Uniform Civil Code: ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು ಸಮಾನ ನಾಗರಿಕ ಸಂಹಿತೆ ವಿಧೇಯಕ ಮಂಡನೆ - Vistara News

ದೇಶ

Uniform Civil Code: ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು ಸಮಾನ ನಾಗರಿಕ ಸಂಹಿತೆ ವಿಧೇಯಕ ಮಂಡನೆ

ಈ ವಿಧೇಯಕ ಅಂಗೀಕಾರಗೊಂಡು ಕಾನೂನು ಜಾರಿಗೆ ಬಂದರೆ, ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆಯನ್ನು (Uniform Civil Code) ಅಳವಡಿಸಿಕೊಂಡ ದೇಶದ ಮೊದಲ ರಾಜ್ಯವಾಗಲಿದೆ.

VISTARANEWS.COM


on

pushkar singh dhami
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಉತ್ತರಾಖಂಡ ಸರ್ಕಾರ ವಿಧಾನಸಭೆಯಲ್ಲಿ (Uttarakhand Assembly) ಇಂದು ಏಕರೂಪ ನಾಗರಿಕ ಸಂಹಿತೆಯ (Uniform Civil Code – UCC – ಯುಸಿಸಿ) ಅಂತಿಮ ಕರಡನ್ನು ಮಂಡಿಸಲಿದೆ. ರಾಜ್ಯ ಸಚಿವ ಸಂಪುಟದಲ್ಲಿ ಇದನ್ನು ಕೆಲವೇ ದಿನಗಳ ಹಿಂದೆ ಅಂಗೀಕರಿಸಲಾಗಿತ್ತು.

UCCಯು ಭಾರತದ ಎಲ್ಲಾ ನಾಗರಿಕರಿಗೆ ಅನ್ವಯಿಸುವ ಸಾಮಾನ್ಯ ಕಾನೂನುಗಳನ್ನು ಸೂಚಿಸುತ್ತದೆ. ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರ ಸೇರಿದಂತೆ ಹತ್ತು ಹಲವು ವೈಯಕ್ತಿಕ ವಿಷಯಗಳನ್ನು ಧರ್ಮನಿರಪೇಕ್ಷವಾಗಿ ಜೋಡಿಸುತ್ತದೆ.

ಈ ವಿಧೇಯಕ ಅಂಗೀಕಾರಗೊಂಡು ಕಾನೂನು ಜಾರಿಗೆ ಬಂದರೆ, ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡ ದೇಶದ ಮೊದಲ ರಾಜ್ಯವಾಗಲಿದೆ. ಅಸ್ಸಾಂ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವಾರು ಇತರ ಬಿಜೆಪಿ ಆಡಳಿತದ ರಾಜ್ಯಗಳು ಇದೇ ರೀತಿ ಕಾಯಿದೆ ತರಲು ಆಸಕ್ತಿ ವ್ಯಕ್ತಪಡಿಸಿವೆ. ಗೋವಾ ರಾಜ್ಯ ಪೋರ್ಚುಗೀಸ್ ಆಳ್ವಿಕೆಯಲ್ಲಿದ್ದಾಗಿನಿಂದಲೂ ಸಾಮಾನ್ಯ ನಾಗರಿಕ ಸಂಹಿತೆಯನ್ನು ಹೊಂದಿದೆ.

ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಿರುವ ಕರಡು ಮಸೂದೆಯಲ್ಲಿ ಬಹುಪತ್ನಿತ್ವವನ್ನು ಸಂಪೂರ್ಣ ನಿಷೇಧಿಸುವಂತೆ ಸರ್ಕಾರ ಕೋರಿದೆ ಎಂದು ಮೂಲಗಳು ತಿಳಿಸಿವೆ. ಲಿವ್-ಇನ್ ಜೋಡಿಗಳು ತಮ್ಮ ಸಂಬಂಧವನ್ನು ನೋಂದಾಯಿಸುವ ಕುರಿತು ಸಹ ಒಂದು ನಿಬಂಧನೆ ಇದೆ. ಕಾಯಿದೆಯಲ್ಲಿ, ಪ್ರತಿಯೊಬ್ಬರಿಗೂ ದತ್ತು ಹಕ್ಕು ಸಿಗಲಿದೆ. ಮಗ ಮತ್ತು ಮಗಳಿಬ್ಬರಿಗೂ ಸಮಾನವಾದ ಉತ್ತರಾಧಿಕಾರದ ಹಕ್ಕುಗಳನ್ನು ಸ್ಥಾಪಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಜೂನ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಏಕರೂಪ ನಾಗರಿಕ ಸಂಹಿತೆಗೆ ದೊಡ್ಡ ಒತ್ತು ನೀಡಿದ್ದರು. “ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ. ವಿಭಿನ್ನ ಪ್ರಜೆಗಳಿಗೆ ವಿಭಿನ್ನವಾದ ಕೌಟುಂಬಿಕ ನಿಯಮಗಳನ್ನು ಹೊಂದುವುದು ಕೆಲಸ ಮಾಡುವುದಿಲ್ಲ” ಎಂದಿದ್ದರು ಮೋದಿ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (pushkar singh dhami) ಅವರು ರಚಿಸಿದ್ದ ಸಮಿತಿಯು ಈ ವರ್ಷದ ಆರಂಭದಲ್ಲಿ ಕರಡನ್ನು ಸಿದ್ಧಪಡಿಸಿದೆ. ಸಮಿತಿಯು 2 ಲಕ್ಷಕ್ಕೂ ಹೆಚ್ಚು ಜನರು ಮತ್ತು ಪ್ರಮುಖ ಪಾಲುದಾರರೊಂದಿಗೆ ಚರ್ಚಿಸಿದೆ.

