ವಿಸ್ತಾರ Explainer: ಶಿವ ಸೇನೆ ಚಿಹ್ನೆ ʼಬಿಲ್ಲು ಬಾಣʼ ಯಾರ ಬತ್ತಳಿಕೆಗೆ ಹೋಗಲಿದೆ? - Vistara News

EXPLAINER

ವಿಸ್ತಾರ Explainer: ಶಿವ ಸೇನೆ ಚಿಹ್ನೆ ʼಬಿಲ್ಲು ಬಾಣʼ ಯಾರ ಬತ್ತಳಿಕೆಗೆ ಹೋಗಲಿದೆ?

ಶಿವ ಸೇನೆ ಎಂದರೆ ಬಿಲ್ಲು ಬಾಣ ನೆನಪಾಗುತ್ತದೆ. ಅದೇ ಆ ಪಕ್ಷದ ಚಿಹ್ನೆ. ಕಳೆದ ಮೂರು ದಶಕಗಳಿಂದ ಈ ಪಕ್ಷದ ಅಸ್ಮಿತೆ ಆಗಿರುವ ಬಿಲ್ಲು ಬಾಣ, ಪ್ರಸ್ತುತ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪಕ್ಷ ಹೋಳಾದರೆ ಯಾರ ಬತ್ತಳಿಕೆಗೆ ಸೇರಲಿದೆ?

VISTARANEWS.COM


on

shiv sena
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಹಾರಾಷ್ಟ್ರದಲ್ಲಿ ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಪಾಳೆಯ ಈಗ 37ಕ್ಕೂ ಅಧಿಕ ಶಾಸಕರ ಬೆಂಬಲ ಘೋಷಿಸಿಕೊಂಡಿದೆ. ಇದು ನಿಜವಾದರೆ ನೈಜ ಶಿವಸೇನೆ ತಮ್ಮದೇ ಎಂದು ಶಿಂಧೆ ಹಕ್ಕುಸ್ವಾಮ್ಯ ಸಾಧಿಸಬಹುದು. ಶಿವಸೇನೆ ಎರಡಾಗಿ ಒಡೆಯುವುದಂತೂ ಖಚಿತವಾಗಿದೆ.

ಆದರೆ ಶಿವಸೇನೆಯ ಚುನಾವಣಾ ಚಿಹ್ನೆಯಾಗಿರುವ “ಬಿಲ್ಲು ಬಾಣʼ ಯಾರನ್ನು ಸೇರಲಿದೆ? ಇದು ಕುತೂಹಲಕಾರಿ ಪ್ರಶ್ನೆಯಾಗಿ ಎದುರು ನಿಲ್ಲಲಿದೆ.

ಶಿಂಧೆ ಈಗಾಗಲೇ ಶಿವಸೇನೆ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರನ್ನು ಬದಲಿಸಿದ್ದೇನೆಂದು ಹೇಳೀದ್ದಾರೆ. 35 ಸೇನಾ ಶಾಸಕರು ಸಹಿ ಮಾಡಿದ ಪತ್ರವನ್ನೂ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್‌ಗೆ ನೀಡಿದ್ದಾರೆ. ಬಂಡಾಯದಿಂದ ದಿಗ್ಭ್ರಮೆಗೊಂಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಅಧಿಕೃತ ನಿವಾಸ ಖಾಲಿ ಮಾಡಿದ್ದಾರೆ. ಭಿನ್ನಮತೀಯರಿಗೆ ಭಾವನಾತ್ಮಕ ಮನವಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗಿನ “ಅಸ್ವಾಭಾವಿಕ” ಮೈತ್ರಿಯಿಂದ ಪಕ್ಷವು ಹೊರನಡೆಯಬೇಕು ಎಂದು ಶಿಂಧೆ ಹಠ ಹಿಡಿದಿದ್ದಾರೆ. ಈ ಬೇಡಿಕೆಗೆ ಠಾಕ್ರೆ ಅನುಕೂಲಕರವಾಗಿ ಪ್ರತಿಕ್ರಿಯಿಸಿಲ್ಲ.

