Uttar Pradesh | ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ; ಇಲ್ಮಾ ಈಗ ಸೌಮ್ಯ ಶರ್ಮಾ - Vistara News

ದೇಶ

Uttar Pradesh | ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ; ಇಲ್ಮಾ ಈಗ ಸೌಮ್ಯ ಶರ್ಮಾ

ಉತ್ತರ ಪ್ರದೇಶದಲ್ಲಿ (Uttar Pradesh) ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆಯಾಗಿದ್ದಾಳೆ. ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಆಕೆ ತನ್ನ ಹೆಸರನ್ನು ಸೌಮ್ಯ ಶರ್ಮಾ ಎಂದು ಬದಲಿಸಿಕೊಂಡಿದ್ದಾಳೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಮುಸ್ಲಿಂ ಯುವಕರನ್ನು ಹಿಂದೂ ಯುವತಿಯರು ಮದುವೆಯಾಗಿ, ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವುದನ್ನು ನೋಡಿರುತ್ತೀರಿ. ಆದರೆ ಇದೀಗ ಉತ್ತರ ಪ್ರದೇಶದಲ್ಲಿ (Uttar Pradesh) ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ವರಿಸಿದ್ದು, ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ.

ಇದನ್ನೂ ಓದಿ: Pragya Singh Thakur | ಲವ್‌ ಜಿಹಾದ್‌ಗೆ ಹೆಣ್ಣು ಮಕ್ಕಳು ಬಲಿಯಾಗಬೇಡಿ, ಚಾಕುವನ್ನು ಹರಿತವಾಗಿಡಿ ಎಂದಿದ್ದ ಸಾಧ್ವಿ ವಿರುದ್ಧ ದೂರು

ಹೌದು. ಉತ್ತರ ಪ್ರದೇಶದ ಬದೌನ್‌ ಗ್ರಾಮದ ಯುವಕ ಸೋಮೇಶ್‌ ಶರ್ಮಾ ಹಲವು ವರ್ಷಗಳ ಹಿಂದೆ ಅದೇ ಊರಿನವಳಾದ ಇಲ್ಮಾಳನ್ನು ಭೇಟಿಯಾಗಿದ್ದ. ಅವರಿಬ್ಬರ ನಡುವೆ ಸ್ನೇಹವಾಗಿ ಅದು ಪ್ರೇಮಕ್ಕೆ ತಿರುಗಿತ್ತು. ಈ ನಡುವೆ ಸೋಮೇಶ್‌ಗೆ ದೆಹಲಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಸಿಕ್ಕಿದ್ದು, ಆತ ಅಲ್ಲಿಗೆ ಸ್ಥಳಾಂತರಗೊಂಡಿದ್ದಾನೆ. ಪ್ರೇಮಿಗಳಿಬ್ಬರು ದೂರದೂರಿನಲ್ಲಿ ಇದ್ದುಕೊಂಡೇ ಪ್ರೀತಿ ಮುಂದುವರಿಸಿದ್ದಾರೆ.‌

ಕೆಲ ವರ್ಷಗಳಿಂದ ಪ್ರೀತಿಯಲ್ಲಿರುವ ಈ ಜೋಡಿ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಡುವ ನಿರ್ಧಾರ ಮಾಡಿದೆ. ಆದರೆ ಧರ್ಮ ಬೇರೆ ಬೇರೆಯಾದ್ದರಿಂದ ಕುಟುಂಬಗಳು ಒಪ್ಪುವುದಿಲ್ಲವೆಂದು ಇಬ್ಬರೂ ಮನೆ ಬಿಟ್ಟು ಓಡಿ ಬಂದಿದ್ದಾರೆ. ಉತ್ತರ ಪ್ರದೇಶದ ಬರೇಲಿಯಲ್ಲಿರುವ ಅಗಸ್ತ್ಯ ಮುನಿ ಆಶ್ರಮದಲ್ಲಿ ವಿವಾಹವಾಗಿದ್ದಾರೆ. ಕೆ.ಕೆ.ಶಂಖಧರ್‌ ಹೆಸರಿನ ಪುರೋಹಿತರು ಈ ಜೋಡಿಗೆ ಹಿಂದೂ ಧರ್ಮದ ಪ್ರಕಾರ ವಿವಾಹವನ್ನು ಮಾಡಿಸಿದ್ದಾರೆ. ವಿವಾಹವಾದ ನಂತರ ಇಲ್ಮಾ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ತನ್ನ ಹೆಸರನ್ನು ಸೌಮ್ಯ ಶರ್ಮಾ ಎಂದು ಬದಲಿಸಿಕೊಂಡಿದ್ದಾಳೆ.

