ವಿಸ್ತಾರ Explainer | ಉಗ್ರರಿಗೆ ಹಣಕಾಸಿನ ನೆರವಿನ ವಿರುದ್ಧ ಭಾರತದ ಸಮರ! ನಿರೀಕ್ಷೆ, ಸವಾಲುಗಳೇನು? - Vistara News

EXPLAINER

ವಿಸ್ತಾರ Explainer | ಉಗ್ರರಿಗೆ ಹಣಕಾಸಿನ ನೆರವಿನ ವಿರುದ್ಧ ಭಾರತದ ಸಮರ! ನಿರೀಕ್ಷೆ, ಸವಾಲುಗಳೇನು?

ಭಯೋತ್ಪಾದನೆಯನ್ನು ಹತ್ತಿಕ್ಕಲು ಅದಕ್ಕೆ ಪೂರೈಕೆಯಾಗುವ ಹಣಕಾಸಿನ ಜಾಲವನ್ನು ಕತ್ತರಿಸುವುದು ಪ್ರಮುಖ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ಭಾರತದ ಸವಾಲುಗಳು ಮತ್ತು ನಿರೀಕ್ಷೆಗಳ ಕುರಿತು ವಿಸ್ತಾರ Explainer.

VISTARANEWS.COM


on

Finance Support to Terror
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ
ಭಯೋತ್ಪಾದನೆಯನ್ನು ತಡೆಗಟ್ಟಲು ಇರುವ ಅತ್ಯಂತ ಪ್ರಮುಖ ಕ್ರಮಗಳಲ್ಲಿ ಭಯೋತ್ಪಾದಕರಿಗೆ ಹಣಕಾಸಿನ ಪೂರೈಕೆಯನ್ನು ತಡೆಯುವುದೂ ಪ್ರಮುಖವಾದದ್ದು. ಅಂತಾರಾಷ್ಟ್ರೀಯ ಸಮುದಾಯ ಇದರ ಪ್ರಾಮುಖ್ಯತೆಯನ್ನು ಸೆಪ್ಟೆಂಬರ್ 11, 2001ರ ಬಳಿಕ ಅರಿತುಕೊಂಡಿತು. ಫೈನಾನ್ಷಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್, ಅಥವಾ ಗ್ರೂಪ್ ಡಿ ಆ್ಯಕ್ಷನ್ ಫಿನಾನ್ಸಿರ್ ಎಂದು ಕರೆಯಲಾಗುವ ಇದೊಂದು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಜಿ7 ಒಕ್ಕೂಟದಿಂದ 1989ರಲ್ಲಿ ಅಧಿಕೃತ ಹಣದ ಪೂರೈಕೆ ತಡೆಗಟ್ಟಲು ಆರಂಭಗೊಂಡಿತು. 2001ರಲ್ಲಿ ಸಂಸ್ಥೆಯ ಉದ್ದೇಶಗಳು ಇನ್ನಷ್ಟು ಹೆಚ್ಚಿ, ಭಯೋತ್ಪಾದನೆಗೆ ಹಣಕಾಸಿನ ನೆರವನ್ನು ತಡೆಯುವುದನ್ನು ಸೇರಿಸಲಾಯಿತು.

ನವೆಂಬರ್ 18 ಹಾಗೂ 19ರಂದು ಭಾರತ ‘ನೋ ಮನಿ ಫಾರ್ ಟೆರರ್’ (ಎನ್ಎಮ್ಎಫ್‌ಟಿ) ಸಮ್ಮೇಳನವನ್ನು ಆಯೋಜಿಸುತ್ತಿದೆ. ಈ ಸಮ್ಮೇಳನ ನಾಲ್ಕು ವಿಚಾರಗಳನ್ನು ಕುರಿತು ಚರ್ಚಿಸುತ್ತದೆ.
| ಅವೆಂದರೆ, “ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸಿನ ನೆರವಿನಲ್ಲಿ ಜಾಗತಿಕ ಪ್ರವೃತ್ತಿಗಳು”,
| “ಭಯೋತ್ಪಾದನೆಗೆ ಹಣಕಾಸು ಒದಗಿಸಲು ಔಪಚಾರಿಕ ಮತ್ತು ಅನೌಪಚಾರಿಕ ಮಾರ್ಗಗಳ ಬಳಕೆ”,
| “ನೂತನ ತಂತ್ರಜ್ಞಾನಗಳು ಮತ್ತು ಭಯೋತ್ಪಾದನೆಗೆ ಹಣಕಾಸು ಪೂರೈಕೆ”,
| ” ಭಯೋತ್ಪಾದನೆಗೆ ಹಣಕಾಸು ತಡೆಯುವಲ್ಲಿನ ಸವಾಲುಗಳನ್ನು ಎದುರಿಸಲು ಅಂತಾರಾಷ್ಟ್ರೀಯ ಸಹಕಾರ”

ಇದಲ್ಲದೆ, ಸಾಮಾಜಿಕ ಜಾಲತಾಣಗಳ ದುರ್ಬಳಕೆ ಹಾಗೂ ಅವುಗಳಲ್ಲಿನ ನಿಯಂತ್ರಣದ ಕೊರತೆ, ಭಯೋತ್ಪಾದನೆಗೆ ಹಣ ಒದಗಿಸಲು ಕ್ರೌಡ್ ಫಂಡಿಂಗ್, ಹಣಕಾಸಿನ ನೆರವು ಪಡೆಯಲು ಡಾರ್ಕ್ ವೆಬ್ ಬಳಕೆ ಹಾಗೂ ಕ್ರಿಪ್ಟೊ ಕರೆನ್ಸಿಯ ಬಳಕೆಗಳೂ ಸಮ್ಮೇಳನದಲ್ಲಿ ಚರ್ಚೆಯಾಗುವ ಪ್ರಮುಖ ವಿಚಾರಗಳಾಗಿವೆ.

