Union Budget 2024: ನಾಳೆ ಕೇಂದ್ರ ಬಜೆಟ್;‌ ಎಷ್ಟು ಗಂಟೆಗೆ ಮಂಡನೆ? ಲೈವ್‌ ವೀಕ್ಷಣೆ ಎಲ್ಲಿ? ಇಲ್ಲಿದೆ ಮಾಹಿತಿ - Vistara News

ದೇಶ

Union Budget 2024: ನಾಳೆ ಕೇಂದ್ರ ಬಜೆಟ್;‌ ಎಷ್ಟು ಗಂಟೆಗೆ ಮಂಡನೆ? ಲೈವ್‌ ವೀಕ್ಷಣೆ ಎಲ್ಲಿ? ಇಲ್ಲಿದೆ ಮಾಹಿತಿ

Union Budget 2024: ಉದ್ಯೋಗಿಗಳು, ಬಡವರು, ಉದ್ಯಮಿಗಳಿಂದ ಹಿಡಿದು ಪ್ರತಿಯೊಬ್ಬರ ಗಮನವೂ ಕೇಂದ್ರ ಸರ್ಕಾರದ ಬಜೆಟ್‌ ಮೇಲಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೇ ನಿರ್ಮಲಾ ಸೀತಾರಾಮನ್‌ ಅವರು ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇನ್ನು, ಬಜೆಟ್‌ನ ಪ್ರತಿಕ್ಷಣದ ಅಪ್‌ಡೇಟ್‌ಅನ್ನು ಲೈವ್‌ ವೀಕ್ಷಿಸಬಹುದಾಗಿದೆ.

VISTARANEWS.COM


on

Union Budget 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸತತ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ಅನ್ನು (Union Budget 2024) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಗಳವಾರ (ಜುಲೈ 22) ಮಂಡಿಸಲಿದ್ದಾರೆ. ಉದ್ಯೋಗಿಗಳು, ಬಡವರು, ಉದ್ಯಮಿಗಳಿಂದ ಹಿಡಿದು ಪ್ರತಿಯೊಬ್ಬರ ಗಮನವೂ ಕೇಂದ್ರ ಸರ್ಕಾರದ ಬಜೆಟ್‌ ಮೇಲಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೇ ನಿರ್ಮಲಾ ಸೀತಾರಾಮನ್‌ ಅವರು ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇನ್ನು, ಬಜೆಟ್‌ನ ಪ್ರತಿಕ್ಷಣದ ಮಾಹಿತಿಯನ್ನು ಲೈವ್‌ ವೀಕ್ಷಣೆ ಮೂಲಕ ಪಡೆಯಬಹುದಾಗಿದೆ.

ಲೈವ್‌ ಇಲ್ಲಿ ವೀಕ್ಷಿಸಿ

ಸಂಸತ್‌ ಟಿವಿ ಜತೆಗೆ ವಿಸ್ತಾರ ನ್ಯೂಸ್‌ ಚಾನೆಲ್‌ನಲ್ಲೂ ಬೆಳಗ್ಗೆಯಿಂದಲೇ ಲೈವ್‌ ಮಾಹಿತಿ, ಕ್ಷಣ ಕ್ಷಣದ ಅಪ್‌ಡೇಟ್‌, ಬಜೆಟ್‌ ಕುರಿತ ವಿಶ್ಲೇಷಣೆ ಇರಲಿದೆ. ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲೂ ಪ್ರತಿಪಕ್ಷಣದ ಮಾಹಿತಿ ಲಭ್ಯವಾಗಲಿದೆ. ಮತ್ತೊಂದೆಡೆ, ಬಜೆಟ್‌ನಲ್ಲಿ ಏನೆಲ್ಲ ಘೋಷಣೆ ಮಾಡಲಾಗುತ್ತದೆ ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಹೊಸ ತೆರಿಗೆ (Income Tax) ಸ್ಲ್ಯಾಬ್‌ಅನ್ನು ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನೂ ಏರಿಕೆ ಮಾಡುವ ನಿರೀಕ್ಷೆ ಇದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇಂದು ಪೂರ್ಣಪ್ರಮಾಣದ ಬಜೆಟ್‌ ಮಂಡಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Economic Survey 2023-24: ಉದ್ಯೋಗ ಸೃಷ್ಟಿ, ಕೃಷಿ ಏಳಿಗೆ; ಬಜೆಟ್‌ಗೂ ಮುನ್ನ ಕೇಂದ್ರದಿಂದ ಮಹತ್ವದ ಸುಳಿವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯ ಮೆಹ್ರಾಲಿ ಅಂಡರ್‌ಪಾಸ್ ಬಳಿ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ತಾಯಿ ಮಗ ಸಾವನ್ನಪ್ಪಿದ್ದಾರೆ. ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಕ್ಸ್ ಪ್ರೆಸ್ ವೇಯಲ್ಲಿ ನಡೆದ ಭಯಾನಕ ಅಪಘಾತದ ದೃಶ್ಯಗಳು ಇದರಲ್ಲಿ ಸೆರೆಯಾಗಿದೆ.

