QR Code: ನೀವು ಖರೀದಿಸಿದ ಔಷಧ ನಕಲಿಯೋ, ಅಸಲಿಯೋ ತಿಳಿಯುವುದು ಇನ್ನು ಬಲು ಸುಲಭ! - Vistara News

ದೇಶ

QR Code: ನೀವು ಖರೀದಿಸಿದ ಔಷಧ ನಕಲಿಯೋ, ಅಸಲಿಯೋ ತಿಳಿಯುವುದು ಇನ್ನು ಬಲು ಸುಲಭ!

QR Code: ಮಾರುಕಟ್ಟೆಯಲ್ಲಿ ನಕಲಿ ಹಾಗೂ ಕಡಿಮೆ ದರ್ಜೆಯ ಔಷಧಗಳ ಕಾರುಬಾರು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಬಳಕೆದಾರರ ನಕಲಿ ಔಷಧಗಳನ್ನು ಸರಳವಾಗಿ ಕಂಡು ಹಿಡಿಯುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.

VISTARANEWS.COM


on

Fake Medicine
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನಕಲಿ ಔಷಧಗಳ (Fake Medicine) ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರವು (Central Government), ಆಗಸ್ಟ್ 1ರಿಂದ ವಿಶಿಷ್ಟ ಟ್ರ್ಯಾಕ್ ಆ್ಯಂಡ್ ಟ್ರೇಸ್ ಕ್ರಮವನ್ನು ಜಾರಿಗೆ ತಂದಿದೆ. ಜನರು ಇನ್ನು ಮುಂದೆ ತಾವು ಖರೀದಿಸಿದ ಔಷಧವು ಅಸಲಿಯೋ ನಕಲಿಯೋ ಎಂಬುದನ್ನು ಸರಳವಾಗಿ ಪತ್ತೆಹಚ್ಚಬಹುದಾಗಿದೆ. ಖರೀದಾದರರು ಕ್ಯೂಆರ್ ಕೋಡ್ (QR Code) ಬಳಸಿಕೊಂಡ ಔಷಧದ ಸಾಚಾತನವನ್ನು ತಿಳಿಯಬಹುದಾಗಿದೆ.

ಆಗಸ್ಟ್ 1ರಿಂದ ಜಾರಿಗೆ ಬರಲಿರುವ ಈ ಟ್ರ್ಯಾಕ್ ಆ್ಯಂಡ್ ಟ್ರೇಸ್ ಕ್ರಮವು ಖರೀದಿದಾರರಿಗೆ ನೆರವು ಒದಗಿಸಲಿದೆ. ಒಂದು ವೇಳೆ, ತಾವು ಖರೀದಿಸಿದ ಔಷಧದ ಸಾಚಾತನದ ಬಗ್ಗೆ ಅನುಮಾನ ಬಂದರೆ, ಪ್ಯಾಕೇಜಿಂಗ್ ಮೇಲೆ ಪ್ರಿಂಟ್ ಮಾಡಲಾಗಿರುವ ಕ್ಯೂಆರ್ ಕೋಡ್ ಮೂಲಕ ಅದರ ಅಸಲಿಯತ್ತನ್ನು ತಿಳಿದುಕೊಳ್ಳಬಹುದಾಗಿದೆ. ಒಮ್ಮೆ ನೀವು ಔಷಧ ಮೇಲಿರುವ ಕ್ಯೂಆರ್‌ ಕೋಡ್ ಸ್ಕ್ಯಾನ್ ಮಾಡಿದರೆ, ಆ ಔಷಧದ ಸಂಪೂರ್ಣ ಮಾಹಿತಿಯು ದೊರೆಯಲಿದೆ. ಅಂದರೆ, ಔಷಧ ಉತ್ಪಾದನೆಯ ಅನುಮತಿ, ಬ್ಯಾಚ್ ನಂಬರ್ ಸೇರಿದಂತೆ ಇನ್ನಿತರ ಮಾಹಿತಿಯನ್ನು ಬಳಕೆದಾರರು ತಿಳಿದುಕೊಳ್ಳಬಹುದಾಗಿದೆ.

ಆಗಸ್ಟ್ 1ರಿಂದ ಮೊದಲ ಹಂತದ ಕ್ರಮವು ಜಾರಿಯಾಗಲಿದೆ. ಈ ವೇಳೆ, ಸುಮಾರು ಟಾಪ್ ಸೆಲ್ಲಿಂಗ್ 300 ಮೆಡಿಸಿನ್‌ಗಳ ಮೇಲೆ ಕ್ಯೂಆರ್ ಕೋಡ್ ಇರಲಿದೆ. ಒಟ್ಟಾರೆ ಫಾರ್ಮಾ ಮಾರುಕಟ್ಟೆಯು ಸುಮಾರು 50 ಸಾವಿರ ಕೋಟಿ ವಹಿವಾಟು ನಡೆಸುತ್ತಿದ್ದು, ಇದರಲ್ಲಿ ಆಂಟಿಬಯಾಟಿಕ್ಸ್, ಹೃದಯ ಸಂಬಂಧಿ ಮಾತ್ರೆಗಳು, ನೋವು ನಿವಾರಕ ಮಾತ್ರೆಗಳು, ಮಧುಮೇಹ ವಿರೋಧ ಮತ್ತು ಅಲರ್ಜಿ ವಿರೋಧಿ ಔಷಧಗಳ ಮಾರಾಟವು ಸೇರಿದೆ. ಆಂಟಿ-ಡಯಾಬಿಟಿಕ್ಸ್ ಮಿಕ್ಸ್‌ಟಾರ್ಡ್ ಮತ್ತು ಗ್ಲೈಕೋಮೆಟ್-ಜಿಪಿ, ಆ್ಯಂಟಿಬಯೋಟಿಕ್ಸ್ ಆಗ್ಮೆಂಟಿನ್ ಮತ್ತು ಮೊನೊಸೆಫ್ ಮತ್ತು ಗ್ಯಾಸ್ಟ್ರೊ ಮೆಡಿಸಿನ್ ವ್ಯಾಪಾರವು ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ 2 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದೆ.

ಈ ಸುದ್ದಿಯನ್ನೂ ಓದಿ: DCGI : ನಕಲಿ ಔಷಧ ತಯಾರಿಸಿದ 18 ಕಂಪನಿಗಳ ಲೈಸೆನ್ಸ್‌ ರದ್ದು

ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ನಕಲಿ ಮತ್ತು ಕಡಿಮೆ ದರ್ಜೆಯ ಔಷಧಗಳು ದಾಂಗುಡಿ ಇಟ್ಟಿವೆ. ಈಗಾಗಲೇ ಇಂಥ ನಕಲಿ ಔಷಧಗಳನ್ನು ನಿಯಂತ್ರಕ ಏಜೆನ್ಸಿಗಳು ವಶಪಡಿಸಿಕೊಂಡಿವೆ. ಈ ಪೈಕಿ ಅಬ್ಬೋಟ್ಸ್ ಥೈರಾಯ್ಡ್ ಮೆಡಿಕೇಷನ್ ಥೈರೋನಾರ್ಮ್ ಔಷಧವು ಸೂಚಿಸಲಾದ ಗುಣಮಟ್ಟದ ಔಷಧವಲ್ಲ ಮತ್ತು ನಕಲಿಯಾಗಿದೆ ಎಂದು ಸಂಬಂಧಿಸಿದ ಏಜೆನ್ಸಿಗಳು ತಿಳಿಸಿವೆ. ಮತ್ತೊಂದು ಉದಾಹರಣೆಯನ್ನು ನೀಡುವುದಾದರೆ, ಗ್ಲೆನ್‌ಮಾರ್ಕ್‌ನ ರಕ್ತದೊತ್ತಡ ಸಂಬಂಧಿ ಮಾತ್ರೆ ತೆಲ್ಮಾ-ಎಚ್ ಕೂಡ ನಕಲಿಯಾಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Phalodi Satta Bazar: ಚುನಾವಣಾ ಫಲಿತಾಂಶದ ಬಗ್ಗೆ ಸಟ್ಟಾ ಬಜಾರ್‌ನ ಪಕ್ಕಾ ಭವಿಷ್ಯವಾಣಿ; ಈ ಮಾರ್ಕೆಟ್‌ನ ಹಿನ್ನೆಲೆ ಏನು?

