Union Budget 2023: ಕರ್ನಾಟಕದಲ್ಲಿ ಹೊಸ ರೈಲ್ವೆ ಮಾರ್ಗ, ವಿದ್ಯುದ್ದೀಕರಣಕ್ಕೆ ಎಷ್ಟು ಅನುದಾನ ಹಂಚಿಕೆ? Vistara News

ದೇಶ

Union Budget 2023: ಕರ್ನಾಟಕದಲ್ಲಿ ಹೊಸ ರೈಲ್ವೆ ಮಾರ್ಗ, ವಿದ್ಯುದ್ದೀಕರಣಕ್ಕೆ ಎಷ್ಟು ಅನುದಾನ ಹಂಚಿಕೆ?

ವಿಧಾನಸಭೆ ಚುನಾವಣೆ ಎದುರಿಸಲಿರುವ ಕರ್ನಾಟಕದಲ್ಲಿನ ರೈಲ್ವೆ ಯೋಜನೆಗಳಿಗೆ ಈ ಬಾರಿ ಕೇಂದ್ರ ಬಜೆಟ್‌ನಲ್ಲಿ (Union Budget 2023) 7561 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

VISTARANEWS.COM


on

Union Budget 2023, grant allocation for new railway line, electrification in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಬಜೆಟ್ (Union Budget 2023) ಮಂಡನೆ ಬೆನ್ನಲ್ಲೇ ರೈಲ್ವೆ ಇಲಾಖೆಗೆ ದೊರೆತಿರುವ ಅನುದಾನ ಸೇರಿದಂತೆ ವಿವಿಧ ಮಾಹಿತಿಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (ashwini vaishnaw) ಅವರು ಹಂಚಿಕೊಂಡಿದ್ದಾರೆ. ಜತೆಗೆ, ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಬಜೆಟ್‌ನಲ್ಲಿ ಈ ಬಾರಿ 7561 ಕೋಟಿ ರೂ. ನಿಗದಿ ಮಾಡಿರುವ ಮಾಹಿತಿಯನ್ನೂ ನೀಡಿದ್ದಾರೆ.

ಕೇಂದ್ರ ಬಜೆಟ್ ಮಂಡನೆ ಬೆನ್ನಲ್ಲೇ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ವಿವಿಧ ವಿಭಾಗೀಯ ರೈಲ್ವೆ ಅಧಿಕಾರಿಗಳ ಜತೆ ಗುರುವಾರ ವಿಡಿಯೋ ಸಂವಾದ ನಡೆಸಿದರು. ರಾಜ್ಯಕ್ಕೆ ಹಂಚಿಕೆಯಾಗಿರುವ ಅನುದಾನದ ಪೈಕಿ, ರಾಜ್ಯದ 7 ರೈಲ್ವೆ ಮಾರ್ಗಗಳ ವಿದ್ಯುದೀಕರಣ ಅಭಿವೃದ್ಧಿ ಹಾಗೂ ಮಾರ್ಪಾಡು(Electrification) ಕಾರ್ಯಕ್ಕೆ 793 ಕೋಟಿ ರೂ. ಮೀಸಲಿಡಲಾಗಿದೆ.

ರಾಜ್ಯದ ರೈಲ್ವೆ ಮಾರ್ಗಗಳ ವಿದ್ಯುದೀಕರಣಕ್ಕೆ ಅನುದಾನ

  1. ಗದಗ – ಹೊಟಗಿ: 110 ಕೋಟಿ ರೂ.
  2. ಚಿಕ್ಕಬಾಣಾವರ – ಹುಬ್ಬಳ್ಳಿ : 128 ಕೋಟಿ ರೂ.
  3. ಬಿರೂರು – ತಾಳಗುಪ್ಪ: 56 ಕೋಟಿ
  4. ಹಾಸನ – ಮಂಗಳೂರು: 134 ಕೋಟಿ
  5. ಮಿರಾಜ್ – ಲೋಂಡಾ: 182 ಕೋಟಿ
  6. ಹೊಸಪೇಟೆ – ಹುಬ್ಬಳ್ಳಿ – ವಾಸ್ಕೋ ಡ ಗಾಮ: 20 ಕೋಟಿ
  7. ಚಿಕ್ಕಬಾಣಾವರ – ಹಾಸನ: 77 ಕೋಟಿ

ಇದನ್ನೂ ಓದಿ: Union Budget 2023: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಬಾರಿ 7561 ಕೋಟಿ ರೂ.! ಇದು ದಾಖಲೆಯ ಅನುದಾನ