VISTARANEWS.COM


on

By

Viral Video
Koo

ಕಾರು ಮತ್ತು ಸ್ಕೂಟರ್ ಡಿಕ್ಕಿಯಾದ (car and Scooter accident) ಪರಿಣಾಮ ತಾಯಿ ಮಗ ಸಾವನ್ನಪ್ಪಿರುವ ದುರಂತ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ (Delhi-Meerut Expressway) ನಡೆದಿದೆ. ಇದರ ಭೀಕರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಹರಿದ್ವಾರದ ಗಂಗಾ ನದಿಯಲ್ಲಿ ಸ್ನಾನ ಮುಗಿಸಿ ದೆಹಲಿಗೆ ಸ್ಕೂಟರ್ ನಲ್ಲಿ ತಾಯಿ ಮಗ ಹಿಂದಿರುಗುತ್ತಿದ್ದರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿರುವ ಭೀಕರ ಅಪಘಾತವನ್ನು ತೋರಿಸುವ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾದ ಇದರ ವಿಡಿಯೋದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿಯಾದ ನಿಖರವಾದ ಕ್ಷಣವನ್ನು ತೋರಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಸ್ಕೂಟರ್‌ ನಲ್ಲಿ ಕುಳಿತಿದ್ದ ಮಹಿಳೆ ಗಾಳಿಯಲ್ಲಿ 10 ಅಡಿ ಎತ್ತರಕ್ಕೆ ಹಾರಿ, ರಸ್ತೆಯ ಮೇಲೆ ಬಿದ್ದಿದ್ದಾರೆ.


ಶನಿವಾರ ರಾತ್ರಿ ಗಾಜಿಯಾಬಾದ್‌ನ ಮೆಹ್ರಾಲಿ ಅಂಡರ್‌ಪಾಸ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಗೊಂಡ ಸ್ಕೂಟರ್ ಸವಾರರನ್ನು ತಕ್ಷಣವೇ ಹತ್ತಿರದ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಇದನ್ನೂ ಓದಿ: Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

ಮೃತರನ್ನು 20 ವರ್ಷದ ಯಶ್ ಗೌತಮ್ ಮತ್ತು ಆತನ 40 ವರ್ಷದ ತಾಯಿ ಮಂಜು ದೇವಿ ಎಂದು ಗುರುತಿಸಲಾಗಿದೆ. ಇಬ್ಬರೂ ದೆಹಲಿಯ ಪಶ್ಚಿಮ ವಿನೋದ್ ನಗರದ ನಿವಾಸಿಗಳಾಗಿದ್ದರು.

ಘಟನೆಯ ವೇಳೆ ಯಶ್ ಹೆಲ್ಮೆಟ್ ಧರಿಸಿದ್ದು, ಅವರ ತಾಯಿ ಹೆಲ್ಮೆಟ್ ಧರಿಸಿರಲಿಲ್ಲ. ಇದಲ್ಲದೆ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳನ್ನು ಓಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Continue Reading

ದೇಶ

INS Brahmaputra: ನೌಕಾಪಡೆಯ ಐಎನ್‌ಎಸ್‌ ಯುದ್ಧನೌಕೆಯಲ್ಲಿ ಭೀಕರ ಅಗ್ನಿ ದುರಂತ; ನಾವಿಕ ನಾಪತ್ತೆ

INS Brahmaputra: ಮುಂಬೈನಲ್ಲಿರುವ ನೌಕಾಪಡೆಯ ನೌಕಾನೆಲೆಯಲ್ಲಿ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಸಾಮರ್ಥ್ಯ ಇರುವ ಯುದ್ಧನೌಕೆಯ ನಿರ್ವಹಣೆ ಮಾಡಲಾಗುತ್ತಿತ್ತು. ಸಿಬ್ಬಂದಿಯು ಯುದ್ಧ ನೌಕೆಯ ತಪಾಸಣೆ, ಸಣ್ಣ-ಪುಟ್ಟ ದುರಸ್ತಿಯಲ್ಲಿ ತೊಡಗಿದ್ದರು. ಇದೇ ವೇಳೆ ಅಗ್ನಿ ದುರಂತ ಸಂಭವಿಸಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

