ವಿಸ್ತಾರ TOP 10 NEWS | ಪ್ರವೀಣ್‌ ಹತ್ಯಾರೋಪಿಗಳ ಸೆರೆಯಿಂದ VR ಬಿಡುಗಡೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಟಾಪ್ 10 ನ್ಯೂಸ್

ವಿಸ್ತಾರ TOP 10 NEWS | ಪ್ರವೀಣ್‌ ಹತ್ಯಾರೋಪಿಗಳ ಸೆರೆಯಿಂದ VR ಬಿಡುಗಡೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWSನಲ್ಲಿ.

VISTARANEWS.COM


on

vistara top 10 news 28072022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸುಳ್ಯದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಂತರ ಕಾರ್ಯಕರ್ತರ ಬಂಡಾಯಕ್ಕೆ ಮಣಿದ ಬಿಜೆಪಿ ಸರ್ಕಾರ ತನ್ನ ವಾರ್ಷಿಕ ಕಾರ್ಯಕ್ರಮವನ್ನೇ ರದ್ದುಪಡಿಸಿದೆ, ಹತ್ಯೆ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಈ ನಡುವೆ, ಗುರುವಾರ ರಾತ್ರಿ ಸುರತ್ಕಲ್‌ನಲ್ಲಿ ಮುಸ್ಲಿಂ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಪರ್ವ ಮುಂದುವರಿದಿದೆ, ಈ ಆಕ್ರೋಶಕ್ಕೆ ಕಾರಣಗಳನ್ನು ಹಿಂದೂ ಚಿಂತಕರು ವಿಶ್ಲೇಷಣೆ ಮಾಡಿದ್ದಾರೆ. ಬಿಬಿಎಂಪಿ ಚುನಾವಣೆ ಕುರಿತು ಸುಪ್ರೀಂ ಆದೇಶ, ಚೆನ್ನೈಯಲ್ಲಿ ಚೆಸ್‌ ಒಲಿಂಪಿಯಾಡ್‌ ಸೇರಿ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Praveen Nettaru |  ಹತ್ಯೆ ಆರೋಪಿಗಳಾದ ಶಫೀಕ್‌, ಝಾಕೀರ್‌ ಆ.11ರವರೆಗೆ ನ್ಯಾಯಾಂಗ ಬಂಧನಕ್ಕೆ
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಫೀಕ್‌, ಝಾಕೀರ್‌ರನ್ನು ಪುತ್ತೂರು ನ್ಯಾಯಾಲಯಕ್ಕೆ ಬೆಳ್ಳಾರೆ ಪೊಲೀಸರು ಹಾಜರುಪಡಿಸಿದ್ದು, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಚಾರಣೆ ನಡೆಸಿದ ಪುತ್ತೂರಿನ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯವು ಬಂಧಿತರನ್ನು ಆಗಸ್ಟ್‌ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶವನ್ನು ಹೊರಡಿಸಿದೆ. ಶುಕ್ರವಾರ ಬೆಳಗ್ಗೆ ಶಫೀಕ್‌ ಮತ್ತು ಝಾಕೀರ್‌ರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದರು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)
ದಕ್ಷಿಣ ಕನ್ನಡದಲ್ಲಿ ಮತ್ತೊಂದು ಹತ್ಯೆ: ಸುರತ್ಕಲ್‌ನಲ್ಲಿ ಮುಸ್ಲಿಂ ಯುವಕನ ಕೊಲೆ

2. ಬಿಜೆಪಿ ಕಾರ್ಯಕರ್ತರ ಬಂಡಾಯದ ಮೂಲ ಏನು? ಹಿಂದು ಮುಖಂಡರು-ಚಿಂತಕರು ಏನೆನ್ನುತ್ತಾರೆ?
ದಕ್ಷಿಣ ಕನ್ನಡದ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ನಂತರ ಹಿಂದು ಸಂಘಟನೆಗಳಲ್ಲಿ, ವಿಶೇಷವಾಗಿ ಬಿಜೆಪಿ ಪಕ್ಷದಲ್ಲಿ ಆಂತರಿಕ ಆಕ್ರೋಶ ಭುಗಿಲೆದ್ದಿದೆ. ಆ ಪಕ್ಷದ ಯುವ ಕಾರ್ಯಕರ್ತರು ತಮ್ಮ ನಾಯಕರ ಮೇಲಿನ ಭರವಸೆಯನ್ನೇ ಕಳೆದುಕೊಂಡಿರುವುದಾಗಿ ತಿಳಿಸಿ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯ ಅಧ್ಯಕ್ಷರ ಕಾರನ್ನೇ ಅಲುಗಾಡಿಸಿ ಆಕ್ರೋಶ ಹೊರಹಾಕಿದ್ದಾರೆ. ಇದೆಲ್ಲದಕ್ಕೆ ತಣ್ಣಗೆ ಬೆದರಿದ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ, ಗುರುವಾರ ಹಮ್ಮಿಕೊಂಡಿದ್ದ ಬೃಹತ್‌ ವಾರ್ಷಿಕೋತ್ಸವ ಕಾರ್ಯಕ್ರಮವನ್ನೇ ರದ್ದುಮಾಡಿದೆ.
ಈ ಬಂಡಾಯಕ್ಕೆ ಕಾರಣ ಏನು? ಇದಕ್ಕೆ ಪರಿಹಾರ ಏನು? ಬಿಜೆಪಿಯಿಂದ ಪರಿಹಾರವೇ? ಬಿಜೆಪಿಯಲ್ಲೇ ಸಮಸ್ಯೆಯಿದೆಯೇ ಎಂಬ ಕುರಿತು ನಾಡಿನ ಇಬ್ಬರು ಹಿಂದು ಮುಖಂಡರು( ಹಿಂದು ಜಾಗರಣ ವೇದಿಕೆಯ ಜಗದೀಶ ಕಾರಂತ, ವಿಶ್ವ ಹಿಂದು ಪರಿಷತ್‌ನ ಕೇಶವ ಹೆಗಡೆ) ಒಬ್ಬರು ಸಂತರು (ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ) ಹಾಗೂ ಹಿಂದು ಚಿಂತಕ (ಡಾ. ಜಿ.ಬಿ. ಹರೀಶ) ತಮ್ಮ ಅಭಿಪ್ರಾಯಗಳನ್ನು ʻವಿಸ್ತಾರ ನ್ಯೂಸ್‌ʼ ಜತೆ ಹಂಚಿಕೊಂಡಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

3. Praveen Nettaru | ಮುಂದುವರಿದ ಬಿಜೆಪಿ ಆಂತರಿಕ ಆಕ್ರೋಶ, ಸಾವಿರಾರು ಮಂದಿ ರಾಜೀನಾಮೆ!
ದಕ್ಷಿಣ ಕನ್ನಡದ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು (Praveen Nettaru) ಹತ್ಯೆ ಪ್ರಕರಣವು ರಾಜ್ಯಾದ್ಯಂತ ಆಕ್ರೋಶದ ಕಿಚ್ಚನ್ನು ಹೊತ್ತಿಸಿದ್ದು, ಬಿಜೆಪಿ ಒಳಗೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದಲೇ ಪಕ್ಷದ ಕಾರ್ಯಕರ್ತರ ಸಹಿತ ವಿವಿಧ ಜವಾಬ್ದಾರಿಯನ್ನು ಹೊಂದಿರುವವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದು, ಗುರುವಾರವೂ ಮುಂದುವರಿದಿದೆ. ಇದುವರೆಗೆ ರಾಜ್ಯಾದ್ಯಂತ ಸುಮಾರು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತಮ್ಮ ಜವಾಬ್ದಾರಿಗಳಿಂದ ಹಿಂದೆ ಸರಿದಿದ್ದಾರೆ. ಅಲ್ಲದೆ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಸಹ ಅಗತ್ಯಬಿದ್ದರೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

4. Audio Leak | ಕಾಂಗ್ರೆಸ್ ಸರ್ಕಾರ ಆಗಿದ್ರೆ ಕಲ್ಲು ಹೊಡೆಯಬಹುದಿತ್ತು ಎಂದ ತೇಜಸ್ವಿ!
ಕಾಂಗ್ರೆಸ್ ಸರ್ಕಾರವಾಗಿದ್ರೆ ಕಲ್ಲು ಹೊಡೆಯಬಹುದಿತ್ತು. ನಮ್ಮದೇ ಸರ್ಕಾರ ಇದೆ. ಏನು ಮಾಡೋದು!
ಇದು, ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ ಮಾತು! ಬಿಜೆಪಿ ಯುವ ಮೋರ್ಚಾ ಮುಖಂಡರೊಬ್ಬರ ಜತೆ ತೇಜಸ್ವಿ ಸೂರ್ಯ ಮಾತನಾಡಿರುವ ಆಡಿಯೋ ಈಗ ಬಯಲಾಗಿದೆ. ತೇಜಸ್ವಿ ಸೂರ್ಯ ಅವರು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಸಂದೀಪ್ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿದ್ದಾರೆ. ಸಾಮೂಹಿಕ ರಾಜೀನಾಮೆ ನೀಡಿರುವ ಕುರಿತು ಅವರಿಬ್ಬರ ನಡುವೆ ಮಾತುಕತೆ ಇದಾಗಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

