Vistara Explainer: ಇಸ್ಲಾಮಿಕ್ ದೇಶಗಳ ಅಧಿಕ ಪ್ರಸಂಗ! - Vistara News

EXPLAINER

Vistara Explainer: ಇಸ್ಲಾಮಿಕ್ ದೇಶಗಳ ಅಧಿಕ ಪ್ರಸಂಗ!

ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಬಿಜೆಪಿ ವಕ್ತಾರೆ Nupur sharma ನೀಡಿದ ಹೇಳಿಕೆ ಇಡೀ ಭಾರತದ ಹೇಳಿಕೆ ಎಂಬಂತೆ ಇಸ್ಲಾಮಿಕ್ ದೇಶಗಳು ಗುಟುರು ಹಾಕುತ್ತಿವೆ. ಏನಿದು ವಿವಾದ? ಇಲ್ಲಿದೆ ಸಮಗ್ರ ನೋಟ.

VISTARANEWS.COM


on

nupur sharma protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
  • ಹರೀಶ್ ಕೇರ, ಬೆಂಗಳೂರು

ಇಸ್ಲಾಮಿಕ್‌ ದೇಶಗಳ ಒಕ್ಕೂಟಕ್ಕೆ ಏನಾಗಿದೆ? ಬಿಜೆಪಿಯ ವಕ್ತಾರೆ Nupur sharma ಎಂಬೊಬ್ಬಳ ಹೇಳಿಕೆಯನ್ನು ಇಡೀ ದೇಶದ ಹೇಳಿಕೆ ಎಂಬಂತೆ ನೋಡ್ತಾ ಇದೆ ಇಸ್ಲಾಮಿಕ್‌ ಸಹಕಾರ ಸಂಘಟನೆ (ಒಐಸಿ)!

ಭಾರತದ ವಿರುದ್ಧ ಕಿಡಿ ಕಾರೋದಕ್ಕೆ ಈ ಸಂಘಟನೆಗೆ ಕಾರಣವಾಗಿದ್ದು ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಅವರ ಹೇಳಿಕೆ. ಆಕೆಯನ್ನು ಈಗಾಗಲೇ ಆ ಹುದ್ದೆಯಿಂದ ಪಕ್ಷ ವಜಾ ಮಾಡಿದೆ. ಆಕೆಯ ಹೇಳಿಕೆಗೂ ತಮಗೂ ಸಂಬಂಧ ಇಲ್ಲ ಎಂದು ಬಿಜೆಪಿ ಹೇಳಿದೆ. ಹಾಗಿದ್ದರೂ ಬಿಜೆಪಿಯನ್ನು ಮತ್ತು ಭಾರತ ಸರಕಾರವನ್ನು ಈ ಹೇಳಿಕೆಯ ಜೊತೆಗೆ ತಳುಕು ಹಾಕಲು ಪ್ರಯತ್ನ ಮಾಡ್ತಾ ಇರುವುದೇಕೆ ಒಐಸಿ? ಏನು ನಡೆಯುತ್ತಿದೆ ಇದರ ಹಿನ್ನೆಲೆಯಲ್ಲಿ? ಭಾರತದ ಬಗ್ಗೆ, ಹಿಂದೂಗಳ ಬಗ್ಗೆ ಈ ಸಂಘಟನೆ ಈ ಹಿಂದೆಯೂ ಹೀಗೆಯೇ ನಡೆದುಕೊಂಡಿದೆಯಾ? ಒಐಸಿ ಡಬಲ್‌ ಸ್ಟಾಂಡರ್ಡ್‌ ಮತ್ತು ಈಗ ನಡೆಯುತ್ತಿರುವ ವಿವಾದದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

ಬಿಜೆಪಿ ವಕ್ತಾರೆ ಹೇಳಿದ್ದೇನು?

ನೂಪುರ್‌ ಶರ್ಮ
ನೂಪುರ್‌ ಶರ್ಮಾ

ಈ ಎಲ್ಲ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆ ಆಗಿದ್ದ ನೂಪುರ್‌ ಶರ್ಮಾ ಎಂಬಾಕೆ ನೀಡಿದ ಒಂದು ಹೇಳಿಕೆ ಇದೆ. ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲಿ ನಡೆದ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ್ದ ನೂಪುರ್‌ ಶರ್ಮಾ, ಪ್ರವಾದಿ ಮೊಹಮ್ಮದ್‌ರನ್ನು ಟೀಕಿಸಿ ಮಾತುಗಳನ್ನಾಡಿದ್ದರು. ಆ ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೂಪುರ್‌ ಶರ್ಮಾರಿಗೆ ಜೀವ ಬೆದರಿಕೆಯೂ ಬಂದಿತ್ತು. ನಮ್ಮ ದೇಶದ ಮುಸ್ಲಿಂ ಸಂಘಟನೆಗಳಷ್ಟೇ ಅಲ್ಲ, ಪಾಕಿಸ್ತಾನದ ಮುಸ್ಲಿಂ ಮುಖಂಡರೂ ನೂಪುರ್‌ ಶರ್ಮಾ ಶಿರಚ್ಛೇದ ಮಾಡಲು ಕರೆಕೊಟ್ಟಿದ್ದರು. ಆಕೆಯನ್ನು ಯಾರು ಕೊಲ್ಲುತ್ತಾರೋ ಅವರಿಗೆ ಬಹುಮಾನ ಕೊಡುವುದಾಗಿಯೂ ಘೋಷಿಸಿದ್ದರು. ತನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಬರುತ್ತಿರುವುದಾಗಿ ನೂಪುರ್‌ ಶರ್ಮಾ ಅವರೇ ಹೇಳಿಕೊಂಡಿದ್ದರು. ನೂಪುರ್‌ ಶರ್ಮಾ ಹೇಳಿಕೆಯಿಂದ ಕಾನ್ಪುರದಲ್ಲಿ ದೊಡ್ಡಮಟ್ಟದ ಗಲಾಟೆ, ಹಿಂಸಾಚಾರ ನಡೆದಿತ್ತು. ನೂಪುರ್‌ ಶರ್ಮಾ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಯೊಂದು ಕಾನ್ಪುರ ಬಂದ್‌ಗೆ ಕರೆ ನೀಡಿತ್ತು. ಆಗ ಎರಡೂ ಗುಂಪುಗಳ ಮಧ್ಯೆ ಘರ್ಷಣೆ- ಕಲ್ಲುತೂರಾಟ ನಡೆದಿದ್ದು, ಗಲಾಟೆ ತಾರಕಕ್ಕೇರಿತ್ತು.

