ರಾಜ್ಯಸಭೆಗೆ ನಾಮನಿರ್ದೇಶನ; ಡಾ. ವೀರೇಂದ್ರ ಹೆಗ್ಗಡೆಯವರ ಸಾರ್ಥಕ ಸೇವೆಗೆ ಸಂದ ಗೌರವ - Vistara News

ದೇಶ

ರಾಜ್ಯಸಭೆಗೆ ನಾಮನಿರ್ದೇಶನ; ಡಾ. ವೀರೇಂದ್ರ ಹೆಗ್ಗಡೆಯವರ ಸಾರ್ಥಕ ಸೇವೆಗೆ ಸಂದ ಗೌರವ

ನಾಡಿನ ಮನೆಮಾತಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನೇಮಕ ಮಾಡಿರುವುದರಿಂದ ಸಮಾಜಸೇವೆಯಲ್ಲಿನ ಅವರ ಅಪಾರ ಅನುಭವ ದೇಶದ ಆಡಳಿತಕ್ಕೆ ದೊರೆತಂಗಾಗಿದೆ. ಇದೊಂದು ರೀತಿಯಲ್ಲಿ ಅವರ ಸೇವೆಗೆ ಸಂದ ಗೌರವವೂ ಹೌದು.

VISTARANEWS.COM


on

veerendra heggade
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸಭೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ನಾಮ ನಿರ್ದೇಶನ ಮಾಡಿರುವುದು ಅವರ ಅಪಾರ ಸೇವೆಗೆ ಸಂದ ಅತ್ಯುನ್ನತ ಗೌರವವಾಗಿದೆ. ಸಮಾಜಸೇವೆಯಲ್ಲಿನ ಅವರ ಐದು ದಶಕಗಳ ಅನುಭವದಿಂದ ಸಂಸತ್ತಿನ ಚರ್ಚೆಗಳ ಮೌಲ್ಯ ಹೆಚ್ಚುವುದರ ಜತೆಗೆ ಆಡಳಿತಾಂಗಕ್ಕೆ ಉತ್ತಮ ಮಾರ್ಗದರ್ಶನವೂ ಲಭ್ಯವಾಗಲಿದೆ.

ಕಳೆದ ೨೧ ತಲೆಮಾರುಗಳಿಂದ ಧಾರ್ಮಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಸೇವೆ ಮಾಡಿಕೊಂಡು ಬಂದಿರುವ ಕುಟುಂಬದಲ್ಲಿ ಜನಿಸಿರುವ ಡಾ. ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿಗಳು ಮಾತ್ರವಲ್ಲ, ನಂಬಿದ ಭಕ್ತ ಗಣಕ್ಕೆ ನ್ಯಾಯಾಧೀಶರೂ ಕೂಡ. ಧಾರ್ಮಿಕ ಕಾರ್ಯ, ಸಮಾಜ ಸೇವೆ ಜತೆ ಜತೆಗೆ ನ್ಯಾಯಾಂಗದ ಕೆಲಸವನ್ನೂ ಮಾಡಿಕೊಂಡು ಬಂದವರು. ಮಂಜುನಾಥೇಶ್ವರ ಸ್ವಾಮಿಯ ಮೇಲಿನ ಆಣೆ ಪ್ರಮಾಣಕ್ಕೆ ಹೆಚ್ಚಿನ ಪ್ರಾಧನ್ಯತೆ ಇದೆ. ಭಕ್ತರು ತಕರುಗಳನ್ನು ಹೆಗ್ಗಡೆಯವರ ಬಳಿ ತರುತ್ತಾರೆ. ಸ್ಥಳದ ನಂಬಿಕೆಯ ದೈವ ಅಣ್ಣಪ್ಪ ಸ್ವಾಮಿ ಹಾಗು ಶ್ರೀ ಮಂಜುನಾಥನ ಆದೇಶಗಳನ್ನು ಅನುಸರಿಸಿ ಧರ್ಮಧಿಕಾರಿಗಳು ಆ ತಕರಾರುಗಳಿಗೆ ಕೊಡುವ ನ್ಯಾಯ ಮನೆಮಾತಾಗಿದೆ. ಹೀಗಾಗಿ ಅವರು ಅಪಾರ ಜನರ ಪ್ರೀತಿ, ಗೌರವಾಧಾರಗಳಿಗೆ ಪಾತ್ರರಾಗಿದ್ದಾರೆ.

ಶ್ರೀ ವೀರೇಂದ್ರ ಹೆಗ್ಗಡೆಯವರು 1948ರ ನವೆಂಬರ್ 25 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಂಟ್ವಾಳದ ಬೋರ್ಡ್ ಶಾಲೆಯಲ್ಲಿ ಮುಗಿಸಿದರು. ಸಮೀಪದ ಉಜಿರೆಯಲ್ಲಿ ಮಾಧ್ಯಮಿಕ ಶಿಕ್ಷಣ ಕಲಿತರು. ಜತೆಗೆ ಸಿದ್ಧವನ ಗುರುಕುಲದಲ್ಲಿ ಜೀವನ ಪಾಠವನ್ನು ಕಲಿತವರು. ನಂತರ ಬೆಂಗಳೂರಿನ ಶೇಷಾದ್ರಿಪುರಂ ಪ್ರೌಢಶಾಲೆ ಮತ್ತು ಸೈಂಟ್ ಜೋಸೆಫ್ ಶಾಲೆಯಲ್ಲಿ ಶಿಕ್ಷಣ ಮುಂದುವರಿಸಿದರು. 1963ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಅವರು ಬಿ.ಎ ಓದಬೇಕು, ಮುಂದೆ ಕಾನೂನು ಪದವಿ ಪಡೆದು ವಕೀಲರಾಗಬೇಕೆಂದು ಕನಸು ಕಂಡಿದ್ದರು.

ಈ ಹೊತ್ತಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿದ್ದ ತಮ್ಮ ತಾಯಿ ರತ್ನವರ್ಮ ಹೆಗ್ಗಡೆ ಅವರು ಅನಾರೋಗ್ಯಕ್ಕೊಳಗಾದುದ್ದರಿಂದ ಅವರ ಆರೈಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಅನಾರೋಗ್ಯದಿಂದಾಗಿ ರತ್ನವರ್ಮ ಹೆಗ್ಗಡೆ ವಿಧಿವಶರಾದ ಕಾರಣ, ತಮ್ಮ 20ನೇ ವಯಸ್ಸಿಗೇ ಅಂದರೆ 1968ರ ಅಕ್ಟೋಬರ್ 24ರಂದು ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದ 21ನೇ ಧರ್ಮಾಧಿಕಾರಿಗಳಾಗಿ ಜವಾಬ್ಧಾರಿ ವಹಿಸಿಕೊಂಡರು.

ಸೇವೆಯ ಸಂಕಲ್ಪ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಧರ್ಮಸ್ಥಳದ ಅಭಿವೃದ್ಧಿಯತ್ತ ಗಮನ ನೀಡಿದರು. ದೇಗುಲದ ಅಭಿವೃದ್ಧಿಗೆ ಜತೆಗೆ ಊರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದು, ಶ್ರೀ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಅಭಿವೃದ್ಧಿಗೊಳ್ಳುವಂತೆ ಮಾಡುವುದು, ಶಾಲಾ-ಕಾಲೇಜುಗಳನ್ನು ತೆರೆಯುವುದು ಹೀಗೆ ಒಂದರ ಹಿಂದೆ ಒಂದರಂತೆ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇದರ ಫಲವಾಗಿ ಇಂದು ಧರ್ಮಸ್ಥಳ ದಕ್ಷಿಣ ಭಾರತದ ಅತ್ಯಂತ ಹೆಚ್ಚು ಭಕ್ತರನ್ನು ಸೆಳೆಯುವ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದೆನಿಸಿದೆ.

ಬಡ ಮತ್ತು ಮಧ್ಯಮವರ್ಗದ ಕುಟುಂಬಗಳಿಗೆ ಮದುವೆ ಮಾಡುವುದೇ ದೊಡ್ಡ ಸವಾಲು ಎಂಬ ಕಾಲಘಟ್ಟದಲ್ಲಿ ಸಾಮೂಹಿಕ ವಿವಾಹವನ್ನು ಆರಂಭಿಸಿ, ಸಾವಿರಾರು ಕುಟುಂಬಗಳನ್ನು ಆರ್ಥಿಕ ಸಂಕಷ್ಟದಿಂದ ಪಾರುಮಾಡಿದ್ದಾರೆ. 1979ರಲ್ಲಿ ಆರಂಭವಾದ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಇಂದಿಗೂ ೫೦೦ಕ್ಕೂ ಹೆಚ್ಚು ಜೋಡಿಗಳು ಜತೆಯಾಗಿ ಸಾಂಸಾರಿಕ ಬಂಧನಕ್ಕೆ ಒಳಗಾಗುತ್ತಿವೆ.

