ಲೈಫ್‌ಲೈನ್ ಪೈಪ್ ಅಳವಡಿಕೆ, ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ ರವಾನೆ - Vistara News

ದೇಶ

ಲೈಫ್‌ಲೈನ್ ಪೈಪ್ ಅಳವಡಿಕೆ, ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ ರವಾನೆ

Uttarkashi Tunnel Collapse: ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದ ಪರಿಣಾಮ, ಕೆಲಸನಿರತ 41 ಕಾರ್ಮಿಕರ ಸುರಂಗದ ಮಧ್ಯೆ ಒಂದು ವಾರದಿಂದ ಸಿಲುಕಿಕೊಂಡಿದ್ದಾರೆ.

VISTARANEWS.COM


on

Vistara Editorial, Ensure safety of workers during massive projects
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಉತ್ತರಕಾಶಿಯ ಸುರಂಗ ಮಾರ್ಗ ಕುಸಿದು(Uttarkashi Tunnel Collapse), ಅವಶೇಷಗಳ ಮಧ್ಯೆ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ (Rescue Operation) ಪ್ರಮುಖ ಬೆಳವಣಿಗೆಯಾಗಿದೆ. ಸೋಮವಾರ ಅಧಿಕಾರಿಗಳು 6 ಇಂಚು ಅಗಲದ ಪರ್ಯಾಯ ಪೈಪ್ (Lifeline Pipe) ಮೂಲಕ ಒಂದು ವಾರದಿಂದ ಸುರಂಗದೊಳಗೆ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.

ವರದಿಗಳ ಪ್ರಕಾರ, ಈ 57-ಮೀಟರ್ ಲೈಫ್‌ಲೈನ್ ಪೈಪ್ ಅನ್ನು ಸುರಂಗದ ಮೂಲಕ ಕೊರೆಯಲಾಗಿದೆ ಮತ್ತು ಸಿಕ್ಕಿಬಿದ್ದ ಕಾರ್ಮಿಕರಿಗೆ ಹೆಚ್ಚಿನ ಪ್ರಮಾಣದ ಘನ ಆಹಾರ ಮತ್ತು ನೀರನ್ನು ಕಳುಹಿಸಲು ಬಳಸಲಾಗುತ್ತದೆ. ಡಿಆರ್‌ಡಿಒ 20 ಕೆಜಿ ಮತ್ತು 50 ಕೆಜಿ ತೂಕದ 2 ರೋಬೋಟ್‌ಗಳನ್ನು ಸುರಂಗದೊಳಗೆ ಕಳುಹಿಸಿದೆ.

ಸಿಕ್ಕಿಬಿದ್ದ ಕಾರ್ಮಿಕರು ಎದುರಿಸುತ್ತಿರುವ ಸವಾಲಿನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು, ಅವರ ಪೌಷ್ಟಿಕಾಂಶದ ಅಗತ್ಯಗಳನ್ನು ಪರಿಹರಿಸಲು ವಿಶೇಷ ಆಹಾರ ಯೋಜನೆಯನ್ನು ರೂಪಿಸಲು ಅಧಿಕಾರಿಗಳು ವೈದ್ಯಕೀಯ ತಜ್ಞರನ್ನು ಸಂಪರ್ಕಿಸಿದ್ದಾರೆ ಎಂದು ಮಾಧ್ಯಮಗಳ ವರದಿ ಮಾಡಿವೆ.

ಕಾರ್ಮಿಕರಿಗೆ ಘನ ಆಹಾರ ಮತ್ತು ನೀರು ಪೂರೈಸಲು ಸುರಂಗ ಮೂಲಕವೇ 57 ಮೀಟರ್ ಲೈಫ್‌ಲೈನ್ ಪೈಪ್ ಅನ್ನು ಅಳವಡಿಸಲಾಗಿದೆ. ಸುರಂಗದೊಳಗೆ 20 ಕೆಜಿ ಮತ್ತು 50 ಕೆಜಿ ತೂಕದ ಡಿಆರ್‌ಡಿಒ 2 ರೋಬೋಟ್‌ಗನ್ನು ಕಳುಹಿಸಿಕೊಟ್ಟಿದೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಮಾತನಾಡಿ, ರಕ್ಷಣಾ ಕಾರ್ಯಾಚರಣೆ ಮಾಹಿತಿ ಪಡೆದುಕೊಂಡಿದ್ದಾರೆ.

ಈ ವೇಳೆ, ಸಿಎಂ ಧಾಮಿ ಅವರು ಪ್ರಧಾನಿ ಮೋದಿ ಅವರಿಗೆ ರಕ್ಷಣಾ ಕಾರ್ಯಾಚರಣೆಯ ವಿವರ ಮಾಹಿತಿಯನ್ನು ನೀಡಿದರು. ಅಲ್ಲದೇ ಸುರಂಗದೊಳಗೆ ಸಿಲುಕಿರುವ ಎಲ್ಲ ಕಾರ್ಮಿಕರು ಸುರಕ್ಷಿತವಾಗಿದ್ದಾರೆಂದು ಎಂದು ತಿಳಿಸಿದ್ದರು. ಅಗತ್ಯ ಪೌಷ್ಟಿಕಾಂಶ ಮತ್ತು ನೀರನ್ನು ನಿರಂತರವಾಗಿ ಪೂರೈಸಲಾಗುತ್ತಿದೆ ಎಂದು ವಿವರಿಸಿದ್ದರು.

ಅಂತಾರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ಅವರು ರಕ್ಷಣಾ ಪ್ರಯತ್ನಗಳನ್ನು ಪರಿಶೀಲಿಸಲು ವಿಪತ್ತು ಸ್ಥಳಕ್ಕೆ ಆಗಮಿಸಿದ್ದಾರೆ. ಅವರು ಡಿಕ್ಸ್ ಜಿನೀವಾ ಮೂಲದ ಇಂಟರ್‌ನ್ಯಾಶನಲ್ ಟನೆಲಿಂಗ್ ಮತ್ತು ಅಂಡರ್‌ಗ್ರೌಂಡ್ ಸ್ಪೇಸ್ ಅಸೋಸಿಯೇಷನ್‌ನ ಮುಖ್ಯಸ್ಥರಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: ಕೆಟ್ಟ ನಿಂತ ಡ್ರಿಲ್ಲಿಂಗ್ ಯಂತ್ರ! ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಸ್ಥಗಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

ನನ್ನ ದೇಶ ನನ್ನ ದನಿ ಅಂಕಣ: ಶತಮಾನದ ಹಿಂದೆಯೇ, ಬ್ರಿಟಿಷರು ಆಳುತ್ತಿದ್ದಾಗಲೇ, ಬ್ರಿಟಿಷರ ಬಗೆಗೆ ಬಾಮನದಾಸರಂತಹವರು ಬರೆದಿಟ್ಟುಹೋಗಿದ್ದರೂ ನಮ್ಮ ಕನ್ನಡದ ನವ್ಯರಿಗೆ ರೋಮಿಲ್ಲಾ ಥಾಪರ್, ಇರ್ಫಾನ್ ಹಬೀಬ್, ಡಿ.ಎನ್.ಝಾ ರಂತಹ ಸುಳ್ಳು-ಇತಿಹಾಸಕಾರರ ಪುಸ್ತಕಗಳು ಮಾತ್ರವೇ ಪಥ್ಯವಾದವು. ಈಗಲೂ ವಿವಿಧ ಕ್ಷೇತ್ರಗಳಲ್ಲಿರುವ ಅವರ ಶಿಷ್ಯಕೋಟಿ ಇನ್ನೂ ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ಬರೆಯುತ್ತಾರೆ, ಮಾತನಾಡುತ್ತಾರೆ, ವಾದಿಸುತ್ತಾರೆ.

VISTARANEWS.COM


on

ನನ್ನ ದೇಶ ನನ್ನ ದನಿ baman das basu
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath ನನ್ನ ದೇಶ ನನ್ನ ದನಿ

ನನ್ನ ದೇಶ ನನ್ನ ದನಿ ಅಂಕಣ: “ವಸಾಹತುಶಾಹಿ (colonialism) ನಿರ್ಗಮನದ ಅನಂತರವೂ ಒಬ್ಬ ಅದರ ಪರವಾಗಿಯೇ ಮಾತನಾಡುತ್ತಾನೆ, ಎಂದರೆ ವಸಾಹತುಶಾಹಿಯು ತುಂಬ ಪರಿಣಾಮಕಾರಿಯಾಗಿಯೇ ಬೇರೂರಿದೆ ಎಂದರ್ಥ”.

ಅನೇಕ ವರ್ಷಗಳಿಂದ ಈ ಚಿಂತನೆ, ಈ ಮಾತು, ಈ ಸಂಗತಿ ನನ್ನನ್ನು ಕಾಡುತ್ತಲೇ ಇದೆ. ನಿಜ. ನಮ್ಮ ಮೇಲಾದ ಆಕ್ರಮಣಗಳು ಬಹು-ಮುಖೀ. ನಾವು ಶತಾಯಗತಾಯ ಯುದ್ಧಗಳನ್ನು (wars) ಸೋಲಬಾರದು. ಸೋತರೆ ಪ್ರಣಶ್ಯತಿ. ಅಬ್ರಹಾಮಿಕ್ (abrahamic) ಮತಗಳ ವಿನಾಶಕಾರೀ ಆಕ್ರಮಣಗಳನ್ನು, ಧ್ವಂಸ-ವಿಧ್ವಂಸಗಳನ್ನು ಅಧ್ಯಯನ ಮಾಡಿದಾಗ ಮತ್ತು ಇವುಗಳಿಗಿಂತಲೂ ನಮ್ಮಂತಹ ಗುಲಾಮದೇಶಗಳ ಜನರ ಮಾನಸಿಕತೆ – ಅಭಿಪ್ರಾಯಗಳ ಮೇಲಾದ ಭಯಾನಕ ದುಷ್ಪರಿಣಾಮಗಳನ್ನು ನೋಡುವಾಗ, ಹೌದು, ನಾವು ಶತ್ರುಗಳನ್ನು (enemies) ಯಾವ ಕಾರಣಕ್ಕೂ ಔದಾರ್ಯದಿಂದ ಕಾಣಬಾರದಿತ್ತು. ಅವರ “ಭಾಷೆಯಲ್ಲಿಯೇ” ನಾವೂ ಉತ್ತರ ನೀಡಬೇಕಿತ್ತು, ಎನಿಸುತ್ತದೆ. ಶ್ರೀಕೃಷ್ಣನಂತೆ, (SriKrishna) ಆಚಾರ್ಯ ಚಾಣಕ್ಯರಂತೆ (Chanakya) ಸಂಪೂರ್ಣ ಶತ್ರುನಾಶವೇ ನಮ್ಮ ಕಾರ್ಯತಂತ್ರವೂ ಆಗಬೇಕಿತ್ತು, ಅನಿಸುತ್ತದೆ. ಬ್ರಿಟಿಷರು (British) ಮತ್ತು ಅವರ “ಪ್ರೀತಿಪಾತ್ರರು” ಬರೆಸಿರುವ – ಬರೆದಿಟ್ಟಿರುವ ಇತಿಹಾಸ ಪುಸ್ತಕಗಳನ್ನು ನೋಡಿದರೆ, ಇಡೀ ದಕ್ಷಿಣ ಭಾರತವನ್ನು ಈಗಲೂ ನಾಶ ಮಾಡುತ್ತಲೇ ಇರುವ ಅವೈಜ್ಞಾನಿಕವಾದ ಆರ್ಯ – ದ್ರಾವಿಡ (Arya Dravida) ಪೊಳ್ಳು ಸಿದ್ಧಾಂತದ ಪರಿಣಾಮವನ್ನು ನೋಡಿದರೆ ಗಾಬರಿಯಾಗುತ್ತದೆ. ನೋಡಿ, ನಮ್ಮ ದೇಶದ ಶಿಕ್ಷಣ, ಕೃಷಿ, ಉದ್ಯಮಗಳನ್ನು ನಾಶ ಮಾಡಿದ ಬ್ರಿಟಿಷರು, ಬಹಳಷ್ಟು ಭಾರತೀಯರ ದೃಷ್ಟಿಯಲ್ಲಿ ಇಂದಿಗೂ ಆರಾಧ್ಯದೈವಗಳಾಗಿದ್ದಾರೆ, ಉದ್ಧಾರಕರಾಗಿದ್ದಾರೆ! ವಸಾಹತುಶಾಹಿಯ ಅಧ್ಯಾಯ ಮುಗಿದಿದೆ, ನಾವೊಂದು ಸ್ವತಂತ್ರ ರಾಷ್ಟ್ರ, ಎಂದು ನಾವು ಎಷ್ಟೆಷ್ಟು ಬಾರಿ ಹೇಳಿಕೊಂಡರೂ, ವಸಾಹತುಶಾಹಿಯ ಮಾನಸಿಕತೆ – ಅವರ ಬಗೆಗಿನ ಆರಾಧನೆಗಳು ನಮ್ಮೊಳಗೆ ಇದ್ದರೆ, ನಾವಿನ್ನೂ ಗುಲಾಮರಾಗಿಯೇ ಮುಂದುವರಿದಿದ್ದೇವೆ, ಎನಿಸುವುದಿಲ್ಲವೇ?

