ವಿಸ್ತಾರ Explainer | ಏನಿದು ಜಿ 20? ಅಧ್ಯಕ್ಷತೆ ಜವಾಬ್ದಾರಿಯಿಂದ ಭಾರತಕ್ಕೆ ಏನು ಲಾಭ? - Vistara News

EXPLAINER

ವಿಸ್ತಾರ Explainer | ಏನಿದು ಜಿ 20? ಅಧ್ಯಕ್ಷತೆ ಜವಾಬ್ದಾರಿಯಿಂದ ಭಾರತಕ್ಕೆ ಏನು ಲಾಭ?

ಭಾರತದ ಜಿ20 ಅಧ್ಯಕ್ಷತೆಯ ಜವಾಬ್ದಾರಿಯ ಪಯಣವು ಬೆಂಗಳೂರಿನ ಎಫ್‌ಸಿಬಿಡಿ ಸಭೆಯೊಂದಿಗೆ ವಿಧ್ಯುಕ್ತವಾಗಿ ಆರಂಭವಾಗಿದೆ. ಮುಂದಿನ ಸೆಪ್ಟೆಂಬರ್‌ವರೆಗೂ ದೇಶದ ವಿವಿಧ ನಗರಗಳಲ್ಲಿ ಜಿ 20ಗೆ ಸಂಬಂಧಿಸಿದ ನಾನಾ ಕಾರ್ಯಕ್ರಗಳು ನಡೆಯಲಿವೆ. ಈ ಕುರಿತ ವಿಸ್ತೃತ (ವಿಸ್ತಾರ Explainer) ಇಲ್ಲಿದೆ.

VISTARANEWS.COM


on

G20 Presidency @ India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗತ್ತಿನ ಅತ್ಯಂತ ಪ್ರಭಾವಿ ಗುಂಪು ಎನಿಸಿಕೊಂಡಿರುವ ಜಿ 20 ಅಧ್ಯಕ್ಷತೆಯನ್ನು ವಹಿಸಿಕೊಂಡು, ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾರತವು ಮುಂದಡಿ ಇಟ್ಟಿದೆ. ಈ ಗುಂಪಿನ ಅಧ್ಯಕ್ಷತೆಯನ್ನು ವಹಿಸಿಕೊಳ್ಳುವ ಸದಸ್ಯ ರಾಷ್ಟ್ರವು, ಆ ವರ್ಷ ಪೂರ್ತಿ ಜಿ 20 ಕಾರ್ಯಸೂಚಿಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡಿ.13ರಿಂದ ಮೂರು ದಿನಗಳ ಕಾಲ ಸದಸ್ಯ ರಾಷ್ಟ್ರಗಳ ಮೊದಲ ಹಣಕಾಸು ಮತ್ತು ಕೇಂದ್ರ​ ಬ್ಯಾಂಕ್​ ನಿಯೋಗಿಗಳ (ಎಫ್​ಸಿಬಿಡಿ) ಸಭೆ ನಡೆಯುತ್ತಿದೆ. ಇದರೊಂದಿಗೆ ಭಾರತ ಅಧ್ಯಕ್ಷತೆಯ ಕಾರುಬಾರು ಶುರುವಾಯಿತು. ಜಿ 20 ಶೃಂಗ ಸಭೆಯು 2023ರ ಸೆಪ್ಟೆಂಬರ್‌ನಲ್ಲಿ ನಡೆಯಲಿದ್ದು, ಅಲ್ಲಿಯವರೆಗೆ ದೇಶಾದ್ಯಂತ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ(ವಿಸ್ತಾರ Explainer).

ಜಿ 20 ಅಧ್ಯಕ್ಷತೆಯ ಜವಾಬ್ದಾರಿ ಜಗತ್ತಿನ ಎದುರು ಭಾರತದ ವೈವಿಧ್ಯತೆ, ಸಂಸ್ಕೃತಿ, ಶಕ್ತಿ ಮತ್ತು ಸಾಮರ್ಥ್ಯಗಳನ್ನು ಪ್ರದರ್ಶಿಸಲು ಎದುರಾಗಿರುವ ಬಹುದೊಡ್ಡ ಅವಕಾಶವಾಗಿದೆ. ಈ ಅವಕಾಶವನ್ನು ಭಾರತವು ಸದುಪಯೋಗಪಡಿಸಿಕೊಳ್ಳಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಕೋರಿ, ವಿಶ್ವದೆದುರು ನಮ್ಮ ಹಿರಿಮೆಯನ್ನು ತೋರ್ಪಡಿಸುವ ಬಗ್ಗೆ ಮಾತನಾಡಿದ್ದಾರೆ. ಅದೇ ದಾರಿಯಲ್ಲಿ ಈಗ ಕಾರ್ಯಕ್ರಮಗಳು ನಡೆಯತ್ತಿವೆ. ಜಿ 20 ಅಧ್ಯಕ್ಷತೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಭಾರತವು ಏಕ ಭೂಮಿ, ಏಕ ಕುಟುಂಬ ಮತ್ತು ಏಕ ಭವಿಷ್ಯ ಎಂಬ ಥೀಮ್‌ನೊಂದಿಗೆ ಮುನ್ನಡೆಯುತ್ತಿದೆ.

ಜಿ 20 ಯಾಕೆ ಮಹತ್ವದ್ದು?
ಜಿ 20 ಎಂಬುದು ಜಗತ್ತಿನ ಅತಿ ದೊಡ್ಡ ಆರ್ಥಿಕತೆಗಳ ವೇದಿಕೆಯಾಗಿದೆ. ಜಾಗತಿಕ ಸಮಸ್ಯೆಗಳನ್ನು ಎದುರಿಸಲು ಮತ್ತು ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿಯಮಿತವಾಗಿ ಒಂದೆಡೆ ಸಭೆ ಸೇರಿ ಸದಸ್ಯ ರಾಷ್ಟ್ರಗಳು ಚರ್ಚೆ ನಡೆಸುತ್ತವೆ. ಹಾಗೆಯೇ, ಸದಸ್ಯ ರಾಷ್ಟ್ರಗಳ ನಡುವೆ ಸಹಕಾರ ವೃದ್ಧಿ, ಸಮನ್ವಯತೆಯನ್ನು ಸಾಧಿಸಲು ಇದೊಂದು ಮಹತ್ವದ ವೇದಿಕೆಯಾಗಿದೆ. ಪ್ರಪಂಚದ ಪ್ರಮುಖ ರಾಷ್ಟ್ರಗಳು ಈ ವೇದಿಕೆಯ ಭಾಗವಾಗಿರುವುದರಿಂದ ಇದೊಂದು ಪ್ರಭಾವಿ ಗುಂಪು ಆಗಿದೆ. ಹಾಗಾಗಿ, ಜಿ 20 ಕೂಟಕ್ಕೆ ಹೆಚ್ಚಿನ ಮಹತ್ವವಿದೆ.

g20-logo-India-1

ಜಿ 20 ಅಧ್ಯಕ್ಷತೆಯು ಏನೆಲ್ಲ ಒಳಗೊಂಡಿರುತ್ತದೆ?
ಜಿ 20 ಗ್ರೂಪ್‌ಗೆ ಯಾವುದೇ ಶಾಶ್ವತವಾದ ಸಚಿವಾಲಯ ಇಲ್ಲ. ಈ ಸಮೂಹದ ಕಾರ್ಯಸೂಚಿಯನ್ನು ಜಾರಿ ಮಾಡುವುದಕ್ಕಾಗಿ ಪ್ರತಿ ವರ್ಷ ಒಂದೊದು ರಾಷ್ಟ್ರವು ಅಧ್ಯಕ್ಷತೆಯನ್ನು ವಹಿಸಿಕೊಳ್ಳುತ್ತದೆ. ಈ ವರ್ಷ ಭಾರತವು ವಹಿಸಿಕೊಂಡಿದ್ದು, ಈ ಹಿಂದಿನ ವರ್ಷ ಇಂಡೋನೇಷ್ಯಾ ವಹಿಸಿಕೊಂಡಿತ್ತು. ಜಿ 20 ಕಾರ್ಯಸೂಚಿಯನ್ನು ಎರಡು ತಂಡಗಳು ಜಾರಿ ಮಾಡುತ್ತವೆ. ಸದಸ್ಯ ರಾಷ್ಟ್ರಗಳ ವಿತ್ತ ಸಚಿವರು ಮತ್ತು ಸದಸ್ಯ ರಾಷ್ಟ್ರಗಳ ನಾಯಕರ ರಾಯಭಾರಿಗಳ ಮೂಲಕ ಒಪ್ಪಿಕೊಳ್ಳಲಾದ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಭಾರತದ ಬಳಿಕ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳು ಜಿ 20 ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿವೆ.

ಅಧ್ಯಕ್ಷತೆಯ ರಾಷ್ಟ್ರಗಳು ಏನು ಮಾಡುತ್ತವೆ?
ಅಧ್ಯಕ್ಷತೆಯ ಜವಾಬ್ದಾರಿ ವಹಿಸಿಕೊಂಡ ಸದಸ್ಯ ರಾಷ್ಟ್ರವು ಆ ಒಂದು ವರ್ಷ ಪೂರ್ತಿ ಜಿ 20 ರಾಷ್ಟ್ರಗಳ ಕಾರ್ಯಸೂಚಿ ಅನುಷ್ಠಾನದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತವೆ. ಇದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ವರ್ಷಪೂರ್ತಿ ಅಧ್ಯಕ್ಷತೆ ವಹಿಸಿಕೊಂಡ ರಾಷ್ಟ್ರ ನಡೆಸಿಕೊಡುತ್ತದೆ. ಭಾರತದ ಮಟ್ಟಿಗೆ ಹೇಳುವುದಾದರೆ, ದೇಶದ ವಿವಿಧ 50 ನಗರಗಳಲ್ಲಿ ಸುಮಾರು 200 ಸಭೆಗಳನ್ನು ನಡೆಸಲಿದೆ. 2023ರ ಸೆಪ್ಟೆಂಬರ್‌ನಲ್ಲಿ ಅಂತಿಮ ಜಿ20 ಶೃಂಗ ನಡೆಯಲಿದೆ. ಅದರೊಂದಿಗೆ ಅಧ್ಯಕ್ಷತೆಯ ರಾಷ್ಟ್ರದ ಜವಾಬ್ದಾರಿಯು ಮುಕ್ತಾಯಗೊಳ್ಳುತ್ತದೆ. ಇಷ್ಟೂ ಕಾರ್ಯಕ್ರಮಗಳಲ್ಲಿ ಸದಸ್ಯ ರಾಷ್ಟ್ರಗಳ ನಾನಾ ಸಚಿವರು, ಅಧಿಕಾರಿಗಳು, ಸಮಾಜದ ಗಣ್ಯ ವ್ಯಕ್ತಿಗಳು, ತಜ್ಞರು ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡುತ್ತಾರೆ. ಅಂತಿಮವಾಗಿ ನಡೆಯುವ ಶೃಂಗಸಭೆಯಲ್ಲಿ ಜಿ 20 ಸದಸ್ಯ ರಾಷ್ಟ್ರಗಳ ಸುಮಾರು 30 ನಾಯಕರು ಪಾಲ್ಗೊಳ್ಳುತ್ತಾರೆ. ಇದರಲ್ಲಿ ಆಹ್ವಾನಿತ ರಾಷ್ಟ್ರಗಳ ನಾಯಕರೂ ಇರುತ್ತಾರೆ.