5. ನೇಕಾರರು, ಟ್ಯಾಕ್ಸಿ ಡ್ರೈವರ್‌, ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ: ಸಿಎಂ ಬೊಮ್ಮಾಯಿ ಘೋಷಣೆ
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಸ್ಥಾಪನೆಯಾದಾಗ ಆರಂಭಿಸಿದ್ದ ಮೊಟ್ಟಮೊದಲ ಯೋಜನೆಯಾದ ರೈತ ವಿದ್ಯಾನಿಧಿಯನ್ನು ರಾಜ್ಯದ ನೇಕಾರರು, ಟ್ಯಾಕ್ಸಿ ಚಾಲಕರು, ಮೀನುಗಾರರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ. ಸುಳ್ಯದ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಂತರ ಭುಗಿಲೆದ್ದ ಕಾರ್ಯಕರ್ತರ ಆಕ್ರೋಶಕ್ಕೆ ಮಣಿದು ಸರ್ಕಾರದ ವರ್ಷಾಚರಣೆಯನ್ನು ರದ್ದುಪಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ಬೆಳಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

6. ನನ್ನ‌ ಬಳಿ ನೀವು ಮಾತಾಡಲೇಬೇಡಿ; ಸ್ಮೃತಿ ಇರಾನಿ ಮುಖಕ್ಕೆ ಹೊಡೆದಂತೆ ಉತ್ತರಿಸಿದ ಸೋನಿಯಾ ಗಾಂಧಿ
ರಾಷ್ಟ್ರಪತಿ ದ್ರೌಪದಿ ಮುರ್ಮುರಿಗೆ ಕಾಂಗ್ರೆಸ್‌ ನಾಯಕ ರಂಜನ್‌ ಅಧೀರ್‌ ಚೌಧರಿ ರಾಷ್ಟ್ರಪತ್ನಿ ಎಂದು ಸಂಬೋಧಿಸಿದ್ದನ್ನು ವಿರೋಧಿಸಿ ಬಿಜೆಪಿ ಇಂದು ಸಂಸತ್‌ ಕಲಾಪದಲ್ಲಿ ದೊಡ್ಡ ಗಲಾಟೆಯನ್ನೇ ಸೃಷ್ಟಿಸಿದೆ. ಸೋನಿಯಾ ಗಾಂಧಿ ಸೇರಿ ಪಕ್ಷದ ಎಲ್ಲರೂ ಕ್ಷಮೆ ಕೇಳಬೇಕು ಎಂದು ಬಿಜೆಪಿಯ ಸಚಿವರು, ಸಂಸದರು ಆಗ್ರಹಿಸಿದ್ದಾರೆ. ಈ ವೇಳೆ ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ಇಡೀ ಸದನದಲ್ಲಿ ಒಬ್ಬರಾದರೂ ಬಿಜೆಪಿ ಸಂಸದರ ಬಳಿ ಹೋಗಿ ಈ ಬಗ್ಗೆ ಸ್ಪಷ್ಟನೆ ಕೊಡಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಮಧ್ಯಪ್ರವೇಶ ಮಾಡಿದ ಸ್ಮೃತಿ ಇರಾನಿ, ʼಸೋನಿಯಾ ಗಾಂಧಿ ಕ್ಷಮೆ ಕೇಳಬೇಕುʼ ಎಂದು ಮತ್ತಷ್ಟು ಜೋರಾಗಿಯೇ ಕೂಗಿದ್ದಾರೆ. ಆಗ ಕ್ರೋಧಗೊಂಡ ಸೋನಿಯಾಗಾಂಧಿ. ʼನೀವು ನನ್ನ ಬಳಿ ಮಾತನಾಡಲೇಬೇಡಿʼ ಎಂದು ಸ್ಮೃತಿ ಇರಾನಿಗೆ ಖಾರವಾಗಿಯೇ ಉತ್ತರಿಸಿದ್ದಾರೆ ಎಂದು ಹೇಳಲಾಗಿದೆ.(ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

7. ವಿಸ್ತಾರ Explainer | 5G ತಂತ್ರಜ್ಞಾನದಿಂದ ಅನುಕೂಲ ಅಪಾರ, ಅನನುಕೂಲ ಅತ್ಯಲ್ಪ
ದೇಶದ ಟೆಲಿಕಾಂ ವಲಯದಲ್ಲಿ ೫ಜಿ ಕ್ರಾಂತಿಯ ಹವಾ ಶೀಘ್ರದಲ್ಲಿಯೇ ಶುರುವಾಗಲಿದೆ. ಈ ತಂತ್ರಜ್ಞಾನದಲ್ಲಿ ಯಾವುದೇ ಹೊಸ ಬಗೆಯ ರಿಸ್ಕ್‌ ಇಲ್ಲ. ಜತೆಗೆ ಅನನುಕೂಲಕ್ಕಿಂತ ಅನುಕೂಲವೇ ಹೆಚ್ಚು ಎನ್ನುತ್ತಾರೆ ಸೈಬರ್ ತಜ್ಞ ಫಣೀಂದರ್ ಬಿ. ಎನ್. ಅವರು ಮುಂಬರುವ ೫ಜಿ ಕ್ರಾಂತಿಯ ಬಗ್ಗೆ ವಿಸ್ತಾರ ನ್ಯೂಸ್‌ ಜತೆ ಸಮಗ್ರವಾಗಿ ವಿವರಿಸಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

8. BBMP Election | ವಾರದೊಳಗೆ ಬಿಬಿಎಂಪಿ ಮೀಸಲಾತಿ ಪ್ರಕಟಿಸಿ: ಸುಪ್ರೀಂ ಮಹತ್ವದ ಆದೇಶ
ರಾಜ್ಯ ಸರ್ಕಾರವು ಮುಂದಿನ ವಾರದೊಳಗೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕೆಂದು (BBMP Election) ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಗುರುವಾರ ಬಿಬಿಎಂಪಿ ಚುನಾವಣೆ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಈ ಹಿಂದೆ 8 ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಲಾಗಿತ್ತು. ಆದರೆ ಅದು ಯಾಕೆ ಸಾಧ್ಯವಾಗಲಿಲ್ಲವೆಂದು ನ್ಯಾ.ಎ.ಎಂ.ಖಾನಿಲ್ಕರ್‌ ನೇತೃತ್ವದ ಪೀಠ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿರುವ ವಕೀಲರು, ಮೀಸಲಾತಿಗಾಗಿ ರಚಿಸಲಾಗಿದ್ದ ಭಕ್ತವತ್ಸಲ ಸಮಿತಿಯು ತಡವಾಗಿ ವರದಿ ನೀಡಿದೆ. ಈ ಕಾರಣಕ್ಕಾಗಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಲಿಲ್ಲ ಎಂದಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

9. Chess Olympiad | 30 ಆಟಗಾರರು ಕಣದಲ್ಲಿ, ಇದು ಸಾರ್ವಕಾಲಿಕ ದಾಖಲೆ
ಮುಂಬರುವ ೪೪ನೇ ಆವೃತ್ತಿಯ ಚೆಸ್ ಒಲಿಂಪಿಯಾಡ್‌ಗೆ (Chess Olympiad) ಭಾರತ ಆತಿಥ್ಯ ವಹಿಸುತ್ತಿದೆ. ಜುಲೈ ೨೮ರಿಂದ ಆಗಸ್ಟ್‌ ೧೦ವರೆಗೆ ಜಾಗತಿಕ ಮಟ್ಟದ ಈ ಕೂಟ ನಡೆಯಲಿದೆ. ವಿಶೇಷ ಎಂದರೆ ಆತಿಥೇಯ ಭಾರತ ಈ ಬಾರಿ ಆರು ತಂಡವನ್ನು ಕಣಕ್ಕೆ ಇಳಿಸುತ್ತಿದ್ದು, ಒಟ್ಟಾರೆ ೩೦ ಚೆಟ್‌ ಪಟುಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಇದು ಭಾರತ ಚೆಸ್‌ ಇತಿಹಾಸದಲ್ಲಿ ದಾಖಲೆಯಾಗಿದೆ. ಮಹಾಬಲಿಪುರಮ್‌ನಲ್ಲಿ ಚೆಸ್ ಒಲಿಂಪಿಯಾಡ್‌ ನಡೆಯಲಿದ್ದು, ದಾಖಲೆಯ ೧೮೭ ದೇಶಗಳು ಪಾಲ್ಗೊಳ್ಳಲಿವೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

10. Vikrant Rona Review | ಮೇಕಿಂಗ್‌ನಲ್ಲಿ ಹೊಸ ಜಗತ್ತು ಕಟ್ಟಿದ ವಿಕ್ರಾಂತ್‌ ರೋಣ
ಕಿಚ್ಚ ಸುದೀಪ್‌ ಅಭಿನಯದ, ಅನೂಪ್‌ ಭಂಡಾರಿ ನಿರ್ದೇಶಿಸಿರುವ ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ವಿಕ್ರಾಂತ್‌ ರೋಣ (Vikrant Rona Review) ಒಂದು ಹೊಸ ಪ್ರಪಂಚವನ್ನು ಸೃಷ್ಟಿಸಿದೆ. ಈ ಸಿನಿಮಾ ಹೇಗಿದೆ? ಸಿನಿಮಾದಲ್ಲಿ ಏನೇನಿದೆ ಎಂಬ ವಿಶ್ಲೇಷಣೆ ಇಲ್ಲಿದೆ. (ವಿಶ್ಲೇಷಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಜಿಡಿಪಿಯಲ್ಲಿ ನಿರೀಕ್ಷೆ ಮೀರಿದ ಬೆಳವಣಿಗೆ ಹರ್ಷದಾಯಕ

ಪ್ರತಿ ತ್ರೈಮಾಸಿಕದಲ್ಲೂ ದೇಶದ ಜಿಡಿಪಿಯನ್ನು ಅಂದಾಜಿಸಲಾಗುತ್ತದೆ. ಏರಿಳಿತ ಇರುವುದೇ ಆಗಿರುತ್ತದೆ. ಸಾಮಾನ್ಯವಾಗಿ ಒಂದು ವರ್ಷದಿಂದ ಇನ್ನೊಂದಕ್ಕೆ 1-2ಕ್ಕಿಂತ ಅಧಿಕ ಜಿಡಿಪಿ ವ್ಯತ್ಯಾಸ ಆಗುವುದು ಅಪರೂಪ. ಆದರೆ ಭಾರತದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಬಹಳಷ್ಟು ವೇಗವಾಗಿದೆ. ಹೀಗಾಗಿ ಕ್ಷಿಪ್ರಗತಿಯ ಜಿಡಿಪಿ ಬೆಳವಣಿಗೆ ಕಾಣಿಸಿದೆ.

