ವಿಸ್ತಾರ TOP 10 NEWS | ನೂಪುರ್‌ ಕ್ಷಮೆ ಕೋರಲಿ ಎಂದ ʼಸುಪ್ರೀಂʼನಿಂದ ರಾಜಣ್ಣ ಕ್ಷಮೆಯಾಚನೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ದೇಶ

ವಿಸ್ತಾರ TOP 10 NEWS | ನೂಪುರ್‌ ಕ್ಷಮೆ ಕೋರಲಿ ಎಂದ ʼಸುಪ್ರೀಂʼನಿಂದ ರಾಜಣ್ಣ ಕ್ಷಮೆಯಾಚನೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Vistara top 10 01072022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಂದೇ ಒಂದು ಹೇಳಿಕೆಯಿಂದ ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಕುರಿತು ಸುಪ್ರೀಂಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದ್ದು, ದೇಶದ ಕ್ಷಮೆಯಾಚಿಸಬೇಕು ಎಂದು ಕಟುವಾಗಿ ತಿಳಿಸಿದೆ. ಈ ನಡುವೆ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತು ಆಡಿದ ಅಪದ್ಧ ಮಾತಿಗೆ ಮಧುಗಿರಿ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಕ್ಷಮೆಯಾಚಿಸಲು ನಿರ್ಧರಿಸಿದ್ದಾರೆ. ರಾಜಸ್ಥಾನದ ಕನ್ಹಯ್ಯ ಲಾಲ್‌ ಹತ್ಯೆ ಮಾಡಿದವರಿಗೆ ಮುಂಬೈ ಭಯೋತ್ಪಾದಕ ದಾಳಿ ನಂಟಿದೆಯೇ ಎಂಬ ಪ್ರಶ್ನೆ ಮೂಡಿದೆ ಎಂಬುದು ಸೇರಿದಂತೆ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ಭದ್ರತಾ ವ್ಯವಸ್ಥೆಗೇ ಬೆದರಿಕೆ ಒಡ್ಡಿದ ನೂಪುರ್‌ ಶರ್ಮಾ ದೇಶದ ಕ್ಷಮೆ ಕೋರಬೇಕು: ಸುಪ್ರೀಂಕೋರ್ಟ್‌
ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಇಡೀ ದೇಶದ ಕ್ಷಮೆ ಕೋರಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ನೂಪುರ್‌ ಶರ್ಮಾ ಪಾಲ್ಗೊಂಡ ಡಿಬೇಟ್‌ ಅನ್ನು ನಾವು ವೀಕ್ಷಿಸಿದ್ದೇವೆ. ಅದರಲ್ಲಿ ನೂಪುರ್‌ ಶರ್ಮಾರನ್ನು ಹೇಗೆ ಪ್ರಚೋದಿಸಲಾಯಿತು ಎಂಬುದನ್ನೂ ನೋಡಿದ್ದೇವೆ. ಆದರೆ ನಂತರ ಅವಳಾಡಿದ ಮಾತು, ಕೊನೆಯಲ್ಲಿ ನಾನೊಬ್ಬ ವಕೀಲೆ ಎಂದು ಹೇಳಿಕೊಂಡಿದ್ದೆಲ್ಲ ನಾಚಿಕೆಗೇಡು ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸೂರ್ಯಕಾಂತ್‌ ಹೇಳಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