ರಾಜಕೀಯವಾಗಿ ಏನು ಲಾಭ?
ಈಗ ನರೇಂದ್ರ ಮೋದಿ ಅವರು ಭಾರತದ ಜನಪ್ರಿಯ ನಾಯಕರು. ಜಿ 20 ಅಧ್ಯಕ್ಷತೆಯು ತಮ್ಮ ನಾಯಕತ್ವದಲ್ಲೇ ದೊರೆಯಿತು ಎಂದು ಬಿಂಬಿಸಿಕೊಳ್ಳಬಹುದು. ಎಲ್ಲಕ್ಕಿಂತ ಹೆಚ್ಚಾಗಿ 2024ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಹಾಗಾಗಿ, ಸೆಪ್ಟೆಂಬರ್ 2023ರಲ್ಲಿ ನಡೆಯಲಿರುವ ಜಿ 20 ಶೃಂಗವು ಮೋದಿ ಪ್ರತಿನಿಧಿಸುವ ಬಿಜೆಪಿಗೆ ಸ್ವಲ್ಪ ಮಟ್ಟಿಗೆ ಲಾಭ ಮಾಡಿಕೊಡಬಹುದು ಎಂಬ ಲೆಕ್ಕಾಚಾರವೂ ಇದೆ.

ಈಗಾಗಲೇ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್ ಅವರ ಜತೆಗೆ ಅತ್ಯುತ್ತಮ ಸಂಬಂಧ ಹೊಂದಿದ್ದಾರೆ. ಜಿ 20 ಜವಾಬ್ದಾರಿಯಿಂದಾಗಿ ಉಳಿದ ಸದಸ್ಯ ರಾಷ್ಟ್ರಗಳೊಂದಿಗೆ ಭಾರತದ ನಾಯಕತ್ವದ ಸಂಬಂಧ ಮತ್ತು ದ್ವಿಪಕ್ಷೀಯ ಸಂಬಂಧಗಳು ಉನ್ನತಮಟ್ಟಕ್ಕೆ ತಲಪಬಹುದು. ಆದರೂ, ಪ್ರಸ್ತುತ ಸಂಕೀರ್ಣವಾದ ಭೌಗೋಳಿಕ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿಯು ಬಹು ಬಿಕ್ಕಟ್ಟುಗಳಿಗೆ ಅಂತಾರಾಷ್ಟ್ರೀಯ ಪ್ರತಿಕ್ರಿಯೆಯನ್ನು ರೂಪಿಸಲು ಭಾರತ ಮತ್ತು ಮೋದಿಗೆ ಸವಾಲಾಗಿ ಪರಿಣಮಿಸುತ್ತದೆ ಎಂಬುದನ್ನು ಅಲ್ಲಗಳೆಯಲಾಗದು. ಜಿ 20ಯಂಥ ಜಗತ್ತಿನ ಪ್ರಭಾವಿ ಕೂಟವನ್ನು ಯಶಸ್ವಿಯಾಗಿ ಮುನ್ನಡೆಸುವುದು ಭಾರತದ ಗರಿಮೆಯನ್ನು ಹೆಚ್ಚಿಸಲಿದೆ.

ಭಾರತಕ್ಕೇನು ಉಪಯೋಗ?
| ಜಿ20 ಅಧ್ಯಕ್ಷತೆಯಿಂದ ಒಂದು ವರ್ಷದ ಮಟ್ಟಿಗೆ ಜಗತ್ತಿನ ಪ್ರಭಾವಿ ಗುಂಪಿನ ನಾಯಕತ್ವವು ದೊರೆಯಲಿದೆ.
| ಪ್ರಪಂಚದ ಎದುರು ಭವ್ಯ ಭಾರತದ ಶಕ್ತಿ ಮತ್ತು ಸಾಮರ್ಥ್ಯಗಳನ್ನು ಪ್ರದರ್ಶಿಸಲು ದೊಡ್ಡ ಅವಕಾಶ ಸಿಗಲಿದೆ.
| ಪ್ರಧಾನಿ ನೇರಂದ್ರ ಮೋದಿ ಅವರು ಜಾಗತಿಕ ನಾಯಕತ್ವಕ್ಕೆ ಮತ್ತಷ್ಟು ಮೆರುಗು ದೊರೆಯಲಿದೆ.
| ಸದಸ್ಯ ರಾಷ್ಟ್ರಗಳ ನಡುವೆ ಸಹಕಾರ ಹೆಚ್ಚಿಸಲು, ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ಸಾಧ್ಯವಾಗಲಿದೆ.
| ವಿದೇಶಾಂಗ ಇಲಾಖೆಯ ಮಾಜಿ ಕಾರ್ಯದರ್ಶಿ ಹರ್ಷ ವಿ ಶೃಂಗ್ಲಾ ಅವರನ್ನು ಭಾರತದ ಜಿ 20 ಅಧ್ಯಕ್ಷತೆಯ ಮುಖ್ಯ ಸಮನ್ವಯಕಾರರಾಗಿ ನೇಮಕ ಮಾಡಲಾಗಿದೆ.
| ಭಾರತದ ನಾಯಕತ್ವದಲ್ಲಿ ಜಿ 20 ಕಾರ್ಯಸೂಚನೆಯನ್ನು ಜಾರಿ ಮಾಡಲಾಗುತ್ತದೆ.
| ಒಂದು ವರ್ಷದ ಮಟ್ಟಿಗೆ ಜಾಗತಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಭಾರತವು ಪ್ರಮುಖ ಪಾತ್ರ ವಹಿಸಲಿದೆ.
|ಪ್ರಪಂಚದ ಎದುರು ಭಾರತದ ಪ್ರಾಚೀನ ಮತ್ತು ಆಧುನಿಕ ಹೆಗ್ಗಳಿಕೆಯನ್ನು ಪ್ರಚುರಪಡಿಸುವ ಅವಕಾಶ ದೊರೆಯಲಿದೆ.

ಏನಿದು ಜಿ 20?
ಜಿ 20 ಅಥವಾ ಗ್ರೂಪ್‌ ಆಫ್‌ ಟ್ವೆಂಟಿ ಎನ್ನುವುದು ವಿಶ್ವದ ಪ್ರಮುಖ ಅಭಿವೃದ್ಧಿ ಹೊಂದಿರುವ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಅಂತಾರಾಷ್ಟ್ರೀಯ ಒಕ್ಕೂಟ. ಇದರಲ್ಲಿ ಭಾರತ, ಆಸ್ಟ್ರೇಲಿಯಾ, ಅರ್ಜೆಂಟೀನಾ, ಬ್ರೆಜಿಲ್‌, ಕೆನಡಾ, ಚೀನಾ, ಫ್ರಾನ್ಸ್‌, ಜರ್ಮನಿ, ಇಂಡೊನೇಷ್ಯಾ, ಇಟಲಿ, ಜಪಾನ್‌, ಕೊರಿಯಾ, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಬ್ರಿಟನ್‌, ಅಮೆರಿಕ ಮತ್ತು ಐರೋಪ್ಯ ಒಕ್ಕೂಟವಿದೆ. ಅಂದರೆ 19 ದೇಶಗಳು ಮತ್ತು ಐರೋಪ್ಯ ಒಕ್ಕೂಟವಿದೆ. ಭಾರತ ಇದರಲ್ಲಿ 1999ರಿಂದಲೇ ಸದಸ್ಯತ್ವ ಪಡೆದಿದೆ. ಜಿ 20 ಒಕ್ಕೂಟವು ಜಾಗತಿಕ ಜಿಡಿಪಿಯ 85% ಪಾಲನ್ನು ಪ್ರತಿನಿಧಿಸುತ್ತದೆ. ಅಂತಾರಾಷ್ಟ್ರೀಯ ಆರ್ಥಿಕ ಸಹಕಾರವನ್ನು ಇದು ಒಳಗೊಂಡಿದೆ. ಜಗತ್ತಿನ ಮೂರನೇ ಎರಡರಷ್ಟು ಜನಸಂಖ್ಯೆಯ ಪ್ರಾತಿನಿಧ್ಯವನ್ನು ಹೊಂದಿದೆ. ಭೂಮಿಯ 60% ಪಾಲನ್ನು ಈ ರಾಷ್ಟ್ರಗಳು ಹೊಂದಿವೆ. ಉದ್ಯಮದಲ್ಲಿ ಅಭಿವೃದ್ಧಿ ಹೊಂದಿರುವ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳನ್ನು ಹೊಂದಿದೆ.

23 ವರ್ಷಗಳ ಹಿಂದೆ ಸ್ಥಾಪನೆ
ಈ ಜಿ 20 ವೇದಿಕೆಯನ್ನು 1999ರಲ್ಲಿ ಸ್ಥಾಪಿಸಲಾಗಿತ್ತು. ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪರಿಹಾರೋಪಾಯಗಳ ಬಗ್ಗೆ ಜಾಗತಿಕ ಹವಾಮಾನ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಬಗ್ಗೆ ಚರ್ಚಿಸಲು ವೇದಿಕೆಯ ಅನಿವಾರ್ಯತೆ ಉಂಟಾಗಿತ್ತು. ಒಕ್ಕೂಟದಲ್ಲಿನ ದೇಶಗಳ ಪ್ರಧಾನಿ, ವಿದೇಶಾಂಗ ಸಚಿವ, ಹಣಕಾಸು ಸಚಿವ ಮತ್ತು ಉನ್ನತ ಮಟ್ಟದ ಅಧಿಕಾರಿಗಳು ಶೃಂಗದಲ್ಲಿ ಭಾಗವಹಿಸುತ್ತಾರೆ. ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಶೃಂಗ ಸಮಾವೇಶ ನೆರವೇರುತ್ತದೆ. 2009ರ ಸಮಾವೇಶದಲ್ಲಿ ಆರ್ಥಿಕ ಮತ್ತು ಹಣಕಾಸು ಸಹಕಾರಕ್ಕೆ ಆದ್ಯತೆ ನೀಡಲಾಗಿತ್ತು. ಅಮೆರಿಕ, ಜಪಾನ್‌, ಫ್ರಾನ್ಸ್‌, ದಕ್ಷಿಣ ಆಫ್ರಿಕಾ, ಬ್ರೆಜಿಲ್‌ ಮೊದಲಾದ ದೇಶಗಳು ಅಧ್ಯಕ್ಷತೆ ವಹಿಸಿವೆ.