ಉತ್ತರಾಖಂಡಕ್ಕೆ ಏಕರೂಪ ನಾಗರಿಕ ಸಂಹಿತೆ 2022ರ ವಿಧಾನಸಭಾ ಚುನಾವಣೆಯಲ್ಲಿ ಪುಷ್ಕರ್‌ ಧಾಮಿ ಅವರ ಪ್ರಮುಖ ಚುನಾವಣಾ ಭರವಸೆಯಾಗಿತ್ತು. ಅನೇಕ ರಾಜ್ಯಗಳು ಉತ್ತರಾಖಂಡದ ಮಾದರಿಯನ್ನು ಅನುಸರಿಸಲಿವೆ; ಯುಸಿಸಿಯನ್ನು ಜಾರಿಗೆ ತರಲು ರಾಜ್ಯವು ಒದಗಿಸಿದ ಮಾದರಿಯನ್ನು ಬಳಸಬೇಕೆಂದು ಮುಖ್ಯಮಂತ್ರಿ ಆಶಿಸಿದ್ದಾರೆ.

ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಉತ್ತರಾಖಂಡ ಸಂಪುಟ ಗ್ರೀನ್‌ ಸಿಗ್ನಲ್;‌ ಜಾರಿಯೊಂದೇ ಬಾಕಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

Maoists killed: ಹೆಚ್ಚಾಗಿ ನಕ್ಸಲೀಯರ ಓಡಾಟವಿರುವ ನಾರಾಯಣಪುರ-ಕಂಕೇರ್ ಗಡಿಯಲ್ಲಿರುವ ಅಬುಜ್ಮದ್ ಕಾಡಿನಲ್ಲಿ ಈ ಘರ್ಷಣೆ ನಡೆಯಿತು. ಅಲ್ಲಿ ಮೀಸಲು ಪೊಲೀಸ್ ಮಹಾನಿರ್ದೇಶನಾಲಯ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸಿಬ್ಬಂದಿ ಮಂಗಳವಾರ ಬೆಳಿಗ್ಗೆ ಶಂಕಿತ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿದರು.

VISTARANEWS.COM


on

maoists killed bastar
Koo

ಹೊಸದಿಲ್ಲಿ:‌ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ (Security forces) ನಡೆದ ಗುಂಡಿನ ಚಕಮಕಿಯಲ್ಲಿ (encounter) ಕನಿಷ್ಠ ಏಳು ಮಾವೋವಾದಿಗಳು (Maoists killed) ಹತರಾಗಿದ್ದಾರೆ. ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯ ನಂತರ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಏಳು ಮಾವೋವಾದಿಗಳ ಮೃತದೇಹಗಳು ಪತ್ತೆಯಾಗಿವೆ.

ಹೆಚ್ಚಾಗಿ ನಕ್ಸಲೀಯರ ಓಡಾಟವಿರುವ ನಾರಾಯಣಪುರ-ಕಂಕೇರ್ ಗಡಿಯಲ್ಲಿರುವ ಅಬುಜ್ಮದ್ ಕಾಡಿನಲ್ಲಿ ಈ ಘರ್ಷಣೆ ನಡೆಯಿತು. ಅಲ್ಲಿ ಮೀಸಲು ಪೊಲೀಸ್ ಮಹಾನಿರ್ದೇಶನಾಲಯ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸಿಬ್ಬಂದಿ ಮಂಗಳವಾರ ಬೆಳಿಗ್ಗೆ ಶಂಕಿತ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿದರು.

“ನಾರಾಯಣಪುರ-ಕಂಕೇರ್ ಗಡಿ ಪ್ರದೇಶದ ಅಬುಜ್ಮದ್‌ನಲ್ಲಿ ಇಂದು ಬೆಳಿಗ್ಗೆಯಿಂದ ಡಿಆರ್‌ಜಿ ಮತ್ತು ಎಸ್‌ಟಿಎಫ್ ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ. “ಎಲ್ಲಾ ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಎನ್‌ಕೌಂಟರ್ ಇನ್ನೂ ನಡೆಯುತ್ತಿದೆ. ಸಾವುನೋವುಗಳ ಅಂತಿಮ ಸಂಖ್ಯಯನ್ನು ಈಗ ಹೇಳಲು ಆಗದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳು ಹತರಾದ ಕೆಲವು ದಿನಗಳ ನಂತರ ಈ ಕಾರ್ಯಾಚರಣೆ ನಡೆದಿದೆ. ಅವರಲ್ಲಿ ಹಿರಿಯ ಮಾವೋವಾದಿ ನಾಯಕರಾದ ಶಂಕರ್ ರಾವ್ ಮತ್ತು ಲಲಿತಾ ಮೆರವಿ ಅವರ ತಲೆಯ ಮೇಲೆ ₹8 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು. ಇದಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಕ್ಸಲರನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ್ದು, ಸದ್ಯದಲ್ಲೇ ಛತ್ತೀಗಢ ಮತ್ತು ಭಾರತ ನಕ್ಸಲ್‌ ಮುಕ್ತವಾಗಲಿದೆ ಎಂದು ಹೇಳಿದ್ದರು.