ಏಕನಾಥ್ ಶಿಂಧೆ ಪಾಳಯ ಈಗ ಶಿವಸೇನೆಯ ‘ಬಿಲ್ಲು ಬಾಣ’ ಚಿಹ್ನೆಯ ಮೇಲೆ ಹಕ್ಕು ಸಾಧಿಸಲು ತಯಾರಿ ನಡೆಸುತ್ತಿದೆ ಎಂದು ಹೇಳಲಾಗಿದೆ. ಪಕ್ಷದ ಚಿಹ್ನೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

1968ರ ಚಿಹ್ನೆಗಳ ಆದೇಶ

ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ- 1968ರಲ್ಲಿ ಪಕ್ಷಗಳನ್ನು ಗುರುತಿಸುವ ಮತ್ತು ಚಿಹ್ನೆಗಳನ್ನು ಹಂಚುವ ಚುನಾವಣಾ ಆಯೋಗದ ಅಧಿಕಾರದ ಕುರಿತು ಹೇಳುತ್ತದೆ. ಒಂದು ಚಿಹ್ನೆಗಾಗಿ ಕಾದಾಡುತ್ತಿರುವ ಬಣಗಳು ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಕ್ಕೆ ಸೇರಿದ್ದರೆ, ಆದೇಶದ ಪ್ಯಾರಾಗ್ರಾಫ್ 15ರ ಪ್ರಕಾರ EC ಎರಡರಲ್ಲಿ ಯಾವುದೋ ಒಂದು ಬಣದ ಪರವಾಗಿ ನಿರ್ಧರಿಸಬಹುದು; ಅಥವಾ ಎರಡೂ ಬಣಗಳಿಗೂ ಚಿಹ್ನೆಯನ್ನು ನಿರಾಕರಿಸಬಹುದು.

“ಪ್ರತಿಯೊಂದು ಬಣವೂ ತಾನೇ ನೈಜ ಪಕ್ಷವೆಂದು ಹೇಳಿಕೊಳ್ಳುತ್ತದೆ. ಹೀಗಾಗಿ ಪ್ರಕರಣದ ಬಗ್ಗೆ ಲಭ್ಯವಿರುವ ಎಲ್ಲಾ ಸಂಗತಿಗಳು ಮತ್ತು ಸಂದರ್ಭಗಳನ್ನು ಗಣನೆಗೆ ತೆಗೆದುಕೊಂಡು, ಬಣದ ಪ್ರತಿನಿಧಿಗಳ ವಾದ ಆಲಿಸಿದ ನಂತರ ಆಯೋಗ ನಿರ್ಧಾರ ತೆಗೆದುಕೊಳ್ಳಬಹುದುವು ಮಾಡಬಹುದು. ಎರಡು ವಿಭಾಗಗಳಲ್ಲಿ ಯಾವುದೇ ವಿಭಾಗದ ಪರ ನಿರ್ಧರಿಸಬಹುದು ಅಥವಾ ಯಾವುದೇ ವಿಭಾಗಕ್ಕೆ ಮಾನ್ಯತೆ ನೀಡದಿರಲೂ ಅಧಿಕಾರವಿದೆ.ʼʼ

