Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ - Vistara News

ದೇಶ

Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

Wayanad Landslide: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Wayanad Landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿ ಹೋಗಿದೆ. ರಾಜ್ಯ ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದ್ದು, ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಇಂದೂ (ಜುಲೈ 31) ವಯನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆತಂಕ ಮೂಡಿಸಿದೆ.

ಭಾರತ ಹವಾಮಾನ ಇಲಾಖೆ (India Meteorological Department) ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ. ʼʼಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಆಗಸ್ಟ್ 2ರಂದುಈ ಭಾಗಗಳಲ್ಲಿ ಮಳೆಯ ಪ್ರಮಾನ ಇನ್ನೂ ಹೆಚ್ಚಾಗಲಿದೆ. ಇಂದು ಕೇರಳದಲ್ಲಿ ಗಂಟೆಗೆ 30-40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆʼʼ ಎಂದು ಐಎಂಡಿ ತಿಳಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಕಾಸರಗೋಡು, ಕಣ್ಣೂರು, ಕೋಝಿಕೋಡ್, ವಯನಾಡು, ಮಲಪ್ಪುರಂ, ಪಾಲಕ್ಕಾಡ್, ತ್ರಿಶೂರ್, ಇಡುಕ್ಕಿ, ಎರ್ನಾಕುಲಂ, ಅಲಪ್ಪುಳ ಮತ್ತು ಪತ್ತನಂತೊಟ್ಟ ಜಿಲ್ಲೆಗಳ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜತೆಗೆ ನಡೆಯಲಿರುವ ಪರೀಕ್ಷೆಗಳನ್ನೂ ಮುಂದೂಡಲಾಗಿದೆ.

ಭಾರಿ ದುರಂತ

ಭಾರೀ ಮಳೆಯ ನಡುವೆ ಮಂಗಳವಾರ ಬೆಳಗ್ಗೆ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಜತೆಗೆ ನಾಲ್ಕು ಗಂಟೆ ಅವಧಿಯಲ್ಲಿ ಸಂಭವಿಸಿದೆ ಮೂರು ದೊಡ್ಡ ಭೂಕುಸಿತ ವಯನಾಡು ಜಿಲ್ಲೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಮುಂಡಕೈ, ಚೂರಲ್‌ಮಲ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಹೆಚ್ಚು ಹಾನಿಗೊಳಗಾಗಿದ್ದು, ಇಲ್ಲಿ ಎಲ್ಲೆಂದರಲ್ಲಿ ಮಣ್ಣು, ಕಲ್ಲು ಬಂಡೆ, ಕೆಸರಿನ ರಾಶಿಯೇ ಕಂಡು ಬರುತ್ತಿದೆ. ಮನೆ, ಶಾಲೆ ಮುಳುಗಡೆಯಾಗಿದ್ದು, ರಸ್ತೆ, ಸೇತುವೆ ಕೊಚ್ಚಿ ಹೋಗಿ ಸಂಪರ್ಕವೇ ಕಡಿತಗೊಂಡಿದೆ. ಇದು ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರಿದ್ದು, ಸೇನಾ ಸಿಬ್ಬಂದಿ ತಾತ್ಕಾಲಿಕ ಸೇತುವೆ ನಿರ್ಮಿಸಿ ಸಂತ್ರಸ್ತರನ್ನು ಪಾರು ಮಾಡುತ್ತಿದ್ದಾರೆ.

ಈ ದುರಂತ ಎಷ್ಟು ಭೀಕರವಾಗಿದೆ ಎಂದರೆ ನದಿಯಲ್ಲಿ ಕೊಚ್ಚಿಕೊಂಡು ಹೋದ ಸ್ಥಳೀಯರ ಶವ ಪಕ್ಕದ ಜಿಲ್ಲೆ ಮಲ್ಲಪ್ಪುರಂನಲ್ಲಿ ಸಿಕ್ಕಿದೆ. ಇನ್ನು ಮಣ್ಣು, ಕಲ್ಲುಬಂಡೆಗಳ ರಾಶಿಯಲ್ಲಿ ಮೃತದೇಹಗಳು ಕಂಡು ಬಂದಿದ್ದು, ಗುರುತೇ ಸಿಗದಷ್ಟು ನಜ್ಜುಗುಜ್ಜಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡವರಿಗೆ ಮೆಪ್ಪಾಡಿ ಆರೋಗ್ಯ ಕೇಂದ್ರ, ವಿಮ್ಸ್ ಆಸ್ಪತ್ರೆ, ಬತ್ತೇರಿ ತಾಲೂಕು ಆಸ್ಪತ್ರೆ, ನಿಲಂಬೂರ್ ಜಿಲ್ಲಾಸ್ಪತ್ರೆ ಮುಂತಾದೆಡೆ ಚಿಕಿತ್ಸೆ ನೀಡಲಾಗುತ್ತಿದೆ.

