ವಿಸ್ತಾರ Explainer: ರಾಹುಲ್‌ ಗಾಂಧಿ ಅನರ್ಹತೆ: ಏನಿದು? ಮುಂದೇನಾಗಲಿದೆ? - Vistara News

EXPLAINER

ವಿಸ್ತಾರ Explainer: ರಾಹುಲ್‌ ಗಾಂಧಿ ಅನರ್ಹತೆ: ಏನಿದು? ಮುಂದೇನಾಗಲಿದೆ?

ಕಾಂಗ್ರೆಸ್‌ ಮುಖಂಡ, ವಯನಾಡ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ವಿಧಿಸಲಾಗಿರುವ ಅನೂರ್ಹತೆ ಎಲ್ಲಿಯವರೆಗೆ ಊರ್ಜಿತ? ಯಾವಾಗ, ಹೇಗೆ ತೆರವಾಗಬಹುದು? ಈಗ ಅವರ ಮುಂದಿರುವ ದಾರಿಯೇನು? ಇಲ್ಲಿದೆ ವಿವರ.

VISTARANEWS.COM


on

Rahul Gandhi Disqualified
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಂಗ್ರೆಸ್‌ ಮುಖಂಡ, ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ನಂತರ ತಮ್ಮ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇದರಿಂದಾಗಿ ಮುಂದೆ ಯಾವ ಸನ್ನಿವೇಶಗಳು ಉಂಟಾಗಬಹುದು? ಒಂದು ವಿಶ್ಲೇಷಣೆ ಇಲ್ಲಿದೆ.

ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಸೂರತ್‌ನ ಸ್ಥಳೀಯ ನ್ಯಾಯಾಲಯವು ದೋಷಿ ಎಂದು ಘೋಷಿಸಿ ಶಿಕ್ಷೆ ವಿಧಿಸಿದ ನಂತರ ಸಂಸತ್ತಿನ ಸದಸ್ಯತ್ವವನ್ನು ಗುರುವಾರ ರದ್ದುಗೊಳಿಸಲಾಗಿದೆ. ಲೋಕಸಭೆಯ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಅಧಿಸೂಚನೆಯಲ್ಲಿ “ಸಂವಿಧಾನದ 102 (1) (ಇ) ವಿಧಿಯ ನಿಬಂಧನೆಗಳ ಪ್ರಕಾರ, ಹಾಗೂ ಭಾರತ ಪ್ರಜಾಪ್ರತಿನಿಧಿ ಕಾಯಿದೆ- 1951ರ ಸೆಕ್ಷನ್ 8ರ ಪ್ರಕಾರ, 2023ರ ಮಾರ್ಚ್ 23ರಿಂದ, ಅವರ ಅಪರಾಧ ಸಾಬೀತಾದ ದಿನಾಂಕದಿಂದ ಲೋಕಸಭೆಯ ಸದಸ್ಯತ್ವದಿಂದ ರಾಹುಲ್‌ ಗಾಂಧಿ ಅನರ್ಹರಾಗಿದ್ದಾರೆ” ಎಂದಿದೆ.

ಏಕೆ ಈ ಅಧಿಸೂಚನೆ?

ಇದು ಲೋಕಸಭೆ ಕಾರ್ಯಾಲಯದ ಪ್ರಕ್ರಿಯೆಯ ಒಂದು ಭಾಗ. ಹಾಲಿ ಸಂಸದರು ಅಥವಾ ಶಾಸಕರು ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದರೆ ಅದನ್ನು ಸ್ಪೀಕರ್ ಅಥವಾ ಸಭಾಪತಿಯವರ ಹಾಗೂ ಆಯಾ ರಾಜ್ಯದ ಚುನಾವಣಾ ಆಯೋಗ ಮುಖ್ಯಸ್ಥರ ಗಮನಕ್ಕೆ ತರುವುದನ್ನು ಖಚಿತಪಡಿಸಿಕೊಳ್ಳುವಂತೆ ಆಯಾ ಇಲಾಖೆಗಳಿಗೆ ಅಕ್ಟೋಬರ್ 13, 2015ರಂದು, ಭಾರತೀಯ ಚುನಾವಣಾ ಆಯೋಗ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶಿಸಿತ್ತು. ಇದು ಶಿಕ್ಷೆಯ ಆದೇಶ ಬಂದು ಏಳು ದಿನಗಳಲ್ಲಿ ಆಗಬೇಕಿದೆ.

ಪ್ರಜಾಪ್ರತಿನಿಧಿ ಕಾಯಿದೆ- 1951ರ ಸೆಕ್ಷನ್ 8(3) ಹೀಗೆ ಹೇಳುತ್ತದೆ: “ಯಾವುದೇ ಅಪರಾಧದಲ್ಲಿ ತಪ್ಪಿತಸ್ಥರೆಂದು ನಿರ್ಣಯವಾಗಿ ಎರಡು ವರ್ಷಕ್ಕಿಂತ ಕಡಿಮೆಯಿಲ್ಲದ ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಅಂತಹ ಅಪರಾಧ ನಿರ್ಣಯದ ದಿನಾಂಕದಿಂದ ಅನರ್ಹಗೊಳಿಸಲಾಗುತ್ತದೆ. ಹಾಗೂ ಆತನ ಬಿಡುಗಡೆಯ ನಂತರದ ಮುಂದಿನ ಆರು ವರ್ಷಗಳ ಅವಧಿಯವರೆಗೂ ಅನರ್ಹತೆ ಮುಂದುವರಿಯುತ್ತದೆ.

ಇದರ ಪ್ರಕಾರ, ಅನರ್ಹತೆಯು ಉಂಟಾಗುವುದು ನ್ಯಾಯಾಲಯ ನೀಡಿರುವ ಶಿಕ್ಷೆಯಿಂದಲೇ ಹೊರತು ಲೋಕಸಭೆಯ ಅಧಿಸೂಚನೆಯಿಂದಲ್ಲ. ಹೀಗಾಗಿ ಶುಕ್ರವಾರ ಲೋಕಸಭೆಯಲ್ಲಿದ್ದ ರಾಹುಲ್‌ಗೆ ಈ ಸೂಚನೆ ನೀಡಿರುವುದು ಸದನವನ್ನು ಮುಂದೂಡುವ ಮುನ್ನದ ಒಂದು ಔಪಚಾರಿಕ ಸೂಚನೆ.

ಅನರ್ಹಗೊಂಡ ಶಾಸಕರ ಪ್ರಕರಣದಲ್ಲಿ ಸಂಬಂಧಿಸಿದ ವಿಧಾನಸಭೆಯಿಂದ ನೋಟಿಸ್ ನೀಡಲಾಗುತ್ತದೆ. ಉದಾಹರಣೆಗೆ, ಸಮಾಜವಾದಿ ಪಕ್ಷದ ಶಾಸಕ ಅಜಂ ಖಾನ್ ಪ್ರಕರಣದಲ್ಲಿ, ಉತ್ತರ ಪ್ರದೇಶ ವಿಧಾನಸಭೆಯ ಸೆಕ್ರೆಟರಿಯೇಟ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅರಿಗೆ ಅನರ್ಹತೆಯ ಸೂಚನೆಯನ್ನು ನೀಡಿತ್ತು.

