ದೇಶ
Shehbaz Sharif | ಪಾಕಿಸ್ತಾನ ಪಾಠ ಕಲಿತಿದೆ, ನಮಗೆ ಭಾರತದ ಜತೆ ಯುದ್ಧ ಬೇಡ: ಪಾಕ್ ಪಿಎಂ
ಭಾರತದ ಜತೆಗೆ ಮೂರು ಯುದ್ಧಗಳ ಬಳಿಕ ಪಾಕಿಸ್ತಾನ ಪಾಠ ಕಲಿತಿದೆ. ನಮಗೆ ಯುದ್ಧ ಬೇಕಾಗಿಲ್ಲ, ಶಾಂತಿ ಬೇಕು ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಶೆಹಬಾಜ್ ಶರೀಫ್ ಹೇಳಿದ್ದಾರೆ.
ಕರಾಚಿ: ಭಾರತದ ಜತೆಗೆ ಮೂರು ಯುದ್ಧಗಳ ಬಳಿಕ ಪಾಕಿಸ್ತಾನ ಪಾಠ ಕಲಿತಿದೆ. ನಮಗೆ ಯುದ್ಧ ಬೇಕಾಗಿಲ್ಲ, ಶಾಂತಿ ಬೇಕು ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಶೆಹಬಾಜ್ ಶರೀಫ್ ಹೇಳಿದ್ದಾರೆ.
ಆಜ್ ಅರಬಿಯಾ ಟಿವಿಗೆ ನೀಡಿದ ಒಂದು ಸಂದರ್ಶನದಲ್ಲಿ ಅವರು ಇದನ್ನು ಹೇಳಿದ್ದಾರೆ. ʼʼಪಾಕಿಸ್ತಾನಕ್ಕೆ ಶಾಂತಿ ಬೇಕು. ಆದರೆ ಕಾಶ್ಮೀರದಲ್ಲಿ ನಡೆಯುತ್ತಿರುವುದನ್ನು ನಿಲ್ಲಿಸಬೇಕುʼʼ ಎಂದೂ ಅವರು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ಕಾಶ್ಮೀರದಲ್ಲಿ ನಡೆಯುತ್ತಿದೆ ಎನ್ನಲಾದ ಮಾನವ ಹಕ್ಕು ಉಲ್ಲಂಘನೆಗಳನ್ನು ಕಡೆಗಣಿಸಲಾಗದು ಎಂದಿದ್ದಾರೆ.
ಇದನ್ನೂ ಓದಿ | Shehbaz Sharif | ನಾವೀಗ ಭಿಕ್ಷಾ ಪಾತ್ರೆ ಹಿಡಿದು ನಿಂತಿದ್ದೇವೆ, ಆರ್ಥಿಕ ಬಿಕ್ಕಟ್ಟು ಒಪ್ಪಿಕೊಂಡ ಪಾಕ್ ಪ್ರಧಾನಿ
ನಮ್ಮಲ್ಲಿ ಎಂಜಿನಿಯರ್ಸ್, ಡಾಕ್ಟರ್ಸ್, ಕುಶಲ ಉದ್ಯೋಗಿಗಳಿದ್ದಾರೆ. ಈ ಪ್ರತಿಭೆಗಳನ್ನು ಒಳಿತಿಗಾಗಿ ಬಳಸುವ ಉದ್ದೇಶ ನಮ್ಮದು. ಈ ಮೂಲಕ ಎರಡೂ ದೇಶಗಳು ಬೆಳೆಯಬಹುದು. ಶಾಂತಿಯುತವಾಗಿ ಬೆಳೆಯುವುದು ಅಥವಾ ಕಾದಾಡುತ್ತಾ ಸಮಯ ವ್ಯರ್ಥ ಮಾಡುವುದು- ಇವೆರಡರಲ್ಲಿ ಆಯ್ಕೆ ನಮ್ಮದೇ ಆಗಿದೆ. ನಾವು ಭಾರತದ ಜತೆಗೆ ಮೂರು ಯುದ್ಧ ಮಾಡಿದ್ದೇವೆ. ಅವು ನಮಗೆ ಯಾತನೆ, ಬಡತನ, ನಿರುದ್ಯೋಗಗಳನ್ನಷ್ಟೇ ನೀಡಿವೆ. ನಾವು ಪಾಠ ಕಲಿತಿದ್ದೇವೆ. ಸಮಸ್ಯೆಗಳನ್ನು ಮೂಲದಲ್ಲಿ ಪರಿಹರಿಸಿಕೊಂಡು ಶಾಂತಿಯಲ್ಲಿ ಬಾಳಲು ಇಚ್ಛಿಸುತ್ತೇವೆ ಎಂದಿದ್ದಾರೆ.
