Chandan Ram Das: ಉತ್ತರಾಖಂಡ್​ ಸಚಿವ ಚಂದನ್ ರಾಮ್​ ದಾಸ್​ ನಿಧನ; ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ - Vistara News

ದೇಶ

Chandan Ram Das: ಉತ್ತರಾಖಂಡ್​ ಸಚಿವ ಚಂದನ್ ರಾಮ್​ ದಾಸ್​ ನಿಧನ; ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಚಂದನ್ ರಾಮ್ ದಾಸ್​ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ‘ಉತ್ತರಾಖಂಡ್​ ಸರ್ಕಾರದಲ್ಲಿ ಸಚಿವರಾಗಿದ್ದ ಚಂದನ್ ರಾಮ್​ ದಾಸ್​ ನಿಧನ ನೋವು ತಂದಿದೆ. ಉತ್ತರಾಖಂಡ್ ಅಭಿವೃದ್ಧಿಗೆ ಅವರು ಮಹತ್ವದ ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

VISTARANEWS.COM


on

Uttarakhand minister Chandan Ram Das dies today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡೆಹ್ರಾಡೂನ್​: ಉತ್ತರಾಖಂಡ್​ನ ಹೆದ್ದಾರಿ ಮತ್ತು ಸಾಮಾಜಿಕ ಕಲ್ಯಾಣ ಇಲಾಖೆ ಸಚಿವ ಚಂದನ್ ರಾಮ್ ದಾಸ್​ (Chandan Ram Das) ಅವರು ಇಂದು ಬಾಘೇಶ್ವರ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 65ವರ್ಷ ವಯಸ್ಸಾಗಿತ್ತು. ಇಂದು ಮಧ್ಯಾಹ್ನ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತು ಮತ್ತು ಒಮ್ಮೆಲೇ ಆರೋಗ್ಯ ಕ್ಷೀಣವಾಯಿತು. ಕೂಡಲೇ ಸಚಿವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು, ಐಸಿಯುವಿನಲ್ಲಿ ಇಟ್ಟು ಚಿಕಿತ್ಸೆ ನೀಡಲಾಯಿತು. ಆದರೆ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬಿಜೆಪಿಯ ಹಿರಿಯ ನಾಯಕರಾಗಿದ್ದ ಚಂದನ್ ರಾಮ್​ ದಾಸ್ ಅವರು 2007ರಿಂದಲೂ ಬಾಘೇಶ್ವರ್​ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ನಾಲ್ಕು ಅವಧಿಗೆ ಶಾಸಕರಾದರೂ ಇದೇ ಮೊದಲ ಬಾರಿಗೆ ಸಚಿವರಾಗಿದ್ದರು.

ಚಂದನ್ ರಾಮ್ ದಾಸ್​ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ‘ಉತ್ತರಾಖಂಡ್​ ಸರ್ಕಾರದಲ್ಲಿ ಸಚಿವರಾಗಿದ್ದ ಚಂದನ್ ರಾಮ್​ ದಾಸ್​ ನಿಧನ ನೋವು ತಂದಿದೆ. ಉತ್ತರಾಖಂಡ್ ಅಭಿವೃದ್ಧಿಗೆ ಅವರು ಮಹತ್ವದ ಕೊಡುಗೆ ಕೊಟ್ಟಿದ್ದಾರೆ. ಉತ್ತರಾಖಂಡ್ ಜನರ ಸೇವೆಯನ್ನು ಶ್ರದ್ಧೆಯಿಂದ ಮಾಡಿದ್ದಾರೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಲಭ್ಯವಾಗಲಿ’ ಎಂದಿದ್ದಾರೆ. ಹಾಗೇ, ಉತ್ತರಾಖಂಡ್​ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಟ್ವೀಟ್ ಮಾಡಿ ‘ನನ್ನ ಕ್ಯಾಬಿನೇಟ್​ನ ಸಹೋದ್ಯೋಗಿ ಚಂದನ್ ರಾಮ್ ದಾಸ್ ನಿಧನದ ವಾರ್ತೆ ಕೇಳಿ ಶಾಕ್​ ಆಗಿದೆ. ರಾಜಕೀಯ ಮತ್ತು ಸಾಮಾಜಿಕ ಸೇವೆ ಈ ಎರಡೂ ಕ್ಷೇತ್ರಗಳಿಗೆ ಇದು ತುಂಬಲಾರದ ನಷ್ಟ’ ಎಂದಿದ್ದಾರೆ. ಇನ್ನಿತರ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಸಚಿವರ ಸಾವಿನ ನಿಮಿತ್ತ ಉತ್ತರಾಖಂಡ್​ನಲ್ಲಿ ಎಲ್ಲ ಕಡೆ ಸರ್ಕಾರಿ ಕಚೇರಿಗಳು ಇಂದು ಬಂದ್ ಆಗಿವೆ. ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

Lok Sabha Election: ವೇಣುಗೋಪಾಲ್​ ಕಾಂಗ್ರೆಸ್ ಸದಸ್ಯರಿಗೆ ಹುದ್ದೆಗಳನ್ನು ನೀಡಲು ಹಣ ಪಡೆಯುತ್ತಾರೆ. ಪ್ರತಿ ಕೆಲಸಕ್ಕೆ ರಾಜ್ಯ ಸರ್ಕಾರಗಳ ಪ್ರತಿಯೊಬ್ಬ ಸಚಿವರಿಂದ ಕಮಿಷನ್ ಪಡೆಯುವ ಡೀಲರ್ ಅವರು. ಅಲ್ಲದೆ ಮಹಿಳಾ ಅಭ್ಯರ್ಥಿಯನ್ನು (ಸುಚರಿತಾ ಮೊಹಾಂತಿ) ಗದರಿಸಿದ್ದಾರೆ. ಹೀಗಾಗಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ” ಎಂದು ಶಿವಸೇನೆಗೆ ಸೇರಿದ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