ಮೊದಲ ಬಾರಿಗೆ ಕಾಂಗ್ರೆಸ್‌ ಒಡೆದಾಗ

1968ರ ಆದೇಶದ ಅಡಿಯಲ್ಲಿ ನಿರ್ಧರಿಸಲಾದ ಮೊದಲ ಪ್ರಕರಣ 1969ರಲ್ಲಿ ನಡೆಯಿತು. ಆ ವರ್ಷ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ವಿಭಜನೆಯಾಯಿತು. ಸಿಂಡಿಕೇಟ್ ಎಂದು ಕರೆಯಲ್ಪಡುವ ಇಂದಿರಾ ಗಾಂಧಿ ವಿರೋಧಿ ಬಣವು ನೀಲಂ ಸಂಜೀವ ರೆಡ್ಡಿ ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸಿದರೆ, ಪಕ್ಷದ ಅಧ್ಯಕ್ಷ ನಿಜಲಿಂಗಪ್ಪ ಹೊರಡಿಸಿದ ವಿಪ್ ಅನ್ನು ಧಿಕ್ಕರಿಸಿ ಪ್ರಧಾನಿ ಇಂದಿರಾ ಗಾಂಧಿಯವರು ಉಪಾಧ್ಯಕ್ಷ ವಿವಿ ಗಿರಿ ಅವರನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದರು.

ಗಿರಿ ಗೆದ್ದರು ಮತ್ತು ಇಂದಿರಾ ಗಾಂಧಿಯನ್ನು ಪಕ್ಷದಿಂದ ಹೊರಹಾಕಲಾಯಿತು. ಕಾಂಗ್ರೆಸ್ ಅನ್ನು ನಿಜಲಿಂಗಪ್ಪ ನೇತೃತ್ವದ ಕಾಂಗ್ರೆಸ್ (ಒ) ಮತ್ತು ಇಂದಿರಾ ನೇತೃತ್ವದ ಕಾಂಗ್ರೆಸ್ (ಜೆ) ಆಗಿ ವಿಭಜಿಸಲಾಯಿತು. ನಿಜಲಿಂಗಪ್ಪ ಕಾಂಗ್ರೆಸ್‌ ಪಕ್ಷದ ಆಗಿನ ಚಿಹ್ನೆಯಾದ ನೊಗವನ್ನು ಹೊತ್ತ ಒಂದು ಜೋಡಿ ಎತ್ತುಗಳನ್ನು ಉಳಿಸಿಕೊಂಡಿತು. ಇಂದಿರಾಗೆ ಕರುವಿನೊಂದಿಗೆ ಹಸುವಿನ ಚಿಹ್ನೆಯನ್ನು ನೀಡಲಾಯಿತು.

ಆಯೋಗ ಹೇಗೆ ನಿರ್ಧರಿಸುತ್ತದೆ?

ವಿವಾದದ ಸಂದರ್ಭದಲ್ಲಿ ಚುನಾವಣಾ ಆಯೋಗವು ಪ್ರಾಥಮಿಕವಾಗಿ ಪಕ್ಷದ ಸಂಘಟನೆ ಮತ್ತು ಅದರ ಶಾಸಕಾಂಗ ವಿಭಾಗದಲ್ಲಿ ಪ್ರತಿ ಬಣವೂ ಹೊಂದಿರುವ ಬೆಂಬಲವನ್ನು ಅಳೆಯುತ್ತದೆ. ಪಕ್ಷದೊಳಗಿನ ಉನ್ನತ ಸಮಿತಿಗಳು, ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಗಳನ್ನು ಗುರುತಿಸುತ್ತದೆ. ಅದರ ಎಷ್ಟು ಸದಸ್ಯರು ಅಥವಾ ಪದಾಧಿಕಾರಿಗಳು ಯಾವ ಬಣವನ್ನು ಬೆಂಬಲಿಸುತ್ತಾರೆ ಎಂಬುದನ್ನು ತಿಳಿಯುತ್ತದೆ. ಪ್ರತಿ ಬಣದಲ್ಲೂ ಶಾಸಕರ ಸಂಖ್ಯೆಯನ್ನು ಎಣಿಕೆ ಮಾಡುತ್ತದೆ.

ಹೆಚ್ಚಿನ ಸಂದರ್ಭಗಳಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ಲೆಕ್ಕಾಚಾರದಿಂದ ನಿರ್ಧಾರವಾಗುತ್ತದೆ. ಪಕ್ಷದ ಸಂಸದರು ಮತ್ತು ಶಾಸಕರ ಬಹುಮತವನ್ನು ಅವಲಂಬಿಸುತ್ತದೆ.