INS Brahmaputra
Koo

ನವದೆಹಲಿ: ಭಾರತೀಯ ನೌಕಾಪಡೆಯ ಪ್ರಮುಖ ಯುದ್ಧನೌಕೆಯಾದ ಐಎನ್‌ಎಸ್‌ ಬ್ರಹ್ಮಪುತ್ರದಲ್ಲಿ (INS Brahmaputra) ಭೀಕರ ಅಗ್ನಿ ದುರಂತ (Fire Accident) ಸಂಭವಿಸಿದೆ. ನೌಕೆಯ ಪ್ರಮುಖ ಭಾಗಗಳು ಸುಟ್ಟು ಕರಕಲಾಗಿದ್ದು, ನೌಕೆಯಲ್ಲಿದ್ದವರ ಪೈಕಿ ಒಬ್ಬ ನಾವಿಕ (Sailor) ನಾಪತ್ತೆಯಾಗಿದ್ದಾರೆ. “ಒಬ್ಬ ಕಿರಿಯ ನಾವಿಕ ನಾಪತ್ತೆಯಾಗಿದ್ದು, ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದಾಗ್ಯೂ, ನೌಕೆಯಲ್ಲಿದ್ದ ಎಲ್ಲ ಸಿಬ್ಬಂದಿಯೂ ಸುರಕ್ಷಿತರಾಗಿದ್ದಾರೆ” ಎಂಬುದಾಗಿ ನೌಕಾಪಡೆಯು ಪ್ರಕಟಣೆ ತಿಳಿಸಿದೆ.

ಮುಂಬೈನಲ್ಲಿರುವ ನೌಕಾಪಡೆಯ ನೌಕಾನೆಲೆಯಲ್ಲಿ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಸಾಮರ್ಥ್ಯ ಇರುವ ಯುದ್ಧನೌಕೆಯ ನಿರ್ವಹಣೆ ಮಾಡಲಾಗುತ್ತಿತ್ತು. ಸಿಬ್ಬಂದಿಯು ಯುದ್ಧ ನೌಕೆಯ ತಪಾಸಣೆ, ಸಣ್ಣ-ಪುಟ್ಟ ದುರಸ್ತಿಯಲ್ಲಿ ತೊಡಗಿದ್ದರು. ಇದೇ ವೇಳೆ ಅಗ್ನಿ ದುರಂತ ಸಂಭವಿಸಿದೆ. ಅಗ್ನಿಯ ಕೆನ್ನಾಲಗೆಗೆ ನೌಕೆಯ ಪ್ರಮುಖ ಭಾಗಗಳು ಸುಟ್ಟಿವೆ. ಇದೇ ವೇಳೆ ಒಬ್ಬ ನಾವಿಕ ನಾಪತ್ತೆಯಾಗಿದ್ದಾನೆ. ಆತನಿಗಾಗಿ ತೀವ್ರ ಪ್ರಮಾಣದಲ್ಲಿ ಶೋಧ ನಡೆದಿದೆ ಎಂದು ನೌಕಾಪಡೆಯು ಮಾಹಿತಿ ನೀಡಿದೆ.

