Viral Video: ಪ್ರಜ್ಞೆ ತಪ್ಪಿದ ಹಾವಿನ ಪ್ರಾಣ ಉಳಿಸಿದ ಕಾನ್‌ಸ್ಟೇಬಲ್‌; ಶಹಬ್ಬಾಶ್‌ ಎಂದ ಜನ - Vistara News

ದೇಶ

Viral Video: ಪ್ರಜ್ಞೆ ತಪ್ಪಿದ ಹಾವಿನ ಪ್ರಾಣ ಉಳಿಸಿದ ಕಾನ್‌ಸ್ಟೇಬಲ್‌; ಶಹಬ್ಬಾಶ್‌ ಎಂದ ಜನ

Viral Video: ಪ್ರಜ್ಞೆ ತಪ್ಪಿ ಬಿದ್ದಿದ್ದ ಹಾವಿಗೆ ಪೊಲೀಸ್‌ ಕಾನ್‌ಸ್ಟೇಬಲ್‌ ಸಿಪಿಆರ್‌ ನೀಡುವ ದೃಶ್ಯ ಇದೀಗ ವೈರಲ್‌ ಆಗಿದೆ. ಅವರ ಮಾನವೀಯ ಕಾರ್ಯಕ್ಕೆ ಹಲವರು ಶಹಬ್ಬಾಸ್‌ ಎಂದಿದ್ದಾರೆ.

VISTARANEWS.COM


on

sanke
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್‌: ಹಾವು ಕಂಡರೆ ಮಾರು ದೂರ ಓಡಿ ಹೋಗುವವರೇ ಅಧಿಕ. ಇನ್ನು ಪ್ರಜ್ಞೆ ತಪ್ಪಿ ಬಿದ್ದ ಹಾವಿನ ಬಾಯಿಗೆ ಬಾಯಿ ಕೊಟ್ಟು ಸಿಪಿಆರ್‌ ನೀಡುವುದನ್ನು ಊಹಿಸಲೂ ಸಾಧ್ಯವಿಲ್ಲ. ಆದರೆ ಇಲ್ಲೊಬ್ಬರು ಪೊಲೀಸ್‌ ಕಾನ್‌ಸ್ಟೇಬಲ್‌ ನಾವು ಊಹಿಸಿಕೊಳ್ಳಲೂ ಸಾಧ್ಯವಿಲ್ಲದ ಈ ಮಾನವೀಯ ಕಾರ್ಯದ ಮೂಲಕ ಗಮನ ಸೆಳೆದಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಹಾವಿಗೆ ಅವರು ಸಿಪಿಆರ್‌ (Cardiopulmonary Resuscitation ಅಥವಾ ಹೃದಯ ಮತ್ತು ಶ್ವಾಸಕೋಶಕ್ಕೆ ಪ್ರಚೋದನೆ ನೀಡುವುದು ಅಥವಾ ಬಾಯಲ್ಲಿ ಬಾಯಿಟ್ಟು ಊದುವುದು) ನೀಡುವ ದೃಶ್ಯ ಇದೀಗ ವೈರಲ್‌ (Viral Video) ಆಗಿದೆ. ಅವರ ಕಾರ್ಯಕ್ಕೆ ಹಲವರು ಶಹಬ್ಬಾಶ್‌ ಎಂದಿದ್ದಾರೆ.

ಏನಿದು ಘಟನೆ?