ರಾಜ್ಯದ ಹೊಸ ರೈಲ್ವೇ ಮಾರ್ಗಗಳಿಗೆ ಅನುದಾನ

  1. ಗದಗ – ವಾಡಿ : 350 ಕೋಟಿ (150 ಕೋಟಿ ರಾಜ್ಯ ಸರ್ಕಾರ)
  2. ಗಿನಿಗೇರಾ – ರಾಯಚೂರು : 300 ಕೋಟಿ ರೂ.
  3. ತುಮಕೂರು – ದಾವಣಗೆರೆ (via ಚಿತ್ರದುರ್ಗ) : 420 ಕೋಟಿ (200 ಕೋಟಿ ರಾಜ್ಯ ಸರ್ಕಾರ)
  4. ತುಮಕೂರು – ರಾಯದುರ್ಗ (via ಕಲ್ಯಾಣದುರ್ಗ) : 350 ಕೋಟಿ
  5. ಬಾಗಲಕೋಟೆ – ಕುಡಚಿ : 360 ಕೋಟಿ (150 ಕೋಟಿ ರಾಜ್ಯ ಸರ್ಕಾರ)
  6. ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು : 150 ಕೋಟಿ
  7. ಬೆಳಗಾವಿ – ಧಾರವಾಡ (via ಕಿತ್ತೂರು) : 10 ಕೋಟಿ
  8. ಮರಿಕುಪ್ಪಂ – ಕುಪ್ಪಂ : 200 ಕೋಟಿ
  9. ಕಡೂರು – ಚಿಕ್ಕಮಗಳೂರು – ಹಾಸನ : 145 ಕೋಟಿ
  10. ಮಲಗೂರು – ಪಾಲಸಮುದ್ರಂ : 20 ಕೋಟಿ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

RBI monetary policy: ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಇಂದು; ಬಡ್ಡಿ ದರ ಏರುತ್ತಾ?

ಮೂರು ದಿನಗಳ ಸಭೆ (RBI monetary policy meeting) ಇಂದು ಪೂರ್ಣಗೊಂಡ ನಂತರ ಪ್ರಮುಖ ಬಡ್ಡಿದರಗಳು, ಜಿಡಿಪಿ ಮತ್ತು ಹಣದುಬ್ಬರ ಮುನ್ಸೂಚನೆಗೆ ಸಂಬಂಧಿಸಿದಂತೆ ದಾಸ್ (RBI Governor Shaktikanta Das) ಎಂಪಿಸಿಯ ನಿರ್ಧಾರವನ್ನು ಪ್ರಕಟಿಸುತ್ತಾರೆ.

VISTARANEWS.COM


on

RBI governor Shaktikanta Das
Koo

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆ (RBI monetary policy meeting) ಇಂದು ಅಂತಿಮಗೊಳ್ಳಲಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ (RBI Governor Shaktikanta Das) ಅವರು ಮುಂದಿನ ದ್ವೈಮಾಸಿಕದ ಹಣಕಾಸು ನಿರ್ಧಾರಗಳನ್ನು ಬಹಿರಂಗಪಡಿಸಲಿದ್ದಾರೆ.

ಮೂರು ದಿನಗಳ ಸಭೆ ಇಂದು ಪೂರ್ಣಗೊಂಡ ನಂತರ ಪ್ರಮುಖ ಬಡ್ಡಿದರಗಳು, ಜಿಡಿಪಿ ಮತ್ತು ಹಣದುಬ್ಬರ ಮುನ್ಸೂಚನೆಗೆ ಸಂಬಂಧಿಸಿದಂತೆ ದಾಸ್ ಎಂಪಿಸಿಯ ನಿರ್ಧಾರವನ್ನು ಪ್ರಕಟಿಸುತ್ತಾರೆ. ಕಳೆದ ಫೆಬ್ರವರಿ 23ರಂದು ಆರ್‌ಬಿಐ ರೆಪೊ ದರವನ್ನು (Repo rates) ಶೇ.6.5ಕ್ಕೆ ಏರಿಸಿತ್ತು.

ಏನು ನಿರೀಕ್ಷಿಸಬಹುದು?

1) ತಜ್ಞರ ಪ್ರಕಾರ ಬಡ್ಡಿದರ ಈಗಾಗಲೇ ಉತ್ತುಂಗಕ್ಕೇರಿದೆ. ಆರ್‌ಬಿಐ ಅನಿವಾರ್ಯತೆ ಇಲ್ಲದಿದ್ದಲ್ಲಿ ಬಡ್ಡಿದರ ಹೆಚ್ಚಳಕ್ಕೆ ಹೋಗುವ ಸಾಧ್ಯತೆಯಿಲ್ಲ. ಜೂನ್‌ನಲ್ಲಿ ದರ ಇಳಿಕೆಯಾಗುವ ಸಾಧ್ಯತೆ ಇದೆ. ಈ ಎಂಪಿಸಿ ಸಭೆಯಲ್ಲಿ ಆರ್‌ಬಿಐ ಬಡ್ಡಿದರಗಳನ್ನು ಕಡಿಮೆ ಮಾಡುವ ಸಾಧ್ಯತೆಯಿಲ್ಲ ಎಂದು ಹೆಚ್ಚಿನ ತಜ್ಞರು ಒಪ್ಪುತ್ತಾರೆ.

2) ರೆಪೋ ದರವನ್ನು 6.5 ಪ್ರತಿಶತದಲ್ಲಿ ತಡೆಹಿಡಿಯಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ. ಲಿಕ್ವಿಡಿಟಿ ಬಿಗಿಯಾಗಿ ಉಳಿದುಕೊಂಡಿರುವುದರಿಂದ ಬಡ್ಡಿದರ ಬದಲಾಗದೆ ಉಳಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಎಂದು HSBCಯ ಮುಖ್ಯ ಅರ್ಥಶಾಸ್ತ್ರಜ್ಞ ಪ್ರಂಜುಲ್ ಭಂಡಾರಿ ತಿಳಿಸಿದ್ದಾರೆ.