1987ರಲ್ಲಿ ಎಂಜಿ ರಾಮಚಂದ್ರನ್ ಅವರ ಮರಣದ ನಂತರ ಎಐಎಡಿಎಂಕೆ ವಿಭಜನೆಯಾದಾಗ ಮಾತ್ರ ಚುನಾವಣಾ ಆಯೋಗಕ್ಕೇ ಸವಾಲು ಎದುರಾಯಿತು. ಎಂಜಿಆರ್ ಅವರ ಪತ್ನಿ ಜಾನಕಿ ಅವರು ಪಕ್ಷದ ಬಹುಪಾಲು ಶಾಸಕರು ಮತ್ತು ಸಂಸದರ ಬೆಂಬಲವನ್ನು ಹೊಂದಿದ್ದರು. ಆದರೆ ಅವರ ಆಪ್ತರಾಗಿದ್ದ ಜೆ. ಜಯಲಲಿತಾ ಅವರಿಗೆ ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರ ಅಗಾಧ ಬೆಂಬಲವಿತ್ತು. ಕಾದಾಡುತ್ತಿದ್ದ ಬಣಗಳು ರಾಜಿ ಮಾಡಿಕೊಂಡಾಗ EC ನಿರ್ಧಾರ ತೆಗೆದುಕೊಳ್ಳುವುದು ತಪ್ಪಿತು.

ನಿರ್ಧರಿಸಲು ಸಾಧ್ಯವಾಗದಿದ್ದಲ್ಲಿ…

ಚುನಾವಣಾ ಆಯೋಗ ಯಾವುದೇ ಒಂದು ಬಣವನ್ನು ಒರಿಜಿನಲ್‌ ಎಂದು ಗುರುತಿಸಿದ ನಂತರ ಇನ್ನೊಂದು ಬಣಕ್ಕೆ ವಿಭಿನ್ನ ಚಿಹ್ನೆಯೊಂದಿಗೆ ಹೊಸ ರಾಜಕೀಯ ಪಕ್ಷವಾಗಿ ನೋಂದಾಯಿಸಲು ಅವಕಾಶ ನೀಡುತ್ತದೆ. ಒಂದು ವೇಳೆ ಯಾವುದು ಪ್ರಮುಖ ಬಣ ಎಂದು ನಿರ್ಧರಿಸಲು ಸಾಧ್ಯವಾಗದಿದ್ದಲ್ಲಿ, ಅದು ಪಕ್ಷದ ಚಿಹ್ನೆಯನ್ನು ಫ್ರೀಜ್ ಮಾಡಬಹುದು. ಬೇರೆ ಹೆಸರು ಮತ್ತು ಚಿಹ್ನೆಗಳೊಂದಿಗೆ ನೋಂದಾಯಿಸಲು ಏರಡೂ ಬಣಗಳಿಗೆ ಸೂಚಿಸಬಹುದು.

ವಿಜೇತರನ್ನು ನಿರ್ಧರಿಸುವ ಪ್ರಕ್ರಿಯೆಯು ತುಂಬ ಸಮಯ ತೆಗೆದುಕೊಳ್ಳುತ್ತಿದ್ದರೆ ಆಗಲೂ ಚುನಾವಣಾ ಆಯೋಗವು ಪಕ್ಷದ ಚಿಹ್ನೆಯನ್ನು ಫ್ರೀಜ್ ಮಾಡಬಹುದು. ಮತ್ತು ಚುನಾವಣೆಗಳು ಹತ್ತಿರದಲ್ಲಿದ್ದರೆ ಆಗಲೂ ತಾತ್ಕಾಲಿಕ ಚಿಹ್ನೆ ಆಯ್ಕೆ ಮಾಡಲು ಬಣಗಳನ್ನು ಕೇಳಬಹುದು.

