Bihar Bridge Collapse: ರೈಲು ದುರಂತ ಬೆನ್ನಲ್ಲೇ ಬಿಹಾರದಲ್ಲಿ ಸೇತುವೆ ಕುಸಿತ; 1,700 ಕೋಟಿ ರೂ. ಗಂಗಾ ನದಿ ಪಾಲು Vistara News

ದೇಶ

Bihar Bridge Collapse: ರೈಲು ದುರಂತ ಬೆನ್ನಲ್ಲೇ ಬಿಹಾರದಲ್ಲಿ ಸೇತುವೆ ಕುಸಿತ; 1,700 ಕೋಟಿ ರೂ. ಗಂಗಾ ನದಿ ಪಾಲು

Bihar Bridge Collapse: ಬಿಹಾರದ ಭಾಗಲ್ಪುರದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಏಕಾಏಕಿ ಕುಸಿದಿದೆ. ಸೇತುವೆಯ ಬಹುತೇಕ ಭಾಗ ಕುಸಿದ ಕಾರಣ ಸಾವಿರಾರು ಕೋಟಿ ರೂಪಾಯಿ ನೀರುಪಾಲಾದಂತೆ ಎಂದೇ ಹೇಳಲಾಗುತ್ತಿದೆ.

VISTARANEWS.COM


on

Bridge Collapses In Bihar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಟನಾ: ಒಡಿಶಾದ ಬಾಲಾಶೋರ್‌ ಜಿಲ್ಲೆ ಬಹನಗ ರೈಲು ನಿಲ್ದಾಣದ ಬಳಿ ನಡೆದ ತ್ರಿವಳಿ ರೈಲು ದುರಂತದಿಂದ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ದುರಂತದ ಕುರಿತು ತನಿಖೆ ನಡೆಸಲು ಕೇಂದ್ರ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಇನ್ನು ಇದರ ಬೆನ್ನಲ್ಲೇ, ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದು (Bihar Bridge Collapse) ಬಿದ್ದಿದೆ.

ಭಾಗಲ್ಪುರ ಜಿಲ್ಲೆಯ ಮೂಲಕ ಹಾದುಹೋಗುವ ಗಂಗಾ ನದಿಗೆ ಅಡ್ಡಲಾಗಿ, ಖಗಾರಿಯಾ, ಅಗುವಾನಿ ಮತ್ತು ಸುಲ್ತಾನ್‌ಗಂಜ್‌ ಮಧ್ಯೆ 1,700 ಕೋಟಿ ರೂಪಾಯಿ ವೆಚ್ಚದಲ್ಲಿ ಅಗುವಾನಿ ಸುಲ್ತಾನ್‌ಗಂಜ್‌ ಗಂಗಾ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ಇದು ಭಾನುವಾರ ಏಕಾಏಕಿ ಕುಸಿದಿದೆ. ಇದರ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇಲ್ಲಿದೆ ವಿಡಿಯೊ

ಏಪ್ರಿಲ್‌ನಲ್ಲೇ ಹಾನಿ ಆಗಿತ್ತು

ಕಳೆದ ಏಪ್ರಿಲ್‌ ತಿಂಗಳಲ್ಲಿಯೇ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಸೇತುವೆಗೆ ಹಾನಿಯಾಗಿತ್ತು. ಆಗಲೇ ಕಳಪೆ ಕಾಮಗಾರಿಯ ಆರೋಪಗಳು ಕೇಳಿಬಂದಿದ್ದವು. ಆದರೂ, ಸೇತುವೆ ನಿರ್ಮಾಣ ಮಾಡುತ್ತಿರುವ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರು ಎಚ್ಚೆತ್ತುಕೊಂಡಿಲ್ಲ. ಹಾಗಾಗಿಯೇ, ನಿರ್ಮಾಣ ಹಂತದಲ್ಲಿರುವ ಸೇತುವೆಯು ಕುಸಿದಿದೆ. ಇದರಿಂದ 1,700 ಕೋಟಿ ರೂಪಾಯಿ ಗಂಗಾನದಿ ಪಾಲಾಗಿದೆ. ಕಳಪೆ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ತನಿಖೆಗೆ ಆದೇಶಿಸಿದ ನಿತೀಶ್‌ ಕುಮಾರ್

ನಿತೀಶ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಭಾಗಲ್ಪುರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದ ಬೆನ್ನಲ್ಲೇ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ಯಾವುದೇ ದುರಂತ ಸಂಭವಿಸಿದರೂ ಆಯೋಗ ರಚಿಸುವುದು ರಾಜ್ಯ ಸರ್ಕಾರಕ್ಕೆ ರೂಢಿಯೇ ಆಗಿದೆ. ಆದರೆ, ಯಾವುದೇ ಕ್ರಮ ಮಾತ್ರ ತೆಗೆದುಕೊಳ್ಳುವುದಿಲ್ಲ. ಭಾಗಲ್ಪುರದಲ್ಲಿ ಸೇತುವೆ ಕುಸಿದಿರುವುದು ನಿತೀಶ್‌ ಕುಮಾರ್‌ ಸರ್ಕಾರದ ಭ್ರಷ್ಟಾಚಾರ, ಆಡಳಿತದ ಅರಾಜಕತೆಗೆ ಸಾಕ್ಷಿಯಾಗಿದೆ” ಎಂದು ಬಿಜೆಪಿ ನಾಯಕ ವಿಜಯ್‌ ಕುಮಾರ್‌ ಸಿನ್ಹಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಒಡಿಶಾ ರೈಲು ಅಪಘಾತದ ಬಗ್ಗೆ ತುರ್ತು ಸೇವೆಗಳಿಗೆ ತಕ್ಷಣ ಮಾಹಿತಿ ನೀಡಿದ್ದು, ರಜಾದಲ್ಲಿದ್ದ ಎನ್​ಡಿಆರ್​​ಎಫ್ ಯೋಧ!