“ಸೋಮೇಶ್‌ ಮತ್ತು ಇಲ್ಮಾ ನನ್ನ ಬಳಿ ಬಂದು ಮದುವೆ ಮಾಡಿಸಿಕೊಡಿ ಎಂದು ಕೇಳಿಕೊಂಡರು. ಧರ್ಮ ಬೇರೆಯಾದ್ದರಿಂದ ಮನೆಯವರು ಯಾರೂ ಮದುವೆಯಲ್ಲಿ ಇರುವುದಿಲ್ಲ ಎಂದು ಹೇಳಿದರು. ನಾನು ಅವರ ದಾಖಲೆಗಳನ್ನು ಪರಿಶೀಲಿಸಿದ ನಂತರ ಒಪ್ಪಿ ಮದುವೆ ಮಾಡಿಸಿದ್ದೇನೆ” ಎಂದು ಹೇಳಿದ್ದಾರೆ ಪುರೋಹಿತರಾದ ಶಂಖಧರ್.‌

ಇದನ್ನೂ ಓದಿ: Pragya Singh Thakur | ಲವ್‌ ಜಿಹಾದ್‌ ವಿರುದ್ಧ ಹಿಂದು ಹೆಣ್ಣುಮಕ್ಕಳು ಆಟಂ ಬಾಂಬ್‌ಗಳಾಗಬೇಕು: ಪ್ರಜ್ಞಾ ಸಿಂಗ್ ಕರೆ

ಇತ್ತೀಚಿನ ದಿನಗಳಲ್ಲಿ ಹಿಂದೂ ಯುವತಿಯರು ಮುಸ್ಲಿಂ ಯುವಕನನ್ನು ವರಿಸಿ, ಅವರ ಧರ್ಮಕ್ಕೆ ಮತಾಂತರಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚಿವೆ. ಅದರಲ್ಲಿ ಹಲವು ಪ್ರಕರಣಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಯುವತಿಯರು ಪ್ರಾಣ ಕಳೆದುಕೊಂಡಿದ್ದು, ಅದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿವೆ. ಲವ್‌ ಜಿಹಾದ್‌ನಿಂದ ಹಿಂದೂ ಯುವತಿಯರಿಗೆ ವಂಚಿಸಿ, ಪ್ರಾಣ ಕಳೆದುಕೊಳ್ಳುವಂತೆ ಮಾಡಲಾಗುತ್ತಿದೆ ಎಂದು ಸಂಘಟನೆಗಳು ದೂರಲಾರಂಭಿಸಿವೆ. ಇದರ ವಿರುದ್ಧ ಸರ್ಕಾರಗಳೂ ಕ್ರಮಕ್ಕೆ ಮುಂದಾಗಿರುವುದನ್ನು ನಾವು ಕಾಣಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

PUBG Love: ಮಹಾರಾಷ್ಟ್ರದ ಮುಂಬೈನವರಾದ ಹಿಂದು ಯುವತಿಯು ಪಬ್ಜಿ ಆಡುವಾಗ ಪರಿಚಯವಾದ ಮುಸ್ಲಿಂ ಯುವಕನನ್ನು ಪ್ರೀತಿಸಿದ್ದಾರೆ. ಇವರ ಜತೆ ಪ್ರೀತಿಯ ನಾಟಕವಾಡಿದ ಮುಸ್ಲಿಂ ಯುವಕನು ಆಕೆಯನ್ನು ಮದುವೆಯಾಗಿದ್ದಾನೆ. ಅಲ್ಲದೆ, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ್ದಾನೆ. ಇದಾದ ಬಳಿಕ ಮುಸ್ಲಿಂ ಯುವಕನ ಕಿರುಕುಳ ತಾಳದ ಯುವತಿಯು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

