ವಿಸ್ತಾರ TOP 10 NEWS | ನೂಪುರ್‌ ಕ್ಷಮೆ ಕೋರಲಿ ಎಂದ ʼಸುಪ್ರೀಂʼನಿಂದ ರಾಜಣ್ಣ ಕ್ಷಮೆಯಾಚನೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ದೇಶ

ವಿಸ್ತಾರ TOP 10 NEWS | ನೂಪುರ್‌ ಕ್ಷಮೆ ಕೋರಲಿ ಎಂದ ʼಸುಪ್ರೀಂʼನಿಂದ ರಾಜಣ್ಣ ಕ್ಷಮೆಯಾಚನೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Vistara top 10 01072022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಂದೇ ಒಂದು ಹೇಳಿಕೆಯಿಂದ ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಕುರಿತು ಸುಪ್ರೀಂಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದ್ದು, ದೇಶದ ಕ್ಷಮೆಯಾಚಿಸಬೇಕು ಎಂದು ಕಟುವಾಗಿ ತಿಳಿಸಿದೆ. ಈ ನಡುವೆ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತು ಆಡಿದ ಅಪದ್ಧ ಮಾತಿಗೆ ಮಧುಗಿರಿ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಕ್ಷಮೆಯಾಚಿಸಲು ನಿರ್ಧರಿಸಿದ್ದಾರೆ. ರಾಜಸ್ಥಾನದ ಕನ್ಹಯ್ಯ ಲಾಲ್‌ ಹತ್ಯೆ ಮಾಡಿದವರಿಗೆ ಮುಂಬೈ ಭಯೋತ್ಪಾದಕ ದಾಳಿ ನಂಟಿದೆಯೇ ಎಂಬ ಪ್ರಶ್ನೆ ಮೂಡಿದೆ ಎಂಬುದು ಸೇರಿದಂತೆ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ಭದ್ರತಾ ವ್ಯವಸ್ಥೆಗೇ ಬೆದರಿಕೆ ಒಡ್ಡಿದ ನೂಪುರ್‌ ಶರ್ಮಾ ದೇಶದ ಕ್ಷಮೆ ಕೋರಬೇಕು: ಸುಪ್ರೀಂಕೋರ್ಟ್‌
ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಇಡೀ ದೇಶದ ಕ್ಷಮೆ ಕೋರಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ನೂಪುರ್‌ ಶರ್ಮಾ ಪಾಲ್ಗೊಂಡ ಡಿಬೇಟ್‌ ಅನ್ನು ನಾವು ವೀಕ್ಷಿಸಿದ್ದೇವೆ. ಅದರಲ್ಲಿ ನೂಪುರ್‌ ಶರ್ಮಾರನ್ನು ಹೇಗೆ ಪ್ರಚೋದಿಸಲಾಯಿತು ಎಂಬುದನ್ನೂ ನೋಡಿದ್ದೇವೆ. ಆದರೆ ನಂತರ ಅವಳಾಡಿದ ಮಾತು, ಕೊನೆಯಲ್ಲಿ ನಾನೊಬ್ಬ ವಕೀಲೆ ಎಂದು ಹೇಳಿಕೊಂಡಿದ್ದೆಲ್ಲ ನಾಚಿಕೆಗೇಡು ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸೂರ್ಯಕಾಂತ್‌ ಹೇಳಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