VISTARANEWS.COM


on

Lok Sabha Election
Koo

ನವದೆಹಲಿ: ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಲ್ಲಿ (Lok Sabha Election) ಕಾಂಗ್ರೆಸ್​ಗೆ ದೊಡ್ಡ ಹಿನ್ನಡೆ ಉಂಟಾಗಿದ್ದು, ಪಕ್ಷವು ಚುನಾವಣಾ ಖರ್ಚಿಗೆ ಹಣ ನೀಡಿಲ್ಲವೆಂದು ಅಲ್ಲಿನ ಅಭ್ಯರ್ಥಿ ತನ್ನ ಟಿಕೆಟ್ ಅನ್ನು ಹಿಂದಿರುಗಿಸಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದರೂ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಭ್ಯರ್ಥಿ ಸುಚರಿತಾ ಮೊಹಾಂತಿ ಹೇಳಿದ್ದಾರೆ. ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್​ನ ಮಾಜಿ ನಾಯಕ ಸಂಜಯ್ ನಿರುಪಮ್ ಅವರು ಕೆ.ಸಿ.ವೇಣುಗೋಪಾಲ್ ಅವರನ್ನು ‘ಡೀಲರ್’ ಎಂದು ಕರೆದಿದ್ದಾರೆ. ಇದು ‘ಇಂದಿನ ಬಡ ಕಾಂಗ್ರೆಸ್’ ಎಂದು ಹೇಳಿದ್ದಾರೆ.

ವೇಣುಗೋಪಾಲ್​ ಕಾಂಗ್ರೆಸ್ ಸದಸ್ಯರಿಗೆ ಹುದ್ದೆಗಳನ್ನು ನೀಡಲು ಹಣ ಪಡೆಯುತ್ತಾರೆ. ಪ್ರತಿ ಕೆಲಸಕ್ಕೆ ರಾಜ್ಯ ಸರ್ಕಾರಗಳ ಪ್ರತಿಯೊಬ್ಬ ಸಚಿವರಿಂದ ಕಮಿಷನ್ ಪಡೆಯುವ ಡೀಲರ್ ಅವರು. ಅಲ್ಲದೆ ಮಹಿಳಾ ಅಭ್ಯರ್ಥಿಯನ್ನು (ಸುಚರಿತಾ ಮೊಹಾಂತಿ) ಗದರಿಸಿದ್ದಾರೆ. ಹೀಗಾಗಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ” ಎಂದು ಶಿವಸೇನೆಗೆ ಸೇರಿದ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

ಸುಚರಿತಾ ಮೊಹಾಂತಿ ಟಿಕೆಟ್ ನಿರಾಕರಿಸಿದ್ದು ಯಾಕೆ?

ಸುಚರಿತಾ ಮೊಹಾಂತಿ 10 ವರ್ಷಗಳ ಹಿಂದೆ ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಪತ್ರಕರ್ತೆಯಾಗಿದ್ದರು. ಈ ಚುನಾವಣೆಯಲ್ಲಿ ಅವರು ಕಾಂಗ್ರೆಸ್​ ಟಿಕೆಟ್ ಪಡೆದಿದ್ದರು. ಆದರೆ ಈಗ ಪ್ರಚಾರಕ್ಕಾಗಿ ತನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ಅವರು ಹೇಳಿದ್ದಾರೆ. “ಪಕ್ಷವು ನನಗೆ ಹಣ ನೀಡದ ಕಾರಣ ನಾನು ಟಿಕೆಟ್ ಹಿಂದಿರುಗಿಸಿದ್ದೇನೆ. ಮತ್ತೊಂದು ಕಾರಣವೆಂದರೆ, ಏಳು ವಿಧಾನಸಭಾ ಕ್ಷೇತ್ರಗಳ ಕೆಲವು ಸ್ಥಾನಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿಲ್ಲ. ಬದಲಾಗಿ, ಕೆಲವು ದುರ್ಬಲ ಅಭ್ಯರ್ಥಿಗಳಿಗೆ ಟಿಕೆಟ್ ಸಿಕ್ಕಿದೆ. ನಾನು ಈ ರೀತಿ ಸ್ಪರ್ಧಿಸಲು ಸಾಧ್ಯವಿಲ್ಲ” ಎಂದು ಸುಚರಿತಾ ಹೇಳಿದ್ದಾರೆ.

“ಪುರಿ ಸಂಸದೀಯ ಕ್ಷೇತ್ರದಲ್ಲಿ ನಮ್ಮ ಪ್ರಚಾರಕ್ಕೆ ತೀವ್ರ ಹೊಡೆತ ಬಿದ್ದಿದೆ ಏಕೆಂದರೆ ಪಕ್ಷವು ನನಗೆ ಹಣವನ್ನು ನಿರಾಕರಿಸಿದೆ. ಎಐಸಿಸಿ ಒಡಿಶಾ ಉಸ್ತುವಾರಿ ಅಜಯ್ ಕುಮಾರ್ ಜಿ ಸಲಹೆ ಕೊಟ್ಟಿದ್ದಾರೆ. ನಾನು ಸಂಬಳ ಪಡೆಯುವ ವೃತ್ತಿಪರ ಪತ್ರಕರ್ತಳಾಗಿದ್ದೆ, 10 ವರ್ಷಗಳ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ. ಪುರಿಯಲ್ಲಿನ ನನ್ನ ಪ್ರಚಾರಕ್ಕಾಗಿ ನನ್ನಲ್ಲಿರುವ ಎಲ್ಲವನ್ನೂ ನೀಡಿದ್ದೇನೆ” ಎಂದು ಮೊಹಾಂತಿ ಕೆಸಿ ವೇಣುಗೋಪಾಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

ಪ್ರಗತಿಪರ ರಾಜಕೀಯಕ್ಕಾಗಿ ನನ್ನ ಅಭಿಯಾನವನ್ನು ಬೆಂಬಲಿಸಲು ನಾನು ಸಾರ್ವಜನಿಕ ದೇಣಿಗೆ ಅಭಿಯಾನ ಪ್ರಯತ್ನಿಸಿದೆ ಆದರೆ ಇಲ್ಲಿಯವರೆಗೆ ಹೆಚ್ಚಿನ ಯಶಸ್ಸು ಸಿಗಲಿಲ್ಲ. ಪ್ರಚಾರ ವೆಚ್ಚವನ್ನು ಕನಿಷ್ಠ ಮಟ್ಟಕ್ಕೆ ಕಡಿತಗೊಳಿಸಲು ನಾನು ಪ್ರಯತ್ನಿಸಿದೆ” ಎಂದು ಅವರು ಹೇಳಿದರು.

