Site icon Vistara News

ವಿಸ್ತಾರ TOP 10 NEWS: ರಾಜ್ಯಾದ್ಯಂತ ಮೋದಿ ಸಂಚಾರದಿಂದ, ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆವರೆಗಿನ ಪ್ರಮುಖ ಸುದ್ದಿಗಳಿವು

vistara top 10 news modi rally in davanagere to congress first list and more news

#image_title

1. Modi in Karnataka: ಕಾರ್ಯಕರ್ತನ ಕಪಾಳಕ್ಕೇ ಹೊಡೆದವರು ಜನರಿಗೆ ಗೌರವ ನೀಡುತ್ತಾರಾ?: ಸಿದ್ದು ವಿರುದ್ಧ ಮೋದಿ ವಾಗ್ದಾಳಿ
ಯಾವ ಪಕ್ಷದಲ್ಲಿ ತನ್ನ ಕಾರ್ಯಕರ್ತನಿಗೇ ಗೌರವ ನೀಡದೆ ಕಪಾಳಕ್ಕೆ ಹೊಡೆಯಲಾಗುತ್ತದೆಯೋ ಆ ಪಕ್ಷವು ಜನತಾ ಜನಾರ್ದನನಿಗೆ ಹೇಗೆ ಗೌರವ ನೀಡುತ್ತದೆ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ (Modi in Karnataka) ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Modi in Karnataka: ನಾನು ಅತಿಥಿ ಅಲ್ಲ; ಇದೇ ಮಣ್ಣಿನ ಮಗ: ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ
ಚುನಾವಣೆಗಳು ಹತ್ತಿರವಾಗುತ್ತಿರುವಂತೆ ಚಿಕ್ಕಬಳ್ಳಾಪುರದ ನೆಲದಲ್ಲಿ ನಿಂತು, ತಾವೂ ಇದೇ ಮಣ್ಣಿನ ಮಗ ಎಂದು ಪ್ರಧಾನಿ ನರೇಂದ್ರ ಮೋದಿ (Modi in Karnataka) ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಶ್ರೀ ಸತ್ಯ ಸಾಯಿ ರಾಜೇಶ್ವರಿ ಮೆಮೋರಿಯಲ್‌ ಬ್ಲಾಕ್‌ ಉದ್ಘಾಟನೆ ನೆರವೇರಿಸಿದ ನಂತರ ಮೋದಿ ಈ ಮಾತನ್ನು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮೋದಿ ಪ್ರವಾಸದ ಕುರಿತು ಎಲ್ಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

3. Congress First List: ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ವರುಣಾದಿಂದ ಸಿದ್ದರಾಮಯ್ಯ, ದೇವನಹಳ್ಳಿಯಲ್ಲಿ ಮುನಿಯಪ್ಪ
ರಾಜ್ಯ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಸ್ಪರ್ಧಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. 124 ಕ್ಷೇತ್ರಗಳಿಗೆ ಸ್ಪರ್ಧಿಗಳ ಹೆಸರು ಅಂತಿಮಗೊಳಿಸಲಾಗಿದೆ. ಈ ನಡುವೆ ಮುನಿಯಪ್ಪ ಅವರು ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರು ರಾಜ್ಯ ರಾಜಕಾರಣಕ್ಕೆ ಮರಳಿದ್ದಾರೆ. ಮುನಿಯಪ್ಪ ದೇವನಹಳ್ಳಿಯಿಂದ ನಿಲ್ಲಲಿದ್ದಾರೆ ಎಂದು ವಿಸ್ತಾರ ನ್ಯೂಸ್‌ ನಾಲ್ಕು ತಿಂಗಳ ಹಿಂದೆಯೇ ವರದಿ ಮಾಡಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಮತ್ತಷ್ಟು ಓದಿಗಾಗಿ: Congress ticket : ಆರು ಹಾಲಿ ಕಾಂಗ್ರೆಸ್‌ ಶಾಸಕರ ಟಿಕೆಟ್‌ ಹೋಲ್ಡ್‌, ಮೂರು ಕಡೆ ಪಕ್ಷ ಬಿಟ್ಟು ಹೋದವರಿಗಾಗಿ ವೇಟಿಂಗ್‌!