VISTARANEWS.COM


on

PUBG Love
Koo

ಲಖನೌ: ಪಬ್ಜಿ ಆನ್‌ಲೈನ್‌ ಗೇಮ್‌ (PUBG Game) ಗೀಳಿಗೆ ಸಿಲುಕಿ ಪ್ರಾಣ ಕಳೆದುಕೊಂಡವರಿದ್ದಾರೆ. ದಿನವಿಡೀ ಪಬ್ಜಿ ಗೇಮ್‌ ಆಡಿ ಪರೀಕ್ಷೆಯಲ್ಲಿ ಫೇಲ್‌ ಆದವರಿದ್ದಾರೆ. ಗೆಳೆಯರ ಜತೆ ಜಗಳ ಆಡಿದವರಿದ್ದಾರೆ. ಆದರೆ, ಮಹಾರಾಷ್ಟ್ರದ ಯುವತಿಯೊಬ್ಬರ ಬಾಳನ್ನೇ ಪಬ್ಜಿ ಆನ್‌ಲೈನ್‌ ಗೇಮ್‌ ನರಕ ಮಾಡಿದೆ. ಹೌದು, ಪಬ್ಜಿ ಆಡುವಾಗ ಪರಿಚಯವಾದ ಮುಸ್ಲಿಂ ಯುವಕನನ್ನು (PUBG Love) ಮದುವೆಯಾದ ಮಹಾರಾಷ್ಟ್ರದ (Maharashtra) ಯುವತಿಯು ಈಗ ಆತನ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಮಹಾರಾಷ್ಟ್ರದ ಮುಂಬೈನವರಾದ ಹರ್ಷದಾ ಹಾಗೂ ಉತ್ತರ ಪ್ರದೇಶದ ಮೊಹಮ್ಮದ್‌ ಫುಜೈಲ್‌ ಅವರು ಆನ್‌ಲೈನ್‌ನಲ್ಲಿ ಪಬ್ಜಿ ಆಡುವಾಗ ಪರಿಚಯ ಮಾಡಿಕೊಂಡಿದ್ದಾರೆ. ಇಬ್ಬರ ನಡುವಿನ ಪರಿಚಯವು ಪ್ರೇಮಕ್ಕೆ ತಿರುಗಿದೆ. ಮನೆಯವರ ವಿರೋಧದ ಮಧ್ಯೆಯೂ ಹರ್ಷದಾ ಅವರು ಮೊಹಮ್ಮದ್‌ ಫುಜೈಲ್‌ನನ್ನು ಮದುವೆಯಾಗಿದ್ದಾರೆ. ಅಷ್ಟೇ ಅಲ್ಲ, ಮದುವೆಗೂ ಮುನ್ನ ಹರ್ಷದಾ ಅವರು ಇಸ್ಲಾಂಗೆ ಮತಾಂತರಗೊಂಡಿದ್ದು, ಫಾತಿಮಾ ಎಂಬುದಾಗಿ ಹೆಸರು ಬದಲಾಯಿಸಿಕೊಂಡಿದ್ದಾರೆ.

Love jihad

ಬಳಿಕ ನಡೆದಿದ್ದೇ ದುರಂತ

ಉತ್ತರ ಪ್ರದೇಶದ ಮೊರಾದಾಬಾದ್‌ ಜಿಲ್ಲೆಯ ಗಲ್‌ಶಾಹಿದ್‌ ಥಾಣಾ ಪ್ರದೇಶದಲ್ಲಿ ಮೊಹಮ್ಮದ್‌ ಫುಜೈಲ್‌ ಹಾಗೂ ಫಾತಿಮಾ ವಾಸವಿದ್ದರು. ಆದರೆ, ಕೆಲ ತಿಂಗಳಿಂದ ಮೊಹಮ್ಮದ್‌ ಫುಜೈಲ್‌ ಫಾತಿಮಾಗೆ ಕಿರುಕುಳ ನೀಡಿದ್ದಾನೆ. ಆಕೆಯ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ್ದಾನೆ. ಕೆಲ ದಿನಗಳ ಹಿಂದೆ ಫಾತಿಮಾ ಅವರ ತಾಯಿ ಮಾಧುರಿ ಮಿತ್ರ ಅವರಿಗೆ ಕರೆ ಮಾಡಿದ ಮೊಹಮ್ಮದ್‌ ಫುಜೈಲ್‌, “ನಿಮ್ಮ ಪುತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಬನ್ನಿ” ಎಂಬುದಾಗಿ ಹೇಳಿದ್ದಾನೆ. ಮಾಧುರಿ ಮಿತ್ರ ಅವರು ಕೂಡಲೇ ಮೊರಾದಾಬಾದ್‌ಗೆ ತೆರಳಿದಾಗ ಮಗಳ ಸ್ಥಿತಿ ಗಂಭೀರವಾಗಿರುವುದನ್ನು ಕಂಡಿದ್ದಾರೆ.

ದುರುಳನ ವಿರುದ್ಧ ದೂರು

ಮೊಹಮ್ಮದ್‌ ಫುಜೈಲ್‌ ವಿರುದ್ಧ ಮಾಧುರಿ ಮಿತ್ರ ಅವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ನನ್ನ ಮಗಳಿಗೆ ಇದಕ್ಕೂ ಮೊದಲು ಮದುವೆಯಾಗಿತ್ತು. ಆದರೆ, ದಾಂಪತ್ಯ ಸುಖಕರವಾಗಿರದೆ ಆಕೆ ವಿಚ್ಛೇದನ ಪಡೆದಳು. ಇದಾದ ಬಳಿಕ ಮೊಹಮ್ಮದ್‌ ಫುಜೈಲ್‌ ಆಕೆಗೆ ಪರಿಚಯವಾದ. ಎಷ್ಟು ಬೇಡವೆಂದರೂ ಕೇಳದೆ ಆತನನ್ನು ಮದುವೆಯಾದಳು. ಈಗ ನೋಡಿದರೆ ಆಕೆ ಪತಿಯಿಂದ ಕಿರುಕುಳ ಅನುಭವಿಸಿದ್ದಾಳೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮೊಹಮ್ಮದ್‌ ಫುಜೈಲ್‌ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Continue Reading

