Gujarat Election | ಸ್ಪರ್ಧಿಸದಿರಲು ಮಾಜಿ ಸಿಎಂ ರೂಪಾನಿ ತೀರ್ಮಾನ, ಬಿಜೆಪಿಯ 20% ಶಾಸಕರಿಗಿಲ್ಲ ಟಿಕೆಟ್? - Vistara News

ದೇಶ

Gujarat Election | ಸ್ಪರ್ಧಿಸದಿರಲು ಮಾಜಿ ಸಿಎಂ ರೂಪಾನಿ ತೀರ್ಮಾನ, ಬಿಜೆಪಿಯ 20% ಶಾಸಕರಿಗಿಲ್ಲ ಟಿಕೆಟ್?

ಗುಜರಾತ್‌ ವಿಧಾನಸಭೆ ಚುನಾವಣೆ (Gujarat Election) ಗೆಲುವಿಗೆ ಬಿಜೆಪಿ
ಹಲವು ರಣತಂತ್ರ ರೂಪಿಸುತ್ತಿರುವ ಬೆನ್ನಲ್ಲೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಮಾಜಿ ಸಿಎಂ ವಿಜಯ್‌ ರೂಪಾನಿ ತೀರ್ಮಾನಿಸಿದ್ದಾರೆ. ಹಾಗೆಯೇ, ಹಲವು ಹಾಲಿ ಶಾಸಕರಿಗೂ ಟಿಕೆಟ್‌ ನೀಡದಿರಲು ಪಕ್ಷದ ಹೈಕಮಾಂಡ್‌ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

VISTARANEWS.COM


on

Vijay Rupani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಂಧಿನಗರ: ದೇಶದ ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆಯಲಿ, ಆಗ ಹೊಸಬರಿಗೆ ಅವಕಾಶ ನೀಡುವುದು, ಅದರಲ್ಲೂ ಯುವಕರಿಗೆ ಮನ್ನಣೆ ನೀಡುವುದನ್ನು ಬಿಜೆಪಿ ರೂಢಿಸಿಕೊಂಡಿದೆ. ಅದರಲ್ಲೂ, ಗುಜರಾತ್‌ ವಿಧಾನಸಭೆ ಚುನಾವಣೆಯನ್ನು (Gujarat Election) ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಬಿಜೆಪಿಯು, ಹಲವು ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಭಾಗವಾಗಿಯೇ ಈ ಬಾರಿ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಹಾಗೂ ಉಪ ಮುಖ್ಯಮಂತ್ರಿ ನಿತಿನ್‌ ಪಟೇಲ್‌ ಸೇರಿ ಹಲವರು ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ. ಹಾಗೆಯೇ, ಬಿಜೆಪಿಯ ಒಟ್ಟು ಶಾಸಕರಲ್ಲಿ ಶೇ.20ರಷ್ಟು ಶಾಸಕರಿಗೆ ಈ ಬಾರಿ ಟಿಕೆಟ್‌ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಪರ್ಧೆ ಮಾಡದಿರುವ ಕುರಿತು ವಿಜಯ್‌ ರೂಪಾನಿ ಅವರು ಮಾಹಿತಿ ನೀಡಿದ್ದಾರೆ. “ಎಲ್ಲರ ಸಹಕಾರದಿಂದ ನಾನು ಐದು ವರ್ಷ ಗುಜರಾತ್‌ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದೇನೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಹೊಸಬರಿಗೆ ಆದ್ಯತೆ ಸಿಗಬೇಕು ಎಂಬ ದೃಷ್ಟಿಯಿಂದ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ದೆಹಲಿಯಲ್ಲಿರುವ ಪಕ್ಷದ ನಾಯಕರಿಗೆ ಇದರ ಕುರಿತು ಪತ್ರ ಬರೆದಿದ್ದೇನೆ. ಹೊಸ ಅಭ್ಯರ್ಥಿಯ ಗೆಲುವಿಗೆ ನಾನು ಶ್ರಮಿಸುತ್ತೇನೆ” ಎಂದು ತಿಳಿಸಿದ್ದಾರೆ.

