ಸಂತಾಲ್‌ಗಳೆಂದರೆ ಯಾರು? ದ್ರೌಪದಿ ಮುರ್ಮು ಅವರ ಬುಡಕಟ್ಟು ಸಮುದಾಯದ ಪರಿಚಯ ಇಲ್ಲಿದೆ - Vistara News

ದೇಶ

ಸಂತಾಲ್‌ಗಳೆಂದರೆ ಯಾರು? ದ್ರೌಪದಿ ಮುರ್ಮು ಅವರ ಬುಡಕಟ್ಟು ಸಮುದಾಯದ ಪರಿಚಯ ಇಲ್ಲಿದೆ

ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಬಂದಿರುವ ಸಂತಾಲ್‌ ಬುಡಕಟ್ಟು ಸಮುದಾಯಕ್ಕೆ ವಿಶಿಷ್ಟವಾದ ಸಾಂಸ್ಕೃತಿಕ ಹಿನ್ನೆಲೆ ಇದೆ.

VISTARANEWS.COM


on

santhals
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒಡಿಶಾದ ಸಂತಾಲ್‌ ಬುಡಕಟ್ಟು ಸಮುದಾಯದಿಂದ ಬಂದವರು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು. ಇವರಿಗೆ ವಿಶಿಷ್ಟ ಸಾಂಸ್ಕೃತಿಕ ಹಿನ್ನೆಲೆಯಿದೆ.

ಸಂತಾಲ್ ಎಂದರೆ ಅಕ್ಷರಶಃ ಶಾಂತ, ಶಾಂತಿಯುತ ಎಂದರ್ಥ. ಸಂತ ಎಂದರೆ ಶಾಂತ ಮತ್ತು ಅಲಾ ಎಂದರೆ ಮನುಷ್ಯ. ಸಂತಾಲ್‌ ಬುಡಕಟ್ಟಿನ ಮಂದಿ ಬಳಸುವ ಭಾಷೆ ಸಂತಾಲಿ. ಸಂತಾಲರು ಭಾರತದಲ್ಲಿ ಭಾರತದಲ್ಲಿ ಮೂರನೇ ಅತಿ ದೊಡ್ಡ ಪರಿಶಿಷ್ಟ ಬುಡಕಟ್ಟು ಸಮುದಾಯ. ಮೊದಲಿನ ಎರಡು ಸಮುದಾಯಗಳು ಕ್ರಮವಾಗಿ ಗೊಂಡರು ಹಾಗೂ ಭಿಲ್ಲರು. ಸಂತಾಲರ ಸಮುದಾಯ ಹೆಚ್ಚಾಗಿ ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಹಂಚಿಹೋಗಿವೆ.

ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ತವರು ಜಿಲ್ಲೆ ಮಯೂರ್‌ಭಂಜ್, ಸಂತಾಲರು ಹೆಚ್ಚು ದಟ್ಟವಾಗಿರುವ ಜಿಲ್ಲೆಗಳಲ್ಲಿ ಒಂದು. ಸಂತಾಲರು ಮೂಲತಃ ಅಲೆಮಾರಿ ಜನಾಂಗ. ಮುಂದೆ ಛೋಟಾನಾಗ್ಪುರ ಪ್ರಸ್ತಭೂಮಿಯಲ್ಲಿ ನೆಲೆನಿಂತರು. 18ನೇ ಶತಮಾನದ ಬಳಿಕ ಬಿಹಾರ, ಒಡಿಶಾ, ಪ.ಬಂಗಾಳಗಳಿಗೆ ಹಬ್ಬಿದರು.

ಈಶಾನ್ಯ ಭಾರತದ ಬುಡಕಟ್ಟು ಸಮುದಾಯಗಳಲ್ಲಿ ಸಾಕ್ಷರತೆಯ ಪ್ರಮಾಣ ತುಂಬಾ ಕಡಿಮೆ. ಆದರೆ ಸಂತಾಲರು ಹೆಚ್ಚಿನ ಸಾಕ್ಷರತೆ ಹೊಂದಿದ್ದಾರೆ. 1960ರಿಂದ ನಡೆಯುತ್ತಿರುವ ಶಿಕ್ಷಣ ಜಾಗೃತಿಯ ಕಾರಣದಿಂದ ಸಮುದಾಯದ ಅನೇಕರು ಶಿಕ್ಷಣ ಪಡೆದು ಭಾರತೀಯ ಸಮಾಜದ ಕೆನೆಪದರ ಪ್ರವೇಶಿಸಿದ್ದಾರೆ. ಉದಾಹರಣೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಂತಾಲರು. ಪ್ರಸ್ತುತ ಮಹಾಲೇಖಪಾಲ (ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ಆಗಿರುವ ಗಿರ್ಶ್‌ ಚಂದ್ರ ಮುರ್ಮು ಅವರು ಸಂತಾಲ್.‌ ಪ್ರಸ್ತುತ ಕೇಂದ್ರ ಜಲಶಕ್ತಿ ಸಚಿವ ಬಿಸೇಶ್ವರ ತುಡು ಅವರು ಕೂಡ ಇದೇ ಸಮುದಾಯ ಹಾಗೂ ಮಯೂರ್‌ಭಂಜ್ ಜಿಲ್ಲೆಯವರು. ಈ ಹಿನ್ನೆಲೆಯಲ್ಲಿ ಕೆಲವು ಸುದ್ದಿ ವರದಿಗಳು ಪ್ರಸ್ತುತ ಕಾಲವನ್ನು “ಸಂತಾಲ್‌ ಸಮುದಾಯದ ಸುವರ್ಣ ಯುಗʼ ಎಂದು ಕರೆದಿವೆ.