ದೇಶ

Sunetra Pawar: 25 ಸಾವಿರ ಕೋಟಿ ರೂ. ಹಗರಣ; ಅಜಿತ್‌ ಪವಾರ್‌ ಪತ್ನಿ ಸುನೇತ್ರಾಗೆ ಕ್ಲೀನ್‌ಚಿಟ್!

Sunetra Pawar: ಮಹಾರಾಷ್ಟ್ರ ರಾಜ್ಯ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 25 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಡಿಸಿಎಂ ಅಜಿತ್‌ ಪವಾರ್‌ ಅವರ ಪತ್ನಿ ಸುನೇತ್ರಾ ಪವಾರ್‌ ಅವರಿಗೆ ಕ್ಲೀನ್‌ಚಿಟ್‌ ಸಿಕ್ಕಿದೆ. ಇದು ಸಹಜವಾಗಿಯೇ ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Sunetra Pawar
Koo

ಮುಂಬೈ: ಬಿಜೆಪಿ ಬಳಿ ವಿಶೇಷ ವಾಷಿಂಗ್‌ ಮಷೀನ್‌ ಇದೆ, ಭ್ರಷ್ಟಾಚಾರದ ಕೇಸ್‌ ಇರುವ ಯಾವುದೇ ಪಕ್ಷದ ನಾಯಕರು ಬಿಜೆಪಿ ಸೇರಿದರೆ, ಅವರು ಎಲ್ಲ ಪ್ರಕರಣಗಳಿಂದಲೂ ಮುಕ್ತರಾಗುತ್ತಾರೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಲೇ ಇವೆ. ಇದರ ಮಧ್ಯೆಯೇ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ (Ajit Pawar) ಅವರ ಪತ್ನಿ ಸುನೇತ್ರಾ ಪವಾರ್‌ (Sunetra Pawar) ಅವರಿಗೆ ಮಹಾರಾಷ್ಟ್ರ ರಾಜ್ಯ ಸಹಕಾರ ಬ್ಯಾಂಕ್‌ನಲ್ಲಿ (MSCB) 25 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಕ್ಲೀನ್‌ಚಿಟ್‌ ಸಿಕ್ಕಿದೆ.

ಹೌದು, 25 ಸಾವಿರ ಕೋಟಿ ರೂ. ಮೊತ್ತದ ಹಗರಣದ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸ್‌ನ ಆರ್ಥಿಕ ಅಪರಾಧಗಳ ಘಟಕವು (EOW) ಸುನೇತ್ರಾ ಪವಾರ್‌ ಅವರಿಗೆ ಕ್ಲೀನ್‌ ಚಿಟ್‌ ನೀಡಿದೆ. “ಎಂಎಸ್‌ಸಿಬಿ ಬ್ಯಾಂಕ್‌ನ ಸಾಲ ಪ್ರಕರಣದಲ್ಲಿ ಸುನೇತ್ರಾ ಪವಾರ್‌ ಸೇರಿ ಹಲವರ ವಿರುದ್ಧ ಕೇಳಿಬಂದ ಆರೋಪಗಳ ಕುರಿತು ತನಿಖೆ ನಡೆಸಲಾಗಿದೆ. ಆದರೆ, ಯಾವುದೇ ರೀತಿಯ ಅಪರಾಧ, ಹಗರಣ ನಡೆದಿಲ್ಲ. ಇದರಿಂದ ಬ್ಯಾಂಕ್‌ಗೂ ಯಾವುದೇ ರೀತಿಯಲ್ಲಿ ನಷ್ಟವಾಗಿಲ್ಲ” ಎಂಬುದಾಗಿ ಕಳೆದ ಜನವರಿಯಲ್ಲಿಯೇ ಇಒಡಬ್ಲ್ಯೂ ತಯಾರಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಜಿತ್‌ ಪವಾರ್‌, ಸುನೇತ್ರಾ ಪವಾರ್‌ ಸೇರಿ ಹಲವರ ಕಾರ್ಖಾನೆಗಳಿಗೆ ಸಾಲ ನೀಡಿದ್ದು, ಇದರಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

