ವಿಸ್ತಾರ TOP 10 NEWS | ಅಮಿತ್‌ ಶಾ ಕಿಡಿಯಿಂದ ಡಬಲ್‌ ರೈಡ್‌ ನಿಷೇಧ ಯು-ಟರ್ನ್‌ವರೆಗಿನ ಪ್ರಮುಖ ಸುದ್ದಿಗಳಿವು - Vistara News

ಟಾಪ್ 10 ನ್ಯೂಸ್

ವಿಸ್ತಾರ TOP 10 NEWS | ಅಮಿತ್‌ ಶಾ ಕಿಡಿಯಿಂದ ಡಬಲ್‌ ರೈಡ್‌ ನಿಷೇಧ ಯು-ಟರ್ನ್‌ವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Vistara TOP 10 04082022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮುಜುಗರ, ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿರುವ ಹಿಂದು ಕಾರ್ಯಕರ್ತರ ಹತ್ಯೆ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ. ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಅಮಿತ್‌ ಶಾ ಈ ಕುರಿತು ಸಿಎಂ, ಮಾಜಿ ಸಿಎಂ, ರಾಜ್ಯ ಬಿಜೆಪಿ ಅಧ್ಯಕ್ಷರೊಂದಿಗೆ ಚರ್ಚಿಸಿದ್ದಾರೆ. ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್‌ ಯು. ಲಲಿತ್‌ ನೇಮಕವಾಗುವ ಸಾಧ್ಯತೆಯಿದೆ, ಬುಧವಾರ ನಡೆದಿದ್ದ ಸಿದ್ದರಾಮೋತ್ಸವದಲ್ಲಿ ಡಿ. ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಒಗ್ಗಟ್ಟಿನ ಮಂತ್ರ ವೇದಿಕೆಗೆ ಸೀಮಿತವೇ ಎಂಬ ಚರ್ಚೆ ನಡೆಯುತ್ತಿದೆ ಎನ್ನುವುದೂ ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Amit Shah in state | ಪ್ರವೀಣ್‌ ನೆಟ್ಟಾರು ಹತ್ಯೆ, ಪ್ರತಿಭಟನೆಗಳಿಂದ ಬಿಜೆಪಿಗೆ ಭಾರಿ ಡ್ಯಾಮೇಜ್‌, ಅಮಿತ್‌ ಶಾ ಕಿಡಿ
ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಮತ್ತು ಅದರ ಬಳಿಕ ಎದುರಾದ ಕಾರ್ಯಕರ್ತರ ಆಕ್ರೋಶ ಮತ್ತು ರಾಜೀನಾಮೆಗಳಿಂದ ಪಕ್ಷಕ್ಕೆ ಭಾರಿ ಹಾನಿಯಾಗಿದೆ ಎಂದು ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಿಡಿ ಕಾರಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆ ಸುಮಾರು ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಿದ ಅಮಿತ್‌ ಶಾ ಅವರು ಈಗ ಆಗಿರುವ ಹಾನಿಯನ್ನು ತಕ್ಷಣವೇ ಸರಿಪಡಿಸಿ ಎಂದು ಸೂಚನೆ ನೀಡಿದ್ದಾರೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

2. ಸುಪ್ರೀಂಕೋರ್ಟ್​ ಮುಂದಿನ ಮುಖ್ಯ ನ್ಯಾಯಮೂರ್ತಿ ಉದಯ್ ಯು ಲಲಿತ್; ಸಿಜೆಐ ರಮಣ ಶಿಫಾರಸು
ಸುಪ್ರೀಂಕೋರ್ಟ್​​ನ ಈಗಿನ ಮುಖ್ಯ ನ್ಯಾಯಮೂರ್ತಿ (CJI) ಎನ್​.ವಿ.ರಮಣ ಅಧಿಕಾರ ಅವಧಿ ಆಗಸ್ಟ್​ 26ರಕ್ಕೆ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ, ಅವರು ತಮ್ಮ ಉತ್ತರಾಧಿಕಾರಿ ಹೆಸರನ್ನು ಶಿಫಾರಸು ಮಾಡಿದ್ದಾರೆ. ಸಿಜೆಐ ನಿವೃತ್ತರಾಗುವಾಗ ಮುಂದಿನ ಸಿಜೆಐ ಹೆಸರನ್ನು ಶಿಫಾರಸು ಮಾಡುವುದು ನಿಯಮ. ಅದರಂತೆ ಈಗ ಎನ್​. ವಿ.ರಮಣ ಅವರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸ್ಥಾನಕ್ಕೆ ಹಿರಿಯ ನ್ಯಾಯಮೂರ್ತಿ ಉದಯ್​ ಉಮೇಶ್​ ಲಲಿತ್​ ಹೆಸರನ್ನು ಸೂಚಿಸಿದ್ದಾರೆ. ಇವರ ಹೆಸರನ್ನು ಬರೆದು, ತಮ್ಮ ಸಹಿ ಹಾಕಿ ಮುಚ್ಚಿದ ಲಕೋಟೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಅದರಂತೆ ಯು.ಯು. ಲಲಿತ್​ ಅವರು ಆಗಸ್ಟ್​ 27ರಂದು, ಸುಪ್ರೀಂಕೋರ್ಟ್​ನ 49ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

3. ಸಿದ್ದು- ಡಿಕೆಶಿ ಭಾಯಿ ಭಾಯಿ ಸಿದ್ದರಾಮೋತ್ಸವ ಸ್ಟೇಜ್‌ಗೆ ಸೀಮಿತವೆ?: ಹೌದೆನ್ನುತ್ತದೆ ವಿಡಿಯೊ
ಕರ್ನಾಟಕ ರಾಜಕಾರಣದಲ್ಲಿ ಅನೇಕ ದಿನಗಳಿಂದ ಚರ್ಚೆಯಾಗುತ್ತಿದ್ದ ಸಿದ್ದರಾಮೋತ್ಸವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಬ್ಬಿಕೊಂಡು ʻನಾವಿಬ್ಬರೂ ಒಟ್ಟಾಗಿದ್ದೇವೆʼ ಎಂದು ಸಂದೇಶ ನೀಡಿದ್ದು ಸುಮ್ಮನೆ ತೋರಿಕೆಗೇ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ಸಿದ್ದರಾಮಯ್ಯ ಅವರನ್ನು ಡಿ.ಕೆ. ಶಿವಕುಮಾರ್‌ ತಬ್ಬಿಕೊಂಡ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೊದಲಿಗೆ ಸಿದ್ದರಾಮಯ್ಯ ಅವರಿಗೆ ಶಾಲು ಹೊದಿಸಿ, ಇಂದಿರಾ ಗಾಂಧಿಯವರ ಪುಸ್ತಕವೊಂದನ್ನು ಶಿವಕುಮಾರ್‌ ನೀಡುತ್ತಾರೆ. ಈ ವೇಳೆಯಲ್ಲಿ ಪಕ್ಕ ಕುಳಿತಿದ್ದ ರಾಹುಲ್‌ ಗಾಂಧಿ ಕೈ ಸನ್ನೆ ಮಾಡಿ, ತಬ್ಬಿಕೊಳ್ಳುವಂತೆ ಶಿವಕುಮಾರ್‌ಗೆ ಹೇಳುತ್ತಾರೆ. ಇದನ್ನು ನೋಡಿದ ಶಿವಕುಮಾರ್‌ ಒಂದಲ್ಲ, ಎರಡು ಬಾರಿ ಸಿದ್ದರಾಮಯ್ಯ ಅವರನ್ನು ತಬ್ಬಿಕೊಂಡು, ನಾವಿಬ್ಬರೂ ಒಟ್ಟಾಗಿದ್ದೇವೆ ಎಂದು ಸಂದೇಶ ನೀಡುವ ಪ್ರಯತ್ನ ಮಾಡಿದರು. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

4. BBMP ಮೀಸಲಾತಿ ಎಡವಟ್ಟು: ಸಂಪೂರ್ಣ ವಾರ್ಡ್‌ ಮಹಿಳಾ ಮೀಸಲು, SC-ST ಪ್ರಮಾಣ ಕಡಿತ
ಅನೇಕ ತಿಂಗಳುಗಳ ನನೆಗುದಿಗೆ, ನ್ಯಾಯಾಲಯದ ಚಾಟಿ ನಂತರ ರೂಪಿಸಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವಾರ್ಡ್‌ ಮೀಸಲಾತಿಯನ್ನು, ಚುನಾವಣೆಯನ್ನು ಮುಂದೂಡುವ ಸಲುವಾಗಿಯೇ ರೂಪಿಸಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಎಸ್‌ಸಿಎಸ್‌ಟಿ ಮೀಸಲಾತಿ, ಮಹಿಳಾ ಮೀಸಲಾತಿ ನಿಗದಿಯಲ್ಲಿ ಯದ್ವಾತದ್ವ ದಂಡ ಚಲಾಯಿಸಲಾಗಿದೆ. ಒಂದಿಡೀ ವಿಧಾನಸಭಾ ಕ್ಷೇತ್ರವನ್ನೇ ಮಹಿಳಾ ಮೀಸಲು ಮಾಡಿದ ಉದಾಹರಣೆಯೂ ಇದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