ರಕ್ಷಣಾ ಕಾರ್ಯಾಚರಣೆ

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA), ಅಗ್ನಿಶಾಮಕ ದಳ, ನಾಗರಿಕ ರಕ್ಷಣೆ, ಎನ್‌ಡಿಆರ್‌ಎಫ್‌ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ತಂಡಗಳ ಸದಸ್ಯರುರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜತೆಗೆ ಕಣ್ಣೂರಿನ ಡಿಎಸ್‌ಸಿ ಕೇಂದ್ರದ ಸುಮಾರು 200 ಭಾರತೀಯ ಸೇನಾ ಸಿಬ್ಬಂದಿ ಮತ್ತು ಕೋಝಿಕೋಡ್‌ನ 122 ಟಿಎ ಬೆಟಾಲಿಯನ್ ಸದಸ್ಯರು ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಇವರೊಂದಿಗೆ ಎರಡು ವಾಯುಪಡೆಯ ಹೆಲಿಕಾಪ್ಟರ್‌ಗಳು, ಒಂದು ಎಂಐ -17 ಮತ್ತು ಎಎಲ್ಎಚ್ ಕೂಡ ಕೈಜೋಡಿಸಿದೆ.

ಇದನ್ನೂ ಓದಿ: Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Puri Jagannath Temple: ಪುರಿ ಜಗನ್ನಾಥ ಮಂದಿರದ ನಕಲಿ ಕೀ ಪತ್ತೆ; ಅಪಾರ ಪ್ರಮಾಣದ ಬಂಗಾರ ಕಳವು?

Puri Jagannath Temple: ವಿಶ್ವ ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ಮಂದಿರದ ರತ್ನ ಭಂಡಾರದಲ್ಲಿ  ಅಪಾರ ಪ್ರಮಾಣದ ಸಂಪತ್ತಿದೆ. ಈ ಮಧ್ಯೆ ನಕಲಿ ಕೀ ಬಳಸಿ ರತ್ನ ಭಂಡಾರವನ್ನು ತೆರೆದು ಅಪಾರ ಪ್ರಮಾಣದ ಚಿನ್ನ ಕಳವು ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆರೆದು ಬೆಲೆಬಾಳುವ ವಸ್ತುಗಳನ್ನು ತಾತ್ಕಾಲಿಕ ಭಂಡಾರಕ್ಕೆ ಸ್ಥಳಾಂತರಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರ ನೇಮಿಸಿದ ಸಮಿತಿಯ ಸದಸ್ಯರಾಗಿದ್ದ ಜಗದೀಶ್ ಮೊಹಾಂತಿ ಅವರು ಭಂಡಾರದಿಂದ ಚಿನ್ನ ಕಳುವಾಗಿದೆ ಎಂದು ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

Puri Jagannath Temple
Koo

ಭುವನೇಶ್ವರ: ವಿಶ್ವ ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ಮಂದಿರ (Puri Jagannath Temple)ದ ರತ್ನ ಭಂಡಾರ (Ratna Bhandar)ದಲ್ಲಿ ಅಪಾರ ಪ್ರಮಾಣದ ಸಂಪತ್ತಿದೆ. ಈ ಮಧ್ಯೆ ನಕಲಿ ಕೀ ಬಳಸಿ ರತ್ನ ಭಂಡಾರವನ್ನು ತೆರೆದು ಅಪಾರ ಪ್ರಮಾಣದ ಚಿನ್ನ ಕಳವು ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆರೆದು ಬೆಲೆಬಾಳುವ ವಸ್ತುಗಳನ್ನು ತಾತ್ಕಾಲಿಕ ಭಂಡಾರಕ್ಕೆ ಸ್ಥಳಾಂತರಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರ ನೇಮಿಸಿದ ಸಮಿತಿಯ ಸದಸ್ಯರಾಗಿದ್ದ ಜಗದೀಶ್ ಮೊಹಾಂತಿ ಅವರು ಭಂಡಾರದಿಂದ ಚಿನ್ನ ಕಳುವಾಗಿದೆ ಎಂಬ ಬಾಂಬ್‌ ಸಿಡಿಸಿದ್ದಾರೆ.

ʼʼಆಭರಣಗಳನ್ನು ಕದಿಯುವ ಉದ್ದೇಶದಿಂದ ನಕಲಿ ಕೀಲಿಗಳನ್ನು ಬಳಸಲಾಗಿದೆ. ಹೀಗಾಗಿ ರತ್ನ ಭಂಡಾರಗಳನ್ನು ತೆರೆಯುವಾಗ ಕೀಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಬೀಗಗಳನ್ನು ಮುರಿಯಬೇಕಾಯಿತುʼʼ ಎಂದು ಅವರು ಹೇಳಿದ್ದಾರೆ. ʼʼನಕಲಿ ಕೀ ಬಳಕೆಯ ಹಿಂದೆ ಬೆಲೆಬಾಳುವ ವಸ್ತುಗಳನ್ನು ಕಸಿದುಕೊಳ್ಳುವ ಕ್ರಿಮಿನಲ್ ಉದ್ದೇಶವಿದೆ” ಎಂದು ಅವರು ಸಂಶಯ ವ್ಯಕ್ತಪಡಿಸಿದ್ದಾರೆ.