1982ರಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆರಂಭಿಸಿದ ಶ್ರೀಯುತ ವೀರೇಂದ್ರ ಹೆಗ್ಗೆಡೆಯವರು ಬೆಳ್ತಂಗಡಿ ತಾಲ್ಲೂಕಿನ ನೂರಾರು ಕುಟುಂಬಗಳಿಗೆ ಜೀವನೋಪಾಯದ ದಾರಿ ಮಾಡಿಕೊಟ್ಟರು. ಮುಂದೆ ಈ ಯೋಜನೆ ಬೆಳೆಯುತ್ತಾ, ಅಕ್ಕಪಕ್ಕದ ತಾಲೂಕುಗಳಲ್ಲದೆ, ಜಿಲ್ಲೆಗಳ ಗಡಿಯನ್ನು ದಾಟಿ, ರಾಜ್ಯದಾದ್ಯಂತ ಹರಡಿದೆ. ಲಕ್ಷಾಂತರ ಕುಟುಂಬಗಳು ಫಲಾನುಭವಿಗಳಾಗಿವೆ.

ನೂರಾರು ಪ್ರಶಸ್ತಿಗಳ ಗರಿ
ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರ ಧಾರ್ಮಿಕ ಹಾಗೂ ಸಾಮಾಜಿಕ ಸೇವೆಗಳನ್ನು ಪರಿಗಣಿಸಿ ನೂರಾರು ಪ್ರಶಸ್ತಿ,ಪುರಸ್ಕಾರಗಳು ಸಂದಿವೆ. ಅವುಗಳಲ್ಲಿ ಮುಖ್ಯವಾದವು ಹೀಗಿವೆ;
1985 ರಲ್ಲಿ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ
1993 ರಲ್ಲಿ ರಾಷ್ಟ್ರಪತಿಗಳಿಂದ ರಾಜರ್ಷಿ ಗೌರವ
9994 ರಲ್ಲಿ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ
2004 ರಲ್ಲಿ ವರ್ಷದ ಕನ್ನಡಿಗ ಗೌರವ
2011 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ
2012 ರಲ್ಲಿ ಲಂಡನ್‌ನ ಪ್ರತಿಷ್ಠಿತ ಆಶ್ಡೆನ್ ಸಂಸ್ಥೆಯ ಜಾಗತಿಕ ಹಸಿರು ಆಸ್ಕರ್ ಎಂದೇ ಪರಿಗಣಿಸಲಾದ ಆಶ್ಡೆನ್ ಸುಸ್ಥಿರ ಇಂಧನ ಪ್ರಶಸ್ತಿ (ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಾಗಿ ನೀಡಲಾಗಿದೆ)
2013 ರಲ್ಲಿ ಮಧ್ಯಪ್ರದೇಶದ ದೇವಿ ಅಹಲ್ಯಾಬಾಯಿ ರಾಷ್ಟ್ರೀಯ ಪುರಸ್ಕಾರ.
2015 ರಲ್ಲಿ ಭಾರತ ಸರ್ಕಾರದಿಂದ ಪದ್ಮವಿಭೂಷಣ ಪ್ರಶಸ್ತಿ.
ಮಂಗಳೂರು, ಧಾರವಾಡ, ಹಂಪಿ ಕನ್ನಡ ವಿವಿ, ರಾಜೀವ್‌ಗಾಂಧಿ ಆರೋಗ್ಯ ವಿವಿ, ಅಮೆರಿಕದ ಗ್ಲ್ಯಾಸ್ಗೋ ವಿವಿ ಇವರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಿವೆ.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾದದು. ಮೊದಲಿಗೆ ಧರ್ಮಸ್ಥಳದ ಸುತ್ತಮತ್ತ ಸಂಚಾರಿ ಆಸ್ಪತ್ರೆಗಳನ್ನು ತೆರೆದ ವೀರೇಂದ್ರಹೆಗ್ಗಡೆಯವರು, ಮುಂದೆ ಹಲವಾರು ಆಸ್ಪತ್ರೆಗಳನ್ನು ಕಟ್ಟಿದ್ದಾರೆ. ಉಡುಪಿ, ಹಾಸನ ಮತ್ತು ಬೆಂಗಳೂರಿನಲ್ಲಿ ಆಯುವೇದ ಆಸ್ಪತ್ರೆಗಳನ್ನು ಸ್ಥಾಪಿಸಿದ್ದಾರೆ. ಮಂಗಳೂರಿನ ಎಸ್ ಡಿ ಎಮ್ ಕಣ್ಣಿನ ಆಸ್ಪತ್ರೆ ಮತ್ತು ದಂತ ಚಿಕಿತ್ಸಾಲಯ, ಕ್ಷಯರೋಗ ಚಿಕಿತ್ಸಾಲಯವಲ್ಲದೇ, ಉಜಿರೆಯಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರ, ಧಾರವಾಡದಲ್ಲಿ ವೈದ್ಯಕೀಯ ಕಾಲೇಜು ತೆರೆದಿದ್ದಾರೆ.

ರಾಜ್ಯಾದ್ಯಂತ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಹೆಸರಿನಲ್ಲಿ ಹಲವಾರು ಪ್ರಾಥಮಿಕ, ಪ್ರೌಢ ಶಾಲೆಗಳು ಮತು ವಿವಿಧ ಪದವಿಗಳು, ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣವಲ್ಲದೇ, ಶ್ರೀ ಮಂಜುನಾಥೇಶ್ವರ ಸಾಂಸ್ಕೃತಿಕ ಸಂಶೋಧನಾ ಕೇಂದ್ರವನ್ನು ತೆರೆದಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಕೊಡುಗೆ ಅಪಾರವಾದದು. ಒಟ್ಟಾರೆ ೪೦ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಈಗ ಕಾರ್ಯನಿರ್ವಹಿಸುತ್ತಿವೆ.

ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ

ಕೇವಲ ಶ್ರೀ ಕ್ಷೇತ್ರ ಧರ್ಮಸ್ಥಳ ಮಾತ್ರವಲ್ಲದೆ, ಇಲ್ಲಿ ಸಂಗ್ರಹವಾಗುವ ಆದಾಯವನ್ನೇ ಖರ್ಚು ಮಾಡಿ ನಾಡಿನ ಹಲವಾರು ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ನೂರಾರು ದೇಗುಲಗಳ ಜೀರ್ಣೋದ್ಧಾರಕ್ಕೆ ಧನ ಸಹಾಯ ಮಾಡಿದ್ದಾರೆ. ಕೆಲವು ಕ್ಷೇತ್ರಗಳನ್ನು ತಾವೇ ಮುಂದೆ ನಿಂತು ಅಭಿವೃದ್ಧಿ ಪಡಿಸಿದ್ದಾರೆ. ಅತ್ಯಾಕರ್ಷಕ ಗೊಮ್ಮಟೇಶ್ವರನ ವಿಗ್ರಹವನ್ನು ಧರ್ಮಸ್ಥಳದಲ್ಲಿ ಸ್ಥಾಪಿಸುವ ಮೂಲಕ ಅಭಿನವ ಚಾವುಂಡರಾಯ ಎಂಬು ಬಿರುದು ಪಡೆದಿದ್ದಾರೆ.

ಕೆಲ-ಸಾಹಿತ್ಯಕ್ಕೆ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿರುವ ಅವರು ಧರ್ಮಸ್ಥಳ ಸಾಹಿತ್ಯ ಸಮ್ಮೇಳನ ನಡೆಸುಕೊಂಡು ಬಂದಿದ್ದಾರೆ. ಯಕ್ಷಗಾಗನದ ಸಂಶೋಧನೆಗೆ, ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ. ಭಕ್ತಿಗೀತೆಗಳ ಗಾಯನ ಪ್ರೋತ್ಸಾಹಿಸಲು ತರಬೇತಿ ಕೇಂದ್ರ ತೆರೆಯುವುದರ ಜತೆಗೆ ಸ್ಪರ್ಧೆ ಏರ್ಪಡಿಸಿಕೊಂಡು ಬಂದಿದ್ದಾರೆ.

