Site icon Vistara News

ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಪಾಕಿಸ್ತಾನದಿಂದ ನುಸುಳಿದ್ದ 2 ಲಷ್ಕರೆ ಉಗ್ರರ ಹತ್ಯೆ

Kashmir Encounter

Kashmir Encounter: Terrorist killed in Shopian, BSF jawan injured in Pak firing in Ramgarh

ಶ್ರೀನಗರ: ಅಮರನಾಥ ಯಾತ್ರೆಗೆ ಅಡ್ಡಿಪಡಿಸುವ ಉದ್ದೇಶದಿಂದ ಪಾಕಿಸ್ತಾನದಿಂದ ನುಸುಳಿದ್ದ ಲಷ್ಕರೆ ತೈಬಾದ ಉಗ್ರ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಜಮ್ಮು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.

ಈ ಉಗ್ರರು ಜೂನ್‌ 30ರಿಂದ ಆರಂಭವಾಗುವ ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಹೊಂಚು ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ. ಕಾರ್ಯಾಚರಣೆಯ ವೇಳೆಯಲ್ಲಿ ಒಬ್ಬ ಪೊಲೀಸ್‌ಗೆ ಗಾಯವಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಈ ಎನ್‌ಕೌಂಟರ್‌ ಅನ್ನು ಉಗ್ರ ದಮನ ಕಾರ್ಯಾಚರಣೆಯಲ್ಲಿನ ದೊಡ್ಡ ಯಶಸ್ಸು ಎಂದು ಕಾಶ್ಮೀರ ಇನ್ಸ್‌ಪೆಕ್ಟರ್‌ ಜನರಲ್‌ ವಿಜಯ್‌ ಕುಮಾರ್‌ ತಿಳಿಸಿದ್ದಾರೆ. ಹತರಾದ ಉಗ್ರರಲ್ಲಿ ಒಬ್ಬಾತ ಪಾಕಿಸ್ತಾನದ ಫೈಸಲಾಬಾದ್‌ ನಿವಾಸಿ, ಉಗ್ರ ಅಬ್ದುಲ್ಲ ಗೌಜ್ರಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸ್ಥಳೀಯ ಉಗ್ರ ಅದಿಲ್‌ ಹುಸೇನ್‌ ಆಗಿದ್ದಾನೆ.

ಘಟನೆ ನಡೆದ ಸ್ಥಳದಲ್ಲಿ ಎರಡು ಎಕೆ-47 ರೈಫಲ್‌ಗಳು, ಇತರ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Exit mobile version