ಜುಲೈ 14ರಂದು ಪುರಿ ಜಗನ್ನಾಥ ಮಂದಿರದ ರತ್ನ ಭಂಡಾರವನ್ನು 46 ವರ್ಷಗಳ ಬಳಿಕ ತೆರೆಯಲಾಗಿತ್ತು. ಆದರೆ ಮೂಲ ಕೀ ಕಾಣೆಯಾದ ಹಿನ್ನೆಲೆಯಲ್ಲಿ ಸಮಿತಿಯ ಸದಸ್ಯರು ರತ್ನ ಭಂಡಾರದ ಒಳ ಕೋಣೆಗೆ ಪ್ರವೇಶಿಸಲು ಮೂರು ಬೀಗಗಳನ್ನು ಮುರಿದಿದ್ದರು. ಮೂಲ ಕೀಲಿ 2018ರಲ್ಲಿ ಕಾಣೆಯಾಗಿದ್ದವು. ಹೀಗಾಗಿ ಇದರ ತನಿಖೆಗೆ ಹಿಂದಿನ ನವೀನ್ ಪಟ್ನಾಯಕ್ ಸರ್ಕಾರವು ಒರಿಶಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಘುಬೀರ್ ದಾಸ್ ನೇತೃತ್ವದ ತಂಡವನ್ನು ನೇಮಿಸಿತ್ತು.

ರತ್ನ ಭಂಡಾರದ ಒಳಗಿರುವ ಕಪಾಟಿನಿಂದ ಕೀ ಕಾಣೆಯಾಗಿವೆ ಎಂದು ಝೀ ನ್ಯೂಸ್ ವರದಿ ಮಾಡಿದೆ. ರತ್ನ ಭಂಡಾರದ ಒಳಗಿನ ಕೋಣೆಯಲ್ಲಿ ಮೂರು ಮರದ ಕಪಾಟು, ಒಂದು ಉಕ್ಕಿನ ಕಪಾಟು, ಎರಡು ಮರದ ಪೆಟ್ಟಿಗೆ ಮತ್ತು ಕಬ್ಬಿಣದ ಪೆಟ್ಟಿಗೆ ಇದೆ. ದೇವಾಲಯದ ಆಡಳಿತದ ಮೂಲಗಳ ಪ್ರಕಾರ, ಮರದ ಕಪಾಟುಗಳ ಪೈಕಿ ಒಂದನ್ನು ಮಾತ್ರ ಲಾಕ್ ಮಾಡಲಾಗಿತ್ತು. ಕಬ್ಬಿಣದ ಪೆಟ್ಟಿಗೆಯ ಪೈಕಿ ಎರಡು ಲಾಕ್ ಕಾರ್ಯವಿಧಾನಗಳನ್ನು ಹೊಂದಿತ್ತು, ಆದರೆ ಒಂದರ ಬೀಗ ತೆರೆದಿತ್ತು. ಇದು ಸಂಶಯಕ್ಕೆ ಕಾರಣವಾಗಿದೆ.

ಸರ್ಪ ಕಾವಲು ಸುಳ್ಳು

ಅಲ್ಲದೆ ರತ್ನ ಭಂಡಾರವನ್ನು ವಿಷಕಾರಿ ಹಾವುಗಳು ಕಾಯುತ್ತಿವೆ ಎನ್ನುವುದು ಸುಳ್ಳು ಸುದ್ದಿ ಎಂದೂ ಜಗದೀಶ್ ಮೊಹಾಂತಿ ತಿಳಿಸಿದ್ದಾರೆ. ಕಳ್ಳತನವನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ಈ ಸುಳ್ಳು ಸುದ್ದಿಯನ್ನು ಹರಡಿರಬಹುದು ಎಂದು ಅವರು ಶಂಕಿಸಿದ್ದಾರೆ. ಈ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಲು ದೇವಾಲಯದ ಆಡಳಿತವು ಇನ್ನೂ ಸರ್ಕಾರವನ್ನು ಸಂಪರ್ಕಿಸಿಲ್ಲ ಎನ್ನಲಾಗಿದೆ.

ಏನಿದು ರತ್ನ ಭಂಡಾರ?‌

ದೇವರ ಆಭರಣ ಪೆಟ್ಟಿಗೆಯನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ‘ಹೊರ ಭಂಡಾರ’ ಎಂದು ಕರೆಯಲಾಗುವ ಭಾಗದಲ್ಲಿ ವಾರ್ಷಿಕ ರಥೋತ್ಸವದಂತಹ ವಿಶೇಷ ಸಂದರ್ಭಗಳಲ್ಲಿ ಬಳಸುವ ಉಡುಪುಗಳು, ಆಭರಣಗಳಿವೆ. ‘ಒಳ ಭಂಡಾರ’ ಎಂದು ಕರೆಯುವ ಮತ್ತೊಂದು ಭಾಗದಲ್ಲಿ ರಾಜರಿಂದ ಕಾಣಿಕೆಯಾಗಿ ಲಭಿಸಿದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳಿವೆ. ‘ಒಳ ಭಂಡರ’ವನ್ನು ಕೊನೆಯ ಬಾರಿ 1978ರಲ್ಲಿ ತೆರೆಯಲಾಗಿತ್ತು. ಅದಾದ ಬಳಿಕ ಜುಲೈ 14ರಂದು ಬಾಗಿಲು ತೆರೆಯಲಾಗಿತ್ತು.

ಇದನ್ನೂ ಓದಿ: Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

Continue Reading

ದೇಶ

Narayana Murthy: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ: ನಾರಾಯಣಮೂರ್ತಿ ಹೊಸ ವಾದ!

