Unique ID for doctors : ಎಲ್ಲ ವೈದ್ಯರಿಗೆ ವಿಶಿಷ್ಟ ಐಡಿ ಕಡ್ಡಾಯ, ಏನಿದು? - Vistara News

ದೇಶ

Unique ID for doctors : ಎಲ್ಲ ವೈದ್ಯರಿಗೆ ವಿಶಿಷ್ಟ ಐಡಿ ಕಡ್ಡಾಯ, ಏನಿದು?

Unique ID for doctors ದೇಶದಲ್ಲಿ ವೈದ್ಯಕೀಯ ಸೇವೆ ಮಾಡಲು ಬಯಸುವ ವೈದ್ಯರಿಗೆ ವಿಶಿಷ್ಟ ಐಡಿ ಕಡ್ಡಾಯ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿಳಿಸಿದೆ. ಏನಿದು? ಇಲ್ಲಿದೆ ವಿವರ.

VISTARANEWS.COM


on

Medical education
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೇಶದಲ್ಲಿ ಇನ್ನು ಮುಂದೆ ಎಲ್ಲ ವೈದ್ಯರು ವೈದ್ಯಕೀಯ ಸೇವೆ ಸಲ್ಲಿಸಲು ವಿಶಿಷ್ಟ ಗುರುತಿನ ಸಂಖ್ಯೆ (Unique identification number) ಹೊಂದಿರಬೇಕು ಎಂದು ನ್ಯಾಶನಲ್‌ ಮೆಡಿಕಲ್‌ ಕಮಿಶನ್‌ (National medical commission) ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಎನ್‌ಎಂಸಿಯ ಎಥಿಕ್ಸ್‌ ಬೋರ್ಡ್‌ ವಿಶಿಷ್ಟ ಗುರುತನ್ನು ಸೃಷ್ಟಿಸಿ ವೈದ್ಯರಿಗೆ ವಿತರಿಸಲಿದೆ. ಈ ಕುರಿತ national medical register ಅನ್ನು ಎನ್‌ಎಂಸಿ ನಿರ್ವಹಿಸಲಿದೆ.

ನ್ಯಾಶನಲ್‌ ಮೆಡಿಕಲ್‌ ರಿಜಿಸ್ಟರ್‌ (NMR) ದೇಶದಲ್ಲಿನ ಎಲ್ಲ ರಾಜ್ಯ ವೈದ್ಯಕೀಯ ಮಂಡಳಿಗಳಲ್ಲಿನ ವೈದ್ಯರ ನೋಂದಣಿಗಳ ವಿವರಗಳನ್ನು ಹೊಂದಲಿದೆ. ವೈದ್ಯರ ವೈದ್ಯಕೀಯ ಅರ್ಹತೆ, ವಿಶೇಷತೆ, ಉತ್ತೀರ್ಣರಾದ ವರ್ಷ, ಯೂನಿವರ್ಸಿಟಿ, ಆಸ್ಪತ್ರೆ ಸೇರಿ ಎಲ್ಲ ವಿವರಗಳನ್ನು ಒಳಗೊಳ್ಳಲಿದೆ.

ಇದನ್ನೂ ಓದಿ: Medical Colleges : ಎಂಟೇ ವರ್ಷಗಳಲ್ಲಿ ದುಪ್ಪಟ್ಟಾದ ವೈದ್ಯಕೀಯ ಕಾಲೇಜುಗಳು!