2. Rajasthan murder: ಕನ್ಹಯ್ಯ ಲಾಲ್‌ ಹಂತಕರಿಗೆ mumbai terror ಲಿಂಕ್‌? ಏನಿದು 2611 ?
ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೇಲರ್‌ ಕನ್ಹಯ್ಯ ಲಾಲ್‌ ಹತ್ಯೆಗೂ 2008ರಲ್ಲಿ ಮುಂಬಯಿಯಲ್ಲಿ ಸಂಭವಿಸಿದ, ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉಗ್ರ ದಾಳಿಗೂ ಸಂಬಂಧ ಇದೆಯಾ?
ಕನ್ಹಯ್ಯ ಲಾಲ್‌ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಘಟನೆಯ ಎಲ್ಲ ಆಯಾಮಗಳ ಬೆನ್ನು ಹತ್ತಿದ್ದು ಈ ವೇಳೆ ಹಂತಕರಾದ ಮೊಹಮ್ಮದ್‌ ರಿಯಾಜ್‌ ಅಟ್ಟಾರಿ ಮತ್ತು ಗೌಸ್‌ ಮೊಹಮ್ಮದ್‌ಗೂ ಮುಂಬಯಿ ದಾಳಿಗೂ (Mumbai terror) ಸಂಬಂಧ ಇರುವ ಅಂಶ ಬಯಲಾಗಿದೆ. ೨೬/೧೧ ಘಟನೆಯನ್ನು ನೆನಪಿಸುವ ನೋಂದಣಿ ಸಂಖ್ಯೆಯನ್ನು ಉದಯಪುರದ ಕನ್ಹಯ್ಯ ಲಾಲ್‌ ಹಂತಕರು ತಮ್ಮ ವಾಹನಕ್ಕೆ ಬಳಸಿರುವುದು ಈಗ ಹಲವು ಗುಮಾನಿಗಳಿಗೆ ಕಾರಣವಾಗಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೩. ಬಂಗಾರದ ಆಮದು ಸುಂಕ 7.5%ರಿಂದ 12.5ಕ್ಕೆ ಹೆಚ್ಚಳ, ಮತ್ತಷ್ಟು ದುಬಾರಿಯಾಗಲಿದೆ ಚಿನ್ನ
ಭಾರತ ಬಂಗಾರದ ಖರೀದಿಯನ್ನು ನಿರುತ್ತೇಜನಗೊಳಿಸಲು ಆಮದು ಸುಂಕವನ್ನು ಶೇ.೭.೫ರಿಂದ ಶೇ.೧೨.೫ಕ್ಕೆ ಶುಕ್ರವಾರ ಹೆಚ್ಚಿಸಿದೆ. ಇದರ ಪರಿಣಾಮ ಚಿನ್ನ ಮತ್ತಷ್ಟು ದುಬಾರಿಯಾಗುವುದು ಖಚಿತ. ಭಾರತ ವಿಶ್ವದಲ್ಲಿಯೇ ಅತಿ ಹೆಚ್ಚು ಚಿನ್ನ ಖರೀದಿಸುವ ಎರಡನೇ ರಾಷ್ಟ್ರವಾಗಿದೆ. ಆದರೆ ಬಹುತೇಕ ಚಿನ್ನದ ಬೇಡಿಕೆಯನ್ನು ಆಮದು ಮಾಡುವ ಮೂಲಕ ಭರಿಸಲಾಗುತ್ತಿದೆ. ಡಾಲರ್‌ ಎದುರು ರೂಪಾಯಿ ಇತ್ತೀಚೆಗೆ ಗಣನೀಯ ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಬಂಗಾರದ ಆಮದು ವಿತ್ತೀಯ ಕೊರತೆಗೆ ಕಾರಣವಾಗುತ್ತಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

4. ದೇವೇಗೌಡರನ್ನು ಭೇಟಿಯಾಗಿ ಕ್ಷಮೆಯಾಚಿಸುವೆ, ಆದರೆ ಬೆದರಿಕೆಗೆ ಜಗ್ಗುವುದಿಲ್ಲ: ಕೆ.ಎನ್‌. ರಾಜಣ್ಣ
ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈಗಲೇ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ಸದ್ಯದಲ್ಲೆ ನಾಲ್ವರ ಮೇಲೆ ಹೋಗುತ್ತಾರೆ ಎಂದು ಆಡಿದ ಮಾತು ವಿವಾದವಾಗುತ್ತಿರುವುದನ್ನು ಗಮನಿಸಿದ ಮಧುಗಿರಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಕೆ.ಎನ್‌. ರಾಜಣ್ಣ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಆದರೂ ಈ ಬಗ್ಗೆ ವಾದ ಮಾಡಲು ಹೋಗುವುದಿಲ್ಲ. ಖುದ್ದಾಗಿ ಎಚ್‌.ಡಿ. ದೇವೇಗೌಡರನ್ನು ಭೇಟಿ ಮಾಡಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