ಎರಡನೇ ಜಾಗತಿಕ ಯುದ್ಧದ ಬಳಿಕ, ಆರ್ಥಿಕ ಮತ್ತು ಇತರ ವಿಚಾರಗಳಲ್ಲಿ ಅಂತಾರಾಷ್ಟ್ರೀಯ ಸಹಕಾರಕ್ಕೆ ರಾಷ್ಟ್ರಗಳು ಒಕ್ಕೂಟಗಳನ್ನು ರಚಿಸಿದವು. ಈ ಸರಣಿಯಲ್ಲಿ ಜಿ 20 ಕೂಡ ಒಂದಾಗಿದೆ. 90ರ ದಶಕದಲ್ಲಿ ಆರ್ಥಿಕ ಬಿಕ್ಕಟ್ಟು ಸಂಭವಿಸಿದ ಬಳಿಕ ಈ ಒಕ್ಕೂಟ ರಚನೆಯಾಯಿತು. ಮುಖ್ಯವಾಗಿ ಏಷ್ಯಾದ ರಾಷ್ಟ್ರಗಳು ಇದಕ್ಕಾಗಿ ಸೇರಿದವು. ಭಾರತವು ಬಾಂಗ್ಲಾದೇಶ, ಈಜಿಪ್ತ್‌, ಮಾರಿಷಸ್‌, ನೆದರ್ಲೆಂಡ್ಸ್‌, ಒಮಾನ್‌, ಸಿಂಗಾಪುರ, ಯುಎಇಯನ್ನು 2023ರ ಜಿ 20ರ ಶೃಂಗಕ್ಕೆ ಅತಿಥಿ ರಾಷ್ಟ್ರಗಳಾಗಿ ಆಹ್ವಾನಿಸಿದೆ. ಜಾಗತಿಕ ಮಟ್ಟದಲ್ಲಿ ಜಿ 20 ತನ್ನ ಪ್ರಭಾವಳಿಯನ್ನು ವಿಸ್ತರಿಸಿದ್ದರೂ, ಇದರ ಕಾರ್ಯಸೂಚಿಗಳ ಅನುಷ್ಠಾನದಲ್ಲಿ ಕುಂದು ಕೊರತೆಗಳಿವೆ ಎನ್ನುತ್ತಾರೆ ತಜ್ಞರು.

G20 Presidency @ India

ಭಾರತದ ಎದುರಿನ ಸವಾಲುಗಳೇನು?
| ಜಿ 20 ಒಕ್ಕೂಟದ ಆದ್ಯತೆಗಳು ಹಲವು
ಸಮಗ್ರತೆ, ಸಮಾನತೆ, ಸುಸ್ಥಿರ ಬೆಳವಣಿಗೆ, ಮಹಿಳಾ ಸಬಲೀಕರಣ, ಡಿಜಿಟಲ್‌ ಸಾರ್ವಜನಿಕ ಮೂಲಸೌಕರ್ಯ, ತಂತ್ರಜ್ಞಾನ ಆಧರಿತ ಅಭಿವೃದ್ಧಿ, ಹವಾಮಾನ ಬದಲಾವಣೆ, ಜಾಗತಿಕ ಆಹಾರ ಭದ್ರತೆ, ಇಂಧನ ಭದ್ರತೆ ಮತ್ತಿತರ ವಿಷಯಗಳು ಇದರಲ್ಲಿವೆ.
| ರಷ್ಯಾ-ಉಕ್ರೇನ್‌ ಸಂಘರ್ಷ
ರಷ್ಯಾ-ಉಕ್ರೇನ್‌ ಸಂಘರ್ಷ ಕಳೆದ ಫೆಬ್ರವರಿಯಲ್ಲಿ ಆರಂಭವಾದ ಬಳಿಕ ಅದರ ದುಷ್ಪರಿಣಾಮ ಇಡೀ ಜಗತ್ತನ್ನು ಆವರಿಸಿದೆ. ಹೀಗಾಗಿ ಈ ಬಿಕ್ಕಟ್ಟನ್ನು ಉಪಶಮನಗೊಳಿಸುವ ನಿಟ್ಟಿನಲ್ಲಿ ಭಾರತ ಜಿ 20 ಶೃಂಗದ ನಾಯಕನಾಗಿ ನಿರ್ಣಾಯಕ ಪಾತ್ರ ವಹಿಸಬೇಕಾಗಿದೆ. ಭಾರತದ ನಿಲುವನ್ನು ಜಗತ್ತು ಎದುರು ನೋಡುತ್ತಿದೆ.
| ವಿಶ್ವಾಸಾರ್ಹತೆ ವೃದ್ಧಿ
ಕಳೆದ ಕೆಲ ತಿಂಗಳುಗಳಿಂದ ಜಿ 20 ಒಕ್ಕೂಟದ ವಿಶ್ವಾಸಾರ್ಹತೆಗೆ ಧಕ್ಕೆಯಾಗಿದೆ. ಆಂತರಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಈ ಭಿನ್ನಮತವನ್ನು ಉಪಶಮನಗೊಳಿಸಬೇಕಾದ ಜವಾಬ್ದಾರಿ ಭಾರತದ ಹೆಗಲ ಮೇಲೇರಲಿದೆ. ಈ ನಿಟ್ಟಿನಲ್ಲಿ ನವೀನ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾಗಿದೆ.
| ಆಂತರಿಕ ಆಡಳಿತ ಸುಧಾರಣೆ
ಒಕ್ಕೂಟದ ಎಲ್ಲ ಸದಸ್ಯರೊಡನೆ ಐಕ್ಯತೆ, ಆಂತರಿಕ ಆಡಳಿತ ಸುಧಾರಣೆ, ಸಮಗ್ರತೆಗೆ ಭಾರತ ರಚನಾತ್ಮಕವಾಗಿ ಕಾರ್ಯಪ್ರವೃತ್ತವಾಗಬೇಕಾಗಿದೆ.
| ಹವಾಮಾನ ಸಂರಕ್ಷಣೆ
ಅಭಿವೃದ್ಧಿ ಹೊಂದಿದ ದೇಶಗಳು ಸ್ವಚ್ಛ ಇಂಧನ ಮತ್ತು ನವೀಕರಿಸಬಹುದಾದ ಇಂಧನಗಳ ಕುರಿತ ತಂತ್ರಜ್ಞಾನವನ್ನು ಅಭಿವೃದ್ಧಿಶೀಲ ಮತ್ತು ಬಡ ದೇಶಗಳಿಗೆ ವರ್ಗಾಯಿಸಬೇಕು. ಭಾರತ ಸೌರಶಕ್ತಿಯ ಬಳಕೆಯಲ್ಲಿ ತನ್ನ ಸಾಧನೆಯನ್ನು ಪ್ರಸ್ತುತಪಡಿಸಬೇಕಾಗಿದೆ.
| ಜಾಗತಿಕ ಆರ್ಥಿಕ ಬಿಕ್ಕಟ್ಟು
ಜಾಗತಿಕ ಆರ್ಥಿಕ ಬಿಕ್ಕಟ್ಟು ಮತ್ತು ಅಸ್ಥಿರತೆ ಜಗತ್ತನ್ನು ಕಾಡುತ್ತಿದೆ. ಈ ಸನ್ನಿವೇಶವನ್ನು ಎದುರಿಸುವ ನಿಟ್ಟಿನಲ್ಲಿ ಭಾರತವು ಜಿ20 ಒಕ್ಕೂಟದ ನಾಯಕನಾಗಿ, ಐಎಂಎಫ್‌, ಡಬ್ಲ್ಯುಟಿಒ ಮತ್ತು ಒಇಸಿಡಿ ಜತೆಗೆ ಕಾರ್ಯನಿರ್ವಹಿಸಬೇಕಾಗುತ್ತದೆ.
| ಆಹಾರ ಭದ್ರತೆಯ ಸವಾಲು
ರಷ್ಯಾ-ಉಕ್ರೇನ್‌ ಸಂಘರ್ಷದ ಬಳಿಕ ಆಹಾರ ಭದ್ರತೆಯ ಸವಾಲು ಎದುರಾಗಿದೆ. ರಷ್ಯಾ ಮತ್ತು ಉಕ್ರೇನ್‌ನಿಂದ ರಫ್ತಾಗುತ್ತಿದ್ದ ಆಹಾರ ಧಾನ್ಯಗಳಿಗೆ ಅಭಾವ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕದ ಕಾರ್ಯತಂತ್ರಗಳನ್ನು ಭಾರತ ಅಂತಿಮಪಡಿಸಬೇಕಾಗಿದೆ.

ಬೆಂಗಳೂರಿನಲ್ಲಿ ಮೊದಲ ಸಭೆ
ಬೆಂಗಳೂರಿನಲ್ಲಿ ಡಿಸೆಂಬರ್​ 13ರಿಂದ 15ರವರೆಗೆ, ಮೊದಲ ಹಣಕಾಸು ಮತ್ತು ಸೆಂಟ್ರಲ್​ ಬ್ಯಾಂಕ್​ ನಿಯೋಗಿಗಳ (ಎಫ್​ಸಿಬಿಡಿ) ಸಭೆ ನಡೆಯುತ್ತಿದೆ. ಜಿ 20 ಫೈನಾನ್ಸ್​ ಟ್ರ್ಯಾಕ್​​ನ ಕಾರ್ಯಸೂಚಿ ಮೇಲಿನ ಚರ್ಚೆಗಳನ್ನು ಆರಂಭಿಸುವ ಸಲುವಾಗಿ ಈ ಸಭೆ ಹಮ್ಮಿಕೊಳ್ಳಲಾಗಿದೆ. ಹಣಕಾಸು ಸಚಿವಾಲಯ ಮತ್ತು ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಜಂಟಿಯಾಗಿ ಆಯೋಜಿಸಿವೆ. ಜಿ 20 ರಾಷ್ಟ್ರಗಳ ಹಣಕಾಸು ಸಚಿವರು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್​​ಗಳ ನೇತೃತ್ವದ ಜಿ 20 ಫೈನಾನ್ಸ್ ಟ್ರ್ಯಾಕ್ ಬಂಡವಾಳ ಮತ್ತು ಆರ್ಥಿಕ ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ. ಇದು ಜಾಗತಿಕ ಆರ್ಥಿಕ ಚರ್ಚೆ ಮತ್ತು ನೀತಿ ಸಮನ್ವಯಕ್ಕೆ ಪರಿಣಾಮಕಾರಿ ವೇದಿಕೆಯನ್ನು ಒದಗಿಸುತ್ತದೆ. 2023ರ ಫೆಬ್ರವರಿ 23ರಿಂದ 25ರವರೆಗೆ ಬೆಂಗಳೂರಿನಲ್ಲಿ, ಹಣಕಾಸು ಸಚಿವರ ಮತ್ತು ಸೆಂಟ್ರಲ್​ ಬ್ಯಾಂಕ್​ ಗವರ್ನರ್​​ಗಳ ಮೊದಲ ಸಭೆ ನಡೆಯಲಿದೆ.

