US military budget What is the effect of the significant increase in the military spending of America?US military budget : ಅಮೆರಿಕದ ಮಿಲಿಟರಿ ವೆಚ್ಚ ಗಣನೀಯ ಏರಿಕೆಯ ಪರಿಣಾಮವೇನು?

ದೇಶ

US military budget : ಅಮೆರಿಕದ ಮಿಲಿಟರಿ ವೆಚ್ಚ ಗಣನೀಯ ಏರಿಕೆಯ ಪರಿಣಾಮವೇನು?

US military budget ಜಗತ್ತಿನಾದ್ಯಂತ ರಾಜಕಾರಣದಲ್ಲಿ ಬದಲಾವಣೆಗಳು ನಡೆಯುತ್ತಿವೆ. ಜತೆಗೆ ಪ್ರಮುಖ ದೇಶಗಳ ಮಿಲಿಟರಿ ವೆಚ್ಚಗಳೂ ಹೆಚ್ಚುತ್ತಿವೆ. ಅಮೆರಿಕದಲ್ಲೂ ಸೇನಾ ವೆಚ್ಚ ಏರಿಕೆಯಾಗಿದೆ. ಇದರ ಪರಿಣಾಮವೇನು? ಇಲ್ಲಿದೆ ವಿವರ.

VISTARANEWS.COM


on

US military budget What is the effect of the significant increase in the military spending of America?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ

Girish-Linganna

ಪ್ರಪಂಚದಾದ್ಯಂತ ಈಗ ಜಾಗತಿಕ ರಾಜಕಾರಣದಲ್ಲಿ ಸ್ಥಿತ್ಯಂತರಗಳು ನಡೆಯುತ್ತಿವೆ. ಇದರ ಪರಿಣಾಮವಾಗಿ ಎನ್ನುವಂತೆ ಜಾಗತಿಕ ಮಿಲಿಟರಿ ವೆಚ್ಚಗಳೂ ಅಪಾರವಾಗಿ ಹೆಚ್ಚಳ ಕಾಣುತ್ತಿವೆ. ಇತ್ತೀಚೆಗೆ ಸ್ಟಾಕ್‌ಹೋಮ್ ಇಂಟರ್‌ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ ಬಿಡುಗಡೆಗೊಳಿಸಿರುವ (US military budget) ವರದಿಯೊಂದರ ಪ್ರಕಾರ, 2022ರಲ್ಲಿ ಒಟ್ಟಾರೆಯಾಗಿ ಜಾಗತಿಕ ಮಿಲಿಟರಿ ವೆಚ್ಚ 3.7%ದಷ್ಟು ಹೆಚ್ಚಳ ಕಂಡಿದ್ದು, ಅಪಾರವಾದ 2.24 ಟ್ರಿಲಿಯನ್ ಡಾಲರ್‌ಗೆ ತಲುಪಿದೆ.

ಈ ವರದಿ ಇದಕ್ಕೆ ಒಟ್ಟು ಮೂರು ಕಾರಣಗಳನ್ನು ಪಟ್ಟಿ ಮಾಡಿದ್ದು, ಮೊದಲನೆಯದು ರಷ್ಯಾ ಉಕ್ರೇನಿನ ಮೇಲೆ ಅಕ್ರಮಣ ನಡೆಸಿದ್ದು. ಇದರ ಪರಿಣಾಮವಾಗಿ ಜಾಗತಿಕ ರಕ್ಷಣಾ ವೆಚ್ಚ ಹೆಚ್ಚಳವಾಗಿದೆ. ಎರಡನೆಯದಾಗಿ, ಅಮೆರಿಕಾದ ಮಿಲಿಟರಿ ವೆಚ್ಚದ ಹೆಚ್ಚಳ ಶೇಕಡಾವಾರು ಅತ್ಯಂತ ಕಡಿಮೆ, 0.7% ಆಗಿದ್ದರೂ, (2021ರಲ್ಲಿ ಅಮೆರಿಕಾದ ರಕ್ಷಣಾ ವೆಚ್ಚ 800.67 ಬಿಲಿಯನ್ ಡಾಲರ್ ಆಗಿದ್ದರೆ, 2022ರಲ್ಲಿ ಅದು 877 ಬಿಲಿಯನ್ ಡಾಲರ್ ಆಗಿದೆ) ಅಮೆರಿಕಾ ಜಾಣತನದಿಂದ ಉಕ್ರೇನ್ ಬಿಕ್ಕಟ್ಟನ್ನು ಬಳಸಿಕೊಂಡು, ನ್ಯಾಟೋದ ಸಹಯೋಗಿ ರಾಷ್ಟ್ರಗಳು ತಮ್ಮ ರಕ್ಷಣಾ ವೆಚ್ಚವನ್ನು ಹೆಚ್ಚಿಸುವಂತೆ ಮಾಡಿತು. ಇದನ್ನು ಹೆಚ್ಚಿಸಲು ಕಳೆದ ಎರಡು ದಶಕಗಳಿಂದ ಅಮೆರಿಕಾ ಕಷ್ಟಪಡುತ್ತಿತ್ತು.