ಎನ್‌ಎಂಆರ್‌ನಲ್ಲಿ ನಮೂದಾಗಿರುವ ವೈದ್ಯರ ವಿವರಗಳನ್ನು ಎಲ್ಲರೂ ಎನ್‌ಎಂಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. www.nmc.org.in ವೈದ್ಯರಿಗೆ ವೈದ್ಯಕೀಯ ಸೇವೆಗೆ ನೀಡುವ ಲೈಸೆನ್ಸ್‌ ಅನ್ನು ಪ್ರತಿ 5 ವರ್ಷಗಳಿಗೊಮ್ಮೆ ನವೀಕರಿಸಬೇಕು. ಇದಕ್ಕಾಗುಇ ವೈದ್ಯರು ರಾಜ್ಯ ವೈದ್ಯಕೀಯ ಮಂಡಳಿಗೆ (State Medical Council) ಅರ್ಜಿ ಸಲ್ಲಿಸಬೇಕು. ವ್ಯಾಲಿಡಿಟಿ ಮುಗಿಯುವುದಕ್ಕೆ ಮೂರು ತಿಂಗಳು ಇರುವಾಗಲೇ ಅರ್ಜಿ ಸಲ್ಲಿಸಬೇಕು ಎಂದಿದೆ.

ವೈದ್ಯರು ಈ ರೀತಿ ಲೈಸೆನ್ಸ್‌ ನವೀಕರಿಸಿಕೊಳ್ಳಲು ಯಾವುದೇ ಶುಲ್ಕ ನೀಡಬೇಕಿಲ್ಲ ಎಂದು ಅಧಿಸೂಚನೆ ತಿಳಿಸಿದೆ. ಲೈಸೆನ್ಸ್‌ ರದ್ದಾದರೆ ಅದನ್ನು ಎಥಿಕ್ಸ್‌ & ಮೆಡಿಕಲ್‌ ರೆಗ್ಯುಲೇಶನ್‌ ಬೋರ್ಡ್‌ನಲ್ಲಿ ಪ್ರಶ್ನಿಸಬಹುದು ಎಂದು ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

VISTARANEWS.COM


on

Ghuspaithia Hindi movie release on August 9
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ.

ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

Continue Reading

ದೇಶ

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

Kanwar Yatra: ಸಂಭಾವ್ಯ ಗಲಭೆಗಳನ್ನು ತಪ್ಪಿಸಲು ಉತ್ತರಾಖಂಡದ ಹರಿದ್ವಾರದ ಕನ್ವರ್ ಯಾತ್ರೆ ಮಾರ್ಗದಲ್ಲಿನ ಎರಡು ಮಸೀದಿಗಳು ಮತ್ತು ಮಝಾರ್​​ (ಸಮಾಧಿ)ಗಳ ಮುಂಭಾಗಗಳನ್ನು ಶುಕ್ರವಾರ ಬಿಳಿ ಬಟ್ಟೆಯ ದೊಡ್ಡ ಹಾಳೆಗಳಿಂದ ಮುಚ್ಚಲಾಗಿತ್ತು. ಆದಾಗ್ಯೂ ಆಕ್ಷೇಪಣೆಗಳ ನಂತರ ಸಂಜೆಯ ವೇಳೆಗೆ ಹಾಳೆಗಳನ್ನು ತೆಗೆದು ಹಾಕಲಾಯಿತು. ಜ್ವಾಲಾಪುರ ಪ್ರದೇಶದಲ್ಲಿರುವ ಮಸೀದಿಗಳು ಮತ್ತು ಮಝಾರ್‌ಗ​ಳ ಮುಂದೆ ಬಿದಿರಿನ ಅಟ್ಟಣಿಗೆಗಳ ಮೇಲೆ ಹಾಳೆಗಳನ್ನು ನೇತು ಹಾಕಲಾಗಿತ್ತು.

VISTARANEWS.COM


on

Kanwar Yatra
Koo

ಡೆಹ್ರಾಡೂನ್‌: ಸಂಭಾವ್ಯ ಗಲಭೆಗಳನ್ನು ತಪ್ಪಿಸಲು ಉತ್ತರಾಖಂಡ (Uttarakhand)ದ ಹರಿದ್ವಾರ (Haridwar)ದ ಕನ್ವರ್ ಯಾತ್ರೆ (Kanwar Yatra) ಮಾರ್ಗದಲ್ಲಿನ ಎರಡು ಮಸೀದಿಗಳು ಮತ್ತು ಮಝಾರ್​​ (ಸಮಾಧಿ)ಗಳ ಮುಂಭಾಗಗಳನ್ನು ಶುಕ್ರವಾರ ಬಿಳಿ ಬಟ್ಟೆಯ ದೊಡ್ಡ ಹಾಳೆಗಳಿಂದ ಮುಚ್ಚಲಾಗಿತ್ತು. ಆದಾಗ್ಯೂ ಆಕ್ಷೇಪಣೆಗಳ ನಂತರ ಸಂಜೆಯ ವೇಳೆಗೆ ಹಾಳೆಗಳನ್ನು ತೆಗೆದು ಹಾಕಲಾಯಿತು.

