದೇಶದ ಮೊದಲ ಬುಲೆಟ್‌ ರೈಲು ಯೋಜನೆಯ ಮಾಹಿತಿ ಇರುವ ವಿಡಿಯೊವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಹಂಚಿಕೊಂಡಿದ್ದಾರೆ. ಆ ವಿಡಿಯೊ ಇಲ್ಲಿದೆ.

VISTARANEWS.COM


on

Bullet Train
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ, ದೇಶದ ಶತಕೋಟಿ ಜನರ ಬುಲೆಟ್‌ ಟ್ರೇನ್‌ ಕನಸು ನನಸಾಗುವ ದಿನಗಳು ದೂರವಿಲ್ಲ! ಹೌದು, ದೇಶದ ಮೊದಲ ಬುಲೆಟ್‌ ರೈಲು (Bullet Train) ಸಂಚಾರದ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. “ಮುಂಬೈ-ಅಹಮದಾಬಾದ್‌ ಬುಲೆಟ್‌ (Mumbai to Ahmedabad) ರೈಲು ಯೋಜನೆ ಶೀಘ್ರದಲ್ಲಿಯೇ ಮುಗಿಯಲಿದೆ” ಎಂದು ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಅವರೊಂದು ವಿಡಿಯೊ ಹಂಚಿಕೊಂಡಿದ್ದು, ರೈಲು ಯೋಜನೆಯ ಪ್ರಗತಿ ಕುರಿತು ಮಾಹಿತಿ ನೀಡಿದ್ದಾರೆ.

ಮುಂಬೈ-ಅಹಮದಾಬಾದ್‌ ಬುಲೆಟ್‌ ರೈಲು ಗಂಟೆಗೆ 320 ಕಿಲೋಮೀಟರ್‌ ವೇಗದಲ್ಲಿ ಓಡಲಿದೆ. ಈಗಾಗಲೇ ದೇಶದ ಮೊದಲ ಬ್ಯಾಲಾಸ್ಟ್‌ಲೆಸ್‌ ಟ್ರ್ಯಾಕ್‌ ಸಿಸ್ಟಮ್‌ ಅಭಿವೃದ್ಧಿಪಡಿಸಲಾಗುತ್ತಿದೆ. ಅಷ್ಟೇ ಅಲ್ಲ, 295.5 ಕಿಲೋಮೀಟರ್‌ ರೈಲು ಮಾರ್ಗ ನಿರ್ಮಿಸಲಾಗಿದೆ. 153 ಕಿಲೋಮೀಟರ್‌ ಉದ್ದದ ರೈಲ್ವೆ ಟ್ರ್ಯಾಕ್‌ಅನ್ನು ಸೇತುವೆ ಮೂಲಕ ನಿರ್ಮಿಸಲಾಗಿದೆ ಎಂಬುದಾಗಿ ಅಶ್ವಿನಿ ವೈಷ್ಣವ್‌ ಹಂಚಿಕೊಂಡ ವಿಡಿಯೊದಲ್ಲಿ ತಿಳಿಸಲಾಗಿದೆ.

“ಬುಲೆಟ್‌ ರೈಲು ಯೋಜನೆಯ ಕಾಮಗಾರಿ ಭರದಿಂದ ಸಾಗುತ್ತಿದೆ. ಬುಲೆಟ್‌ ರೈಲು ಯೋಜನೆಯು ಸಂಪರ್ಕ ಕ್ರಾಂತಿ ಜತೆಗೆ ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಬುಲೆಟ್‌ ರೈಲು ಸಂಚರಿಸುವ ಮುಂಬೈ, ವಾಪಿ, ಬರೋಡಾ, ಸೂರತ್‌, ಆನಂದ್‌ ಹಾಗೂ ಅಹಮದಾಬಾದ್‌ ನಗರಗಳು ಆರ್ಥಿಕ ನಗರಗಳಾಗಿ ಬದಲಾಗಲಿವೆ. ಈ ನಗರಗಳಲ್ಲಿ ಪ್ರತ್ಯೇಕ ಆರ್ಥಿಕತೆಯೇ ಸೃಷ್ಟಿಯಾಗುತ್ತದೆ. ಯೋಜನೆಯ ಪ್ರಗತಿಯು ಕ್ಷಿಪ್ರವಾಗಿ ಸಾಗುತ್ತಿದೆ” ಎಂದು ಮಾಹಿತಿ ಕೆಲ ದಿನಗಳ ಹಿಂದಷ್ಟೇ ಅಶ್ವಿನಿ ವೈಷ್ಣವ್‌ ಹೇಳಿದ್ದರು.