ವಿಜಯ್‌ ರೂಪಾನಿ, ನಿತಿನ್‌ ಪಟೇಲ್‌ ಜತೆಗೆ ಬಿಜೆಪಿ ಹಿರಿಯ ನಾಯಕ, ಒಂಬತ್ತು ಬಾರಿಯ ಶಾಸಕ ಭೂಪೇಂದ್ರಸಿಂಗ್‌ ಚೂಡಾಸಮ ಅವರೂ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಇನ್ನು ಟಿಕೆಟ್‌ ಹಂಚಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಭೆ ನಡೆಸುತ್ತಿದ್ದು, ಈ ಕುರಿತು ಅಂತಿಮ ತೀರ್ಮಾನ ಹೊರಬೀಳಬೇಕಿದೆ. ಗುಜರಾತ್‌ನಲ್ಲಿ ಡಿಸೆಂಬರ್‌ 1 ಹಾಗೂ 5ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್‌ 8ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ | Gujarat Election | ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಕಮಲ ಮುಡಿದ ಗುಜರಾತ್‌ನ ಪ್ರಮುಖ ನಾಯಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

Viral News: ಆಘಾತಕಾರಿ ಘಟನೆಯೊಂದರಲ್ಲಿ ಅತೀ ವೇಗವಾಗಿ ಸಾಗಿದ ಪಿಕ್‌ಅಪ್‌ ವಾಹನವೊಂದು ಸೈಕಲ್‌ ಸವಾರಿಗೆ ಗುದ್ದಿ ದೇಹವನ್ನು ಸುಮಾರು 2 ಕಿ.ಮೀ.ಯಷ್ಟು ದೂರು ರಸ್ತೆಯಲ್ಲಿ ಎಳೆದುಕೊಂಡು ಹೋಗಿದೆ. ಹರಿಯಾಣದ ರಾಷ್ಟ್ರೀಯ ಹೆದ್ದಾರಿ 9ರ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪಿಕ್‌ಅಪ್‌ ಚಾಲಕನಿಗೆ ಸ್ಥಳೀಯರು ಥಳಿಸಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

Viral News
Koo

ಚಂಡಿಗಢ: ಆಘಾತಕಾರಿ ಘಟನೆಯೊಂದರಲ್ಲಿ ಅತೀ ವೇಗವಾಗಿ ಸಾಗಿದ ಪಿಕ್‌ಅಪ್‌ ವಾಹನವೊಂದು ಸೈಕಲ್‌ ಸವಾರಿಗೆ ಗುದ್ದಿ ದೇಹವನ್ನು ಸುಮಾರು 2 ಕಿ.ಮೀ.ಯಷ್ಟು ದೂರು ರಸ್ತೆಯಲ್ಲಿ ಎಳೆದುಕೊಂಡು ಹೋಗಿದೆ. ಸದ್ಯ ಈ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದ್ದು, ನೆಟ್ಟಿಗರು ಶಾಕ್‌ಗೆ ಒಳಗಾಗಿದ್ದಾರೆ. ಹರಿಯಾಣದ ರಾಷ್ಟ್ರೀಯ ಹೆದ್ದಾರಿ 9ರ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿಕ್‌ಅಪ್‌ನ ಹಿಂದಿದ್ದ ವಾಹನವೊಂದರಲ್ಲಿದ್ದ ವ್ಯಕ್ತಿಗಳು ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಪಿಕ್‌ ಅಪ್‌ ಅನ್ನು ನಿಲ್ಲಿಸಿ ಚಾಲಕ ಮತ್ತು ಸಹಾಯಕನಿಗೆ ಥಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಕರ್ಮ್ಘರ್ ಗ್ರಾಮದ 50 ವರ್ಷದ ಗುರ್‌ನಾಮ್‌ ಸಿಂಗ್ ಎಂದು ಗುರುತಿಸಲಾಗಿದೆ. ಪನ್ನಿವಾಲಾ ಮೋಟಾದಿಂದ ತನ್ನ ಗ್ರಾಮಕ್ಕೆ ಸೈಕಲ್‌ನಲ್ಲಿ ಹಿಂದಿರುಗುತ್ತಿದ್ದಾಗ ಹೆದ್ದಾರಿಯ ಪೊಲೀಸ್ ಚೆಕ್‌ ಪಾಯಿಂಟ್‌ ಬಳಿ ಪಿಕ್‌ಅಪ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ವಾಹನದ ಕೆಳಗೆ ಸಿಕ್ಕಿ ಹಾಕಿಕೊಂಡಿದ್ದರು. ಬಳಿಕ ಪಿಕ್‌ಅಪ್‌ ಅವರನ್ನು ಎಳೆದುಕೊಂಡು ವೇಗವಾಗಿ ಸಾಗಿದೆ. ಪಿಕ್‌ಅಪ್‌ನ ಹಿಂದಿನ ಟ್ರಕ್ ಚಾಲಕ ಸಿಗ್ನಲ್ ಮಾಡಿದರೂ ನಿಲ್ಲಿಸಿಲ್ಲ.

