ವಿಸ್ತಾರ ಸಂಪಾದಕೀಯ | ಉತ್ತರಾಖಂಡದ ಜೋಶಿಮಠ ಪಟ್ಟಣ ಕುಸಿತ ನಮಗೆ ಎಚ್ಚರಿಕೆಯ ಗಂಟೆಯಾಗಲಿ - Vistara News

ದೇಶ

ವಿಸ್ತಾರ ಸಂಪಾದಕೀಯ | ಉತ್ತರಾಖಂಡದ ಜೋಶಿಮಠ ಪಟ್ಟಣ ಕುಸಿತ ನಮಗೆ ಎಚ್ಚರಿಕೆಯ ಗಂಟೆಯಾಗಲಿ

ಬದರಿನಾಥದ ದ್ವಾರ ಎನಿಸಿಕೊಂಡಿರುವ ಉತ್ತರಾಖಂಡದ ಜೋಶಿಮಠ ಪಟ್ಟಣವು ಕುಸಿಯುತ್ತಿದೆ. ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ಮಧ್ಯೆ ಸಮತೋಲನ ಕಾಯ್ದುಕೊಳ್ಳದಿದ್ದರೆ ಎದುರಾಗುವ ಆಪತ್ತಿಗೆ ಜೋಶಿಮಠ ಮತ್ತೊಂದು ಉದಾಹರಣೆಯಾಗಿದೆ.

VISTARANEWS.COM


on

joshimath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉತ್ತರಾಖಂಡದ ಪ್ರವಾಸಿ ತಾಣವಾದ ಜೋಶಿಮಠ ಪಟ್ಟಣವನ್ನು ಅಧಿಕೃತವಾಗಿಯೇ ‘ಮುಳುಗುತ್ತಿರುವ ಪಟ್ಟಣ’ ಎಂದು ಘೋಷಿಸಲಾಗಿದೆ. ಈಗಾಗಲೇ ಹಲವು ದೇವಸ್ಥಾನಗಳು, ಮನೆಗಳು ನೆಲಕಚ್ಚಿವೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಉನ್ನತ ಮಟ್ಟದ ಸಭೆ ನಡೆಸಿದೆ. ಪಟ್ಟಣದ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುತ್ತಿದೆ. ಇಷ್ಟಾಗಿಯೂ ಇನ್ನೂ ಹಲವರು ಅಲ್ಲಿಯೇ ಇದ್ದು, ಆತಂಕದಲ್ಲಿ ದಿನ ದೂಡುತ್ತಿದ್ದಾರೆ. ಬಹುಶಃ ಈ ಪರಿಸ್ಥಿತಿಯು ಮುಂದುವರಿದರೆ, ಭೂಮಿ ಬಾಯ್ದೆರೆದು ಇಡೀ ಪಟ್ಟಣವನ್ನು ಆಪೋಷನ ತೆಗೆದುಕೊಳ್ಳುವುದರಲ್ಲಿ ಅನುಮಾನವೇ ಇಲ್ಲ. ದುರ್ಘಟನೆ ಸಂಭವಿಸುವ ಮುಂಚೆಯೇ ಅಲ್ಲಿನವರಿಗೆ ಸುರಕ್ಷಿತ ಸೂರು ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ.

ನೈಸರ್ಗಿಕವಾಗಿ ಏನೇ ಕಾರಣಗಳಿದ್ದರೂ ಜೋಶಿಮಠದ ಇಂದಿನ ಸ್ಥಿತಿಗೆ ಮಾನವನ ದುರಾಸೆಯೇ ಕಾರಣ. ನಿಸರ್ಗದ ಮೇಲೆ ನಡೆಯುತ್ತಿರುವ ದೌರ್ಜನ್ಯ ಹೀಗೆಯೇ ಮುಂದುವರಿದರೆ, ದೇಶಾದ್ಯಂತ ಇನ್ನಷ್ಟು ‘ಜೋಶಿಮಠ’ಗಳು ಗೋಚರವಾಗಬಹುದು! ಅತಿ ಆಸೆ, ಅತಿಕ್ರಮಣ, ಅರಣ್ಯ ನಾಶ, ಎಲ್ಲೆಂದರಲ್ಲಿ ದೊಡ್ಡ ಕಟ್ಟಡಗಳನ್ನು ಕಟ್ಟುತ್ತಿರುವುದು, ಬೃಹತ್ ಅಣೆಕಟ್ಟುಗಳ ನಿರ್ಮಾಣ ಸೇರಿದಂತೆ ಪರಿಸರ ಸಮತೋಲನವನ್ನು ನಾವು ತಪ್ಪಿಸುತ್ತಿದ್ದೇವೆ. ಕಾರಣ, ಪ್ರಕೃತಿ ವಿಕೋಪ, ಭೂಕಂಪ, ತಾಪಮಾನ ಏರಿಕೆ ಸೇರಿ ಹಲವು ವೈಪರೀತ್ಯಗಳನ್ನು ಕಾಣುತ್ತಿದ್ದೇವೆ. ಈ ವೈಪರೀತ್ಯದ ಹೊಸ ಸಾಕ್ಷಿಯಾಗಿ ಜೋಶಿಮಠ ಪಟ್ಟಣವು ನಮ್ಮ ಕಣ್ಣ ಮುಂದಿದೆ. ಈಗಲೂ ಎಚ್ಚೆತ್ತುಕೊಳ್ಳದೇ ಹೋದರೆ ನಮ್ಮ ಮುಂದಿನ ಪೀಳಿಗೆ ನಮ್ಮನ್ನು ಖಂಡಿತವಾಗಿಯೂ ಕ್ಷಮಿಸಲಾರದು. ಮುಳುಗುತ್ತಿರುವ ಜೋಶಿಮಠ ಪಟ್ಟಣವು ನಮಗೆ ಎಚ್ಚರಿಕೆ ಗಂಟೆಯಾಗಲಿ.

ಜೋಶಿಮಠ ಪಟ್ಟಣವು ಗಿರಿ ಪ್ರದೇಶವಾದ ಕಾರಣ ಇಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂಬ ಎಚ್ಚರಿಕೆ ಇದ್ದರೂ ಕೆಲವು ದಶಕಗಳಿಂದ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯ ವಿಸ್ತರಣೆ ಮಾಡಲಾಗುತ್ತಿದೆ. ಜಲವಿದ್ಯುತ್‌ ಘಟಕಗಳ ನಿರ್ಮಾಣ ಕಾಮಗಾರಿ, ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಬೃಹತ್ ಕಟ್ಟಡಗಳ ನಿರ್ಮಾಣ ಹೆಚ್ಚಿದೆ. ಪ್ರವಾಸಿಧಾಮ ಎಂಬ ಕಾರಣಕ್ಕೆ ಕಂಡಕಂಡಲ್ಲಿ ಹೋಟೆಲ್, ರೆಸ್ಟೋರೆಂಟ್ ಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಪ್ರವಾಸಿಗರ ಸಂಖ್ಯೆಯೂ ಮಿತಿ ಮೀರುತ್ತಲೇ ಇರುತ್ತದೆ. ಇದರಿಂದಾಗಿ ನೀರಿನ ಪಥವೇ ಬದಲಾಗಿ ಹೋಗಿದ್ದರಿಂದ, ಭೂಮಿಯ ತಾಳಿಕೊಳ್ಳುವ ಸಾಮರ್ಥ್ಯ ಕುಸಿಯಿತು. ಅಂತಿಮವಾಗಿ ಪಟ್ಟಣದಲ್ಲಿ ಕಟ್ಟಡಗಳ ಕುಸಿತ, ಮನೆಗಳ ಬಿರುಕು ಸಾಮಾನ್ಯವಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ಅಪಾಯ ಎದುರಾಗಬಹುದು ಪರಿಸರ ತಜ್ಞರು ಈ ಹಿಂದೆಯೇ ಎಚ್ಚರಿಸಿದ್ದರು. ಹಾಗಿದ್ದೂ, ಈ ಯಾವುದೇ ಚಟುವಟಿಕೆಗಳಿಗೆ ತಡೆ ಬಿದ್ದಿರಲಿಲ್ಲ.