ಅವರ ಸಾಮಾಜಿಕ ಉನ್ನತಿಯ ಹೊರತಾಗಿಯೂ, ಸಂತಾಲರು ಸಾಮಾನ್ಯವಾಗಿ ತಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ನಂಟು ಹೊಂದಿದ್ದಾರೆ. ಇವರು ಪ್ರಕೃತಿ ಆರಾಧಕರು. ಜಹೆರ್ ಎಂದು ಕರೆಯಲಾಗುವ ಪವಿತ್ರ ತೋಪುಗಳಲ್ಲಿ ನಮನ ಸಲ್ಲಿಸುವುದನ್ನು ಕಾಣಬಹುದು. ಅವರ ಸಾಂಪ್ರದಾಯಿಕ ಉಡುಗೆಯೆಂದರೆ ಪುರುಷರಿಗೆ ಧೋತಿ ಮತ್ತು ಗಮುಚ್ಚ. ಮಹಿಳೆಯರಿಗೆ ಸಾಮಾನ್ಯವಾಗಿ ನೀಲಿ ಮತ್ತು ಹಸಿರು ಸೀರೆ. ಇವರು ಸಾಮಾನ್ಯವಾಗಿ ಹಚ್ಚೆಗಳನ್ನು ಹಾಕುತ್ತಾರೆ. ಓಡಿಹೋಗುವುದೂ ಸೇರಿದಂತೆ ಮದುವೆಯ ಹಲವು ಸ್ವರೂಪಗಳು ಇವರಲ್ಲಿ ಸ್ವೀಕೃತವಾಗಿವೆ. ವಿಧವೆಯ ಮರುಮದುವೆ, ಬಲವಂತದ ಮದುವೆ, ಗರ್ಭ ಉಂಟುಮಾಡಿದ ಹೆಣ್ಣಿನೊಂದಿಗೆ ಗಂಡಿಗೆ ಮದುವೆ, ಗತಿಸಿದ ಸಹೋದರ ಮಡದಿಯ ಜತೆ ಮದುವೆ ಇವೆಲ್ಲವೂ ಸ್ವೀಕೃತ.

ಸಂತಾಲ್ ಸಮಾಜದಲ್ಲಿ ವಿಚ್ಛೇದನ ನಿಷೇಧವಲ್ಲ. ದಂಪತಿಯಲ್ಲಿ ಯಾರು ಬೇಕಾದರೂ ವಿಚ್ಛೇದನ ಕೇಳಬಹುದು. ಹೆಂಡತಿ ಮಾಟಗಾತಿಯಾಗಿದ್ದರೆ, ಪದೇ ಪದೆ ತವರುಮನೆಗೆ ಹೋಗುತ್ತಿದ್ದರೆ, ಮಾತು ಕೇಳದಿದ್ದರೆ ಗಂಡ ವಿಚ್ಛೇದನ ಕೇಳಬಹುದು. ಹೆಂಡತಿ ತನ್ನನ್ನು ಗಂಡ ಸಾಕುವುದಿಲ್ಲ ಎನಿಸಿದರೆ, ಬೇರೊಬ್ಬನನ್ನು ಮದುವೆಯಾಗಬೇಕು ಎನಿಸಿದರೆ ವಿಚ್ಛೇದನ ಕೇಳಬಹುದು. ಅಂಥ ಸಂದರ್ಭದಲ್ಲಿ ಆಕೆಯನ್ನು ಮದುವೆಯಾಗುವ ಪುರುಷ ಹಳೆಯ ಗಂಡನಿಗೆ ಪರಿಹಾರ ಕೊಡಬೇಕಾಗುತ್ತದೆ.

ಇದನ್ನೂ ಓದಿ: ಯಾರಿವರು ದ್ರೌಪದಿ ಮುರ್ಮು? ಗೆದ್ದರೆ ದೇಶದ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿ

ಸಂತಾಲರಲ್ಲಿ ಕೆಲವು ವಿಶಿಷ್ಟ ನಿಯಮಗಳಿವೆ. ಹೆಂಡತಿ ಗರ್ಭಿಣಿಯಾಗಿದ್ದಾಗ ಗಂಡ ಯಾವುದೇ ಪ್ರಾಣಿಯನ್ನು ಕೊಲ್ಲುವುದಿಲ್ಲ ಹಾಗೂ ಯಾರದೇ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಗರ್ಭಿಣಿ ಜೊತೆಗೆ ಯಾರೂ ಇಲ್ಲದೆ ಕಾಡಿಗೆ ಹೋಗುವಂತಿಲ್ಲ, ಯಾರದೇ ಸಾವಿಗೆ ಶೋಕಿಸುವಂತಿಲ್ಲ, ಅಳುವಂತಿಲ್ಲ.

ಸಂತಾಲರು ತಮ್ಮ ಜಾನಪದ ಹಾಡು ಮತ್ತು ನೃತ್ಯವನ್ನು ಇಷ್ಟಪಡುತ್ತಾರೆ. ಎಲ್ಲಾ ಸಮುದಾಯ ಕಾರ್ಯಕ್ರಮಗಳಲ್ಲಿ ಈ ಆಚರಣೆಗಳಿರುತ್ತವೆ. ಕಾಮಕ್, ಧೋಲ್, ಸಾರಂಗಿ ಮತ್ತು ಕೊಳಲುಗಳಂತಹ ಸಂಗೀತ ವಾದ್ಯಗಳನ್ನು ನುಡಿಸುತ್ತಾರೆ. ಈಗ ಹೆಚ್ಚಿನ ಸಂತಾಲ್‌ಗಳು ಕೃಷಿಕರು. ಅವರ ಬದುಕಿನ ಆಧಾರ ಕೃಷಿಭೂಮಿ ಅಥವಾ ಕಾಡು. ಓಲಾಹ್ ಎಂಬುದು ಅವರ ಮನೆಗಳ ಮಾದರಿ. ಮನೆಯ ಹೊರಗಿನ ಗೋಡೆಗಳ ಮೇಲೆ ನಿರ್ದಿಷ್ಟವಾಗಿ ಮೂರು ಬಣ್ಣಗಳಿರುತ್ತವೆ. ಕೆಳಗಿನ ಭಾಗ ಕಪ್ಪು ಮಣ್ಣಿನಿಂದ, ಮಧ್ಯದಲ್ಲಿ ಬಿಳಿ ಮತ್ತು ಮೇಲ್ಭಾಗ ಕೆಂಪು ಬಣ್ಣದಿಂದ ಕೂಡಿರುತ್ತದೆ.

ಇವರ ಧಾರ್ಮಿಕ ಜೀವನ ಚಕ್ರದಲ್ಲಿ ದಾಮೋದರ ನದಿಗೆ ವಿಶೇಷ ಸ್ಥಾನ. ಸಂತಾಲ್ ಸತ್ತಾಗ, ಅವನ ಅಥವಾ ಅವಳ ಚಿತಾಭಸ್ಮ ಮತ್ತು ಮೂಳೆಗಳನ್ನು ಸದ್ಗತಿಗಾಗಿ ದಾಮೋದರದಲ್ಲಿ ಮುಳುಗಿಸುತ್ತಾರೆ. ಇವರ ಬುಡಕಟ್ಟು ಭಾಷೆ ಸಂತಾಲಿಯನ್ನು ಬರೆಯುವ ಓಲ್ ಚಿಕಿ ಎಂಬ ಲಿಪಿಯನ್ನು ಸಂತಾಲ್ ವಿದ್ವಾಂಸ ರಘುನಾಥ್ ಮುರ್ಮು ಎಂಬವರು ಅಭಿವೃದ್ಧಿಪಡಿಸಿದ್ದಾರೆ. ಸಂತಾಲಿ ಭಾಷೆಯನ್ನು ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿಯೂ ಸೇರಿಸಲಾಗಿದೆ.