5. ಟ್ರೋಲ್‌ ಆದ ಡಬಲ್‌ ರೈಡಿಂಗ್‌ ನಿಷೇಧ ನಿಯಮ, ಕೆಲವೇ ಗಂಟೆಗಳಲ್ಲಿ ವಾಪಸ್‌!
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸರು ಜಾರಿಗೆ ತರಲು ಉದ್ದೇಶಿಸಿದ್ದ ದ್ವಿಚಕ್ರ ವಾಹನಗಳಲ್ಲಿ ಡಬಲ್‌ ರೈಡಿಂಗ್‌ ನಿಷೇಧ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್‌ ಪಡೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತು ದಿನಗಳ ಅವಧಿಯಲ್ಲಿ ಮೂರು ಕೊಲೆಗಳು ಸಂಭವಿಸಿವೆ. ಬೆಳ್ಳಾರೆ ಸಮೀಪ ಕಳಂಕದ ಮಸೂದ್‌, ಪ್ರವೀಣ್‌ ನೆಟ್ಟಾರು ಮತ್ತು ಸುರತ್ಕಲ್‌ ಫಾಜಿಲ್‌ ಅವರನ್ನು ದುಷ್ಕರ್ಮಿಗಳು ಕೊಂದು ಹಾಕಿದ್ದಾರೆ. ಈ ರೀತಿ ಸಾಲು ಸಾಲು ಹತ್ಯೆಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಿದೆ. ಇದನ್ನು ತಡೆಯುವುದು ಹೇಗೆ ಎಂದು ಯೋಚಿಸಿದಾಗ ಪೊಲೀಸರಿಗೆ ಹೊಳೆದ ಐಡಿಯಾಗಳಲ್ಲಿ ಒಂದು ದ್ವಿಚಕ್ರ ವಾಹನಗಳಲ್ಲಿ ಡಬಲ್‌ ರೈಡಿಂಗ್‌ನ್ನು ನಿಷೇಧಿಸುವುದು. ಎಡಿಜಿಪಿ ಆಗಿರುವ ಅಲೋಕ್‌ ಕುಮಾರ್‌ ಅವರು ಮಧ್ಯಾಹ್ನದ ಹೊತ್ತಿಗೆ ಈ ನಿಯಮವನ್ನು ಪ್ರಕಟಿಸಿದರು. ಗುರುವಾರ ಸಂಜೆಯಿಂದಲೇ ಈ ನಿಯಮ ಜಾರಿಗೆ ಬರುವುದಾಗಿ ಹೇಳಿದ್ದರು. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

6. Heavy Rain | ಧಾರಾಕಾರ ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋದ ರೈತ
ಇಲ್ಲಿನ ಮಾನ್ವಿ ತಾಲೂಕಿನಲ್ಲಿ ವ್ಯಾಪಕ ಮಳೆಯಿಂದ (Heavy Rain) ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರೈತನೊಬ್ಬ ಕೊಚ್ಚಿ ಹೋದ ದುರ್ಘಟನೆ ಬುಧವಾರ ನಡೆದಿದೆ. ಜಮೀನು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುವಾಗ ವೆಂಕಟೇಶ (36) ಎಂಬುವವರು ಕೊಚ್ಚಿ ಹೋಗಿದ್ದಾರೆ. ಕುರ್ಡಿ ಗ್ರಾಮದ ಹೊರವಲಯದಲ್ಲಿ ಬುಧವಾರ ಸುರಿದ ಧಾರಾಕಾರ ಮಳೆಗೆ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿತ್ತು. ಆದರೆ, ಇದನ್ನು ಲೆಕ್ಕಿಸದೇ ವೆಂಕಟೇಶ ದಾಟಲು ಹೋಗಿದ್ದಾರೆನ್ನಲಾಗಿದೆ. ಆಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ವಿಷಯ ತಿಳಿದ ಕೂಡಲೇ ಮಾನ್ವಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯವನ್ನು ನಡೆಸಿದ್ದಾರೆ. ಆದರೆ, ಇನ್ನೂ ವೆಂಕಟೇಶ ಪತ್ತೆಯಾಗದ ಹಿನ್ನೆಲೆಯಲ್ಲಿ ಗುರುವಾರವೂ ಶೋಧ ಕಾರ್ಯ ಮುಂದುವರಿದಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.
Heavy Rain | ಸಂಪಾಜೆ ಘಾಟ್ ರಸ್ತೆಯಲ್ಲಿ ಬಿರುಕು; ಸಾಲುಗಟ್ಟಿ ನಿಂತ ನೂರಾರು ಲಾರಿಗಳು
Rain News | ಡ್ರೈ ಕಿಟ್‌ ಯೋಜನೆ ಮೂರು ದಿನದಲ್ಲಿ ಜಾರಿ; ಸಚಿವ ಆರ್.ಅಶೋಕ್

7. ಶಿಂಧೆ ಬಣದ ಅರ್ಜಿ ಬಗ್ಗೆ ಈಗಲೇ ನಿರ್ಧಾರ ಬೇಡ ಎಂದು ಚುನಾವಣಾ ಆಯೋಗಕ್ಕೆ ಹೇಳಿದ ಸುಪ್ರೀಂಕೋರ್ಟ್
‘ನಮ್ಮ ಬಣದಲ್ಲಿಯೇ ಹೆಚ್ಚಿನ ಶಾಸಕರು/ಸಂಸದರು ಇದ್ದಾರೆ. ಹಾಗಾಗಿ ನಮ್ಮದೇ ನಿಜವಾದ ಶಿವಸೇನೆ ಎಂದು ಏಕನಾಥ್ ಶಿಂಧೆ ಪಾಳಯದವರು ಸಲ್ಲಿಸಿರುವ ಅರ್ಜಿ ಬಗ್ಗೆ ಈಗಲೇ ಏನೂ ನಿರ್ಧಾರ ಕೈಗೊಳ್ಳಬೇಡಿ ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ ಹೇಳಿದೆ. ಮಹಾರಾಷ್ಟ್ರ ರಾಜಕಾರಣದಲ್ಲಿ ಶಿವಸೇನೆ ಎರಡು ಬಣಗಳಾಗಿದೆ. ಅದರಲ್ಲೊಂದು ಏಕನಾಥ ಶಿಂಧೆ ಬಣ, ಮತ್ತೊಂದು ಉದ್ಧವ್​ ಠಾಕ್ರೆ ಪಾಳಯ. ಇದೀಗ ಎರಡೂ ಬಣಗಳೂ ಶಿವಸೇನೆ ಮೇಲಿನ ಸಂಪೂರ್ಣ ನಿಯಂತ್ರಣಕ್ಕಾಗಿ ಜಿದ್ದಾಜಿದ್ದಿ ನಡೆಸುತ್ತಿವೆ. ಈ ಮನವಿಯನ್ನು ಸುಪ್ರೀಂಕೋರ್ಟ್​​ಗಳು ಸಲ್ಲಿಸಿವೆ ಮತ್ತು ಚುನಾವಣಾ ಆಯೋಗದ ಎದುರೂ ಇಟ್ಟಿವೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

8. ಜುಲೈನಲ್ಲಿ 3.42 ಲಕ್ಷ ವಾಹನ ಮಾರಾಟ, ಹಬ್ಬಕ್ಕೆ ಮುನ್ನ ಚೇತರಿಸಿದ ಆಟೊಮೊಬೈಲ್‌ ಇಂಡಸ್ಟ್ರಿ
ಭಾರತದ ಆಟೊಮೊಬೈಲ್‌ ವಲಯದಲ್ಲಿ ಕಳೆದ ಜುಲೈನಲ್ಲಿ ೩.೪೨ ಲಕ್ಷಕ್ಕೂ ಹೆಚ್ಚು ಪ್ರಯಾಣಿಕರ ವಾಹನಗಳು (passenger vehicle) ಮಾರಾಟವಾಗಿವೆ. ಬಿಡಿಭಾಗಗಳು ಹಾಗೂ ಸೆಮಿಕಂಡಕ್ಟರ್‌ ಚಿಪ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಚೇತರಿಕೆಯಿಂದ ಆಟೊಮೊಬೈಲ್‌ ಉತ್ಪಾದನೆ ಮತ್ತು ಮಾರಾಟ ಚುರುಕಾಗಿದೆ. ಟ್ರ್ಯಾಕ್ಟರ್‌ಗಳು ಹೊರತುಪಡಿಸಿ ಉಳಿದ ಎಲ್ಲ ವಾಹನಗಳ ಮಾರಾಟದಲ್ಲಿ ಕಳೆದ ಜುಲೈನಲ್ಲಿ ಪ್ರಗತಿ ದಾಖಲಾಗಿದೆ. ಈ ಸಲದ ಹಬ್ಬದ ಋತುವಿನಲ್ಲಿ ಭರ್ಜರಿ ಮಾರಾಟ ನಿರೀಕ್ಷಿಸಲಾಗಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

9. Airtel 5G | ಭಾರತದಲ್ಲಿ ಮೊದಲ ಬಾರಿಗೆ ಏರ್‌ಟೆಲ್‌ನಿಂದ ಇದೇ ತಿಂಗಳು 5ಜಿ ಸೇವೆ ಆರಂಭ
ಖಾಸಗಿ ವಲಯದ ಟೆಲಿಕಾಂ ಕಂಪನಿ ಏರ್‌ಟೆಲ್‌ (Airtel) ಆಗಸ್ಟ್‌ನಲ್ಲಿಯೇ ತನ್ನ ೫ಜಿ ಸೇವೆಯನ್ನು ಆರಂಭಿಸುವುದಾಗಿ ತಿಳಿಸಿದೆ. ಆಗಸ್ಟ್‌ ಅಂತ್ಯದೊಳಗೆ ೫ಜಿ ಸೇವೆ ಆರಂಭಿಸಲಾಗುವುದು. ೫ಜಿ ನೆಟ್‌ ವರ್ಕ್‌ ಅಳವಡಿಸುವುದಕ್ಕೆ ಸಂಬಂಧಿಸಿ ಎರಿಕ್ಸನ್‌, ನೋಕಿಯಾ ಮತ್ತು ಸ್ಯಾಮ್‌ಸಂಗ್‌ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಏರ್‌ಟೆಲ್‌ ತಿಳಿಸಿದೆ. ಇದರೊಂದಿಗೆ ದೇಶದಲ್ಲಿ ೫ಜಿ ಸೇವೆಯನ್ನು ಮೊದಲ ಬಾರಿಗೆ ಏರ್‌ಟೆಲ್‌ ಆರಂಭಿಸಲಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