ಜ್ವಾಲಾಪುರ ಪ್ರದೇಶದಲ್ಲಿರುವ ಮಸೀದಿಗಳು ಮತ್ತು ಮಝಾರ್‌ಗ​ಳ ಮುಂದೆ ಬಿದಿರಿನ ಅಟ್ಟಣಿಗೆಗಳ ಮೇಲೆ ಹಾಳೆಗಳನ್ನು ನೇತು ಹಾಕಲಾಗಿತ್ತು. ಈ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ್ದ ಮಸೀದಿಯ ಮೌಲಾನಾ ಮತ್ತು ಮಝಾರ್​​ನ ಉಸ್ತುವಾರಿಗಳು ಈ ಬಗ್ಗೆ ಯಾವುದೇ ಆಡಳಿತಾತ್ಮಕ ಆದೇಶದ ಬಗ್ಗೆ ನಮಗೆ ತಿಳಿದಿಲ್ಲ. ಕನ್ವರ್ ಯಾತ್ರೆಯ ಸಮಯದಲ್ಲಿ ಇಂತಹ ಕ್ರಮವನ್ನು ತೆಗೆದುಕೊಳ್ಳುತ್ತಿರುವುದು ಇದೇ ಮೊದಲು ಎಂದು ಹೇಳಿದ್ದರು.

ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರತಿಕ್ರಿಯೆಗೆ ಲಭಿಸಿಲ್ಲ. ಇತ್ತ ಕ್ಯಾಬಿನೆಟ್ ಸಚಿವ ಸತ್ಪಾಲ್ ಮಹಾರಾಜ್ ಈ ಬಗ್ಗೆ ಮಾತನಾಡಿ, ಶಾಂತಿ, ಸುವ್ಯವಸ್ಥೆ ಕಾಪಾಡಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. “ಸಂಭಾವ್ಯ ತೊಂದರೆಯನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಇದು ಅಂತಹ ದೊಡ್ಡ ವಿಷಯವಲ್ಲ. ಕಟ್ಟಡಗಳು ನಿರ್ಮಾಣ ಹಂತದಲ್ಲಿದ್ದಾಗ ನಾವು ಅದನ್ನು ಮುಚ್ಚುತ್ತೇವೆʼʼ ಎಂದು ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವ್ಯಾಪಕ ವಿರೋಧ

ಸ್ಥಳೀಯರು ಮತ್ತು ರಾಜಕಾರಣಿಗಳು ಸೇರಿದಂತೆ ಹಲವರು ಈ ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಬಳಿಕ ಬಟ್ಟೆಯ ಹಾಳೆಗಳನ್ನು ತೆಗೆದು ಹಾಕಿತು. “ಪರದೆಗಳನ್ನು ತೆಗೆದುಹಾಕಲು ರೈಲ್ವೆ ಪೊಲೀಸ್ ಠಾಣೆಯಿಂದ ನಮಗೆ ಆದೇಶ ಬಂದಿದೆ. ಅದಕ್ಕಾಗಿಯೇ ನಾವು ಇವುಗಳನ್ನು ತೆಗೆದುಹಾಕಿದ್ದೇವೆ” ಎಂದು ವಿಶೇಷ ಪೊಲೀಸ್ ಅಧಿಕಾರಿ (SPO) ಡ್ಯಾನಿಶ್ ಅಲಿ ತಿಳಿಸಿದರು.

ನಾಯಕರು ಹೇಳಿದ್ದೇನು?

ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಚಿವ ನಯೀಮ್ ಖುರೇಷಿ ಅವರು ತಮ್ಮ ಜೀವನದಲ್ಲಿ ಇಂತಹ ಕ್ರಮ ನೋಡಿದ್ದು ಇದು ಮೊದಲ ಬಾರಿ ಎಂದು ವ್ಯಂಗ್ಯವಾಡಿದ್ದಾರೆ. “ನಾವು ಮುಸ್ಲಿಮರು ಯಾವಾಗಲೂ ಕನ್ವರ್ ಜಾತ್ರೆಗೆ ಶಿವಭಕ್ತರನ್ನು ಸ್ವಾಗತಿಸುತ್ತೇವೆ ಮತ್ತು ಅವರಿಗೆ ವಿವಿಧ ಸ್ಥಳಗಳಲ್ಲಿ ಉಪಹಾರವನ್ನು ವ್ಯವಸ್ಥೆ ಮಾಡುತ್ತೇವೆ. ಇದು ಹರಿದ್ವಾರದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಸಾಮರಸ್ಯಕ್ಕೆ ಉದಾಹರಣೆ. ಮಸೀದಿಯನ್ನು ಮುಚ್ಚುವ ಸಂಪ್ರದಾಯ ಎಂದಿಗೂ ಇರಲಿಲ್ಲ” ಎಂದು ಹೇಳಿದ್ದಾರೆ.

ʼʼಕನ್ವರ್ ಮೇಳ ಪ್ರಾರಂಭವಾಗುವ ಮೊದಲು ಆಡಳಿತವು ಸಭೆ ನಡೆಸಿದ್ದು, ಹಿಂದೂ ಮತ್ತು ಮುಸ್ಲಿಂ ಸಮುದಾಯದ ಸದಸ್ಯರನ್ನು ಎಸ್‌ಪಿಒಗಳನ್ನಾಗಿ ಮಾಡಲಾಗಿತ್ತು. ಆ ವೇಳೆ ಧಾರ್ಮಿಕ ಕಟ್ಟಡಗಳನ್ನು ಮುಚ್ಚುವ ಬಗ್ಗೆ ಯಾರೂ ಮಾತನಾಡಿಲ್ಲʼʼ ಎಂದು ಮಝಾರ್‌ನ ಉಸ್ತುವಾರಿ ಶಕೀಲ್ ಅಹ್ಮದ್ ಹೇಳಿದ್ದಾರೆ. ʼʼಕನ್ವರ್‌ ಯಾತ್ರಾರ್ಥಿಗಳು ವಿಶ್ರಾಂತಿ ಪಡೆಯಲು ಮಸೀದಿಗಳು ಮತ್ತು ಮಝಾರ್‌ನ ಹೊರಗಿನ ಮರಗಳ ನೆರಳಿನಲ್ಲಿ ನಿಲ್ಲುತ್ತಾರೆ. ಇದರಿಂದ ಯಾವುದೇ ಸಮಸ್ಯೆಯಾಗಿಲ್ಲʼʼ ಎಂದಿದ್ದಾರೆ.

ಇದನ್ನೂ ಓದಿ: Kanwar Yatra: ಕನ್ವರ್‌ ಯಾತ್ರೆ ವೇಳೆ ನಾಮ ಫಲಕ ಕಡ್ಡಾಯ; ಸುಪ್ರೀಂಕೋರ್ಟ್‌ನಿಂದ ಮತ್ತೊಂದು ಮಹತ್ವದ ಆದೇಶ

ಕಾಂಗ್ರೆಸ್ ಮುಖಂಡ ರಾವ್ ಅಫಾಕ್ ಅಲಿ ಮಾತನಾಡಿ, ʼʼಮಸೀದಿಗಳು ಮತ್ತು ಮಝಾರ್‌ ಮುಚ್ಚುವ ಆಡಳಿತದ ನಿರ್ಧಾರ ಆಶ್ಚರ್ಯಕರವಾಗಿತ್ತುʼʼ ಎಂದು ಹೇಳಿದ್ದಾರೆ.