3) ಆರ್‌ಬಿಐ ಬಿಗಿಯಾದ ಲಿಕ್ವಿಡಿಟಿ ಕಾಯ್ದುಕೊಳ್ಳುವುದರೊಂದಿಗೆ, ಅಲ್ಪಾವಧಿಯ ದರಗಳು ಶೇಕಡಾ 6.85- 6.9ರ ಆಸುಪಾಸಿನಲ್ಲಿವೆ. ಇದು ರೆಪೋ ದರಕ್ಕಿಂತ 35-40 ಬಿಪಿಎಸ್ ಹೆಚ್ಚಾಗಿದೆ.

4) ರಾಯಿಟರ್ಸ್ ಸಮೀಕ್ಷೆಯ ಪ್ರಕಾರ ಆರ್‌ಬಿಐ ಸತತ ಐದನೇ ಸಭೆಗೆ ಪ್ರಮುಖ ನೀತಿ ದರವನ್ನು ಶೇಕಡಾ 6.50ಕ್ಕೆ ಹಿಡಿದಿಟ್ಟುಕೊಳ್ಳಲಿದೆ.

5) ಮೃದುವಾದ ಹಣದುಬ್ಬರದ ಪರಿಣಾಮ 2024ರ ಮೊದಲಾರ್ಧದಲ್ಲಿ RBI ಬಡ್ಡಿದರಗಳನ್ನು ಕಡಿತಗೊಳಿಸಲು ಪ್ರಾರಂಭಿಸಬಹುದು ಎಂದು ನಿರೀಕ್ಷಿಸಲಾಗಿದೆ.

6) ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ನವೆಂಬರ್‌ನಲ್ಲಿ ಏರಿಕೆಯಾಗಿದೆ. ಹಣದುಬ್ಬರವು ನವೆಂಬರ್‌ನಲ್ಲಿ 5.70 ಶೇಕಡಾ ವಾರ್ಷಿಕ ದರದಲ್ಲಿ ಏರಿದೆ. ಅಕ್ಟೋಬರ್‌ನಲ್ಲಿ ಶೇಕಡಾ 4.87ಕ್ಕಿಂತ ಹೆಚ್ಚು ಏರಿದೆ.

7) ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಮುಂದುವರೆಸಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ 7.6 ಶೇಕಡಾ ದರದಲ್ಲಿ ವಿಸ್ತರಿಸಿದೆ. ನಿರೀಕ್ಷೆಗಳನ್ನು ಮೀರಿದೆ. ಈ ಬೆಳವಣಿಗೆಯು ಹೆಚ್ಚಿದ ಸರ್ಕಾರಿ ಖರ್ಚು ಮತ್ತು ಉತ್ಪಾದನಾ ವಲಯದಲ್ಲಿನ ಪ್ರಗತಿಯಿಂದ ಉತ್ತೇಜಿತವಾಯಿತು.

ಇದನ್ನೂ ಓದಿ: RBI News: ಬಡ್ಡಿ ದರ 6.50%ರಲ್ಲಿಯೇ ಉಳಿಕೆ: ತಜ್ಞರ ಮುನ್ಸೂಚನೆ

Continue Reading

ಆರೋಗ್ಯ

ವಿಸ್ತಾರ ಸಂಪಾದಕೀಯ: ನ್ಯುಮೋನಿಯಾ ಸೋಂಕಿನ ಬಗ್ಗೆ ಈಗಲೇ ಎಚ್ಚರ ವಹಿಸೋಣ

vistara editorial: ಇನ್‌ಫ್ಲುಯೆಂಜಾ ಮತ್ತು ಚಳಿಗಾಲದ ಋತುವಿನಿಂದಾಗಿ ಉಸಿರಾಟದ ಕಾಯಿಲೆಯ ಪ್ರಕರಣಗಳಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಭಾರತ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ. ಜನರೂ ಎಚ್ಚರ ವಹಿಸಬೇಕಿದೆ.

VISTARANEWS.COM


on

Vistara editorial, Let's take precautions for pneumonia infection
Koo

ಕೋವಿಡ್ ಬಳಿಕ ಚೀನಾದಲ್ಲಿ ಕೋಲಾಹಲ ಸೃಷ್ಟಿಸಿರುವ ನ್ಯುಮೋನಿಯಾ ರೀತಿಯ ಸೋಂಕು (Pneumonia Outbreak) ಇದೀಗ ಭಾರತಕ್ಕೂ ಹರಡಿರುವುದು ಖಚಿತವಾಗಿದೆ. ದೆಹಲಿಯ ಏಮ್ಸ್ (AIIMS Delhi) ಆಸ್ಪತ್ರೆಯಲ್ಲಿ ಇದರ 7 ಪ್ರಕರಣ ಪತ್ತೆಯಾಗಿದೆ. ದಿಲ್ಲಿಯಲ್ಲಿ ಕಾಣಿಸಿಕೊಂಡಿರುವುದು ಚೀನಾದಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಬ್ಯಾಕ್ಟೀರಿಯಾ (Pneumonia Outbreak) ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಚೀನಾದಲ್ಲಿ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಅಲರ್ಟ್‌ ಘೋಷಿಸಿದ ಭಾರತ ತೀವ್ರ ಮುನ್ನೆಚ್ಚರಿಕೆ ವಹಿಸಿತ್ತು. ಒಟ್ಟು 67 ಮಾದರಿಗಳ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 7 ಮಾದರಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. 2023ರ ಎಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ. ಕೆಲವೇ ದಿನಗಳ ಹಿಂದೆ ಈ ಬಗ್ಗೆ ಆಸ್ಪತ್ರೆಗಳ ಸನ್ನದ್ಧತೆ ಪರಿಶೀಲಿಸುವಂತೆ ಭಾರತದಲ್ಲಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ ನೀಡಿತ್ತು. ಈ ಬಗ್ಗೆ ಇನ್ನಷ್ಟು ಎಚ್ಚರ ವಹಿಸುವುದು ಸೂಕ್ತವಾಗಿದೆ(Vistara editorial).