ಅವರ ಬಹುಮುಖಿ ಸಮಾಜ ಸೇವೆ ಎಲ್ಲರಿಗೂ ತಿಳಿದಿರುವುದೇ. ಈಗ ಅವರಿಗೆ ದೇಶದ ಆಡಳಿತಾಂಗದ ಭಾಗವಾಗಿ, ತಮ್ಮ ಅನುಭವವನ್ನು ಧಾರೆ ಎರೆಯಲು ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ | ರಾಜ್ಯಸಭೆಗೆ ಆಯ್ಕೆ: ನನ್ನ ಅನುಭವವನ್ನು ದೇಶಕ್ಕಾಗಿ ಬಳಸಲು ಒಳ್ಳೆಯ ವೇದಿಕೆ ಎಂದ ಡಾ. ಡಿ. ವೀರೇಂದ್ರ ಹೆಗ್ಗಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Income Tax Office : ಆದಾಯ ತೆರಿಗೆ ಕಚೇರಿಯಲ್ಲಿ ಬೆಂಕಿ ಅವಘಡ; ಒಂದು ಸಾವು; ಇಲ್ಲಿದೆ ವಿಡಿಯೊ

Income Tax Office: ಆದಾಯ ತೆರಿಗೆ ಸಿಆರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಮಧ್ಯಾಹ್ನ 3.07 ಕ್ಕೆ ಕರೆ ಬಂತು. ನಾವು ಒಟ್ಟು 21 ಅಗ್ನಿಶಾಮಕ ಟೆಂಡರ್ ಗಳನ್ನು ರವಾನಿಸಿದ್ದೇವೆ. ಹೆಚ್ಚಿನ ತನಿಖೆಗಾಗಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಸ್ಥಳೀಯ ಪೊಲೀಸರಿಗೆ ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Income Tax office
Koo

ನವ ದೆಹಲಿ: ಇಲ್ಲಿ ಐಟಿಒ ಪ್ರದೇಶದ (Income Tax Office) ಕೇಂದ್ರ ಕಂದಾಯ ಕಟ್ಟಡದಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು 46 ವರ್ಷದ ಪುರುಷನಾಗಿದ್ದು, ಅಲ್ಲಿ ಕಚೇರಿ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಸಿಲುಕಿ ಹಾಕಿಕೊಂಡಿದ್ದ ಏಳು ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆದಾಯ ತೆರಿಗೆ ಸಿಆರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಮಧ್ಯಾಹ್ನ 3.07 ಕ್ಕೆ ಕರೆ ಬಂತು. ನಾವು ಒಟ್ಟು 21 ಅಗ್ನಿಶಾಮಕ ಟೆಂಡರ್ ಗಳನ್ನು ರವಾನಿಸಿದ್ದೇವೆ. ಹೆಚ್ಚಿನ ತನಿಖೆಗಾಗಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಸ್ಥಳೀಯ ಪೊಲೀಸರಿಗೆ ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಟ್ಟಡವು ಹಳೆಯ ಪೊಲೀಸ್ ಪ್ರಧಾನ ಕಚೇರಿಯ ಎದುರು ಇದೆ/ ಇದನ್ನು ಇನ್ನೂ ಅದರ ಕೆಲವು ಘಟಕಗಳಿಗೆ ರಕ್ಷಣಾ ಪಡೆ ಹೋಗಿದೆ ಎಂದು ಅವರು ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊಗಳಲ್ಲಿ ಕಟ್ಟಡದ ನಿವಾಸಿಗಳು ಬೆಂಕಿಯಿಂದ ತಪ್ಪಿಸಿಕೊಳ್ಳುವುದಕ್ಕೆ ಕಿಟಕಿಯ ಅಂಚಿನ ಮೇಲೆ ಆಶ್ರಯ ಪಡೆಯುತ್ತಿರುವುದು ಕಂಡುಬಂದಿದೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

ಕಟ್ಟಡದ ಮೂರನೇ ಮಹಡಿಯಿಂದ ಐದು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಏಳು ಜನರನ್ನು ಡಿಎಫ್ಎಸ್ ಸುರಕ್ಷಿತವಾಗಿ ರಕ್ಷಿಸಿದೆ ಎಂದು ಸಂಜೆ 4 ಗಂಟೆಗೆ ನಮಗೆ ಮಾಹಿತಿ ಸಿಕ್ಕಿತು. ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ ಎಂದು ಡಿಎಫ್ಎಸ್ ಮುಖ್ಯಸ್ಥ ಅತುಲ್ ಗರ್ಗ್ ಹೇಳಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪುತ್ತಿದ್ದಂತೆ, ಅವರು ಕಟ್ಟಡವನ್ನು ಖಾಲಿ ಮಾಡಿದರು. ವಿಷಕಾರಿ ಹೊಗೆಯಿಂದ ರಕ್ಷಿಸಲು ನಾವು ಗ್ಯಾಸ್ ಮಾಸ್ಕ್ ಬಳಸಬೇಕಾಯಿತು. ಆದರೆ ಕಟ್ಟಡದಲ್ಲಿದ್ದ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಯಿತು. ಬೆಂಕಿಯ ನಿಜವಾದ ಕಾರಣವನ್ನು ತಿಳಿಯಲು ಹೆಚ್ಚಿನ ತನಿಖೆಗಾಗಿ ನಾವು ಪ್ರದೇಶದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ಗರ್ಗ್ ಹೇಳಿದರು.

ಭಾನುವಾರ, ದೆಹಲಿಯ ಬವಾನಾ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಮತ್ತು ಭಾರಿ ಬೆಂಕಿಯಲ್ಲಿ ಕನಿಷ್ಠ ಏಳು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Billboard Collapse : 14 ಸಾವಿಗೆ ಕಾರಣವಾದ ಹೋರ್ಡಿಂಗ್ ಕಂಪನಿ ಮಾಲೀಕನ ಮೇಲಿದೆ ಅತ್ಯಾಚಾರ ಸೇರಿದಂತೆ 20ಕ್ಕೂ ಹೆಚ್ಚು ಕೇಸ್​ಗಳು

ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಗಾಯಗೊಂಡ ಇತರರನ್ನು ಸುರೇಶ್, ರಾಕೇಶ್, ಪಂಕಜ್ ಪಾಲ್ ಮತ್ತು ಘನ್ ಶ್ಯಾಮ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬಂದ ಕಿಡಿಯು ಅಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವಾಯಿತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Continue Reading

ಪ್ರಮುಖ ಸುದ್ದಿ

Billboard Collapse : 14 ಸಾವಿಗೆ ಕಾರಣವಾದ ಹೋರ್ಡಿಂಗ್ ಕಂಪನಿ ಮಾಲೀಕನ ಮೇಲಿದೆ ಅತ್ಯಾಚಾರ ಸೇರಿದಂತೆ 20ಕ್ಕೂ ಹೆಚ್ಚು ಕೇಸ್​ಗಳು

ಜಾಹೀರಾತು ಏಜೆನ್ಸಿ ಮಾಲೀಕ ಭಿಂಡೆ 2009ರಲ್ಲಿ ಮುಲುಂಡ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ವೇಳೆ ತಮ್ಮ ಅಫಿಡವಿಟ್​ನಲ್ಲಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ ಮತ್ತು ನೆಗೋಷಿಯಬಲ್ ಇನ್​ಸ್ಟ್ರುಮೆಂಟ್​ ಆ್ಯಕ್ಟ್​ (ಚೆಕ್ ಬೌನ್ಸ್ ​ ಪ್ರಕರಣ ) ಅಡಿಯಲ್ಲಿ ತಮ್ಮ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದ.

