Ayodhya Deepotsav: ಅಯೋಧ್ಯೆಯಲ್ಲಿ ಬೆಳಗಿದ 22 ಲಕ್ಷ ದೀಪಗಳು; ಮತ್ತೆ ಗಿನ್ನಿಸ್‌ ದಾಖಲೆ - Vistara News

ದೀಪಾವಳಿ

Ayodhya Deepotsav: ಅಯೋಧ್ಯೆಯಲ್ಲಿ ಬೆಳಗಿದ 22 ಲಕ್ಷ ದೀಪಗಳು; ಮತ್ತೆ ಗಿನ್ನಿಸ್‌ ದಾಖಲೆ

Ayodhya Deepotsav: ಅಯೋಧ್ಯೆಯಲ್ಲಿ ಈ ಬಾರಿ 22 ಲಕ್ಷ ದೀಪಗಳನ್ನು ಬೆಳಗಲಾಗಿದ್ದು, ಕಳೆದ ವರ್ಷದಂತೆ ಈ ವರ್ಷವೂ ಗಿನ್ನಿಸ್‌ ವಿಶ್ವದಾಖಲೆ ಸೃಷ್ಟಿಯಾಗಿದೆ.

VISTARANEWS.COM


on

Ayodhya Deepotsav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈ ಬಾರಿಯೂ ದೀಪಾವಳಿ ಹಿನ್ನೆಲೆಯಲ್ಲಿ ಅಯೋಧ್ಯೆ ದೀಪೋತ್ಸವವು (Ayodhya Deepotsav) ಅದ್ಧೂರಿಯಾಗಿ ನಡೆದಿದೆ. ಸರಯೂ ನದಿಯ ತೀರ ಸೇರಿ ಅಯೋಧ್ಯೆಯ 51 ಘಾಟ್‌ಗಳಲ್ಲಿ ಸುಮಾರು 22.23 ಲಕ್ಷ ದೀಪಗಳನ್ನು ಬೆಳಗಿಸಲಾಗಿದ್ದು, ದೀಪೋತ್ಸವವು ಮತ್ತೆ ಗಿನ್ನಿಸ್‌ ವಿಶ್ವ ದಾಖಲೆ (Guinness World Record) ಬರೆದಿದೆ. ಜಗತ್ತಿನ ಯಾವ ಭಾಗದಲ್ಲಿಯೂ ಇಷ್ಟೊಂದು ದೀಪಗಳನ್ನು ಬೆಳಗದ ಕಾರಣ ಅಯೋಧ್ಯೆ ದೀಪೋತ್ಸವವು ಗಿನ್ನಿಸ್‌ ದಾಖಲೆ ಬರೆದಿದೆ.

2024ರ ಜನವರಿ 22ರಂದು ರಾಮಮಂದಿರ ಲೋಕಾರ್ಪಣೆ ಮಾಡುವುದರಿಂದ ಈ ಬಾರಿಯ ದೀಪೋತ್ಸವವು ಮತ್ತಷ್ಟು ಅದ್ಧೂರಿಯಾಗಿ ನೆರವೇರಿತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೀಪ ಬೆಳಗುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿದರು. ಇದಾದ ಬಳಿಕ ಏಕಕಾಲಕ್ಕೆ 22 ಲಕ್ಷಕ್ಕೂ ಅಧಿಕ ಹಣತೆಗಳಲ್ಲಿ ದೀಪಗಳನ್ನು ಬೆಳಗಲಾಯಿತು. ಹಾಗೆಯೇ, ಇಡೀ ನಗರದ ತುಂಬ ಮೂಡಿದ ಲೇಸರ್‌ ಕಿರಣಗಳ ಚಿತ್ತಾರವು ಅಯೋಧ್ಯೆಗೆ ಹೊಸ ರಂಗು ನೀಡಿತು.

ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ ಕಾರಣ ದೀಪೋತ್ಸವದ ವೇಳೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಸಾವಿರಾರು ಪೊಲೀಸರ ನಿಯೋಜನೆ, ಪ್ರತಿಯೊಬ್ಬರ ತಪಾಸಣೆ ಸೇರಿ ಹಲವು ರೀತಿಯಲ್ಲಿ ಭದ್ರತೆ ಒದಗಿಸಲಾಗಿತ್ತು. ಸುಮಾರು 25 ಸಾವಿರ ಸ್ವಯಂಸೇವಕರು ದೀಪ ಬೆಳಗಿಸುವ ಕಾರ್ಯದಲ್ಲಿ ತೊಡಗಿದ್ದರು. ಇದೇ ವೇಳೆ ಉತ್ತರ ಪ್ರದೇಶ ಸರ್ಕಾರಕ್ಕೆ ಗಿನ್ನಿಸ್‌ ದಾಖಲೆಯ ಪ್ರಮಾಣಪತ್ರವನ್ನೂ ನೀಡಲಾಯಿತು.

ಗಿನ್ನಿಸ್‌ ದಾಖಲೆ ಪ್ರಮಾಣಪತ್ರ ಸ್ವೀಕಾರ.

