ವಿಸ್ತಾರ ಸಂಪಾದಕೀಯ: ಕಿರಿಕಿರಿ ಕರೆಗಳಿಗೆ ಕಡಿವಾಣ ಅಗತ್ಯ - Vistara News

ದೇಶ

ವಿಸ್ತಾರ ಸಂಪಾದಕೀಯ: ಕಿರಿಕಿರಿ ಕರೆಗಳಿಗೆ ಕಡಿವಾಣ ಅಗತ್ಯ

Vistara Editorial: ಇಂದು ಜಾಹೀರಾತು ಕರೆಗಳು ಗ್ರಾಹಕರಿಗೆ ಕಿರುಕುಳ ಎನಿಸುವಷ್ಟು ಹೆಚ್ಚಿವೆ. ಪ್ರತಿದಿನ ಹತ್ತಾರು ಇಂಥ ಕರೆಗಳನ್ನು ಗ್ರಾಹಕನೊಬ್ಬ ಉತ್ತರಿಸಬೇಕಾಗುತ್ತದೆ. ಅವನ ಸಮಯ, ತಾಳ್ಮೆ ಎಲ್ಲವೂ ಇವುಗಳಿಗಾಗಿಯೇ ಮೀಸಲಿಡಬೇಕಾಗುತ್ತದೆ. ಇದಕ್ಕೆ ಅಂಕುಶ ಹಾಕಲೇಬೇಕಿದೆ.

VISTARANEWS.COM


on

Vistara Editorial, TRAI Steps to tackle unsolicited commercial calls and SMS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಎಂಎಸ್ (SMS) ಮತ್ತು ವಾಯ್ಸ್ ಕಾಲ್ಸ್ (voice calls) ಮೂಲಕ ಕಳುಹಿಸಲಾಗುವ ಅನಪೇಕ್ಷಿತ ವಾಣಿಜ್ಯಾತ್ಮಕ ಸಂದೇಶಗಳಿಗೆ ತಡೆ ಹಾಕಲು ಮುಂದಾಗಿರುವ ಭಾರತೀಯ ಟೆಲಿಕಾಂ ನಿಯಂತ್ರಣಾ ಪ್ರಾಧಿಕಾರ (TRAI), ಎಲ್ಲ ಸೇವಾ ಪೂರೈಕೆದಾರ ಕಂಪನಿಗಳಿಗೆ ಡಿಜಿಟಲ್ ಸಮ್ಮತಿ ಸ್ವಾಧೀನ (Digital Consent Acquisition– DCA) ಸೌಲಭ್ಯವನ್ನು ನಿಯೋಜಿಸಲು ಸೂಚಿಸಿದೆ. ಈ ಮೂಲಕ ಗ್ರಾಹಕರಿಗೆ ಸದಾ ಕಿರಿಕಿರಿ ಮಾಡುವ ಸಂದೇಶಗಳು, ಧ್ವನಿ ಕರೆಗಳನ್ನು ನಿಯಂತ್ರಸಲು ಯೋಜಿಸಲಾಗಿದೆ. ಡಿಸಿಎ ವ್ಯವಸ್ಥೆಯು ಟೆಲಿಕಾಂ ಚಂದಾದಾರರಿಗೆ ವಿವಿಧ ಘಟಕಗಳಿಂದ ವಾಣಿಜ್ಯ ಸಂವಹನಗಳನ್ನು ಸ್ವೀಕರಿಸಲು ಡಿಜಿಟಲ್ ಮೂಲಕ ತಮ್ಮ ಒಪ್ಪಿಗೆಯನ್ನು ನೋಂದಾಯಿಸಲು ಒಂದು ಏಕೀಕೃತ ವೇದಿಕೆಯನ್ನು ರಚಿಸುವ ಗುರಿಯನ್ನು ಹೊಂದಿದೆ. ಇದು ಜಾರಿಗೆ ಬಂದರೆ, ದೂರವಾಣಿ ಗ್ರಾಹಕರು ಕಿರಿಕಿರಿ ಕರೆಗಳಿಂದ ಪಾರಾಗುವ ನಿಯಂತ್ರಣವನ್ನು ತಾವೇ ಹೊಂದಿದಂತಾಗುತ್ತದೆ(Vistara Editorial).

ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ವಿಮಾ ಕಂಪನಿಗಳು, ವ್ಯಾಪಾರ ಕಂಪನಿಗಳಂಥ ಘಟಕಗಳು ಇಲ್ಲಿ ಪ್ರಧಾನ ಘಟಕಗಳು (ಪಿಇಗಳು) ಅಥವಾ ಕಳುಹಿಸುವವರು ಆಗಿದ್ದು, ಸದ್ಯದ ವ್ಯವಸ್ಥೆಯಲ್ಲಿ ಪಿಇಗಳೇ ಪ್ರತ್ಯೇಕವಾಗಿ ಸಮ್ಮತಿ ಸೌಲಭ್ಯಗಳನ್ನು ನಿರ್ವಹಣೆ ಮಾಡುತ್ತಾರೆ. ಹಾಗಾಗಿ ಸೇವಾ ಪೂರೈಕೆದಾರರಿಗೆ ಸಮ್ಮತಿಗಳ ದೃಢೀಕರಣವನ್ನು ಪರಿಶೀಲಿಸುವುದು ಸವಾಲಾಗಿ ಪರಿಣಮಿಸಿದೆ. ಡಿಜಿಟಲ್ ಸಮ್ಮತಿ ಸ್ವಾಧೀನ ಪ್ರಕ್ರಿಯೆಯು TCCCPR-2018ರಲ್ಲಿ ನಿಗದಿಪಡಿಸಿದ ನಿಯಮಗಳ ಪ್ರಕಾರ ಗ್ರಾಹಕರು ತಮ್ಮ ಒಪ್ಪಿಗೆಯನ್ನು ಪಡೆಯಲು, ನಿರ್ವಹಿಸಲು ಮತ್ತು ಹಿಂಪಡೆಯಲು ಅವಕಾಶ ನೀಡುತ್ತದೆ. ಈ ಸಮ್ಮತಿಯ ಡೇಟಾವನ್ನು ಎಲ್ಲಾ ಸಂಪೂರ್ಣ ಪರಿಶೀಲನೆಗಾಗಿ TCCCPR-2018 ಅಡಿಯಲ್ಲಿ ಸ್ಥಾಪಿಸಲಾದ ಡಿಸ್ಟ್ರಿಬ್ಯೂಟೆಡ್ ಲೆಡ್ಜರ್ ಟೆಕ್ನಾಲಜಿ (DLT) ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿಕೊಳ್ಳಲಾಗುತ್ತದೆ. ಒಪ್ಪಿಗೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಗ್ರಾಹಕಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸಾಮಾನ್ಯ ಶಾರ್ಟ್ ಕೋಡ್ 127xxx ಅನ್ನು ಒಪ್ಪಿಗೆ ವಿನಂತಿಗಳಿಗೆ ಬಳಸಲಾಗುತ್ತದೆ. ಈ ಸಂದೇಶವು ಸ್ಪಷ್ಟವಾಗಿ ಉದ್ದೇಶ, ಒಪ್ಪಿಗೆಯ ವ್ಯಾಪ್ತಿ, ಕಳುಹಿಸುವವರು ಮತ್ತು ಒಪ್ಪಿಗೆ ಕೇಳುತ್ತಿರುವ ಬ್ರ್ಯಾಂಡ್ ಹೆಸರಿನ ಮಾಹಿತಿಯನ್ನು ಒಳಗೊಂಡಿರುತ್ತದೆ. ಈ ಸಂದೇಶಗಳಲ್ಲಿ ಲಿಸ್ಟ್ ಮಾಡಲಾದ ಮಾಡಲಾದ ಯುಆರ್‌ಎಲ್‌ಗಳು, ಎಪಿಕೆಗಳು, ಒಟಿಟಿ ಲಿಂಕ್‌ಗಳು ಮತ್ತು ಕರೆ-ಬ್ಯಾಕ್ ಸಂಖ್ಯೆಗಳನ್ನು ಮಾತ್ರ ಅನುಮತಿಸಲಾಗುತ್ತದೆ. ಗ್ರಾಹಕರು ತಮ್ಮ ಸಮ್ಮತಿ ಪಡೆದುಕೊಂಡಾಗ ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ, ಅವರ ಸಮ್ಮತಿಯನ್ನು ಹೇಗೆ ಹಿಂತೆಗೆದುಕೊಳ್ಳಬೇಕು ಎಂಬ ಮಾಹಿತಿಯನ್ನೂ ಇದು ಒಳಗೊಂಡಿರುತ್ತದೆ. ಗ್ರಾಹಕರು ತಮ್ಮ ಇಷ್ಟವಿಲ್ಲದಿದ್ದರೆ ನೋಂದಾಯಿಸಲು ನಿರಾಕರಿಸುವ ಎಸ್ಎಂಎಸ್ ಮತ್ತು ಆನ್‌ಲೈನ್ ಸೌಲಭ್ಯವನ್ನು ಅಭಿವೃದ್ಧಿಪಡಿಸುವುದು ಪ್ರವೇಶ ಪೂರೈಕೆದಾರರಿಗೆ ಕಡ್ಡಾಯಗೊಳಿಸಲಾಗಿದೆ.

ಇಂದು ಜಾಹೀರಾತು ಕರೆಗಳು ಗ್ರಾಹಕರಿಗೆ ಕಿರುಕುಳ ಎನಿಸುವಷ್ಟು ಹೆಚ್ಚಿವೆ. ಪ್ರತಿದಿನ ಹತ್ತಾರು ಇಂಥ ಕರೆಗಳನ್ನು ಗ್ರಾಹಕನೊಬ್ಬ ಉತ್ತರಿಸಬೇಕಾಗುತ್ತದೆ. ಅವನ ಸಮಯ, ತಾಳ್ಮೆ ಎಲ್ಲವೂ ಇವುಗಳಿಗಾಗಿಯೇ ಮೀಸಲಿಡಬೇಕಾಗುತ್ತದೆ. ಟಿವಿ ಅಥವಾ ಇತರ ಮೀಡಿಯಾಗಳಲ್ಲಿ ಬರುವ ಜಾಹೀರಾತು ಹೀಗಲ್ಲ; ಅವು ಸಮುದಾಯವನ್ನೇ ಉದ್ದೇಶಿಸಿರುತ್ತವೆ. ಆದರೆ ವ್ಯಕ್ತಿ ದೂರವಾಣಿಯಲ್ಲಿ ಮಾತನಾಡುವ ಸಮಯ, ಅವನ ಖಾಸಗಿ ಹಾಗೂ ವೈಯಕ್ತಿಕವಾದುದಾಗಿರುತ್ತದೆ. ಇದನ್ನು ನಿಯಂತ್ರಿಸಲು ಸೂಕ್ತವಾದ ಕಾಯಿದೆ ಇದುವರೆಗೂ ಇರಲಿಲ್ಲ. ಐಟಿ ಕಾಯಿದೆಯ ಕೆಲವು ಅಂಶಗಳನ್ನೇ ಉಲ್ಲೇಖಿಸುವುದಾದರೆ, ವ್ಯಕ್ತಿಯ ಖಾಸಗಿ ಡೇಟಾಗಳನ್ನು ಹಾನಿಕರವಾಗುವಂತೆ ಬಳಸುವುದು ಕಾನೂನುರೀತ್ಯಾ ಅಪರಾಧ. ಇಲ್ಲಿ ವ್ಯಕ್ತಿಯ ಖಾಸಗಿ ಡೇಟಾಗಳನ್ನು ಕಂಪನಿಗಳು ಹೇಗೆ ಬಳಸಿಕೊಳ್ಳುತ್ತವೆ ಎಂಬುದರ ಮೇಲೆ ಗ್ರಾಹಕ ಯಾವ ಕ್ರಮ ಕೈಗೊಳ್ಳಬಹುದು ಎಂಬುದು ನಿಂತಿದೆ. ತನ್ನ ಫೋನ್‌ ನಂಬರ್‌, ತನ್ನ ಹೆಸರು ಮತ್ತಿತರ ಖಾಸಗಿ ಡೇಟಾಗಳು ಜಾಹೀರಾತು ನೀಡುತ್ತಿರುವ ಕಂಪನಿಗಳಿಗೆ ಹೇಗೆ ಸಿಕ್ಕಿತು, ಅದಕ್ಕೆ ತಾನು ಸಮ್ಮತಿ ನೀಡಿದ್ದೇನೆಯೇ ಎಂಬುದು ಗ್ರಾಹಕನಿಗೆ ಸ್ಪಷ್ಟವಾಗಿ ತಿಳಿಯುವಂತೆ ಇರಬೇಕು. ಇಲ್ಲವಾದರೆ ಇದು ಖಾಸಗಿತನದ ಉಲ್ಲಂಘನೆಯೇ ಆಗುತ್ತದೆ. ಇಂಥ ಉಲ್ಲಂಘನೆಗಳನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂಬ ಸಂದೇಶವನ್ನು ಗ್ರಾಹಕರೂ ನೀಡಬೇಕು. ಕಾನೂನು ಕೂಡ ಇದನ್ನು ಸ್ಪಷ್ಟವಾಗಿ ಸಾರಬೇಕು.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಸರ್ಕಾರಿ ಪರೀಕ್ಷೆಗಳನ್ನು ಕಳಂಕಮುಕ್ತಗೊಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ʼಗೂಂಡಾರಾಜ್‌ʼ ನೆನಪಿಸಿದ ಮೋದಿ, ʼಯೋಗಿ ಸ್ವಚ್ಛತಾ ಅಭಿಯಾನ…ʼಕ್ಕೆ ಮೆಚ್ಚುಗೆ

PM Narendra Modi: ಉತ್ತರ ಪ್ರದೇಶದ ಅಜಂಗಢದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದರು. “ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ” ಎಂದರು.

