Supreme Court: ಗಲಭೆ ಸಂತ್ರಸ್ತರಿಗೆ ಏಕರೂಪ ಪರಿಹಾರ; ಕೇಂದ್ರ, ರಾಜ್ಯ ಸರ್ಕಾರಗಳಿಗೆ ಕೋರ್ಟ್ ನೋಟಿಸ್ - Vistara News

ದೇಶ

Supreme Court: ಗಲಭೆ ಸಂತ್ರಸ್ತರಿಗೆ ಏಕರೂಪ ಪರಿಹಾರ; ಕೇಂದ್ರ, ರಾಜ್ಯ ಸರ್ಕಾರಗಳಿಗೆ ಕೋರ್ಟ್ ನೋಟಿಸ್

Supreme Court: ದ್ವೇಷ ಅಪರಾಧ, ಗುಂಪು ಹತ್ಯೆ, ಗಲಭೆ ಸಂತ್ರಸ್ತರಿಗೆ ಪರಿಹಾರ ಒದಗಿಸುವಾಗ ಸರ್ಕಾರಗಳು ತಾರತಮ್ಯ ಮಾಡುತ್ತಿವೆ. ಹಾಗಾಗಿ ಏಕರೂಪ ಪರಿಹಾರಕ್ಕೆ ಸೂಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ದಾಖಲಾಗಿದೆ.

VISTARANEWS.COM


on

Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗಲಭೆ, ಗುಂಪು ಹತ್ಯೆ ಪ್ರಕರಣಗಳ ಸಂತ್ರಸ್ತರಿಗೆ ಏಕರೂಪ ಪರಿಹಾರ ನೀಡುವ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್(Supreme Court) ಕೇಂದ್ರ ಸರ್ಕಾರ, ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಈ ಸಂಬಂಧ ಇಂಡಿಯನ್ ಮುಸ್ಲಿಮ್ ಫಾರ್ ಪ್ರೊಗ್ರೆಸ್ ಆ್ಯಂಡ್ ರಿಫಾರ್ಮ್ ಎಂಬ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ವಿಚಾರಣೆ ನಡೆಸಿದ ಜಸ್ಟೀಸ್ ಕೆ ಎಂ ಜೋಸೆಫ್ ಹಾಗೂ ಜಸ್ಟೀಸ್ ಬಿ ವಿ ನಾಗರತ್ನ ಅವರಿದ್ದ ಪೀಠವು, ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಿದೆ.

2018ರ ತೆಹ್ಸೀನ್ ಪೂನಾವಾಲ ವರ್ಸಸ್ ಕೇಂದ್ರ ಸರ್ಕಾರ ಪ್ರಕರಣದಲ್ಲಿ ಗುಂಪು ಹತ್ಯೆ ಮತ್ತು ಗುಂಪು ಹಿಂಸಾಚಾರ ಪ್ರಕರಣಗಳ ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಯೋಜನೆ ರೂಪಿಸಿವೆ. ಆದರೆ, ಈ ಸಂಬಂಧ ತಿದ್ದುಪಡಿ ತರುವ ಅಗತ್ಯವಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜಾವೇದ್ ಶೇಖ್ ಅವರು, ಅಪರಾಧ ದಂಡ ಸಂಹಿತೆ(CrPC)ಯ ಸೆಕ್ಷನ್ 357ಎ ಅಡಿ ಈ ಸ್ಕೀಮುಗಳನ್ನು ರೂಪಿಸಲಾಗಿದೆ. ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ಲೆಕ್ಕಾಚಾರ ಮಾಡುವಾಗ ದೈಹಿಕ ಹಾನಿ, ಮಾನಸಿಕ ಹಾನಿ ಮತ್ತು ಗಳಿಕೆಯ ನಷ್ಟ, ಉದ್ಯೋಗ ಇತ್ಯಾದಿಗಳನ್ನು ಪರಿಗಣಿಸಲು ನ್ಯಾಯಾಲಯವು ರಾಜ್ಯಗಳಿಗೆ ಸೂಚಿಸಿದೆ ಮತ್ತು ಅವರು ಇದಕ್ಕಾಗಿ 2018ರ ತೀರ್ಪನ್ನು ಅವಲಂಬಿಸಿದ್ದಾರೆ ಎಂದು ತಿಳಿಸಿದರು.

ಪರಿಹಾರ ವಿತರಣೆಯಲ್ಲಿ ಏಕರೂಪತೆ ಇಲ್ಲದ್ದರಿಂದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕೆಲವು ಸಂತ್ರಸ್ತರಿಗೆ ಭಾರೀ ಮೊತ್ತದ ಪರಿಹಾರ ದೊರೆತರೆ, ಮತ್ತೆ ಕೆಲವರಿಗೆ ತೀರಾ ಅಲ್ಪ ಪ್ರಮಾಣದ ಪರಿಹಾರ ನೀಡಲಾಗುತ್ತಿದೆ ಎಂಬ ಸಂಗತಿಯನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದರು.