Phalodi Satta Bazar: ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು.

VISTARANEWS.COM


on

Phalodi satta market
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ಐದನೇ ಹಂತದ ಮತದಾನ ಪೂರ್ಣಗೊಂಡಿದ್ದು, ಈಗಿನಿಂದಲೇ ಸೋಲು ಗೆಲವಿನ ಲೆಕ್ಕಾಚಾರ ಒಂದೆಡೆಯಾದರೆ ಬಿಜೆಪಿ(BJP)ಯ 400 ಸ್ಥಾನಗಳ ಟಾರ್ಗೆಟ್‌ ಬಗೆಗಿನ ಚರ್ಚೆ ಮತ್ತೊಂದೆಡೆ. ಇದರ ನಡುವೆ ನಿಖರ ಚುನಾವಣಾ ಫಲಿತಾಂಶ(Election Result)ದ ಬಗ್ಗೆ ನಿಖರವಾದ ಸಮೀಕ್ಷೆ ವರದಿಗೆ ಖ್ಯಾತಿ ಪಡೆದಿರುವ ಫಲೋಡಿ ಸಟ್ಟಾ ಬಜಾರ್‌(Phalodi Satta Bazar) ಫಲಿತಾಂಶದ ಭವಿಷ್ಯವಾಣಿಯತ್ತ ಎಲ್ಲರ ಕಣ್ಣು ನೆಟ್ಟಿದೆ.‍ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡ ಬಳಿಕ ಫಲಿತಾಂಶದ ಬಗ್ಗೆ ಭವಿಷ್ಯವಾಣಿ ನುಡಿದಿದ್ದ ಸಟ್ಟಾ ಬಜಾರ್‌, ಬಿಜೆಪಿ ನೇತೃತ್ವದ ಎನ್‌ಡಿಎ ಕೇವಲ 329 ರಿಂದ 332 ಸೀಟು ಗೆಲ್ಲಬಹುದೆಂದು ಹೇಳುವ ಮೂಲಕ ಬಿಜೆಪಿಗೆ ಶಾಕ್‌ ಕೊಟ್ಟಿತ್ತು.

ಫಲೋಡಿ ಸಟ್ಟಾ ಮಾರುಕಟ್ಟೆ ಇತಿಹಾಸವೇನು?

ಇದೀಗ ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ತಲುಪಿದ್ದು, ಇನ್ನುಳಿದಿರುವುದು ಕೇವಲ ಎರಡೇ ಹಂತದ ಚುನಾವಣೆ. ಹೀಗಿರುವಾಗ ಮತ್ತೊಮ್ಮೆ ಚುನಾವಣಾ ಫಲಿತಾಂಶದ ಭವಿಷ್ಯವಾಣಿಗಾಗಿ ರಾಜಸ್ಥಾನ ಮೂಲಕ ಫಲೋಡಿ ಸಟ್ಟಾ ಬಜಾರ್‌ನತ್ತ ಎಲ್ಲರೂ ಮುಖಮಾಡಿದ್ದಾರೆ. ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು. ಕಾನೂನೂ ಬಾಹಿರವಾಗಿದ್ದರೂ ಕ್ರಿಕೆಟ್‌, ಐಪಿಎಲ್‌ ಸಂದರ್ಭದಲ್ಲಿ ಇಲ್ಲಿ ಅತಿ ಹೆಚ್ಚಾಗಿ ಬೆಟ್ಟಿಂಗ್‌ ನಡೆಯುತ್ತದೆ ಎಂಬ ಆರೋಪ ಕೇಳಿಬರುತ್ತದೆ.

ಫಲೋಡಿ ಮಾರುಕಟ್ಟೆಗೆ ಎಂಟ್ರಿ ಸಿಗೋಗು ಅಷ್ಟು ಸುಲಭ ಅಲ್ಲ

ಫಲೋಡಿ ಸಟ್ಟಾ ಮಾರುಕಟ್ಟೆಯನ್ನು ಪ್ರವೇಶಿಸುವುದು ಹೊರಗಿನವರಿಗೆ ಅಷ್ಟೊಂದು ಸುಲಭದ ಮಾತಲ್ಲ. ಸಾಮಾನ್ಯವಾಗಿ ಏಜೆಂಟ್‌ಗಳ ಮೂಲಕ ಹೋಗಬೇಕಾಗುತ್ತದೆ. ಬೆಟ್ಟಿಂಗ್‌ನಲ್ಲಿ ಭಾಗವಹಿಸುವವರು ಮುಂಚಿತವಾಗಿ ಹಣ ಪಾವತಿಸಬೇಕು. ಈ ಮಾರುಕಟ್ಟೆಯಲ್ಲಿ ಎಲ್ಲಾ ಹಣಕಾಸು ವಹಿವಾಟುಗಳು ಡಿಜಿಟಲ್ ಚಾನೆಲ್‌ಗಳ ಮೂಲಕ ನಡೆಸಲ್ಪಡುತ್ತವೆ. ವಿಷಯದ ಆಧಾರದ ಮೇಲೆ ಬೆಟ್ಟಿಂಗ್‌ ಮೊತ್ತವು ಬದಲಾಗುತ್ತದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಾರುಕಟ್ಟೆ ಕಾರ್ಯ ನಿರ್ವಹಿಸುತ್ತಿದ್ದು, ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಇದು ಅಕ್ರಮ ಚಟುವಟಿಕೆ ಆಗಿದ್ದರೂ ಚುನಾವಣಾ ಭವಿಷ್ಯ ಕ್ಷೇತ್ರ ನುಡಿಯುವುದರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ.

ಚುನಾವಣಾ ಭವಿಷ್ಯವಾಣಿ ಏನು?

ಮೇ 13, 2024 ರಂದು, ಬೆಟ್ಟಿಂಗ್ ಮಾರುಕಟ್ಟೆಯು ಬಿಜೆಪಿ ಈ ಬಾರಿ ಉತ್ತಮ ಪ್ರದರ್ಶನ ತೋರಲಿದೆ ಎಂದು ಹೇಳಿತ್ತು, ಬಿಜೆಪಿ ಸುಮಾರು 300 ಸ್ಥಾನಗಳನ್ನು ಗೆಲ್ಲಲಿದ್ದು. ಹೋಲಿಸಿದರೆ, ಕಾಂಗ್ರೆಸ್ 40 ರಿಂದ 42 ಸ್ಥಾನಗಳನ್ನು ಪಡೆಯಬಹುದೆಂದು ನಿರೀಕ್ಷಿಸಿತ್ತು. ಉತ್ತರಪ್ರದೇಶದಲ್ಲಿ ಮತದಾನದ ಪ್ರಮಾಣ ಕಡಿಮೆಯಾದರೂ ಬಿಜೆಪಿ 80 ಸ್ಥಾನಗಳಲ್ಲಿ 62 ರಿಂದ 65 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ರಾಷ್ಟ್ರವ್ಯಾಪಿ ಕಾಂಗ್ರೆಸ್ 70–85 ಸ್ಥಾನಗಳನ್ನು ಗೆಲ್ಲಲಿದ್ದು, ಬಿಜೆಪಿ 280–290 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬೆಟ್ಟಿಂಗ್ ಮಾರುಕಟ್ಟೆ ಭವಿಷ್ಯ ನುಡಿದಿತ್ತು. ಫಲೋಡಿ ಸತ್ತಾ ಬಜಾರ್ ಮತ್ತು ಮಾಧ್ಯಮ ಮೂಲಗಳು ಬಿಜೆಪಿಯು ಒಟ್ಟಾರೆಯಾಗಿ 335 ರಿಂದ 340 ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಹೊಂದಿದೆ ಎಂದು ಭವಿಷ್ಯ ನುಡಿದಿತ್ತು.