ಸೂರತ್‌ನಲ್ಲಿ ತಿಂಡಿ, ಮುಂಬೈನಲ್ಲಿ ಕೆಲಸ

ಬುಲೆಟ್‌ ರೈಲು ಓಡಾಟ ಆರಂಭವಾದ ಬಳಿಕ ಜನರ ಜೀವನಶೈಲಿ ಹೇಗೆ ಬದಲಾಗುತ್ತದೆ? ಸಂಪರ್ಕ ಕ್ರಾಂತಿ ಹೇಗಾಗುತ್ತದೆ ಎಂಬುದನ್ನು ಅಶ್ವಿನಿ ವೈಷ್ಣವ್‌ ಅವರು ಉದಾಹರಣೆ ಸಮೇತ ತಿಳಿಸಿದರು. “ಬುಲೆಟ್ ರೈಲು ಓಡಾಟ ಆರಂಭವಾದರೆ, ಜನ ಸೂರತ್‌ನಲ್ಲಿ ತಿಂಡಿ ತಿಂದು, ಮುಂಬೈನಲ್ಲಿ ಕೆಲಸ ಮುಗಿಸಿಕೊಂಡು, ರಾತ್ರಿ ತಮ್ಮ ಮನೆ ಸೇರಬಹುದು. ಬುಲೆಟ್‌ ರೈಲುಗಳಲ್ಲಿ ಓಡಾಡುವ ಟಿಕೆಟ್‌ ದರ ಕೂಡ ನಿಯಮಿತವಾಗಿಯೇ ಇರಲಿದೆ” ಎಂದು ರೈಲ್ವೆ ಸಚಿವ ತಿಳಿಸಿದರು.

ಇದನ್ನೂ ಓದಿ: PM Narendra Modi: ಬೆಂಗಳೂರು- ಕಲಬುರಗಿ, ಮೈಸೂರು- ಚೆನ್ನೈ ಸೇರಿ 10 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಮುಂಬೈ-ಅಹಮದಾಬಾದ್‌ ಬುಲೆಟ್‌ ರೈಲು ಕಾರಿಡಾರ್‌ ಯೋಜನೆಯು 2021ರ ನವೆಂಬರ್‌ನಲ್ಲಿ ಆರಂಭವಾಗಿದೆ. ಇದಾದ ಆರು ತಿಂಗಳಲ್ಲಿ ಒಂದು ಕಿಲೋಮೀಟರ್‌ ರೈಲು ಮಾರ್ಗ ನಿರ್ಮಿಸಲಾಗಿದೆ. 2023ರ ಏಪ್ರಿಲ್‌ ವೇಳೆಗೆ 50 ಕಿಲೋಮೀಟರ್‌ ಆಗಿದೆ. ಇದೇ ಕಾರಿಡಾರ್‌ ಭಾಗವಾಗಿ ಎಂಟು ನದಿಗಳಿಗೆ ಸೇತುವೆ ನಿರ್ಮಿಸಲಾಗುತ್ತದೆ. ಮೊದಲ ಬುಲೆಟ್‌ ರೈಲು ಯೋಜನೆಗೆ 1.08 ಲಕ್ಷ ಕೋಟಿ ರೂ. ವ್ಯಯಿಸಲಾಗುತ್ತಿದೆ. ಇದಕ್ಕೆ ಜಪಾನ್‌ ಸರ್ಕಾರವು ಕೇವಲ 0.1ರ ಬಡ್ಡಿದರದಲ್ಲಿ ಸಾಲ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

IT Hiring: 2023-24ರಲ್ಲಿ ಟಿಸಿಎಸ್‌ 40,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿಯನ್ನು ಹೊಂದಿತ್ತು. ಈ ವರ್ಷವೂ ಹೆಚ್ಚಿನ ಪ್ರಮಾಣದಲ್ಲಿ ನೇಮಕ ಆಗಲಿದೆ.

VISTARANEWS.COM


on

tcs jobs IT hiring
Koo

ಹೊಸದಿಲ್ಲಿ: ಭಾರತದ ಅತಿದೊಡ್ಡ ಐಟಿ ಸೇವೆಗಳ (IT services) ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್ – TCS) ನೂತನ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು (IT Hiring) ಪ್ರಾರಂಭಿಸಿದೆ. ಏಪ್ರಿಲ್ 10ರವರೆಗೆ ಹೊಸ ಉದ್ಯೋಗಗಳಿಗಾಗಿ (Job Openings) ಅರ್ಜಿಗಳನ್ನು ಕರೆಯಲಾಗುತ್ತಿದೆ.