ಅಂತಿಮವಾಗಿ ಟ್ರಕ್ ಚಾಲಕ ಪಿಕ್‌ಅಪ್‌ ಮುಂದೆ ಅಡ್ಡಲಾಗಿ ನಿಲ್ಲಿಸಬೇಕಾಯಿತು. ಈ ಮೂಲಕ ಪಿಕ್‌ಅಪ್‌ ಅನ್ನು ತಡೆಯುವಲ್ಲಿ ಯಶಸ್ವಿಯಾದರು. ನಂತರ ಅವರು ಗಾಯಗೊಂಡ ಸೈಕಲ್‌ ಸವಾರನನ್ನು ಪಿಕ್‌ಅಪ್‌ ಅಡಿಯಿಂದ ಹೊರಗೆ ಎಳೆದರು. ಈ ವೇಳೆ ಗುರ್‌ನಾಮ್‌ ಸಿಂಗ್ ವೈಯೆಲ್ಲ ರಕ್ಷಸಿಕ್ತವಾಗಿತ್ತು. ಏತನ್ಮಧ್ಯೆ ಸ್ಥಳದಲ್ಲಿದ್ದವರು ಕೋಪಗೊಂಡ ಪಿಕ್‌ಅಪ್‌ ಚಾಲಕ ಹೊಡೆದಿದ್ದಾರೆ. ಈ ದೃಶ್ಯಗಳೆಲ್ಲ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಗುರ್‌ನಾಮ್‌ ಸಿಂಗ್ ಅವರನ್ನು ಆಂಬ್ಯುಲೆನ್ಸ್‌ ಮೂಲಕ ಸಮೀಪದ ಆಸ್ಪತ್ರಗೆ ದಾಖಲಿಸಲಾಯಿತು. ಆದರೆ ಅವರ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಗುರ್‌ನಾಮ್‌ ಸಿಂಗ್ ಅವರ ಸಂಬಂಧಿಕರ ಹೇಳಿಕೆ ಆಧಾರದಲ್ಲಿ ಪಿಕ್‌ಅಪ್‌ ಚಾಲಕನ ವಿರುದ್ಧ ಕೊಲೆಯ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಘಟನೆ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