Continue Reading

ದೇಶ

Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Mamata Banerjee: ನವದೆಹಲಿಯಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರ ನಡೆದಿದ್ದಾರೆ. ʼʼನನಗೆ ಕೇವಲ ಐದು ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಲಾಯಿತು. ಕೆಲವರು ನನ್ನ ಮುಂದೆ 10-20 ನಿಮಿಷಗಳ ಕಾಲ ಮಾತನಾಡಿದರು” ಎಂದು ಮಮತಾ ಬ್ಯಾನರ್ಜಿ ಹೊರಬಂದ ನಂತರ ಆರೋಪಿಸಿದರು.

VISTARANEWS.COM


on

Mamata Banerjee
Koo

ನವದೆಹಲಿ: ಶನಿವಾರ (ಜುಲೈ 27) ನವದೆಹಲಿಯಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧ್ಯಕ್ಷತೆಯ ನೀತಿ ಆಯೋಗ (NITI Aayog)ದ 9ನೇ ಆಡಳಿತ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೊರ ನಡೆದಿದ್ದಾರೆ.

“ರಾಜ್ಯ ಸರ್ಕಾರಗಳ ವಿರುದ್ಧ ಕೇಂದ್ರ ಸರ್ಕಾರ ತಾರತಮ್ಯ ಮಾಡಬಾರದು ಎಂದು ಸಭೆಯಲ್ಲಿ ನಾನು ಹೇಳಿದೆ. ನಾನು ಮಾತನಾಡಲು ಬಯಸಿದ್ದೆ. ಆದರೆ ನನ್ನ ಮೈಕ್ ಮ್ಯೂಟ್ ಆಗಿತ್ತು. ನನಗೆ ಕೇವಲ ಐದು ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಲಾಯಿತು. ಕೆಲವರು ನನ್ನ ಮುಂದೆ 10-20 ನಿಮಿಷಗಳ ಕಾಲ ಮಾತನಾಡಿದರು” ಎಂದು ಮಮತಾ ಬ್ಯಾನರ್ಜಿ ಹೊರಬಂದ ನಂತರ ಸುದ್ದಿಗಾರರಿಗೆ ತಿಳಿಸಿದರು.

“ಪ್ರತಿಪಕ್ಷದಿಂದ ನಾನು ಮಾತ್ರ ಭಾಗವಹಿಸಿದ್ದೆ. ಆದರೆ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ಇದು ಕೇಂದ್ರ ಮಾಡಿದ ಅವಮಾನ” ಎಂದು ಅವರು ದೂರಿದರು. ಪ್ರತಿಪಕ್ಷ ಆಡಳಿತದ ಹಲವು ರಾಜ್ಯಗಳು ಸಭೆಯನ್ನು ಬಹಿಷ್ಕರಿಸುವುದಾಗಿ ಈ ಹಿಂದೆಯೇ ಘೋಷಿಸಿದ್ದವು. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಮತ್ತು ತೆಲಂಗಾಣದ ರೇವಂತ್ ರೆಡ್ಡಿ ಅವರು 2024ರ ಕೇಂದ್ರ ಬಜೆಟ್‌ನಲ್ಲಿ ತಮ್ಮ ರಾಜ್ಯಗಳ ವಿರುದ್ಧ ಪಕ್ಷಪಾತ ಧೋರಣೆ ತೋರಲಾಗಿದೆ ಎಂದು ಆರೋಪಿಸಿ ಸಭೆಯಲ್ಲಿ ಭಾಗವಹಿಸಲಿಲ್ಲ.