ಕಳೆದ ವರ್ಷ ಮೊರ್ಬಿ ಸೇತುವೆ ಕುಸಿತ

ಕಳೆದ ವರ್ಷ ಗುಜರಾತ್‌ನ ಮೊರ್ಬಿಯಲ್ಲಿರುವ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗುಸೇತುವೆ ದುರಂತ ಸಂಭವಿಸಿತ್ತು. ಮೊರ್ಬಿ ಸೇತುವೆ ಕುಸಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು. ದುರಂತದಲ್ಲಿ 140ಕ್ಕೂ ಅಧಿಕ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದರು. ಈ ಸೇತುವೆ ದುರಸ್ತಿಯಾದ ಒಂದೇ ವಾರದಲ್ಲಿ ಸೇತುವೆ ಕುಸಿದ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

ಬಳಸಿದ ಪ್ಲೇಟ್‌ಗಳಿದ್ದ ಟ್ರೆ ತಾಗಿದ್ದಕ್ಕೆ ವೇಟರ್‌ನನ್ನು ಹೊಡೆದು ಕೊಂದೇ ಬಿಟ್ರು!

Beaten to death: ಮದುವೆಯಲ್ಲಿ ಅತಿಥಿಗಳಿಗೆ ಪ್ಲೇಟ್ ತಾಗಿತ್ತು ಎಂಬ ಕ್ಷುಲ್ಲಕ ಕಾರಣಕ್ಕಾಗಿ ವೇಟರ್ ಒಬ್ಬರನ್ನು ಹೊಡೆದು ಕೊಲ್ಲಲಾಗಿದೆ.

VISTARANEWS.COM


on

waiter beaten to death, tray of used plates touched guests in marriage
Koo

ನವದೆಹಲಿ: ಮದುವೆಯಲ್ಲಿ ಯಾವೆಲ್ಲ ಕಾರಣಕ್ಕೆ ಗಲಾಟೆಗಳಾಗುತ್ತವೆ ಮತ್ತು ಅವು ಹೇಗೆ ಕೊಲೆಯಲ್ಲಿ ಅಂತ್ಯವಾಗುತ್ತವೆ ಎಂಬುದು ಗೊತ್ತಾಗುವುದಿಲ್ಲ. ಮದುವೆ (Marriage Party) ವೇಳೆ, ಬಳಕೆಯಾದ ಪ್ಲೇಟ್‌ಗಳಿದ್ದ ಟ್ರೆಯೊಂದು ಅತಿಥಿಗಳಿಗೆ ತಗುಲಿತು (tray of used plates) ಎಂಬ ಕಾರಣಕ್ಕೆ ಜಗಳ ಉಂಟಾಗಿ, ಕೊನೆಗೆ 26 ವರ್ಷದ ವೇಟರ್ ಕೊಲೆಯಲ್ಲಿ ಅಂತ್ಯವಾಗಿದೆ(Beaten to death). ನವೆಂಬರ್ 17ರ ಸಂಜೆ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪುಸ್ತಾ ರಸ್ತೆಯಲ್ಲಿರುವ ಸಿಜಿಎಸ್ ವಾಟಿಕಾ ಅತಿಥಿ ಗೃಹದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ(UP Police).

ಮಾಣಿ ಒಯ್ಯುತ್ತಿದ್ದ ಪ್ಲೇಟ್‌ಗಳ ತಟ್ಟೆಯು ಸ್ಥಳದಲ್ಲಿ ಅತಿಥಿಗಳನ್ನು ತಗುಲಿದಾಗ ಹೊಡೆದಾಟ ಶುರುವಾಯಿತು. ಜಗಳದ ಸಮಯದಲ್ಲಿ ವೇಟರ್ ಪಂಕಜನನ್ನು ಕೆಲವು ಅಮಾನುಷವಾಗಿ ಥಳಿಸಿದ್ದಾರೆ. ಆಗ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳವನ್ನು ಶವವನ್ನು ಹತ್ತಿರದ ಕಾಡಿನಲ್ಲಿ ಎಸೆದಿದ್ದಾರೆ.

ಮಾರನೇ ದಿನ ಶವ ಪತ್ತೆಯಾಗುತ್ತಿದ್ದಂತೆ ಪೊಲೀಸರು ತೀವ್ರವಾಗಿ ತನಿಖೆಯನ್ನು ಕೈಗೊಂಡಿದ್ದಾರೆ. ಪಂಕಜ್‌ನ ತಲೆಯಲ್ಲಿ ಆಳವಾದ ಗಾಯ ಕಂಡು ಬಂದಿದೆ. ಕೂಡಲೇ ಶವವನ್ನು ಪೋಸ್ಟ್‌ಮಾರ್ಟ್‌ಗೆ ಕಳುಹಿಸಿದ್ದಾರೆ. ಮೃತ ಪಂಕಜ್ ಮದುವೆಯ ಕೆಲಸಕ್ಕಾಗಿ ಹೋಗಿದ್ದ. ಆದರೆ, ವಾಪಸ್ ಬಂದಿರಲಿಲ್ಲ ಎಂದು ಆತನ ತಾಯಿ ಪೊಲೀಸರಿಗೆ ತಿಳಿಸಿದ್ದಾಳೆ.