ಇದನ್ನೂ ಓದಿ:Bangladesh MP Missing Case: ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

Continue Reading

ದೇಶ

Bangladesh MP Missing Case: ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

Bangladesh MP Missing Case:ದೀರ್ಘಾಕಾಲಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಜೀಂ ದರ್ಶನಾ ಗಡಿ ಮೂಲಕ ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು. ಅದೇ ದಿನ ಬಾರಾನಗರ್‌ನಲ್ಲಿರುವ ಅವರ ಸ್ನೇಹಿತಿ ಗೋಪಾಲ್‌ ಬಿಸ್ವಾಸ್‌ ಮನೆಗೆ ತೆರಳಿದ್ದರು. ಎರಡು ದಿನಗಳ ನಂತರ ಮೇ 14ರಂದು ಅವರು ಸ್ನೇಹಿತನ ಮನೆಯಿಂದ ಇಲ್ಲೇ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದರು. ಅಂದೇ ಅಥವಾ ಮರುದಿನ ವಾಪಾಸ್‌ ಬರುವುದಾಗಿ ಗೋಪಾಲ್‌ ಬಿಸ್ವಾಸ್‌ಗೆ ಅಜೀಂ ಹೇಳಿ ಹೋಗಿದ್ದರು. ಇದಾದ ಬಳಿಕ ಅವರು ವಾಪಾಸ್‌ ಮರಳಿ ಬರಲೇ ಇಲ್ಲ. ಇದರಿಂದ ಗಾಬರಿಗೊಂಡ ಗೋಪಾಲ್‌ ಪೊಲೀಸರಿಗೆ ದೂರು ನೀಡಿ ಘಟನೆ ಬಗ್ಗೆ ವಿವರಿಸಿದ್ದಾರೆ.

VISTARANEWS.COM


on

Bangladesh MP Missing Case
Koo

ಕೋಲ್ಕತ್ತಾ: ಚಿಕಿತ್ಸೆಗೆಂದು ಪಶ್ಚಿಮ ಬಂಗಾಳದ ಕೋಲ್ಕತ್ತಾ(Kolkata)ಕ್ಕೆ ಬಂದು ನಿಗೂಢವಾಗಿ ಕಣ್ಮರೆಯಾಗಿದ್ದ ಬಾಂಗ್ಲಾದೇಶ(Bangladesh MP Missing Case) ಸಂಸದ ಅನ್ವರುಲ್‌ ಅಜೀಂ(Anwarul Azim) ಶವವಾಗಿ ಪತ್ತೆಯಾಗಿದ್ದಾರೆ. ಕೋಲ್ಕತ್ತಾದ ನ್ಯೂ ಟೌನ್‌ನಲ್ಲಿರುವ ಮನೆಯೊಂದರಲ್ಲಿ ಅಜೀಂ ಮೃತದೇಹ ಸಿಕ್ಕಿದ್ದು, ಇದೊಂದು ಪೂರ್ವ ನಿಯೋಜಿತ ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ:

ದೀರ್ಘಾಕಾಲಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಜೀಂ ದರ್ಶನಾ ಗಡಿ ಮೂಲಕ ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು. ಅದೇ ದಿನ ಬಾರಾನಗರ್‌ನಲ್ಲಿರುವ ಅವರ ಸ್ನೇಹಿತಿ ಗೋಪಾಲ್‌ ಬಿಸ್ವಾಸ್‌ ಮನೆಗೆ ತೆರಳಿದ್ದರು. ಎರಡು ದಿನಗಳ ನಂತರ ಮೇ 14ರಂದು ಅವರು ಸ್ನೇಹಿತನ ಮನೆಯಿಂದ ಇಲ್ಲೇ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದರು. ಅಂದೇ ಅಥವಾ ಮರುದಿನ ವಾಪಾಸ್‌ ಬರುವುದಾಗಿ ಗೋಪಾಲ್‌ ಬಿಸ್ವಾಸ್‌ಗೆ ಅಜೀಂ ಹೇಳಿ ಹೋಗಿದ್ದರು. ಇದಾದ ಬಳಿಕ ಅವರು ವಾಪಾಸ್‌ ಮರಳಿ ಬರಲೇ ಇಲ್ಲ. ಇದರಿಂದ ಗಾಬರಿಗೊಂಡ ಗೋಪಾಲ್‌ ಪೊಲೀಸರಿಗೆ ದೂರು ನೀಡಿ ಘಟನೆ ಬಗ್ಗೆ ವಿವರಿಸಿದ್ದಾರೆ.

ಅಜೀಂ ಬಾಂಗ್ಲಾದೇಶ ಮಾತ್ರವಲ್ಲದೇ ಭಾರತದ ಸಿಮ್‌ ಕೂಡ ಹೊಂದಿದ್ದಾರೆ. ಅವರ ಎರಡೂ ನಂಬರ್‌ ಸ್ವಿಚ್‌ ಆಫ್‌ ಬರ್ತಿದೆ. ಅವರು ತಮ್ಮ ಜೊತೆಗೆ ತಂದಿದ್ದ ಎಲ್ಲಾ ವಸ್ತುಗಳನ್ನು ತಮ್ಮ ಮನೆಯಲ್ಲೇ ಬಿಟ್ಟು ಹೋಗಿದ್ದಾರೆ ಎಂದು ಗೋಪಾಲ್‌ ಹೇಳಿದ್ದಾರೆ. ಮತೊಂದೆಎ ಅಜೀಂ ಪುತ್ರಿ ಮುಮ್ತರಿನ್‌ ಫಿರ್ದೋದ್‌ ತಮ್ಮ ತಂದೆ ಕಣ್ಮರೆ ಆಗಿರುವ ಬಗ್ಗೆ ಢಾಕಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಇನ್ನು ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ, ದಿಲ್ಲಿ ಮತ್ತು ಕೋಲ್ಕತ್ತಾದಲ್ಲಿರುವ ತಮ್ಮ ರಾಜತಾಂತ್ರಿಕ ಅಧಿಕಾರಿಗಳಿಗೆ ವಿಚಾರವನ್ನು ತಿಳಿಸಿದ್ದಾರೆ. ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಜೀಂಗಾಗಿ ಹುಡುಕಾಟ ಶುರುವಾಗಿತ್ತು. ಅಲ್ಲದೇ ಬಾಂಗ್ಲಾದೇಶ ರಾಯಭಾರ ಕಚೇರಿ ಕೂಡ ತನಿಖೆ ಕೈಗೆತ್ತಿಕೊಂಡಿತ್ತು.

ಮೂವರು ಅರೆಸ್ಟ್‌:

ಘಟನೆ ಬಗ್ಗೆ ಢಾಕಾದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದ ಅಲ್ಲಿನ ಗೃಹ ಸಚಿವ ಅಸಾದುದ್ದೀನ್‌ ಖಾನ್‌, ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸಂಸದ ಅಜೀಂ ಕೊಲೆಯಾಗಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದಂತೆ ಬಾಂಗ್ಲಾದೇಶ ಪೊಲೀಸರುಮೂವರನ್ನು ಅರೆಸ್ಟ್‌ ಮಾಡಿದ್ದಾರೆ. ಅಜೀಂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಹಂತಕರು ಬಾಂಗ್ಲಾದೇಶಿಗರೇ. ಇನ್ನು ಈ ಕೊಲೆಗೆ ಕಾರಣ ಏನೆಂಬುದು ಮುಂದಿ ದಿನಗಳಲ್ಲಿ ತನಿಖೆಯಲ್ಲಿ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bangladesh MP Missing: ಕೋಲ್ಕತ್ತಾಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಮಿಸ್ಸಿಂಗ್‌

ಅವಾಮಿ ಲೀಗ್‌ ಪಕ್ಷದಿಂದ ಮೂರು ಬಾರಿ ಸಂಸದರಾಗಿ ಗೆದ್ದಿರುವ ಅನ್ವರುಲ್‌ ಅಜೀಂ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರು ಆಗಾಗ ಹೆಚ್ಚಿನ ಚಿಕಿತ್ಸೆಗೆಂದು ಕೋಲ್ಕತ್ತಾಗೆ ಬಂದಿದ್ದರು. ಇದಾದ ಬಳಿಕ ಅವರು ತಮ್ಮ ಕುಟುಂಬಸ್ಥರ ಜತೆ ಸಂಪರ್ಕ ಕಳೆದುಕೊಂಡಿದ್ದಾರೆ. ಅದೂ ಅಲ್ಲದೇ ಮೇ 14 ರ ನಂತರ ಅವರ ಮೊಬೈಲ್‌ ಕೂಡ ಸ್ವಿಚ್‌ ಆಫ್‌ ಆಗಿತ್ತು.