“ಮುಂಬೈನ ನೌಕಾನೆಲೆಯಲ್ಲಿ ಸೋಮವಾರ (ಜುಲೈ 22) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿಯ ಕೆನ್ನಾಲಗೆಯು ಬಂದರಿನ ಬೇರೆ ಹಡಗುಗಳಿಗೂ ವ್ಯಾಪಿಸದಂತೆ ನೋಡಿಕೊಂಡರು. ಸಿಬ್ಬಂದಿಯು ಯುದ್ಧನೌಕೆಯನ್ನು ತಪಾಸಣೆ ಮಾಡುವಾಗ ಅವಘಡ ಸಂಭವಿಸಿದೆ. ದುರಂತಕ್ಕೆ ನಿಖರ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತದೆ” ಎಂದು ನೌಕಾಪಡೆ ತಿಳಿಸಿದೆ. ಅಗ್ನಿ ದುರಂತದಲ್ಲಿ ಯುದ್ಧನೌಕೆಗೆ ಭಾರಿ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಐಎನ್‌ಎಸ್‌ ಬ್ರಹ್ಮಪುತ್ರ ಯುದ್ಧನೌಕೆಯನ್ನು ದೇಶೀಯವಾಗಿಯೇ, ಕೋಲ್ಕೊತಾದಲ್ಲಿ ನಿರ್ಮಿಸಲಾಗಿದೆ. 2000ನೇ ಇಸವಿಯಲ್ಲಿ ಇದನ್ನು ಭಾರತೀಯ ನೌಕಾಪಡೆಗೆ ಅಳವಡಿಸಿಕೊಳ್ಳಲಾಗಿದೆ. ಸುಮಾರು 3,600 ಟನ್‌ ತೂಕ ಇರುವ ಇದು, 410 ಅಡಿ ಉದ್ದ ಇದೆ. ಗಂಟೆಗೆ 56 ಕಿಲೋಮೀಟರ್‌ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿದ್ದು, ಕ್ಷಿಪಣಿಗಳನ್ನು ಉಡಾಯಿಸಿ, ವೈರಿಗಳನ್ನು ನಿರ್ನಾಮ ಮಾಡಬಹುದಾಗಿದೆ. ತುರ್ತು ಸಂದರ್ಭಗಳಲ್ಲಿ ಕಾರ್ಯಾಚರಣೆ, ರಕ್ಷಣಾ ಕಾರ್ಯಾಚರಣೆಗೆ ಇದನ್ನು ಬಳಸಲಾಗಿದೆ.

ಇದನ್ನೂ ಓದಿ: Indian Navy: ನೌಕಾಪಡೆ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

Continue Reading

ದೇಶ

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Nitish Kumar: ಆರ್ಥಿಕ ಏಳಿಗೆ ಹಾಗೂ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ದಿಸೆಯಲ್ಲಿ ಬಿಹಾರ ಸೇರಿ ಹಲವು ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಎಂಬುದಾಗಿ ಜೆಡಿಯು ಸಂಸದರೊಬ್ಬರು ಕೇಳಿದ ಪ್ರಶ್ನೆಗೆ ಕೇಂದ್ರ ಸರ್ಕಾರವು ಖಡಾಖಂಡಿತವಾಗಿ ಇಲ್ಲ ಎಂದು ಉತ್ತರಿಸಿದೆ. ಇದು ಈಗ ಜೆಡಿಯುಗೆ ಉಂಟಾದ ಮುಖಭಂಗ ಎಂದೇ ಹೇಳಲಾಗುತ್ತಿದೆ.

VISTARANEWS.COM


on

Nitish Kumar
Koo

ನವದೆಹಲಿ: ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಗೆ ಪ್ರಮುಖ ಕಾರಣವಾಗಿರುವ, ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷವಾದ ಜೆಡಿಯು ಹಾಗೂ ಅದರ ಮುಖ್ಯಸ್ಥ ನಿತೀಶ್‌ ಕುಮಾರ್‌ (Nitish Kumar) ಅವರಿಗೆ ಭಾರಿ ಹಿನ್ನಡೆಯಾಗಿದೆ. “ಬಿಹಾರಕ್ಕೆ ವಿಶೇಷ ಸ್ಥಾನಮಾನ (Bihar Special Status) ನೀಡುವ ಪ್ರಸ್ತಾವನೆಯೇ ನಮ್ಮ ಮುಂದೆ ಇಲ್ಲ” ಎಂಬುದಾಗಿ ಕೇಂದ್ರ ಹಣಕಾಸು ಸಚಿವಾಲಯವು (Finance Ministry) ಖಡಾಖಂಡಿತವಾಗಿ ಹೇಳಿದ್ದು, ಇದರಿಂದಾಗಿ ನಿತೀಶ್‌ ಕುಮಾರ್‌ ಬಂಡಾಯದ ಬಾವುಟ ಹಾರಿಸುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

“ಆರ್ಥಿಕ ಏಳಿಗೆ ಹಾಗೂ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ದಿಸೆಯಲ್ಲಿ ಬಿಹಾರ ಸೇರಿ ಹಲವು ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ” ಎಂಬುದಾಗಿ ಬಿಹಾರದ ಝಂಝಹರಪುರ ಕ್ಷೇತ್ರದ ಜೆಡಿಯು ಸಂಸದ ರಾಮ್‌ಪ್ರೀತ್‌ ಮಂಡಲ್‌ ಅವರು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪ್ರಶ್ನೆ ಕೇಳಿದ್ದರು. ಇದಕ್ಕೆ, ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್‌ ಚೌಧರಿ ಲಿಖಿತ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆ ಕೇಂದ್ರದ ಮುಂದಿಲ್ಲ” ಎಂದಿದ್ದಾರೆ.