VISTARANEWS.COM


on

GDP Growth
Koo

ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP Growth) ಶೇಕಡಾ 8.4ಕ್ಕೆ ಏರಿಕೆಯಾಗಿದೆ ಎಂದು ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯ ಗುರುವಾರ ಹೇಳಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಶೇ.4.3ರಷ್ಟಿತ್ತು. ಹೀಗಾಗಿ ನಿರೀಕ್ಷೆ ಮೀರಿದ ಬೆಳವಣಿಗೆಯಾಗಿದೆ. “2023-24ರ ಮೂರನೇ ತ್ರೈಮಾಸಿಕದಲ್ಲಿ 8.4% ಜಿಡಿಪಿ ಬೆಳವಣಿಗೆಯು ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ. ತ್ವರಿತ ಆರ್ಥಿಕ ಬೆಳವಣಿಗೆಯನ್ನು ಕಾಣಲು ನಮ್ಮ ಪ್ರಯತ್ನಗಳು ಮುಂದುವರಿಯಲಿದೆ. ಇದು 140 ಕೋಟಿ ಭಾರತೀಯರಿಗೆ ಉತ್ತಮ ಜೀವನವನ್ನು ನಡೆಸಲು, ವಿಕಸಿತ​ ಭಾರತದ ಬೆಳವಣಿಗೆಗೆ ಸಹಾಯ ಮಾಡುತ್ತದೆ” ಎಂದು ಪ್ರಧಾನಿ ಹೇಳಿದ್ದಾರೆ.

2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ.ಗೆ ಅಂದಾಜಿಸಲಾಗಿದೆ. ಇದು 2022-23ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ 8.4ರಷ್ಟು ಬೆಳವಣಿಗೆಯ ದರವನ್ನು ತೋರಿಸಿದೆ. ವಿಶ್ಲೇಷಕರು ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 7ಕ್ಕಿಂತ ಕಡಿಮೆ ಎಂದು ಅಂದಾಜಿಸಿದ್ದರು. ಆದರೆ, ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶವು ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ ಎಂದು ತೋರಿಸಿದೆ. ನಿರ್ಮಾಣ ಕ್ಷೇತ್ರದ ಎರಡಂಕಿ ಬೆಳವಣಿಗೆ ದರ (ಶೇ.10.7), ಉತ್ಪಾದನಾ ವಲಯದ ಬೆಳವಣಿಗೆ ದರ (ಶೇ.8.5) 2024ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಹೆಚ್ಚಿಸಿದೆ ಎಂದು ಸರಕಾರ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 8.4ರಷ್ಟು ಬೆಳವಣಿಗೆಯ ಹಿಂದಿನ ಪ್ರಮುಖ ಕಾರಣವೇ ಈ ಕ್ಷೇತ್ರಗಳಲ್ಲಿನ ಬೆಳವಣಿಗೆಯಾಗಿದೆ. ಹೀಗಾಗಿ, ಈಗ ಪೂರ್ಣ ವರ್ಷದ ಜಿಡಿಪಿ ಬೆಳವಣಿಗೆ ಅಂದಾಜು ಶೇಕಡಾ 7.3ಕ್ಕಿಂತ ಹೆಚ್ಚಾಗುತ್ತದೆ ಎಂದು ಸಾಂಖ್ಯಿಕ ಸಚಿವಾಲಯ ನಿರೀಕ್ಷಿಸಿದೆ. ಇದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಭಾರತದ ಸ್ಥಾನಮಾನವನ್ನು ದೃಢಪಡಿಸಿದೆ.

ಪ್ರತಿ ತ್ರೈಮಾಸಿಕದಲ್ಲೂ ದೇಶದ ಜಿಡಿಪಿಯನ್ನು ಅಂದಾಜಿಸಲಾಗುತ್ತದೆ. ಏರಿಳಿತ ಇರುವುದೇ ಆಗಿರುತ್ತದೆ. ಸಾಮಾನ್ಯವಾಗಿ ಒಂದು ವರ್ಷದಿಂದ ಇನ್ನೊಂದಕ್ಕೆ 1-2ಕ್ಕಿಂತ ಅಧಿಕ ಜಿಡಿಪಿ ವ್ಯತ್ಯಾಸ ಆಗುವುದು ಅಪರೂಪ. ಆದರೆ ಭಾರತದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಬಹಳಷ್ಟು ವೇಗವಾಗಿದೆ. ಹೀಗಾಗಿ ಕ್ಷಿಪ್ರಗತಿಯ ಜಿಡಿಪಿ ಬೆಳವಣಿಗೆ ಕಾಣಿಸಿದೆ. ಇದನ್ನೇ ಷೇರು ಮಾರುಕಟ್ಟೆಯಲ್ಲೂ ಕಾಣಬಹುದು. ಕಳೆದ ಒಂದು ವರ್ಷದಿಂದ ದೇಶದ ಷೇರು ಮಾರುಕಟ್ಟೆ ಗಣನೀಯವಾಗಿ ಕುಸಿದಿಲ್ಲ. ಆದರೆ ಗಣನೀಯ ಹೆಚ್ಚಳಗಳು ಆಗಿವೆ. ಇದು ದೇಶದ ವಾಣಿಜ್ಯ ವಹಿವಾಟಿನಲ್ಲಿ, ಕೈಗಾರಿಕಾ ವಲಯದ ಮೇಲೆ ಬಂಡವಾಳೋದ್ಯಮಿಗಳು ಹಾಗೂ ಷೇರುದಾರರು ಇಟ್ಟಿರುವ ಭರವಸೆಯನ್ನು ತೋರಿಸುತ್ತದೆ. ಹಣದುಬ್ಬರದ ಕಾಲದಲ್ಲೂ ದೇಶ ತನ್ನ ಜಿಡಿಪಿಯ ಗತಿಯನ್ನು ಕಾಯ್ದುಕೊಂಡಿದೆ. ಇದು ಶ್ಲಾಘನೀಯ. ಜಿಡಿಪಿ ಸತತವಾಗಿ ಏರುತ್ತಿದ್ದಾಗ, ಸಾಮಾನ್ಯ ಮನುಷ್ಯನ ಕೈಗೂ ಸಾಕಷ್ಟು ಹಣದ ಹರಿವು ಇರುತ್ತದೆ. ಹೀಗಾಗಿ ಹಣದುಬ್ಬರದ ದುಷ್ಪರಿಣಾಮ ಅಷ್ಟಾಗಿ ತಟ್ಟುವುದಿಲ್ಲ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ವಿದ್ಯುತ್‌ ದರ ಇಳಿಕೆ ಶ್ಲಾಘನೀಯ ಕ್ರಮ