ಚೀನಾದಲ್ಲಿ ಈ ಸೋಂಕು ತೀವ್ರಗತಿಯಲ್ಲಿ ಪಸರಿಸಿ ಆತಂಕ ಸೃಷ್ಟಿಸಿದೆ. ಮಕ್ಕಳಲ್ಲಿ ಕಾಣಿಸಿಕೊಂಡಿರುವ ಈ ಸೋಂಕಿನಿಂದ ಚೀನಾದ ಕೆಲ ಪ್ರಾಂತ್ಯಗಳ ಆಸ್ಪತ್ರೆಗಳು ಭರ್ತಿಯಾಗಿವೆ. ಆ ಮೂಲಕ ಕೋವಿಡ್‌ ನಂತರ ಜಾಗತಿಕ ಮಟ್ಟದಲ್ಲಿ ಮತ್ತೊಂದು ಸಾಂಕ್ರಾಮಿಕ ಪಸರಿಸಲಿದೆಯೇ ಎಂಬ ಆತಂಕ ಕಾಣಿಸಿಕೊಂಡಿತ್ತು. ಚೀನಾದಲ್ಲಿ ಆತಂಕ ಹುಟ್ಟಿಸಿದ ಈ ಸೋಂಕಿನಿಂದಾಗಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯ ಮತ್ತೆ ಜಾರಿ ಮಾಡಲಾಗಿದೆ. ಈ ಸೋಂಕು ಅಮೆರಿಕದ ಮಕ್ಕಳಲ್ಲೂ ಕಾಣಿಸಿಕೊಂಡಿದೆ. ಭಾರತಕ್ಕೂ ಮೊದಲು ಅಮೆರಿಕದ ಓಹಿಯೋ ಮತ್ತು ಮಸಾಚ್ಯುಸೆಟ್ಸ್ ರಾಜ್ಯದ 3-14ರ ವಯೋಮಾನದ ಮಕ್ಕಳಲ್ಲಿ ಏಕಾಏಕಿ ಭಾರಿ ಪ್ರಮಾಣದ ನ್ಯುಮೋನಿಯಾ ಸೋಂಕು ಕಾಣಿಸಿಕೊಂಡಿದೆ. ವೈದ್ಯಕೀಯ ಇಲಾಖೆ ಇದನ್ನು ಸೋಂಕು ಸ್ಫೋಟ ಎಂದು ಪರಿಗಣಿಸಿ ತುರ್ತು ಕ್ರಮಗಳನ್ನು ಕೈಗೊಂಡಿದೆ. ನಮ್ಮಲ್ಲಿ ಕರ್ನಾಟಕ ಸೇರಿ ಆರು ರಾಜ್ಯಗಳು ತಮ್ಮ ಆರೋಗ್ಯ ಮೂಲಸೌಕರ್ಯವನ್ನು ಅಲರ್ಟ್ ಮೋಡ್‌ನಲ್ಲಿ ಇಡಲು ಮುಂದಾಗಿವೆ. ಉಸಿರಾಟದ ಸಮಸ್ಯೆಗಳು ಕಂಡುಬಂದ ರೋಗಿಗಳನ್ನು ನಿಭಾಯಿಸಲು ಆಸ್ಪತ್ರೆಗಳು ಮತ್ತು ಆರೋಗ್ಯ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಕೇಳಿಕೊಂಡಿವೆ.