Narayana Murthy: ಭಾನುವಾರ ನಡೆದ ELCIA ಟೆಕ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಮೂರ್ತಿ, ಭಾರತವು ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ ಎಂದು ಹೇಳಿದರು. ಅಲ್ಲದೇ ಮೂರ್ತಿ ಅವರು “ಹಬ್” ಮತ್ತು “ವಿಶ್ವ ಗುರು” ನಂತಹ ಭವ್ಯವಾದ ಪದಗಳನ್ನು ಸುಖಾ ಸುಮ್ಮನೆ ಬಳಸದಂತೆ ಸಲಹೆ ನೀಡಿದರು.

VISTARANEWS.COM


on

Narayana Murthy
Koo

ನವದೆಹಲಿ: ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್‌ ಮಾಡಲು ಭಾರತಕ್ಕೆ ಸಾಧ್ಯವಿಲ್ಲ. ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ. ಉತ್ಪಾದನಾ ಕೇಂದ್ರವಾಗುವ ಭಾರತದ ಕನಸು ಇನ್ನು ಬಹಳ ದೂರದಲ್ಲಿದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ(Narayana Murthy) ಹೇಳಿದ್ದಾರೆ.

ಭಾನುವಾರ ನಡೆದ ELCIA ಟೆಕ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಮೂರ್ತಿ, ಭಾರತವು ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ ಎಂದು ಹೇಳಿದರು. ಅಲ್ಲದೇ ಮೂರ್ತಿ ಅವರು “ಹಬ್” ಮತ್ತು “ವಿಶ್ವ ಗುರು” ನಂತಹ ಭವ್ಯವಾದ ಪದಗಳನ್ನು ಸುಖಾ ಸುಮ್ಮನೆ ಬಳಸದಂತೆ ಸಲಹೆ ನೀಡಿದರು.

ಚೀನಾ ಈಗಾಗಲೇ ವಿಶ್ವದ ಕಾರ್ಖಾನೆಯಾಗಿದೆ. ಇತರ ದೇಶಗಳಲ್ಲಿನ ಸೂಪರ್ ಮಾರ್ಕೆಟ್‌ಗಳು ಮತ್ತು ಹೋಮ್ ಡಿಪೋಗಳಲ್ಲಿ ಸುಮಾರು 90% ರಷ್ಟು ವಸ್ತುಗಳನ್ನು ಚೀನಾದಲ್ಲಿ ತಯಾರಿಸಲಾಗುತ್ತದೆ. ಅವರ ಆರ್ಥಿಕತೆ (ಜಿಡಿಪಿ) ಭಾರತಕ್ಕಿಂತ ಆರು ಪಟ್ಟು ದೊಡ್ಡದಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತವು ಉತ್ಪಾದನಾ ಕೇಂದ್ರವಾಗಲಿದೆ ಎಂದು ಹೇಳುವುದು ದೊಡ್ಡ ವಿಷಯವಾಗಿದೆ ಎಂದು ಮೂರ್ತಿ ಹೇಳಿದರು.

ಐಟಿ ವಲಯವು ರಫ್ತಿನ ಮೇಲೆ ಅವಲಂಬಿತವಾಗಿರುವಾಗ, ಉತ್ಪಾದನಾ ಉದ್ಯಮಕ್ಕೆ ಹೆಚ್ಚಿನ ದೇಶೀಯ ಕೊಡುಗೆ ಮತ್ತು ಸರ್ಕಾರದ ಬೆಂಬಲದ ಅಗತ್ಯವಿದೆ. ಉತ್ಪಾದನೆಗೆ ದೇಶೀಯ ಕೊಡುಗೆ ಹೆಚ್ಚು. ಉತ್ಪಾದನೆಯ ಯಶಸ್ಸಿನಲ್ಲಿ ಸರ್ಕಾರವು ದೊಡ್ಡ ಪಾತ್ರವನ್ನು ವಹಿಸುತ್ತದೆ. ದುರದೃಷ್ಟವಶಾತ್, ಭಾರತದಂತಹ ದೇಶದಲ್ಲಿ ಉತ್ತರದಾಯಿತ್ವ, ಪಾರದರ್ಶಕತೆ, ವೇಗ ಮತ್ತು ಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟತೆಯು ಇನ್ನೂ ಸುಧಾರಣೆಯ ಅಗತ್ಯವಿದೆ. ಉತ್ಪಾದನಾ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಮತ್ತು ಉದ್ಯಮದ ನಡುವೆ ಕನಿಷ್ಠ ಹಸ್ತಕ್ಷೇಪದ ಅಗತ್ಯವಿದೆ ಎಂದು ಒತ್ತಿ ಹೇಳಿದರು.