ಬಾಂಬುಗಳು ಹಾಗೂ ಶಸ್ತ್ರಾಸ್ತ್ರಗಳ ಮೇಲೆ ಹಣ ವ್ಯರ್ಥ ಮಾಡಲು ಪಾಕಿಸ್ತಾನ ಇಚ್ಛಿಸುವುದಿಲ್ಲ. ನಾವಿಬ್ಬರೂ ಪರಮಾಣು ಅಸ್ತ್ರ ಹೊಂದಿದ ದೇಶಗಳು. ಒಂದು ವೇಳೆ ಯುದ್ಧ ಶುರುವಾದರೆ, ಏನಾಯಿತೆಂದು ಹೇಳಲು ಉಳಿಯುವವರಾದರೂ ಯಾರು ಎಂದು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ | SCO Summit | ಪಾಕಿಸ್ತಾನ ಪ್ರಧಾನಿಗೆ ಹೆಡ್ಫೋನ್ ಪೇಚು, ವಿಡಿಯೋ ವೈರಲ್
ದೇಶ
DUSU Election: ದೆಹಲಿ ವಿವಿಯಲ್ಲಿ ಎಬಿವಿಪಿ ದರ್ಬಾರ್; ಚುನಾವಣೆಯಲ್ಲಿ ಭಾರಿ ಗೆಲುವು, ದೇಶ ಮೊದಲು ಎಂದ ಬಿಜೆಪಿ
DUSU Election: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ಎಬಿವಿಪಿ ಭರ್ಜರಿ ಗೆಲುವು ಸಾಧಿಸಿದೆ. ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿ ಹುದ್ದೆಗಳು ಎಬಿವಿಪಿ ಪಾಲಾದರೆ, ಉಪಾಧ್ಯಕ್ಷ ಸ್ಥಾನ ಎನ್ಎಸ್ಯುಐ ಪಾಲಾಗಿದೆ.
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಒಕ್ಕೂಟದ (DUSU) ಚುನಾವಣೆಯಲ್ಲಿ (DUSU Election) ಎಬಿವಿಪಿ (ABVP) ಭರ್ಜರಿ ಗೆಲುವು ಸಾಧಿಸಿದೆ. ಡಿಯುಎಸ್ಯು ಅಧ್ಯಕ್ಷ ಸೇರಿ ಕೇಂದ್ರೀಯ ಸಮಿತಿ ನಾಲ್ಕು ಪ್ರಮುಖ ಹುದ್ದೆಗಳಲ್ಲಿ ಮೂರು ಹುದ್ದೆಗಳು ಆರ್ಎಸ್ಎಸ್ ವಿದ್ಯಾರ್ಥಿ ಘಟಕವಾದ ಎಬಿವಿಪಿ ಪಾಲಾದರೆ, ಉಪಾಧ್ಯಕ್ಷ ಸ್ಥಾನವು ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್ಎಸ್ಯುಐ ಪಾಲಾಗಿದೆ.
ಎಬಿವಿಪಿಯ ತುಷಾರ್ ದೆಢಾ ಅವರು ಎನ್ಎಸ್ಯುಐನ ಹಿತೇಶ್ ಗುಲಿಯಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ಎನ್ಎಸ್ಯುಐನ ಅಭಿ ದಾಹಿಯಾ ಡಿಯುಎಸ್ಯು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ, ಎಬಿವಿಪಿಯ ಅಪರಾಜಿತಾ ಕಾರ್ಯದರ್ಶಿ ಹಾಗೂ ಸಚಿನ್ ಬೈಸ್ಲಾ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ದೆಹಲಿ ವಿವಿಯಲ್ಲಿ ಇನ್ನು ಎಬಿವಿಪಿ ಮತ್ತಷ್ಟು ಪ್ರಬಲವಾಗಿದೆ.
#WATCH | Delhi: On DUSU elections, ABVP's winning candidate for the President's seat, Tushar Dedha says, "The main task we will do is to get metro concession passes for the students of Delhi University…" pic.twitter.com/71ykva7kxC
— ANI (@ANI) September 23, 2023
3 ವರ್ಷದ ಬಳಿಕ ಚುನಾವಣೆ
ದೆಹಲಿ ವಿವಿಯಲ್ಲಿ 2019ರಲ್ಲಿ ನಡೆದ ಚುನಾವಣೆಯಲ್ಲೂ ಎಬಿವಿಪಿಯು ನಾಲ್ಕು ಪ್ರಮುಖ ಹುದ್ದೆಗಳಲ್ಲಿ ಮೂರು ಹುದ್ದೆಗಳನ್ನು ಪಡೆದಿತ್ತು. ಇದಾದ ಬಳಿಕ ಕೊರೊನಾ ಹಿನ್ನೆಲೆಯಲ್ಲಿ 2020 ಹಾಗೂ 2021ರಲ್ಲಿ ಡಿಯುಎಸ್ಯು ಚುನಾವಣೆ ನಡೆದಿರಲಿಲ್ಲ. ಅಕಾಡೆಮಿಕ್ ಕ್ಯಾಲೆಂಡರ್ನಲ್ಲಿ ಏರುಪೇರಾದ ಕಾರಣ 2022ರಲ್ಲೂ ಡಿಯುಎಸ್ಯು ಚುನಾವಣೆ ನಡೆದಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ 24 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಎಬಿವಿಪಿ ಸಂಭ್ರಮಾಚರಣೆ, ಅಮಿತ್ ಶಾ ಅಭಿನಂದನೆ
ಡಿಯುಎಸ್ಯು ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿವಿ ಕ್ಯಾಂಪಸ್ನಲ್ಲಿ ಎಬಿವಿಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು. ಇನ್ನು ಎಬಿವಿಪಿ ಗೆಲುವಿನ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಬಿಜೆಪಿಯ ಹಲವು ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ, ದೇಶದ ಹಿತಾಸಕ್ತಿ ಮೊದಲು ಎಂಬ ಉದ್ದೇಶದಿಂದ ಎಬಿವಿಪಿ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ.
