Vice President Election 2022 | ಜನತಾ ಪರಿವಾರದಿಂದ ಬಂದ ನಾಯಕ ಬಿಜೆಪಿ ಉಪರಾಷ್ಟ್ರಪತಿ ಅಭ್ಯರ್ಥಿ! - Vistara News

ದೇಶ

Vice President Election 2022 | ಜನತಾ ಪರಿವಾರದಿಂದ ಬಂದ ನಾಯಕ ಬಿಜೆಪಿ ಉಪರಾಷ್ಟ್ರಪತಿ ಅಭ್ಯರ್ಥಿ!

ಉಪ ರಾಷ್ಟ್ರಪತಿ ಚುನಾವಣೆಗೆ (Vice President Election 2022) ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಗದೀಪ್‌ ಧನಕರ್‌ ಕೂಡ ಜನತಾಪರಿವಾರದ ಮೂಲದವರು ಎಂಬುದು ನಿಮಗೆ ಗೊತ್ತೇ?

VISTARANEWS.COM


on

Vice President Election 2022
ಪ್ರಧಾನಿ ಮೋದಿಯವರೊಂದಿಗೆ ಜಗದೀಪ್‌ ಧನಕರ್‌. ಈ ಫೋಟೊವನ್ನು ಮೋದಿಯವರೇ ಟ್ವೀಟ್‌ ಮಾಡಿದ್ದಾರೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ (Vice President Election 2022) ಬಿಜೆಪಿಯ ಅಭ್ಯರ್ಥಿ ಯಾರಾಗಬಹುದೆಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಶನಿವಾರ ನಡೆದ ಹೈ ವೊಲ್ಟೇಜ್‌ ಸಂಸದೀಯ ಸಮಿತಿಯ ಸಭೆಯಲ್ಲಿ ಈಗಾಗಲೇ ಪಕ್ಷದ ನಾಯಕರು ತೀರ್ಮಾನಿಸಿದಂತೆ ಪಶ್ಚಿಮ ಬಂಗಾದ ೨೭ನೇ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಜಗದೀಪ್‌ ಧನಕರ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಈ ವಿಷಯವನ್ನು ಸಭೆಯ ನಂತರ ಪ್ರಕಟಿಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ “ರೈತನ ಮಗನನ್ನು ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ʼʼ ಎಂದು ಪ್ರಕಟಿಸುತ್ತಿದ್ದಂತೆಯೇ ಅವರ ಬಗೆಗಿನ ಕುತೂಹಲ ಹೆಚ್ಚಾಗಿದೆ.

ಪಶ್ಚಿಮ ಬಂಗಾಲದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಅಂದರೆ ೨೦೧೯ರಿಂದ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೊಂದಿಗೆ ಸಂಘರ್ಷ ನಡೆಸುತ್ತಲೇ ದೇಶದ ಗಮನ ಸೆಳೆದಿದ್ದ ಜಗದೀಪ್‌ ಧನಕರ್‌ ಮೂಲತಃ ರಾಜಸ್ಥಾನದವರು. ಅವರ ಆಯ್ಕೆಯ ಹಿಂದೆ ರಾಜಸ್ಥಾನದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಲೆಕ್ಕಾಚಾರಗಳೂ ಬಿಜೆಪಿ ನಾಯಕರಿಗಿವೆ.

ಮಾಜಿ ಪ್ರಧಾನಿ ಚಂದ್ರಶೇಖರ್‌ ಸಚಿವ ಸಂಪುಟದಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ೭೧ ವರ್ಷದ ಜಗದೀಪ್‌ ಧನಕರ್‌, ರಾಜಸ್ಥಾನದ ಜುನ್‌ಜುನು ಲೋಕಸಭಾ ಕ್ಷೇತ್ರದಿಂದ ಆಗ ಆಯ್ಕೆಯಾಗಿದ್ದರು. ೧೯೯೩ರಿಂದ ೯೮ರ ವರೆಗೆ ಕಿಶಾನ್‌ಘರ್‌ ಕ್ಷೇತ್ರದ ಶಾಸಕರಾಗಿಯೂ ಕೆಲಸ ಮಾಡಿದ್ದರು.