ಈ ನಿಟ್ಟಿನಲ್ಲಿ ಸ್ಪೀಕರ್ ಅಧಿಕಾರ ಅಂತಿಮವೇ?

ಲೋಕ್ ಪ್ರಹರಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ (2018) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಒಂದು ತೀರ್ಪು ನೀಡಿದೆ. ಅದರ ಪ್ರಕಾರ, ಮೇಲಿನ ನ್ಯಾಯಾಲಯವು ಅಪರಾಧ ನಿರ್ಣಯಕ್ಕೆ ತಡೆ ನೀಡಿದರೆ, ಈ ಅನರ್ಹತೆಯನ್ನು ರದ್ದುಗೊಳಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ. “ಮೇಲ್ಮನವಿಯ ವಿಚಾರಣೆ ಬಾಕಿ ಇರುವಾಗ, ಶಿಕ್ಷೆಯನ್ನು ತಡೆಹಿಡಿಯಲಾಗುತ್ತದೆ. ಹಾಗಾಗಿ ಶಿಕ್ಷೆಯ ಪರಿಣಾಮವಾಗಿ ಜಾರಿಗೆ ಬರುವ ಅನರ್ಹತೆಯು ಜಾರಿಯಲ್ಲಿರಲು ಅಥವಾ ಉಳಿಯಲು ಸಾಧ್ಯವಿಲ್ಲ” ಎಂದು ತೀರ್ಪು ಹೇಳಿದೆ.

ಅಂದರೆ, ಕೋರ್ಟ್‌ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ, ಸದನ ಸಚಿವಾಲಯದ ಅಧಿಸೂಚನೆಯು ರದ್ದಾಗುತ್ತದೆ.

ಅನರ್ಹತೆಗೆ ಕಾರಣವಾದ ಕಾನೂನುಗಳ್ಯಾವುದು?

ಸಂವಿಧಾನದ ಆರ್ಟಿಕಲ್ 102(1)(ಇ) ಮತ್ತು ಜನಪ್ರತಿನಿಧಿ ಕಾಯಿದೆಯ (ಆರ್‌ಪಿ ಕಾಯಿದೆ) ಸೆಕ್ಷನ್ 8 ಸಂಸದೀಯ ಸದಸ್ಯರ ಅನರ್ಹತೆಗೆ ಕಾರಣಗಳನ್ನು ನೀಡುತ್ತದೆ. ಸಂವಿಧಾನದ 102ನೇ ವಿಧಿಯ ಉಪ ಕಲಂ (ಇ) ಹೇಳುವಂತೆ ಸಂಸದರೊಬ್ಬರು “ಸಂಸತ್ ಮಾಡಿದ ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿದ್ದರೆ” ಅವರು ಸದನದ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ. ಈ ಪ್ರಕರಣದಲ್ಲಿರುವುದು ಆರ್‌ಪಿ ಕಾಯಿದೆ.

RP ಕಾಯಿದೆಯ ಸೆಕ್ಷನ್ 8 ಕೆಲವು ಅಪರಾಧಗಳಲ್ಲಿ ಶಾಸಕರು ಶಿಕ್ಷೆ ಪಡೆದರೆ ಅವರ ಅನರ್ಹತೆಯ ಬಗ್ಗೆ ತಿಳಿಸುತ್ತದೆ. “ರಾಜಕೀಯದ ಅಪರಾಧೀಕರಣವನ್ನು ತಡೆಗಟ್ಟುವುದು ಮತ್ತು ʼಕಳಂಕಿತ’ ಶಾಸಕರನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯುವ ಗುರಿಯನ್ನುʼ ಈ ಕಾಯಿದೆ ಹೊಂದಿದೆ.

Jail sentence for Rahul Gandhi: A cautionary lesson for politicians who make lofty statements

ರಾಹುಲ್ ಕಳೆದುಕೊಳ್ಳುವುದೇನು?

ಲೋಕಸಭಾ ಸಂಸದರಾಗಿ ರಾಹುಲ್ ಅವರು ಲ್ಯುಟೆನ್ಸ್‌ ದೆಹಲಿಯಲ್ಲಿ ಮನೆಯನ್ನು ಹೊಂದಿದ್ದರು. ಅವರ ಅನರ್ಹತೆಯ ನಂತರ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಗಳ ಪ್ರಕಾರ, ಅವರ 12 ತುಘಲಕ್ ಲೇನ್ ಮನೆಯನ್ನು ಖಾಲಿ ಮಾಡಬೇಕು. ಇದಕ್ಕೆ ಅವರಿಗೆ ಒಂದು ತಿಂಗಳ ಕಾಲಾವಕಾಶವಿದೆ. 2004ರಲ್ಲಿ ಅಮೇಠಿಯಿಂದ ಸಂಸದರಾಗಿ ಆಯ್ಕೆಯಾದ ಬಳಿಕ ರಾಹುಲ್‌ಗೆ ಮನೆ ಮಂಜೂರು ಮಾಡಲಾಗಿತ್ತು.

ಮುಂದಿನ ಕ್ರಮಕ್ಕಾಗಿ ಲೋಕಸಭಾ ಸಚಿವಾಲಯವು ಅನರ್ಹತೆಯ ಅಧಿಸೂಚನೆಯ ಪ್ರತಿಯನ್ನು ಎಸ್ಟೇಟ್ ನಿರ್ದೇಶನಾಲಯದ ಸಂಪರ್ಕ ಅಧಿಕಾರಿಗೆ ಕಳುಹಿಸಿದೆ. ಬಂಗಲೆಯು ಲೋಕಸಭೆಯ ವಸತಿ ಆಸ್ತಿಗಳಿಗೆ ಸೇರಿರುವುದರಿಂದ, ಇದನ್ನು ತೆರವು ಮಾಡುವ ಕ್ರಮವನ್ನು ಲೋಕಸಭೆ ಸಚಿವಾಲಯ ನಿರ್ವಹಿಸಬೇಕಾಗುತ್ತದೆ. ಸಂಸದರು ಅನುಭವಿಸುವ ಎಲ್ಲಾ ಇತರ ಸವಲತ್ತುಗಳನ್ನು ಸಹ ರಾಹುಲ್ ಕಳೆದುಕೊಳ್ಳುತ್ತಾರೆ.

ಈಗ ವಯನಾಡ್‌ ಕ್ಷೇತ್ರದ ಗತಿಯೇನು?

ಚುನಾವಣಾ ಆಯೋಗವು ರಾಹುಲ್‌ ಪ್ರತಿನಿಧಿಸುತ್ತಿದ್ದ ವಯನಾಡ್‌ ಸಂಸತ್‌ ಸ್ಥಾನಕ್ಕೆ ಉಪಚುನಾವಣೆಯನ್ನು ಘೋಷಿಸಬಹುದು. ಅಜಮ್ ಖಾನ್ ಅವರ ಪ್ರಕರಣದಲ್ಲಿ, ಖಾನ್ ಅವರ 37-ರಾಮ್‌ಪುರ ಸ್ಥಾನಕ್ಕೆ (ದೇಶದಾದ್ಯಂತ ನಾಲ್ಕು ಇತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಉಪಚುನಾವಣೆಗಳ ಜೊತೆಗೆ) ಉಪಚುನಾವಣೆಯನ್ನು ಕೆಲವೇ ದಿನಗಳಲ್ಲಿ ಘೋಷಿಸಲಾಗಿತ್ತು.