ದೇವಭೂಮಿಯಾಗಿರುವ ಉತ್ತರಾಖಂಡದಲ್ಲಿ ಅಭಿವೃದ್ಧಿಯ ನೆಪದಲ್ಲಿ ಅಣೆಕಟ್ಟುಗಳ , ಹೆದ್ದಾರಿಗಳ ನಿರ್ಮಾಣ, ಗಣಿಗಾರಿಕೆಗಳು ಎಗ್ಗಿಲ್ಲದೇ ಸಾಗುತ್ತಿವೆ. ಇದರ ಪರಿಣಾಮ ಎಷ್ಟು ಭೀಕರವಾಗಿರುತ್ತದೆ ಎಂಬುದು 2013ರಲ್ಲೇ ನಮಗೆಲ್ಲ ಗೊತ್ತಾಗಿದೆ. ಅಂದು ಮೇಘಸ್ಫೋಟ ಸಂಭವಿಸಿ ನದಿಗಳು ಉಕ್ಕಿ ಹರಿದು ಸಾವಿರಾರು ಜನರು ಮೃತಪಟ್ಟಿದ್ದರು. ಬಹುಶಃ ಜೋಶಿಮಠ ಪಟ್ಟಣ ಮುಳುಗತ್ತಿರುವುದು ಅದರ ಮುಂದುವರಿದ ಭಾಗವೇ ಆಗಿರಬಹುದು ಮತ್ತು ನಿಸರ್ಗವು ಸೂಚ್ಯವಾಗಿ ನಮಗೆ ಎಚ್ಚರಿಕೆಯನ್ನು ನೀಡುತ್ತಿರಬಹುದು. ಈ ಪ್ರಾಕೃತಿಕ ಸಂಕೇತಗಳನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ.

”ಭೂಮಿಯು ಮಾನವನ ಆಸೆಗಳನ್ನು ಪೂರೈಸಬಲ್ಲದೇ ಹೊರತು ದುರಾಸೆಗಳನ್ನಲ್ಲ” ಎಂಬ ಮಹಾತ್ಮ ಗಾಂಧಿ ಅವರ ನುಡಿ ಅಕ್ಷರಶಃ ಸತ್ಯ. ನಮ್ಮ ಅಗತ್ಯಗಳನ್ನು ಪೂರೈಸುವ ಶಕ್ತಿ ನಿಸರ್ಗಕ್ಕೆ ಇದೆ. ಆದರೆ, ನಮ್ಮ ದುರಾಸೆಯ ಕಾರಣಕ್ಕೆ ನಿಸರ್ಗದ ನಿಯಮಗಳನ್ನು ಬದಲಿಸುತ್ತಿದ್ದೇವೆ. ಇದರ ಪರಿಣಾಮವು ನಮ್ಮ ಕರ್ನಾಟಕದಲ್ಲೂ ಆಗಿದೆ. ಕೆಲವು ವರ್ಷಗಳ ಹಿಂದೆ ಕರ್ನಾಟಕದ ಕಾಶ್ಮೀರ ಎನಿಸಿರುವ ಕೊಡಗಿನಲ್ಲಿ ಭಾರಿ ಭೂಕುಸಿತ ಸಂಭವಿಸಿ ಹಲವರು ಮೃತಪಟ್ಟಿದ್ದರು. ಎಲ್ಲೆಂದರಲ್ಲಿ ಅಲ್ಲಿ ಕುಸಿಯುತ್ತಿದ್ದ ಬೆಟ್ಟಗುಡ್ಡಗಳಿಂದಾಗಿ ಊರಿಗೇ ಊರೇ ನಾಮಾವಶೇಷವಾದ ಉದಾಹರಣಗಳೇ ಇವೆ. ಅರಣ್ಯ ಪ್ರದೇಶದಲ್ಲಿ ಮಾನವನ ಅತಿಯಾದ ಹಸ್ತಕ್ಷೇಪವು ಇದಕ್ಕೆ ಕಾರಣ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಕೊಡಗಿನಲ್ಲಿ ಮಾತ್ರವಲ್ಲ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳೂ ಅನಾರೋಗ್ಯಕರ ಪ್ರವಾಸೋದ್ಯಮ ಹಾವಳಿಗೆ ತತ್ತರಿಸುತ್ತಿವೆ. ಪ್ರವಾಸೋದ್ಯಮ ಬೆಳೆಯಬೇಕು; ಪ್ರವಾಸಿಧಾಮಗಳು ಅಭಿವೃದ್ಧಿಗೊಳ್ಳಬೇಕು. ಆದರೆ ಇದಕ್ಕೊಂದು ಲಕ್ಷ್ಮಣ ರೇಖೆ ಹಾಕಿಕೊಳ್ಳಬೇಕು. ಪ್ರವಾಸೋದ್ಯಮ ಬೆಳವಣಿಗೆ ಪರಿಸರಕ್ಕೆ ಮಾರಕವಾಗದೆ ಪೂರಕವಾಗಿರಬೇಕು. ಇಲ್ಲದೇ ಹೋದರೆ ಜೋಶಿಮಠದಲ್ಲಿ ಈಗ ಆಗುತ್ತಿರುವುದು ಉಳಿದ ಪ್ರವಾಸಿಧಾಮಗಳಲ್ಲೂ ಆಗಬಹುದು. ಹಾಗಾಗಿ, ಸರ್ಕಾರಗಳು ಈ ನಿಟ್ಟಿನಲ್ಲಿ ಯೋಚಿಸಿ, ಸ್ಪಷ್ಟವಾದ ನೀತಿಯನ್ನು ರೂಪಿಸಬೇಕು. ಅಭಿವೃದ್ಧಿ ಮತ್ತು ಪರಿಸರ ರಕ್ಷಣೆ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ | ಮಕ್ಕಳ ಶಾಲಾ ಪ್ರವಾಸ ಸುರಕ್ಷಿತವಾಗಿರಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabah Election : ತಮಿಳುನಾಡಿನಲ್ಲಿ ಕತ್ತೆಗಳ ಮೂಲಕ ಹಳ್ಳಿಗಳಿಗೆ ಇವಿಎಂ ತಲುಪಿಸಿದ ಅಧಿಕಾರಿಗಳು!

Lok Sabah Election: ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ದಿಂಡಿಗಲ್ ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಗಳಿಗೆ ಕತ್ತೆಗಳು ಮೇಲೇರಿಸಿ ಇವಿಎಂಗಳನ್ನು ಸಾಗಿಸಲಾಗಿದೆ ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಸಂಸ್ಥೆ ಎಎನ್ಐ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

VISTARANEWS.COM


on

Lok Sabah Election
Koo

ಚೆನ್ನೈ: ತಮಿಳುನಾಡಿನ ಎಲ್ಲ 39 ಲೋಕಸಭಾ ಕ್ಷೇತ್ರಗಳಿಗೆ (Lok Sabah Election) ಏಪ್ರಿಲ್ 19ರಂದು ಮತದಾನ ನಡೆಯಲಿದೆ. ಇದು 17ನೇ ಲೋಕಸಭೆಗೆ ಮೊದಲ ಹಂತದ ಚುನಾವಣಾ ಪ್ರಕ್ರಿಯೆಯಾಗಿದೆ. ಮತದಾನಕ್ಕಾಗಿ ಅಧಿಕಾರಿಗಳು ಸಕಲ ಸಿದ್ದತೆ ನಡೆಸಲಾಗಿದ್ದು, ಬೂತ್​ಗಳಿಗೆ ಇವಿಎಂ ಯಂತ್ರಗಳು ತಲುಪಿವೆ. ಏತನ್ಮಧ್ಯೆ ತಮಿಳುನಾಡಿನಲ್ಲಿ ಮತದಾನದ ಒಂದು ದಿನ ಮುಂಚಿತವಾಗಿ ಕತ್ತೆಗಳ ಮೂಲಕ ಇವಿಎಂಗಳನ್ನು ದೂರದ ಪ್ರದೇಶಗಳಿಗೆ ಸಾಗಿಸುವ ವೀಡಿಯೊವೊಂದು ವೈರಲ್ ಆಗಿದೆ. ಇದು ರಸ್ತೆ ಮೂಲಸೌಕರ್ಯದ ಕೊರತೆಯ ಚರ್ಚೆಯನ್ನು ಹುಟ್ಟುಹಾಕಿದೆ.

ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ದಿಂಡಿಗಲ್ ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಗಳಿಗೆ ಕತ್ತೆಗಳು ಮೇಲೇರಿಸಿ ಇವಿಎಂಗಳನ್ನು ಸಾಗಿಸಲಾಗಿದೆ ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಸಂಸ್ಥೆ ಎಎನ್ಐ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಸ್ಥಳೀಯರು ಇವಿಎಂಗಳನ್ನು ಲೋಡ್ ಮಾಡುವುದನ್ನು ಮತ್ತು ನಂತರ ಇವಿಎಂಗಳನ್ನು ಕತ್ತೆಗಳಿಗೆ ಕಟ್ಟುವುದನ್ನು ವೀಡಿಯೊದಲ್ಲಿ ಕಾಣಬಹುದು. ವೀಡಿಯೊ ಮುಂದುವರಿಯುತ್ತಿದ್ದಂತೆ, ಕತ್ತೆಗಳು ಬಿಗಿ ಭದ್ರತೆಯಲ್ಲಿ ಇವಿಎಂಗಳನ್ನು ಹೊತ್ತುಕೊಂಡು ಹೋಗುವುದನ್ನು ನೋಡಬಹುದು.

ಏಜೆನ್ಸಿ ಏಪ್ರಿಲ್ 18 ರಂದು ವೀಡಿಯೊವನ್ನು ಹಂಚಿಕೊಂಡಿದೆ. ಅಲ್ಲಿಂದ ಅದು 41,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಕಂಡಿದೆ. ಅದೆರ ಸಂಖ್ಯೆಗಳು ಇನ್ನೂ ಹೆಚ್ಚುತ್ತಿವೆ. ಅನೇಕರು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಪೋಸ್ಟ್ ನ ಕಾಮೆಂಟ್ ವಿಭಾಗವನ್ನು ಬಳಸಿಕೊಂಡಿದ್ದಾರೆ.

“ನಾವು ಗಗನಯಾತ್ರಿಗಳನ್ನು ಚಂದ್ರನಿಗೆ ಕಳುಹಿಸಲು ಸಿದ್ಧರಾಗುತ್ತಿದ್ದೇವೆ. ಆದರೆ ದೂರದ ಪ್ರದೇಶಗಳಲ್ಲಿ ಹೆಲಿಕಾಪ್ಟರ್​ ಮೂಲಕ ಮತ ಪೆಟ್ಟಿಗೆ ತರಲು ಸಾಧ್ಯವಾಗುತ್ತಿಲ್ಲ. ಇಸ್ರೋದ ಆರಂಭಿಕ ದಿನಗಳಲ್ಲಿ ಬೈಸಿಕಲ್​​ಗಳಲ್ಲಿ ರಾಕೆಟ್ ಭಾಗಗಳನ್ನು ಸಾಗಿಸುವ ಚಿತ್ರ ನೆನಪಿರಬಹುದು. ಈ ವೀಡಿಯೊವನ್ನು ನೆನಪಿಟ್ಟುಕೊಳ್ಳಿ” ಎಂದು ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal : ಜಾಮೀನಿಗಾಗಿ ಕುತಂತ್ರ; ಸಿಹಿ ತಿಂಡಿ ತಿಂದು ಸಕ್ಕರೆ ಕಾಯಿಲೆ ಎನ್ನುತ್ತಿರುವ ಕೇಜ್ರಿವಾಲ್​ ಎಂದ ಇಡಿ

“ಇದು ಭಾರತದ ಚುನಾವಣಾ ಆಯೋಗದ ಮೇಲೆ ಕೆಟ್ಟ ಸ್ಥಿತಿಗೆ ಉದಾಹರಣೆ” ಎಂದು ಇನ್ನೊಬ್ಬರು ಹೇಳಿದರು.

ಕಳಪೆ ರಸ್ತೆ ಮೂಲಸೌಕರ್ಯಗಳ ಬಗ್ಗೆ ಅನೇಕರು ಆಡಳಿತಾರೂಢ ಸರ್ಕಾರವನ್ನು ಟೀಕಿಸಿದ್ದಾರೆ. ಒಬ್ಬರು ಇದನ್ನು “ಡಿಎಂಕೆ ಅಭಿವೃದ್ಧಿ” ಎಂದು ಕರೆದಿದ್ದಾರೆ.

ಲೋಕಸಭಾ ಚುನಾವಣೆ 2024: ಮೊದಲ ಹಂತದ ಮತದಾನ

18ನೇ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ಈ ಹಂತದಲ್ಲಿ 21 ರಾಜ್ಯಗಳ ಒಟ್ಟು 102 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಪೈಕಿ ಪುದುಚೇರಿಯ ಏಕೈಕ ಕ್ಷೇತ್ರ ಸೇರಿದಂತೆ ತಮಿಳುನಾಡಿನ 39 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Continue Reading

ತಂತ್ರಜ್ಞಾನ

DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

DRDO Test: ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಮತ್ತೊಂದು ಯಶಸ್ಸು ಲಭಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಒಡಿಶಾ ಕರಾವಳಿಯ ಚಾಂದಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ದೇಶೀಯ ತಂತ್ರಜ್ಞಾನದ ಕ್ರೂಸ್ ಕ್ಷಿಪಣಿ ಯ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ.

VISTARANEWS.COM


on

DRDO
Koo

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಗುರುವಾರ (ಏಪ್ರಿಲ್‌ 18) ಒಡಿಶಾ ಕರಾವಳಿಯ ಚಾಂದಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ITR)ನಿಂದ ದೇಶೀಯ ತಂತ್ರಜ್ಞಾನದ ಕ್ರೂಸ್ ಕ್ಷಿಪಣಿ (ITCM)ಯ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ (DRDO Test).

ಕ್ಷಿಪಣಿ ಹಾರಾಟದ ಪರೀಕ್ಷೆಯ ಎಲ್ಲ ಹಂತಗಳು ನಿರೀಕ್ಷೆಯಂತೆ ನಡೆದವು. ಹಾರಾಟ ಮಾರ್ಗದ ಸಂಪೂರ್ಣ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಲು ವಿವಿಧ ಸ್ಥಳಗಳಲ್ಲಿ ರಾಡಾರ್, ಎಲೆಕ್ಟ್ರೋ-ಆಪ್ಟಿಕಲ್ ಟ್ರ್ಯಾಕಿಂಗ್ ಸಿಸ್ಟಮ್ (Electro-Optical Tracking System) ಮತ್ತು ಟೆಲಿಮೆಟ್ರಿಯಂತಹ ಹಲವಾರು ಶ್ರೇಣಿ ಸಂವೇದಕಗಳನ್ನು ನಿಯೋಜಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಕ್ಷಿಪಣಿಯ ಹಾರಾಟವನ್ನು ಐಎಎಫ್ ಸು-30-ಎಂಕೆ-I (IAF Su-30-Mk-I) ವಿಮಾನದ ಮೂಲಕವೂ ಮೇಲ್ವಿಚಾರಣೆ ನಡೆಸಲಾಯಿತು. “ಕ್ಷಿಪಣಿಯು ವೇಪಾಯಿಂಟ್ ನ್ಯಾವಿಗೇಷನ್ ಬಳಸಿ ನಿರೀಕ್ಷಿತ ಗುರಿಯನ್ನು ತಲುಪಿತು ಮತ್ತು ಅತ್ಯಂತ ಕಡಿಮೆ ಎತ್ತರದ ಹಾರಾಟ ನಡೆಸಿತು” ಎಂದು ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಅಭಿವೃದ್ಧಿ