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

ಧವಳ ಧಾರಿಣಿ ಅಂಕಣ (Dhavall Dharini): ಗೌತಮ ಬುದ್ಧನೇ ನೇರವಾಗಿ ಬೋಧಿಸಿದ ತತ್ತ್ವಗಳನ್ನು ಗಮನಿಸಿದಾಗ ಆತನ ತತ್ತ್ವಗಳು ಭಾರತೀಯ ದರ್ಶನ ಶಾಸ್ತ್ರದ ಮುನ್ನುಡಿಯಾಗಿವೆ ಎನ್ನಬಹುದು. ಇಂದು ಬುದ್ಧ ಪೂರ್ಣಿಮಾ (Buddha Purnima) ಹಿನ್ನೆಲೆಯಲ್ಲಿ ಆತನ ಚಿಂತನೆಗಳ ಬಗ್ಗೆ ಒಂದು ಅವಲೋಕನ.

VISTARANEWS.COM


on

dhavala dharini column buddha ಧವಳ ಧಾರಿಣಿ
Koo
dhavala dharini by Narayana yaji

­ಧವಳ ಧಾರಿಣಿ ಅಂಕಣ: ಭಾರತದ ಇತಿಹಾಸದಲ್ಲಿ ಗೌತಮ ಬುದ್ಧ (Gautama Buddha) ಮಹತ್ವದ ಸ್ಥಾನ ಪಡೆಯುವುದು ಆತ ಹೊಸ ಧರ್ಮವನ್ನು ಸ್ಥಾಪಿಸಿದ್ದಾನೆ ಎನ್ನುವುದಕ್ಕೆ ಅಲ್ಲ. ಬೌದ್ಧ ಧರ್ಮವನ್ನು (buddhism) ನೇರವಾಗಿ ಬುದ್ಧನೇ ಸ್ಥಾಪಿಸಲಿಲ್ಲ. ಆತನ ನಿರ್ವಾಣದ ನಂತರದ ಇನ್ನೂರು ವರ್ಷಗಳ ನಂತರ ಆತನ ಶಿಷ್ಯರು ಒಂದೆಡೆ ಸೇರಿ ಬುಧ್ದನ ತತ್ತ್ವಕ್ಕೆ ಒಂದು ಧಾರ್ಮಿಕ ಸ್ವರೂಪವನ್ನು ಕೊಟ್ಟರು. ಶಾಕ್ಯಮುನಿ ಗೌತಮನಿಗೆ ಲೋಕದ ಜನತೆ ಬದುಕುತ್ತಿರುವ ವಿಧಾನದಲ್ಲಿ ಬದಲಾವಣೆ ತರಬೇಕಾಗಿತ್ತು. ವರ್ಣವ್ಯವಸ್ಥೆಯ ಮೂಲಕ ಅಸ್ತಿತ್ವಕ್ಕೆ ಬಂದ ಬ್ರಾಹ್ಮಣಿಕೆಯೆನ್ನುವುದು ಅದಾಗ ಜಾತಿಯಾಗಿ ಬದಲಾವಣೆಯಾಗಿತ್ತು. ಆದರೂ ಅದು ಅಷ್ಟು ಗಟ್ಟಿಯಾಗಿ ಅನುಷ್ಟಾನಕ್ಕೆ ಬಂದಿರಲಿಲ್ಲ. ಬ್ರಾಹ್ಮಣರ ಪಾರಮ್ಯವೆನ್ನುವುದು ಧಾರ್ಮಿಕ ರಂಗದಲ್ಲಿ ಇತ್ತು. ಆತನ ಜನನದ ಕಾಲಘಟ್ಟವಾದ ಸುಮಾರು ಕ್ರಿ. ಪೂ. 623 ಶತಮಾನದಲ್ಲಿ ಭಾರತ ಧಾರ್ಮಿಕವಾಗಿ ಹಲವು ಪಲ್ಲಟಗಳನ್ನು ಅನುಭವಿಸಿತ್ತು. ಸನಾತನ ಧರ್ಮದ ಆಚರಣೆಯಲ್ಲಿ ಸಮಗ್ರವಾದ ದಿಕ್ಕುಗಳನ್ನು ತೋರಿಸುವವರು ಇರಲಿಲ್ಲ. ಧಾರ್ಮಿಕ ನಾಯಕತ್ವವೆನ್ನುವದು ತತ್ವಜ್ಞಾನಿಗಳು ತಮಗೆ ತೋಚಿದ ದಿಕ್ಕಿನಲ್ಲಿ ಅರ್ಥೈಸಿಕೊಂಡು ಅದನ್ನೇ ಬೋಧಿಸುತ್ತಿದ್ದರು. ಈ ಕಾಲಘಟ್ಟದಲ್ಲಿಯೇ ತಂತ್ರಶಾಸ್ತ್ರ, ಅಘೋರಿಗಳು, ಕಾಪಾಲಿಕರು ಹೀಗೆ ಸಾಧನೆಗಳಿಗೆ ಸಾತ್ವಿಕಮಾರ್ಗಗಳ ಜೊತೆಗೆ ಹಟಯೋಗವೂ ಸೇರಿಹೋಗಿತ್ತು. ರಾಜರುಗಳು ಯಾವ ಹಾದಿಯನ್ನು ಹಿಡಿಯುತ್ತಿದ್ದಾರೋ ಅದೇ ಹಾದಿಯನ್ನು ಜನಸಾಮಾನ್ಯರು ನಡೆದುಕೊಳ್ಳುತ್ತಿದ್ದರು.

ಇಂತಹ ಹೊತ್ತಿನಲ್ಲಿ ಪ್ರವೇಶ ಮಾಡಿದ ಬುದ್ಧನ ಉಪದೇಶಗಳು ಸನಾತನ ಧರ್ಮಕ್ಕೇ ಹೊಸ ವ್ಯಾಖ್ಯಾನವನ್ನು ಕೊಟ್ಟವು. ಹಾಗಂತ ಆತ ಭಾರತೀಯ ದರ್ಶನ ಶಾಸ್ತ್ರಕ್ಕೆ ವಿಲೋಮವಾದದ್ದನ್ನು ತನ್ನು ಬೋಧನೆಯಲ್ಲಿ ಹೇಳಲಿಲ್ಲ. ಬುದ್ಧ ಅರ್ಥವಾಗಬೇಕಾದರೆ ಭಾರತೀಯ ತತ್ತ್ವಶಾಸ್ತ್ರ ಅರ್ಥವಾಗಬೇಕು. ಸ್ವರ್ಗಕಾಮಕ್ಕಾಗಿ ಯಜ್ಞ ಯಾಗಾದಿಗಳು ಎಂದು ಸಾರುತ್ತಿದ ಪುರಾಣಗಳ ನಡುವೆ ವೇದಾಂತದ ಪರಮ ಸತ್ಯವನ್ನು ಆತನ ಉಪದೇಶಗಳಲ್ಲಿ ಗಮನಿಸಬಹುದಾಗಿದೆ. “ವೇದಗಳಲ್ಲಿ ಅಡಗಿದ್ದ ಸತ್ಯಗಳನ್ನು ಹೊರತಂದು ಜಗತ್ತಿಗೆಲ್ಲ ಘಂಟಾಘೋಷವಾಗಿ ಸಾರಿದ ವಿಶಾಲಹೃದಯಿಯಾಗಿ ಬುದ್ದ ಕಾಣಿಸಿಸಿಕೊಳ್ಳುತ್ತಾನೆ ಎಂದು ವಿವೇಕಾನಂದರು ಹೇಳುತ್ತಾರೆ. “ಕಿಸಾಗೌತಮಿಗೆ ಆಕೆಯ ಮಗನ ಸಾವಿನ ನೋವನ್ನೂ ಮರೆಯಿಸಿ ಭವಚಕ್ರಗಳ ಬಂಧನದ ಜಗತ್ತಿನ ಮಾಯೆಯನ್ನು ಹೋಗಲಾಡಿಸಿದ ಬುದ್ಧ ಬಿಡಿಸಿದಷ್ಟೂ ಬಿಡಿಸಲಾಗದ ಒಗಟು”. ಸನಾತನ ಧರ್ಮದ ಸಾರವೇ ಬುದ್ಧನ ಉಪದೇಶವೆನ್ನಬಹುದಾಗಿದೆ. ಅದಕ್ಕೇ ಸ್ವಾಮಿ ವಿವೇಕಾನಂದರು ತಮ್ಮ ಕೃತಿಶ್ರೇಣಿಯಲ್ಲಿ “ಭಾರತದಲ್ಲಿ ಬೌದ್ಧಧರ್ಮವು ನಾಶವಾಗಲಿಲ್ಲ, ಉಪನಿಷತ್ತುಗಳಲ್ಲಿ ಹುಟ್ಟಿದೆ. ಅದು ನವಯುಗದ ಹಿಂದೂ ಧರ್ಮವಾಯಿತು” ಎನ್ನುತ್ತಾರೆ.