ಇದುವರೆಗಿನ ನೇಮಕಾತಿ ಸ್ಥಗಿತದಿಂದ ಸಂಕಷ್ಟದಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಇದು ಸಿಹಿ ಸುದ್ದಿಯಾಗಿದೆ. ಕಲೆದೆರಡು ವರ್ಷಗಳಲ್ಲಿ ವಿವಿಧ ದೊಡ್ಡ ಐಟಿ ಸಂಸ್ಥೆಗಳು ನೇಮಕಾತಿ ನಿಲ್ಲಿಸಿದ್ದವು.

TCS ಏಪ್ರಿಲ್ 26ರಂದು ಪರೀಕ್ಷೆಗಳನ್ನು ನಡೆಸಲಿದೆ. ಕಂಪನಿಯು 2024ರ BTech, BE, MCA, MSc ಮತ್ತು MS ಬ್ಯಾಚ್‌ನಿಂದ ಏಪ್ರಿಲ್ 10ರವರೆಗೆ ಉದ್ಯೋಗ ಅರ್ಜಿಗಳನ್ನು ಆಹ್ವಾನಿಸುತ್ತಿದೆ ಎಂದು TCS ವೆಬ್‌ಸೈಟ್‌ನ ಇತ್ತೀಚಿನ ಪ್ರಕಟಣೆ ತಿಳಿಸಿದೆ. TCS ಮೂರು ವಿಭಾಗಗಳಲ್ಲಿ- ನಿಂಜಾ, ಡಿಜಿಟಲ್ ಮತ್ತು ಪ್ರೈಮ್- ನೇಮಕಾತಿ ಮಾಡುತ್ತಿದೆ.

ನಿಂಜಾ ವರ್ಗವು ವರ್ಷಕ್ಕೆ 3.36 ಲಕ್ಷ ರೂಪಾಯಿಗಳ, ಡಿಜಿಟಲ್ ಮತ್ತು ಪ್ರೈಮ್ ವಿಭಾಗಗಳು ವಾರ್ಷಿಕವಾಗಿ ಕ್ರಮವಾಗಿ 7 ಲಕ್ಷ ಮತ್ತು 9-11.5 ಲಕ್ಷ ರೂ.ಗಳ ಪ್ಯಾಕೇಜ್‌ ಅನ್ನು ನೀಡಲಿವೆ. ಖಾಲಿ ಇರುವ ಹುದ್ದೆಗಳ ಸಂಖ್ಯೆಯನ್ನು ಟಿಸಿಎಸ್‌ ಬಹಿರಂಗಪಡಿಸಿಲ್ಲ.

ಡಿಸೆಂಬರ್ 2023ರಂದೇ ಸಂಸ್ಥೆ ಹೊಸ ಉದ್ಯೋಗಗಳ ಸೂಚನೆ ನೀಡಿತ್ತು. “ನಾವು ಮುಂದಿನ ವರ್ಷಕ್ಕೆ ನಮ್ಮ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. TCSಗೆ ಸೇರಲು ಫ್ರೆಶರ್‌ಗಳಲ್ಲಿ ಪ್ರಚಂಡ ಉತ್ಸಾಹವನ್ನು ಕಾಣುತ್ತಿದೇವೆ” ಎಂದು TCS ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಮಿಲಿಂದ್ ಲಕ್ಕಡ್ ಹೇಳಿದ್ದರು.

“ಉದ್ಯೋಗಿಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸುವುದು ಕಷ್ಟ” ಎಂದು ಲಕ್ಕಾಡ್ ಹೇಳಿದ್ದರು. ದೊಡ್ಡ ಪ್ರಮಾಣದಲ್ಲಿ ನೇಮಕಾತಿ ಆಗುವ ಸಂಭವ ಇದೆ. 2023-24ರಲ್ಲಿ ಟಿಸಿಎಸ್‌ 40,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿಯನ್ನು ಹೊಂದಿತ್ತು.