5. UAV | ಭಾರತೀಯ ಸೇನೆಯ ಚಾಲಕರಹಿತ ವಿಮಾನ ಚಿತ್ರದುರ್ಗದಲ್ಲಿ ಮೊದಲ ಯಶಸ್ವಿ ಹಾರಾಟ
ಚಾಲಕ ರಹಿತ ವಿಮಾನದ ಮೊದಲ ಹಾರಾಟವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದಲ್ಲಿ ಯಶಸ್ವಿಯಾಗಿ ನಡೆಸಿದೆ. ಮಾನವ ರಹಿತ ವೈಮಾನಿಕ ವಾಹನವನ್ನು (UAV) ಅಟಾನಮಸ್‌ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್‌ಸ್ಟ್ರೇಟರ್’ ಎಂದು ಕರೆಯಲಾಗುತ್ತದೆ. ಕರ್ನಾಟಕದ ಚಿತ್ರದುರ್ಗದ ವೈಮಾನಿಕ ಟೆಸ್ಟ್ ರೇಂಜ್‌ನಲ್ಲಿ ಇದರ ಹಾರಾಟ ನಡೆಸಲಾಯಿತು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೬. ಆಗಸ್ಟ್‌ನಲ್ಲಿ ವಿಧಾನಮಂಡಲ ಅಧಿವೇಶನ: ಸಂಪುಟ ಸಭೆಯಲ್ಲಿ ವಿವಿಧ ತೀರ್ಮಾನಗಳು
ಕರ್ನಾಟಕ ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಆಗಸ್ಟ್‌ನಲ್ಲಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದೆ. ಸಂಪುಟ ಸಭೆಯ ನಂತರ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)
ಚುನಾವಣೆಗೆ ʻನಮ್ಮ ಕ್ಲಿನಿಕ್‌ʼ ಟ್ರಂಪ್‌ ಕಾರ್ಡ್‌: ರಾಜ್ಯಾದ್ಯಂತ ತಲೆಯೆತ್ತಲಿವೆ ಸರ್ಕಾರಿ ಚಿಕಿತ್ಸಾಲಯ

7. Maha politics: ಜುಲೈ 4ರಂದು ಶಿಂಧೆ ವಿಶ್ವಾಸಮತ ಯಾಚನೆ, ತಡೆ ನೀಡುವಂತೆ ಸುಪ್ರೀಂ ಮೊರೆ ಹೊಕ್ಕ ಉದ್ಧವ್‌ ಟೀಮ್‌ಗೆ ನಿರಾಸೆ
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶಿವಸೇನೆಯ ಬಂಡಾಯ ಬಣದ ನಾಯಕ ಏಕನಾಥ್‌ ಶಿಂಧೆ ಅವರು ಜುಲೈ ೪ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ನಿರೀಕ್ಷೆ ಇದೆ. ಜುಲೈ ೨ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಈ ನಡುವೆ ವಿಶ್ವಾಸ ಮತ ಯಾಚನೆಗೆ ತಡೆಯಾಜ್ಞೆ ನೀಡಬೇಕು ಎಂಬ ಉದ್ಧವ್‌ ಠಾಕ್ರೆ ಬಣದ ಬೇಡಿಕೆಯನ್ನು ಸುಪ್ರೀಂಕೋರ್ಟ್‌ ತಳ್ಳಿ ಹಾಕಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

೮. Mid Size SUV ಕಾರು ಬಿಡುಗಡೆಗೆ ಮಾರುತಿ ಸುಜುಕಿ ಸಿದ್ಧತೆ
ಭಾರತದ ಕಾರು ಮಾರುಕಟ್ಟೆಯಲ್ಲಿ ಅರ್ಧಕ್ಕಿಂತಲೂ ಹೆಚ್ಚು ಪಾಲು ಪಡೆದುಕೊಂಡಿರುವ ಮಾರುತಿ ಸುಜುಕಿ ಕಂಪನಿಯು ಇದುವರೆಗೂ Mid Size SUV ಕಾರನ್ನು ಮಾರುಕಟ್ಟೆಗೆ ಬಿಟ್ಟಿಲ್ಲ. ಟಾಟಾ, ಮಹೀಂದ್ರಾ, ಕಿಯಾ ಮತ್ತು ಹ್ಯುಂಡೈ ಸೇರಿದಂತೆ ಪ್ರಮುಖ ಕಂಪನಿಗಳು ಈ ಸೆಗ್ಮೆಂಟ್‌ನಲ್ಲಿ ಹಲವು ಕಾರುಗಳನ್ನು ಮಾರುಕಟ್ಟೆಗೆ ಬಿಟ್ಟು ಯಶಸ್ಸು ಪಡೆದುಕೊಂಡಿವೆ. ಈ ಕೊರತೆ ನೀಗಿಸುವ ಉದ್ದೇಶದಿಂದ ಮಾರುತಿ ಸುಜುಕಿ ಕಂಪನಿಯು ಜುಲೈ ಮೂರನೇ ವಾರದಲ್ಲಿ Mid Size SUV ಕಾರೊಂದನ್ನು ಘೋಷಣೆ ಮಾಡಲಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