दिल्ली विश्वविद्यालय छात्र संघ के चुनाव में @ABVPVoice को मिली प्रचंड जीत पर परिषद् के सभी कार्यकर्ताओं को हार्दिक बधाई।
— Amit Shah (@AmitShah) September 23, 2023
यह जीत राष्ट्रहित को सर्वप्रथम मानने वाली विचारधारा में युवा पीढ़ी के विश्वास को दर्शाती है। मुझे पूर्ण विश्वास है कि परिषद् के कार्यकर्ता युवाओं में स्वामी…
ಇದನ್ನೂ ಓದಿ: New JNU Rules: ಜೆಎನ್ಯುನಲ್ಲಿ ಪ್ರತಿಭಟನೆ ಮಾಡಿದರೆ 20 ಸಾವಿರ ರೂ., ದುರ್ವರ್ತನೆಗೆ 50 ಸಾವಿರ ರೂ. ದಂಡ
“ಎಬಿವಿಪಿ ನಾಯಕರು ದೆಹಲಿ ವಿವಿಯ ಕೇಂದ್ರೀಯ ಸಮಿತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವಿದೆ. ಹಾಗೆಯೇ, ಸ್ವಾಮಿ ವಿವೇಕಾನಂದರ ಆಶಯ, ವಿಚಾರಗಳ ಪಾಲನೆ, ಯುವಕರಲ್ಲಿ ರಾಷ್ಟ್ರೀಯವಾದದ ಜಾಗೃತಿ ಹೆಚ್ಚಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸಲಿದೆ ಎಂಬ ದೃಢ ನಂಬಿಕೆ ಇದೆ” ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ದೇಶ
Narendra Modi : ವಾರಾಣಸಿಯಲ್ಲಿ ಪ್ರಧಾನಿ ಮೋದಿ ಭದ್ರತೆ ಉಲ್ಲಂಘನೆಗೆ ಯತ್ನಿಸಿದ ವ್ಯಕ್ತಿ ಬಂಧನ
ಮೋದಿ (Narendra Modi) ಬೆಂಗಾವಲು ವಾಹನದ ಮುಂದೆ ಹಾರಿದ ವ್ಯಕ್ತಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಂಗಾವಲು ಪಡೆಯೊಂದಿಗೆ ವಾರಣಾಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರದಿಂದ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಭದ್ರತೆಯನ್ನು ಉಲ್ಲಂಘಿಸಲು ದೊಡ್ಡ ಪ್ರಯತ್ನ ನಡೆದಿದೆ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬ ಬೆಂಗಾವಲು ಪಡೆಯ ಮುಂದೆ ಜಿಗಿದು ಭದ್ರತಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಆತನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ವರದಿಯ ಪ್ರಕಾರ, ಗಾಜಿಪುರದ ನಿವಾಸಿ ಪ್ರಧಾನಿ ಮೋದಿಯವರ ಬೆಂಗಾವಲು ಹಾದುಹೋಗುವ ಸಮಯಕ್ಕಿಂತ ಒಂದು ಗಂಟೆ ಮೊದಲಿನಿಂದಲೂ ಕಾಯುತ್ತಿದ್ದ. ಘಟನೆ ನಡೆದಾಗ ವೇಳೆ ಆತ ತನ್ನೊಂದಿಗೆ ಫೈಲ್ ಸಹ ಒಯ್ಯುತ್ತಿದ್ದ. ಆತ ಭಾರತೀಯ ಸೇನೆಗೆ ನೇಮಕಗೊಳ್ಳಲು ಪ್ರಯತ್ನಿಸುತ್ತಿದ್ದ ಎಂದು ಹೇಳಲಾಗಿದೆ. ತಾನು ಸೇನೆಯ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದೇನೆ ಆದರೆ ವೈದ್ಯಕೀಯ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗಲಿಲ್ಲ ಎಂದು ಆ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ.