VISTARANEWS.COM


on

Billboard Collapse
Koo

ನವದೆಹಲಿ: ಮುಂಬೈನ ಘಾಟ್​ಕೋಪರ್​ನಲ್ಲಿ ಸೋಮವಾರ ಧೂಳು ಬಿರುಗಾಳಿ ಹಾಗೂ ಮಳೆ ಸುರಿದಾಗ ಹೋರ್ಡಿಂಗ್ ಕುಸಿತು ಬಿದ್ದು (Billboard Collapse) 14 ಮಂದಿ ಮೃತಪಟ್ಟು 74ಕ್ಕೂ ಹೆಚ್ಚು ಮಂದಿ ಗಾಯೊಂಡಿದ್ದರು. ಈ ಹಿನ್ನೆಲೆಯಲ್ಲಿ ಹೋರ್ಡಿಂಗ್ ಸ್ಥಾಪಿಸಿದ್ದ ಇಗೊ ಮೀಡಿಯಾ ಕಂಪನಿಯ ಮಾಲೀಕ ಭವೇಶ್ ಭಿಂಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಚ್ಚರಿಯೆಂರೆ ಭವೇಶ್​ಗೆ ಇದು ಮಾಮೂಲಿ. ಯಾಕೆಂಧರೆ ಅವರ ವಿರುದ್ಧ ಅತ್ಯಾಚಾರ ಸೇರಿದಂತೆ 20 ಕ್ಕೂ ಹೆಚ್ಚು ಪ್ರಕರಣಗಳಿವೆ. ಘಟನ ಬಳಿಕ ಭಿಂಡೆ ಪರಾರಿಯಾಗಿದ್ದು, ಆತನ ಸೆಲ್ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು ಏಜೆನ್ಸಿ ಮಾಲೀಕ ಭಿಂಡೆ 2009ರಲ್ಲಿ ಮುಲುಂಡ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ವೇಳೆ ತಮ್ಮ ಅಫಿಡವಿಟ್​ನಲ್ಲಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ ಮತ್ತು ನೆಗೋಷಿಯಬಲ್ ಇನ್​ಸ್ಟ್ರುಮೆಂಟ್​ ಆ್ಯಕ್ಟ್​ (ಚೆಕ್ ಬೌನ್ಸ್ ​ ಪ್ರಕರಣ ) ಅಡಿಯಲ್ಲಿ ತಮ್ಮ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದ.

ಈ ವರ್ಷದ ಜನವರಿಯಲ್ಲಿ ಮುಲುಂಡ್ ಪೊಲೀಸ್ ಠಾಣೆಯಲ್ಲಿ ಭಿಡೆ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಚಾರ್ಜ್​ ಶೀಟ್​ ಕೂಡ ಸಲ್ಲಿಸಲಾಗಿದೆ. ಹೋರ್ಡಿಂಗ್​ಗಳು ಮತ್ತು ಬ್ಯಾನರ್​​ ಸ್ಥಾಪಿಸಲು ಭಿಂಡೆ ಭಾರತೀಯ ರೈಲ್ವೆ ಮತ್ತು ಮುಂಬೈ ನಾಗರಿಕ ಸಂಸ್ಥೆ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಯಿಂದ ಹಲವಾರು ಗುತ್ತಿಗೆಗಳನ್ನು ಪಡೆದಿದ್ದಾನೆ. ಎರಡೂ ಸಂಸ್ಥೆಗಳ ನಿಯಮಗಳನ್ನು ಹಲವಾರು ಬಾರಿ ಉಲ್ಲಂಘಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆತನ ಕಂಪನಿ ವಿರುದ್ಧ ಮರ ವಿಷ ಹಾಕಿದ ಮತ್ತು ಮರ ಕಡಿಯುವ ಪ್ರಕರಣಗಳಲ್ಲಿ ದೂರು ದಾಖಲಾಗಿದೆ.

ಅತ್ಯಂತ ದೊಡ್ಡ ಹೋರ್ಡಿಂಗ್​

ಸೋಮವಾರ ಪೆಟ್ರೋಲ್​ ಸ್ಟೇಷನ್​ ಮೇಲೆ ಮೇಲೆ ಬಿದ್ದ ಹೋರ್ಡಿಂಗ್ 120X120 ಅಡಿ ರಚನೆಯಾಗಿದ್ದು, ಅದು ಲಿಮ್ಕಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸ್ಥಾನ ಪಡೆಯುವಷ್ಟು ದೊಡ್ಡದಾಗಿದೆ. ಅಂದ ಹಾಗೆ ಬಿಎಂಸಿ 40X40 ಅಡಿಗಿಂತ ಹೆಚ್ಚಿನ ಗಾತ್ರದ ಜಾಹೀರಾತು ಫಲಕಗಳನ್ನು ಅನುಮತಿಸುವುದಿಲ್ಲ. ಹೀಗಾಗಿ ನಿಯಮ ಮೀರಿ ಅಳವಡಿಸಿರುವುದು ಸ್ಪಷ್ಟ.

ಇದನ್ನೂ ಓದಿ: Dog Attack : ಮನೆಯಲ್ಲಿ ಮಲಗಿಸಿದ್ದ ಐದು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿ!

ನಗರದಲ್ಲಿನ ಎಲ್ಲಾ ಅಕ್ರಮ ಹೋರ್ಡಿಂಗ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ನಾವು ಆದೇಶಿಸಿದ್ದೇವೆ. ನಾವು ಇಂದು ಅಭಿಯಾನ ಪ್ರಾರಂಭಿಸುತ್ತಿದ್ದೇವೆ. ಅನುಮತಿ ಪಡೆಯದ ಕಾರಣ ಈ ಪ್ರಕರಣದಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹೋರ್ಡಿಂಗ್ ಗೋಚರಿಸುವಂತೆ ಕೆಲವು ಮರಗಳನ್ನು ಕತ್ತರಿಸಲಾಗಿದೆ ಎಂಬ ದೂರು ಸಹ ಬಂದಿದೆ. ಈ ಸಂಬಂಧ ನಾವು ಪ್ರಕರಣ ದಾಖಲಿಸಿದ್ದೇವೆ ಎಂದು ಬಿಎಂಸಿ ಆಯುಕ್ತ ಭೂಷಣ್ ಗಗ್ರಾನಿ ಸುದ್ದಿಗಾರರಿಗೆ ತಿಳಿಸಿದರು.

ಬಿಎಂಸಿ ಹೆಚ್ಚುವರಿ ಆಯುಕ್ತ ಸುಧಾಕರ್ ಶಿಂಧೆ ಮಾತನಾಡಿ, ನಿಯಮ ಉಲ್ಲಂಘನೆ ವಿವಾದ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಲೋಪಗಳು ಎಲ್ಲಿ ಸಂಭವಿಸಿವೆ ಎಂಬುದು ತನಿಖೆಯಿಂದ ಬಹಿರಂಗವಾಗಲಿದೆ. ಗಾಯಗೊಂಡ ಜನರನ್ನು ನೋಡಿಕೊಳ್ಳುವುದು ಬಿಎಂಸಿಯ ಪ್ರಸ್ತುತ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

Continue Reading

ಪ್ರವಾಸ

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ಊಟಿಗೆ ಯಾವ ಸಮಯದಲ್ಲಿ ಬೇಕಾದರೂ ಭೇಟಿ ನೀಡಬಹುದು. ಇಲ್ಲಿ ಪ್ರತಿಯೊಂದು ತಿಂಗಳೂ ಏನಾದರೂ ಒಂದು ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ನಿಮ್ಮ ಆಸಕ್ತಿಗೆ ಅನುಗುಣವಾಗಿ ಊಟಿಗೆ ಪ್ರವಾಸ (Ooty Tour) ಹೊರಡುವ ಯೋಜನೆ ಮಾಡಬಹುದು. ಊಟಿಯ ಅದ್ಭುತಗಳ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

By

Ooty Tour
Koo

ಬೇಸಿಗೆಯ ಬಿಸಿಲಿನ ಕಣ್ತಪ್ಪಿಸಿ ಪ್ರಕೃತಿಯ ಮಡಿಲಲ್ಲಿ ಕಾಲ ಕಳೆಯಬೇಕು ಎನ್ನುವ ಆಸೆ ಮನದಲ್ಲಿ ಮೂಡಿದಾಗ ಕೂಡಲೇ ನೆನಪುಗುವುದು ದಕ್ಷಿಣ ಭಾರತದ (southern India) ಸುಪ್ರಸಿದ್ಧ ಪ್ರವಾಸಿ ತಾಣ ಊಟಿ (Ooty Tour). ದಕ್ಷಿಣ ಭಾರತದ ನೀಲಗಿರಿ ಬೆಟ್ಟಗಳಲ್ಲಿ ( Nilgiri Hills) ನೆಲೆಯಾಗಿರುವ ಸುಂದರವಾದ ಗಿರಿಧಾಮ ಪ್ರದೇಶವಾಗಿರುವ ಊಟಿಯಲ್ಲಿ ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರದೇಶಗಳಿವೆ. ಪ್ರಶಾಂತವಾದ ಭೂದೃಶ್ಯಗಳು, ಆಹ್ಲಾದಕರ ಹವಾಮಾನ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಇದು ಹೊಂದಿದೆ.