ಕಳೆದ ವರ್ಷವೂ ಗಿನ್ನಿಸ್‌ ದಾಖಲೆ

2022ರ ದೀಪಾವಳಿ ವೇಳೆ ಅಯೋಧ್ಯೆಯ ಸರಯೂ ನದಿ ತೀರದಲ್ಲಿ 17 ಲಕ್ಷ ದೀಪಗಳನ್ನು ಬೆಳಗಿದ ಹಿನ್ನೆಲೆಯಲ್ಲಿ ಅಯೋಧ್ಯೆಯ ದೀಪೋತ್ಸವವು ಗಿನ್ನಿಸ್ ದಾಖಲೆಗೆ ಭಾಜನವಾಗಿತ್ತು. ದೀಪೋತ್ಸವದ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಗಿನ್ನಿಸ್ ದಾಖಲೆಯ ಪ್ರಮಾಣಪತ್ರ ನೀಡಿದ್ದರು.

ಇದನ್ನೂ ಓದಿ: Ayodhya Ram Mandir: ಜನವರಿಯಲ್ಲಿ ಅಯೋಧ್ಯೆಗೆ ಭೇಟಿ ನೀಡ್ತೀರಾ? ಐಷಾರಾಮಿ ʼಟೆಂಟ್‌ ಸಿಟಿʼ ನಿಮಗಾಗಿಯೇ ಇದೆ!

ಯೋಗಿ ಆದಿತ್ಯನಾಥ್‌ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾದ ಬಳಿಕ ಅಯೋಧ್ಯೆಯಲ್ಲಿ ಅದ್ಧೂರಿಯಾಗಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಅದರಲ್ಲೂ ದೀಪೋತ್ಸವಕ್ಕೆ ಹೊಸ ಮೆರುಗು ಬಂದಿದೆ. 2017ರಲ್ಲಿ ಅಯೋಧ್ಯೆಯಲ್ಲಿ 1.71 ಲಕ್ಷ ದೀಪ ಬೆಳಗಿಸಲಾಗಿತ್ತು. ಹಾಗೆಯೇ, 2018ರಲ್ಲಿ 3.01 ಲಕ್ಷ, 2019ರಲ್ಲಿ 4.04 ಲಕ್ಷ, 2020ರಲ್ಲಿ 6.06 ಲಕ್ಷ ಹಾಗೂ 2021ರಲ್ಲಿ 9.41 ಲಕ್ಷ ದೀಪ ಬೆಳಗಿಸಲಾಗಿತ್ತು. 2022ರಲ್ಲಿ 15.76 ಲಕ್ಷ ದೀಪಗಳು ಬೆಳಗಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೀಪಾವಳಿ

After Deepavali Skin Care: ದೀಪಾವಳಿ ನಂತರ ತ್ವಚೆಯ ಆರೈಕೆಗೆ 5 ಸಿಂಪಲ್‌ ಸಲಹೆ

ದೀಪಾವಳಿ ಹಬ್ಬದ ನಂತರ ನಿಮ್ಮ ತ್ವಚೆಯ ಆರೈಕೆ (After Deepavali Skin Care) ಮಾಡುವುದು ಅತ್ಯಗತ್ಯ. ಇದಕ್ಕಾಗಿ ನೀವು ಏನೆಲ್ಲಾ ಮಾಡಬಹುದು? ಎಂಬುದನ್ನು ಬ್ಯೂಟಿ ಎಕ್ಸ್‌ಪಟ್ರ್ಸ್ ಇಲ್ಲಿ ತಿಳಿಸಿದ್ದಾರೆ.

VISTARANEWS.COM


on

After Deepavali Skin Care
ಚಿತ್ರಕೃಪೆ: ಪಿಕ್ಸೆಲ್‌
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು

ದೀಪಾವಳಿ ಹಬ್ಬದ ನಂತರ ನಿಮ್ಮ ತ್ವಚೆಯ ಆರೈಕೆ (After Deepavali Skin Care) ಅತ್ಯವಶ್ಯ. ಅದ್ಯಾಕೆ? ಎಂದು ಯೋಚಿಸುತ್ತಿದ್ದೀರಾ! ಹಬ್ಬದ ಸಂಭ್ರಮಕ್ಕಾಗಿ ಪ್ರತಿದಿನ ಹಚ್ಚಿದ ಗ್ರ್ಯಾಂಡ್‌ ಓವರ್‌ ಮೇಕಪ್‌, ಒಂದರ ಮೇಲೊಂದು ಸವಿದ ಸಿಹಿ ತಿಂಡಿ ಹಾಗೂ ಜಂಕ್‌ ಪದಾರ್ಥ ಸೇವನೆ ಎಲ್ಲವೂ ತ್ವಚೆಯನ್ನು ಡಲ್‌ ಆಗಿಸಬಹುದು. ಕೆಲವರಿಗೆ ಇದರಿಂದ ಮೊಡವೆ ಹಾಗೂ ಜಿಡ್ಡಿನಿಂದ ಚರ್ಮದ ಸಮಸ್ಯೆ ಎದುರಾಗಬಹುದು. ಇವೆಲ್ಲವನ್ನು ನಿಭಾಯಿಸಲು ಫೆಸ್ಟಿವ್‌ ಸೀಸನ್‌ ಮುಗಿದ ನಂತರ ಮುಖದ ಆರೈಕೆಯತ್ತ ಗಮನ ನೀಡುವುದು ಉತ್ತಮ. ಇದರಿಂದ ನಾನಾ ಸ್ಕಿನ್‌ ಸಮಸ್ಯೆಗಳಿಂದ ದೂರಾಗಿ, ಎಂದಿನಂತೆ ನವೋಲ್ಲಾಸದಿಂದ ಕಾಣುವ ತ್ವಚೆಯನ್ನು ತಮ್ಮದಾಗಿಸಿಕೊಳ್ಳಬಹುದು ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್ ಮಂಗಲಾ. ಇದಕ್ಕೆ ಪೂರಕ ಎಂಬಂತೆ ಅವರು 5 ಸಿಂಪಲ್‌ ಸಲಹೆ ನೀಡಿದ್ದು, ಪಾಲಿಸಿ ನೋಡಿ ಎಂದಿದ್ದಾರೆ.