ಭಾರತದಲ್ಲಿ ಪತ್ತೆಯಾದ ನ್ಯುಮೋನಿಯಾ ಬ್ಯಾಕ್ಟೀರಿಯಾವು (pneumonia bacteria) ಕೊರೋನಾವೈರಸ್‌ನಂತೆ (‌Corona Virus) ಪಸರಿಸುವ ಸಾಧ್ಯತೆ ಕಡಿಮೆ ಎಂದು ಕೆಲವು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕೊರೊನಾ ವೈರಸ್‌ ಕಾಲಿಟ್ಟ ಆರಂಭ ಕಾಲದಲ್ಲೂ ತಜ್ಞರು ಹೀಗೇ ಹೇಳಿದ್ದರು ಎಂಬುದನ್ನು ನೆನಪಿಡಬೇಕು. ಮುಂದೆ ಅದು ಎಷ್ಟು ಅನಾಹುತ ಮಾಡಿತು ಎಂಬುದನ್ನು ಹೇಳಬೇಕಿಲ್ಲ. ಕೋವಿಡ್‌ ಬಂದಾಗ, ಉಸಿರಾಟದ ಸಮಸ್ಯೆಯು ಮಾರಣಾಂತಿಕವಾಗಬಹುದು ಎಂಬ ಅರಿವು ಯಾರಿಗೂ ಇರಲಿಲ್ಲ. ನ್ಯುಮೋನಿಯಾದ ಮುಂದುವರಿದ ಹಂತದಲ್ಲೂ ಉಸಿರಾಟದ ತೊಂದರೆಯು ಕಾಣಿಸಿಕೊಳ್ಳುತ್ತದೆ. ಸಾಮಾನ್ಯ ಜ್ವರ, ಶ್ವಾಸಕೋಶದಲ್ಲಿ ಅಲ್ಪ ಪ್ರಮಾಣದ ಉರಿ ಕಾಣಿಸಿಕೊಳ್ಳುವುದು ಸದ್ಯ ಈ ಸೋಂಕಿನ ಲಕ್ಷಣಗಳಾಗಿವೆ. ವೈದ್ಯರು ರೋಗಿಗಳಿಗೆ ಔಷಧ ನೀಡಿ ಮನೆಯಲ್ಲೆ ಆರೈಕೆ ಮಾಡಿಕೊಳ್ಳುವಂತೆ ಸೂಚಿಸುತ್ತಿದ್ದಾರೆ. ಆದರೆ ಮಕ್ಕಳಲ್ಲಿ ಈ ಜ್ವರ ಕಂಡುಬಂದರೆ ಹೆತ್ತವರ ಜಂಘಾಬಲ ಉಡುಗುವುದು ಸ್ವಾಭಾವಿಕ.

ಇನ್‌ಫ್ಲುಯೆಂಜಾ ಮತ್ತು ಚಳಿಗಾಲದ ಋತುವಿನಿಂದಾಗಿ ಉಸಿರಾಟದ ಕಾಯಿಲೆಯ ಪ್ರಕರಣಗಳಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಭಾರತ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ. ವರದಿಗಳ ಪ್ರಕಾರ, ಹೆಚ್ಚಾಗಿ ಮಕ್ಕಳ ಮೇಲೆ ಪರಿಣಾಮ ಬೀರುವ ಈ ಸೋಂಕು ಪೀಡಿತ ವ್ಯಕ್ತಿಗಳಲ್ಲಿ ಶ್ವಾಸಕೋಶದ ಉರಿಯೂತ ಮತ್ತು ಹೆಚ್ಚಿನ ಜ್ವರ ಉಂಟುಮಾಡುತ್ತದೆ. ಆದರೆ ಕೆಮ್ಮಿನಂತಹ ಇತರ ಲಕ್ಷಣಗಳು ಕಾಣೆಯಾಗಿವೆ. ಉಸಿರಾಟದ ಕಾಯಿಲೆಗಳ ಪೀಕ್ ಸೀಸನ್‌ನಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಈ ʼನಿಗೂಢ ನ್ಯುಮೋನಿಯಾ’ ಪ್ರಕರಣಗಳ ಉಲ್ಬಣ ಉಂಟಾಗಿದೆ. ಇದು ಪ್ರತಿರೋಧಕ ಶಕ್ತಿಯ ಕೊರತೆಯಿಂದ ಕಾಣಿಸಕೊಂಡಿರಬಹುದು ಎಂಬುದು ತಜ್ಞರ ಅನುಮಾನ. ಇದು ಹೊಸ ವೈರಸ್‌ ಅಲ್ಲ, ಮೊದಲು ಅಸ್ತಿತ್ವದಲ್ಲಿರುವುದೇ ಎಂದು ಗೊತ್ತಾಗಿದೆ.

ಅದೇನೇ ಇರಲಿ, ನಮ್ಮ ಮುನ್ನೆಚ್ಚರಿಕೆ ನಾವು ವಹಿಸೋಣ. ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು, ಸಾಬೂನು ಮತ್ತು ನೀರಿನಿಂದ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು, ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು, ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸುವುದು, ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಮಾಸ್ಕ್ ಬಳಸುವುದು, ಫ್ಲೂ ಪೀಡಿತ ವ್ಯಕ್ತಿಗಳಿಂದ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು, ಸಾಕಷ್ಟು ನಿದ್ರೆ ಮಾಡುವುದು ಹಾಗೂ ದೈಹಿಕವಾಗಿ ಕ್ರಿಯಾಶೀಲರಾಗಿರುವುದು ಇದರ ಮುನ್ನೆಚ್ಚರಿಕೆಗಳಾಗಿವೆ. ಇವು ವೈಯಕ್ತಿಕ ಮುನ್ನೆಚ್ಚರಿಕೆಗಳಾದರೆ, ಸರ್ಕಾರವೂ ಸಾಕಷ್ಟು ಎಚ್ಚರ ತೆಗೆದುಕೊಂಡು ಆರೋಗ್ಯ ಸೇವೆಯನ್ನು ಸನ್ನದ್ಧತೆಯಲ್ಲಿಡಬೇಕಿದೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಕಾಶ್ಮೀರಿ ಪಂಡಿತರ ಅಳಲು ಕೊನೆಯಾಗಲು ಹೊಸ ವಿಧೇಯಕ ನೆರವಾಗಲಿ

Continue Reading

ಕೋರ್ಟ್

ಆರ್ಟಿಕಲ್ 370 ರದ್ದು ಸಿಂಧುವೇ?; ಡಿ.11ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು

Supreme Court: ಕೇಂದ್ರ ಸರ್ಕಾರವು 2019ರ ಆಗಸ್ಟ್‌ 5ರಂದು 370ನೇ ವಿಧಿ ರದ್ದುಗೊಳಿಸಿತ್ತು. ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ 23 ಅರ್ಜಿಗಳು ದಾಖಲಾಗಿದ್ದವು.