ಇದನ್ನೂ ಓದಿ: Rahul Gandhi Disqualified: ‘ನಾನು ಎಲ್ಲದಕ್ಕೂ ಸಿದ್ಧ’, ಅನರ್ಹತೆ ಬಳಿಕ ರಾಹುಲ್‌ ಗಾಂಧಿ ಹೇಳಿದ್ದೇನು?

ಆದರೂ ಲಕ್ಷದ್ವೀಪ ಸಂಸದ ಪಿಪಿ ಮೊಹಮ್ಮದ್ ಫೈಸಲ್ ಅವರ ಇತ್ತೀಚಿನ ಪ್ರಕರಣದಲ್ಲಿ, ಸಂಸದರಿಗೆ ಶಿಕ್ಷೆಯಾದ ನಂತರ ಜನವರಿ 18ರಂದು ಉಪಚುನಾವಣೆ ಘೋಷಿಸಲಾಗಿತ್ತು. ಜನವರಿ 30ರಂದು ಕೇರಳ ಹೈಕೋರ್ಟ್ ಫೈಸಲ್ ಅವರ ಶಿಕ್ಷೆಯನ್ನು ರದ್ದುಗೊಳಿಸಿದ ಬಳಿಕ ಚುನಾವಣೆ ಆಯೋಗವು ಈ ಘೋಷಣೆಯನ್ನು ಹಿಂಪಡೆಯಬೇಕಾಯಿತು.

ಇಲ್ಲಿ ರಾಹುಲ್ ಗಾಂಧಿಗೆ ಯಾವ ಆಯ್ಕೆಗಳಿವೆ?

ಒಂದು ವೇಳೆ ಉನ್ನತ ನ್ಯಾಯಾಲಯವು ಶಿಕ್ಷೆಗೆ ತಡೆ ನೀಡಿದರೆ ಅಥವಾ ಅವರ ಪರವಾಗಿ ಮೇಲ್ಮನವಿಯನ್ನು ನಿರ್ಧರಿಸಿದರೆ ಅವರ ಅನರ್ಹತೆಯನ್ನು ರದ್ದುಗೊಳಿಸಬಹುದು. ಮೊದಲು ಅವರು ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಮಾಡಬೇಕಾಗುತ್ತದೆ. ಅಲ್ಲಿ ಆಗದಿದ್ದರೆ ಮುಂದೆ ಗುಜರಾತ್ ಹೈಕೋರ್ಟಿನ ಮುಂದೆ ಹೋಗಬೇಕಾಗುತ್ತದೆ.

ನ್ಯಾಯಾಲಯದಿಂದ ಅವರು ಪರಿಹಾರ ಪಡೆಯದಿದ್ದರೆ ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಅಂದರೆ ಅವರ ಶಿಕ್ಷೆಯ ಎರಡು ವರ್ಷಗಳು, ಜೊತೆಗೆ RP ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ನಂತರದ ಆರು ವರ್ಷಗಳು. ಒಟ್ಟು ಎಂಟು.

ಈಗಾಗಲೇ ಮೇಲ್ಮನವಿ ಸಲ್ಲಿಸಲು ಸಮಯ ಕೋರಿ ಅವರ ವಕೀಲ ಕಿರಿತ್ ಪನ್ವಾಲಾ ಶುಕ್ರವಾರ ಸೂರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: Rahul Gandhi Disqualified: ರಾಹುಲ್‌ ಗಾಂಧಿ ಅನರ್ಹತೆ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆ ಮಾನ್ಯತೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

CAA: ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

CAA: ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ. ಅಷ್ಟಕ್ಕೂ ಸಿಎಎ ಎಂದರೇನು? ಕೇಂದ್ರದ ಪ್ರಮಾಣಪತ್ರಗಳಲ್ಲಿ ಏನಿರುತ್ತದೆ? ಇಲ್ಲಿದೆ ಮಾಹಿತಿ.

VISTARANEWS.COM


on

CAA
Koo

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ ಎಂದು ತಿಳಿದುಬಂದಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಯಾವ ದಾಖಲೆ ಕೊಡುವುದು ಕಡ್ಡಾಯ?

ಸಿಎಎ ಅಡಿಯಲ್ಲಿ ಭಾರತದ ಪೌರತ್ವ ಪಡೆಯಲು ವಲಸಿಗರು ಕೇಂದ್ರ ಸರ್ಕಾರಕ್ಕೆ ಹಲವು ದಾಖಲೆಗಳನ್ನು ನೀಡಬೇಕಾಗುತ್ತದೆ. ಜನನ ಪ್ರಮಾಣಪತ್ರ, ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಅದರ ದಾಖಲೆ, ಗುರುತಿನ ಚೀಟಿ ಅಥವಾ ದಾಖಲೆ, ವಾಹನ ಚಾಲನಾ ಪರವಾನಗಿ ಸೇರಿ ಯಾವುದೇ ಪರವಾನಗಿ, ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡುವುದು ಕಡ್ಡಾಯವಾಗಿದೆ. ಇವುಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರವು ಭಾರತದ ಪೌರತ್ವ ಪಡೆಯಲಿದ್ದಾರೆ.

ಭಾರತದ ಮುಸ್ಲಿಮರಿಗೆ ತೊಂದರೆ ಇಲ್ಲ

ಸಿಎಎ ಜಾರಿಯು ಭಾರತದ ಮುಸ್ಲಿಮರ ಪೌರತ್ವದ ಮೇಲೆ ಪರಿಣಾಮ ಬೀರಲು ಯಾವುದೇ ನಿಬಂಧನೆಗಳನ್ನು ಮಾಡಿಲ್ಲ. ಕಾನೂನಿಗೆ ಭಾರತದಲ್ಲಿರುವ 18 ಕೋಟಿ ಭಾರತೀಯ ಮುಸ್ಲಿಮರೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ತಮ್ಮ ಹಿಂದೂ ಸಹವರ್ತಿಗಳಂತೆ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕೂ ಮೊದಲು, ಸಿಎಎ ಎಂದರೆ, ಭಾರತದಲ್ಲಿರುವ ಮುಸ್ಲಿಮರ ಪೌರತ್ವವನ್ನು ರದ್ದುಗೊಳಿಸುವುದು ಎಂಬ ವದಂತಿ ಹಬ್ಬಿಸಲಾಗಿತ್ತು.

ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿಯ ಪ್ರಕಾರ ಏಪ್ರಿಲ್ 1, 2021ರಿಂದ ಡಿಸೆಂಬರ್ 31, 2021 ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಈ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಒಟ್ಟು 1,414 ವಿದೇಶಿಯರಿಗೆ ಪೌರತ್ವ ಕಾಯ್ದೆ, 1955 ರ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ.