Give the makeup a break first

ಮೊದಲು ಮೇಕಪ್‌ಗೆ ಬ್ರೇಕ್‌ ನೀಡಿ

ಪ್ರತಿದಿನ ಮೇಕಪ್‌ ಹಚ್ಚಿದ ಮುಖಕ್ಕೆ ಕೊಂಚ ಬ್ರೇಕ್ ಹಾಕಿ. ಮಾಯಿಶ್ಚರೈಸ್‌ ಮಾಡಿ. ಮುಖದ ತ್ವಚೆಗೆ ಉಸಿರಾಡಲು ಅವಕಾಶ ನೀಡಿ. ಬೇಕಿದ್ದಲ್ಲಿ ರಿಜುನುವೇಟ್‌ ಆಗಲು ಸಹಾಯ ಮಾಡುವ ಹೈಡ್ರೋ ಫೇಶಿಯಲ್‌ ಮಾಡಿಸಿ.

ಕ್ಲೆನ್ಸಿಂಗ್‌- ಟೋನಿಂಗ್‌-ಮಾಯಿಶ್ಚರೈಸಿಂಗ್

ಪ್ರತಿದಿನ ಕ್ಲೆನ್ಸಿಂಗ್‌-ಟೋನಿಂಗ್‌ ಹಾಗೂ ಮಾಯಿಶ್ಚರೈಸಿಂಗ್‌ ಮಾಡಿ. ಇದು ತ್ವಚೆಯನ್ನು ರಿಲ್ಯಾಕ್ಸ್‌ ಮಾಡುವುದರೊಂದಿಗೆ ಸ್ಕಿನ್‌ ಆರೋಗ್ಯ ಸುಧಾರಿಸುತ್ತದೆ.

Get a good night's sleep

ಕಣ್ತುಂಬ ನಿದ್ರೆ ಮಾಡಿ

ಹಬ್ಬದ ಗಡಿಬಿಡಿಯಲ್ಲಿ ಸಾಕಷ್ಟು ಜನ ನಿದ್ರೆ ಕಡಿಮೆ ಮಾಡುತ್ತಾರೆ. ಇದು ಮುಖದ ಮೇಲೆ ಎದ್ದು ಕಾಣದಂತೆ ಮಾಡಲು ಮೇಕಪ್‌ ಹಚ್ಚುತ್ತಾರೆ. ಆದರೆ. ಇದು ತಾತ್ಕಲಿಕ ಪರಿಹಾರ. ನ್ಯಾಚುರಲ್‌ ಆಗಿ ತ್ವಚೆ ಚೆನ್ನಾಗಿ ಕಾಣಲು ಕನಿಷ್ಠ 7-8 ಗಂಟೆಯಾದರೂ ಕಣ್ತುಂಬ ನಿದ್ರೆ ಮಾಡುವುದು ಅಗತ್ಯ. ಮಲಗಿದಾಗ ತ್ವಚೆಯ ರಿಜುನುವೆಟ್‌ಗೆ ಅಗತ್ಯವಿರುವ ಕೊಲಾಜೆನ್‌ ಉತ್ಪತ್ತಿಯಾಗುತ್ತದೆ.

ಶೀಟ್‌ ಮಾಸ್ಕ್‌ ಉಪಯೋಗಿಸಿ

ಇದೀಗ ಮಾರುಕಟ್ಟೆಯಲ್ಲಿ ಲಭ್ಯವಿರುವ ತ್ವಚೆಯ ಫ್ರೆಂಡ್ಲಿ ಹಾಗೂ ಅಗತ್ಯ ಪೌಷ್ಟಿಕಾಂಶಗಳನ್ನು ಪೂರೈಸುವ, ನಿಮ್ಮ ಸ್ಕಿನ್‌ ಟೋನ್‌ಗೆ ಮ್ಯಾಚ್‌ ಆಗುವ ಶೀಟ್‌ ಮಾಸ್ಕ್‌ ಆಯ್ಕೆ ಮಾಡಿ ಬಳಸಿ. ಇದು ಮುಖವನ್ನು ಕಾಂತಿಯುಕ್ತಗೊಳಿಸುತ್ತದೆ.