“ಯಾವುದೇ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲು ಹಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಅತಿಯಾಗಿ ಹಿಂದುಳಿದ ರಾಜ್ಯಗಳಿಗೆ, ಗುಡ್ಡಗಾಡು ಪ್ರದೇಶದ ರಾಜ್ಯಗಳು, ಆರ್ಥಿಕವಾಗಿ ಹಿನ್ನಡೆಯಲ್ಲಿರುವ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಲಾಗುತ್ತದೆ. ಹಾಗಾಗಿ, ಬಿಹಾರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಪ್ರಸ್ತಾವನೆ ಇಲ್ಲ” ಎಂಬುದಾಗಿ ಪಂಕಜ್‌ ಚೌಧರಿ ತಿಳಿಸಿದ್ದಾರೆ. 12 ಸಂಸದರನ್ನು ಹೊಂದಿರುವ ಜೆಡಿಯು, ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಕಾರಣ ಬಿಹಾರಕ್ಕೆ ವಿಶೇಷ ಸ್ಥಾನಮಾನ ಸಿಗುತ್ತದೆ ಎಂದೇ ಹೇಳಲಾಗುತ್ತಿತ್ತು. ಆದರೀಗ, ಜೆಡಿಯುಗೆ ಮುಖಭಂಗ ಉಂಟಾಗಿದೆ.

ಮೈತ್ರಿಧರ್ಮ ನೆನಪಿಸಿದ ಜೆಡಿಯು

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಲು ಆಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರಕ್ಕೆ ಜೆಡಿಯು ಮೈತ್ರಿಧರ್ಮವನ್ನು ನೆನಪಿಸಿದೆ ಎಂದು ತಿಳಿದುಬಂದಿದೆ. ಮೈತ್ರಿಕೂಟದ ಪಕ್ಷಗಳು, ಆ ಪಕ್ಷಗಳು ಆಡಳಿತ ನಡೆಸುವ ರಾಜ್ಯಗಳ ಹಿತಾಸಕ್ತಿಯಿಂದ ಬಿಜೆಪಿಯು ವರ್ತಿಸಬೇಕು. ಮೈತ್ರಿಧರ್ಮವನ್ನು ಪಾಲಿಸಬೇಕು ಎಂಬುದಾಗಿ ಜೆಡಿಯು ಸಂದೇಶ ರವಾನಿಸಿದೆ ಎನ್ನಲಾಗಿದೆ. ಇನ್ನು, ನಿತೀಶ್‌ ಕುಮಾರ್‌ ಅವರು ಯಾವ ತೀರ್ಮಾನ ತೆಗೆದುಕೊಳ್ಳಲಿದ್ದಾರೆ? ಬಂಡಾಯ ಏಳಲಿದ್ದಾರಾ? ರಾಜ್ಯದಲ್ಲಿ ಪ್ರತಿಪಕ್ಷಗಳನ್ನು ಜೆಡಿಯು ಹೇಗೆ ಹೆದರಿಸುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Special Status: ಬಿಹಾರಕ್ಕೆ ಇಲ್ಲ ವಿಶೇಷ ಸ್ಥಾನಮಾನ; ನಿತೀಶ್‌ ಕುಮಾರ್‌ ರಾಜೀನಾಮೆಗೆ ಆರ್‌ಜೆಡಿ ಆಗ್ರಹ

Continue Reading

ದೇಶ

You Tube : ಮೈಕ್ರೋಸಾಫ್ಟ್​ ಸಮಸ್ಯೆ ಬಳಿಕ ಇದೀಗ ಯೂಟ್ಯೂಬ್​​ನಲ್ಲೂ ತಾಂತ್ರಿಕ ದೋಷ!

You Tube : ಯೂಟ್ಯೂಬ್​ನಲ್ಲಿ ಕೆಲವು ಬಳಕೆದಾರರು ತಮ್ಮ ಫೀಡ್​ನಲ್ಲಿ ಸಮಸ್ಯೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಒಂದು ವೀಡಿಯೊ ಅಪ್ಲೋಡ್ ಮಾಡಿದ ವೀಡಿಯೊಗಳನ್ನು ಫೀಡ್​​ನಲ್ಲಿ ತೋರಿಸುತ್ತಿಲ್ಲ ಎಂದು ಹೇಳಿದರೆ, ಮತ್ತೊಂದು ವಿಡಿಯೊದಲ್ಲಿ ವಿಡಿಯೊಗಳನ್ನು ಅಪ್ಲೋಡ್ ಮಾಡಲಾಗುತ್ತಿಲ್ಲ ಎಂದು ಹೇಳಲಾಗಿದೆ.