ಇದನ್ನೂ ಓದಿ: CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Continue Reading

ಕರ್ನಾಟಕ

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 (Climate Plan) ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021 ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

VISTARANEWS.COM


on

By

Climate Plan
Koo

ಬೆಂಗಳೂರು: ಕರ್ನಾಟಕ (karnataka) ಸರ್ಕಾರ (government) 2021ರಲ್ಲಿ ಸಿದ್ಧಪಡಿಸಲಾದ ಹವಾಮಾನ ಕ್ರಿಯಾ ಯೋಜನೆ (Climate Plan) ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದೆ. ಈ ಬಾರಿ ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲ (worst droughts) ಎದುರಾಗಿದೆ. ಆದರೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ. ಈ ನಡುವೆ ಇದೀಗ ಹವಾಮಾನ ಕ್ರಿಯಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

42 ವಿವಿಧ ಇಲಾಖೆಗಳೊಂದಿಗೆ ಹಲವು ಬಾರಿ ಸಭೆ ನಡೆಸಿದ ಅಭಿವೃದ್ಧಿ ಆಯುಕ್ತರು, ಜೂನ್‌ನಲ್ಲಿ ಮಾದರಿ ನೀತಿ ಸಂಹಿತೆ ಹಿಂಪಡೆದ ಅನಂತರ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದರೊಂದಿಗೆ ಹವಾಮಾನ ಯೋಜನೆಯನ್ನು ಜಾರಿಗೆ ತಂದ ಮೊದಲ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಲಿದೆ ಎಂದು ತಿಳಿಸಿದ್ದರು. ಹವಾಮಾನ ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ ನಿರ್ದಿಷ್ಟ ಯೋಜನೆಗಳು, ಕಾರ್ಯಕ್ಷಮತೆ ಸೂಚಕಗಳು ಮತ್ತು ಗುರಿಗಳನ್ನು ಸಿದ್ಧಪಡಿಸಲು ನಾವು ಎಲ್ಲಾ ಇಲಾಖೆಗಳಿಗೆ ತಿಳಿಸಿದ್ದೇವೆ. ಮಾದರಿ ನೀತಿ ಸಂಹಿತೆ ಹಿಂತೆಗೆದುಕೊಂಡ ತಕ್ಷಣ ನಾವು ಸಚಿವ ಸಂಪುಟದ ಮುಂದೆ ಸಲ್ಲಿಕೆ ಮಾಡಲು ಯೋಜಿಸಿದ್ದೇವೆ ಎಂದು ಅಭಿವೃದ್ಧಿ ಆಯುಕ್ತ ಡಾ. ಶಾಲಿನಿ ರಜನೀಶ್ ಹೇಳಿದ್ದಾರೆ.

ಶೀಘ್ರ ಜಾರಿಯಾಗಬೇಕು

ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಮೇಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕು ಎನ್ನುತ್ತಾರೆ ತಜ್ಞರು. ಪರಿಸರ ಇಲಾಖೆಯ ಅಧಿಕಾರಿಯ ಪ್ರಕಾರ, ಕ್ರಿಯಾ ಯೋಜನೆಯಲ್ಲಿ ಸೂಚಿಸಲಾದ ಕ್ರಮಗಳನ್ನು ಸಂಯೋಜಿಸಲು ಮತ್ತು ತಮ್ಮ ಗುರಿಗಳನ್ನು ಸಲ್ಲಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಕೆಲಸ ಮಾಡಬೇಕಾಗುತ್ತದೆ. ಪ್ರಸ್ತುತ ಕಾರ್ಯನಿರ್ವಹಣೆಯೊಂದಿಗೆ ಬೇಸ್‌ಲೈನ್‌ನಂತೆ ಕಾರ್ಯನಿರ್ವಹಿಸುವ ಪಟ್ಟಿಯನ್ನು ಸಿದ್ಧಪಡಿಸಬೇಕು. ಉದಾಹರಣೆಗೆ, ಅರಣ್ಯ ಇಲಾಖೆಯು ತಾನು ಯೋಜಿಸಿರುವ ಅರಣ್ಯೀಕರಣದ ಪ್ರಮಾಣ ಮತ್ತು ಐದು ವರ್ಷಗಳಲ್ಲಿ ಗುರಿಯನ್ನು ಸಲ್ಲಿಸಬೇಕು ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಏನೆಲ್ಲಾ ಒಳಗೊಂಡಿರುತ್ತದೆ?

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಸಿದ್ಧಪಡಿಸಿದ ಕ್ರಿಯಾ ಯೋಜನೆಯು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹಲವಾರು ಮಧ್ಯಸ್ಥಿಕೆಗಳು ಮತ್ತು ಮೌಲ್ಯಮಾಪನ ತಂತ್ರಗಳನ್ನು ಸೂಚಿಸುತ್ತದೆ. ಕೃಷಿ, ತೋಟಗಾರಿಕೆ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು 10 ಇತರ ಕ್ಷೇತ್ರಗಳಲ್ಲಿ ಕ್ರಮಗಳನ್ನು ಜಾರಿಗೆ ತರಲು 2025 ಮತ್ತು 2030 ರ ನಡುವೆ ರಾಜ್ಯಕ್ಕೆ 52,827 ಕೋಟಿ ರೂಪಾಯಿ ಅಗತ್ಯವಿದೆ ಎಂದು ಯೋಜನೆ ಸೂಚಿಸುತ್ತದೆ.

ಹಣಕಾಸು ಅಂದಾಜು ಹೆಚ್ಚಳ ಸಾಧ್ಯತೆ

ಅರಣ್ಯೀಕರಣದಿಂದ ನವೀಕರಿಸಬಹುದಾದ ಶಕ್ತಿಯ ಬಳಕೆಯವರೆಗೆ, ಯೋಜನೆಯು ಪ್ರತಿಯೊಂದು ಇಲಾಖೆಗೆ ಕ್ರಮಗಳನ್ನು ಸೂಚಿಸುತ್ತದೆ.

ಹಣಕಾಸಿನ ಅಂದಾಜುಗಳನ್ನು 2021ರಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಈಗ ಹೆಚ್ಚಾಗಿರಬಹುದು. ಕ್ರಿಯಾ ಯೋಜನೆಯು ಹಣವನ್ನು ಸಂಗ್ರಹಿಸಲು ಹಲವಾರು ಹಣಕಾಸು ವಿಧಾನಗಳನ್ನು ರೂಪಿಸುತ್ತದೆ. ನಾವು ಇಲಾಖೆ-ನಿರ್ದಿಷ್ಟ ಯೋಜನೆಗಳನ್ನು ಹೊಂದಬಹುದು ಎಂದು ಕ್ರಿಯಾ ಯೋಜನೆ ತಯಾರಿಕೆಯ ಭಾಗವಾಗಿದ್ದ ಪ್ರೊ. ಕೃಷ್ಣ ರಾಜ್ ಹೇಳಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.


ಖಾಸಗಿ ಹೂಡಿಕೆಗಳನ್ನು ಆಕರ್ಷಿಸುವುದರಿಂದ ಹಿಡಿದು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಉತ್ತಮ ಬಳಕೆಗೆ, ಯೋಜನೆಯು ವಿವಿಧ ಹಣಕಾಸು ವಿಧಾನಗಳನ್ನು ವಿವರಿಸುತ್ತದೆ.ಬರ ಮತ್ತು ಪ್ರವಾಹಗಳ ಆವರ್ತನ ಹೆಚ್ಚಾಗಿದೆ. ತಾಪಮಾನ ಮತ್ತು ಮಳೆಯ ಮಾದರಿಗಳು ಅನಿರೀಕ್ಷಿತವಾಗಿವೆ. ಇವುಗಳು ಅನೇಕ ಕ್ಷೇತ್ರಗಳ ಮೇಲೆ, ವಿಶೇಷವಾಗಿ ಕೃಷಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಕೃಷಿಯ ಮೇಲೆ ಪರಿಣಾಮ ಬೀರಿದರೆ, ಅದು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಕ್ರಮವನ್ನು ಕಾರ್ಯಗತಗೊಳಿಸುವುದು ನಿರ್ಣಾಯಕವಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ಬರ ಪರಿಸ್ಥಿತಿ ಮತ್ತು ನೀರಿನ ಕೊರತೆಯಿಂದಾಗಿ ಅಧಿಕಾರಿಗಳು ಮತ್ತು ನಾಗರಿಕರಲ್ಲಿ ಜಾಗೃತಿ ಹೆಚ್ಚಾಗಿದೆ ಮತ್ತು ಆದ್ದರಿಂದ ಈ ಕ್ರಮಕ್ಕೆ ಇದು ಸರಿಯಾದ ಸಮಯ ಎಂದು ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ಏನು ಕ್ರಮ ?