“ನಾನು ಸ್ವಂತವಾಗಿ ಹಣವನ್ನು ಸಂಗ್ರಹಿಸಲು ಸಾಧ್ಯವಾಗದ ಕಾರಣ, ಪುರಿ ಸಂಸತ್ ಕ್ಷೇತ್ರದಲ್ಲಿ ಪರಿಣಾಮಕಾರಿ ಪ್ರಚಾರಕ್ಕಾಗಿ ಅಗತ್ಯವಾದ ಪಕ್ಷದ ನಿಧಿಯನ್ನು ನೀಡುವಂತೆ ಒತ್ತಾಯಿಸಿ ನಮ್ಮ ಪಕ್ಷದ ಕೇಂದ್ರ ನಾಯಕತ್ವಕ್ಕೆ ಮನವಿ ಮಾಡಿದ್ದೆ. ಈ 2024 ರ ಚುನಾವಣೆಯಲ್ಲಿ, ಜನರು ಎರಡು ಭ್ರಷ್ಟ ಮತ್ತು ಹಗರಣಕೋರ ಆಡಳಿತ ಪಕ್ಷಗಳಾದ ಬಿಜೆಪಿ ಮತ್ತು ಬಿಜೆಡಿ ಹೊರಹಾಕಲು ಸಜ್ಜಾಗಿದ್ದಾರೆ. ಕಾಂಗ್ರೆಸ್​​ನ 5 ನ್ಯಾಯಗಳು ಮತ್ತು 25 ಗ್ಯಾರಂಟಿಗಳಿಗೆ ಮತ ಚಲಾಯಿಸಲಿದ್ದಾರೆ” ಎಂದು ಮೊಹಾಂತಿ ಹೇಳಿದರು.

ಹಣದ ಕೊರತೆ ಪುರಿಯಲ್ಲಿನ ನಮ್ಮ ಗೆಲುವನ್ನು ತಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ. ಪಕ್ಷದ ಧನಸಹಾಯವಿಲ್ಲದೆ, ಪುರಿಯಲ್ಲಿ ಪ್ರಚಾರವನ್ನು ನಡೆಸಲು ಸಾಧ್ಯವಾಗುವುದಿಲ್ಲ ಎಂದು ನಾನು ವಿಷಾದಿಸುತ್ತೇನೆ. ಆದ್ದರಿಂದ ನಾನು ಪುರಿ ಸಂಸದೀಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಹಿಂದಿರುಗಿಸುತ್ತೇನೆ” ಎಂದಿರುವ ಸುಚರಿತಾ ಪಕ್ಷ ಮತ್ತು ರಾಹುಲ್ ಗಾಂಧಿಗೆ ತಮ್ಮ ಬೆಂಬಲ ಮುಂದುವರಿಸಿದ್ದಾರೆ.

ಪ್ರಸ್ತುತ ಬಿಜು ಜನತಾ ದಳದ (ಬಿಜೆಡಿ) ಪಿನಾಕಿ ಮಿಶ್ರಾ ಅವರ ವಶದಲ್ಲಿರುವ ಪುರಿ ಕ್ಷೇತ್ರದಿಂದ ಬಿಜೆಪಿ ಸಂಬಿತ್ ಪಾತ್ರಾ ಅವರನ್ನು ಕಣಕ್ಕಿಳಿಸಿದೆ. ಪುರಿಯಲ್ಲಿ ಮೇ 25 ರಂದು ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

VISTARANEWS.COM


on

Lok Sabha Election
Koo

ನವದೆಹಲಿ: ಹಿಂದಿನ ಕಾಂಗ್ರೆಸ್​ ಸರ್ಕಾರಗಳು ಪಾಕಿಸ್ತಾನದ ಭಯೋತ್ಪಾದನೆಯನ್ನು ನಿಗ್ರಹಿಸಲು ಯಾವುದೇ ಪ್ರಯತ್ನ ಮಾಡುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಹಿಂದಿನ ಸರ್ಕಾರಗಳು ಶಾಂತಿಯ ಭರವಸೆಯೊಂದಿಗೆ ಪಾಕಿಸ್ತಾನಕ್ಕೆ “ಪ್ರೇಮ ಪತ್ರಗಳನ್ನು” ಕಳುಹಿಸುತ್ತಿದ್ದವು. ಪ್ರತಿಯಾಗಿ ಅವರು ಹೆಚ್ಚಿನ ಭಯೋತ್ಪಾದಕರನ್ನು ಕಳುಹಿಸುತ್ತಿದ್ದರು ಎಂದು ಅವರು ಲೇವಡಿ ಮಾಡಿದರು. ಮುಂದುವರಿದ ಮೋದಿ. ಈ ಚುನಾವಣೆಯಲ್ಲಿ (Lok Sabha Election ) ರಾಹುಲ್ ಪ್ರಧಾನಿಯಾಗಬೇಕು ಎಂದು ಪಾಕಿಸ್ತಾನ ಬಯಸುತ್ತಿದೆ. ಆದರೆ, ಬಲಿಷ್ಠ ಭಾರತ ಬಲವಾದ ಸರ್ಕಾರ ಬಯಸಿದೆ ಎಂದು ನುಡಿದಿದ್ದಾರೆ.