ಛತ್ತೀಸ್‌ಗಢವು ಹಲವು ದಶಕಗಳಿಂದ ನಕ್ಸಲೈಟ್‌, ಮಾವೋವಾದಿಗಳ ಭೀತಿ ಎದುರಿಸುತ್ತಿದೆ. ವಿಶೇಷವಾಗಿ ಬಸ್ತಾರ್ ಪ್ರದೇಶವು ನಕ್ಸಲ್ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿದೆ. ಇಲ್ಲಿ ಆಗಾಗ ಹಿಂಸಾಚಾರ ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ ನಡೆಯುತ್ತಲೇ ಇರುತ್ತದೆ. ನಕ್ಸಲರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವುದು, ಸ್ಥಳೀಯ ಅಭಿವೃದ್ಧಿಗೆ ಆದ್ಯತೆ ನೀಡುವುದು ಮತ್ತು ಶರಣಾಗುವ ನಕ್ಸಲರಿಗೆ ಪುನರ್ವಸತಿ ಕಲ್ಪಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಆದಾಗ್ಯೂ ಈ ಪ್ರಯತ್ನಗಳ ಹೊರತಾಗಿಯೂ ರಾಜ್ಯದಲ್ಲಿ ನಕ್ಸಲ್ ಹಾವಳಿ ಮುಂದುವರಿದಿದೆ.

ಇದನ್ನೂ ಓದಿ: Kanker Encounter: ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

Continue Reading

ಪ್ರಮುಖ ಸುದ್ದಿ

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ʼರಾʼ ಕೈವಾಡ: ವಾಷಿಂಗ್ಟನ್‌ ವರದಿಗೆ ಭಾರತ ಕಟು ಟೀಕೆ

Gurpatwant Singh Pannun: ವಿಕ್ರಮ್ ಯಾದವ್ ಎಂದು ಗುರುತಿಸಲಾದ ರಾ ಅಧಿಕಾರಿಯು ಯುಎಸ್‌ನಲ್ಲಿ ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್‌ನ “ತನಿಖಾ” ವರದಿ ಮಾಡಿತ್ತು. ಈ ಬಳಿಕ MEA ಹೇಳಿಕೆ ಬಂದಿದೆ. ಆ ಸಂದರ್ಭದಲ್ಲಿ ಬೇಹುಗಾರಿಕಾ ಸಂಸ್ಥೆಯ ಮುಖ್ಯಸ್ಥ ಸಮಂತ್ ಗೋಯೆಲ್ ಆಗಿದ್ದರು ಎಂದು ವರದಿ ತಿಳಿಸಿದೆ.

VISTARANEWS.COM


on

Khalistani Separatist Gurpatwant Singh Pannun
Koo

ಹೊಸದಿಲ್ಲಿ: ಅಮೆರಿಕದಲ್ಲಿ ಖಲಿಸ್ತಾನಿ ನಾಯಕ (Khalistan Leader) ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ (murder plot) ಭಾರತದ ʼರಾʼ (RAW) ಅಧಿಕಾರಿಯ ಕೈವಾಡದ ಕುರಿತು ವಾಷಿಂಗ್ಟನ್ ಪೋಸ್ಟ್ (Washington Post) ಮಾಡಿದ ವರದಿಗೆ ಭಾರತ ಮಂಗಳವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ವರದಿಯನ್ನು “ಅನುಚಿತ ಮತ್ತು ಆಧಾರರಹಿತ” ಎಂದು ಟೀಕಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್, “ಅಮೆರಿಕ ಹಂಚಿಕೊಂಡಿರುವ ಭದ್ರತಾ ಕಳವಳಗಳನ್ನು ಪರಿಶೀಲಿಸಲು ಭಾರತ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಸಮಿತಿಯ ತನಿಖೆ ನಡೆಯುತ್ತಿದೆ. ಸಂಘಟಿತ ಅಪರಾಧಿಗಳು, ಭಯೋತ್ಪಾದಕರು ಮತ್ತು ಇತರರ ನೆಟ್‌ವರ್ಕ್‌ಗಳ ಬಗ್ಗೆ ಸರ್ಕಾರವು ಊಹಾತ್ಮಕ ಮತ್ತು ಬೇಜವಾಬ್ದಾರಿಯುತ ಕಾಮೆಂಟ್‌ಗಳನ್ನು ಮಾಡುವುದಿಲ್ಲ ಹಾಗೂ ಅಂಥ ವರದಿಗಳು ಸಹಾಯಕವಾಗುವುದಿಲ್ಲ” ಎಂದಿದ್ದಾರೆ.