2. Rajasthan murder: ಕನ್ಹಯ್ಯ ಲಾಲ್‌ ಹಂತಕರಿಗೆ mumbai terror ಲಿಂಕ್‌? ಏನಿದು 2611 ?
ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೇಲರ್‌ ಕನ್ಹಯ್ಯ ಲಾಲ್‌ ಹತ್ಯೆಗೂ 2008ರಲ್ಲಿ ಮುಂಬಯಿಯಲ್ಲಿ ಸಂಭವಿಸಿದ, ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉಗ್ರ ದಾಳಿಗೂ ಸಂಬಂಧ ಇದೆಯಾ?
ಕನ್ಹಯ್ಯ ಲಾಲ್‌ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಘಟನೆಯ ಎಲ್ಲ ಆಯಾಮಗಳ ಬೆನ್ನು ಹತ್ತಿದ್ದು ಈ ವೇಳೆ ಹಂತಕರಾದ ಮೊಹಮ್ಮದ್‌ ರಿಯಾಜ್‌ ಅಟ್ಟಾರಿ ಮತ್ತು ಗೌಸ್‌ ಮೊಹಮ್ಮದ್‌ಗೂ ಮುಂಬಯಿ ದಾಳಿಗೂ (Mumbai terror) ಸಂಬಂಧ ಇರುವ ಅಂಶ ಬಯಲಾಗಿದೆ. ೨೬/೧೧ ಘಟನೆಯನ್ನು ನೆನಪಿಸುವ ನೋಂದಣಿ ಸಂಖ್ಯೆಯನ್ನು ಉದಯಪುರದ ಕನ್ಹಯ್ಯ ಲಾಲ್‌ ಹಂತಕರು ತಮ್ಮ ವಾಹನಕ್ಕೆ ಬಳಸಿರುವುದು ಈಗ ಹಲವು ಗುಮಾನಿಗಳಿಗೆ ಕಾರಣವಾಗಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೩. ಬಂಗಾರದ ಆಮದು ಸುಂಕ 7.5%ರಿಂದ 12.5ಕ್ಕೆ ಹೆಚ್ಚಳ, ಮತ್ತಷ್ಟು ದುಬಾರಿಯಾಗಲಿದೆ ಚಿನ್ನ
ಭಾರತ ಬಂಗಾರದ ಖರೀದಿಯನ್ನು ನಿರುತ್ತೇಜನಗೊಳಿಸಲು ಆಮದು ಸುಂಕವನ್ನು ಶೇ.೭.೫ರಿಂದ ಶೇ.೧೨.೫ಕ್ಕೆ ಶುಕ್ರವಾರ ಹೆಚ್ಚಿಸಿದೆ. ಇದರ ಪರಿಣಾಮ ಚಿನ್ನ ಮತ್ತಷ್ಟು ದುಬಾರಿಯಾಗುವುದು ಖಚಿತ. ಭಾರತ ವಿಶ್ವದಲ್ಲಿಯೇ ಅತಿ ಹೆಚ್ಚು ಚಿನ್ನ ಖರೀದಿಸುವ ಎರಡನೇ ರಾಷ್ಟ್ರವಾಗಿದೆ. ಆದರೆ ಬಹುತೇಕ ಚಿನ್ನದ ಬೇಡಿಕೆಯನ್ನು ಆಮದು ಮಾಡುವ ಮೂಲಕ ಭರಿಸಲಾಗುತ್ತಿದೆ. ಡಾಲರ್‌ ಎದುರು ರೂಪಾಯಿ ಇತ್ತೀಚೆಗೆ ಗಣನೀಯ ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಬಂಗಾರದ ಆಮದು ವಿತ್ತೀಯ ಕೊರತೆಗೆ ಕಾರಣವಾಗುತ್ತಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

4. ದೇವೇಗೌಡರನ್ನು ಭೇಟಿಯಾಗಿ ಕ್ಷಮೆಯಾಚಿಸುವೆ, ಆದರೆ ಬೆದರಿಕೆಗೆ ಜಗ್ಗುವುದಿಲ್ಲ: ಕೆ.ಎನ್‌. ರಾಜಣ್ಣ
ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈಗಲೇ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ಸದ್ಯದಲ್ಲೆ ನಾಲ್ವರ ಮೇಲೆ ಹೋಗುತ್ತಾರೆ ಎಂದು ಆಡಿದ ಮಾತು ವಿವಾದವಾಗುತ್ತಿರುವುದನ್ನು ಗಮನಿಸಿದ ಮಧುಗಿರಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಕೆ.ಎನ್‌. ರಾಜಣ್ಣ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಆದರೂ ಈ ಬಗ್ಗೆ ವಾದ ಮಾಡಲು ಹೋಗುವುದಿಲ್ಲ. ಖುದ್ದಾಗಿ ಎಚ್‌.ಡಿ. ದೇವೇಗೌಡರನ್ನು ಭೇಟಿ ಮಾಡಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

5. UAV | ಭಾರತೀಯ ಸೇನೆಯ ಚಾಲಕರಹಿತ ವಿಮಾನ ಚಿತ್ರದುರ್ಗದಲ್ಲಿ ಮೊದಲ ಯಶಸ್ವಿ ಹಾರಾಟ
ಚಾಲಕ ರಹಿತ ವಿಮಾನದ ಮೊದಲ ಹಾರಾಟವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದಲ್ಲಿ ಯಶಸ್ವಿಯಾಗಿ ನಡೆಸಿದೆ. ಮಾನವ ರಹಿತ ವೈಮಾನಿಕ ವಾಹನವನ್ನು (UAV) ಅಟಾನಮಸ್‌ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್‌ಸ್ಟ್ರೇಟರ್’ ಎಂದು ಕರೆಯಲಾಗುತ್ತದೆ. ಕರ್ನಾಟಕದ ಚಿತ್ರದುರ್ಗದ ವೈಮಾನಿಕ ಟೆಸ್ಟ್ ರೇಂಜ್‌ನಲ್ಲಿ ಇದರ ಹಾರಾಟ ನಡೆಸಲಾಯಿತು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೬. ಆಗಸ್ಟ್‌ನಲ್ಲಿ ವಿಧಾನಮಂಡಲ ಅಧಿವೇಶನ: ಸಂಪುಟ ಸಭೆಯಲ್ಲಿ ವಿವಿಧ ತೀರ್ಮಾನಗಳು
ಕರ್ನಾಟಕ ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಆಗಸ್ಟ್‌ನಲ್ಲಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದೆ. ಸಂಪುಟ ಸಭೆಯ ನಂತರ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)
ಚುನಾವಣೆಗೆ ʻನಮ್ಮ ಕ್ಲಿನಿಕ್‌ʼ ಟ್ರಂಪ್‌ ಕಾರ್ಡ್‌: ರಾಜ್ಯಾದ್ಯಂತ ತಲೆಯೆತ್ತಲಿವೆ ಸರ್ಕಾರಿ ಚಿಕಿತ್ಸಾಲಯ