ಮದುವೆ ನಡೆದ ಗೆಸ್ಟ್‌ಹೌಸ್‌ನಲ್ಲಿ ಪಂಕಜ್ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ. ಮದುವೆ ನಡೆದ ಸ್ಥಳದ ವ್ಯವಹಾರದಲ್ಲಿ ಪಾಟ್ನರ್ನರ್ ಆಗಿರುವ ಗುತ್ತಿಗೆದಾರ ಮನೋಜ್ ಗುಪ್ತಾ ಮೂಲಕ ಆತ ಕೆಲಸಕ್ಕೆ ಸೇರಿಕೊಂಡಿದ್ದ. ವಿಶೇಷ ಎಂದರೆ, ಕೆಲಸ ನೀಡಿದ ಮನೋಜ್ ಕೂಡ ಪಂಕಜ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ತನಿಖೆ ವೇಳೆ ಗೊತ್ತಾಗಿದೆ. ಮನೋಜ್ ಗುಪ್ತಾ ಮತ್ತು ಅಮಿತ್ ಕುಮಾರ್ ಸೇರಿ ಹಲವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: ಶಾಲೆಯಲ್ಲಿ ಕುಸಿದು ಬಿದ್ದು 4ನೇ ತರಗತಿ ಬಾಲಕಿ ಸಾವು, ಶಿಕ್ಷಕರು ಹೊಡೆದು ಕೊಂದರು ಎಂದು ಅರೋಪಿಸಿದ ಪೋಷಕರು

Continue Reading

ದೇಶ

ತೆರಿಗೆಗಳ್ಳರ ಮೇಲೆ ಐಟಿ ದಾಳಿ; ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

IT Raids: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಲಿಕ್ಕರ್ ವ್ಯಾಪಾರಿಗಳ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ನಗದನ್ನು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

IT raids on liquor traders across Odisha and Jharkhand
Koo

ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ (Odisha and Jharkhand) ಕಾರ್ಯಾಚರಣೆ ನಡೆಸುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಕಂಪನಿಯ (Boudh Distilleries Private Limited) ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದೆ(IT Raids). ಕಂಪನಿಯ ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಕರೆನ್ಸಿ ನೋಟುಗಳನ್ನು (Currency Notes) ಜಪ್ತಿ ಮಾಡಿದೆ. ಅಂದಾಜು 150 ಕೋಟಿ ರೂ.ಗೂ ಅಧಿಕ ಹಣವನ್ನು ಸೀಜ್ ಮಾಡಲಾಗಿದೆ. ಅಂದ ಹಾಗೆ, ಈ ಕಂಪನಿಯು ಕಾಂಗ್ರೆಸ್ ಸಂಸದ (Congress MP) ಧೀರಜ್‌ ಸಾಹು ಅವರೊಂದಿಗೆ ನಂಟು ಹೊಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆಶ್ಚರ್ಯಕರ ಸಂಗತಿ ಎಂದರೆ, ಜಪ್ತಿ ಮಾಡಲಾದ ಹಣವನ್ನು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗಳು (Counting Machine) ಕೂಡ ಕೆಟ್ಟು ಹೋಗಿವೆ!

ಒಡಿಶಾ ಟಿವಿ ವರದಿಯ ಪ್ರಕಾರ, ದೇಶದ ಅತಿದೊಡ್ಡ ಪಶ್ಚಿಮ ಒಡಿಶಾದ ಮದ್ಯ ತಯಾರಿಕೆ ಮತ್ತು ಮಾರಾಟ ಸಂಸ್ಥೆಗಳಲ್ಲಿ ಒಂದಾದ ಬಲ್ಡಿಯೊ ಸಾಹು ಮತ್ತು ಗ್ರೂಪ್ ಆಫ್ ಕಂಪನಿಗಳ ಬೋಲಂಗಿರ್ ಕಚೇರಿಯಲ್ಲಿ ದಾಳಿಯ ಸಮಯದಲ್ಲಿ 150 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಬಾಲ್ಡಿಯೊ ಸಾಹು ಮತ್ತು ಗ್ರೂಪ್ ಆಫ್ ಕಂಪನಿಗಳು ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್‌ನ ಪಾಲುದಾರಿಕೆ ಸಂಸ್ಥೆಯಾಗಿದೆ ಎಂದು ವರದಿಯಾಗಿದೆ.

ಆರೋಪಿತ ಕಂಪನಿಗಳು ತೆರಿಗೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ತಮ್ಮ ವ್ಯಾಪಾರ ವಹಿವಾಟದ ಸಂಪೂರ್ಣ ಮಾಹಿತಿಯನ್ನು ನೀಡುತ್ತಿರಲಿಲ್ಲ ಎಂದು ಹೇಳಲಾಗುತ್ತಿದೆ. ಕಂಪನಿಯೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಪುರುನಾಕಟಕದ ಉದ್ಯಮಿ ಅಶೋಕ್ ಕುಮಾರ್ ಅಗರ್ವಾಲ್ ಅವರ ನಿವಾಸದ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೋಲಂಗಿರ್‌ನಲ್ಲಿ ವಶಪಡಿಸಿಕೊಂಡ ಹಣವನ್ನು ಸಾಗಿಸಲು ಐಟಿ ಸಿಬ್ಬಂದಿ ಬ್ಯಾಗ್‌‌ಗಳಿಗೆ ಸಾಕಾಗಾಲಿಲ್ಲ. ನಗದು ಕಟ್ಟುಗಳನ್ನು ತುಂಬಲು ಖಾಲಿ ಚೀಲಗಳನ್ನು ತರಲಾಯಿತು. ಬುಧವಾರ ಯಂತ್ರಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದರಿಂದ, 150 ಕ್ಕೂ ಹೆಚ್ಚು ಚೀಲಗಳು ಮತ್ತು ಚೀಲಗಳಲ್ಲಿ ಹಣವನ್ನು ಬೋಲಂಗಿರ್‌ನಲ್ಲಿರುವ ಎಸ್‌ಬಿಐ ಶಾಖೆಗೆ ತರಲಾಯಿತು ಮತ್ತು ಹಣದ ಎಣಿಕೆಯನ್ನು ಮುಂದುರಿಸಲಾಗುತ್ತದೆ ಎಂದು ವರದಿಯಾಗಿದೆ.