9. ಪುರಿ ಜಗನ್ನಾಥ ದೇಗುಲದ ಗೋಪುರದ ಮೇಲೆ ಹಕ್ಕಿಗಳು-ವಿಮಾನ ಹಾರಾಡುವುದಿಲ್ಲವೇಕೆ?; ಇಲ್ಲಿದೆ ಕಾರಣ
ಒಡಿಶಾದ ಪುರಿ ಜಗನ್ನಾಥ ಯಾತ್ರೆ ವಿಶ್ವವಿಖ್ಯಾತ. ಜಗನ್ನಾಥ ದೇವರ ವೈಭವದ ಉತ್ಸವ ಶುಕ್ರವಾರದಿಂದ ಪ್ರಾರಂಭವಾಗಿದ್ದು, ಜುಲೈ 12ರವರೆಗೆ ನಡೆಯುತ್ತದೆ. ಮೂರು ರಥಗಳ ಮೆರವಣಿಗೆ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಆಗಮಿಸುತ್ತಾರೆ. ಅಲ್ಲಿನ ವೈಭವ ಎಷ್ಟು ಕಣ್ಮನ ಸೆಳೆಯುತ್ತದೆಯೋ, ದೇಗುಲಕ್ಕಿರುವ ವಿಶೇಷತೆಗಳೂ ಅಷ್ಟೇ ಗಮನ ಸೆಳೆಯುತ್ತವೆ. ಪುರಿ ಜಗನ್ನಾಥ ದೇವಳ ಅಚ್ಚರಿಗಳ ಲೋಕ ಎಂದರೂ ತಪ್ಪಾಗಲಾರದು. ಅದರಲ್ಲೊಂದು ಬಹುಮುಖ್ಯವಾಗಿ, ʻದೇವಾಲಯದ ಗೋಪುರದ ಮೇಲ್ಭಾಗದಲ್ಲಿ ಹಕ್ಕಿಗಳಾಗಲೀ, ವಿಮಾನ-ಹೆಲಿಕಾಪ್ಟರ್‌ಗಳಾಗಲಿ ಎಂದಿಗೂ ಹಾರಾಡುವುದಿಲ್ಲʼ ಎಂಬುದು. ಇದೊಂದು ಅಚ್ಚರಿ-ಕುತೂಹಲದ ವಿಷಯ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

10. Pavitra Lokesh | ಸುಚೇಂದ್ರ ಪ್ರಸಾದ್ ಜತೆ ಮದುವೆ ಆಗಿರಲಿಲ್ಲ, ನರೇಶ್‌ ಜತೆಗೂ ಆಗಿಲ್ಲ: ಪವಿತ್ರಾ ಲೋಕೇಶ್‌
ತೆಲುಗು ನಟ ನರೇಶ್‌ ಜತೆಗಿನ ಸಂಬಂಧದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ನಟಿ ಪವಿತ್ರಾ ಲೋಕೇಶ್‌ (Pavitra Lokesh) ಶುಕ್ರವಾರ (ಜೂನ್‌ 29) ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾನು ಮದುವೆ ಆಗಿಲ್ಲ. ನಾನೇಕೆ ವಿಚ್ಛೇದನ ತೆಗೆದುಕೊಳ್ಳಬೇಕು? ಎಂದು ಪ್ರಶ್ನಿಸಿರುವ ಪವಿತ್ರಾ ಲೋಕೇಶ್‌, ನರೇಶ್‌ ಜತೆಗೂ ಮದುವೆ ಆಗಿಲ್ಲ ಎಂದಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ; ಓರ್ವ ಉಗ್ರ ಹತ

Encounter in Kupwara: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಕುಮ್ಕಾರಿ ಪ್ರದೇಶದಲ್ಲಿ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟರ್ ಪ್ರಾರಂಭವಾಯಿತು. ಈ ವೇಳೆ ಸೈನಿಕರು ಗಾಯಗೊಂಡರು. ಇದು ಮೂರು ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್.

VISTARANEWS.COM


on

Encounter in Kupwara
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ (Encounter in Kupwara). ಘಟನೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.

ಜಿಲ್ಲೆಯ ಕುಮ್ಕಾರಿ (Kumkari) ಪ್ರದೇಶದಲ್ಲಿ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟರ್ ಪ್ರಾರಂಭವಾಯಿತು. ಈ ವೇಳೆ ಸೈನಿಕರು ಗಾಯಗೊಂಡರು. ಇದು ಮೂರು ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್. ಇಲ್ಲಿ ಭಯೋತ್ಪಾದಕರ ದಂಡು ಬೀಡು ಬಿಟ್ಟಿದೆ ಎನ್ನುವ ಖಚಿತ ಮಾಹಿತಿ ಮೇರೆ ಸೈನಿಕರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆ ಹೆಚ್ಚಾಗಿದ್ದು, ಇದನ್ನು ಮಟ್ಟ ಹಾಕಲು ಯೋಧರು ನಿರತರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಈಗಾಗಲೇ ಹಲವು ಭಯೋತ್ಪಾದಕರು ಹತರಾಗಿದ್ದಾರೆ.