ತನ್ನ ಸಮಸ್ಯೆ ಹೇಳಿಕೊಳ್ಳುವುದಕ್ಕೆ ಹಲವು ಬಾರಿ ಯತ್ನಿಸಿದ್ದೆ. ಎಲ್ಲವೂ ವ್ಯರ್ಥವಾಯಿತು. ಆದ್ದರಿಂದ ಇಂದು ಅವರು ತನ್ನ ಮನವಿಯನ್ನು ಪ್ರಧಾನಿ ಮೋದಿಯ ಗಮನ ಸೆಳೆಯಲು ಯತ್ನಿಸಿದ್ದ ಎನ್ನಲಾಗಿದೆ.
ವಾರಣಾಸಿಯ ಗಂಜಾರಿಯಲ್ಲಿ ನಿರ್ಮಿಸಲಾಗಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶಂಕುಸ್ಥಾಪನೆ ನೆರವೇರಿಸಿದ್ದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ಕಪಿಲ್ ದೇವ್, ದಿಲೀಪ್ ವೆಂಗ್ಸರ್ಕಾರ್, ಮದನ್ ಲಾಲ್, ಗುಂಡಪ್ಪ ವಿಶ್ವನಾಥ್, ಗೋಪಾಲ್ ಶರ್ಮಾ ಮತ್ತು ರವಿ ಶಾಸ್ತ್ರಿ ಸೇರಿದಂತೆ ಕ್ರಿಕೆಟ್ ದಿಗ್ಗಜರು ಪೂರ್ವ ಯುಪಿಯ ಮೊದಲ ಕ್ರೀಡಾಂಗಣದ ಅಡಿಪಾಯ ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ : Narendra Modi : ಕಲಾವಿದನ ಕುಂಚ, ಕೃತಕ ಬುದ್ಧಿಮತ್ತೆ ಸೇರಿಕೊಂಡರೆ ಪ್ರಕೃತಿಯಲ್ಲೇ ಕಾಣುತ್ತದೆ ಮೋದಿ ಮುಖ
ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್ ಶಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುಮಾರು 1,115 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನಿರ್ಗತಿಕ ಮಕ್ಕಳಿಗಾಗಿ ನಿರ್ಮಿಸಲಾದ 16 ವಸತಿ ಶಾಲೆಗಳನ್ನು ಮೋದಿ ಉದ್ಘಾಟಿಸಿದ್ದಾರೆ.
ಕಟ್ಟಡ ಕಾರ್ಮಿಕರು, ದಿನಗೂಲಿಗಳು ಮತ್ತು ಕೋವಿಡ್ ಅನಾಥರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಮತ್ತು ಅವರ ಸಮಗ್ರ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸಹಾಯ ಮಾಡಲು ಶಾಲೆಗಳನ್ನು ಪ್ರತ್ಯೇಕವಾಗಿ ಪ್ರಾರಂಭಿಸಲಾಗಿತ್ತು.. ಪ್ರತಿ ಅಟಲ್ ಶಾಲೆಯನ್ನು 10-15 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಮೈದಾನ, ಮನರಂಜನಾ ಪ್ರದೇಶ, ಮಿನಿ ಸಭಾಂಗಣ, ಹಾಸ್ಟೆಲ್ ಸಂಕೀರ್ಣ, ಮೆಸ್ ಮತ್ತು ಸಿಬ್ಬಂದಿಗೆ ವಸತಿ ಫ್ಲ್ಯಾಟ್ಗಳನ್ನು ಹೊಂದಿದೆ. ಪ್ರತಿ ಶಾಲೆಯು ಅಂತಿಮವಾಗಿ 1,000 ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ಉದ್ದೇಶಿಸಿದೆ. ಈ ಶಾಲೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಮೊದಲು, ಪ್ರಧಾನಿ ಮೋದಿ ಕೆಲವು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕಲೆ/ಸಾಹಿತ್ಯ
Narendra Modi : ಕಲಾವಿದನ ಕುಂಚ, ಕೃತಕ ಬುದ್ಧಿಮತ್ತೆ ಸೇರಿಕೊಂಡರೆ ಪ್ರಕೃತಿಯಲ್ಲೇ ಕಾಣುತ್ತದೆ ಮೋದಿ ಮುಖ
“ನೀವೂ ಅವರನ್ನು ನೋಡಿದ್ದೀರಾ?” ಎಂದು ಕಲಾವಿದ ಮಾಧವ್ ಕೊಹ್ಲಿ ಅವರು ಕೃತಕ ಬುದ್ಧಿ ಮತ್ತೆಯ ನೆರವಿನಿಂದ ತಾವು ರಚಿಸಿದ ಮೋದಿ (Narendra Modi) ಚಿತ್ರವನ್ನು ಹಂಚಿಕೊಂಡಿದ್ದಾರೆ.