“ಮಾರುಕಟ್ಟೆ ಪರಿಸ್ಥಿತಿಯನ್ನು ಉತ್ತಮವಾಗಿ ನಿರ್ಣಯಿಸಲು ಮತ್ತು ಮೌಲ್ಯವನ್ನು ಸೇರಿಸಲು ಮತ್ತು ಮಾರುಕಟ್ಟೆಯನ್ನು ನಿರ್ಣಯಿಸಲು ಉದ್ಯಮಿಗಳು ಸರಳವಾದ ಗಣಿತದ ಮಾದರಿಗಳನ್ನು ಬಳಸಲು ಕಲಿಯಬೇಕು. ಅವರಿಗೆ ಎಷ್ಟು ಮಾರುಕಟ್ಟೆ ಸಿಗಬಹುದು ಎನ್ನುವುದನ್ನು ಅಂದಾಜಿಸಬೇಕು. ಉದ್ಯಮದ ಭವಿಷ್ಯದ ಕುರಿತು ಮಾತನಾಡಿದ ಮೂರ್ತಿ, ಕೃತಕ ಬುದ್ಧಿಮತ್ತೆಯ (ಎಐ) ಬೆಳವಣಿಗೆಯ ಹೊರತಾಗಿಯೂ ಮಾನವನ ಸೃಜನಶೀಲತೆ ಉಳಿಯುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಎಐ ವಿನ್ಯಾಸಕರು ಮತ್ತು ದೊಡ್ಡ ಪ್ರಮಾಣದ ಅಪ್ಲಿಕೇಶನ್ ಸಿಸ್ಟಮ್‌ಗಳನ್ನು ಅಳವಡಿಸುವ ವ್ಯಕ್ತಿಗಳನ್ನು ಬದಲಿಸುವುದಿಲ್ಲ. ಅದಕ್ಕಾಗಿಯೇ ಅವು ತುಂಬಾ ಸಂಕೀರ್ಣವಾಗಿವೆ. ಇದು ದೊಡ್ಡ ಡೇಟಾ ನಿಘಂಟುಗಳು, ಡೇಟಾ ಪ್ರೋಗ್ರಾಂಗಳು ಮತ್ತು ಪ್ರತಿಯೊಬ್ಬರ ನಡುವೆ ಪರಸ್ಪರ ಸಂಪರ್ಕವನ್ನು ಹೊಂದಿರಬೇಕು. ಮಾನವ ಮನಸ್ಸಿನ ಸೃಜನಶೀಲತೆ ಮತ್ತು ಶಕ್ತಿಯು ಈ ವ್ಯವಸ್ಥೆಗಿಂತ ಹೆಚ್ಚು ಶ್ರೇಷ್ಠವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Business Ideas: 20 ದೇಶಗಳಿಗೆ ಮಣ್ಣಿನ ಪಾತ್ರೆಗಳ ರಫ್ತು; ವರ್ಷಕ್ಕೆ 5 ಕೋಟಿ ರೂ. ಗಳಿಸುತ್ತಿದೆ ಈ ಕುಟುಂಬ!

Continue Reading

ದೇಶ

ITR Filing: ಐಟಿ ರಿಟರ್ನ್ಸ್ ಫೈಲ್‌ಗೆ ಇಂದು ಅಂತಿಮ ದಿನ; ಗಡುವು ವಿಸ್ತರಣೆಗೆ ಕಾದರೆ ದಂಡ ಕಟ್ಟಬೇಕಾದೀತು!

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ ಇಂದೇ (ಜುಲೈ 31) ಕೊನೆಯ ದಿನ. ಹೀಗಾಗಿ ದಂಡ ತಪ್ಪಿಸಿಕೊಳ್ಳಲು ತೆರಿಗೆ ಪಾವತಿದಾರರಿಗೆ ಇಂದೇ ಕೊನೆಯ ಅವಕಾಶ. ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆ ಗಡುವನ್ನು ವಿಸ್ತರಿಸಬೇಕು ಎಂಬ ಕೂಗು ಕೇಳಿ ಬಂದಿದ್ದರೂ ಇನ್ನೂ ಆದಾಯ ತೆರಿಗೆ ಇಲಾಖೆ ದಿನ ಮುಂದೂಡಿಕೆ ಮಾಡಿಲ್ಲ. ಹೀಗಾಗಿ ಗಡುವು ಮುಗಿಯಲು ಕೆಲವೇ ಗಂಟೆಗಷ್ಟೇ ಬಾಕಿ ಉಳಿದಿದ್ದು ಬೇಗ ಬೇಗ ಸಲ್ಲಿಸಿ.

VISTARANEWS.COM


on

ITR Filing
Koo

ನವದೆಹಲಿ: ಆದಾಯ ತೆರಿಗೆ ರಿಟರ್ನ್ (Income Tax Returns) ಸಲ್ಲಿಕೆಗೆ ಇಂದೇ (ಜುಲೈ 31) ಕೊನೆಯ ದಿನ. ಹೀಗಾಗಿ ದಂಡ ತಪ್ಪಿಸಿಕೊಳ್ಳಲು ತೆರಿಗೆ ಪಾವತಿದಾರರಿಗೆ ಇಂದೇ ಕೊನೆಯ ಅವಕಾಶ. ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆ ಗಡುವನ್ನು ವಿಸ್ತರಿಸಬೇಕು ಎಂಬ ಕೂಗು ಕೇಳಿ ಬಂದಿದ್ದರೂ ಇನ್ನೂ ಆದಾಯ ತೆರಿಗೆ ಇಲಾಖೆ ದಿನ ಮುಂದೂಡಿಕೆ ಮಾಡಿಲ್ಲ. ಹೀಗಾಗಿ ಗಡುವು ಮುಗಿಯಲು ಕೆಲವೇ ಗಂಟೆಗಷ್ಟೇ ಬಾಕಿ ಉಳಿದಿದ್ದು ಬೇಗ ಬೇಗ ಸಲ್ಲಿಸಿ ಎಂದು ಆರ್ಥಿಕ ತಜ್ಞರು ಸಹೆ ನೀಡಿದ್ದಾರೆ (ITR Filing).

ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆ ಸಂಬಂಧ ಜುಲೈ 26ರಂದು ಮಾಹಿತಿ ನೀಡಿದ್ದ ಇಲಾಖೆ, ಕೆಲವು ದಿನಗಳ ಹಿಂದಿನವರೆಗೆ 5 ಕೋಟಿ ಐಟಿಆರ್‌ಗಳು ಸಲ್ಲಿಕೆಯಾಗಿವೆ. ಈ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಿಟರ್ನ್ಸ್‌ ಸಲ್ಲಿಕೆ ಹೆಚ್ಚಾಗಿದೆ ಎಂದು ಹೇಳಿತ್ತು. ಜತೆಗೆ ಅಂತಿಮ ದಿನಾಂಕವರೆಗೆ ಕಾಯದೇ ಕೂಡಲೇ ಸಲ್ಲಿಸುವಂತೆ ತಿಳಿಸಿತ್ತು.

ದಂಡ ಕಟ್ಟಬೇಕು

ಜುಲೈ 31ರೊಳಗೆ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಆಗದಿದ್ದರೆ ಅಂತಹವರು ದಂಡ ಕಟ್ಟಬೇಕಾಗುತ್ತದೆ. ತೆರಿಗೆ ಲೆಕ್ಕಪರಿಶೋಧನೆಯ ಅಗತ್ಯವಿರುವ ತೆರಿಗೆದಾರರಿಗೆ ದಂಡ ಸಹಿತ ಐಟಿಆರ್ ಫೈಲ್ ಮಾಡಲು 2024ರ ಅಕ್ಟೋಬರ್ 31ರವರೆಗೆ ಅವಕಾಶವಿದೆ. ಆರ್ಥಿಕ ವರ್ಷ 2024-25ಗಾಗಿ ಪರಿಷ್ಕೃತ ಮತ್ತು ತಡವಾದ ರಿಟರ್ನ್‌ಗಳನ್ನು ಸಲ್ಲಿಸಲು ಅಂತಿಮ ಗಡುವು 2024ರ ಡಿಸೆಂಬರ್ 31 ಆಗಿದೆ.

ತೆರಿಗೆ ಸಲ್ಲಿಸುವಿಕೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆದಾಯ ತೆರಿಗೆ ಇಲಾಖೆಯು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ವಿವಿಧ ಐಟಿಆರ್ ಫಾರ್ಮ್‌ಗಳು ಮತ್ತು ಎಕ್ಸೆಲ್ ಮಾಹಿತಿಗಳನ್ನು ನಿರ್ಧಿಷ್ಟ ವೆಬ್‌‌ಸೈಟ್ ಮೂಲಕ ಪ್ರಕಟಿಸುತ್ತದೆ. ಆದರೂ ಹೆಚ್ಚಿನ ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಫಾರ್ಮ್ 16 ಅನ್ನು ಉದ್ಯೋಗದಾತರಿಂದ ಸ್ವೀಕರಿಸಲು ಕಾಯುತ್ತಾರೆ. ಸಾಮಾನ್ಯವಾಗಿ ಇದನ್ನು ಜೂನ್ ಕೊನೆಯಲ್ಲಿ ಅಥವಾ ಜುಲೈ ಆರಂಭದಲ್ಲಿ ವಿತರಿಸಲಾಗುತ್ತದೆ.

ಜುಲೈ 31ರ ಗಡುವಿನ ನಂತರ ಐಟಿಆರ್ ಸಲ್ಲಿಸುವುದರಿಂದ ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ. 5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.

ಪ್ರತಿ ಜುಲೈನಲ್ಲಿ ತೆರಿಗೆ ಇಲಾಖೆಯು ಗಡುವು ಮುಗಿಯುವವರೆಗೆ ತೆರಿಗೆದಾರರಿಗೆ ನಿಗದಿತ ದಿನಾಂಕವನ್ನು ನಿರಂತರವಾಗಿ ನೆನಪಿಸುತ್ತಿರುತ್ತದೆ. ತೆರಿಗೆ ಸಲ್ಲಿಸುವಿಕೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆದಾಯ ತೆರಿಗೆ ಇಲಾಖೆಯು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ವಿವಿಧ ಐಟಿಆರ್ ಫಾರ್ಮ್‌ಗಳು ಮತ್ತು ಎಕ್ಸೆಲ್ ಮಾಹಿತಿಗಳನ್ನು ನಿರ್ಧಿಷ್ಟ ವೆಬ್‌‌ಸೈಟ್ ಮೂಲಕ ಪ್ರಕಟಿಸುತ್ತದೆ. ಆದರೂ ಹೆಚ್ಚಿನ ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಫಾರ್ಮ್ 16 ಅನ್ನು ಉದ್ಯೋಗದಾತರಿಂದ ಸ್ವೀಕರಿಸಲು ಕಾಯುತ್ತಾರೆ. ಸಾಮಾನ್ಯವಾಗಿ ಇದನ್ನು ಜೂನ್ ಕೊನೆಯಲ್ಲಿ ಅಥವಾ ಜುಲೈ ಆರಂಭದಲ್ಲಿ ವಿತರಿಸಲಾಗುತ್ತದೆ.