VISTARANEWS.COM


on

YouTube
Koo

ಬೆಂಗಳೂರು: ಕೆಲವು ದಿನಗಳ ಹಿಂದೆ ವಿಶ್ವಾದ್ಯಂತ ಮಕ್ರೊಸಾಫ್ಟ್​​ ಬಳಕೆದಾರರು ಸಮಸ್ಯೆ ಎದುರಿಸಿದ್ದರು. ಅಂತೆಯೇ ಸೋಮವಾರ ಯೂಟ್ಯೂಬ್ (You Tube) ಬಳಕೆದಾರರು ಸಮಸ್ಯೆಗಳನ್ನು ಎದುರಿಸಿದ್ದಾರೆ. ಯೂಟ್ಯೂಬ್ ಅಪ್ಲಿಕೇಶನ್, ವೆಬ್​ಸೈಟ್​ನಲ್ಲಿ ಸ್ಟ್ರೀಮಿಂಗ್ ಸಮಸ್ಯೆ ಮತ್ತು ವೀಡಿಯೊ ಅಪ್ಲೋಡ್ ಮಾಡಲು ತೊಂದರೆಗಳಾಗಿವೆ. ಸೋಮವಾರ ಮಧ್ಯಾಹ್ನ 1.30 ರಿಂದ ಡೌನ್ ಡೆಟೆಕ್ಟರ್ ಅಪ್ಲಿಕೇಶನ್​​ನಲ್ಲಿ ಸಮಸ್ಯೆಗಳು ಆರಂಭಗೊಂಡಿವೆ. ಮಧ್ಯಾಹ್ನ 3.15 ಕ್ಕೆ ಸಮಸ್ಯೆ ಹೆಚ್ಚಾಗಿದೆ. ವೆಬ್​ಸೈಟ್​ ಪ್ರಕಾರ ವರದಿ ಮಾಡಿದ 43 ಪ್ರತಿಶತದಷ್ಟು ಬಳಕೆದಾರರು ಅಪ್ಲಿಕೇಶನ್​ನಲ್ಲಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. 33 ಪ್ರತಿಶತದಷ್ಟು ಬಳಕೆದಾರರು ವೀಡಿಯೊ ಅಪ್ಲೋಡ್ ಮಾಡಲು ತೊಂದರೆ ಎದುರಿಸುತ್ತಿದ್ದಾರೆ 23 ಪ್ರತಿಶತದಷ್ಟು ಜನರು ಯೂಟ್ಯೂಬ್ ವೆಬ್​ಸೈಟ್​ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರಸ್ತುತ ಸಮಸ್ಯೆ ಏನು ಎಂದು ತಿಳಿದಿಲ್ಲ. ಯೂಟ್ಯೂಬ್ ಸಪೋರ್ಟ್​​ ಪುಟದಲ್ಲಿ ಅಥವಾ ಅದರ ಸಾಮಾಜಿಕ ಮಾಧ್ಯಮ ಚಾನೆಲ್​​​​​ಗಳಲ್ಲಿ ಯಾವುದೇ ವಿಷಯ ಪ್ರಕಟಿಸಿಲ್ಲ. ಸಣ್ಣ ದೋಷವಾಗಿದ್ದು, ಅದನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಹೇಳಿದೆ.

ಯೂಟ್ಯೂಬ್​ನಲ್ಲಿ ಕೆಲವು ಬಳಕೆದಾರರು ತಮ್ಮ ಫೀಡ್​ನಲ್ಲಿ ಸಮಸ್ಯೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಒಂದು ವೀಡಿಯೊ ಅಪ್ಲೋಡ್ ಮಾಡಿದ ವೀಡಿಯೊಗಳನ್ನು ಫೀಡ್​​ನಲ್ಲಿ ತೋರಿಸುತ್ತಿಲ್ಲ ಎಂದು ಹೇಳಿದರೆ, ಮತ್ತೊಂದು ವಿಡಿಯೊದಲ್ಲಿ ವಿಡಿಯೊಗಳನ್ನು ಅಪ್ಲೋಡ್ ಮಾಡಲಾಗುತ್ತಿಲ್ಲ ಎಂದು ಹೇಳಲಾಗಿದೆ.