VISTARANEWS.COM


on

Supreme Court will deliver judgment on Dece 11 about J and K Special Status scrap
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ( special status to Jammu and Kashmir) ಕಲ್ಪಿಸುವ ಆರ್ಟಿಕಲ್ 370 ರದ್ಧು (Article 370 Scrap) ಪ್ರಶ್ನಿಸಿ ಅನೇಕ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದ್ದವು (Supreme Court). ಈ ಕುರಿತು ವಿಚಾರಣೆ ಪೂರ್ತಿಗೊಳಿಸಿರುವ ಸುಪ್ರೀಂ ಕೋರ್ಟ್ ಡಿಸೆಂಬರ್ 11, ಸೋಮವಾರ ತನ್ನ ಅಂತಿಮ ಪ್ರಕಟಿಸಲಿದೆ(Judgement on Dec 11).

ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ 23 ಅರ್ಜಿಗಳನ್ನು ದಾಖಲಾಗಿದ್ದವು. ದೂರಗಾಮಿ ಪರಿಣಾಮಗಳನ್ನು ಬೀರು ಮತ್ತು ಹೆಗ್ಗುರಾತಾಗಬಹುದಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೀರ್ಘ ಸಮಯದಿಂದ ನಡೆಸುತ್ತಾ ಬಂದಿದೆ. 16 ಮ್ಯಾರಥಾನ್ ದಿನಗಳ ವಿಚಾರಣೆಗಳು ಮತ್ತು ಎರಡೂ ಕಡೆಯವರು ಮಂಡಿಸಿದ ವಾದಗಳ ನಂತರ, ನ್ಯಾಯಾಲಯವು ಸೆಪ್ಟೆಂಬರ್ 5 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಸೋಮವಾರ ತೀರ್ಪು ಪ್ರಕಟಿಸಲಿದೆ. 370 ನೇ ವಿಧಿಯ ರದ್ದತಿಯನ್ನು ಸಂವಿಧಾನ ಮತ್ತು ಕಾನೂನು ತತ್ವಗಳಿಗೆ ಅನುಗುಣವಾಗಿ ನಡೆಸಲಾಗಿದೆಯೇ ಎಂದು ನಿರ್ಧರಿಸುವ ಅವರ ಈ ತೀರ್ಮಾನವು ಭಾರೀ ಮಹತ್ವವನ್ನು ಪಡೆದುಕೊಳ್ಳಲಿದೆ.

ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ದುಶ್ಯಂತ್ ದವೆ ಮತ್ತು ರಾಜೀವ್ ಧವನ್ ಸೇರಿದಂತೆ 18 ವಕೀಲರು ಕೇಂದ್ರದ ನಿರ್ಧಾರದ ಸಿಂಧುತ್ವವನ್ನು ಪ್ರಶ್ನಿಸಿ ವಾದ ಮಂಡಿಸಿದರೆ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಇತರ ಕಾನೂನು ತಜ್ಞರು ಕೇಂದ್ರವನ್ನು ಪ್ರತಿನಿಧಿಸಿ, ಕೇಂದ್ರದ ನಿರ್ಧಾರವು ಸಂಪೂರ್ಣವಾಗಿ ತಾರ್ಕಿಕ ಮತ್ತು ಸೂಕ್ತವಾಗಿದೆ ಎಂದು ವಾದ ಮಂಡಿಸಿದ್ದರು.

ಆಗಸ್ಟ್ 2ರಿಂದ ದಿನ ನಿತ್ಯ ವಿಚಾರಣೆ ಆಂರಭಿಸಿದ್ದ ಸುಪ್ರೀಂ ಕೋರ್ಟ್

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ (Article 370) ವಿಧಿ ರದ್ದು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಆಗಸ್ಟ್ 2ರಿಂದ ನಿತ್ಯ ವಿಚಾರಣೆ ನಡೆಸಿತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ವಿಚಾರಣೆಯನ್ನು ಕೈಗೊಂಡಿತ್ತು.

ಕೇಂದ್ರ ಸರ್ಕಾರವು 2019ರ ಆಗಸ್ಟ್‌ 5ರಂದು 370ನೇ ವಿಧಿ ರದ್ದುಗೊಳಿಸಿದೆ. ಇದನ್ನು ಪ್ರಶ್ನಿಸಿ 23 ಅರ್ಜಿಗಳು ಸಲ್ಲಿಕೆಯಾದ ಕಾರಣ ಎಲ್ಲ ಅರ್ಜಿಗಳ ವಿಚಾರಣೆಯನ್ನು ಪ್ರತಿದಿನ ನಡೆಸುವುದಾಗಿ ತಿಳಿಸಿತ್ತು.