ಉದ್ಧವ್‌ ಬಣದ ಶಿವಸೇನೆ ಟೀಕೆ

ಸುನೇತ್ರಾ ಪವಾರ್‌ ಅವರಿಗೆ ಕ್ಲೀನ್‌ ಚಿಟ್‌ ನೀಡಿರುವ ಕುರಿತು ಉದ್ಧವ್‌ ಠಾಕ್ರೆ ಬಣದ ಶಿವಸೇನೆಯು ಟೀಕೆ ಮಾಡಿದೆ. “ಪವಾರ್‌ ಅವರದ್ದು ಭ್ರಷ್ಟಾಚಾರದ ಕುಟುಂಬ ಎಂದು ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದರು. ಆದರೆ ಈಗ ಸುನೇತ್ರಾ ಪವಾರ್‌ ಅವರಿಗೆ ಕ್ಲೀನ್‌ ಚಿಟ್ ನೀಡಲಾಗಿದೆ. ಆರೋಪಿಗಳಾಗಿದ್ದವರು ಬಿಜೆಪಿ ಸೇರಿದರೆ, ಅವರಿಗೆ ಕ್ಲೀನ್‌ಚಿಟ್‌ ಸಿಗುತ್ತಿದೆ. ಸುನೇತ್ರಾ ಪವಾರ್‌ ಅವರು ಯಾವುದೇ ಅಪರಾಧ ಮಾಡಿಲ್ಲ ಎಂಬುದಾಗಿ ವರದಿ ತಯಾರಿಸಿ, ಅವರನ್ನು ದೋಷಮುಕ್ತರನ್ನಾಗಿಸಿದ್ದೇ ಇದಕ್ಕೆ ಸಾಕ್ಷಿಯಾಗಿದೆ” ಎಂದು ಶಿವಸೇನೆ ಟೀಕಿಸಿದೆ.

ಬಾರಾಮತಿಯಲ್ಲಿ ಪವಾರ್‌ ಬಳಗದ ಕಾದಾಟ

ಮಹಾರಾಷ್ಟ್ರದ ಬಾರಾಮತಿ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಪವಾರ್‌ ಕುಟುಂಬಸ್ಥರ ಮಧ್ಯೆಯೇ ತೀವ್ರ ಪೈಪೋಟಿ ಎದುರಾಗಿದೆ. ಎನ್‌ಸಿಪಿಯಿಂದ (ಶರದ್‌ ಪವಾರ್‌ ಬಣ) ಹಾಲಿ ಸಂಸದೆ, ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಸ್ಪರ್ಧಿಸುತ್ತಿದ್ದರೆ, ಇವರ ವಿರುದ್ಧ ಅಜಿತ್‌ ಪವಾರ್‌ ಬಣದ ಎನ್‌ಸಿಪಿಯಿಂದ ಸುನೇತ್ರಾ ಪವಾರ್‌ ಅವರು ಸ್ಪರ್ಧಿಸುತ್ತಿದ್ದಾರೆ. ಎನ್‌ಸಿಪಿ ಇಬ್ಭಾಗವಾದ ಬಳಿಕ ಎರಡೂ ಬಣಗಳ ನಡುವಿನ ಮೊದಲ ಕಾದಾಟ ಇದಾದ ಕಾರಣ ಚುನಾವಣೆ ಫಲಿತಾಂಶವು ತೀವ್ರ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Maoist Links Case: ಮಾವೋವಾದಿಗಳೊಂದಿಗೆ ನಂಟು ಪ್ರಕರಣ; ಸಾಯಿಬಾಬಾ, ಇತರ ಐವರನ್ನು ದೋಷಮುಕ್ತಗೊಳಿಸಿದ ಕೋರ್ಟ್‌

Continue Reading

ದೇಶ

Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Kotak Bank: ನಿಯಮಗಳ ಪಾಲನೆಯ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ ಹಲವು ನಿರ್ಬಂಧ ವಿಧಿಸಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ಈಗ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಕೂಡ ಹಲವು ನಿರ್ಬಂಧ ವಿಧಿಸಿದೆ. ಅದರಲ್ಲೂ, ಹೊಸ ಗ್ರಾಹಕರಿಗೆ ನೂತನ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಿಸುವುದು ಪ್ರಮುಖ ನಿರ್ಬಂಧವಾಗಿದೆ. ಹಾಗಾದರೆ, ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಪರಿಣಾಮ ಬೀರಲಿದೆ? ಇಲ್ಲಿದೆ ಮಾಹಿತಿ.