Use a scrub

ಸ್ಕ್ರಬ್‌ ಬಳಸಿ

ಸ್ಕ್ರಬ್‌ ಬಳಕೆಯಿಂದ ಚರ್ಮದ ಮೇಲಿನ ಡೆಡ್‌ ಸ್ಕಿನ್‌ ಹೋಗುತ್ತದೆ. ಜೊತೆಗೆ ರಕ್ತ ಸಂಚಾರ ಸುಗಮವಾಗುತ್ತದೆ. ಹೋಮ್‌ ಮೇಡ್‌ ಸ್ಕ್ರಬ್‌ ಉತ್ತಮ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Deepavali Mens Fashion: ದೀಪಾವಳಿ ಹಬ್ಬದ ಮೆನ್ಸ್ ಟ್ರೆಡಿಷನಲ್‌ ಸ್ಟೈಲಿಂಗ್‌ಗೆ ಸಾಥ್‌ ನೀಡುವ ಎಥ್ನಿಕ್‌ವೇರ್ಸ್

Continue Reading

ದೀಪಾವಳಿ

ದೀಪಾವಳಿ ಆಚರಣೆ ವೇಳೆ ಹಿಂದುಗಳ ಮೇಲೆ ಖಲಿಸ್ತಾನಿಗಳ ದಾಳಿ; ಕಲ್ಲು ತೂರಿದ ಉಗ್ರರು!

ಕೆನಡಾದಲ್ಲಿ ಖಲಿಸ್ತಾನಿ ಉಗ್ರರು, ಪ್ರತ್ಯೇಕವಾದಿಗಳು ಇದಕ್ಕೂ ಮೊದಲು ಕೂಡ ಹಿಂದುಗಳ ಮೇಲೆ ದಾಳಿ ನಡೆಸಿದ್ದಾರೆ. ಹಿಂದು ದೇವಾಲಯಗಳ ಮೇಲೆ ದಾಳಿ ನಡೆಸಲಾಗಿದೆ. ಈಗ ದೀಪಾವಳಿ ಆಚರಣೆ ವೇಳೆಯೂ ಖಲಿಸ್ತಾನಿ ಉಗ್ರರು ದಾಳಿ ನಡೆಸಿದ್ದಾರೆ.

VISTARANEWS.COM


on

Khalistani Attack
Koo

ಒಟ್ಟಾವ: ಕೆನಡಾದಲ್ಲಿ ಹಿಂದುಗಳ ಮೇಲೆ ಖಲಿಸ್ತಾನಿ ಉಗ್ರರು (Khalistani Terrorists), ಮೂಲಭೂತವಾದಿಗಳ ದಾಳಿ ಮುಂದುವರಿದಿದೆ. ಟೊರೊಂಟೊ ಹೊರವಲಯದ ಮಿಸ್ಸಿಸ್ಸೌಗ ಪಟ್ಟಣದಲ್ಲಿ ಹಿಂದುಗಳು ದೀಪಾವಳಿ (Deepavali 2023) ಆಚರಣೆ ಮಾಡುವ ವೇಳೆ ಖಲಿಸ್ತಾನಿ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳ ಮೇಲೆ ಕಲ್ಲು ತೂರಾಟ ಮಾಡುವ, ಖಲಿಸ್ತಾನಿ ಧ್ವಜ ಹಾರಿಸಿ ಉದ್ಧಟತನ ಮಾಡಿರುವ ವಿಡಿಯೊ (Viral Video) ಈಗ ಲಭ್ಯವಾಗಿದೆ.

ಕೆನಡಾದ ಟೊರೊಂಟೊ ಸೇರಿ ಹಲವೆಡೆ ಹಿಂದುಗಳು ಸಡಗರ-ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಆದರೆ, ಮಿಸ್ಸಿಸ್ಸೌಗ, ಬ್ರ್ಯಾಂಪ್ಟನ್‌ ಸೇರಿ ಕೆಲವೆಡೆ ಹಿಂದುಗಳು ಪಟಾಕಿ ಸಿಡಿಸಿ ದೀಪಾವಳಿ ಆಚರಣೆ ಮಾಡುವಾಗ ಖಲಿಸ್ತಾನಿ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳ ಆಚರಣೆಗೆ ಅಡ್ಡಿಪಡಿಸುವ ಜತೆಗೆ ಕಲ್ಲು ತೂರಾಟ ಮಾಡಿದ್ದಾರೆ. ಖಲಿಸ್ತಾನಿ ಧ್ವಜ ಹಾರಿಸಿದ ಅವರು ಭಾರತ ವಿರೋಧಿ ಘೋಷಣೆಗಳನ್ನೂ ಕೂಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ. ಕೆನಡಾದಲ್ಲಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ ಬಳಿಕ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಹಲವು ಉದ್ಧಟತನದ ಹೇಳಿಕೆ ನೀಡುತ್ತಿದ್ದಾರೆ. ಹಾಗೆಯೇ, ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಹಿಂದೆ ಭಾರತದ ಕೈವಾಡ ಇದೆ ಎಂದೆಲ್ಲ ಆರೋಪಿಸಿದ್ದಾರೆ. ಇದಕ್ಕೆಲ್ಲ ಸೊಪ್ಪು ಹಾಕದ ಭಾರತ ಸರ್ಕಾರವು ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಕೆನಡಾದಲ್ಲಿ ಹಿಂದುಗಳ ಮೇಲೆ ದಾಳಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಸ್ಫೋಟಕ್ಕೆ ಸಂಚು; ಭಾರತ ಆಗ್ರಹಿಸಿದ ಬಳಿಕ ತನಿಖೆಗೆ ಕೆನಡಾ ಆದೇಶ