ಇತಿಹಾಸಕಾರ ಬಾಮನ (ವಾಮನ) ದಾಸ ಬಸು (Baman Das Basu) ಅವರ “ಹಿಸ್ಟರಿ ಆಫ್ ಎಜುಕೇಷನ್ ಇನ್ ಇಂಡಿಯಾ ಅಂಡರ್ ದಿ ರೂಲ್ ಆಫ್ ಈಸ್ಟ್ ಇಂಡಿಯಾ ಕಂಪನಿ” (ಪ್ರಕಟಣೆ 1922) ಕೃತಿಯ ಕೆಲವು ಸಾಲುಗಳನ್ನು ಗಮನಿಸುವಾಗ, ಸಹಜವಾಗಿಯೇ ಕನ್ನಡದ ನಮ್ಮ ನವ್ಯ ಸಾಹಿತಿಗಳ ಮಾತು – ಭಾಷಣಗಳೇ ನೆನಪಾಗುತ್ತವೆ. ನಾಲ್ಕೈದು ದಶಕಗಳ ಹಿಂದೆ ನಮ್ಮಂತಹವರ ಮೇಲೆ ತುಂಬಾ ಪ್ರಭಾವ ಬೀರಿದವರು ಈ ನವ್ಯರು. Of Course, ಅವರೆಲ್ಲಾ ತುಂಬ ಚೆನ್ನಾಗಿ ಮಾತನಾಡುತ್ತಿದ್ದರು, ಆಕರ್ಷಕವಾದ ಹೊಸದೊಂದು ಭಾಷೆಯಲ್ಲಿ ಬರೆಯುತ್ತಿದ್ದರು. ಭಾರತೀಯ ಸಾಹಿತ್ಯದ ಮೇಲೆ, ಶಿಕ್ಷಣ – ಜನಜೀವನ – ಸಾಮಾಜಿಕ ವ್ಯವಸ್ಥೆಗಳ ಮೇಲೆ, ವಸಾಹತುಶಾಹಿಯ ಪ್ರಭಾವದ ಬಗೆಗೆ ಈ ನವ್ಯರ ಮಾತುಗಳನ್ನು ಕೇಳಿ ನಾನು ಬೆರಗಾದುದುಂಟು. ತಮ್ಮ ಮಾತಿನ ಪ್ರತಿ ಎರಡು ವಾಕ್ಯಗಳಿಗೊಮ್ಮೆ ಭಾರತದ, ಮುಖ್ಯವಾಗಿ ಹಿಂದೂಗಳ ಮೂಢನಂಬಿಕೆಗಳ ಬಗೆಗೆ, ಅಸ್ಪೃಶ್ಯತೆ – ಜಾತಿವ್ಯವಸ್ಥೆ – ಮುಂತಾದವುಗಳ ಬಗೆಗೆ ತಪ್ಪದೇ ಪ್ರಹಾರ ಮಾಡುತ್ತಿದ್ದರು. ವಸಾಹತುಶಾಹಿ ಬಂದುದೇ ನಮ್ಮ ವಿಮೋಚನೆಗೆ ಎಂದು ಪರೋಕ್ಷವಾಗಿ ಹೇಳುತ್ತಿದ್ದರು. ಈ ದೇಶದಲ್ಲಿ ಹೆಣ್ಣುಮಕ್ಕಳಿಗೆ, ಶೂದ್ರರಿಗೆ, ಅಸ್ಪೃಶ್ಯರಿಗೆ ಕಳೆದ ಐದು ಸಾವಿರ ವರ್ಷಗಳಿಂದ ವಿದ್ಯಾಭ್ಯಾಸಕ್ಕೆ ಅವಕಾಶವಿರಲಿಲ್ಲ, ಎಂದು ರೋದಿಸುತ್ತಿದ್ದರು. ಬ್ರಿಟಿಷರ ಪ್ರೀತಿಪಾತ್ರರೇ ಬರೆಸಿದ ಇತಿಹಾಸದ ಪಠ್ಯಪುಸ್ತಕಗಳಲ್ಲಿ ಯೂರೋಪಿಯನ್ನರು ಇಲ್ಲಿಗೆ ಬಂದುದೇ ವ್ಯಾಪಾರದ ಹೆಸರಿನಲ್ಲಿ ಲೂಟಿ ಮಾಡಲು – ವಸಾಹತುಗಳನ್ನು ಸ್ಥಾಪಿಸಲು ಎಂದೆಲ್ಲಾ ಓದಿದವರಿಗೆ, ಈ ನವ್ಯರ ಮಾತುಗಳು ಗೊಂದಲವನ್ನುಂಟುಮಾಡುತ್ತಿದ್ದವು, ನಮಗೆಲ್ಲಾ ಅಯೋಮಯವಾಗುತ್ತಿತ್ತು. “ಈ ನವ್ಯ ಸಾಹಿತಿಗಳೆಲ್ಲಾ ವಸಾಹತುಶಾಹಿಯ ಪರವಾಗಿಯೇ ಮಾತನಾಡುತ್ತಿದ್ದಾರಲ್ಲಾ” ಎನಿಸಿ ವಿಷಾದವೂ ಉಂಟಾಗುತ್ತಿತ್ತು. ಭಾರತದಲ್ಲಿ ಆಸ್ಪತ್ರೆಗಳನ್ನು, ಶಾಲೆಗಳನ್ನು ಪ್ರಾರಂಭ ಮಾಡಿದವರೇ ಬ್ರಿಟಿಷರು. ಅವರಿಂದಾಗಿಯೇ ರೈಲು ವ್ಯವಸ್ಥೆ ಬಂದಿತು. ಆಧುನಿಕತೆ – ವಿಜ್ಞಾನ ಅವರಿಂದಲೇ ಬಂದಿತು…..ಇತ್ಯಾದಿ ಇತ್ಯಾದಿ……