10. Amrit Mahotsav | ಹರ್‌ ಘರ್‌ ಗೀತೆಯಲ್ಲಿ ಕನ್ನಡಿಗರನ್ನು ಪ್ರತಿನಿಧಿಸಿದ ಕೆ. ಎಲ್‌ ರಾಹುಲ್‌
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವು ಬಿಡುಗಡೆ ಮಾಡಿರುವ ಹರ್ ಘರ್‌ ಗೀತೆಯಲ್ಲಿ ಕೆ.ಎಲ್‌ ರಾಹುಲ್‌ ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ಸಂಸ್ಕೃತಿ ಸಚಿವಾಲಯವು ಈ ಹಾಡನ್ನು ಬಿಡುಗಡೆ ಮಾಡಿದ್ದು, ಕ್ರೀಡಾಪಟುಗಳನ್ನೇ ಹೆಚ್ಚು ಬಳಸಿಕೊಳ್ಳಲಾಗಿದೆ. ವಿರಾಟ್‌ ಕೊಹ್ಲಿ, ಪಿ.ವಿ ಸಿಂಧೂ, ಪಿಟಿ. ಉಷಾ ಸೇರಿದಂತೆ ಹಲವರು ಈ ಹಾಡಿನಲ್ಲಿದ್ದಾರೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಜಿಡಿಪಿಯಲ್ಲಿ ನಿರೀಕ್ಷೆ ಮೀರಿದ ಬೆಳವಣಿಗೆ ಹರ್ಷದಾಯಕ

ಪ್ರತಿ ತ್ರೈಮಾಸಿಕದಲ್ಲೂ ದೇಶದ ಜಿಡಿಪಿಯನ್ನು ಅಂದಾಜಿಸಲಾಗುತ್ತದೆ. ಏರಿಳಿತ ಇರುವುದೇ ಆಗಿರುತ್ತದೆ. ಸಾಮಾನ್ಯವಾಗಿ ಒಂದು ವರ್ಷದಿಂದ ಇನ್ನೊಂದಕ್ಕೆ 1-2ಕ್ಕಿಂತ ಅಧಿಕ ಜಿಡಿಪಿ ವ್ಯತ್ಯಾಸ ಆಗುವುದು ಅಪರೂಪ. ಆದರೆ ಭಾರತದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಬಹಳಷ್ಟು ವೇಗವಾಗಿದೆ. ಹೀಗಾಗಿ ಕ್ಷಿಪ್ರಗತಿಯ ಜಿಡಿಪಿ ಬೆಳವಣಿಗೆ ಕಾಣಿಸಿದೆ.

VISTARANEWS.COM


on

GDP Growth
Koo

ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP Growth) ಶೇಕಡಾ 8.4ಕ್ಕೆ ಏರಿಕೆಯಾಗಿದೆ ಎಂದು ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯ ಗುರುವಾರ ಹೇಳಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಶೇ.4.3ರಷ್ಟಿತ್ತು. ಹೀಗಾಗಿ ನಿರೀಕ್ಷೆ ಮೀರಿದ ಬೆಳವಣಿಗೆಯಾಗಿದೆ. “2023-24ರ ಮೂರನೇ ತ್ರೈಮಾಸಿಕದಲ್ಲಿ 8.4% ಜಿಡಿಪಿ ಬೆಳವಣಿಗೆಯು ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ. ತ್ವರಿತ ಆರ್ಥಿಕ ಬೆಳವಣಿಗೆಯನ್ನು ಕಾಣಲು ನಮ್ಮ ಪ್ರಯತ್ನಗಳು ಮುಂದುವರಿಯಲಿದೆ. ಇದು 140 ಕೋಟಿ ಭಾರತೀಯರಿಗೆ ಉತ್ತಮ ಜೀವನವನ್ನು ನಡೆಸಲು, ವಿಕಸಿತ​ ಭಾರತದ ಬೆಳವಣಿಗೆಗೆ ಸಹಾಯ ಮಾಡುತ್ತದೆ” ಎಂದು ಪ್ರಧಾನಿ ಹೇಳಿದ್ದಾರೆ.

2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ.ಗೆ ಅಂದಾಜಿಸಲಾಗಿದೆ. ಇದು 2022-23ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ 8.4ರಷ್ಟು ಬೆಳವಣಿಗೆಯ ದರವನ್ನು ತೋರಿಸಿದೆ. ವಿಶ್ಲೇಷಕರು ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 7ಕ್ಕಿಂತ ಕಡಿಮೆ ಎಂದು ಅಂದಾಜಿಸಿದ್ದರು. ಆದರೆ, ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶವು ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ ಎಂದು ತೋರಿಸಿದೆ. ನಿರ್ಮಾಣ ಕ್ಷೇತ್ರದ ಎರಡಂಕಿ ಬೆಳವಣಿಗೆ ದರ (ಶೇ.10.7), ಉತ್ಪಾದನಾ ವಲಯದ ಬೆಳವಣಿಗೆ ದರ (ಶೇ.8.5) 2024ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಹೆಚ್ಚಿಸಿದೆ ಎಂದು ಸರಕಾರ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 8.4ರಷ್ಟು ಬೆಳವಣಿಗೆಯ ಹಿಂದಿನ ಪ್ರಮುಖ ಕಾರಣವೇ ಈ ಕ್ಷೇತ್ರಗಳಲ್ಲಿನ ಬೆಳವಣಿಗೆಯಾಗಿದೆ. ಹೀಗಾಗಿ, ಈಗ ಪೂರ್ಣ ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ಶೇಕಡಾ 7.3ಕ್ಕಿಂತ ಹೆಚ್ಚಾಗುತ್ತದೆ ಎಂದು ಸಾಂಖ್ಯಿಕ ಸಚಿವಾಲಯ ನಿರೀಕ್ಷಿಸಿದೆ. ಇದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಭಾರತದ ಸ್ಥಾನಮಾನವನ್ನು ದೃಢಪಡಿಸಿದೆ.

ಪ್ರತಿ ತ್ರೈಮಾಸಿಕದಲ್ಲೂ ದೇಶದ ಜಿಡಿಪಿಯನ್ನು ಅಂದಾಜಿಸಲಾಗುತ್ತದೆ. ಏರಿಳಿತ ಇರುವುದೇ ಆಗಿರುತ್ತದೆ. ಸಾಮಾನ್ಯವಾಗಿ ಒಂದು ವರ್ಷದಿಂದ ಇನ್ನೊಂದಕ್ಕೆ 1-2ಕ್ಕಿಂತ ಅಧಿಕ ಜಿಡಿಪಿ ವ್ಯತ್ಯಾಸ ಆಗುವುದು ಅಪರೂಪ. ಆದರೆ ಭಾರತದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಬಹಳಷ್ಟು ವೇಗವಾಗಿದೆ. ಹೀಗಾಗಿ ಕ್ಷಿಪ್ರಗತಿಯ ಜಿಡಿಪಿ ಬೆಳವಣಿಗೆ ಕಾಣಿಸಿದೆ. ಇದನ್ನೇ ಷೇರು ಮಾರುಕಟ್ಟೆಯಲ್ಲೂ ಕಾಣಬಹುದು. ಕಳೆದ ಒಂದು ವರ್ಷದಿಂದ ದೇಶದ ಷೇರು ಮಾರುಕಟ್ಟೆ ಗಣನೀಯವಾಗಿ ಕುಸಿದಿಲ್ಲ. ಆದರೆ ಗಣನೀಯ ಹೆಚ್ಚಳಗಳು ಆಗಿವೆ. ಇದು ದೇಶದ ವಾಣಿಜ್ಯ ವಹಿವಾಟಿನಲ್ಲಿ, ಕೈಗಾರಿಕಾ ವಲಯದ ಮೇಲೆ ಬಂಡವಾಳೋದ್ಯಮಿಗಳು ಹಾಗೂ ಷೇರುದಾರರು ಇಟ್ಟಿರುವ ಭರವಸೆಯನ್ನು ತೋರಿಸುತ್ತದೆ. ಹಣದುಬ್ಬರದ ಕಾಲದಲ್ಲೂ ದೇಶ ತನ್ನ ಜಿಡಿಪಿಯ ಗತಿಯನ್ನು ಕಾಯ್ದುಕೊಂಡಿದೆ. ಇದು ಶ್ಲಾಘನೀಯ. ಜಿಡಿಪಿ ಸತತವಾಗಿ ಏರುತ್ತಿದ್ದಾಗ, ಸಾಮಾನ್ಯ ಮನುಷ್ಯನ ಕೈಗೂ ಸಾಕಷ್ಟು ಹಣದ ಹರಿವು ಇರುತ್ತದೆ. ಹೀಗಾಗಿ ಹಣದುಬ್ಬರದ ದುಷ್ಪರಿಣಾಮ ಅಷ್ಟಾಗಿ ತಟ್ಟುವುದಿಲ್ಲ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ವಿದ್ಯುತ್‌ ದರ ಇಳಿಕೆ ಶ್ಲಾಘನೀಯ ಕ್ರಮ