ಬೌಧ್ ಡಿಸ್ಟಿಲರೀಸ್ ಜೊತೆಗೆ ಜಾರ್ಖಂಡ್‌ನ ಖ್ಯಾತ ಉದ್ಯಮಿ ರಾಮಚಂದ್ರ ರುಂಗ್ಟಾ ಅವರ ಕಚೇರಿಗಳಲ್ಲೂ ಆದಾಯ ತೆರಿಗೆ ಇಲಾಖೆ ಶೋಧ ನಡೆಸಿದೆ. ಇಂದು ಬೆಳಿಗ್ಗೆಯಿಂದ ಆದಾಯ ತೆರಿಗೆ ಇಲಾಖೆಯು ರಾಮಗಢ, ರಾಂಚಿ ಮತ್ತು ಇತರ ಸ್ಥಳಗಳಲ್ಲಿ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ಕೈಗೊಂಡಿದೆ. ವರದಿಗಳ ಪ್ರಕಾರ, ರಾಮಗಢ ಮತ್ತು ರಾಂಚಿಯ ರುಂಗ್ಟಾಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಯುತ್ತಿದೆ. ಸಿಆರ್‌ಪಿಎಫ್ ಸಿಬ್ಬಂದಿ ಆದಾಯ ತೆರಿಗೆ ಅಧಿಕಾರಿಗಳಿಗೆ ಭದ್ರತೆ ಒದಗಿಸುತ್ತಿದ್ದಾರೆ. ರಾಮ್‌ಗಢ್‌ನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸಮೀಪವಿರುವ ರಾಮಚಂದ್ರ ರುಂಗ್ಟಾ ಅವರ ವಸತಿ ಕಚೇರಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ: IT Raids | ಡೋಲೋ 650 ಮಾತ್ರೆ ತಯಾರಿ ಕಂಪನಿಗೆ ಐಟಿ ದಾಳಿಯ ಡೋಸ್‌!

Continue Reading

ದೇಶ

Job News: ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳ

Job News: ಭಾರತದಲ್ಲಿ ನೇಮಕಾತಿ ಚಟುವಟಿಕೆಯು 2% ಮಾಸಿಕ ಕುಸಿತವನ್ನು ಕಂಡಿದೆ (2023ರ ನವೆಂಬರ್ ಮತ್ತು ಅಕ್ಟೋಬರ್) ಮತ್ತು 10% ವಾರ್ಷಿಕ ಕುಸಿತ (2022 ನವೆಂಬರ್-2023 ನವೆಂಬರ್) ದಾಖಲಾಗಿದೆ ಎಂದು ವರದಿ ತಿಳಿಸಿದೆ. I ಮಧ್ಯೆ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳವಾಗಿದೆ.

VISTARANEWS.COM


on

job opportunity
Koo

ನವದೆಹಲಿ: ಭಾರತದಲ್ಲಿ ನೇಮಕಾತಿ ಚಟುವಟಿಕೆಯು 2% ಮಾಸಿಕ ಕುಸಿತವನ್ನು ಕಂಡಿದೆ (2023ರ ನವೆಂಬರ್ ಮತ್ತು ಅಕ್ಟೋಬರ್) ಮತ್ತು 10% ವಾರ್ಷಿಕ ಕುಸಿತ (2022 ನವೆಂಬರ್-2023 ನವೆಂಬರ್) ದಾಖಲಾಗಿದೆ ಎಂದು ವರದಿ ತಿಳಿಸಿದೆ. ಈತನ್ಮಧ್ಯೆ ಲಾಜಿಸ್ಟಿಕ್ಸ್, ಸಾಗಾಣಿಕೆ ಮತ್ತು ಖರೀದಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಉದ್ಯೋಗ ನೇಮಕಾತಿಯಲ್ಲಿ 6% ಬೆಳವಣಿಗೆಯನ್ನು ಕಂಡಿದೆ (Job News).

ಪ್ರತಿಭಾನ್ವೇಷಣಾ ವೇದಿಕೆಯ ಫೌಂಡಿಟ್ (Foundit ಹಿಂದಿನ Monster APAC & ME) ಈ ಕುರಿತಾದ ಮಾಹಿತಿಯನ್ನು ಹಂಚಿಕೊಂಡಿದೆ. ಫೌಂಡಿಟ್ ಇನ್‌ಸೈಟ್ಸ್‌ ಟ್ರ್ಯಾಕರ್ (Fit)ನಲ್ಲಿ 2023ರ ನೇಮಕಾತಿ ಪ್ರಕ್ರಿಯೆ ಕುರಿತಾದ ಈ ಸಂಶೋಧನಾ ವರದಿ ಪ್ರಕಟವಾಗಿದೆ.