ಮೂರು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಜಿ 20 ಸದಸ್ಯ ರಾಷ್ಟ್ರಗಳು ಮತ್ತು ಭಾರತದಿಂದ ಆಹ್ವಾನಿಸಲಾದ ಇತರ ಹಲವು ದೇಶಗಳು ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಜಾಗತಿಕ ಆರ್ಥಿಕತೆ, ಜಾಗತಿಕ ಆರ್ಥಿಕ ದೃಷ್ಟಿಕೋನ, ಅಂತಾರಾಷ್ಟ್ರೀಯ ಹಣಕಾಸು ರಚನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು, ಸುಸ್ಥಿರ ಹಣಕಾಸು, ಜಾಗತಿಕ ಆರೋಗ್ಯ, ಅಂತಾರಾಷ್ಟ್ರೀಯ ತೆರಿಗೆ ಮತ್ತು ಹಣಕಾಸು ವಲಯದ ಸಮಸ್ಯೆಗಳನ್ನು ಒಳಗೊಂಡ ಜಾಗತಿಕ ಆರ್ಥಿಕತೆಯ ಪ್ರಸ್ತುತ ಪ್ರಮುಖ ವಿಷಯಗಳನ್ನು ಜಿ 20 ಫೈನಾನ್ಸ್ ಟ್ರ್ಯಾಕ್ ಚರ್ಚಿಸಲಿದೆ.

ಕಾರ್ಯಸೂಚಿಗಳೇನು?

  • 21ನೇ ಶತಮಾನದ ಜಾಗತಿಕ ಸವಾಲುಗಳನ್ನು ಎದುರಿಸಲು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳನ್ನು ಪುನರುಜ್ಜೀವಗೊಳಿಸುವುದು.
  • ಭವಿಷ್ಯದ ದಿನಗಳಲ್ಲಿ ಹಣಕಾಸು ಒದಗಿಸುವುದು, ಜಾಗತಿಕ ಸಾಲದ ದೌರ್ಬಲ್ಯಗಳ ನಿರ್ವಹಣೆ, ಹಣಕಾಸು ಅಳವಡಿಕೆ ಮತ್ತು ಉತ್ಪಾದಕತಾ ಲಾಭಗಳ ಮುನ್ನಡೆ, ಹವಾಮಾನ ಕ್ರಮ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಹಣಕಾಸು ಒದಗಿಸುವುದು.
  • ಬೆಂಬಲವಿಲ್ಲದ ಕ್ರಿಪ್ಟೋಗಳಿಗೆ ಜಾಗತಿಕವಾಗಿ ಸಂಘಟಿತ ವಿಧಾನ ಮತ್ತು ಅಂತರಾಷ್ಟ್ರೀಯ ತೆರಿಗೆ ಕಾರ್ಯಸೂಚಿಯನ್ನು ತಯಾರಿಸುವುದು.
G20 Presidency @ India

ಇದನ್ನೂ ಓದಿ | Mann ki baat | ಭಾರತಕ್ಕೆ ಜಿ20 ಅಧ್ಯಕ್ಷತೆ ಅತಿ ದೊಡ್ಡ ಅವಕಾಶ, ಇದನ್ನು ಬಳಸಿಕೊಳ್ಳಬೇಕು: ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

Share Market: ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಇದು ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಗೆ ಹಿಡಿದ ಕನ್ನಡಿ ಎಂದೇ ವಿಶ್ಲೇಷಿಸಲಾಗುತಿದೆ.

VISTARANEWS.COM


on

Share Market
Koo

ಮುಂಬೈ: “ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರಂದು ಭಾರತದ ಷೇರು ಮಾರುಕಟ್ಟೆಯು (Share Market) ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಇದೇ ಮಾತು ಹೇಳಿದ್ದಾರೆ. ಇದರ ಮಧ್ಯೆಯೇ, ಗುರುವಾರ (ಮೇ 23) ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಯ ಸಂಕೇತವಾಗಿಯೇ ಷೇರು ಮಾರುಕಟ್ಟೆಯು ದಾಖಲೆ ಬರೆದಿದೆ ಎಂದೇ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

“ನಿಫ್ಟಿಯು ದಾಖಲೆಯ ಏರಿಕೆ ಕಾಣುವ ಮೂಲಕ ಚುನಾವಣೆ ನಂತರದಲ್ಲಿ ದೇಶದಲ್ಲಿ ರಾಜಕೀಯ ಸ್ಥಿರತೆ ಇರುತ್ತದೆ ಎಂಬ ಸಂದೇಶ ರವಾನಿಸಿದೆ. ಅತಿ ಹೆಚ್ಚಿನ ಹಣ ಹೂಡಿಕೆ ಮಾಡುವವರು ಸೇರಿ ಎಲ್ಲರಿಗೂ ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಜಿಯೋಜೀತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ರಣತಂತ್ರಗಾರ ವಿ.ಕೆ.ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಸಾರ್ವತ್ರಿಕ ಚುನಾವಣೆ ಫಲಿತಾಂಶದ ದಿನ ಷೇರು ಪೇಟೆಯಲ್ಲಿ ಲವಲವಿಕೆ ಇದ್ದೇ ಇರುತ್ತದೆ. ಆದರೆ, ಜೂನ್‌ 4ರಂದು ಇತಿಹಾಸ ಸೃಷ್ಟಿಯಾಗುತ್ತದೆ ಎಂದು ಹೇಳುತ್ತಿರುವುದು ಹೂಡಿಕೆದಾರರ ಖುಷಿ ಹೆಚ್ಚಿಸಿದೆ.

Share Market

ಕೇಂದ್ರಕ್ಕೆ ಆರ್‌ಬಿಐ ಲಾಭಾಂಶದ ಕೊಡುಗೆ

ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.10 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣ ಸಿಗುತ್ತದೆ. ಆ ಹಣವು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ವಿನಿಯೋಗವಾಗುತ್ತದೆ. ಇದರಿಂದ ಷೇರು ಪೇಟೆಯಲ್ಲಿ ಲಾಭ ಗಳಿಸಬಹುದು ಎಂಬ ಕಾರಣದಿಂದ ಹೂಡಿಕೆ ಜಾಸ್ತಿಯಾಗಿದೆ. ಗುರುವಾರವೂ ಸಾರ್ವಜನಿಕ ವಲಯದ ಸಂಸ್ಥೆಗಳು ಲಾಭ ಗಳಿಸಿರುವುದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

ಷೇರು ಮಾರುಕಟ್ಟೆ ಬಗ್ಗೆ ಮೋದಿ ಹೇಳಿದ್ದೇನು?

“ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಹತ್ವದ ಸುಧಾರಣೆ ತಂದಿದೆ. ಆರ್ಥಿಕ ಶಿಸ್ತು, ವಿತ್ತೀಯ ಪ್ರಕ್ರಿಯೆಗಳಲ್ಲಿ ಸುಧಾರಣಾ ಕ್ರಮಗಳನ್ನು ಅನುಸರಿಸಿಕೊಂಡಿದೆ. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆಯು ಕಳೆದ ಒಂದು ದಶಕದಲ್ಲಿ ಗಣನೀಯ ಏಳಿಗೆ ಕಂಡಿದೆ. 10 ವರ್ಷಗಳ ಹಿಂದೆ ಸೆನ್ಸೆಕ್ಸ್‌ 25 ಸಾವಿರ ಪಾಯಿಂಟ್ಸ್‌ ಹೊಂದಿತ್ತು. ಆದರೀಗ, ಸೆನ್ಸೆಕ್ಸ್‌ 75 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯ ಮೌಲ್ಯವು ಕೆಲ ದಿನಗಳ ಹಿಂಷ್ಟೇ 5 ಲಕ್ಷ ಕೋಟಿ ಡಾಲರ್‌ ಆಗಿದೆ. ಹಾಗಾಗಿ, ಜೂನ್‌ 4ರಂದು ಷೇರು ಮಾರುಕಟ್ಟೆಯು ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ಸಿನಿಮಾ

CGI Technology In Film: ʼವೆಸ್ಟ್‌ವರ್ಲ್ಡ್‌ʼನಿಂದ ʼಅವತಾರ್‌ʼ ಚಿತ್ರದವರೆಗೆ ಸಿಜಿಐ ತಂತ್ರಜ್ಞಾನದ ರೋಚಕ ಹಾದಿ! ವಿಡಿಯೊಗಳಿವೆ

ಹೊಸ ತಂತ್ರಜ್ಞಾನಗಳು, ಆವಿಷ್ಕಾರಗಳು ಚಲನಚಿತ್ರ ಕ್ಷೇತ್ರದಲ್ಲೂ ಸಾಕಷ್ಟು ನಡೆದಿದೆ. ಇದರಲ್ಲಿ ಸಿಜಿಐ (CGI Technology In Film) ಕೂಡ ಒಂದು. 1970ರ ದಶಕದ ಆರಂಭದ ದಿನಗಳಿಂದಲೂ ಕಂಪ್ಯೂಟರ್ ರಚಿತ ಚಿತ್ರಣ (CGI- computer generated imagery) ಸಾಕಷ್ಟು ಪ್ರಯೋಗಗಳಿಗೆ ಒಳಗಾಗಿದೆ. ಇದು ಸಾಕಷ್ಟು ಅದ್ಭುತ ಚಲನಚಿತ್ರಗಳ ಮೇಲೆ ಪ್ರಭಾವವನ್ನು ಬೀರಿದೆ. ಕಥೆ ಹೇಳುವ ಶೈಲಿ ಮತ್ತು ದೃಶ್ಯ ಸಂಯೋಜನೆಯ ಗಡಿಗಳನ್ನು ವಿಸ್ತರಿಸಿದೆ. ಚಲನಚಿತ್ರ ರಂಗದಲ್ಲಿ ಸಿಜಿಐ ನ ಮೈಲುಗಲ್ಲು ಹೇಗಿತ್ತು ಎನ್ನುವ ಕಿರು ನೋಟ ಇಲ್ಲಿದೆ.