ಇದನ್ನೂ ಓದಿ: President Election | ದ್ರೌಪದಿ ಮುರ್ಮು ಆಯ್ಕೆ ಮಾಸ್ಟರ್‌ ಸ್ಟ್ರೋಕ್‌ ಎಂಬುದಕ್ಕೆ ಇಲ್ಲಿವೆ 7 ಕಾರಣಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

Summer Tour: ಕಾಶ್ಮೀರಕ್ಕೆ ಭೇಟಿ ನೀಡಲು ಈಗ ಸೂಕ್ತ ಸಮಯ. ಹಿಮದಿಂದ ಆವೃತವಾದ ಸುಂದರ ಭೂದೃಶ್ಯಗಳನ್ನು ಈಗ ಇಲ್ಲಿ ಕಣ್ತುಂಬಿಕೊಳ್ಳಬಹುದು. ಇದಕ್ಕಾಗಿ ಐಆರ್ ಟಿಸಿ ಯು ‘ಕಾಶ್ಮೀರ್ ಹೆವೆನ್ ಆನ್ ಅರ್ಥ್ ಎಕ್ಸ್ ಮುಂಬೈ’ ಪ್ಯಾಕೇಜ್ ಘೋಷಿಸಿದೆ. ಆಸಕ್ತರು ಇದರ ಪ್ರಯೋಜನವನ್ನು ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Summer Tour
Koo

ಧರೆಯ ಮೇಲಿನ ಸ್ವರ್ಗ ಎಂದೇ ಕರೆಯಲ್ಪಡುವ ಕಾಶ್ಮೀರಕ್ಕೆ (kashmir) ಪ್ರವಾಸ (tour) ಹೊರಡಲು ಈಗ ಸೂಕ್ತ ಸಮಯ. ಬೇಸಿಗೆಯ ಬಿಸಿಲಿನಿಂದ (Summer Tour) ಕಂಗೆಟ್ಟ ಜನರು ತಂಪಾದ ಪ್ರದೇಶದಲ್ಲಿ ಹೋಗಿ ಕೆಲ ಕಾಲ ಇದ್ದು ಬರಬೇಕು ಎಂದು ಬಯಸಿದರೆ ಐಆರ್ ಟಿಸಿ (IRTC) ವತಿಯಿಂದ ಟೂರ್ ಪ್ಯಾಕೇಜ್ ಘೋಷಣೆಯಾಗಿದೆ. ಆಸಕ್ತರು ಬ್ಯಾಗ್ ಪ್ಯಾಕ್ ,ಮಾಡಿ ಹೊರಡಲು ಸಿದ್ಧತೆ ನಡೆಸಬಹುದು.

ಇತ್ತೀಚೆಗೆ ಕಾಶ್ಮೀರದಲ್ಲಿ ಸಂಭವಿಸಿದ ಹಿಮಪಾತವು ಕಣಿವೆ ಪ್ರದೇಶಕ್ಕೆ ಸಂಪೂರ್ಣವಾಗಿ ಬಿಳಿ ಬಣ್ಣ ಎರಕ ಹೊಯ್ದಂತೆ ಮಾಡಿದೆ. ಇದು ಪ್ರವಾಸೋದ್ಯಮ ಕ್ಷೇತ್ರದ ಉತ್ಸಾಹವನ್ನು ಪುನರುಜ್ಜೀವನಗೊಳಿಸಿದೆ. ಈಗಾಗಲೇ ಅನೇಕ ಪ್ರವಾಸಿಗರು ಕಾಶ್ಮೀರಕ್ಕೆ ಹೊರಡುವ ಯೋಜನೆ ಹಾಕಿಕೊಳ್ಳುತ್ತಿದ್ದಾರೆ. ಮೋಡಿ ಮಾಡುವ ಭೂದೃಶ್ಯಗಳನ್ನು ಕಣ್ತುಂಬಿ ಕೊಳ್ಳಲು ಪ್ರವಾಸಿಗರ ಆಗಮನಕ್ಕೆ ಕಾಶ್ಮೀರವೂ ಕಾಯುವಂತಿದೆ.

ಪ್ರವಾಸಿಗರ ಉತ್ಸಾಹವನ್ನು ಹೆಚ್ಚಿಸಲು ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)ವು ‘ಕಾಶ್ಮೀರ್ ಹೆವೆನ್ ಆನ್ ಅರ್ಥ್ ಎಕ್ಸ್ ಮುಂಬೈ’ ಎಂಬ ಹೊಸ ಪ್ರವಾಸ ಪ್ಯಾಕೇಜ್ ಅನ್ನು ಹೊರತಂದಿದೆ.


ಇದನ್ನೂ ಓದಿ: Jammu Tour: ಜಮ್ಮುವಿಗೆ ಭೇಟಿ ನೀಡುವವರು ಈ ಸ್ಥಳಗಳನ್ನು ಮಿಸ್ ಮಾಡದೇ ನೋಡಿ!

ಈ ಪ್ಯಾಕೇಜ್ ಕಾಶ್ಮೀರದ ರಮಣೀಯ ಸೌಂದರ್ಯವನ್ನು ಅನ್ವೇಷಿಸಲು ಬಯಸುವವರಿಗೆ ಹೇಳಿ ಮಾಡಲ್ಪಟ್ಟಿದೆ. ಐದು ರಾತ್ರಿ ಮತ್ತು ಆರು- ದಿನಗಳ ಸಮಗ್ರ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಮೊದಲಾದ ಪ್ರಸಿದ್ಧ ಸ್ಥಳಗಳನ್ನು ಒಳಗೊಂಡಿದೆ. ಈ ಪ್ಯಾಕೇಜ್ ನಲ್ಲಿ ವಿಮಾನ ಟಿಕೆಟ್‌ಗಳು, ಹೊಟೇಲ್ ವಸತಿ, ಊಟ ಮತ್ತು ಪ್ರಯಾಣ ವಿಮೆಯನ್ನು ಒಳಗೊಂಡಿದೆ. ಪ್ರಯಾಣಿಕರ ಸಂಖ್ಯೆ ಮತ್ತು ಅವರೊಂದಿಗೆ ಬರುವ ಮಕ್ಕಳ ವಯಸ್ಸನ್ನು ಪರಿಗಣಿಸಿ ವಿಭಿನ್ನ ಪ್ರಯಾಣದ ಅನುಭವಕ್ಕೆ ಸರಿಹೊಂದಿಸಲು ಬೆಲೆಗಳನ್ನು ನಿಗದಿಪಡಿಸಲಾಗಿದೆ.