ಒಂದು ದೇಶದ ಮಾರುಕಟ್ಟೆಯಲ್ಲಿ ಈ ಪ್ರಮಾಣದ ಬೆಳವಣಿಗೆಯಾಗುವುದು, ಜಿಡಿಪಿ ನಿರಂತರವಾಗಿ ಪ್ರಗತಿ ತೋರಿಸುವುದು ಯಾವಾಗ ಎಂದರೆ, ಆ ದೇಶದ ಮಾರುಕಟ್ಟೆಯಲ್ಲಿ ಒಳಗಿನ ಹಾಗೂ ಹೊರಗಿನ ಹೂಡಿಕೆದಾರರ ವಿಶ್ವಾಸ ಹೆಚ್ಚಿದಾಗ. ಅಂದರೆ ಇಲ್ಲಿ ಒಳ್ಳೆಯ ಹೂಡಿಕೆ ಮಾಡಬಹುದು, ಸುರಕ್ಷಿತ ವಾತಾವರಣವಿದೆ, ಇಲ್ಲಿ ಪ್ರಗತಿಯ ಸಾಧ್ಯತೆಯಿದೆ ಎಂದು ತೋರಿದಾಗ ಮಾತ್ರ ಅಂಥಲ್ಲಿ ಹಣ ಹೂಡಲಾಗುತ್ತದೆ. ಇಂತಹ ಆತ್ಮವಿಶ್ವಾಸದ ಪರಿಣಾಮವಾಗಿಯೇ ದೇಶದ ಜಿಡಿಪಿ ಏರಿಕೆಯಾಗಿದೆ ಹಾಗೂ ಈಕ್ವಿಟಿ ಮಾರುಕಟ್ಟೆ ಉತ್ತುಂಗ ಮುಟ್ಟಿದೆ. ನಾವು ವಿಶ್ವದ ದೊಡ್ಡ ದೇಶಗಳನ್ನು ಮಿತ್ರರನ್ನಾಗಿಸಿಕೊಂಡು ಬಹುರಾಷ್ಟ್ರೀಯ ಕಂಪನಿಗಳನ್ನು ನಮ್ಮ ದೇಶದ ಮಾರುಕಟ್ಟೆಗೆ ಬೇಕಾದಂತೆ ಕುಣಿಸುತ್ತಿದ್ದೇವೆ. ನಮ್ಮ ಜನಸಂಖ್ಯಾ ಬಂಡವಾಳ, ದುಡಿಯುವ ವರ್ಗ ನಮ್ಮ ಮಾರುಕಟ್ಟೆಗೆ ಪೂರಕವಾಗಿದೆ. ಇಲ್ಲಿನ ಪ್ರತಿಭೆಗಳು ಯುಎಸ್‌, ಯುಕೆಯ ಆರ್ಥಿಕತೆಗಳನ್ನು ಕಟ್ಟುತ್ತಿವೆ. ಜಿಡಿಪಿ ಏರಿಕೆಯ ಪರಿಣಾಮವು, ಪ್ರಧಾನಿಯವರು ಹೇಳಿದಂತೆ ನಮ್ಮ ಜನತೆಯ ಬಡತನದ ತ್ವರಿತ ನಿರ್ಮೂಲನೆ ಮತ್ತು ಬದುಕಿನ ಸ್ಥಿತಿಗತಿ ಸುಧಾರಣೆಗೂ ಮೂಲವಾಗಬೇಕು. ಆಗ ಜಿಡಿಪಿ ಬೆಳವಣಿಗೆಗೆ ಹೆಚ್ಚಿನ ಅರ್ಥ ಬರುತ್ತದೆ.

Continue Reading

ಪ್ರಮುಖ ಸುದ್ದಿ

Vistara Top 10 News : ವಿಧಾನಸೌಧದೊಳಗೇ ಕಾಂಗ್ರೆಸ್‌ ಬೆಂಬಲಿಗರಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಮತ್ತಿತರ ಪ್ರಮುಖ ಸುದ್ದಿಗಳು

Vistara Top 10 News : ಇಡೀ ದಿನ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Top 10 news
Koo

1.ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ
ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿತ್ತು. ಗೆಲುವು ಸಾಧಿಸಿದ ಕಾಂಗ್ರೆಸ್‌ನ ಮೂವರು ಸದಸ್ಯರ ಪೈಕಿ ನಾಸಿರ್ ಹುಸೇನ್ ಬೆಂಬಲಿಗರು ಶತ್ರು ರಾಷ್ಟ್ರ ಪಾಕಿಸ್ತಾನ ಪರ ಜೈಕಾರ ಕೂಗಿ ಉದ್ಧಟತನ ಮೆರೆದಿದ್ದಾರೆ. ನಮ್ಮ ಭಾರತದ ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್‌ ಪರ ಘೋಷಣೆ ಕೂಗಿರುವ ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇಂಥದ್ದೊಂದು ಪಾಪಿ ಕೃತ್ಯ, ಅಕ್ಷಮ್ಯ ಅಪರಾಧವನ್ನು ವಿಧಾನಸೌಧದೊಳಗೆ ಮಾಡಿರುವುದು ಮತ್ತೊಂದು ದುರಂತವಾಗಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

2. Rajya Sabha Election: ರಾಜ್ಯಸಭೆಯಲ್ಲಿ 3 ಸೀಟು ಗೆದ್ದು ಬೀಗಿದ ಕಾಂಗ್ರೆಸ್‌; 1 ಸ್ಥಾನ ಬಿಜೆಪಿಗೆ; ಮೈತ್ರಿಗೆ ಮುಖಭಂಗ!
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ (Rajya Sabha Election) ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಒಟ್ಟು ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್‌ ಮೈತ್ರಿಯಿಂದ (BJP JDS Alliance) ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ (Kupendra Reddy) ಸೋಲು ಕಂಡಿದ್ದಾರೆ. ಈ ಮೂಲಕ ಮೈತ್ರಿಗೆ ಮುಖಭಂಗವಾದಂತೆ ಆಗಿದೆ. ಒಟ್ಟು 222 ಶಾಸಕರಿಂದ ಮತದಾನ ಮಾಡಿದ್ದಾರೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : Rajya sabha Election: ಎಸ್‌.ಟಿ. ಸೋಮಶೇಖರ್‌ ಅಡ್ಡಮತ; ಬಿಜೆಪಿಯಿಂದ ಏನು ಕ್ರಮ? ಶಾಸಕತ್ವ ಉಳಿಯುತ್ತಾ?
ಈ ಸುದ್ದಿಯನ್ನೂ ಓದಿ : Rajyasabha Election : ದ್ರೋಹ ಎಸಗಿದ ಸೋಮಶೇಖರ್‌ ವಿರುದ್ಧ ಸಿಡಿದ ಬಿಜೆಪಿ; ಪ್ರತಿಕೃತಿಗೆ ಬೆಂಕಿ, ಚಪ್ಪಲಿ ಏಟು

3. 7ನೇ ವೇತನ ಆಯೋಗದ ವರದಿ ಬಂದ ನಂತರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಸಿಎಂ ಭರವಸೆ
ಬೆಂಗಳೂರು: ಪಂಚ ಗ್ಯಾರಂಟಿಗಳ ಜಾರಿಯಿಂದ ಉಂಟಾದ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : ರಾಜ್ಯ ಸರ್ಕಾರಿ ನೌಕರರಿಗೆ ಜುಲೈನಿಂದ ಶೇ.23 ವೇತನ ಹೆಚ್ಚಳ ಮಾಡಿ: ಸಿ.ಎಸ್‌.ಷಡಾಕ್ಷರಿ ಒತ್ತಾಯ

4. ಗಗನಯಾನ ಯಾತ್ರಿಗಳ ಹೆಸರು ರಿವೀಲ್‌ ಮಾಡಿದ ಮೋದಿ; ಇವರೇ ಸಾರಥಿಗಳು
ತಿರುವನಂತಪುರಂ: ಭಾರತದ ಮಹತ್ವಾಕಾಂಕ್ಷೆಯ, ಮೊದಲ ಮಾನವಸಹಿತ ಗಗನಯಾತ್ರೆಯಾದ ‘ಗಗನಯಾನ’ಕ್ಕೆ (Gaganyaan Mission) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾನವ ಸಹಿತ ಗಗನಯಾನ ಕೈಗೊಳ್ಳುವ ಗಗನಯಾತ್ರಿಗಳ ಹೆಸರುಗಳನ್ನು ಘೋಷಿಸಿದ್ದಾರೆ. ಇದರೊಂದಿಗೆ ಮುಂದಿನ ವರ್ಷ ಕೈಗೊಳ್ಳುವ ಇಸ್ರೋ ಮಿಷನ್‌ಗೆ ಗಗನಯಾತ್ರಿಗಳನ್ನು ಅಂತಿಮಗೊಳಿಸಿದಂತಾಗಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : ವಿಸ್ತಾರ Explainer: Gaganyaan: ನಾಲ್ವರು ಗಗನಯಾನಿಗಳಲ್ಲಿ ಮಹಿಳೆ ಏಕಿಲ್ಲ?

5. Money Guide: ಗುಡ್‌ನ್ಯೂಸ್‌: ಕಿಸಾನ್‌ ಸಮ್ಮಾನ್‌ ನಿಧಿಯ 16ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಯಾವಾಗ ಸಿಗಲಿದೆ?
ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 16ನೇ ಕಂತು ಬಿಡುಗಡೆ ದಿನ ನಿಗದಿ ಪಡಿಸಲಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

6. IPL 2024 : ಐಪಿಎಲ್​ ಟಿಕೆಟ್​ ಖರೀದಿ ಹೇಗೆ ಮತ್ತು ಎಲ್ಲಿ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರ 17 ನೇ ಆವೃತ್ತಿಯ ಭಾಗಶಃ ವೇಳಾಪಟ್ಟಿ ಬಿಸಿಸಿಐ ಫೆಬ್ರವರಿ 22 ರಂದು ಬಹಿರಂಗಪಡಿಸಿದೆ. ಮುಂಬರುವ ಆವೃತ್ತಿಯು ಮಾರ್ಚ್ 22 ರಿಂದ ಪ್ರಾರಂಭವಾಗಲಿದ್ದು, ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 7 ರವರೆಗಿನ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

7. RBI Fine: ಎಸ್‌ಬಿಐ ಸೇರಿ 3 ಬ್ಯಾಂಕ್‌ಗಳಿಗೆ 3 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಇದು
ಮುಂಬೈ: ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾರ್ಚ್‌ 15ರಿಂದ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ವಹಿವಾಟು ಸ್ಥಗಿತಗೊಳಿಸಿ ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ದೇಶದ 3 ಬ್ಯಾಂಕ್‌ಗಳಿಗೆ ಆರ್‌ಬಿಐ ಸುಮಾರು 3 ಕೋಟಿ ರೂ. ದಂಡ ವಿಧಿಸಿದೆ. ಭಾರತೀಯ ಸ್ಟೇಟ್‌ ಬ್ಯಾಂಕ್‌ (SBI), ಕೆನರಾ ಬ್ಯಾಂಕ್‌ ಹಾಗೂ ಸಿಟಿ ಯೂನಿಯನ್‌ ಬ್ಯಾಂಕ್‌ಗಳಿಗೆ (City Union Bank) ಸುಮಾರು 3 ಕೋಟಿ ರೂ. ದಂಡ ವಿಧಿಸಲಾಗಿದೆ. ಆರ್‌ಬಿಐ ನಿಬಂಧನೆಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