ಮಧ್ಯಪ್ರದೇಶದ ನರ್ಮದಾಪುರಂ ಈ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಅತುಲ್‌ ಶರ್ಮ ಎನ್ನುವ ಕಾನ್ಸ್‌ಟೇಬಲ್‌ ಹಾವಿನ ಪ್ರಾಣ ಕಾಪಾಡಿದ ವ್ಯಕ್ತಿ. ವಿಷ ರಹಿತ ಹಾವೊಂದು ಜನ ವಸತಿ ಪ್ರದೇಶಕ್ಕೆ ನುಗಿತ್ತು. ಅದನ್ನು ಹೊರ ಹಾಕುವ ಭರದಲ್ಲಿ ಸಾರ್ವಜನಿಕರು ಕ್ರಿಮಿನಾಶಕವನ್ನು ಬಳಸಿದ್ದರಿಂದ ಹಾವು ಪ್ರಜ್ಞೆ ಕಳೆದುಕೊಂಡಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಅತುಲ್‌ ಶರ್ಮ ಮೊದಲು ಹಾವನ್ನು ಕೈಗೆತ್ತಿಕೊಂಡು ಪರಿಶೀಲನೆ ನಡೆಸಿದರು. ಅದು ಜೀವಂತವಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಹಾವಿನ ಬಾಯಿಗೆ ತಮ್ಮ ಬಾಯಿ ಇಟ್ಟು ಸಿಪಿಆರ್‌ ನೀಡಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ಹಾವು ಕೊಂಚ ಚೇತರಿಸಿಕೊಂಡಿದೆ. ಬಳಿಕ ಅದರ ತಲೆಗೆ ನೀರು ಚಿಮುಕಿಸಿದ್ದಾರೆ. ನಂತರ ಇನ್ನೊಮ್ಮೆ ಸಿಪಿಆರ್‌ ನೀಡಲಾಯಿತು. ಜತೆಗೆ ಅತುಲ್‌ ಶರ್ಮ ಹಾವಿನ ತಲೆ, ನೆತ್ತಿಯನ್ನು ಮೃದುವಾಗಿ ಉಜ್ಜಿದರು. ಕೊನೆಗೂ ಚೇತರಿಸಿಕೊಂಡ ಹಾವನ್ನು ಕಾಡಿಗೆ ಬಿಟ್ಟು ಬರಲಾಯಿತು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ʼನರ್ಮದಾಪುರಂನಲ್ಲಿ ನಡೆದ ವಿಡಿಯೊ ವೈರಲ್‌ ಆಗಿದೆ. ವಿಷ ಸಿಂಪಡಣೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಹಾವಿಗೆ ಪೊಲೀಸ್‌ ಕಾನ್‌ಸ್ಟೇಬಲ್‌ ಸಿಪಿಆರ್‌ ನೀಡಿದ್ದಾರೆʼ ಎಂದು ಬರೆಯಲಾಗಿದೆ. ಅತುಲ್‌ ಶರ್ಮ ಡಿಸ್ಕವರಿ ಚಾನಲ್‌ ನೋಡಿ ಹಾವು ರಕ್ಷಣೆಯ ತಂತ್ರಗಳನ್ನು ಕರಗತ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಇತ್ತ ಹುಲಿ ಉಗುರಿನ ರಾದ್ಧಾಂತ; ಅತ್ತ ಹುಲಿಯೊಡನೆ ರಸ್ತೆಯಲ್ಲಿ ವಾಕಿಂಗ್‌!

ಮೆಚ್ಚುಗೆ ಸೂಚಿಸಿದ ನೆಟ್ಟಿಗರು

ಅತುಲ್‌ ಶರ್ಮ ಅವರ ಈ ಮಾನವೀಯ ಕಾರ್ಯವನ್ನು ಹಲವು ಮೆಚ್ಚಿಕೊಂಡಿದ್ದಾರೆ. ʼʼಹಾವಿನ ಬಗ್ಗೆಯೂ ಭಾರತೀಯ ಸಮಾಜದ ಸಹಾನುಭೂತಿ ಅದ್ಭುತʼʼ ಎಂದು ಒಬ್ಬರು ಉದ್ಘಾರ ಹೊರಡಿಸಿದ್ದಾರೆ. “ಪ್ರಕೃತಿ ಮತ್ತು ಜೀವಿಗಳ ಬಗ್ಗೆ ಇರುವ ಅವರ ಪ್ರೀತಿ ಮತ್ತು ಕಾಳಜಿ ನೋಡಿ ಮನಸ್ಸು ತುಂಬಿ ಬಂತು. ದೇವರು ಅವರನ್ನು ಆಶೀರ್ವದಿಸಲಿ. ಕೆಲವು ಜನರಿಗೆ ಇದು ಮೂರ್ಖತನವೆಂದು ಅನಿಸಬಹುದು. ಅವರು ವಿಭಿನ್ನವಾಗಿ ಯೋಚಿಸಲು ಪ್ರಾರಂಭಿಸಬೇಕುʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಧೈರ್ಯ ಮತ್ತು ಕರುಣೆ ತುಂಬಿದ ಕೆಲಸʼʼ ಎಂದು ಮತ್ತೊಬ್ಬರು ಇದನ್ನು ಬಣ್ಣಿಸಿದ್ದಾರೆ. ಮಾನವೀಯತೆ ಎನ್ನುವುದು ಅತುಲ್‌ ಶರ್ಮನಂತಹವರ ಹೆಸರಿನಲ್ಲಿ ಇನ್ನೂ ಉಸಿರಾಡುತ್ತಿದೆ ಎಂದು ಹಲವರು ನಿಟ್ಟುಸಿರು ಬಿಟ್ಟಿದ್ದಾರೆ. ಒಟ್ಟಿನಲ್ಲಿ ಅವರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ಒಂದಷ್ಟು ಜನರಿಗೆ ಪ್ರೇರಣೆಯಾದರೆ ಅವರ ಕಾರ್ಯವೂ ಸಾರ್ಥಕ.

ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಚಲನೆ ಇಲ್ಲದೆ ಬಿದ್ದಿದ್ದ ಊಸರವಳ್ಳಿಗೆ ಇದೇ ರೀತಿ ಸಿಪಿಆರ್‌ ನೀಡಿ ರಕ್ಷಿಸಿದ ವಿಡಿಯೊ ವೈರಲ್‌ ಆಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

Reasi Terror Attack : ತಂಡದಲ್ಲಿ 6ರಿಂದ 7 ಭಯೋತ್ಪಾದಕರು ಇದ್ದರು. ಅವರು ಮಾಸ್ಕ್​ನಿಂದ ಮುಖ ಮುಚ್ಚಿದ್ದರು. ಆರಂಭದಲ್ಲಿ, ಅವರು ಬಸ್ ಹಿಂದೆ – ಮುಂದೆ ಚಲಿಸದಂತೆ ರಸ್ತೆಯ ಎಲ್ಲಾ ಬದಿಗಳಿಂದ ಮುಚ್ಚಿದರು. ಬಳಿಕ ಗುಂಡು ಹಾರಿಸಲು ಆರಂಭಿಸಿದರು. ಬಸ್ ಕಮರಿಗೆ ಹತ್ತಿರ ಬಂದು ಎಲ್ಲರೂ ಸಾಯುವಂತೆ ನಿರಂತ ಗುಂಡು ಹಾರಿಸುತ್ತಲೇ ಇದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Reasi Terror Attack
Koo

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದೂ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ (Reasi Terror Attack) ಬದುಕುಳಿದವರು ಆ ಭಯಾನಕ ಕ್ಷಣವನ್ನು ವಿವರಿಸಿದ್ದಾರೆ. ಎಲ್ಲರನ್ನೂ ಸಾಯಿಸಬೇಕು ಎಂಬ ಉದ್ದೇಶದಿಂದ ಭಯೋತ್ಪಾದಕರು ಬಸ್​ ಕಮರಿಗೆ ಬಿದ್ದಿದ್ದರೂ ಗುಂಡು ಹಾರಿಸುತ್ತಲೇ ಇದ್ದರು ಎಂದು ಅವರು ಹೇಳಿದ್ದಾರೆ. ನಾವೆಲ್ಲರೂ ಗುಂಡು ಬಿದ್ದು ಸತ್ತಂತೆ ನಟಿಸಿ ಬದುಕಿಕೊಂಡೆವು ಎಂದು ಅವರು ಭಯಭೀತ ಘಟನೆಯನ್ನು ವಿವರಿಸಿದ್ದಾರೆ.

ತಂಡದಲ್ಲಿ 6ರಿಂದ 7 ಭಯೋತ್ಪಾದಕರು ಇದ್ದರು. ಅವರು ಮಾಸ್ಕ್​ನಿಂದ ಮುಖ ಮುಚ್ಚಿದ್ದರು. ಆರಂಭದಲ್ಲಿ, ಅವರು ಬಸ್ ಹಿಂದೆ – ಮುಂದೆ ಚಲಿಸದಂತೆ ರಸ್ತೆಯ ಎಲ್ಲಾ ಬದಿಗಳಿಂದ ಮುಚ್ಚಿದರು. ಬಳಿಕ ಗುಂಡು ಹಾರಿಸಲು ಆರಂಭಿಸಿದರು. ಬಸ್ ಕಮರಿಗೆ ಹತ್ತಿರ ಬಂದು ಎಲ್ಲರೂ ಸಾಯುವಂತೆ ಕೂಗುತ್ತಾ ನಿರಂತರ ಗುಂಡು ಹಾರಿಸುತ್ತಲೇ ಇದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ನಾವೆಲ್ಲರೂ ಸತ್ತಿದ್ದೇವೆ ಎಂದು ಅವರನ್ನು ನಂಬಿಸಲು ನಾವು ಮೌನವಾಗಿಯೇ ಇದ್ದೆವು. ಸಂಜೆ 6 ಗಂಟೆಗೆ ಶಿವಖೋರ್ಹಿಯಿಂದ (ರಿಯಾಸಿ) ವೈಷ್ಣೋದೇವಿಗೆ ಬಸ್ ಮೂಲಕ ಬರುವಾಗ 30 ನಿಮಿಷಗಳ ದಾರಿಯ ನಡುವೆ ಘಟನೆ ನಡೆದಿದೆ. ನಾವು ಭಯಭೀತರಾಗಿದ್ದೆವು. ಬಸ್ಸಿನಲ್ಲಿ ಮಕ್ಕಳು ಮತ್ತು ಮಹಿಳೆಯರು ಸಹ ಇದ್ದರು. ಎಲ್ಲರೂ ಗಾಯಗೊಂಡಿದ್ದಾರೆ. ದಾಳಿ ನಡೆದ 10 ರಿಂದ 15 ನಿಮಿಷಗಳ ನಂತರ ಪೊಲೀಸರು ಮತ್ತು ಸ್ಥಳೀಯರು ನಮ್ಮನ್ನು ರಕ್ಷಿಸಲು ಬಂದರು ಎಂದು ಯಾತ್ರಿಯೊಬ್ಬರು ಹೇಳಿದರು.