VISTARANEWS.COM


on

By

CGI Technology In Film
Koo

ಹಿಂದಿನ ದಿನಗಳಲ್ಲಿ ಚಲನಚಿತ್ರಗಳಲ್ಲಿ (film) ಒಂದು ವಿಶೇಷ ಸನ್ನಿವೇಶವನ್ನು ಚಿತ್ರಿಸಬೇಕಾದರೆ ಸೆಟ್‌ಗಳ ನಿರ್ಮಾಣಕ್ಕೆ ನಿರ್ಮಾಪಕರು (filmmakers), ಕೆಮರಾಮೆನ್‌ಗಳು (camera men) ಸಾಕಷ್ಟು ಕಷ್ಟಪಡುತ್ತಿದ್ದರು. ಆದರೆ ಈಗ ಎಲ್ಲವೂ ಕಂಪ್ಯೂಟರ್ ರಚಿತ ಚಿತ್ರಣ (CGI- computer generated imagery) ತಂತ್ರಜ್ಞಾನದ (CGI Technology In Film) ಮೂಲಕ ನಡೆದುಹೋಗುತ್ತದೆ. ಇದೀಗ ʼಮುಂಜ್ಯಾʼ ಎಂಬ ಭಾರತದ ಚಿತ್ರದಲ್ಲಿ ಈ ತಂತ್ರಜ್ಞಾನ ಬಳಸಲಾಗುತ್ತಿದೆ. ʼಮುಂಜ್ಯಾʼ ಭಾರತದ ಮೊದಲ CGI ಚಿತ್ರ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ತಂತ್ರಜ್ಞಾನದ ಹಿನ್ನೋಟ ಇಲ್ಲಿ ಕೊಡಲಾಗಿದೆ.

ಸಿನಿಮಾ ಜಗತ್ತಿನಲ್ಲಿ ಸಿಜಿಐಯ ವಿಕಾಸ ಒಂದು ಪ್ರಮುಖ ಮೈಲುಗಲ್ಲು ಎಂದರೆ ತಪ್ಪಾಗಲಾರದು. ಇದು ಸಿನಿಮಾದ ಭವಿಷ್ಯವನ್ನೇ ಬದಲಾಯಿಸಿತ್ತು. ಹಿಂದೆ ಚಲನಚಿತ್ರ ನಿರ್ಮಾಪಕರು ಪ್ರೇಕ್ಷಕರ ಗ್ರಹಿಕೆಯನ್ನು ರೂಪಿಸಲು ವಿವಿಧ ಪ್ರಯೋಗಗಳನ್ನು ಮಾಡುತ್ತಿದ್ದರು ಜೊತೆಗೆ ಆಪ್ಟಿಕಲ್ ತಂತ್ರಗಳನ್ನು ಅವಲಂಬಿಸಿದ್ದರು. ಕೆಮರಾ ಕೋನಗಳು, ಲೆನ್ಸ್ ಆಯ್ಕೆ ಮತ್ತು ವಿಸ್ತಾರವಾಗಿ ವಿನ್ಯಾಸಗೊಳಿಸಿದ ಸೆಟ್‌ ಗಳ ತಂತ್ರಗಳನ್ನು ಬಳಸುತ್ತಿದ್ದರು. ಹಸಿರು ಮತ್ತು ವಾಲ್ಯೂಮೆಟ್ರಿಕ್ ಎಲ್ಇಡಿ ಪರದೆಯನ್ನು ಬಳಸಿ ಹಿಂದೆ ಸೆಟ್ ವಿಸ್ತರಣೆಗಳನ್ನು ಕೈಯಿಂದ ನಿಖರವಾಗಿ ಚಿತ್ರಿಸಲಾಗುತ್ತಿತ್ತು.

ಈ ವಿಧಾನಕ್ಕೆ ಈಗ ಡಿಜಿಟಲ್ ಸ್ಪರ್ಶ ಸಿಕ್ಕಿದೆ. ಇಲ್ಲಿ ಕಂಪ್ಯೂಟರ್‌ಗಳು ಮತ್ತು ವಿವಿಧ ಸಾಫ್ಟ್‌ವೇರ್‌ಗಳು ಊಹಿಸುವ ಯಾವುದೇ ವಿನ್ಯಾಸವನ್ನು ರಚಿಸಲು ಇದು ಸಹಾಯ ಮಾಡುತ್ತದೆ. ಡಿಜಿಟಲ್ ಸೃಜನಶೀಲತೆಯೆಡೆಗಿನ ಈ ಬದಲಾವಣೆಯು ಸಿಜಿಐ ತಂತ್ರಜ್ಞಾನದ ಪ್ರಗತಿ ವೇಗವನ್ನು ಹೆಚ್ಚಿಸಿತ್ತು.


ಕಂಪ್ಯೂಟರ್ ಗ್ರಾಫಿಕ್ಸ್ ಬಳಸಿ ಈಗಾಗಲೇ ಹಲವಾರು ಚಿತ್ರಗಳನ್ನು ನಿರ್ಮಿಸಲಾಗಿದೆ. ಉದಾಹರಣೆಗೆ ಮಾರ್ವೆಲ್‌ನ ದಿ ಅವೆಂಜರ್ಸ್‌ನಲ್ಲಿ ಮಾರ್ಕ್ ರುಫಲೋ ಧರಿಸಿರುವ ಸೂಟ್ ಮತ್ತು ಸುತ್ತಲಿನ ದೃಶ್ಯಗಳಿಗೆ ಮತ್ತೆ ಡಿಜಿಟಲ್ ಸ್ಪರ್ಶ ನೀಡಲಾಗಿದೆ.

ಸಿಜಿಐಯ ಮೊದಲ ಪ್ರಯೋಗ ಯಾವಾಗ?

ಸಿಜಿಐ ಅನ್ನು ಆಧುನಿಕ ಚಲನಚಿತ್ರಗಳಲ್ಲಿ ಮಾತ್ರ ನಾವು ಗಮನಿಸಿದ್ದೇವೆ. ಆದರೆ ಇದು 2000 ರ ದಶಕದಿಂದ ಹಾಲಿವುಡ್‌ನ ಚಿತ್ರೀಕರಣದಲ್ಲಿ ಬಳಕೆಯಾಗುತ್ತಿದೆ. ಕಂಪ್ಯೂಟರ್ ರಚಿತ ಚಿತ್ರಣ 1973ರ ವೆಸ್ಟ್‌ವರ್ಲ್ಡ್ ಮತ್ತು 1977ರ ಸ್ಟಾರ್ ವಾರ್ಸ್‌ನಲ್ಲೂ ಮಾಡಲಾಗಿದೆ.

ವೆಸ್ಟ್‌ವರ್ಲ್ಡ್ ( 1973)

ವೆಸ್ಟ್‌ವರ್ಲ್ಡ್ ಚಲನಚಿತ್ರದಲ್ಲಿ ಸಿಜಿಐ ಸಂಕ್ಷಿಪ್ತವಾಗಿ ಸರಿಸುಮಾರು 10 ಸೆಕೆಂಡ್ ನಷ್ಟೇ ಬಳಕೆ ಮಾಡಲಾಗಿದೆ. ಚಿತ್ರದಲ್ಲಿ ಇದು ಬಣ್ಣಗಳನ್ನು ಬದಲಾಯಿಸುವುದು, ಸಂಕುಚಿತಗೊಳಿಸುವುದು ಮತ್ತು ಚಿತ್ರಣವನ್ನು ವಿಸ್ತರಿಸುವುದು ಸೇರಿದೆ.


ಸ್ಟಾರ್ ವಾರ್ಸ್ (1977)

ಇದರಲ್ಲಿ ಚಿಕಣಿ ಮಾದರಿಗಳು ಮತ್ತು ಬೆಳಕಿನ ತಂತ್ರಗಳ ಮಿಶ್ರಣವನ್ನು ಮಾಡಲಾಗಿದೆ. ಚಿತ್ರದ ಪ್ರಮುಖ ಕ್ಷಣವೊಂದರಲ್ಲಿ ಲ್ಯೂಕ್ ಸ್ಕೈವಾಕರ್ ಮತ್ತು ಇತರ ಎಕ್ಸ್-ವಿಂಗ್ ಪೈಲಟ್‌ಗಳು ಡೆತ್ ಸ್ಟಾರ್‌ನ ಮೇಲೆ ತಮ್ಮ ಆಕ್ರಮಣಕ್ಕೆ ತಯಾರಿ ನಡೆಸುತ್ತಿರುವಾಗ ಇದನ್ನು ಪ್ರಯೋಗಿಸಲಾಗಿದೆ. ಇದರಲ್ಲಿ 3ಡಿ ಯುದ್ಧತಂತ್ರದ ನಕ್ಷೆಯನ್ನು ತೋರಿಸಲಾಗಿದೆ. ಇದನ್ನು ಇಲಿನಾಯ್ಸ್ ವಿಶ್ವವಿದ್ಯಾಲಯವು ಚಿಕಾಗೋದ ಎಲೆಕ್ಟ್ರಾನಿಕ್ ದೃಶ್ಯೀಕರಣ ಪ್ರಯೋಗಾಲಯ ತಂಡದೊಂದಿಗೆ ಅಭಿವೃದ್ಧಿಪಡಿಸಿದೆ.


ಸಿಜಿಐನ ಸಂಪೂರ್ಣ ಬಳಕೆ

ಸಂಪೂರ್ಣವಾಗಿ ಸಿಜಿಐ ಪಾತ್ರವನ್ನು ಸ್ಟಾರ್ ವಾರ್ಸ್ ಮತ್ತೊಮ್ಮೆ ಪರಿಚಯಿಸಿದ್ದು 1999ರ ಸ್ಟಾರ್ ವಾರ್ಸ್ ಸಂಚಿಕೆ 1: ದಿ ಫ್ಯಾಂಟಮ್ ಮೆನೇಸ್‌ನಲ್ಲಿ ಜಾರ್ ಜಾರ್ ಬಿಂಕ್ಸ್ ಮೂಲಕ.

ಸ್ಟಾರ್ ವಾರ್ಸ್: ಎ ನ್ಯೂ ಹೋಪ್ (1977)

1977ರಲ್ಲಿ ಬಿಡುಗಡೆಯಾದ ಜಾರ್ಜ್ ಲ್ಯೂಕಾಸ್‌ನ ಸ್ಟಾರ್ ವಾರ್ಸ್: ಎ ನ್ಯೂ ಹೋಪ್‌ ಪ್ರಾಯೋಗಿಕ ಮತ್ತು ಚಿಕಣಿ ಪರಿಣಾಮಗಳೊಂದಿಗೆ ಬೆರೆಸಿದ ಸಿಜಿಐ ಅಂಶಗಳ ಮನಮುಟ್ಟುವ ಬಳಕೆಯ ಮೂಲಕ ಚಲನಚಿತ್ರ ನಿರ್ಮಾಣದ ಹೊಸ ಯುಗವನ್ನು ಪ್ರಾರಂಭಿಸಿತು. 80ರ ದಶಕದಲ್ಲಿ ಇದು ಟ್ರಾನ್, ಪ್ರಿಡೇಟರ್, ಸೂಪರ್‌ಮ್ಯಾನ್, ಇ.ಟಿ. ಮತ್ತು ಏಲಿಯನ್ಸ್‌ನಂತಹ ಚಲನಚಿತ್ರಗಳ ಮೇಲೆ ಇದು ಪ್ರಭಾವ ಬೀರಿತು.