VISTARANEWS.COM


on

pm narendra modi yogi adityanath
Koo

ಲಖನೌ: ಈ ಹಿಂದಿನ ʼಗೂಂಡಾರಾಜ್‌ʼ (gunda raj) ಅನ್ನು ತೊಲಗಿಸಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು ನನ್ನ ಚಿಂತನೆಯ ʼಸ್ವಚ್ಛತಾ ಅಭಿಯಾನʼವನ್ನು (swacchta abhiyaan) ಸರಿಯಾಗಿ ಜಾರಿಗೆ ತಂದಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಪ್ರಶಂಸಿಸಿದ್ದಾರೆ.

ಉತ್ತರ ಪ್ರದೇಶದ ಅಜಂಗಢದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದರು. “ನೀವು ಸಮಾಜವಾದಿ ಪಾರ್ಟಿಯ ʼಗೂಂಡಾರಾಜ್’ನ ಹಳೆಯ ದಿನಗಳನ್ನು ನೋಡಿದ್ದೀರಿ. ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಇದ್ದ ಗ್ಯಾಂಗ್‌ಗಳು, ಗಲಭೆಕೋರರು, ಮಾಫಿಯಾಗಳು, ಅಪಹರಣಕಾರರು ಮತ್ತು ಸುಲಿಗೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ” ಎಂದಿದ್ದಾರೆ.

“ಹತ್ತು ವರ್ಷಗಳ ಹಿಂದೆ ಇಲ್ಲಿ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನು ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಅಂತಹ ದುಷ್ಟರಿಗೆ ಸಹಕಾರ ನೀಡುತ್ತಿದ್ದವು” ಎಂದರು ಮೋದಿ.

“ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಆ ಪಕ್ಷಗಳು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು, ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು” ಎಂದರು ನುಡಿದರು.

“ಸಿಎಎ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವ ನೀಡುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಇವರು ದೇಶದಲ್ಲಿ ನಿರಾಶ್ರಿತರಾಗಿ ದೀರ್ಘಕಾಲ ವಾಸಿಸಿದ್ದಾರೆ. ಇವರು ಧರ್ಮದ ಆಧಾರದ ಮೇಲೆ ಮಾಡಿದ ದೇಶ ವಿಭಜನೆಗೆ ಬಲಿಯಾದವರು. ಆದರೆ ವಿರೋಧ ಪಕ್ಷಗಳಾದ ಎಸ್‌ಪಿ ಮತ್ತು ಕಾಂಗ್ರೆಸ್ ಕಾನೂನಿನ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವ ಮೂಲಕ ಗಲಭೆಗಳನ್ನು ಪ್ರಚೋದಿಸುತ್ತಿವೆ. ಈ ನಿರಾಶ್ರಿತರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. ಅವರು ಉತ್ತರ ಪ್ರದೇಶ ಮತ್ತು ಇಡೀ ದೇಶದಲ್ಲಿ ಗಲಭೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು” ಎಂದು ಮೋದಿ ಆರೋಪಿಸಿದರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Continue Reading

ವೈರಲ್ ನ್ಯೂಸ್

Viral Video: ಪನ್ನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

Viral Video:ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಶುಕ್ಲಾ, ಪನ್ನೀರ್‌ ಬಿರಿಯಾನಿಯಲ್ಲಿ ಚಿಕನ್‌ ತುಂಡುಗಳು ಪತ್ತೆಯಾಗಿರುವ ಬಗ್ಗೆ ವಿಡಿಯೋವನ್ನು ಶೇರ್‌ ಮಾಡಿದ್ದಾರೆ. ಶುದ್ಧ ಸಸ್ಯಾಹಾರಿಯಾಗಿರುವ ಶುಕ್ಲಾ ಮಹಾರಾಷ್ಟ್ರದ ಪುಣೆ ಕರವೇನಗರದ ನಿವಾಸಿ. ಅವರು ಜೊಮ್ಯಾಟೊದಲ್ಲಿ ಪಿಕೆ ಬಿರಿಯಾನಿ ಹೌಸ್‌ನಿಂದ ಪನ್ನೀರ್‌ ಬಿರಿಯಾನಿ ಆರ್ಡರ್‌ ಮಾಡಿದ್ದರು. ಆರ್ಡರ್‌ ಬಂದಂತೆ ಅದನ್ನು ತೆರೆದು ನೋಡಿದಾಗ ಅದರಲ್ಲಿ ಪನ್ನೀರ್‌ ಜೊತೆಗೆ ಚಿಕನ್‌ ಪೀಸ್‌ಗಳೂ ಮಿಕ್ಸ್‌ ಆಗಿದ್ದು ಕಂಡು ಬಂದಿದೆ. ತಕ್ಷಣ ಅವರು ಈ ಬಗ್ಗೆ ಜೊಮ್ಯಾಟೊಗೆ ದೂರು ನೀಡಿದ್ದು, ಅವರಿಗೆ ಹಣವನ್ನು ಹಿಂದಿರುಗಿಸಲಾಗಿದೆ.

