Site icon Vistara News

Ram Mandir : ಮೋದಿ ಮಂದಿರ ಪ್ರವೇಶಿಸುವ ವೇಳೆ ಕೈಯಲ್ಲಿ ಹಿಡಿದುಕೊಂಡಿದ್ದ ವಸ್ತುವಿನ ವಿಶೇಷತೆಯೇನು?

Modi

ವಿಸ್ತಾರನ್ಯೂಸ್ ಬೆಂಗಳೂರು: ಅಯೋಧ್ಯೆಯ ರಾಮ ಮಂದಿರ (Ram Mandir) ಪ್ರಾಣ ಪ್ರತಿಷ್ಠೆಗಾಗಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೈಯಲ್ಲಿ ಬೆಳ್ಳಿಯ ವಸ್ತುವೊಂದನ್ನು ಹಿಡಿದುಕೊಂಡು ಬಂದಿದ್ದರು. ಅವರ ಆಗಮನದ ವಿಡಿಯೊ ನೋಡಿದ ಕೋಟ್ಯಂತರ ಮಂದಿಯಲ್ಲಿ ಬಹುತೇಕರಿಗೆ ಅದೇನೆಂದು ತಿಳಿದಿದೆ. ಆದಾಗ್ಯೂ ಮೋದಿ ಅದನ್ನು ಭಕ್ತಿ, ಶ್ರದ್ಧೆಯಿಂದ ಹಿಡಿದುಕೊಂಡು ಬಂದಾಗ ಒಂದು ಬಾರಿ ಕುತೂಹಲ ಕೆರಳಿಸಿದ್ದು ಸುಳ್ಳಲ್ಲ.

ಅಂದ ಹಾಗೆ ಮೋದಿ ಆಗಮನದ ವೇಳೆ ಕೈಯಲ್ಲಿ ಹಿಡಿದುಕೊಂಡು ಬಂದಿರುವುದು ಬೆಳ್ಳಿಯ ಛತ್ರ. ನಾವು ಇದುವರೆಗೆ ನೋಡಿರುವ ರಾಮದೇವರ ಮೂರ್ತಿ ಹಾಗೂ ಚಿತ್ರಗಳಲ್ಲಿ ಹಿಂದೊಂದು ಛತ್ರವಿರುತ್ತದೆ. ಮೋದಿ ಕೈಯಲ್ಲಿ ಇದ್ದದ್ದು ಅದುವೆ. ಮೋದಿ ಅವರು ಬರುವಾಗ ಬೆಳ್ಳಿಯ ಛತ್ರವನ್ನು ಹಿಡಿದುಕೊಂಡು ಬಂದು, ದೇಗುಲದ ಎಲ್ಲ ಮಂಟಪಗಳನ್ನು ದಾಟಿ ಗರ್ಭಗುಡಿಗೆ ಪ್ರವೇಶ ಮಾಡಿದ್ದರು. ಅಲ್ಲಿ ಅವರು ಅರ್ಚಕರ ಕೈಗೆ ಹಸ್ತಾಂತರ ಮಾಡಿದರು. ಬಳಿಕ ಅಲ್ಲಿನ ಧಾರ್ಮಿಕ ಪ್ರಕ್ರಿಯೆಗಳಿಗಾಗಿ ಕುಳಿತುಕೊಂಡರು.

ದೆಹಲಿಯಿಂದ ಬಂದಿದ್ದ ಮೋದಿ

ದೆಹಲಿಯಿಂದ ಹೊರಟು ಅಯೋಧ್ಯೆಯಲ್ಲಿರುವ ಮಹರ್ಷಿ ವಾಲ್ಮೀಕಿ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಮೋದಿ ಅವರು ವಿಶೇಷ ಹೆಲಿಕಾಪ್ಟರ್‌ ಮೂಲಕ ರಾಮಮಂದಿರಕ್ಕೆ ಆಗಮಿಸಿದರು.

ಮೋದಿ ಮುಂದಿನ ಕಾರ್ಯಕ್ರಮಗಳ ವೇಳಾಪಟ್ಟಿ

ಬೆಳಗ್ಗೆ 11ರಿಂದ ಮಧ್ಯಾಹ್ನ 12: ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55: ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2: ಸಾರ್ವಜನಿಕ ಭಾಷಣ ಮಾಡಲಿರುವ ನರೇಂದ್ರ ಮೋದಿ, ಮೋಹನ್‌ ಭಾಗವತ್‌, ಯೋಗಿ ಆದಿತ್ಯನಾಥ್‌
ಮಧ್ಯಾಹ್ನ 2.10: ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30: ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ
ಇದನ್ನೂ ಓದಿ: Ram Mandir: ಬಾಹ್ಯಾಕಾಶದಿಂದ ರಾಮಮಂದಿರ ಕಂಡಿದ್ದು ಹೇಗೆ? ಇಸ್ರೋ ಫೋಟೊಗಳು ಇಲ್ಲಿವೆ

ಇದನ್ನೂ ಓದಿ : Ram Mandir: ಅಯೋಧ್ಯೆಯಲ್ಲಿ ಮಿಂಚಿದ ತಾರೆಗಳು!

ಅಯೋಧ್ಯೆಯಲ್ಲಿ ಯೋಗಿ ಆದಿತ್ಯನಾಥ್

ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ.

ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.

Exit mobile version