ಅಂತರ ಕಾಯ್ದುಕೊಂಡ ಬಿಜೆಪಿ

naveen kumar jindal
ನವೀನ್‌ ಕುಮಾರ್‌ ಜಿಂದಾಲ್

ಇದೆಲ್ಲದರ ಮಧ್ಯೆ ನೂಪುರ್‌ ಶರ್ಮಾರಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು. ಯಾವುದೇ ಧರ್ಮ, ಪಂಥ, ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ-ಅವಹೇಳನ ಮಾಡುವ ಸಿದ್ಧಾಂತ ಬಿಜೆಪಿಯದ್ದಲ್ಲ. ಅದನ್ನು ಬಿಜೆಪಿ ವಿರೋಧಿಸುತ್ತದೆ. ಪ್ರತಿಯೊಬ್ಬರಿಗೂ ಅವರು ನಂಬಿದ ಧರ್ಮವನ್ನು ಅನುಸರಿಸುವ ಹಕ್ಕಿದೆ ಎಂದು ನಮ್ಮ ಸಂವಿಧಾನವೇ ಹೇಳಿದೆ ಎಂದು ಪ್ರಕಟಣೆ ಹೊರಡಿಸಿತ್ತು. ಬಿಜೆಪಿಯಿಂದ ಈ ಹೇಳಿಕೆ ಹೊರಬಿದ್ದ ಬೆನ್ನಲ್ಲೇ ನೂಪುರ್‌ ಶರ್ಮಾ ಮತ್ತು ಅವರನ್ನು ಟಿವಿ ಡಿಬೇಟ್‌ಗೆ ಕಳಿಸಿದ ಮಾಧ್ಯಮ ಉಸ್ತುವಾರಿ ನವೀನ್‌ ಕುಮಾರ್‌ ಜಿಂದಾಲ್‌ ಇಬ್ಬರೂ ಅಮಾನತುಗೊಂಡಿದ್ದಾರೆ.

ಆದರೆ, ಭಾರತ ಸರಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿರುವುದು ಇಸ್ಲಾಮಿಕ್‌ ದೇಶಗಳ ಒಕ್ಕೂಟದ ನಡೆ. ಇಸ್ಲಾಮಿಕ್‌ ಸಹಕಾರ ಸಂಘಟನೆಯೆಂಬುದು 57 ಮುಸ್ಲಿಂ ರಾಷ್ಟ್ರಗಳ ಒಕ್ಕೂಟವಾಗಿದ್ದು, ವಿಶ್ವಸಂಸ್ಥೆಯ ನಂತರದ ದೊಡ್ಡ ಒಕ್ಕೂಟ. ಈ ಸಂಘಟನೆ ನೂಪುರ್‌ ಶರ್ಮಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿತ್ತು. ʼʼಪ್ರವಾದಿ ಮೊಹಮ್ಮದರ ಬಗ್ಗೆ ಕೇಳಿ ಬಂದ ಟೀಕೆಗಳು ದುರುದ್ದೇಶಪೂರಿತವಾಗಿದೆ. ಭಾರತದಲ್ಲಿ ಇಸ್ಲಾಂ ವಿರುದ್ಧ ದ್ವೇಷ ಬಿತ್ತುವ ಪ್ರವೃತ್ತಿ ಹೆಚ್ಚುತ್ತಿದೆ. ಮುಸ್ಲಿಮರನ್ನು ನಿಂದಿಸಲಾಗುತ್ತಿದೆ ಮತ್ತು ಅವರನ್ನು ಹತ್ತಿಕ್ಕಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗುತ್ತಿದೆ. ಆದಷ್ಟು ಬೇಗ ವಿಶ್ವ ಸಂಸ್ಥೆ ಹಸ್ತಕ್ಷೇಪ ಮಾಡಿ ಬಗೆಹರಿಸಬೇಕುʼʼ ಎಂದು ಹೇಳಿತ್ತು.

ಒಐಸಿ ಮಾಡಿದ್ದೇನು?