ಈ ಎರಡೂ ಸಂದರ್ಭಗಳಲ್ಲಿ, ಬಣಗಳು ಭವಿಷ್ಯದಲ್ಲಿ ಒಂದಾಗಲು ಮತ್ತು ಮೂಲ ಚಿಹ್ನೆಯನ್ನು ಮರಳಿ ಪಡೆಯಲು ನಿರ್ಧರಿಸಿದರೆ, ಆಗ ವಿಲೀನವನ್ನು ಮೌಲ್ಯಮಾಪನ ಮಾಡಿ ಏಕೀಕೃತ ಪಕ್ಷಕ್ಕೆ ಚಿಹ್ನೆಯನ್ನು ಮರಳಿ ಕೊಡಬಹುದು.

ಇದನ್ನೂ ಓದಿ: ಕಾರ್ಪೊರೇಟರ್‌ಗಳಿಂದಲೂ ಏಕನಾಥ್‌ ಶಿಂಧೆಗೆ ಬೆಂಬಲ, ಶಿವಸೇನೆ ಮೇಲೆ ಹಿಡಿತ ಕಳೆದುಕೊಳ್ಳುತ್ತಿರುವ ಉದ್ಧವ್‌

ಪಕ್ಷದ ಚಿಹ್ನೆಯ ಕುರಿತು ಇತ್ತೀಚಿನ ವಿವಾದಗಳು

ಲೋಕ ಜನಶಕ್ತಿ ಪಕ್ಷ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಚುನಾವಣಾ ಆಯೋಗವು ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಾಸ್ ಬಣಗಳ ನಡುವಿನ ವಿವಾದವನ್ನು ಇತ್ಯರ್ಥಗೊಳಿಸುವವರೆಗೆ ಲೋಕ ಜನಶಕ್ತಿ ಪಕ್ಷದ ಹೆಸರು ಅಥವಾ ಅದರ ಚಿಹ್ನೆ ‘ಬಂಗಲೆ’ಯನ್ನು ಬಳಸದಂತೆ ನಿರ್ಬಂಧಿಸಿತು.

ಬಿಹಾರದ ಕುಶೇಶ್ವರ್ ಮತ್ತು ತಾರಾಪುರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದ ಸಂದರ್ಭದಲ್ಲಿ ಚಿರಾಗ್ ಪಾಸ್ವಾನ್ ಬಣಕ್ಕೆ ʼಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್)’ ಹೆಸರಿನಲ್ಲಿ ‘ಹೆಲಿಕಾಪ್ಟರ್’ ಚಿಹ್ನೆಯೊಂದಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿತು. ಪಾರಸ್ ಬಣಕ್ಕೆ ʼರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ’ ಹೆಸರು ಮತ್ತು ‘ಹೊಲಿಗೆ ಯಂತ್ರ’ ಚಿಹ್ನೆಯನ್ನು ನೀಡಿತು.

ಎಐಎಡಿಎಂಕೆ: ಓ ಪನ್ನೀರ್‌ಸೆಲ್ವಂ ಮತ್ತು ವಿಕೆ ಶಶಿಕಲಾ ನೇತೃತ್ವದ ಎರಡು ಬಣಗಳು ಎಐಎಡಿಎಂಕೆಯ ʼಎರಡು ಎಲೆ’ ಚಿಹ್ನೆಯ ಮೇಲೆ ಹಕ್ಕು ಸಾಧಿಸಿದ್ದವು. EC ಮಾರ್ಚ್ 2017ರಲ್ಲಿ ಅದನ್ನು ಸ್ಥಗಿತಗೊಳಿಸಿತು. ನಂತರ, ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರ ಪಾಳಯ ಜೈಲಿನಲ್ಲಿದ್ದ ಶಶಿಕಲಾ ವಿರುದ್ಧ ಬಂಡಾಯವೆದ್ದಿತು. ನವೆಂಬರ್ 2017ರಲ್ಲಿ ಪಳನಿಸ್ವಾಮಿ ಹಾಗೂ ಪನ್ನೀರ್‌ಸೆಲ್ವಂ ಬಣಗಳು ಒಂದಾದವು. ಆಗ ಎರಡೆಲೆ ಚಿಹ್ನೆಯನ್ನು ಅವರಿಗೆ ನೀಡಲಾಯಿತು.