ವಿಶೇಷ ಎಂದರೆ ಇಡೀ ಕ್ಷಿಪಣಿ ವ್ಯವಸ್ಥೆಯನ್ನು ಬೆಂಗಳೂರಿನಲ್ಲಿರುವ ಡಿಆರ್‌ಡಿಒ ಸಂಗಸಂಸ್ಥೆಯಾದ ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಎಸ್ಟಾಬ್ಲಿಷ್‌ಮೆಂಟ್‌ (ADE) ಅಭಿವೃದ್ಧಿಪಡಿಸಿದೆ. ಜತೆಗೆ ಇತರ ಪ್ರಯೋಗಾಲಯಗಳು ಮತ್ತು ಉದ್ದಿಮೆಗಳೂ ಈ ಮಹತ್ತರ ಕಾರ್ಯದಲ್ಲಿ ಕೈ ಜೋಡಿಸಿವೆ ಎಂದು ಮೂಲಗಳು ತಿಳಿಸಿವೆ. ಐಟಿಸಿಎಂನ ಯಶಸ್ವಿ ಪರೀಕ್ಷೆಗಾಗಿ ಡಿಆರ್‌ಡಿಒವನ್ನು ಅಭಿನಂದಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ದೇಶೀಯ ತಂತ್ರಜ್ಞಾನದ ಕ್ರೂಸ್ ಕ್ಷಿಪ ಯಶಸ್ವಿ ಅಭಿವೃದ್ಧಿಯು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಗೆ ಪ್ರಮುಖ ಮೈಲಿಗಲ್ಲಾಗಿದೆ” ಎಂದು ಹೇಳಿದ್ದಾರೆ. ಜತೆಗೆ ರಕ್ಷಣಾ ಇಲಾಖೆ ಕಾರ್ಯದರ್ಶಿ ಮತ್ತು ಡಿಆರ್‌ಡಿಒ ಅಧ್ಯಕ್ಷ ಡಾ.ಸಮೀರ್ ವಿ. ಕಾಮತ್ ಕೂಡ ಇಡೀ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ.

ʼʼಐಟಿಸಿಎಂ ಕ್ಷಿಪಣಿಯು ಉತ್ತಮ ಮತ್ತು ಹೆಚ್ಚು ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ಸುಧಾರಿತ ಏವಿಯಾನಿಕ್ಸ್ ಮತ್ತು ಸಾಫ್ಟ್‌ವೇರ್‌ ಅನ್ನು ಸಹ ಹೊಂದಿದೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬ್ಯಾಲಿಸ್ಟಿಕ್‌ ಕ್ಷಿಪಣಿ ಅಗ್ನಿ- ಪ್ರೈಮ್‌ ಯಶಸ್ವಿ ಪರೀಕ್ಷೆ

ಕೆಲವು ದಿನಗಳ ಹಿಂದೆ ಭಾರತವು ಹೊಸ ತಲೆಮಾರಿನ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-ಪ್ರೈಮ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿತ್ತು. ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಇದರ ಪರೀಕ್ಷಾರ್ಥ ಹಾರಾಟ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. ಪರೀಕ್ಷೆಯು ಎಲ್ಲಾ ಪ್ರಯೋಗದ ಉದ್ದೇಶಗಳನ್ನು ಪೂರೈಸಿದ್ದು, ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು ದೃಢೀಕರಿಸಿದೆ. ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾದ ಹಲವಾರು ಶ್ರೇಣಿಯ ಸೆನ್ಸರ್‌ಗಳಿಂದ ಸೆರೆಹಿಡಿಯಲಾದ ಡೇಟಾಗಳು ಇದನ್ನು ದೃಢೀಕರಿಸಿವೆ.

“ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (ಎಸ್‌ಎಫ್‌ಸಿ), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಜೊತೆಗೆ ಹೊಸ ಪೀಳಿಗೆಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-ಪ್ರೈಮ್‌ನ ಯಶಸ್ವಿ ಹಾರಾಟ- ಪರೀಕ್ಷೆಯನ್ನು ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಏಪ್ರಿಲ್ 3ರಂದು ಸುಮಾರು 7 ಗಂಟೆಗೆ ನಡೆಸಿತು,” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Mission Divyastra : ಏನಿದು ಮಿಷನ್​ ದಿವ್ಯಾಸ್ತ್ರ, ಸೇನೆ ಸೇರಲಿರುವ ಹೊಸ ಅಸ್ತ್ರ? ಇಲ್ಲಿದೆ ಪೂರ್ಣ ಮಾಹಿತಿ

Continue Reading

ಪ್ರಮುಖ ಸುದ್ದಿ

ಜಗದ ಜನರ ಕೈಗಳಲ್ಲಿ ಮಿನುಗುವ ಮೊಬೈಲ್ ಫೋನುಗಳಲ್ಲೀಗ ಮೇಕ್ ಇನ್ ಇಂಡಿಯಾದ್ದೇ ಮೊಹರು!

Make in India: ಭಾರತದಲ್ಲಿ ಆ್ಯಪಲ್ ಫೋನುಗಳ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 15 ಬಿಲಿಯನ್ ಡಾಲರುಗಳ ಮೊತ್ತದ ಮೊಬೈಲ್ ಫೋನ್ ರಫ್ತು ವಹಿವಾಟು ನಡೆಸಿದೆ ಭಾರತ. ಇದರಲ್ಲಿ ಭಾರತಲ್ಲಿಯೇ ಉತ್ಪಾದಿಸುತ್ತಿರುವ ಆ್ಯಪಲ್ ಐಫೋನ್ ಬ್ರ್ಯಾಂಡಿನ ಕೊಡುಗೆಯೂ ದೊಡ್ಡದಿದೆ. ಈ ಪೈಕಿ 10 ಬಿಲಿಯನ್ ಡಾಲರುಗಳ ವಹಿವಾಟು ಆ್ಯಪಲ್‌ನಿಂದಲೇ ಬಂದಿದೆ ಎನ್ನುವುದು ವಿಶೇಷ. 2014ರಲ್ಲಿ ಕೇವಲ ಎರಡು ಮೊಬೈಲ್ ಫೋನ್ ಉತ್ಪಾದನಾ ಘಟಕಗಳು ಭಾರತದಲ್ಲಿದ್ದವು. ಈಗವು 200 ದಾಟಿವೆ.

VISTARANEWS.COM


on

Make In India
Koo

| ಚೈತನ್ಯ ಹೆಗಡೆ
ಭಾರತವು ಈ ಬಾರಿ ಪುಷ್ಕಳವಾದ ಆ್ಯಪಲ್ ಬೆಳೆ ತೆಗೆದಿದೆ. ಕಾಶ್ಮೀರದಲ್ಲೋ, ಹಿಮಾಚಲದಲ್ಲೋ ಬೆಳೆಯುವ ಸೇಬಿನ ಬಗ್ಗೆ ಮಾತನಾಡುತ್ತಿಲ್ಲ. ಬದಲಿಗೆ ಭಾರತದಲ್ಲಿ ತಯಾರಿಕೆ ಆಗುತ್ತಿರುವ ಆ್ಯಪಲ್ ಫೋನುಗಳ ಬಗೆಗಿನ ವಿದ್ಯಮಾನ ಇದು.