4. Rahul Gandhi: ಕ್ಷಮೆಯಾಚಿಸಲು ನಾನು ಸಾವರ್ಕರ್‌ ಅಲ್ಲ, ಗಾಂಧಿ; ಅನರ್ಹತೆ ಬಳಿಕ ಕೇಂದ್ರಕ್ಕೆ ರಾಹುಲ್‌ ಚಾಟಿ
ಮಾನಹಾನಿ ಪ್ರಕರಣದಲ್ಲಿ ಸಿಲುಕಿ, ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಅನರ್ಹಗೊಂಡ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. “ನನ್ನನ್ನು ಬಂಧಿಸಿ, ಜೈಲಿಗೆ ಕಳುಹಿಸಿ. ಆದರೆ, ನಾನು ದೇಶದ ಜನರ ಪರವಾಗಿ ಮಾತನಾಡುವುದನ್ನು ನಿಲ್ಲಿಸುವುದಿಲ್ಲ. ಅದಾನಿ ಪ್ರಕರಣದ ಕುರಿತು ಮಾತನಾಡುವುದನ್ನು ಬಿಡುವುದಿಲ್ಲ” ಎಂದು ಹೇಳಿದ್ದಾರೆ. ಹಾಗೆಯೇ, ಬಿಜೆಪಿ ಆಗ್ರಹದಂತೆ ಕ್ಷಮೆಯಾಚಿಸಲು ನಾನು ಸಾವರ್ಕರ್‌ ಅಲ್ಲ, ಗಾಂಧಿ ಎಂದು ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Panchamasali Reservation : ಪಂಚಮಸಾಲಿ ಹೋರಾಟದಲ್ಲಿ ಒಡಕು, ಮುಸ್ಲಿಮರಿಂದ ಕಿತ್ತು ಕೊಟ್ಟ ಮೀಸಲಾತಿ ಬೇಡ ಎಂದ ಕಾಶಪ್ಪನವರ್
ರಾಜ್ಯ ಸರ್ಕಾರ ಪರಿಷ್ಕೃತ ಮೀಸಲಾತಿ ನೀತಿ ಮೂಲಕ ಲಿಂಗಾಯತ ಪಂಚಮಸಾಲಿ (Panchamasali Reservation) ಸಮುದಾಯಕ್ಕೆ 2ಡಿ ಪ್ರವರ್ಗದಡಿ ಶೇ. 7ರಷ್ಟು ಮೀಸಲಾತಿ (ಹಿಂದಿನ 3ಸಿಗಿಂತ ಎರಡು ಶೇಕಡಾ ಹೆಚ್ಚು) ನೀಡಿದ್ದನ್ನು ಹೋರಾಟ ಸಮಿತಿ ಒಪ್ಪಿಕೊಂಡು ಎರಡು ವರ್ಷಗಳ ಹೋರಾಟವನ್ನು ಹಿಂದೆ ಪಡೆದಿದೆ. ಆದರೆ, ಈ ವಿಚಾರ ಸಮಿತಿಯಲ್ಲಿ ಬಿರುಕು ಮೂಡಿಸಿದೆ. ಹೋರಾಟದ ಮುಂಚೂಣಿಯಲ್ಲಿದ್ದ ಕಾಂಗ್ರೆಸ್‌ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರು ಈ ಮೀಸಲಾತಿಯನ್ನು ಧಿಕ್ಕರಿಸಿದ್ದಾರೆ. ಮುಸ್ಲಿಮರಿಂದ ಕಿತ್ತುಕೊಡುವ ಮೀಸಲಾತಿ ಬೇಡ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Covid-19 Cases: ದೇಶದಲ್ಲಿ ಮತ್ತೆ ಕೊವಿಡ್​ ಆತಂಕ; 146 ದಿನಗಳಲ್ಲೇ ಗರಿಷ್ಠ ಮಟ್ಟದ ಕೊರೊನಾ ಕೇಸ್​ ದಾಖಲು