ಪ್ರವಾಸದ ದಿನ

ಮೇ ತಿಂಗಳಲ್ಲಿ 11, 15, 18, 25 ಜೂನ್ ತಿಂಗಳಲ್ಲಿ 1, 9, 15, 23, 26ರಂದು ಪ್ರವಾಸ ಹೊರಡುವ ಯೋಜನೆ ರೂಪಿಸಿಕೊಳ್ಳಬಹುದು. ಹೊಟೇಲ್ ವಾಸ್ತವ್ಯ ನಾಲ್ಕು ರಾತ್ರಿ ಶ್ರೀನಗರದಲ್ಲಿ ಮತ್ತು ಒಂದು ರಾತ್ರಿ ಪಹಲ್ಗಾಮ್ ನಲ್ಲಿ.

ದರ ಇಂತಿದೆ

ಒಬ್ಬರಿಗೆ 63,400 ರೂ., ಇಬ್ಬರಿಗೆ ಪ್ಯಾಕೇಜ್ ನಡಿಯಲ್ಲಿ ತಲಾ 54,100, ಮೂವರಿಗೆ ತಲಾ 50,700, 5 ರಿಂದ 11 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ 48,400 ರೂ. ನಿಗದಿಪಡಿಸಲಾಗಿದೆ.

ಪ್ರವಾಸಿ ತಾಣಗಳು

ಟೂರ್ ಪ್ಯಾಕೇಜ್ ನಲ್ಲಿ ಶ್ರೀನಗರ, ದೂದ್ ಪೆಟ್ರಿ, ಗುಲ್ಮಾರ್ಗ್, ಪಹಲ್ಗಾಮ್ ಸುಪ್ರಸಿದ್ದ ತಾಣಗಳಿಗೆ ಭೇಟಿ ನೀಡಲಾಗುತ್ತದೆ. ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಪಹಲ್ಗಾಮ್ , ಬೇತಾಬ್ ವಾಲಿ, ಅರು ವಾಲಿ ಮತ್ತು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮೊದಲ ದಿನ ಭೇಟಿ ನೀಡಲಾಗುತ್ತದೆ. ಎರಡನೇ ದಿನ ದಾಲ್ ಸರೋವರದ ದಡದಲ್ಲಿರುವ ಹಾಜ್ರತ್ ಬಾಲ್ ಶ್ರೀನಿ ಗೆ ಭೇಟಿ ನೀಡಲಾಗುತ್ತದೆ. ಮೂರನೇ ದಿನ ಅವಂತೀಪುರ್, ಮೊಘಲ್ ಗಾರ್ಡನ್, ಶಂಕರಾಚಾರ್ಯ ಟೆಂಪಲ್, ಶಿಖರ ರೈಡ್ ಅನ್ನು ಒಳಗೊಂಡಿರುತ್ತದೆ. ನಾಲ್ಕನೇ ದಿನ ದೂದ್ ಪೆಟ್ರಿಯಲ್ಲಿ , ಐದನೇ ದಿನ ಗುಲ್ಮಾರ್ಗ್ ನಲ್ಲಿ ಕಳೆಯಲಾಗುತ್ತದೆ. ಆರನೇ ದಿನ ವಿಮಾನದಲ್ಲಿ ಮುಂಬಯಿ ತಲುಪುವುದರೊಂದಿಗೆ ಪ್ರವಾಸ ಕೊನೆಗೊಳ್ಳುತ್ತದೆ.

Continue Reading

ವೈರಲ್ ನ್ಯೂಸ್

Viral Video: ಪ್ರಿನ್ಸಿಪಾಲ್ ಆದರೇನು, ಟೀಚರ್ ಆದರೇನು? ಹೆಂಗಸರ ಬಡಿದಾಟ ಇರೋದೇ ಹೀಗೆ! ವಿಡಿಯೊ ನೋಡಿ

Viral Video: ಉತ್ತರ ಪ್ರದೇಶದ ಆಗ್ರಾದಲ್ಲಿರುವ ಶಾಲೆಯೊಂದರಲ್ಲಿ, “ನನ್ನ ನೀನು ಗೆಲ್ಲಲಾರೆ” ಎಂಬ ಧೋರಣೆಯಲ್ಲಿ ನುಗ್ಗಿದ ಪ್ರಾಂಶುಪಾಲೆಯು, ಶಿಕ್ಷಕಿಯ ಕೆನ್ನೆಗೆ ತಿವಿದಿದ್ದಾರೆ. ಇದಕ್ಕೆ ಶಿಕ್ಷಕಿಯೂ, “ನಾ ನಿನ್ನ ಬಿಡಲಾರೆ” ಎಂಬಂತೆ ಅವರ ಬಟ್ಟೆ ಎಳೆದು ಸೇಡು ತೀರಿಸಿಕೊಂಡಿದ್ದಾರೆ. ಶಾಲೆಯಲ್ಲಿಯೇ ಶಿಕ್ಷಕಿಯರು ಹೀಗೆ ಬಡಿದಾಡಿಕೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
Koo

ಲಖನೌ: ”ಎರಡು ಜಡೆಗಳು ಒಟ್ಟಿಗೆ ಸೇರಲ್ಲ” ಎಂಬ ಮಾತಿದೆ. ಇನ್ನು ಸರ್ಕಾರಿ ಬಸ್‌ಗಳು, ಅಕ್ಕಪಕ್ಕದ ಮನೆಗಳಲ್ಲಿ ಹೆಣ್ಣುಮಕ್ಕಳು ಬಡಿದಾಡಿಕೊಳ್ಳುವ, ಹಿಗ್ಗಾಮುಗ್ಗ ಬೈದು ಜಗಳವಾಡುವ ಪ್ರಸಂಗಗಳು ನಡೆಯುತ್ತಲೇ ಇರುತ್ತವೆ. ವೈಷಮ್ಯ, ಜಗಳ, ಸುತ್ತಮುತ್ತಲಿನವರ ಬಗ್ಗೆ ಗಾಸಿಪ್‌ ಮಾಡುವ ಕಾರಣಕ್ಕಾಗಿಯೇ ಹೆಣ್ಣಿಗೆ ಹೆಣ್ಣೇ ಶತ್ರು ಎಂಬ ಮಾತು ಚಾಲ್ತಿಗೆ ಬಂದಿರಬೇಕು. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿರುವ (Agra) ಶಾಲೆಯೊಂದರಲ್ಲಿ ಪ್ರಾಂಶುಪಾಲೆ ಹಾಗೂ ಸಹ ಶಿಕ್ಷಕಿ ಮಧ್ಯೆ ಶಾಲೆಯಲ್ಲಿಯೇ ಮಾರಾಮಾರಿ ನಡೆದಿದೆ. ಈ ವಿಡಿಯೊ (Viral Video) ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