ಬಿಜೆಪಿ ವಕ್ತಾರೆಯ ಹೇಳಿಕೆ ಕುರಿತು ಕತಾರ್‌, ಕುವೈತ್‌, ಇರಾನ್‌, ಪಾಕಿಸ್ತಾನ ಮುಂತಾದ ಮುಸ್ಲಿಂ ದೇಶಗಳು ಗರಂ ಆಗಿವೆ. ಭಾರತೀಯ ರಾಯಭಾರ ಸಿಬ್ಬಂದಿಗೆ ಇವು ಸಮನ್ಸ್‌ ನೀಡಿ ವಿವರಣೆ ಕೇಳಿದ್ದವು. ಈ ಕುರಿತು ಪ್ರತಿಕ್ರಿಯಿಸಿರುವ ಭಾರತ ವಿದೇಶಾಂಗ ಅಧಿಕಾರಿಗಳು ʼʼಇದು ಭಾರತದ ನಿಲುವಲ್ಲ. ಈ ವ್ಯಕ್ತಿಗಳ ಟ್ವೀಟ್‌ಗಳು ಯಾವುದೇ ಕಾರಣಕ್ಕೂ ಭಾರತ ಸರಕಾರದ ಅಥವಾ ಆಡಳಿತ ಪಕ್ಷದ ನಿಲುವನ್ನು ವ್ಯಕ್ತಪಡಿಸುವುದಿಲ್ಲ. ತಪ್ಪಿತಸ್ಥ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆʼʼ ಎಂದು ಭರವಸೆ ನೀಡಿದ್ದಾರೆ. ಆದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೇಂದ್ರ ಸರ್ಕಾರ ಇಕ್ಕಟ್ಟಿಗೆ ಸಿಕ್ಕಿರುವುದು ನಿಜ. ಕತಾರ್‌, ಇರಾನ್‌ ಮುಂತಾದ ಕೆಲವು ಕಡೆಗಳಲ್ಲಿ ʼಬಾಯ್ಕಾಟ್‌ ಇಂಡಿಯನ್‌ ಪ್ರಾಡಕ್ಟ್ಸ್‌ʼ ಅಥವಾ ʼಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿʼ ಅಭಿಯಾನ ಕೂಡಾ ಆರಂಭವಾಗಿದೆ. ಗಲ್ಫ್‌ ದೇಶಗಳ ದೊಡ್ಡ ಮಾಲ್‌ಗಳಲ್ಲಿ ಮುಸ್ಲಿಮ ಆಕ್ರೋಶದ ಆತಂಕದಿಂದಾಗಿ ಭಾರತೀಯ ಉತ್ಪನ್ನಗಳನ್ನು ಶೆಲ್ಫ್‌ನಿಂದ ತೆಗೆಯಲಾಗುತ್ತಿದೆ.

ಭಾರತದ ಖಡಕ್‌ ಪ್ರತ್ಯುತ್ತರ
ಅವರ ಹೇಳಿಕೆಯನ್ನು ನಾವು ಯಾವ ಅರ್ಥದಲ್ಲಿ ತಗೋಬೇಕು? ಭಾರತ ಸರಕಾರ ಈ ಸಂಸ್ಥೆಯ ಹೇಳಿಕೆಗೆ ಕಟುವಾಗಿಯೇ ತಿರುಗೇಟು ನೀಡಿದೆ. ʼʼಒಐಸಿಯಿಂದ ಭಾರತದ ಬಗ್ಗೆ ಬಂದ ಹೇಳಿಕೆ ತುಂಬ ಸಂಕುಚಿತ ಮನೋಭಾವದ್ದಾಗಿದೆ. ಅನಗತ್ಯವಾದ ಈ ಹೇಳಿಕೆಯನ್ನು ನಾವು ಯಾವ ಕಾರಣಕ್ಕೂ ಒಪ್ಪುವುದಿಲ್ಲ. ಭಾರತ ಸರ್ಕಾರ ಪ್ರತಿ ಧರ್ಮವನ್ನೂ ಗೌರವಿಸುತ್ತದೆʼʼ ಎಂದು ಕೇಂದ್ರ ವಿದೇಶಾಂಗ ಇಲಾಖೆ ಸಚಿವಾಲಯ ಪ್ರಕಟಣೆ ಹೊರಡಿಸಿದೆ. ʼʼಯಾರೋ ಅವರ ವೈಯಕ್ತಿಕ ದೃಷ್ಟಿಕೋನದಲ್ಲಿ ನಿಂದನಾತ್ಮಕ ಹೇಳಿಕೆಗಳನ್ನು ನೀಡಿದಾಕ್ಷಣ, ಅವರು ಇಡೀ ಕೇಂದ್ರ ಸರ್ಕಾರ, ಇಡೀ ಭಾರತವನ್ನೇ ಪ್ರತಿನಿಧಿಸುತ್ತಿದ್ದಾರೆ ಎಂದು ಭಾವಿಸಬಾರದು. ಅನುಚಿತ ಹೇಳಿಕೆ ನೀಡಿದವರ ವಿರುದ್ಧ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳಲಾಗಿದೆʼʼ ಎಂದು ಹೇಳಿದೆ.

