ಪ್ರಧಾನಿ ನರೇಂದ್ರ ಮೋದಿಗಾಗಿ ಔತಣಕೂಟ ಏರ್ಪಡಿಸಲಿದ್ದಾರೆ ಜೋ ಬೈಡೆನ್​; ಶೀಘ್ರದಲ್ಲೇ ಮೋದಿ ಅಮೆರಿಕ ಪ್ರವಾಸ? - Vistara News

ದೇಶ

ಪ್ರಧಾನಿ ನರೇಂದ್ರ ಮೋದಿಗಾಗಿ ಔತಣಕೂಟ ಏರ್ಪಡಿಸಲಿದ್ದಾರೆ ಜೋ ಬೈಡೆನ್​; ಶೀಘ್ರದಲ್ಲೇ ಮೋದಿ ಅಮೆರಿಕ ಪ್ರವಾಸ?

ಸಾಮಾನ್ಯವಾಗಿ ಅಮೆರಿಕದ ಶ್ವೇತಭವನ ಜೂನ್​ ತಿಂಗಳಲ್ಲಿ ಸ್ಟೇಟ್​ ಡಿನ್ನರ್​​ ಆಯೋಜಿಸಲಾಗುತ್ತದೆ. ಅಧ್ಯಕ್ಷರೇ ಆಯೋಜಿಸುವ ಈ ಡಿನ್ನರ್​ ಭರ್ಜರಿಯಾಗಿ ನಡೆಯುತ್ತದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬೈಡೆನ್​ ಆಹ್ವಾನಿಸಲಿದ್ದಾರೆ ಎನ್ನಲಾಗಿದೆ.

VISTARANEWS.COM


on

US President Biden and modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಅವರು ಅತಿ ಶೀಘ್ರದಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi)ಯವರಿಗಾಗಿ ಔತಣಕೂಟ ಏರ್ಪಡಿಸಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್​ (US President Jeo Biden) ಬೇಸಿಗೆಯಲ್ಲಿ ಔತಣಕೂಟ ಆಯೋಜಿಸಲಿದ್ದು ಅದಕ್ಕೆ ಅವರು ಪ್ರಧಾನಿ ಮೋದಿಯನ್ನು ಆಮಂತ್ರಿಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಾಮಾನ್ಯವಾಗಿ ಅಮೆರಿಕದ ಶ್ವೇತಭವನ ಜೂನ್​ ತಿಂಗಳಲ್ಲಿ ಸ್ಟೇಟ್​ ಡಿನ್ನರ್​​ ಆಯೋಜಿಸಲಾಗುತ್ತದೆ. ಅಧ್ಯಕ್ಷರೇ ಆಯೋಜಿಸುವ ಈ ಡಿನ್ನರ್​ ಭರ್ಜರಿಯಾಗಿ ನಡೆಯುತ್ತದೆ. ಯಾವ ರಾಷ್ಟ್ರದ ನಾಯಕರಿಗೆ ಆಹ್ವಾನ ನೀಡುತ್ತಾರೋ, ಅವರು ಪಾಲ್ಗೊಳ್ಳುವ ಜತೆಗೆ, ಸರ್ಕಾರದ ಪ್ರಮುಖರೆಲ್ಲ ಇರುತ್ತಾರೆ. ಈ ಸಲದ ಸ್ಟೇಟ್​ ಡಿನ್ನರ್ ಜೂನ್​​ಗೂ ಪೂರ್ವದಲ್ಲೇ, ಬೇಸಿಗೆಯಲ್ಲಿ ನಡೆಯಲಿದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದರೆ, ಅದು ಈ ಘಟ್ಟದಲ್ಲಿ ಅತ್ಯಂತ ಮಹತ್ವ ಪಡೆಯಲಿದೆ. ಇಂಡೋ-ಫೆಸಿಪಿಕ್​ ವಲಯದಲ್ಲಿ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿರುವ ಕುತಂತ್ರಿ ಚೀನಾವನ್ನು ಹತ್ತಿಕ್ಕಲು ನೀತಿ ರೂಪಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಭಾರತ ನಾಯಕರ ಭೇಟಿ ಪ್ರಾಮುಖ್ಯತೆ ಪಡೆಯಲಿದೆ. ಉಕ್ರೇನ್​ ಮೇಲೆ ರಷ್ಯಾ ಸಾರಿರುವ ಯುದ್ಧವನ್ನು ಅಮೆರಿಕ ಖಂಡಿಸುತ್ತಲೇ ಬಂದಿದೆ. ರಷ್ಯಾ-ಉಕ್ರೇನ್​ ಯುದ್ಧವನ್ನು ನಿಲ್ಲಿಸುವ ಸಾಮರ್ಥ್ಯ ಇರುವುದು ಭಾರತದ ಪ್ರಧಾನಿ ಮೋದಿ ಅವರಿಗೆ ಮಾತ್ರ ಎಂಬ ಮಾತನ್ನು ಪದೇಪದೆ ಹೇಳುತ್ತಲೇ ಇದೆ. ಡೊನಾಲ್ಡ್​ ಟ್ರಂಪ್​ ಇರುವಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕ ವಿಶೇಷ ಸ್ಥಾನಮಾನ ನೀಡುತ್ತಲೇ ಇದೆ. 2023ನೇ ಸಾಲಿನ ಜಿ20 ಶೃಂಗ ಈ ಬಾರಿ ಭಾರತದಲ್ಲಿ ನಡೆಯಲಿದ್ದು, ಇದರಲ್ಲಿ ರಷ್ಯಾ-ಉಕ್ರೇನ್​ ವಿಷಯವೇ ಬಹುಮುಖ್ಯವಾಗಿ ಚರ್ಚೆಯಾಗಲಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ದೃಷ್ಟಿಯಿಂದಲೂ ಪ್ರಧಾನಿ ಮೋದಿ -ಜೋ ಬೈಡೆನ್​ ಭೇಟಿ ಮಹತ್ವ ಎನ್ನಿಸಲಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಡಿಸೆಂಬರ್​ನಲ್ಲಿ ಫ್ರೆಂಚ್​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗಾಗಿ ಔತಣಕೂಟ ಆಯೋಜಿಸಿದ್ದರು. ಹಾಗೇ, ಅವರು ಏಪ್ರಿಲ್​ 26ರಂದು ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೆಯೋಲ್​ಗಾಗಿ ಡಿನ್ನರ್​ ಏರ್ಪಡಿಸಿದ್ದಾರೆ. ಅದಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಜತೆ ಡಿನ್ನರ್​ ಇದೆ ಎಂದು ಹೇಳಲಾಗಿದೆ. ಅಷ್ಟಲ್ಲದೆ, ಮೇ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಕ್ವಾಡ್​ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಮತ್ತು ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಭೇಟಿಯಾಗಲಿದ್ದಾರೆ. ಜೋ ಬೈಡೆನ್​ ಮತ್ತು ಪ್ರಧಾನಿ ಮೋದಿ ನಡುವಿನ ಔತಣಕೂಟಕ್ಕೆ ಇನ್ನೂ ದಿನಾಂಕ ನಿಗದಿಯಾಗಿಲ್ಲ.