ಕೃಷಿಗೆ ಶುಷ್ಕ- ಋತುವಿಗೆ ಸಂಬಂಧಿಸಿದ ವಿವಿಧ ಬೆಳೆ ಯೋಜನೆ, ನಿಖರವಾದ ನೀರಾವರಿ ತಂತ್ರಜ್ಞಾನ ಅಳವಡಿಕೆ. ಅರಣ್ಯಕ್ಕೆ ಹವಾಮಾನಕ್ಕೆ ಪೂರಕವಾದ ಅರಣ್ಯೀಕರಣ ಕಾರ್ಯಕ್ರಮಗಳು, ಜಾನುವಾರುಗಳ ಸಮಗ್ರ ರೋಗಗಾಲ ಮೇಲೆ ಕಣ್ಗಾವಲು ಮತ್ತು ತಕ್ಷಣ ಪ್ರತಿಕ್ರಿಯೆ ನೀಡಲು ಕ್ರಮ. ಅಂತರ್ಜಲ ಹೆಚ್ಚಳಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದು. ಶಕ್ತಿ ಮೂಲಗಳಲ್ಲಿ ನವೀಕರಿಸಬಹುದಾದ ವಸ್ತುಗಳ ಮೇಲೆ ಹೆಚ್ಚಿನ ಗಮನ ಹರಿಸುವುದು ಮೊದಲಾದವುಗಳನ್ನು ಹವಾಮಾನ ಕ್ರಿಯಾ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ.

Continue Reading

ರಾಜಕೀಯ

POK Explainer in Kannada: ಪಾಕ್ ಆಕ್ರಮಿತ ಕಾಶ್ಮೀರ ಕುರಿತ 15 ಕುತೂಹಲಕಾರಿ ಸಂಗತಿಗಳು

POK Explainer in Kannada: ಕಾಶ್ಮೀರದ ಭಾಗವಾಗಿರುವ ಪಾಕ್ ಆಕ್ರಮಿತ ಕಾಶ್ಮೀರ (Pakistan Occupied Kashmir) ನಿರಂತರ ಚರ್ಚೆಯಲ್ಲಿರುವ ಪ್ರದೇಶ. ಸುಮಾರು 52 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಪಿಒಕೆ ಅಭಿವೃದ್ಧಿ ವಿಚಾರದಲ್ಲಿ ಇನ್ನೂ ಹಿಂದುಳಿದಿದೆ. ಇದಕ್ಕೆ ಮುಖ್ಯ ಕಾರಣ ಈ ಪ್ರದೇಶದ ಆಡಳಿತವನ್ನು ಪಾಕಿಸ್ತಾನ ಸರ್ಕಾರ ನಿಯಂತ್ರಿಸುತ್ತಿರುವುದು. ಆದರೂ ಇಲ್ಲಿನ ಕುರಿತು ತಿಳಿದುಕೊಳ್ಳಬೇಕಾದ ಹಲವಾರು ಪ್ರಮುಖ ಅಂಶಗಳಿವೆ. ಪಿಒಕೆ ಕುರಿತ ಮಹತ್ವದ ಮಾಹಿತಿ ಇಲ್ಲಿದೆ.

VISTARANEWS.COM


on

By

POK Explainer in Kannada
Koo

ಪಾಕಿಸ್ತಾನವು (pakistan) 1947ರಲ್ಲಿ ಅಕ್ರಮವಾಗಿ ಆಕ್ರಮಿಸಿಕೊಂಡಿರುವ (POK Explainer in Kannada) ಕಾಶ್ಮೀರದ (kashmir) ಭಾಗಗಳನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (Pakistan Occupied Kashmir) ಎಂದು ಕರೆಯಲಾಗುತ್ತದೆ. ಪಾಕಿಸ್ತಾನವು ಪಿಒಕೆಯನ್ನು (POK) ಎರಡು ಭಾಗಗಳಾಗಿ ವಿಂಗಡಿಸಿದೆ. ಒಂದು ಆಜಾದ್ ಕಾಶ್ಮೀರ (Azad Kashmir) ಹಾಗೂ ಮತ್ತೊಂದು ಗಿಲ್ಗಿಟ್-ಬಾಲ್ಟಿಸ್ತಾನ್ (Gilgit-Baltistan). ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನಸಂಖ್ಯೆ 2020ರಲ್ಲಿ ಸುಮಾರು 52 ಲಕ್ಷ ಇತ್ತು. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಈಗ ದಂಗೆ ಭುಗಿಲೆದ್ದಿದೆ. ಅಲ್ಲಿಯ ಜನ, ಭಾರತದ ಜತೆ ವೀಲೀನವಾಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ಅನಂತರ ಈಗ ಭಾರತೀಯ ಜನರು ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳುವಂತೆ ಭಾರತ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಕಾರಣಗಳೂ ಇವೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಸಂಬಂಧಿಸಿದ ಅನೇಕ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ.


ಪಿಒಕೆ ಎಂದರೇನು?

ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದ್ದು, 1947ರಲ್ಲಿ ಪಾಕಿಸ್ತಾನದಿಂದ ಆಕ್ರಮಣಕ್ಕೊಳಗಾದ ಜಮ್ಮು ಮತ್ತು ಕಾಶ್ಮೀರದ ಭಾಗವಾಗಿದೆ.

1. ಪಿಒಕೆಯನ್ನು ಆಡಳಿತಾತ್ಮಕವಾಗಿ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಇದನ್ನು ಅಧಿಕೃತವಾಗಿ ಜಮ್ಮು ಮತ್ತು ಕಾಶ್ಮೀರ ಮತ್ತು ಗಿಲ್ಗಿಟ್- ಬಾಲ್ಟಿಸ್ತಾನ್ ಎಂದು ಕರೆಯಲಾಗುತ್ತದೆ. ಪಾಕಿಸ್ತಾನದಲ್ಲಿ ‘ಆಜಾದ್ ಜಮ್ಮು ಮತ್ತು ಕಾಶ್ಮೀರ’ವನ್ನು ಆಜಾದ್ ಕಾಶ್ಮೀರ ಎಂದೂ ಕರೆಯುತ್ತಾರೆ.

2. ಪಾಕ್ ಆಕ್ರಮಿತ ಕಾಶ್ಮೀರದ ಮುಖ್ಯಸ್ಥರು ಅಧ್ಯಕ್ಷರಾಗಿದ್ದರೆ, ಪ್ರಧಾನಮಂತ್ರಿಗಳು ಮಂತ್ರಿಗಳ ಮಂಡಳಿಯಿಂದ ಬೆಂಬಲಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾರೆ.

3. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ತನ್ನ ಸ್ವ-ಆಡಳಿತ ಅಸೆಂಬ್ಲಿ ಎಂದು ಹೇಳಿಕೊಂಡಿದೆ. ಆದರೆ ವಾಸ್ತವವೆಂದರೆ ಅದು ಪಾಕಿಸ್ತಾನದ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತದೆ.

4. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮೂಲ ಕಾಶ್ಮೀರದ ಒಂದು ಭಾಗವಾಗಿದೆ. ಇದರ ಗಡಿಗಳು ಪಾಕಿಸ್ತಾನದ ಪಂಜಾಬ್ ಪ್ರದೇಶ, ವಾಯವ್ಯ, ಅಫ್ಘಾನಿಸ್ತಾನದ ವಖಾನ್ ಕಾರಿಡಾರ್, ಚೀನಾದ ಕ್ಸಿನ್‌ಜಿಯಾಂಗ್ ಪ್ರದೇಶ ಮತ್ತು ಭಾರತದ ಕಾಶ್ಮೀರದ ಪೂರ್ವಕ್ಕೆ ಸ್ಪರ್ಶಿಸುತ್ತವೆ.

5. ಗಿಲ್ಗಿಟ್- ಬಾಲ್ಟಿಸ್ತಾನ್‌ವನ್ನು ತೆಗೆದುಹಾಕಿದರೆ, ಆಜಾದ್ ಕಾಶ್ಮೀರದ ಪ್ರದೇಶವು 13,300 ಚದರ ಕಿಲೋಮೀಟರ್‌ಗಳಷ್ಟು ಅಂದರೆ ಸರಿಸುಮಾರು ಭಾರತದ ಕಾಶ್ಮೀರದ ಸುಮಾರು 3 ಪಟ್ಟು ವಿಶಾಲವಾಗಿದೆ ಮತ್ತು ಅದರ ಜನಸಂಖ್ಯೆಯು ಸುಮಾರು 52 ಲಕ್ಷ.

6. ಆಜಾದ್ ಕಾಶ್ಮೀರದ ರಾಜಧಾನಿ ಮುಜಫರಾಬಾದ್. ಇದು 10 ಜಿಲ್ಲೆಗಳು, 33 ತೆಹಸಿಲ್‌ಗಳು ಮತ್ತು 182 ಫೆಡರಲ್ ಕೌನ್ಸಿಲ್‌ಗಳನ್ನು ಹೊಂದಿದೆ.

7. ಪಾಕ್ ಆಕ್ರಮಿತ ಕಾಶ್ಮೀರದ ದಕ್ಷಿಣ ಭಾಗದಲ್ಲಿ 8 ಜಿಲ್ಲೆಗಳಿವೆ. ಮಿರ್ ಪುರ್, ಭಿಂಬರ್, ಕೋಟ್ಲಿ, ಮುಜಫರಾಬಾದ್, ಬಾಗ್, ನೀಲಂ, ರಾವಲಕೋಟ್ ಮತ್ತು ಸುಧಾನೋತಿ.

8. ಪಾಕ್ ಆಕ್ರಮಿತ ಕಾಶ್ಮೀರದ ಹುಂಜಾ-ಗಿಲ್ಗಿಟ್, ಶಕ್ಸ್‌ಗಾಮ್ ಕಣಿವೆ, ರಕ್ಸಾಮ್ ಮತ್ತು ಬಾಲ್ಟಿಸ್ತಾನ್ ಪ್ರದೇಶವನ್ನು 1963ರಲ್ಲಿ ಪಾಕಿಸ್ತಾನವು ಚೀನಾಕ್ಕೆ ಹಸ್ತಾಂತರಿಸಿತು. ಈ ಪ್ರದೇಶವನ್ನು ಸೆಡೆಡ್ ಪ್ರದೇಶ ಅಥವಾ ಟ್ರಾನ್ಸ್-ಕಾರಕೋರಂ ಟ್ರ್ಯಾಕ್ಟ್ ಎಂದು ಕರೆಯಲಾಗುತ್ತದೆ.

9. ಪಿಒಕೆಯ ಜನರು ಮುಖ್ಯವಾಗಿ ಕೃಷಿ ಮಾಡುತ್ತಾರೆ. ಅವರ ಮುಖ್ಯ ಆದಾಯದ ಮೂಲಗಳು ಜೋಳ, ಗೋಧಿ, ಅರಣ್ಯ ಮತ್ತು ಜಾನುವಾರುಗಳು.

10. ಈ ಪ್ರದೇಶದಲ್ಲಿ ಕಡಿಮೆ ದರ್ಜೆಯ ಕಲ್ಲಿದ್ದಲು ನಿಕ್ಷೇಪಗಳಿವೆ, ಸೀಮೆಸುಣ್ಣದ ನಿಕ್ಷೇಪಗಳು, ಬಾಕ್ಸೈಟ್ ನಿಕ್ಷೇಪಗಳು ಕಂಡುಬರುತ್ತವೆ. ಕೆತ್ತಿದ ಮರದ ವಸ್ತುಗಳು, ಜವಳಿ ಮತ್ತು ಕಾರ್ಪೆಟ್‌ಗಳ ತಯಾರಿಕೆಯು ಈ ಪ್ರದೇಶಗಳಲ್ಲಿ ನೆಲೆಗೊಂಡಿರುವ ಕೈಗಾರಿಕೆಗಳ ಮುಖ್ಯ ಉತ್ಪನ್ನಗಳಾಗಿವೆ.

11. ಈ ಪ್ರದೇಶದಲ್ಲಿನ ಕೃಷಿ ಉತ್ಪನ್ನಗಳಲ್ಲಿ ಅಣಬೆ, ಜೇನು, ವಾಲ್ನಟ್, ಸೇಬು, ಚೆರ್ರಿ, ಔಷಧೀಯ ಗಿಡಮೂಲಿಕೆ ಮತ್ತು ಸಸ್ಯಗಳು, ರಾಳ, ಮೇಪಲ್ ಮರಗಳು ಸೇರಿವೆ.

12. ಈ ಪ್ರದೇಶದಲ್ಲಿ ಶಾಲೆಗಳು ಮತ್ತು ಕಾಲೇಜುಗಳ ಕೊರತೆಯಿದೆ. ಆದರೆ ಈ ಪ್ರದೇಶವು ಶೇ. 72ರಷ್ಟು ಸಾಕ್ಷರತೆಯನ್ನು ಹೊಂದಿದೆ.

13. ಪಾಷ್ಟೋ, ಉರ್ದು, ಕಾಶ್ಮೀರಿ ಮತ್ತು ಪಂಜಾಬಿಯಂತಹ ಭಾಷೆಗಳನ್ನು ಇಲ್ಲಿನ ಜನರು ಪ್ರಮುಖವಾಗಿ ಮಾತನಾಡುತ್ತಾರೆ.

14. ಪಾಕ್ ಆಕ್ರಮಿತ ಕಾಶ್ಮೀರ ತನ್ನದೇ ಆದ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಅನ್ನು ಸಹ ಹೊಂದಿದೆ.


ವಿವಾದದ ಮೂಲ ಏನು?