ʼʼಇಸ್ಲಾಮಿಕ್‌ ಸಹಕಾರ ಸಂಘಟನೆ ಮತ್ತೆ ತನ್ನ ವಿಭಜಕ ನೀತಿಯನ್ನು ಪ್ರದರ್ಶಿಸಿದೆ. ಪಟ್ಟಭದ್ರ ಹಿತಾಸಕ್ತಿಗಳ ಪ್ರಭಾವಕ್ಕೆ ಒಳಗಾಗಿ ಇಂಥ ದುರುದ್ದೇಶಪೂರಿತ ಮತ್ತು ಜನರನ್ನು ತಪ್ಪು ದಾರಿಗೆ ಎಳೆಯುವ ಕಮೆಂಟ್‌ಗಳನ್ನು ಕೊಡುತ್ತಿದೆ. ಆದರೆ ಹಾಗೆ ಮಾಡಬೇಡಿ, ನಿಮ್ಮ ಕೋಮು ವಿಭಜಕ ಮನೋಭಾವನೆಯನ್ನು ಪ್ರದರ್ಶಿಸಬೇಡಿ. ಎಲ್ಲ ಧರ್ಮ ಮತ್ತು ಎಲ್ಲರ ಧಾರ್ಮಿಕ ನಂಬಿಕೆಗಳನ್ನೂ ಗೌರವಿಸಿ ಎಂದು ನಾವು ಒತ್ತಾಯಿಸುತ್ತೇವೆʼʼ ಎಂದು ಸಚಿವಾಲಯ ಖಡಕ್‌ ಪ್ರಕಟಣೆ ಹೊರಡಿಸಿದೆ.

ಮತ್ತಷ್ಟು ಓದಿಗಾಗಿ: ಪ್ರವಾದಿ ಮೊಹಮ್ಮದ್‌ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದ ವಕ್ತಾರೆ ನೂಪುರ್‌ ಶರ್ಮಾ ಬಿಜೆಪಿಯಿಂದ ಅಮಾನತು

ಇವರ ಉದ್ಧಟತನ ಇದೇ ಮೊದಲಲ್ಲ…
ಈ ಪ್ರಕರಣದ ವಿಷಯ ಹಾಗಿರಲಿ. ಇದೊಂದೇ ಬಾರಿ ಅಲ್ಲ ಇಸ್ಲಾಮಿಕ್‌ ದೇಶಗಳು ಭಾರತದ ವಿರುದ್ಧ ಹೀಗೆ ಮಾತಾಡ್ತಾ ಇರುವುದು. ಈ ಹಿಂದಿನ ಹಲವು ಘಟನೆಗಳನ್ನೂ ನಾವು ನೋಡಬಹುದು.

ಉದಾಹರಣೆಗೆ, ಕಾಶ್ಮೀರದಲ್ಲಿ ಸಂವಿಧಾನದ ಆರ್ಟಿಕಲ್‌ 370 ಅನ್ನು ರದ್ದುಪಡಿಸಿದ ಸಂದರ್ಭ. ಜಮ್ಮು- ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ಆರ್ಟಿಕಲ್‌ 370ನ್ನು 2019ರಲ್ಲಿ ಕೇಂದ್ರ ಸರಕಾರ ಸಂವಿಧಾನ ಬದ್ಧವಾಗಿಯೇ ರದ್ದುಗೊಳಿಸಿ, ಕಾಶ್ಮೀರವನ್ನು ಎರಡಾಗಿ ವಿಭಜಿಸಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಿತು. ಆದರೆ ಈ ವಿಚಾರ, ಪಕ್ಕದ ದೇಶ ಪಾಕಿಸ್ತಾನಕ್ಕೆ ಸಹಿಸೋಕೆ ಆಗಲಿಲ್ಲ. ಯಕೆಂದರೆ ಸದಾ ತನ್ನ ಬೇಳೆಯನ್ನು ಕಾಶ್ಮೀರದಲ್ಲಿ ಬೇಯಿಸಿಕೊಳ್ಳಲು ಪ್ರಯತ್ನಿಸುವ ದೇಶ ಪಾಕಿಸ್ತಾನ. ಅದು ವಿಶ್ವಸಂಸ್ಥೆಯಲ್ಲಿ ಗದ್ದಲ ಎಬ್ಬಿಸಲು ಯತ್ನಿಸಿತು. ತನ್ನ ಬೆಂಬಲಕ್ಕೆ ಇತರ ಗಲ್ಫ್‌ ದೇಶಗಳನ್ನೂ ಕರೆಯಿತು. ʼʼಕಾಶ್ಮೀರದ ಮುಸ್ಲಿಮರ ವಿಷಯದಲ್ಲಿ ನ್ಯಾಯಯುತವಾಗಿ ನಡೆದುಕೊಳ್ಳಬೇಕುʼʼ ಎಂದು ಭಾರತಕ್ಕೆ ಇರಾನ್ ಉಪದೇಶ ಮಾಡಿತು. ಕಾಶ್ಮೀರದ ಹಿಂದೂಗಳ ಬಗ್ಗೆ ನ್ಯಾಯಯುತವಾಗಿ ನಡೆದುಕೊಳ್ಳುವುದೇ ಬೇಡವೇ ಹಾಗಾದರೆ? ಈ ಪ್ರಶ್ನೆಯನ್ನು ಇರಾನ್‌ ಕೇಳಿಕೊಂಡಿದ್ದರೆ ಚೆನ್ನಾಗಿತ್ತು. ಈ ಸಂದರ್ಭದಲ್ಲಿ ಇದೇ ಇಸ್ಲಾಮಿಕ್‌ ಸಹಕಾರ ಒಕ್ಕೂಟ ಅಥವಾ ಒಐಸಿ, ತಾನು ನಡೆಸಿದ ಒಂದು ಸಮ್ಮೇಳನದಲ್ಲಿ, ಕಾಶ್ಮೀರದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಭಾರತ ಸರಕಾರ ತಡೆಗಟ್ಟಬೇಕು ಎಂದು ಉಪದೇಶ ನೀಡಿತು. ಕಾಶ್ಮೀರದಲ್ಲಿ ಏನು ಮಾಡಬೇಕು ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ, ನಿಮ್ಮ ಉಪದೇಶ ನಮಗೆ ಅಗತ್ಯವಿಲ್ಲ ಎಂದೇ ಭಾರತ ಆಗಲೂ ಹೇಳಿತ್ತು. ಆದರೂ ಹೀಗೆ ಆಗಾಗ ಉಪದೇಶ ನೀಡುವ, ಟೀಕಿಸುವ ತನ್ನ ಚಾಳಿಯನ್ನು ಒಐಸಿ ಬಿಟ್ಟಿಲ್ಲ.