ಇನ್ನು ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಕೇರಳ ಮುಖ್ಯಮಂತ್ರಿ, ಎಡಪಕ್ಷದ ನಾಯಕ ಪಿಣರಾಯಿ ವಿಜಯನ್ ಮತ್ತು ಆಮ್ ಆದ್ಮಿ ಪಕ್ಷ ನೇತೃತ್ವದ ಪಂಜಾಬ್ ಮತ್ತು ದೆಹಲಿ ಸರ್ಕಾರಗಳು ಸಹ ಸಭೆಯನ್ನು ಬಹಿಷ್ಕರಿಸಿವೆ. ತಮ್ಮ ಧ್ವನಿಯನ್ನು ಸಾಮಾನ್ಯ ವೇದಿಕೆಯಲ್ಲಿ ಎತ್ತಬೇಕು ಎನ್ನುವ ಕಾರಣಕ್ಕೆ ಸಭೆಯಲ್ಲಿ ಭಾಗವಹಿಸುತ್ತಿರುವುದಾಗಿ ಆರಂಭದಲ್ಲಿ ಮಮತಾ ಬ್ಯಾನರ್ಜಿ ತಿಳಿಸಿದ್ದರು. ಆದರೆ ಇದೀಗ ಮಾತನಾಡಲು ಅವಕಾಶವೇ ಸಿಕ್ಕಿಲ್ಲ ಎಂದು ಹೊರ ಬಂದಿದ್ದಾರೆ.

“ನೀತಿ ಆಯೋಗದ ಆಡಳಿತ ಮಂಡಳಿ ಸಭೆಯು ವಿಕಸಿತ್ ಭಾರತ್ @2047ರ ವಿಷನ್ ಡಾಕ್ಯುಮೆಂಟ್‌ನ ಅಪ್ರೋಚ್ ಪೇಪರ್ ಅನ್ನು ಚರ್ಚಿಸಲಿದೆ. ಸಭೆಯು ವಿಕಸಿತ್ ಭಾರತ್ @2047ರ ಗುರಿಯನ್ನು ಸಾಧಿಸುವಲ್ಲಿ ರಾಜ್ಯಗಳ ಪಾತ್ರದ ಕುರಿತು ವಿವರವಾದ ಚರ್ಚೆಗಳನ್ನು ಮಾಡಲಿದೆʼʼ ಎಂದು ಸಭೆಯ ಮುನ್ನ ಸರ್ಕಾರದ ಹೇಳಿಕೆ ನೀಡಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ 3ನೇ ರಾಷ್ಟ್ರೀಯ ಸಮ್ಮೇಳನದ ಶಿಫಾರಸುಗಳ ಬಗ್ಗೆಯೂ ಸಭೆ ಗಮನಹರಿಸಲು ನಿರ್ಧರಿಸಲಾಗಿದೆ ಎಂದೂ ತಿಳಿಸಿತ್ತು.

ಇದನ್ನೂ ಓದಿ: DK Shivakumar: ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ. ಶಿವಕುಮಾರ್

ಸಮ್ಮೇಳನದಲ್ಲಿ ಐದು ಪ್ರಮುಖ ವಿಷಯಗಳ ಬಗ್ಗೆ ಗಮನ ಕೇಂದ್ರೀಕರಿಸಿದೆ- ಕುಡಿಯುವ ನೀರು: ಪ್ರಮಾಣ ಮತ್ತು ಗುಣಮಟ್ಟ, ವಿದ್ಯುತ್: ಗುಣಮಟ್ಟ ಮತ್ತು ವಿಶ್ವಾಸಾರ್ಹತೆ, ಆರೋಗ್ಯ: ಕೈಗೆಟಕುವಿಕೆ ಮತ್ತು ಆರೈಕೆಯ ಗುಣಮಟ್ಟ, ಶಾಲಾ ಶಿಕ್ಷಣ: ಕೈಗೆಟಕುವಿಕೆ ಮತ್ತು ಗುಣಮಟ್ಟ ಮತ್ತು ಭೂಮಿ ಮತ್ತು ಆಸ್ತಿ: ಪ್ರವೇಶ, ಡಿಜಿಟಲೀಕರಣ, ನೋಂದಣಿ. ಜತೆಗೆ ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಸವನ್ನಾಗಿಸುವ ಗುರಿ ಹೊಂದಲಾಗಿದೆ.

Continue Reading

ವಾಣಿಜ್ಯ

Mukesh Ambani: ಬಜೆಟ್ ದಿನ 9,200 ಕೋಟಿ ರೂ. ಕಳೆದುಕೊಂಡಿದ್ದ ಮುಕೇಶ್ ಅಂಬಾನಿ!