1947ರಲ್ಲಿ ಪಾಕಿಸ್ತಾನದ ಪಷ್ಟೂನ್ ಬುಡಕಟ್ಟು ಜನಾಂಗದವರು ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ಮಾಡಿದರು. ಇವರಿಗೆ ಪಾಕ್‌ ಸೇನೆಯ ಕುಮ್ಮಕ್ಕು ಇತ್ತು. ಆಗ ಈ ನಿರ್ಣಾಯಕ ಪರಿಸ್ಥಿತಿಯನ್ನು ನಿಭಾಯಿಸಲು ಆ ಕಾಲದ ಆಡಳಿತಗಾರ ಜಮ್ಮು ಮತ್ತು ಕಾಶ್ಮೀರದ ಮಹಾರಾಜ ಹರಿ ಸಿಂಗ್ ಅವರು ಭಾರತ ಸರ್ಕಾರದಿಂದ ಮಿಲಿಟರಿ ಸಹಾಯವನ್ನು ಕೋರಿದರು ಮತ್ತು ಅಂದಿನ ಭಾರತದ ಗವರ್ನರ್ ಜನರಲ್ ಮೌಂಟ್ ಬ್ಯಾಟನ್ ಅವರು 26 ಅಕ್ಟೋಬರ್ 1947ರಂದು ಒಪ್ಪಂದಕ್ಕೆ ಸಹಿ ಹಾಕಿದರು. ಇದರಲ್ಲಿ ಮೂರು ವಿಷಯಗಳು ರಕ್ಷಣೆ, ವಿದೇಶಾಂಗ ವ್ಯವಹಾರಗಳು ಮತ್ತು ಸಂವಹನಗಳು ಭಾರತಕ್ಕೆ ಹಸ್ತಾಂತರಿಸಲಾಯಿತು. ಈ ವಿಷಯಗಳನ್ನು ಹೊರತುಪಡಿಸಿ, ಜಮ್ಮು ಮತ್ತು ಕಾಶ್ಮೀರವು ತನ್ನ ಎಲ್ಲಾ ನಿರ್ಧಾರಗಳಿಗೆ ಮುಕ್ತವಾಗಿತ್ತು.

ಒಪ್ಪಂದದ ಈ ಸೇರ್ಪಡೆಯ ಆಧಾರದ ಮೇಲೆ ಭಾರತ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯಪ್ರವೇಶಿಸುವ ಸಂಪೂರ್ಣ ಹಕ್ಕನ್ನು ಹೊಂದಿದೆ ಎಂದು ಹೇಳುತ್ತದೆ. ಮತ್ತೊಂದೆಡೆ ಪಾಕಿಸ್ತಾನ ಇದನ್ನು ಒಪ್ಪುವುದಿಲ್ಲ.

ಪಾಕಿಸ್ತಾನದ ವಾದ ಏನು?

ಕಾಶ್ಮೀರದ ಮೇಲಿನ ಪಾಕಿಸ್ತಾನದ ಹಕ್ಕು 1993ರ ಘೋಷಣೆಯನ್ನು ಆಧರಿಸಿದೆ. ಈ ಘೋಷಣೆಯ ಪ್ರಕಾರ ಪಾಕಿಸ್ತಾನ ಸರ್ಕಾರದ ಆಡಳಿತವನ್ನು ಸ್ಥಾಪಿಸಬೇಕಾದ 5 ರಾಜ್ಯಗಳಲ್ಲಿ ಜಮ್ಮು ಮತ್ತು ಕಾಶ್ಮೀರವೂ ಸೇರಿದೆ. ಆದರೆ ಪಾಕಿಸ್ತಾನದ ಈ ಹೇಳಿಕೆಯನ್ನು ಭಾರತ ಎಂದಿಗೂ ಒಪ್ಪಲಿಲ್ಲ.

ಎರಡು ಭಾಗಗಳಾಗಿ ವಿಂಗಡಣೆ

ಭಾರತ ಮತ್ತು ಪಾಕಿಸ್ತಾನದ ನಡುವಿನ 1947ರ ಯುದ್ಧದ ಅನಂತರ ಕಾಶ್ಮೀರ ಆಡಳಿತವನ್ನು ಎರಡು ಭಾಗಗಳಾಗಿ ವಿಂಗಡಿಸಲಾಯಿತು. ಭಾರತದಿಂದ ಬೇರ್ಪಟ್ಟ ಕಾಶ್ಮೀರದ ಭಾಗವು ಜಮ್ಮು ಮತ್ತು ಕಾಶ್ಮೀರದ ಉಪಖಂಡವಾಯಿತು ಮತ್ತು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಗಡಿಯಿಂದ ಸಮೀಪದಲ್ಲಿದ್ದ ಕಾಶ್ಮೀರದ ಭಾಗವನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಎಂದು ಕರೆಯಲಾಯಿತು.

ಆಜಾದ್ ಕಾಶ್ಮೀರ

ಭಾರತದ ಕಾಶ್ಮೀರದ ಪಶ್ಚಿಮ ಭಾಗಕ್ಕೆ ಹೊಂದಿಕೊಂಡಿದೆ. 2011ರ ಹೊತ್ತಿಗೆ, ಆಜಾದ್ ಕಾಶ್ಮೀರದ ಜಿಡಿಪಿ 3.2 ಶತಕೋಟಿ ಡಾಲರ್ ಎಂದು ಅಂದಾಜಿಸಲಾಗಿದೆ. ಐತಿಹಾಸಿಕವಾಗಿ ಆಜಾದ್ ಕಾಶ್ಮೀರದ ಆರ್ಥಿಕತೆಯು ಕೃಷಿಯ ಮೇಲೆ ಅವಲಂಬಿತವಾಗಿದೆ. ಕಡಿಮೆ ಎತ್ತರದ ಪ್ರದೇಶಗಳಲ್ಲಿ ಹೆಚ್ಚಿನ ಜನಸಂಖ್ಯೆಯು ಗೋಧಿ, ಬಾರ್ಲಿ, ಕಾರ್ನ್ (ಮೆಕ್ಕೆಜೋಳ) ಮಾವು, ರಾಗಿ ಮುಂತಾದ ಬೆಳೆಗಳನ್ನು ಬೆಳೆಯುತ್ತದೆ.

ದಕ್ಷಿಣ ಜಿಲ್ಲೆಗಳಲ್ಲಿ, ಪಾಕಿಸ್ತಾನಿ ಸಶಸ್ತ್ರ ಪಡೆಗಳಿಗೆ ಅನೇಕ ಪುರುಷರನ್ನು ನೇಮಿಸಿಕೊಳ್ಳಲಾಗಿದೆ. ಇತರ ಸ್ಥಳೀಯರು ಯುರೋಪ್ ಅಥವಾ ಮಧ್ಯಪ್ರಾಚ್ಯದ ದೇಶಗಳಿಗೆ ಪ್ರಯಾಣಿಸುತ್ತಾರೆ. ಅಲ್ಲಿ ಅವರು ಕಾರ್ಮಿಕ-ಆಧಾರಿತ ಉದ್ಯೋಗಗಳಲ್ಲಿ ಕೆಲಸ ಮಾಡುತ್ತಾರೆ.