ಈ ಸಂಬಂಧ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿರುವ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿದೆ. ಈ ಸಂಬಂಧ ಹಿಂದೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಹೇಗೆ ಪಾಲನೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸಲ್ಲಿಸುವಂತೆ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: Godhra Train Burning Case: ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು; ನಾಲ್ವರ ಅರ್ಜಿ ತಿರಸ್ಕಾರ

ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಎರಡು ದ್ವೇಷ ಅಪರಾಧ ಪ್ರಕರಣಗಳನ್ನು ಉದಾಹರಣೆಯಾಗಿ ನೀಡಲಾಗಿದೆ. ಜೂನ್ ತಿಂಗಳಲ್ಲಿ ಕೊಲೆಯಾದ ಕನ್ಹಯ್ಯಲಾಲ್ ಕುಟಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲಾಗಿದೆ. ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ಇದಕ್ಕೆ ತದ್ವಿರುದ್ಧವಾಗಿ ಅದೇ ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಇಬ್ಬರನ್ನು ಗೋ ರಕ್ಷಕರು ಅಪಹರಣ ಮಾಡಿ, ಜೀವಂತವಾಗಿ ಸುಟ್ಟು ಹಾಕಿದರು. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇವಲ ಪರಿಹಾರವಾಗಿ 5 ಲಕ್ಷ ರೂ. ನೀಡಲಾಗಿದೆ ಎಂದು ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

Shocking Incident : ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರಿಗೆ ಸಹಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಮಹಿಳೆ ಆಪರೇಷನ್ ಥಿಯೇಟರ್ನಲ್ಲಿ ನಗ್ನವಾಗಿ ಮಲಗಿರುವಾಗ ಅದನ್ನೇ ವಿಡಿಯೊ ಮಾಡಿ ಹರಿಯಬಿಟ್ಟಿದ್ದಾನೆ. ವಾರ್ಡ್ ಬಾಯ್ ಚಿಕಿತ್ಸೆಯ ವಿಧಾನವನ್ನು ವೀಡಿಯೊವನ್ನು ರೆಕಾರ್ಡ್ ಮಾಡಿ ಸ್ಟೇಟಸ್​ಗೆ ಹಾಕಿಕೊಂಡಿದ್ದಾನೆ, ವೀಡಿಯೊವನ್ನು ನೋಡಿದ ಜನರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ವಾರ್ಡ್ ಬಾಯ್ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ,

VISTARANEWS.COM


on

Shocking Incident
Koo

ಲಖನೌ : ಖಾಸಗಿ ಆಸ್ಪತ್ರೆಯೊಂದರ ವಾರ್ಡ್ ಬಾಯ್, ಮಹಿಳಾ ರೋಗಿಯನ್ನು ನಗ್ನಗೊಳಿಸಿ ಶಸ್ತ್ರಚಿಕಿತ್ಸೆ ಮಾಡಿದ್ದಲ್ಲದೆ ಅದನ್ನು ವಿಡಿಯೊ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ (Shocking Incident) ನಡೆದಿದೆ. ಈ ಘಟನೆ ಬಗ್ಗೆ ಆಘಾತ ವ್ಯಕ್ತಗೊಂಡಿದೆ. ವಾರ್ಡ್ ಬಾಯ್ ತನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಸರ್ಜರಿ ಮಾಡುವ ವೀಡಿಯೊವನ್ನು ಹಂಚಿಕೊಂಡಿದ್ದು, ಇದನ್ನು ಅನೇಕ ಜನರು ನೋಡಿದ್ದಾರೆ. ಬಳಿಕ ವಿಷಯ ಆಕ್ರೋಶ ಹುಟ್ಟುಹಾಕಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಹರ್ದಿಯಾ ಮೂಲದ ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರಿಗೆ ಸಹಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಮಹಿಳೆ ಆಪರೇಷನ್ ಥಿಯೇಟರ್ನಲ್ಲಿ ನಗ್ನವಾಗಿ ಮಲಗಿರುವಾಗ ಅದನ್ನೇ ವಿಡಿಯೊ ಮಾಡಿ ಹರಿಯಬಿಟ್ಟಿದ್ದಾನೆ. ವಾರ್ಡ್ ಬಾಯ್ ಚಿಕಿತ್ಸೆಯ ವಿಧಾನವನ್ನು ವೀಡಿಯೊವನ್ನು ರೆಕಾರ್ಡ್ ಮಾಡಿ ಸ್ಟೇಟಸ್​ಗೆ ಹಾಕಿಕೊಂಡಿದ್ದಾನೆ, ವೀಡಿಯೊವನ್ನು ನೋಡಿದ ಜನರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ವಾರ್ಡ್ ಬಾಯ್ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ,

ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದ ನಿರ್ದೇಶಕ ಡಾ.ಸಂಜಯ್ ಕುಮಾರ್ ಸೂಚನೆಯಂತೆ ಶಸ್ತ್ರಚಿಕಿತ್ಸೆ ನಡೆಸಿದ್ದೇನೆ ಎಂದು ವಾರ್ಡ್ ಬಾಯ್ ಹೇಳಿದ್ದಾನೆ. ಸಂಜಯ್ ಗೌತಮ್ ಅವರು ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಮತ್ತು ಆಸ್ಪತ್ರೆಯ ಆಡಳಿತವು ಈ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದೆ. ವಾರ್ಡ್ ಬಾಯ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ತಂಡವನ್ನು ರಚಿಸಿದೆ. ತಪ್ಪಿತಸ್ಥರನ್ನು ಬಿಡುವುದಿಲ್ಲ ತನಿಖೆ ನಡೆಸಲು ವೈದ್ಯಕೀಯ ಅಧಿಕಾರಿಯನ್ನು ಆಸ್ಪತ್ರೆಗೆ ಕಳುಹಿಸಿದ ನಂತರ ಸಮಗ್ರ ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ತಪ್ಪಿತಸ್ಥರು ಅವಮಾನಕರ ಕೃತ್ಯಕ್ಕಾಗಿ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: Indian Medical Association : ವೈದ್ಯರ ಪ್ರತಿಭಟನೆ; ಶನಿವಾರದಿಂದ 24 ಗಂಟೆ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ

ಘಟನೆ ಬಗ್ಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ವೈದ್ಯಕೀಯ ತನಿಖೆ ನಡೆಸುತ್ತಿದೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಸ್ವೀಕರಿಸಿದ ನಂತರ ಇತರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಅಡಿಯಲ್ಲಿ ಆರೋಗ್ಯ ಸೌಲಭ್ಯಗಳ ಭಯಾನಕ ಸ್ಥಿತಿಯನ್ನು ಬಹಿರಂಗಪಡಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ. ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೋಗಿಗಳ ಸಾವಿಗೆ ಕಾರಣವಾದ ಇಂತಹ ಅನೇಕ ಘಟನೆಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ. ರಾಜ್ಯ ಸರ್ಕಾರವು ಆರೋಗ್ಯ ಸೌಲಭ್ಯಗಳ ಪರಿಸ್ಥಿತಿಯನ್ನು ಗಮನಿಸಬೇಕು ಎಂದು ಒತ್ತಾಯಿಸಿವೆ.

Continue Reading

ಉದ್ಯೋಗ

ITBP Recruitment 2024: ITBPಯಲ್ಲಿದೆ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗ; 69,100 ರೂ.ವರೆಗೂ ಸಂಬಳ

ITBP Recruitment 2024: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕಿದೆ. ಅದಾಗ್ಯೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

VISTARANEWS.COM


on

ITBP Recruitment 2024
Koo

ಬೆಂಗಳೂರು: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ (ITBP Recruitment 2024) ಕಾನ್ಸ್‌ಟೇಬಲ್ ಹುದ್ದೆಗಳು (Job news) ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್‌ 01 ರ ಒಳಗೆ ಅರ್ಜಿ ಸಲ್ಲಿಕೆ (application) ಮಾಡಬೇಕಿದೆ.

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನಲ್ಲಿ ಒಟ್ಟಾರೆ 819 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಯ್ಕೆ ಆದವರು 69,100 ರೂ.ವರೆಗೂ ತಿಂಗಳ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅಭ್ಯರ್ತಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಇನ್ನು ಒಟ್ಟು ಹುದ್ದೆಗಳಲ್ಲಿ 122 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಹಾಗೂ 697 ಹುದ್ದೆಗಳು ಪುರುಷ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಅಲ್ಲದೆ ಜಾತಿವಾರು ಮೀಸಲಾತಿ ಸಹ ಇದೆ.

ವಯಸ್ಸಿನ ಅರ್ಹತೆ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕಿದೆ. ಅದಾಗ್ಯೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ ಎಷ್ಟು?