ಇದನ್ನೂ ಓದಿ: ಜಿ7 ಶೃಂಗದಲ್ಲಿ ಪ್ರಧಾನಿ ಮೋದಿ; ಬೈಡೆನ್‌, ಮ್ಯಾಕ್ರನ್, ಟ್ರುಡೊ ಜತೆ ದ್ವಿಪಕ್ಷೀಯ-ಸೌಹಾರ್ದಯುತ ಚರ್ಚೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Waqf Act: ನಾಳೆ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡನೆ; ಪರಮಾಧಿಕಾರ ರದ್ದು ಸೇರಿ ಏನೆಲ್ಲ ಬದಲು?

Waqf Act: ದೇಶದ ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿ ಆಸ್ತಿ ಎಂಬುದಾಗಿ ಘೋಷಿಸವ, ಅದನ್ನು ಯಾರೂ ಕೋರ್ಟ್‌ನಲ್ಲೂ ಪ್ರಶ್ನಿಸಲು ಸಾಧ್ಯವಾಗದಂತಹ ಪರಮಾಧಿಕಾರವನ್ನು ವಕ್ಫ್‌ ಕಾಯ್ದೆಯು ನೀಡಿದೆ. ಈಗ ಕೇಂದ್ರ ಸರ್ಕಾರವು ಇದಕ್ಕೆ ತಿದ್ದುಪಡಿ ತರಲು ಮುಂದಾಗಿದೆ.

VISTARANEWS.COM


on

Waqf Act
Koo

ನವದೆಹಲಿ: ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ (Waqf Act) ತಿದ್ದುಪಡಿ ತರಲು ಮುಂದಾಗಿದೆ. ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು (Central Government) ಸಂಸತ್‌ನಲ್ಲಿ ಗುರುವಾರ (ಆಗಸ್ಟ್‌ 8) ವಿಧೇಯಕ ಮಂಡಿಸಲಿದೆ. ಮಂಗಳವಾರ (ಆಗಸ್ಟ್‌ 6) ರಾತ್ರಿಯೇ ವಿಧೇಯಕದ ಪ್ರತಿಯನ್ನು ಲೋಕಸಭೆ ಸದಸ್ಯರಿಗೆ ಹಂಚಿಕೆ ಮಾಡಲಾಗಿದೆ. ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವುದನ್ನು ಈಗಾಗಲೇ ಎಐಎಂಐಎಂ ಮುಖ್ಯಸ್ಥ ವಿರೋಧಿಸಿದ್ದಾರೆ. ಹಾಗಾದರೆ, ವಕ್ಫ್‌ ಕಾಯ್ದೆಗೆ ಏನೆಲ್ಲ ತಿದ್ದುಪಡಿ ತರಲಾಗುತ್ತದೆ? ಏನೆಲ್ಲ ಬದಲಾವಣೆ ಮಾಡಲಾಗುತ್ತದೆ? ಇಲ್ಲಿದೆ ಮಾಹಿತಿ.