ಜಾರ್ಖಂಡ್​​ನ ಪಲಮುದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭಯೋತ್ಪಾದಕರು ನಮ್ಮ ದೇಶದ ಮುಗ್ಧರನ್ನು ಮುಕ್ತವಾಗಿ ಕೊಲ್ಲುತ್ತಿದ್ದರು. ಪ್ರತಿಯಾಗಿ ಇಲ್ಲಿನ ಸರ್ಕಾರವು ಪಾಕಿಸ್ತಾನಕ್ಕೆ ಪ್ರೇಮ ಪತ್ರಗಳನ್ನು ಬರೆಯುತ್ತಿತ್ತು. ಆದರೆ ಪಾಕಿಸ್ತಾನವು ಪತ್ರಗಳಿಗೆ ಪ್ರತಿಕ್ರಿಯೆಯಾಗಿ ಇನ್ನಷ್ಟು ಭಯೋತ್ಪಾದಕರನ್ನು ಕಳುಹಿಸುತ್ತಿತ್ತು. ಆದರೆ ನಾವು ನಿಮ್ಮ ಒಂದು ಮತದ ಶಕ್ತಿಯಿಂದ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದ್ದೆವು. ಅಂತೆಯೇ ನವಭಾರತ ಪಾಕ್​ಗೆ ನುಗ್ಗಿ ಹೊಡೆಯುತ್ತಿದೆ ಎಂದು ಹೇಳಿದರು.

ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋಗುತ್ತಿದ್ದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ಸಾಯುತ್ತಿದ್ದ ಸಮಯವಿತ್ತು. ಅದೊಂದು ನಾಚಿಕೆಯ ವಿಷಯವಾಗಿತ್ತು. ಕಾಂಗ್ರೆಸ್​ನ ಹೇಡಿ ಸರ್ಕಾರಗಳು ಜಗತ್ತಿನ ಮುಂದೆ ಇದರ ಬಗ್ಗೆ ಅಳುತ್ತಿದ್ದವು” ಎಂದು ಪ್ರಧಾನಿ ಲೇವಡಿ ಮಾಡಿದರು.

ಸರ್ಜಿಕಲ್ ಮತ್ತು ಬಾಲಕೋಟ್ ದಾಳಿಗಳು ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಈಗ ವಿಶ್ವಾದ್ಯಂತ ಸಹಾಯವನ್ನು ಕೋರುತ್ತಿದೆ ಮತ್ತು “ಬಚಾವೋ, ಬಚಾವೋ (ಕಾಪಾಡಿ ಕಾಪಾಡಿ )” ಎಂದು ಕೂಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

ಪಾಕಿಸ್ತಾನದ ನಾಯಕರು ಕಾಂಗ್ರೆಸ್​​ನ ಶೆಹಜಾದಾ (ರಾಹುಲ್ ಗಾಂಧಿ) ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಬಲಿಷ್ಠ ಭಾರತವು ಈಗ ಬಲವಾದ ಸರ್ಕಾರವನ್ನು ಬಯಸುತ್ತದೆ” ಎಂದು ಅವರು ಹೇಳಿದರು.

ಮೋದಿ ಜತೆಗಾರರಿಗೆ ಅವರ ಬಗ್ಗೆಯೇ ಭಯವಿದೆ: ಪ್ರಿಯಾಂಕಾ ಗಾಂಧಿ

ಇದಕ್ಕೂ ಮುನ್ನ ಶನಿವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿಯವರನ್ನು “ಅರಮನೆಯಲ್ಲಿ ವಾಸಿಸುವ ಚಕ್ರವರ್ತಿ” ಎಂದು ಕರೆದಿದ್ದಾರೆ. “ಪ್ರಧಾನಿ ಮೋದಿ ನನ್ನ ಸಹೋದರನನ್ನು (ರಾಹುಲ್​) ರಾಜಕುಮಾರ ಎಂದು ಕರೆಯುತ್ತಾರೆ. ನನ್ನ ಸಹೋದರ 4,000 ಕಿಲೋಮೀಟರ್ ನಡೆದು, ದೇಶದ ಜನರನ್ನು ಭೇಟಿಯಾಗಿದ್ದಾರೆ. ಅವರ ಸಮಸ್ಯೆಗಳೇನು ಎಂದು ಆಲಿಸಿದ್ದಾರೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಮತ್ತೊಂದೆಡೆ, ಚಕ್ರವರ್ತಿ ನರೇಂದ್ರ ಮೋದಿ ಅರಮನೆಗಳಲ್ಲಿ ಬೀಡು ಬಿಡುತ್ತಾರೆ. ರೈತರು ಮತ್ತು ಮಹಿಳೆಯರ ಅಸಹಾಯಕತೆಯನ್ನು ಅವರು ಹೇಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ?” ಎಂದು ಅವರು ಗುಜರಾತ್​ನ ಬನಸ್ಕಥಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದರು

“ನರೇಂದ್ರ ಮೋದಿ ಅಧಿಕಾರದಿಂದ ಮೆರೆಯುತ್ತಿದ್ದಾರೆ. ಅವನ ಸುತ್ತಲಿನ ಜನರು ಅವರಿಗೆ ಹೆದರುತ್ತಾರೆ. ಯಾರೂ ಅವನಿಗೆ ಏನನ್ನೂ ಹೇಳುವುದಿಲ್ಲ. ಯಾರಾದರೂ ಧ್ವನಿ ಎತ್ತಿದರೆ ಆ ಧ್ವನಿಯನ್ನೇ ನಿಗ್ರಹಿಸಲಾಗುತ್ತದೆ ಎಂದು ಅವರು ಹೇಳಿದರು.

Continue Reading

ಆರೋಗ್ಯ

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಮೊಬೈಲ್ ಫೋನ್‌ಗಳು, ಟ್ಯಾಬ್‌ಗಳು, ಗೇಮಿಂಗ್ ಸಾಧನಗಳು ಮತ್ತು ಪರದೆಯ ಬಳಕೆಯಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಬಳಕೆಯಿಂದಾಗಿ ಮಕ್ಕಳಲ್ಲಿ ವಿಳಂಬ ಚಟುವಟಿಕೆಗಳು ಮಾತ್ರವಲ್ಲದೇ 15 ರಿಂದ 30 ವರ್ಷದೊಳಗಿನವರಲ್ಲಿ ಶ್ರವಣ ದೋಷ ಹೆಚ್ಚಾಗಿ ಕಂಡು ಬರುತ್ತಿದೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದೆ. ಈ ಕುರಿತು ನಡೆದ ಸಂಶೋಧನೆಯ ಮಾಹಿತಿ (Mobile Side Effect)ಇಲ್ಲಿದೆ.