ಜೀವನದ ನಶ್ವರತೆಯೆನ್ನುವುದು ಬುದ್ಧನ ಬದುಕಿನಲ್ಲಿ ಬಂದ ಮೊದಲ ತಿರುವು. ಪ್ರಸಿದ್ಧವಾದ ಆತನ ವಾಕ್ಯ “ಆಸೆಯೇ ದುಃಖಕ್ಕೆ ಕಾರಣ” ಎನ್ನುವುದು ನೋಡಲು ಸರಳವಾಗಿ ಕಂಡರೂ ಈ ಸತ್ಯವನ್ನು ಮನಗಾಣುವಲ್ಲಿ ಬುದ್ಧ ಸುಮಾರು ಆರುವರ್ಷಗಳ ಕಾಲ ಹುಡುಕಾಡಿದ್ದಾನೆ. ತನ್ನ ಕುಲಗುರು ಅಸಿತದೇವಲನಿಂದ ಹಿಡಿದು ಆಲಾರಾ ಕಲಮ್, ಉದ್ಧತ ರಾಮಪುತ್ತ ಮುಂತಾದ ಅನೇಕರ ಹತ್ತಿರ ಈ ವಿಷಯವನ್ನು ಚರ್ಚಿಸಿದ್ದಾನೆ. ಹಿಮಾಲಯದ ತಪ್ಪಲಿನ ಕೆಲ ಸನ್ಯಾಸಿಗಳು ಪ್ರಾಪಂಚಿಕ ಸುಖ ಮತ್ತು ದುಃಖಗಳ ಕಾರಣವನ್ನು ಅರಿತು ವೇದೋಪನಿಷತ್ತುಗಳ ನಿಜವಾದ ಅರ್ಥಗಳನ್ನು ತಿಳಿದು ಅದನ್ನೇ ಬೊಧಿಸುತ್ತಿದ್ದರು. ಅವರೆಲ್ಲರೂ ಈತನಿಗೆ ತಮ್ಮಲ್ಲಿದ ವಿದ್ಯೆಯನ್ನು ಧಾರೆ ಎರೆದರೂ ಅವೆಲ್ಲವೂ ಬದುಕಿನ ಪರಮ ಸತ್ಯವನ್ನು ಸಾಧಿಸುವತ್ತ ಪ್ರಯೋಜನಕ್ಕೆ ಬಾರದವುಗಳು ಎನ್ನುವುದು ಅರಿವಾಯಿತು. ಉದ್ಧಕ ರಾಪಪುತ್ತನ ಹತ್ತಿರ ಸಮಾಧಿಗೆ ಹೋಗುವ ತಂತ್ರವನ್ನು ಕೇವಲ ಹದಿನೈದನೇ ದಿನಗಳಲ್ಲಿ ಕಲಿತ. ಆಗ ಅವನಿಗೆ ಅರಿವಾಗಿದ್ದು ಎಚ್ಚರಕ್ಕೂ ಮತ್ತು ಸಮಾಧಿಗೂ ಇರುವ ಸ್ಥಿತಿಯೆಂದರೆ ಗ್ರಹಿಕೆ ಮತ್ತು ಗ್ರಹಿಕೆಯಲ್ಲದ ಸ್ಥಿತಿ ಎನ್ನುವುದು. ಆದರೆ ಎಚ್ಚರಾದ ಮೇಲೆ ಮತ್ತೆ ಈ ಲೋಕದ ಅವಸ್ಥೆಗಳಲ್ಲೇ ಇರುತ್ತೇವೆ ಎನ್ನುವುದು ಅರಿತಾಗ ಸಮಾಧಿಯೆನ್ನುವುದು ಸ್ವಪ್ನ ಅಥವಾ ಸುಷುಪ್ತಿಯ ಅವಸ್ಥೆಗಳಲ್ಲಿರುವ ಸ್ಥಿತಿಯೇ ಹೊರತೂ ಬೇರೆನೂ ಅಲ್ಲವೆಂದು ಅರಿವಿಗೆ ಬಂತು. ಪರಿಪೂರ್ಣ ಜ್ಞಾನವೆನ್ನುವುದನ್ನು ಸಾಧಿಸಿದ ವ್ಯಕ್ತಿಗೆ ಮತ್ತೆ ಲೌಕಿಕ ಬಾಧಿಸಬಾರದು. ಹಾಗಾಗಿ ಯಾವುದು ಸ್ಥಾಯಿ ಸ್ವರೂಪವಲ್ಲವೋ ಅವೆಲ್ಲವೂ ಅವಿದ್ಯೆ ಎನ್ನುವ ತೀರ್ಮಾನಕ್ಕೆ ಬಂದವ ಗಯಾಕ್ಕೆ ಬಂದು ಅಲ್ಲಿನ ಸ್ಮಶಾನದಲ್ಲಿರುವ ಬೋಧಿವೃಕ್ಷದ ಕೆಳಗೆ ಧ್ಯಾನಮಾಡಲು ತೊಡಗಿದ. ಜ್ಞಾನವೆನ್ನುವದು ಪ್ರಾಪಂಚಿಕ ವಸ್ತುಗಳಿಂದ ವಿಮುಖನಾಗುವದಲ್ಲ, ನಮ್ಮ ಉಸಿರು, ಹಕ್ಕಿಯ ಹಾಡು, ಎಲೆ, ಸೂರ್ಯನ ಕಿರಣ ಇವೆಲ್ಲವೂ ಧ್ಯಾನಕ್ಕೆ ಸಾಧನವಾಗಬಹುದೆಂದು ಆತನಿಗೆ ಅನಿಸಿತು. ಒಂದು ಧೂಳಿನ ಕಣದಿಂದಲೇ ಸಮಗ್ರವಾಗಿ ಬ್ರಹ್ಮಾಂಡದ ಲಕ್ಷಣವನ್ನು ಅರಿಯಬಹುದೆನ್ನುವ ವಿಷಯ ಹೊಳೆಯಿತು. ಜ್ಞಾನೋದಯವೆನ್ನುವದು ವಾಸ್ತವ ಪ್ರಪಂಚದಲ್ಲಿದೆಯೇ ಹೊರತು ಕಾಣದ ಆತ್ಮ ಅಥವಾ ಬ್ರಹ್ಮದ ವಿಷಯದಲ್ಲಿ ಇಲ್ಲ. ಆತ್ಮ ಪ್ರತ್ಯೇಕವೆನ್ನುವ ಭಾವನೆಯನ್ನು ಮೀರಿ ಪ್ರಕೃತಿಯ ಪ್ರತೀ ವಸ್ತುವಿನಲ್ಲಿ ಸೌಂದರ್ಯವಿದೆಯೆನ್ನುವದನ್ನು ಗೌತಮನ ಅರಿತುಕೊಂಡ. ಪ್ರಪಂಚವೇ ಪರಸ್ಪರ ಅವಲಂಬಿತ ಮತ್ತು ಸ್ವಯಂ ಸ್ವಭಾವವುಳ್ಳ ಸತ್ಯವೆನ್ನುವ ಸೂತ್ರ ಆತನಿಗೆ ಅರಿವಾಯಿತು. ಜ್ಞಾನವೆನ್ನುವದು ಒಳಗಣ್ಣು ಎನ್ನುವ ಭ್ರಮೆಗಿಂತ ಹೊರಗಣ್ಣಿಗೆ ಕಾಣುವ ಪ್ರಪಂಚದ ಸಮಸ್ಥವಸ್ತುವಿನಲ್ಲಿ ಇದೆ ಎನ್ನುವದು ಸ್ಪಷ್ಟವಾಯಿತು.