ಹೌದು, ಉತ್ತರ ಪ್ರದೇಶದ ಆಗ್ರಾದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲೆ ಹಾಗೂ ಸಹ ಶಿಕ್ಷಕಿಯು ಬಡಿದಾಡಿಕೊಂಡಿದ್ದಾರೆ. ಇಬ್ಬರೂ ಅವಾಚ್ಯ ಶಬ್ದಗಳಿಂದ ಪರಸ್ಪರ ಬೈದಿದ್ದಾರೆ. ಅಷ್ಟೇ ಅಲ್ಲ, ಪ್ರಾಂಶುಪಾಲೆಯು, ನಾನು ಯಾವುದಕ್ಕೂ ಏನು ಕಡಿಮೆ ಇಲ್ಲ ಎಂಬಂತೆ, ಶಿಕ್ಷಕಿಯ ಕೆನ್ನೆಗೆ ತಿವಿದಿದ್ದಾರೆ. ಶಿಕ್ಷಕಿಯೂ ರೊಚ್ಚಿಗೆದ್ದು, ಪ್ರಾಂಶುಪಾಲೆಯ ಬಟ್ಟೆ ಹಿಡಿದು ಎಳೆದಿದ್ದಾರೆ. ಇಬ್ಬರ ನಡುವಿನ ಈ ಜಂಗಿಕುಸ್ತಿಯು ಜಾಲತಾಣಗಳಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನಾನು ಇವಳನ್ನು ಬಿಡಲ್ಲ ಎಂಬ ರೀತಿ ಪ್ರಾಂಶುಪಾಲೆ ಮುನ್ನುಗ್ಗಿದರೆ, ಕುರ್ಚಿ ಮೇಲೆಯೇ ಕುಳಿತ ಶಿಕ್ಷಕಿಯು ತಿರುಗೇಟು ನೀಡಿದ್ದಾರೆ. ಇವರ ಸಹೋದ್ಯೋಗಿಗಳು ಎಷ್ಟು ಜಗಳ ಬಿಡಿಸಿದರೂ ಇಬ್ಬರ ನಟುವಿನ ಜಟಾಪಟಿ ಮಾತ್ರ ನಿಂತಿಲ್ಲ. ನಿಮ್ಮಿಬ್ಬರದ್ದು ಇದೇ ಆಯಿತು, ವಿಡಿಯೊ ಮಾಡಿ ಅಪ್‌ಲೋಡ್‌ ಮಾಡುತ್ತೇನೆ, ನಿಮ್ಮ ಘನತೆಗೆ ತಕ್ಕಂತೆ ನೀವು ವರ್ತಿಸುತ್ತಿಲ್ಲ ಎಂಬುದಾಗಿ ವಿಡಿಯೊ ಮಾಡುವವರು ಹೇಳಿದರೂ, ಪ್ರಾಂಶುಪಾಲೆ ಹಾಗೂ ಶಿಕ್ಷಕಿಯು ಪಟ್ಟಿಗೆ ಬಿದ್ದು ಜಗಳವಾಡಿದ್ದಾರೆ.

“ಶಾಲೆಯಲ್ಲಿ ಹೇಗೆ ವರ್ತಿಸಬೇಕು ಎಂಬುದೇ ಗೊತ್ತಿರದ ಇವರು, ಮಕ್ಕಳಿಗೆ ಯಾವ ಶಿಕ್ಷಣ ನೀಡುತ್ತಾರೆ? ಇಬ್ಬರನ್ನೂ ವಜಾಗೊಳಿಸಬೇಕು” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಇನ್ನು, “ಇಂತಹ ಶಿಕ್ಷಕರ ಕೈಯಲ್ಲಿ ಕಲಿತ ಮಕ್ಕಳು ಕೂಡ ಹಾಳಾಗುತ್ತಾರೆ” ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯದ ಬಗ್ಗೆ ಮರುಕವಿದೆ” ಎಂದು ಇನ್ನೊಬ್ಬರು ಹೇಳಿದ್ದಾರೆ. ಹೀಗೆ, ನೂರಾರು ಜನ ಪ್ರತಿಕ್ರಿಯಿಸಿ, ಪ್ರಾಂಶುಪಾಲೆ ಹಾಗೂ ಶಿಕ್ಷಕಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಇವರ ವಿರುದ್ಧ ಕ್ರಮ ತೆಗೆದುಕೊಂಡಿರುವ ಕುರಿತು, ನೋಟಿಸ್‌ ನೀಡಿರುವ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ.

ಇದನ್ನೂ ಓದಿ: Asaduddin Owaisi: ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

Continue Reading

ದೇಶ

Namesake: ರಾಹುಲ್‌ಗಳು, ಲಾಲುಗಳು; ಒಂದೇ ಹೆಸರಿನವರ ಸ್ಪರ್ಧೆ ಕುರಿತು ಕೋರ್ಟ್‌ ಮಹತ್ವದ ಹೇಳಿಕೆ

Namesake: ಕೇರಳ ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿದ ಪಿಐಎಲ್‌ ವಿಚಾರಣೆ ನಡೆಸಿದ ನ್ಯಾಯಾಲಯವು, ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಪರಿಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ನಾಳೆ, ರಾಹುಲ್‌ ಗಾಂಧಿಯೋ, ಲಾಲು ಪ್ರಸಾದ್‌ ಅವರ ಹೆಸರಿನವರೋ ಚುನಾವಣೆಗೆ ಸ್ಪರ್ಧಿಸಲು ಮುಂದಾದರೆ, ನಾವು ಅವರನ್ನು ತಡೆಯಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿತು.

VISTARANEWS.COM


on

Namesakes
Koo

ನವದೆಹಲಿ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಡಾ.ಸಿ.ಎನ್. ಮಂಜುನಾಥ್‌ (Dr C N Manjunath) ಅವರ ವಿರುದ್ಧ ರಾಜಕೀಯ ತಂತ್ರಗಾರಿಕೆಯ ಫಲವಾಗಿ ಮಂಜುನಾಥ್‌ ಹೆಸರಿನ ಹಲವು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿಯೂ (Lok Sabha Election) ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಹೆಸರಿನ ಹಲವರು ಸ್ಪರ್ಧಿಸಿದ್ದರು. ಇದರ ಬೆನ್ನಲ್ಲೇ, ಒಂದೇ ಹೆಸರಿನ ಹಲವು ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಿಷೇಧ ಹೇರಬೇಕು ಎಂಬುದಾಗಿ ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ.