ವಿಕ್ರಮ್ ಯಾದವ್ ಎಂದು ಗುರುತಿಸಲಾದ ರಾ ಅಧಿಕಾರಿಯು ಯುಎಸ್‌ನಲ್ಲಿ ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್‌ನ “ತನಿಖಾ” ವರದಿ ಮಾಡಿತ್ತು. ಈ ಬಳಿಕ MEA ಹೇಳಿಕೆ ಬಂದಿದೆ. ಆ ಸಂದರ್ಭದಲ್ಲಿ ಬೇಹುಗಾರಿಕಾ ಸಂಸ್ಥೆಯ ಮುಖ್ಯಸ್ಥ ಸಮಂತ್ ಗೋಯೆಲ್ ಆಗಿದ್ದರು ಎಂದು ವರದಿ ತಿಳಿಸಿದೆ.

ಖಲಿಸ್ತಾನ್ ಚಳವಳಿಯ ಪ್ರಮುಖ ಉಗ್ರರಲ್ಲಿ ಒಬ್ಬನಾದ ಗುರುಪತ್ವಂತ್ ಸಿಂಗ್ ಪನ್ನುನ್, ಸಿಖ್ಸ್ ಫಾರ್ ಜಸ್ಟಿಸ್‌ನ ಕಾನೂನು ಸಲಹೆಗಾರ ಮತ್ತು ವಕ್ತಾರನಾಗಿದ್ದಾನೆ. ಇದು ಪ್ರತ್ಯೇಕ ಸಿಖ್ ದೇಶದ ಕಲ್ಪನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಭಾರತ ಸರ್ಕಾರ ಗುರುಪತ್ವಂತ್ ಸಿಂಗ್ ಪನ್ನೂನ್‌ನನ್ನು ಭಯೋತ್ಪಾದಕ ಎಂದು ಘೋಷಿಸಿದೆ.

ಏತನ್ಮಧ್ಯೆ, ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಯ ಸಂಚಿನ ಆರೋಪಗಳನ್ನು ಭಾರತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಶ್ವೇತಭವನ ಸೋಮವಾರ ಹೇಳಿದೆ. ಆದಾಗ್ಯೂ, ಈ ವಿಷಯದ ಬಗ್ಗೆ ಎಫ್‌ಬಿಐ ತನಿಖೆ ಮತ್ತು ನ್ಯಾಯಾಂಗ ಇಲಾಖೆ ಸಲ್ಲಿಸಿದ ಕ್ರಿಮಿನಲ್ ಮೊಕದ್ದಮೆಯ ಬಗ್ಗೆ ಪ್ರತಿಕ್ರಿಯಿಸಿಲ್ಲ. ವಾಷಿಂಗ್ಟನ್ ಪೋಸ್ಟ್‌ನ ವರದಿಯ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್, ತನಿಖೆ ನಡೆಯುತ್ತಿದೆ ಮತ್ತು ನ್ಯಾಯಾಂಗ ಇಲಾಖೆ (ಡಿಒಜೆ) ಕ್ರಿಮಿನಲ್ ತನಿಖೆ ನಡೆಸುತ್ತಿದೆ ಎಂದು ಹೇಳಿದರು.

“ಭಾರತವು ಯುನೈಟೆಡ್ ಸ್ಟೇಟ್ಸ್‌ನ ಪ್ರಮುಖ ಕಾರ್ಯತಂತ್ರದ ಪಾಲುದಾರ ಮತ್ತು ನಾವು ಹಲವಾರು ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ವಿಸ್ತರಿಸಲು ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ಅನುಸರಿಸುತ್ತಿದ್ದೇವೆ” ಎಂದು ಅವರು ಪ್ರತಿಪಾದಿಸಿದರು

ಸುದ್ದಿ ವರದಿಯ ಬಗ್ಗೆ, “ಇದು ಗಂಭೀರ ವಿಷಯವಾಗಿದೆ ಮತ್ತು ನಾವು ಬಹಳ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ತಾವು ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಭಾರತ ಸರ್ಕಾರವು ನಮ್ಮೊಂದಿಗೆ ಸ್ಪಷ್ಟವಾಗಿ ಹೇಳಿದೆ” ಎಂದು ಜೀನ್-ಪಿಯರ್ ಹೇಳಿದರು. “ನಾವು ಅದರ ಆಧಾರದ ಮೇಲೆ ಭಾರತ ಸರ್ಕಾರದಿಂದ ಉತ್ತರದಾಯಿತ್ವವನ್ನು ನಿರೀಕ್ಷಿಸುತ್ತೇವೆ. ನಾವು ನಮ್ಮ ಕಳವಳ ವ್ಯಕ್ತಪಡಿಸುವುದನ್ನು ಮುಂದುವರಿಸಲಿದ್ದೇವೆ” ಎಂದಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಮಾರಣಾಂತಿಕ ಗುಂಡಿನ ದಾಳಿಯಲ್ಲಿ ಕೊಲ್ಲಲಾಗಿತ್ತು. ಯುಎಸ್‌ನಲ್ಲಿ ಪನ್ನುನ್‌ನನ್ನು ಕೊಲ್ಲುವ ಸಂಚು ಜೂನ್ 18ರಂದು ಬಯಲಾಗಿತ್ತು.