ಮಹಿಳೆಯರು, ಎಸ್‌ಸಿ, ಎಸ್‌ಟಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡುವ ಹಾಗಿಲ್ಲ. ಎಲ್ಲಾ ಇತರ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ 100 ರೂ.ಗಳನ್ನು ಪಾವತಿ ಮಾಡಬೇಕಿದೆ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಮೊದಲು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ) ನಡೆಸಲಾಗುತ್ತದೆ. ನಂತರ ದೈಹಿಕ ಗುಣಮಟ್ಟದ ಪರೀಕ್ಷೆ (PST) ನಡೆಸಲಾಗುತ್ತದೆ. ಇದಾದ ನಂತರ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆ ಆದರೆ ಡಾಕ್ಯುಮೆಂಟ್ ಪರಿಶೀಲನೆ ಮಾಡಲಾಗುತ್ತದೆ. ಈ ಹಂತದ ನಂತರ ವಿವರವಾದ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತದೆ. ಬಳಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02-09-2024 ಹಾಗೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-ಅಕ್ಟೋಬರ್-2024. ಇನ್ನು ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳು ತಿಂಗಳಿಗೆ 21,700 ರೂ.ಗಳಿಂದ 69,100 ರೂ.ಗಳ ವರೆಗೆ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ. https://recruitment.itbpolice.nic.in/rect/index.php

ಇದನ್ನೂ ಓದಿ: Job News: 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ; ಎಲ್ಲಿ ಎಷ್ಟು ಹುದ್ದೆ?

Continue Reading

ಪ್ರಮುಖ ಸುದ್ದಿ

Indian Medical Association : ವೈದ್ಯರ ಪ್ರತಿಭಟನೆ; ಶನಿವಾರದಿಂದ 24 ಗಂಟೆ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ

Indian Medical Association : ಎಲ್ಲಾ ಅಗತ್ಯ ಸೇವೆಗಳನ್ನು ನೀಡಲಾಗುವುದು. ಆದರೆ ಒಪಿಡಿಗಳು ಕಾರ್ಯನಿರ್ವಹಿಸುವುದಿಲ್ಲ. ಅದೇ ರೀತಿ ತುರ್ತು ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ಆಧುನಿಕ ವೈದ್ಯಕೀಯ ಸೇವೆ ಸಿಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಎಂದು ಐಎಂಎ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ವೈದ್ಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಇದೇ ವೇಳೆ ಖಂಡಿಸಲಾಗಿದೆ.

VISTARANEWS.COM


on

Indian Medical Association
Koo

ಬೆಂಗಳೂರು : ಆಗಸ್ಟ್ 17 ರ ಶನಿವಾರ ಬೆಳಿಗ್ಗೆ 6 ರಿಂದ ಆಗಸ್ಟ್ 18 ರ ಭಾನುವಾರ ಬೆಳಿಗ್ಗೆ 6 ರವರೆಗೆ 24 ಗಂಟೆಗಳ ಕಾಲ ವೈದ್ಯರು ರಾಷ್ಟ್ರವ್ಯಾಪಿ ಅಗತ್ಯವಲ್ಲದ ಸೇವೆಗಳನ್ನು ನೀಡುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (Indian Medical Association ) ಗುರುವಾರ ಘೋಷಿಸಿದೆ. ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ವಿರೋಧಿಸಿ ವೈದ್ಯರ ಸಂಘ ಪ್ರತಿಭಟನೆಗೆ ಕರೆ ನೀಡಿದೆ. ಅದಕ್ಕಾಗಿ ಸಾಂಕೇತಿಕವಾಗಿ ಕೆಲವು ಸೇವೆಗಳನ್ನು ನೀಡದಿರಲು ನಿರ್ಧರಿಸಲಾಗಿದೆ ಎಂದು ಐಎಂಎ ಹೇಳಿಕೆಯಲ್ಲಿ ತಿಳಿಸಿದೆ.

ಎಲ್ಲಾ ಅಗತ್ಯ ಸೇವೆಗಳನ್ನು ನೀಡಲಾಗುವುದು. ಆದರೆ ಒಪಿಡಿಗಳು ಕಾರ್ಯನಿರ್ವಹಿಸುವುದಿಲ್ಲ. ಅದೇ ರೀತಿ ತುರ್ತು ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ಆಧುನಿಕ ವೈದ್ಯಕೀಯ ಸೇವೆ ಸಿಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಎಂದು ಐಎಂಎ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ವೈದ್ಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಇದೇ ವೇಳೆ ಖಂಡಿಸಲಾಗಿದೆ.

ಕಳೆದ ವಾರ ತರಬೇತಿ ವೈದ್ಯೆಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕೋಲ್ಕತ್ತಾದ ಆರ್​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಕೆಲವೇ ಗಂಟೆಗಳ ನಂತರ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ಗುರುವಾರ ಮುಷ್ಕರ ಆರಂಭಿಸಿತ್ತು. ವೈದ್ಯರ ಸಂಘವು ಮಂಗಳವಾರ ಮುಷ್ಕರ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಎರಡು ದಿನಗಳ ನಂತರ ವೈದ್ಯಕೀಯ ಸಂಘದ ಪ್ರತಿಭಟನೆ ಪ್ರಕಟಗೊಂಡಿದೆ.