VISTARANEWS.COM


on

Kotak Bank
Koo

ಮುಂಬೈ: ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ (Kotak Bank) ಆರ್‌ಬಿಐ (RBI) ಶಾಕ್‌ ನೀಡಿದೆ. ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಟ್‌ ವಿತರಣೆ ಮಾಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು ಎಂಬುದು ಸೇರಿ ಹಲವು ನಿರ್ಬಂಧಗಳನ್ನು ವಿಧಿಸಿದೆ. ಇದರಿಂದಾಗಿ ಬ್ಯಾಂಕ್‌ಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ಗಳನ್ನು (Kotak Mahindra Bank Credit Cards) ಹೊಂದಿದವರ ಮೇಲೆ ಏನು ಪರಿಣಾಮ ಆಗಲಿದೆ? ಅವರಿಗೆ ಮೊಬೈಲ್‌ ಬ್ಯಾಂಕಿಂಗ್‌, ಆನ್‌ಲೈನ್‌ ಸೇವೆ ಇರಲಿದೆಯೇ? ಈ ಕುರಿತು ಆರ್‌ಬಿಐ ಹೇಳಿದ್ದೇನು? ಇಲ್ಲಿದೆ ಮಾಹಿತಿ.

ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರು, ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕ್‌ ಸೌಲಭ್ಯ ಹೊಂದಿರುವವರು ಸೇವೆಗಳನ್ನು ಪಡೆಯಬಹುದಾಗಿದೆ. ಹಾಗಾಗಿ, ಹಳೆಯ ಗ್ರಾಹಕರಿಗೆ ಆರ್‌ಬಿಐ ಆದೇಶದಿಂದ ಯಾವುದೇ ತೊಂದರೆ ಆಗುವುದಿಲ್ಲ.

ಹೊಸ ಗ್ರಾಹಕರಿಗೆ ಮಾತ್ರ ಆರ್‌ಬಿಐ ನಿರ್ಬಂಧಗಳು ಅನ್ವಯವಾಗುತ್ತವೆ ಎಂದು ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ತಿಳಿಸಿದೆ. “ಈಗಾಗಲೇ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೌಲಭ್ಯಗಳನ್ನು ಹೊಂದಿರುವ ಗ್ರಾಹಕರಿಗೆ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಸೇವೆಗಳನ್ನು ಮುಂದುವರಿಸಬಹುದು. ಈಗಾಗಲೇ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಹಳೆಯ ಗ್ರಾಹಕರಿಗೂ ಸೇವೆಗಳನ್ನು ಮುಂದುವರಿಸಲು ಯಾವುದೇ ನಿರ್ಬಂಧವಿಲ್ಲ” ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ. ಈ ಕುರಿತು ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಸ್ಪಷ್ಟನೆ ನೀಡಿದ್ದು, “ಹಳೆಯ ಗ್ರಾಹಕರಿಗೆ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ” ಎಂದು ತಿಳಿಸಿದೆ.

ಆರ್‌ಬಿಐ ನಿರ್ಬಂಧಕ್ಕೆ ಕಾರಣ ಏನು?

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ. 2022 ಹಾಗೂ 2023ರಲ್ಲಿ ಐಟಿ ಪರಿಶೀಲನೆ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Kotak Mahindra Bank: ಹೊಸ ಕ್ರೆಡಿಟ್ ಕಾರ್ಡ್ ನೀಡದಂತೆ ಕೊಟಕ್‌ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ; ಕಾರಣ ಇಲ್ಲಿದೆ

Continue Reading

ದೇಶ

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Narendra Modi: ಕರ್ನಾಟಕ ಸರ್ಕಾರವು ಮುಸ್ಲಿಮರಿಗೆ ಮೀಸಲಾತಿ ನೀಡುವ ದಿಸೆಯಲ್ಲಿ ಆ ಧರ್ಮದ ಎಲ್ಲರನ್ನೂ ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯೇ ಮಾಹಿತಿ ನೀಡಿದೆ. “ಮೀಸಲಾತಿ ನೀಡಲು ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿ ಕೆಟಗರಿಗೆ ಸೇರಿಸಿದೆ. ಇದು ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ಧವಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಒಬಿಸಿ ಮೀಸಲಾತಿ ನೀಡಬೇಕೇ ಹೊರತು, ಇಡೀ ಧರ್ಮವನ್ನೇ ಒಬಿಸಿಗೆ ಸೇರಿಸಿರುವುದು ಸರಿಯಲ್ಲ” ಎಂದು ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ. ಈಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ಭೋಪಾಲ್‌: ಎಲ್ಲ ಧರ್ಮಗಳಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ನೀಡಬೇಕಾದ ಒಬಿಸಿ ಮೀಸಲಾತಿ ಪಟ್ಟಿಗೆ (OBC Reservation) ಕರ್ನಾಟಕ ಸರ್ಕಾರವು (Karnataka Government) ಎಲ್ಲ ಮುಸ್ಲಿಮರನ್ನು ಸೇರಿಸಿದೆ. ಇದರ ವಿರುದ್ಧ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗವು (NCBC) ಅಸಮಾಧಾನ ವ್ಯಕ್ತಪಡಿಸಿದೆ. “ಇದು ಸಾಮಾಜಿಕ ನ್ಯಾಯ ತತ್ವದ ವಿರುದ್ಧವಾದ ನಡೆ” ಎಂದಿದೆ. ಇದರ ಬೆನ್ನಲ್ಲೇ, ಒಬಿಸಿ ಪಟ್ಟಿಗೆ ಮುಸ್ಲಿಮರನ್ನು ಸೇರಿಸಿದ ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇತರೆ ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್‌ ಎಂದಿಗೂ ಶತ್ರು” ಎಂದು ಪ್ರಧಾನಿ ಟೀಕಿಸಿದ್ದಾರೆ.