1995ರ ವಕ್ಫ್‌ ಕಾಯ್ದೆಯ ಸೆಕ್ಷನ್‌ 40ಕ್ಕೆ ತಿದ್ದುಪಡಿ ತಂದು ಹಲವು ಬದಲಾವಣೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದನ್ನು ವಕ್ಫ್‌ ಕಾಯ್ದೆ ಎನ್ನುವ ಬದಲು ಯುನಿಫೈಡ್‌ ವಕ್ಫ್‌ ಮ್ಯಾನೇಜ್‌ಮೆಂಟ್‌, ಎಫಿಶಿಯೆನ್ಸಿ & ಡೆವಲಪ್‌ಮೆಂಟ್‌ ಆಕ್ಟ್‌ ಎಂಬುದಾಗಿ ಮರು ನಾಮಕರಣ ಮಾಡಲಾಗುತ್ತದೆ. ಇನ್ನು, 1923ರಲ್ಲಿ ಜಾರಿಗೆ ತಂದ ವಕ್ಫ್‌ ಕಾಯ್ದೆಯನ್ನು ರದ್ದುಗೊಳಿಸಲು ಕೂಡ ಕೇಂದ್ರ ಸರ್ಕಾರವು ಮತ್ತೊಂದು ವಿಧೇಯಕ ಮಂಡನೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ಏನೆಲ್ಲ ಬದಲಾವಣೆ?

ದೇಶದ ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿ ಆಸ್ತಿ ಎಂಬುದಾಗಿ ಘೋಷಿಸವ, ಅದನ್ನು ಯಾರೂ ಕೋರ್ಟ್‌ನಲ್ಲೂ ಪ್ರಶ್ನಿಸಲು ಸಾಧ್ಯವಾಗದಂತಹ ಪರಮಾಧಿಕಾರವನ್ನು ವಕ್ಫ್‌ ಕಾಯ್ದೆಯು ನೀಡಿದೆ. ಆದರೆ, ಈ ಪರಮಾಧಿಕಾರವನ್ನು ರದ್ದುಗೊಳಿಸುವುದು ಪ್ರಮುಖ ಬದಲಾವಣೆಯಾಗಿದೆ. ಇನ್ನು, ಆಯಾ ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಇಬ್ಬರು ಹೆಣ್ಣುಮಕ್ಕಳು ಕಡ್ಡಾಯವಾಗಿ ಇರುವುದು, ವಕ್ಫ್‌ ಮಂಡಳಿ ಆಸ್ತಿ ಕುರಿತು ಜಿಲ್ಲಾಧಿಕಾರಿ ತೀರ್ಮಾನ ತೆಗೆದುಕೊಳ್ಳುವುದು ಸೇರಿ ಹಲವು ಬದಲಾವಣೆ ಮಾಡಲಾಗುತ್ತದೆ.

ಅಷ್ಟೇ ಅಲ್ಲ, ಸಮಿತಿಯಲ್ಲಿ ಒಬ್ಬ ಕೇಂದ್ರ ಸಚಿವ, ಮೂವರು ಸಂಸದರು, ಮೂರು ಮುಸ್ಲಿಂ ಸಂಘಟನೆಗಳ ಮುಖಂಡರು ಹಾಗೂ ಮೂವರು ಮುಸ್ಲಿಂ ಕಾನೂನು ತಜ್ಞರು ಇರಲಿದ್ದಾರೆ. ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ನ ಇಬ್ಬರು ಜಡ್ಜ್‌ಗಳು ಸಮಿತಿಯ ಸದಸ್ಯರಾಗಿರುತ್ತಾರೆ. ಯಾವುದೇ ಆಸ್ತಿಯನ್ನು ವಕ್ಫ್‌ ಆಸ್ತಿ ಎಂಬುದಾಗಿ ಘೋಷಿಸುವ ಮೊದಲು ನೋಟಿಸ್‌ ನೀಡಬೇಕು. ಆ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ವಕ್ಫ್‌ ಆಸ್ತಿಗಳ ಸರ್ವೇಯನ್ನು ಜಿಲ್ಲಾಧಿಕಾರಿ ಎದುರು ಮಾಡಬೇಕು. ಮಂಡಳಿಯ ನಿರ್ಧಾರ ಪ್ರಶ್ನಿಸಿ 90 ದಿನಗಳಲ್ಲಿ ಆಸ್ತಿಯ ಮಾಲೀಕರು ಅಥವಾ ಸಂಬಂಧಪಟ್ಟವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಅಧಿಕಾರ ನೀಡಲಾಗಿದೆ.