7. Maha politics: ಜುಲೈ 4ರಂದು ಶಿಂಧೆ ವಿಶ್ವಾಸಮತ ಯಾಚನೆ, ತಡೆ ನೀಡುವಂತೆ ಸುಪ್ರೀಂ ಮೊರೆ ಹೊಕ್ಕ ಉದ್ಧವ್‌ ಟೀಮ್‌ಗೆ ನಿರಾಸೆ
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶಿವಸೇನೆಯ ಬಂಡಾಯ ಬಣದ ನಾಯಕ ಏಕನಾಥ್‌ ಶಿಂಧೆ ಅವರು ಜುಲೈ ೪ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ನಿರೀಕ್ಷೆ ಇದೆ. ಜುಲೈ ೨ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಈ ನಡುವೆ ವಿಶ್ವಾಸ ಮತ ಯಾಚನೆಗೆ ತಡೆಯಾಜ್ಞೆ ನೀಡಬೇಕು ಎಂಬ ಉದ್ಧವ್‌ ಠಾಕ್ರೆ ಬಣದ ಬೇಡಿಕೆಯನ್ನು ಸುಪ್ರೀಂಕೋರ್ಟ್‌ ತಳ್ಳಿ ಹಾಕಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೮. Mid Size SUV ಕಾರು ಬಿಡುಗಡೆಗೆ ಮಾರುತಿ ಸುಜುಕಿ ಸಿದ್ಧತೆ
ಭಾರತದ ಕಾರು ಮಾರುಕಟ್ಟೆಯಲ್ಲಿ ಅರ್ಧಕ್ಕಿಂತಲೂ ಹೆಚ್ಚು ಪಾಲು ಪಡೆದುಕೊಂಡಿರುವ ಮಾರುತಿ ಸುಜುಕಿ ಕಂಪನಿಯು ಇದುವರೆಗೂ Mid Size SUV ಕಾರನ್ನು ಮಾರುಕಟ್ಟೆಗೆ ಬಿಟ್ಟಿಲ್ಲ. ಟಾಟಾ, ಮಹೀಂದ್ರಾ, ಕಿಯಾ ಮತ್ತು ಹ್ಯುಂಡೈ ಸೇರಿದಂತೆ ಪ್ರಮುಖ ಕಂಪನಿಗಳು ಈ ಸೆಗ್ಮೆಂಟ್‌ನಲ್ಲಿ ಹಲವು ಕಾರುಗಳನ್ನು ಮಾರುಕಟ್ಟೆಗೆ ಬಿಟ್ಟು ಯಶಸ್ಸು ಪಡೆದುಕೊಂಡಿವೆ. ಈ ಕೊರತೆ ನೀಗಿಸುವ ಉದ್ದೇಶದಿಂದ ಮಾರುತಿ ಸುಜುಕಿ ಕಂಪನಿಯು ಜುಲೈ ಮೂರನೇ ವಾರದಲ್ಲಿ Mid Size SUV ಕಾರೊಂದನ್ನು ಘೋಷಣೆ ಮಾಡಲಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