ಹಾಗಾದರೆ ಯಾವುದು ಈ ಒಐಸಿ?

IOC ದೇಶಗಳ ಧ್ವಜಗಳು

ಇದು ಇಸ್ಲಾಮಿಕ್‌ ಆಡಳಿತ ಹೊಂದಿರುವ, ಅಥವಾ ಮುಸ್ಲಿಂ ಬಹುಸಂಖ್ಯಾತರು ಇರುವ ದೇಶಗಳ ಒಂದು ಸಹಕಾರ ಒಕ್ಕೂಟ> ಈ ಒಕ್ಕೂಟದಲ್ಲ ಸೌದಿ ಅರೇಬಿಯಾ, ಇರಾನ್‌, ಕತಾರ್‌, ಯುಎಇ, ಪಾಕಿಸ್ತಾನ, ಅಫಘಾನಿಸ್ತಾನ ಸೇರಿದಂತೆ ಒಟ್ಟಾರೆ 57 ದೇಶಗಳಿವೆ. ಒಟ್ಟಾರೆ ಜಗತ್ತಿನ ಮುಸ್ಲಿಮರ ಹಿತ ತನ್ನ ಗುರಿ ಎಂದು ಈ ಸಂಘಟನೆ ಹೇಳಿಕೊಳ್ಳುತ್ತದೆ. 1969ರಲ್ಲಿ ಈ ಸಂಘಟನೆ ಹುಟ್ಟಿಕೊಂಡಿತು. ವಿಶ್ವಸಂಸ್ಥೆಯ ಬಳಿಕ ಜಗತ್ತಿನ ಅತಿ ದೊಡ್ಡ ರಾಷ್ಟ್ರಗಳ ಒಕ್ಕೂಟವಿದು ಎಂಬ ಹೆಗ್ಗಳಿಕೆ ಇದಕ್ಕಿದೆ. ʼಜಗತ್ತಿನ ಎಲ್ಲೆಡೆಯೂ ಇರುವ ಮುಸ್ಲಿಮರ ಸಂಘಟಿತ ಧ್ವನಿ ತಾನುʼ ಎಂದು ಈ ಸಂಘಟನೆ ಹೇಳಿಕೊಳ್ಳುತ್ತದೆ.

ಹುಟ್ಟುವಾಗಲೇ ಭಾರತಕ್ಕೆ ಅವಮಾನ!

1969ರಲ್ಲಿ ಈ ಸಂಘಟನೆಯ ಉದ್ಘಾಟನೆ ನಡೆದಾಗಲೇ ಭಾರತಕ್ಕೆ ಕಹಿ ಅನುಭವವಾಗಿತ್ತು. ರಬಾತ್‌ನಲ್ಲಿ ಈ ಸಂಘಟನೆಯ ಉದ್ಘಾಟನೆಗೆ ಭಾರತವನ್ನೂ ಆಹ್ವಾನಿಸಲಾಗಿತ್ತು. ಆದರೆ ಪಾಕಿಸ್ತಾನದ ತೀವ್ರ ಒತ್ತಡದಿಂದಾಗಿ ಆಹ್ವಾನಿತರ ಪಟ್ಟಿಯಿಂದ ಭಾರತವನ್ನು ಕೊನೆಯ ಕ್ಷಣದಲ್ಲಿ ಕೈಬಿಡಲಾಗಿತ್ತು. ಕಾರ್ಯಕ್ರಮಕ್ಕಾಗಿ ಭಾರತದಿಂದ ಹೊರಟು ಮೊರೊಕ್ಕೋದ ವರೆಗೆ ಆಗಮಿಸಿದ ಭಾರತದ ಆಗಿನ ಕೃಷಿ ಸಚಿವ ಫಕ್ರುದ್ದೀಲ್‌ ಅಲಿ ಅಹ್ಮದ್‌ ಅವರನ್ನು ಮರಳಿ ಕಳಿಸಲಾಗಿತ್ತು. ಇದು ಇಸ್ಲಾಮಿಕ್‌ ಸಂಘಟನೆ ಭಾರತವನ್ನು ಅಂದು ನಡೆಸಿಕೊಂಡ ಅವಮಾನಕಾರಿ ರೀತಿ. ಭಾರತಕ್ಕೆ ಈ ಸಂಘಟನೆ ಮಾಡುತ್ತಿರುವ ಅವಮಾನ ಈಗಲೂ ಮುಂದುವರಿದಿದೆ ಎನ್ನಬಹುದು. ಇದಕ್ಕೆ ಕಾರಣ ಪಾಕಿಸ್ತಾನ. ಈ ಸಂಘಟನೆಯ ಸದಸ್ಯ ರಾಷ್ಟ್ರಗಳಲ್ಲೆಲ್ಲಾ ನ್ಯೂಕ್ಲಿಯರ್‌ ವೆಪನ್‌ ಹೊಂದಿರುವ ಏಕೈಕ ಮುಸ್ಲಿಂ ದೇಶ ಎಂದರೆ ಪಾಕಿಸ್ತಾನ ಮಾತ್ರ. ಹೀಗಾಗಿ ಪಾಕಿಸ್ತಾನ ದಿವಾಳಿಯ ಅಂಚಿನಲ್ಲಿದ್ದರೂ, ಇಂದೂ ಸಹ, ಒಐಸಿ ಸಂಘಟನೆಯನ್ನು ತನ್ನ ಪ್ರಭಾವವನ್ನು ಹೊಂದಿದೆ. ಹೀಗಾಗಿಯೇ ಭಾರತ ತನ್ನ ಪ್ರತ್ಯುತ್ತರದಲ್ಲಿ ʼʼಯಾವುದೋ ಹಿತಾಸಕ್ತಿಗಳ ಮಾತು ಕೇಳಿ ಒಐಸಿ ಇಂಥ ಹೇಳಿಕೆ ನೀಡಬಾರದುʼʼ ಎಂದಿದೆ.