ಕೇಂದ್ರ ಬಜೆಟ್‌ ಮಂಡನೆಯಾದ ದಿನ ಷೇರು ಮಾರುಕಟ್ಟೆಯು ಸಣ್ಣ ಕುಸಿತದೊಂದಿಗೆ ಕ್ಲೋಸ್‌ ಆಗಿತ್ತು. ಆದರೆ ಇದು ವಹಿವಾಟಿನ ವೇಳೆ ಬಹುದೊಡ್ಡ ಪರಿಣಾಮವನ್ನು ಬೀರಿತ್ತು. ಕೆಲವು ಷೇರುಗಳು ತೀವ್ರವಾಗಿ ಕುಸಿದರೆ, ಇನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡವು. ಇದು ಮುಕೇಶ್ ಅಂಬಾನಿ (Mukesh Ambani) ಸೇರಿದಂತೆ ದೇಶದ ದೊಡ್ಡ ಬಿಲಿಯನೇರ್‌ಗಳ ಸಂಪತ್ತಿನ ಮೇಲೆ ಭಾರೀ ಪರಿಣಾಮವನ್ನು ಬೀರಿತು.

VISTARANEWS.COM


on

By

Mukesh Ambani
Koo

ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವನ್ನು (Ananth Ambani and Radhika Merchant’s wedding) ಅದ್ಧೂರಿಯಾಗಿ ನಡೆಸಿ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದ ರಿಲಯನ್ಸ್ ಉದ್ಯಮಿ ಮುಕೇಶ್ ಅಂಬಾನಿ (businessman Mukesh Ambani) 2024ರ ಕೇಂದ್ರ ಬಜೆಟ್ (Union Budget 2024) ಮಂಡನೆಯಾದ ದಿನ ಷೇರು ಮಾರುಕಟ್ಟೆಯಲ್ಲಿ ಆದ ಏರುಪೇರಿನಿಂದಾಗಿ ಬರೋಬ್ಬರಿ 9,200 ಕೋಟಿ ರೂ. ಕಳೆದುಕೊಂಡಿದ್ದರು!

ಕೇಂದ್ರ ಬಜೆಟ್‌ ದಿನ ಷೇರು ಮಾರುಕಟ್ಟೆಯು ಸಣ್ಣ ಕುಸಿತದೊಂದಿಗೆ ಕ್ಲೋಸ್‌ ಆಗಿತ್ತು. ಆದರೆ ಇದು ವಹಿವಾಟಿನ ವೇಳೆ ಬಹುದೊಡ್ಡ ಪರಿಣಾಮವನ್ನು ಬೀರಿತ್ತು. ಈ ಸಂದರ್ಭದಲ್ಲಿ ವಹಿವಾಟಿನಲ್ಲಿ ಗಮನಾರ್ಹವಾದ ಏರಿಳಿತಗಳು ಕಂಡುಬಂದವು. ಕೆಲವು ಷೇರುಗಳು ತೀವ್ರವಾಗಿ ಕುಸಿದರೆ ಇನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡವು. ಇದು ದೇಶದ ದೊಡ್ಡ ಬಿಲಿಯನೇರ್‌ಗಳ ಸಂಪತ್ತಿನ ಮೇಲೆ ಭಾರೀ ಪರಿಣಾಮವನ್ನು ಬೀರಿತು.

ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯದಲ್ಲಿ ಈ ದಿನ ಗಣನೀಯ ಇಳಿಕೆಯಾಗಿದೆ. ಬಜೆಟ್ ದಿನದಂದು, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಏರುವ ನಿರೀಕ್ಷೆ ಇತ್ತು. ಇದರಿಂದ ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯವನ್ನು ಹೆಚ್ಚಾಗುತ್ತದೆ ಎಂದೇ ಭಾವಿಸಲಾಗಿತ್ತು. ಆದರೆ ಮಾರುಕಟ್ಟೆಯಲ್ಲಿ ಇದು ವ್ಯತಿರಿಕ್ತ ಪರಿಣಾಮ ಬೀರಿತು.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಅಂಬಾನಿ ಅವರ ನಿವ್ವಳ ಮೌಲ್ಯವು 1.10 ಬಿಲಿಯನ್ ಡಾಲರ್‌ ಅಂದರೆ ಸರಿಸುಮಾರು 9200 ಕೋಟಿ ರೂ. ಗಳಷ್ಟು ಕಡಿಮೆಯಾಗಿದೆ. ಈ ಕುಸಿತದ ಹೊರತಾಗಿಯೂ ಈ ವರ್ಷದ ಆರಂಭದಲ್ಲಿ ಅವರ ಸಂಪತ್ತು 16 ಶತಕೋಟಿ ಡಾಲರ್‌ಗಳಷ್ಟು ಹೆಚ್ಚಾಗಿತ್ತು.

ಕಳೆದ ಕೆಲವು ದಿನಗಳಲ್ಲಿ ಅಂಬಾನಿ ಅವರ ನಿವ್ವಳ ಮೌಲ್ಯವು 7 ಶತಕೋಟಿ ಡಾಲರ್‌ಗಿಂತ ಕಡಿಮೆಯಾಗಿದೆ. ಜುಲೈ 19ರಂದು ಅವರ ನಿವ್ವಳ ಮೌಲ್ಯವು 119 ಶತಕೋಟಿ ಡಾಲರ್ ಆಗಿತ್ತು. ಆದರೆ ಅದು ಈಗ 112 ಶತಕೋಟಿ ಡಾಲರ್‌ಗೆ ಇಳಿದಿದೆ ಎನ್ನಲಾಗಿದೆ.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಇತ್ತೀಚೆಗೆ ಕುಸಿಯುತ್ತಲೇ ಇದ್ದು, ಮುಂದಿನ ದಿನಗಳಲ್ಲಿ ಅಂಬಾನಿ ಸಂಪತ್ತಿನಲ್ಲಿ ಮತ್ತಷ್ಟು ಕುಸಿತ ಉಂಟಾಗಬಹುದು ಎನ್ನಲಾಗಿದೆ.

Mukesh Ambani
Mukesh Ambani


ಇದಕ್ಕೆ ವ್ಯತಿರಿಕ್ತವಾಗಿ ಉದ್ಯಮಿ ಗೌತಮ್ ಅದಾನಿ ಅವರ ಸಂಪತ್ತು ಹೆಚ್ಚಳವಾಗಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಅದಾನಿ ಅವರ ನಿವ್ವಳ ಮೌಲ್ಯವು 751 ಮಿಲಿಯನ್ ಡಾಲರ್‌ಗಳು ಅಂದರೆ ಸರಿಸುಮಾರು 63 ಕೋಟಿ ರೂಪಾಯಿ ಹೆಚ್ಚಳವಾಗಿದೆ. ಅವರ ಸಂಪತ್ತು 102 ಬಿಲಿಯನ್ ಡಾಲರ್‌ ಗಳನ್ನು ತಲುಪಿದೆ. ಈ ವರ್ಷ ಅವರ ಸಂಪತ್ತು 17.8 ಬಿಲಿಯನ್ ಡಾಲರ್‌ಗಳಷ್ಟು ಏರಿಕೆಯಾಗಿದೆ.

Continue Reading
Advertisement
Womens Asia Cup Final
ಕ್ರೀಡೆ4 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ8 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ35 mins ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ45 mins ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ48 mins ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ56 mins ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

ramanagara news
ರಾಮನಗರ1 hour ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

pramod mutalik dog meat
ಪ್ರಮುಖ ಸುದ್ದಿ1 hour ago

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Shiva Rajkumar played the dupe for saikumar in film
ಸ್ಯಾಂಡಲ್ ವುಡ್1 hour ago

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Paris Olympic
ಕ್ರೀಡೆ2 hours ago

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ1 hour ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ20 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ22 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ23 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