VISTARANEWS.COM


on

By

Mobile Side Effect
Koo

ಕೋವಿಡ್ (covid) ಬಳಿಕ ಕಳೆದ ಮೂರು ನಾಲ್ಕು ವರ್ಷಗಳಿಂದ ಮಕ್ಕಳು (Mobile Side Effect) ತಡವಾಗಿ ಮಾತನಾಡುವ ಪ್ರಕರಣಗಳು, ಸೀಮಿತ ಭಾಷೆಯೊಂದಿಗೆ ಮತ್ತು ಸ್ವಲೀನತೆಯ (autism) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಮೊಬೈಲ್ ಫೋನ್ ಗಳ (phone) ಸುದೀರ್ಘ ಬಳಕೆಯಿಂದ ಶ್ರವಣ ದೋಷ (Hearing Disorder) ಉಂಟಾಗುತ್ತದೆ ಎಂದು ಚಂಡೀಗಢ (Chandigarh) ಪಿಜಿಐನ (PGI) ಓಟೋಲರಿಂಗೋಲಜಿ ವಿಭಾಗದ ಪ್ರೊ. ಸಂಜಯ್ ಮುಂಜಾಲ್ ತಿಳಿಸಿದ್ದಾರೆ.


ಪಿಜಿಐನ ಓಟೋಲರಿಂಗೋಲಜಿ (ಇಎನ್‌ಟಿ) ವಿಭಾಗವು ಐಸಿಎಂಆರ್‌ಗೆ ಸಲ್ಲಿಸಿದ ಹೊಸ ಸಂಶೋಧನೆ ವರದಿಯಲ್ಲಿ ಮೊಬೈಲ್ ಫೋನ್‌ಗಳು, ಟ್ಯಾಬ್‌ಗಳು, ಗೇಮಿಂಗ್ ಸಾಧನಗಳು ಮತ್ತು ಪರದೆಯ ಬಳಕೆಯಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಬಳಕೆಯಿಂದಾಗಿ ಮಕ್ಕಳಲ್ಲಿ ವಿಳಂಬ ಚಟುವಟಿಕೆಗಳು ಮಾತ್ರವಲ್ಲದೇ 15 ರಿಂದ 30 ವರ್ಷದೊಳಗಿನವರಲ್ಲಿ ಶ್ರವಣ ದೋಷ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೇಳಿದೆ. ಕೋವಿಡ್ ಅನಂತರ ಮಕ್ಕಳಲ್ಲಿ ಏಕಮುಖ ಸಂವಹನ ಹೆಚ್ಚಾಗಿದೆ. ಮೊಬೈಲ್ ನಲ್ಲಿ ಆಟಗಳನ್ನು ಆಡುವುದು, ಫೋನ್‌ ಪರದೆಯನ್ನು ವೀಕ್ಷಿಸುವುದು, ಟ್ಯಾಬ್‌ಗಳಲ್ಲಿ ಏಕಮುಖ ಸಂವಹನ ನಡೆಸುವುದು ಅತ್ಯಧಿಕವಾಗಿದೆ. ಮಾತು ದ್ವಿಮುಖವಾಗಿರುತ್ತದೆ. ಇದನ್ನು ಮಕ್ಕಳಲ್ಲಿ ಅಭಿವೃದ್ಧಿಪಡಿಸುತ್ತಿಲ್ಲ ಎಂದು ತಿಳಿಸಿದರು.

ಮಕ್ಕಳಿಗೆ ಪ್ರಾರಂಭದ ಎರಡು ವರ್ಷಗಳಲ್ಲಿ ಸಾಕಷ್ಟು ಸಾಮಾಜಿಕ ಸಂವಹನದ ಅವಶ್ಯಕವಿರುತ್ತದೆ. ಆದರೆ ಈ ಸಂದರ್ಭದಲ್ಲಿ ಅವರು ತಮ್ಮದೇ ಆದ ಜಗತ್ತಿನಲ್ಲಿ ವಾಸಿಸುವುದು, ಕೇವಲ ನೋಡುವುದು ಮತ್ತು ಆಲಿಸುವುದನ್ನು ಮಾಡುತ್ತಾರೆ. ಆದರೆ ಗ್ಯಾಜೆಟ್ ಗಳು ಮೊದಲ ಎರಡು ವರ್ಷಗಳಲ್ಲಿ ಅಗತ್ಯವಿರುವ ಸಾಕಷ್ಟು ಪ್ರಚೋದನೆಯನ್ನು ಒದಗಿಸುವುದಿಲ್ಲ. ಅಂತಹ ಚಿಕ್ಕ ಮಕ್ಕಳು ಗಂಟೆಗಟ್ಟಲೆ ಗ್ಯಾಜೆಟ್‌ಗಳನ್ನು ಬಳಸುವುದರಿಂದ ಅದು ಅವರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಕಳೆದ ಒಂದು ತಿಂಗಳಲ್ಲಿ ಆಟಿಸಂ ನ ಅನೇಕ ಪ್ರಕರಣಗಳು ಕಂಡು ಬರುತ್ತಿದೆ. ಮಕ್ಕಳ ಮತ್ತು ಮನೋವೈದ್ಯಕೀಯ ವಿಭಾಗಗಳಿಂದ ಪ್ರಾಥಮಿಕ ರೋಗನಿರ್ಣಯದ ಅನಂತರ ಮಕ್ಕಳನ್ನು ಆಟಿಸಂ ನ ವಿಭಾಗಕ್ಕೆ ಕಳುಹಿಸಲಾಗುತ್ತಿದೆ ಎನ್ನುತ್ತಾರೆ ಡಾ. ಮುಂಜಾಲ್ ಹೇಳಿದ್ದಾರೆ.


ಆಟಿಸಂನ ಚಿಹ್ನೆಗಳು ಹೆಚ್ಚುತ್ತಿರುವುದು ಯಾಕೆ?