ಎಕ್ಸ್​​ನಲ್ಲಿ ಪೋಸ್ಟ್ ಗಳನ್ನು ನೋಡಿದರೆ ಸಮಸ್ಯೆ ವ್ಯಾಪಕವಾದಂತೆ ಕಾಣುತ್ತಿಲ್ಲ. ಇದು ಸಣ್ಣ ಪ್ರಮಾಣದ ಜನರ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ. ಯುಟ್ಯೂಬ್ ಭಾರತದಲ್ಲಿ ಹಲವಾರು ಬಳಕೆದಾರರಿಗೆ ಸ್ಥಗಿತ ಅನುಭವಿಸುತ್ತಿದೆ ಎಂದು ವರದಿಯಾಗಿದೆ. ಬೆಳಗ್ಗೆ ಈ ಬಗ್ಗೆ ಸುದ್ದಿಯಾಗಿದ್ದು ಸಂಜೆಯ ತನಕವೂ ಮುಂದುವರಿತ್ತು.

ಯೂಟ್ಯೂಬ್ ನ ಪ್ರತಿಕ್ರಿಯೆ

ಯೂಟ್ಯೂಬ್ ಡೌನ್​​ನಲ್ಲಿ ಹಲವಾರು ಪೋಸ್ಟ್​​ಗಳು ಮತ್ತು ಟ್ರೆಂಡಿಂಗ್ ಹ್ಯಾಶ್​ಟ್ಯಾಗ್​​ಗಳ ಬಳಿಕ ಕಂಪನಿಯು ಅಧಿಕೃತ ಟೀಮ್​ ಯೂಟ್ಯೂಬ್​​ನಲ್ಲಿ ಪ್ರತಿಕ್ರಿಯೆ ನೀಡಿದೆ. ಇದನ್ನು ಫ್ಲ್ಯಾಗ್ ಮಾಡಿದ್ದಕ್ಕಾಗಿ ಧನ್ಯವಾದಗಳು. ನಾವು ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಯಾವುದೇ ಹೆಚ್ಚುವರಿ ಮಾಹಿತಿ ಬೇಕಾದರೆ ನಿಮ್ಮನ್ನು ಸಂಪರ್ಕಿಸುತ್ತೇವೆ ಎಂದು ಬರೆಯಲಾಗಿದೆ.

ಸಂಭಾವ್ಯ ಕಾರಣವೇನು?

ಯೂಟ್ಯೂಬ್ ಸ್ಥಗಿತಕ್ಕೆ ನಿಖರ ಕಾರಣ ತಿಳಿದಿಲ್ಲವಾದರೂ ಸಾಮಾನ್ಯ ಸಮಸ್ಯೆಗಳಲ್ಲಿ ಸರ್ವರ್ ಸಮಸ್ಯೆಗಳು, ನಿರ್ವಹಣಾ ಚಟುವಟಿಕೆಗಳು ಅಥವಾ ನೆಟ್ವರ್ಕ್ ಸಮಸ್ಯೆಗಳು ಸೇರಿಕೊಂಡಿವೆ ಎನ್ನಲಾಗಿದೆ. ಸ್ಥಳೀಯ ಇಂಟರ್ನೆಟ್ ಸೇವಾ ಪೂರೈಕೆದಾರರು (ಐಎಸ್​ ಗಳು) ಕೂಡ ಯೂಟ್ಯೂಬ್​ ಸಮಸ್ಯೆಗೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಅಂಗಡಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಸೂಚಿಸಿಲ್ಲ; ಮಧ್ಯಪ್ರದೇಶ ಸರ್ಕಾರ ಸ್ಪಷ್ಟನೆ

ಏನು ಮಾಡಬೇಕು?

ಯೂಟ್ಯೂಬ್ ಸ್ಥಗಿತದಿಂದ ಬಾಧಿತರಾದ ಬಳಕೆದಾರರು ತಮ್ಮ ಸಾಧನಗಳಲ್ಲಿ ಈ ಕೆಳಗಿನ ಪ್ರಯತ್ನಗಳನ್ನು ಮಾಡಬಹುದು

ಕ್ಯಾಶ್ ಮತ್ತು ಕುಕೀಗಳನ್ನು ಅಳಿಸಿ ಕೆಲವೊಮ್ಮೆ, ನಿಮ್ಮ ಬ್ರೌಸರ್ ನ ಕ್ಯಾಶ್ ಮತ್ತು ಕುಕೀಗಳನ್ನು ತೆರವುಗೊಳಿಸುವುದರಿಂದ ವೆಬ್ ಸೈಟ್ ನ ಲೋಡಿಂಗ್ ಸಮಸ್ಯೆಗಳನ್ನು ಪರಿಹರಿಸಬಹುದು.