ಆಸ್ತಿಯ ಬದಲು ಹಣಕಾಸು ನೆರವು ಬಂದರೆ, ಆ ಹಣವನ್ನು ಕೇಂದ್ರ ಸರ್ಕಾರ ಸಲಹೆಯಂತೆ ವಿಧವೆಯರು, ವಿಚ್ಛೇದನ ಪಡೆದವರು ಹಾಗೂ ಅನಾಥರ ಕಲ್ಯಾಣಕ್ಕೆ ವಿನಿಯೋಗಿಸಬೇಕು. ವಕ್ಫ್‌ ಮಂಡಳಿಯನ್ನು ವಿರೋಧಿಸುತ್ತಿರುವ ಬೋಹ್ರಾ ಹಾಗೂ ಆಗಾಖಾನಿ ಸಮುದಾಯದವರಿಗೆ ಪ್ರತ್ಯೇಕ ಮಂಡಳಿಸಲು ಪ್ರಸ್ತಾಪಿಸಲಾಗಿದೆ.

ಏನಿದು ವಕ್ಫ್‌ ಕಾಯ್ದೆ?

ಮುಸ್ಲಿಂ ವ್ಯಕ್ತಿಯೊಬ್ಬ ಧಾರ್ಮಿಕ ಕಾರಣಕ್ಕಾಗಿ ದಾನವಾಗಿ ನೀಡಿದ ಭೂಮಿಯನ್ನು ನಿಯಂತ್ರಿಸುವ ದಿಸೆಯಲ್ಲಿ 1995ರಲ್ಲಿ ವಕ್ಫ್‌ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಮುಸ್ಲಿಂ ಕಾನೂನನ್ನು ಕೂಡ ಅನ್ವಯ ಮಾಡಲಾಗಿದೆ. ಧಾರ್ಮಿಕ ಕಾರಣಕ್ಕಾಗಿ ನೀಡಿದ ಆಸ್ತಿಯು ವಕ್ಫ್‌ ಮಂಡಳಿ ವ್ಯಾಪ್ತಿಗೆ ಬರುತ್ತದೆ. ಅಷ್ಟೇ ಅಲ್ಲ, ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿಯು ತನ್ನ ಆಸ್ತಿಯನ್ನು ಘೋಷಿಸುವ ಜತೆಗೆ ಅದನ್ನು ವಶಕ್ಕೆ ಪಡೆಯುವ ಪರಮಾಧಿಕಾರ ಹೊಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ.

ವರದಿಗಳ ಪ್ರಕಾರ, ದೇಶದಲ್ಲಿ ವಕ್ಫ್‌ ಮಂಡಳಿಯು ಸುಮಾರು 8.7 ಲಕ್ಷ ಆಸ್ತಿಗಳನ್ನು ಹೊಂದಿದೆ. ಇದರ ವ್ಯಾಪ್ತಿಯು ಸುಮಾರು 9.4 ಲಕ್ಷ ಎಕರೆ ಆಗಿದೆ. 2022ರಲ್ಲಿ ಹಿಂದುಗಳೇ ಬಹುಸಂಖ್ಯಾತರಾಗಿರುವ ತಮಿಳುನಾಡಿನ ತಿರುಚೆಂದುರೈ ಎಂಬ ಹಳ್ಳಿಯನ್ನು ವಕ್ಫ್‌ ಬೋರ್ಡ್‌ ತಮ್ಮದು ಎಂದು ಘೋಷಿಸಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇನ್ನು, ಕಳೆದ ವರ್ಷ, ದೆಹಲಿ ವಕ್ಫ್‌ ಬೋರ್ಡ್‌ ಮಂಡಳಿಯ ಅಧೀನದಲ್ಲಿರುವ 123 ಆಸ್ತಿಗಳ ಪರಿಶೀಲನೆಗೆ ದೆಹಲಿ ಹೈಕೋರ್ಟ್‌ ಆದೇಶಿಸಿತ್ತು. ವಕ್ಫ್‌ ಮಂಡಳಿಯು ಇಂತಹ ವಿವಾದಿತ ಆಸ್ತಿಗಳನ್ನೇ ತುಂಬ ಹೊಂದಿದೆ. ಇಸ್ಲಾಂನಲ್ಲಿರುವ ಕೆಲ ಉಪ ಪಂಗಡಗಳೇ ವಕ್ಫ್‌ ಮಂಡಳಿಯನ್ನು ವಿರೋಧಿಸುತ್ತಿವೆ.

ಇದನ್ನೂ ಓದಿ: Waqf Board: ಜಾಮಾ ಮಸೀದಿ ಸೇರಿ ವಕ್ಫ್‌ ಬೋರ್ಡ್‌ಗೆ ಕಾಂಗ್ರೆಸ್‌ ನೀಡಿದ 123 ಆಸ್ತಿ ಸ್ವಾಧೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ!