VISTARANEWS.COM


on

Viral video
Koo

ಪುಣೆ: ಹಸಿರು ಸಮವಸ್ತ್ರದ ಮೂಲಕ ವಿವಾದಕ್ಕೀಡಾಗಿದ್ದ ಜೊಮ್ಯಾಟೊ(Zomato) ಇದೀಗ ಮತ್ತೆ ಸುದ್ದಿಯಲ್ಲಿದೆ. ಜೊಮ್ಯಾಟೊದಿಂದ ಆರ್ಡರ್‌ ಮಾಡಲಾಗಿದ್ದ ಪನ್ನೀರ್‌ ಬಿರಿಯಾನಿ(Paneer Biriyani)ಯಲ್ಲಿ ಚಿಕನ್‌ ಪೀಸ್‌ ಸಿಕ್ಕಿದ್ದು, ಇದು ಧಾರ್ಮಿಕ ಭಾವನೆಗೆ ಧಕ್ಕೆ ತರುವ ಯತ್ನ ಎಂದು ಗ್ರಾಹಕರೊಬ್ಬರು ಆರೋಪಿಸಿರುವ ಘಟನೆ ವರದಿಯಾಗಿದೆ. ಪುಣೆ ಮೂಲದ ಪಂಕಜ್‌ ಶುಕ್ಲಾ ಎಂಬ ವ್ಯಕ್ತಿ ಎಕ್ಸ್‌ನಲ್ಲಿ ವಿಡಿಯೋ ಸಮೇತ ಪೋಸ್ಟ್‌ವೊಂದನ್ನು ಮಾಡಿದ್ದು, ಇದೀಗ ಈ ವಿಚಾರ ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ.

ಶುಕ್ಲಾ ಆರೋಪ ಏನು?

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಶುಕ್ಲಾ, ಪನ್ನೀರ್‌ ಬಿರಿಯಾನಿಯಲ್ಲಿ ಚಿಕನ್‌ ತುಂಡುಗಳು ಪತ್ತೆಯಾಗಿರುವ ಬಗ್ಗೆ ವಿಡಿಯೋವನ್ನು ಶೇರ್‌ ಮಾಡಿದ್ದಾರೆ. ಶುದ್ಧ ಸಸ್ಯಾಹಾರಿಯಾಗಿರುವ ಶುಕ್ಲಾ ಮಹಾರಾಷ್ಟ್ರದ ಪುಣೆ ಕರವೇನಗರದ ನಿವಾಸಿ. ಅವರು ಜೊಮ್ಯಾಟೊದಲ್ಲಿ ಪಿಕೆ ಬಿರಿಯಾನಿ ಹೌಸ್‌ನಿಂದ ಪನ್ನೀರ್‌ ಬಿರಿಯಾನಿ ಆರ್ಡರ್‌ ಮಾಡಿದ್ದರು. ಆರ್ಡರ್‌ ಬಂದಂತೆ ಅದನ್ನು ತೆರೆದು ನೋಡಿದಾಗ ಅದರಲ್ಲಿ ಪನ್ನೀರ್‌ ಜೊತೆಗೆ ಚಿಕನ್‌ ಪೀಸ್‌ಗಳೂ ಮಿಕ್ಸ್‌ ಆಗಿದ್ದು ಕಂಡು ಬಂದಿದೆ. ತಕ್ಷಣ ಅವರು ಈ ಬಗ್ಗೆ ಜೊಮ್ಯಾಟೊಗೆ ದೂರು ನೀಡಿದ್ದು, ಅವರಿಗೆ ಹಣವನ್ನು ಹಿಂದಿರುಗಿಸಲಾಗಿದೆ.

ಇದಾದ ಬಳಿಕ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಶುಕ್ಲಾ, ನನಗೆ ಪೂರ್ತಿ ಹಣ ರೀಫಂಡ್‌ ಆಗಿದೆಯಾದರೂ ಇದರಿಂದ ನನ್ನ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ. ನಾನು ಅತ್ಯಂತ ಧಾರ್ಮಿಕ ವ್ಯಕ್ತಿಯಾಗಿರುವ ಕಾರಣ ಇದು ಪಾಪ ಕೃತ್ಯ ಆದಂತಾಗಿದೆ. ಜೊಮ್ಯಾಟೊದ ಎಡವಟ್ಟಿನಿಂದಾಗಿ ನನ್ನ ಧಾರ್ಮಿಕ ಭಾವನೆಗೆ ನೋವುಂಟಾಗಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಈ ಪೋಸ್ಟ್‌ಗೆ ತಕ್ಷಣ ರಿಯಾಕ್ಟ್‌ ಮಾಡಿರುವ ಜೊಮ್ಯಾಟೊ, ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಉದ್ದೇಶ ನಮಗಿಲ್ಲ. ನಿಮ್ಮ ಆರ್ಡರ್ನ ಡಿಟೇಲ್ಸ್‌ ಕಳುಹಿಸಿ. ನಾವು ಚೆಕ್‌ ಮಾಡುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ:Bomb threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಟಿಶ್ಯೂ ಪೇಪರ್‌ನಲ್ಲಿ ಬಂದಿತ್ತು ಸಂದೇಶ

ಇನ್ನು ಪಂಕಜ್‌ ಶುಕ್ಲಾ ಟ್ವೀಟ್‌ಗೆ ಅನೇಕ ನೆಟ್ಟಿಗರು ಪರ ವಿರೋಧವಾಗಿ ಪ್ರತಿಕ್ರಿಯಿಸಿದ್ದಾರೆ. ಶುದ್ಧ ಸಸ್ಯಹಾರಿ ಆಗಿರುವ ನೀವು ಏಕೆ ಮಾಂಸಾಹಾರ ಹೊಟೇಲ್‌ನಿಂದ ಆರ್ಡರ್‌ ಮಾಡಿದ್ದೀರಿ ಎಂದು ಕೆಲವರು ಪ್ರಶ್ನಿಸಿದರೆ, ಮತ್ತೂ ಕೆಲವರು ಶುದ್ಧ ಸಸ್ಯಹಾರಿ ಹೊಟೇಲ್‌ಗಳಿಂದಲೇ ಆರ್ಡರ್‌ ಮಾಡಿ. ಇಲ್ಲವಾದರೆ ಇಂತಹ ಘಟನೆಗಳು ನಡೆಯುತ್ತವೆ ಎಂದು ಹೇಳಿದ್ದಾರೆ.