ಕೇರಳ ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿದ ಪಿಐಎಲ್‌ ವಿಚಾರಣೆ ನಡೆಸಿದ ನ್ಯಾಯಾಲಯವು, “ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಪರಿಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ನಾಳೆ, ರಾಹುಲ್‌ ಗಾಂಧಿಯೋ, ಲಾಲು ಪ್ರಸಾದ್‌ ಅವರ ಹೆಸರಿನವರೋ ಚುನಾವಣೆಗೆ ಸ್ಪರ್ಧಿಸಲು ಮುಂದಾದರೆ, ನಾವು ಅವರನ್ನು ತಡೆಯಲು ಆಗುವುದಿಲ್ಲ. ಯಾವುದೇ ವ್ಯಕ್ತಿಗಳ ಹೆಸರನ್ನು ಅವರ ತಂದೆ-ತಾಯಿ ಇಟ್ಟಿರುತ್ತಾರೆ. ಪರಿಸ್ಥಿತಿ ಹೀಗಿರುವಾಗ, ಒಂದೇ ಹೆಸರಿನ ಹಲವರು ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬುದಾಗಿ ಹೇಳಲು ಆಗುವುದಿಲ್ಲ” ಎಂದು ನ್ಯಾ.ಬಿ.ಆರ್‌.ಗವಾಯಿ ನೇತೃತ್ವದ ನ್ಯಾಯಪೀಠವು ಸ್ಪಷ್ಟಪಡಿಸಿತು.

“ದೇಶದಲ್ಲಿ ರಾಹುಲ್‌, ಲಾಲು ಪ್ರಸಾದ್‌ ಎಂಬ ಹೆಸರಿನ ತುಂಬ ಜನ ಇರುತ್ತಾರೆ. ಪ್ರಮುಖ ರಾಜಕೀಯ ನಾಯಕರ ಹೆಸರು ಇಟ್ಟುಕೊಂಡ ಮಾತ್ರಕ್ಕೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಡ ಎಂಬುದಾಗಿ ಆದೇಶಿಸಲು ಆಗುವುದಿಲ್ಲ. ವ್ಯಕ್ತಿಯ ತಂದೆ-ತಾಯಿ ಹೆಸರಿಟ್ಟರು ಎಂದ ಮಾತ್ರಕ್ಕೆ, ಅವರಿಗೆ ಚುನಾವಣೆಯಿಂದಲೇ ನಿಷೇಧ ಮಾಡುವುದು ಸರಿಯಲ್ಲ. ಹೆಸರಿನ ಕಾರಣಕ್ಕಾಗಿ ಯಾರನ್ನೂ ಸ್ಪರ್ಧಿಸದಂತೆ ತಡೆಯಲು ಆಗುವುದಿಲ್ಲ” ಎಂಬುದಾಗಿ ಕೋರ್ಟ್‌ ಸ್ಪಷ್ಟಪಡಿಸಿ, ಅರ್ಜಿಯನ್ನು ತಿರಸ್ಕರಿಸಿತು.

ಅರ್ಜದಾರರ ವಾದವೇನು?

ಕೇರಳದ ಸಬು ಸ್ಟೀಫನ್‌ ಎಂಬುವರು ಪಿಐಎಲ್‌ ಸಲ್ಲಿಸಿದ್ದು, ಅವರ ಪರವಾಗಿ ವಿ.ಕೆ.ಬಿಜು ಅವರು ವಾದ ಮಂಡಿಸಿದರು. “ಚುನಾವಣೆ ವೇಳೆ ಒಬ್ಬ ಅಭ್ಯರ್ಥಿಯ ಪ್ರತಿಸ್ಪರ್ಧಿಯು ಉದ್ದೇಶಪೂರ್ವಕವಾಗಿ ಪ್ರತಿ ಸ್ಪರ್ಧಿಯ ಹೆಸರಿರುವ ಹಲವರನ್ನು ಚುನಾವಣೆ ಕಣಕ್ಕೆ ಇಳಿಸಿ, ಮತಗಳನ್ನು ವಿಭಜಿಸುವ ಪ್ರಯತ್ನ ಮಾಡಲಾಗುತ್ತದೆ. ಜನರಲ್ಲಿ ಗೊಂದಲ ಮೂಡಿಸಿ ಮತಗಳನ್ನು ಒಡೆಯುವ ಕುತಂತ್ರ ನಡೆಯುತ್ತದೆ. ಹಾಗಾಗಿ, ಚುನಾವಣೆಯಲ್ಲಿ ಒಂದೇ ಹೆಸರಿನ ಹಲವರು ಸ್ಪರ್ಧಿಸದಂತೆ ನಿಷೇಧಿಸಬೇಕು” ಎಂಬುದಾಗಿ ಮನವಿ ಮಾಲಾಗಿತ್ತು.

ಇದನ್ನೂ ಓದಿ: Rajyasabha Election | ಖರ್ಗೆ ಡೆಲ್ಲಿಯಲ್ಲಿದ್ದರೆ ಸಿದ್ದು ವಿಪ್‌ ನೀಡಿದರು

Continue Reading

ವಾಣಿಜ್ಯ

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

Costly wedding gift: ಮಕ್ಕಳ ಮದುವೆಯನ್ನು ಅದ್ದೂರಿಯಾಗಿ ಮಾಡಿ ವಿಶ್ವದ ಗಮನ ಸೆಳೆದಿರುವ ಉದ್ಯಮಿ ಮುಕೇಶ್, ನೀತಾ ಅಂಬಾನಿ ಇದೀಗ ದುಬಾರಿ ಉಡುಗೊರೆಗಳನ್ನು ನೀಡಿ ಮತ್ತೊಮ್ಮೆ ವಿಶ್ವದ ಗಮನ ಸೆಳೆದಿದ್ದಾರೆ.

VISTARANEWS.COM


on

By

Costly wedding gift
Koo

ಭಾರತದ (India) ಅತ್ಯಂತ ಶ್ರೀಮಂತ ಹಾಗೂ ವಿಶ್ವದ (world) 11ನೇ ಶ್ರೀಮಂತ ವ್ಯಕ್ತಿಯಾಗಿರುವ ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ ( Nita Ambani ) ಅವರ ಕೊನೆಯ ಪುತ್ರ ಅನಂತ್ ಅಂಬಾನಿ (Anant Ambani) ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ವಿಶ್ವದ ಗಮನ ಸೆಳೆದಿತ್ತು. ಸುಮಾರು 1,259 ಕೋಟಿ ರೂ .ಖರ್ಚು ಮಾಡಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿರುವ ಮುಕೇಶ್, ನೀತಾ ದಂಪತಿ ತಮ್ಮ ಮಕ್ಕಳಿಗೆ ಮದುವೆಯ ಉಡುಗೊರೆಯಾಗಿ (Costly wedding gift) ಏನು ಕೊಟ್ಟಿರಬಹುದು ಎನ್ನುವ ಕುತೂಹಲ ಎಲ್ಲರಲ್ಲೂ ಇದೆ.