ಭಾರತದಲ್ಲಿ ರಸ್ತೆಗಳನ್ನು ಮಾಡಿಸಿದವರೂ ಬ್ರಿಟಿಷರೇ, ಎಂದು ಈಗಲೂ ಕೆಲವರು ಉಗ್ಘಡಿಸುವುದುಂಟು. “ಹಾಗಿದ್ದಲ್ಲಿ, ಸ್ವಾಮೀ, ಬ್ರಿಟಿಷರಿಗಿಂತ ಮೊದಲು ಇದ್ದ ಕೃಷ್ಣದೇವರಾಯನ ಐದು ಲಕ್ಷ ಸೈನಿಕರು, 1200 ಆನೆಗಳು, 60,000 ಕುದುರೆಗಳು ಏನು ಆಕಾಶದಲ್ಲಿ ಓಡಾಡುತ್ತಿದ್ದವೇ” ಎಂದು ಕೇಳಿದರೆ ಉತ್ತರಿಸುವುದಿಲ್ಲ.

ಈಗ ಹದಿನಾಲ್ಕು ವರ್ಷಗಳ ಹಿಂದೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರೊಬ್ಬರು, ತಮ್ಮ ಮಾತುಗಳ ಆರಂಭದಲ್ಲಿಯೇ “ಬ್ರಿಟಿಷರು ನಮ್ಮ ದೇಶಕ್ಕೆ ಬರದೇಹೋಗಿದ್ದರೆ, ನಾವೆಲ್ಲಾ ಇನ್ನೂ ಅಂಧಕಾರದಲ್ಲಿ ಇರುತ್ತಿದ್ದೆವು” ಎಂದು ಹೇಳಿ ಆಘಾತವನ್ನೇ ಉಂಟುಮಾಡಿದ್ದರು.

ಬಾಮನದಾಸರು ದಾಖಲಿಸಿರುವ ಕೆಲವು ಅಂಶಗಳು ಗಮನಿಸುವಂತಹವು. ಇದು ನೂರು ವರ್ಷಗಳ ಹಿಂದಿನ ಗ್ರಂಥ ಮತ್ತು ಬ್ರಿಟಿಷರು ಆಳುತ್ತಿದ್ದಾಗಲೇ ಪ್ರಕಟವಾದ ಗ್ರಂಥ ಎನ್ನುವುದನ್ನು ನಾವು ಮರೆಯುವಂತಿಲ್ಲ.

ಭಾರತಕ್ಕೆ ಸಮುದ್ರ ಮಾರ್ಗದಲ್ಲಿ ಬರಲು ಧಾವಿಸಲು, ಯೂರೋಪಿಯನ್ನರ ಮಧ್ಯೆ 15ನೆಯ ಶತಮಾನದಿಂದಲೇ ಸ್ಪರ್ಧೆ – ಯುದ್ಧ ನಡೆಯುತ್ತಿತ್ತು. ಪೋರ್ತುಗೀಸರನ್ನು, ಡಚ್ಚರನ್ನು, ಫ್ರೆಂಚರನ್ನು ಬಗ್ಗುಬಡಿದು ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಪಾರಮ್ಯವನ್ನು ಸಾಧಿಸಿತು. ಭಾರತೀಯರ ಶಿಕ್ಷಣಕ್ಕೆ ಸಂಬಂಧಿಸಿದಂತೆ, ಬ್ರಿಟಿಷರೇನೂ ತಲೆ ಕೆಡಿಸಿಕೊಂಡಿರಲಿಲ್ಲ. ಇಲ್ಲಿನ ರಾಜರ – ಸುಲ್ತಾನರ ನಡುವೆ ರಾಜಕೀಯ ಮಾಡುತ್ತಾ ತಮ್ಮ ಲೂಟಿಯಲ್ಲಿ, ವ್ಯಾಪಾರದಲ್ಲಿ ಗರಿಷ್ಠ ಲಾಭ ಗಳಿಸುವಲ್ಲಿ ನಿರತರಾಗಿದ್ದರು. ಕೆಲಕಾಲಾನಂತರ ಭಾರತದ ಸ್ಥಳೀಯರಿಗೆ ಇಂಗ್ಲಿಷ್ ಶಿಕ್ಷಣ ನೀಡದಿದ್ದರೆ ತಾವು ಬಹಳ ಕಾಲ ವಸಾಹತುವನ್ನು ನಿಭಾಯಿಸಲು ಸಾಧ್ಯವಿಲ್ಲ, ಎಂಬುದು ಅವರಿಗೆ ಅರಿವಾಯಿತು. 18ನೆಯ ಶತಮಾನದ ಕೊನೆಯ ಹೊತ್ತಿಗೆ ಹಿಂದುಗಳಿಗೆ ಮತ್ತು ಮುಸ್ಲಿಮರಿಗೆ, ಕಾಶಿ ಮತ್ತು ಕೊಲ್ಕತ್ತಾಗಳಲ್ಲಿ ಸಂಸ್ಕೃತದ ಮತ್ತು ಇಸ್ಲಾಮೀ ಶಿಕ್ಷಣದ ಕಾಲೇಜುಗಳನ್ನು ಸ್ಥಾಪಿಸಿದರು. ತಮ್ಮ ಆಡಳಿತಾತ್ಮಕ ಉದ್ದೇಶಕ್ಕಾಗಿ ಈ ಕಾಲೇಜುಗಳನ್ನು ಸ್ಥಾಪಿಸಿದರೇ ವಿನಃ, ಸ್ಥಳೀಯರಿಗೆ ವಿದ್ಯೆ ಕಲಿಸುವ ಸದುದ್ದೇಶವಿರಲಿಲ್ಲ.