ಪ್ರವಾಸ ಪ್ರಿಯರಿಗಾಗಿ ಊಟಿ ಏನನ್ನಾದರೂ ನೀಡುತ್ತದೆ. ಅದು ಪ್ರಕೃತಿಯ ಪ್ರೀತಿ, ಸಾಹಸದ ಪ್ರಜ್ಞೆ ಅಥವಾ ಶಾಂತಿ ಮತ್ತು ಶಾಂತತೆಯ ಹಂಬಲವನ್ನು ತಣಿಸುತ್ತದೆ. ಪ್ರತಿ ಋತುವಿಗೂ ತನ್ನದೇ ಆದ ವಿಶೇಷತೆಯನ್ನು ಒದಗಿಸುತ್ತದೆ. ವರ್ಷವಿಡೀ ಬೇಸಿಗೆಯು ಬಹುವರ್ಣದ ಹೂವುಗಳನ್ನು ತರುತ್ತದೆ. ಮಳೆಗಾಲ ಬಂದೊಡನೆ ಎಲ್ಲವನ್ನೂ ಮಂಜಿನಿಂದ ಆವರಿಸುವಂತೆ ಮಾಡುತ್ತದೆ. ಶರತ್ಕಾಲದಲ್ಲಿ ಉಲ್ಲಾಸಕರವಾದ ಗಾಳಿ ಮತ್ತು ಚಳಿಗಾಲದ ತಂಪು ಅಪ್ಪುಗೆಯನ್ನು ಮರೆಯಲಾಗದು.

ಗಿರಿಧಾಮಗಳ ರಾಣಿ ಎಂದೂ ಕರೆಯಲಾಗುವ ಊಟಿಗೆ ವರ್ಷಪೂರ್ತಿ ಭೇಟಿ ಮಾಡಬಹುದು. ಪ್ರತಿ ಋತುವಿನಲ್ಲಿ ಇದು ತನ್ನದೇ ಆದ ವೈಭವವನ್ನು ತೊಂಬಿಕೊಂಡು ತನುಮನಕ್ಕೆ ಸಂತೋಷವನ್ನು ಉಣಬಡಿಸುತ್ತದೆ. ನಿಖರವಾಗಿ ಯಾವಾಗ ಹೋಗಬೇಕೆಂದು ತಿಳಿಯುವುದು ಖಂಡಿತವಾಗಿಯೂ ನಮ್ಮ ಪ್ರಯಾಣದ ಅನುಭವವನ್ನು ಸುಧಾರಿಸುತ್ತದೆ. ಊಟಿಯಲ್ಲಿ ಪ್ರತಿ ಸೀಸನ್ ಏನು ವಿಶೇಷ ಎಂಬ ಮಾಹಿತಿ ಇಲ್ಲಿದೆ.


ಬೇಸಿಗೆಯ ವೈಭವ; ಮಾರ್ಚ್‌ನಿಂದ ಜೂನ್

ಊಟಿಗೆ ಪ್ರವಾಸ ಹೋಗಲು ಅತ್ಯಂತ ಜನಪ್ರಿಯ ಸಮಯವೆಂದರೆ ಬೇಸಿಗೆಯ ತಿಂಗಳು. ಮಾರ್ಚ್‌ನಿಂದ ಜೂನ್‌ವರೆಗೆ ಹಗಲಿನ ತಾಪಮಾನವು ಇಲ್ಲಿ 15 ಡಿಗ್ರಿ ಸೆಲ್ಸಿಯಸ್ ನಿಂದ 25 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುತ್ತದೆ. ಇದು ಬಿಸಿಯಾದ ಬಯಲು ಪ್ರದೇಶಗಳಿಗೆ ಹೋಲಿಸಿದರೆ ಇದು ತುಂಬಾ ಆರಾಮದಾಯಕವಾಗಿದೆ. ಈ ಅವಧಿಯಲ್ಲಿ ಹವಾಮಾನವು ತಂಪಾಗಿರುತ್ತದೆ. ಇದು ಹಸಿರು ಕಣಿವೆಗಳು, ಹೂಬಿಡುವ ಹೂವುಗಳು ಮತ್ತು ಬೀಳುವ ಕ್ಯಾಸ್ಕೇಡ್‌ಗಳನ್ನು ಅನ್ವೇಷಿಸಲು ಸೂಕ್ತವಾಗಿದೆ. ಪ್ರತೀ ವರ್ಷ ಮೇ ತಿಂಗಳಲ್ಲಿ, ಬೊಟಾನಿಕಲ್ ಗಾರ್ಡನ್ಸ್‌ನಲ್ಲಿ ಅದ್ಭುತವಾದ ಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತದೆ.


ಮಾನ್ಸೂನ್‌ ಮ್ಯಾಜಿಕ್ -ಜುಲೈನಿಂದ ಸೆಪ್ಟೆಂಬರ್

ಒಮ್ಮೆ ಮಳೆ ಬಂದರೆ ಮತ್ತೆ ಎಲ್ಲವೂ ಹಸಿರು ಬಣ್ಣಕ್ಕೆ ತಿರುಗುತ್ತದೆ. ಆದರೆ ಈ ಬಾರಿ ಹೆಚ್ಚು ತೀವ್ರವಾಗಿ ಇಡೀ ಪ್ರದೇಶವು ಸೊಂಪಾದ ಸಸ್ಯಗಳಿಂದ ಆವೃತವಾಗಿದೆ. ಎಷ್ಟರಮಟ್ಟಿಗೆ ಎಂದರೆ ಕೆಲವೊಮ್ಮೆ ಇಡೀ ಪಟ್ಟಣವು ದಟ್ಟವಾದ ಎಲೆಗಳ ಅಡಿಯಲ್ಲಿ ಕಣ್ಮರೆಯಾಗುತ್ತದೆ. ಈ ತಿಂಗಳುಗಳಲ್ಲಿ ಜುಲೈನಿಂದ ಸೆಪ್ಟೆಂಬರ್ ವರೆಗೆ, ಊಟಿಯ ಮೇಲೆ ಮಧ್ಯಮ ಅಥವಾ ಭಾರೀ ಮಳೆ ಬೀಳುತ್ತದೆ. ಇದು ಸುತ್ತಲಿನ ಎಲ್ಲವನ್ನೂ ರಿಫ್ರೆಶ್ ಮಾಡಿದಂತೆ ಭಾಸವಾಗುತ್ತದೆ. ಬೇಸಿಗೆಯ ಶಾಖದ ಅನಂತರ ಮತ್ತೊಮ್ಮೆ ಜೀವಂತ ತಳೆದಂತೆ ಕಾಣುತ್ತದೆ. ಮಳೆಯ ಕಾರಣದಿಂದ ಹೊರಾಂಗಣ ಚಟುವಟಿಕೆಗಳು ಸೀಮಿತವಾಗಿರಬಹುದು. ಆದರೆ ಮಂಜಿನಿಂದ ಆವೃತವಾದ ಪರ್ವತಗಳ ಮೂಲಕ ಹರಿಯುವ ತೊರೆಗಳ ಸೌಂದರ್ಯ ಇಮ್ಮಡಿಯಾಗುತ್ತದೆ.


ಶರತ್ಕಾಲದ ಅದ್ಭುತ- ಅಕ್ಟೋಬರ್‌ನಿಂದ ನವೆಂಬರ್

ಮಳೆಗಾಲ ಅವಧಿ ಮುಗಿದ ಅನಂತರ, ಶರತ್ಕಾಲದಲ್ಲಿ ಆಕಾಶವು ಮತ್ತೆ ನೀಲಿ ಬಣ್ಣಕ್ಕೆ ತಿರುಗುತ್ತದೆ. ಚಳಿಗಾಲ ಪ್ರಾರಂಭವಾಗುವವರೆಗೆ ಪ್ರಶಾಂತ ಪರಿಸರ ಮನಸ್ಸಿಗೆ ಹಿತ ನೀಡುತ್ತದೆ. ಈ ಸಮಯದಲ್ಲಿ ತಾಪಮಾನವು 10 ಡಿಗ್ರಿಯಿಂದ 20 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ. ಹೀಗಾಗಿ ಇದು ಚಟುವಟಿಕೆಗಳಿಗೆ ಸೂಕ್ತವಾಗಿರುತ್ತದೆ. ಟ್ರೆಕ್ಕಿಂಗ್, ಬೋಟಿಂಗ್, ದೃಶ್ಯವೀಕ್ಷಣೆ ನಡೆಸಲು ಸೂಕ್ತ ಸಮಯವಾಗಿರುತ್ತದೆ. ಹವಾಮಾನವು ಸಾಕಷ್ಟು ಸ್ನೇಹಪರವಾಗಿರುತ್ತದೆ. ಛಾಯಾಗ್ರಹಣಕ್ಕೆ ಇದು ಸೂಕ್ತ ಸಮಯ. ಈ ಸಂದರ್ಭದಲ್ಲಿ ಊಟಿ ಮಾರಿಯಮ್ಮನ್ ದೇವಾಲಯದ ಉತ್ಸವವನ್ನು ಕಣ್ತುಂಬಿಕೊಳ್ಳಲು ಮರೆಯಬೇಡಿ.