Continue Reading

ದೇಶ

Rajya Sabha Election: 9 ರಾಜ್ಯಗಳ 12 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ; ಸೆ.3ಕ್ಕೆ ಮತದಾನ

Rajya Sabha Election: ಸೆಪ್ಟೆಂಬರ್‌ 3ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. ಮಹಾರಾಷ್ಟ್ರ, ಬಿಹಾರ, ಅಸ್ಸಾಂನ ತಲಾ 2, ಮಧ್ಯಪ್ರದೇಶ, ಹರಿಯಾಣ, ಒಡಿಶಾ, ತೆಲಂಗಾಣ, ಹರಿಯಾಣ ಹಾಗೂ ತ್ರಿಪುರದ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

VISTARANEWS.COM


on

Rajya Sabha Election
Koo

ನವದೆಹಲಿ: ದೇಶದ 9 ರಾಜ್ಯಗಳ 12 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಆಯೋಗವು (Election Commission Of India) ಚುನಾವಣಾ (Rajya Sabha Election) ದಿನಾಂಕ ಘೋಷಣೆ ಮಾಡಿದೆ. ಸೆಪ್ಟೆಂಬರ್‌ 12ರಂದು ಮತದಾನ ನಡೆಯಲಿದ್ದು, 9 ರಾಜ್ಯಗಳ ವಿಧಾನಸಭೆಗಳ ಮೂಲಕ ಸದಸ್ಯರು ಆಯ್ಕೆಯಾಗಲಿದ್ದಾರೆ. ಕೇಂದ್ರ ಸಚಿವರಾದ ಪಿಯೂಷ್‌ ಗೋಯಲ್‌, ಸರ್ಬಾನಂದ ಸೋನೋವಾಲ್‌ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ಹಲವರು ಲೋಕಸಭೆಗೆ ಆಯ್ಕೆಯಾಗಿರುವ ಕಾರಣ ಸ್ಥಾನಗಳು ಖಾಲಿಯಾಗಿವೆ.

ಚುನಾವಣೆ ಆಯೋಗವು ಆಗಸ್ಟ್‌ 14ರಂದು ಅಧಿಸೂಚನೆ ಹೊರಡಿಸಲಿದ್ದು, ಆಗಸ್ಟ್‌ 21ರೊಳಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ಆಗಸ್ಟ್‌ 22ರಂದು ನಾಮಪತ್ರ ಪರಿಶೀಲನೆ ಮಾಡಲಾಗುತ್ತದೆ. ಸೆಪ್ಟೆಂಬರ್‌ 3ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. ಮಹಾರಾಷ್ಟ್ರ, ಬಿಹಾರ, ಅಸ್ಸಾಂನ ತಲಾ 2, ಮಧ್ಯಪ್ರದೇಶ, ಹರಿಯಾಣ, ಒಡಿಶಾ, ತೆಲಂಗಾಣ, ಹರಿಯಾಣ ಹಾಗೂ ತ್ರಿಪುರದ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಎನ್‌ಡಿಎ ಬಲಾಬಲ ಹೇಗಿದೆ?

ರಾಜ್ಯಸಭೆಯಲ್ಲಿ ಎನ್‌ಡಿಎ ಬಲವು 101 ಇದೆ. ಒಟ್ಟು 245 ಸದಸ್ಯರ ಬಲದ ರಾಜ್ಯಸಭೆಯಲ್ಲಿ ಈಗ 225 ಸದಸ್ಯರು ಇದ್ದು, ಬಹುಮತಕ್ಕೆ 113 ಸದಸ್ಯರ ಬೆಂಬಲದ ಅವಶ್ಯಕತೆ ಇದೆ. ಆದಾಗ್ಯೂ, ಒಬ್ಬ ಸ್ವತಂತ್ರ ಅಭ್ಯರ್ಥಿ ಹಾಗೂ 7 ನಾಮನಿರ್ದೇಶನಗೊಂಡಿರುವ ಸದಸ್ಯರ ಬಲವೂ ಎನ್‌ಡಿಎಗೆ ಇದೆ. ಅಲ್ಲಿಗೆ, ಮೇಲ್ಮನೆಯಲ್ಲಿ ಎನ್‌ಡಿಎ ಬಹುಮತಕ್ಕೆ ಇನ್ನೂ 4 ಸದಸ್ಯರ ಕೊರತೆ ಇದೆ. ಬಿಜೆಪಿಯು 87 ಸದಸ್ಯರನ್ನು ಹೊಂದಿದೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟವು 87 ಸದಸ್ಯರನ್ನು ಹೊಂದಿದೆ. ಇವರಲ್ಲಿ ಕಾಂಗ್ರೆಸ್‌ 26, ತೃಣಮೂಲ ಕಾಂಗ್ರೆಸ್‌ 13, ಆಮ್‌ ಆದ್ಮಿ ಪಕ್ಷ, ಡಿಎಂಕೆ ತಲಾ 10 ಸದಸ್ಯರನ್ನು ಹೊಂದಿವೆ. ಉಳಿದ ಸ್ಥಾನಗಳು ತೆಲಂಗಾಣದ ಬಿಆರ್‌ಎಸ್‌, ನಾಮನಿರ್ದೇಶಿತ ಸದಸ್ಯರು ಹಾಗೂ ಸ್ವತಂತ್ರ ಸದಸ್ಯರಾಗಿದ್ದಾರೆ. ಆದಾಗ್ಯೂ ಬಿಜೆಪಿಯು ಪ್ರಸಕ್ತ ವರ್ಷ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಬಹುದಾಗಿದೆ. ಈಗ 12 ಸ್ಥಾನಗಳಿಗೆ ಚುನಾವಣೆ ಘೋಷಣೆಯಾದ ಕಾರಣ ಸ್ಥಾನ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಲಿದೆ.