ಈ ವಿದ್ಯಮಾನವು ಎರಡು ಅಂಶಗಳನ್ನು ವಿಜೃಂಭಿಸುತ್ತಿದೆ. ಮೊದಲನೆಯದು, ಚೀನಾದ ಹೊರತಾಗಿಯೂ ಏಷ್ಯದಲ್ಲಿ ತನ್ನ ಪೂರೈಕೆ ಜಾಲ ಇರಬೇಕು ಎಂದು ಭಾರತದಲ್ಲಿ ತನ್ನ ಬೇರುಗಳನ್ನು ಗಟ್ಟಿಗೊಳಿಸಿದ್ದ ಆ್ಯಪಲ್ ಕಂಪನಿಯ ನಿರ್ಧಾರ ಸರಿ ಇದೆ ಎಂಬುದನ್ನು ಈ ವಿದ್ಯಮಾನ ಸಾರುವ ಮೂಲಕ, ಚೀನಾದಿಂದ ತಮ್ಮ ಉತ್ಪಾದಕ ಘಟಕಗಳನ್ನು ಹಂತ-ಹಂತವಾಗಿ ಬೇರೆಡೆಗೆ ಸ್ಥಳಾಂತರಿಸಲು ಬಯಸುತ್ತಿರುವ ಪಾಶ್ಚಾತ್ಯ ಕಂಪನಿಗಳಿಗೆ, ಭಾರತವೇ ಅದಕ್ಕೆ ಪ್ರಶಸ್ತ ಸ್ಥಳ ಎಂಬುದನ್ನು ಹೇಳುತ್ತಿದೆ. ಎರಡನೆಯದಾಗಿ, 2014ರಿಂದೀಚೆಗೆ ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಭಾರತ ದಾಖಲಿಸುತ್ತಿರುವ ಅತಿದೊಡ್ಡ ಯಶೋಗಾಥೆಗೆ ಈ ವಿದ್ಯಮಾನವು ಮತ್ತಷ್ಟು ಮೆರಗು ತುಂಬಿದೆ.

2023-24ರ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 15 ಬಿಲಿಯನ್ ಡಾಲರುಗಳ ಮೊತ್ತದ ಮೊಬೈಲ್ ಫೋನ್ ರಫ್ತು ವಹಿವಾಟು ನಡೆಸಿದೆ ಭಾರತ. ಇದರಲ್ಲಿ ಭಾರತಲ್ಲಿಯೇ ಉತ್ಪಾದಿಸುತ್ತಿರುವ ಆ್ಯಪಲ್ ಐಫೋನ್ ಬ್ರ್ಯಾಂಡಿನ ಕೊಡುಗೆಯೂ ದೊಡ್ಡದಿದೆ. ಈ ಪೈಕಿ 10 ಬಿಲಿಯನ್ ಡಾಲರುಗಳ ವಹಿವಾಟು ಆ್ಯಪಲ್‌ನಿಂದಲೇ ಬಂದಿದೆ.

2014ರಲ್ಲಿ ಕೇವಲ ಎರಡು ಮೊಬೈಲ್ ಫೋನ್ ಉತ್ಪಾದನಾ ಘಟಕಗಳು ಭಾರತದಲ್ಲಿದ್ದವು. ಈಗವು 200 ದಾಟಿವೆ. ಜಗತ್ತಿನ ಎರಡನೇ ದೊಡ್ಡ ಮೊಬೈಲ್ ಫೋನ್ ಉತ್ಪಾದಕ ರಾಷ್ಟ್ರವಾಗಿ ಭಾರತ ಗುರುತಿಸಿಕೊಂಡಿದೆ. ಇಂಡಿಯಾ ಸೆಲ್ಯುಲಾರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಅಸೋಸಿಯೇಶನ್ (ಐಸಿಇಎ) ವರದಿಯ ಪ್ರಕಾರ ಭಾರತದ ಮೊಬೈಲ್ ಫೋನ್ ಉತ್ಪಾದನಾ ಸಾಮರ್ಥ್ಯ ಈ ಹತ್ತು ವರ್ಷಗಳಲ್ಲಿ 21 ಪಟ್ಟು ಹೆಚ್ಚಾಗಿದೆ. 2014-15ರಲ್ಲಿ 18,900 ಕೋಟಿ ರುಪಾಯಿಗಳ ಮೌಲ್ಯದ ಮೊಬೈಲ್ ಫೋನ್ ಗಳನ್ನು ಭಾರತ ಉತ್ಪಾದಿಸಿತ್ತು. 2023-24ರ ವಿತ್ತೀಯ ವರ್ಷದಲ್ಲಿ ಈ ಸಂಖ್ಯೆ ಎಲ್ಲಿಗೆ ಹೋಗಿ ಮುಟ್ಟಿದೆ ಗೊತ್ತೇ? ಬರೋಬ್ಬರಿ 4,10,000 ಕೋಟಿ ರೂ!

ಇವತ್ತಿಗೆ ಭಾರತದಲ್ಲಿ ಬಳಕೆಯಾಗುತ್ತಿರುವ ಮೊಬೈಲ್ ಫೋನುಗಳ ಪೈಕಿ ಶೇ. 97ರಷ್ಟು ಭಾರತದಲ್ಲೇ ತಯಾರಾದಂಥವುಗಳು. ಇವತ್ತು ಮೊಬೈಲ್ ಫೋನ್ ರಫ್ತು 15 ಬಿಲಿಯನ್ ಡಾಲರುಗಳ ಮೌಲ್ಯದ್ದಾಗಿ ಬೆಳೆಸಿರುವ ಭಾರತ 2014-15ರ ವೇಳೆಗೆ ರಫ್ತು ಮಾಡಿದ್ದ ಮೊಬೈಲ್ ಫೋನ್ ಮೌಲ್ಯ 1,556 ಕೋಟಿ ರೂ. ಮಾತ್ರ.

ನಿಮ್ಮ ಕೈಯಲ್ಲಿ ಹಿಡಿದಿರುವ ಮೊಬೈಲ್ ಫೋನ್ ವಿದೇಶಿ ಕಂಪನಿಯದ್ದೇ ಆಗಿರಬಹುದು. ಆ್ಯಪಲ್, ಸ್ಯಾಮ್ಸಂಗ್, ಒಪ್ಪೊ, ವಿವೊ, ಶಾಮಿ ಹೀಗೆ ಫೋನ್ ಯಾವುದೇ ಆಗಿದ್ದರೂ ಉತ್ಪಾದನೆ ಭಾರತದಲ್ಲೇ ಆಗಿರುತ್ತದೆ. ಈ ಹಂತದಲ್ಲಿ ಒಂದು ಪ್ರಶ್ನೆ ಹಲವರು ಕೇಳುವುದಿದೆ. ಇವೆಲ್ಲ ಏನೇ ಇದ್ದರೂ ಭಾರತದ್ದೇ ಒಂದು ಮೊಬೈಲ್ ಫೋನ್ ಉತ್ಪಾದನೆಯ ಬ್ರ್ಯಾಂಡ್‌ ಇಲ್ಲವಲ್ಲ ಎಂದು. ಅದು ಸೆಲ್ ಫೋನ್ ಉತ್ಪಾದನೆ ಇದ್ದಿರಬಹುದು, ಕಾರು ಇಲ್ಲವೇ ಮತ್ಯಾವುದೇ ತಂತ್ರಜ್ಞಾನ ಒಳಗೊಂಡ ಉತ್ಪಾದನೆಯೇ ಇದ್ದಿರಬಹುದು…ದೇಶವೊಂದು ಹಂತ-ಹಂತಗಳಲ್ಲಿ ಒಂದು ವಲಯವನ್ನು ತನ್ನದಾಗಿಸಿಕೊಳ್ಳುತ್ತದೆ. ಉದಾಹರಣೆಗೆ, ಮೊಬೈಲ್ ಉತ್ಪಾದನೆಯನ್ನೇ ತೆಗೆದುಕೊಂಡರೆ, ಆ ಕೌಶಲವನ್ನು ಅದಾಗಲೇ ಸಿದ್ಧಿಸಿಕೊಂಡಿರುವ ಕಂಪನಿಗಳು ಭಾರತದಲ್ಲೇ ಉತ್ಪಾದನೆ ಮಾಡುವಂತೆ ಮಾಡುವುದು ಮೊದಲ ಹೆಜ್ಜೆ. ಆ ಕಂಪನಿಗಳು ಇಲ್ಲಿ ಬಂದು ಉದ್ಯೋಗ ಸೃಷ್ಟಿಸುತ್ತವೆ. ಆ ಕೌಶಲಗಳನ್ನು ತಮ್ಮದಾಗಿಸಿಕೊಂಡ ಭಾರತೀಯ ಕೆಲಸಗಾರರ ಪ್ರತಿಭಾಪುಂಜವೊಂದು ಸಿದ್ಧಗೊಳ್ಳುತ್ತದೆ. ಮೊಬೈಲ್ ಫೋನ್ ಸಿದ್ಧಪಡಿಸಲು ಬೇಕಾಗುವ ಯಂತ್ರಗಳು ಭಾರತಕ್ಕೆ ಬರುತ್ತವೆ. ಅದಕ್ಕೆ ಬೇಕಾದ ಕಚ್ಚಾವಸ್ತುಗಳ ಪೂರೈಕೆ ಜಾಲವೊಂದು ಜಗತ್ತಿನ ನಾನಾ ಕಡೆಗಳಿಂದ ಭಾರತಕ್ಕೆ ಮುಖಮಾಡುತ್ತದೆ. ಹೀಗೆಲ್ಲ ಆದ ನಂತರದಲ್ಲಿ ಭಾರತೀಯ ಕಂಪನಿಗಳೇ ತಯಾರಿಕೆಗಳಲ್ಲಿ ಮುಂದೆ ಬರುವುದಕ್ಕೆ ಅನುಕೂಲಕರ ವಾತಾವರಣ ಹುಟ್ಟುತ್ತದೆ. ಚೀನಾದಂಥ ದೇಶಗಳು ಅಲ್ಲಿನ ಏಕೀಕೃತ ರಾಜಕೀಯ ವ್ಯವಸ್ಥೆ ರೂಪಿಸಿಕೊಂಡು ಈ ಪ್ರಕ್ರಿಯೆಯನ್ನು ವೇಗಗೊಳಿಸಿದ ಹಾಗೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತ್ವರಿತಗೊಳಿಸಲಾಗುವುದಿಲ್ಲ.