ಈ ಮೊದಲು ಏಪ್ರಿಲ್ 2018ರಲ್ಲಿ ಪ್ಯಾರಿಸ್‌ನಲ್ಲಿ ಹಾಗೂ ನವೆಂಬರ್ 2019ರಲ್ಲಿ ಮೆಲ್ಬೋರ್ನ್ ನಲ್ಲಿ ನಡೆದ ಸಮ್ಮೇಳನಗಳ ಯಶಸ್ಸು ಹಾಗೂ ಪಾಠಗಳ ಆಧಾರದಲ್ಲಿ ಈ ಸಮ್ಮೇಳನವನ್ನು ನಡೆಸಲಾಗುತ್ತದೆ. ಸಮ್ಮೇಳನವು ಭಯೋತ್ಪಾದಕರಿಗೆ ಹಣಕಾಸಿನ ನೆರವು ಹಾಗೂ ಸುರಕ್ಷಿತ ತಾಣಗಳನ್ನು ತಡೆಗಟ್ಟಲು ಅಂತಾರಾಷ್ಟ್ರೀಯ ಸಹಕಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು ಜಗತ್ತು ಭಯೋತ್ಪಾದನೆಯನ್ನು ಎದುರಿಸಲು ಎಲ್ಲರನ್ನೂ ಒಳಗೊಂಡ ವಿಧಾನವನ್ನು ಅನುಸರಿಸಬೇಕು ಎಂದರು. ಕಳೆದ ಕೆಲವು ತಿಂಗಳಲ್ಲಿ ಭಾರತವು ರಕ್ಷಣಾ ವಿಚಾರಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಸಮ್ಮೇಳನಗಳನ್ನು ಆಯೋಜಿಸಿದೆ. ಇವುಗಳಲ್ಲಿ 90ನೆಯ ಇಂಟರ್‌ಪೋಲ್ ಜನರಲ್ ಅಸೆಂಬ್ಲಿ ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕೌಂಟರ್ ಟೆರರಿಸಂ ಸಮಿತಿಯ ಸಭೆ ಮುಂಬೈನಲ್ಲಿ ನಡೆದಿದೆ. ಎನ್ಎಮ್ಎಫ್‌ಟಿ ಮೂಲಕ ಭಾರತ ಜಾಗತಿಕವಾಗಿ ಭಯೋತ್ಪಾದನೆಗೆ ಹಣಕಾಸಿನ ನೆರವಿನ ವಿರುದ್ಧ ಜಾಗೃತಿ ಮೂಡಿಸುತ್ತಿದೆ ಎಂದರು.

ತನ್ನ ಭಾಷಣದಲ್ಲಿ ಪ್ರಧಾನಿ ಭಯೋತ್ಪಾದಕ ಮತ್ತು ಭಯೋತ್ಪಾದನಾ ಸಂಘಟನೆಗಳ ವ್ಯತ್ಯಾಸವನ್ನು ವಿವರಿಸಿದರು. ಭಯೋತ್ಪಾದನಾ ಸಂಘಟನೆಗಳು ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸಿನ ನೆರವು ಒದಗಿಸುವುದರಿಂದ ಅವುಗಳು ವೈಯಕ್ತಿಕ ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸು ಪೂರೈಸದಂತೆ ತಡೆಗಟ್ಟಬೇಕು ಎಂದರು.

ಭಯೋತ್ಪಾದನಾ ಹಣಕಾಸಿನ ವಿರುದ್ಧದ ಸಮರದಲ್ಲಿ ತಂತ್ರಜ್ಞಾನ ಸವಾಲೂ ಆಗಿದೆ ಮತ್ತು ಅವಕಾಶವೂ ಆಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ನಾವು ತಂತ್ರಜ್ಞಾನವನ್ನು ಬಳಸಿ ಭಯೋತ್ಪಾದನೆಯ ವಿರುದ್ಧ ಹೋರಾಡಬೇಕಿದೆ. ಡಾರ್ಕ್ ನೆಟ್ ಹಾಗೂ ಖಾಸಗಿ ಕರೆನ್ಸಿಗಳ ಮೂಲಕ ಭಯೋತ್ಪಾದನೆಗೆ ಹಣಕಾಸು ಒದಗಿಸಲಾಗುತ್ತಿದ್ದು, ಇನ್ನಷ್ಟು ತಂತ್ರಜ್ಞಾನಗಳು ರೂಪುಗೊಳ್ಳುತ್ತಿವೆ. ಇದನ್ನು ತಡೆಯುವ ಪ್ರಯತ್ನಗಳಲ್ಲಿ ಖಾಸಗಿ ವಲಯವೂ ಸಹಕರಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ. ಅವರು ಇದಕ್ಕಾಗಿ ಒಂದು ಸಮಾನ ಅರ್ಥೈಸುವಿಕೆ, ನಿಯಮಾವಳಿಗಳು ಮೂಡಿಬರಬಹುದು ಎಂದು ಅಭಿಪ್ರಾಯ ಪಟ್ಟರು.

ನರೇಂದ್ರ ಮೋದಿಯವರು ದೇಶ ದೇಶಗಳ ಮಧ್ಯ ಹೆಚ್ಚಿನ ಸಹಕಾರಕ್ಕಾಗಿ ಕರೆ ನೀಡಿ, ಬೇರೆ ದೇಶಗಳಲ್ಲಿ ಭಯೋತ್ಪಾದಕರ ಕೃತ್ಯಗಳಲ್ಲಿನ ವಿಭಿನ್ನತೆಯ ಲಾಭ ಪಡೆದುಕೊಳ್ಳಲು ಬಿಡಬಾರದು ಎಂದರು.

ಭಯೋತ್ಪಾದನೆಗೆ ಹಣಕಾಸಿನ ನೆರವಿನ ವಿರುದ್ಧ ಭಾರತದ ಕಾರ್ಯತಂತ್ರಗಳು ಆರು ಸ್ತಂಭಗಳನ್ನು ಒಳಗೊಂಡಿವೆ. ಅವೆಂದರೆ ಶಾಸಕಾಂಗ ಮತ್ತು ತಾಂತ್ರಿಕತೆಗಳ ಬಲವರ್ಧನೆ, ಸಮಗ್ರ ಮೇಲ್ವಿಚಾರಣಾ ವ್ಯವಸ್ಥೆಯ ರಚನೆ, ಗುಪ್ತಚರ ಮಾಹಿತಿಗಳ ಹಂಚಿಕೆ ವ್ಯವಸ್ಥೆ ಮತ್ತು ವಿಚಾರಣೆ ಹಾಗೂ ಪೊಲೀಸ್ ಕಾರ್ಯಾಚರಣೆಗಳ ಬಲವರ್ಧನೆ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ, ಕಾನೂನು ಘಟಕಗಳು ಹಾಗೂ ನೂತನ ತಂತ್ರಜ್ಞಾನಗಳ ದುರ್ಬಳಕೆಯ ತಡೆ, ಹಾಗೂ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮನ್ವಯದ ಸ್ಥಾಪನೆ ಎಂದು ಪ್ರಧಾನಿ ಮೋದಿ ವಿವರಿಸಿದ್ದಾರೆ.