೧೯೫೧ರ ಮೇ ೧೮ರಂದು ರಾಜಸ್ಥಾನದ ಕಿಥಾಣ ಎಂಬ ಹಳ್ಳಿಯಲ್ಲಿ ಜನಿಸಿದ ಅವರು, ಜೈಪುರ ವಿವಿಯಿಂದ ಕಾನೂನು ಪದವಿ ಪಡೆದಿದ್ದಾರೆ. ಜನತದಾಳದ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಅವರು ಜನತಾದಳದಿಂದಲೇ ಲೋಕಸಭಾ ಸದಸ್ಯರಾಗಿ ಸಚಿವರೂ ಆಗಿದ್ದರು. ನಂತರ ಅವರು ಕರ್ನಾಟಕದಲ್ಲಿನ ಹಲವು ಜನತಾಪರಿವಾರದ ನಾಯಕರಂತೆಯೇ ರಾಜಸ್ಥಾನದಲ್ಲಿ ಬಿಜೆಪಿ ಸೇರಿ, ಈ ಹಿಂದೆ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಜೈಪುರ ಹೈಕೋರ್ಟ್‌ನ ವಕೀಲರ ಸಂಘದ ಅಧ್ಯಕ್ಷರಾಗಿದ್ದ ಧನಕರ್‌ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳುವವರೆಗೂ ವಕೀಲ ವೃತ್ತಿ ಬಿಟ್ಟಿರಲಿಲ್ಲ. ಸುಪ್ರೀಂ ಕೋರ್ಟ್‌ನ ವಕೀಲರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಧನಕರ್‌ ಆರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸುದೇಶ್‌ ಎಂಬುವರನ್ನು ಮದುವೆಯಾಗಿದ್ದರು. ಸುದೇಶ್‌ ಧನಕರ್‌ ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ. ಅವರ ಮಗಳು ಕಮ್ನಾ ಸುಪ್ರೀಂಕೋರ್ಟ್‌ನ ಹೆಸರಾಂತ ವಕೀಲ ಕಾರ್ತಿಕೇಯ ವಾಜಪೇಯಿ ಅವರನ್ನು ಮದುವೆಯಾಗಿದ್ದಾರೆ.

ಇದನ್ನೂ ಓದಿ | Vice President Election 2022 | ಪಶ್ಚಿಮ ಬಂಗಾಲದ ರಾಜ್ಯಪಾಲ ಜಗದೀಪ್‌ ಧನಕರ್‌ ಬಿಜೆಪಿ ಅಭ್ಯರ್ಥಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

Porsche Crash: ಪುಣೆಯಲ್ಲಿ ಮಗನು ಬೈಕ್‌ಗೆ ಕಾರು ಗುದ್ದಿಸಿ, ಇಬ್ಬರ ಸಾವಿಗೆ ಕಾರಣವಾದ ಪ್ರಕರಣ ಸುದ್ದಿಯಾಗುತ್ತಲೇ ಉದ್ಯಮಿ ವಿಶಾಲ್‌ ಅಗರ್ವಾಲ್‌ ತಲೆಮರೆಸಿಕೊಂಡರು. ಮೊದಲು ಪುಣೆಯ ತಮ್ಮ ನಿವಾಸಕ್ಕೆ ತೆರಳಿದ ಅವರು, ಅಲ್ಲಿಂದ ಡೌಂಡ್‌ನಲ್ಲಿರುವ ಫಾರ್ಮ್‌ಹೌಸ್‌ಗೆ ಹೋದರು. ಅಲ್ಲಿಂದ, ಕೊಲ್ಹಾಪುರಕ್ಕೆ ಪರಾರಿಯಾದರು. ಇಷ್ಟಾದರೂ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು. ಹೇಗೆ ಅಂತೀರಾ? ಮುಂದೆ ಓದಿ.