ಜುಲೈ 24ರಂದು ಕುಪ್ವಾರಾ ಜಿಲ್ಲೆಯ ಕೌಟ್‌ನ ತ್ರಿಮುಖ್ ಟಾಪ್ ಬಳಿ ಸೇನಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನೊಬ್ಬ ಹತನಾಗಿದ್ದ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಎನ್‌ಸಿಒ ನಿಯೋಜಿತ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಇನ್ನು ಜುಲೈ 18ರಂದು ಕುಪ್ವಾರಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಕೇರನ್‌ ಗಡಿ ನಿಯಂತ್ರಣ ರೇಖೆ ಬಳಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಘಟನೆಯಲ್ಲಿ ಒಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದರು.

ಜಡ್ಡಾನ ಬಾಟಾ ಗ್ರಾಮದಲ್ಲಿ ಉಗ್ರರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆಗೆ ಬೆಳ್ಳಂಬೆಳಗ್ಗೆ 2 ಗಂಟೆಗೆ ಸೇನೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಶೋಧ ಕಾರ್ಯದ ವೇಳೆ ಸರ್ಕಾರಿ ಶಾಲೆಯೊಳಗಿನ ತಾತ್ಕಾಲಿಕ ಭದ್ರತಾ ಶಿಬಿರದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು.

ಈ ಬಗ್ಗೆ ಜಮ್ಮುವಿನ ರಕ್ಷಣಾ ಇಲಾಖೆ ಪಿಆರ್‌ಒ ಪ್ರತಿಕ್ರಿಯಿಸಿ, ಉಧಂಪುರದ ಏರ್ ಫೋರ್ಸ್ ಸ್ಟೇಷನ್‌ನಿಂದ ಎಎಲ್‌ಎಚ್‌ನ ತ್ವರಿತ ಕ್ರಮವು ದೋಡಾದಲ್ಲಿ (ಜೆ&ಕೆ) ತೀವ್ರವಾಗಿ ಗಾಯಗೊಂಡ ಸೈನಿಕನ ಜೀವವನ್ನು ಉಳಿಸಿತ್ತು. ಸವಾಲಿನ ಹವಾಮಾನದ ಹೊರತಾಗಿಯೂ, ಉಧಮ್‌ಪುರದ ಕಮಾಂಡ್ ಆಸ್ಪತ್ರೆಯಲ್ಲಿ ಸಕಾಲಿಕ ವೈದ್ಯಕೀಯ ಆರೈಕೆಯನ್ನು ಖಾತರಿಪಡಿಸುವ ಮೂಲಕ ಸ್ಥಳಾಂತರಿಸುವಿಕೆ ಯಶಸ್ವಿಯಾಗಿದೆ. ಅವರ ಸಮರ್ಪಣೆ ಮತ್ತು ಶೌರ್ಯಕ್ಕಾಗಿ ತಂಡಕ್ಕೆ ಅಭಿನಂದನೆಗಳು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿತ್ತು.

ಇದನ್ನೂ ಓದಿ: Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

ನಾಲ್ವರು ಯೋಧರು ಹುತಾತ್ಮ

ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಜುಲೈ 16ರ ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದರು. ಈ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದರು. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದರು. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

Continue Reading

ದೇಶ

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Narendra Modi: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

VISTARANEWS.COM


on

Narendra Modi
Koo

ನವದೆಹಲಿ: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಇಟಲಿಯಲ್ಲಿ ಜೂನ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಭೇಟಿಯಾಗಿದ್ದರು. ಇದೀಗ ಎರಡು ತಿಂಗಳ ಅಂತರದಲ್ಲಿ ಈ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ.

ಮೋದಿ ಅವರು ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಯ ನಂತರ ಮೋದಿ ಮೂರನೇ ಅವಧಿಗೆ ಪ್ರದಾನಿಯಾಗಿ ಆಯ್ಕೆಯಾದ ದಿನದಂದು ಝೆಲೆನ್ಸ್ಕಿ ಕರೆ ಮಾಡಿ ಅಭಿನಂದಿಸಿದ್ದರು ಮತ್ತು ಯುದ್ಧ ಪೀಡಿತ ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದಕ್ಕೂ ಮೊದಲು ಮಾರ್ಚ್‌ನಲ್ಲಿ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಮೂಲಕ ಮಾತನಾಡಿದ್ದ ಮೋದಿ ಅವರು ಭಾರತ-ಉಕ್ರೇನ್ ಸಂಬಂಧಬನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದ್ದರು. ರಷ್ಯಾ-ಉಕ್ರೇನ್‌ ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ನಡೆಸುವಂತೆ ಕರೆ ನೀಡಿದ್ದರು.