ಇದನ್ನೂ ಓದಿ: Physical Abuse : ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ನರ್ಸ್​ ಮೇಲೆ ಅತ್ಯಾಚಾರ ನಡೆಸಿ ಕೊಲೆ

ಆರ್​​ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ಮುಷ್ಕರ ಮುಂದುವರಿಸಿದೆ. ಅಪರಿಚಿತ ದುಷ್ಕರ್ಮಿಗಳು ಗುರುವಾರ ಮುಂಜಾನೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ ಪ್ರವೇಶಿಸಿ ಆಸ್ಪತ್ರೆಯಲ್ಲಿನ ಕೆಲವು ಭಾಗಗಳನ್ನು ಧ್ವಂಸಗೊಳಿಸಿದ್ದರು. ಅತ್ಯಾಚಾರ ಘಟನೆಯ ಬಳಿಕ ಮಹಿಳೆಯರು ಮಧ್ಯರಾತ್ರಿ ಪ್ರತಿಭಟನೆ ನಡೆಸಿದ ಮಧ್ಯೆ ಈ ದಾಳಿ ನಡೆದಿದೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ಪದಕವೊಂದೇ ಲಕ್ಷ್ಯ – ಲಕ್ಷ್ಯ ಸೇನ್!

ರಾಜಮಾರ್ಗ ಅಂಕಣ: ಇಡೀ ಕೋರ್ಟಿನಲ್ಲಿ ಚಿರತೆಯಂತೆ ಪಾದ ಚಲನೆ ಹೊಂದಿರುವ ಲಕ್ಷ್ಯ ಸೇನ್ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸನಲ್ಲಿ ಒಂದು ಪದಕಕ್ಕೆ ಲಕ್ಷ್ಯ ಇಡುವುದನ್ನು ಯಾರೂ ತಡೆಯಲು ಅಸಾಧ್ಯ ಎನ್ನುವುದು ಭಾರತೀಯರ ನಂಬಿಕೆ.

VISTARANEWS.COM


on

lakshya sen ರಾಜಮಾರ್ಗ ಅಂಕಣ
Koo

ಭಾರತದ ಬ್ಯಾಡ್ಮಿಂಟನ್ ಭರವಸೆಗೆ ಇಂದು ಹುಟ್ಟಿದ ಹಬ್ಬ(ಆಗಸ್ಟ್ 16)

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೊನ್ನೆ ಮುಗಿದುಹೋದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics 2024) ಭಾರತದ (India) ಕನಿಷ್ಠ ಆರು ಕ್ರೀಡಾಪಟುಗಳು ಕೂದಲೆಳೆಯ ಅಂತರದಲ್ಲಿ ಪದಕ ಮಿಸ್ ಮಾಡಿದ್ದರು. ಅದರಲ್ಲಿ ಒಂದು ಪ್ರಮುಖವಾದ ಹೆಸರು ಬ್ಯಾಡ್ಮಿಂಟನ್ (Badminton) ಪ್ರತಿಭೆ ಲಕ್ಷ್ಯ ಸೇನ್ (Lakshya Sen) . ಈ ಒಲಿಂಪಿಕ್ಸ್ ಕೂಟದಲ್ಲಿ ವಿಶ್ವ ಚಾಂಪಿಯನ್ ಆಟಗಾರ ಡೆನ್ಮಾರ್ಕ್‌ನ ವಿಕ್ಟರ್ ಆಕ್ಸೆಲ್ಸೆನ್ ( Victor Axelsen)ಗೆ ಬೆವರು ಇಳಿಸಿದ ಕೀರ್ತಿ ಈತನದ್ದು. ಇಂದಾತನಿಗೆ 24ನೇ ಹುಟ್ಟಿದ ಹಬ್ಬ (2001,ಆಗಸ್ಟ್ 16).

ಭಾರತದ ಬ್ಯಾಡ್ಮಿಂಟನ್ ಭರವಸೆ – ಲಕ್ಷ್ಯ ಸೇನ್

ಉತ್ತರಾಖಂಡ್ ರಾಜ್ಯದ ಅಲ್ಮೋರ ಎಂಬ ನಗರದಲ್ಲಿ ಹುಟ್ಟಿದ ಈತನಿಗೆ ಬಾಲ್ಯದಿಂದಲೂ ಅಪ್ಪ ಡಿ ಕೆ ಸೇನ್ ಅವರೇ ಕೋಚ್. ಹಾಗೆಯೇ ಆತನಿಗೆ ಲೆಜೆಂಡ್ ಪ್ರಕಾಶ್ ಪಡುಕೋಣೆ ಅವರೇ ಸ್ಫೂರ್ತಿ. ಸೈನಾ ನೆಹ್ವಾಲ್ ಮತ್ತು ಪಿವಿ ಸಿಂಧು ಸಾಗಿದ ದಾರಿಯಲ್ಲಿ ಬೆಳೆಯಬೇಕು ಎಂದು ಹುರುಪು ತುಂಬಿದ್ದೇ ಅಪ್ಪ. ಈ ಹುಡುಗ ಕಠಿಣ ಪರಿಶ್ರಮಿ. ಬೆವರು ಹರಿಸುವುದರಲ್ಲಿ ಹೆಚ್ಚು ನಂಬಿಕೆ. ಈಗ ಅವನ ಕೋಚ್ ಆಗಿರುವ ವಿಮಲ್ ಕುಮಾರ್ ಹೇಳಿದ ಪ್ರತೀಯೊಂದು ಮಾತು ವೇದವಾಕ್ಯ. ‘ನಿನ್ನ ಹಿಂಗೈ ಹೊಡೆತ ಸ್ವಲ್ಪ ವೀಕ್ ಇದೆ ಹುಡುಗಾ’ ಎಂದು ಕೋಚ್ ಹೇಳಿದರೆ ‘ಮೂರು ದಿನ ಟೈಮ್ ಕೊಡಿ ಸರ್. ಸರಿ ಮಾಡಿಕೊಂಡು ಬರುತ್ತೇನೆ ‘ ಎಂದವನು. ನುಡಿದಂತೆಯೇ ನಡೆದವನು.