VISTARANEWS.COM


on

Porsche Crash
Koo

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಬಾಲಕನು ಮದ್ಯಪಾನ ಮಾಡಿ ಪೋರ್ಶೆ ಕಾರು ಚಲಾಯಿಸಿ, ಅಪಘಾತದಲ್ಲಿ (Porsche Crash) ಇಬ್ಬರ ಸಾವಿಗೆ ಕಾರಣವಾದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಅಪ್ರಾಪ್ತನ ಕೈಗೆ ಕಾರು ಕೊಟ್ಟ ಹಿನ್ನೆಲೆಯಲ್ಲಿ 17 ವರ್ಷದ ಬಾಲಕನ ತಂದೆ ವಿಶಾಲ್‌ ಅಗರ್ವಾಲ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ, ಅಪಘಾತದ ಬಳಿಕ (Pune Accident) ಪೊಲೀಸರಿಂದ ರಕ್ಷಿಸಿಕೊಳ್ಳಲು ವಿಶಾಲ್‌ ಅಗರ್ವಾಲ್‌ (Vishal Agarwal) ಯಾವ ರೀತಿ ಪ್ಲಾನ್‌ ಮಾಡಿದ್ದರು ಎಂಬುದರ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಪುಣೆಯಲ್ಲಿ ಮಗನು ಬೈಕ್‌ಗೆ ಕಾರು ಗುದ್ದಿಸಿ, ಇಬ್ಬರ ಸಾವಿಗೆ ಕಾರಣವಾದ ಪ್ರಕರಣ ಸುದ್ದಿಯಾಗುತ್ತಲೇ ಉದ್ಯಮಿ ವಿಶಾಲ್‌ ಅಗರ್ವಾಲ್‌ ತಲೆಮರೆಸಿಕೊಂಡರು. ಮೊದಲು ಪುಣೆಯ ತಮ್ಮ ನಿವಾಸಕ್ಕೆ ತೆರಳಿದ ಅವರು, ಅಲ್ಲಿಂದ ಡೌಂಡ್‌ನಲ್ಲಿರುವ ಫಾರ್ಮ್‌ಹೌಸ್‌ಗೆ ಹೋದರು. ಅಲ್ಲಿಂದ, ಕೊಲ್ಹಾಪುರಕ್ಕೆ ಪರಾರಿಯಾದ ಅವರು ಅಲ್ಲಿ ಗೆಳೆಯನನ್ನು ಭೇಟಿಯಾದರು. ಅಲ್ಲಿ, ಪೊಲೀಸರಿಂದ ಪರಾರಿಯಾಗಲು ಮತ್ತೊಂದು ಯೋಜನೆ ರೂಪಿಸಿದರು ಎಂದು ತಿಳಿದುಬಂದಿದೆ.

ಅಪಘಾತದ ಭೀಕರ ವಿಡಿಯೊ

ಪೊಲೀಸರನ್ನು ದಾರಿ ತಪ್ಪಿಸಲು ಪ್ಲಾನ್‌ ಮಾಡಿದ ವಿಶಾಲ್‌ ಅಗರ್ವಾಲ್‌, ತಮ್ಮ ಕಾರು ಚಾಲಕನಿಗೆ ವಾಹನ ಕೊಟ್ಟು, ಆತನನ್ನು ಮುಂಬೈಗೆ ಕಳುಹಿಸಿದರು. ಇನ್ನು ಗೆಳೆಯನ ಕಾರಿನಲ್ಲಿ ವಿಶಾಲ್‌ ಅಗರ್ವಾಲ್‌ ಸಂಭಾಜಿನಗರಕ್ಕೆ ತೆರಳಿದರು. ಇದರ ಮಧ್ಯೆಯೇ, ಒಂದು ಸಿಮ್‌ ಕಾರ್ಡ್‌ ಬದಲಿಸಿದ ಅವರು, ಕುಟುಂಬಸ್ಥರಿಗೆ ಕರೆ ಮಾಡಿ, ಮುಂಬೈಗೆ ಬರುತ್ತಿದ್ದೇನೆ ಎಂಬುದಾಗಿ ಸುಳ್ಳು ಹೇಳಿದ್ದಾರೆ. ಕುಟುಂಬಸ್ಥರನ್ನು ಪೊಲೀಸರು ವಿಚಾರಣೆ ನಡೆಸಿದರೂ ಸಿಗಬಾರದು ಎಂಬುದು ಅಗರ್ವಾಲ್‌ ಪ್ಲಾನ್‌ ಆಗಿತ್ತು ಎನ್ನಲಾಗಿದೆ.