ಮೂರನೆಯದಾಗಿ, ಈ ವರ್ಷ ವಿಶೇಷವಾಗಿ ಯುರೋಪ್ ಮತ್ತು ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ರಕ್ಷಣಾ ವೆಚ್ಚ ಹೆಚ್ಚಳವಾಗಲಿದೆ. ಜಪಾನ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಹಾಗೂ ದಕ್ಷಿಣ ಕೊರಿಯಾಗಳಿಗೆ ಚೀನಾದಿಂದ ಎದುರಾಗಬಹುದಾದ ಅಪಾಯದ ಸಾಧ್ಯತೆಗಳ ಚಿಂತೆ ಮಿಲಿಟರಿ ವೆಚ್ಚ ಹೆಚ್ಚಿಸುವಂತೆ ಮಾಡಿದೆ. ಇನ್ನು ಯುರೋಪಿನಲ್ಲಂತೂ ಮಿಲಿಟರಿ ಖರ್ಚು ವೆಚ್ಚ ಕಳೆದ ಮೂವತ್ತು ವರ್ಷಗಳಲ್ಲೇ ಅತ್ಯಂತ ವೇಗದ ದರದಲ್ಲಿ ಹೆಚ್ಚಾಗಿದೆ.

ukraine

2022ರಲ್ಲಿ ಜಗತ್ತಿನಾದ್ಯಂತ ಅಪಾರವಾಗಿ ರಕ್ಷಣಾ ವೆಚ್ಚ ಹೆಚ್ಚಾಗುವುದಕ್ಕೆ ಮುಖ್ಯ ಕಾರಣ ಉಕ್ರೇನ್ ಯುದ್ಧ ಎಂದು ಭಾವಿಸಲಾಗಿದೆ. ಅದರಲ್ಲೂ, ಕೇಂದ್ರ ಮತ್ತು ಪಶ್ಚಿಮ ಯುರೋಪಿನ ರಕ್ಷಣಾ ವೆಚ್ಚ ಅಪಾರ ಪ್ರಮಾಣದಲ್ಲಿ ಹೆಚ್ಚಿದೆ. ರಷ್ಯಾದ ಆಕ್ರಮಣ ಮಿಲಿಟರಿ ವೆಚ್ಚದ ಹೆಚ್ಚಳದ ಸರಣಿ ಪ್ರಕ್ರಿಯೆ ಆರಂಭಗೊಳ್ಳುವಂತೆ ಮಾಡಿದೆ ಎನ್ನುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಜಗತ್ತಿನಾದ್ಯಂತ ವಿವಿಧ ಪ್ರದೇಶಗಳ ಸರ್ಕಾರಗಳು ತಮ್ಮ ಮಿಲಿಟರಿ ವೆಚ್ಚವನ್ನು ಹೆಚ್ಚಿಸಲು ಬಹು ವರ್ಷಗಳ ಯೋಜನೆ ರೂಪಿಸಿಕೊಂಡಿವೆ. ಆ ಮೂಲಕ ರಷ್ಯಾದ ಮಹತ್ವಾಕಾಂಕ್ಷೆಗಳನ್ನು ಎದುರಿಸಲು ದೀರ್ಘಕಾಲದಲ್ಲಿ ತಮ್ಮ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶಗಳನ್ನು ಹೊಂದಿವೆ. ಉಕ್ರೇನ್ ದಾಳಿಯ ತಕ್ಷಣದ ಪರಿಣಾಮವಾಗಿ ಮುಂದಿನ ಹಲವು ವರ್ಷಗಳ ಕಾಲ ಮಿಲಿಟರಿ ವೆಚ್ಚ ನಾಟಕೀಯ ಹೆಚ್ಚಳ ಕಾಣಲಿವೆ.