Continue Reading

Lok Sabha Election 2024

Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

Lok Sabha Election 2024: ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತದ ಮತದಾನ ಈಗಾಗಲೇ ಮುಗಿದಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ’ ಮೈತ್ರಿಕೂಟ ದ ಆಂತರಿಕ ಸಮೀಕ್ಷೆಯ ಫಲಿತಾಂಶಗಳನ್ನು ಬಹಿರಂಗಪಡಿಸಿದ್ದಾರೆ. ʼʼಇಂಡಿಯಾʼ ಬಣಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸೀಟು ದೊರೆಯಲಿದೆ. ನಾಲ್ಕು ಹಂತಗಳ ಮತದಾನದಲ್ಲಿಯೂ ʼಇಂಡಿಯಾʼ ಒಕ್ಕೂಟ ಮುನ್ನಡೆ ಸಾಧಿಸಿದೆʼʼ ಎಂದು ತಿಳಿಸಿದ್ದಾರೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಮೊದಲ ನಾಲ್ಕು ಹಂತದ ಮತದಾನ ಈಗಾಗಲೇ ಮುಗಿದಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ‘ಇಂಡಿಯಾ’ ಮೈತ್ರಿಕೂಟ (I.N.D.I.A bloc)ದ ಆಂತರಿಕ ಸಮೀಕ್ಷೆಯ ಫಲಿತಾಂಶಗಳನ್ನು ಬಹಿರಂಗಪಡಿಸಿದರು. ಮೈತ್ರಿಕೂಟದ ಪಾಲುದಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ʼʼಇಂಡಿಯಾʼ ಬಣಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸೀಟು ದೊರೆಯಲಿದೆ. ನಾಲ್ಕು ಹಂತಗಳ ಮತದಾನದಲ್ಲಿಯೂ ʼಇಂಡಿಯಾʼ ಒಕ್ಕೂಟ ಮುನ್ನಡೆ ಸಾಧಿಸಿದೆʼʼ ಎಂದು ತಿಳಿಸಿದರು.

ಒಬಿಸಿ, ಎಸ್‌ಸಿ / ಎಸ್‌ಟಿ ಸಮುದಾಯಗಳ ಮೀಸಲಾತಿ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮಾತನಾಡಿದ ಖರ್ಗೆ, ʼʼಕೆಲವರು ಮಾತ್ರ ಮೀಸಲಾತಿ ಪಡೆದುಕೊಳ್ಳಬಹುದು. ಆದರೆ ರಾಷ್ಟ್ರದ ಭವಿಷ್ಯಕ್ಕಾಗಿ ಕೆಲಸ ಮಾಡುವುದು ದೇಶದ ಪ್ರತಿಯೊಬ್ಬರ ಜವಾಬ್ದಾರಿʼʼ ಎಂದು ಹೇಳಿದರು. ʼʼಮೀಸಲಾತಿ ಭಾರತದ ಪ್ರಜಾಪ್ರಭುತ್ವವನ್ನು ಭದ್ರಪಡಿಸುವ ಒಂದು ಭಾಗ. ಕಾಂಗ್ರೆಸ್ ಯಾವಾಗಲೂ ಮೀಸಲಾತಿಯ ಬಗ್ಗೆ ಮಾತನಾಡುತ್ತದೆ. ಆದರೆ ಅದರಿಂದ ನನಗೆ ಪ್ರಯೋಜನವೇನು? ಎಂದು ಅನೇಕರು ಹೇಳುತ್ತಾರೆ. ಮೀಸಲಾತಿ ಪ್ರಯೋಜನಗಳನ್ನು ಕೆಲವರು ಪಡೆಯಬಹುದು, ಆದರೆ ಸಂವಿಧಾನವನ್ನು ಉಳಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಇದರಲ್ಲಿ ವಿಫಲವಾದರೆ ನಾವು ಗುಲಾಮರಾಗಬೇಕಾಗುತ್ತದೆʼʼ ಎಂದು ವಿವರಿಸಿದರು.

“ಈ ಹಿಂದೆ ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನದಲ್ಲಿ ಬದಲಾವಣೆಗಳನ್ನು ತರುವುದಾಗಿ ಘೋಷಿಸಿದ್ದರು. ಜತೆಗೆ ಅನೇಕ ಬಿಜೆಪಿ ನಾಯಕರು ಇದೇ ರೀತಿಯ ಮಾತುಗಳನ್ನು ಆಡಿದ್ದಾರೆ. ಈ ಎಲ್ಲದರ ಬಗ್ಗೆ ಪ್ರಧಾನಿ ಮೌನವಾಗಿದ್ದಾರೆʼʼ ಎಂದ ಖರ್ಗೆ, ʼʼಸಂವಿಧಾನ ಬದಲಾವಣೆ ನಿಜವಾಗಿಯೂ ನಿಮ್ಮ ಉದ್ದೇಶವಲ್ಲದಿದ್ದರೆ, ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವವರ ವಿರುದ್ಧ ನೀವು ಏಕೆ ಕ್ರಮ ಕೈಗೊಳ್ಳಬಾರದು?” ಎಂದು ಮೋದಿ ಅವರನ್ನು ಪ್ರಶ್ನಿಸಿದರು. ʼʼನೀವು (ಮೋದಿ) ನಿಮ್ಮ 56 ಇಂಚಿನ ಎದೆಯ ಬಗ್ಗೆ ಪದೇ ಪದೆ ಮಾತನಾಡುತ್ತೀರಿ. ಆದರೆ ಸಂವಿಧಾನದ ವಿರುದ್ಧವಾಗಿ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಯಾಕೆ?ʼʼ ಎಂದು ಕೇಳಿದರು.

ಆಂತರಿಕ ಸಮೀಕ್ಷೆಯಲ್ಲಿ ಏನಿದೆ?

ʼʼನಾಲ್ಕು ಹಂತದ ಮತದಾನ ಮುಗಿದಿದೆ. ಜತೆಗೆ ಪಕ್ಷದ ಆಂತರಿಕ ಸಮೀಕ್ಷೆಯ ವರದಿ ನಮ್ಮ ಕೈ ಸೇರಿದೆ. ಇದು ʼಇಂಡಿಯಾʼ ಒಕ್ಕೂಟ ಉತ್ತಮ ಸಾಧನೆ ಮಾಡಲಿದೆ ಎಂದು ಹೇಳಿದೆ. ಜೂನ್‌ 4ರಂದು ʼಇಂಡಿಯಾʼ ಬಣ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸವಿದೆʼʼ ಎಂದು ಖರ್ಗೆ ತಿಳಿಸಿದರು.

ಪ್ರಸ್ತುತ ನಡೆಯುತ್ತಿರುವ ಚುನಾವಣೆಯು ಸಿದ್ಧಾಂತಗಳ ನಡುವಿನ ಕದನ ಎಂದು ಬಣ್ಣಿಸಿರುವ ಕಾಂಗ್ರೆಸ್‌ ಅಧ್ಯಕ್ಷರು, ʼʼಒಂದು ಬಣ ಬಡವರಿಗಾಗಿ ಹೋರಾಟ ನಡೆಸುತ್ತಿದ್ದರೆ ಇನ್ನೊಂದು ಬಣ ಧರ್ಮದ ಆಧಾರದಲ್ಲಿ ತಮ್ಮ ಶ್ರೀಮಂತ ಗೆಳೆಯರಿಗಾಗಿ ಕಣ್ಣಕ್ಕಿಳಿದಿದೆ. ಶ್ರೀಮಂತ ಮತ್ತು ಬಡವರ ನಡುವಿನ ಅಂತರ ಕಡಿಮೆ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆʼʼ ಎಂದು ಹೇಳಿದರು. ಜತೆಗೆ ʼʼಆಡಳಿತ ಪಕ್ಷ (ಬಿಜೆಪಿ) ಅಭ್ಯರ್ಥಿಗಳನ್ನು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಬೆದರಿಸುತ್ತಿದೆʼʼ ಎಂದು ಆರೋಪಿಸಿದರು.

ʼʼಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ಮತದಾರರನ್ನು ಬೆದರಿಸಲು ಪ್ರಯತ್ನಿಸುತ್ತಿದೆʼʼ ಎಂದು ಖರ್ಗೆ ದೂರಿದರು. ʼʼತಪಾಸಣೆ ಹೆಸರಿನಲ್ಲಿ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಸ್ಲಿಂ ಮಹಿಳೆಯರ ಬುರ್ಕಾ ತೆಗೆದುದನ್ನು ನಾವೆಲ್ಲ ನೋಡಿದ್ದೇವೆʼʼ ಎಂದು ಮಾಧವಿ ಲತಾ ಅವರ ನಡೆಯನ್ನು ಖರ್ಗೆ ಪ್ರಸ್ತಾವಿಸಿದರು.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

ಪ್ರಧಾನಿ ಮಟನ್‌, ಮಂಗಳಸೂತ್ರದ ಬಗ್ಗೆ ಮಾತ್ರ ಮಾತನಾಡುತ್ತಾರೆ

ʼʼಪ್ರಧಾನಿ ಮೋದಿ ಅವರು ತಮ್ಮ ಚುನಾವಣಾ ಪ್ರಚಾರದಲ್ಲಿ ಮಟನ್‌, ಚಿಕನ್‌ ಮತ್ತು ಮಂಗಳಸೂತ್ರದ ಬಗ್ಗೆ ಮಾತ್ರ ಮಾತನಾಡುತ್ತಾರೆ. ಮಣಿಪುರದಲ್ಲಿನ ಸಂಘರ್ಷದ ಬಗ್ಗೆ ತುಟಿ ಬಿಚ್ಚುತ್ತಿಲ್ಲʼʼ ಎಂದು ಖರ್ಗೆ ಟೀಕಿಸಿದರು. ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ಪ್ರಧಾನಿ ಮೋದಿ ಸುಳ್ಳು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ ಖರ್ಗೆ “ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ನಾವು ಎಕ್ಸ್-ರೇ ಮಾಡುತ್ತಿದ್ದೇವೆ ಎಂದು ಅವರು ಹೇಳುತ್ತಾರೆ. ನಿಮ್ಮ ಮನೆಯಲ್ಲಿ ಎರಡು ಎಮ್ಮೆಗಳಿದ್ದರೆ, ಒಂದನ್ನು ಮುಸ್ಲಿಮರಿಗೆ ನೀಡಬೇಕಾಗುತ್ತದೆ ಎಂದು ಅವರು ಎಲ್ಲೋ ಹೇಳಿದರು. ಪ್ರಧಾನಿ ಇಷ್ಟು ಸುಳ್ಳು ಹೇಳಿದರೆ ನಾವೇನು ಮಾಡಲು ಸಾಧ್ಯ?ʼʼ ಎಂದು ತಿಳಿಸಿದರು.

Continue Reading

ಕ್ರೈಂ

ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

ISIS link: ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬ ಅವರ ಮೊಮ್ಮಗನ ಐಸಿಸ್ ನಂಟು ಕೇಸ್‌ನಲ್ಲಿ ಈ ಮಹತ್ವದ ಬೆಳವಣಿಗೆ ಆಗಿದೆ. ಯುಎಪಿಎ ಕಾಯಿದೆಯಡಿ ಈತನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿತ್ತು. ಅಗಸ್ಟ್ 21, 2021ರಂದು ಐಸಿಸ್ ನಂಟಿನ ಆರೋಪದಡಿ ಬಂಧಿತನಾಗಿ ಜೈಲಿನಲ್ಲಿದ್ದ ಅಮ್ಮರ್ ಅಬ್ದುಲ್ ರೆಹಮಾನ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

VISTARANEWS.COM


on

isis link ummer abdul rehman mariyam
ಉಮ್ಮರ್‌ ಅಬ್ದುಲ್‌ ರೆಹಮಾನ್‌, ಇನ್ನೊಬ್ಬ ಆರೋಪಿ ಮರಿಯಂ
Koo

ಹೊಸದಿಲ್ಲಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ್ದ, ಭಯೋತ್ಪಾದಕ ಸಂಘಟನೆ (Terrorist organisation) ಐಸಿಸ್‌ ಲಿಂಕ್‌ (ISIS link) ಪ್ರಕರಣದಲ್ಲಿ ಮಾಜಿ ಶಾಸಕ ಇದಿನಬ್ಬ (Ex MLA BM Idinabba) ಅವರ ಮೊಮ್ಮಗ ಉಮ್ಮರ್‌ ಅಬ್ದುಲ್‌ ರೆಹಮಾನ್‌ಗೆ ಜಾಮೀನು (bail) ದೊರೆತಿದೆ. “ಐಸಿಸ್ ಬಾವುಟ, ಕರಪತ್ರ ಮೊಬೈಲ್‌ನಲ್ಲಿದ್ದರೆ ಆತ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ” ಎಂದು ಜಾಮೀನು ನೀಡಿದ ದಿಲ್ಲಿ ಉಚ್ಚ ನ್ಯಾಯಾಲಯ (Delhi High court) ಹೇಳಿದೆ.

ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬ ಅವರ ಮೊಮ್ಮಗನ ಐಸಿಸ್ ನಂಟು ಕೇಸ್‌ನಲ್ಲಿ ಈ ಮಹತ್ವದ ಬೆಳವಣಿಗೆ ಆಗಿದೆ. ಯುಎಪಿಎ ಕಾಯಿದೆಯಡಿ ಈತನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿತ್ತು. ಅಗಸ್ಟ್ 21, 2021ರಂದು ಐಸಿಸ್ ನಂಟಿನ ಆರೋಪದಡಿ ಬಂಧಿತನಾಗಿ ಜೈಲಿನಲ್ಲಿದ್ದ ಉಮ್ಮರ್ ಅಬ್ದುಲ್ ರೆಹಮಾನ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

ರೆಹಮಾನ್‌ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ವಿಚಾರಣಾಧೀನ ಕೋರ್ಟ್ ಜಾಮೀನು‌ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಸದ್ಯ ಸುದೀರ್ಘ ವಿಚಾರಣೆ ಬಳಿಕ ದೆಹಲಿ ಹೈಕೋರ್ಟ್ ಜಾಮೀನು ಒದಗಿಸಿದೆ. ಉಮ್ಮರ್ ಅಬ್ದುಲ್ ರೆಹಮಾನ್ ಜಾಮೀನು ಆದೇಶದಲ್ಲಿ ಹಲವು ಅಂಶಗಳನ್ನು ದೆಹಲಿ ಹೈಕೋರ್ಟ್ ಉಲ್ಲೇಖಿಸಿದೆ.