ಈ ವರ್ಷದ ಅಂತ್ಯದವರೆಗೆ ಕೌಂಟರ್ ಟೆರರಿಸಂ ಸಮಿತಿಯ ನಾಯಕತ್ವ ಭಾರತ ನಿರ್ವಹಿಸುತ್ತಿದೆ. ಸಮಿತಿಯ ಅಧ್ಯಕ್ಷರಾದ, ಭಾರತದ ರಾಯಭಾರಿ ರುಚಿರಾ ಕಾಂಬೋಜ್ ನ್ಯೂಯಾರ್ಕ್‌ನಲ್ಲಿ ಮಾಧ್ಯಮಗಳೊಡನೆ ಮಾತನಾಡುತ್ತಾ, ಉನ್ನತ ಹಂತದ ಚರ್ಚೆಗಳು ಪ್ರಸ್ತುತ ಘಟನೆಗಳನ್ನು ಅವಲೋಕಿಸಿ, ಭಯೋತ್ಪಾದನೆ ಮತ್ತು ತಂತ್ರಜ್ಞಾನದ ಬಳಕೆಯ ಕುರಿತು ಅಧ್ಯಯನ ನಡೆಸಲಿವೆ ಎಂದರು.

ಅದರೊಡನೆ, ಈ ಸಮ್ಮೇಳನದಲ್ಲಿ ತಂತ್ರಜ್ಞಾನದ ಬುದ್ಧಿವಂತ ಬಳಕೆದಾರರಾದ ಉಗ್ರರು ಹೇಗೆ ತಂತ್ರಜ್ಞಾನಗಳನ್ನು ಕ್ರೌಡ್ ಫಂಡಿಂಗ್, ಉತ್ಪನ್ನಗಳ ಮಾರಾಟ, ಸಾಮಾಜಿಕ ಜಾಲತಾಣಗಳಲ್ಲಿ ಹಣದ ನೆರವು ಪಡೆಯಲು, ಇತ್ಯಾದಿಗಳಿಗೆ ಬಳಸುತ್ತಾರೆ ಎಂಬ ಕುರಿತೂ ಬೆಳಕು ಚೆಲ್ಲಲಿದೆ.

ಕ್ರಿಮಿನಲ್ ಉದ್ದೇಶಕ್ಕಾಗಿ ತ್ರೀಡಿ ಪ್ರಿಂಟಿಂಗ್ ತಂತ್ರಜ್ಞಾನದ ಬಳಕೆ, ರೊಬೋಟಿಕ್ಸ್, ಕೃತಕ ಬುದ್ಧಿಮತ್ತೆ (ಎಐ), ಯಂತ್ರ ಕಲಿಕೆ (ಮೆಷಿನ್ ಲರ್ನಿಂಗ್), ಅನ್ ಮ್ಯಾನ್ಡ್ ಏರಿಯಲ್ ಸಿಸ್ಟಮ್ಸ್ ಹಾಗೂ ಸಿಂತೆಟಿಕ್ ಬಯೋ ಟೆಕ್ನಾಲಜಿ ಬಳಕೆಯನ್ನೂ ವಿಚಾರಿಸಲಾಗುವುದು.

ಸಮಿತಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಸಂಯೋಜಕರಾದ ಜೆನ್ನಿಫರ್ ಬ್ರಾಮ್ಲೆಟ್ ಅವರು ಸದಸ್ಯ ರಾಷ್ಟ್ರಗಳು ಈಗಾಗಲೇ ಹೆಚ್ಚುತ್ತಿರುವ ಡ್ರೋನ್ ಬಳಕೆಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳುತ್ತಿವೆ ಎಂದಿದ್ದಾರೆ.

ವಿಮಾನ ನಿಲ್ದಾಣಗಳು ಹಾಗೂ ಪ್ರಮುಖ ಪ್ರದೇಶಗಳನ್ನು ಹಾರಾಟ ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ಕಾರಣದಿಂದ ಡ್ರೋನ್ ಉತ್ಪಾದನಾ ಸಂಸ್ಥೆಗಳಿಗೆ ಜಿಯೋ ಲಾಕಿಂಗ್ ವ್ಯವಸ್ಥೆ ಅಳವಡಿಸುವ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದ್ದು, ನಿರ್ಬಂಧಿತ ಪ್ರದೇಶಗಳ ಬಳಿ ಬಂದಾಗ ಡ್ರೋನ್‌ಗಳು ಸ್ವಯಂಚಾಲಿತವಾಗಿ ನಿಲುಗಡೆಗೊಳ್ಳುತ್ತವೆ ಎಂದು ಅವರು ತಿಳಿಸಿದ್ದಾರೆ. ಭವಿಷ್ಯದಲ್ಲಿ ಡ್ರೋನ್‌ಗಳನ್ನು ಹೇಗೆ ಮಾರಾಟ ಮಾಡಬಹುದು ಮತ್ತು ಅವುಗಳನ್ನು ಯಾರು ಖರೀದಿಸಬಹುದು ಎಂಬ ಕುರಿತೂ ಹಲವು ಚರ್ಚೆಗಳು ನಡೆಯುತ್ತಿವೆ ಎಂದರು.