ಟರ್ಮಿನೇಟರ್ 2: ಜಡ್ಜ್‌ಮೆಂಟ್ ಡೇ (1991)

ಹೆಚ್ಚಿನ ಚಲನಚಿತ್ರ ಶಾಲೆಗಳಲ್ಲಿ ಒಂದು ಸಾಮಾನ್ಯ ಮಾತು ಇದೆ. ಸ್ಟಾರ್ ವಾರ್ಸ್ ಆಟವನ್ನು ಪ್ರಾರಂಭಿಸಿತು ಮತ್ತು ನಂತರ ಜುರಾಸಿಕ್ ಪಾರ್ಕ್ ಅದನ್ನು ಬದಲಾಯಿಸಿತು. ಇದಕ್ಕೆ ಸರಿಯಾದ ಒಂದು ಚಿತ್ರ ಟರ್ಮಿನೇಟರ್ 2: ಜಡ್ಜ್‌ಮೆಂಟ್ ಡೇ. ಈ ಚಿತ್ರದಲ್ಲಿ ಸಿಜಿಐ ಬಳಕೆಯಲ್ಲಿ ಇದು ಒಂದು ಅತ್ಯಂತ ಪ್ರಭಾವಶಾಲಿ ಚಲನಚಿತ್ರ. ಯಾಕೆಂದರೆ ಇಲ್ಲಿ ಖಳನಾಯಕನನ್ನು ಸಿಜಿಐ ಮೂಲಕ ಸಂಪೂರ್ಣ ಲಿಕ್ವಿಡ್ ಮೆಟಲ್ ಪಾತ್ರದಲ್ಲಿ ರಚಿಸಲಾಗಿದೆ. ಈ ಮೂಲಕ ಇದು ಯಾವುದೇ ಆಕಾರವನ್ನು ಮಾರ್ಫ್ ಮಾಡಬಹುದು ಎಂಬುದನ್ನು ನಿರೂಪಿಸಿತ್ತು.


ಜುರಾಸಿಕ್ ಪಾರ್ಕ್ (1995)

ಜುರಾಸಿಕ್ ಪಾರ್ಕ್ ಒಂದು ಬ್ಲಾಕ್ಬಸ್ಟರ್ ಚಿತ್ರ. ಇದು ಸಿಜಿಐ ಇತಿಹಾಸದಲ್ಲೊಂದು ಮೈಲುಗಲ್ಲು ಸ್ಥಾಪಿಸಿತ್ತು. ಇದರಲ್ಲಿ ಡೈನೋಸಾರ್‌ಗಳು ಕಲಾವಿದರೊಂದಿಗೆ ಸಂವಾದ ನಡೆಸುವುದನ್ನು ಕಾಣಬಹುದು. ಇದರಲ್ಲಿ ಮಾನವನ ಪಕ್ಕದಲ್ಲಿ ಡೈನೋಸಾರ್ ತಲೆಯ ಕ್ಲೋಸ್-ಅಪ್ ಅಗತ್ಯವಿರುವಾಗ ಪ್ರಾಯೋಗಿಕ ಡೈನೋಸಾರ್ ಮಾದರಿಯನ್ನು ಬಳಸಿದ್ದರೆ ದೂರದ ಶಾಟ್ ಗಳಿಗಾಗಿ ಡೈನೋಸಾರ್‌ಗಳ ಸಿಜಿಐ ಆವೃತ್ತಿಗಳನ್ನು ಬಳಸಲಾಗಿತ್ತು.


ದಿ ಮ್ಯಾಟ್ರಿಕ್ಸ್ (1999)

ಪ್ರೇಕ್ಷಕರನ್ನು ಬೆಚ್ಚಿಬೀಳಿಸಿದ ದೃಶ್ಯ ದಿ ಮ್ಯಾಟ್ರಿಕ್ಸ್ ಚಿತ್ರದ ತುಣುಕು ಚಿತ್ರ ನೋಡಿದವರೆಲ್ಲರಿಗೂ ನೆನಪಿರಬಹುದು. 360 ಡಿಗ್ರಿ ಕ್ಯಾಮರಾ ರಿಗ್‌ನ ಬಳಕೆ, ಮಧ್ಯದಲ್ಲಿ ಕೀನು ರೀವ್ಸ್‌ನ ಪ್ರತ್ಯೇಕ ಫೋಟೋಗಳನ್ನು ತೆಗೆಯುವ ಮೂಲಕ ನಟರು ಮತ್ತು ಸಿಜಿಐ ಒಟ್ಟಿಗೆ ಹೇಗೆ ಕಾರ್ಯನಿರ್ವಹಿಸಬಹುದು ಎಂಬುದನ್ನು ಈ ಚಿತ್ರ ತೋರಿಸಿಕೊಟ್ಟಿದೆ. ಸಿಜಿಐ ಅನ್ನು ದೋಷರಹಿತವಾಗಿ ಕಾರ್ಯಗತಗೊಳಿಸಿದ ಕೀರ್ತಿ ಈ ಚಿತ್ರ ತಂಡದ್ದು.


ಅವತಾರ್ (2009)

ಅವತಾರ್ ಚಿತ್ರದ ದೃಶ್ಯಾವಳಿಗಳು ಎಲ್ಲರ ಕಣ್ಣ ಮುಂದಿದೆ. ಇದರಲ್ಲಿ ಮೋಷನ್ ಕ್ಯಾಪ್ಚರ್ ಮತ್ತು ಸಿಜಿಐ ಸಂಪೂರ್ಣ ಮಿಶ್ರಣವಾಗಿತ್ತು.ಇದರಲ್ಲಿ ಕ್ಯಾಮರಾಗಳನ್ನು ಬಳಸಿಕೊಂಡು ನಟರ ಹೆಚ್ಚು ವಿವರವಾದ ಫೇಸ್ ಮ್ಯಾಪಿಂಗ್ ತಂತ್ರಜ್ಞಾನವನ್ನು ಬಳಸಲಾಗಿದೆ. ಆ ಡೇಟಾವನ್ನು ಬಳಿಕ ಕಂಪ್ಯೂಟರ್ ರಚಿತ ಅಕ್ಷರ ಮಾದರಿಗಳಿಗೆ ವರ್ಗಾಯಿಸುತ್ತದೆ. ಸಂಪೂರ್ಣ ಮೂರು ಗಂಟೆಗಳ ಚಿತ್ರದಲ್ಲಿ ಶೇ. 60ರಷ್ಟನ್ನು ಸಿಜಿಐ ಮೂಲಕವೇ ಚಿತ್ರಣ ಮಾಡಲಾಗಿದೆ. ಈ ಚಿತ್ರವು ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿದೆ.

ಇನ್ಸೆಪ್ಶನ್ (2010)

ಕ್ರಿಸ್ಟೋಫರ್ ನೋಲನ್ ಅವರ ಇನ್ಸೆಪ್ಶನ್ ನಲ್ಲಿ ಸಿಜಿಐನೊಂದಿಗೆ ಸಂಕೀರ್ಣ ನಿರೂಪಣಾ ರಚನೆಯ ನವೀನ ಅಪ್ಲಿಕೇಶನ್‌ ಅನ್ನು ಬಳಸಲಾಗಿದೆ. ಇದು ಕನಸಿನ ಕುಶಲತೆಯ ಮೂಲಕ ಮಾನವ ಮನಸ್ಸಿನ ಆಳವನ್ನು ಪರಿಶೋಧಿಸುತ್ತದೆ. ವೀಕ್ಷಕರ ವಾಸ್ತವತೆಯ ಗ್ರಹಿಕೆಗೆ ಸವಾಲು ಹಾಕುವ ಈ ಚಿತ್ರ ಪ್ರೇಕ್ಷಕರನ್ನು ತನ್ನ ಕಥೆಯೊಳಗೆ ಲೀನ ವಾಗುವಂತೆ ಮಾಡುತ್ತದೆ.


ಅವತಾರ್: ದಿ ವೇ ಆಫ್ ವಾಟರ್ (2022)

ಜೇಮ್ಸ್ ಕ್ಯಾಮರೂನ್ ಅವರ ಅವತಾರ್‌ನ ಬಹುನಿರೀಕ್ಷಿತ ಮುಂದುವರಿದ ಭಾಗ ದಿ ವೇ ಆಫ್ ವಾಟರ್ ಸಿನಿಮೀಯ ತಂತ್ರಜ್ಞಾನ ಮತ್ತು ಕಥೆ ಹೇಳುವಿಕೆಯನ್ನು ಮೀರಿ ಮತ್ತಷ್ಟು ಅಭಿವೃದ್ಧಿ ಹೊಂದಿದೆ. ಅತ್ಯಾಧುನಿಕ ಸಿಜಿಐ ಮತ್ತು ಕಾರ್ಯಕ್ಷಮತೆ ಕ್ಯಾಪ್ಚರ್ ತಂತ್ರಜ್ಞಾನದ ಪ್ರಭಾವಶಾಲಿ ಪರಾಕಾಷ್ಠೆಯನ್ನು ಈ ಚಿತ್ರದಲ್ಲಿ ಕಾಣಬಹುದು.


ಸಿಜಿಐ ಪ್ರಭಾವ ಹೇಗಿದೆ?

ಇತ್ತೀಚಿನ ವರ್ಷಗಳಲ್ಲಿ ಸ್ಟುಡಿಯೋಗಳು ಮತ್ತು ಚಲನಚಿತ್ರ ನಿರ್ಮಾಪಕರು ಸಿಜಿಐ ಅನ್ನು ದೂರವಿಡುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸಿಜಿಐ ಬಳಕೆಯಿಂದ ನಿಜವಾದ ಅನುಭವ, ಸಂತೃಪ್ತಿ ಕಲಾವಿದನಿಗೆ ಸಿಗುವುದಿಲ್ಲ. ಕಲಾವಿದರೊಬ್ಬರ ಪ್ರಕಾರ ಶೂಟಿಂಗ್ ವೇಳೆ ನಾನು ಜೆಟ್ ಗಳಲ್ಲಿ ಹಾರಲು ಬಯಸಿದರೆ ಸಿಜಿಐನಲ್ಲಿ ಜೆಟ್‌ಗಳೇ ಇರುವುದಿಲ್ಲ ಎನ್ನುತ್ತಾರೆ. ಈ ಹೇಳಿಕೆ ಚಿತ್ರರಂಗದ ಮಾರುಕಟ್ಟೆಯಲ್ಲಿ ಬಹುದೊಡ್ಡ ಪ್ರಭಾವವನ್ನು ಬೀರಿದೆ. ಯಾಕೆಂದರೆ ಚಿತ್ರಗಳಲ್ಲಿ ನೋಡುವ ದೃಶ್ಯಗಳು ಯಾವುದು ನಿಜವಲ್ಲ ಎಂದು ಪ್ರೇಕ್ಷಕರಿಗೆ ಗೊತ್ತಾದರೆ ಅವರು ಚಿತ್ರದ ಮೇಲಿನ ಆಸಕ್ತಿ ಕಳೆದುಕೊಳ್ಳಬಹುದು ಎನ್ನುವ ವಾದವೂ ಇದೆ.