ಒಐಸಿ ಮುಸ್ಲಿಮರ ರಕ್ಷಿಸುತ್ತಿದೆಯಾ?

ಅದಿರಲಿ, ಒಐಸಿ ಜಗತ್ತಿನ ಎಲ್ಲಾ ಕಡೆಯ ಮುಸ್ಲಿಮರಿಗೂ ಸರಿಯಾದ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆಯಾ ಅಂತ ನೋಡೋಣ. ಪರಿಶೀಲಿಸಿ ನೋಡಿದರೆ, ಖಂಡಿತಾ ಇಲ್ಲ ಎಂಬುದು ನಿಮಗೆ ಗೊತ್ತಾಗುತ್ತದೆ. ಉದಾಹರಣೆಗೆ, ಚೀನಾದಲ್ಲಿ ಉಯಿಗುರ್‌ ಮುಸ್ಲಿಮರ ಮೇಲೆ ತೀವ್ರ ದೌರ್ಜನ್ಯ ಅಲ್ಲಿನ ಕಮ್ಯುನಿಸ್ಟ್‌ ಪಕ್ಷದಿಂದ ನಡೆಯುತ್ತಿದೆ. ಆದರೆ ಒಐಸಿ ಇದುವರೆಗೂ ಒಂದು ಮಾತನ್ನೂ ಆಡಿಲ್ಲ. ಯಾಕೆಂದರೆ ಚೀನಾದ ಜೊತೆಗೆ ಈ ದೇಶಗಳಿಗೆ ಬಹಳಷ್ಟು ವಾಣಿಜ್ಯ ಹಿತಾಸಕ್ತಿಗಳಿವೆ. ಚೀನಾದ ಜೊತೆಗಿನ ವ್ಯಾಪಾರ ಕಳೆದುಕೊಳ್ಳೋಕೆ ಇವುಗಳಿಗೆ ಇಷ್ಟವಿಲ್ಲ. ಇನ್ನು ಮುಸ್ಲಿಮರೇ ನಡೆಸಿದ ನರಮೇಧಗಳ ಬಗ್ಗೆ ಈ ಸಂಘಟನೆ ಯಾವ ಮಾತನ್ನೂ ಆಡಿಲ್ಲ. ಉದಾಹರಣೆಗೆ, ಯುರೋಪಿನ ನಾನಾ ಕಡೆಗಳಲ್ಲಿ ನಡೆಯುತ್ತಿರುವ ಮುಸ್ಲಿಂ ಮತಾಂಧರ ದಾಳಿಗಳಾಗಲೀ, ಐಸಿಸ್‌ ಎಂಬ ನರಹಂತಕರ ಸಂಘಟನೆ ಸಿರಿಯಾ ಮುಂತಾದ ಕಡೆಗಳಲ್ಲಿ ನಡೆಸುತ್ತಿರುವ ವ್ಯವಸ್ಥಿತ ನರಮೇಧಗಳಾಗಲೀ- ಈ ಸಂಘಟನೆಯ ವಿವೇಚನೆಯ ರೇಡಾರ್‌ನ ಅಡಿಯಲ್ಲಿ ಬಂದೇ ಇಲ್ಲ. ಇನ್ನು ಶೆರಿಯಾ ಆಡಳಿತದ ಹೆಸರಿನಲ್ಲಿ ಅಫಘಾನಿಸ್ತಾನದಲ್ಲಿ ತಾಲಿಬಾನ್‌ ಭಯೋತ್ಪಾದಕ ಸಂಘಟನೆ ನಡೆಸುತ್ತಿರುವ ದೌರ್ಜನ್ಯಪೂರಿತವಾದ ಆಡಳಿತ, ಮುಸ್ಲಿಂ ಹೆಣ್ಣುಮಕ್ಕಳ ಮೇಲೆ ಅವರು ತೋರುತ್ತಿರುವ ಕಠಿಣ ಕ್ರಮಗಳು, ಶಾಲೆಗಳ ಮುಚ್ಚುವಿಕೆ, ಮುಂತಾದವುಗಳ ಬಗ್ಗೆ ಒಐಸಿ ಕಿವಿ ಕಣ್ಣುಗಳೆರಡನ್ನೂ ಮುಚ್ಚಿಕೊಂಡು ಕೂತಿದೆ.