ಡಾರ್ಕ್ ವೆಬ್ ಎಂದರೇನು?
ಪ್ರಸ್ತುತ ಉಪಯೋಗದಲ್ಲಿರುವ ವರ್ಲ್ಡ್ ವೈಡ್ ವೆಬ್ ಅನ್ನು (ಡಬ್ಲ್ಯು ಡಬ್ಲ್ಯು ಡಬ್ಲ್ಯು) ಸಾಮಾನ್ಯವಾಗಿ ಒಂದು ಮಂಜುಗಡ್ಡೆಗೆ ಹೋಲಿಸಲಾಗುತ್ತದೆ. ಈ ತೆರೆದ ಆವೃತ್ತಿಯ ವೆಬ್ ಬಹುತೇಕ ಎಲ್ಲರಿಗೂ ಲಭ್ಯವಿದೆ. ಆದರೆ ಡೀಪ್ ವೆಬ್ ಸಾಮಾನ್ಯ ಸರ್ಚ್ ಇಂಜಿನ್‌ಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಇದನ್ನು ಸಾಮಾನ್ಯ ಜನರು ಬಳಸುವುದು ಕಷ್ಟಕರವಾಗುತ್ತದೆ. ಡೀಪ್ ವೆಬ್ ನಲ್ಲಿ ಲಭ್ಯವಿರುವ ಬಹುತೇಕ ಮಾಹಿತಿಗಳು ಅಕ್ರಮವಾಗಿದ್ದು, ಪಾಸ್‌ವರ್ಡ್ ಹೊಂದಿರುವ ಅಕೌಂಟ್‌ಗಳನ್ನು ಬಳಸಿ ಅವುಗಳ ವಿವಿಧ ಸೇವೆಗಳನ್ನು ಪಡೆಯಬೇಕು. ಡಾರ್ಕ್ ನೆಟ್ ಅಥವಾ ಡಾರ್ಕ್ ವೆಬ್ ಡೀಪ್ ವೆಬ್‌ನ ಅತ್ಯಂತ ಸಣ್ಣ ಭಾಗವಾಗಿದ್ದು, ಕೇವಲ 0.01% ಮಾತ್ರ ಹೊಂದಿದೆ. ಅದನ್ನು ಆನಿಯನ್ ರೂಟರ್ (ಟಾರ್ ಬ್ರೌಸರ್) ಅಥವಾ ಇನ್‌ವಿಸಿಬಲ್ ಇಂಟರ್‌ನೆಟ್ ಪ್ರಾಜೆಕ್ಟ್ (ಐ2ಪಿ) ಥರದ ಪ್ರತ್ಯೇಕ ಬ್ರೌಸರ್‌ಗಳನ್ನು ಬಳಸಿ ಉಪಯೋಗಿಸಬೇಕಾಗುತ್ತದೆ. ಇದು ಬಳಕೆದಾರರ ವೈಯಕ್ತಿಕ ಮಾಹಿತಿ, ಸ್ಥಳದ ಕುರಿತ ಮಾಹಿತಿಗಳನ್ನು ಸಿಗದಂತೆ ತಡೆಯುತ್ತದೆ. ಡಾರ್ಕ್ ವೆಬ್‌ನಲ್ಲಿ ಸಾವಿರಾರು ಜಾಲತಾಣಗಳಿದ್ದು, ಅನಾಮಧೇಯತೆ ತಂತ್ರಜ್ಞಾನಗಳನ್ನು ಬಳಸಿ, ಇಂಟರ್‌ನೆಟ್ ಪ್ರೊಟೋಕಾಲ್ (ಐಪಿ) ಅಡ್ರೆಸ್ ಬಚ್ಚಿಡಲು ನೆರವಾಗುತ್ತದೆ. ಇದರಲ್ಲಿರುವ ಬಹುತೇಕ ಮಾಹಿತಿಗಳು, ಸಂವಹನಗಳು ಕಾನೂನು ಬಾಹಿರ ಚಟುವಟಿಕೆಗಳಾದ ಡ್ರಗ್ಸ್ ಹಾಗೂ ಆಯುಧ ಸಾಗಣೆ, ನಕಲಿ ದಾಖಲೆ ಸೃಷ್ಟಿ, ಪೋರ್ನೋಗ್ರಫಿ, ಹಣಕಾಸು ಅವ್ಯವಹಾರ, ಭಯೋತ್ಪಾದನಾ ಸಂವಹನ ಹಾಗೂ ಉಗ್ರಗಾಮಿ ಯೋಜನೆಗಳಿಗೆ ಸಂಬಂಧಿಸಿವೆ.

ಕ್ರಿಪ್ಟೋ ಕರೆನ್ಸಿ ಎಂದರೇನು?
ಕ್ರಿಪ್ಟೋ ಕರೆನ್ಸಿಯನ್ನು ಅರ್ಥ ಮಾಡಿಕೊಳ್ಳುವ ಮೊದಲು ನಾವು ಸಾಂಪ್ರದಾಯಿಕ ಹಣವನ್ನು ಅರ್ಥ ಮಾಡಿಕೊಳ್ಳಬೇಕು. ಜಗತ್ತಿನಲ್ಲಿ ಹಣ ಜಾರಿಗೆ ಬರುವ ಮೊದಲು ಜನರು ಬಾರ್ಟರ್ ವ್ಯವಸ್ಥೆ, ಅಂದರೆ ತಮ್ಮಲ್ಲಿರುವ ವಸ್ತು ಅಥವಾ ಸೇವೆಯ ಬದಲಿಗೆ ಇನ್ನೊಂದನ್ನು ಪಡೆದುಕೊಳ್ಳುತ್ತಿದ್ದರು. ಆದರೆ ವಸ್ತು ಮತ್ತು ಸೇವೆಗಳು, ಜನರು ಅಪಾರ ಸಂಖ್ಯೆಯಲ್ಲಿ ಇರುವುದರಿಂದ ಈ ವ್ಯವಸ್ಥೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ.

ಆದರೆ ಹಣದ ಮೌಲ್ಯ ಒಂದೇ ಆಗಿರುತ್ತದೆ. ಮುಂದೆ ಅಗತ್ಯ ಬಿದ್ದಾಗ ಅದನ್ನು ನೀಡಿ, ಅದರ ಮೌಲ್ಯದ ವಸ್ತು ಅಥವಾ ಸೇವೆಗಳನ್ನು ಪಡೆದುಕೊಳ್ಳಬಹುದು. ಆದರೆ ಕೆಲವರು ಹಣವನ್ನೂ ನಕಲಿಯಾಗಿ ಮಾಡಲು ಆರಂಭಿಸಿದರು. ಆದರೆ ಜನರು ಅವರ ಸಮಯ ಮತ್ತು ಶ್ರಮವನ್ನು ಐಒಯುಗಳಾಗಿ ಪರಿವರ್ತಿಸಲು ಆರಂಭಿಸಿದಾಗ, ಒಂದಷ್ಟು ಜನ ಐಓಯುಗಳನ್ನು ಫೋರ್ಜ್ ಮಾಡತೊಡಗಿದರು. ಹಾಗೂ ಅದನ್ನು ನಕಲಿಯಾಗಿಸುವುದು ಹಾನಿಕರವಾಗಿತ್ತು.