ದೇಶದಲ್ಲಿ ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ, ಕೊರೊನಾ ಸಾಂಕ್ರಾಮಿಕವೂ ಮತ್ತೆ ಹೆಚ್ಚುತ್ತಿದೆ. ಈಗೊಂದು ವಾರದಿಂದ ಪ್ರತಿದಿನ ದಾಖಲಾಗುವ ಕೊರೊನಾ ಕೇಸ್​​ಗಳ ಸಂಖ್ಯೆ (Covid-19 Cases) ಏರಿಕೆಯಾಗುತ್ತಿದೆ. 24ಗಂಟೆಯಲ್ಲಿ 1590 ಕೊರೊನಾ ಕೇಸ್​ಗಳು ದಾಖಲಾಗಿದ್ದು, ಇದು ಕಳೆದ 146 ದಿನಗಳಲ್ಲೇ ಗರಿಷ್ಠ ಮಟ್ಟದ ಹೆಚ್ಚಳ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಾಗೇ, 24ಗಂಟೆಯಲ್ಲಿ 910 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯೀಗ 8601ಕ್ಕೆ ತಲುಪಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Amritpal Singh: ಜಾಕೆಟ್‌ ಧರಿಸಿ, ಬಿಂದಾಸ್‌ ಆಗಿ ಪಟಿಯಾಲದಲ್ಲೇ ಓಡಾಡಿಕೊಂಡಿದ್ದ ಅಮೃತ್‌ ಪಾಲ್‌, ಇಲ್ಲಿದೆ ವಿಡಿಯೊ
ಖಲಿಸ್ತಾನಿಗಳ ನಾಯಕ, ಪಂಜಾಬ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದ ಅಮೃತ್‌ಪಾಲ್‌ ಸಿಂಗ್‌ (Amritpal Singh) ಬಂಧನಕ್ಕೆ ಒಂದು ವಾರದಿಂದ ಪಂಜಾಬ್‌ ಪೊಲೀಸರು ಹರಸಾಹಸಪಡುತ್ತಿದ್ದಾರೆ. ಮಾರ್ಚ್‌ 18ರಿಂದಲೂ ಪೊಲೀಸರು ಅಮೃತ್‌ಪಾಲ್‌ಗಾಗಿ ಶೋಧ ನಡೆಸುತ್ತಿದ್ದರೂ ಇದುವರೆಗೂ ಆತನನ್ನು ಬಂಧಿಸಲು ಸಾಧ್ಯವಾಗಿಲ್ಲ. ಇದು ಗುಪ್ತಚರ ವೈಫಲ್ಯ ಎಂದು ಪಂಜಾಬ್‌ ಹಾಗೂ ಹರಿಯಾಣ ಹೈಕೋರ್ಟ್‌ ಛೀಮಾರಿ ಹಾಕಿದರೂ ಇದುವರೆಗೆ ಬಂಧಿಸಲು ಆಗಿಲ್ಲ. ಇದರ ಬೆನ್ನಲ್ಲೇ, ಅಮೃತ್‌ಪಾಲ್‌ ಸಿಂಗ್‌ ಪಂಜಾಬ್‌ನ ಪಟಿಯಾಲದಲ್ಲಿಯೇ ಓಡಾಡಿಕೊಂಡಿದ್ದ ವಿಡಿಯೊ ಈಗ ಲಭ್ಯವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. PAK VS AFG: ಪಾಕಿಸ್ತಾನ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫಘಾನಿಸ್ತಾನ
ಅನುಭವಿ ಮೊಹಮ್ಮದ್‌ ನಬಿ(Mohammad Nabi) ಅವರ ಆಲ್​ರೌಂಡರ್​ ಆಟದ ನೆರವಿನಿಂದ ಪಾಕಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಫಘಾನಿಸ್ತಾನ ತಂಡ ಆರು ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿತು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪಾಕಿಸ್ತಾನ ವಿರುದ್ಧ ಮೊಟ್ಟ ಮೊದಲ ಗೆಲುವು ದಾಖಲಿಸಿ ಇತಿಹಾಸ ನಿರ್ಮಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. ಹೊಸ ಅಂಕಣ: ಸೈಬರ್ ಮಿತ್ರ: ಜಾಣರಾಗಿ, ಜಾಗರೂಕರಾಗಿರಿ!