ಇದನ್ನೂ ಓದಿ: ಯಾರೀಕೆ ಇಸ್ಲಾಮಿಕ್‌ ದೇಶಗಳ ಕಣ್ಣು ಕೆಂಪಾಗಿಸಿದ ನೂಪುರ್ ಶರ್ಮಾ?

ಮುಸ್ಲಿಂ ದೇಶಗಳಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ

ಇನ್ನು ಇಸ್ಲಾಮಿಕ್‌ ದೇಶಗಳಲ್ಲಿ ಅಥವಾ ಮುಸ್ಲಿಂ ಬಾಹುಳ್ಯದ ದೇಶಗಳಲ್ಲಿ ಅಲ್ಲಿನ ಅಲ್ಪಸಂಖ್ಯಾತರ ಮೇಲೆ ನಡೆಸಲಾಗುತ್ತಿರುವ ದೌರ್ಜನ್ಯ ಅಥವಾ ಅಲ್ಲಿನ ಸರಕಾರದ ನೆರವಿನಿಂದಲೇ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ಈ ಸಂಘಟನೆ ಏನನ್ನೂ ಹೇಳುವುದಿಲ್ಲ. ಉದಾಹರಣೆಗೆ ಪಾಕಿಸ್ತಾನದಲ್ಲಿ ಮತ್ತು ಬಾಂಗ್ಲಾದಲ್ಲಿ ಬದುಕುತ್ತಿರುವ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರ ಸ್ಥಿತಿಗತಿಯ ಬಗ್ಗೆ ನೋಡಬಹುದು. ಇವರೆಲ್ಲ ಅಲ್ಲಿ ಅಲ್ಪಸಂಖ್ಯಾತರು. ಇವರಿಗೆ ಅಲ್ಲಿ ಸೂಕ್ತ ಕಾನೂನಾತ್ಮಕ ರಕ್ಷಣೆಗಳಿಲ್ಲ. ಇತ್ತೀಚಿನವರೆಗೂ ಬಾಂಗ್ಲಾದಲ್ಲಿ, ಅಲ್ಲಿನ ಯಾವುದೇ ಹಿಂದೂವಿನ ಆಸ್ತಿಯನ್ನು ಬಲವಂತರಾದ ಮುಸ್ಲಿಂ ಒಳಹಾಕಿಕೊಳ್ಳಬಹುದಾಗಿತ್ತು. ಅದನ್ನು ಪ್ರಶ್ನಿಸಲು ಹಿಂದೂವಿಗೆ ಸಾಧ್ಯವಿರಲಿಲ್ಲ. ಆದರೆ ಇಂಥ ತಾರತಮ್ಯದ ಕಾನೂನಿನ ಬಗ್ಗೆ ಒಐಸಿ ಏನೂ ಮಾತನಾಡಿಲ್ಲ.

ಒಐಸಿಯ ಜಾಣ ಕುರುಡು!