ಏತನ್ಮಧ್ಯೆ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಶುಕ್ರವಾರ ಅಮೆಜಾನ್ ವೆಬ್ ಸೇವೆಗಳು (AWS) ಜನರೇಟಿವ್ AI (GenAI) ಅನ್ನು ಬಿಡುಗಡೆ ಪಾಲುದಾರನಾಗಿ ಹೊಂದಿದೆ. GenAIನಲ್ಲಿ 350,000ಕ್ಕೂ ಹೆಚ್ಚು ಉದ್ಯೋಗಿಗಳು ಮೂಲಭೂತ ಕೌಶಲ್ಯಗಳ ಬಗ್ಗೆ ತರಬೇತಿ ಪಡೆದಿದ್ದು, TCS ವಿಶ್ವದಲ್ಲೇ ಅತಿ ದೊಡ್ಡ AI ಕಾರ್ಯಪಡೆಗಳಲ್ಲಿ ಒಂದನ್ನು ನಿರ್ಮಿಸಲು ಸಿದ್ಧವಾಗಿದೆ.

TCS ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಹಂತ 1: TCS NextStep ಪೋರ್ಟಲ್‌ಗೆ ಲಾಗಿನ್ ಮಾಡಿ
ಹಂತ 2: ಡ್ರೈವ್‌ಗಾಗಿ ನೋಂದಾಯಿಸಿ ಮತ್ತು ಅರ್ಜಿ ಸಲ್ಲಿಸಿ
ಸನ್ನಿವೇಶ A: ನೀವು TCS NextStep ಪೋರ್ಟಲ್, ‘IT’ ವರ್ಗದ ಅಡಿಯಲ್ಲಿ ನೋಂದಾಯಿತ ಬಳಕೆದಾರರಾಗಿದ್ದರೆ, ದಯವಿಟ್ಟು ನಿಮ್ಮ TCS ಉಲ್ಲೇಖ ID (CT/ DT ಉಲ್ಲೇಖ ಸಂಖ್ಯೆ) ಒಂದಿಗೆ ಲಾಗಿನ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ. ಸಲ್ಲಿಸಿದ ನಂತರ, ದಯವಿಟ್ಟು Apply For Drive ಮೇಲೆ ಕ್ಲಿಕ್ ಮಾಡಿ.
ಸನ್ನಿವೇಶ B: ನೀವು ಹೊಸ ಬಳಕೆದಾರರಾಗಿದ್ದರೆ, Register Now ಕ್ಲಿಕ್ ಮಾಡಿ. “IT” ವರ್ಗವನ್ನು ಆಯ್ಕೆಮಾಡಿ ಮತ್ತು ನಿಮ್ಮ ವಿವರಗಳನ್ನು ಭರ್ತಿ ಮಾಡಿ. ನಿಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು Apply For Drive ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: Bangalore Water Crisis: “ನೀರು ಕೊಡ್ತೀವಿ, ಪ್ಲೀಸ್‌ ಹೋಗ್ಬೇಡಿ…” ಐಟಿ ಸಂಸ್ಥೆಗಳಿಗೆ ರಾಜ್ಯ ಮನವಿ; ಗಾಳ ಹಾಕಿದ ಕೇರಳ

Continue Reading
Advertisement
Heat Stroke
ಆರೋಗ್ಯ12 mins ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 202418 mins ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

IPL 2024
ಕ್ರೀಡೆ24 mins ago

IPL 2024: ಹಾರ್ದಿಕ್​ ಪಾಂಡ್ಯ ಮೇಲೆ ಬೌಲಿಂಗ್​ ಕೋಚ್​ ಮುನಿಸು; ವಿಡಿಯೊ ವೈರಲ್​​

Sringeri Shankar Mutt
ಮೈಸೂರು24 mins ago

Sringeri Shankar Mutt: ಮೈಸೂರಿನಲ್ಲಿ ಮಾ.30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ

LIC
ದೇಶ2 hours ago

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

Dead Body Found in water tank
ಬೀದರ್‌2 hours ago

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Varthur Santhosh tears
ಬಿಗ್ ಬಾಸ್2 hours ago

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Lok Sabha Election 2024 Brijesh Chowta declares assets
Lok Sabha Election 20242 hours ago

Lok Sabha Election 2024: ಅವಿವಾಹಿತ ಬ್ರಿಜೇಶ್ ಚೌಟ ಬಳಿ ಇಲ್ಲ ಕೋಟಿ ಕೋಟಿ ಆಸ್ತಿ! ಸಾಲ ಮಾಡಿ ಕಾರು ಖರೀದಿ

Drowned in canal
ದಾವಣಗೆರೆ2 hours ago

Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Unmukt Chand
ಕ್ರೀಡೆ2 hours ago

Unmukt Chand: ಭಾರತ ತಂಡ ತೊರೆದು ಯುಎಸ್​ಎ ಸೇರಿದ ಉನ್ಮುಕ್ತ್‌ಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಅನುಮಾನ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