ಒಂದು ದೇಶದ ಮಾರುಕಟ್ಟೆಯಲ್ಲಿ ಈ ಪ್ರಮಾಣದ ಬೆಳವಣಿಗೆಯಾಗುವುದು, ಜಿಡಿಪಿ ನಿರಂತರವಾಗಿ ಪ್ರಗತಿ ತೋರಿಸುವುದು ಯಾವಾಗ ಎಂದರೆ, ಆ ದೇಶದ ಮಾರುಕಟ್ಟೆಯಲ್ಲಿ ಒಳಗಿನ ಹಾಗೂ ಹೊರಗಿನ ಹೂಡಿಕೆದಾರರ ವಿಶ್ವಾಸ ಹೆಚ್ಚಿದಾಗ. ಅಂದರೆ ಇಲ್ಲಿ ಒಳ್ಳೆಯ ಹೂಡಿಕೆ ಮಾಡಬಹುದು, ಸುರಕ್ಷಿತ ವಾತಾವರಣವಿದೆ, ಇಲ್ಲಿ ಪ್ರಗತಿಯ ಸಾಧ್ಯತೆಯಿದೆ ಎಂದು ತೋರಿದಾಗ ಮಾತ್ರ ಅಂಥಲ್ಲಿ ಹಣ ಹೂಡಲಾಗುತ್ತದೆ. ಇಂತಹ ಆತ್ಮವಿಶ್ವಾಸದ ಪರಿಣಾಮವಾಗಿಯೇ ದೇಶದ ಜಿಡಿಪಿ ಏರಿಕೆಯಾಗಿದೆ ಹಾಗೂ ಈಕ್ವಿಟಿ ಮಾರುಕಟ್ಟೆ ಉತ್ತುಂಗ ಮುಟ್ಟಿದೆ. ನಾವು ವಿಶ್ವದ ದೊಡ್ಡ ದೇಶಗಳನ್ನು ಮಿತ್ರರನ್ನಾಗಿಸಿಕೊಂಡು ಬಹುರಾಷ್ಟ್ರೀಯ ಕಂಪನಿಗಳನ್ನು ನಮ್ಮ ದೇಶದ ಮಾರುಕಟ್ಟೆಗೆ ಬೇಕಾದಂತೆ ಕುಣಿಸುತ್ತಿದ್ದೇವೆ. ನಮ್ಮ ಜನಸಂಖ್ಯಾ ಬಂಡವಾಳ, ದುಡಿಯುವ ವರ್ಗ ನಮ್ಮ ಮಾರುಕಟ್ಟೆಗೆ ಪೂರಕವಾಗಿದೆ. ಇಲ್ಲಿನ ಪ್ರತಿಭೆಗಳು ಯುಎಸ್‌, ಯುಕೆಯ ಆರ್ಥಿಕತೆಗಳನ್ನು ಕಟ್ಟುತ್ತಿವೆ. ಜಿಡಿಪಿ ಏರಿಕೆಯ ಪರಿಣಾಮವು, ಪ್ರಧಾನಿಯವರು ಹೇಳಿದಂತೆ ನಮ್ಮ ಜನತೆಯ ಬಡತನದ ತ್ವರಿತ ನಿರ್ಮೂಲನೆ ಮತ್ತು ಬದುಕಿನ ಸ್ಥಿತಿಗತಿ ಸುಧಾರಣೆಗೂ ಮೂಲವಾಗಬೇಕು. ಆಗ ಜಿಡಿಪಿ ಬೆಳವಣಿಗೆಗೆ ಹೆಚ್ಚಿನ ಅರ್ಥ ಬರುತ್ತದೆ.

Continue Reading

ಪ್ರಮುಖ ಸುದ್ದಿ

Vistara Top 10 News : ವಿಧಾನಸೌಧದೊಳಗೇ ಕಾಂಗ್ರೆಸ್‌ ಬೆಂಬಲಿಗರಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಮತ್ತಿತರ ಪ್ರಮುಖ ಸುದ್ದಿಗಳು

Vistara Top 10 News : ಇಡೀ ದಿನ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Top 10 news
Koo

1.ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ
ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿತ್ತು. ಗೆಲುವು ಸಾಧಿಸಿದ ಕಾಂಗ್ರೆಸ್‌ನ ಮೂವರು ಸದಸ್ಯರ ಪೈಕಿ ನಾಸಿರ್ ಹುಸೇನ್ ಬೆಂಬಲಿಗರು ಶತ್ರು ರಾಷ್ಟ್ರ ಪಾಕಿಸ್ತಾನ ಪರ ಜೈಕಾರ ಕೂಗಿ ಉದ್ಧಟತನ ಮೆರೆದಿದ್ದಾರೆ. ನಮ್ಮ ಭಾರತದ ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್‌ ಪರ ಘೋಷಣೆ ಕೂಗಿರುವ ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇಂಥದ್ದೊಂದು ಪಾಪಿ ಕೃತ್ಯ, ಅಕ್ಷಮ್ಯ ಅಪರಾಧವನ್ನು ವಿಧಾನಸೌಧದೊಳಗೆ ಮಾಡಿರುವುದು ಮತ್ತೊಂದು ದುರಂತವಾಗಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

2. Rajya Sabha Election: ರಾಜ್ಯಸಭೆಯಲ್ಲಿ 3 ಸೀಟು ಗೆದ್ದು ಬೀಗಿದ ಕಾಂಗ್ರೆಸ್‌; 1 ಸ್ಥಾನ ಬಿಜೆಪಿಗೆ; ಮೈತ್ರಿಗೆ ಮುಖಭಂಗ!
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ (Rajya Sabha Election) ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಒಟ್ಟು ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್‌ ಮೈತ್ರಿಯಿಂದ (BJP JDS Alliance) ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ (Kupendra Reddy) ಸೋಲು ಕಂಡಿದ್ದಾರೆ. ಈ ಮೂಲಕ ಮೈತ್ರಿಗೆ ಮುಖಭಂಗವಾದಂತೆ ಆಗಿದೆ. ಒಟ್ಟು 222 ಶಾಸಕರಿಂದ ಮತದಾನ ಮಾಡಿದ್ದಾರೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : Rajya sabha Election: ಎಸ್‌.ಟಿ. ಸೋಮಶೇಖರ್‌ ಅಡ್ಡಮತ; ಬಿಜೆಪಿಯಿಂದ ಏನು ಕ್ರಮ? ಶಾಸಕತ್ವ ಉಳಿಯುತ್ತಾ?
ಈ ಸುದ್ದಿಯನ್ನೂ ಓದಿ : Rajyasabha Election : ದ್ರೋಹ ಎಸಗಿದ ಸೋಮಶೇಖರ್‌ ವಿರುದ್ಧ ಸಿಡಿದ ಬಿಜೆಪಿ; ಪ್ರತಿಕೃತಿಗೆ ಬೆಂಕಿ, ಚಪ್ಪಲಿ ಏಟು

3. 7ನೇ ವೇತನ ಆಯೋಗದ ವರದಿ ಬಂದ ನಂತರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಸಿಎಂ ಭರವಸೆ
ಬೆಂಗಳೂರು: ಪಂಚ ಗ್ಯಾರಂಟಿಗಳ ಜಾರಿಯಿಂದ ಉಂಟಾದ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : ರಾಜ್ಯ ಸರ್ಕಾರಿ ನೌಕರರಿಗೆ ಜುಲೈನಿಂದ ಶೇ.23 ವೇತನ ಹೆಚ್ಚಳ ಮಾಡಿ: ಸಿ.ಎಸ್‌.ಷಡಾಕ್ಷರಿ ಒತ್ತಾಯ

4. ಗಗನಯಾನ ಯಾತ್ರಿಗಳ ಹೆಸರು ರಿವೀಲ್‌ ಮಾಡಿದ ಮೋದಿ; ಇವರೇ ಸಾರಥಿಗಳು
ತಿರುವನಂತಪುರಂ: ಭಾರತದ ಮಹತ್ವಾಕಾಂಕ್ಷೆಯ, ಮೊದಲ ಮಾನವಸಹಿತ ಗಗನಯಾತ್ರೆಯಾದ ‘ಗಗನಯಾನ’ಕ್ಕೆ (Gaganyaan Mission) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾನವ ಸಹಿತ ಗಗನಯಾನ ಕೈಗೊಳ್ಳುವ ಗಗನಯಾತ್ರಿಗಳ ಹೆಸರುಗಳನ್ನು ಘೋಷಿಸಿದ್ದಾರೆ. ಇದರೊಂದಿಗೆ ಮುಂದಿನ ವರ್ಷ ಕೈಗೊಳ್ಳುವ ಇಸ್ರೋ ಮಿಷನ್‌ಗೆ ಗಗನಯಾತ್ರಿಗಳನ್ನು ಅಂತಿಮಗೊಳಿಸಿದಂತಾಗಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : ವಿಸ್ತಾರ Explainer: Gaganyaan: ನಾಲ್ವರು ಗಗನಯಾನಿಗಳಲ್ಲಿ ಮಹಿಳೆ ಏಕಿಲ್ಲ?