ಇದನ್ನೂ ಓದಿ: PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

ಉತ್ತರ ಪ್ರದೇಶ

ಗಿಲ್ಗಿಟ್ ಪ್ರದೇಶವನ್ನು ಕಾಶ್ಮೀರದ ಮಹಾರಾಜರು ಬ್ರಿಟಿಷ್ ಸರ್ಕಾರಕ್ಕೆ ಗುತ್ತಿಗೆ ನೀಡಿದರು. ಬಾಲ್ಟಿಸ್ತಾನ್ 1947ರಲ್ಲಿ ಪಾಕಿಸ್ತಾನದಿಂದ ಆಕ್ರಮಿಸಲ್ಪಟ್ಟ ಪಶ್ಚಿಮ ಲಡಾಖ್ ಪ್ರಾಂತ್ಯದ ಪ್ರದೇಶವಾಗಿತ್ತು. ಈ ಪ್ರದೇಶವು ವಿವಾದಿತ ಜಮ್ಮು ಮತ್ತು ಕಾಶ್ಮೀರ ಪ್ರದೇಶದ ಭಾಗವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಅತ್ಯಂತ ಕಳಪೆ ಸ್ಥಿತಿಯಲ್ಲಿದೆ. ಪಾಕಿಸ್ತಾನವು ಈ ಪ್ರದೇಶದ ಮೇಲೆ ಹಿಡಿತ ಹೊಂದಿದೆ. ಆದರೆ ಈ ಪ್ರದೇಶವನ್ನು ಪಾಕಿಸ್ತಾನವು ಉದ್ದೇಶಪೂರ್ವಕವಾಗಿ ಅಭಿವೃದ್ಧಿಪಡಿಸಿಲ್ಲ. ಆದ್ದರಿಂದ ಈ ಪ್ರದೇಶದ ಬಡ ಜನರನ್ನು ಭಯೋತ್ಪಾದಕರಂತೆ ತರಬೇತಿ ನೀಡಲು ಮತ್ತು ಭಾರತವನ್ನು ಅಸ್ಥಿರಗೊಳಿಸಲು ಬಳಸಿಕೊಳ್ಳುತ್ತಿದೆ.

Continue Reading

ದೇಶ

Narendra Modi : 2019ರಲ್ಲಿ ಬಿಹಾರದ ಒಂದು ಕ್ಷೇತ್ರದಲ್ಲಿ ಸೋತಿದ್ದೆವು; ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದ ಮೋದಿ

Narendra Modi: ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

VISTARANEWS.COM


on

Narendra modi
Koo

ಬೆಂಗಳೂರು: ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ 2019ರ ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಬಿಹಾರದಲ್ಲಿ ಒಂದು ಸ್ಥಾನ ಕಳೆದುಕೊಂಡಿತ್ತು. ಈ ಬಾರಿ ಈ ಬಾರಿ ನಾವು ಒಂದನ್ನೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi ) ಹೇಳಿದ್ದಾರೆ. ಎನ್​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಎಲ್ಲ ಸೀಟ್​ಗಳನ್ನು ಗೆಲ್ಲುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷ ಜೆಡಿಯು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ರೋಡ್ ಶೋ (Modi Patna Road Show) ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆಡಳಿತಾರೂಢ ಮೈತ್ರಿಕೂಟವು 2019 ರ ಲೋಕಸಭಾ ಚುನಾವಣೆಗಿಂತ ರಾಜ್ಯದಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಕಳೆದ ಬಾರಿ ಕಳೆದುಕೊಂಡ ಏಕೈಕ ಕ್ಷೇತ್ರವನ್ನು ಸಹ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

ರಾಜ್ಯ ಮತ್ತು ಅದರ ಜನರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದೇನೆ. ನಾನು ಹಲವಾರು ಕೆಲಸಕ್ಕಾಗಿ ಆಗಾಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದೇನೆ. ನನಗೆ ಇಲ್ಲಿ ಬಹಳ ಹಳೆಯ ಸಂಪರ್ಕಗಳಿವೆ ಎಂಬುದಾಗಿ ಅವರು ಹೇಳಿಕೊಂಡರು.

ಮುಂದುವರಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಪೂರ್ವ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ಭಾರಿ ಪ್ರಮಾಣದಲ್ಲಿ ವಿಸ್ತರಿಸಲಿದೆ. ಇದು ಎನ್​ಡಿಎಯ 400 ಸ್ಥಾನಗಳ ಗಡಿ ಸುಲಭವಾಗಿ ತಲುಪಲು ನೆರವಾಗುತ್ತದೆ ಎಂದು ಹೇಳಿದರು. ಪೂರ್ವ ಭಾರತದಲ್ಲಿ ಬಿಜೆಪಿಯ ಏಳಿಗೆಯ ಬಗ್ಗೆ ಕೇಳಿದಾಗ, ವಲಯವನ್ನು ಬೆಳವಣಿಗೆಯ ಎಂಜಿನ್ ಆಗಿ ಅಭಿವೃದ್ಧಿಪಡಿಸಲು ವಿಶೇಷ ಗಮನ ಹರಿಸುವ ಬಗ್ಗೆ ಪ್ರಧಾನಿ ಮಾತನಾಡಿದರು.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ನೀವು ನನ್ನ 2013 ರ ಭಾಷಣವನ್ನು ಆಲಿಸಿದ್ದರೆ ನೆನಪಿರಬಹುದು. ನಾನು ಪ್ರಧಾನಿ ಆಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಲು ಬಯಸಿದ ವೇಳೆ ಪೂರ್ವ ಭಾರತವನ್ನು ಬೆಳವಣಿಗೆಯ ಎಂಜಿನ್ ಆಗಿ ಪರಿವರ್ತಿಸಿದ್ದೆನೆ ಎಂದು ನಾನು ಹೇಳಿದ್ದೆ” ಎಂದು ಅವರು ಪಾಟ್ನಾದಲ್ಲಿ ರೋಡ್ ಶೋ ನಡೆಸುವಾಗ ಹೇಳಿದರು.

ನಾವು ಮೂಲಸೌಕರ್ಯ, ಆರೋಗ್ಯ ಇತ್ಯಾದಿಗಳ ಮೇಲೆ ಗಮನ ಹರಿಸಿದ್ದೇವೆ. ಈ ಸಮೀಕ್ಷೆಯನ್ನು ಪರಿಗಣಿಸಿದರೆ, ಪೂರ್ವ ಭಾರತದ ಚುನಾವಣಾ ಫಲಿತಾಂಶಗಳು ಅದನ್ನು ಪ್ರತಿಬಿಂಬಿಸಲಿವೆ. ಜನರು ಆಶ್ಚರ್ಯಚಕಿತರಾಗಲಿದ್ದಾರೆ. ತೆಲಂಗಾಣ, ಒಡಿಶಾ, ಬಂಗಾಳ, ಬಿಹಾರ, ಜಾರ್ಖಂಡ್, ಅಸ್ಸಾಂನಲ್ಲಿ ಬಿಜೆಪಿ ಹೊಸ ಹುಟ್ಟುಪಡೆಯಲಿಎ ಎಂದು ಹೇಳಿದರು.

Continue Reading
Advertisement
Terrorist Arrested
ಕರ್ನಾಟಕ25 mins ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ33 mins ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ39 mins ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ1 hour ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ1 hour ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ2 hours ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ2 hours ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ2 hours ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest2 hours ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ2 hours ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ14 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ17 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