ಇದನ್ನೂ ಓದಿ: ಖಲಿಸ್ತಾನಿ ಉಗ್ರರಿಂದ ಕೇಜ್ರಿವಾಲ್‌ಗೆ 133 ಕೋಟಿ ರೂ. ಸಂದಾಯ; ಪನ್ನುನ್‌ ಸ್ಫೋಟಕ ಮಾಹಿತಿ

Continue Reading

ಆರೋಗ್ಯ

Ayushman Bharat Diwas 2024: 50 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವ ಅಯುಷ್ಮಾನ್ ಭಾರತ್

Ayushman Bharat Diwas 2024: ದೇಶಾದ್ಯಂತ ಇಂದು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸಲಾಗುತ್ತಿದೆ. ಆಯುಷ್ಮಾನ್ ಭಾರತ್ ದಿವಸ್ ಅನ್ನು ಏಪ್ರಿಲ್ 30ರಂದು ಗುರುತಿಸಲಾಗಿದೆ. 2018ರ ಸೆಪ್ಟೆಂಬರ್ 23ರಂದು ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆಯ (AB-PMJAY) ಪ್ರಾರಂಭದ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಡಿರುವ ಸ್ಫೂರ್ತಿದಾಯಕ ಮಾತುಗಳು ಇಲ್ಲಿವೆ.

VISTARANEWS.COM


on

By

Ayushman Bharat Diwas 2024
Koo

ಬಡ ವರ್ಗದ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ 2018ರ ಸೆಪ್ಟೆಂಬರ್ 23ರಂದು ಜಾರಿಗೊಳಿಸಲಾಗಿರುವ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಕುರಿತು ಜನರಲ್ಲಿ ಅರಿವು ಮೂಡಿಸಲು ಇಂದು ದೇಶಾದ್ಯಂತ ಆಯುಷ್ಮಾನ್ ಭಾರತ್ ದಿನವನ್ನು (Ayushman Bharat Diwas 2024) ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಜನರ ಅರೋಗ್ಯ ರಕ್ಷಣೆಯ ಕುರಿತು ಪ್ರಧಾನಿ (PM) ನರೇಂದ್ರ ಮೋದಿ (narendra modi) ಹೇಳಿರುವ ಸ್ಫೂರ್ತಿದಾಯಕ ಮಾತುಗಳು ಹೀಗಿವೆ.

ಆಯುಷ್ಮಾನ್ ಭಾರತ್ ದಿವಸ್ ಅನ್ನು ಏಪ್ರಿಲ್ 30ರಂದು ಗುರುತಿಸಲಾಗಿದೆ. 2018ರ ಸೆಪ್ಟೆಂಬರ್ 23ರಂದು ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆಯ (AB-PMJAY) ಪ್ರಾರಂಭದ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತದೆ. AB-PMJAY ಎಂಬುದು ಫಲಾನುಭವಿಗಳಿಗೆ ಆರೋಗ್ಯ ರಕ್ಷಣೆ ಒದಗಿಸುವ ಗುರಿಯನ್ನು ಹೊಂದಿದೆ. ದ್ವಿತೀಯ ಮತ್ತು ತೃತೀಯ ಆಸ್ಪತ್ರೆಯ ಆರೈಕೆಗಾಗಿ 5 ಲಕ್ಷ ರೂ.ವರೆಗೆ ಉಚಿತ ವೆಚ್ಚವನ್ನು ಒದಗಿಸಲಾಗುತ್ತದೆ.

ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜಂಟಿಯಾಗಿ ಹಣವನ್ನು ನೀಡಲಾಗುತ್ತದೆ. 2021ರ ಜುಲೈ ವೇಳೆಗೆ AB-PMJAY ಅನ್ನು ಪಶ್ಚಿಮ ಬಂಗಾಳ, ದೆಹಲಿಯ NCT ಮತ್ತು ಒಡಿಶಾ ಹೊರತುಪಡಿಸಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಳವಡಿಸಲಾಗಿದೆ.

ಇದನ್ನೂ ಓದಿ: Ayushman Bharat Diwas: ಇಂದು ಆಯುಷ್ಮಾನ್ ಭಾರತ್ ದಿನ; ಏನಿದರ ಮಹತ್ವ?

ಮಾನದಂಡವೇನು?

ಅಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳು 2011ರ ಸಾಮಾಜಿಕ- ಆರ್ಥಿಕ ಮತ್ತು ಜಾತಿ ಜನಗಣತಿಯಲ್ಲಿ (SECC) ಉಲ್ಲೇಖಿಸಲಾದ ಮಾನದಂಡಗಳ ಮೇಲೆ ಅರ್ಹರಾಗಿರುತ್ತಾರೆ.