9. ಪುರಿ ಜಗನ್ನಾಥ ದೇಗುಲದ ಗೋಪುರದ ಮೇಲೆ ಹಕ್ಕಿಗಳು-ವಿಮಾನ ಹಾರಾಡುವುದಿಲ್ಲವೇಕೆ?; ಇಲ್ಲಿದೆ ಕಾರಣ
ಒಡಿಶಾದ ಪುರಿ ಜಗನ್ನಾಥ ಯಾತ್ರೆ ವಿಶ್ವವಿಖ್ಯಾತ. ಜಗನ್ನಾಥ ದೇವರ ವೈಭವದ ಉತ್ಸವ ಶುಕ್ರವಾರದಿಂದ ಪ್ರಾರಂಭವಾಗಿದ್ದು, ಜುಲೈ 12ರವರೆಗೆ ನಡೆಯುತ್ತದೆ. ಮೂರು ರಥಗಳ ಮೆರವಣಿಗೆ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಆಗಮಿಸುತ್ತಾರೆ. ಅಲ್ಲಿನ ವೈಭವ ಎಷ್ಟು ಕಣ್ಮನ ಸೆಳೆಯುತ್ತದೆಯೋ, ದೇಗುಲಕ್ಕಿರುವ ವಿಶೇಷತೆಗಳೂ ಅಷ್ಟೇ ಗಮನ ಸೆಳೆಯುತ್ತವೆ. ಪುರಿ ಜಗನ್ನಾಥ ದೇವಳ ಅಚ್ಚರಿಗಳ ಲೋಕ ಎಂದರೂ ತಪ್ಪಾಗಲಾರದು. ಅದರಲ್ಲೊಂದು ಬಹುಮುಖ್ಯವಾಗಿ, ʻದೇವಾಲಯದ ಗೋಪುರದ ಮೇಲ್ಭಾಗದಲ್ಲಿ ಹಕ್ಕಿಗಳಾಗಲೀ, ವಿಮಾನ-ಹೆಲಿಕಾಪ್ಟರ್‌ಗಳಾಗಲಿ ಎಂದಿಗೂ ಹಾರಾಡುವುದಿಲ್ಲʼ ಎಂಬುದು. ಇದೊಂದು ಅಚ್ಚರಿ-ಕುತೂಹಲದ ವಿಷಯ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

10. Pavitra Lokesh | ಸುಚೇಂದ್ರ ಪ್ರಸಾದ್ ಜತೆ ಮದುವೆ ಆಗಿರಲಿಲ್ಲ, ನರೇಶ್‌ ಜತೆಗೂ ಆಗಿಲ್ಲ: ಪವಿತ್ರಾ ಲೋಕೇಶ್‌
ತೆಲುಗು ನಟ ನರೇಶ್‌ ಜತೆಗಿನ ಸಂಬಂಧದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ನಟಿ ಪವಿತ್ರಾ ಲೋಕೇಶ್‌ (Pavitra Lokesh) ಶುಕ್ರವಾರ (ಜೂನ್‌ 29) ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾನು ಮದುವೆ ಆಗಿಲ್ಲ. ನಾನೇಕೆ ವಿಚ್ಛೇದನ ತೆಗೆದುಕೊಳ್ಳಬೇಕು? ಎಂದು ಪ್ರಶ್ನಿಸಿರುವ ಪವಿತ್ರಾ ಲೋಕೇಶ್‌, ನರೇಶ್‌ ಜತೆಗೂ ಮದುವೆ ಆಗಿಲ್ಲ ಎಂದಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ನಿರ್ದಿಷ್ಟ ಯೋಜನೆ ಮತ್ತು ಸ್ಥಳೀಯ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ಕಡಿಮೆ ಬಜೆಟ್‌ನಲ್ಲಿ ಸಂಪೂರ್ಣ ದ್ವಾರಕವನ್ನು ಸುತ್ತಾಡಲು (Dwarka Tour) ಸಾಧ್ಯವಿದೆ. ಪುರಾತನ ದೇವಾಲಯ, ಸುಂದರವಾದ ಕಡಲತೀರಗಳೊಂದಿಗೆ ಅತ್ಯಾಕರ್ಷಕ ತಾಣದಲ್ಲಿ ಸುಂದರವಾದ ಪ್ರವಾಸ ಅನುಭವವನ್ನು ನಮ್ಮದಾಗಿಸಬಹುದು.

VISTARANEWS.COM


on

By

Dwarka Tour
Koo

ದ್ವಾರಕಾ ಹೆಸರು ಕೇಳಿದಾಕ್ಷಣವೇ ಮನಸ್ಸು ಪ್ರಫುಲ್ಲವಾಗುತ್ತದೆ. ಹಿಂದೂಗಳಿಗೆ ಅಯೋಧ್ಯೆ (ayodhya) ರಾಮ ಮಂದಿರದಷ್ಟೇ (ram mandir) ಪವಿತ್ರವಾದ ಮತ್ತೊಂದು ಕ್ಷೇತ್ರ ದ್ವಾರಕಾ (Dwarka Tour). ಭಾರತದ ಪಶ್ಚಿಮ ಕರಾವಳಿಯ ಗುಜರಾತ್ (gujarat) ರಾಜ್ಯದಲ್ಲಿರುವ ದ್ವಾರಕಾ ಆಳವಾದ ಆಧ್ಯಾತ್ಮಿಕ, ಐತಿಹಾಸಿಕ ಮತ್ತು ನೈಸರ್ಗಿಕ ಸೌಂದರ್ಯಗಳನ್ನು ಹೊಂದಿರುವ ಪಟ್ಟಣವಾಗಿದೆ. ಬಜೆಟ್ ಸ್ನೇಹಿ (Budget Friendly) ಪ್ರವಾಸ ಮಾಡುವ ಯೋಚನೆ ಇದ್ದರೆ ದ್ವಾರಕವನ್ನು ಅನ್ವೇಷಿಸಬಹುದು.