ಇದನ್ನೂ ಓದಿ: Amit Shah: 2029ರ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವು, ಕಾಂಗ್ರೆಸ್‌ ಪ್ರತಿಪಕ್ಷದಲ್ಲೇ; ಅಮಿತ್‌ ಶಾ ಭವಿಷ್ಯ

Continue Reading

ಕ್ರೀಡೆ

Vinesh Phogat: ಫೈನಲ್​ಗೆ ಅನರ್ಹ; ವಿನೇಶ್ ಫೋಗಟ್​ ಕಡು ವೈರಿ ಬ್ರಿಜ್ ಭೂಷಣ್ ಮಗನ ಪ್ರತಿಕ್ರಿಯೆ ಏನು?

Vinesh Phogat: ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದು ದೇಶಕ್ಕೆ ಉಂಟಾದ ನಷ್ಟ. ಫೆಡರೇಶನ್ ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದೆ ಏನು ಮಾಡಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತದೆ ಎಂದು ಹೇಳಿದ್ದಾರೆ.

VISTARANEWS.COM


on

Vinesh Phogat
Koo

ನವದೆಹಲಿ: ಅಪ್ಪನ(ಬ್ರಿಜ್​ ಭೂಷಣ್ ಶರಣ್​ ಸಿಂಗ್​) ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುಂತೆ ಮಾಡಿದ್ದ ವಿನೇಶ್ ಫೋಗಟ್(Vinesh Phogat)​ ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಅನರ್ಹಗೊಂಡ ಬಗ್ಗೆ ಬ್ರಿಜ್​ ಭೂಷಣ್ ಪುತ್ರ(Brij Bhushan’s son Karan), ಬಿಜೆಪಿ ಸಂಸದ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಪ್ರತಿಕ್ರಿಯೆ ನೀಡಿದ್ದಾರೆ.

​ಸಂಸತ್​ ಅಧಿವೇಶನಕ್ಕೆ ತೆರಳುತ್ತಿದ್ದ ಕರಣ್‌ ಭೂಷಣ್‌ ಸಿಂಗ್‌ ಮಾಧ್ಯಮದ ಜತೆ ಮಾತನಾಡುವ ವೇಳೆ, “ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದು ದೇಶಕ್ಕೆ ಉಂಟಾದ ನಷ್ಟ. ಫೆಡರೇಶನ್ ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದೆ ಏನು ಮಾಡಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ ಕೈಸರ್‌ಗಂಜ್(Kaiserganj) ಲೋಕಸಭಾ ಕ್ಷೇತ್ರದಿಂದ 1.4 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದರು. ತಂದೆ ಬ್ರಿಜ್​ ಭೂಷಣ್(Brij Bhushan)​ 2019ರ ಲೋಕಸಭಾ ಚುನಾವಣೆಯಲ್ಲಿ, ಕೈಸರ್‌ಗಂಜ್‌ನಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. 

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಲಾಗಿತ್ತು.

ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಪೋಗಟ್ ಅವರು ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು. ಇದೇ ವಿಚಾರವಾಗಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

ಇದನ್ನೂ ಓದಿ Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್​ ಫೈನಲ್​ ಪಂದ್ಯಕ್ಕೂ ಮುನ್ನ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Continue Reading

Latest

Job Vacancies: ಸಾವಿರ ಮಹಿಳಾ ಪೊಲೀಸ್ ಕಾನ್‌‌ಸ್ಟೇಬಲ್ ಹುದ್ದೆಗಳಿಗೆ ಲಕ್ಷಕ್ಕೂ ಹೆಚ್ಚು ಅರ್ಜಿ! ಫುಟ್‌‌ಪಾತ್‌‌ನಲ್ಲೇ ಮಲಗಿದ್ದ ಮಹಿಳಾ ಅಭ್ಯರ್ಥಿಗಳು