ಮುಕೇಶ್ ಮತ್ತು ನೀತಾ ತಮ್ಮ ಮಕ್ಕಳಿಗಾಗಿ ಖರ್ಚು ಮಾಡುವಾಗ ಯಾವುದೇ ರೀತಿಯಲ್ಲಿ ಉಳಿತಾಯದ ಕಡೆ ಗಮನ ಹರಿಸುವುದಿಲ್ಲ. ಅವರು ಧಾರಾಳವಾಗಿ ಖರ್ಚುಗಳನ್ನು ಮಾಡುತ್ತಾರೆ ಎಂಬುದನ್ನು ಅನಂತ್ ಅಂಬಾನಿಯ ಮದುವೆ ಪೂರ್ವ ಕಾರ್ಯಕ್ರಮಗಳಲ್ಲಿ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಮುಕೇಶ್, ನೀತಾ ಮಕ್ಕಳಾದ ಆಕಾಶ್ ಅಂಬಾನಿ, ಇಶಾ ಅಂಬಾನಿ ಅವರ ಮದುವೆಯನ್ನು ಅದ್ಧೂರಿಯಾಗಿ ಮಾಡಿ ಗಮನ ಸೆಳೆದಿದ್ದರು. ಇದೀಗ ಅವರ ಕಿರಿಯ ಸಹೋದರ ಅನಂತ್ ಅಂಬಾನಿ ಇತ್ತೀಚೆಗೆ ರಾಧಿಕಾ ಮರ್ಚೆಂಟ್ ಅವರೊಂದಿಗೆ ದಾಂಪತ್ಯ ಜೀವನ ಪ್ರವೇಶ ಮಾಡುವುದನ್ನು ಘೋಷಿಸಿದ್ದರು. ಕಳೆದ ಜುಲೈ ನಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅನಂತ್, ರಾಧಿಕಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಮಾರ್ಚ್ ನಲ್ಲಿ ನಡೆಯಿತು. ಇದಕ್ಕಾಗಿ ಸುಮಾರು 1259 ಕೋಟಿ ರೂ. ಖರ್ಚು ಮಾಡಲಾಗಿತ್ತು.

ಇದನ್ನೂ ಓದಿ: Mukesh Ambani: ಪತ್ನಿ ನೀತಾ ಹಣೆಗೆ ಮುತ್ತಿಟ್ಟ ಮುಕೇಶ್ ಅಂಬಾನಿ: ರೊಮ್ಯಾಂಟಿಕ್‌ ಫೋಟೊಗಳು ವೈರಲ್‌!

ಕಾರ್ಯಕ್ರಮದಲ್ಲಿ ಪ್ರದರ್ಶನಕ್ಕಾಗಿ ಜಾಗತಿಕ ಐಕಾನ್ ರಿಹಾನ್ನಾ ಅವರನ್ನು ಕರೆದುಕೊಂಡು ಬರಲಾಗಿತ್ತು. ಈ ಒಂದು ಕಾರ್ಯಕ್ರಮಕ್ಕಾಗಿ ಅವರು 66- 74 ಕೋಟಿ ರೂ. ಪಡೆದಿದ್ದರು. ಇನ್ನು ಮುಂದಿನ ಜುಲೈನಲ್ಲಿ ನಡೆಯುವ ವಿವಾಹ ಸಮಾರಂಭಕ್ಕಾಗಿ ಅಂಬಾನಿ ಕುಟುಂಬ ಮದುವೆ ವೆಚ್ಚವನ್ನು ದ್ವಿಗುಣಗೊಳಿಸಲು ಸಿದ್ಧರಾಗಿದ್ದಾರೆ.

ಅಂಬಾನಿ ಕುಟುಂಬದ ಇಶಾ ಅಂಬಾನಿಯ ಪತಿ ಆನಂದ್ ಪಿರಮಾಲ್ ಅವರು ಪಿರಮಲ್ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕರು, ಹಾಗೆಯೇ ಆಕಾಶ್ ಅಂಬಾನಿಯ ಪತ್ನಿ ಶ್ಲೋಕಾ ಮೆಹ್ತಾ ಅವರು ವಜ್ರದ ಸಂಪತ್ತಿನ ವಾರಸುದಾರರು. ಅನಂತ್ ಅಂಬಾನಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ರಾಧಿಕಾ ಮರ್ಚೆಂಟ್ ಎನ್ಕೋರ್ ಹೆಲ್ತ್‌ಕೇರ್‌ನ ನಿರ್ದೇಶಕರಾಗಿದ್ದಾರೆ.

ಭವ್ಯವಾದ ಸಂಪ್ರದಾಯದಲ್ಲಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ಮಕ್ಕಳಿಗೆ ಹಲವು ವಿಶೇಷ ಮತ್ತು ದುಬಾರಿ ಉಡುಗೊರೆಗಳನ್ನು ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ.


ಅನಂತ್ ಅಂಬಾನಿಗಾಗಿ ಬೀಚ್-ವಿಲ್ಲಾ

ಅನಂತ್ ಅಂಬಾನಿಗಾಗಿ ದುಬೈನಲ್ಲಿ 640 ಕೋಟಿ ರೂ. ಮೌಲ್ಯದ ಬೀಚ್-ವಿಲ್ಲಾವನ್ನು ಖರೀದಿ ಮಾಡಿದ್ದಾರೆ ಮುಕೇಶ್. 2022ರ ಏಪ್ರಿಲ್ ನಲ್ಲಿ ಮುಕೇಶ್ ಅಂಬಾನಿ ತನ್ನ ಕಿರಿಯ ಮಗ ಅನಂತ್‌ಗಾಗಿ ದುಬೈನ ದುಬಾರಿ ಜಿಲ್ಲೆಯಾದ ಪಾಮ್ ಜುಮೇರಾದಲ್ಲಿ ವಿಸ್ತಾರವಾದ ಬೀಚ್‌ಫ್ರಂಟ್ ವಿಲ್ಲಾವನ್ನು ಖರೀದಿ ಮಾಡಿದ್ದರು. ಇದು 10 ಬೆಡ್‌ರೂಮ್‌ಗಳನ್ನು ಹೊಂದಿದೆ. 70 ಮೀಟರ್‌ಗಳಷ್ಟು ವ್ಯಾಪಿಸಿರುವ ಖಾಸಗಿ ಬೀಚ್‌ ಅನ್ನು ಒಳಗೊಂಡಿರುವ ಇದರ ಮೌಲ್ಯ 640 ಕೋಟಿ ರೂ.