ಹಾಗೇ ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ಭಾರಿ ಪ್ರಮಾಣದ ತಾರತಮ್ಯ ನಡೆದಿದೆ. ಅಲ್ಲಿ ಹಿಂದೂಗಳನ್ನು ಮಟ್ಟಹಾಕಲು ಬ್ಲಾಸ್ಫೆಮಿ ಅಥವಾ ಧರ್ಮನಿಂದನೆ ಎಂಬ ಅಸ್ತ್ರವನ್ನು ಪ್ರಯೋಗಿಸಲಾಗುತ್ತದೆ. ಇದಕ್ಕೆ ಉದಾಹರಣೆಯಾಗಿ ಆಸಿಯಾ ಬಿಬಿ ಎಂಬ ಕ್ರೈಸ್ತ ಮಹಿಳೆಯ ಕತೆಯನ್ನು ನೋಡಬಹುದು. ಈಕೆ ಮುಸ್ಲಿಮರಿಗೆ ಮೀಸಲಾಗಿದ್ದ ಬಾವಿಯಿಂದ ನೀರು ಕುಡಿದಳು ಎಂಬ ಕಾರಣದಿಂದ ಈಕೆಯ ಮೇಲೆ ದ್ವೇಷ ಸಾಧಿಸುತ್ತಿದ್ದ ಪಕ್ಕದ ಮನೆಯಾಕೆ, ಈಕೆ ಪ್ರವಾದಿಗಳನ್ನು ನಿಂದಿಸಿದಳು ಎಂದು ಸುಳ್ಳು ದೂರು ಕೊಟ್ಟಳು. ಈ ದೂರಿನ ಮೇಲೆ ಕೋರ್ಟ್‌ ವಿಚಾರಣೆಯೂ ನಡೆದು, ಈಕೆಗೆ ಗಲ್ಲು ಶಿಕ್ಷೆ ವಿಧಿಸಲಾಯಿತು. ಆಸಿಯಾ ಬಿಬಿ ಹಾಗೂ ಆಕೆಯ ಗಂಡನನ್ನು ಮಾರಣಾಂತಿಕವಾಗಿ ಥಳಿಸಲಾಯಿತು. ಮುಂದೆ ಈಕೆಯ ಪರವಾಗಿ ನಿಂತ ಪಂಜಾಬ್‌ ಗವರ್ನರ್‌ ಸಲ್ಮಾನ್‌ ತಸೀರ್‌ ಹಾಗೂ ಪಾಕಿಸ್ತಾನ ಸಚಿವ ಸಂಪುಟದ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಶಾಬಾಝ್‌ ಭಟ್ಟಿ ಅವರನ್ನು ಮತಾಂಧರು ಗುಂಡಿಕ್ಕಿ ಕೊಂದರು. ಆದರೆ ಈ ಯಾವ ಘಟನೆಗಳಿಗೂ ಒಐಸಿ ಸ್ಪಂದಿಸಿದ್ದಾಗಲೀ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಪ್ಪೆಂದು ಹೇಳಿದ್ದಾಗಲೀ ದಾಖಲೆ ಇಲ್ಲ. ಹಾಗೇ ಅಫಘಾನಿಸ್ತಾನದ ಬಾಮಿಯಾನ್‌ನಲ್ಲಿ ಇದ್ದ ಬೌದ್ಧ ಸಂಸ್ಕೃತಿಯ ಹೆಗ್ಗುರುತಾದ ಬೃಹತ್‌ ಬೌದ್ಧ ಪ್ರತಿಮೆಗಳನ್ನು ತಾಲಿಬಾನಿಗಳು ಧ್ವಂಸ ಮಾಡಿದ್ದನ್ನೂ ಒಐಸಿ ಖಂಡಿಸಿಲ್ಲ.‌

ಇದನ್ನೂ ಓದಿ: ನೂಪುರ್‌ ಶರ್ಮಾ ಅಮಾನತಿಗೆ ಬಿಜೆಪಿ ಬಳಸಿದ್ದು ನಿಯಮ 10 ಎ, ಹಾಗಿದ್ದರೆ ಏನಿದೆ ಅದರಲ್ಲಿ?

ಇಸ್ಲಾಮಿಕ್ ಒಕ್ಕೂಟದ ದ್ವಿಮುಖ ನೀತಿ
ಇಸ್ಲಾಮಿಕ್‌ ಸಹಕಾರ ಒಕ್ಕೂಟದ ಇಂಥ ಡಬಲ್‌ ಸ್ಟಾಂಡರ್ಡ್‌ ಅಥವಾ ದ್ವಿಮುಖ ನೀತಿಯಿಂದಾಗಿಯೇ ಅದು ತನ್ನ ಮಾತಿನ ಮೇಲಿನ ಗೌರವವನ್ನು ಕಳೆದುಕೊಂಡಿದೆ. ಇಂಥ ಒಕ್ಕೂಟದಿಂದ ಟೀಕೆಗೆ ಒಳಗಾದರೆ ಭಾರತವೇನೂ ಅಂಜಬೇಕಿಲ್ಲ. ಆದರೆ ಬಹುತೇಕ ಅರಬ್‌ ದೇಶಗಳ ಜೊತೆಗೆ ಭಾರತ ಸುಮಧುರವಾದ ವಾಣಿಜ್ಯ ವಹಿವಾಟುಗಳನ್ನು ಹೊಂದಿದೆ. ಪೆಟ್ರೋಲಿಯಂ ತೈಲಗಳನ್ನು ಈ ದೇಶಗಳಿಂದ ನಾವು ಆಮದು ಮಾಡಿಕೊಳ್ಳುತ್ತಿದ್ದೇವೆ. ಹಾಗೆಯೇ ಭಾರತದ ಬೃಹತ್‌ ಮಾರುಕಟ್ಟೆ ಕೂಡ ಈ ದೇಶಗಳಿಗೆ ಅಗತ್ಯವಾಗಿದೆ. ಆದರೆ ಈ ನೂಪುರ್‌ ಶರ್ಮಾ ಪ್ರಕರಣ ಈ ಸಂಬಂಧವನ್ನು ಎಲ್ಲಿಯವರೆಗೆ ಒಯ್ಯುತ್ತದೆ ಎಂಬ ಎಂದು ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
KL Rahul
ಕ್ರೀಡೆ13 mins ago

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

T20 World Cup
ಕ್ರೀಡೆ36 mins ago

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

Shine Shetty Summer Fashion
ಫ್ಯಾಷನ್56 mins ago

Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

IPL 2024
ಕ್ರೀಡೆ1 hour ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

assault Case
ಬೆಂಗಳೂರು1 hour ago

Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

Prajwal Revanna Case Centre says it has no power to revoke Prajwal diplomatic passport Big relief for MP
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

Virat kohli
ಪ್ರಮುಖ ಸುದ್ದಿ1 hour ago

Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

Brij Bhushan Singh
ದೇಶ1 hour ago

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Murder case in Bengaluru
ಬೆಂಗಳೂರು1 hour ago

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Prajwal Revanna Case Locked up as Prajwal arrives at Bengaluru airport
ಹಾಸನ2 hours ago

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