ಉದಾಹರಣೆಗೆ, ಫಿನ್ಲ್ಯಾಂಡ್ ತನ್ನ ಮಿಲಿಟರಿ ವೆಚ್ಚವನ್ನು 36% ಹೆಚ್ಚಿಸಿದ್ದರೆ, ಪೋಲೆಂಡ್ ತನ್ನ ರಕ್ಷಣಾ ವೆಚ್ಚವನ್ನು 11%, ಸ್ವೀಡನ್ 12% ಹೆಚ್ಚಿಸಿವೆ. 2014ರಲ್ಲಿ ರಷ್ಯಾ ಕ್ರಿಮಿಯಾವನ್ನು ಅತಿಕ್ರಮಿಸಿಕೊಂಡ ಬಳಿಕ ಈ ಮೊದಲಿನ ಸೋವಿಯತ್ ಒಕ್ಕೂಟದ ಸದಸ್ಯ ರಾಷ್ಟ್ರಗಳು ತಮ್ಮ ಮಿಲಿಟರಿ ವೆಚ್ಚವನ್ನು ಹೆಚ್ಚಿಸಿದವು. ಉಕ್ರೇನ್ ಯುದ್ಧವಂತೂ ಈ ಭಯಗಳನ್ನು ಇನ್ನಷ್ಟು ಹೆಚ್ಚಿಸಿದೆ. ಇತರ ಹಲವು ಮೇಲುಗೈಗಳೊಂದಿಗೆ, ಉಕ್ರೇನ್ ಯುದ್ಧ ನ್ಯಾಟೋವನ್ನು ಪುನರುತ್ಥಾನಗೊಳಿಸುವ ಅವಕಾಶವನ್ನೂ ಕಲ್ಪಿಸಿದೆ. ಉಕ್ರೇನ್ ಯುದ್ಧ ಯುರೋಪಿಗೆ ಆಘಾತ ಉಂಟುಮಾಡಿದರೆ, ಅಮೆರಿಕಾ ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆಯುವ ಪ್ರಯತ್ನದಲ್ಲಿದೆ.

ಮೊದಲನೆಯದಾಗಿ, ಇದರ ಪರಿಣಾಮವಾಗಿ ನ್ಯಾಟೋ ಹೊಸ ಸದಸ್ಯರನ್ನು ಹೊಂದಲು ಸಾಧ್ಯವಾಯಿತು. ಒಂದು ವರ್ಷದ ಹಿಂದೆ, ರಷ್ಯಾದ ಬಾಗಿಲ ಬಳಿ ಇರುವ ಫಿನ್ಲ್ಯಾಂಡ್ ಮತ್ತು ಸ್ವೀಡನ್‌ಗಳನ್ನು ಟ್ರಾನ್ಸ್ ಅಟ್ಲಾಂಟಿಕ್ ಸೆಕ್ಯುರಿಟಿ ಅಲಯನ್ಸ್ ಸದಸ್ಯತ್ವ ಹೊಂದುವುದನ್ನು ಊಹಿಸಲೂ ಸಾಧ್ಯವಿರಲಿಲ್ಲ.