ಇದನ್ನೂ ಓದಿ: Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Continue Reading

ಪ್ರಮುಖ ಸುದ್ದಿ

Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

ಭೂಕುಸಿತದಿಂದ ತತ್ತರಿಸಿರುವ (Wayanad landslide, Kerala Landslide) ವೈನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಬಂಡಿಪುರ ಚೆಕ್‌ಪೋಸ್ಟ್‌ನಲ್ಲಿ (Bandipura Checkpost) ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

wayanad landslide bandipur checkpost
Koo

ಕೇರಳ: ಕರ್ನಾಟಕದಿಂದ ಕೇರಳವನ್ನು (Karnataka- Kerala) ಸಂಪರ್ಕಿಸುವ ಮೈಸೂರು- ಸುಲ್ತಾನ್ ಬತ್ತೇರಿ- ವೈನಾಡು ರಸ್ತೆ ಸಂಪರ್ಕವನ್ನು (Road Cut) ಕಡಿತಗೊಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ತಂಡಗಳು ಭೂಕುಸಿತದಿಂದ ತತ್ತರಿಸಿರುವ (Wayanad landslide, Kerala Landslide) ವೈನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಬಂಡಿಪುರ ಚೆಕ್‌ಪೋಸ್ಟ್‌ನಲ್ಲಿ (Bandipura Checkpost) ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಬಹುತೇಕ ಬಸ್ಸುಗಳು ಸಂಚಾರ ರದ್ದುಪಡಿಸಿವೆ.

ಗುಂಡ್ಲುಪೇಟೆ ಮಾರ್ಗವಾಗಿ ಸಾಗುವ ಬೆಂಗಳೂರು-ವೈನಾಡ್ ರಾಷ್ಟ್ರೀಯ ಹೆದ್ದಾರಿ 766 ರ ಮಾರ್ಗದಲ್ಲಿ ಸಂಚಾರ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧಿಸಲಾಗಿದ್ದು, ಪರ್ಯಾಯವಾಗಿ ಗುಂಡ್ಲುಪೇಟೆ-ಬಂಡೀಪುರ-ಗುಡಲೂರ ಮಾರ್ಗದಲ್ಲಿ ತೆರಳಲು ಸೂಚಿಸಲಾಗಿದೆ.

ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿದ್ದು, ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಈ ಕುರಿತು ಸೂಕ್ತ ಬೆಂಬಲ ನೀಡಿದ್ದಾರೆ.

ಬಸ್‌ ಸಂಚಾರ ಸ್ಥಗಿತ

ಬೆಂಗಳೂರಿನಿಂದ ಕೇರಳಕ್ಕೆ ಸಂಚಾರ ಮಾಡುವ ಬಹುತೇಕ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದೆ. ಕರ್ನಾಟಕ ಸಾರಿಗೆ, ಕೇರಳ ಸಾರಿಗೆ ಇಲಾಖೆಗೆ ಸೇರಿದ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಕಣ್ಣೂರು, ನಿಲಾಂಬೂರು, ಕೋಝಿಕ್ಕೋಡ್, ವಡಗಾರ, ತಲಚೇರಿ ಸೇರಿದಂತೆ ಕೆಲ ಭಾಗಗಳಿಗೆ ಮಾತ್ರ ಬೇರೆ ಬೇರೆ ಮಾರ್ಗಗಳ ಮೂಲಕ ಸಂಚಾರ ನಡೆಯುತ್ತಿದೆ.

ಕೇರಳದಿಂದಲೂ ಇಂದು ಬೆಂಗಳೂರಿಗೆ ಬಸ್‌ಗಳು ಬಂದಿಲ್ಲ. ಬೆಂಗಳೂರಿನಿಂದ ಕೇರಳಕ್ಕೆ ನಿತ್ಯ ಕೇರಳ ಸಾರಿಗೆ ಇಲಾಖೆಯ 15ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಆಗುತ್ತಿತ್ತು. ಇಂದು ಕೇವಲ ಮೂರು ಬಸ್‌ಗಳು ಮಾತ್ರ ಸಂಚರಿಸಿವೆ. ಪ್ರತಿ ನಿತ್ಯ ರಾತ್ರಿ 8 ಗಂಟೆ ಬಳಿಕ ರಾಜ್ಯ ಸಾರಿಗೆಯಿಂದ 10ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಇರುತ್ತಿದ್ದು, ಇಂದು ಒಂದು ಬಸ್ ಮಾತ್ರ ಕೇರಳಕ್ಕೆ ಪ್ರಯಾಣ ಬೆಳೆಸಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ರಾಜ್ಯಗಳ ಬಸ್ ಸಂಚಾರ ಸ್ಥಗಿತಗೊಂಡಿದೆ.