20 ನಿಮಿಷ ಗುಂಡು ಹಾರಿಸಿದ್ದರು

ಭಯಾನಕ ದಾಳಿಯನ್ನು ವಿವರಿಸಿದ ಸಂತ್ರಸ್ತರೊಬ್ಬರು “ಭಯೋತ್ಪಾದಕರಲ್ಲಿ ಒಬ್ಬ ಬಸ್ ಮೇಲೆ ಗುಂಡು ಹಾರಿಸುವುದನ್ನು ನಾನು ನೋಡಿದ್ದೇನೆ. ಬಸ್ ಕಮರಿಗೆ ಬಿದ್ದ ನಂತರವೂ ಅವರು 20 ನಿಮಿಷಗಳ ಕಾಲ ಗುಂಡು ಹಾರಿಸುತ್ತಲೇ ಇದ್ದರು. ಬಸ್ ಚಾಲಕನಿಗೆ ಗುಂಡು ತಗುಲಿದ ಕಾರಣ ನಿಯಂತ್ರಣ ಕಳೆದುಕೊಂಡು ವಾಹನವು ಕಮರಿಗೆ ಬಿದ್ದಿದೆ.

ಮಕ್ಕಳೂ ಎಂದೂ ನೋಡದೆ ಕೊಂಡಿದ್ದರು

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇವಾಲಯದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 33 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

ರಿಯಾಸಿ ಬಸ್ ದಾಳಿಯಲ್ಲಿ ಎರಡರಿಂದ ಮೂರು ಭಯೋತ್ಪಾದಕರು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ರಾಜೌರಿ ಮತ್ತು ಪೂಂಛ್​​ನಲ್ಲಿ ದಾಳಿಗಳನ್ನು ನಡೆಸಿದ ಲಷ್ಕರ್ ಉಗ್ರರ ಗುಂಪು ಟಿಆರ್​ಎಫ್​ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.

ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ದಾಳಿಯ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್ಐಎ) ನಿಯೋಜಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

Continue Reading

ಪ್ರಮುಖ ಸುದ್ದಿ

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

PM Narendra Modi: ಜೂನ್ 9ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಈ ಪ್ರಮುಖ ರಾಜಕೀಯ ಘಟನೆಗೆ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಸಾಕ್ಷಿಯಾಗಿರುವಂತೆಯೇ, ನಾಲ್ಕು ಕಾಲಿನ ಒಂದು ಅನಿರೀಕ್ಷಿತ ಅತಿಥಿಯೂ ಕಂಡುಬಂದಿರುವುದು ಅಚ್ಚರಿಗೊಳಿಸಿದೆ.

VISTARANEWS.COM


on

pm narendra modi leopord
Koo

ಹೊಸದಿಲ್ಲಿ: ನರೇಂದ್ರ ಮೋದಿ (PM Narendra Modi) ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ (Prime minister) ಪ್ರಮಾಣ ವಚನ (Oath taking) ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದ್ದಾಗ ಹಿನ್ನೆಲೆಯಲ್ಲಿ ಚಿರತೆಯಂಥ (leopord) ಪ್ರಾಣಿಯೊಂದು ವೇದಿಕೆಯ ಹಿಂಭಾಗದಲ್ಲೇ ಓಡಾಡಿರುವುದು ಇದೀಗ ಕಂಡುಬಂದಿದೆ. ಸಮಾರಂಭದ ವಿಡಿಯೋದಲ್ಲಿ ಇದು ಕಂಡುಬಂದಿದ್ದು, ಇದೀಗ ಎಲ್ಲರ ಆಶ್ಚರ್ಯ, ಆತಂಕಗಳಿಗೆ ಕಾರಣವಾಗಿದೆ. ವಿಡಿಯೋ ವೈರಲ್‌ (viral video) ಆಗುತ್ತಿದೆ.

ಜೂನ್ 9ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಈ ಪ್ರಮುಖ ರಾಜಕೀಯ ಘಟನೆಗೆ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಸಾಕ್ಷಿಯಾಗಿರುವಂತೆಯೇ, ನಾಲ್ಕು ಕಾಲಿನ ಒಂದು ಅನಿರೀಕ್ಷಿತ ಅತಿಥಿಯೂ ಕಂಡುಬಂದಿರುವುದು ಅಚ್ಚರಿಗೊಳಿಸಿದೆ. ಭಾರತದ ಪ್ರಧಾನ ಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸಹಜವಾಗಿ ಬಿಗಿ ಭದ್ರತೆಯ ಕಾರ್ಯಕ್ರಮವಾಗಿದ್ದು, ರಾಷ್ಟ್ರದ ಮುಖಂಡರು, ರಾಜಕೀಯ ನಾಯಕರು, ಉದ್ಯಮಿಗಳು, ಪ್ರಮುಖ ಚಲನಚಿತ್ರ ನಟರು ಸಾಕ್ಷಿಗಳಾಗಿದ್ದರು. ಇದೇ ಸಂದರ್ಭದಲ್ಲಿ ಚಿರತೆ ಕಂಡುಬಂದಿದೆ.