ಚಳಿಗಾಲದ ವಂಡರ್ ಲ್ಯಾಂಡ್ (ಡಿಸೆಂಬರ್‌ನಿಂದ ಫೆಬ್ರವರಿ)

ಚಳಿಗಾಲದಲ್ಲಿ ರಾತ್ರಿಯ ಸಮಯದಲ್ಲಿ ತಾಪಮಾನವು ತೀವ್ರವಾಗಿ ಇಳಿಯುತ್ತದೆ. ಸುಮಾರು 5 ಡಿಗ್ರಿ ಸೆಲ್ಸಿಯಸ್ ಗಿಂತಲೂ ಕೆಳಗೆ ಇಳಿಯುತ್ತದೆ. ಮುಂಜಾನೆಯು ಸಾಮಾನ್ಯವಾಗಿ ಮಂಜಿನಿಂದ ಕೂಡಿರುತ್ತದೆ. ಆದರೆ ಇಡೀ ದಿನ ತಂಪಾಗಿರುತ್ತದೆ.

ಇದನ್ನೂ ಓದಿ: Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

ಸಾಕಷ್ಟು ಬಿಸಿಲು ಸಿಗುತ್ತದೆ. ಆದರೂ ಪ್ರದೇಶದ ಸುತ್ತಲಿನ ದಟ್ಟವಾದ ಕಾಡುಗಳಿಂದಾಗಿ ಸೂರ್ಯನ ಬೆಳಕು ಅಷ್ಟೇನೂ ನೆಲದ ಮಟ್ಟವನ್ನು ತಲುಪುವುದಿಲ್ಲ, ಆದ್ದರಿಂದ ಚಹಾ ತೋಟಗಳ ಸುತ್ತಲೂ ಮಾಂತ್ರಿಕ ಸ್ಪರ್ಶ ನೀಡಿದಂತೆ ಭಾಸವಾಗುತ್ತದೆ. ಸಾಹಸಿಗಳು ನೀಲಗಿರಿಯ ಅತೀ ಎತ್ತರದ ಪ್ರದೇಶವಾದ ದೊಡ್ಡಬೆಟ್ಟ ಶಿಖರದಲ್ಲಿ ಚಾರಣಕ್ಕೆ ಹೋಗಬಹುದು ಅಥವಾ ವಿವಿಧ ಜಾತಿಯ ಪ್ರಾಣಿಗಳು, ಪಕ್ಷಿಗಳು, ಸರೀಸೃಪಗಳು, ಕೀಟಗಳನ್ನು ಮುದುಮಲೈ ವನ್ಯಜೀವಿ ಅಭಯಾರಣ್ಯದಲ್ಲಿ ಅನ್ವೇಷಿಸಬಹುದು. ಜನವರಿಯಲ್ಲಿ ಇಲ್ಲಿ ವಾರ್ಷಿಕ ಚಹಾ ಪ್ರವಾಸೋದ್ಯಮ ಉತ್ಸವ ನಡೆಯುತ್ತದೆ. ಇಲ್ಲಿ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಬಹುದು, ವಿವಿಧ ಮಾದರಿಯ ಚಹಾಗಳನ್ನು ಸವಿಯಬಹುದು.

Continue Reading

Latest

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

ವಿಶ್ವದ ಜನಸಂಖ್ಯೆಯ ಸುಮಾರು ಶೇ. 88ರಷ್ಟು ಮಂದಿ ಹೆಚ್ಚಾಗಿ ಮಾತನಾಡುವ (Spoken Language) ಟಾಪ್ 10 ಭಾಷೆಗಳು ಪಟ್ಟಿಯಲ್ಲಿ ಭಾರತೀಯ ಭಾಷೆಗಳು ಸೇರಿವೆ. ಅವುಗಳು ಯಾವುದು ಗೊತ್ತೇ? ಈ ಕುರಿತು ಇಲ್ಲಿದೆ ಕುತೂಹಲಕರ ವರದಿ.

VISTARANEWS.COM


on

By

Spoken Language
Koo

ಸಂವಹನಕ್ಕಾಗಿ ಭಾಷೆಯು (Spoken Language) ಅತ್ಯಗತ್ಯ ಸಾಧನವಾಗಿದೆ. ಇದು ವ್ಯಕ್ತಿಗಳ ನಡುವೆ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಆಲೋಚನೆಗಳು, ಭಾವನೆಗಳು ಮತ್ತು ಮಾಹಿತಿಗಳನ್ನು ವಿನಿಮಯ ಗೊಳಿಸುವುದನ್ನು ಭಾಷೆ ಸುಲಭಗೊಳಿಸುತ್ತದೆ. ವಿಶ್ವದಾದ್ಯಂತ (world) ಪ್ರಸ್ತುತ 7,000ಕ್ಕೂ ಹೆಚ್ಚು ಭಾಷೆಗಳಿವೆ, ಪ್ರತಿಯೊಂದು ಭಾಷೆಗೂ ಅದರದ್ದೇ ಆದ ವೈಶಿಷ್ಟ್ಯಗಳಿವೆ.

ಜಾಗತಿಕವಾಗಿ ಸಾವಿರಾರು ಭಾಷೆಗಳಿದ್ದರೂ ವಿಶ್ವದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಕೇವಲ ಕೆಲವೇ ಭಾಷೆಗಳನ್ನು ಮಾತನಾಡುತ್ತಾರೆ. ಇವುಗಳನ್ನು ಸಾಮಾನ್ಯವಾಗಿ ವ್ಯಾಪಾರ, ರಾಜಕೀಯ ಮತ್ತು ಮಾಧ್ಯಮಕ್ಕಾಗಿ ಬಳಸಲಾಗುತ್ತದೆ. ಎಥ್ನೋಲೊಗ್ 2023ರ ಲೆಕ್ಕಾಚಾರವನ್ನು ಆಧರಿಸಿ ಇತ್ತೀಚೆಗೆ ವಿಶ್ವದಾದ್ಯಂತ ಹೆಚ್ಚು ವ್ಯಾಪಕವಾಗಿ ಮಾತನಾಡುವ ಟಾಪ್ 10 ಭಾಷೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಇಂಗ್ಲೀಷ್ (english) ಮೊದಲ ಸ್ಥಾನದಲ್ಲಿದ್ದರೆ ಭಾರತೀಯ (indian) ಭಾಷೆ ಹಿಂದಿ (hindi) ಮೂರನೇ ಸ್ಥಾನದಲ್ಲಿದೆ.

ಅಧ್ಯಯನದ ಮಾಹಿತಿ ಪ್ರಕಾರ ಈ ಭಾಷೆಗಳನ್ನು ಪ್ರಪಂಚದ ಜನಸಂಖ್ಯೆಯ ಸುಮಾರು ಶೇ. 88ರಷ್ಟು ಮಂದಿ ಸ್ಥಳೀಯವಾಗಿ ಮಾತನಾಡುತ್ತಾರೆ. ನೂರಾರು ಮಿಲಿಯನ್‌ಗಿಂತಲೂ ಹೆಚ್ಚು ಜನರು ಅವುಗಳನ್ನು ಎರಡನೇ ಭಾಷೆಯಾಗಿ ಮಾತನಾಡುತ್ತಾರೆ.