ನ್ಯಾಟೋ ತನ್ನ ಸದಸ್ಯ ರಾಷ್ಟ್ರಗಳ ಮೇಲೆ ರಕ್ಷಣಾ ವೆಚ್ಚವನ್ನು ಹೆಚ್ಚಿಸುವಂತೆ ಒತ್ತಡ ಹೇರುತ್ತಿತ್ತು. 2014ರಲ್ಲಿ ನ್ಯಾಟೋದ ಸದಸ್ಯ ರಾಷ್ಟ್ರಗಳು ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ ತಮ್ಮ ವೈಯಕ್ತಿಕ ರಕ್ಷಣಾ ಬಜೆಟ್ ಅನ್ನು ಜಿಡಿಪಿಯ 2%ಗೆ ಹೆಚ್ಚಿಸಲು ಒಪ್ಪಿಕೊಂಡಿದ್ದವು. ಯುಕೆ, ಗ್ರೀಸ್, ಲ್ಯಾಟ್ವಿಯಾ, ಲಿಥುವೇನಿಯಾ, ಪೋಲೆಂಡ್ ಹಾಗೂ ಅಮೆರಿಕಾಗಳು ಮಾತ್ರವೇ ಈ ಗುರಿಯನ್ನು ಸಾಧಿಸಿದ್ದವು. ಕಳೆದ ವರ್ಷ ಜರ್ಮನಿ ತನ್ನ ರಕ್ಷಣಾ ವೆಚ್ಚವನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಆದರೆ ಅದು ಜಿಡಿಪಿಯ 2% ದಷ್ಟು ಗುರಿಯನ್ನು 2025ರ ಮೊದಲು ತಲುಪಲು ಸಾಧ್ಯವಿಲ್ಲ. ಆದ್ದರಿಂದ ಮುಂದಿನ ವರ್ಷಗಳಲ್ಲಿ ಕೇಂದ್ರೀಯ ಮತ್ತು ಪಶ್ಚಿಮ ಯುರೋಪಿನ ರಾಷ್ಟ್ರಗಳ ರಕ್ಷಣಾ ವೆಚ್ಚ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ರಷ್ಯಾದ ಸಾಮ್ರಾಜ್ಯಶಾಹಿ ಧೋರಣೆಯ ಕುರಿತು ಈ ಮೊದಲಿನಿಂದಲೂ ಭಯವಿದ್ದರೂ, ಉಕ್ರೇನ್ ಮೇಲಿನ ದಾಳಿಯಂತೂ 2022ರಲ್ಲಿ ಮಿಲಿಟರಿ ಬಜೆಟ್ ಹೆಚ್ಚಿಸುವಂತೆ ಮಾಡಿದೆ. ಸಿಪ್ರಿ ವರದಿಯ ಪ್ರಕಾರ, ಅಮೆರಿಕಾ, ಚೀನಾ ಹಾಗೂ ರಷ್ಯಾಗಳೇ ಜಗತ್ತಿನ ಒಟ್ಟು ಮಿಲಿಟರಿ ವೆಚ್ಚದ 56%ವನ್ನು ಖರ್ಚು ಮಾಡಿವೆ. 2022ರಲ್ಲಿ ರಷ್ಯಾದ ಮಿಲಿಟರಿ ವೆಚ್ಚ 9.2% ಹೆಚ್ಚಳ ಕಂಡು, 86.4 ಬಿಲಿಯನ್ ಡಾಲರ್‌ಗೆ ತಲುಪಿತು. ಇದು ರಷ್ಯಾದ ಜಿಡಿಪಿಯ 4.1% ಆಗಿದೆ. 2021ರಲ್ಲಿ ಇದು ಜಿಡಿಪಿಯ 3.7% ಆಗಿತ್ತು. ಉಕ್ರೇನ್ ಮೇಲಿನ ದಾಳಿಯ ಪರಿಣಾಮ ರಷ್ಯಾದ ವೆಚ್ಚದ ಮೇಲೆ ಅಂದುಕೊಂಡದ್ದಕ್ಕಿಂತಲೂ ಹೆಚ್ಚೇ ಆಗಿತ್ತು. ಅದು ದಿನವೊಂದಕ್ಕೆ ನೂರಾರು ಮಿಲಿಯನ್ ಡಾಲರ್ ತಲುಪಿತ್ತು.

ಜಗತ್ತಿನ ಮಿಲಿಟರಿ ವೆಚ್ಚದ ವಿಚಾರದಲ್ಲಿ ಸಾರ್ವಭೌಮನೇ ಆಗಿರುವ ಅಮೆರಿಕಾ 2022ರಲ್ಲೂ ಅತ್ಯಧಿಕ ಮಿಲಿಟರಿ ವೆಚ್ಚ ಮಾಡಿದ್ದು, 877 ಬಿಲಿಯನ್ ಡಾಲರ್ ವೆಚ್ಚ ಮಾಡಿದೆ. ಕಳೆದ ವರ್ಷದ ಜಾಗತಿಕ ಮಿಲಿಟರಿ ವೆಚ್ಚದ 39% ಅಮೆರಿಕಾ ಹೊಂದಿದ್ದು, ಇದು ಜಗತ್ತಿನ ಎರಡನೇ ಅತಿಹೆಚ್ಚು ಮಿಲಿಟರಿ ವೆಚ್ಚ ಮಾಡುವ ಚೀನಾದ ಮಿಲಿಟರಿ ವೆಚ್ಚಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ.

dollar

ಕಳೆದ ವರ್ಷ ಅಮೆರಿಕಾ ಉಕ್ರೇನಿಗೆ 19.9 ಬಿಲಿಯನ್ ಡಾಲರ್ ಮೌಲ್ಯದ ಮಿಲಿಟರಿ ಸಹಾಯ ಒದಗಿಸಿದ್ದು, ಇದು ಶೀತಲ ಸಮರದ ಬಳಿಕ ಯಾವುದಾದರೂ ಒಂದು ರಾಷ್ಟ್ರ ಇನ್ನೊಂದಕ್ಕೆ ನೀಡಿದ ಅತಿಹೆಚ್ಚು ಪ್ರಮಾಣದ ಮಿಲಿಟರಿ ಸಹಾಯವಾಗಿದೆ. ಜಪಾನ್ ಮಿಲಿಟರಿ ವೆಚ್ಚದ ವಿಚಾರದಲ್ಲಿ ಏಷ್ಯಾದ ರಾಷ್ಟ್ರಗಳಿಂದ ಭಿನ್ನವಾದ ಹಾದಿಯಲ್ಲಿದೆ. ಜಪಾನ್ ತನ್ನ ಮಿಲಿಟರಿ ವೆಚ್ಚವನ್ನು 5.9% ಹೆಚ್ಚಿಸಿದ್ದು, 46 ಬಿಲಿಯನ್ ಡಾಲರ್ (ಜಿಡಿಪಿಯ 1.1%) ತಲುಪಿದೆ. 2022ರಲ್ಲಿ ನ್ಯಾಷನಲ್ ಸೆಕ್ಯುರಿಟಿ ಸ್ಟ್ರಾಟೆಜಿಯ ಘೋಷಣೆಯ ಪ್ರಕಾರ, ಚೀನಾ, ಉತ್ತರ ಕೊರಿಯಾ ಮತ್ತು ರಷ್ಯಾಗಳಿಂದ ಬರುವ ಅಪಾಯಗಳನ್ನು ಎದುರಿಸುವ ಸಲುವಾಗಿ ಜಪಾನ್ ತನ್ನ ಮಿಲಿಟರಿ ಸಾಮರ್ಥ್ಯವನ್ನು ಮುಂದಿನ ಹತ್ತು ವರ್ಷಗಳಲ್ಲಿ ಹೆಚ್ಚಿಸುವ ಉದ್ದೇಶ ಹೊಂದಿದೆ.