ಬಿಜೆಪಿಯ ದುರ್ಗಾ ದಾಸ್ ಉಯಿಕೆ ಅವರು ಕೇಂದ್ರ ಸಚಿವರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ, ವೇದಿಕೆಯ ಹಿನ್ನೆಲೆಯಲ್ಲಿ ಬೆಕ್ಕಿನ ಸ್ವರೂಪದ ಪ್ರಾಣಿಯೊಂದು ಓಡಾಡಿದ್ದನ್ನು ಹೆಚ್ಚಿನವರು ಗುರುತಿಸಲಿಲ್ಲ. ಆದರೆ ವೇದಿಕೆಯ ಹಿಂದೆಯೇ ಅದರ ಮಿಂಚಿನ ಓಡಾಟವನ್ನು ಅನೇಕರು ಗಮನಿಸಿದರು. ದೂರದರ್ಶನದಲ್ಲಿ ಪ್ರಮಾಣವಚನ ಸಮಾರಂಭ ನೇರ ಪ್ರಸಾರವಾಗಿದ್ದು, ಇದೀಗ ಆ ಕ್ಷಣದ ವಿಡಿಯೋಗಳು ಮರುಪ್ರಸಾರವಾಗುತ್ತಿವೆ.

ಈ ವರ್ಷದ ಅತಿದೊಡ್ಡ ರಾಜಕೀಯ ಇವೆಂಟ್‌ ಆಗಿರುವ ಈ ಕಾರ್ಯಕ್ರಮದಲ್ಲಿ ಈ ಅನಪೇಕ್ಷಿತ, ಅನಿರೀಕ್ಷಿತ ಅತಿಥಿಯ ಆಗಮನ ಇದೀಗ ಇಂಟರ್ನೆಟ್‌ನಲ್ಲಿ ಬಿರುಗಾಳಿಯಂತೆ ಗಮನ ಸೆಳೆಯುತ್ತಿದೆ. ಅನೇಕ X ಬಳಕೆದಾರರು ತಮ್ಮ ಅಪನಂಬಿಕೆ ವ್ಯಕ್ತಪಡಿಸಿದ್ದಾರೆ. ಹಲವರು ಅಚ್ಚರಿ ಹಾಗೂ ಆತಂಕ ಹೊರಸೂಸಿದ್ದಾರೆ.

ಆದರೂ ವಿಸ್ತಾರವಾದ ರಾಜಪಥ ಹಾಗೂ ರಾಷ್ಟ್ರಪತಿ ಭವನದ ಆವರಣದಲ್ಲಿ ಚಿರತೆ ಬಂದು ಹುದುಗಿಕೊಂಡಿರುವ ಸಾಧ್ಯತೆಯನ್ನು ಅಲ್ಲಗಳೆಯಾಲಗುವುದಿಲ್ಲ. ʼಅಮೃತ್ ಉದ್ಯಾನ್ʼ ಎಂದು ಕರೆಯಲಾಗುವ ಉದ್ಯಾನ 15 ಎಕರೆಗಳಷ್ಟು ಹರಡಿದ್ದು, ಹಲವು ಕಡೆ ದಟ್ಟವಾದ ಕಾಡು ಇದೆ. ಈಸ್ಟ್ ಲಾನ್, ಸೆಂಟ್ರಲ್ ಲಾನ್, ಲಾಂಗ್ ಗಾರ್ಡನ್ ಮತ್ತು ಸರ್ಕ್ಯುಲರ್ ಗಾರ್ಡನ್ ಇದರ ಮೂಲ ಆಕರ್ಷಣೆಗಳಾಗಿವೆ. ಹರ್ಬಲ್ ಗಾರ್ಡನ್, ಟ್ಯಾಕ್ಟೈಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್ ಮತ್ತು ಆರೋಗ್ಯ ವನಂಗಳು ಇಲ್ಲಿವೆ.

ಅಮೃತ್ ಉದ್ಯಾನ್‌ನ ಸಸ್ಯವರ್ಗದ ಜೊತೆಗೆ ರಾಷ್ಟ್ರಪತಿ ಭವನವು ಚಿಟ್ಟೆ ಪಾರ್ಕ್‌, ನವಿಲು ಪಾರ್ಕ್‌, ಕೊಳ ಇತ್ಯಾದಿ ಒಳಗೊಂಡಿದೆ. ವೈವಿಧ್ಯಮಯ ಪ್ರಾಣಿಗಳಿಗೂ ನೆಲೆಯಾಗಿದೆ. ಭವನದ ಆವರಣದ ಉದ್ಯಾನವು 111 ಜಾತಿಯ ಪಕ್ಷಿಗಳನ್ನೂ ಹೊಂದಿದೆ. ಸೋಮವಾರ ಮತ್ತು ನಿರ್ದಿಷ್ಟ ರಜಾದಿನಗಳನ್ನು ಹೊರತುಪಡಿಸಿ, ಅಮೃತ್‌ ಉದ್ಯಾನವು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಸಾರ್ವಜನಿಕರಿಗೆ ತೆರೆದಿದೆ.