ನವ ದೆಹಲಿ: ಸೃಜನಶೀಲತೆಯ ಎಲ್ಲೆ ಮೀರುವುದಕ್ಕೆ ಕೃತಕ ಬುದ್ಧಿಮತ್ತೆ ನೆರವಾಗುತ್ತಿದೆ. ಅಚ್ಚರಿ ಮೂಡಿಸುವಂಥ ಚಿತ್ರಗಳನ್ನು ರಚಿಸಲು ಕಲಾವಿದರು ವಿಭಿನ್ನ ಎಐ-ಚಾಲಿತ ಸಾಧನಗಳನ್ನು ಹೆಚ್ಚಾಗಿ ಬಳಸಲು ಆರಂಭಿಸಿದ್ದಾರೆ. ಮಾಧವ್ ಕೊಹ್ಲಿ ಅಂತಹ ಕಲಾವಿದರಲ್ಲಿ ಒಬ್ಬರು, ಅವರು ಆಗಾಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮೋಡಿಮಾಡುವ ದೃಶ್ಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚಿನ ಸೃಷ್ಟಿಗಳಲ್ಲಿ ಒಂದು ದ್ವೀಪದ ಚಿತ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ಮುಖವನ್ನು ತೋರಿಸಲಾಗಿದೆ. ಆದಾಗ್ಯೂ, ತಂತ್ರಜ್ಞಾನವನ್ನು ತಮ್ಮ ಕಲಾತ್ಮಕ ಅಭಿವ್ಯಕ್ತಿಯೊಂದಿಗೆ ಹೇಗೆ ಬೆರೆಸಿದರು ಮತ್ತು ನರೇಂದ್ರ ಮೋದಿಯವರ ಮುಖದ ರೂಪರೇಖೆಯನ್ನು ರೂಪಿಸುವ ರೀತಿಯಲ್ಲಿ ಚಿತ್ರವನ್ನು ಹೇಗೆ ರಚಿಸಿದರು ಎಂಬುದು ವಿಸ್ಮಯವೇ ಸರಿ.
Do you see him too? pic.twitter.com/QjJzO4fBbF
— Madhav Kohli (@mvdhav) September 23, 2023
ಕೊಹ್ಲಿ ತಮ್ಮ ಸೃಷ್ಟಿಯನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದು, ನೀವು ಅವರನ್ನು ಸಹ ನೋಡುತ್ತೀರಾ? ಎಂಬ ಒಂದು ಸಾಲಿನ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಚಿತ್ರವು ಅಸ್ತಮಿಸುವ ಸೂರ್ಯನ ಕಿರಣಗಳು ಸಾಗಿ ಬರುವ ಆಕಾಶದ ಹಿನ್ನೆಲೆಯಲ್ಲಿ ಸಣ್ಣ ಮತ್ತು ಸುಂದರ ದ್ವೀಪವನ್ನು ತೋರಿಸುತ್ತದೆ. ಮೊದಲ ನೋಟದಲ್ಲಿ, ನೋಡುಗನಿಗೆ ಪ್ರಧಾನಿಯ ಮುಖವನ್ನು ಕಾಣದಿರಬಹುದು. ಆಧರೆ ಸೂಕ್ಷ್ಮವಾಗಿ ನೋಡಿದರೆ ಮುಖ ಕಾಣುವುದು ಸ್ಪಷ್ಟ.
ಇದನ್ನೂ ಓದಿ : Women’s Reservation Bill : ಮಹಿಳಾ ಮೀಸಲಾತಿ ವಿರೋಧಿಸಿದವರಿಗೆ ಭೀತಿ ಶುರುವಾಗಿದೆ; ಮೋದಿ ಲೇವಡಿ
ಈ ಟ್ವೀಟ್ ಅನ್ನು ಕೆಲವು ಗಂಟೆಗಳ ಹಿಂದೆ ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದಾಗಿನಿಂದ ಅದು 2,500 ವೀಕ್ಷಣೆಗಳನ್ನು ಕಂಡಿದೆ. ಎಕ್ಸ್ ಬಳಕೆದಾರರೊಬ್ಬರು ಪೋಸ್ಟ್ಗೆ ಪ್ರತಿಕ್ರಿಯಿಸುವಾಗ ಇದು ಅದ್ಭುತ ಎಂದು ಬರೆದಿದ್ದಾರೆ. ಚಿತ್ರವನ್ನು ರಚಿಸಲು ಯಾವ ಅಪ್ಲಿಕೇಶನ್ ಅನ್ನು ಬಳಸಲಾಗಿದೆ ಎಂದು ಇನ್ನೊಬ್ಬ ವ್ಯಕ್ತಿ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಕೊಹ್ಲಿ, Stable diffusion ಎಂದು ಉತ್ತರಿಸಿದ್ದಾರೆ.