8. Actor Rajinikanth: ಬಾಲಿವುಡ್‌ ಖ್ಯಾತ ನಿರ್ಮಾಪಕರೊಂದಿಗೆ ಕೈ ಜೋಡಿಸಿದ ರಜನಿಕಾಂತ್‌; ತಲೈವಾ ಹೊಸ ಚಿತ್ರ ಯಾವಾಗ?
ಮುಂಬೈ: ದಕ್ಷಿಣ ಭಾರತದ ಸೂಪರ್‌ ಸ್ಟಾರ್‌ ರಜನಿಕಾಂತ್‌ (Rajinikanth) ಈ ಇಳಿವಯಸ್ಸಿನಲ್ಲಿಯೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಒಂದರ ಹಿಂದೆ ಒಂದರಂತೆ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಇನ್ನೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ ಎನ್ನುವ ಸುದ್ದಿ ಜೋರಾಗಿ ಹಬ್ಬಿದೆ. ಬಾಲಿವುಡ್‌ ನಿರ್ಮಾಪಕ ಸಾಜಿದ್‌ ನಾಡಿಯಾವಾಲ (Sajid Nadiadwala) ಅವರೊಂದಿಗೆ ತಲೈವಾ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ಸಾಜಿದ್‌ ನಾಡಿಯಾವಾಲ ಮಾಹಿತಿ ನೀಡಿದ್ದಾರೆ. ಆದರೆ ಯಾವ ಚಿತ್ರ, ಯಾವಾಗ ಸೆಟ್ಟೇರಲಿದೆ ಮುಂತಾದ ವಿವರ ಇನ್ನೂ ಬಹಿರಂಗವಾಗಿಲ್ಲ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

9 .PM Narendra Modi: ಕೇರಳದಲ್ಲಿ ಲಾಠಿ ಚಾರ್ಜ್‌, ದಿಲ್ಲಿಯಲ್ಲಿ ಚಾಯ್-‌ ಸಮೋಸಾ: ಮೋದಿ ಹೀಗೆ ಹೇಳಿದ್ದೇಕೆ?
ತಿರುವನಂತಪುರಂ: ಕಾಂಗ್ರೆಸ್ (congress) ಮತ್ತು ಎಡಪಕ್ಷಗಳು (left parties) ಇತರ ರಾಜ್ಯಗಳಲ್ಲಿ ಬಿಎಫ್‌ಎಫ್ (Best friends forever- ಬೆಸ್ಟ್‌ ಫ್ರೆಂಡ್ಸ್‌ ಫಾರೆವರ್-‌ ಶಾಶ್ವತ ಸ್ನೇಹಿತರು) ಆಗಿದ್ದಾರೆ. ಆದರೆ ಕೇರಳದಲ್ಲಿ ಬದ್ಧ ವೈರಿಗಳು (enemies) ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಂಗಳವಾರ ವ್ಯಂಗ್ಯವಾಡಿದ್ದಾರೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.

10. ವಿಮೆ ದುಡ್ಡಿನ ಆಸೆಗೆ ತನ್ನ ಕಾಲನ್ನೇ ಕತ್ತರಿಸಿಕೊಂಡ; ಈಗ ಕಾಸೂ ಸಿಗಲಿಲ್ಲ, ಕಾಲೂ ಇಲ್ಲ!
ಮಿಸ್ಸೌರಿ: ಅಮೆರಿಕದ ವ್ಯಕ್ತಿಯೊಬ್ಬರು ವಿಮೆಯ ದುಡ್ಡಿಗಾಗಿ ತನ್ನ ಕಾಲನ್ನೇ ಕತ್ತರಿಸಿಕೊಂಡ ಪ್ರಸಂಗ (Shocking News) ಬೆಳಕಿಗೆ ಬಂದಿದೆ. ಆತನ ಮೋಸ ಬಯಲಿಗೆ ಬಂದ ಬಳಿಕ ದುಡ್ಡೂ ಸಿಗಲಿಲ್ಲ, ಕೈಕಾಲು ಕೂಡ ಇಲ್ಲ ಎಂಬ ಪರಿಸ್ಥಿತಿ ಎದುರಾಗಿದೆ. ವಿಲ್ಲೋ ಸ್ಪ್ರಿಂಗ್ಸ್​ ಎಂಬ 60 ವರ್ಷದ ವ್ಯಕ್ತಿ ಮೋಸ ಮಾಡಲು ಹೋಗಿ ಅಂಗಾಂಗಗಳನ್ನೇ ಕಳೆದುಕೊಂಡಿದ್ದಾನೆ. ಆತ ತನ್ನ ಕಾಲುಗಳನ್ನು ಬೇರೆಯವರಿಂದ ಕತ್ತರಿಸಿಕೊಂಡು ಬಕೆಟ್​ ಒಂದರಲ್ಲಿ ಅಡಗಿಸಿಟ್ಟಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ. ಪೂರ್ಣ ಸುದ್ದಿಯ ಓದಲು ಈ ಲಿಂಕ್ ಕ್ಲಿಕ್​ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading

ಕ್ರೀಡೆ

Vistara Top 10 News : ಬೃಹತ್​ ರೈಲ್ವೆ ಪ್ರಾಜೆಕ್ಟ್‌ಗಳಿಗೆ ಮೋದಿ ಚಾಲನೆ, ಜಿಲ್ಲಾ ಮಟ್ಟದಲ್ಲೂ ಉದ್ಯೋಗ ಮೇಳ ಇತ್ಯಾದಿ ಪ್ರಮುಖ ಸುದ್ದಿಗಳು

Vistara Top 10 News : ಇಡೀ ದಿನ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Top 10 news
Koo

1.2000 ರೈಲ್ವೆ ಪ್ರಾಜೆಕ್ಟ್‌ಗಳಿಗೆ ಪಿಎಂ ಚಾಲನೆ; ಜೂನ್‌ನಿಂದ 3ನೇ ಅವಧಿಗೆ ಸರ್ಕಾರ ಎಂದ ಮೋದಿ
ನವದೆಹಲಿ: 41 ಸಾವಿರ ಕೋಟಿ ರೂ. ವೆಚ್ಚದ 2000 ರೈಲ್ವೆ ಪ್ರಾಜೆಕ್ಟ್‌ಗಳನ್ನು (2000 Railway Projects) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಮೋದಿ ಅವರು, ಈ ಮೊದಲು ರೈಲ್ವೆ ಇಲಾಖೆ (Railway Department) ಎಂದರೆ ನಷ್ಟ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಅದೇ ರೈಲ್ವೆ ಪರಿವರ್ತನೆಯ ಬಹುದೊಡ್ಡ ಶಕ್ತಿಯಾಗಿ ಬದಲಾಗಿದೆ ಎಂದು ಹೇಳಿದರು. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Railway Projects : ರಾಜ್ಯದಲ್ಲಿ ರೈಲ್ವೆ ಕ್ರಾಂತಿಗೆ ಮುನ್ನುಡಿ ಬರೆದ ಮೋದಿ,‌ 15 ನಿಲ್ದಾಣ ಮೇಲ್ದರ್ಜೆಗೆ

2. Job Fair: ಇನ್ನು ಪ್ರತಿ ವರ್ಷ ಜಿಲ್ಲಾ ಮಟ್ಟದಲ್ಲೂ ಉದ್ಯೋಗ ಮೇಳ; ಪೂರಕ ತರಬೇತಿ
ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ “ಯುವ ಸಮೃದ್ಧಿ ಸಮ್ಮೇಳನ – 2024” ಅಡಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ (Job Fair) 1,10,000ಕ್ಕೂ ಅಧಿಕ ಉದ್ಯೋಗವಕಾಶಗಳಿದ್ದು, 600ಕ್ಕೂ ಅಧಿಕ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಿವೆ. ಈ ಸರ್ಕಾರದ ಅವಧಿವರೆಗೆ ಕೌಶಲ್ಯಾಧಾರಿತ ತರಬೇತಿಯೊಂದಿಗೆ ಉದ್ಯೋಗ ಮೇಳಗಳನ್ನು ನಿರಂತರವಾಗಿ ಆಯೋಜಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಪ್ರಸ್ತುತ ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳವನ್ನು ವರ್ಷಕ್ಕೆ ಒಮ್ಮೆ ಆಯೋಜಿಸಲಾಗುವುದರ ಜತೆಗೆ ಜಿಲ್ಲಾ ಮಟ್ಟದಲ್ಲಿಯೂ ಆಯೋಜಿಸಲು ತೀರ್ಮಾನಿಸಲಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