ಪೋಷಕರು ಆಟಿಸಂನ ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ತಿಳಿದಿರಬೇಕು. ಮಕ್ಕಳಿಗೆ ಒಂದರಿಂದ ಆರು ವರ್ಷಗಳ ನಡುವಿನ ವಯಸ್ಸು ಅತ್ಯಂತ ಮುಖ್ಯವಾಗಿದೆ.‌ ಈ ವಯಸ್ಸಿನ ಮಕ್ಕಳು ಸಂವಾದಿಸಲು ಹೆಚ್ಚು ಸನ್ನೆ ಮತ್ತು ಚಿಹ್ನೆಗಳನ್ನು ಬಳಸುತ್ತಿದ್ದಾರೆ. ಅವರ ಭಾವನೆಗಳನ್ನು ವ್ಯಕ್ತಪಡಿಸಲು ಮೂಲಭೂತ ಅಗತ್ಯಗಳನ್ನು ಸನ್ನೆಗಳ ಮೂಲಕ ಪ್ರಯತ್ನಿಸುತ್ತಾರೆ. ಇವರಲ್ಲಿ ಭಾಷೆಯ ಬಳಕೆಯ ಕೊರತೆಯಿದೆ ಎಂದರು.

ಕಡಿಮೆ ಮಾನವ ಸಂವಹನ, ಅವಿಭಕ್ತ ಕುಟುಂಬ ವ್ಯವಸ್ಥೆಯ ವಿಘಟನೆ ಹೀಗೆ ಈಗಿನ ಸಮಸ್ಯೆಗಳು ಹಲವಾರು ಮಕ್ಕಳ ಸರಿಯಾದ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ. ಮಕ್ಕಳು ಯಾವುದೇ ಗ್ಯಾಜೆಟ್‌ಗೆ ಒಂದು ಗಂಟೆಗಿಂತ ಹೆಚ್ಚು ಅಥವಾ ಕಡಿಮೆ ಕಾಲ ಒಡ್ಡಿಕೊಳ್ಳಬಾರದು ಎಂದು ನಮಗೆ ತಿಳಿದಿದೆ ಆದರೂ ಮಕ್ಕಳ ಮೇಲೆ ಅವುಗಳ ಪರಿಣಾಮವನ್ನು ಉಂಟು ಮಾಡುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ವಾಕ್ ಪ್ರಚೋದನೆ ಸೇರಿದಂತೆ ಹಲವಾರು ಚಿಕಿತ್ಸೆಗಳನ್ನು ನೀಡುತ್ತೇವೆ. ಇದಕ್ಕಾಗಿ ಪೂರ್ಣ ಪ್ರಮಾಣದ ಅಧ್ಯಯನವನ್ನು ಮಾಡಲು ಯೋಜಿಸುತ್ತಿದ್ದೇವೆ. ಈ ಕುರಿತು ಯೋಜನೆಯನ್ನು ಐಸಿಎಂಆರ್ ಗೆ ಸಲ್ಲಿಸಿದ್ದೇವೆ ಎಂದರು.

ಯಾರಲ್ಲಿ ಹೆಚ್ಚು?

ಇಲಾಖೆಯಲ್ಲಿ ಪ್ರತಿದಿನ ಎರಡು ಅಥವಾ ಮೂರು ಶ್ರವಣ ದೋಷದ ಪ್ರಕರಣಗಳು ಕಂಡುಬರುತ್ತಿವೆ. ಇವರಲ್ಲ 15ರಿಂದ 30 ವರ್ಷ ವಯಸ್ಸಿನವರು ಹೆಚ್ಚಾಗುತ್ತಿದ್ದಾರೆ. ಮೊಬೈಲ್ ಫೋನ್‌ಗಳಲ್ಲಿ ಹೆಚ್ಚು ಗಂಟೆಗಳ ಕಾಲ ಮಾತನಾಡುವುದು, ಹೆಡ್‌ಫೋನ್‌ಗಳ ಅತಿಯಾದ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಹೇಳಿದರು.
ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಮೊಬೈಲ್ ಫೋನ್ ಗಳನ್ನು ಬಳಕೆ ಮಾಡುವುದರಿಂದ ಶ್ರವಣದೋಷವು ಹೆಚ್ಚಾಗುತ್ತಿದೆ. ಈಗಾಗಲೇ ಸಾಕಷ್ಟು ಹಾನಿಯಾಗಿದೆ. ಶ್ರವಣ ಸಾಧನಗಳ ಮೇಲೆ ಅತಿಯಾದ ಅವಲಂಬನೆಯನ್ನು ತಡೆಯಬೇಕು ಎಂದು ಡಾ. ಮುಂಜಾಲ್ ವಿವರಿಸುತ್ತಾರೆ.


ಶ್ರವಣ ದೋಷಕ್ಕೆ ಕಾರಣ

ಹೆಡ್‌ಫೋನ್‌ಗಳ ಅತಿಯಾದ ದೈನಂದಿನ ಬಳಕೆಯು ಶ್ರವಣ ನಷ್ಟದ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಏಕೆಂದರೆ ಇದು ನೇರವಾದ ಧ್ವನಿಯಾಗಿದೆ ಮತ್ತು ನಮ್ಮ ಕಿವಿಗಳು 85 ಡೆಸಿಬಲ್‌ಗಳ (dB) ವರೆಗಿನ ಶಬ್ದಗಳನ್ನು ಮಾತ್ರ ಕೇಳಲು ವಿನ್ಯಾಸಗೊಳಿಸಲಾಗಿದೆ, ಆದರೆ ಇಯರ್‌ಫೋನ್‌ಗಳು ಅಥವಾ ಹೆಡ್‌ಫೋನ್‌ಗಳು ಇದಕ್ಕಿಂತ ಹೆಚ್ಚಿನ ಶಬ್ದಗಳನ್ನು ಹೊರಸೂಸುತ್ತವೆ.

ಇದನ್ನೂ ಓದಿ; Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

ಏನು ಮಾಡಬಹುದು ?