ಭಾರತದ ನೂರೆಂಟು ಭಾಷೆಗಳನ್ನು ತಾವು ಕಲಿತು ಆಡಳಿತ ಮಾಡುವುದರ ಬದಲಿಗೆ, ಇಲ್ಲಿನವರಿಗೇ ಇಂಗ್ಲಿಷ್ ಕಲಿಸಿಬಿಡುವುದು ಅವರಿಗೆ ಲಾಭದಾಯಕವಾಗಿತ್ತು.

ಇದೇ ಬ್ರಿಟಿಷರೇ, ತಮ್ಮ ಆಳ್ವಿಕೆಯಲ್ಲಿ, ಅಮೆರಿಕೆಯಲ್ಲಿ “ಶಿಕ್ಷಣದ ಉದ್ದೇಶಕ್ಕಾಗಿ ಕಪ್ಪು ಗುಲಾಮರನ್ನು ಒಂದೆಡೆ ಸೇರಿಸುವುದು ಕಾನೂನಿಗೆ ವಿರುದ್ಧವಾಗುತ್ತದೆ. ಉಲ್ಲಂಘಿಸಿದವರಿಗೆ ಉಗ್ರ ಶಿಕ್ಷೆ ನೀಡಲಾಗುತ್ತದೆ” ಎಂದು ಕಾನೂನು ಮಾಡಿದ್ದರು. ಇದು ಬ್ರಿಟಿಷ್ ಧೂರ್ತರ ನಿಜಸ್ವರೂಪ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನಮ್ಮ ದೇಶಕ್ಕೆ ಸಂಬಂಧಿಸಿದಂತೆ, ಮೆಕಾಲೆಯ ಶಿಫಾರಸ್ಸುಗಳೇನಿದ್ದವು, ಅವನ ಉದ್ದೇಶವೇನಿತ್ತು, ಇತ್ಯಾದಿ ನಮಗೆಲ್ಲ ಗೊತ್ತೇ ಇದೆ. ಬಾಮನದಾಸರು ತಮ್ಮ ಕೃತಿಯಲ್ಲಿ, ಮೆಕಾಲೆಯ ಬಂಧು ಚಾರ್ಲ್ಸ್ ಟ್ರೆವೆಲ್ಯಾನ್ ಎಂಬವನು, ಬ್ರಿಟಿಷ್ ಸಂಸತ್ತಿನ ಸಮಿತಿಯ ಮುಂದೆ ನೀಡಿದ ಹೇಳಿಕೆಯನ್ನೂ ಉಲ್ಲೇಖಿಸುತ್ತಾರೆ. “ಭಾರತದಲ್ಲಿರುವ ಹಿಂದೂಗಳು ಮತ್ತು ಮುಸ್ಲಿಮರು, ಬ್ರಿಟಿಷರನ್ನು ತಮ್ಮ ದೇಶವನ್ನು ವಶಪಡಿಸಿಕೊಂಡ ವಿದೇಶೀ ಶತ್ರುಗಳು ಎಂದೇ ಭಾವಿಸುತ್ತಾರೆ. ಐರೋಪ್ಯ ಶಿಕ್ಷಣವನ್ನು ನೀಡಿದ ಮೇಲೆ, ಅವರು ತಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡುವುದನ್ನೇ ಬಿಟ್ಟುಬಿಡುತ್ತಾರೆ. ಬ್ರಿಟಿಷರನ್ನು ತಮ್ಮ ಶತ್ರುಗಳು ಮತ್ತು ತಮ್ಮ ದೇಶವನ್ನು ಆಕ್ರಮಿಸಿಕೊಂಡವರು ಎಂದು ಭಾವಿಸುವುದನ್ನು ಮರೆತು, ತಮ್ಮ ಸ್ನೇಹಿತರಂತೆ – ಪೋಷಕರಂತೆ ಕಾಣುತ್ತಾರೆ ” ಎಂದಿದ್ದ ಈ ಚಾರ್ಲ್ಸ್ ಟ್ರೆವೆಲ್ಯಾನ್.