ಇದೀಗ ಈ ಚಿರತೆ ಎಲ್ಲಿಂದ ಬಂದಿರಬಹುದು, ಪ್ರಧಾನಿ ಹಾಗೂ ರಾಷ್ಟ್ರಪತಿಗಳ ಸೆಕ್ಯುರಿಟಿ ಅದನ್ನು ಸಮಾರಂಭ ನಡೆಯುವ ಜಾಗದವರೆಗೂ ಹೇಗೆ ಬರಲು ಬಿಟ್ಟರು, ನಿಜಕ್ಕೂ ಈ ವಿಡಿಯೋದಲ್ಲಿ ಕಾಣಿಸಿರುವುದು ನಿಜವೇ ಎಂಬಿತ್ಯಾದಿ ಚರ್ಚೆಗಳು ಆರಂಭವಾಗಿವೆ. ಒಂದು ವೇಳೆ ಇಲ್ಲಿ ಚಿರತೆ ಇರುವುದು ನಿಜವೇ ಆಗಿದ್ದರೆ, ಅದು ದೇಶವಿದೇಶದ ಗಮನ ಸೆಳೆಯುವ ದೊಡ್ಡ ಸುದ್ದಿಯೇ ಆಗಲಿದೆ.

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

Continue Reading

ದೇಶ

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Suresh GopiL

VISTARANEWS.COM


on

Suresh Gopi
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಟಿಕೆಟ್​ ಪಡೆಯುವುದೇ ಹರಸಾಹಸ. ಅದಕ್ಕೆ ನೂರಾರು ಮಾದರಿಯಲ್ಲಿ ಪ್ರಭಾವ ಬೀರಬೇಕು. ಸಿಕ್ಕಿ ಗೆದ್ದರಂತೂ ಆಕಾಶಕ್ಕೆ ಮೂರೇ ಗೇಣು. ಗೆದ್ದ ಮೇಲೆ ಸಚಿವ ಸ್ಥಾನ ದೊರೆತರೆ ಅದು ಅವರ ಜೀವನ ಅತ್ಯುನ್ನತ ಸಾಧನೆಯಾಗುತ್ತದೆ. ರಾಜಕಾರಣಿಗಳ ಪರಿಸ್ಥಿತಿ ಈ ರೀತಿ ಇದೆ ಎಂಬುದು ರಾಜಕಾರಣದಲ್ಲಿ ಇಲ್ಲದವರಿಗೂ ಗೊತ್ತಿರುವ ಸಂಗತಿ. ಇಂಥದ್ದರಲ್ಲಿ ಮೊದಲ ಪ್ರಯತ್ನದಲ್ಲೇ ಗೆದ್ದು ಸಚಿವ ಸ್ಥಾನ ದೊರೆತರೆ ಅದನ್ನು ಒಲ್ಲೆ ಎನ್ನುವುದುಂಟೆ? ಆದರೆ, ಅಚ್ಚರಿ ಎಂಬಂತೆ ಕೇರಳದ ತ್ರಿಶ್ಯೂರ್​ ಸಂಸದ, ಸಿನಿಮಾ ನಟ ಸುರೇಶ್​ ಗೋಪಿ (Suresh Gopi) ಈ ರೀತಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಅದೂ ಮೋದಿ 3.0 ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ. ನನಗೆ ಕೇಂದ್ರದಲ್ಲಿ ಸಚಿವ ಸ್ಥಾನದ ಜವಾಬ್ದಾರಿ ಬೇಡ, ನಾನು ತ್ರಿಶ್ಯೂರ್​ ಸಂಸದನಾಗಿಯೇ ಇರುತ್ತೇನೆ. ಅದಕ್ಕಿಂತಲೂ ಮಿಗಿಲಾಗಿ ನಾನು ಸಿನಿಮಾಗಳನ್ನು ಒಪ್ಪಿಕೊಂಡಿದ್ದು ಅದನ್ನು ಮುಗಿಸಬೇಕಾಗಿದೆ ಎಂದು ಹೇಳಿದ್ದಾರೆ.

ಮೋದಿ 3.0 ಕ್ಯಾಬಿನೆಟ್​ನಲ್ಲಿ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಸುರೇಶ್ ಗೋಪಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುದ್ದೆಯಿಂದ ಮುಕ್ತರಾಗಲು ಮತ್ತು ತ್ರಿಶೂರ್ ಜನರಿಗಾಗಿ ಸಂಸದರಾಗಿ ಕೆಲಸ ಮಾಡಲು ಬಯಸುವುದಾಗಿ ಹೇಳಿದ್ದಾರೆ. ನಟ-ರಾಜಕಾರಣಿ ಸುರೇಶ್ ಗೋಪಿ ಅವರು ಚಲನಚಿತ್ರಗಳಿಗೆ ಸಹಿ ಹಾಕಿದ್ದಾರೆ. ಅವುಗಳನ್ನು ಮುಗಿಸಲೇಬೇಕು ಎಂದು ಹೇಳಿದ್ದಾರೆ.