ದ್ವಾರಕಾದ ಪ್ರಾಚೀನ ದೇವಾಲಯಗಳು, ಸುಂದರ ಕಡಲತೀರಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುತ್ತದೆ. ಇದು ದೂರದೂರುಗಳಿಂದ ಪ್ರವಾಸಿಗರನ್ನು ಹಾಗೂ ಯಾತ್ರಿಕರನ್ನು ತನ್ನತ್ತ ಚುಂಬಕದಂತೆ ಸೆಳೆಯುತ್ತದೆ. ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕೃಷ್ಣನ ನಗರಿಯಲ್ಲಿ ಪ್ರವಾಸಿಗರು ಬಜೆಟ್ ಸ್ನೇಹಿಯಾಗಿ ಸುತ್ತಾಡ ಬಹುದಾದ ಹಲವಾರು ಪ್ರದೇಶಗಳಿವೆ.


ಪ್ರಾಚೀನ ದೇವಾಲಯಗಳು

ದ್ವಾರಕಾವು ಚಾರ್ ಧಾಮ್ ತೀರ್ಥಯಾತ್ರಾ ಸ್ಥಳಗಳಲ್ಲಿ ಮತ್ತು ಶ್ರೀಕೃಷ್ಣನ ಪ್ರಾಚೀನ ಸಾಮ್ರಾಜ್ಯದಲ್ಲಿ ಸ್ಥಾನ ಪಡೆದಿರುವುದರಿಂದ ಅದು ಆಧ್ಯಾತ್ಮಿಕ ನೆಲೆಯಾಗಿದೆ. ಬಜೆಟ್ ಸ್ನೇಹಿ ಪ್ರಯಾಣ ಮಾಡಲು ಶ್ರೀಕೃಷ್ಣ ಸಮರ್ಪಿತ ದ್ವಾರಕಾಧೀಶ ದೇವಾಲಯ ಅಥವಾ ನಾಗೇಶ್ವರ ಜ್ಯೋತಿರ್ಲಿಂಗ ದೇವಾಲಯದಂತಹ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಬಹುದು. ಇದು ಹನ್ನೆರಡು ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು, ಭಕ್ತರು ಮತ್ತು ಸಂದರ್ಶಕರಿಗೆ ಉಚಿತ ಪ್ರವೇಶವನ್ನು ಕಲ್ಪಿಸುತ್ತದೆ. ಯಾವುದೇ ವೆಚ್ಚವಿಲ್ಲದೆ ಇಲ್ಲಿ ದೈವಿಕ ವಾತಾವರಣವನ್ನು ಅನುಭವಿಸಬಹುದು. ಇದಲ್ಲದೇ ಪವಿತ್ರ ಸ್ಥಳಗಳಾದ ರುಕ್ಮಿಣಿ ದೇವಿ ದೇವಸ್ಥಾನ, ಗೋಮತಿ ಘಾಟ್ ಮತ್ತು ಹಿಂದೂ ಪುರಾಣಗಳಲ್ಲಿ ಗಮನಾರ್ಹವಾದ ಬೆಟ್ ದ್ವಾರಕಾ ದ್ವೀಪಕ್ಕೆ ಭೇಟಿ ನೀಡಬಹುದು. ಇದು ಎಲ್ಲರಿಗೂ ಮುಕ್ತವಾಗಿದೆ.