ಹೆಚ್ಚು ಮಾತನಾಡುವ 10 ಭಾಷೆಗಳು

ಪ್ರಪಂಚದಾದ್ಯಂತ ಹೆಚ್ಚು ಜನರು ಬಳಸುವ ಹತ್ತು ಭಾಷೆಗಳಲ್ಲಿ ಇಂಗ್ಲಿಷ್ ಮೊದಲ ಸ್ಥಾನದಲ್ಲಿದ್ದು, ಸುಮಾರು 1.5 ಬಿಲಿಯನ್ ಮಂದಿ ಇದನ್ನು ಮಾತನಾಡುತ್ತಾರೆ. ಬಳಿಕ ಮ್ಯಾಂಡರಿನ್ ಚೈನೀಸ್ 1.1 ಬಿಲಿಯನ್, ಹಿಂದಿ ಮೂರನೇ ಸ್ಥಾನದಲ್ಲಿದ್ದು, 609.5 ಮಿಲಿಯನ್, ಸ್ಪ್ಯಾನಿಷ್ 559.1 ಮಿಲಿಯನ್, ಫ್ರೆಂಚ್ 309.8 ಮಿಲಿಯನ್, ಸ್ಟ್ಯಾಂಡರ್ಡ್ ಅರೇಬಿಕ್ 274 ಮಿಲಿಯನ್, ಬಂಗಾಳಿ 272.8 ಮಿಲಿಯನ್, ಪೋರ್ಚುಗೀಸ್ 263.6 ಮಿಲಿಯನ್, ರಷ್ಯನ್ 255.0 ಮಿಲಿಯನ್, ಉರ್ದು 231.7 ಮಿಲಿಯನ್ ಮಂದಿ ಮಾತನಾಡುತ್ತಾರೆ.


ಇಂಗ್ಲೀಷ್

ಸರಿಸುಮಾರು 1.5 ಬಿಲಿಯನ್ ಮಾತನಾಡುವವರನ್ನು ಹೊಂದಿರುವ ಇಂಗ್ಲಿಷ್ ಜಾಗತಿಕವಾಗಿ ಹೆಚ್ಚು ಮಾತನಾಡುವ ಭಾಷೆಯಾಗಿದೆ. ಅಧಿಕೃತ ಯುಎನ್ ಭಾಷೆ. ಇಂಗ್ಲಿಷ್ ಭಾಷೆ ಅಂತಾರಾಷ್ಟ್ರೀಯ ವ್ಯವಹಾರ, ವಿಜ್ಞಾನ ಮತ್ತು ರಾಜತಾಂತ್ರಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಜನಪ್ರಿಯತೆಯನ್ನು ಇಂಟರ್ನೆಟ್‌ನಿಂದ ಮತ್ತಷ್ಟು ಹೆಚ್ಚಿಸಲಾಗಿದೆ. ಅಲ್ಲಿ ಇದು ಸಂವಹನದ ಪ್ರಾಥಮಿಕ ಭಾಷೆಯಾಗಿದೆ. ಅದರ ವ್ಯಾಪಕ ಅಳವಡಿಕೆ ಮತ್ತು ಪ್ರವೇಶಕ್ಕೆ ಕೊಡುಗೆ ನೀಡುತ್ತದೆ.

ಮ್ಯಾಂಡರಿನ್ ಚೈನೀಸ್

ಚೀನಾ ಮತ್ತು ತೈವಾನ್‌ನಲ್ಲಿ ಸುಮಾರು 1.1 ಶತಕೋಟಿ ಮಾತನಾಡುವ ಮ್ಯಾಂಡರಿನ್ ಚೈನೀಸ್ ಜಾಗತಿಕವಾಗಿ ಹೆಚ್ಚು ಮಾತನಾಡುವ ಎರಡನೇ ಭಾಷೆಯಾಗಿದೆ. ಇದು ಜಾಗತಿಕ ಸಂವಹನದಲ್ಲಿ ಮಹತ್ವದ ಸ್ಥಾನವನ್ನು ಹೊಂದಿದೆ. ಯುಎನ್‌ ಇದನ್ನು ಅಧಿಕೃತ ಭಾಷೆ ಎಂದು ಪರಿಗಣಿಸಿರುವುದರಿಂದ ಮ್ಯಾಂಡರಿನ್‌ನ ಪ್ರಭಾವವು ವಿಶ್ವಾದ್ಯಂತ ಚೈನೀಸ್ ಮಾತನಾಡುವ ಸಮುದಾಯಗಳಿಗೆ ವಿಸ್ತರಿಸಿದೆ. ಇದು ವ್ಯಾಪಾರ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಅಮೂಲ್ಯವಾದ ಭಾಷೆಯಾಗಿದೆ.


ಹಿಂದಿ

609.5 ಮಿಲಿಯನ್ (ಸುಮಾರು 60 ಕೋಟಿ) ಮಾತನಾಡುವವರೊಂದಿಗೆ, ಹಿಂದಿ ಭಾರತದ ಪ್ರಮುಖ ಭಾಷೆಯಾಗಿದೆ. ಸರ್ಕಾರದ ಅಧಿಕೃತ ಭಾಷೆಗಳಲ್ಲಿ ಇದು ಕೂಡ ಒಂದು. ದೇವನಾಗರಿ ಲಿಪಿಯಲ್ಲಿ ಬರೆಯಲಾದ ಹಿಂದಿ ಹಲವಾರು ಉಪಭಾಷೆಗಳನ್ನು ಹೊಂದಿದೆ. ಇದು ಭಾರತೀಯ ಮತ್ತು ದಕ್ಷಿಣ ಏಷ್ಯಾದ ಉಪಖಂಡಗಳ ಭಾಷಾ ಶ್ರೀಮಂತಿಕೆಗೆ ಕೊಡುಗೆ ನೀಡುತ್ತದೆ. ಇದರ ಸಾಂಸ್ಕೃತಿಕ ಪ್ರಾಮುಖ್ಯತೆಯು ಬಾಲಿವುಡ್ ಚಲನಚಿತ್ರಗಳು ಮತ್ತು ಶಾಸ್ತ್ರೀಯ ಸಾಹಿತ್ಯದಲ್ಲಿ ಸ್ಪಷ್ಟವಾಗಿದೆ. ಇದು ಸಾಂಸ್ಕೃತಿಕ ವಿನಿಮಯ ಮತ್ತು ಮನೋರಂಜನೆಗೆ ಪ್ರಮುಖ ಭಾಷೆಯಾಗಿದೆ.

ಸ್ಪ್ಯಾನಿಷ್

ಯುಎನ್‌ನ ಅಧಿಕೃತ ಭಾಷೆಗಳಲ್ಲಿ ಒಂದಾದ ಸ್ಪ್ಯಾನಿಷ್ ಲ್ಯಾಟಿನ್‌ನ ಮೂಲವಾಗಿದೆ. ವೈವಿಧ್ಯಮಯ ಜಾಗತಿಕ ಸಮುದಾಯವನ್ನು ಹೊಂದಿದೆ. ಇದು ವ್ಯಾಪಾರ ಸಂವಹನ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ನಿರ್ಣಾಯಕವಾಗಿದೆ. ಇಪ್ಪತ್ತು ದೇಶಗಳ ಅಧಿಕೃತ ಭಾಷೆಯಾಗಿದೆ, ಮತ್ತು ಅದರ ಸಾಂಸ್ಕೃತಿಕ ಪ್ರಭಾವವು ಐಬೇರಿಯನ್ ಪೆನಿನ್ಸುಲಾ ದ ಗಡಿ ದಾಟಿದೆ. ಸ್ಪ್ಯಾನಿಷ್ ತನ್ನ ಮಧುರ ಧ್ವನಿ ಮತ್ತು ಭಾವಪ್ರಧಾನತೆಗೆ ಹೆಸರುವಾಸಿಯಾಗಿದೆ. ಇದು ಪ್ರಪಂಚದಾದ್ಯಂತ ಕಲಿಯುವವರಿಗೆ ಜನಪ್ರಿಯ ಭಾಷೆಯ ಆಯ್ಕೆಯಾಗಿದೆ.

ಫ್ರೆಂಚ್

ಫ್ರೆಂಚ್, ಇಂಡೋ- ಯುರೋಪಿಯನ್ ಭಾಷಾ ಕುಟುಂಬಕ್ಕೆ ಸೇರಿದ ಮತ್ತು ಯುಎನ್ ನ ಮತ್ತೊಂದು ಅಧಿಕೃತ ಭಾಷೆಯಾಗಿದೆ. ಇದು ಫ್ರಾನ್ಸ್ , ಆಫ್ರಿಕಾ, ಕೆನಡಾ ಮತ್ತು ಹೆಚ್ಚಿನ ದೇಶಗಳ ಅಧಿಕೃತ ಭಾಷೆಯಾಗಿದೆ. ವ್ಯಾಪಾರ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಪ್ರಮುಖ ಭಾಷೆಯಾಗಿದೆ. ಇದು ಸಾಹಿತ್ಯ, ಕಲೆ ಮತ್ತು ಸಿನೆಮಾಕ್ಕೆ ಜನಪ್ರಿಯ ಭಾಷೆಯಾಗಿದೆ, ಅದರ ಜಾಗತಿಕ ಜನಪ್ರಿಯತೆಗೆ ಕೊಡುಗೆ ನೀಡುತ್ತದೆ.