ಶತಮಾನದ ಹಿಂದೆಯೇ, ಬ್ರಿಟಿಷರು ಆಳುತ್ತಿದ್ದಾಗಲೇ, ಬ್ರಿಟಿಷರ ಬಗೆಗೆ ಬಾಮನದಾಸರಂತಹವರು ಬರೆದಿಟ್ಟುಹೋಗಿದ್ದರೂ ನಮ್ಮ ಕನ್ನಡದ ನವ್ಯರಿಗೆ ರೋಮಿಲ್ಲಾ ಥಾಪರ್, ಇರ್ಫಾನ್ ಹಬೀಬ್, ಡಿ.ಎನ್.ಝಾ ರಂತಹ ಸುಳ್ಳು-ಇತಿಹಾಸಕಾರರ ಪುಸ್ತಕಗಳು ಮಾತ್ರವೇ ಪಥ್ಯವಾದವು. ಬಹಳ ಜನ ಕೊನೆಯವರೆಗೆ ಭಾರತ-ವಿರೋಧಿಗಳಾಗಿಯೇ ಇದ್ದುಬಿಟ್ಟರು. ಧರ್ಮಪಾಲ್, ಅರುಣ್ ಶೌರಿ, ಸೀತಾರಾಮ ಗೋಯಲ್, ರಾಮಸ್ವರೂಪ್ ಮೊದಲಾದವರ ಸಂಶೋಧನೆ – ವಿಶ್ಲೇಷಣೆಗಳನ್ನು ಓದುವ, ಪರಾಮರ್ಶಿಸುವ ಗೊಡವೆಗೆ ಒಬ್ಬರೂ ಹೋಗಲಿಲ್ಲ. ದುರಂತವೆಂದರೆ, ಈಗಲೂ ವಿವಿಧ ಕ್ಷೇತ್ರಗಳಲ್ಲಿರುವ ಅವರ ಶಿಷ್ಯಕೋಟಿ ಇನ್ನೂ ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ಬರೆಯುತ್ತಾರೆ, ಮಾತನಾಡುತ್ತಾರೆ, ವಾದಿಸುತ್ತಾರೆ.

ಹೌದು, “ವಸಾಹತುಶಾಹಿಯ ನಿರ್ಗಮನದ ಅನಂತರವೂ ಒಬ್ಬ ಅದರ ಪರವಾಗಿಯೇ ಮಾತನಾಡುತ್ತಾನೆ, ಎಂದರೆ ವಸಾಹತುಶಾಹಿಯು ತುಂಬ ಪರಿಣಾಮಕಾರಿಯಾಗಿಯೇ ಬೇರೂರಿದೆ ಎಂದರ್ಥ”.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Continue Reading

ದೇಶ

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

Somnath Bharti: ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಆಪ್‌ ನಾಯಕ ಸೋಮನಾಥ್‌ ಭಾರ್ತಿ ಅವರು ಮತಗಟ್ಟೆ ಸಮೀಕ್ಷೆಗಳನ್ನು ತಿರಸ್ಕರಿಸಿದ್ದಾರೆ.

VISTARANEWS.COM


on

Somnath Bharti
Koo

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ತೆರೆ ಬಿದ್ದಿದ್ದು, ಮತಗಟ್ಟೆ ಸಮೀಕ್ಷೆಗಳು ಕೂಡ ಬಹಿರಂಗವಾಗಿವೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹೇಳಿದಂತೆ ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸದಿದ್ದರೂ, ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುತೇಕ ಸಮೀಕ್ಷೆಗಳು ತಿಳಿಸಿವೆ. ಆದರೆ, ಆಪ್‌ ನಾಯಕ, ನವದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸೋಮನಾಥ್‌ ಭಾರ್ತಿ (Somnath Bharti) ಅವರು ಮತಗಟ್ಟೆ ಸಮೀಕ್ಷೆಯನ್ನು ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲ, “ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾದರೆ ನನ್ನ ತಲೆ ಬೋಳಿಸಿಕೊಳ್ಳುತ್ತೇನೆ” ಎಂದಿದ್ದಾರೆ.

“ಜೂನ್‌ 4ರಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ತಪ್ಪು ಎಂಬುದು ಸಾಬೀತಾಗಲಿದೆ. ಖಂಡಿತವಾಗಿಯೂ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ. ದೆಹಲಿಯ ಎಲ್ಲ 7 ಲೋಕಸಭೆ ಕ್ಷೇತ್ರಗಳಲ್ಲೂ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇನ್ನು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದರೆ, ನಾನು ನನ್ನ ತಲೆಯನ್ನು ಬೋಳಿಸಿಕೊಳ್ಳುತ್ತೇನೆ” ಎಂಬುದಾಗಿ ಮತಗಟ್ಟೆ ಸಮೀಕ್ಷೆಗಳ ವರದಿಗಳ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಪೋಸ್ಟ್‌ ಈಗ ವೈರಲ್‌ ಆಗಿದ್ದು, ಜೂನ್‌ 4ರಂದು ತಲೆ ಬೋಳಿಸಿಕೊಳ್ಳಲು ಸಜ್ಜಾಗಿ ಎಂಬುದಾಗಿ ಜನ ಪ್ರತಿಕ್ರಿಯಿಸಿದ್ದಾರೆ.

ಮತಗಟ್ಟೆ ಸಮೀಕ್ಷೆಯ ಸಾರವೇನು?

ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. 2019ರಲ್ಲಿ ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.

ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟವು ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ 125-165 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ಮತಗಟ್ಟೆ ಸಮೀಕ್ಷೆಗಳ ಒಟ್ಟು ಸಾರವಾಗಿದೆ. ಇದರೊಂದಿಗೆ ಇಂಡಿಯಾ ಒಕ್ಕೂಟವು ಮ್ಯಾಜಿಕ್‌ ನಂಬರ್‌ (272) ಬಿಡಿ, 200 ಕ್ಷೇತ್ರಗಳನ್ನೂ ತಲುಪುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಇದರೊಂದಿಗೆ ಕಾಂಗ್ರೆಸ್‌ ಸೇರಿ ಪ್ರತಿಪಕ್ಷಗಳಿಗೆ ಸತತ ಮೂರನೇ ಬಾರಿಯೂ ಹಿನ್ನಡೆಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ದಕ್ಷಿಣದಲ್ಲಿ ಬಿಜೆಪಿಗೆ ಮುನ್ನಡೆ

ದಕ್ಷಿಣ ಭಾರತದಲ್ಲಿ, ಅದರಲ್ಲೂ ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿವೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ. ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ.