ಜಮ್ಮು ಕಾಶ್ಮೀರದ ವಿಶೇಷ ಸಾಂವಿಧಾನಿಕ ಸ್ಥಾನಮಾನವನ್ನು ರದ್ದುಗೊಳಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಿರ್ಧಾರವನ್ನು ಅಫಿಡವಿಟ್‌ನಲ್ಲಿ ಸರ್ಕಾರ ಸಮರ್ಥಿಸಿಕೊಂಡಿತ್ತು. 370ನೇ ವಿಧಿಯ ರದ್ದತಿಯು ಭಯೋತ್ಪಾದಕರನ್ನು ಮಟ್ಟಹಾಕಲು ಕಾರಣವಾಗಿದೆ; ಕಲ್ಲು ತೂರಾಟ ಮತ್ತು ಬೀದಿ ಹಿಂಸಾಚಾರದ ಘಟನೆಗಳು ಭೂತಕಾಲದ ವಿಷಯವಾಗಿದೆ. ಈ ಪ್ರದೇಶದಲ್ಲಿ ಅಭೂತಪೂರ್ವ ಅಭಿವೃದ್ಧಿ, ಪ್ರಗತಿ, ಭದ್ರತೆ ಮತ್ತು ಸ್ಥಿರತೆಗೆ ಕಾರಣವಾಗಿದೆ ಎಂದು ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು.

ಈ ಸುದ್ದಿಯನ್ನೂ ಓದಿ: Article 370: ರಾಷ್ಟ್ರಪತಿಯವರೇ ರಾಜ್ಯದ ಸ್ಥಾನ ನೀಡಬಹುದು; ಕಾಶ್ಮೀರ ವಿಷಯದಲ್ಲಿ ಸುಪ್ರೀಂ ಮಹತ್ವದ ಪ್ರಸ್ತಾಪ

Continue Reading

Fact Check

Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

Fact Check: ಸ್ಟಾರ್ ಗುರುತಿರುವ 500 ರೂ. ನೋಟು ನಕಲಿ ಎಂಬ ಸುದ್ದಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಆರ್‌ಬಿಐ ಏನು ಹೇಳಿದೆ?

VISTARANEWS.COM


on

Is 500 note with star symbol is fake, What Fact Check says?
Koo

ಬೆಂಗಳೂರು: ಚುಕ್ಕೆ(ಸ್ಟಾರ್) ಗುರುತು ಇರುವ (Star Symbol) 500 ರೂ. ನೋಟುಗಳು ನಕಲಿ (Fake Rs 500 notes), ಆ ನೋಟುಗಳನ್ನು ಬ್ಯಾಂಕ್‌ಗೆ ವಾಪಸ್ ಮಾಡಿ (Return to Bank) ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ (Social Media) ಜೋರಾಗಿದೆ. ಹಲವರು ಈ ಸುದ್ದಿಯನ್ನು ನಂಬಿ ನೋಟುಗಳನ್ನು ವಾಪಸ್ ಮಾಡಲು ಮುಂದಾದ ಉದಾಹರಣೆಗಳಿವೆ. ಈ ಸುದ್ದಿ ಕಳೆದ ಐದಾರು ತಿಂಗಳಿಂದ ಚಾಲ್ತಿಯಲ್ಲಿದ್ದು, ಈ ಕುರಿತು ಆಗಲೇ ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಣೆ ನೀಡಿದೆ(Reserve bank of India). ಆದರೂ ಈ ವದಂತಿ ನಿಲ್ಲುತ್ತಿಲ್ಲ. ಪಿಐಬಿ ಫ್ಯಾಕ್ಟ್ ಚೆಕ್(PIB Fact Check), ಸ್ಟಾರ್‌ ಗುರುತಿರುವ ನೋಟುಗಳು ನಕಲಿ ಅಲ್ಲ; ಅಸಲಿ ಎಂದು ಈಗ ಮತ್ತೆ ಟ್ವೀಟ್ ಮಾಡಿದೆ.

500 ರೂ. ನೋಟು ಕುರಿತು ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲ ಕುರಿತು ಆರ್‌ಬಿಐ ಈ ಹಿಂದೆಯೇ ಮಾಹಿತಿ ನೀಡಿದೆ. ಸ್ಟಾರ್ ಗುರುತು ಈ ನೋಟುಗಳು ಚಲಾವಣೆಯ ಒಂದು ಭಾಗವಾಗಿದೆ. ನಕ್ಷತ್ರ ಚಿಹ್ನೆಯು ಸರಳವಾಗಿ ಗುರುತಿಸುವಿಕೆಯ ಭಾಗವಾಗಿದೆ. ಅಂದರೆ, ಈ ನೋಟು ಮರುಮುದ್ರಣಗೊಂಡ ಅಥವಾ ಬದಲಿಸಲಾದ ನೋಟಿಗೆ ಬದಲಿಯಾಗಿ ಚಲಾವಣೆಯಾಗುತ್ತಿರುವ ನೋಟು ಎಂದು ಆರ್‌ಬಿಐ ಹೇಳಿದೆ.