ಎರಡು ಯುದ್ಧ ನಿಲ್ಲಿಸಲು ಭಾರತವು ತನ್ನ ಶಕ್ತಿಮೀರಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅದಕ್ಕೆ ಪೂರಕವಾಗಿ ಯುದ್ಧ ಪ್ರಾರಂಭವಾದಾಗಿನಿಂದ ಭಾರತವು ಇದನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಿಳಿಸಿದೆ.

ರಷ್ಯಾ ಭೇಟಿ

ಈ ತಿಂಗಳ ಆರಂಭದಲ್ಲಿ ರಷ್ಯಾಕ್ಕೆ ಎರಡು ದಿನಗಳ ಭೇಟಿ ನೀಡಿದ್ದ ಮೋದಿ ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದರು. ರಷ್ಯಾ ಮತ್ತು ಭಾರತದ ನಡುವಿನ ಸಹಕಾರಕ್ಕಾಗಿ ಸ್ಪಷ್ಟ ಚೌಕಟ್ಟನ್ನು ನಿರ್ಮಿಸುವಲ್ಲಿ ಮೋದಿಯವರ ಕೊಡುಗೆಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘಿಸಿದ್ದರು.

ಇದೇ ವೇಳೆ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಗಿತ್ತು. ವಿಶೇಷ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ ನೀಡಲಾಯಿತು ಎಂದು ರಷ್ಯಾ ಹೇಳಿತ್ತು.

ಇದನ್ನೂ ಓದಿ: PM Modi Russia Visit : ಭಾರತ-ರಷ್ಯಾ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Continue Reading

ದೇಶ

Building Collapsed: 3 ಅಂತಸ್ತಿನ ಕಟ್ಟಡ ಕುಸಿತ; ಅವಶೇಷದ ಅಡಿಯಲ್ಲಿ ಹಲವರು ಸಿಕ್ಕಿ ಬಿದ್ದಿರುವ ಶಂಕೆ

Building Collapsed: ನವಿಮುಂಬೈಯ ಶಹಬಾಜ್‌ನಲ್ಲಿ ಇಂದು ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವೀ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

VISTARANEWS.COM


on

Building Collapsed
Koo

ಮುಂಬೈ: ನವಿಮುಂಬೈಯ ಶಹಬಾಜ್‌ನಲ್ಲಿ ಇಂದು (ಜುಲೈ 27) ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ (Building Collapsed). ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್‌ ತಂಡಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವೀ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು ಜಿ+3 ಕಟ್ಟಡ. ಈ ಕಟ್ಟಡ ಇರುವ ಶಹಬಾಜ್ ಗ್ರಾಮ ಬೇಲಾಪುರ ವಾರ್ಡ್ ವ್ಯಾಪ್ತಿಗೆ ಬರುತ್ತವೆ. ಕಟ್ಟಡದಲ್ಲಿ 13 ಫ್ಲ್ಯಾಟ್‌ಗಳಿವೆ. ಈಗಾಗಲೇ ಇಬ್ಬರನ್ನು ರಕ್ಷಿಸಲಾಗಿದೆ. ಎನ್‌ಡಿಆರ್‌ಎಫ್‌ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಕೈಲಾಸ್ ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಕ್ಷಿಸಲಾದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು 10 ವರ್ಷ ಹಳೆಯ ಕಟ್ಟಡ. ಯಾವ ಕಾರಣಕ್ಕಾಗಿ ಕುಸಿದಿದೆ ಎನ್ನುವ ಬಗ್ಗೆ ತನಿಖೆ ಮುಂದುವರೆದಿದೆ. ಕಟ್ಟಡದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುʼʼ ಎಂದು ಅವರು ಎಚ್ಚರಿಸಿದ್ದಾರೆ.