ಜಪಾನಿನ ನೂತನ ಕಾರ್ಯತಂತ್ರ ಮಹತ್ವಾಕಾಂಕ್ಷಿಯಾಗಿದ್ದು, ರಕ್ಷಣೆಗಾಗಿ ವೆಚ್ಚ ಮಾಡುವ ಜಪಾನಿನ ಮನಸ್ಥಿತಿಯನ್ನು ತೋರಿಸುತ್ತದೆ. 1960ರ ದಶಕದ ಬಳಿಕ ಇದು ಜಪಾನಿನ ಅತ್ಯಧಿಕ ಮಿಲಿಟರಿ ವೆಚ್ಚವಾಗಿದೆ. 2022ರಲ್ಲಿ ಭಾರತದ ಮಿಲಿಟರಿ ವೆಚ್ಚ 81.4 ಬಿಲಿಯನ್ ಡಾಲರ್‌ ಆಗಿದ್ದು, ಜಗತ್ತಿನಲ್ಲಿ ನಾಲ್ಕನೇ ಅತಿಹೆಚ್ಚು ರಕ್ಷಣಾ ಬಜೆಟ್ ಆಗಿತ್ತು. ಇದು 2021ಕ್ಕೆ ಹೋಲಿಸಿದರೆ 6.0% ಹೆಚ್ಚಳವಾಗಿದೆ.

2022ರಲ್ಲಿ ಸೌದಿ ಅರೇಬಿಯಾ ಜಗತ್ತಿನ ಐದನೇ ಅತ್ಯಧಿಕ ಮಿಲಿಟರಿ ವೆಚ್ಚದಾರನಾಗಿದ್ದು, 16% ಹೆಚ್ಚಳ ದಾಖಲಿಸಿ, 75 ಬಿಲಿಯನ್ ಡಾಲರ್‌ಗೆ ತಲುಪಿತ್ತು. ಇದು 2018ರ ಬಳಿಕ ಮೊದಲ ಮಿಲಿಟರಿ ವೆಚ್ಚದಲ್ಲಿನ ಹೆಚ್ಚಳವಾಗಿದೆ. ಒಂದು ವೇಳೆ ಉಕ್ರೇನ್ ಸಮಸ್ಯೆ ‌2023ರಲ್ಲಿ ಪರಿಹಾರ ಕಂಡರೂ, ಜಾಗತಿಕ ಮಿಲಿಟರಿ ವೆಚ್ಚ ಮುಂದಿನ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಳ ಕಾಣುವ ಸಾಧ್ಯತೆಗಳಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಇದಕ್ಕೂ ಮೊದಲು ಮೋದಿ ಅವರು ರಾಮಲಲ್ಲಾನ ದರ್ಶನ ಪಡೆಯಲಿದ್ದಾರೆ. ರೋಡ್‌ ಶೋ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಇನ್ನು ಮೋದಿ ಅವರನ್ನು ಸ್ವಾಗತಿಸಲು ಜನರೂ ಸಜ್ಜಾಗಿದ್ದಾರೆ.