ಹೈದರಾಬಾದ್‌ನಲ್ಲಿಯೂ ನಡೆದಿತ್ತು

ಕೆಲವು ದಿನಗಳ ಹಿಂದೆ ಇಂತಹದ್ದೇ ಘಟನೆ ಹೈದರಾಬಾದ್‌ನಲ್ಲಿಯೂ ನಡೆದಿತ್ತು. ಬೈಕ್‌ ಸವಾರ ಅತ್ಯಂತ ಸಾಹಸಿಕವಾಗಿ ಅಂದು ಪಾರಾಗಿದ್ದ. ಆ ಘಟನೆಯ ವಿಡಿಯೊ ಕೂಡ ವೈರಲ್‌ ಆಗಿತ್ತು. ಅಂದು ವೇಗವಾಗಿ ಚಲಿಸುತ್ತಿದ್ದ ಲಾರಿ ಜನನಿಬಿಡ ರಸ್ತೆಯಲ್ಲಿ ತನ್ನ ಮುಂಭಾಗದ ಟೈರ್ ಕೆಳಗೆ ಮೋಟಾರ್ ಸೈಕಲ್ ಅನ್ನು ಎಳೆದುಕೊಂಡು ಹೋಗುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿತ್ತು. ಅದೃಷ್ಟವಶಾತ್‌ ಬೈಕ್‌ ಸವಾರ ಪಾರಾಗಿ ಲಾರಿಯ ಸ್ಟೆಪ್‌ನಲ್ಲಿ ನಿಂದುಕೊಂಡಿದ್ದ. ವೇಗವಾಗಿ ಸಾಗುತ್ತಿದ್ದ ಲಾರಿ ಬೈಕ್‌ ಅನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿತ್ತು. ಈ ವೇಳೆ ಬೈಕ್‌ ಮತ್ತು ರಸ್ತೆಯ ಘರ್ಷಣೆಯಿಂದ ಬೆಂಕಿ ಹತ್ತಿಕೊಳ್ಳುವುದು ಕೂಡ ವಿಡಿಯೊದಲ್ಲಿ ಸೆರೆಯಾಗಿತ್ತು. ಬಳಿಕ ಬೈಕ್‌ ಚೂರು ಚೂರಾಗಿತ್ತು. ಹಾಗಿದ್ದರೂ ಚಾಲಕ ಲಾರಿಯನ್ನು ನಿಲ್ಲಿಸಿರಲಿಲ್ಲ. ಲಾರಿಯ ಹಿಂದಿನಿಂದ ಬರುತ್ತಿದ್ದ ಪ್ರಯಾಣಿಕರು ವಿಡಿಯೊವನ್ನು ಸೆರೆ ಹಿಡಿದಿದ್ದರು. ಕೊನೆಗೆ ಲಾರಿ ಚಾಲಕ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

Continue Reading

ದೇಶ

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Ujjwal Nikam: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು 15ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲೂ, ಮುಂಬೈ ನಾರ್ತ್‌ ಸೆಂಟ್ರಲ್‌ ಕ್ಷೇತ್ರದಲ್ಲಿ ಹಾಲಿ ಸಂಸದೆ ಪೂನಂ ಮಹಾಜನ್‌ ಬದಲಿಗೆ 26/11ರ ಮುಂಬೈ ದಾಳಿ ಪ್ರಕರಣದಲ್ಲಿ ವಾದ ಮಂಡಿಸಿದ ವಕೀಲ ಉಜ್ವಲ್‌ ನಿಕಾಮ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

VISTARANEWS.COM


on

Ujjwal Nikam
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿಯು ಅಳೆದು-ತೂಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ. ಹೊಸಬರಿಗೆ ಆದ್ಯತೆ, ವಿವಾದ ಹೊಂದಿರುವ ನಾಯಕರಿಗೆ ಕೊಕ್‌, ಯುವಕರಿಗೆ ಮಣೆ ಸೇರಿ ಹಲವು ರೀತಿಯಲ್ಲಿ ಪ್ರಯೋಗ ಮಾಡುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಮುಂಬೈ ನಾರ್ತ್‌ ಸೆಂಟ್ರಲ್‌ ಲೋಕಸಭೆ ಕ್ಷೇತ್ರದಲ್ಲಿ ಹಾಲಿ ಸಂಸದೆ, ಬಿಜೆಪಿ ನಾಯಕ ಪ್ರಮೋದ್‌ ಮಹಾಜನ್‌ ಅವರ ಪುತ್ರಿ ಪೂನಂ ಮಹಾಜನ್‌ (Poonam Mahajan) ಅವರ ಬದಲಿಗೆ 26/11ರ ಮುಂಬೈ ಉಗ್ರ ದಾಳಿ (26/11 Mumbai Terror Attack) ವಕೀಲ ಉಜ್ವಲ್‌ ನಿಕಾಮ್‌ (Ujjwal Nikam) ಅವರಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು 15ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಉಜ್ವಲ್‌ ನಿಕಾಮ್‌ ಅವರಿಗೆ ಟಿಕೆಟ್‌ ನೀಡಿರುವುದು ಪ್ರಮುಖ ಘೋಷಣೆಯಾಗಿದೆ. ಉಜ್ವಲ್‌ ನಿಕಾಮ್‌ ಅವರು ಬಾಂಬೆ ಹೈಕೋರ್ಟ್‌ ವಕೀಲರಾಗಿದ್ದು, ಇವರು ಮುಂಬೈ ಭಯೋತ್ಪಾದಕ ದಾಳಿಯ ಬಳಿಕ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ (ಪಬ್ಲಿಕ್‌ ಪ್ರಾಸಿಕ್ಯೂಟರ್) ಮಂಡಿಸಿದ್ದರು. ಇವರೀಗ ಮುಂಬೈ ನಾರ್ತ್‌ ಸೆಂಟ್ರಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್‌ ಅವರನ್ನು ಎದುರಿಸಲಿದ್ದಾರೆ.