ವಿಶ್ವದಾದ್ಯಂತ ಸೈಬರ್ ವಂಚಕರು ನಮ್ಮ ಎರಡು ದುರ್ಬಲತೆಯನ್ನು ಬಳಸಿಕೊಳ್ಳಲು ನೋಡುತ್ತಿರುತ್ತಾರೆ. ಮೊದಲನೆಯದು ಭಯ, ಎರಡನೆಯದು ದುರಾಸೆ. ಹಾಗಾಗಿ, ಇಂದಿನ ಈ ಸೈಬರ್ ಬ್ರಹ್ಮಾಂಡದಲ್ಲಿ ವ್ಯವಹರಿಸುವಾಗ ಜಾಣರಾಗಿ, ಜಾಗರೂಕರಾಗಿರಿ. ಸುಖವಾದ ಸೈಬರ್ ಸರ್ಫ್‌ಗೆ ಹನ್ನೆರಡು ಸೂತ್ರಗಳು ಇಲ್ಲಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Viral News: ತನ್ನ ಶಿಕ್ಷಣಕ್ಕೆ ಕೂಡಿಟ್ಟಿದ್ದ ಹಣ ಅಣ್ಣನ ಮದುವೆಗೆ ಬಳಕೆ; ಅಪ್ಪ-ಅಮ್ಮನ ವಿರುದ್ಧವೇ ಕೇಸ್‌ ದಾಖಲಿಸಿದ ಪುತ್ರಿ!
ಆಸ್ತಿ ವಿಚಾರದಲ್ಲಿ ಇಲ್ಲವೇ ಕೌಟುಂಬಿಕ ಜಗಳದ ವಿಚಾರದಲ್ಲಿ ಮಕ್ಕಳು ತಂದೆ-ತಾಯಿ ವಿರುದ್ಧ ಪ್ರಕರಣ ದಾಖಲಿಸುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ಆದರೆ ಇಲ್ಲೊಬ್ಬ ಹೆಣ್ಣು ಮಗಳು ತನ್ನ ಶಿಕ್ಷಣಕ್ಕೆಂದು ದೊಡ್ಡಮ್ಮ ಕೊಟ್ಟಿದ್ದ ಹಣವನ್ನು ತಂದೆ-ತಾಯಿಯು ತನ್ನ ಅಣ್ಣನ ಮದುವೆಗೆ ಬಳಸಿದರು ಎನ್ನುವ ಕಾರಣಕ್ಕೆ ಪೋಷಕರ ವಿರುದ್ಧವೇ ಪ್ರಕರಣ (Viral News) ದಾಖಲಿಸಿದ್ದಾಳೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. PUC Exam 2023 : ದ್ವಿತೀಯ ಪಿಯುಸಿ ಪರೀಕ್ಷೆ; ವಿಷಯವಾರು ಮಾದರಿ ಉತ್ತರ ಪ್ರಕಟ
  2. Veerappan Daughter: ವೀರಪ್ಪನ್‌ ಮಗಳು ವಿಜಯಲಕ್ಷ್ಮೀ ಸಿನಿರಂಗಕ್ಕೆ ಎಂಟ್ರಿ
  3. Wall collapse: ತಡೆಗೋಡೆ ನಿರ್ಮಾಣ ವೇಳೆ ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ್ಯು
  4. ಮಕ್ಕಳ ಕಥೆ: ಮುಗ್ಧ ಶಿಷ್ಯರು ಮತ್ತು ಕುದುರೆ ಮೊಟ್ಟೆ
  5. Pakistan Economic Crisis: ಚುನಾವಣೆ ನಡೆಸಲೂ ಕಾಸಿಲ್ಲ ನಮ್ಮ ಬಳಿ ಎಂದ ಪಾಕಿಸ್ತಾನ ರಕ್ಷಣಾ ಸಚಿವ
  6. KPSC Recruitment 2023 : ಪಿಯುಸಿ ಓದಿದವರಿಗೆ ಕಿರಿಯ ಲೆಕ್ಕ ಸಹಾಯಕರಾಗುವ ಅವಕಾಶ; ಇಂದಿನಿಂದ ಅರ್ಜಿ ಸಲ್ಲಿಕೆ ಶುರು
  7. Yogi Adityanath: ನಿರಂತರ 6 ವರ್ಷ ಸಿಎಂ, ಯೋಗಿ ಹೊಸ ದಾಖಲೆ; ಬುಲ್ಡೋಜರ್​ ಬಾಬಾನಿಂದ ವಿಕಾಸ ಪುರುಷನವರೆಗೆ…
Exit mobile version