Job Vacancies: ಮಹಿಳಾ ಕಾನ್ಸ್ಟೇಬಲ್ ಮತ್ತು ಮಹಿಳಾ ಕಾನ್ಸ್ಟೇಬಲ್ ಡ್ರೈವರ್ ಸೇರಿದಂತೆ 1,257 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಮುಂಬೈ ಪೊಲೀಸರು ರಾಜ್ಯಾದ್ಯಂತ 1.11 ಲಕ್ಷ ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಅದರಂತೆ, ಸೋಮವಾರ ಮರೀನ್ ಡ್ರೈವ್ನಲ್ಲಿ ಡ್ರೈವರ್ ನೇಮಕಾತಿಗಾಗಿ ದೈಹಿಕ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಜಮಾಯಿಸಿದ್ದರು. ಅವರೆಲ್ಲಾ ಪುಟ್‌ಪಾತ್‌ನಲ್ಲಿ ಮಲಗಿದ್ದರು. ಈ ಘಟನೆ ಮಹಾರಾಷ್ಟ್ರದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Job Vacancies
Koo


ಮುಂಬೈ : ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಎಷ್ಟರ ಮಟ್ಟಿಗೆ ಇದೆ ಎಂದರೆ ಯಾವುದೇ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನಿಸಿದರೆ ಸಾಕು ಲಕ್ಷಾಂತರ ಜನರು ಆ ಕಚೇರಿಯ ಬಳಿ ಬರುತ್ತಾರೆ. ಅಷ್ಟೋ ಕಡೆ ನೂಕು ನುಗ್ಗುಲು ಕೂಡ ಉಂಟಾಗುತ್ತದೆ. ಇದೀಗ ಮಹಿಳಾ ಕಾನ್ಸ್ಟೇಬಲ್ ಮತ್ತು ಮಹಿಳಾ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳಿಗೆ 1,257 ಹುದ್ದೆ (Job vacancies)ಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಮುಂಬೈ ಪೊಲೀಸರು ರಾಜ್ಯಾದ್ಯಂತ 1.11 ಲಕ್ಷ ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಅದರಂತೆ, ಸೋಮವಾರ ಮರೀನ್ ಡ್ರೈವ್‍ನಲ್ಲಿ ಡ್ರೈವರ್ ನೇಮಕಾತಿಗಾಗಿ ದೈಹಿಕ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಜಮಾಯಿಸಿದರು. ಅವರೆಲ್ಲಾ ಪುಟ್ಪಾತ್‍ನಲ್ಲಿ ಮಲಗಿದ್ದರು.

ವಿರೋಧ ಪಕ್ಷದ ನಾಯಕ ವಿಜಯ್ ವಡ್ಡೇಟಿವಾರ್ ಮಂಗಳವಾರ ತಡರಾತ್ರಿ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಇದಕ್ಕೆ ಸಂಬಂಧಪಟ್ಟ ವಿಡಿಯೊ ಮತ್ತು ಸಂದೇಶವನ್ನು ಪೋಸ್ಟ್ ಮಾಡುವ ಮೂಲಕ ಸರ್ಕಾರದ ಪಾತ್ರದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಲಾದ ಸಂದೇಶದಲ್ಲಿ, “ಮುಂಬೈನಲ್ಲಿ ಪೊಲೀಸ್ ನೇಮಕಾತಿಗಾಗಿ ಬಂದ ಹುಡುಗಿಯರು ಇದರಲ್ಲಿ ಕಂಡುಬರುತ್ತಾರೆ.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಮುಂಬೈನಂತಹ ದೊಡ್ಡ ನಗರಗಳಿಗೆ ಬರುವ ಹುಡುಗಿಯರಿಗೆ ರಾತ್ರಿ ತಂಗಲು ಸರ್ಕಾರ ಮತ್ತು ಪೊಲೀಸ್ ಆಡಳಿತಕ್ಕೆ ವಸತಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲವೇ? ಮಳೆ ಬಂದಾಗ ಈ ಹುಡುಗಿಯರು ಎಲ್ಲಿ ಮಲಗುತ್ತಾರೆ? ಅವರ ಸುರಕ್ಷತೆಯ ಬಗ್ಗೆ ಏನು? ವಾಶ್ ರೂಮ್ ವ್ಯವಸ್ಥೆ ಬಗ್ಗೆ ಏನು? ಇದು ಬೇಜವಾಬ್ದಾರಿಯುತ ಕೆಲಸ “ ಎಂದು ತಿಳಿಸಿದ್ದಾರೆ. ಅಲ್ಲದೇ ಆಕಾಂಕ್ಷಿಗಳಿಗೆ ವಸತಿ ಸೌಕರ್ಯಗಳನ್ನು ಒದಗಿಸುವಂತೆ ವಡ್ಡೇಟಿವಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ʼಮೇಡಂ ನನಗೆ ಪಿರಿಯಡ್ಸ್‌ʼ ಎಂದರೂ ಬಿಡದೆ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿದ ಶಿಕ್ಷಕಿ!