ಸಮಾಜವಾದಿ ಪಕ್ಷ: 2017ರಲ್ಲಿ ಅಖಿಲೇಶ್ ಯಾದವ್ ತಂದೆ ಮುಲಾಯಂ ಸಿಂಗ್ ಯಾದವ್‌ ಅವರಿಂದ ಹಿಡಿತ ಸಾಧಿಸಿದಾಗ ಎಸ್‌ಪಿ ಪಕ್ಷವು ವಿಭಜನೆಗೆ ಸಾಕ್ಷಿಯಾಯಿತು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಖಿಲೇಶ್ ಆಯ್ಕೆಯಾದ ನಂತರ ಯಾದವ ಕುಲ ಎರಡು ಹೋಳಾಯಿತು.

ಚುನಾವಣಾ ಆಯೋಗವನ್ನು ಸಂಪರ್ಕಿಸಿದ ಮುಲಾಯಂ ಅವರು, ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುತ್ತೇನೆ ಮತ್ತು ಚುನಾವಣಾ ಚಿಹ್ನೆ ತಮ್ಮ ಬಣದಲ್ಲಿ ಉಳಿಯಬೇಕು ಎಂದರು. ಇದಕ್ಕೆ ಅಖಿಲೇಶ್ ಪಾಳಯದಿಂದ ತೀವ್ರ ಪೈಪೋಟಿ ಏರ್ಪಟ್ಟಿತು. ಬಹುಮತ ಸಿಎಂ ಬಳಿಯೇ ಇದೆ ಎಂದು ಹೇಳಿಕೊಂಡಿತು. ಆಯೋಗ ಎರಡೂ ಕಡೆಯವರ ವಾದಗಳನ್ನು ಆಲಿಸಿತು. ಜನವರಿ 16ರಂದು ಅಖಿಲೇಶ್ ಯಾದವ್ ನೇತೃತ್ವದ ಬಣಕ್ಕೆ ಸೈಕಲ್ ಚಿಹ್ನೆಯನ್ನು ಆಯೋಗ ನೀಡಿತು.

ಇದನ್ನೂ ಓದಿ: ಈ ಸಲ ಶಿವ ಸೇನೆ ಹೋಳಾಗುವುದು ಖಚಿತ? ಹಿಂದೆಯೂ ಮೂರು ಬಾರಿ ಪ್ರಯತ್ನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
Aravind Kejriwal
ದೇಶ7 mins ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ17 mins ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 202420 mins ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 202430 mins ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Akshaya Tritiya 2024
ಪ್ರಮುಖ ಸುದ್ದಿ35 mins ago

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024
ಧಾರ್ಮಿಕ50 mins ago

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

America v/s Russia
ವಿದೇಶ59 mins ago

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Actor Prabhas
ಸಿನಿಮಾ1 hour ago

Actor Prabhas: ʼಕಣ್ಣಪ್ಪʼ ಚಿತ್ರಕ್ಕೆ ಎಂಟ್ರಿಕೊಟ್ಟ ಪ್ರಭಾಸ್‌; ಹೊಸ ಪೋಸ್ಟರ್‌ ರಿಲೀಸ್‌

Prajwal Revanna Case
ಕ್ರೈಂ1 hour ago

Prajwal Revanna case: ಪ್ರಜ್ವಲ್‌ ರೇವಣ್ಣ ಮೇಲೆ ಸುಳ್ಳು ಆರೋಪ ನೀಡಲು ಒತ್ತಡ: ಮಹಿಳೆ ದೂರು

karnataka SSLC result 2024
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ12 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ13 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ19 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ19 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ20 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು20 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ20 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