ಇದು ಕೃತಕ ಬುದ್ಧಿಮತ್ತೆ ಪ್ಲಾಟ್ ಫಾರ್ಮ್ ಆಗಿದ್ದು, ಬಳಕೆದಾರರು ವಿವರಣಾತ್ಮಕ ಚಿತ್ರಗಳನ್ನು ರಚಿಸಬಹುದು. ಪ್ಲಾಟ್ಫಾರ್ಮ್ನ ಅಧಿಕೃತ ವೆಬ್ಸೈಟ್ ಪ್ರಕಾರ, ಬಳಕೆದಾರರು ಎಐ ಚಿತ್ರಗಳನ್ನು “ಸಣ್ಣ ಪ್ರಾಂಪ್ಟ್ಗಳೊಂದಿಗೆ ರಚಿಸಬಹುದು. ಚಿತ್ರಗಳೊಳಗೆ ಪದಗಳನ್ನು ರಚಿಸಬಹುದು.
ಕರ್ನಾಟಕ
VISTARA TOP 10 NEWS : ಸೆ. 26ಕ್ಕೆ ಬೆಂಗಳೂರು ಬಂದ್ಗೆ ಕರೆ, ಚೈತ್ರಾ ಕುಂದಾಪುರ ಟೀಮ್ ಪರಪ್ಪನ ಅಗ್ರಹಾರದಲ್ಲಿ ಸೆರೆ
VISTARA TOP 10 NEWS : ಕಾವೇರಿ ಹೋರಾಟದ ಕಿಚ್ಚು ಹೊತ್ತಿ ಉರಿಯುತ್ತಿದೆ. ಮಂಡ್ಯ ಬಂದ್ ಯಶಸ್ವಿಯಾಗಿದೆ. ಬೆಂಗಳೂರು ಬಂದ್ ರೆಡಿಯಾಗಿದೆ. ಚೈತ್ರಾ ಕುಂದಾಪುರ ಟೀಮ್ ಪರಪ್ಪನ ಅಗ್ರಹಾರ ತಲುಪಿದೆ. ಹೀಗೆ ದಿನ ವಿಶೇಷ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್ 10 ನ್ಯೂಸ್
1.ರಾಜಧಾನಿಯಲ್ಲಿ ತೀವ್ರಗೊಂಡ ಕಾವೇರಿ ಹೋರಾಟ: ಸೆ.26ಕ್ಕೆ ಬೆಂಗಳೂರು ಬಂದ್ಗೆ ಕರೆ
ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್ 26ರಂದು (ಮಂಗಳವಾರ) ಬೆಂಗಳೂರು ಬಂದ್ಗೆ (Bangalore bandh on September 26) ಕರೆ ನೀಡಲಾಗಿದೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಶನಿವಾರ ನಡೆದ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ಸೆ. 26ರಬಂದ್ಗೆ ಭಾರಿ ಬೆಂಬಲ; ಏನಿರುತ್ತೆ? ಏನಿರಲ್ಲ?; ಕರ್ನಾಟಕ ಬಂದ್ಗೂ ಪ್ಲ್ಯಾನಿಂಗ್
2. ರೈತ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ಬಂದ್ ಸಕ್ಸಸ್: ರಾಜ್ಯಾದ್ಯಂತ ವ್ಯಾಪಿಸಿದ ಜ್ವಾಲೆ
ರಾಜ್ಯದಲ್ಲಿ ಮಳೆ ಇಲ್ಲದೆ ಸಂಕಷ್ಟ ಕಾಲ ಬಂದಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ (Cauvery protest) ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್ (Mandya bandh) ಯಶಸ್ವಿಯಾಯಿತು. ಕಾವೇರಿ ಹೋರಾಟಕ್ಕೆ ರಾಜ್ಯದ ಎಲ್ಲ ಕಡೆಗಳಲ್ಲೂ ಬೆಂಬಲ ವ್ಯಕ್ತವಾಗಿದ್ದು, ಸಂಘಟನೆಗಳು ಪ್ರತಿಭಟನೆ, ಜಾಥಾಗಳನ್ನು ನಡೆಸಿದವು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ 3 ಸಲಹೆಗಳು
3. ಕಾಂಗ್ರೆಸ್ನಲ್ಲಿ ನಿಲ್ಲದ ಡಿಸಿಎಂ ರಗಳೆ- ಮೂರಲ್ಲ, ಐವರು ಡಿಸಿಎಂ ಬೇಕೆಂದ ರಾಯರೆಡ್ಡಿ
ರಾಜ್ಯದಲ್ಲಿ ಇನ್ನೂ ಮೂರು ಹೊಸ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಬೇಕು ಬೇಡಿಕೆಯ ನಡುವೆಯೇ ಶಾಸಕ ಬಸವರಾಜ ರಾಯರೆಡ್ಡಿ (MLA Basavaraja Rayareddy) ಇದನ್ನೂ ಮೀರಿಸಿ ಹೊಸದಾಗಿ ಐದು ಉಪಮುಖ್ಯಮಂತ್ರಿಗಳು ಬೇಕು ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ದೇವೇಗೌಡರ ತುಮಕೂರು ಸ್ಪರ್ಧೆಗೆ ಬಿಜೆಪಿ ಸಂಸದರ ವಿರೋಧ
4. ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ನ ಏಳು ಮಂದಿ ಪರಪ್ಪನ ಅಗ್ರಹಾರ ಜೈಲಿಗೆ, 14 ದಿನ ನ್ಯಾಯಾಂಗ ಸೆರೆ
ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಏಳು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಕೋರ್ಟ್ ಆದೇಶಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ಕೋರ್ಟ್ ತಾತ್ಕಾಲಿಕ ನಿರ್ಬಂಧ
5. ವಿಸ್ತಾರ ಅಂಕಣ: ಮಣ್ಣು ಬರೀ ಮಣ್ಣಲ್ಲ, ಅದು ನಮ್ಮ ಭಾವಕೋಶ, ನಾವು ಮಣ್ಣಿನ ಮಕ್ಕಳು!