ನ್ಯಾಯಪೀಠದ ಪ್ರಕಾರ, “ಉಗ್ರ ಸಂಘಟನೆ ಬಗೆಗಿನ ಆಕರ್ಷಣೆಯನ್ನು ಉಗ್ರ ನಂಟು ಎನ್ನಲು ಆಗುವುದಿಲ್ಲ. ಐಸಿಸ್ ಪರ ವಿಡಿಯೋ ಡೌನ್‌ಲೋಡ್ ಮಾಡುವುದು, ಭಾಷಣ ಆಲಿಸುವುದನ್ನು ಯುಎಪಿಎ ಕಾಯಿದೆಯಡಿ ತರಲು ಆಗುವುದಿಲ್ಲ. ಈ ಸಾಕ್ಷ್ಯ ಬಳಸಿ ಯುಎಪಿಎ ಸೆಕ್ಷನ್ 38 ಮತ್ತು 39ರಡಿ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ” ಎಂದಿದೆ.

“ಆರೋಪಿ ಮೊಬೈಲ್‌ನಲ್ಲಿ ಉಗ್ರ ಒಸಾಮಾ ಬಿನ್‌ ಲಾಡೆನ್, ಐಸಿಸ್ ಬಾವುಟಗಳ ಚಿತ್ರ, ಐಸಿಸ್ ಪರ ಭಾಷಣಗಳ ತುಣುಕು ಸಿಕ್ಕಿದೆ” ಎಂದು ಎನ್‌ಐಎ ವಾದಿಸಿದರೆ, “ಇದೆಲ್ಲದರ ಮೂಲಕ ಆತನಿಗೆ ಐಸಿಸ್ ನಂಟಿದೆ ಎನ್ನಲು‌ ಆಗುವುದಿಲ್ಲ. ಯಾಕೆಂದರೆ ಇವುಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್‌ನೆಟ್‌ನಲ್ಲಿ ಸಿಗುತ್ತವೆ. ಕುತೂಹಲ ಇರುವ ಯಾರು ಬೇಕಾದರೂ ‌ಮೊಬೈಲ್, ಕಂಪ್ಯೂಟರ್‌ನಲ್ಲಿ ಇದನ್ನು ಡೌನ್‌ಲೋಡ್ ಮಾಡಬಹುದು. ಹಾಗಾಗಿ ಇದನ್ನು ಇಟ್ಟುಕೊಂಡು ಐಸಿಸ್ ನಂಟನ್ನು ಸಾಬೀತು ಪಡಿಸಲು ಆಗುವುದಿಲ್ಲ” ಎಂದು ಕೋರ್ಟ್‌ ಹೇಳಿದೆ.

ಈಗಾಗಲೇ ಪ್ರಕರಣ ಸಂಬಂಧ ಹಲವು ಜನರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿದೆ. ಅಮ್ಮರ್ ಅಬ್ದುಲ್ ರೆಹಮಾನ್ ಜೊತೆಗೆ ಇದಿನಬ್ಬ ಅವರ ಸೊಸೆ ದೀಪ್ತಿ ಮಾರ್ಲ ಅಲಿಯಾಸ್‌ ಮರಿಯಂಳನ್ನೂ ಬಂಧಿಸಿದೆ. ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ, ಇದಿನಬ್ಬ ಮಗ ಬಿ‌.ಎಂ.ಭಾಷಾರ ಮಗ ಅನಾಸ್ ಅಬ್ದುಲ್ ಅವರ ಪತ್ನಿ. ಅನಾಸ್ ಅಬ್ದುಲ್ ರೆಹಮಾನ್ ಮದುವೆಯಾಗಿ ಇಸ್ಲಾಂಗೆ ಮತಾಂತರಗೊಂಡಿದ್ದ ದೀಪ್ತಿ ಮಾರ್ಲ, ಮರಿಯಂ ಎಂದು ಹೆಸರು ಬದಲಿಸಿಕೊಂಡಿದ್ದಳು. ಅಮ್ಮರ್ ಅಬ್ದುಲ್ ರೆಹಮಾನ್ ಬಂಧನದ ಬಳಿಕ, ಜನವರಿ 4ರಂದು ಉಳ್ಳಾಲದಲ್ಲಿ ಮರಿಯಂಳನ್ನು ಎನ್‌ಐಎ ಬಂಧಿಸಿತ್ತು.

ಈಕೆ ಅಮ್ಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ‌ ಮಾಡುತ್ತಿದ್ದಳು ಎಂದು ಎನ್‌ಐಎ ಆರೋಪ ಮಾಡಿತ್ತು. ಈಕೆಯ ಭಾಗಿಧಾರಿಕೆ ಬಗ್ಗೆ ಚಾರ್ಚ್ ಶೀಟ್ ಸಲ್ಲಿಸಿದ್ದು, ಇಸ್ಲಾಮಿಕ್ ಸ್ಟೇಟ್ ಐಡಿಯಾಲಜಿಯಿಂದ ಪ್ರಭಾವಿತಳಾಗಿದ್ದಳು ಎಂದಿತ್ತು. ಮಾರ್ಚ್ 5, 2021ರಲ್ಲಿ ದೆಹಲಿಯಲ್ಲಿ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿತ್ತು. ಇದೀಗ‌ ಐಸಿಸ್ ನಂಟಿನ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಅಮ್ಮರ್ ಅಬ್ದುಲ್ ರೆಹಮಾನ್‌ಗೆ ಜಾಮೀನು ದೊರೆತಿದ್ದು, ಇನ್ನೂ ಎನ್‌ಐಎ ವಶದಲ್ಲೇ ಇರುವ ಮರಿಯಂಗೂ ಜಾಮೀನು ಸಿಗಲು ಇದು ಪೂರಕವಾಗಲಿದೆ ಎನ್ನಲಾಗಿದೆ.