ಅದೇನೇ ಇರಲಿ. ಮೊಬೈಲ್ ಫೋನ್ ತಯಾರಿಕಾ ವಲಯವು ಭಾರತದಲ್ಲಿ ಬೃಹತ್ ಆಗಿ ಅಭಿವೃದ್ಧಿ ಹೊಂದಿದ ಪರಿಣಾಮವಾಗಿ ಅದು ಕನಿಷ್ಠ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಿತು. ಆ್ಯಪಲ್ ಕಂಪನಿಯೊಂದೇ ಸುಮಾರು 1 ಲಕ್ಷ ಉದ್ಯೋಗಗಳನ್ನು ಭಾರತದಲ್ಲಿ ತನ್ನ ಉತ್ಪಾದನಾ ಚಟುವಟಿಕೆಯಿಂದ ಸೃಜಿಸಿತು.

ಇದನ್ನೂ ಓದಿ: Indian Navy Power: ಸೊಮಾಲಿಯಾದ ಕಡಲ್ಗಳ್ಳರನ್ನು ಬಗ್ಗುಬಡಿದು ಜಗತ್ತಿಗೆ ಸಂದೇಶ ನೀಡಿದೆ ಭಾರತದ ಕ್ಷಾತ್ರ!

2017ರಲ್ಲಿ ಕೇಂದ್ರ ಸರ್ಕಾರವು ಪೇಸ್ಡ್ ಮನುಫ್ಯಾಕ್ಟರಿಂಗ್ ಪ್ರೊಗ್ರಾಂ ಅಡಿಯಲ್ಲಿ ಮೊಬೈಲ್ ಫೋನಿಗೆ ಸಂಬಂಧಿಸಿದ ಹೆಡ್ಸೆಟ್, ಚಾರ್ಜರ್, ಸರ್ಕಿಟ್ ಬೋರ್ಡ್ ಇತ್ಯಾದಿಗಳಿಗೆ ದೇಸಿ ಉತ್ಪಾದನೆಗೆ ಪೂರಕವಾಗುವಂತೆ ಅವಕ್ಕೆ ಬೇಕಾದ ಕಚ್ಚಾವಸ್ತುಗಳ ಸುಂಕಗಳನ್ನು ಪರಿಷ್ಕರಿಸಿತು. ಭಾರತದಲ್ಲೇ ಮೊಬೈಲ್ ಫೋನ್ ತಯಾರಿಕೆ ಘಟಕಗಳನ್ನು ಇಟ್ಟುಕೊಳ್ಳುವುದು ಕಂಪನಿಗಳಿಗೆ ಆಕರ್ಷಕವಾಗುವಂತೆ ಮಾಡಲಾಯಿತು. ಮುಂದಿನ ಹಂತದಲ್ಲಿ, 2021-22ರಲ್ಲಿ ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಪಿ ಎಲ್ ಐ ಸ್ಕೀಮ್, ಅಂದರೆ ಉತ್ಪಾದನೆ ಆಧರಿತ ಉತ್ತೇಜನ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿತು. ಹೆಸರೇ ಹೇಳುವಂತೆ ಉತ್ಪಾದನೆ ಹೆಚ್ಚಿಸಿಕೊಂಡಷ್ಟೂ ಕಂಪನಿಗಳಿಗೆ ಇಲ್ಲಿ ಹಣಕಾಸು ಲಾಭಗಳು ದೊರೆಯುತ್ತವೆ. ಸ್ಯಾಮ್ಸಂಗ್, ವಿಸ್ತ್ರಾನ್, ಫಾಕ್ಸಕಾನ್ ಇತ್ಯಾದಿ ಕಂಪನಿಗಳು ಈ ಪಿ ಎಲ್ ಐ ಯೋಜನೆಯಡಿ ಬಂದಿವೆ. ಐದು ವರ್ಷಗಳ ಅವಧಿಯಲ್ಲಿ, ಮೊಬೈಲ್ ಫೋನುಗಳ ಉತ್ಪಾದನೆ ವಿಭಾಗಲ್ಲಿ ಇದರಿಂದ ಎರಡು ಲಕ್ಷ ನೇರ ಉದ್ಯೋಗಗಳು ಹಾಗೂ 6 ಲಕ್ಷ ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗುವ ಅಂದಾಜಿದೆ.

ಇದನ್ನೂ ಓದಿ: Pak Afghan Conflict: ಸಡಿಲವಾಯ್ತು ಆಫ್ಘಾನ್‌ನೊಂದಿಗಿನ ಪಾಕ್‌ ಸಖ್ಯ, ತಾಲಿಬಾನಿಗಳಿಗೂ ಈಗ ಭಾರತವೇ ಮುಖ್ಯ!