ಪ್ರತಿ ಭಾರತೀಯನೂ, ಈ ದೇಶ ನನ್ನದು, ನಾನು ನನ್ನ ಕರ್ತವ್ಯ ನಿರ್ವಹಿಸಿದರೆ ಮಾತ್ರ ದೇಶ ಏಳಿಗೆ ಆಗುತ್ತದೆ ಎಂದು ಭಾವಿಸಬೇಕು. ಆಗ ವಿಶ್ವದ ಯಾವ ಶಕ್ತಿಯೂ ಭಾರತದ ಬೆಳವಣಿಗೆಯನ್ನು ತಡೆಯಲು ಆಗುವುದಿಲ್ಲ ಎನ್ನುತ್ತಾರೆ ವಿಸ್ತಾರ ನ್ಯೂಸ್ನ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ತಮ್ಮ ವಿಸ್ತಾರ ಅಂಕಣದಲ್ಲಿ
ಪೂರ್ಣ ಲೇಖನ ಓದಲು ಈ ಲಿಂಕ್ ಕ್ಲಿಕ್ ಮಾಡಿ
6 ಲೋಕ ಸಮರ ಹೊತ್ತಲ್ಲೇ ವಾರಾಣಸಿಯಲ್ಲಿ ಅಭಿವೃದ್ಧಿ ಪರ್ವ: ಕ್ರಿಕೆಟ್ ಸ್ಟೇಡಿಯಂಗೆ ಮೋದಿ ಶಂಕುಸ್ಥಾಪನೆ
ವಾರಾಣಸಿಯಲ್ಲಿ ನಿರ್ಮಿಸಲಾಗುತ್ತಿರುವ ಶಿವನ ಮಾದರಿಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. 330 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಸ್ಟೇಡಿಯಂ ಶಿವನಿಗೆ ಸಮರ್ಪಣೆ ಎಂದಿದೆ ಬಿಸಿಸಿಐ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ವಾರಾಣಸಿ ಕ್ರಿಕೆಟ್ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ
7. ಭಾರತದ ಬೆನ್ನಿಗೆ ನಿಂತ ಅಮೆರಿಕ: ಆನೆ ಜತೆ ಇರುವೆ ಕಾಳಗಕ್ಕೆ ಇಳಿದಿದೆ ಅಂತ ಕೆನಡಾಗೆ ವ್ಯಂಗ್ಯ
ಭಾರತ ಹಾಗೂ ಕೆನಡಾ ನಡುವಿನ ಬಿಕ್ಕಟ್ಟು (India Canada Row) ದಿನೇದಿನೆ ಉಲ್ಬಣವಾಗುತ್ತಿರುವ ಕಾರಣ ಅಮೆರಿಕ ಮಧ್ಯಪ್ರವೇಶಿಸಲು ಯತ್ನಿಸುತ್ತಿದೆ. ಜತೆಗೆ “ಕೆನಡಾ ಭಾರತದ ಜತೆ ಸಂಘರ್ಷಕ್ಕೆ ಇಳಿದಿದೆ ಎಂದರೆ, ಅದು ಇರುವೆಯೊಂದು ಆನೆಯ ಜತೆ ಕಾಳಗಕ್ಕೆ ಇಳಿದಂತೆ” ಎಂದು ಗೇಲಿ ಮಾಡಿದೆ. ಪೂರ್ಣ ವರದಿಗೆ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ: ಭಾರತದಿಂದಲೇ G20 ಶೃಂಗಸಭೆ ಯಶಸ್ವಿ ಎಂದ ಬ್ರೆಜಿಲ್; ಕೆನಡಾ ಆರೋಪಕ್ಕೆ ಏನೆಂದಿತು?