ಯಾರಿವರು ಉಜ್ವಲ್‌ ನಿಕಾಮ್?

ಉಜ್ವಲ್‌ ನಿಕಾಮ್‌ ಅವರ ಹೆಸರು ಮುಂಬೈ ದಾಳಿ ಪ್ರಕರಣದಲ್ಲಿ ದೇಶಾದ್ಯಂತ ಪಸರಿಸಿದರೂ, ಅವರು ಪ್ರಮುಖ ಪ್ರಕರಣಗಳಲ್ಲಿ ವಾದ ಮಂಡಿಸಿದ್ದಾರೆ. 1993ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ, ಗುಲ್ಶನ್‌ ಕುಮಾರ್‌ ಕೊಲೆ ಪ್ರಕರಣ, 2013ರಲ್ಲಿ ಮುಂಬೈನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ವಾದ ಮಂಡಿಸಿದ್ದಾರೆ. ಅಷ್ಟೇ ಏಕೆ, ಹಾಲಿ ಸಂಸದೆ ಪೂನಂ ಮಹಾಜನ್‌ ಅವರ ತಂದೆ ಪ್ರಮೋದ್‌ ಮಹಾಜನ್‌ ಹತ್ಯೆ ಪ್ರಕರಣದಲ್ಲೂ ಉಜ್ವಲ್‌ ನಿಕಾಮ್‌ ಅವರು ವಾದ ಮಂಡಿಸಿದ್ದರು. ಇವರಿಗೆ 2016ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನೂ ನೀಡಿದೆ.

ಮುಂಬೈ ದಾಳಿ ಕರಾಳ ಅಧ್ಯಾಯ

ಮುಂಬೈನಲ್ಲಿರುವ ತಾಜ್​ ಹೋಟೆಲ್​ಗಳ ಮೇಲೆ 2008ರಲ್ಲಿ ನಡೆದ ಉಗ್ರ ದಾಳಿ ಇಂದಿಗೂ ನಮ್ಮ ಇತಿಹಾಸದಲ್ಲಿ ಕಪ್ಪುಚುಕ್ಕೆಯಾಗಿ ಉಳಿದಿದೆ. ಅದನ್ನೊಂದು ಕರಾಳ ದಿನವೆಂದೇ ಪರಿಗಣಿಸಲಾಗುತ್ತದೆ. ಅಂದು ಲಷ್ಕರೆ ತಯ್ಬಾ ಸಂಘಟನೆಯ 10 ಉಗ್ರರು ಸಮುದ್ರ ಮಾರ್ಗದ ಮೂಲಕ ಮುಂಬಯಿಗೆ ಬಂದು ಗುಂಡಿನ ದಾಳಿ ನಡೆಸಿದ್ದರು. ನವೆಂಬರ್ 26ರಿಂದ 29ರವರೆಗೆ ಭದ್ರತಾ ಪಡೆಗಳು-ಉಗ್ರರ ನಡುವಿನ ಹೋರಾಟ ನಡೆದಿತ್ತು. ಇದರಲ್ಲಿ ಆರು ಮಂದಿ ಅಮೇರಿಕದವರು ಸೇರಿ 166 ಮಂದಿ ಮೃತಪಟ್ಟಿದ್ದರು. ಹಲವು ಯೋಧರು ಕೂಡ ಹುತಾತ್ಮರಾಗಿದ್ದಾರೆ.