ರಮಣೀಯ ಕಡಲತೀರಗಳು

ದ್ವಾರಕಾವು ಪ್ರಾಚೀನ ಕಡಲತೀರಗಳು ಮತ್ತು ಕರಾವಳಿ ಪ್ರದೇಶಗಳನ್ನು ಹೊಂದಿದೆ. ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು, ವಿಶ್ರಾಂತಿ ಪಡೆಯಲು ಜೊತೆಗೆ ಅರೇಬಿಯನ್ ಸಮುದ್ರದ ಸ್ಪಷ್ಟ ನೋಟವನ್ನು ಕಾಣಲು, ವಿಹಂಗಮ ಸೂರ್ಯಾಸ್ತ, ಒಂಟೆ ಸವಾರಿ, ಬೀಚ್ ಪಿಕ್ನಿಕ್‌ಗಳನ್ನು ಇಲ್ಲಿ ಆನಂದಿಸಬಹುದು. ಇದರೊಂದಿಗೆ ಬೀಟ್ ದ್ವಾರಕಾ ಬೀಚ್, ಗೋಪಿ ತಲವ್ ಮತ್ತು ಓಖಾ-ಮಧಿ ಬೀಚ್ ನಲ್ಲಿ ಶಾಂತಿಯುತ ಪರಿಸರದಲ್ಲಿ ಈಜು, ಸೂರ್ಯನ ಸ್ನಾನ ಮತ್ತು ಪಕ್ಷಿ ವೀಕ್ಷಣೆಯನ್ನು ನಡೆಸಬಹುದು.

ಸ್ಥಳೀಯ ಸಂಸ್ಕೃತಿ

ವರ್ಷದುದ್ದಕ್ಕೂ ದ್ವಾರಕಾದಲ್ಲಿ ವಿವಿಧ ಸಾಂಸ್ಕೃತಿಕ ಹಬ್ಬಗಳು ಮತ್ತು ಕಾರ್ಯಕ್ರಮಗಳು ನಡೆಯುತ್ತವೆ. ಇದು ಪ್ರಯಾಣಿಕರಿಗೆ ಸ್ಥಳೀಯ ಸಂಪ್ರದಾಯಗಳು ಮತ್ತು ಪದ್ಧತಿಗಳ ಒಳನೋಟವನ್ನು ತೋರಿಸುತ್ತದೆ. ಪಟ್ಟಣದಲ್ಲಿ ವರ್ಣರಂಜಿತ ಮೆರವಣಿಗೆ, ಸಾಂಸ್ಕೃತಿಕ ಪ್ರದರ್ಶನ ಮತ್ತು ಧಾರ್ಮಿಕ ಆಚರಣೆಗಳನ್ನು ಆನಂದಿಸಬಹುದು. ಜನ್ಮಾಷ್ಟಮಿ, ದೀಪಾವಳಿ ಮತ್ತು ಹೋಳಿ ಹಬ್ಬಗಳು ಇಲ್ಲಿ ಅತ್ಯಂತ ವೈಭವದಿಂದ ನಡೆಯುತ್ತದೆ. ಅಲ್ಲದೆ, ಗರ್ಬಾ ಮತ್ತು ದಾಂಡಿಯಾ ರಾಸ್ ನೃತ್ಯಗಳು, ಸಾಂಪ್ರದಾಯಿಕ ಸಂಗೀತ ಕಛೇರಿಗಳು ಮತ್ತು ಪಟ್ಟಣದ ವಿವಿಧ ಸ್ಥಳಗಳಲ್ಲಿ ನಡೆಯುವ ಜಾನಪದ ಕಲಾ ಪ್ರದರ್ಶನಗಳನ್ನು ವೀಕ್ಷಿಸಲು ತಪ್ಪಿಸಿಕೊಳ್ಳಬೇಡಿ. ಇದು ದ್ವಾರಕೆಯ ಸಂಸ್ಕೃತಿಯ ರೋಮಾಂಚಕ ಅನುಭವವನ್ನು ಕೊಡುತ್ತದೆ.


ಗುಜರಾತಿ ಖಾದ್ಯ

ದ್ವಾರಕಾ ಪ್ರವಾಸವು ಅಲ್ಲಿನ ಗುಜರಾತಿ ಖಾದ್ಯಗಳನ್ನು ಸವಿಯದೇ ಪೂರ್ಣಗೊಳ್ಳುವುದಿಲ್ಲ. ಸ್ಥಳೀಯ ತಿನಿಸುಗಳು ಅಥವಾ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಅಲ್ಲಿ ಧೋಕ್ಲಾ, ಖಾಂಡ್ವಿ ಅಥವಾ ಥೇಪ್ಲಾ ಮೊದಲಾದ ಭಕ್ಷ್ಯಗಳನ್ನು ಸವಿಯಬಹುದು. ಇದರೊಂದಿಗೆ ಪಟ್ಟಣದಲ್ಲಿ ಖಿಚು, ಫಫ್ಡಾ, ಜಲೇಬಿ-ಫಫ್ಡಾ ಸೇರಿದಂತೆ ಕೆಲವು ಪ್ರಸಿದ್ಧ ಭಕ್ಷ್ಯಗಳು ಕೈಗೆಟುಕುವ ದರದಲ್ಲಿ ಲಭ್ಯವಾಗುತ್ತದೆ.