ಮನೆಯಿಲ್ಲದ, ಭೂರಹಿತ ಕುಟುಂಬಗಳು, ಕೂಲಿ ಪಡೆಯುವ ಕಾರ್ಮಿಕರು, ಬುಡಕಟ್ಟು ಜನರು.. ಸೇರಿದಂತೆ ಸರ್ಕಾರ ನಿಗದಿಪಡಿಸುವ ಮಾನದಂಡದ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ನಿವಾಸಿಗಳಿಗೆ ಅರ್ಹತೆಯು ವಿಭಿನ್ನವಾಗಿದೆ.


50 ಕೋಟಿಗೂ ಹೆಚ್ಚು ಅರ್ಹರು

2011ರ ಸಾಮಾಜಿಕ-ಆರ್ಥಿಕ ಜಾತಿ ಜನಗಣತಿ (ಎಸ್‌ಇಸಿಸಿ) ಪಟ್ಟಿಯನ್ನು ಆಧರಿಸಿ ಆಯುಷ್ಮಾನ್ ಭಾರತ್ ಯೋಜನೆಯಡಿ 50 ಕೋಟಿಗೂ ಹೆಚ್ಚು ಜನರನ್ನು ಅರ್ಹರೆಂದು ಗುರುತಿಸಲಾಗಿದೆ. ಎಲ್ಲಾ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ಕಾರ್ಡ್ ಹೊಂದಿರುವವರು ಸಹ ಈ ಯೋಜನೆಗೆ ಅರ್ಹರಾಗಿದ್ದಾರೆ. ಅವರ ಅರ್ಹತೆಯನ್ನು ಪರಿಶೀಲಿಸಲು ಒಬ್ಬರು AB-PMJAY ಸಹಾಯವಾಣಿಗೆ 14555 ಅಥವಾ 1800-111-565ಗೆ ಕರೆ ಮಾಡಬಹುದು.

ಆರೋಗ್ಯ ಕುರಿತು ಪ್ರಧಾನಿ ಮೋದಿ ಮಾತುಗಳು…

  • – ಉತ್ತಮ ಆರೋಗ್ಯವು ಮಾನವನ ಪ್ರಗತಿ ಮತ್ತು ಸಮೃದ್ಧಿಯ ಅಡಿಪಾಯವಾಗಿದೆ. ಸ್ವಚ್ಛ ಭಾರತ ಅಭಿಯಾನವು ಸ್ವಚ್ಛ ಬೀದಿಗಳ ಬಗ್ಗೆ ಮಾತ್ರವಲ್ಲ, ಎಲ್ಲರಿಗೂ ಆರೋಗ್ಯಕರ ವಾತಾವರಣವನ್ನು ನಿರ್ಮಿಸುವುದಾಗಿದೆ.
  • – ನಮ್ಮ ಆರೋಗ್ಯ ವ್ಯವಸ್ಥೆಯಲ್ಲಿ ನಾವು ಸಮಗ್ರ ವಿಧಾನವನ್ನು ಅಳವಡಿಸಿಕೊಂಡಿದ್ದೇವೆ. ಇಂದು ನಮ್ಮ ಗಮನವು ಆರೋಗ್ಯದ ಮೇಲೆ ಮಾತ್ರವಲ್ಲ, ಕ್ಷೇಮದ ಮೇಲೆಯೂ ಇದೆ. ಆರೋಗ್ಯ ರಕ್ಷಣೆಯು ಪ್ರತಿ ಸರ್ಕಾರದ ಆದ್ಯತೆಯಾಗಿರಬೇಕು.

– ರಿಮೋಟ್ ಹೆಲ್ತ್‌ಕೇರ್ ಮತ್ತು ಟೆಲಿಮೆಡಿಸಿನ್ ಭಾರತದ ನಗರ ಮತ್ತು ಗ್ರಾಮೀಣ ಪ್ರದೇಶದ ನಡುವಿನ ಆರೋಗ್ಯ ಪ್ರವೇಶ ವಿಭಜನೆಯನ್ನು ಕಡಿಮೆ ಮಾಡುತ್ತದೆ. ಆಯುಷ್ಮಾನ್ ಭಾರತ್ ನವ ಭಾರತದ ಕ್ರಾಂತಿಕಾರಿ ಹೆಜ್ಜೆಗಳಲ್ಲಿ ಒಂದಾಗಿದೆ. ಇದು ದೇಶದ ಜನಸಾಮಾನ್ಯರ ಮತ್ತು ಬಡವರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂಬ ಕಾರಣಕ್ಕಾಗಿ ಮಾತ್ರವಲ್ಲದೆ, ಭಾರತವನ್ನು ಪ್ರತಿನಿಧಿಸುವ 130 ಕೋಟಿ ಜನರ ಸಾಮೂಹಿಕ ಸಂಕಲ್ಪ ಮತ್ತು ಶಕ್ತಿಯ ಸಂಕೇತವಾಗಿದೆ.