5. Money Guide: ಗುಡ್‌ನ್ಯೂಸ್‌: ಕಿಸಾನ್‌ ಸಮ್ಮಾನ್‌ ನಿಧಿಯ 16ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಯಾವಾಗ ಸಿಗಲಿದೆ?
ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 16ನೇ ಕಂತು ಬಿಡುಗಡೆ ದಿನ ನಿಗದಿ ಪಡಿಸಲಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

6. IPL 2024 : ಐಪಿಎಲ್​ ಟಿಕೆಟ್​ ಖರೀದಿ ಹೇಗೆ ಮತ್ತು ಎಲ್ಲಿ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರ 17 ನೇ ಆವೃತ್ತಿಯ ಭಾಗಶಃ ವೇಳಾಪಟ್ಟಿ ಬಿಸಿಸಿಐ ಫೆಬ್ರವರಿ 22 ರಂದು ಬಹಿರಂಗಪಡಿಸಿದೆ. ಮುಂಬರುವ ಆವೃತ್ತಿಯು ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 7 ರವರೆಗಿನ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

7. RBI Fine: ಎಸ್‌ಬಿಐ ಸೇರಿ 3 ಬ್ಯಾಂಕ್‌ಗಳಿಗೆ 3 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಇದು
ಮುಂಬೈ: ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾರ್ಚ್‌ 15ರಿಂದ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ವಹಿವಾಟು ಸ್ಥಗಿತಗೊಳಿಸಿ ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ದೇಶದ 3 ಬ್ಯಾಂಕ್‌ಗಳಿಗೆ ಆರ್‌ಬಿಐ ಸುಮಾರು 3 ಕೋಟಿ ರೂ. ದಂಡ ವಿಧಿಸಿದೆ. ಭಾರತೀಯ ಸ್ಟೇಟ್‌ ಬ್ಯಾಂಕ್‌ (SBI), ಕೆನರಾ ಬ್ಯಾಂಕ್‌ ಹಾಗೂ ಸಿಟಿ ಯೂನಿಯನ್‌ ಬ್ಯಾಂಕ್‌ಗಳಿಗೆ (City Union Bank) ಸುಮಾರು 3 ಕೋಟಿ ರೂ. ದಂಡ ವಿಧಿಸಲಾಗಿದೆ. ಆರ್‌ಬಿಐ ನಿಬಂಧನೆಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

8. Actor Rajinikanth: ಬಾಲಿವುಡ್‌ ಖ್ಯಾತ ನಿರ್ಮಾಪಕರೊಂದಿಗೆ ಕೈ ಜೋಡಿಸಿದ ರಜನಿಕಾಂತ್‌; ತಲೈವಾ ಹೊಸ ಚಿತ್ರ ಯಾವಾಗ?
ಮುಂಬೈ: ದಕ್ಷಿಣ ಭಾರತದ ಸೂಪರ್‌ ಸ್ಟಾರ್‌ ರಜನಿಕಾಂತ್‌ (Rajinikanth) ಈ ಇಳಿವಯಸ್ಸಿನಲ್ಲಿಯೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಒಂದರ ಹಿಂದೆ ಒಂದರಂತೆ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಇನ್ನೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ ಎನ್ನುವ ಸುದ್ದಿ ಜೋರಾಗಿ ಹಬ್ಬಿದೆ. ಬಾಲಿವುಡ್‌ ನಿರ್ಮಾಪಕ ಸಾಜಿದ್‌ ನಾಡಿಯಾವಾಲ (Sajid Nadiadwala) ಅವರೊಂದಿಗೆ ತಲೈವಾ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಸಾಜಿದ್‌ ನಾಡಿಯಾವಾಲ ಮಾಹಿತಿ ನೀಡಿದ್ದಾರೆ. ಆದರೆ ಯಾವ ಚಿತ್ರ, ಯಾವಾಗ ಸೆಟ್ಟೇರಲಿದೆ ಮುಂತಾದ ವಿವರ ಇನ್ನೂ ಬಹಿರಂಗವಾಗಿಲ್ಲ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

9 .PM Narendra Modi: ಕೇರಳದಲ್ಲಿ ಲಾಠಿ ಚಾರ್ಜ್‌, ದಿಲ್ಲಿಯಲ್ಲಿ ಚಾಯ್-‌ ಸಮೋಸಾ: ಮೋದಿ ಹೀಗೆ ಹೇಳಿದ್ದೇಕೆ?
ತಿರುವನಂತಪುರಂ: ಕಾಂಗ್ರೆಸ್ (congress) ಮತ್ತು ಎಡಪಕ್ಷಗಳು (left parties) ಇತರ ರಾಜ್ಯಗಳಲ್ಲಿ ಬಿಎಫ್‌ಎಫ್ (Best friends forever- ಬೆಸ್ಟ್‌ ಫ್ರೆಂಡ್ಸ್‌ ಫಾರೆವರ್-‌ ಶಾಶ್ವತ ಸ್ನೇಹಿತರು) ಆಗಿದ್ದಾರೆ. ಆದರೆ ಕೇರಳದಲ್ಲಿ ಬದ್ಧ ವೈರಿಗಳು (enemies) ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಂಗಳವಾರ ವ್ಯಂಗ್ಯವಾಡಿದ್ದಾರೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

10. ವಿಮೆ ದುಡ್ಡಿನ ಆಸೆಗೆ ತನ್ನ ಕಾಲನ್ನೇ ಕತ್ತರಿಸಿಕೊಂಡ; ಈಗ ಕಾಸೂ ಸಿಗಲಿಲ್ಲ, ಕಾಲೂ ಇಲ್ಲ!
ಮಿಸ್ಸೌರಿ: ಅಮೆರಿಕದ ವ್ಯಕ್ತಿಯೊಬ್ಬರು ವಿಮೆಯ ದುಡ್ಡಿಗಾಗಿ ತನ್ನ ಕಾಲನ್ನೇ ಕತ್ತರಿಸಿಕೊಂಡ ಪ್ರಸಂಗ (Shocking News) ಬೆಳಕಿಗೆ ಬಂದಿದೆ. ಆತನ ಮೋಸ ಬಯಲಿಗೆ ಬಂದ ಬಳಿಕ ದುಡ್ಡೂ ಸಿಗಲಿಲ್ಲ, ಕೈಕಾಲು ಕೂಡ ಇಲ್ಲ ಎಂಬ ಪರಿಸ್ಥಿತಿ ಎದುರಾಗಿದೆ. ವಿಲ್ಲೋ ಸ್ಪ್ರಿಂಗ್ಸ್​ ಎಂಬ 60 ವರ್ಷದ ವ್ಯಕ್ತಿ ಮೋಸ ಮಾಡಲು ಹೋಗಿ ಅಂಗಾಂಗಗಳನ್ನೇ ಕಳೆದುಕೊಂಡಿದ್ದಾನೆ. ಆತ ತನ್ನ ಕಾಲುಗಳನ್ನು ಬೇರೆಯವರಿಂದ ಕತ್ತರಿಸಿಕೊಂಡು ಬಕೆಟ್​ ಒಂದರಲ್ಲಿ ಅಡಗಿಸಿಟ್ಟಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading

ಕ್ರೀಡೆ

Vistara Top 10 News : ಬೃಹತ್​ ರೈಲ್ವೆ ಪ್ರಾಜೆಕ್ಟ್‌ಗಳಿಗೆ ಮೋದಿ ಚಾಲನೆ, ಜಿಲ್ಲಾ ಮಟ್ಟದಲ್ಲೂ ಉದ್ಯೋಗ ಮೇಳ ಇತ್ಯಾದಿ ಪ್ರಮುಖ ಸುದ್ದಿಗಳು

Vistara Top 10 News : ಇಡೀ ದಿನ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Top 10 news
Koo

1.2000 ರೈಲ್ವೆ ಪ್ರಾಜೆಕ್ಟ್‌ಗಳಿಗೆ ಪಿಎಂ ಚಾಲನೆ; ಜೂನ್‌ನಿಂದ 3ನೇ ಅವಧಿಗೆ ಸರ್ಕಾರ ಎಂದ ಮೋದಿ
ನವದೆಹಲಿ: 41 ಸಾವಿರ ಕೋಟಿ ರೂ. ವೆಚ್ಚದ 2000 ರೈಲ್ವೆ ಪ್ರಾಜೆಕ್ಟ್‌ಗಳನ್ನು (2000 Railway Projects) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಮೋದಿ ಅವರು, ಈ ಮೊದಲು ರೈಲ್ವೆ ಇಲಾಖೆ (Railway Department) ಎಂದರೆ ನಷ್ಟ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಅದೇ ರೈಲ್ವೆ ಪರಿವರ್ತನೆಯ ಬಹುದೊಡ್ಡ ಶಕ್ತಿಯಾಗಿ ಬದಲಾಗಿದೆ ಎಂದು ಹೇಳಿದರು. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Railway Projects : ರಾಜ್ಯದಲ್ಲಿ ರೈಲ್ವೆ ಕ್ರಾಂತಿಗೆ ಮುನ್ನುಡಿ ಬರೆದ ಮೋದಿ,‌ 15 ನಿಲ್ದಾಣ ಮೇಲ್ದರ್ಜೆಗೆ

2. Job Fair: ಇನ್ನು ಪ್ರತಿ ವರ್ಷ ಜಿಲ್ಲಾ ಮಟ್ಟದಲ್ಲೂ ಉದ್ಯೋಗ ಮೇಳ; ಪೂರಕ ತರಬೇತಿ
ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ “ಯುವ ಸಮೃದ್ಧಿ ಸಮ್ಮೇಳನ – 2024” ಅಡಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ (Job Fair) 1,10,000ಕ್ಕೂ ಅಧಿಕ ಉದ್ಯೋಗವಕಾಶಗಳಿದ್ದು, 600ಕ್ಕೂ ಅಧಿಕ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಿವೆ. ಈ ಸರ್ಕಾರದ ಅವಧಿವರೆಗೆ ಕೌಶಲ್ಯಾಧಾರಿತ ತರಬೇತಿಯೊಂದಿಗೆ ಉದ್ಯೋಗ ಮೇಳಗಳನ್ನು ನಿರಂತರವಾಗಿ ಆಯೋಜಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಪ್ರಸ್ತುತ ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳವನ್ನು ವರ್ಷಕ್ಕೆ ಒಮ್ಮೆ ಆಯೋಜಿಸಲಾಗುವುದರ ಜತೆಗೆ ಜಿಲ್ಲಾ ಮಟ್ಟದಲ್ಲಿಯೂ ಆಯೋಜಿಸಲು ತೀರ್ಮಾನಿಸಲಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