ಇದನ್ನೂ ಓದಿ: Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಕೈಗೆಟುಕುವ ದರದಲ್ಲಿ ವಸತಿ

ದ್ವಾರಕಾದಲ್ಲಿ ಬಜೆಟ್‌ಗೆ ಅನುಗುಣವಾದ ಅತಿಥಿ ಗೃಹಗಳು, ವಸತಿಗೃಹಗಳು ಮತ್ತು ಹೊಟೇಲ್ ಗಳು ಲಭ್ಯವಿದೆ. ಸಮಂಜಸವಾದ ದರದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸ್ವಚ್ಛ ಕೊಠಡಿಗಳನ್ನು ಒದಗಿಸುವ ಬಜೆಟ್ ಸ್ನೇಹಿ ಹೊಟೇಲ್‌ಗಳಲ್ಲಿ ಉಳಿಯಬಹುದು.

ಇದರೊಂದಿಗೆ ದ್ವಾರಕಾದಲ್ಲಿನ ಹಲವಾರು ಅತಿಥಿಗೃಹಗಳು ಮತ್ತು ಬಜೆಟ್ ಸ್ನೇಹಿ ಹೊಟೇಲ್ ಗಳು ರಿಯಾಯಿತಿ ದರದಲ್ಲಿ ಹತ್ತಿರದ ಆಕರ್ಷಣೆಗಳಿಗೆ ವಸತಿ, ಊಟ ಮತ್ತು ಸಾರಿಗೆಯನ್ನು ಒಳಗೊಂಡಿರುವ ಪ್ಯಾಕೇಜ್ ಡೀಲ್‌ಗಳನ್ನು ಒದಗಿಸುತ್ತದೆ. ಹೆಚ್ಚು ಖರ್ಚು ಮಾಡದೇ ಇದರ ಪ್ರಯೋಜನವನ್ನು ಪಡೆಯಬಹುದು.

Continue Reading

ದೇಶ

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Narendra Modi: ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ ಎಂದು ಅರವಿಂದ್‌ ಕೇಜ್ರಿವಾಲ್‌ ಅವರು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಇದನ್ನೇ ಹೇಳಿದ್ದಾರೆ.

VISTARANEWS.COM


on

Narendra Modi
Koo

ಹೈದರಾಬಾದ್: ಅಬಕಾರಿ ನೀತಿ ಜಾರಿ ಹಗರಣದಲ್ಲಿ ಜೈಲುಪಾಲಾಗಿ, ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿ ಹೊರಬರುತ್ತಲೇ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ.

“ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನಾನೊಂದು ವಿಷಯ ತಿಳಿಸುತ್ತೇನೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಾರೆ ಹಾಗೂ ಮೂರನೇ ಅವಧಿಯನ್ನು ಅವರು ಪೂರ್ಣಗೊಳಿಸುತ್ತಾರೆ. ಇಂಡಿಯಾ ಒಕ್ಕೂಟವೂ ಅಷ್ಟೇ, ಮೋದಿ ಅವರಿಗೆ 75 ವರ್ಷ ತುಂಬುತ್ತದೆ ಎಂಬ ಖುಷಿ ಬೇಡ. 75 ವರ್ಷ ದಾಟಿದ ನಂತರ ಎಲ್ಲೂ ಪ್ರಧಾನಿಯಾಗಬಾರದು ಎಂಬ ನಿಯಮಗಳು ಬಿಜೆಪಿ ಸಂವಿಧಾನದಲ್ಲಿ ಪ್ರಸ್ತಾಪಿಸಿಲ್ಲ. ಹಾಗಾಗಿ, ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುವುದು ನಿಶ್ಚಿತ” ಎಂದು ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‌ನಡ್ಡಾ ಕೂಡ ಪ್ರತಿಕ್ರಿಯೆ

ಅರವಿಂದ್‌ ಕೇಜ್ರಿವಾಲ್‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. “ನರೇಂದ್ರ ಮೋದಿ ಅವರನ್ನು ಸೋಲಿಸಲಾಗದವರು ಈಗ ವಯಸ್ಸಿನ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಆದರೆ, ಪ್ರಧಾನಿಯಾಗಿ ಮುಂದುವರಿಯಲು ವಯಸ್ಸಿನ ಮಿತಿ ಕುರಿತು ಬಿಜೆಪಿ ಸಂವಿಧಾನದಲ್ಲಿ ಉಲ್ಲೇಖವಾಗಿಲ್ಲ. ನರೇಂದ್ರ ಮೋದಿ ಅವರೇ ನಮ್ಮ ನಾಯಕ ಹಾಗೂ ಭವಿಷ್ಯದಲ್ಲೂ ಅವರೇ ನಾಯಕರಾಗಿ ಇರಲಿದ್ದಾರೆ” ಎಂದಿದ್ದಾರೆ.