ಏರ್‌ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಪನ್ನುನ್‌ ಎಚ್ಚರಿಕೆ

ನವೆಂಬರ್‌ 19ರಂದು ಏರ್‌ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಎಚ್ಚರಿಕೆ ನೀಡಿದ್ದಾನೆ. ನವೆಂಬರ್‌ 4ರಂದು ಗುರುಪತ್ವಂತ್‌ ಸಿಂಗ್‌ ಪನ್ನುನ್‌ ವಿಡಿಯೊ ಪೋಸ್ಟ್‌ ಮಾಡಿದ್ದ. “ನವೆಂಬರ್‌ 19ರಂದು ಸಿಖ್ಖರು ಏರ್‌ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸಬಾರದು.‌ ಅಂದು ಏರ್‌ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು” ಎಂದು ಹೇಳಿದ್ದ. ನವೆಂಬರ್‌ 19 ಇಂದಿರಾ ಗಾಂಧಿ ಜನ್ಮದಿನವಾದ ಕಾರಣ ಅಂದೇ ಏರ್‌ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು ಎಂದಿದ್ದಾನೆ. ಅಮೃತಸರದ ಸ್ವರ್ಣಮಂದಿರ ಹೊಕ್ಕಿದ್ದ ಉಗ್ರರ ವಿರುದ್ಧ ಇಂದಿರಾ ಗಾಂಧಿ ಅವರು ಆಪರೇಷನ್‌ ಬ್ಲ್ಯೂ ಸ್ಟಾರ್‌ಗೆ ಆದೇಶ ಮಾಡಿದ ಬಳಿಕ ಅವರು 1984ರಲ್ಲಿ ಹತ್ಯೆಗೀಡಾದರು. ಈಗ ಅವರ ಜನ್ಮದಿನದಂದೇ ಏರ್‌ ಇಂಡಿಯಾ ವಿಮಾನ ಸ್ಫೋಟಿಸಲು ಸಂಚು ರೂಪಿಸಲಾಗಿದೆ. ಭಾರತದ ಆಗ್ರಹದ ಬಳಿಕ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಕೆನಡಾ ತಿಳಿಸಿದೆ.

Continue Reading

ದೀಪಾವಳಿ

ಬ್ರಿಟನ್ ಪಿಎಂ ಕಚೇರಿಯಲ್ಲಿ ದೀಪಾವಳಿ! ಗಮನ ಸೆಳೆದ ಅಕ್ಷತಾ ಮೂರ್ತಿ ಉಡುಗೆ

Diwali 2023: ಬ್ರಿಟನ್ ಪಿಎಂ ಸರ್ಕಾರಿ ಅಧಿಕೃತ ನಿವಾಸದಲ್ಲಿ ಈ ಬಾರಿ ದೀಪಾವಳಿ ಸಂಭ್ರಮ ಮನೆ ಮಾಡಿತ್ತು. ಕರ್ನಾಟಕದ ಅಳಿಯನಾಗಿರುವ ಬ್ರಿಟನ್ ಪಿಎಂ ರಿಷಿ ಸುನಕ್ ಹಾಗೂ ಅವರ ಪತ್ನಿ ಅಕ್ಷತಾ ಮೂರ್ತಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು.

VISTARANEWS.COM


on

Diwali in British PM's office! Akshata Murthy fashionable dress caught attention
Koo

ಲಂಡನ್: ಬ್ರಿಟನ್ ಪ್ರಧಾನಿ ಅಧಿಕೃತ ಕಚೇರಿ ನಿವಾಸದಲ್ಲಿ (10 Downing Street) ಈ ಬಾರಿ ದೀಪಾವಳಿಯ ( Diwali 2023) ಕಲರವ ಮೇಳೈಸಿತ್ತು. ಪ್ರಧಾನಿ ರಿಷಿ ಸುನಕ್ (UK PM Rishi Sunak) ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ (Akshata Murty) ಹಾಗೂ ಮಕ್ಕಳು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಅಕ್ಷತಾ ಅವರು ಯಾವಾಗಲೂ ಫ್ಯಾಶನೇಬಲ್ ಆಗಿರುತ್ತಾರೆ. ಈಗ ದೀಪಾವಳಿಯಂದು ಅವರ ಸಾಂಪ್ರದಾಯಿಕ ಉಡುಗೆ ಗಮನ ಸೆಳೆದಿದೆ. ಅಕ್ಷತಾ ಅವರು ಎಲೆಕ್ಟ್ರಿಕ್ ನೀಲಿ ಮೈಸೂರು ರೇಷ್ಮೆ ಸೀರೆಯಲ್ಲಿ ಸೊಗಸಾಗಿ ಕಾಣುತ್ತಿದ್ದರು. ಅವರು ಸೀರೆಯನ್ನು ಸೊಗಸಾಗಿ ಧರಿಸಿದ್ದರು. ಸೀರೆಯೊಂದಿಗೆ ಸಣ್ಣ ತೋಳಿನ ಕುಪ್ಪಸವನ್ನು ಧರಿಸಿದ್ದರು. ಸರಳವಾದ ಸೀರೆಯು ತೆಳುವಾದ ಚಿನ್ನದ ಅಂಚುಗಳನ್ನು ಪ್ರದರ್ಶಿಸಿತು ಮತ್ತು ಕುಪ್ಪಸವು ಹೂವಿನ ಮೋಟಿಫ್‌ಗಳನ್ನು ಒಳಗೊಂಡಿತ್ತು. ಅಕ್ಷತಾ ಒಂದು ಜೊತೆ ನೇತಾಡುವ ಕಿವಿಯೋಲೆಗಳು, ಗಂಡಬೇರುಂಡ ನೆಕ್ಲೇಸ್ ಮತ್ತು ಬಳೆಗಳನ್ನು ಧರಿಸಿದ್ದರು.

ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಯಾವಾಗಲೂ ಪ್ರೇಕ್ಷಕರ ಮೇಲೆ ಫ್ಯಾಶನ್ ಪ್ರಭಾವ ಬೀರಿದ್ದಾರೆ. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆ ಅಥವಾ ಅಂತರಾಷ್ಟ್ರೀಯ ಶೃಂಗಸಭೆಗಳಿಗೆ ಆಕೆಯ ವಿಶಿಷ್ಟ ತೊಡುಗೆ, ಆಕೆಯ ಶೈಲಿ ಮತ್ತು ಸೊಬಗುಗೆ ಮಿತಿಯಿರಲಿಲ್ಲ.

ದಿಲ್ಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಅಕ್ಷತಾ ಮೂರ್ತಿ ಅವರ ವಾರ್ಡ್ರೋಬ್ ಆಯ್ಕೆಗಳು ಉನ್ನತ ದರ್ಜೆಯದ್ದಾಗಿದ್ದವು ಎಂಬುದು ಮನವರಿಕೆಯಾಗಿತ್ತು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆದ ರಾಗಿ ಪ್ರದರ್ಶನಕ್ಕಾಗಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಆಯೋಜಿಸಿದ್ದ ಜಿ20 ಸಂಗಾತಿಗಳ ಕಾರ್ಯಕ್ರಮಕ್ಕೆ ಮುದ್ರಿತ ನೀಲಕ ಮಿಡಿ ಉಡುಗೆಯನ್ನು ಆರಿಸಿಕೊಂಡಿದ್ದರು. ಉಡುಪಿನಲ್ಲಿ ಹೂವಿನ ಮುದ್ರಿತ ನಾಟಕೀಯ ಪಫ್ಡ್ ಸ್ಲೀವ್‌ಗಳು ಎ-ಲೈನ್ ಸಿಲೂಯೆಟ್ ಮತ್ತು ಭುಗಿಲೆದ್ದ ಕೆಳಭಾಗವನ್ನು ಒಳಗೊಂಡಿತ್ತು. ಇದು ಆಕರ್ಷಕವಾಗಿತ್ತು.

ಈಗ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಕ್ಷತಾ ಮೂರ್ತಿ ಅವರು ತೊಡುಗೆ ಶೈಲಿಯ ಮತ್ತೊಮ್ಮೆ ಜಗತ್ತಿನ ಮುಂದೆ ಅನಾವರಣಗೊಂಡಿದೆ. ಅಕ್ಷತಾ ಮೂರ್ತಿ ಅವರು ತಮ್ಮ ಫ್ಯಾಶನೇಬಲ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಬ್ರಿಟನ್ ಪ್ರಧಾನಿಯ ಮನೆಯಲ್ಲಿ ನಡೆದ ದೀಪಾವಳಿ ಹಬ್ಬದ ಆಚರಣೆಯು ವಾವ್ ಎನ್ನುವಂತಿತ್ತು. ಇದಕ್ಕೆ ಅಕ್ಷತಾ ಮೂರ್ತಿ ಅವರು ಉಡುಗೆ-ತೊಡುಗೆ ಕಳಶವಿಟ್ಟಂತೆ ಇತ್ತು ಎಂದು ಫ್ಯಾಶನ್ ಜಗತ್ತಿನ ತಜ್ಞರು ಮಾತನಾಡಿಕೊಳ್ಳುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: 75 ವರ್ಷದಲ್ಲೇ ಮೊದಲ ಬಾರಿಗೆ ಕಾಶ್ಮೀರದ ಶಾರದಾ ದೇವಿ ದೇಗುಲದಲ್ಲಿ ದೀಪಾವಳಿ ಆಚರಣೆ!

Continue Reading

ಕ್ರಿಕೆಟ್

KL Rahul: ಕನ್ನಡದಲ್ಲೇ ದೀಪಾವಳಿಯ ಶುಭ ಕೋರಿದ ಕೆ.ಎಲ್​ ರಾಹುಲ್​

ಟೀಮ್ ಇಂಡಿಯಾದ ಸ್ಟಾರ್​ ಆಟಗಾರ, ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರು ನಾಡಿದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ(diwali wishes) ಕೋರಿದ್ದಾರೆ.