3. Rajya Sabha Election: ಮೂರು ಪಕ್ಷಗಳಲ್ಲಿ ವಿಪ್‌ ಜಾರಿ; ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ಗೆ ಶಿಫ್ಟ್
ಬೆಂಗಳೂರು: ಮಂಗಳವಾರ (ಫೆ. 26) ನಡೆಯಲಿರುವ ರಾಜ್ಯಸಭಾ ಚುನಾವಣಾ (Rajya Sabha Election) ಕಣ ರಂಗೇರಿದೆ. ಇದಕ್ಕಾಗಿ ಈಗಾಗಲೇ “ನಂಬರ್‌ ಗೇಮ್‌” ಸಹ ಆರಂಭವಾಗಿದೆ. ಮೂರೂ ರಾಜಕೀಯ ಪಕ್ಷಗಳೂ ತಂತ್ರಗಾರಿಕೆಯಲ್ಲಿ ತೊಡಗಿವೆ. ಆಡಳಿತ ಪಕ್ಷ ಕಾಂಗ್ರೆಸ್‌ಗೆ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಷ್ಟು ಸಂಖ್ಯಾಬಲ ಇದೆ. ಆದರೆ, ಇದಕ್ಕೆ ಶಾಸಕರೊಬ್ಬರ ನಿಧನದಿಂದ ಒಂದು ಮತದ ಕೊರತೆ ಎದುರಾಗಿದೆ. ಅಡ್ಡ ಮತದಾನದ (Cross voting) ಭೀತಿಯೂ ಎದುರಾಗಿದ್ದರಿಂದ ರೆಸಾರ್ಟ್‌ಗೆ ಶಿಫ್ಟ್‌ (Resort Politics) ಆಗಿದೆ. ಈ ನಡುವೆ ಮೂರೂ ರಾಜಕೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ತಮ್ಮ ತಮ್ಮ ಶಾಸಕರಿಗೆ ವಿಪ್‌ ಜಾರಿ (Whip issue) ಮಾಡಿವೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

4. 2024: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 384 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) (kpsc recruitment 2024) ಗೆಜೆಟೆಡ್‌ ಪ್ರೊಬೆಷನರಿಯ (ಕೆಎಎಸ್) (KAS Recruitment 2024) ಗ್ರೂಪ್‌ “ಎ” ಮತ್ತು ಗ್ರೂಪ್‌ “ಬಿ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್‌ ಕರ್ನಾಟಕ ಹಾಗೂ ಉಳಿಕೆ ವೃಂದಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಒಟ್ಟು 384 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸುಮಾರು ಆರು ವರ್ಷಗಳ ನಂತರ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

5. ದೇಶದಲ್ಲಿ ಬಡವರ ಸಂಖ್ಯೆ 5%ಕ್ಕಿಂತ ಇಳಿಕೆ; ಆಹಾರಕ್ಕಿಂತ ಓಡಾಟ, ಮನರಂಜನೆಗೇ ಹೆಚ್ಚು ಖರ್ಚು!
ಹೊಸದಿಲ್ಲಿ: ದೇಶದಲ್ಲಿ ಬಡವರ ಜನಸಂಖ್ಯೆಯು (India Poverty) ಈಗ ಶೇಕಡಾ 5ಕ್ಕಿಂತ ಕಡಿಮೆಯಾಗಿದೆ ಎಂದು ನೀತಿ ಆಯೋಗದ (NITI Aayog) ʼಬಳಕೆ ಮತ್ತು ವೆಚ್ಚದ ಸಮೀಕ್ಷೆಯ ವರದಿ’ ತಿಳಿಸಿದೆ. ಭಾರತೀಯರು ಆಹಾರಕ್ಕಿಂತ ಸಾರಿಗೆ ಹಾಗೂ ಇತರ ಸಂಗತಿಗಳ ಮೇಲೆಯೇ ಹೆಚ್ಚು ಖರ್ಚು ಮಾಡುತ್ತಾರೆ ಎಂಬುದನ್ನೂ ಈ ವರದಿ ತಿಳಿಸಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

6. Arvind Kejriwal : ʼತಪ್ಪಾಯ್ತುʼ ಎಂದ ಕೇಜ್ರಿವಾಲ್;‌ ʼಆಯ್ತು ಬಿಡಿʼ ಎಂದ ಸುಪ್ರೀಂ ಕೋರ್ಟ್;‌ ಯಾವ ಕೇಸ್?
ಹೊಸದಿಲ್ಲಿ: 2018ರ ಮಾನನಷ್ಟ ಮೊಕದ್ದಮೆಯೊಂದರಲ್ಲಿ (Defamation Case) ದಿಲ್ಲಿ ಮುಖ್ಯಮಂತ್ರಿ (Delhi CM) ಮತ್ತು ಎಎಪಿ ನಾಯಕ (AAP leader) ಅರವಿಂದ ಕೇಜ್ರಿವಾಲ್ (Arvind Kejriwal) ʼನನ್ನಿಂದ ಪ್ರಮಾದವಾಗಿದೆʼ ಎಂದು ಒಪ್ಪಿಕೊಂಡಿದ್ದಾರೆ. ಇದನ್ನು ಮನ್ನಿಸಿದ ಸುಪ್ರೀಂ ಕೋರ್ಟ್‌ (Supreme Court), ಕೇಜ್ರಿವಾಲ್‌ ವಿರುದ್ಧ ಯಾವುದೇ ದಂಡನೆಯ ಕ್ರಮಗಳನ್ನು ತೆಗೆದುಕೊಳ್ಳದಂತೆ ಕೆಳಗಿನ ನ್ಯಾಯಾಲಯಕ್ಕೆ ಸೂಚಿಸಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

7. Pankaj Udhas: ‘ಚಂದಕ್ಕಿಂತ ಚಂದ….’ ಗಜಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ
ಮುಂಬೈ: ಖ್ಯಾತ ಗಜಲ್ ಗಾಯಕ (Ghazal Singer) ಪಂಕಜ್ ಉದಾಸ್ (Pankaj Udhas) ಅವರು ತಮ್ಮ 72ನೇ ವಯಸ್ಸಿನಲ್ಲಿ ಸೋಮವಾರ ನಿಧನರಾದರು. ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಪಂಕಜ್ ಉದಾಸ್ ಅವರು, ನಟ ಸುದೀಪ್ ಅವರ ‘ಸ್ಪರ್ಶ’ ಚಿತ್ರದ ‘ಚಂದಕ್ಕಿಂತ ಚಂದ… ನೀನೇ ಸುಂದರ…..’ ಗಜಲ್ ಹಾಡಿಗೆ ದನಿಯಾಗಿದ್ದರು. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

8. ಇಂಗ್ಲೆಂಡ್‌ ವಿರುದ್ಧ 4ನೇ ಟೆಸ್ಟ್‌ ಗೆಲುವು; ಭಾರತಕ್ಕೆ ಸರಣಿ
ರಾಂಚಿ: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ನಾಲ್ಕನೇ ಟೆಸ್ಟ್‌ (IND Vs ENG) ಪಂದ್ಯದಲ್ಲಿ ರೋಹಿತ್‌ ಶರ್ಮಾ (Rohit Sharma) ಬಳಗವು 5 ವಿಕೆಟ್‌ ಗೆಲುವು ಸಾಧಿಸಿದೆ. ರಾಂಚಿಯ ಜೆಎಸ್​ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಭಾರತ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 3-1 ಅಂತರದಿಂದ ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಸಮರ್ಥ ಪ್ರದರ್ಶನ ತೋರಿದ ಭಾರತ ತಂಡವು ಒಂದು ದಿನ ಬಾಕಿ ಇರುವಂತೆಯೇ ಗೆಲುವನ್ನು ತನ್ನ ಹೆಸರಿಗೆ ಬರೆದುಕೊಂಡಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

9. Namma Metro : ಬಟ್ಟೆ ಕ್ಲೀನ್‌ ಇಲ್ಲ ಎಂದು ರೈತನಿಗೆ ಅಪಮಾನ ಮಾಡಿದ ಮೆಟ್ರೋ ಸಿಬ್ಬಂದಿ ವಜಾ
ಬೆಂಗಳೂರು: ಹಾಕಿಕೊಂಡಿರುವ ಬಟ್ಟೆ ಕ್ಲೀನ್‌ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರನ್ನು ಮೆಟ್ರೋ (Namma Metro) ಪ್ರವೇಶಿಸಲು (Metro denies entry to Farmer) ಅವಕಾಶ ನೀಡದೆ ಅಪಮಾನ ಮಾಡಿದ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

10. ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ; ಇನ್‌ಸ್ಟಾಗ್ರಾಂನಲ್ಲಿ ಲಕ್ಷ ಫಾಲೋವರ್ಸ್‌ ಇದ್ದಿದ್ದೇ ಕಾರಣ?
ಜೈಪುರ: ಸಾಮಾಜಿಕ ಜಾಲತಾಣಗಳ ಯುಗದಲ್ಲಿ (Social Media Era) ಅವುಗಳಿಂದ ಜನರಿಗೆ ಭಾರಿ ಉಪಯೋಗವಾಗುತ್ತಿದೆ. ಅದರಲ್ಲೂ, ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ಯುವಕ-ಯುವತಿಯರು ಸೇರಿ ಎಲ್ಲರೂ ಫೇಮಸ್‌ ಆಗುತ್ತಿದ್ದಾರೆ. ಹಣವನ್ನೂ ಗಳಿಸುತ್ತಿದ್ದಾರೆ. ಆದರೆ, ಇದೇ ಕೆಲವರ ಬಾಳಿನಲ್ಲಿ ಮುಳುವಾಗುತ್ತಿದೆ. ಸಾಮಾಜಿಕ ಜಾಲತಾಣವು ಗಂಡ-ಹೆಂಡತಿ ಮಧ್ಯೆ ವಿರಸಕ್ಕೆ ಕಾರಣವಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ರಾಜಸ್ಥಾನದಲ್ಲಿ (Rajasthan) ವ್ಯಕ್ತಿಯೊಬ್ಬ ಪತ್ನಿಯನ್ನೇ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯು ಲಕ್ಷಾಂತರ ಫಾಲೋವರ್ಸ್‌ (Instagram Followers) ಹೊಂದಿದ್ದು, ಅವರು ರೀಲ್ಸ್‌ ಮಾಡುವುದೇ ಜಗಳ, ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading

ಟಾಪ್ 10 ನ್ಯೂಸ್

Vistara Top 10 News : ಬಿಜೆಪಿಗರನ್ನು ಪರೋಕ್ಷವಾಗಿ ಸಂವಿಧಾನ ವಿರೋಧಿಗಳು ಎಂದ ಸಿಎಂ, ನೀರು ಬಂದ್ ಮಾಡಿ ಪಾಕ್​ಗೆ ಪಾಠ ಕಲಿಸಿದ ಭಾರತ ಇತ್ಯಾದಿ ಪ್ರಮುಖ ಸುದ್ದಿಗಳು

Vistara Top 10 News : ಇಡೀ ದಿನ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Top 10 news
Koo

1. ಸಂವಿಧಾನ ಬದಲಿಸಲು ಬಂದವರನ್ನು ಅಧಿಕಾರದಿಂದ ಕಿತ್ತೊಗೆಯಿರಿ: ಸಿದ್ದರಾಮಯ್ಯ ಕರೆ
ಬೆಂಗಳೂರು: ಇಡೀ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ಧ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದ ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ. ಹೀಗಾಗಿ ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : Constitution and National Unity: ಸಂವಿಧಾನಕ್ಕೆ ಧಕ್ಕೆಯಾದ್ರೆ ದೇಶದಲ್ಲಿ ಸರ್ವಾಧಿಕಾರಿ ಆಡಳಿತ: ಮಲ್ಲಿಕಾರ್ಜುನ ಖರ್ಗೆ

2. ರಾವಿ ನದಿ ನೀರು ನಿಲ್ಲಿಸಿ ಪಾಕಿಸ್ತಾನಕ್ಕೆ ಪೆಟ್ಟು ಕೊಟ್ಟ ಕೇಂದ್ರ; ರೈತರಿಗೆ ಗುಡ್‌ ನ್ಯೂಸ್‌
ಶ್ರೀನಗರ: ಸುಮಾರು ಮೂರು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಡ್ಯಾಮ್‌ ಕಟ್ಟುವ ಮೂಲಕ ಕೇಂದ್ರ ಸರ್ಕಾರವು (Central Government) ಪಾಕಿಸ್ತಾನಕ್ಕೆ (Pakistan) ಪೆಟ್ಟು ಕೊಟ್ಟಿದೆ. 1995ರಿಂದಲೂ ನನೆಗುದಿಗೆ ಬಿದ್ದಿದ್ದ ಶಾಹ್‌ಪುರ ಕಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ರಾವಿ ನದಿಯಿಂದ (Ravi River Water) ಪಾಕಿಸ್ತಾನಕ್ಕೆ ಹರಿಯುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದರಿಂದ ಪಾಕಿಸ್ತಾನದ ಕೃಷಿಗೆ ಭಾರಿ ಪೆಟ್ಟು ಬೀಳುವ ಜತೆಗೆ ಭಾರತದ ಲಕ್ಷಾಂತರ ರೈತರಿಗೆ ಈ ನದಿಯ ನೀರಿನಿಂದ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲವಾಗಲಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

3. ದ್ವಾರಕಾದಲ್ಲಿ ಸ್ಕೂಬಾ ಡೈವಿಂಗ್‌ ಮೂಲಕ ಮಿಂಚು ಹರಿಸಿದ ಮೋದಿ; ಇಲ್ಲಿದೆ ಫೋಟೊ ಗ್ಯಾಲರಿ
ಗಾಂಧಿನಗರ: ಗುಜರಾತ್‌ನ ದ್ವಾರಕಾದಲ್ಲಿ ಇಂದು (ಫೆಬ್ರವರಿ 25) ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಉದ್ಘಾಟಿಸಿದರು. ‘ಸುದರ್ಶನ ಸೇತು’ (Sudarshan Setu) ಎಂದು ಕರೆಯಲ್ಪಡುವ ಇದು ಓಖಾ ಮತ್ತು ಬೇತ್ ದ್ವಾರಕಾ (Okha and Beyt Dwarka) ದ್ವೀಪವನ್ನು ಸಂಪರ್ಕಿಸುತ್ತದೆ. 2017ರ ಅಕ್ಟೋಬರ್‌ನಲ್ಲಿ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಈ ಸೇತುವೆಯ ಅದ್ಭುತ ಚಿತ್ರಗಳು ಇಲ್ಲಿವೆ. ಇದೇ ವೇಳೆ ಮೋದಿ ಅವರು ದ್ವಾರಕಾದಲ್ಲಿ ಸ್ಕೂಬಾ ಡೈವಿಂಗ್‌ ಮಾಡಿ ಗಮನ ಸೆಳೆದರು. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

4. ಏಕಾಏಕಿ ಮನ್‌ ಕೀ ಕಾರ್ಯಕ್ರಮ ಸ್ಥಗಿತಗೊಳಿಸಿದ ಮೋದಿ; ಕಾರಣ ಏನು?
ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ನಿರಂತರವಾಗಿ ಮನ್‌ ಕೀ ಬಾತ್‌ (Mann Ki Baat) ರೇಡಿಯೋ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪ್ರತಿ ತಿಂಗಳ ಕೊನೆಯ ಭಾನುವಾರ ರೇಡಿಯೋ ಕಾರ್ಯಕ್ರಮದ ಮೂಲಕ ಅವರು ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಾರೆ. ಹಾಗಾಗಿ, ಮನ್‌ ಕೀ ಬಾತ್‌ ರೇಡಿಯೋ ಸರಣಿಯು 110 ಕಾರ್ಯಕ್ರಮಗಳನ್ನು ಪೂರೈಸಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮನ್‌ ಕೀ ಬಾತ್‌ ಕಾರ್ಯಕ್ರಮಕ್ಕೆ ಮೂರು ತಿಂಗಳು ವಿರಾಮ ನೀಡಿದ್ದಾರೆ. ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮೋದಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : ಮನ್‌ ಕೀ ಬಾತ್‌ನಲ್ಲಿ ಬಾಗಲಕೋಟೆಯ ವೆಂಕಪ್ಪಗೆ ಮೋದಿ ಮೆಚ್ಚುಗೆ; ಇವರ ಕೊಡುಗೆ ಏನು?

5. 25 ಕೆಜಿ ಬೆಳ್ಳಿ, 10 ಕೆಜಿ ಚಿನ್ನ; 1 ತಿಂಗಳಿನಲ್ಲಿ ರಾಮ ಮಂದಿರದಲ್ಲಿ ಸಂಗ್ರಹವಾಗಿದ್ದು ಎಷ್ಟು ಕೋಟಿ ರೂ.?
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ (Ram Mandir) ಬಾಲಕ ರಾಮ (Balak Ram) ವಿಗ್ರಹದ ಪ್ರಾಣ ಪ್ರತಿಷ್ಠೆ (Pran Prathistha) ನೆರವೇರಿದೆ. ಜನವರಿ 22ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಈ ಸಮಾರಂಭ ನಡೆದಿದೆ. ಅದಾದ ಬಳಿಕ ಜನವರಿ 23ರಿಂದ ಈ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಮ ಮಂದಿರಕ್ಕೆ ಭೇಟಿ ನೀಡಿ ಬಾಲಕ ರಾಮನ ದರ್ಶನ ಮಾಡುತ್ತಿದ್ದಾರೆ. ರಾಮ ಮಂದಿರ ಸಾವರ್ಜನಿಕ ಭೇಟಿಗೆ ಮುಕ್ತವಾಗಿ ಇದೀಗ ಸುಮಾರು ಇಂದು ತಿಂಗಳು ಕಳೆದಿದ್ದು ಕೋಟ್ಯಂತರ ರೂ. ಮೌಲ್ಯದ ಕಾಣಿಕೆ ಸಂದಾಯವಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಈ ಸುದ್ದಿಗಳನ್ನೂ ಓದಿ : Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

6. ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್‌ ನಿಗೂಢ ನಾಪತ್ತೆ; ಯಾರು ಈ ಶಾರುಖ್‌ ಶೇಖ್‌?
ಪುತ್ತೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವಿಶ್ವವಿದ್ಯಾಲಯಲ್ಲಿ (Private University) ಪಿಎಚ್‌ಡಿ ಅಧ್ಯಯನ (PhD Study) ನಡೆಸುತ್ತಿದ್ದ ಪುತ್ತೂರು ಮೂಲದ ಬ್ರಾಹ್ಮಣ ಯುವತಿ ಚೈತ್ರಾ ಹೆಬ್ಬಾರ್‌ (Chaithra Hebbar Missing Case) ನಾಪತ್ತೆಯಾಗಿ ಫೆ. 25ಕ್ಕೆ ಒಂಬತ್ತು ದಿನಗಳು ಕಳೆದಿವೆ. ಫೆ. 17ರಿಂದ ನಾಪತ್ತೆಯಾಗಿರುವ ಈಕೆಯ ಬಗ್ಗೆ ಹಲವಾರು ಕಥೆಗಳು ಹರಡಿಕೊಂಡಿದ್ದು, ಪೊಲೀಸರಿಗೆ ಆಕೆಯನ್ನು ಹುಡುಕುವುದೇ ಒಂದು ಸಾಹಸವಾಗಿದೆ. ಆಕೆ ನಾಪತ್ತೆಯಾದ ದಿನದಿಂದ ಆಕೆಯೊಂದಿಗೆ ಆತ್ಮೀಯತೆಯಿಂದ ಇದ್ದ ಶಾರುಖ್‌ ಶೇಖ್‌ (Sharukh Shekh) ಎಂಬಾತ ಕೂಡಾ ನಾಪತ್ತೆಯಾಗಿದ್ದಾನೆ. ಹೀಗಾಗಿ ಇದು ಹಿಂದು-ಮುಸ್ಲಿಂ ಜೋಡಿ (Hindu Muslim) ಪಲಾಯನ, ಲವ್‌ ಜಿಹಾದ್‌ (Love Jihad) ಎಂಬಿತ್ಯಾದಿ ವ್ಯಾಖ್ಯಾನಗಳಿಗೂ ಕಾರಣವಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