ಡೆಸಿಬಲ್ ಹೆಚ್ಚಾದರೆ, ಬಳಕೆಯನ್ನು ಕಡಿಮೆ ಮಾಡಬೇಕು. ಅಂದರೆ 90 ಡಿಬಿ ನಾಲ್ಕು ಗಂಟೆಗಳಿಗಿಂತ ಹೆಚ್ಚಿರಬಾರದು. ಎರಡು ಗಂಟೆಗೆ 95 ಡಿಬಿ ಮತ್ತು ಒಂದು ಗಂಟೆಗೆ 100 ಡಿಬಿ ಇರಬಾರದು. ಈಗಿನ ಪೀಳಿಗೆಯು ಚಿಕ್ಕ ವಯಸ್ಸಿನಿಂದಲೇ ಗ್ಯಾಜೆಟ್‌ಗಳಿಗೆ ಒಡ್ಡಿಕೊಳ್ಳುವುದರಿಂದ ಹಾನಿಯು ಆರಂಭಿಕ ಹಂತದಲ್ಲಿ ಕಂಡುಬರುತ್ತದೆ ಮತ್ತು ಮೊದಲ ಲಕ್ಷಣವೆಂದರೆ ಕಿವಿ ಅಥವಾ ಟಿನ್ನಿಟಸ್‌ನಲ್ಲಿ ರಿಂಗಿಂಗ್ ಶಬ್ದ. ದೀರ್ಘ ಕರೆಗಳನ್ನು ತಪ್ಪಿಸಿ, ಸ್ಪೀಕರ್ ಫೋನ್ ಬಳಸಿ. ದೀರ್ಘಾವಧಿಯವರೆಗೆ ಜೋರಾಗಿ ಧ್ವನಿಯಲ್ಲಿ ಸಂಗೀತವನ್ನು ಕೇಳಬೇಡಿ ಮತ್ತು ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ, ಯಾವುದೇ ರೋಗಲಕ್ಷಣದ ಸಂದರ್ಭದಲ್ಲಿ ವೈದ್ಯರನ್ನು ಸಂಪರ್ಕಿಸಿ ಎನ್ನುತ್ತಾರೆ ಡಾ. ಮುಂಜಾಲ್ ತಿಳಿಸಿದ್ದಾರೆ.

Continue Reading

ದೇಶ

Gold Smuggling: ಜ್ಯಾಕೆಟ್‌, ಲೆಗ್ಗಿನ್ಸ್‌ನಲ್ಲಿ, ಬೆಲ್ಟ್‌ನಲ್ಲಿ 25 ಕೆ.ಜಿ ಚಿನ್ನ; ಆಫ್ಘಾನ್‌ ರಾಜತಾಂತ್ರಿಕ ಅಧಿಕಾರಿ ಕಸ್ಟಮ್ಸ್‌ ಬಲೆಗೆ

Gold Smuggling:ಅಫ್ಘಾನಿಸ್ತಾನದ ಇಸ್ಲಾಮಿಕ್‌ ರಿಪಬ್ಲಿಕ್‌ನ ರಾಜತಾಂತ್ರಿಕ ಅಧಿಕಾರಿ ಜಾಕಿಯಾ ವಾರ್ದಕ್‌ ಅವರು ಬರೋಬ್ಬರಿ 18.6 ಕೋಟಿ ರೂ. ಮೌಲ್ಯದ 25 ಕೆ.ಜಿ. ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದ ವೇಳೆ ಏರ್‌ಪೋರ್ಟ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಏ.25ರಂದು ಈ ಘಟನೆ ನಡೆದಿದ್ದು, ಅಕ್ರಮ ಚಿನ್ನಾಭರಣ ಸಾಗಾಟ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅನೇಕ ಸಿಬ್ಬಂದಿ ನೇಮಿಸುವ ಮೂಲಕ ಡಿಆರ್‌ಐ ಅಧಿಕಾರಿಗಳು ಕಾರ್ಯಪ್ರವೃತರಾಗಿದ್ದರು.

VISTARANEWS.COM


on

Gold smuggling
Koo

ಮುಂಬೈ: ಭಾರತದಿಂದ ದುಬೈಗೆ ಕೋಟ್ಯಂತರ ರೂ ಮೌಲ್ಯದ ಚಿನ್ನವನ್ನು ಕಳ್ಳ ಸಾಗಾಣೆ(Gold Smuggling) ಮಾಡುತ್ತಿದ್ದ ಅಫ್ಘಾನಿಸ್ತಾನದ ರಾಜತಾಂತ್ರಿಕ(Afghan diplomat) ಅಧಿಕಾರಿಯೊಬ್ಬರು ಮುಂಬೈ ವಿಮಾನ ನಿಲ್ದಾಣದಲ್ಲಿ ಬಲೆಗೆ ಬಿದ್ದಿದ್ದಾರೆ. ಅಫ್ಘಾನಿಸ್ತಾನದ(Afghanistan) ಇಸ್ಲಾಮಿಕ್‌ ರಿಪಬ್ಲಿಕ್‌ನ ರಾಜತಾಂತ್ರಿಕ ಅಧಿಕಾರಿ ಜಾಕಿಯಾ ವಾರ್ದಕ್‌ ಅವರು ಬರೋಬ್ಬರಿ 18.6 ಕೋಟಿ ರೂ. ಮೌಲ್ಯದ 25 ಕೆ.ಜಿ. ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದ ವೇಳೆ ಏರ್‌ಪೋರ್ಟ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಏ.25ರಂದು ಈ ಘಟನೆ ನಡೆದಿದ್ದು, ಅಕ್ರಮ ಚಿನ್ನಾಭರಣ ಸಾಗಾಟ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅನೇಕ ಸಿಬ್ಬಂದಿ ನೇಮಿಸುವ ಮೂಲಕ ಡಿಆರ್‌ಐ ಅಧಿಕಾರಿಗಳು ಕಾರ್ಯಪ್ರವೃತರಾಗಿದ್ದರು. ಜಾಕಿಯಾ ಮತ್ತು ಅವರ ಪುತ್ರ ಸಂಜೆ 5:45 ದುಬೈಗೆ ಪ್ರಯಾಣ ಬೆಳೆಸಲೆಂದು ಏರ್‌ಪೋರ್ಟ್‌ಗೆ ಬಂದಿದ್ದರು. ತಾವು ಯಾವುದೇ ಲಗೇಜ್‌ ತಂದಿಲ್ಲ ಎಂಬುದನ್ನು ತೋರಿಸಿಕೊಳ್ಳಲು ತಾಯಿ ಮಗ ಇಬ್ಬರೂ ಏರ್‌ಪೋರ್ಟ್‌ನ ಹಸಿರು ಚಾನೆಲನ್ನು ಬಳಸಿದ್ದರು ಎನ್ನಲಾಗಿದೆ.