ವಾರದ ಹಿಂದೆಯೂ ನಡೆದಿತ್ತು

ಕಳೆದ ವಾರ ನಾಲ್ಕು ಅಂತಸ್ತಿನ ಕಟ್ಟಡ(Building Collapsed)ವೊಂದು ಏಕಾಏಕಿ ಕುಸಿದು ಬಿದ್ದು, ಮಹಿಳೆಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮುಂಬೈ (Mumbai)ಯಲ್ಲಿ ನಡೆದಿತ್ತು. ಮುಂಬೈನ ಗ್ರಾಂಟ್ ರಸ್ತೆಯಲ್ಲಿರುವ ಕಟ್ಟಡವೊಂದರ ಮುಂಭಾಗದ ಭಾಗ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದರು. ಆ ಘಟನೆ ಮರೆಯಾಗುವ ಮುನ್ನ ಇನ್ನೊಂದು ದುರಂತ ಸಂಭವಿಸಿದೆ.

ನಾಲ್ಕು ಅಂತಸ್ತಿನ ರುಬಿನಿಸಾ ಮಂಜಿಲ್ ಕಟ್ಟಡದ ಎರಡು ಮತ್ತು ಮೂರನೇ ಮಹಡಿಯ ಭಾಗಗಳು ಬಾಲ್ಕನಿಯೊಂದಿಗೆ ಬೆಳಗ್ಗೆ ಕುಸಿದು ಬಿದ್ದಿದ್ದವು. ಕಟ್ಟಡ ಕುಸಿತದ ವೇಳೆ ಸುಮಾರು 35-40 ಮಂದಿ ಕಟ್ಟಡದಲ್ಲಿದ್ದರು. ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು. ಅವಶೇಷಗಳಡಿಯಲ್ಲಿ ಕಾಲು ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ರಕ್ಷಿಸಲು ಸ್ಥಳೀಯರು ಕಾಂಕ್ರೀಟ್ ಚಪ್ಪಡಿಗಳನ್ನು ಎತ್ತುತ್ತಿರುವ ದೃಶ್ಯ ಕಂಡು ಬಂದಿತ್ತು. ಪೊಲೀಸರು ಮತ್ತು ಆಂಬ್ಯುಲೆನ್ಸ್‌ಗಳೊಂದಿಗೆ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡು ಬಿಟ್ಟು ರಕ್ಷಣಾ ಕಾರ್ಯಾಚರಣೆ ನಡೆಸಿದ್ದವು. ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಕಟ್ಟಡ ಕುಸಿದಿತ್ತು ಎನ್ನಲಾಗಿದೆ. ಇನ್ನು ಈ ಕಟ್ಟಡ ಅತ್ಯಂತ ಹಳೆಯ ಕಟ್ಟಡವಾಗಿರುವ ಕಾರಣ ಅದನ್ನು ಸಂಪೂರ್ಣವಾಗಿ ತೆರವು ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: Building Collapsed: ಭಾರೀ ಮಳೆಗೆ ನಾಲ್ಕು ಅಂತಸ್ತಿಗೆ ಕಟ್ಟಡ ಧರಾಶಾಹಿ; ಮಹಿಳೆ ಬಲಿ

Continue Reading

ವಾಣಿಜ್ಯ

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

ಬಹುತೇಕ ಕೆಲಸಗಳಿಗೆ ದಾಖಲೆಯಾಗಿ ಬಳಸಲ್ಪಡುವ ಭಾರತೀಯ ನಾಗರಿಕರ ಗುರುತಿನ ಪುರಾವೆಯಾಗಿರುವ ಆಧಾರ್ ಕಾರ್ಡ್ ನಲ್ಲಿ (Aadhaar Update) ವಿಳಾಸ ಬದಲಾವಣೆಗೆ ಇನ್ನು ಮುಂದೆ ವಿದ್ಯುತ್, ನೀರು, ದೂರವಾಣಿ ಬಿಲ್ ಗಳನ್ನು ಬಳಸಬಹುದು. ಆದರೆ ಇದಕ್ಕೆ ಕೆಲವು ನಿಯಮಗಳಿವೆ. ಅದು ಏನು, ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Aadhaar Update
Koo