ಈ ವಿತ್ತೀಯ ವರ್ಷದಲ್ಲಿ ಆ್ಯಪಲ್ ಕಂಪನಿಯ ಚೀನಾ ಘಟಕದಿಂದ ಆಗುತ್ತಿರುವ ಸಾಗಣೆಯಲ್ಲಿ ಕುಸಿತ ಕಂಡಿದ್ದರೆ, ಭಾರತದಲ್ಲಿ ಮಾತ್ರ ಏರಿಕೆ ಕಂಡಿರುವುದು ಗಮನಾರ್ಹ. ಭಾರತದಲ್ಲಿ ಯಾವುದೇ ಕಂಪನಿಗೆ ಆಗುವ ಶ್ರೇಯೋವೃದ್ಧಿ ಅದು ಇಲ್ಲಿ ತನ್ನ ಹೂಡಿಕೆಯನ್ನು ಇನ್ನಷ್ಟು ಹೆಚ್ಚಿಸುವುದಕ್ಕೆ, ಆರ್ಥಿಕ ಚಟುವಟಿಕೆಯಲ್ಲಿ ಮತ್ತಷ್ಟು ತೊಡಗಿಕೊಳ್ಳುವುದಕ್ಕೆ ಕಾರಣವಾಗುತ್ತದೆ. ಉದಾಹರಣೆಗೆ, ಆ್ಯಪಲ್ ಅದಾಗಲೇ ತನ್ನ ಫೋನಿನಲ್ಲಿ ಬಳಸುವ ಕೆಮರಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಭಾರತದಲ್ಲೇ ರೂಪಿಸುವುದಕ್ಕೆ ಟಾಟಾದ ಟೈಟಾನ್ ಸಮೂಹ ಹಾಗೂ ಮುರುಗಪ್ಪ ಸಮೂಹಗಳೊಂದಿಗೆ ಮಾತುಕತೆಯಲ್ಲಿರುವುದಾಗಿ ವರದಿಯಾಗಿದೆ. ಮೊಬೈಲ್ ಫೋನ್ ವಹಿವಾಟು ಎಂದಷ್ಟೇ ಅಲ್ಲದೇ, ಭಾರತದಲ್ಲಿ ನವೀಕೃತ ಇಂಧನ ಮೂಲಗಳ ವಿಸ್ತರಣೆಗೆ ಸಹಕರಿಸಿ ಇಂಗಾಲ ವಿಸರ್ಜನೆ ತಗ್ಗಿಸಿದ ಶ್ರೇಯಸ್ಸು ಪಡೆಯುವುದಕ್ಕಾಗಿ ಆ್ಯಪಲ್ ಕಂಪನಿಯು ಕ್ಲೀನ್ ಮ್ಯಾಕ್ಸ್ ಎಂಬ ನವೀಕೃತ ಇಂಧನಕ್ಕೆ ಸಂಬಂಧಿಸಿದ ಉದ್ದಿಮೆ ಜತೆ ಕೈಜೋಡಿಸಿದೆ. ಭಾರತದಾದ್ಯಂತ 6 ಕೈಗಾರಿಕಾ ಘಟಕಗಳ ಮೇಲೆ ಸೌರಫಲಕಗಳನ್ನು ಅಳವಡಿಸಿ, 14.4 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನೆ ಸಾಮರ್ಥ್ಯವನ್ನು ಈ ಪ್ರಯತ್ನ ಹುಟ್ಟು ಹಾಕಿದೆ.

ಮೊಬೈಲ್ ಫೋನುಗಳ ಉತ್ಪಾದನೆ ಮತ್ತು ವಹಿವಾಟುಗಳಲ್ಲಿ ಆಗುತ್ತಿರುವ ಈ ಅಭಿವೃದ್ಧಿ ಭಾರತದ ಒಟ್ಟಾರೆ ಎಲೆಕ್ಟ್ರಾನಿಕ್ ವಲಯಕ್ಕೆ ಹೊಸ ಸಾಮರ್ಥ್ಯ ಕೊಟ್ಟಿದೆ. ಮೊಬೈಲ್ ಫೋನುಗಳ ರಫ್ತಿನಲ್ಲಾಗಿರುವ ಹೆಚ್ಚಳವು ಒಟ್ಟಾರೆ ಭಾರತದ ಎಲೆಕ್ಟ್ರಾನಿಕ್ಸ್ ವಲಯದಲ್ಲೂ ಬಿಂಬಿಸಿದೆ. ಹಿಂದಿನ ವಿತ್ತೀಯ ವರ್ಷದಲ್ಲಿ 23.55 ಬಿಲಿಯನ್ ಡಾಲರುಗಳ ಮೌಲ್ಯದ ಎಲೆಕ್ಟ್ರಾನಿಕ್ಸ್ ರಫ್ತಾಗಿದ್ದರೆ ಈ ಬಾರಿ ಅದು 29.12 ಬಿಲಿಯನ್ ಡಾಲರುಗಳಿಗೆ ಹೆಚ್ಚಳವಾಗಿದೆ.

ಇದನ್ನೂ ಓದಿ: Narendra Modi: ಟ್ವಿಟರ್-ವಾಟ್ಸಾಪ್ ಹಳೇದಾಯ್ತು; ಈ ಬಾರಿ ಮೋದಿ ಚುನಾವಣೆ ಪ್ರಚಾರಕ್ಕೆ ʼಭಾಷಿಣಿʼಯ ಬಲ!

ಮೇಕ್ ಇನ್ ಇಂಡಿಯಾ ಕೆಲಸ ಮಾಡುತ್ತಿದೆಯಾ ಎಂದು ಕೇಳುವವರು ನೋಡಲೇಬೇಕಾದ ಯಶೋಗಾಥೆ ಭಾರತದ ಮೊಬೈಲ್ ಫೋನುಗಳ ಉತ್ಪಾದನೆಯದ್ದು.

Continue Reading

ವಾಣಿಜ್ಯ

Infosys Q4 Result: ಇನ್ಫೋಸಿಸ್‌ಗೆ 7,969 ಕೋಟಿ ರೂ. ನಿವ್ವಳ ಲಾಭ; 28 ರೂ.ಗಳ ಡಿವಿಡೆಂಡ್‌ ಘೋಷಣೆ

Infosys Q4 Result: ಐಟಿ ದಿಗ್ಗಜ ಇನ್ಫೋಸಿಸ್ ನಾಲ್ಕನೇ ಹಣಕಾಸು ತ್ರೈಮಾಸಿಕದಲ್ಲಿ 7,969 ಕೋಟಿ ರೂ.ಗಳ ನಿವ್ವಳ ಲಾಭ ಪಡೆದುಕೊಂಡಿದೆ. ಇದರ ಜತೆಗೆ ಕಂಪೆನಿಯು 2024ರ ಹಣಕಾಸು ವರ್ಷದಲ್ಲಿ ಪ್ರತಿ ಷೇರಿಗೆ 28 ರೂ.ಗಳ ಅಂತಿಮ ಲಾಭಾಂಶವನ್ನು ಘೋಷಿಸಿದೆ. ಇದರಲ್ಲಿ ಪ್ರತಿ ಷೇರಿಗೆ 8 ರೂ.ಗಳ ವಿಶೇಷ ಡಿವಿಡೆಂಡ್‌ ಕೂಡ ಸೇರಿದೆ. ಲಾಭಾಂಶ (ಡಿವಿಡೆಂಡ್‌)ವನ್ನು 2024ರ ಜುಲೈ 1ರಂದು ಪಾವತಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Infosys
Koo

ಬೆಂಗಳೂರು: ಐಟಿ ದಿಗ್ಗಜ ಇನ್ಫೋಸಿಸ್ (Infosys) ನಾಲ್ಕನೇ ಹಣಕಾಸು ತ್ರೈಮಾಸಿಕದಲ್ಲಿ 7,969 ಕೋಟಿ ರೂ.ಗಳ ನಿವ್ವಳ ಲಾಭ ಪಡೆದುಕೊಂಡಿದೆ (Infosys Q4 Result). ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಇನ್ಫೋಸಿಸ್ 6,128 ಕೋಟಿ ರೂ. ಲಾಭ ಹೊಂದಿದೆ.

ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು 37,923 ಕೋಟಿ ರೂ.ಗಳ ಆದಾಯವನ್ನು ವರದಿ ಮಾಡಿದೆ. ಇದು 2023ರ ನಾಲ್ಕನೇ ತ್ರೈಮಾಸಿಕದಲ್ಲಿದ್ದ 37,441 ಕೋಟಿ ರೂ.ಗಿಂತ 1.3% ಹೆಚ್ಚಳವನ್ನು ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ. 2025ರ ಹಣಕಾಸು ವರ್ಷದಲ್ಲಿ ಕಂಪೆನಿಯು ಸ್ಥಿರ ಕರೆನ್ಸಿಯಲ್ಲಿ ಶೇ. 1ರಿಂದ ಶೇ. 3ರಷ್ಟು ಆದಾಯದ ಬೆಳವಣಿಗೆಯನ್ನು ನಿರೀಕ್ಷಿಸುತ್ತದೆ. ಕಂಪೆನಿಯು 2024ರ ಹಣಕಾಸು ವರ್ಷದಲ್ಲಿ ಪ್ರತಿ ಷೇರಿಗೆ 28 ರೂ.ಗಳ ಅಂತಿಮ ಲಾಭಾಂಶವನ್ನು ಘೋಷಿಸಿದೆ. ಇದರಲ್ಲಿ ಪ್ರತಿ ಷೇರಿಗೆ 8 ರೂ.ಗಳ ವಿಶೇಷ ಡಿವಿಡೆಂಡ್‌ ಕೂಡ ಸೇರಿದೆ.