ಈ ಕಾರಣಕ್ಕಾಗಿ ಹಣ ಜಗತ್ತಿನ ವಿರಳ ಅಥವಾ ಸೀಮಿತ ಸಂಪನ್ಮೂಲಗಳ ಮೇಲೆ ಹೆಚ್ಚಾಗಿ ಅವಲಂಬಿತವಾಗಿತ್ತು. ಇದಕ್ಕೆ ಚಿನ್ನ ಒಂದು ಉದಾಹರಣೆಯಾಗಿದೆ. ಚಿನ್ನ ಒಂದು ವಿರಳ ಲೋಹವಾಗಿದ್ದು, ಪ್ರಕೃತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಲಭಿಸುತ್ತದೆ. ಆದ್ದರಿಂದ ಯಾರ ಬಳಿಯಾದರೂ ಚಿನ್ನ ಇದ್ದರೆ ಅದರಲ್ಲಿ ಎರಡೇ ಸಾಧ್ಯತೆಗಳಿರುತ್ತವೆ. ಒಂದು ಅವರು ಪ್ರಕೃತಿಯಿಂದ ಚಿನ್ನ ಪಡೆದುಕೊಂಡಿದ್ದಾರೆ. ಎರಡು, ನೇರವಾಗಿ ಪ್ರಕೃತಿಯಿಂದ ಚಿನ್ನ ಪಡೆದವರಿಂದ ತೆಗೆದುಕೊಂಡಿದ್ದಾರೆ.

ಈಗ ಸಾಕಷ್ಟು ಸಮಯ ಸರಿದು ಹೋಗಿದೆ. ಚಿನ್ನದ ಸ್ಟ್ಯಾಂಡರ್ಡ್ ನಿಂದ ಜನರು ಸಾಕಷ್ಟು ಮುಂದೆ ಸಾಗಿದ್ದಾರೆ. ಉದಾಹರಣೆಗೆ, ಅಮೆರಿಕಾದಲ್ಲಿ ನಗದು ಹಣ ಚಿನ್ನಕ್ಕೆ ಈಗ ಐಒಯು ಆಗಿ ಉಳಿದಿಲ್ಲ. ಅದರ ಬದಲಿಗೆ ನಗದೇ ಒಂದು ಸಂಪನ್ಮೂಲವಾಗಿದೆ. ಸರ್ಕಾರ ನಗದನ್ನು ಸೃಷ್ಟಿಸುತ್ತದೆ. ಆದ್ದರಿಂದ ಅದು ವಿರಳವಾಗಿದ್ದು, ನಕಲು ಮಾಡುವುದರಿಂದ ರಕ್ಷಿಸಲ್ಪಡುತ್ತದೆ. ಈ ವಿಶ್ವಾಸ ಮತ್ತು ಬೆಲೆಗಳೇ ಹಣಕ್ಕೆ ಇಷ್ಟು ಬೆಲೆ ತಂದಿವೆ.

ಕ್ರಿಪ್ಟೋ ಕರೆನ್ಸಿಗಳು ಮಹತ್ವ ಹೊಂದಿರುವ ಡಿಜಿಟಲ್ ಕರೆನ್ಸಿಯ ಒಂದು ಭಾಗವಾಗಿದೆ. ಈ ವಿಚಾರದಲ್ಲಿ ಪೂರ್ತಿ ನಕಲು ಮಾಡುವುದೇ ಪ್ರಮುಖ ಸವಾಲಾಗಿ ಚರ್ಚಿಸಲಾಗಿದೆ. ಅದಲ್ಲದೆ, ಯಾವುದೇ ವಸ್ತುವಿನ ಡಿಜಿಟಲ್ ನಕಲು ನಿರ್ಮಿಸುವುದು ಅತ್ಯಂತ ಸುಲಭವಾಗಿದೆ.

ಅದೇನೇ ಇದ್ದರೂ, ಕ್ರಿಪ್ಟೋ ಕರೆನ್ಸಿಗಳು ಜನರಿಗೆ ಅವರ ಶ್ರಮವನ್ನು ಡಿಜಿಟಲ್ ಟೋಕನ್ ವ್ಯವಸ್ಥೆಗೆ ಪರಿವರ್ತಿಸಲು ಸಾಧ್ಯವಾಗಿಸಿವೆ. ಈ ಟೋಕನ್‌ಗಳು ನಕಲು ಮಾಡದಂತೆ ಸುರಕ್ಷಿತವಾಗಿವೆ. ಸರಳವಾಗಿ ಹೇಳುವುದಾದರೆ, ಅವುಗಳು ಡಿಜಿಟಲ್ ಲೋಕದಲ್ಲಿ ಚಿನ್ನವಿದ್ದ ಹಾಗೇ. ನೈಜವಾಗಿ ಈ ಟೋಕನ್‌ಗಳು ವಿರಳವಾಗಿದ್ದು, ಚಿನ್ನದಂತೆಯೇ ಹಣದ ಅಂಶವನ್ನು ಹೊಂದಿವೆ. ಇಲ್ಲಿ “ಮೈನಿಂಗ್” ಎನ್ನುವುದು ಚಿನ್ನಕ್ಕೆ ಗಣಿಗಾರಿಕೆ ನಡೆಸುವಂತೆಯೇ. ಇದು ವ್ಯವಸ್ಥೆಗೆ ಹೊಸ ವಸ್ತುಗಳನ್ನು ಸೇರಿಸಲು ಇರುವ ಏಕೈಕ ಮಾರ್ಗವಾಗಿದೆ. ಬಳಿಕ ಅದನ್ನು ನಗದಿನ ರೀತಿಯಲ್ಲಿ ಬಳಸಿಕೊಳ್ಳಲು ಸಾಧ್ಯವಾಗುತ್ತದೆ. ಬಿಟ್ ಕಾಯಿನ್ನಿನ ವಿಚಾರದಲ್ಲಿ, ಮೈನಿಂಗ್ ಸಂಪೂರ್ಣ ವ್ಯವಸ್ಥೆಯನ್ನು ಸುರಕ್ಷಿತವಾಗಿ ಮತ್ತು ಕಾರ್ಯಾಚರಿಸುವಂತೆ ಮಾಡುತ್ತದೆ.