ಜಾಕಿಯಾ ಮತ್ತು ಅವರ ಪುತ್ರನ ಬಳಿ ಇದ್ದ ಐದು ಟ್ರಾಲಿ ಬ್ಯಾಗ್‌ಗಳು, ಒಂದು ಹ್ಯಾಂಡ್‌ ಬ್ಯಾಗ್‌, ಒಂದು ಹ್ಯಾಂಗಿಂಗ್‌ ಬ್ಯಾಗ್‌ ಮತ್ತು ನೆಕ್‌ ಪಿಲ್ಲೋಗಳನ್ನು ತಪಾಸಣೆಗೊಳಪಡಿಸಿದ ಅಧಿಕಾರಿಗಳಿಗೆ ಅವುಗಳಲ್ಲಿ ಯಾವುದೇ ಚಿನ್ನ ಪತ್ತೆಯಾಗಿತ್ತು. ಆಮೇಲೆ ಅವರ ಬಳಿ ಯಾವುದಾದರೂ ಸುಂಕ ವಿಧಿಸಬಹುದಾದ ಅಥವಾ ಚಿನ್ನಾಭರಣ ಹೊಂದಿದ್ದೀರಾ ಎಂದು ಅಧಿಕಾರಿಗಳು ಜಾಕಿಯಾ ಅವರನ್ನು ಪ್ರಶ್ನಿಸಿದ್ದಾರೆ. ಆದರೆ ಅನುಮಾನಗೊಂಡ ಅಧಿಕಾರಿಗಳು ಜಾಕಿಯಾ ಮತ್ತು ಅವರ ಪುತ್ರನನ್ನು ಪ್ರತ್ಯೇಕ ಕೋಣೆಗೆ ಕರೆದೊಯ್ದು, ತಪಾಸಣೆಗೊಳಪಡಿಸಿದರು. ಆಗ ಆಕೆ ಧರಿಸಿದ್ದ ಜ್ಯಾಕೆಟ್‌, ಲೆಗ್ಗಿನ್ಸ್‌, ಮೊಣಕಾಲಿಗೆ ಹಾಕುವ ಕ್ಯಾಪ್‌ ಮತ್ತು ಬೆಲ್ಟ್‌ನಲ್ಲಿ ಚಿನ್ನದ ಬಿಸ್ಕೇಟ್‌ ಪತ್ತೆಯಾಗಿತ್ತು. ಆಕೆಯ ಮಗನನ್ನು ತಪಾಸಣೆಗೊಳಪಡಿಸಿದಾಗ ಯಾವುದೇ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳು 1962ರ ಕಸ್ಟಮ್ಸ್‌ ಕಾಯ್ದೆ ಅಡಿಯಲ್ಲಿ ಎಲ್ಲಾ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಅದಾಗ್ಯೂ ಆಕೆ ಅಫ್ಘಾನಿಸ್ತಾನದ ರಾಜತಾಂತ್ರಿಕ ಅಧಿಕಾರಿಯಾಗಿರುವ ಕಾರಣ ಅವರನ್ನು ಬಂಧಿಸಿಲ್ಲ.

ಇದನ್ನೂ ಓದಿ:Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

ಎರಡು ವಾರಗಳ ಹಿಂದೆ ಮುಂಬೈ ಏರ್‌ಪೋರ್ಟ್‌ನಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದ್ದು, ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್​ಗಳಲ್ಲಿ ಹುದುಗಿಸಿಟ್ಟಿದದ ವಜ್ರಗಳ ಹರಳುಗಳು ಪತ್ತೆಯಾಗಿದ್ದವು. ಅದರ ಮೌಲ್ಯ 6.48 ಕೋಟಿ ರೂಪಾಯಿ ಎಂದು ತಿಳಿದುಬಂದಿದ್ದು, ಅರೋಪಿ ಸಮೇತ ಅಧಿಕಾರಿಗಳು ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯನ್ನು ವಿವರಿಸಿದ ಅಧಿಕಾರಿಯೊಬ್ಬರು ಮುಂಬೈನಿಂದ ಬ್ಯಾಂಕಾಕ್​​ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ತಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್​ನಲ್ಲಿ ನೂಡಲ್ಸ್ ಪ್ಯಾಕೆಟ್​ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು ಅವುಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂತು ಎಂದು ಹೇಳಿದ್ದಾರೆ. ಅದೇ ರೀತಿ ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿರುವುದು ಗೊತ್ತಾಯಿತು ಎಂದು ಅವರು ಹೇಳಿದ್ದಾರೆ.


Continue Reading
Advertisement
Prajwal Revanna Case
ಪ್ರಮುಖ ಸುದ್ದಿ37 seconds ago

Prajwal Revanna Case: ಎಚ್‌.ಡಿ.ರೇವಣ್ಣಗಿಲ್ಲ ನಿರೀಕ್ಷಣಾ ಜಾಮೀನು; ಶೀಘ್ರವೇ ಬಂಧನ?

Physical abuse
ಮೈಸೂರು17 mins ago

Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

Lok Sabha Election
ಪ್ರಮುಖ ಸುದ್ದಿ17 mins ago

Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

Summer Tour
ಪ್ರವಾಸ24 mins ago

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

Prajwal Revanna Case
ಕರ್ನಾಟಕ27 mins ago

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Lok Sabha Election
ಪ್ರಮುಖ ಸುದ್ದಿ37 mins ago

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Prajwal Revanna Case
ಕರ್ನಾಟಕ59 mins ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Hardik Pandya
ಕ್ರಿಕೆಟ್1 hour ago

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

karnataka weather Forecast
ಮಳೆ1 hour ago

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Zameer Ahmed Khan
ಕರ್ನಾಟಕ1 hour ago

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