ಇದನ್ನೂ ಓದಿ: ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

Continue Reading

ಮನಿ-ಗೈಡ್

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Money Guide: ದೇಶದಲ್ಲಿನ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದಿದೆ. ಅದರಂತೆ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ 16 ಕಂತುಗಳನ್ನು ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಮುಂದಿನ ತಿಂಗಳು 17ನೇ ಕಂತು ಬಿಡಿಗಡೆಯಾಗುವ ನಿರೀಕ್ಷೆ ಇದೆ. ಸದ್ಯ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Money Guide
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 17ನೇ ಕಂತು ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು. ದೇಶಾದ್ಯಂತದ 9 ಕೋಟಿಗಿಂತ ಅಧಿಕ ಫಲಾನುಭವಿಗಳ ಖಾತೆಗೆ ಅಂದು ಸುಮಾರು 21,000 ಕೋಟಿ ರೂ. ಜಮೆ ಮಾಡಲಾಗಿತ್ತು. ಸದ್ಯ 17ನೇ ಕಂತು ಬಿಡುಗಡೆಯಾಗಬೇಕಿದೆ.

17ನೇ ಕಂತು ಯಾವಾಗ?

17ನೇ ಕಂತು ಮೇಯಲ್ಲಿ ಬಿಡುಗಡೆಯಾಗಲಿದೆ. ಆದರೆ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ.

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಈ ಯೋಜನೆ ನೆರವಾಗುತ್ತಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ‘New Farmer Registration’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ.
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ.
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ನಿಮ್ಮ ಹೆಸರು ಫಲಾನುಭವಿ ಪಟ್ಟಿಯಿಂದ ರದ್ದಾಗಲು ಕಾರಣ

  • ನಕಲಿ ಫಲಾನುಭವಿ ಸಂಖ್ಯೆ.
  • ಇ-ಕೆವೈಸಿ ಪೂರ್ಣವಾಗದಿರುವುದು.
  • ಅರ್ಜಿಯಲ್ಲಿನ ತಪ್ಪಾದ ಐಎಫ್‌ಎಸ್‌ಸಿ ಕೋಡ್‌.
  • ಅಮಾನ್ಯ, ವರ್ಗಾವಣೆಗೊಂಡ, ನಿರ್ಬಂಧಿಸಿದ ಅಥವಾ ಸ್ಥಗಿತಗೊಳಿಸಿದ ಬ್ಯಾಂಕ್ ಖಾತೆ.
  • ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಕಾರ್ಡ್‌ ನಂಬರ್‌ ಲಿಂಕ್‌ ಆಗದೇ ಇರುವುದು.
  • ಅಪೂರ್ಣ ಅಪ್ಲಿಕೇಷನ್‌ ಫಾರಂ.
  • ಅಮಾನ್ಯ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಹೆಸರು.
  • ಫಲಾನುಭವಿ ಖಾತೆ ಸಂಖ್ಯೆಯು ಫಲಾನುಭವಿ ಕೋಡ್ ಮತ್ತು ಯೋಜನೆಯೊಂದಿಗೆ ಹೋಲಿಕೆ ಆಗದಿರುವುದು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading
Advertisement
Virat Kohli
ಪ್ರಮುಖ ಸುದ್ದಿ8 mins ago

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

Illegal Cattle Trafficking 9 Accused Arrested in gangavathi
ಕರ್ನಾಟಕ9 mins ago

Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

Congress leader B K Hariprasad latest statement In Gangavathi
ಕೊಪ್ಪಳ11 mins ago

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Kalaburagi Lok Sabha Constituency Congress candidate Radhakrishna Doddamani election campaign
ಯಾದಗಿರಿ14 mins ago

Lok Sabha Election 2024: ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ, ನಿಮ್ಮೆಲ್ಲರ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Narendra Modi
ಕರ್ನಾಟಕ28 mins ago

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Namma Metro
ಬೆಂಗಳೂರು30 mins ago

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

ipl 2024
ಕ್ರೀಡೆ32 mins ago

IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

Viral News
ವೈರಲ್ ನ್ಯೂಸ್49 mins ago

Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

WhatsApp color
ತಂತ್ರಜ್ಞಾನ57 mins ago

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

Traffic Restrictions
ಬೆಂಗಳೂರು1 hour ago

Traffic Restrictions: ಟಿಸಿಎಸ್‌ ವರ್ಲ್ಡ್ 10ಕೆ ಮ್ಯಾರಥಾನ್; ನಾಳೆ ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20243 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ8 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