ಕ್ರಿಪ್ಟೋ ಕರೆನ್ಸಿಗಳು ಹೇಗೆ ಭಯೋತ್ಪಾದನೆಗೆ ನೆರವು ನೀಡುತ್ತವೆ?
ಕ್ರಿಪ್ಟೋ ಕರೆನ್ಸಿಯನ್ನು ಭಯೋತ್ಪಾದನೆಗೆ ಹೇಗೆ ಬಳಸಲಾಗುತ್ತದೆ ಎನ್ನುವುದಕ್ಕಿಂತ, ಭಯೋತ್ಪಾದನಾ ಸಂಘಟನೆಗಳು ಹಣವನ್ನು ಹೇಗೆ ಬಳಸುತ್ತವೆ ಎಂಬ ವಿಚಾರವನ್ನು ಗಮನಿಸಬೇಕಾಗುತ್ತದೆ.

ಭಯೋತ್ಪಾದಕ ಸಂಘಟನೆಗಳ ಹಣದ ಉಪಯೋಗವನ್ನು ಮೂರು ಭಾಗಗಳಲ್ಲಿ ಅಧ್ಯಯನ ಮಾಡಬಹುದು. ರಶೀದಿ, ನಿರ್ವಹಣೆ, ಹಾಗೂ ಖರ್ಚು. ಈ ಮೂರೂ ಭಾಗಗಳೂ ಭಯೋತ್ಪಾದನಾ ಸಂಘಟನೆಗಳಿಗೆ ಕ್ರಿಪ್ಟೋ ಕರೆನ್ಸಿಯ ಬಳಕೆಗೆ ಸಾಕಷ್ಟು ಅಡ್ಡಿಯನ್ನು ಉಂಟುಮಾಡುತ್ತವೆ. ದೊಡ್ಡ ಪ್ರಮಾಣದ ರಶೀದಿ ಹೊಂದಿರುವ ಮೊತ್ತವನ್ನು ಅನಾಮಧೇಯವಾಗಿ ನಿರ್ವಹಿಸುವುದಾಗಲಿ, ಖರ್ಚು ಮಾಡುವುದಾಗಲಿ ಅತ್ಯಂತ ಕಷ್ಟಕರವಾಗಿರುತ್ತದೆ. ಯಾಕೆಂದರೆ ಕ್ರಿಪ್ಟೋ ಕರೆನ್ಸಿಯ ನಿರ್ವಹಣೆ ಮತ್ತು ವೆಚ್ಚಕ್ಕೆ ಒಂದು ವ್ಯವಸ್ಥೆಯ ಅನಿವಾರ್ಯತೆ ಇದೆ. ಪ್ರಸ್ತುತ ಭಯೋತ್ಪಾದನಾ ಸಂಘಟನೆಗಳು ಕ್ರಿಪ್ಟೋ ಕರೆನ್ಸಿಯನ್ನು ಬಳಸುವ ಕುರಿತಾಗಲೀ, ಈ ಉದ್ದೇಶ ಹೊಂದಿರುವ ಕುರಿತಾಗಲಿ ಯಾವ ಸಾಕ್ಷಿಯೂ ಲಭ್ಯವಿಲ್ಲ. ಆದರೆ ಭಯೋತ್ಪಾದನೆಗೆ ಹಣದ ಪೂರೈಕೆ ತಡೆದ ಹಾಗೇ, ಕ್ರಿಪ್ಟೋ ಕರೆನ್ಸಿ ಅಭಿವೃದ್ಧಿ ಹೊಂದಿದಂತೆ ಈ ಪರಿಸ್ಥಿತಿ ಬದಲಾಗುವ ಸಾಧ್ಯತೆಗಳಿವೆ.

ಭಯೋತ್ಪಾದನಾ ಸಂಘಟನೆಗಳು ಕ್ರಿಪ್ಟೋ ಕರೆನ್ಸಿಯನ್ನು ಬಳಸುತ್ತವೆಯೇ ಇಲ್ಲವೇ ಎನ್ನುವುದು ಲಭ್ಯವಿರುವ ತಂತ್ರಜ್ಞಾನ ಮತ್ತು ಅದರ ಗುಣಗಳ ಮೇಲೆ ಆಧಾರಿತವಾಗಿದೆ. ನೂತನ ಕ್ರಿಪ್ಟೋ ಕರೆನ್ಸಿಗಳು ಬಂದಾಗ ಅವುಗಳಲ್ಲಿ ಭಯೋತ್ಪಾದಕ ಸಂಘಟನೆಗಳನ್ನು ಈಗ ಬಳಕೆಯಲ್ಲಿರುವ ಕ್ರಿಪ್ಟೋ ಕರೆನ್ಸಿಗಳಿಗಿಂತ ಹೆಚ್ಚು ಸೆಳೆಯುವ ಗುಣಗಳಿರಬಹುದು. ಒಂದು ವೇಳೆ ಭವಿಷ್ಯದ ಕ್ರಿಪ್ಟೋ ಕರೆನ್ಸಿ ಹೆಚ್ಚಿನ ಮೊತ್ತದ ವ್ಯವಹಾರದಲ್ಲಿ ಪ್ರಸ್ತುತ ಇರುವ ಬಿಟ್ ಕಾಯಿನ್‌ಗಿಂತ ಹೆಚ್ಚಿನ ಖಾಸಗಿತನವನ್ನು ಒದಗಿಸಲು ಸಾಧ್ಯ ಎಂದಾದರೆ ಭಯೋತ್ಪಾದಕ ಸಂಘಟನೆಗಳು ಅವುಗಳನ್ನು ಆಯ್ದ ಚಟುವಟಿಕೆಗಳಲ್ಲಿ ಬಳಸಲು ಹೆಚ್ಚು ಸಿದ್ಧವಾಗಬಲ್ಲವು ಮತ್ತು ಅದನ್ನು ಜ಼ೆಡ್ ಕ್ಯಾಷ್‌ಗಿಂತ ಹೆಚ್ಚಾಗಿ ಬಳಸಬಹುದು. ಅದರೊಡನೆ, ನಿರ್ದಿಷ್ಟ ಭಯೋತ್ಪಾದಕ ಸಂಘಟನೆಗಳು ಕ್ರಿಪ್ಟೋ ಕರೆನ್ಸಿಯಿಂದ ಏನನ್ನು ಬಯಸುತ್ತವೆ ಹಾಗೂ ಅವುಗಳನ್ನು ಲಭ್ಯವಿರುವ ಕ್ರಿಪ್ಟೋ ಕರೆನ್ಸಿಗಳ ಗುಣ ಲಕ್ಷಣಗಳೊಡನೆ ಹೋಲಿಸಿ ನೋಡಬೇಕಾಗುತ್ತದೆ.