ನೇಮಕಾತಿ ಸೂಚ್ಯಂಕವು ನವೆಂಬರ್ 2022ರಲ್ಲಿ 277 ಇತ್ತು. 2023ರ ನವೆಂಬರ್‌ನಲ್ಲಿ ಇದು 249ಕ್ಕೆ ಇಳಿದಿದೆ. ಅದಾಗ್ಯೂ ಭಾರತೀಯ ಕೈಗಾರಿಕೆಗಳು, ಸ್ಟಾರ್ಟ್ ಅಪ್‌ಗಳು ಮತ್ತು ಉತ್ಪಾದನಾ ಘಟಕಗಳ ಸಹಾಯದಿಂದ ದೇಶದ ಆರ್ಥಿಕ ಭವಿಷ್ಯವು ಭರವಸಾದಾಯಕವಾಗಿದೆ ಎಂದು ವರದಿ ಹೇಳಿದೆ.

ಉದ್ಯೋಗ ಅಂತರವನ್ನು ಕಡಿಮೆ ಮಾಡಲು ಪಿಎಸ್‌ಯು(Public Sector Undertakings)ಮುಂದಾಗಿದ್ದು, ಅದರ ಫಲವಾಗಿ ಇದು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ನಿರುದ್ಯೋಗ ದರವು 7.2%ರಿಂದ 6.6% ಕ್ಕೆ ಇಳಿಕೆಯಾಗಿದೆ ಎನ್ನುವ ಅಂಶದ ಮೇಲೆ ವರದಿ ಬೆಳಕು ಚೆಲ್ಲಿದೆ.

ಉದ್ಯೋಗ ಹೆಚ್ಚಳಕ್ಕೆ ಕ್ರಮ

ಸರ್ಕಾರ, ಪಿಎಸ್‌ಯು ಮತ್ತು ರಕ್ಷಣಾ ಕೈಗಾರಿಕೆಗಳು (14%) ಉದ್ಯೋಗ ಒದಗಿಸುವಲ್ಲಿ ಮುಂದಿವೆ. ಸರ್ಕಾರದ ನೀತಿಗಳು ಮತ್ತು ಯೋಜನೆಗಳಾದ ‘ಮೇಕ್ ಇನ್ ಇಂಡಿಯಾ’, ಆತ್ಮ ನಿರ್ಭರ ಭಾರತ್ ರೋಜ್‌ಗಾರ್‌ ಯೋಜನೆ (ABRY) ಇತ್ಯಾದಿ ದೇಶದಲ್ಲಿ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಕಾರಣವಾಗಿವೆ. ಇವು ನಿರುದ್ಯೋಗ ದರವನ್ನು ಕಡಿಮೆ ಮಾಡಲು ಗಣನೀಯ ಕೊಡುಗೆ ಸಲ್ಲಿಸಿವೆ. ಮೆಟ್ರೋ ರೈಲು ಮತ್ತು ರೈಲುಗಳ(ವಂದೇ ಭಾರತ್ ಸೇವೆ ಸೇರಿದಂತೆ) ತ್ವರಿತ ವಿಸ್ತರಣೆಯೊಂದಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರ ಗರಿಷ್ಠ ಪ್ರಯತ್ನ ಪಡುತ್ತಿದೆ. “ಯುವ ಜನತೆ ಉದ್ಯೋಗಗಳನ್ನು ಪಡೆಯಲು ಕೌಶಲ್ಯವನ್ನು ಹೆಚ್ಚಿಸಬೇಕು. ಮುಂಬರುವ ದಿನಗಳಲ್ಲಿ ಹೊಸ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಇದೆʼʼ ಎಂದು ಫೌಂಡಿಟ್ ಹೇಳಿದೆ.

ವೇತನ ಶ್ರೇಣಿ

ಫ್ರೆಶರ್‌ಗಳಿಗೆ ಕನಿಷ್ಠ ವೇತನ 2,10,994 ರೂ.ಗಳಿಂದ (BPO / ITES) 3,94,794 ರೂ.ಗಳವರೆಗೆ (ಐಟಿ-ಹಾರ್ಡ್‌ವೇರ್‌, ಸಾಫ್ಟ್‌ವೇರ್‌) ಮತ್ತು 11-15 ವರ್ಷಗಳ ಅನುಭವ ಹೊಂದಿರುವ ವೃತ್ತಿಪರರಿಗೆ ವೇತನವು 19,60,577 ರೂ.ಗಳಿಂದ (ಬ್ಯಾಂಕಿಂಗ್ / ಹಣಕಾಸು ಸೇವೆಗಳು, ವಿಮೆ) 33,09,292 ರೂ.ಗಳವರೆಗೆ ಇದೆ. ಐಟಿ-ಹಾರ್ಡ್‌ವೇರ್‌, ಸಾಫ್ಟ್‌ವೇರ್‌ ಉದ್ಯಮವು ಹೆಚ್ಚಿನ ವೇತನವನ್ನು ನೀಡುತ್ತದೆ. ನಂತರದ ಸ್ಥಾನದಲ್ಲಿ ಬ್ಯಾಂಕಿಂಗ್ / ಹಣಕಾಸು ಸೇವೆಗಳು / ವಿಮಾ ಉದ್ಯಮ ಇದೆ. ಭಾರತದಲ್ಲಿ ನುರಿತ ಐಟಿ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇರುವುದು ಇದಕ್ಕೆ ಕಾರಣ. ಬಿಪಿಒ / ಐಟಿಇಎಸ್ ಮತ್ತು ಶಿಕ್ಷಣ ಉದ್ಯಮವು ಕಡಿಮೆ ವೇತನ ಶ್ರೇಣಿಗಳನ್ನು ಹೊಂದಿದೆ ಎಂದು ವರದಿ ತಿಳಿಸಿದೆ.