ಚಾಣಾಕ್ಷತನ ಮೆರೆದ ಪೊಲೀಸರು

ವಿಶಾಲ್‌ ಅಗರ್ವಾಲ್‌ ಇಷ್ಟೆಲ್ಲ ಯೋಜನೆ ರೂಪಿಸಿದರೂ ಪುಣೆ ಕ್ರೈಂ ಬ್ರ್ಯಾಂಚ್‌ ಪೊಲೀಸರು ಸಂಭಾಜಿನಗರದಲ್ಲಿ ವಿಶಾಲ್‌ ಅಗರ್ವಾಲ್‌ ಅವರನ್ನು ಬಂಧಿಸಿದರು. ಸಿಸಿಟಿವಿ ಕ್ಯಾಮೆರಾ ಹಾಗೂ ವಿಶಾಲ್‌ ಅಗರ್ವಾಲ್‌ ಗೆಳೆಯನ ಕಾರಿನ ಜಿಪಿಎಸ್‌ ಟ್ರ್ಯಾಕ್‌ ಮಾಡಿ, ಕೊನೆಗೂ ಅವರನ್ನು ಬಂಧಿಸಿದ್ದಾರೆ. ಸಂಭಾಜಿ ನಗರದ ಲಾಡ್ಜ್‌ನಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ವಿಶಾಲ್‌ ಅಗರ್ವಾಲ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ.

ಇದನ್ನೂ ಓದಿ: ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

Continue Reading

ಪ್ರಮುಖ ಸುದ್ದಿ

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Narendra Modi: ಬಿಹಾರದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಇದೇ ವೇಳೆ ಅವರು ಮೀಸಲಾತಿ ವಿಷಯ ಪ್ರಸ್ತಾಪಿಸಿದರು. “ಡಾ.ಬಿ.ಆರ್.ಅಂಬೇಡ್ಕರ್ ಅವರು ಇರದಿದ್ದರೆ ಮೀಸಲಾತಿ ಜಾರಿಗೊಳಿಸಲು ಜವಾಹರ ಲಾಲ್‌ ನೆಹರು ಬಿಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