7. ಅನಿಲ್ ಕುಂಬ್ಳೆ ದಾಖಲೆ ಮುರಿದ ಆರ್ ಅಶ್ವಿನ್; ಏನದು ದಾಖಲೆ?
ರಾಂಚಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ದಂತಕಥೆ ರವಿಚಂದ್ರನ್ ಅಶ್ವಿನ್ (R Ashwin) ಅವರು ಅನಿಲ್ ಕುಂಬ್ಳೆ (Anil Kumble) ಅವರ ದೀರ್ಘಕಾಲದ ದಾಖಲೆಯನ್ನು ಮುರಿದು ಭಾರತದ ನೆಲದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರಾಜ್​ಕೋಟ್​ನಲ್ಲಿ ನಡೆದ ಮೂರನೇ ಟೆಸ್ಟ್​ನಲ್ಲಿ 500 ಟೆಸ್ಟ್ ವಿಕೆಟ್​​ಗಳ ಮೈಲಿಗಲ್ಲನ್ನು ದಾಟಿದ ಅಶ್ವಿನ್ ಮತ್ತೊಮ್ಮೆ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

8. ಸಿನಿಮಾ ನಿರ್ಮಾಪಕನಿಂದ 2 ಸಾವಿರ ಕೋಟಿ ರೂ. ಡ್ರಗ್ಸ್‌ ದಂಧೆ; ಇದು ರೀಲ್‌ ಅಲ್ಲ ರಿಯಲ್‌ ಕತೆ!
ನವದೆಹಲಿ: ಮಾದಕವಸ್ತು ನಿಯಂತ್ರಣ ಬ್ಯೂರೋ (NCB) ಹಾಗೂ ದೆಹಲಿ ಪೊಲೀಸರು (Delhi Police) ಬೃಹತ್‌ ಡ್ರಗ್ಸ್‌ ಜಾಲವೊಂದನ್ನು ಭೇದಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿ ಮೌಲ್ಯದ 3,500 ಕೆ.ಜಿ ಸ್ಯೂಡೋಫೆಡ್ರಿನ್‌ (Pseudoephedrine) ಮಾದಕವಸ್ತುವನ್ನು ಅಕ್ರಮವಾಗಿ ಸಾಗಿಸಿದ ಜಾಲವೊಂದನ್ನು ಭೇದಿಸಿದ್ದು, ತಮಿಳು ಸಿನಿಮಾ ನಿರ್ಮಾಪಕನೇ (Tamil Film Producer) ಇದರ ಪ್ರಮುಖ ಪಿತೂರಿದಾರ ಎಂದು ಎನ್‌ಸಿಬಿ ಮಾಹಿತಿ ನೀಡಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

9. ಸಿಗ್ನಲ್‌ ಜಂಪ್‌ ಮಾಡಿದ್ರೆ ನಿಮ್ಮ ಗಾಡಿ ಗುಜರಿಗೆ ಹಾಕ್ತಾರೆ ಹುಷಾರ್‌!
ಬೆಂಗಳೂರು: ರೋಡ್‌ನಲ್ಲಿ ಟ್ರಾಫಿಕ್‌ ಪೊಲೀಸರು ನಿಂತಿಲ್ಲ ಎಂದು ಸಿಗ್ನಲ್ ಜಂಪ್ ಮಾಡುವುದು, ಹೆಲ್ಮೆಟ್ ಹಾಕದೆ ಬೈಕ್‌ ಓಡಿಸುವುದು, ಸೀಟ್‌ ಬೆಲ್ಟ್‌ ಹಾಕದೇ ಕಾರು ಚಲಾಯಿಸುವುದು ಸೇರಿದಂತೆ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದರೆ ಇನ್ನು ಮುಂದೆ ಕಂಟಕ (Traffic violation) ಕಾದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

10. ಅಂಬಾನಿ ಮಗನ ಮದುವೆ ಪೂರ್ವ ಕಾರ್ಯಕ್ರಮಕ್ಕೆ ಸಿದ್ಧವಾಗಿದೆ ಭೂ ಲೋಕದ ಸ್ವರ್ಗ!
ಗಾಂಧೀನಗರ (ಗುಜರಾತ್): ವಿಶ್ವದ ಟಾಪ್ ಟೆನ್ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ದಂಪತಿಯ ಮಗ ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ (Anant and Radhika Wedding) ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅದ್ಧೂರಿ ತಯಾರಿ ನಡೆಯುತ್ತಿದೆ. ಸ್ವತಃ ನೀತಾ ಅಂಬಾನಿ ಅವರು ಈ ಸಿದ್ಧತೆಯ ಉಸ್ತುವಾರಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅಂಬಾನಿ ಕುಟುಂಬದಿಂದ ಗುಜರಾತ್‌ನ ಜಾಮ್ ನಗರದಲ್ಲಿ (Jamnagar) ಹದಿನಾಲ್ಕು ಹೊಸ ದೇಗುಲಗಳ ಸಮುಚ್ಚಯದ ನಿರ್ಮಾಣವನ್ನೇ ಮಾಡಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು, ದೇವ- ದೇವತೆಗಳ ಚಿತ್ರಗಳು, ಮನಮೋಹಕವಾದ ಶಿಲ್ಪಗಳು, ವಾಸ್ತುಶಿಲ್ಪದಿಂದ ಪ್ರೇರಿತವಾದ ಪಾರಂಪರಿಕ ಚಿತ್ರಗಳನ್ನು ಇಲ್ಲಿ ಕಾಣಬಹುದಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading
Advertisement
naturals ic cream raghunandan kamath
ಶ್ರದ್ಧಾಂಜಲಿ18 mins ago

Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

IPL 2024
ಪ್ರಮುಖ ಸುದ್ದಿ22 mins ago

IPL 2024 : ಸಹ ಆಟಗಾರ ರೊಮಾರಿಯೊ ಶೆಫರ್ಡ್​ಗೆ ಆಟೋಗ್ರಾಫ್​ ಕೊಟ್ಟ ರೋಹಿತ್​ , ಚಿತ್ರಗಳು ಇಲ್ಲಿವೆ

Kajal Aggarwal Kannappa Movie Entry
ಟಾಲಿವುಡ್41 mins ago

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

White House
ವಿದೇಶ43 mins ago

White House: ಭಾರತದಲ್ಲಿದೆ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ: ಅಮೆರಿಕದ ಮೆಚ್ಚುಗೆ; ಮೋದಿ ನಾಯಕತ್ವಕ್ಕೂ ಸಿಕ್ತು ಶಹಬ್ಬಾಸ್‌ಗಿರಿ

IPL 2024
ಕ್ರೀಡೆ43 mins ago

IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

hd deve gowda birthday
ಪ್ರಮುಖ ಸುದ್ದಿ44 mins ago

HD Deve Gowda: ಈ ಅವಮಾನದಿಂದ ಪಾರು ಮಾಡು: 93ರ ಜನ್ಮದಿನಂದು ದೇವೇಗೌಡರ ಮೌನ ಪ್ರಾರ್ಥನೆ

Gurucharan Singh returns home after almost a month
ಕಿರುತೆರೆ1 hour ago

Gurucharan Singh: ಕಾಣೆಯಾಗಿದ್ದ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ ಮತ್ತೆ ಮನೆಗೆ ವಾಪಸ್‌!

Pavithra Jayaram Last Instagram post to chandrakanth
South Cinema1 hour ago

Pavithra Jayaram: ಗೆಳೆಯ ಚಂದು ಜತೆ ಪವಿತ್ರ ಜಯರಾಮ್ ರೀಲ್ಸ್ ನೋಡಿದ್ರೆ ಕಣ್ಣು ಒದ್ದೆಯಾಗುತ್ತೆ!

Aiden Markram
ಪ್ರಮುಖ ಸುದ್ದಿ1 hour ago

Aiden Markarm : ವಿಂಡೀಸ್ ವಿರುದ್ಧದ ಸರಣಿಗೆ ದ. ಆಫ್ರಿಕಾ ತಂಡದಲ್ಲಿ ಮಾರ್ಕ್ರಮ್​​ಗೆ ಇಲ್ಲ ಚಾನ್ಸ್​

Fire Accident
ದೇಶ2 hours ago

Fire Accident: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಕೊಂಡ ಬೆಂಕಿ; 10 ಮಂದಿ ಭಕ್ತರ ಸಜೀವ ದಹನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ14 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