ಇದನ್ನೂ ಓದಿ: Munjya Teaser: ʻಮುಂಜ್ಯಾʼ ಟೀಸರ್‌ ಔಟ್‌; ಇದು ಭಾರತದ ಮೊದಲ CGI ಚಿತ್ರ!

ಸಿಜಿಐನ ಭವಿಷ್ಯವೇನು?

ಸಿಜಿಐ ಭವಿಷ್ಯವು ಸ್ಟುಡಿಯೋದ ಮಿತಿಯಲ್ಲಿರುವುದು ಸ್ಪಷ್ಟ. ಚಿತ್ರೀಕರಣದಲ್ಲಿ ಈಗ ಅದ್ಧೂರಿ ಬಜೆಟ್‌ಗಳ ಯುಗವು ಕ್ಷೀಣಿಸುತ್ತಿದೆ. ಆದರೆ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ನೈಜ ಸಮಯದ ಫೋಟೊರಿಯಾಲಿಸ್ಟಿಕ್ ಹಿನ್ನೆಲೆಗಳನ್ನು ಪ್ರದರ್ಶಿಸುವ ಎಲ್ಇಡಿ ಪರದೆಗಳನ್ನು ಒಳಗೊಂಡಿರುವ ವರ್ಚುವಲ್ ಸೆಟ್ ಗಳ ಆಗಮನವು ಅಭೂತಪೂರ್ವ ಉನ್ನತ ಗುಣಮಟ್ಟದ ಸಿಜಿಐ ಯುಗವನ್ನು ಸೂಚಿಸುತ್ತದೆ.

ದಿ ಬ್ಯಾಟ್‌ಮ್ಯಾನ್, ಡ್ಯೂನ್ ಮತ್ತು ದಿ ಮ್ಯಾಂಡಲೋರಿಯನ್‌ನಂತಹ ಕೃತಿಗಳಲ್ಲಿ ಈ ನವೀನ ತಂತ್ರಜ್ಞಾನದ ಸಾಮರ್ಥ್ಯವನ್ನು ಪ್ರದರ್ಶಿಸುವ ಗ್ರೀಗ್ ಫ್ರೇಸರ್‌ನಂತಹ ಸಿನಿಮಾಟೋಗ್ರಾಫರ್‌ಗಳು ಮುಂಚೂಣಿಯಲ್ಲಿದ್ದಾರೆ.

Continue Reading

ವಿದೇಶ

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

ಇರಾನ್ ಅಧ್ಯಕ್ಷರ ಸಾವು ವಿಶ್ವದಲ್ಲೇ ರಾಜಕೀಯ ನಾಯಕರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ಮಾಡಿದೆ. ವಿಮಾನ, ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ರಾಜಕೀಯ ನಾಯಕರ ಸಾವು ಇದೇ ಮೊದಲಲ್ಲ. ವಿಶ್ವದ ಹತ್ತು ಪ್ರಮುಖ ನಾಯಕರು ಈ ರೀತಿಯ ದುರಂತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Air Crashes
Koo

ಇರಾನ್ ಅಧ್ಯಕ್ಷ (Iran President) ಇಬ್ರಾಹಿಂ ರೈಸಿ (Ebrahim Raisi) ಅವರು ಭಾನುವಾರ ರಾತ್ರಿ ದೇಶದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ಸಾವನ್ನಪ್ಪಿದ್ದಾರೆ. ರೈಸಿ ಅವರ ದಣಿವರಿಯದ ಸ್ಫೂರ್ತಿಯ ಸೇವೆಯ ಮಾರ್ಗದಲ್ಲಿ ಮುಂದುವರಿಯುವುದಾಗಿ ಇರಾನ್‌ ಆಡಳಿತ ರಾಷ್ಟ್ರದ ಜನರಿಗೆ ಭರವಸೆ ನೀಡಿದೆ. ವಿಮಾನ ದುರಂತಗಳಲ್ಲಿ ರಾಜಕೀಯ ನಾಯಕರು ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ರಾಷ್ಟ್ರಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಕುರಿತ ಹಿನ್ನೋಟ ಇಲ್ಲಿದೆ.


ಸ್ವೀಡನ್ ಪ್ರಧಾನಿ ಅರ್ವಿಡ್ ಲಿಂಡ್‌ಮನ್ (1936)

ಸ್ವೀಡನ್‌ನ ಹಿಂದಿನ ಅಡ್ಮಿರಲ್ ಮತ್ತು ಎರಡು ಬಾರಿ ಸ್ವೀಡನ್‌ನ ಪ್ರಧಾನಮಂತ್ರಿ ಆಗಿದ್ದ ಸಾಲೋಮನ್ ಅರ್ವಿಡ್ ಅಚಾಟೆಸ್ ಲಿಂಡ್‌ಮನ್ ಪ್ರಭಾವಿ ಸಂಪ್ರದಾಯವಾದಿ ರಾಜಕಾರಣಿಯಾಗಿದ್ದರು. 1936ರ ಡಿಸೆಂಬರ್ 9ರಂದು ಲಿಂಡ್‌ಮನ್ ಅವರು ಪ್ರಯಾಣಿಸುತ್ತಿದ್ದ ಡಗ್ಲಾಸ್ ಡಿಸಿ-2 ಯುನೈಟೆಡ್ ಕಿಂಗ್‌ಡಂನ ಕ್ರೊಯ್ಡಾನ್ ವಿಮಾನವು ನಿಲ್ದಾಣದ ಬಳಿ ದಟ್ಟವಾದ ಮಂಜಿನಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಮನೆಗಳಿಗೆ ಅಪ್ಪಳಿಸಿದಾಗ ಮೃತಪಟ್ಟರು.

ಫಿಲಿಪೈನ್ಸ್ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ (1957)

ಫಿಲಿಪೈನ್ಸ್‌ನ ಏಳನೇ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರು ತಮ್ಮ ಬಲವಾದ ಭ್ರಷ್ಟಾಚಾರ ವಿರೋಧಿ ನಿಲುವು ಮತ್ತು ಜನಪ್ರಿಯ ಕಾರ್ಯಕ್ಕೆ ಹೆಸರುವಾಸಿಯಾಗಿದ್ದರು. ಅವರ ಅಧ್ಯಕ್ಷತೆಯು 1957ರ ಮಾರ್ಚ್ 17ರಂದು ಥಟ್ಟನೆ ಕೊನೆಗೊಂಡಿತು. “ಮೌಂಟ್ ಪಿನಾಟುಬೊ” ಎಂದು ಕರೆಯಲ್ಪಡುವ ಅವರ ಸಿ-47 ವಿಮಾನವು ಸೆಬು ನಗರದ ಮನುಂಗಲ್ ಪರ್ವತಕ್ಕೆ ಅಪ್ಪಳಿಸಿತು. ಆಗ ಮ್ಯಾಗ್ಸೆಸೆ ಮೃತಪಟ್ಟರು. 25 ಪ್ರಯಾಣಿಕರ ಪೈಕಿ ಒಬ್ಬರು ಮಾತ್ರ ಬದುಕುಳಿದಿದ್ದರು.


ಬ್ರೆಜಿಲ್ ಅಧ್ಯಕ್ಷ ನೆರೆಯು ರಾಮೋಸ್ (1958)

ಬ್ರೆಜಿಲ್‌ನ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನೆರೆಯು ರಾಮೋಸ್ ಅವರು 1958ರ ಜೂನ್ 16ರಂದು ನಿಧನರಾದರು. ರಾಮೋಸ್ ಅವರು ಕ್ರೂಝೈರೊ ಡೊ ಸುಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪರಾನಾ ರಾಜ್ಯದ ಕುರಿಟಿಬಾ ಅಫೊನ್ಸೊ ಪೆನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟರು.

ಇರಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಆರಿಫ್ (1966)

ಇರಾಕ್‌ನ ಎರಡನೇ ಅಧ್ಯಕ್ಷರಾದ ಅಬ್ದುಲ್ ಸಲಾಂ ಆರಿಫ್ ರಾಜಪ್ರಭುತ್ವವನ್ನು ಉರುಳಿಸಿದ 1958ರ ಕ್ರಾಂತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. 1966ರ ಏಪ್ರಿಲ್ 13ರಂದು ಆರಿಫ್ ಅವರ ಇರಾಕಿ ಏರ್ ಫೋರ್ಸ್ ವಿಮಾನ, ಡಿ ಹ್ಯಾವಿಲ್ಯಾಂಡ್ ಡಿಹೆಚ್ 104 ಡೋವ್, ಬಸ್ರಾ ಬಳಿ ಅಪಘಾತಕ್ಕೀಡಾದಾಗ ನಿಧನರಾದರು. ಅವರ ಸಹೋದರ ಅಬ್ದುಲ್ ರಹಮಾನ್ ಆರಿಫ್ ಅವರ ಅನಂತರ ಅಧ್ಯಕ್ಷರಾದರು.


ಬ್ರೆಜಿಲ್ ಅಧ್ಯಕ್ಷ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ (1967)

ಬ್ರೆಜಿಲ್‌ನ 26ನೇ ಅಧ್ಯಕ್ಷ ಮತ್ತು ಮಾಜಿ ಮಿಲಿಟರಿ ಸರ್ವಾಧಿಕಾರದ ಪ್ರಮುಖ ವ್ಯಕ್ತಿಯಾಗಿದ್ದ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ 1967ರ ಜುಲೈ 18ರಂದು ನಿಧನರಾದರು. ಅವರ ಅಧ್ಯಕ್ಷೀಯ ಅವಧಿ ಮುಗಿದ ಸ್ವಲ್ಪ ಸಮಯದ ಅನಂತರ ಕ್ಯಾಸ್ಟೆಲೊ ಬ್ರಾಂಕೋ ಅವರ ಪೈಪರ್ ಪಿಎ -23 ಅಜ್ಟೆಕ್ ವಿಮಾನ ಬ್ರೆಜಿಲಿಯನ್ ವಾಯುಪಡೆ ವಿಮಾನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿತು. ಅವರ ಸಾವು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇಂದಿರಾ ಗಾಂಧಿ ಮಗ ಸಂಜಯ್ ಗಾಂಧಿ (1980)

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ 1980ರ ಜೂನ್ 23ರಂದು ವಿಮಾನ ಅಪಘಾತದಲ್ಲಿ ನಿಧನರಾದರು. ದೆಹಲಿಯ ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ತಾವು ಚಲಾಯಿಸುತ್ತಿದ್ದ ವಿಮಾನದ ನಿಯಂತ್ರಣವನ್ನು ಕಳೆದುಕೊಂಡು ದುರಂತ ಸಾವು ಕಂಡರು.