VISTARANEWS.COM


on

Narendra Modi
Koo

ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೆಲವೇ ಕ್ಷಣಗಳಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 7 ಗಂಟೆಗೆ ರಾಮಮಂದಿರದಲ್ಲಿ (Ram Mandir) ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ 7.30ರ ಸುಮಾರಿಗೆ 2 ಕಿಲೋ ಮೀಟರ್‌ ರೋಡ್‌ಶೋ ನಡೆಸಲಿದ್ದಾರೆ. ಈ ರೋಡ್‌ ಶೋ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ. ಈ ಬೃಹತ್‌ ರೋಡ್‌ಶೋದಲ್ಲಿ (Modi Road Show) ಸಿಂಧಿ, ಪಂಜಾಬಿಗಳು ಮತ್ತು ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಿಯಾಗಲಿದ್ದಾರೆ. ಇಡೀ ರೋಡ್‌ ಶೋ ಕಾರ್ಯಕ್ರಮವನ್ನು ನೀವು ಇಲ್ಲಿ ಲೈವ್‌ ವೀಕ್ಷಣೆ ಮಾಡಬಹುದಾಗಿದೆ.

ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂದ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸಕಲ ಸಿದ್ದತೆ ನಡೆಸಲಾಗಿದೆ. ರಾಮಲಲ್ಲಾ ದರ್ಶನ ಮಾರ್ಗದ ಗೇಟ್‌ ನಂಬರ್‌ 11ರಲ್ಲಿ ಹೂಗಳಿಂದ ಸಿಂಗರಿಸಲಾಗಿದೆ. ರಸ್ತೆಯುದ್ಧಕ್ಕೂ ಪ್ರಧಾನಿ ಮೋದಿಯ ಕಟೌಟ್‌ ನಿರ್ಮಿಸಲಾಗಿದೆ. ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನರೇಂದ್ರ ಮೋದಿ ಅವರ ರೋಡ್‌ ಶೋ ಪ್ರಾಮುಖ್ಯತೆ ಪಡೆದಿದೆ. ಉತ್ತರ ಪ್ರದೇಶ ಸೇರಿ ದೇಶಾದ್ಯಂತ ರಾಮಮಂದಿರ ನಿರ್ಮಾಣವು ಬಿಜೆಪಿಗೆ ಪ್ರಮುಖ ಚುನಾವಣಾ ವಿಷಯವೂ ಆಗಿದೆ.

ಇದನ್ನೂ ಓದಿ: Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Continue Reading

ದೇಶ

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ನಿಕಟ ಸಂಬಂಧ ಹೊಂದಿದ್ದ ಪೊಲೀಸ್‌ ಅಧಿಕಾರಿಯ ಗುಂಡಿನಿಂದ ಹೇಮಂತ್‌ ಕರ್ಕರೆ ಹುತಾತ್ಮರಾದರು ಎಂದು ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Vijay Namdevrao Wadettiwar
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆದಿವೆ. ಪ್ರತಿಸ್ಪರ್ಧಿಗಳ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದಾರೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

“2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ” ಎಂಬುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರ ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ (ಇವರು ಮುಂಬೈ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದವರು. ಅಜ್ಮಲ್‌ ಕಸಬ್‌ ಗಲ್ಲಿಗೇರಿಸುವಲ್ಲಿ ಇವರ ಪಾತ್ರವೂ ಇದೆ) ಉಜ್ವಲ್‌ ನಿಕಮ್‌ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್‌ ನಾಯಕ ಅಜ್ಮಲ್‌ ಕಸಬ್‌ ಪರವಾಗಿ ಮಾತನಾಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಸರಿಯಾಗಿ ತಿರುಗೇಟು ನೀಡಿದ್ದಾರೆ.

“ಅಜ್ಮಲ್‌ ಕಸಬ್‌ಗೆ ಬಿರಿಯಾನಿ ನೀಡಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ ಉಜ್ವಲ್‌ ನಿಕಮ್‌ ಅವರು ಕಾಂಗ್ರೆಸ್‌ಗೆ ಮಾನಹಾನಿ ಮಾಡಿದ್ದಾರೆ. ಯಾರಾದರೂ ಕಸಬ್‌ಗೆ ಬಿರಿಯಾನಿ ಕೊಡುತ್ತಾರಾ? ಇದಾದ ಬಳಿಕ ಕುತಂತ್ರವನ್ನು ಉಜ್ವಲ್‌ ನಿಕಮ್‌ ಒಪ್ಪಿಕೊಂಡರು. ಇವರನ್ನು ಯಾರದರೂ ವಕೀಲ ಎನ್ನುತ್ತಾರಾ? ಇವರು ಎಂತಹ ವಿಶ್ವಾಸಘಾತುಕ ಇರಬಹುದು? ಹೇಮಂತ್‌ ಕರ್ಕರೆ ಅವರಿಗೆ ತಗುಲಿದ ಗುಂಡು ಆರ್‌ಎಸ್‌ಎಸ್‌ ಜತೆ ನಂಟು ಹೊಂದಿರುವ ಪೊಲೀಸ್‌ ಅಧಿಕಾರಿಯ ಗನ್‌ನಿಂದ. ಇಂತಹ ಪ್ರಕರಣದಲ್ಲಿ ಬಿಜೆಪಿಯು ದೇಶದ್ರೋಹಿ ಉಜ್ವಲ್‌ ನಿಕಮ್‌ ಅವರಿಗೆ ಟಿಕೆಟ್‌ ನೀಡಿದೆ. ಆ ಮೂಲಕ ಬಿಜೆಪಿಯು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತದೆಯೇ” ಎಂಬುದಾಗಿ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ.