ಮಧ್ಯಪ್ರದೇಶದ ಸಾಗರ್‌ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಒಬಿಸಿ ಮೀಸಲಾತಿ ಕುರಿತು ನರೇಂದ್ರ ಮೋದಿ ಮಾತನಾಡಿದರು. “ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದ ಎಲ್ಲರನ್ನೂ ಕಾಂಗ್ರೆಸ್‌ ಸರ್ಕಾರವು ಒಬಿಸಿ ಪಟ್ಟಿಗೆ ಸೇರಿಸಿದೆ. ಆ ಮೂಲಕ ಧರ್ಮದ ಆಧಾರದ ಮೇಲೆ ಹಿಂಬಾಗಿಲಿನಿಂದ ಮೀಸಲು ನೀಡಿದೆ. ಭವಿಷ್ಯದ ಪೀಳಿಗೆಗಳನ್ನು ನಾಶಪಡಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದೆ. ಅದರಲ್ಲೂ, ಕಾಂಗ್ರೆಸ್‌ ಎಂದಿಗೂ ಒಬಿಸಿ ಸಮುದಾಯದವರ ಶತ್ರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ಮೋದಿ ಕುಟುಕಿದ್ದಾರೆ.

“ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ನಮ್ಮ ಸಂವಿಧಾನವು ನಿರ್ಬಂಧಿಸುತ್ತದೆ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಇದರ ವಿರುದ್ಧ ನಿಲುವು ತಾಳಿದ್ದರು. ಆದರೆ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕೆಲ ವರ್ಷಗಳ ಹಿಂದೆಯೇ ಕಾಂಗ್ರೆಸ್‌ ನಿರ್ಣಯ ತೆಗೆದುಕೊಂಡಿತ್ತು. ಇಂತಹ ಕಳ್ಳಾಟಗಳ ಮೂಲಕ ಕಾಂಗ್ರೆಸ್‌ ಜನರನ್ನು ಮೂರ್ಖರನ್ನಾಗಿಸಲು ಯತ್ನಿಸುತ್ತಿದೆ. ಆದರೆ, ಒಬಿಸಿ ಸಮುದಾಯದವರ ಹಕ್ಕುಗಳನ್ನು ಕಸಿದುಕೊಂಡ ಕಾಂಗ್ರೆಸ್‌ಗೆ ಜನರೇ ಸರಿಯಾದ ಪಾಠ ಕಲಿಸಬೇಕು” ಎಂದು ಮೋದಿ ಚಾಟಿ ಬೀಸಿದ್ದಾರೆ.

ದಾಖಲೆ ಕೊಟ್ಟ ಎನ್‌ಸಿಬಿಸಿ

ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯು ದಾಖಲೆಗಳನ್ನೂ ನೀಡಿದೆ. ಮಾಹಿತಿ ಪ್ರಕಾರ, “ಕರ್ನಾಟಕಲ್ಲಿ ಮುಸ್ಲಿಮರ ಸಂಖ್ಯೆ ಶೇ.12.92ರಷ್ಟಿದೆ. ಕೆಟಗರಿ II-B ಅನ್ವಯ ಕರ್ನಾಟಕದಲ್ಲಿರುವ ಎಲ್ಲ ಮುಸ್ಲಿಮರು ಒಬಿಸಿ ಕೆಟಗರಿ ವ್ಯಾಪ್ತಿಗೆ ಸೇರುತ್ತಾರೆ. ಕೆಟಗರಿ 1ರಲ್ಲಿ 17 ಮುಸ್ಲಿಂ ಸಮುದಾಯಗಳು, 2ಎ ಕೆಟಗರಿಯಲ್ಲಿ 19 ಮುಸ್ಲಿಂ ಸಮುದಾಯಗಳು ಬರುತ್ತವೆ. ಇದು ಸಾಮಾಜಿಕ ನ್ಯಾಯ ತತ್ವದ ವಿರುದ್ಧದ ತೀರ್ಮಾನವಾಗಿದೆ” ಎಂಬುದಾಗಿ ಎನ್‌ಸಿಬಿಸಿ ತಿಳಿಸಿದೆ.