ಇಂಟರ್ನೆಟ್ ಸಂಪರ್ಕ ಪರಿಶೀಲಿಸಿ: ಇಂಟರ್ನೆಟ್ ಸಂಪರ್ಕ ಸರಿಯಾಗಿ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಪರ್ಯಾಯ ನೆಟ್ವರ್ಕ್​​ ಬಳಸಿ: ಇದು ಡಿವೈಸ್​ ಆಧಾರಿತ ಸಮಸ್ಯೆಯೇ ಅಥವಾ ಒಟ್ಟು ಸಮಸ್ಯೆಯೇ ಎಂದು ಪರಿಶೀಲಿಸಲು ಬೇರೆ ಸಾಧನದಿಂದ ಯೂಟ್ಯೂಬ್​ಗೆ ಲಾಗ್​ ಇನ್​​ ಆಗಿ.

ಯೂಟ್ಯೂಬ್ ಹೊಸ ಎಐ-ಕೇಂದ್ರಿತ ಮಾರ್ಗಸೂಚಿಗಳು ಮತ್ತು ಅಪ್​ಡೇಟ್​ಗಳನ್ನು ತಂದಿದೆ. ಇದು ಬಳಕೆದಾರರಿಗೆ ಎಐ-ರಚಿಸಿದ ವೀಡಿಯೊಗಳನ್ನು ಗುರುತಿಸಲು ಮತ್ತು ವರದಿ ಮಾಡಲು ಅನುವು ಮಾಡಿಕೊಡುತ್ತದೆ. ಈ ಅಪ್​ಡೇಟ್​ಗಳು ಎಐ ಟೂಲ್​ ಬಳಸಿ ವೀಡಿಯೊ ಮಾಡಿದ್ದರೆ ಪತ್ತೆ ಹಚ್ಚುತ್ತದೆ. ಎಚ್ಚರಿಕೆಯನ್ನು ಪಡೆಯಲು ನೆರವಾಗುತ್ತದೆ.

Continue Reading
Advertisement
Chaluvadi Narayanaswamy
ಕರ್ನಾಟಕ43 mins ago

Chaluvadi Narayanaswamy : ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ

NEET
ಕರ್ನಾಟಕ56 mins ago

NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

DK Shivakumar
ಕರ್ನಾಟಕ1 hour ago

DK Shivakumar: ರೈತನಿಗೆ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿ ಇತರೆಡೆ ಶೀಘ್ರ ವಸ್ತ್ರ ಸಂಹಿತೆ ಜಾರಿ ಎಂದ ಡಿಕೆಶಿ

Veerabaswanthreddy Mudnal
ಶ್ರದ್ಧಾಂಜಲಿ2 hours ago

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Rahat Fateh Ali Khan
ವಿದೇಶ2 hours ago

Rahat Fateh Ali Khan: ದುಬೈನಲ್ಲಿ ಪಾಕಿಸ್ತಾನದ ಗಾಯಕನ ಬಂಧನ; ಎಸಗಿದ ಕೃತ್ಯವೇನು?

Valmiki Corporation Scam
ಕರ್ನಾಟಕ2 hours ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Tata Curvv
ಆಟೋಮೊಬೈಲ್2 hours ago

Tata Curvv : ಎಸ್​ಯುವಿ ವಿಭಾಗದಲ್ಲಿ ವಿಭಿನ್ನ ವಿನ್ಯಾಸದ ಕಾರನ್ನು ಪರಿಚಯಿಸಿದ ಮಾಡಿದ ಟಾಟಾ

Kempambudi lake encroachment cleared soon says DCM DK Shivakumar
ಕರ್ನಾಟಕ2 hours ago

Assembly Session 2024: ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು; ಡಿ.ಕೆ.ಶಿವಕುಮಾರ್

Viral Video
ವೈರಲ್ ನ್ಯೂಸ್2 hours ago

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

TA Sharavana questioned about the continuous variation in the service of 108 Ambulance even after 7 years there is no new tender
ಬೆಂಗಳೂರು2 hours ago

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