ಆರೋಪಿಗಳಾದ ದೀಪ್ತಿ ಮಾರ್ಲ, ಇದಿನಬ್ಬ ಮೊಮ್ಮಗ ಅಮ್ಮರ್ ಅಬ್ದುಲ್ ರಹಿಮಾನ್, ಮೊಹಮ್ಮದ್ ವಕಾರ್ ಲಾನ್ ಯಾನೆ ವಿಲ್ಸನ್ ಕಾಶ್ಮೀರಿ, ಮಿಜಾ ಸಿದ್ದೀಕ್, ಶಿಫಾ ಹಾರೀಸ್ ಯಾನೆ ಆಯಿಷಾ, ಒಬೈದ್ ಹಮೀದ್ ಮಟ್ಟಾ, ಮಾದೇಶ್ ಶಂಕರ್ ಯಾನೆ ಅಬ್ದುಲ್ಲಾ, ಮುಜಾಮಿಲ್ ಹಸನ್ ಭಟ್ ವಿರುದ್ಧ ಈ ದೋಷಾರೋಪಣ ಪಟ್ಟಿಯನ್ನು ಎನ್ಐಎ ಸಲ್ಲಿಕೆ ಮಾಡಿದೆ. ಈ ಎಂಟು ಆರೋಪಿಗಳು ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ಐಸಿಸ್‌ಗೆ ಜನರನ್ನು ನೇಮಕ ಮಾಡುವುದು, ಭಯೋತ್ಪಾದಕ ಕೃತ್ಯಕ್ಕೆ ನಿಧಿ ಸಂಗ್ರಹಿಸುವುದರಲ್ಲಿ ತೊಡಗಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.

ಉಗ್ರ ಚಟುವಟಿಕೆ ಸಂಬಂಧಿಸಿ ಮಾರ್ಚ್ 5, 2021ರಂದು ಕೇರಳದ ಮಹಮ್ಮದ್ ಅಮೀನ್ ಮತ್ತು ಆತನ ಇಬ್ಬರು ಸಹಚರರನ್ನು ಎನ್ಐಎ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿತ್ತು. ಆ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು, ಭಟ್ಕಳ, ಬೆಂಗಳೂರು, ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸಿ ಈ ಎಂಟು ಜನರನ್ನು ಬಂಧಿಸಲಾಗಿತ್ತು. ಲ್ಯಾಪ್‌ಟಾಪ್, ಸಿಮ್ ಕಾರ್ಡ್, ಹಾರ್ಡ್ ಡಿಸ್ಕ್ ಡ್ರೈವ್ ಸಹಿತ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಂಡಿರುವುದರ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಾದ ಟೆಲಿಗ್ರಾಂ, ಹೂಪ್, ಇನ್‌ಸ್ಟಗ್ರಾಂ ಬಳಸಿಕೊಂಡು ಈ ಆರೋಪಿಗಳು ಐಸಿಸ್‌ಗೆ ಜನರನ್ನು ಸೇರಿಸುವುದನ್ನು ಮಾಡುತ್ತಿದ್ದರು ಎಂದಿತ್ತು.

ಮರಿಯಂ, ಕ್ರೋನಿಕಲ್ ಪೌಂಡೇಶನ್ ಎಂಬ ಇನ್‌​ಸ್ಟಾಗ್ರಾಂ​ ಪೇಜ್ ಮೂಲಕ ಐಸಿಸ್​ ಕೆಲಸ ಮಾಡಲು ಶುರು ಮಾಡಿದ್ದಳು. ನಂತರ ಪತಿ ಅನಾಸ್ ಅಬ್ದುಲ್ ರೆಹಮಾನ್, ಸಂಬಂಧಿ ಅಮ್ಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ‌ ಮಾಡುತ್ತಿದ್ದಳು. ಸುಮಾರು 15 ನಕಲಿ‌ ಸೋಷಿಯಲ್ ಮೀಡಿಯಾ ಖಾತೆಗಳನ್ನು ಹೊಂದಿದ್ದಾಳೆ. ಈ ಹಿಂದೆ ಎನ್ಐಎನಿಂದ ಬಂಧಿತನಾಗಿದ್ದ ಮಾದೇಶ ಪೆರುಮಾಳ್‌ನ​ನ್ನು ಮತಾಂತರ ಮಾಡಿ ಐಸಿಸ್​ಗೆ ಕೆಲಸ ಮಾಡುವಂತೆ ಮಾಡಿದ್ದಳು. ಇದುವರೆಗೂ ಸುಮಾರು 10 ಯುವಕರನ್ನು ಮತಾಂತರಗೊಳಿಸಿ ಐಸಿಸ್​ಗೆ ಸೇರಿಸಿದ್ದಾಳೆ ಎಂದು ಎನ್ಐಎ ದೂರಿದೆ.

ಇದನ್ನೂ ಓದಿ: Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Continue Reading
Advertisement
pm narendra modi yogi adityanath
ಪ್ರಮುಖ ಸುದ್ದಿ18 mins ago

PM Narendra Modi: ʼಗೂಂಡಾರಾಜ್‌ʼ ನೆನಪಿಸಿದ ಮೋದಿ, ʼಯೋಗಿ ಸ್ವಚ್ಛತಾ ಅಭಿಯಾನ…ʼಕ್ಕೆ ಮೆಚ್ಚುಗೆ

Viral video
ವೈರಲ್ ನ್ಯೂಸ್27 mins ago

Viral Video: ಪನ್ನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

Head Coach
ಕ್ರೀಡೆ29 mins ago

Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

Drowned in water
ಹಾಸನ53 mins ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

HD DeveGowda Wont celebrate 92nd birthday
ರಾಜಕೀಯ56 mins ago

HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

hd revanna case
ಕ್ರೈಂ60 mins ago

HD Revanna Case: ಎಚ್‌ಡಿ ರೇವಣ್ಣ ಮತ್ತೆ ಕೋರ್ಟ್‌ನಲ್ಲಿ; ಎಸ್‌ಐಟಿ ಅಧಿಕಾರಿಗಳು ರೇವಣ್ಣ ನಿವಾಸದಲ್ಲಿ!

Murder case
ದಾವಣಗೆರೆ1 hour ago

Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Amruthadhaare Serial bhoomika in birthday chaya singh
ಕಿರುತೆರೆ1 hour ago

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Theft in two houses in Kudligi taluk
ವಿಜಯನಗರ1 hour ago

Theft Case: ಕೂಡ್ಲಿಗಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

Prajwal Revanna Case Lawyer DevarajeGowda sent to police custody for another day
ಕ್ರೈಂ1 hour ago

Prajwal Revanna Case: ವಕೀಲ ದೇವರಾಜೇಗೌಡ ಮತ್ತೊಂದು ದಿನ ಪೊಲೀಸ್‌ ಕಸ್ಟಡಿಗೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