“ಹಿಂದುಗಳು, ಮುಸ್ಲಿಮರು ಸೇರಿ ಎಲ್ಲ ಧರ್ಮಗಳಲ್ಲಿಯೇ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯದವರಿಗೆ ಮಾತ್ರ ಒಬಿಸಿ ಮೀಸಲಾತಿ ನೀಡಲಾಗುತ್ತಿದೆ. ಆದರೆ, ಒಂದಿಡೀ ಧರ್ಮಕ್ಕೇ ಒಬಿಸಿ ಮೀಸಲಾತಿ ನೀಡುವುದು ಆ ಮೀಸಲಾತಿಯ ತತ್ವಕ್ಕೆ ವಿರುದ್ಧವಾಗಿದೆ. ಆದರೆ, ಎಲ್ಲ ಮುಸ್ಲಿಂ ಸಮುದಾಯದವರನ್ನು ಒಬಿಸಿಗೆ ಸೇರ್ಪಡೆ ಮಾಡುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಒಬಿಸಿ ಕೆಟಗರಿ ವ್ಯಾಪ್ತಿಯ ಹಿಂದುಳಿದ ಸಮುದಾಯದವರ ಹಕ್ಕುಗಳನ್ನು ಕಸಿದುಕೊಂಡಿದೆ. ಹಾಗೆಯೇ, ಮೀಸಲಾತಿ ನೀಡಿರುವ ಕುರಿತು ಯಾವುದೇ ಮಾಹಿತಿಯನ್ನೂ ರಾಜ್ಯ ಸರ್ಕಾರ ಒದಗಿಸಿಲ್ಲ” ಎಂಬುದಾಗಿ ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ.

ಮೀಸಲಾತಿ ಕೊಟ್ಟಿದ್ದು ನಿಜ ಎಂದ ಸಿದ್ದರಾಮಯ್ಯ

ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಕೊಟ್ಟಿದ್ದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ” ಈ ಕುರಿತು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಲಾಗಿರುವುದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರವ ನರೇಂದ್ರ ಮೋದಿ ಅವರ ಸರ್ಕಾರವಾಗಲಿ ಇಲ್ಲಿಯ ವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: Muslims OBC Quota: ಎಲ್ಲ ಮುಸ್ಲಿಮರನ್ನು ಒಬಿಸಿಗೆ ಸೇರಿಸಿದ ಸಿದ್ದರಾಮಯ್ಯ ಸರ್ಕಾರ; ರಾಷ್ಟ್ರೀಯ ಆಯೋಗ ಕೆಂಡ!

Continue Reading
Advertisement
Union Minister Pralhad Joshi Statement in Unakal
ಹುಬ್ಬಳ್ಳಿ13 mins ago

Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

DC vs GT
ಕ್ರೀಡೆ33 mins ago

DC vS GT: ಗುಜರಾತ್​ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು ; ಪ್ಲೇ ಆಫ್​ ರೇಸ್ ಜೀವಂತ

PUBG Love
ದೇಶ33 mins ago

PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

Nada Gheethe
ಪ್ರಮುಖ ಸುದ್ದಿ44 mins ago

‌Nada Geethe: ನಾಡಗೀತೆ ವಿವಾದ; ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್

Sachin Tendulkar Birthday
ಕ್ರೀಡೆ1 hour ago

Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

PM Narendra Modi
ಕರ್ನಾಟಕ1 hour ago

PM Narendra Modi: ಪ್ರಧಾನಿ ಮೋದಿಗೆ ‘ಪ್ರಾಮಿಸ್ಡ್ ನೇಷನ್’ ಪುಸ್ತಕ ಅರ್ಪಣೆ

Chikkaballapur Lok Sabha Constituency Congress candidate Raksha Ramaiah election campaign in Nelamangala
ಚಿಕ್ಕಬಳ್ಳಾಪುರ2 hours ago

Lok Sabha Election 2024: ನೆಲಮಂಗಲದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

Sunetra Pawar
ದೇಶ2 hours ago

Sunetra Pawar: 25 ಸಾವಿರ ಕೋಟಿ ರೂ. ಹಗರಣ; ಅಜಿತ್‌ ಪವಾರ್‌ ಪತ್ನಿ ಸುನೇತ್ರಾಗೆ ಕ್ಲೀನ್‌ಚಿಟ್!

2nd PUC Exam
ಕರ್ನಾಟಕ2 hours ago

2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