ಸಂಜೆಯಿಂದ ಗುಂಡ್ಲುಪೇಟೆ- ಕೇರಳ ರಸ್ತೆ ಸಂಪರ್ಕ ಕೂಡ ಕಡಿತಗೊಂಡ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರಕ್ಕೆ ತಡೆಯಾಗಿದೆ. ಕೇರಳದ ಮುತ್ತುಂಗ ಚೆಕ್​ಪೋಸ್ಟ್​ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಜಲಾವೃತವಾಗಿ ಬಸ್ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗ್ಗೆಯಿಂದ ವಯನಾಡು ಭಾಗಕ್ಕೆ ಬೆಂಗಳೂರಿನಿಂದ 21ಕ್ಕೂ ಹೆಚ್ಚು ಬಸ್‌ಗಳು ಸಂಚಾರ ಮಾಡಬೇಕಿತ್ತು. ಆದರೆ ಮಳೆ ಹಾಗೂ ಗುಡ್ಡ ಕುಸಿತದ ಪರಿಣಾಮ 15ಕ್ಕೂ ಹೆಚ್ಚು ಬಸ್‌ಗಳು ಸ್ಥಗಿತಗೊಂಡಿವೆ. ಬಹುತೇಕ ಪ್ರಯಾಣಿಕರು ಸ್ವಯಂಪ್ರೇರಿತವಾಗಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಉಳಿದಂತೆ ಕೆಲ ಪ್ರಯಾಣಿಕರನ್ನು ಕ್ಲಬ್ ಮಾಡಿ ಮೂರ್ನಾಲ್ಕು ಬಸ್‌ಗಳಲ್ಲಿ ಬೇರೆ ಬೇರೆ ಮಾರ್ಗವಾಗಿ ಕಳಿಸಲು ಅನುವು ಮಾಡಿಕೊಡಲಾಗಿದೆ.

ಭೂಕುಸಿತದ ತ್ಯಾಜ್ಯ ವಿಲೇವಾರಿ

ವಯನಾಡಿನಲ್ಲಿ ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಕೈಗೊಳ್ಳುತ್ತಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಸಹಾಯವಾಣಿ

ಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

Continue Reading
Advertisement
Puri Jagannath Temple
ದೇಶ26 mins ago

Puri Jagannath Temple: ಪುರಿ ಜಗನ್ನಾಥ ಮಂದಿರದ ನಕಲಿ ಕೀ ಪತ್ತೆ; ಅಪಾರ ಪ್ರಮಾಣದ ಬಂಗಾರ ಕಳವು?

Nabha Natesh in red gown Darling movie review
ಟಾಲಿವುಡ್37 mins ago

Nabha Natesh: ರೆಡ್ ಗೌನ್‌ನಲ್ಲಿ ‘ಪಟಾಕ’ ಮಿಂಚಿಂಗ್; ಟಾಲಿವುಡ್‌ನಲ್ಲಿ ನಭಾ ನಟೇಶ್ ಧಮಾಕ!

winning tips ರಾಜಮಾರ್ಗ ಅಂಕಣ
ಅಂಕಣ46 mins ago

ರಾಜಮಾರ್ಗ ಅಂಕಣ: ಸಾಧನೆಯ ಹಾದಿಯ 25 ಮೈಲಿಗಲ್ಲುಗಳು

Actor Darshan Chethan Kumar on Darshan Case
ಸ್ಯಾಂಡಲ್ ವುಡ್55 mins ago

Actor Darshan: ಜೈಲಿನ ಊಟ ನಂಗಂತೂ ಸಖತ್‌ ಇಷ್ಟ ಆಗಿತ್ತು , ದರ್ಶನ್‌ಗೆ ಯಾಕೆ ಕಷ್ಟ ಆಗ್ತಿದೆ ಎಂದ ಚೇತನ್‌ ಅಹಿಂಸಾ!

Narayana Murthy
ದೇಶ1 hour ago

Narayana Murthy: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ: ನಾರಾಯಣಮೂರ್ತಿ ಹೊಸ ವಾದ!

drowned kalaburagi
ಕ್ರೈಂ1 hour ago

Drowned: ಆತ್ಮಹತ್ಯೆಗಾಗಿ ನದಿಗೆ ಹಾರಿದ ಮಹಿಳೆ ರಕ್ಷಣೆ, ಬದುಕಿಸಲು ಹೋದ ಗಂಡ- ಬಂಧು ಜಲಸಮಾಧಿ

ITR Filing
ದೇಶ1 hour ago

ITR Filing: ಐಟಿ ರಿಟರ್ನ್ಸ್ ಫೈಲ್‌ಗೆ ಇಂದು ಅಂತಿಮ ದಿನ; ಗಡುವು ವಿಸ್ತರಣೆಗೆ ಕಾದರೆ ದಂಡ ಕಟ್ಟಬೇಕಾದೀತು!

wayanad landslide bandipur checkpost
ಪ್ರಮುಖ ಸುದ್ದಿ2 hours ago

Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

Wayanad Landslide
ದೇಶ2 hours ago

Wayanad Landslide: ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆ; ಇಂದೂ ಭಾರಿ ಮಳೆಯ ಮುನ್ಸೂಚನೆ, ಮುಂದುವರಿದ ಕಾರ್ಯಾಚರಣೆ

wayanad landslide
ದೇಶ2 hours ago

Wayanad Landslide: ವಯನಾಡ್‌ ಅಕ್ಷರಶಃ ಸ್ಮಶಾನ; ಭೂಕುಸಿತ ಸ್ಥಳಕ್ಕೆ ರಾಹುಲ್‌, ಪ್ರಿಯಾಂಕಾ ಭೇಟಿ ಸ್ಥಗಿತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ16 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ21 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