ಕೋಚ್ ಆತನಿಗೆ ಹೇಳಿದ ಮಾತುಗಳು

ಬ್ಯಾಡ್ಮಿಂಟನ್ ಆಟಕ್ಕೆ ದೇಹದ ಕಸುವು ತುಂಬಾ ಮುಖ್ಯ. ಫೋಕಸ್ ಅದಕ್ಕಿಂತ ಮುಖ್ಯ. ಕೊನೆಯ ಸರ್ವಿಸ್ ತನಕ ಆಟವನ್ನು ಕೈ ಚೆಲ್ಲಬಾರದು. ಎಷ್ಟು ಪಾಯಿಂಟ್ ಹಿಂದೆ ಇದ್ದರೂ ನಿನಗೆ ಕಮ್ ಬ್ಯಾಕ್ ಮಾಡಲು ಅವಕಾಶ ಇರುತ್ತದೆ. ಎದುರಾಳಿ ಎಷ್ಟು ಬಲಿಷ್ಠ ಎಂದು ತಲೆಗೆ ತೆಗೆದುಕೊಳ್ಳಬಾರದು. ನಿನ್ನ ಸಾಮರ್ಥ್ಯಗಳ ಮೇಲೆ ಭರವಸೆ ಇಟ್ಟು ಆಡು – ಇದು ಅವರ ಕೋಚ್ ಪದೇ ಪದೇ ಹೇಳುತ್ತಿದ್ದ ಮಾತುಗಳು. ಪ್ಯಾರಿಸ್ ಒಲಿಂಪಿಕ್ಸನ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ವಿಕ್ಟರ್ ಅವರನ್ನು
ಎದುರಿಸುವಾಗಲೂ ಕಿವಿಯಲ್ಲಿ ರಿಬೌಂಡ್ ಆಗ್ತಾ ಇದ್ದದ್ದು ಕೋಚ್ ಹೇಳಿದ ಈ ಮಾತುಗಳೇ.

ಪ್ರಕಾಶ್ ಪಡುಕೋಣೆ – ನನ್ನ ಸ್ಫೂರ್ತಿ ದೇವತೆ

ಯಾಕೆಂದರೆ ಒಂದು ಕಾಲದಲ್ಲಿ ಇಂಡೋನೇಷಿಯಾ ಮತ್ತು ಚೀನಾ ಪ್ರಭುತ್ವ ಸ್ಥಾಪನೆ ಮಾಡಿದ್ದ ಈ ಕ್ರೀಡೆಯನ್ನು ಭಾರತದ ಮಗ್ಗುಲಿಗೆ ತಂದವರೇ ಪಡುಕೋಣೆ ಸರ್. 80ರ ದಶಕದಲ್ಲಿ ಅವರು ವರ್ಲ್ಡ್ ನಂಬರ್ ಒನ್ ಆಗಿದ್ದರು ಮತ್ತು ಅದೇ ವರ್ಷ ಅವರು ಆಲ್ ಇಂಗ್ಲೆಂಡ್ ಓಪನ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾದರು. ಆವಾಗ ಲಕ್ಷ್ಯ ಸೇನ್ ಹುಟ್ಟಿರಲೇ ಇಲ್ಲ. ಮುಂದೆ ಅವರನ್ನು ಅವರ ಟ್ರೈನಿಂಗ್ ಆಕಾಡೆಮಿಯಲ್ಲಿ ಭೇಟಿ ಆದಾಗ ಅವರು ಕೊಟ್ಟ ಟಿಪ್ಸ್, ಆಶೀರ್ವಾದ ನನ್ನನ್ನು ಬೆಳೆಸುತ್ತಿದೆ. ನಾನು ಅವರಿಗೆ ಆಭಾರಿ ಎನ್ನುತ್ತಾರೆ ನಮ್ಮ ಚಾಂಪ್.