ಸಂಸದನಾಗಿ ಕೆಲಸ ಮಾಡುವುದು ನನ್ನ ಗುರಿ. ನಾನು ಏನನ್ನೂ ಕೇಳಲಿಲ್ಲ. ನನಗೆ ಈ ಹುದ್ದೆ ಅಗತ್ಯವಿಲ್ಲ ಎಂದು ನಾನು ಹೇಳಿದ್ದೆ. ನಾನು ಶೀಘ್ರದಲ್ಲೇ ಹುದ್ದೆಯಿಂದ ಮುಕ್ತನಾಗುತ್ತೇನೆ ಎಂದು ನಾನು ಭಾವಿಸುತ್ತೇನೆ. ತ್ರಿಶೂರ್ ಮತದಾರರಿಗೆ ಯಾವುದೇ ಸಮಸ್ಯೆ ಇಲ್ಲ. ಅವರಿಗೆ ಅದು ತಿಳಿದಿದೆ ಮತ್ತು ಸಂಸದನಾಗಿ ನಾನು ಅವರಿಗಾಗಿ ಕಾರ್ಯನಿರ್ವಹಿಸುತ್ತೇನೆ. ನಾನು ನನ್ನ ಚಲನಚಿತ್ರಗಳನ್ನು ಮುಗಿಸಬೇಕು ಎಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ದೆಹಲಿಯಲ್ಲಿ ಮನೋರಮಾ ಜತೆ ಮಾತನಾಡಿದ ಸುರೇಶ್ ಗೋಪಿ ಹೇಳಿದ್ದಾರೆ.

ಸೋಮವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟದ ಮೊದಲ ನಿಗದಿತ ಸಭೆಗೆ ಮುಂಚಿತವಾಗಿ ಗೋಪಿ ಅವರ ಹೇಳಿಕೆ ಬಂದಿದೆ. ಗೋಪಿ ಮತ್ತು ಪಕ್ಷದ ಹಿರಿಯ ನಾಯಕ ಜಾರ್ಜ್ ಕುರಿಯನ್ ಅವರು ಕೇರಳದಿಂದ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದರು.

ಇದನ್ನೂ ಓದಿ: Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ಎಡರಂಗದ ಭದ್ರಕೋಟೆಯಾಗಿದ್ದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದು, ಕೇರಳದ ಮೊದಲ ಬಿಜೆಪಿ ಸಂಸದರಾಗಿ ಇತಿಹಾಸ ನಿರ್ಮಿಸಿದ್ದಾರೆ. ಸುರೇಶ್ ಗೋಪಿ ಅವರು ಸಿಪಿಐನ ವಿ.ಎಸ್.ಸುನಿಲ್ ಕುಮಾರ್ ಅವರನ್ನು 74,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಕೆ ಮುರಳೀಧರನ್ ಅವರನ್ನು ಕಣಕ್ಕಿಳಿಸಿತ್ತು.

2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಸುರೇಶ್ ಗೋಪಿ ‘ತ್ರಿಶೂರ್​ಗೆ ಕೇಂದ್ರ ಸಚಿವ ಸ್ಥಾನ, ಮೋದಿಯವರ ಗ್ಯಾರಂಟಿ’ ಎಂಬ ಘೋಷಣೆಯೊಂದಿಗೆ ಪ್ರಚಾರ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Continue Reading

ಪ್ರಮುಖ ಸುದ್ದಿ

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

Election Commission :ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ. ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗಿರುವ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

VISTARANEWS.COM


on

Election Commission
Koo

ಬೆಂಗಳೂರು: ಜುಲೈ 10, 2024 ರಂದು ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಭಾರತದ ಚುನಾವಣಾ ಆಯೋಗ (Election Commission ) ಘೋಷಿಸಿದೆ. ಬಿಹಾರ, ತಮಿಳುನಾಡು ಮತ್ತು ಮಧ್ಯಪ್ರದೇಶದ ತಲಾ ಒಂದು, ಪಶ್ಚಿಮ ಬಂಗಾಳದ ನಾಲ್ಕು ಮತ್ತು ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ತಲಾ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ. ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗಿರುವ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಉಪಚುನಾವಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

  • ಅಧಿಸೂಚನೆ ಪ್ರಕಟಣೆ: ಜೂನ್ 14
  • ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 21
  • ನಾಮಪತ್ರ ಪರಿಶೀಲನೆ: ಜೂನ್ 24
  • ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಜೂನ್ 26
  • ಮತದಾನದ ದಿನಾಂಕ: ಜುಲೈ 10
  • ಫಲಿತಾಂಶ: ಜುಲೈ 13