3. Rajya Sabha Election: ಮೂರು ಪಕ್ಷಗಳಲ್ಲಿ ವಿಪ್‌ ಜಾರಿ; ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ಗೆ ಶಿಫ್ಟ್
ಬೆಂಗಳೂರು: ಮಂಗಳವಾರ (ಫೆ. 26) ನಡೆಯಲಿರುವ ರಾಜ್ಯಸಭಾ ಚುನಾವಣಾ (Rajya Sabha Election) ಕಣ ರಂಗೇರಿದೆ. ಇದಕ್ಕಾಗಿ ಈಗಾಗಲೇ “ನಂಬರ್‌ ಗೇಮ್‌” ಸಹ ಆರಂಭವಾಗಿದೆ. ಮೂರೂ ರಾಜಕೀಯ ಪಕ್ಷಗಳೂ ತಂತ್ರಗಾರಿಕೆಯಲ್ಲಿ ತೊಡಗಿವೆ. ಆಡಳಿತ ಪಕ್ಷ ಕಾಂಗ್ರೆಸ್‌ಗೆ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಷ್ಟು ಸಂಖ್ಯಾಬಲ ಇದೆ. ಆದರೆ, ಇದಕ್ಕೆ ಶಾಸಕರೊಬ್ಬರ ನಿಧನದಿಂದ ಒಂದು ಮತದ ಕೊರತೆ ಎದುರಾಗಿದೆ. ಅಡ್ಡ ಮತದಾನದ (Cross voting) ಭೀತಿಯೂ ಎದುರಾಗಿದ್ದರಿಂದ ರೆಸಾರ್ಟ್‌ಗೆ ಶಿಫ್ಟ್‌ (Resort Politics) ಆಗಿದೆ. ಈ ನಡುವೆ ಮೂರೂ ರಾಜಕೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ತಮ್ಮ ತಮ್ಮ ಶಾಸಕರಿಗೆ ವಿಪ್‌ ಜಾರಿ (Whip issue) ಮಾಡಿವೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

4. 2024: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 384 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) (kpsc recruitment 2024) ಗೆಜೆಟೆಡ್‌ ಪ್ರೊಬೆಷನರಿಯ (ಕೆಎಎಸ್) (KAS Recruitment 2024) ಗ್ರೂಪ್‌ “ಎ” ಮತ್ತು ಗ್ರೂಪ್‌ “ಬಿ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್‌ ಕರ್ನಾಟಕ ಹಾಗೂ ಉಳಿಕೆ ವೃಂದಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಒಟ್ಟು 384 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸುಮಾರು ಆರು ವರ್ಷಗಳ ನಂತರ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

5. ದೇಶದಲ್ಲಿ ಬಡವರ ಸಂಖ್ಯೆ 5%ಕ್ಕಿಂತ ಇಳಿಕೆ; ಆಹಾರಕ್ಕಿಂತ ಓಡಾಟ, ಮನರಂಜನೆಗೇ ಹೆಚ್ಚು ಖರ್ಚು!
ಹೊಸದಿಲ್ಲಿ: ದೇಶದಲ್ಲಿ ಬಡವರ ಜನಸಂಖ್ಯೆಯು (India Poverty) ಈಗ ಶೇಕಡಾ 5ಕ್ಕಿಂತ ಕಡಿಮೆಯಾಗಿದೆ ಎಂದು ನೀತಿ ಆಯೋಗದ (NITI Aayog) ʼಬಳಕೆ ಮತ್ತು ವೆಚ್ಚದ ಸಮೀಕ್ಷೆಯ ವರದಿ’ ತಿಳಿಸಿದೆ. ಭಾರತೀಯರು ಆಹಾರಕ್ಕಿಂತ ಸಾರಿಗೆ ಹಾಗೂ ಇತರ ಸಂಗತಿಗಳ ಮೇಲೆಯೇ ಹೆಚ್ಚು ಖರ್ಚು ಮಾಡುತ್ತಾರೆ ಎಂಬುದನ್ನೂ ಈ ವರದಿ ತಿಳಿಸಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

6. Arvind Kejriwal : ʼತಪ್ಪಾಯ್ತುʼ ಎಂದ ಕೇಜ್ರಿವಾಲ್;‌ ʼಆಯ್ತು ಬಿಡಿʼ ಎಂದ ಸುಪ್ರೀಂ ಕೋರ್ಟ್;‌ ಯಾವ ಕೇಸ್?
ಹೊಸದಿಲ್ಲಿ: 2018ರ ಮಾನನಷ್ಟ ಮೊಕದ್ದಮೆಯೊಂದರಲ್ಲಿ (Defamation Case) ದಿಲ್ಲಿ ಮುಖ್ಯಮಂತ್ರಿ (Delhi CM) ಮತ್ತು ಎಎಪಿ ನಾಯಕ (AAP leader) ಅರವಿಂದ ಕೇಜ್ರಿವಾಲ್ (Arvind Kejriwal) ʼನನ್ನಿಂದ ಪ್ರಮಾದವಾಗಿದೆʼ ಎಂದು ಒಪ್ಪಿಕೊಂಡಿದ್ದಾರೆ. ಇದನ್ನು ಮನ್ನಿಸಿದ ಸುಪ್ರೀಂ ಕೋರ್ಟ್‌ (Supreme Court), ಕೇಜ್ರಿವಾಲ್‌ ವಿರುದ್ಧ ಯಾವುದೇ ದಂಡನೆಯ ಕ್ರಮಗಳನ್ನು ತೆಗೆದುಕೊಳ್ಳದಂತೆ ಕೆಳಗಿನ ನ್ಯಾಯಾಲಯಕ್ಕೆ ಸೂಚಿಸಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

7. Pankaj Udhas: ‘ಚಂದಕ್ಕಿಂತ ಚಂದ….’ ಗಜಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ
ಮುಂಬೈ: ಖ್ಯಾತ ಗಜಲ್ ಗಾಯಕ (Ghazal Singer) ಪಂಕಜ್ ಉದಾಸ್ (Pankaj Udhas) ಅವರು ತಮ್ಮ 72ನೇ ವಯಸ್ಸಿನಲ್ಲಿ ಸೋಮವಾರ ನಿಧನರಾದರು. ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಪಂಕಜ್ ಉದಾಸ್ ಅವರು, ನಟ ಸುದೀಪ್ ಅವರ ‘ಸ್ಪರ್ಶ’ ಚಿತ್ರದ ‘ಚಂದಕ್ಕಿಂತ ಚಂದ… ನೀನೇ ಸುಂದರ…..’ ಗಜಲ್ ಹಾಡಿಗೆ ದನಿಯಾಗಿದ್ದರು. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

8. ಇಂಗ್ಲೆಂಡ್‌ ವಿರುದ್ಧ 4ನೇ ಟೆಸ್ಟ್‌ ಗೆಲುವು; ಭಾರತಕ್ಕೆ ಸರಣಿ
ರಾಂಚಿ: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ನಾಲ್ಕನೇ ಟೆಸ್ಟ್‌ (IND Vs ENG) ಪಂದ್ಯದಲ್ಲಿ ರೋಹಿತ್‌ ಶರ್ಮಾ (Rohit Sharma) ಬಳಗವು 5 ವಿಕೆಟ್‌ ಗೆಲುವು ಸಾಧಿಸಿದೆ. ರಾಂಚಿಯ ಜೆಎಸ್​ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಭಾರತ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 3-1 ಅಂತರದಿಂದ ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಸಮರ್ಥ ಪ್ರದರ್ಶನ ತೋರಿದ ಭಾರತ ತಂಡವು ಒಂದು ದಿನ ಬಾಕಿ ಇರುವಂತೆಯೇ ಗೆಲುವನ್ನು ತನ್ನ ಹೆಸರಿಗೆ ಬರೆದುಕೊಂಡಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

9. Namma Metro : ಬಟ್ಟೆ ಕ್ಲೀನ್‌ ಇಲ್ಲ ಎಂದು ರೈತನಿಗೆ ಅಪಮಾನ ಮಾಡಿದ ಮೆಟ್ರೋ ಸಿಬ್ಬಂದಿ ವಜಾ
ಬೆಂಗಳೂರು: ಹಾಕಿಕೊಂಡಿರುವ ಬಟ್ಟೆ ಕ್ಲೀನ್‌ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರನ್ನು ಮೆಟ್ರೋ (Namma Metro) ಪ್ರವೇಶಿಸಲು (Metro denies entry to Farmer) ಅವಕಾಶ ನೀಡದೆ ಅಪಮಾನ ಮಾಡಿದ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

10. ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ; ಇನ್‌ಸ್ಟಾಗ್ರಾಂನಲ್ಲಿ ಲಕ್ಷ ಫಾಲೋವರ್ಸ್‌ ಇದ್ದಿದ್ದೇ ಕಾರಣ?
ಜೈಪುರ: ಸಾಮಾಜಿಕ ಜಾಲತಾಣಗಳ ಯುಗದಲ್ಲಿ (Social Media Era) ಅವುಗಳಿಂದ ಜನರಿಗೆ ಭಾರಿ ಉಪಯೋಗವಾಗುತ್ತಿದೆ. ಅದರಲ್ಲೂ, ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ಯುವಕ-ಯುವತಿಯರು ಸೇರಿ ಎಲ್ಲರೂ ಫೇಮಸ್‌ ಆಗುತ್ತಿದ್ದಾರೆ. ಹಣವನ್ನೂ ಗಳಿಸುತ್ತಿದ್ದಾರೆ. ಆದರೆ, ಇದೇ ಕೆಲವರ ಬಾಳಿನಲ್ಲಿ ಮುಳುವಾಗುತ್ತಿದೆ. ಸಾಮಾಜಿಕ ಜಾಲತಾಣವು ಗಂಡ-ಹೆಂಡತಿ ಮಧ್ಯೆ ವಿರಸಕ್ಕೆ ಕಾರಣವಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ರಾಜಸ್ಥಾನದಲ್ಲಿ (Rajasthan) ವ್ಯಕ್ತಿಯೊಬ್ಬ ಪತ್ನಿಯನ್ನೇ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯು ಲಕ್ಷಾಂತರ ಫಾಲೋವರ್ಸ್‌ (Instagram Followers) ಹೊಂದಿದ್ದು, ಅವರು ರೀಲ್ಸ್‌ ಮಾಡುವುದೇ ಜಗಳ, ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading

ಟಾಪ್ 10 ನ್ಯೂಸ್

Vistara Top 10 News : ಬಿಜೆಪಿಗರನ್ನು ಪರೋಕ್ಷವಾಗಿ ಸಂವಿಧಾನ ವಿರೋಧಿಗಳು ಎಂದ ಸಿಎಂ, ನೀರು ಬಂದ್ ಮಾಡಿ ಪಾಕ್​ಗೆ ಪಾಠ ಕಲಿಸಿದ ಭಾರತ ಇತ್ಯಾದಿ ಪ್ರಮುಖ ಸುದ್ದಿಗಳು

Vistara Top 10 News : ಇಡೀ ದಿನ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Top 10 news
Koo

1. ಸಂವಿಧಾನ ಬದಲಿಸಲು ಬಂದವರನ್ನು ಅಧಿಕಾರದಿಂದ ಕಿತ್ತೊಗೆಯಿರಿ: ಸಿದ್ದರಾಮಯ್ಯ ಕರೆ
ಬೆಂಗಳೂರು: ಇಡೀ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ಧ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದ ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ. ಹೀಗಾಗಿ ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : Constitution and National Unity: ಸಂವಿಧಾನಕ್ಕೆ ಧಕ್ಕೆಯಾದ್ರೆ ದೇಶದಲ್ಲಿ ಸರ್ವಾಧಿಕಾರಿ ಆಡಳಿತ: ಮಲ್ಲಿಕಾರ್ಜುನ ಖರ್ಗೆ

2. ರಾವಿ ನದಿ ನೀರು ನಿಲ್ಲಿಸಿ ಪಾಕಿಸ್ತಾನಕ್ಕೆ ಪೆಟ್ಟು ಕೊಟ್ಟ ಕೇಂದ್ರ; ರೈತರಿಗೆ ಗುಡ್‌ ನ್ಯೂಸ್‌
ಶ್ರೀನಗರ: ಸುಮಾರು ಮೂರು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಡ್ಯಾಮ್‌ ಕಟ್ಟುವ ಮೂಲಕ ಕೇಂದ್ರ ಸರ್ಕಾರವು (Central Government) ಪಾಕಿಸ್ತಾನಕ್ಕೆ (Pakistan) ಪೆಟ್ಟು ಕೊಟ್ಟಿದೆ. 1995ರಿಂದಲೂ ನನೆಗುದಿಗೆ ಬಿದ್ದಿದ್ದ ಶಾಹ್‌ಪುರ ಕಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ರಾವಿ ನದಿಯಿಂದ (Ravi River Water) ಪಾಕಿಸ್ತಾನಕ್ಕೆ ಹರಿಯುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದರಿಂದ ಪಾಕಿಸ್ತಾನದ ಕೃಷಿಗೆ ಭಾರಿ ಪೆಟ್ಟು ಬೀಳುವ ಜತೆಗೆ ಭಾರತದ ಲಕ್ಷಾಂತರ ರೈತರಿಗೆ ಈ ನದಿಯ ನೀರಿನಿಂದ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲವಾಗಲಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

3. ದ್ವಾರಕಾದಲ್ಲಿ ಸ್ಕೂಬಾ ಡೈವಿಂಗ್‌ ಮೂಲಕ ಮಿಂಚು ಹರಿಸಿದ ಮೋದಿ; ಇಲ್ಲಿದೆ ಫೋಟೊ ಗ್ಯಾಲರಿ
ಗಾಂಧಿನಗರ: ಗುಜರಾತ್‌ನ ದ್ವಾರಕಾದಲ್ಲಿ ಇಂದು (ಫೆಬ್ರವರಿ 25) ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಉದ್ಘಾಟಿಸಿದರು. ‘ಸುದರ್ಶನ ಸೇತು’ (Sudarshan Setu) ಎಂದು ಕರೆಯಲ್ಪಡುವ ಇದು ಓಖಾ ಮತ್ತು ಬೇತ್ ದ್ವಾರಕಾ (Okha and Beyt Dwarka) ದ್ವೀಪವನ್ನು ಸಂಪರ್ಕಿಸುತ್ತದೆ. 2017ರ ಅಕ್ಟೋಬರ್‌ನಲ್ಲಿ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಈ ಸೇತುವೆಯ ಅದ್ಭುತ ಚಿತ್ರಗಳು ಇಲ್ಲಿವೆ. ಇದೇ ವೇಳೆ ಮೋದಿ ಅವರು ದ್ವಾರಕಾದಲ್ಲಿ ಸ್ಕೂಬಾ ಡೈವಿಂಗ್‌ ಮಾಡಿ ಗಮನ ಸೆಳೆದರು. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

4. ಏಕಾಏಕಿ ಮನ್‌ ಕೀ ಕಾರ್ಯಕ್ರಮ ಸ್ಥಗಿತಗೊಳಿಸಿದ ಮೋದಿ; ಕಾರಣ ಏನು?
ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ನಿರಂತರವಾಗಿ ಮನ್‌ ಕೀ ಬಾತ್‌ (Mann Ki Baat) ರೇಡಿಯೋ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪ್ರತಿ ತಿಂಗಳ ಕೊನೆಯ ಭಾನುವಾರ ರೇಡಿಯೋ ಕಾರ್ಯಕ್ರಮದ ಮೂಲಕ ಅವರು ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಾರೆ. ಹಾಗಾಗಿ, ಮನ್‌ ಕೀ ಬಾತ್‌ ರೇಡಿಯೋ ಸರಣಿಯು 110 ಕಾರ್ಯಕ್ರಮಗಳನ್ನು ಪೂರೈಸಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮನ್‌ ಕೀ ಬಾತ್‌ ಕಾರ್ಯಕ್ರಮಕ್ಕೆ ಮೂರು ತಿಂಗಳು ವಿರಾಮ ನೀಡಿದ್ದಾರೆ. ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮೋದಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : ಮನ್‌ ಕೀ ಬಾತ್‌ನಲ್ಲಿ ಬಾಗಲಕೋಟೆಯ ವೆಂಕಪ್ಪಗೆ ಮೋದಿ ಮೆಚ್ಚುಗೆ; ಇವರ ಕೊಡುಗೆ ಏನು?

5. 25 ಕೆಜಿ ಬೆಳ್ಳಿ, 10 ಕೆಜಿ ಚಿನ್ನ; 1 ತಿಂಗಳಿನಲ್ಲಿ ರಾಮ ಮಂದಿರದಲ್ಲಿ ಸಂಗ್ರಹವಾಗಿದ್ದು ಎಷ್ಟು ಕೋಟಿ ರೂ.?
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ (Ram Mandir) ಬಾಲಕ ರಾಮ (Balak Ram) ವಿಗ್ರಹದ ಪ್ರಾಣ ಪ್ರತಿಷ್ಠೆ (Pran Prathistha) ನೆರವೇರಿದೆ. ಜನವರಿ 22ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಈ ಸಮಾರಂಭ ನಡೆದಿದೆ. ಅದಾದ ಬಳಿಕ ಜನವರಿ 23ರಿಂದ ಈ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಮ ಮಂದಿರಕ್ಕೆ ಭೇಟಿ ನೀಡಿ ಬಾಲಕ ರಾಮನ ದರ್ಶನ ಮಾಡುತ್ತಿದ್ದಾರೆ. ರಾಮ ಮಂದಿರ ಸಾವರ್ಜನಿಕ ಭೇಟಿಗೆ ಮುಕ್ತವಾಗಿ ಇದೀಗ ಸುಮಾರು ಇಂದು ತಿಂಗಳು ಕಳೆದಿದ್ದು ಕೋಟ್ಯಂತರ ರೂ. ಮೌಲ್ಯದ ಕಾಣಿಕೆ ಸಂದಾಯವಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಈ ಸುದ್ದಿಗಳನ್ನೂ ಓದಿ : Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

6. ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್‌ ನಿಗೂಢ ನಾಪತ್ತೆ; ಯಾರು ಈ ಶಾರುಖ್‌ ಶೇಖ್‌?
ಪುತ್ತೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವಿಶ್ವವಿದ್ಯಾಲಯಲ್ಲಿ (Private University) ಪಿಎಚ್‌ಡಿ ಅಧ್ಯಯನ (PhD Study) ನಡೆಸುತ್ತಿದ್ದ ಪುತ್ತೂರು ಮೂಲದ ಬ್ರಾಹ್ಮಣ ಯುವತಿ ಚೈತ್ರಾ ಹೆಬ್ಬಾರ್‌ (Chaithra Hebbar Missing Case) ನಾಪತ್ತೆಯಾಗಿ ಫೆ. 25ಕ್ಕೆ ಒಂಬತ್ತು ದಿನಗಳು ಕಳೆದಿವೆ. ಫೆ. 17ರಿಂದ ನಾಪತ್ತೆಯಾಗಿರುವ ಈಕೆಯ ಬಗ್ಗೆ ಹಲವಾರು ಕಥೆಗಳು ಹರಡಿಕೊಂಡಿದ್ದು, ಪೊಲೀಸರಿಗೆ ಆಕೆಯನ್ನು ಹುಡುಕುವುದೇ ಒಂದು ಸಾಹಸವಾಗಿದೆ. ಆಕೆ ನಾಪತ್ತೆಯಾದ ದಿನದಿಂದ ಆಕೆಯೊಂದಿಗೆ ಆತ್ಮೀಯತೆಯಿಂದ ಇದ್ದ ಶಾರುಖ್‌ ಶೇಖ್‌ (Sharukh Shekh) ಎಂಬಾತ ಕೂಡಾ ನಾಪತ್ತೆಯಾಗಿದ್ದಾನೆ. ಹೀಗಾಗಿ ಇದು ಹಿಂದು-ಮುಸ್ಲಿಂ ಜೋಡಿ (Hindu Muslim) ಪಲಾಯನ, ಲವ್‌ ಜಿಹಾದ್‌ (Love Jihad) ಎಂಬಿತ್ಯಾದಿ ವ್ಯಾಖ್ಯಾನಗಳಿಗೂ ಕಾರಣವಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

7. ಅನಿಲ್ ಕುಂಬ್ಳೆ ದಾಖಲೆ ಮುರಿದ ಆರ್ ಅಶ್ವಿನ್; ಏನದು ದಾಖಲೆ?
ರಾಂಚಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ದಂತಕಥೆ ರವಿಚಂದ್ರನ್ ಅಶ್ವಿನ್ (R Ashwin) ಅವರು ಅನಿಲ್ ಕುಂಬ್ಳೆ (Anil Kumble) ಅವರ ದೀರ್ಘಕಾಲದ ದಾಖಲೆಯನ್ನು ಮುರಿದು ಭಾರತದ ನೆಲದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರಾಜ್​ಕೋಟ್​ನಲ್ಲಿ ನಡೆದ ಮೂರನೇ ಟೆಸ್ಟ್​ನಲ್ಲಿ 500 ಟೆಸ್ಟ್ ವಿಕೆಟ್​​ಗಳ ಮೈಲಿಗಲ್ಲನ್ನು ದಾಟಿದ ಅಶ್ವಿನ್ ಮತ್ತೊಮ್ಮೆ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

8. ಸಿನಿಮಾ ನಿರ್ಮಾಪಕನಿಂದ 2 ಸಾವಿರ ಕೋಟಿ ರೂ. ಡ್ರಗ್ಸ್‌ ದಂಧೆ; ಇದು ರೀಲ್‌ ಅಲ್ಲ ರಿಯಲ್‌ ಕತೆ!
ನವದೆಹಲಿ: ಮಾದಕವಸ್ತು ನಿಯಂತ್ರಣ ಬ್ಯೂರೋ (NCB) ಹಾಗೂ ದೆಹಲಿ ಪೊಲೀಸರು (Delhi Police) ಬೃಹತ್‌ ಡ್ರಗ್ಸ್‌ ಜಾಲವೊಂದನ್ನು ಭೇದಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿ ಮೌಲ್ಯದ 3,500 ಕೆ.ಜಿ ಸ್ಯೂಡೋಫೆಡ್ರಿನ್‌ (Pseudoephedrine) ಮಾದಕವಸ್ತುವನ್ನು ಅಕ್ರಮವಾಗಿ ಸಾಗಿಸಿದ ಜಾಲವೊಂದನ್ನು ಭೇದಿಸಿದ್ದು, ತಮಿಳು ಸಿನಿಮಾ ನಿರ್ಮಾಪಕನೇ (Tamil Film Producer) ಇದರ ಪ್ರಮುಖ ಪಿತೂರಿದಾರ ಎಂದು ಎನ್‌ಸಿಬಿ ಮಾಹಿತಿ ನೀಡಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

9. ಸಿಗ್ನಲ್‌ ಜಂಪ್‌ ಮಾಡಿದ್ರೆ ನಿಮ್ಮ ಗಾಡಿ ಗುಜರಿಗೆ ಹಾಕ್ತಾರೆ ಹುಷಾರ್‌!
ಬೆಂಗಳೂರು: ರೋಡ್‌ನಲ್ಲಿ ಟ್ರಾಫಿಕ್‌ ಪೊಲೀಸರು ನಿಂತಿಲ್ಲ ಎಂದು ಸಿಗ್ನಲ್ ಜಂಪ್ ಮಾಡುವುದು, ಹೆಲ್ಮೆಟ್ ಹಾಕದೆ ಬೈಕ್‌ ಓಡಿಸುವುದು, ಸೀಟ್‌ ಬೆಲ್ಟ್‌ ಹಾಕದೇ ಕಾರು ಚಲಾಯಿಸುವುದು ಸೇರಿದಂತೆ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದರೆ ಇನ್ನು ಮುಂದೆ ಕಂಟಕ (Traffic violation) ಕಾದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

10. ಅಂಬಾನಿ ಮಗನ ಮದುವೆ ಪೂರ್ವ ಕಾರ್ಯಕ್ರಮಕ್ಕೆ ಸಿದ್ಧವಾಗಿದೆ ಭೂ ಲೋಕದ ಸ್ವರ್ಗ!
ಗಾಂಧೀನಗರ (ಗುಜರಾತ್): ವಿಶ್ವದ ಟಾಪ್ ಟೆನ್ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ದಂಪತಿಯ ಮಗ ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ (Anant and Radhika Wedding) ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅದ್ಧೂರಿ ತಯಾರಿ ನಡೆಯುತ್ತಿದೆ. ಸ್ವತಃ ನೀತಾ ಅಂಬಾನಿ ಅವರು ಈ ಸಿದ್ಧತೆಯ ಉಸ್ತುವಾರಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅಂಬಾನಿ ಕುಟುಂಬದಿಂದ ಗುಜರಾತ್‌ನ ಜಾಮ್ ನಗರದಲ್ಲಿ (Jamnagar) ಹದಿನಾಲ್ಕು ಹೊಸ ದೇಗುಲಗಳ ಸಮುಚ್ಚಯದ ನಿರ್ಮಾಣವನ್ನೇ ಮಾಡಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು, ದೇವ- ದೇವತೆಗಳ ಚಿತ್ರಗಳು, ಮನಮೋಹಕವಾದ ಶಿಲ್ಪಗಳು, ವಾಸ್ತುಶಿಲ್ಪದಿಂದ ಪ್ರೇರಿತವಾದ ಪಾರಂಪರಿಕ ಚಿತ್ರಗಳನ್ನು ಇಲ್ಲಿ ಕಾಣಬಹುದಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading
Advertisement
Colin Munro
ಪ್ರಮುಖ ಸುದ್ದಿ7 mins ago

Colin Munro : ನ್ಯೂಜಿಲ್ಯಾಂಡ್​ ಟಿ20 ಸ್ಪೆಷಲಿಸ್ಟ್​ ಅಟಗಾರ ನಿವೃತ್ತಿ; ಈ ಆಟಗಾರನ ಸಾಧನೆಗಳ ವಿವರ ಇಲ್ಲಿದೆ

T20 world cup
ಕ್ರೀಡೆ36 mins ago

T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

Dietary Guidelines
Latest1 hour ago

Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

Lover refused to marriage Young woman committed suicide in kalaburagi
ಕಲಬುರಗಿ1 hour ago

Self Harming: ಪ್ರೀತಿಸಲು ಓಕೆ, ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ

Jay Shah
ಪ್ರಮುಖ ಸುದ್ದಿ1 hour ago

Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

Naxals K
ದೇಶ1 hour ago

Naxals Encounter: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 12 ನಕ್ಸಲರ ಹತ್ಯೆ

Veg v/s Non Veg Thali
ಆರೋಗ್ಯ1 hour ago

Veg v/s Non Veg Thali: ಭಾರತದಲ್ಲಿ ನಾನ್‌ವೆಜ್‌ ಊಟಕ್ಕಿಂತ ವೆಜ್ ಊಟ ದುಬಾರಿ! ಏಕೆ ಗೊತ್ತಾ?

Maruti Suzuki
ಆಟೋಮೊಬೈಲ್1 hour ago

Maruti Suzuki: ಶೀಘ್ರ ರಸ್ತೆಗಿಳಿಯಲಿದೆ ಬರೋಬ್ಬರಿ 26 ಕಿ.ಮೀ ಮೈಲೇಜ್ ಕೊಡುವ ಮಾರುತಿ ಸ್ವಿಫ್ಟ್​; ಶುರುವಾಗಿದೆ ಬುಕಿಂಗ್​

Prajwal Revanna Case
ಕರ್ನಾಟಕ1 hour ago

Prajwal Revanna Case: ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಸ್ಥಳ ಮಹಜರು

Arvind Kejriwal
ದೇಶ1 hour ago

Arvind Kejriwal: ಪ್ರಜಾಪ್ರಭುತ್ವ ಉಳಿಸಲು ಹೋರಾಟ; ಜೈಲಿಂದ ಬಿಡುಗಡೆ ಬಳಿಕ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ6 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ8 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ9 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ16 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ23 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ24 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