ಆಫೀಸ್ ಇಕ್ವಿಪ್‌ಮೆಂಟ್ ಮತ್ತು ಆಟೋಮೇಷನ್ ವಲಯವು ನೇಮಕಾತಿಯಲ್ಲಿ 4% ಬೆಳವಣಿಗೆಯನ್ನು ದಾಖಲಿಸಿದೆ. ಆಟೋಮೇಷನ್ ಮತ್ತು ಎಐ ತಂತ್ರಜ್ಞಾನಗಳ ಅಳವಡಿಕೆ ಉತ್ಪಾದಕತೆಯ ಹೆಚ್ಚಳ, ಜಿಡಿಪಿ ಬೆಳವಣಿಗೆಗೆ ಕಾರಣವಾಗಲಿದೆ. ಅಕ್ಟೋಬರ್‌ಗೆ ಹೋಲಿಸಿದರೆ ನವೆಂಬರ್‌ನಲ್ಲಿ ಬೆಳವಣಿಗೆ ದಾಖಲಿಸಿದ ಇತರ ಕೈಗಾರಿಕೆಗಳೆಂದರೆ ಚಿಲ್ಲರೆ ವ್ಯಾಪಾರ (3%) ಮತ್ತು ಹೆಲ್ತ್‌ಕೇರ್‌ / ಫಾರ್ಮಾಸ್ಯುಟಿಕಲ್ಸ್ ಕೈಗಾರಿಕೆ (2%).

ಗಮನಾರ್ಹ ಕೊಡುಗೆ ನೀಡಿದ ಎರಡನೇ ಹಂತದ ನಗರಗಳು

ಎರಡನೇ ಹಂತದ ನಗರಗಳಲ್ಲಿ ವೈವಿಧ್ಯಮಯ ಪ್ರತಿಭೆಗಳ ಲಭ್ಯತೆಯು ಹೆಚ್ಚುತ್ತಿದೆ. ಇದರ ಅಂಗವಾಗಿ ಕೊಯಮತ್ತೂರು ನೇಮಕಾತಿಯಲ್ಲಿ ಗಮನಾರ್ಹವಾದ 13% ಹೆಚ್ಚಳ ದಾಖಲಿಸಿದೆ. ಕೊಯಮತ್ತೂರು ಹೊರತುಪಡಿಸಿ ಕೇರಳದ ಕೊಚ್ಚಿಯಲ್ಲಿಯೂ ನೇಮಕಾತಿ ಚಟುವಟಿಕೆಯಲ್ಲಿ 4% ಹೆಚ್ಚಳವಾಗಿದೆ. ಇನ್ನು ಜೈಪುರದಲ್ಲಿ 2% ಹೆಚ್ಚಳ ಕಂಡುಬಂತು. ಇದಕ್ಕೆ ವಿರುದ್ಧವಾಗಿ ಕೋಲ್ಕತಾ, ಮುಂಬೈ ಮತ್ತು ಪುಣೆಯಂತಹ ಕೆಲವು ನಗರಗಳ ನೇಮಕಾತಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕ್ರಮವಾಗಿ 5%, 6% ಮತ್ತು 4%ರಷ್ಟು ಕುಸಿತ ದಾಖಲಿಸಿವೆ.

ಕುಸಿತ ಕಂಡುಬಂದ ಕ್ಷೇತ್ರಗಳು

ಎಂಜಿನಿಯರಿಂಗ್ / ಉತ್ಪಾದನೆ (-5%), ಸೀನಿಯರ್‌ ಮ್ಯಾನೇಜ್‌ಮೆಂಟ್‌ ಪೊಸಿಷನ್‌ (-4%), ಮಾರಾಟ ಮತ್ತು ಅಭಿವೃದ್ಧಿ (-4%), ಮತ್ತು ಗ್ರಾಹಕ ಸೇವಾ ಸ್ಥಾನಗಳು (-4%) ನೇಮಕಾತಿಯಲ್ಲಿ ಕುಸಿತ ದಾಖಲಿಸಿದವು. ಈ ತಿಂಗಳು ಮಾರ್ಕೆಟಿಂಗ್ ಮತ್ತು ಸಂವಹನ, ಸಾಫ್ಟ್‌ವೇರ್‌, ಹಾರ್ಡ್‌ವೇರ್‌ ಮತ್ತು ದೂರಸಂಪರ್ಕ ಕ್ಷೇತ್ರಗಳ ಚಟುವಟಿಕೆ ಮಧ್ಯ,ಮವಾಗಿತ್ತು.

ಇದನ್ನೂ ಓದಿ: Ram Temple: ರಾಮಮಂದಿರ ಉದ್ಘಾಟನೆಗೆ ರಾಮ, ಸೀತೆಗೂ ಆಹ್ವಾನ! ವಿಐಪಿ ಲಿಸ್ಟ್‌ನಲ್ಲಿ ಯಾರಿದ್ದಾರೆ?

Continue Reading

ದೇಶ

ಬೆಂಗಳೂರು ಸೇರಿ ದೇಶದ ಟಾಪ್ 7 ನಗರಗಳಲ್ಲಿ ಕಚೇರಿ ಬಾಡಿಗೆ ಹೆಚ್ಚಳ!

Bengaluru: ಬೆಂಗಳೂರು ಸೇರಿದಂತೆ ದೇಶದ 7 ನಗರಗಳಲ್ಲಿ ಕಚೇರಿ ಜಾಗ ಬಾಡಿಗೆ ಹೆಚ್ಚಳವಾಗಿದೆ. ಚೆನ್ನೈನಲ್ಲಿ ಈ ದರ ಅತ್ಯಧಿಕ ಇದೆ ಎಂದು ವರದಿ ತಿಳಿಸಿದೆ.