buddha Purnima 2023

ಬುದ್ಧನ ಬೋಧನೆಗಳು ಮೊದಲನೆಯದಾಗಿ ಜೀವನವು ದುಃಖದಿಂದ ಕೂಡಿದೆ. ಜನನ, ಮರಣ, ರೋಗ, ವೃದ್ಧಾಪ್ಯ, ವಿರಹ, ಮನಸ್ಸು ಮತ್ತು ದೇಹಗಳ ವ್ಯವಸ್ಥೆಯೇ ದುಃಖಮಯ, ಎರಡನೆಯದಾಗಿ ಈ ದುಃಖಕ್ಕೆ ಕಾರಣವಿದೆ. ಮನುಷ್ಯ ತನ್ನ ಮೂಲರೂಪವನ್ನು ಅರಿಯದಿರುವದು, ಈ ಅಜ್ಞಾನಗಳಿಂದಾಗಿಯೇ ಆತ ದೇಹ-ಮನಸ್ಸುಗಳಿಗೆ ಅಂಟಿಕೊಳ್ಳುತ್ತಾನೆ. ಈ ಕಾರ್ಯಕಾರಣ ಸಂಬಂಧದಿಂದಾಗಿ ಕರ್ಮಚಕ್ರಗಳ ಮೂಲಕ ಪುನರ್ಜನದ ಭವಚಕ್ರಗಳಿಗೆ ಸಿಕ್ಕುಬೀಳುತ್ತಾನೆ, ಈ ಯಾತನೆಗಳಿಗೆ ಕಾರಣ ಆಯಾ ವ್ಯಕ್ತಿಯೇ ಹೊರತೂ ವಿಧಿ, ಆಕಸ್ಮಿಕ ಇತ್ಯಾದಿಗಳೆಲ್ಲ ಸುಳ್ಳು. ಮೂರನೆಯದು ಈ ಭವಚಕ್ರಗಳಿಂದ ಬಿಡುಗಡೆ. ಬುದ್ಧ ಇದು ಅವಿದ್ಯೆ, ಅಜ್ಞಾನಾವಸ್ಥೆಯೆನುತ್ತಾನೆ. ಲೋಕದಲ್ಲಿನ ಎಲ್ಲಾ ಅವಸ್ಥೆಗಳಿಗೂ ಇದೇ ಕಾರಣ, ಇದೇ “ಪ್ರತ್ಯೀತ್ಯಸಮುತ್ಪಾದ” ಸಿದ್ಧಾಂತ. ನಾಲ್ಕನೆಯದೇ ಈ ಭವಚಕ್ರಗಳಿಂದ ಬಿಡುಗಡೆಯ ಮಾರ್ಗವೆಂದರೆ ಈ ದುಃಖದಿಂದ ಬಿಡುಗಡೆ. ಅದೇ ಅವಿಧ್ಯಾ ಜಿವನದಿಂದ ಬಿಡುಗಡೆ. ಇದನ್ನು ಸಾಧಿಸಲು ಅಷ್ಟಾಂಗಿಕ ಮಾರ್ಗಗಳಾದ ಸಮ್ಯಕ್ ದೃಷ್ಟಿ, ಸಮ್ಯಕ್ ಸಂಕಲ್ಪ, ಸಮ್ಯಕ್ ವಾಕ್ಕು, ಸಮ್ಯಕ್ ಕ್ರಿಯಾ ಸಮ್ಯಕ್ ಆಜೀವ, ಸಮ್ಯಕ್ ವ್ಯಾಯಾಮ, ಸಮ್ಯಕ್ ಸ್ಮೃತಿ ಮತ್ತು ಸಮ್ಯಕ ಸಮಾಧಿಯ ಮೂಲಕ ಸಾಧಿಸಬಹುದು. ಈ ಅಷ್ಟಾಂಗ ಮಾರ್ಗವೆಂದರೆ ನೈತಿಕತೆ, ಸಾಧನೆ, ಸಾಕ್ಷಾತ್ಕಾರ, ಸ್ವಾರ್ಥವನ್ನು ತ್ಯಜಿಸುವದು, ಬೂತದಯೆಗಳು. ಬುದ್ದ ಇದನ್ನು ಸ್ವಯಂ ತನ್ನ ಕೊನೆಯಕ್ಷಣದವರೆಗೂತಾನೇ ಆಚರಿಸಿದ್ದನು. ಕುಂಡ ಕಮ್ಮಾರಪುತ್ತ ನೀಡಿದ ವಿಷಯುಕ್ತ ಆಹಾರದಿಂದ ಸಾಯುವ ಸಂದರ್ಭದಲ್ಲಿಯೂ ಅವನನ್ನು ಕ್ಷಮಿಸಿದನು. ಪ್ರಪಂಚದಲ್ಲಿ ಕಾಣುವ ವಸ್ತುಗಳನ್ನು ಅವು ಇರುವಂತೆಯೇ ತಿಳಿದವ ಬುದ್ಧ. ಹಾಗಂತ ಇದು ಚಾರ್ವಾಕ ಮತಕ್ಕೆ ಹತ್ತಿರವಾದಂತೆ ಕಂಡರೂ ಆತ ನಾಸ್ತಿಕವಾದಿಯಲ್ಲ. ಬುದ್ಧ ಅಸ್ತಿತ್ವವನ್ನು ಒಪ್ಪಿಕೊಳ್ಳುತ್ತಾನೆ, ಅದು ಅದ್ವೈತವನ್ನು ಹೋಲುತ್ತದೆ. ಬೌದ್ಧರು ಆತ್ಮದ ಅಸ್ತಿತ್ವವನ್ನು ಒಪ್ಪುವದಿಲ್ಲ ಎನ್ನುವ ಸಾಮಾನ್ಯ ನಂಬಿಕೆ. ಆದರೆ ಇದಕ್ಕೆ ಆಧಾರವಿಲ್ಲ.