ಈ ಬಾರಿ ಪ್ಯಾರಿಸ್ ಒಲಿಂಪಿಕ್ಸನಲ್ಲಿ..

ಪ್ರತೀಯೊಂದು ಪಂದ್ಯವು ಅವರಿಗೆ ಸ್ಪರ್ಧಾತ್ಮಕವಾಗಿಯೇ ಇತ್ತು. ಅವುಗಳನ್ನು ಗೆದ್ದು ಸೆಮೀಸ್ ಪ್ರವೇಶ ಮಾಡಿದಾಗ ಭಾರತಕ್ಕೆ ಒಂದಾದರೂ ಪದಕವನ್ನು ಗೆಲ್ಲಬೇಕು ಎಂಬ ಕನಸು ಸ್ಟ್ರಾಂಗ್ ಆಗಿತ್ತು. ಆದರೆ ಪಂದ್ಯದ ಆರಂಭದಲ್ಲಿಯೇ ಮೊಣಕೈಗೆ ಬಲವಾದ ಗಾಯವಾಗಿ ರಕ್ತ ಸುರಿಯಲು ಆರಂಭವಾಯಿತು. ಹಲವು ಬಾರಿ ಫಿಸಿಯೋ ಮೈದಾನಕ್ಕೆ ಕಿಟ್ ತೆಗೆದುಕೊಂಡು ಬಂದರೂ ನೋವು ಕಡಿಮೆ ಆಗಲಿಲ್ಲ. ಆದರೂ ವಿಶ್ವ ಚಾಂಪಿಯನ್ ಆಟಗಾರನಿಗೆ ಫೈಟ್ ಕೊಟ್ಟ ತೃಪ್ತಿ ಇದೆ. ಭಾರತಕ್ಕೆ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬ ನೋವು ಅದಕ್ಕಿಂತ ದೊಡ್ಡದು. ಮುಂದಿನ ಒಲಿಂಪಿಕ್ಸ್ ಕೂಟಕ್ಕೆ ಈಗಿನಿಂದಲೇ ಸಿದ್ಧತೆ ಮಾಡುತ್ತೇನೆ ಎಂದು ಲಕ್ಷ್ಯ ಸೇನ್ ಹೇಳಿದ್ದಾರೆ.

ಆತನ ಬಗ್ಗೆ ವಿಶ್ವಚಾಂಪಿಯನ್ ವಿಕ್ಟರ್ ಹೇಳಿದ ಮಾತುಗಳು ಇನ್ನೂ ಸ್ಫೂರ್ತಿದಾಯಕ ಆಗಿವೆ. ʼನಾನು ಇದುವರೆಗೂ ಎದುರಿಸಿದ ಅತ್ಯಂತ ಕಠಿಣ ಸ್ಪರ್ಧಿ ಎಂದರೆ ಲಕ್ಷ್ಯ ಸೇನ್. ಆತನಿಗೆ ಉಜ್ವಲ ಭವಿಷ್ಯ ಇದೆ. ಮುಂದಿನ ಒಲಿಂಪಿಕ್ಸ್ ಸ್ಪರ್ಧೆಯಲ್ಲಿ ನಾನು ಇರುವುದಿಲ್ಲ. ಆತನು ಖಂಡಿತವಾಗಿ ಪದಕ ಗೆಲ್ಲುವ ಫೇವರಿಟ್ ಆಗಿರುತ್ತಾನೆ!’ ಈ ಮಾತುಗಳು ಪದಕಕ್ಕಿಂತ ಹೆಚ್ಚು ಮೌಲ್ಯ ಹೊಂದಿವೆ ಎಂದು ನಿಮಗೆ ಅನ್ನಿಸುತ್ತದೆಯಾ?

ಅದ್ಭುತವಾದ ಟ್ರಾಕ್ ರೆಕಾರ್ಡ್

ವರ್ಲ್ಡ್ ಜ್ಯೂನಿಯರ್ ವಿಭಾಗದಲ್ಲಿ ಆತನು ನಂಬರ್ ಒನ್ ರಾಂಕ್ ಹೊಂದಿದ್ದ ಆಟಗಾರ. ಯೂತ್ ಒಲಿಂಪಿಕ್ಸನಲ್ಲಿ ಎರಡು ಪದಕ, ವರ್ಲ್ಡ್ ಚಾಂಪಿಯನ್ ಶಿಪ್ ಕೂಟದಲ್ಲಿ ಕಂಚಿನ ಪದಕ, ಥಾಮಸ್ ಕಪ್, ಕಾಮನ್ ವೆಲ್ತ್ ಗೇಮ್ಸ್, ಏಷಿಯನ್
ಬ್ಯಾಡ್ಮಿಮಿಂಟನ್ ಕೂಟ…ಎಲ್ಲ ಕಡೆಯಲ್ಲಿಯೂ ಲಕ್ಷ್ಯ ಸೇನ್ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಅವರು ಈಗಾಗಲೇ ಒಟ್ಟು 15 ಅಂತಾರಾಷ್ಟ್ರೀಯ ಪದಕಗಳನ್ನು ಗೆದ್ದ ದಾಖಲೆ ಹೊಂದಿದ್ದಾರೆ. ಅವರ ಸಕ್ಸೆಸ್ ರೇಟ್ 236 ಗೆಲುವು/102 ಸೋಲು! ಇಂದಿನ ದಿನಕ್ಕೆ ಆತನ ವರ್ಲ್ಡ್ ರಾಂಕಿಂಗ್ 16. ಅದು ಇಂಪ್ರೂವ್ ಆಗ್ತಾ ಇದೆ ಅನ್ನೋದು ನಮಗೆ ಸಿಹಿಸುದ್ದಿ.