ಸ್ಟ್ಯಾಂಡರ್ಡ್ ಅರೇಬಿಕ್

ಅರೇಬಿಕ್ ಅರಬ್ ಜಗತ್ತಿನಲ್ಲಿ ಪ್ರಮುಖ ಭಾಷೆಯಾಗಿದೆ. ಇದನ್ನು ಸರ್ಕಾರಿ ಉದ್ದೇಶಗಳಿಗಾಗಿ ಮತ್ತು ಅಧಿಕೃತ ಭಾಷಣಗಳು ಮತ್ತು ದಾಖಲೆಗಳಿಗಾಗಿ ಪ್ರತ್ಯೇಕವಾಗಿ ಬಳಸಲಾಗುತ್ತದೆ. ಸ್ಟ್ಯಾಂಡರ್ಡ್ ಅರೇಬಿಕ್ ಅನ್ನು ಅಡಿಪಾಯವಾಗಿ ಆಧರಿಸಿ ಪ್ರದೇಶದ ಸುತ್ತಲೂ ವಿವಿಧ ಅರೇಬಿಕ್ ಉಪಭಾಷೆಗಳನ್ನು ಕಲಿಯಬಹುದು. ಇದಲ್ಲದೆ, ಅರೇಬಿಕ್ ಸಾಹಿತ್ಯವು ಈ ಭಾಷೆಯನ್ನು ಸುಲಭವಾಗಿ ಕಲಿಯಲು ಪ್ರೇರೇಪಿಸುತ್ತದೆ. ಇದು ಸಾಂಸ್ಕೃತಿಕ ವಿನಿಮಯ ಮತ್ತು ಸಾಹಿತ್ಯಕ್ಕೆ ಅಮೂಲ್ಯವಾದ ಭಾಷೆಯಾಗಿದೆ.


ಬೆಂಗಾಲಿ

ಬಂಗಾಲಿ ಬಾಂಗ್ಲಾದೇಶದ ಅಧಿಕೃತ ಭಾಷೆಯಾಗಿದೆ ಮತ್ತು ಭಾರತದ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಮಾತನಾಡುತ್ತಾರೆ. ಕಾವ್ಯಾತ್ಮಕ ಮತ್ತು ಕಲಾತ್ಮಕ ಸಂಪ್ರದಾಯಗಳಿಗೆ ಹೆಸರುವಾಸಿಯಾದ ಬಂಗಾಳಿ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಸಾಹಿತ್ಯ, ಸಂಗೀತ ಮತ್ತು ಸಿನೆಮಾಕ್ಕೆ ಕೊಡುಗೆಗಳನ್ನು ನೀಡಿದೆ. ಇದು ಸಾಂಸ್ಕೃತಿಕ ವಿನಿಮಯ ಮತ್ತು ಮನರಂಜನೆಗೆ ಅಮೂಲ್ಯವಾದ ಭಾಷೆಯಾಗಿದೆ.

ಪೋರ್ಚುಗೀಸ್

ಪೋರ್ಚುಗಲ್ ಮತ್ತು ದಕ್ಷಿಣ ಅಮೆರಿಕಾದ ಹಲವಾರು ಇತರ ದೇಶಗಳ ಅಧಿಕೃತ ಭಾಷೆಯಾಗಿರುವ ಪೋರ್ಚುಗೀಸ್ ಭಾಷೆಯ ಪರಂಪರೆಯು ಪರಿಶೋಧನೆ ಮತ್ತು ವ್ಯಾಪಾರದ ಇತಿಹಾಸದಲ್ಲಿ ಆಳವಾಗಿ ಹುದುಗಿದೆ. ಪೋರ್ಚುಗೀಸ್-ಮಾತನಾಡುವ ದೇಶಗಳಲ್ಲಿ ವ್ಯಾಪಾರ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಇದು ಅಮೂಲ್ಯವಾದ ಭಾಷೆಯಾಗಿದೆ.

ರಷ್ಯನ್

ಸಿರಿಲಿಕ್ ಲಿಪಿಯೊಂದಿಗೆ ರಷ್ಯನ್ ರಷ್ಯಾ ಮತ್ತು ನೆರೆಯ ದೇಶಗಳ ಸಾಂಸ್ಕೃತಿಕ ಮತ್ತು ರಾಜಕೀಯ ಭೂದೃಶ್ಯದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದೆ. ಇದು ವಿಶ್ವಾದ್ಯಂತ ಭಾಷಾ ಉತ್ಸಾಹಿಗಳಿಗೆ ಅಧ್ಯಯನದ ಆಕರ್ಷಕ ವಿಷಯವಾಗಿದೆ. ರಷ್ಯನ್-ಮಾತನಾಡುವ ದೇಶಗಳಲ್ಲಿ ವ್ಯಾಪಾರ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಇದು ಅಮೂಲ್ಯವಾದ ಭಾಷೆಯಾಗಿದೆ.

ಇದನ್ನೂ ಓದಿ: Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!


ಉರ್ದು

ಉರ್ದುವನ್ನು ಕವಿಗಳ ಭಾಷೆ ಎಂದು ಕರೆಯಲಾಗುತ್ತದೆ ಮತ್ತು ಅಪಾರ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಇದು ಪಾಕಿಸ್ತಾನದ ಅಧಿಕೃತ ಭಾಷೆಯಾಗಿದೆ ಮತ್ತು ಉತ್ತರ ಭಾರತದಲ್ಲಿ ವ್ಯಾಪಕವಾಗಿ ಮಾತನಾಡುತ್ತಾರೆ. ಉರ್ದು ದಕ್ಷಿಣ ಏಷ್ಯಾದ ಸಾಂಸ್ಕೃತಿಕ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯಲು ಅತ್ಯಮೂಲ್ಯವಾದ ಸಾಧನವಾಗಿದ್ದು, ಸಾಹಿತ್ಯ, ಸಂಗೀತ ಮತ್ತು ಚಲನಚಿತ್ರಕ್ಕೆ ಕೊಡುಗೆಗಳನ್ನು ನೀಡಿದೆ. ಇದು ದಕ್ಷಿಣ ಏಷ್ಯಾದಲ್ಲಿ ಸಾಂಸ್ಕೃತಿಕ ವಿನಿಮಯ ಮತ್ತು ಮನರಂಜನೆಗೆ ಅಮೂಲ್ಯವಾದ ಭಾಷೆಯಾಗಿದೆ.

Continue Reading
Advertisement
former MLC Arun Shahapur latest Statement
ಬೆಂಗಳೂರು34 seconds ago

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

HD Revanna Released first reaction after release will be acquitted of all charges
ರಾಜಕೀಯ15 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

Income Tax office
ಪ್ರಮುಖ ಸುದ್ದಿ16 mins ago

Income Tax Office : ಆದಾಯ ತೆರಿಗೆ ಕಚೇರಿಯಲ್ಲಿ ಬೆಂಕಿ ಅವಘಡ; ಒಂದು ಸಾವು; ಇಲ್ಲಿದೆ ವಿಡಿಯೊ

Billboard Collapse
ಪ್ರಮುಖ ಸುದ್ದಿ37 mins ago

Billboard Collapse : 14 ಸಾವಿಗೆ ಕಾರಣವಾದ ಹೋರ್ಡಿಂಗ್ ಕಂಪನಿ ಮಾಲೀಕನ ಮೇಲಿದೆ ಅತ್ಯಾಚಾರ ಸೇರಿದಂತೆ 20ಕ್ಕೂ ಹೆಚ್ಚು ಕೇಸ್​ಗಳು

Stabbing Case
ಕರ್ನಾಟಕ39 mins ago

Stabbing Case: ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್; ವ್ಯಕ್ತಿಗೆ ಚೂರಿಯಿಂದ ಮನಸೋ ಇಚ್ಛೆ ಇರಿದ ಯುವಕರು

Ooty Tour
ಪ್ರವಾಸ42 mins ago

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

WhatsApp Update
ತಂತ್ರಜ್ಞಾನ50 mins ago

WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

Spoken Language
Latest57 mins ago

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

Karnataka Weather Forecast
ಮಳೆ1 hour ago

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್‌, ಬಾರ್‌ ಮೇಲೆ ಎಸ್‌ಐಟಿ ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Released first reaction after release will be acquitted of all charges
ರಾಜಕೀಯ15 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20246 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ7 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು8 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ14 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಟ್ರೆಂಡಿಂಗ್‌