ಆಧಾರ್ ಕಾರ್ಡ್ ಭಾರತೀಯ ನಾಗರಿಕರ ಗುರುತಿನ ( identity of Indian citizens) ದಾಖಲೆಯಾಗಿದೆ. ಈ ಸರ್ಕಾರಿ ದಾಖಲೆಯನ್ನು ಅನೇಕ ಕೆಲಸಗಳಿಗಾಗಿ ಬಳಸಲಾಗುತ್ತದೆ. ಆಧಾರ್ ಕಾರ್ಡ್ ನಲ್ಲಿ (Aadhaar Update) ಯಾವುದೇ ಮಾಹಿತಿ (name and address) ಹಳೆಯದಾಗಿದ್ದರೆ ಅದನ್ನು ಕಾಲಕಾಲಕ್ಕೆ ಅಪ್ಡೇಟ್ ಮಾಡಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಈ ಮಾಹಿತಿ ಅಪ್ಡೇಟ್ ಗೆ ಕೆಲವೊಂದು ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಆಧಾರ್ ಕಾರ್ಡ್‌ನಲ್ಲಿ ನೀಡಲಾದ ಮಾಹಿತಿಯು ಹಳೆಯದಾಗಿರಬಾರದು. ಯಾಕೆಂದರೆ ಆಗಾಗ್ಗೆ ಇದನ್ನು ಗುರುತಿನ ಪುರಾವೆಯಾಗಿ ಬಳಸಬೇಕಾಗುತ್ತದೆ. ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಮತ್ತು ವಿಳಾಸ ಮಾಹಿತಿಯು ಸರಿಯಾಗಿರಬೇಕು. ಒಂದು ವೇಳೆ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯೋಚಿಸುತ್ತಿದ್ದರೆ ಇದಕ್ಕಾಗಿ ಬಳಸುವ ದಾಖಲೆಗಳು ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯ.

ಆಧಾರ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಹೆಸರು, ವಿಳಾಸ ನವೀಕರಣಕ್ಕೆ ಈ ಕೆಲವು ದಾಖಲೆಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

Aadhaar Update
Aadhaar Update


ಯಾವ ದಾಖಲೆಗಳು ಮುಖ್ಯ?

ಆಧಾರ್ ಕಾರ್ಡ್‌ನಲ್ಲಿರುವ ಹೆಸರು, ವಿಳಾಸವನ್ನು ನವೀಕರಿಸಲು ಮಾನ್ಯವಾದ ಭಾರತೀಯ ಪಾಸ್‌ಪೋರ್ಟ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಅನ್ನು ಪುರಾವೆಯಾಗಿ ಬಳಸಬಹುದು. ಆದರೆ ಎಲ್ಲರೂ ಪಾಸ್ ಪೋರ್ಟ್, ಪಾನ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸನ್ಸ್ ಹೊಂದಿರುವುದಿಲ್ಲ. ಅಲ್ಲದೇ ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಅನ್ನು ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುವುದಿಲ್ಲ. ಆದರೆ ಪಡಿತರ ಮತ್ತು ಇ-ಪಡಿತರ ಕಾರ್ಡ್ ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Income Tax Return: ಹಳೆಯ ತೆರಿಗೆ ಪದ್ದತಿ ಕೊನೆಯಾಗುತ್ತಾ? CBDT ಅಧ್ಯಕ್ಷ ಹೇಳೋದೇನು?

ನೀರು, ವಿದ್ಯುತ್‌ ಬಿಲ್‌:

ಈಗ ಇದರೊಂದಿಗೆ ವಿದ್ಯುತ್, ನೀರು ಮತ್ತು ದೂರವಾಣಿ ಬಿಲ್‌ಗಳನ್ನು ವಿಳಾಸದ ಪುರಾವೆಯಾಗಿ ಬಳಸಬಹುದು. ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯಾರ ಹೆಸರಿನಲ್ಲಿ ವಿದ್ಯುತ್ ಬಿಲ್, ದೂರವಾಣಿ ಬಿಲ್, ನೀರಿನ ಬಿಲ್ ಅನ್ನು ಬಳಸಬಹುದು. ಆದರೆ ಇದು ಕನಿಷ್ಠ 3 ತಿಂಗಳಿಗಿಂತ ಹಳೆಯದಾಗಿರಬೇಕು.

ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್:

ಇದಲ್ಲದೇ ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್ ಅನ್ನು ಸಹ ಬಳಸಬಹುದು. ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಜೀವ ಮತ್ತು ವೈದ್ಯಕೀಯ ವಿಮಾ ಪಾಲಿಸಿಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳುತ್ತದೆ. ಆದರೆ ಈ ನೀತಿಯು ಬಿಲ್ ವಿತರಿಸಿದ ದಿನಾಂಕದಿಂದ 1 ವರ್ಷದವರೆಗೆ ಮಾತ್ರ ಮಾನ್ಯವಾಗಿರುತ್ತದೆ.

Continue Reading
Advertisement
Actor Darshan Lata Jaiprakash says that since Darshan is a devotee of God,
ಸಿನಿಮಾ3 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ7 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ17 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ18 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ37 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ1 hour ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ; ಓರ್ವ ಉಗ್ರ ಹತ

Champions Trophy 2025
ಕ್ರೀಡೆ1 hour ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ1 hour ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ1 hour ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್1 hour ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