ಬೌದ್ಧ ದರ್ಶನಗಳಲ್ಲಿ ಬುದ್ಧತ್ತ್ವಕ್ಕೆ ಏರುವುದು ಅಂದರೆ ಅದು ತುರೀಯಾವಸ್ಥೆ. ಸಾಮಾನ್ಯ ವ್ಯಕ್ತಿ ಬುದ್ಧನಾಗಲಿಕ್ಕೆ ಅನೇಕ ಜನ್ಮಗಳನ್ನು ಪಡೆಯಬೇಕಾಗುತ್ತದೆ. ಅದರಲ್ಲಿಯೂ ಕೊನೆಯ ಮೂರು ಹಂತಗಳಾದ ಅರಿಹಂತ, ಪಚ್ಛೇಕ ಬುದ್ಧತ್ವವನ್ನು ಸಾಧಿಸಿದ ಮೇಲೆ ಗೌತಮ ಬುದ್ಧ ತಲುಪಿದ ಸ್ಥಿತಿ ಸಮ ಸಂಬುದ್ಧತ್ವದ ಸ್ಥಿತಿ. ಜಾತಕದ ಕತೆಗಳಲ್ಲಿ ಬುದ್ಧನ ಹಿಂದಿನ ಜನ್ಮದ ವಿವರಗಳು ಕಥೆಯ ರೂಪದಲ್ಲಿ ಬರುವುದನ್ನು ಗಮನಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮದ ಅಸ್ತಿತ್ವವನ್ನು ಬುದ್ಧ ಒಪ್ಪುವದೂ ಇಲ್ಲ ಅಥವಾ ನಿರಾಕರಿಸುವುದೂ ಇಲ್ಲ. ವಚ್ಚಗೋತ್ತ ಎನ್ನುವ ಬ್ರಾಹ್ಮಣ ಇದೇ ವಿಷಯದಲ್ಲಿ ಬುದ್ಧನ ಹತ್ತಿರ ಕೇಳುವ ಪ್ರಶ್ನೆ ತೆವಿಜ್ಜ ಸುತ್ತದಲ್ಲಿ ಬರುತ್ತದೆ. ಆತ ಬುದ್ಧನಲ್ಲಿ ಕೇಳುವ ಆತ್ಮವಿದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆಗೆ ಆತ ಮೌನವಾಗಿಬಿಡುತ್ತಾನೆ. ಆತನ ಪ್ರಕಾರ ಆತ್ಮವಿದೆ ಎಂದು ಸಾರಿದ್ದರೆ ಅನಿತ್ಯಕ್ಕೇ ನಿತ್ಯವೆಂದು ಆತನ ಶಿಷ್ಯರು ಪರಿಗಣಿಸಬಹುದು, ಇಲ್ಲವೆಂದರೆ ಉಚ್ಛೇದವಾದ (ವಿನಾಶವಾದ)ವನ್ನು ಉಪದೇಶಿಸುವ ದಾರ್ಶನಿಕರು ಹೇಳಿದ್ದು ಸತ್ಯವೆಂದು ಅವರು ನಂಬುತ್ತಾರೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಇದರ ಅರ್ಥವಿಷ್ಟೇ ಬುದ್ಧ ಅಸ್ತಿತ್ವವಾದಿಯಾಗಿದ್ದ. ತನ್ನ ಶಿಷ್ಯರಿಗೆ “ನಿಮಗೆ ನೀವೇ ಬೆಳಕಾಗಿರಿ” ಎಂದು ಉಪದೇಶವನ್ನು ಮಾಡಿದ್ದ. ಬದುಕಿನಲ್ಲಿ ಕಾಣುವ ವಸ್ತುಗಳಲ್ಲಿಯೇ ಆನಂದವಿದೆ ಎನ್ನುವದರ ಮೂಲಕವೇ ಆತನಿಗೆ ಜ್ಞಾನೋದಯವಾದದ್ದರಿಂದ ಆತ “ತಿವಿಜ್ಜಸುತ್ತ”ದಲ್ಲಿ ಹೇಳುವಂತೆ. “ಹಳೆಯ ಓಲೆಗರಿಯಲ್ಲಿ ಹೇಳಿದೆ ಎನ್ನುವ ಮಾತ್ರಕ್ಕೆ ನಂಬಬಾರದು. ಎಲ್ಲವನ್ನೂ ವಿಚಾರಣೆ ಮಾಡಿ ವಿಶ್ಲೇಷಿಸಿ ಅದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದಾದರೆ ಅದರಂತೆ ನೀವೂ ಬಾಳಿ” ಎಂದಿದ್ದಾನೆ. ಬುದ್ಧನ ಪ್ರಕಾರ ನಿರ್ವಾಣವೆಂದರೆ ಅದು ‘ಸಂವೇದನೆ ಮತ್ತು ಭಾವನೆಗಳು ನಿಂತುಹೋಗುವ ಕ್ರಿಯೆ’. ಇದು ಜ್ಞಾತ್ರಾಜ್ಞೇಯದ ಸಂಬಂಧದ ಆಭಾವ. ಈ ನಿರ್ವಾಣಕ್ರಿಯೆಯನ್ನು ಮಾಂಡುಕ್ಯೋಪನಿಷತ್ತಿನ ತುರೀಯಾವಸ್ಥೆಗೆ ಹೋಲಿಸಬಹುದು. (ನಾಂತಃಪ್ರಜ್ಞಂ ನ ಬಹಿಃಪ್ರಜ್ಞಂ..ಮಾಂಡೂಕ್ಯ-7) ಇವೆರಡರಲ್ಲೂ ಭಾವನಾತ್ಮಕವಾದ ವಿಷಯಗಳಿಲ್ಲ. ಅವು ವಿಷಯ, ವಿಷಯಿ ಸಂಬಂಧ, ದೇಶ ಕಾಲ ನಿಮಿತ್ತ ಇವುಗಳಿಗೆ ಅತೀತವಾಗಿದೆ. ಇವೆರಡರಲ್ಲೂ ಚೇತನಾವಿಷಯಗಳಿಲ್ಲ; ಚೈತನ್ಯಸ್ವರೂಪವಿದೆ. ಪಾಲಿ ಭಾಷೆಯಲ್ಲಿರುವ ತೇರವಾದ ಬೌದ್ಧಗ್ರಂಥ ‘ಉದಾನ”ದಲ್ಲಿ “ಅಜವೂ ಅನಾದಿಯೂ ಅಕೃತವೂ ಅಸಂಯುಕ್ತವೂ ಆದುದೊಂದಿದೆ. ಎಲೈ ಭಿಕ್ಕು, ಅದಿಲ್ಲವಾದರೆ ಹುಟ್ಟುಳ್ಳದ್ದೂ, ಸಾದಿಯೂ ಕೃತವೂ ಸಂಯುಕ್ತವೂ ಆದ ಜಗತ್ತಿನಿಂದ ಮುಕ್ತಿಯೇ ಇರುವದಿಲ್ಲ” (ಉದಾನ 8-3) ಎಂದಿದ್ದಾನೆ. ಆತ ನಿರ್ವಿಕಾರವೂ ಶಾಶ್ವತವೂ ಆದ ಶಾಶ್ವತ ಸತ್ಯವನ್ನು ಒಪ್ಪುತ್ತಾನೆಂಬುದು ಇದರಿಂದ ಸ್ಪಷ್ಟ. ಇದಲ್ಲದಿದ್ದರೆ ಅವನ ನಿರ್ವಾಣವಾದವೇ ಬಿದ್ದುಹೋಗುತ್ತದೆ. ಆತ ಹೇಳಿದ್ದು “ಆತ್ಮ ಮತ್ತು ಬ್ರಹ್ಮ ವಿಷಯಕವಾದ ವಿಚಾರಗಳಿಂದ ಯಾವ ಪ್ರಯೋಜನವೂ ಇಲ್ಲ, ಒಳ್ಳೆಯದನ್ನು ಮಾಡಿರಿ; ಒಳ್ಳೆಯವರಾಗಿರಿ, ಇದೇ ನಿಮ್ಮನ್ನು ನಿರ್ವಾಣಕ್ಕೆ ಕೊಂಡೊಯ್ಯುತ್ತದೆ”. ಬುದ್ಧನೇ ನೇರವಾಗಿ ಬೋಧಿಸಿದ ತತ್ತ್ವಗಳನ್ನು ಗಮನಿಸಿದಾಗ ಆತನ ತತ್ತ್ವಗಳು ಭಾರತೀಯ ದರ್ಶನ ಶಾಸ್ತ್ರದ ಮುನ್ನುಡಿಯಾಗಿವೆ ಎನ್ನಬಹುದು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

Continue Reading

ದೇಶ

Pune porsche car crash : ಕುಡಿದು ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಜಾಮೀನು ವಜಾ

Pune porsche car crash : ಪರಾಧದ ಗಂಭೀರತೆಯನ್ನು ಆಧರಿಸಿ ವಿಚಾರಣೆ ಸಮಯದಲ್ಲಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಬೇಕೆಂದು ಪುಣೆ ಪೊಲೀಸರು ಒತ್ತಾಯಿಸಿದ್ದರು. ಅದರ ಹಿನ್ನೆಲೆಯಲ್ಲಿ ಬೇಲ್ ರದ್ದು ಮಾಡಲಾಗಿದೆ. ಹೆಚ್ಚಿನ ತನಿಖೆಯ ಪ್ರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯ ಮಂಡಳಿ ಹೇಳಿದೆ.

VISTARANEWS.COM


on

Pune porsche car crash
Koo

ಬೆಂಗಳೂರು : ಪುಣೆಯ ಬಾರ್​ ಒಂದರಲ್ಲಿ ಪಾರ್ಟಿ ಮಾಡಿ ಮದ್ಯ ಸೇವಿಸಿದ ನಂತರ ತನ್ನ ಅಪ್ಪನ ಐಷಾರಾಮಿ ಪೋರ್ಷೆ ಕಾರನ್ನು (Pune porsche car crash) ಚಲಾಯಿಸಿಕೊಂಡು ಹೋಗಿ ಅಫಘಾತ ಎಸಗಿದ್ದ 17 ಬಾಲಕನಿಗೆ ನೀಡಲಾಗಿದ್ದ ಜಾಮೀನನ್ನು ಬಾಲ ನ್ಯಾಯ ಮಂಡಳಿ ವಜಾ ಮಾಡಿದೆ. ಬಾಲಕ ಬೈಕ್​ಗೆ ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದರು. ಈ ಘಟನೆ ದೇಶದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ, ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದವನಿಗೆ ಬೇಲ್​ ಕೊಟ್ಟ ಬಗ್ಗೆಯೂ ಚರ್ಚೆಗಳು ನಡೆದಿದ್ದವು.