VISTARANEWS.COM


on

Office Rental Rises in top 7 cities including bengaluru
Koo

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲು ಆರು ತಿಂಗಳು ಬೆಂಗಳೂರು (Bengaluru) ಸೇರಿದಂತೆ ದೇಶದ ಟಾಪ್ 7 ನಗರಗಳಲ್ಲಿ (Top 7 Cities) ವಾಣಿಜ್ಯ ಕಚೇರಿ ಸ್ಥಳಾವಕಾಶದ ಚಟುವಟಿಕೆಗಳು ಅಷ್ಟೇನೂ ಪೂರಕವಾಗಿರಲಿಲ್ಲ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಸಾಕಷ್ಟು ಚಟುವಟಿಕೆಗಳು ಮಂದಗತಿಯಲ್ಲಿದ್ದವು ಎಂದು ಅನಾರಾಕ್ ತನ್ನ ಹೇಳಿಕೆಯಲ್ಲಿ ಹೇಳಿದೆ. ಈ ಮಧ್ಯೆ, ಬೆಂಗಳೂರು ಸೇರಿದಂತೆ ದೇಶದ ಏಳು ನಗರಗಳಲ್ಲಿ ಕಚೇರಿ ಬಾಡಿಗೆಯು ಶೇ.7ರಷ್ಟು ಹೆಚ್ಚಳವಾಗಿದೆ(Office Rental Rises). ಈ ಪೈಕಿ, ಚೆನ್ನೈ ನಗರವು (Chennai City) ಭಾರೀ ಬೆಳವಣಿಗೆ ಕಂಡಿದೆ.

ಸರಾಸರಿ ಮಾಸಿಕ ಕಚೇರಿ ಬಾಡಿಗೆ ಮೌಲ್ಯಗಳಲ್ಲಿ ಚೆನ್ನೈ ಅತ್ಯಧಿಕ ಶೇ.10 ರಷ್ಟು ವಾರ್ಷಿಕ ಏರಿಕೆಯನ್ನು ದಾಖಲಿಸಿದೆ. ಪ್ರತಿ ಚದರ ಅಡಿಗೆ 62 ರೂ. ರಿಂದ ಹೆಚ್ಚಳವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರತಿ ಚದರ ಅಡಿಗೆ 68 ರೂ. ಇತ್ತು. ವಾರ್ಷಿಕ ಶೇ.8ರ ಬೆಳವಣಿಗೆಯೊಂದಿಗೆ ಹೈದರಾಬಾದ್ ನಂತರದ ಸ್ಥಾನದಲ್ಲಿದೆ. ನಗರದಲ್ಲಿನ ಸರಾಸರಿ ಮಾಸಿಕ ಕಚೇರಿ ಬಾಡಿಗೆ ಮೌಲ್ಯವು 61 ರೂ.ನಿಂದ 66 ರೂ.ಗೆ ಏರಿಕೆಯಾಗಿದೆ. ಮತ್ತೊಂದೆಡೆ, ಬೆಂಗಳೂರು ಮತ್ತು ಪುಣೆ, ಕೋಲ್ಕೊತಾ ನಗರಗಳಲ್ಲಿ ವಾರ್ಷಿಕ ಶೇ.7 ಬೆಳವಣಿಗೆಯನ್ನು ದಾಖಲಾಗಿದೆ. ಮತ್ತೊಂದೆಡೆ ಮುಂಬೈ ಮತ್ತು ಎನ್‌ಸಿಆರ್‌ನಲ್ಲಿ ಈ ಪ್ರಮಾಣ ಶೇ.5ರಷ್ಟು ಏರಿಕೆಯಾಗಿದೆ.

2023ರ ವಿತ್ತ ವರ್ಷದ ಮೊದಲ ಅರ್ಧ ವರ್ಷಕ್ಕೆ ಹೋಲಿಸಿದರೆ, 2024ರ ವಿತ್ತ ವರ್ಷದ ಮೊದಲ ಆರ್ಥಿಕ ವರ್ಷದಲ್ಲಿ ದೇಶದ 7 ನಗರಗಳಲ್ಲಿ ಹೊಸ ಕಚೇರಿಯ ಬೇಡಿಕೆ ಪೂರೈಕೆಯ ಕೇವಲ ಶೇ.5ರಷ್ಟು ಏರಿಕೆಯಾಗಿದೆ. ಇದೇ ವೇಳೆ, ವಾರ್ಷಿಕ ಬೇಡಿಕೆಯಲ್ಲಿ ಶೇ.1ರಷ್ಟು ಕುಸಿತವಾಗಿದೆ.