VISTARANEWS.COM


on

kl rahul century celebration
Koo

ಬೆಂಗಳೂರು: ದೇಶಾದ್ಯಂತ ದೀಪಾವಳಿ(diwali 2023) ಹಬ್ಬದ ಸಂಭ್ರಮ ಜೋರಾಗಿದೆ. ಎಲ್ಲೆಲ್ಲೂ ಪಟಾಕಿ ಸದ್ದು ಕೇಳಿಸುತ್ತಿದೆ. ಕುಟುಂಬಸ್ಥರು, ಸಂಬಂಧಿಕರು, ಗೆಳೆಯರ ಜತೆ ಹಬ್ಬದ ಆಚರಣೆ ಭರ್ಜರಿಯಾಗಿದೆ. ಇದರ ಬೆನ್ನಲೇ ಟೀಮ್ ಇಂಡಿಯಾದ ಸ್ಟಾರ್​ ಆಟಗಾರ, ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರು ನಾಡಿದ ಜನತೆಗೆ ದೀಪಾವಳಿ ಶುಭಾಶಯ(diwali wishes) ಕೋರಿದ್ದಾರೆ​. ಅದು ಕೂಡ ಕನ್ನಡದಲ್ಲೇ ಶುಭ ಕೋರಿ ಎಲ್ಲ ಕನ್ನಡಿಗರ ಹೃದಯ ಗೆದ್ದಿದ್ದಾರೆ.

ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಅವರು ಶತಕ ಬಾರಿಸಿ ಸಂಭ್ರಮಿಸಿದ್ದರು. ತಮ್ಮ ಶತಕದ ಮತ್ತು ಪಂದ್ಯದ ಫೋಟೊಗಳನ್ನು ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಾಕಿ ‘ದೀಪಾವಳಿಯ ಶುಭಾಶಯಗಳು’ ಎಂದು ಬರೆದು ತಿವರ್ಣ ಧ್ವಜ ಮತ್ತು ಹಣತೆಯ ಎಮೋಜಿಯನ್ನು ಹಾಕಿದ್ದಾರೆ.

ದಾಖಲೆ ಬರೆದ ರಾಹುಲ್​

ನೆದರ್ಲೆಂಡ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಕೆ.ಎಲ್ ರಾಹುಲ್ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್​ನಲ್ಲಿ ಅತಿ ವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವೇಳೆ ಅವರು 2023 ರ (ಹಾಲಿ ಆವೃತ್ತಿಯ) ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ ಶತಕ ಬಾರಿಸಿದ ರೋಹಿತ್ ಶರ್ಮಾ ಅವರ ದಾಖಲೆ ಅವರು ಮುರಿದರು.

ರಾಹುಲ್ 64 ಎಸೆತಗಳಲ್ಲಿ 102 ರನ್ ಗಳಿಸುವ ಹಾದಿಯಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್​ಗಳನ್ನು ಬಾರಿಸಿದರು, ಇದು ವಿಶ್ವಕಪ್ ಪಂದ್ಯದಲ್ಲಿ ಭಾರತವನ್ನು ಎರಡನೇ ಅತಿ ಹೆಚ್ಚು ಮೊತ್ತಕ್ಕೆ (410/4) ಮುನ್ನಡೆಸಿತು. ಇದು ರಾಹುಲ್ ಅವರ ಆರನೇ ಏಕದಿನ ಶತಕವಾಗಿದೆ. ಭಾರತದ 5ನೇ ಕ್ರಮಾಂಕದ ಬ್ಯಾಟರ್​ ಶ್ರೇಯಸ್ ಅಯ್ಯರ್ ಜೊತೆಗೂಡಿ 208 ರನ್​ಗಳ ಜೊತೆಯಾಟವಾಡಿದ್ದು, ಇದು ಏಕದಿನ ವಿಶ್ವಕಪ್​​ನಲ್ಲಿ ನಾಲ್ಕನೇ ವಿಕೆಟ್​ಗೆ ಅತಿ ಹೆಚ್ಚು ರನ್​ಗಳ ಜೊತೆಯಾಟದ ದಾಖಲೆಯಾಗಿದೆ.

ಇದನ್ನೂ ಓದಿ MS Dhoni: ಧೋನಿ ಕುಟುಂಬದೊಂದಿಗೆ ದೀಪಾವಳಿ ಆಚರಿಸಿದ ರಿಷಭ್​ ಪಂತ್​

ತವರಿನ ಅಂಗಳದಲ್ಲಿ ರಾಹುಲ್ ಅವರು ಪ್ರಚಂಡ ಬ್ಯಾಟಿಂಗ್​ ತೋರ್ಪಡಿಸುವ ಮೂಲಕ ನೆರೆದಿದ್ದ ತವರಿನ ಅಭಿಮಾನಿಗಳಿಗೆ ಭರಪೂರ ರಂಚನೆ ನೀಡಿದರು. ಬ್ಯಾಟಿಂಗ್​ ಮಾತ್ರವಲ್ಲದೆ ಕೀಪಿಂಗ್​ನಲ್ಲಿಯೂ ಮಿಂಚಿದ ಅವರು 2 ಅದ್ಭುತ ಕ್ಯಾಚ್​ಗಳನ್ನು ಕೂಡ ಹಿಡಿದು ಮಿಂಚಿದರು.