8. ಸುಂದರ ಆಟಗಾರ ಶುಭಮನ್ ಗಿಲ್ ಜತೆಗಿನ ಪ್ರೀತಿಗೆ ಕ್ಲ್ಯಾರಿಟಿ ನೀಡಿದ ಸಾರಾ ತೆಂಡೂಲ್ಕರ್
ಮುಂಬಯಿ: ಸಾರಾ ತೆಂಡೂಲ್ಕರ್ ಮತ್ತು ಶುಭಮನ್ ಗಿಲ್ ಇಬ್ಬರು ಕದ್ದು ಮುಚ್ಚಿ ಡೇಟಿಂಗ್(sara tendulkar and shubman gill relationship) ನಡೆಸುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಬಾರಿ ಕೇಳಿಬಂದಿದೆ. ಇದೀಗ ಸಾರಾ ಅವರು ಮಾಡಿರುವ ಟ್ವೀಟ್ ಈ ಜೋಡಿ ನಿಜವಾಗಿಯೂ ಪ್ರೀತಿಸುತ್ತಿರುವುದು ಖಚಿತ ಎಂಬ ಸುಳಿವು ನೀಡಿದಂತಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. ಮಗಳ ವಯಸ್ಸಿನ ನಟಿಯ ಜತೆ ರೊಮ್ಯಾನ್ಸ್ ಮಾಡಲಾರೆ ಎಂದ ವಿಜಯ್ ಸೇತುಪತಿ!
ವಿಜಯ್ ಸೇತುಪತಿ ತಮಿಳು ಮಾತ್ರವಲ್ಲದೆ, ತೆಲುಗು ಮತ್ತು ಮಲಯಾಳಂ ಭಾಷೆಯ ಸಿನಿಮಾಗಳಲ್ಲೂ ಬ್ಯುಸಿ. ಇಷ್ಟೊಂದು ಜನಪ್ರಿಯತೆ ಪಡೆದಿರುವ ವಿಜಯ್ ಸೇತುಪತಿ ಅವರು ನಟಿ ಕೃತಿ ಶೆಟ್ಟಿ (Krithi Shetty) ಜತೆ ನಾಯಕನಾಗಿ ನಟಿಸಲು ನಿರಾಕರಿಸಿದ್ದಾರೆ. ಮಗಳ ಪಾತ್ರ ಮಾಡಿದ ನಟಿ ಜತೆ ರೊಮ್ಯಾನ್ಸ್ ಮಾಡಲಾರೆʼ ಎಂದು ನಟ ಹೇಳಿದ್ದಾರಂತೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. ಸಿಲ್ಕ್ ಸ್ಮಿತಾ ಶವದ ಮೇಲೆ ನಡೆದಿತ್ತಂತೆ ಸಾಮೂಹಿಕ ಅತ್ಯಾಚಾರ: ನಟಿಯ ಪುಣ್ಯತಿಥಿಯಂದೇ ಹೊರಬಿತ್ತು ಸತ್ಯ
ಸಿಲ್ಕ್ ಸ್ಮಿತಾ (Silk Smitha) ಎಂಬ ಅಪ್ಸರೆಯಂಥ ನಟಿ ಬದುಕಿನಲ್ಲಿ ಏನೆಲ್ಲ ಅನುಭವಿಸಿದರು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ, ಅವರು ಮೃತಪಟ್ಟ ಬಳಿಕ ಅವರ ಶವದ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎನ್ನುವ ಭಯಾನಕ ಸುದ್ದಿ ಮತ್ತೊಮ್ಮೆ ವೈರಲ್ ಆಗಿದೆ. ಏನಿದು ಪೈಶಾಚಿಕ ಕೃತ್ಯ? ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
-
ವೈರಲ್ ನ್ಯೂಸ್15 hours ago
Viral Video : ಅಬ್ಬಾ ಏನು ಧೈರ್ಯ; ವೇಗವಾಗಿ ಚಲಿಸುತ್ತಿದ್ದ ಟ್ರಕ್ನ ಚಕ್ರದ ಪಕ್ಕದಲ್ಲಿಯೇ ಗಡದ್ದಾಗಿ ನಿದ್ದೆ ಹೊಡೆದ !
-
ಸುವಚನ5 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ20 hours ago
Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!
-
ಪ್ರಮುಖ ಸುದ್ದಿ13 hours ago
Sandalwood : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ; ಗೆದ್ದವರ ವಿವರ ಇಲ್ಲಿದೆ
-
South Cinema17 hours ago
Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!
-
ಬಾಲಿವುಡ್20 hours ago
Rashmika Mandanna: ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್ ಸೀರೆಯುಟ್ಟು ಫಸ್ಟ್ ಲುಕ್ನಲ್ಲೇ ನಾಚಿ ನೀರಾದ ರಶ್ಮಿಕಾ!
-
ಕರ್ನಾಟಕ19 hours ago
Mother-Child death : 3 ವರ್ಷದ ಮಗುವಿನ ಕತ್ತು ಹಿಸುಕಿ ಬಾವಿಗೆ ಹಾರಿದ ತಾಯಿ; ಎಷ್ಟು ಕಷ್ಟ ಅನುಭವಿಸಿದ್ದಳೋ?
-
ಕ್ರಿಕೆಟ್20 hours ago
Varanasi Stadium: ವಾರಾಣಸಿ ಕ್ರಿಕೆಟ್ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