ಎಫ್ಎಟಿಎಫ್ ಗ್ರೇ ಲಿಸ್ಟ್ ಎಂದರೇನು?
ನಾಲ್ಕು ವರ್ಷಗಳಿಗೂ ಹಿಂದೆ, ಪಾಕಿಸ್ತಾನ ತನ್ನಲ್ಲಿ ನಡೆಯುವ ಅಕ್ರಮ ಹಣ ವರ್ಗಾವಣೆಯ ಅಪಾಯವನ್ನು ತಡೆಯಲು ವಿಫಲವಾದ ಕಾರಣ ಎಫ್ಎಟಿಎಫ್ ಪಾಕಿಸ್ತಾನವನ್ನು ತನ್ನ ಬೂದು ಪಟ್ಟಿಗೆ ಸೇರಿಸಿತು. ಈ ಅಕ್ರಮ ಹಣ ವರ್ಗಾವಣೆ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುವ ಸಾಧ್ಯತೆಗಳಿದ್ದವು. ಪಾಕಿಸ್ತಾನವನ್ನು ಬೂದು ಪಟ್ಟಿಯಿಂದ ಬಿಳಿ ಪಟ್ಟಿಗೆ ಸೇರಿಸಲು 39ರಲ್ಲಿ 12 ಮತಗಳ ಅಗತ್ಯವಿದೆ. ಕಪ್ಪು ಪಟ್ಟಿಗೆ ಸೇರದಂತೆ ತಡೆಯಲು ಮೂರು ರಾಷ್ಟ್ರಗಳ ಮತ ಬೇಕಾಗುತ್ತದೆ. ಪಾಕಿಸ್ತಾನ ತಾನು ಕಪ್ಪು ಪಟ್ಟಿಗೆ ಸೇರಿದಂತೆ ತಡೆಯಲು ತನ್ನ ಮಿತ್ರ ರಾಷ್ಟ್ರಗಳಾದ ಚೀನಾ, ಟರ್ಕಿ ಹಾಗೂ ಮಲೇಷಿಯಾಗಳ ಬೆಂಬಲ ಪಡೆದಿದೆ.

ಒಂದು ವೇಳೆ ಯಾವುದಾದರೂ ರಾಷ್ಟ್ರ ಅಕ್ರಮ ಹಣ ವರ್ಗಾವಣೆ ಹಾಗೂ ಭಯೋತ್ಪಾದನೆಗೆ ಹಣಕಾಸಿನ ನೆರವು ಒದಗಿಸುತ್ತದೆ ಎಂದರೆ ಅದನ್ನು ಎಫ್ಎಟಿಎಫ್ ಬೂದು ಪಟ್ಟಿಗೆ ಸೇರಿಸುತ್ತದೆ. ಈ ಪ್ರಕ್ರಿಯೆ ಆ ದೇಶದ ಅಕ್ರಮ ಹಣ ವರ್ಗಾವಣೆ ತಡೆ ಹಾಗೂ ಭಯೋತ್ಪಾದನೆಗೆ ಹಣಕಾಸಿನ ನೆರವು ತಡೆಯುವ ಕಾನೂನುಗಳಲ್ಲಿ ವೈಫಲ್ಯವಿದೆ ಎಂಬುದನ್ನು ಸಾಬೀತುಪಡಿಸುತ್ತದೆ. ಈ ಪ್ರಕ್ರಿಯೆ ಅತ್ಯಂತ ತೀಕ್ಷ್ಣವಾದ ಕಪ್ಪು ಪಟ್ಟಿಗೆ ಸೇರದಂತೆ ಎಚ್ಚರ ವಹಿಸಲು ಆ ರಾಷ್ಟ್ರಕ್ಕೆ ಎಚ್ಚರಿಕೆಯ ಗಂಟೆಯಾಗಿರುತ್ತದೆ. ಎಫ್ಎಟಿಎಫ್ ಕಪ್ಪು ಪಟ್ಟಿಯಲ್ಲಿ ಉತ್ತರ ಕೊರಿಯಾ ಹಾಗೂ ಇರಾನ್ ಎರಡೇ ರಾಷ್ಟ್ರಗಳಿವೆ.

ಭವಿಷ್ಯದ ಮೇಲಿನ ಪರಿಣಾಮಗಳು
ಮುಂದಿನ ದಿನಗಳಲ್ಲಿ ಕ್ರಿಪ್ಟೋ ಕರೆನ್ಸಿಯಂತಹ ಪರ್ಯಾಯ ಹಣದ ಬಳಕೆ ಹೆಚ್ಚಾಗುತ್ತವೆ. ಇದರೊಡನೆ ಇಂಟರ್‌ನೆಟ್ ಸೇವೆಗಳು ಅತ್ಯಂತ ವ್ಯಾಪಕವಾಗಿ ಲಭ್ಯವಾಗುವುದರಿಂದ, ಡಿಜಿಟಲ್‌ ವ್ಯವಹಾರಗಳ ಕಾನೂನುಬದ್ಧತೆಯನ್ನು ಗುರುತಿಸುವುದು ಹಾಗೂ ಖಚಿತಪಡಿಸುವುದು ಕಷ್ಟಕರವಾಗಲಿದೆ. ಆದ್ದರಿಂದ ಹಣಕಾಸಿನ ಮೋಸದ ಅಥವಾ ದುರುದ್ದೇಶಪೂರಿತ ವರ್ಗಾವಣೆಗಳು ನಡೆದರೆ, ಡಿಜಿಟಲ್ ವ್ಯವಹಾರದಲ್ಲಿರುವ ಬಳಕೆದಾರರ ಹೆಸರು ನೋಡಿ ಅದು ಓರ್ವ ನೈಜ ವ್ಯಕ್ತಿಯದೇ ಎಂದು ಹೇಳುವುದು ಕಷ್ಟಕರವಾಗಲಿದೆ.

ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸಿನ ಪೂರೈಕೆ ಯಾವಾಗಲೂ ಡ್ರಗ್ಸ್ ಪೂರೈಕೆಯಂತಹ ಕ್ರಿಮಿನಲ್ ಕಾರ್ಯಾಚರಣೆಗಳು ಹಾಗೂ ವ್ಯವಹಾರಗಳನ್ನು ಒಳಗೊಂಡಿರುತ್ತವೆ. ಮಾದಕ ದ್ರವ್ಯಗಳ ಸಾಗಾಣಿಕೆಗೆ ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನಗಳು ಚಿನ್ನದ ಹಾದಿ ಹಾಕಿಕೊಡುತ್ತಿವೆ. ಆ ದೇಶಗಳಲ್ಲಿ ಬೆಳೆದ ಮಾದಕ ವಸ್ತುಗಳನ್ನು ಭಯೋತ್ಪಾದಕರು ತಮ್ಮ ಗುರಿಯಾದ ಭಾರತದಂತಹ ರಾಷ್ಟ್ರಗಳಲ್ಲಿ ಹಂಚಲು ಪ್ರಯತ್ನಿಸುತ್ತಾರೆ. ಇದಕ್ಕಾಗಿ ಅವರು ಭಾರತದಲ್ಲಿ ನಗದು ವ್ಯವಹಾರ ನಡೆಸಿ, ಯಾವುದೇ ಡಿಜಿಟಲ್ ವ್ಯವಹಾರದ ಸಾಕ್ಷಿ ಉಳಿಯದಂತೆ ನೋಡಿಕೊಳ್ಳುತ್ತಾರೆ.

ಇದನ್ನೂ ಓದಿ | ಭಯೋತ್ಪಾದನೆ ನಿಗ್ರಹಕ್ಕೆ ಚೀನಾ ಅಡ್ಡಗಾಲು; ಅಮೆರಿಕ-ಭಾರತ ಜಂಟಿ ಯತ್ನಕ್ಕೆ ವಿಶ್ವಸಂಸ್ಥೆಯಲ್ಲಿ ಹಿನ್ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
Vote Jihad
ದೇಶ11 mins ago

Vote Jihad: ವೋಟ್‌ ಜಿಹಾದ್‌ಗೆ ಕರೆ ನೀಡಿದ್ದು ಇಂಡಿಯಾ ಒಕ್ಕೂಟದ ಮನಸ್ಥಿತಿಗೆ ಕನ್ನಡಿ ಎಂದ ಮೋದಿ

Prajwal Revanna Case PM Modi defends MP accused of rape says Rahul Gandhi
Lok Sabha Election 202417 mins ago

Prajwal Revanna Case: ಮಹಾನ್‌ ರೇಪಿಸ್ಟ್‌ಗೆ ಮೋದಿಯಿಂದ ರಕ್ಷಣೆ; ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಗುಡುಗು

Rinku Singh
ಕ್ರೀಡೆ25 mins ago

Rinku Singh: ಟಿ20 ವಿಶ್ವಕಪ್​ಗೆ ರಿಂಕು ಆಯ್ಕೆಯಾಗಬಹುದೆಂದು ಪಟಾಕಿ, ಸಿಹಿ ತಂದಿಟ್ಟಿದ್ದ ತಂದೆಗೆ ನಿರಾಸೆ

Crime News
ಕ್ರೈಂ26 mins ago

Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Samsung
ತಂತ್ರಜ್ಞಾನ45 mins ago

ಸ್ಯಾಮ್‌ಸಂಗ್‌ನ ‘ಫ್ಯಾಬ್ ಗ್ರಾಬ್ ಫೆಸ್ಟ್’: ಸ್ಮಾರ್ಟ್‌ಫೋನ್‌, ಟಿವಿ, ಲ್ಯಾಪ್‌ಟಾಪ್‌, ಡಿಜಿಟಲ್ ಉಪಕರಣಗಳ ಮೇಲೆ ಅದ್ಭುತ ಆಫರ್

students self harming
ಕ್ರೈಂ1 hour ago

Students Self harming: 20 ವರ್ಷಗಳಲ್ಲಿ ಐಐಟಿಯ 115 ವಿದ್ಯಾರ್ಥಿಗಳು ಆತ್ಮಹತ್ಯೆ

Prajwal Revanna Case HD DeveGowda and HD Kumaraswamy slams HD Revanna
ಕ್ರೈಂ2 hours ago

Prajwal Revanna Case: ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Pawan Kalyan Hari Hara Veera Mallu Part 1 teaser Out
ಟಾಲಿವುಡ್2 hours ago

Pawan Kalyan: ʻಹರಿ ಹರ ವೀರ ಮಲ್ಲುʼವಾಗಿ ಅಬ್ಬರಿಸಿದ ಪವನ್ ಕಲ್ಯಾಣ್; ಟೀಸರ್‌ ಔಟ್‌!

supreme court
ದೇಶ2 hours ago

Supreme Court: CBI ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿಲ್ಲ; ಸುಪ್ರೀಂಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

Viral News
ವೈರಲ್ ನ್ಯೂಸ್2 hours ago

Viral News: ಮದುವೆಗೆ ಮುನ್ನವೇ 2 ಬಾರಿ ಗರ್ಭಿಣಿಯಾದ ಅಪ್ರಾಪ್ತೆ; ಪೋಷಕರು ಮಗುವನ್ನು ಮಾರಾಟ ಮಾಡಿದ್ದಾರೆಂದು ದೂರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