ಇದನ್ನೂ ಓದಿ: Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Continue Reading

ಪ್ರಮುಖ ಸುದ್ದಿ

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Exit Poll 2024 : ಬಿಜೆಪಿಯ ಬಲವಾದ ಚುನಾವಣಾ ಕಾರ್ಯತಂತ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೂಲಕ ಎನ್​ಡಿಎಗೆ ಭರ್ಜರಿ ಗೆಲುವು ಸಿಗಲಿದೆ ಎಂದು ಸಮೀಕ್ಷೆಗಳು ಸೂಚಿಸಿವೆ. ಈ ಅಂದಾಜುಗಳು ನಿಜವಾಗಿದ್ದರೆ ಇದು 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅದರ ಹಿಂದಿನ ಸಾಧನೆಯನ್ನು ಮೀರಿಸಲಿದೆ.

VISTARANEWS.COM


on

Exit Poll
Koo

ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶಕ್ಕೆ (Lok Sabha Election) ಮುಂಚಿತವಾಗಿ ಪ್ರಕಟಗೊಂಡಿರುವ ಮತಗಟ್ಟೆ ಸಮೀಕ್ಷೆಯ ಪ್ರಕಾರ (Exit Poll 2024) ನರೇಂದ್ರ ಮೋದಿ ನಿರೀಕ್ಷಿಸಿದ ರೀತಿಯಂತೆಯೇ 400ಕ್ಕೂ ಅಧಿಕ ಸೀಟ್​​ಗಳನ್ನು ಗೆಲ್ಲಲಿದೆ. ಆಕ್ಸಿಸ್ ಮೈ ಇಂಡಿಯಾ ನಡೆಸಿರು ಸಮೀಕ್ಷೆಯಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸಲಿದೆ. ಈ ಸಂಸ್ಥೆಯ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ ಎನ್ಡಿಎ 361 ರಿಂದ 401 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

  • ಎನ್​​ಡಿಎ – 361-401
  • ಭಾರತ – 131-166
  • ಇತರರು – 8-20

ಬಿಜೆಪಿಯ ಬಲವಾದ ಚುನಾವಣಾ ಕಾರ್ಯತಂತ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೂಲಕ ಎನ್​ಡಿಎಗೆ ಭರ್ಜರಿ ಗೆಲುವು ಸಿಗಲಿದೆ ಎಂದು ಸಮೀಕ್ಷೆಗಳು ಸೂಚಿಸಿವೆ. ಈ ಅಂದಾಜುಗಳು ನಿಜವಾಗಿದ್ದರೆ ಇದು 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅದರ ಹಿಂದಿನ ಸಾಧನೆಯನ್ನು ಮೀರಿಸಲಿದೆ.

ಏಳು ಹಂತಗಳ ಚುನಾವಣೆ ಶನಿವಾರ ಮುಕ್ತಾಯ

ಏಳನೇ ಹಂತದ ಮತದಾನದ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ಮೋದಿ ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಬಳಿ ತೆರಳಿ ಧ್ಯಾನ ಮಾಡಿದ್ದರು. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎಗೆ ಸುಲಭ ನಿರಾಯಾಸ ಗೆಲುವು ನೀಡುತ್ತದೆ ಎಂದು ಭವಿಷ್ಯ ನುಡಿದಿವೆ. ಆಡಳಿತಾರೂಢ ಪಕ್ಷವು ಬಹುಮತದ ಕೊರತೆ ಅನುಭವಿಸಬಹುದು ಎಂಬ ಇಂಡಿಯಾ ಬಣದ ಭವಿಷ್ಯವಾಣಿಗೆ ವ್ಯತಿರಿಕ್ತವಾಗಿ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರ ವಾಲಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ 353 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

ಜೂನ್ 4ರಂದು ಚುನಾವಣೋತ್ತರ ಸಮೀಕ್ಷೆಗಳು ನಿಜವೆಂದು ಸಾಬೀತಾದರೆ, ಇದು ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅತಿದೊಡ್ಡ ವಿಜಯವಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಜವಾಹರಲಾಲ್ ನೆಹರೂ ನಂತರ ನರೇಂದ್ರ ಮೋದಿ ಮೂರು ಬಾರಿ ದೇಶದ ಪ್ರಧಾನಿಯಾದ ಏಕೈಕ ವ್ಯಕ್ತಿಯಾಗಲಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಎರಡು ಬಾರಿ ಪ್ರಧಾನಿಯಾಗಿದ್ದರು.

ಧನ್ಯವಾದ ತಿಳಿಸಿದ ಮೋದಿ

ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡಿದ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಧನ್ಯವಾದ ಅರ್ಪಿಸಿದ್ದಾರೆ. ಮತದಾರರ ಬದ್ಧತೆ ಮತ್ತು ಸಮರ್ಪಣೆ ಭಾರತದ ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ಪಿಎಂ ಮೋದಿ ಹೇಳಿದ್ದಾರೆ. ಮತಗಟ್ಟೆ ಸಮೀಕ್ಷೆಗಳು(Exit Poll 2024 ) ಪ್ರಕಟಗೊಂಡು ಮೋದಿ ನೇತೃತ್ವದ ಎನ್​ಡಿಎಗೆ ಭರ್ಜರಿ ಜಯ ಸಿಗುತ್ತದೆ ಎಂದು ಗೊತ್ತಾದ ತಕ್ಷಣವೇ ಅವರು ಈ ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಪ್ರಜಾಪ್ರಭುತ್ವಕ್ಕೆ ಚೈತನ್ಯ ತಂಡ ದೇಶದ ಮಹಿಳೆಯರು ಮತ್ತು ಯುವಕರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.