ಅಪಘಾತ ಎಸಗಿ ಇಬ್ಬರನ್ನು ಬಲಿ ಪಡೆದ ಅಪ್ರಾಪ್ತ ವಯಸ್ಕನನ್ನು ಮಕ್ಕಳ ವೀಕ್ಷಣಾ ಕೇಂದ್ರಕ್ಕೆ ಕಳುಹಿಸಬೇಕಾಗುತ್ತದೆ ಎಂದು ಮಂಡಳಿ ಹೇಳಿದೆ. ಅಪರಾಧದ ಗಂಭೀರತೆಯನ್ನು ಆಧರಿಸಿ ವಿಚಾರಣೆ ಸಮಯದಲ್ಲಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಬೇಕೆಂದು ಪುಣೆ ಪೊಲೀಸರು ಒತ್ತಾಯಿಸಿದ್ದರು. ಅದರ ಹಿನ್ನೆಲೆಯಲ್ಲಿ ಬೇಲ್ ರದ್ದು ಮಾಡಲಾಗಿದೆ. ಹೆಚ್ಚಿನ ತನಿಖೆಯ ಪ್ರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯ ಮಂಡಳಿ ಹೇಳಿದೆ.

ಪುಣೆಯಲ್ಲಿ ಪೋರ್ಷೆ ಕಾರಿನಲ್ಲಿ ಅತಿ ವೇಗವಾಗಿ ಸಾಗಿದ ಬಾಲಕ ಇಬ್ಬರು ಐಟಿ ವೃತ್ತಿಪರರಿಬ್ಬರ ಸಾವಿಗೆ ಕಾರಣನಾಗಿದ್ದ. 17 ವರ್ಷದ ಬಾಲಕನಿಗೆ 25 ವರ್ಷ ತುಂಬುವವರೆಗೆ ಚಾಲನಾ ಪರವಾನಗಿ ನೀಡುವುದನ್ನು ನಿಷೇಧಿಸಲಾಗುವುದುಎಂದು ಮಹಾರಾಷ್ಟ್ರ ಸಾರಿಗೆ ಆಯುಕ್ತ ವಿವೇಕ್ ಭೀಮನ್ವರ್ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ:

ಕಾರಿನ ಮಾಲೀಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್​ ಅಗರ್ವಾಲ್​ 1,758 ರೂ.ಗಳ ಶುಲ್ಕವನ್ನು ಪಾವತಿಸದ ಕಾರಣ ಪೋರ್ಷೆ ಟೇಕಾನ್ ನ ಶಾಶ್ವತ ನೋಂದಣಿ ಆಗಿರಲಿಲ್ಲ. ಆ ಪ್ರಕ್ರಿಯೆ ಮಾರ್ಚ್ ನಿಂದ ಬಾಕಿ ಉಳಿದಿದೆ ಎಂದು ರಾಜ್ಯ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಸೆಕ್ಷನ್ 158 ರ ಅಡಿಯಲ್ಲಿ ಹೊಸ ಪ್ರಕರಣ ದಾಖಲಾದ ನಂತರ ಬಾಲಕನನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಶಾಲ್ ಅಗರ್ವಾಲ್ ಅವರನ್ನು ಬುಧವಾರ ಪುಣೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಅವರನ್ನು ಮೇ 24 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಚಾಣಾಕ್ಷತನ ಮೆರೆದ ಪೊಲೀಸರು
ವಿಶಾಲ್‌ ಅಗರ್ವಾಲ್‌ ಇಷ್ಟೆಲ್ಲ ಯೋಜನೆ ರೂಪಿಸಿದರೂ ಪುಣೆ ಕ್ರೈಂ ಬ್ರ್ಯಾಂಚ್‌ ಪೊಲೀಸರು ಸಂಭಾಜಿನಗರದಲ್ಲಿ ವಿಶಾಲ್‌ ಅಗರ್ವಾಲ್‌ ಅವರನ್ನು ಬಂಧಿಸಿದರು. ಸಿಸಿಟಿವಿ ಕ್ಯಾಮೆರಾ ಹಾಗೂ ವಿಶಾಲ್‌ ಅಗರ್ವಾಲ್‌ ಗೆಳೆಯನ ಕಾರಿನ ಜಿಪಿಎಸ್‌ ಟ್ರ್ಯಾಕ್‌ ಮಾಡಿ, ಕೊನೆಗೂ ಅವರನ್ನು ಬಂಧಿಸಿದ್ದಾರೆ. ಸಂಭಾಜಿ ನಗರದ ಲಾಡ್ಜ್‌ನಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ವಿಶಾಲ್‌ ಅಗರ್ವಾಲ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ.

Continue Reading
Advertisement
vegetable rates increase
ಪ್ರಮುಖ ಸುದ್ದಿ23 mins ago

Vegetable Rates: ತರಕಾರಿ ಮುಟ್ಟಿದರೆ ಶಾಕ್‌, ಕಿಲೋಗೆ 320 ದಾಟಿದ ಬೀನ್ಸ್!‌

Phalodi satta market
ದೇಶ24 mins ago

Phalodi Satta Bazar: ಚುನಾವಣಾ ಫಲಿತಾಂಶದ ಬಗ್ಗೆ ಸಟ್ಟಾ ಬಜಾರ್‌ನ ಪಕ್ಕಾ ಭವಿಷ್ಯವಾಣಿ; ಈ ಮಾರ್ಕೆಟ್‌ನ ಹಿನ್ನೆಲೆ ಏನು?

Virat Kohli
ಕ್ರೀಡೆ25 mins ago

Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

vistara news impact medical negligence
ವಿಜಯನಗರ51 mins ago

Medical Negligence: ಅಮಾಯಕ ಬಾಲಕನ ಜೀವ ತೆಗೆದ ಆಸ್ಪತ್ರೆಗೆ ಬೀಗ!

Dinesh Karthik
ಕ್ರೀಡೆ1 hour ago

Dinesh Karthik: ಕೊಹ್ಲಿಯೊಂದಿಗೆ ಭಾವುಕ ಆಲಿಂಗನ; ಕ್ರಿಕೆಟ್​ ಜರ್ನಿ ಮುಗಿಸಿದ ದಿನೇಶ್​ ಕಾರ್ತಿಕ್​

Bangladesh MP Missing Case
ದೇಶ1 hour ago

Bangladesh MP Missing Case: ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

Actor Dhananjay
ಸಿನಿಮಾ1 hour ago

Actor Dhananjay: ʻಕೋಟಿʼ ಸಿನಿಮಾದ ‘ಜನತಾ ಸಿಟಿ’ ಹಾಡು ಔಟ್‌

Hampi Tour
ಪ್ರವಾಸ1 hour ago

Hampi Tour: ಹಂಪಿ ಪ್ರವಾಸದ ವೇಳೆ ಈ 10 ಸ್ಥಳಗಳಲ್ಲಿ ರಾಮಾಯಣದ ಕುರುಹುಗಳನ್ನು ಹುಡುಕಿ!

road rage bangalore
ಕ್ರೈಂ2 hours ago

Road Rage: ರಾಜಧಾನಿಯಲ್ಲಿ ಹೆಚ್ಚುತ್ತಿದೆ ರೋಡ್‌ ರೇಜ್‌, ಮತ್ತೊಂದು ಹಲ್ಲೆ

Viral Video
ವೈರಲ್ ನ್ಯೂಸ್2 hours ago

Viral Video: ಛೇ…ಇವರೆಂಥಾ ರಾಕ್ಷಸರು! ಕೈ ಕಾಲು ಕಟ್ಟಿ ಥಳಿಸಿ ದಲಿತ ಯುವಕನ ಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ5 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