ಲೆಬನಾನ್ ಪ್ರಧಾನಿ ರಶೀದ್ ಕರಾಮಿ (1987)

ಲೆಬನಾನ್‌ನ ಅತಿ ಹೆಚ್ಚು ಬಾರಿ ಚುನಾಯಿತರಾದ ಪ್ರಧಾನಮಂತ್ರಿ ರಶೀದ್ ಕರಾಮಿ ಅವರು ಲೆಬನಾನಿನ ಅಂತರ್ಯುದ್ಧದ ಸಮಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. 1987ರ ಜೂನ್ 1ರಂದು, ಬೈರುತ್‌ಗೆ ಹೋಗುವ ಮಾರ್ಗದಲ್ಲಿ ಅವರ ಹೆಲಿಕಾಪ್ಟರ್‌ನಲ್ಲಿ ಬಾಂಬ್ ಸ್ಫೋಟಗೊಂಡು ಕರಾಮಿ ಕೊಲ್ಲಲ್ಪಟ್ಟರು.

ಪಾಕಿಸ್ತಾನದ ಅಧ್ಯಕ್ಷ ಮುಹಮ್ಮದ್ ಜಿಯಾ-ಉಲ್-ಹಕ್ (1988)

ಪಾಕಿಸ್ತಾನದ ಆರನೇ ಅಧ್ಯಕ್ಷರಾದ ಜನರಲ್ ಮುಹಮ್ಮದ್ ಜಿಯಾ-ಉಲ್-ಹಕ್ ಅವರು 1988ರ ಆಗಸ್ಟ್ 17ರಂದು ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಸಿ-130 ಹರ್ಕ್ಯುಲಸ್ ವಿಮಾನವು ಬಹವಾಲ್‌ಪುರದಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಅಪಘಾತಕ್ಕೀಡಾಯಿತು. ಅಪಘಾತದ ಕಾರಣವು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?


ಕಾಂಗ್ರೆಸ್‌ ನಾಯಕ ಮಾಧವರಾವ್ ಸಿಂಧಿಯಾ (2001)

ಮಾಧವರಾವ್ ಸಿಂಧಿಯಾ ಭಾರತದ ಪ್ರಮುಖ ರಾಜಕಾರಣಿ ಮತ್ತು ಕಾಂಗ್ರೆಸ್ ನಾಯಕರಾಗಿದ್ದರು. 2001ರ ಸೆಪ್ಟೆಂಬರ್ 30ರಂದು ವಿಮಾನ ಅಪಘಾತದಲ್ಲಿ ದಾರುಣ ಅಂತ್ಯ ಕಂಡರು. ಉತ್ತರ ಪ್ರದೇಶದ ಮೈನ್‌ಪುರಿ ಬಳಿ ಅವರ ಖಾಸಗಿ ಬೀಚ್‌ಕ್ರಾಫ್ಟ್ ಕಿಂಗ್ ಏರ್ ಸಿ 90 ಗಾಳಿಯಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತ ಸಂಭವಿಸಿತ್ತು.

ಚಿಲಿಯ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ (2024)

ಚಿಲಿಯ ಮಾಜಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಮೆರಾ ಅವರು ಫೆಬ್ರವರಿ 2024ರಲ್ಲಿ ನಿಧನರಾದರು. ಪಿನೆರಾ ಅವರ ಹೆಲಿಕಾಪ್ಟರ್ ದಕ್ಷಿಣ ಚಿಲಿಯ ಸರೋವರಕ್ಕೆ ಅಪ್ಪಳಿಸಿತು. ಈ ದುರಂತದಲ್ಲಿ ಅವರು ಪ್ರಾಣ ಕಳೆದುಕೊಂಡರು. ಅವರು ಸತತ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ವೈ ಎಸ್‌ ರಾಜಶೇಖರ್‌ ರೆಡ್ಡಿ ಅವರೂ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

Continue Reading

ವಿಜ್ಞಾನ

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

ಭಾರತ ಪರಮಾಣು ಶಕ್ತಿ ರಾಷ್ಟ್ರವಾಗಿ ಇಂದಿಗೆ 50 ವರ್ಷ. ಇಂದಿಗೆ ಸುಮಾರು 50 ವರ್ಷಗಳ ಹಿಂದೆ ಭಾರತ ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯನ್ನು (Nuclear Test In Pokhran) ನಡೆಸಿತ್ತು. ಈ ಕುರಿತ ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

By

Nuclear test at Pokhran
Koo

ಇಂದಿಗೆ 50 ವರ್ಷಗಳ ಹಿಂದೆ ಭಾರತದ (India) ಇತಿಹಾಸದಲ್ಲಿ ಒಂದು ಅಭೂತಪೂರ್ವ ಕ್ಷಣ ದಾಖಲಾಗಿತ್ತು. ಅದುವೇ ಅಣು ಪರೀಕ್ಷೆ. ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆ (Nuclear Test In Pokhran) ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಆಗಿನ ಪ್ರಧಾನಿಯಾಗಿದ್ದ (Prime Minister) ಇಂದಿರಾ ಗಾಂಧಿಯವರು (Indira gandhi) 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ (BARC) ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಭಾರತ ಇಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಅಂದಿನ ಪರೀಕ್ಷೆ ಭಾರತವನ್ನು ಪರಮಾಣು ಶಕ್ತಿಯನ್ನಾಗಿ ರೂಪಿಸಿತು.

ಸ್ಮೈಲಿಂಗ್ ಬುದ್ಧ ಹೆಸರು ನೀಡಿದ್ದು ಯಾಕೆ?

ಈ ಪರೀಕ್ಷೆಗೆ ‘ಸ್ಮೈಲಿಂಗ್ ಬುದ್ಧ’ ಎಂಬ ಸಂಕೇತನಾಮವನ್ನು ನೀಡಲಾಯಿತು. 1974ರ ಮೇ 18ರಂದು ಆ ವರ್ಷದ ಬುದ್ಧ ಪೂರ್ಣಿಮೆಯಂದು ಪರೀಕ್ಷೆಯನ್ನು ನಡೆಸಲಾಗಿದ್ದರಿಂದ ಈ ಹೆಸರನ್ನು ಆಯ್ಕೆ ಮಾಡಲಾಯಿತು. “ಬುದ್ಧ ಅಂತಿಮವಾಗಿ ಮುಗುಳ್ನಕ್ಕ” ಎಂಬುದು ಭಾರತದ ಪ್ರಧಾನ ಪರಮಾಣು ಸಂಶೋಧನಾ ಸಂಸ್ಥೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕ ರಾಜಾ ರಾಮಣ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂದೇಶವನ್ನು ರವಾನಿಸಿದ್ದರು!


ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಹೊಂದಿರದ ರಾಷ್ಟ್ರವೊಂದು ನಡೆಸಿದ ಮೊದಲ ಪರಮಾಣು ಪರೀಕ್ಷೆ ಇದಾಗಿದೆ.

ಪೋಖ್ರಾನ್‌ನಲ್ಲಿ ಸ್ಫೋಟಿಸಿದ ಸಾಧನದ ಬಗ್ಗೆ ಚರ್ಚೆಯಾಗಿದ್ದರೂ, ಇದು ಸುಮಾರು 8- 12 ಕಿಲೋ ಟನ್‌ಗಳಷ್ಟು ಟಿಎನ್‌ಟಿ (ಪರಮಾಣು ಪರೀಕ್ಷೆ ಮಾಪನ) ಎಂದು ನಂಬಲಾಗಿದೆ. ಪರೀಕ್ಷೆಯ ಪ್ರಮುಖ ಅಂಶವೆಂದರೆ ಭಾರತವು ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಗುಪ್ತಚರ ಸಂಸ್ಥೆಗಳ ಪತ್ತೆಯನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದು. ಇಂತಹ ಪರೀಕ್ಷೆಗಳು ಪರಮಾಣು ಪ್ರಸರಣಕ್ಕೆ ಕಾರಣವಾಗಬಹುದು ಎಂದು ಹೇಳಿದ ಅಮೆರಿಕದಂತಹ ರಾಷ್ಟ್ರದ ನಿರ್ಬಂಧಗಳ ಸರಣಿಯನ್ನು ದೇಶವು ಎದುರಿಸಿತು.


ಎರಡು ವರ್ಷಗಳ ತಯಾರಿ

ಈ ಪರೀಕ್ಷೆಯನ್ನು ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಇಂದಿರಾ ಗಾಂಧಿಯವರು 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಇದನ್ನೂ ಓದಿ: Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಪೋಖ್ರಾನ್-II ಪರೀಕ್ಷೆ

1974ರ ಅನಂತರ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 1998ರಲ್ಲಿ ಭಾರತವು ಅದೇ ಸ್ಥಳದಲ್ಲಿ ಪೋಖ್ರಾನ್- II ಹೆಸರಿನಲ್ಲಿ ಮತ್ತೊಂದು ಪರಮಾಣು ಪರೀಕ್ಷೆ ನಡೆಸಿತು. ಈ ಪರೀಕ್ಷೆ ಮೇ 1998ರಲ್ಲಿ ಪೋಖ್ರಾನ್‌ನಲ್ಲಿ ಐದು ಪರಮಾಣು ಸ್ಫೋಟಗಳ ಸರಣಿಯನ್ನು ಕಂಡವು. ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. 2020ರಿಂದ ಭಾರತವು 1974ರ ಪೋಖ್ರಾನ್ ಪರೀಕ್ಷೆಗಳ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಾರಂಭಿಸಿತ್ತು.

Continue Reading
Advertisement
suspicious death Self Harming By Hight court lawyer
ಕ್ರೈಂ1 min ago

Suspicious Death: ವಕೀಲೆಯ ಅನುಮಾನಾಸ್ಪದ ಸಾವಿನ ಪ್ರಕರಣ; ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೇಳಿದ್ದೇನು?

bulldozer justice
ಪ್ರಮುಖ ಸುದ್ದಿ21 mins ago

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

assault case koratagere
ಕ್ರೈಂ37 mins ago

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Rameshwaram Cafe
ಪ್ರಮುಖ ಸುದ್ದಿ40 mins ago

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Road Accident
ಪ್ರಮುಖ ಸುದ್ದಿ59 mins ago

Road Accident : ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು, 25 ಮಂದಿಗೆ ಗಾಯ

koti kannada movie
ಪ್ರಮುಖ ಸುದ್ದಿ1 hour ago

koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ranebennuru road accident
ಹಾವೇರಿ1 hour ago

Road Accident: ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

Udho Udho Shri Renuka Yellamma
ಪ್ರಮುಖ ಸುದ್ದಿ1 hour ago

Udho Udho Shri Renuka Yellamma : ಬಾಲ್ಯದಿಂದ ತಾರುಣ್ಯದ ಕಡೆಗೆ ರೇಣುಕಾ-ಯಲ್ಲಮ್ಮ, ಕಾದಿವೆ ಹಲವು ರೋಚಕ ಕತೆಗಳು

superstar rajnikanth
ಪ್ರಮುಖ ಸುದ್ದಿ2 hours ago

Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

thunderbolt
ಚಿಕ್ಕೋಡಿ2 hours ago

Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