ಟಿಎಂಎಫ್ ಜಾಗತಿಕ ಸುಸ್ಥಿರ ನಗರಗಳ ಚಾಲೆಂಜ್; ಬೆಂಗಳೂರು, ವಾರಾಣಸಿ ಶಾರ್ಟ್ ಲಿಸ್ಟ್

ಟೊಯೊಟಾ ಮೊಬಿಲಿಟಿ ಫೌಂಡೇಶನ್ (Toyota Mobility Foundation – TMF) 9 ಮಿಲಿಯನ್ ಡಾಲರ್ ಸುಸ್ಥಿರ ನಗರಗಳ ಚಾಲೆಂಜ್ ನಲ್ಲಿ ಅಗ್ರ 10 ನಗರಗಳಲ್ಲಿ ಬೆಂಗಳೂರು (Bengaluru) ಮತ್ತು ವಾರಣಾಸಿಯನ್ನು (Varanasi) ಶಾರ್ಟ್ ಲಿಸ್ಟ್ (Shortlisted) ಮಾಡಲಾಗಿದೆ ಎಂದು ಘೋಷಿಸಿದೆ. ಟೊಯೊಟಾ ಮೊಬಿಲಿಟಿ ಫೌಂಡೇಶನ್, ಚಾಲೆಂಜ್ ವರ್ಕ್ಸ್ ಮತ್ತು ವರ್ಲ್ಡ್ ರಿಸೋರ್ಸಸ್ ಇನ್ಸ್ಟಿಟ್ಯೂಟ್‌ನ ಬೆಂಬಲದೊಂದಿಗೆ ಜೂನ್ 2023 ರಲ್ಲಿ ಈ ಚಾಲೆಂಜ್ ಅನ್ನು ಪ್ರಾರಂಭಿಸಲಾಗಿತ್ತು. ಪ್ರಪಂಚದಾದ್ಯಂತದ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸುವ ಸಾಮರ್ಥ್ಯದೊಂದಿಗೆ ಚಲನಶೀಲತೆ ಕೇಂದ್ರಿತ ನಾವೀನ್ಯತೆಯನ್ನು ಬೆಂಬಲಿಸುವ ಮೂಲಕ ನಗರಗಳು ಭವಿಷ್ಯಕ್ಕಾಗಿ ಸಿದ್ಧವಾಗಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಈ ಪ್ರವೇಶ ಅವಧಿಯಲ್ಲಿ ಜಾಗತಿಕವಾಗಿ 46 ದೇಶಗಳ 150 ಕ್ಕೂ ಹೆಚ್ಚು ನಗರಗಳಿಂದ 200 ಕ್ಕೂ ಹೆಚ್ಚು ನಮೂದುಗಳನ್ನು ಸ್ವೀಕರಿಸಲಾಗಿದೆ. 1) ಚಾಲೆಂಜ್ ಫೋಕಸ್ 2) ನಾವೀನ್ಯತೆ 3) ಪರಿಣಾಮ 4) ಪಾಲುದಾರ ಸಾಮರ್ಥ್ಯದ ನಾಲ್ಕು ಪ್ರಮುಖ ಮಾನದಂಡಗಳ ಮೇಲೆ ಮೌಲ್ಯಮಾಪನ ಮಾಡಲಾಯಿತು. ಬ್ರೆಜಿಲ್, ಕೊಲಂಬಿಯಾ, ಭಾರತ, ಇಟಲಿ, ಮಲೇಷ್ಯಾ, ಮೆಕ್ಸಿಕೊ, ಯುನೈಟೆಡ್ ಕಿಂಗ್ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ನಗರಗಳು ಈ ಪಟ್ಟಿಯಲ್ಲಿವೆ.

ಈ ಸುದ್ದಿಯನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ತಪಾಸಣೆಗಾಗಿ ಇನ್ನು ಮೊಬೈಲ್, ಲ್ಯಾಪ್‌ಟ್ಯಾಪ್‌ ಟ್ರೇನಲ್ಲಿ ಇಡಬೇಕಿಲ್ಲ!

Continue Reading
Advertisement
IPL 2024 Auction
ಐಪಿಎಲ್ 202311 mins ago

IPL 2024: ಹರಾಜಿನಲ್ಲಿ ಯಾವ ತಂಡಕ್ಕೆ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ

Assembly session Drought HD Kumaraswamy
ಕರ್ನಾಟಕ16 mins ago

Assembly Session : ಬರ ಸಂತ್ರಸ್ತ ರೈತರ 2 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ; HDK ಆಗ್ರಹ

waiter beaten to death, tray of used plates touched guests in marriage
ಕ್ರೈಂ18 mins ago

ಬಳಸಿದ ಪ್ಲೇಟ್‌ಗಳಿದ್ದ ಟ್ರೆ ತಾಗಿದ್ದಕ್ಕೆ ವೇಟರ್‌ನನ್ನು ಹೊಡೆದು ಕೊಂದೇ ಬಿಟ್ರು!

Krishna Byregowda Central assistance
ಕರ್ನಾಟಕ46 mins ago

Assembly Session : ಕೇಂದ್ರ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆ; ಪೈಸೆ ಪೈಸೆ ಲೆಕ್ಕ ಕೊಟ್ಟ ಕೃಷ್ಣ ಬೈರೇಗೌಡ

Karnataka Drought
ಕರ್ನಾಟಕ56 mins ago

Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ

IT raids on liquor traders across Odisha and Jharkhand
ದೇಶ58 mins ago

ತೆರಿಗೆಗಳ್ಳರ ಮೇಲೆ ಐಟಿ ದಾಳಿ; ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

Attendance Araga Jnanendra UT Khader Araga jnanendra
ಕರ್ನಾಟಕ1 hour ago

Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Madhu Bangarappa in Belagavi Winter Session
ಕರ್ನಾಟಕ2 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Pressmeet for Demand for construction of bypass road in Yallapur
ಉತ್ತರ ಕನ್ನಡ2 hours ago

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Israel
ಪ್ರಮುಖ ಸುದ್ದಿ2 hours ago

Israel Palestine War: ಅರ್ಧದಷ್ಟು ಹಮಾಸ್ ಕಮಾಂಡರ್‌ಗಳು ಫಿನಿಷ್! ಇಸ್ರೇಲ್ ಹೇಳಿಕೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ2 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ2 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ8 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ15 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ23 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