ತಿರುಗೇಟು ಕೊಟ್ಟ ಬಿಜೆಪಿ

ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಪ್ರತಿಕ್ರಿಯಿಸಿದ್ದಾರೆ. “ಕಾಂಗ್ರೆಸ್‌ ತನ್ನ ಮತಬ್ಯಾಂಕ್‌ ಅನ್ನು ಭದ್ರಪಡಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಕಾಂಗ್ರೆಸ್‌ ಹಿರಿಯ ನಾಯಕರೊಬ್ಬರು ಮುಂಬೈ ದಾಳಿಯ ಉಗ್ರನಿಗೆ ಕ್ಲೀನ್‌ ಚಿಟ್‌ ನೀಡುತ್ತಾರೆ ಎಂದರೆ ಇದಕ್ಕಿಂತಹ ಕೆಳ ಹಂತಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಪ್ರಕಾರ, ಹೇಮಂತ್‌ ಕರ್ಕರೆ ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ನಿಂದ ಅಲ್ಲ ಎಂಬುದು ಅವರ ಹೇಳಿಕೆಯಾಗಿದೆ. ಹಾಗಾದರೆ, ಕಾಂಗ್ರೆಸ್‌ ಉಗ್ರರನ್ನು ಬೆಂಬಲಿಸುತ್ತದೆ ಎಂದಾಯಿತಲ್ಲವೇ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

Continue Reading

ಉದ್ಯೋಗ

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Job Alert: ನವೋದಯ ವಿದ್ಯಾಲಯ ಸಮಿತಿಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು

VISTARANEWS.COM


on

Job Alert
Koo

ಬೆಂಗಳೂರು: ನವೋದಯ ವಿದ್ಯಾಲಯ ಸಮಿತಿ (Navodaya Vidyalaya Samiti)ಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Navodaya Vidyalaya Samiti Recruitment 2024). ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟಾಫ್‌ ನರ್ಸ್‌ 121 ಹುದ್ದೆ, ವಿದ್ಯಾರ್ಹತೆ: ಬಿಎಸ್ಸಿ ನರ್ಸಿಂಗ್ ಅಸಿಸ್ಟಂಟ್ ಸೆಕ್ಷನ್‌ ಆಫೀಸರ್ (ಎಎಸ್‌ಒ) 5 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಆಡಿಟ್ ಅಸಿಸ್ಟಂಟ್ 12 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ
ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ 4 ಹುದ್ದೆ, ವಿದ್ಯಾರ್ಹತೆ: ಸ್ನಾತಕೊತ್ತರ ಪದವಿ
ಲೀಗಲ್ ಅಸಿಸ್ಟಂಟ್ 1 ಹುದ್ದೆ, ವಿದ್ಯಾರ್ಹತೆ: ಕಾನೂನು ಪದವಿ
ಸ್ಟೆನೋಗ್ರಾಫರ್ 23 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಕಂಪ್ಯೂಟರ್ ಆಪರೇಟರ್ 2 ಹುದ್ದೆ, ವಿದ್ಯಾರ್ಹತೆ: ಸಿಎಸ್‌, ಐಟಿ ವಿಷಯಗಳಲ್ಲಿ ಬಿಇ / ಬಿ.ಟೆಕ್ / ಬಿಸಿಎ/ ಬಿಎಸ್ಸಿ
ಕ್ಯಾಟರಿಂಗ್ ಸೂಪರ್‌ವೈಸರ್ 78 ಹುದ್ದೆ, ಹೋಟೆಲ್‌ ಮ್ಯಾನೇಜ್‌ಮೆಂಟ್‌ ಪದವಿ
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ 21 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್‌ಎ) 360
ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್ 128 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಇಲೆಕ್ಟ್ರೀಷಿಯನ್ ಅಂಡ್ ವೈರಿಂಗ್
ಲ್ಯಾಬ್‌ ಅಟೆಂಡಂಟ್ 161 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ / ಪಿಯುಸಿ ಜತೆಗೆ ಲ್ಯಾಬೋರೇಟರಿ ಟೆಕ್ನಿಕಲ್ ಸ್ಕಿಲ್‌
ಮೆಸ್‌ ಹೆಲ್ಪರ್ 442 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (ಎಂಟಿಎಸ್) 19 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 37 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,500 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಒಬಿಸಿ ವಿಭಾಗದವರು 1,000 ರೂ. ಮತ್ತು ಇತರ ವರ್ಗದವರು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.