ಕೇಜ್ರಿವಾಲ್‌ ನಡೆಸಿದ ವಾಗ್ದಾಳಿ ಹೀಗಿತ್ತು…

ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್‌, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. “ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Lok Sabha Election: ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಕರ್ನಾಟಕ ಸೇರಿ ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೂರನೇ ಹಂತದ ಮತದಾನವು ಮೇ 7ರಂದು ನಡೆದಿದ್ದು, ಮತದಾನ ಪ್ರಮಾಣದ (Voter Turnout) ಕುರಿತು ಚುನಾವಣೆ ಆಯೋಗವು ನಿಖರ ಮಾಹಿತಿ ಒದಗಿಸಿದೆ. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ ಎಂಬುದಾಗಿ ಚುನಾವಣೆ ಆಯೋಗವು (Election Commission) ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ

ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಪಶ್ಚಿಮ ಬಂಗಾಳ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿಯೇ ಮತದಾನ ನಡೆದಿತ್ತು.

ರಾಜ್ಯವಾರು ಮತದಾನ ಪ್ರಮಾಣ

ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಇದು ಕೂಡ 2019ರ ಲೋಕಸಭೆ ಚುನಾವಣೆಗಿಂತ ಕಡಿಮೆ ಪ್ರಮಾಣದ ಮತದಾನವಾಗಿದೆ ಎಂದು ತಿಳಿದುಬಂದಿದೆ. ಏಪ್ರಿಲ್‌ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದ್ದು, ಇದುವರೆಗೆ ಮೂರು ಹಂತಗಳ ಮತದಾನ ಮುಕ್ತಾಯವಾಗಿದೆ. ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ಜಿಲ್ಲಾವಾರು ಮತದಾನ ಪ್ರಮಾಣ

ಮೇ 13ರಂದು 4ನೇ ಹಂತದ ಮತದಾನ

ಮೇ 13ರಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. 10 ರಾಜ್ಯಗಳ 96 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್‌ ಕೇಜ್ರಿವಾಲ್‌ ಅವರು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೆ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ ಎಂದು ಆರೋಪಿಸಿದರು.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ (Delhi Excise Policy Case) ಜೈಲು ಪಾಲಾಗಿ, ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದರು. “ಒಂದು ದೇಶ, ಒಬ್ಬ ನಾಯಕ ಎಂಬುದು ನರೇಂದ್ರ ಮೋದಿ ಅವರ ಮಿಷನ್‌ ಆಗಿದೆ. ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಬದಲಿಸಲಿದ್ದಾರೆ” ಎಂದು ಜೈಲಿನಿಂದ ಬಿಡುಗಡೆಯಾದ ಬಳಿಕ ನಡೆಸಿದ ಮೊದಲ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

“ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

“ನಾನು ಮಾತ್ರವಲ್ಲ ಪ್ರತಿಪಕ್ಷಗಳ ಇನ್ನೂ ಹಲವು ನಾಯಕರನ್ನು ಅವರು ಜೈಲಿಗೆ ಕಳುಹಿಸಲಿದ್ದಾರೆ. ಆ ಮೂಲಕ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಲಿದ್ದಾರೆ. ಈಗಾಗಲೇ ನಮ್ಮ ಪಕ್ಷದ ಸಚಿವರು, ಜಾರ್ಖಂಡ್‌ ಮುಖ್ಯಮಂತ್ರಿಯಾಗಿದ್ದ ಹೇಮಂತ್‌ ಸೊರೇನ್‌, ಟಿಎಂಸಿ ಸಚಿವರನ್ನು ಜೈಲಿಗೆ ಕಳುಹಿಸಲಾಗಿದೆ. ಹಾಗೇನಾದರೂ ಬಿಜೆಪಿಯೇ ಮತ್ತೆ ಗೆದ್ದರೆ, ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್‌, ಆರ್‌ಜೆಡಿಯ ತೇಜಸ್ವಿ ಯಾದವ್‌, ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೇರಿ ಇನ್ನೂ ಹಲವರು ಜೈಲು ಸೇರಲಿದ್ದಾರೆ. ಕೆಲವರ ರಾಜಕೀಯ ಜೀವನ ಅಂತ್ಯಗೊಳಿಸಲು ತಮ್ಮದೇ ಪಕ್ಷದ ನಾಯಕರನ್ನು ಕೂಡ ಜೈಲಿಗೆ ಕಳುಹಿಸಲಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Continue Reading
Advertisement
jay Shah
ಪ್ರಮುಖ ಸುದ್ದಿ20 mins ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು25 mins ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು58 mins ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್60 mins ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ3 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ3 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ3 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ3 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Rain News
ಮಳೆ3 hours ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

ICMR Dietary Guidelines
ಆರೋಗ್ಯ4 hours ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು8 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ18 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