“2024ರ ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ಪ್ರತಿ ಷೇರಿಗೆ 20 ರೂ.ಗಳ ಅಂತಿಮ ಲಾಭಾಂಶವನ್ನು ಘೋಷಿಸಲಾಗಿದೆ ಮತ್ತು ಹೆಚ್ಚುವರಿಯಾಗಿ ಪ್ರತಿ ಷೇರಿಗೆ 8 ರೂ.ಗಳ ವಿಶೇಷ ಡಿವಿಡೆಂಟ್‌ ಶಿಫಾರಸು ಮಾಡಲಾಗಿದೆ” ಎಂದು ಇನ್ಫೋಸಿಸ್ ಮೂಲಗಳು ಸೆಬಿ (Securities and Exchange Board of India-SEBI)ಗೆ ಸಲ್ಲಿಸಿದ ಫೈಲಿಂಗ್‌ನಲ್ಲಿ ತಿಳಿಸಿದೆ.

ಜುಲೈ 1ರಂದು ಪಾವತಿಸಲು ನಿರ್ಧಾರ

ಈ ಹಿಂದೆ ಘೋಷಿಸಿದ ಪ್ರತಿ ಷೇರಿಗೆ 35.5 ರೂ.ಗಳ ಲಾಭಾಂಶದೊಂದಿಗೆ 2024ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಷೇರುದಾರರಿಗೆ ಪ್ರತಿ ಷೇರಿಗೆ ಒಟ್ಟು 63.5 ರೂ. ಲಾಭಾಂಶ ದೊರೆಯಲಿದೆ. ಲಾಭಾಂಶ (ಡಿವಿಡೆಂಡ್‌)ವನ್ನು 2024ರ ಜುಲೈ 1ರಂದು ಪಾವತಿಸಲು ನಿರ್ಧರಿಸಲಾಗಿದೆ.

ಇನ್ಫೋಸಿಸ್‌ನ ಮಾರ್ಚ್ ತ್ರೈಮಾಸಿಕ ದ ವರದಿ ಪ್ರಕಟಗೊಂಡ ಬಳಿಕ ಲಾಭಾಂಶಕ್ಕೆ ಘೋಷಣೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಕ್ಕೂ ಮೊದಲು ಕಂಪೆನಿಯು 2023ರ ಅಕ್ಟೋಬರ್ 25ರಂದು ಪ್ರತಿ ಷೇರಿಗೆ 18 ರೂ.ಗಳ ಮಧ್ಯಂತರ ಲಾಭಾಂಶವನ್ನು ಘೋಷಿಸಿತ್ತು. ನಂತರ 2023ರ ಜೂನ್‌ನಲ್ಲಿ 17.5 ರೂ.ಗಳ ಅಂತಿಮ ಲಾಭಾಂಶವನ್ನು ಪ್ರಕಟಿಸಿತ್ತು.

ಇದನ್ನೂ ಓದಿ: Samsung: ಎಐ ಫೀಚರ್‌ಗಳ ನಿಯೋ ಕ್ಯೂಎಲ್ಇಡಿ 8ಕೆ, 4ಕೆ, ಒಎಲ್ಇಡಿ ಟಿವಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್; ದರ ಎಷ್ಟು?

ಈ ಪ್ರಕಟಣೆಯ ನಂತರ ಇನ್ಫೋಸಿಸ್ ಷೇರುಗಳು ಎನ್ಎಸ್ಇ (NSE)ಯಲ್ಲಿ 1,429.50 ರೂ.ಗೆ ಕೊನೆಗೊಂಡವು. ಅಂದರೆ 15.05 ರೂ. ಅಥವಾ ಶೇ. 1.06ರಷ್ಟು ಹೆಚ್ಚಳ ದಾಖಲಿಸಿದಂತಾಗಿದೆ. ಈ ವರ್ಷದ ಆರಂಭದಲ್ಲಿ ಶೇ. 8ರಷ್ಟು ಕುಸಿತ ದಾಖಲಿಸಿತ್ತು. ಹೆಚ್ಚುವರಿಯಾಗಿ ಕಂಪೆನಿಯು ಎಂಜಿನಿಯರಿಂಗ್, ಸಂಶೋಧನೆ ಮತ್ತು ಅಭಿವೃದ್ಧಿ (ER&D)  ಸೇವೆಗಳನ್ನು ಒದಗಿಸುವ ಇನ್-ಟೆಕ್ ಹೋಲ್ಡಿಂಗ್ ಜಿಎಂಬಿಎಚ್ (In-Tech Holding GmbH) ಅನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಘೋಷಿಸಿದೆ. ಇನ್ಫೋಸಿಸ್ ಮಂಡಳಿಯು ಮುಂದಿನ 5 ವರ್ಷಗಳ ಬಂಡವಾಳ ಹಂಚಿಕೆ ನೀತಿಯನ್ನು ಅನುಮೋದಿಸಿದೆ. ಕಂಪೆನಿಯು ಪ್ರತಿ ಷೇರಿಗೆ ತನ್ನ ವಾರ್ಷಿಕ ಲಾಭಾಂಶವನ್ನು ಕ್ರಮೇಣ ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

Continue Reading
Advertisement
Man death in tiger attack in Nittur village
ಕೊಡಗು4 mins ago

Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

Surapura Assembly Constituency By election BJP candidate Raju Gowda filed nomination
ಯಾದಗಿರಿ8 mins ago

Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

Preity Zinta
ಕ್ರೀಡೆ16 mins ago

Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

Lok Sabha Election 2024 Malikayya Guttedar Joining Congress April 19
Lok Sabha Election 202430 mins ago

Lok Sabha Election 2024: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಗುಡ್‌ ಬೈ; ನಾಳೆ ಕಾಂಗ್ರೆಸ್‌ ಸೇರ್ಪಡೆ

Lok Sabah Election
ಪ್ರಮುಖ ಸುದ್ದಿ43 mins ago

Lok Sabah Election : ತಮಿಳುನಾಡಿನಲ್ಲಿ ಕತ್ತೆಗಳ ಮೂಲಕ ಹಳ್ಳಿಗಳಿಗೆ ಇವಿಎಂ ತಲುಪಿಸಿದ ಅಧಿಕಾರಿಗಳು!

DRDO
ತಂತ್ರಜ್ಞಾನ53 mins ago

DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

Iran Israel war
ಪ್ರಮುಖ ಸುದ್ದಿ1 hour ago

Israel Iran War : ಇಸ್ರೇಲ್​ ಮೇಲಿನ ದಾಳಿಗೆ ಪ್ರತಿಕಾರ; ಅಮೆರಿಕ, ಬ್ರಿಟನ್ ನಿಂದ ಇರಾನ್​​ಗೆ ಭಾರಿ ನಿರ್ಬಂಧ

Record number of students wrote CET 2024 exam Outrage over out of syllabus question
ಶಿಕ್ಷಣ1 hour ago

CET 2024 exam: ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳು; ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ

IPL 2024
ಕ್ರೀಡೆ2 hours ago

IPL 2024 : ಮದುವೆ ಆಮಂತ್ರಣಕ್ಕೆ ಸಿಎಸ್​ಕೆ ಥೀಮ್​, ಯುವ ಜೋಡಿಯ ಅಭಿಮಾನಕ್ಕೆ ಮೆಚ್ಚುಗೆ

MP D K Suresh latest statement In Anekal
ಬೆಂಗಳೂರು ಗ್ರಾಮಾಂತರ2 hours ago

Lok Sabha Election 2024: ಬಿಜೆಪಿ ಕೈಗೊಂಬೆ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಡಿ.ಕೆ. ಸುರೇಶ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