ಐದು ಅಡಿ 10 ಇಂಚು ಎತ್ತರದ, ಅಹಂಕಾರದ ಸೊಂಕೂ ಇಲ್ಲದ, ಕೀರ್ತಿ ಶನಿ ಇನ್ನೂ ತಲೆಗೆ ಹತ್ತದೆ ಇರುವ, ಬಲಿಷ್ಠ ಹಿಂಗೈ ಮತ್ತು ಮುಂಗೈ ಹೊಡೆತಗಳ ಆಟಗಾರ, ಇಡೀ ಕೋರ್ಟಿನಲ್ಲಿ ಚಿರತೆಯಂತೆ ಪಾದ ಚಲನೆ ಹೊಂದಿರುವ ಲಕ್ಷ್ಯ ಸೇನ್ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸನಲ್ಲಿ ಒಂದು ಪದಕಕ್ಕೆ ಲಕ್ಷ್ಯ ಇಡುವುದನ್ನು ಯಾರೂ ತಡೆಯಲು ಅಸಾಧ್ಯ ಎನ್ನುವುದು ಭಾರತೀಯರ ನಂಬಿಕೆ.

ಆಲ್ ದ ಬೆಸ್ಟ್ ಮತ್ತು ಹ್ಯಾಪಿ ಬರ್ತಡೇ ಚಾಂಪಿಯನ್.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಸ್ವಾತಂತ್ರ್ಯದ ಕನವರಿಕೆಯಲ್ಲಿ ಮಿಂದೆದ್ದ ಭಾರತ

Continue Reading
Advertisement
Shocking Incident
ಪ್ರಮುಖ ಸುದ್ದಿ1 min ago

Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

teacher murder case
ಕೋಲಾರ5 mins ago

Murder Case: ಶಿಕ್ಷಕಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ, ಹಂತಕರಿಂದ ಪುತ್ರಿ ಪಾರು

ITBP Recruitment 2024
ಉದ್ಯೋಗ35 mins ago

ITBP Recruitment 2024: ITBPಯಲ್ಲಿದೆ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗ; 69,100 ರೂ.ವರೆಗೂ ಸಂಬಳ

Indian Medical Association
ಪ್ರಮುಖ ಸುದ್ದಿ38 mins ago

Indian Medical Association : ವೈದ್ಯರ ಪ್ರತಿಭಟನೆ; ಶನಿವಾರದಿಂದ 24 ಗಂಟೆ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ

Mahabharat Story
ಧಾರ್ಮಿಕ57 mins ago

Mahabharat Story: ಕೌರವರೊಂದಿಗೆ ಸಂಧಾನಕ್ಕೆ ಹೋದ ಶ್ರೀ ಕೃಷ್ಣ ಪಾಂಡವರಿಗಾಗಿ ಕೇಳಿದ 5 ಗ್ರಾಮಗಳು ಈಗ ಎಲ್ಲಿವೆ ಗೊತ್ತೆ?

lakshya sen ರಾಜಮಾರ್ಗ ಅಂಕಣ
ಅಂಕಣ1 hour ago

ರಾಜಮಾರ್ಗ ಅಂಕಣ: ಪದಕವೊಂದೇ ಲಕ್ಷ್ಯ – ಲಕ್ಷ್ಯ ಸೇನ್!

Benefits of weight training for women
ಆರೋಗ್ಯ2 hours ago

Benefits of weight training for women: ತೂಕ ಎತ್ತುವ ವ್ಯಾಯಾಮ ಮಹಿಳೆಯರಿಗೆ ಏಕೆ ಬೇಕು?

Varamahalakshmi Festival 2024
ಪ್ರಮುಖ ಸುದ್ದಿ2 hours ago

Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಏನು? ಹೆಚ್ಚಿನ ಫಲ ಪಡೆಯಲು ಪೂಜೆ ಹೇಗೆ ಮಾಡಬೇಕು?

karnataka weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

Dina bhavishya
ಭವಿಷ್ಯ3 hours ago

Dina Bhavishya :ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