ಭಾರತ ಮತ ಚಲಾಯಿಸಿದೆ! ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಅವರ ಸಕ್ರಿಯ ಭಾಗವಹಿಸುವಿಕೆ ನಮ್ಮ ಪ್ರಜಾಪ್ರಭುತ್ವದ ಬುನಾದಿ. ಅವರ ಬದ್ಧತೆ ಮತ್ತು ಸಮರ್ಪಣೆ ನಮ್ಮ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮನೋಭಾವವು ಬೆಳೆಸಿದೆ ಎಂದು ಖಚಿತಪಡಿಸುತ್ತೇವೆ. ಭಾರತದ ನಾರಿ ಶಕ್ತಿ ಮತ್ತು ಯುವ ಶಕ್ತಿಯನ್ನು ನಾನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇವೆ. ಚುನಾವಣೆಯಲ್ಲಿ ಅವರ ಬಲವಾದ ಉಪಸ್ಥಿತಿಯು ಬಹಳ ಪ್ರೋತ್ಸಾಹದಾಯಕ” ಎಂದು ಅವರು ಎಕ್ಸ್​ನಲ್ಲಿ ಬರೆದಿದ್ದಾರೆ.

Continue Reading

ದೇಶ

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Poll Of Polls: ಕಳೆದ ಎರಡು ತಿಂಗಳಿಂದ ತೀವ್ರ ಚರ್ಚೆ, ಪ್ರಚಾರ, ಹೇಳಿಕೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿವೆ. ಎಲ್ಲ ಸಮೀಕ್ಷೆಗಳನ್ನೂ ವಿಶ್ಲೇಷಿಸಿದಾಗ ಬಿಜೆಪಿಯೇ ಬಹುಮತದ ಸರ್ಕಾರ ರಚಿಸುವುದು ನಿಶ್ಚಿತ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ 200 ಕ್ಷೇತ್ರಗಳಲ್ಲೂ ಜಯಿಸುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ.

VISTARANEWS.COM


on

Poll Of Polls
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಕೆಲವೇ ನಿಮಿಷಗಳಲ್ಲಿ ಮತಗಟ್ಟೆ ಸಮೀಕ್ಷೆ ಪ್ರಕಟವಾಗಿದೆ. ಬಹುತೇಕ ಸಮೀಕ್ಷೆಗಳ ವರದಿಗಳು ಎನ್‌ಡಿಎ ಮೈತ್ರಿಕೂಟವೇ ಗದ್ದುಗೆ ಹಿಡಿಯಲಿವೆ ಎಂದು ತಿಳಿಸಿವೆ. ಇನ್ನು, ಬಿಜೆಪಿಯನ್ನು ಶತಾಯಗತಾಯ ಸೋಲಿಸಲೇಬೇಕು ಎಂಬ ಕಾರಣದಿಂದ ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟ ರಚಿಸಿದರೂ, ಫಲ ಸಿಗುವುದಿಲ್ಲ ಎಂಬುದು ಮತಗಟ್ಟೆ ಸಮೀಕ್ಷೆಗಳ ವರದಿಗಳು ಇನ್ನು ತಿಳಿಸಿವೆ. ಇನ್ನು ಎಲ್ಲ ವರದಿಗಳನ್ನು ವಿಶ್ಲೇಷಿಸಿ, ಸರಾಸರಿ ಕ್ಷೇತ್ರಗಳನ್ನಾಗಿ ವಿಂಗಡಿಸಿದಾಗ (Poll Of Polls) ಎನ್‌ಡಿಎ ಮೈತ್ರಿಕೂಟವು 350ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂಬಂತಾಗಿದೆ.

ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. 2019ರಲ್ಲಿ ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.

200 ಸಮೀಪವೂ ಬಾರದ ಇಂಡಿಯಾ ಒಕ್ಕೂಟ

ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟವು ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ 125-165 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ಮತಗಟ್ಟೆ ಸಮೀಕ್ಷೆಗಳ ಒಟ್ಟು ಸಾರವಾಗಿದೆ. ಇದರೊಂದಿಗೆ ಇಂಡಿಯಾ ಒಕ್ಕೂಟವು ಮ್ಯಾಜಿಕ್‌ ನಂಬರ್‌ (272) ಬಿಡಿ, 200 ಕ್ಷೇತ್ರಗಳನ್ನೂ ತಲುಪುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಇದರೊಂದಿಗೆ ಕಾಂಗ್ರೆಸ್‌ ಸೇರಿ ಪ್ರತಿಪಕ್ಷಗಳಿಗೆ ಸತತ ಮೂರನೇ ಬಾರಿಯೂ ಹಿನ್ನಡೆಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

NDTV ಪೋಲ್‌ ಆಫ್‌ ಪೋಲ್ಸ್

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಲಾಭ

ದಕ್ಷಿಣ ಭಾರತದಲ್ಲಿ, ಅದರಲ್ಲೂ ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿವೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ.

ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, 2019ರಲ್ಲಿ ಶೇ.77.84ರಷ್ಟಿದ್ದ ಮತದಾನ ಪ್ರಮಾಣ ಈ ಬಾರಿ ಶೇ.70.35ಕ್ಕೆ ಕುಸಿದಿತ್ತು.

ಇದನ್ನೂ ಓದಿ: Exit Poll 2024 : ತಮಿಳುನಾಡು, ಕೇರಳದಲ್ಲೂ ಅರಳಲಿದೆ ಕಮಲ; ಮೋದಿಗಿದು ಐತಿಹಾಸಿಕ ಸಾಧನೆ

Continue Reading
Advertisement
Weather Updates
ಮಳೆ39 mins ago

Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

cyber attack ನನ್ನ ದೇಶ ನನ್ನ ದನಿ
ಅಂಕಣ59 mins ago

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ನನ್ನ ದೇಶ ನನ್ನ ದನಿ baman das basu
ಅಂಕಣ1 hour ago

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

Karnataka weather Forecast
ಮಳೆ2 hours ago

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Heatwave Effect
ಆರೋಗ್ಯ2 hours ago

Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Dina Bhavishya
ಭವಿಷ್ಯ3 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Stray dogs attack in Shira 4 children one woman injured
ಪ್ರಮುಖ ಸುದ್ದಿ8 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ8 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ8 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ9 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು15 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