ಜತೆಯಾಟದಲ್ಲಿಯೂ ದಾಖಲೆ ಬರೆದ ರಾಹುಲ್​

ಈ ಪಂದ್ಯದಲ್ಲಿ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡದ ಪರವಾಗಿ ನಾಲ್ಕನೇ ಅತ್ಯಧಿಕ ರನ್​ಗಳ ಜತೆಯಾಟ ನಡೆಸಿ ದಾಖಲೆಯ ಬರೆದರು. ಉಭಯ ಆಟಗಾರರು ನಾಲ್ಕನೇ ವಿಕೆಟ್​ಗೆ 208 ರನ್​ಗಳ ಜತೆಯಾಟ ನೀಡಿದರು. ಈ ಮೂಕಲ ವಿಶ್ವಕಪ್​ನಲ್ಲಿ ನಾಲ್ಕನೇ ವಿಕೆಟ್ ಅಥವಾ ಅದಕ್ಕಿಂತ ಕಡಿಮೆ ವಿಕೆಟ್​ಗೆ ಭಾರತದ ಅತ್ಯಧಿಕ ಜತೆಯಾಟ ನಡೆಸಿದ ದಾಖಲೆ ನಿರ್ಮಿಸಿದರು.

Continue Reading
Advertisement
Alia Bhatt Deep Fake Wamiqa Gabbi face replaced
ಬಾಲಿವುಡ್6 mins ago

Alia Bhatt Deep Fake: ಆಲಿಯಾ ಭಟ್‌ ಡೀಪ್‌ಫೇಕ್‌ ವಿಡಿಯೊ ವೈರಲ್‌! ಅಸಲಿ ಮುಖ ಯಾರದ್ದು?

Sindhuri Vs Roopa
ಕರ್ನಾಟಕ9 mins ago

Sindhuri Vs Roopa: ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದತ್ತ ಗಮನ ಹರಿಸಿ; ರೂಪ-ರೋಹಿಣಿಗೆ ಸುಪ್ರೀಂ ಕೋರ್ಟ್‌ ಸಲಹೆ

Puttakkana Makkalu umashree acting praised
ಕಿರುತೆರೆ10 mins ago

Puttakkana Makkalu: ʻಪುಟ್ಟಕ್ಕʼನ ನಟನೆಗೆ ಕೋಟಿ ಕೋಟಿ ನಮನ ಅಂತಿದ್ದಾರೆ ಫ್ಯಾನ್ಸ್‌!

hanuman flag keragodu mandya
ಕ್ರೈಂ49 mins ago

Hanuman Flag: ಕೆರಗೋಡು ಹನುಮಧ್ವಜ ಪ್ರಕರಣದ 3 ಹೋರಾಟಗಾರರ ಮೇಲೆ ರೌಡಿಶೀಟ್

Human trafficking
ದೇಶ60 mins ago

Human trafficking: ಕೆಲಸ ಕೊಡಿಸೋದಾಗಿ ನಂಬಿಸಿ ರಷ್ಯಾ-ಉಕ್ರೇನ್‌ ಯುದ್ಧ ಪೀಡಿತ ಪ್ರದೇಶಕ್ಕೆ ರವಾನೆ-ಇಬ್ಬರು ಅರೆಸ್ಟ್‌

Kanakalatha Passes Away Film serial actor Mollywood
ಮಾಲಿವುಡ್1 hour ago

Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

Prajwal Revanna Case
ಕ್ರೈಂ2 hours ago

Prajwal Revanna Case: ಗಡುವು ಮುಗೀತು, ಬೆಂಗಳೂರಿಗೆ ಹೊರಟರಾ ಪ್ರಜ್ವಲ್‌ ರೇವಣ್ಣ?

Laapataa Ladies Phool At Met Gala At Photoshop
ಬಾಲಿವುಡ್2 hours ago

Laapataa Ladies: ಮೆಟ್ ಗಾಲಾ ರೆಡ್ ಕಾರ್ಪೆಟ್​ನಲ್ಲಿ ‘ಲಾಪತಾ ಲೇಡೀಸ್’ನಟಿ! ಅಸಲಿ ಸಂಗತಿ ಏನು?

chikkaballapur woman murder case
ಕ್ರೈಂ2 hours ago

Murder Case: ಪ್ರಿಯತಮೆ ಎದುರೇ ಮಹಿಳೆಯ ಅತ್ಯಾಚಾರ ಮಾಡಿ ಕೊಂದ ಪಾಪಿ!

Covishield Vaccine
ದೇಶ3 hours ago

Covishield Vaccine: ಕೋವಿಶೀಲ್ಡ್‌ ಲಸಿಕೆ ಹಿಂಪಡೆಯುವುದಾಗಿ ಅಸ್ಟ್ರಾಜೆನೆಕಾ ಘೋಷಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ15 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ18 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ19 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