VISTARANEWS.COM


on

Narendra Modi
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾಂಗ್ರೆಸ್‌ ವಿರುದ್ಧ ಪ್ರತಿ ರ‍್ಯಾಲಿಯಲ್ಲೂ ವಾಗ್ದಾಳಿ, ಆರೋಪ, ಟೀಕೆ, ವ್ಯಂಗ್ಯ ಮಾಡುತ್ತಿದ್ದಾರೆ. ಈಗ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಜವಾಹರ ಲಾಲ್‌ ನೆಹರು (Jawaharlal Nehru) ಅವರನ್ನು ಪ್ರಸ್ತಾಪಿಸಿ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮೋತಿಹರಿಯಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, “ಅಂಬೇಡ್ಕರ್‌ ಅವರು ಇರದಿದ್ದರೆ ಜವಾಹರ ಲಾಲ್‌ ನೆಹರು ಅವರು ಮೀಸಲಾತಿ ಜಾರಿಗೊಳಿಸಲು ಬಿಡುತ್ತಿರಲಿಲ್ಲ” ಎಂದಿದ್ದಾರೆ.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (OBC) ಮೀಸಲಾತಿ ನೀಡಲು ಜವಾಹರಲಾಲ್‌ ನೆಹರು ಅವರಿಗೆ ಸುತಾರಾಂ ಇಷ್ಟವಿರಲಿಲ್ಲ. ಇದೇ ಕಾರಣಕ್ಕಾಗಿ ಆಗಿನ ಮುಖ್ಯಮಂತ್ರಿಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿ ಪತ್ರ ಬರೆದಿದ್ದರು. ಹಾಗೊಂದು ವೇಳೆ, ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಇರದಿದ್ದರೆ, ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಮೀಸಲಾತಿ ನೀಡಲು ಜವಾಹರ ಲಾಲ್‌ ನೆಹರು ಅವರು ಬಿಡುತ್ತಿರಲಿಲ್ಲ” ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್‌ನಿಂದ ಆಯ್ಕೆಯಾದ ಪ್ರಧಾನಿಗಳು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ದ್ರೋಹ ಎಸಗಿದರು. ಇಂದಿರಾ ಗಾಂಧಿ ಆಗಲಿ, ರಾಜೀವ್‌ ಗಾಂಧಿ ಇರಲಿ, ಇವರೆಲ್ಲ ಮೀಸಲಾತಿಯನ್ನು ವಿರೋಧಿಸಿದವರೇ. ಕಾಂಗ್ರೆಸ್‌ನಿಂದ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ಎಂದಿಗೂ ಗೌರವ ಸಿಕ್ಕಿಲ್ಲ. ಇಂತಹ ಕಾಂಗ್ರೆಸ್‌ ನಾಯಕರು ಈಗ, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸುತ್ತದೆ. ಮೀಸಲಾತಿಯನ್ನು ಕಿತ್ತು ಎಸೆಯಲಾಗುತ್ತಿದೆ ಎಂಬುದಾಗಿ ಸುಳ್ಳು ಹರಡುತ್ತಿದ್ದಾರೆ” ಎಂದು ಹೇಳಿದರು.

“ತುಳಿತಕ್ಕೊಳಗಾದ ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಬಿಜೆಪಿಯು ಬದ್ಧವಾಗಿದೆ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಸಮುದಾಯದವರ ಹಕ್ಕುಗಳನ್ನು ಎನ್‌ಡಿಎ ಸರ್ಕಾರವು ರಕ್ಷಿಸುತ್ತಿದೆ. ಆದರೆ, ಇಂಡಿಯಾ ಒಕ್ಕೂಟವು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಹೊರಟಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ಅಂಬೇಡ್ಕರ್‌ ಅವರೂ ವಿರೋಧಿಸಿದ್ದರು. ಆದರೆ, ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ದ್ರೋಹ ಎಸಗುತ್ತಿವೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

Continue Reading

ದೇಶ

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ ಎಂಬುದಾಗಿ ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ಅವರು ಕ್ಷಮೆಯಾಚಿಸುವ ಜತೆಗೆ ಮೂರು ದಿನ ಉಪವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಆ ಮೂಲಕ ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅವರು ಮುಂದಾಗಿದ್ದಾರೆ.

VISTARANEWS.COM


on

Sambit Patra
Koo

ಭುವನೇಶ್ವರ: “ಒಡಿಶಾದಲ್ಲಿರುವ ಐತಿಹಾಸಿಕ ಪುರಿ ಜಗನ್ನಾಥನೇ (Lord Jagannath) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭಕ್ತ” ಎಂಬುದಾಗಿ ಬಿಜೆಪಿ ನಾಯಕ, ಪುರಿ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿವಾದ ಉಂಟಾದ ಬೆನ್ನಲ್ಲೇ, “ಸಂಬಿತ್‌ ಪಾತ್ರಾ ಅವರು ತಮ್ಮ ಹೇಳಿಕೆ ಕುರಿತಂತೆ ಕ್ಷಮೆ ಕೇಳಿದ್ದಾರೆ. ಹಾಗೆಯೇ, ಅಂತಹ ಹೇಳಿಕೆ ನೀಡಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಕೂಡ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎನ್‌ಐ ಸುದ್ದಿ ಸಂಸ್ಥೆ ಜತೆ ಮಾತನಾಡಿರುವ ಹಾಗೂ ವಿಡಿಯೊ ಹೇಳಿಕೆ ಕೂಡ ಬಿಡುಗಡೆ ಮಾಡಿರುವ ಸಂಬಿತ್‌ ಪಾತ್ರಾ ಅವರು, ಮೊದಲು ಕ್ಷಮೆಯಾಚಿಸಿದ್ದಾರೆ. “ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾದರೆ ಕ್ಷಮೆ ಕೇಳುತ್ತೇನೆ. ಅಲ್ಲದೆ, ಪ್ರಾಯಶ್ಚಿತ್ತವಾಗಿ ನಾನು ಮೂರು ದಿನ ಉಪವಾಸ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದರು. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದರು

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದರು. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.

ಇದನ್ನೂ ಓದಿ: Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Continue Reading

ಪ್ರಮುಖ ಸುದ್ದಿ

Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Equity Market: ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ. ಜೂನ್‌ 4ರ ಬಳಿಕ ದೇಶದ ಷೇರು ಮಾರುಕಟ್ಟೆಯನ್ನು ನಿಯಂತ್ರಿಸುವುದು ಕಷ್ಟ ಎಂಬುದಾಗಿ ಮೋದಿ ಹೇಳಿರುವ ಬೆನ್ನಲ್ಲೇ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಇದು ಹೂಡಿಕೆದಾರರ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Equity Market
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರ ಬಳಿಕ ಭಾರತದ ಷೇರು ಮಾರುಕಟ್ಟೆಯನ್ನು ಹಿಡಿಯಲು ಆಗುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಜೂನ್‌ 4ರ ಬಳಿಕ ಹೂಡಿಕೆದಾರರಿಗೆ ಭಾರಿ ಲಾಭವಾಗಲಿದೆ ಎಂಬುದಾಗಿ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ.

ಹೌದು, 2023ರ ನವೆಂಬರ್‌ನಲ್ಲಿ ಬಿಎಸ್‌ಇ ಒಟ್ಟು ಮಾರುಕಟ್ಟೆ ಮೊತ್ತವು 4 ಲಕ್ಷ ಕೋಟಿ ಡಾಲರ್‌ ಇತ್ತು. ಬಿಎಸ್‌ಇನಲ್ಲಿ ಲಿಸ್ಟ್‌ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಕಳೆದ 6 ತಿಂಗಳಲ್ಲಿಯೇ 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ. ಬಿಎಸ್‌ಇ ಲಿಸ್ಟ್‌ ಆಗಿರುವ ಕಂಪನಿಯಗಳ ಮಾರುಕಟ್ಟೆ ಬಂಡವಾಳವು 2007ರ ಮೇ ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇದಾದ ಒಂದು ದಶಕದ ಬಳಿಕ ಅಂದರೆ, 2017ರ ಜುಲೈನಲ್ಲಿ 2 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇನ್ನು 2021ರ ಮೇ ತಿಂಗಳಲ್ಲಿ 4 ಲಕ್ಷ ಕೋಟಿ ಡಾಲರ್‌ ಆಗಿತ್ತು. ಈಗ ಆರೇ ತಿಂಗಳಲ್ಲಿ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ.

ಇದರೊಂದಿಗೆ ಮಾರುಕಟ್ಟೆ ಬಂಡವಾಳ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ತಲುಪಿರುವುದು ಐತಿಹಾಸಿಕ ಎಂದೇ ಹೇಳಲಾಗುತ್ತಿದೆ. ಇದರಿಂದ ಹೂಡಿಕೆದಾರರ ವಿಶ್ವಾಸವೂ ಹೆಚ್ಚಾಗಿದೆ ಎಂದು ವಿಶ್ಲೇಷಿಸಲಾಗಿದೆ. 5 ಲಕ್ಷ ಕೋಟಿ ಡಾಲರ್‌ ಎಂದರೆ ಭಾರತದ 414.75 ಲಕ್ಷ ಕೋಟಿ ರೂ. ಆಗಿದೆ. ಭಾರತದ ಈಕ್ವಿಟಿ ಮಾರುಕಟ್ಟೆಯಲ್ಲಿಯೇ ಮೊದಲ ಬಾರಿಗೆ ಇಷ್ಟೊಂದು ವೇಗದಲ್ಲಿ ಮಾರುಕಟ್ಟೆಯ ಬಂಡವಾಳವು ಏರಿಕೆಯಾಗಿದೆ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ನಿರೀಕ್ಷಿಸಲಾಗಿದೆ.