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

ಜುಲೈ 10 ರಂದು ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳ ಪಟ್ಟಿ

ಬಿಹಾರ: ಬಿಮಾ ಭಾರತಿ ರಾಜೀನಾಮೆಯಿಂದ ತೆರವಾಧ ರುಪೌಲಿ ಕ್ಷೇತ್ರ
ಪಶ್ಚಿಮ ಬಂಗಾಳ: ಶ್ರೀ ಕೃಷ್ಣ ಕಲ್ಯಾಣಿ ರಾಜೀನಾಮೆಯಿಂದ ತೆರವಾದ ರಾಯ್​ಗಂಜ್ ಸ್ಥಾನ
ಪಶ್ಚಿಮ ಬಂಗಾಳ: ಮುಕುಟ್​​ ಮಣಿ ಅಧಿಕಾರಿ ರಾಜೀನಾಮೆಯಿಂದ ತೆರವಾದ ರಣಘಾಟ್ ದಕ್ಷಿಣ ಕ್ಷೇತ್ರ
ಪಶ್ಚಿಮ ಬಂಗಾಳ: ಬಿಸ್ವಜಿತ್ ದಾಸ್ ರಾಜೀನಾಮೆಯಿಂದ ಬಾಗ್ಡಾ ಸ್ಥಾನ
ಪಶ್ಚಿಮ ಬಂಗಾಳ: ಸಾಧನ್ ಪಾಂಡೆ ನಿಧನದಿಂದ ತೆರವಾದ ಮಣಿಕ್​ತಾಲ್​ ಕ್ಷೇತ್ರ
ತಮಿಳುನಾಡು: ತಿರು ಎನ್​ ಪುಗಳೆಂದಿ ನಿಧನದಿಂದ ತೆರವಾದ ವಿಕ್ರಾವಂಡಿ ಕ್ಷೇತ್ರ
ಮಧ್ಯಪ್ರದೇಶ: ಕಮಲೇಶ್ ಪ್ರತಾಪ್ ಶಾ ರಾಜೀನಾಮೆಯಿಂದಾಗಿ ಅಮರವಾರಾ ಸ್ಥಾನ
ಉತ್ತರಾಖಂಡ: ರಾಜೇಂದ್ರ ಸಿಂಗ್ ಭಂಡಾರಿ ರಾಜೀನಾಮೆಯಿಂದಾಗಿ ಬದರೀನಾಥ್ ಸ್ಥಾನ
ಉತ್ತರಾಖಂಡ: ಸರ್ವತ್ ಕರೀಂ ಅನ್ಸಾರಿ ಅವರ ನಿಧನದಿಂದಾಗಿ ಮಂಗಳೌರ್ ಕ್ಷೇತ್ರ
ಪಂಜಾಬ್​: ಶೀತಲ್ ಅಂಗುರಾ ಅವರ ರಾಜೀನಾಮೆಯಿಂದ ತೆರವಾದ ಪಂಜಾಬ್ ಜಲಂಧರ್ ಪಶ್ಚಿಮ ಸ್ಥಾನ
ಹಿಮಾಚಲ ಪ್ರದೇಶ: ಹೋಶ್ಯಾರ್ ಸಿಂಗ್ ಅವರ ರಾಜೀನಾಮೆಯಿಂದಾಗಿ ಡೆಹ್ರಾಡೂನ್ ಕ್ಷೇತ್ರ
ಹಿಮಾಚಲ ಪ್ರದೇಶ: ಆಶಿಶ್ ಶರ್ಮಾ ಅವರ ರಾಜೀನಾಮೆಯಿಂದಾಗಿ ತೆರವಾದ ಹಮೀರ್ಪುರ ಸ್ಥಾನ
ಹಿಮಾಚಲ ಪ್ರದೇಶ: ಕೆ.ಎಲ್.ಠಾಕೂರ್ ಅವರ ರಾಜೀನಾಮೆಯಿಂದಾಗಿ ತೆರವಾದ ನಲಘರ್ ಸ್ಥಾನ

ಚುನಾವಣೆಗೆ ನಡೆಯುವ ವಿಧಾನಸಭಾ ಕ್ಷೇತ್ರದ ಸಂಪೂರ್ಣ ಅಥವಾ ಯಾವುದೇ ಭಾಗವನ್ನು ಒಳಗೊಂಡಿರುವ ಜಿಲ್ಲೆಗಳಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಅದು ಹೇಳಿದೆ.

Continue Reading
Advertisement
UGCET 2024
ಬೆಂಗಳೂರು1 min ago

UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

Reasi Terror Attack
ಪ್ರಮುಖ ಸುದ್ದಿ8 mins ago

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

murder case
ಮೈಸೂರು24 mins ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

pm narendra modi leopord
ಪ್ರಮುಖ ಸುದ್ದಿ24 mins ago

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್30 mins ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Congress Guaratee
ಕರ್ನಾಟಕ39 mins ago

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Suresh Gopi
ದೇಶ40 mins ago

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Physical Abuse
ಮೈಸೂರು59 mins ago

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Election Commission
ಪ್ರಮುಖ ಸುದ್ದಿ1 hour ago

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

bhavani revanna prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case: ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ! ಅಲ್ಲೇ ಇದ್ದರೂ ಮುಖಾಮುಖಿಯಾಗದ ಅಮ್ಮ- ಮಗ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