  • – ಉತ್ತಮ ಆರೋಗ್ಯ ಮೂಲಸೌಕರ್ಯವು ಕೇವಲ ಸೌಲಭ್ಯವಲ್ಲ, ಇದು ಆರೋಗ್ಯ ಸೇವೆಗಳ ಬೇಡಿಕೆಯನ್ನು ಹೆಚ್ಚಿಸುತ್ತದೆ. ಇದು ಹೆಚ್ಚಿನ ಉದ್ಯೋಗವನ್ನು ಸೃಷ್ಟಿಸಲು ಉತ್ತಮ ಮಾರ್ಗವಾಗಿದೆ. ನಾವು ದೇಶದಲ್ಲಿ ಫಿಟ್ನೆಸ್ ಸಂಸ್ಕೃತಿಯನ್ನು ರಚಿಸಬೇಕಾಗಿದೆ. ಜೈವಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನೆ, ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳಲ್ಲಿ ಸ್ವಾವಲಂಬನೆ ಇಲ್ಲದೆ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ನಮ್ಮ ಉದ್ದೇಶಗಳನ್ನು ಸಾಧಿಸಲಾಗುವುದಿಲ್ಲ.
  • – ಗುಣಮಟ್ಟದ ಮತ್ತು ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಪಡೆಯುವುದು ಪ್ರತಿಯೊಬ್ಬ ನಾಗರಿಕನ ಹಕ್ಕು.
Continue Reading

ಪ್ರಮುಖ ಸುದ್ದಿ

Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

Hassan pen drive case: ಇದುವರೆಗೆ ಕ್ರಮ ಕೈಗೊಳ್ಳದಿರುವ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕೂಡ ಗೃಹ ಸಚಿವರು ಮತ್ತಷ್ಟು ತರಾಟೆಗೆ ತೆಗೆದುಕೊಂಡರು. “ಚುನಾವಣೆಯ ಸಂದರ್ಭದಲ್ಲಿಯೇ ಈ ವಿಡಿಯೋ ಯಾಕೆ ಹರಿದಾಡಬೇಕು? ಈ ಸಮಯಸಾಧಕತನ ಸಂಶಯ ಮೂಡಿಸುತ್ತಿದೆ” ಎಂದವರು ಹೇಳಿದ್ದಾರೆ.

VISTARANEWS.COM


on

amith shah Hassan pen drive case:
Koo

ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (JDS MP Prajwal Revanna) ಅವರ ಅಶ್ಲೀಲ ಟೇಪ್ ವಿವಾದಕ್ಕೆ (Hassan pen drive case) ಕೇಂದ್ರ ಗೃಹ ಸಚಿವ ಅಮಿತ್ ಶಾ (Home minister Amit Shah) ಅವರು ಮಂಗಳವಾರ ಪ್ರತಿಕ್ರಿಯಿಸಿದ್ದು, “ಇದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಹಾಗೆಯೇ ಈ ಪ್ರಕರಣದಲ್ಲಿ ರಾಜಕೀಯ ಕೈವಾಡದ ಬಗೆಗೂ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

“ಇದನ್ನು ಸಹಿಸಲು ಸಾಧ್ಯವಿಲ್ಲ. ಬಿಜೆಪಿಯ ನಿಲುವು ಈ ವಿಚಾರದಲ್ಲಿ ಸ್ಪಷ್ಟವಾಗಿದೆ- ನಾವು ನಾರಿ ಶಕ್ತಿಯೊಂದಿಗೆ ನಿಲ್ಲುತ್ತೇವೆ” ಎಂದು ಅವರು ಹೇಳಿದರು. ಈ ಪ್ರಕರಣದಲ್ಲಿ ಇದುವರೆಗೆ ಕ್ರಮ ಕೈಗೊಳ್ಳದಿರುವ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕೂಡ ಗೃಹ ಸಚಿವರು ಮತ್ತಷ್ಟು ತರಾಟೆಗೆ ತೆಗೆದುಕೊಂಡರು. “ಚುನಾವಣೆಯ ಸಂದರ್ಭದಲ್ಲಿಯೇ ಈ ವಿಡಿಯೋ ಯಾಕೆ ಹರಿದಾಡಬೇಕು? ಈ ಸಮಯಸಾಧಕತನ ಸಂಶಯ ಮೂಡಿಸುತ್ತಿದೆ” ಎಂದವರು ಹೇಳಿದ್ದಾರೆ.

ಹಾಸನ ಸಂಸದರು ಭಾಗಿಯಾಗಿದ್ದಾರೆ ಎಂದು ಹೇಳಲಾದ ಸ್ಪಷ್ಟ ವೀಡಿಯೊಗಳು ಸೋರಿಕೆಯಾದ ಸಮಯದ ಬಗ್ಗೆಯೂ ಷಾ ಪ್ರಶ್ನೆಗಳನ್ನು ಎತ್ತಿದ್ದಾರೆ. ಜೆಡಿಎಸ್ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಕೆಲವು ಸರ್ಕಾರಿ ನೌಕರರು ಸೇರಿದಂತೆ ಹಲವು ಮಹಿಳೆಯರೊಂದಿಗೆ ಬಲವಂತದ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎನ್ನಲಾದ ವೀಡಿಯೋ ತುಣುಕುಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು. ಅದನ್ನನುಸರಿಸಿ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ತಂಡ ರಚಿಸಿದ್ದಾರೆ.