ಸದ್ಯ, ನಿಫ್ಟಿಯು ತನ್ನ ಗರಿಷ್ಠ ಪಾಯಿಂಟ್‌ಗಳಿಗಿಂತ 250 ಪಾಯಿಂಟ್‌ ಹಿಂದಿದೆ. ಆದರೂ, ಸಣ್ಣ ಹಾಗೂ ಮಧ್ಯಮ ಶ್ರೇಣಿಯ ಹೂಡಿಕೆಯು ಹೆಚ್ಚಾಗಿದೆ. ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಭಾರತದ ಷೇರುಪೇಟೆಯು ಮಹತ್ವದ ಸ್ಥಾನ ಪಡೆದಿದೆ. ಹಾಂಕಾಂಗ್‌, ಜಪಾನ್‌, ಚೀನಾ ಹಾಗೂ ಅಮೆರಿಕದ ನಂತರ ಭಾರತದ ಷೇರುಪೇಟೆಯು ಬೃಹತ್‌ ಷೇರು ಮಾರುಕಟ್ಟೆ ಎನಿಸಿದೆ. 2027ರ ವೇಳೆಗೆ ಭಾರತವು ವಿಶ್ವದಲ್ಲೇ ಮೂರನೇ ಬೃಹತ್‌ ಆರ್ಥಿಕತೆ ರಾಷ್ಟ್ರ ಎಂಬ ಖ್ಯಾತಿ ಗಳಿಸುವ ವಿಶ್ವಾಸ ಹೊಂದಿದೆ. 2030ರ ವೇಳೆಗೆ ಮಾರುಕಟ್ಟೆ ಬಂಡವಾಳವು 10 ಲಕ್ಷ ಡಾಲರ್‌ ತಲುಪಬೇಕು ಎಂಬ ಗುರಿ ಇದೆ. ಇದರ ದಿಸೆಯಲ್ಲಿ ಈಕ್ವಿಟಿ ಮೌಲ್ಯವು ಗಣನೀಯವಾಗಿ ಏರಿಕೆಯಾಗಿರುವುದು ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ: LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Continue Reading
Advertisement
Rameshwaram Cafe Blast
ಕರ್ನಾಟಕ10 mins ago

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Virat kohli
ಪ್ರಮುಖ ಸುದ್ದಿ17 mins ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ37 mins ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ46 mins ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

IPL 2024
ಕ್ರೀಡೆ55 mins ago

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

Road Accident
ಶಿವಮೊಗ್ಗ1 hour ago

Road Accident: ಮರಕ್ಕೆ ಬಸ್‌ ಡಿಕ್ಕಿಯಾಗಿ ಹಲವರಿಗೆ ಗಾಯ; ಆಟೋ ಪಲ್ಟಿಯಾಗಿ ಚಾಲಕ ಸಾವು

Dwayne Bravo
ಪ್ರಮುಖ ಸುದ್ದಿ1 hour ago

Dwayne Bravo : ಅಫಘಾನಿಸ್ತಾನ ತಂಡದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಡ್ವೇನ್ ಬ್ರಾವೊ

Narendra Modi
ಪ್ರಮುಖ ಸುದ್ದಿ2 hours ago

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Self Harming
ಕರ್ನಾಟಕ2 hours ago

Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

HD Kumaraswamy attack on DK Shivakumar and he gives reason for Devaraje Gowda fears for his life in jail
ರಾಜಕೀಯ2 hours ago

HD Kumaraswamy: ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು8 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು9 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