ನಿರುದ್ಯೋಗ ಸಮಸ್ಯೆ ದೇಶದಲ್ಲಿ ಎಷ್ಟು ಕಾಡುತ್ತಿದೆ ಎಂಬುದಕ್ಕೆ ಈ ಹಿಂದೆ ಮುಂಬೈನಲ್ಲಿ ನಡೆದ ಈ ಘಟನೆಯೂ ಕೂಡ ಸಾಕ್ಷಿಯಾಗಿದೆ. ಈ ಹಿಂದೆ ಏರ್ ಇಂಡಿಯಾ ಏರ್ಪೋರ್ಟ್ ಸರ್ವೀಸಸ್ ಲಿಮಿಟೆಡ್ (ಎಐಎಎಸ್ಎಲ್) ಮುಂಬೈ ವಿಮಾನ ನಿಲ್ದಾಣದಲ್ಲಿ ಕೇವಲ 600 ಖಾಲಿ ಹುದ್ದೆಗಳಿಗೆ ಸ್ಪರ್ಧಿಸಲು 25,000 ಕ್ಕೂ ಹೆಚ್ಚು ಆಕಾಂಕ್ಷಿಗಳು ಹಾಜರಾಗಿದ್ದರಿಂದ ಮುಂಬೈ ವಿಮಾನ ನಿಲ್ದಾಣದಲ್ಲಿ ಗೊಂದಲಕ್ಕೆ ಕಾರಣವಾಯಿತು. ಭಾರಿ ಜನಸಂದಣಿಯನ್ನು ನಿರ್ವಹಿಸಲು ಏರ್ ಇಂಡಿಯಾ ಸಿಬ್ಬಂದಿ ಹೆಣಗಾಡಬೇಕಾಯಿತು, ಇದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ಕೂಡ ಎದುರಾಗಿತ್ತು

Continue Reading
Advertisement
World Breastfeeding Week 2024
ಆರೋಗ್ಯ18 mins ago

World Breastfeeding Week 2024: ಹಾಲುಣಿಸುವುದು ನಿಲ್ಲಿಸಿದ ಮೇಲೆ ತಾಯಿಯ ತೂಕ ಹೆಚ್ಚುವುದೇಕೆ? ಆಗೇನು ಮಾಡಬೇಕು?

Actor Darshan
ಕ್ರೈಂ20 mins ago

Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

IND vs SL 3rd ODI
ಕ್ರೀಡೆ24 mins ago

IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

Paris Olympics
ಕ್ರೀಡೆ52 mins ago

Paris Olympics: ನಾಳೆ ನೀರಜ್​ ಚೋಪ್ರಾ ಫೈನಲ್​ ಸ್ಪರ್ಧೆ; ಕಂಚಿನ ಪದಕಕ್ಕೆ ಹಾಕಿ ತಂಡ ಹೋರಾಟ

Electric Vehicles
ಆಟೋಮೊಬೈಲ್1 hour ago

Electric Vehicles: ಎಲೆಕ್ಟ್ರಿಕ್‌ ಕಾರು ಖರೀದಿಸಿದವರಿಗೆ ಪೆಟ್ರೋಲ್, ಡೀಸೆಲ್‌ ಕಾರಿಗೆ ಮರಳುವ ಇಚ್ಛೆ; ಕಾರಣ ಏನು?

Wayanad Landslide
ಕರ್ನಾಟಕ1 hour ago

Wayanad Landslide: ಭೂಕುಸಿತ ಸಂತ್ರಸ್ತರಿಗೆ ನೆರವು; ಯುವ ಕಾಂಗ್ರೆಸ್‌ ಮುಖಂಡ ಧ್ರುವ ಜತ್ತಿ ಭೇಟಿ

Blazer Saree Fashion
ಫ್ಯಾಷನ್1 hour ago

Blazer Saree Fashion: ಮಾನ್ಸೂನ್‌ ಸೀಸನ್‌ ಬ್ಲೇಜರ್‌ ಸೀರೆಯಲ್ಲಿ ಶ್ವೇತಾ ಚಂಗಪ್ಪ ಕಮಾಲ್‌

Waqf Act
ದೇಶ2 hours ago

Waqf Act: ನಾಳೆ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡನೆ; ಪರಮಾಧಿಕಾರ ರದ್ದು ಸೇರಿ ಏನೆಲ್ಲ ಬದಲು?

Headphone Side Effect
ಆರೋಗ್ಯ2 hours ago

Headphone Side Effect: ಹೆಡ್ ಫೋನ್ ಬಳಕೆಯಿಂದ ಮೆದುಳು, ಹೃದಯದ ಮೇಲೆ ಭೀಕರ ಪರಿಣಾಮ!

Utthana Essay Competition 2024
ಕರ್ನಾಟಕ2 hours ago

Utthana Essay Competition 2024: ಉತ್ಥಾನ ಪ್ರಬಂಧ ಸ್ಪರ್ಧೆಗೆ ಬರಹ ಕಳುಹಿಸಿ; 10,000 ರೂ. ಬಹುಮಾನ ಪಡೆಯಿರಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 day ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 day ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