Navodaya Vidyalaya Samiti Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಿಸಿದ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Continue Reading

ದೇಶ

Narendra Modi: ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿ ರೋಡ್‌ಶೋ; ರಾಮಲಲ್ಲಾನಿಗೆ ವಿಶೇಷ ಪೂಜೆ

Narendra Modi:ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ:ಲೋಕಸಭಾ ಚುನಾವಣೆ(Lok Sabha Election 2024) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಜನ್ಮಭೂಮಿ(Ram Janmbhoomi)ಯಲ್ಲಿ ಶ್ರೀರಾಮ ಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ವಿಶೇಷ ಪೂಜೆ ಬಳಿಕ ಸುಮಾರು ಎರಡು ಕಿಲೋಮೀಟರ್‌ ರೋಡ್‌ ಶೋ(Roadshow) ನಡೆಸಲಿದ್ದಾರೆ. ಶನಿವಾರವೇ ಉತ್ತರಪ್ರದೇಶಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ, ಸಮಾಜವಾದಿ ಪಕ್ಷ(SP)ದ ಭದ್ರಕೋಟೆ ಇಟವಾದಲ್ಲಿ ಮಧ್ಯಾಹ್ನ ಸಾರ್ವಜನಿಕ ಸಭೆ ಹಾಗೂ ಧೌರಹರದಲ್ಲಿ ಸಂಜೆ ರ್ಯಾಲಿ ಕೈಗೊಳ್ಳಲಿದ್ದಾರೆ.

ಇದಾದ ಬಳಿಕ ನೇರವಾಗಿ ಅಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ, ಸಂಜೆ 7ಗಂಟೆಗೆ ರಾಮಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಸುಮಾರು 2 ಕಿಲೋ ಮೀಟರ್‌ ರೋಡ್‌ಶೋ ನಡೆಸಲಿದ್ದಾರೆ. ಇನ್ನು ಈ ರೋಡ್‌ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ. ಈ ಬೃಹತ್‌ ರೋಡ್‌ಶೋದಲ್ಲಿ ಸಿಂಧಿ, ಪಂಜಾಬಿಗಳು ಮತ್ತು ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಿಯಾಗಲಿದ್ದಾರೆ. ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸಕಲ ಸಿದ್ದತೆ ನಡೆಸಲಾಗಿದೆ. ರಾಮಲಲ್ಲಾ ದರ್ಶನ ಮಾರ್ಗದ ಗೇಟ್‌ ನಂಬರ್‌ 11ರಲ್ಲಿ ಹೂಗಳಿಂದ ಸಿಂಗರಿಸಲಾಗಿದೆ. ರಸ್ತೆಯುದ್ಧಕ್ಕೂ ಪ್ರಧಾನಿ ಮೋದಿಯ ಕಟೌಟ್‌ ನಿರ್ಮಿಸಲಾಗಿದೆ. ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

ಮೇ 14ರಂದು ನಾಮಪತ್ರ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ರಂದು ಮೋದಿ ಅವರು ಕ್ಷೇತ್ರದಲ್ಲಿ ರೋಡ್‌ಶೋ ನಡೆಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿರುವುದಾಗಿ ತಿಳಿಸಿದರು. “ರೋಡ್‌ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ, ಮೇ 14 ರಂದು ಪ್ರಧಾನಿ ಮೋದಿ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ವಾರಣಾಸಿಯಲ್ಲಿ ಕಾಂಗ್ರೆಸ್ ತನ್ನ ಉತ್ತರ ಪ್ರದೇಶದ ಮುಖ್ಯಸ್ಥ ಅಜಯ್ ರೈ ಮತ್ತು ಬಿಎಸ್ ಪಿ ಅಥರ್ ಜಮಾಲ್ ಲಾರಿ ಅವರನ್ನು ಕಣಕ್ಕಿಳಿಸಿದೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಮತ್ತು ಕೊನೆಯ ಸುತ್ತಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಚುನಾವಣೆ ನಡೆಯಲಿದೆ

Continue Reading
Advertisement
Gadag News
ಕರ್ನಾಟಕ20 mins ago

Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Drought Relief
ಕರ್ನಾಟಕ1 hour ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ1 hour ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ1 hour ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ1 hour ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ2 hours ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ2 hours ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್2 hours ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 20242 hours ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest2 hours ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case No evidence against me its a conspiracy says HD Revanna
ಕರ್ನಾಟಕ1 hour ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 hour ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