ಏಪ್ರಿಲ್ 26ರಂದು ಹಾಸನ ಕ್ಷೇತ್ರದಲ್ಲಿ ಮತದಾನ ನಡೆದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಜೆಡಿಎಸ್ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ. ರಾಜ್ಯದಲ್ಲಿ ಜೆಡಿಎಸ್‌, ಎನ್‌ಡಿಎ ಮೈತ್ರಿಕೂಟದ ಭಾಗವಾಗಿದೆ. 33 ವರ್ಷದ ಪ್ರಜ್ವಲ್ ಅವರು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದಾರೆ. ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧವೂ ದೂರು ದಾಖಲಾಗಿದೆ.

ಸಿದ್ದರಾಮಯ್ಯ ಅವರು ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನೀಡಿ ಆದೇಶಿಸಿದ್ದಾರೆ. ಲೈಂಗಿಕ ಅಪರಾಧ ಎಸಗಿದವರನ್ನು, ಅದನ್ನು ಚಿತ್ರೀಕರಿಸಿ ಸಾರ್ವಜನಿಕಗೊಳಿಸಿದವರನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಎಸ್‌ಐಟಿಯ ಸರ್ಕಾರಿ ಆದೇಶ ತಿಳಿಸಿದೆ. ಈಗಾಗಲೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಎ) (ಲೈಂಗಿಕ ಕಿರುಕುಳ), 354 (ಡಿ) (ಹಿಂಬಾಲಿಸುವಿಕೆ) ಮತ್ತು 506 (ಅಪರಾಧ ಬೆದರಿಕೆ) ಮತ್ತು 509 (ಪದ, ಸನ್ನೆ ಅಥವಾ ಚಿತ್ರದ ಮೂಲಕ ಮಹಿಳೆಯ ಅವಮಾ) ಅಡಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರ ಅಡುಗೆಯವರು ನೀಡಿದ ದೂರಿನ ಮೇರೆಗೆ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆಯು ರೇವಣ್ಣ ಅವರ ಪತ್ನಿ ಭವಾನಿ ಅವರ ಸಂಬಂಧಿ ಎಂದು ದೂರುದಾರರು ತಿಳಿಸಿದ್ದಾರೆ. ತಾನು ಕೆಲಸ ಮಾಡಲು ಪ್ರಾರಂಭಿಸಿದ ನಾಲ್ಕು ತಿಂಗಳ ನಂತರ ರೇವಣ್ಣ ತನಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದರು. ಅವರ ಮಗ ಪ್ರಜ್ವಲ್ ತಮ್ಮ ಮಗಳಿಗೆ ವೀಡಿಯೊ ಕರೆಗಳನ್ನು ಮಾಡುತ್ತಿದ್ದರು ಮತ್ತು ಅವಳೊಂದಿಗೆ ಅಸಭ್ಯವಾಗಿ ಮಾತನಾಡುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: Hassan Pen Drive Case: ಎಸ್‌ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?

Continue Reading
Advertisement
maoists killed bastar
ಪ್ರಮುಖ ಸುದ್ದಿ6 mins ago

Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

Labour Day 2024
ಮನಿ ಗೈಡ್6 mins ago

Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

Hassan Pen Drive Case will tell Rakesh Siddaramaiah died history says HD Kumaraswamy
ಕ್ರೈಂ13 mins ago

Hassan Pen Drive Case: ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

IPL 2024
ಕ್ರೀಡೆ24 mins ago

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಕುಲ್​ದೀಪ್, ನರೈನ್

ಸಿನಿಮಾ28 mins ago

Rakhi Sawant: ವೈಮನಸ್ಸು ಬಿಟ್ಟು ಮಾಜಿ ಪತಿ ಜೊತೆ ಒಂದಾದ್ರಾ ರಾಖಿ ಸಾವಂತ್‌?

Hassan Pen Drive Case Sexual assault case Prajwal Revanna suspended from JDS
ಕ್ರೈಂ30 mins ago

Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

Khalistani Separatist Gurpatwant Singh Pannun
ಪ್ರಮುಖ ಸುದ್ದಿ37 mins ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ʼರಾʼ ಕೈವಾಡ: ವಾಷಿಂಗ್ಟನ್‌ ವರದಿಗೆ ಭಾರತ ಕಟು ಟೀಕೆ

Ayushman Bharat Diwas 2024
ಆರೋಗ್ಯ47 mins ago

Ayushman Bharat Diwas 2024: 50 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವ ಅಯುಷ್ಮಾನ್ ಭಾರತ್

Hassan Pen Drive Case Revanna and Siddaramaiah pact in Prajwal case Says Pralhad Joshi
ಕ್ರೈಂ1 hour ago

Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

amith shah Hassan pen drive case:
ಪ್ರಮುಖ ಸುದ್ದಿ1 hour ago

Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ8 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202424 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