ಇದರರ್ಥ ನೋಟು ಮೂಲತಃ ದೋಷದಿಂದ ಮುದ್ರಿಸಲ್ಪಟ್ಟಿರುತ್ತದೆ. ಆ ನೋಟನ್ನು ಸ್ಟಾರ್ ಗುರುತಿನ ಚಿಹ್ನೆ ಹೊಸ ನೋಟಿನೊಂದಿಗೆ ಬದಲಾಯಿಸಲಾಗಿರುತ್ತದೆ. ಈ ನೋಟುಗಳು ಮೌಲ್ಯವು ಕಾನೂನುಬದ್ಧವಾಗಿರುತ್ತದೆ. ನಕ್ಷತ್ರ ಚಿಹ್ನೆಯೊಂದಿಗೆ ನೋಟುಗಳ ಮೊದಲ ಸರಣಿಯು 2006 ರಲ್ಲಿ ಚಲಾವಣೆ ಆಗಲಾರಂಭಿಸಿದವು ಎಂದು ಆರ್‌ಬಿಐ ಹೇಳಿದೆ.

ಸ್ಟಾರ್ ಗುರುತಿರುವ ಈ ನೋಟುಗಳು ನಕಲಿ ಎಂಬ ಕುರಿತು ಸಾಕಷ್ಟು ಪೋಸ್ಟ್‌ಗಳು ಐದಾರು ತಿಂಗಳ ಹಿಂದೆ ಟ್ವಿಟರ್ ಮತ್ತು ಫೇಸ್‍‌ಬುಕ್‌ನಲ್ಲಿ ಹರಿದಾಡಿದ್ದವು. ಜನರು ಈ ಕೂಡ ನಕಲಿ ಸುದ್ದಿಯನ್ನು ನಿಜವೆಂದೇ ನಂಬಿದ್ದರು. ಈಗ ಮತ್ತೆ ಅಂಥದ್ದೇ ಪುಕಾರುಗಳು ಎದ್ದಿವೆ. ಆದರೆ, ಸ್ಟಾರ್ ಗುರುತಿರುವ ನೋಟುಗಳು ಖಂಡಿತವಾಗಿಯೂ ನಕಲಿಯಲ್ಲ, ಅಸಲಿಯಾಗಿದ್ದು, ಕಾನೂನು ಬದ್ಧ ಮಾನ್ಯತೆ ಇದೆ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

ಈ ಸುದ್ದಿಯನ್ನೂ ಓದಿ: Fact Check Cell : ಸರ್ಕಾರದ ಫ್ಯಾಕ್ಟ್‌ ಚೆಕ್‌ ಪ್ರಯತ್ನಕ್ಕೆ ಹಿನ್ನಡೆ; ಮಾನ್ಯತೆ ಪಡೆದ ಚೆಕರ್ಸ್‌ ನಿರಾಸಕ್ತಿ, ಯಾಕೆ?

Continue Reading
Advertisement
Karthik threw the sandal to vinay Ugly Fight
ಬಿಗ್ ಬಾಸ್8 mins ago

BBK SEASON 10: ಚಪ್ಪಲಿ ಎಸೆದೆ ಕಾರ್ತಿಕ್‌; ನನಗೆ ಮರ್ಯಾದೆ ಇಲ್ವಾ? ಆಚೆ ಹೋಗ್ಬೇಕು ಎಂದ ವಿನಯ್‌!

RBI governor Shaktikanta Das
ದೇಶ33 mins ago

RBI monetary policy: ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಇಂದು; ಬಡ್ಡಿ ದರ ಏರುತ್ತಾ?

Stamp duty
ಕರ್ನಾಟಕ41 mins ago

Assembly Session : ಭೂಮಿ ಬೆಲೆ ಹೆಚ್ಚಿಸಿದ್ದ ಸರ್ಕಾರದಿಂದ ಮುದ್ರಾಂಕ ಶುಲ್ಕವೂ ಹೆಚ್ಚಳ

dengue flue
ಆರೋಗ್ಯ1 hour ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ1 hour ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Raja Marga Father and Daughter
ಅಂಕಣ2 hours ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Hair Care Tips
ಆರೋಗ್ಯ2 hours ago

Hair Care Tips: ಕೂದಲು ಚೆನ್ನಾಗಿರಬೇಕೆಂದರೆ ಯಾವ ಆಹಾರ ಸೇವಿಸಬೇಕು?

Heavy Rain warning In karnataka
ಉಡುಪಿ2 hours ago

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

Vistara editorial, Let's take precautions for pneumonia infection
ಆರೋಗ್ಯ3 hours ago

ವಿಸ್ತಾರ ಸಂಪಾದಕೀಯ: ನ್ಯುಮೋನಿಯಾ ಸೋಂಕಿನ ಬಗ್ಗೆ ಈಗಲೇ ಎಚ್ಚರ ವಹಿಸೋಣ

How To Remove Tea Stains From Clothes
ಲೈಫ್‌ಸ್ಟೈಲ್3 hours ago

How To Remove Tea Stains From Clothes: ಬಟ್ಟೆಯ ಮೇಲಿನ ಚಹಾ ಕಲೆಯನ್ನು ತೆಗೆಯುವ ಸುಲಭದ ಉಪಾಯ ಇದು!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ14 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ15 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ21 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ2 days ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