ಶ್ಲೋಕಾ ಮೆಹ್ತಾಗೆ 451 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್

2019 ರಲ್ಲಿ ಶ್ಲೋಕಾ ಮೆಹ್ತಾ ಅವರೊಂದಿಗೆ ಆಕಾಶ್ ಅಂಬಾನಿ ಅವರ ವಿವಾಹದ ಸಂದರ್ಭದಲ್ಲಿ ನೀತಾ ಅಂಬಾನಿ ಅವರು ತಮ್ಮ ಸೊಸೆಗೆ ಮೌವಾದ್ ಎಲ್ ಅಪರೂಪದ ನೆಕ್ಲೇಸ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಇದರ ಮೌಲ್ಯ 451 ಕೋಟಿ ರೂ. 407.48 ಕ್ಯಾರೆಟ್ ಹಳದಿ ವಜ್ರವನ್ನು 18 ಕಾರಟ್ ಗುಲಾಬಿ ಚಿನ್ನದ ಕವಲುಗಳೊಂದಿಗೆ ಹೆಣೆದುಕೊಂಡಿರುವ 229.52 ಕ್ಯಾರೆಟ್ ಬಿಳಿ ವಜ್ರದ ನೆಕ್ಲೇಸ್‌ನಿಂದ ಅಲಂಕರಿಸಲಾಗಿತ್ತು.


ಅನಂತ್- ರಾಧಿಕಾಗೆ ಬೆಂಟ್ಲಿ ಕಾಂಟಿನೆಂಟಲ್ ಜಿಟಿಸಿ ಸ್ಪೀಡ್

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ಗೆ 4.5 ಕೋಟಿ ರೂ. ನ ಬೆಂಟ್ಲಿ ಕಾಂಟಿನೆಂಟಲ್ ಜಿಟಿಸಿ ಸ್ಪೀಡ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. 2023ರಲ್ಲಿ ಅವರ ನಿಶ್ಚಿತಾರ್ಥದ ಮೊದಲು ರಾಧಿಕಾ ಮರ್ಚೆಂಟ್ ಅವರಿಗೆ ಸುಮಾರು 4.5 ಕೋಟಿ ಮೌಲ್ಯದ ಬೆಂಟ್ಲಿ ಕಾಂಟಿನೆಂಟಲ್ ಜಿಟಿಸಿ ಸ್ಪೀಡ್ ಅನ್ನು ಉಡುಗೊರೆಯಾಗಿ ನೀಡಲಾಯಿತು. ಟ್ವಿನ್- ಟರ್ಬೋಚಾರ್ಜ್ಡ್ 6.0 ಲೀಟರ್ W12 ಎಂಜಿನ್ ಹೊಂದಿದ ಈ ಐಷಾರಾಮಿ ಕಾರು ಅತ್ಯಂತ ಸುಂದರವಾಗಿದ್ದು, ಹೆಚ್ಚಿನ ಕಾರ್ಯಕ್ಷಮತೆಯನ್ನು ಹೊಂದಿದೆ.


ರಾಧಿಕಾ ಮರ್ಚೆಂಟ್‌ಗೆ ಮುತ್ತು ಮತ್ತು ವಜ್ರದ ಚೋಕರ್

ಜುಲೈ 2022 ರಲ್ಲಿ ನಡೆದ ಸಾಮಾಜಿಕ ಕಾರ್ಯಕ್ರಮದ ಸಂದರ್ಭದಲ್ಲಿ ರಾಧಿಕಾ ಮರ್ಚೆಂಟ್ ಅದ್ಭುತವಾದ ಮುತ್ತು ಮತ್ತು ವಜ್ರದ ಚೋಕರ್ ಅನ್ನು ಧರಿಸಿದ್ದರು, ಇದು ನೀತಾ ಅಂಬಾನಿ ಅವರು ಧರಿಸಿದ್ದ ಸೊಗಸಾದ ಚೋಕರ್ ಅನ್ನು ನೆನಪಿಸುತ್ತದೆ. ಇದರ ನಿಖರವಾದ ಮೌಲ್ಯವನ್ನು ಬಹಿರಂಗಪಡಿಸಲಾಗಿಲ್ಲವಾದರೂ ಇದು ನಿಸ್ಸಂದೇಹವಾಗಿ ತನ್ನ ಭಾವಿ ಸೊಸೆಗೆ ನೀತಾ ಅಂಬಾನಿಯಿಂದ ಅಮೂಲ್ಯವಾದ ಉಡುಗೊರೆಯಾಗಿದೆ ಎನ್ನಲಾಗುತ್ತದೆ.


ಇಶಾ ಅಂಬಾನಿಗಾಗಿ ಮದುವೆಗೆ 100 ಮಿಲಿಯನ್ ಡಾಲರ್ ಖರ್ಚು

ಇಶಾ ಅಂಬಾನಿ ಮತ್ತು ಆನಂದ್ ಪಿರಾಮಲ್ ಅವರ ವಿವಾಹ 2018 ರಲ್ಲಿ ನಡೆದಿದೆ. ಇದವಿಶ್ವದ ಅತ್ಯಂತ ಅದ್ದೂರಿ ವಿವಾಹಗಳಲ್ಲಿ ಒಂದಾಗಿದೆ. ಇದಕ್ಕಾಗಿ ಅಂಬಾನಿ ಕುಟುಂಬ ಸುಮಾರು 100 ಮಿಲಿಯನ್ ಡಾಲರ್ ಅಂದಾಜು 830 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ. ಪ್ರತಿಯೊಂದೂ ಆಮಂತ್ರಣ ಕಾರ್ಡ್ ನ ಬೆಲೆ 3 ಲಕ್ಷ ರೂ. ಎನ್ನಲಾಗಿದೆ. ಬಿಯಾನ್ಸ್ ಅವರ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗಾಗಿ 4 – 6 ಮಿಲಿಯನ್ ಸುಮಾರು ಅಂದಾಜು 33 – 50 ಕೋಟಿ ರೂ. ಖರ್ಚು ಮಾಡಲಾಗಿತ್ತು. ಈ ಕಾರ್ಯಕ್ರಮಗಳು ಪ್ರಪಂಚದಾದ್ಯಂತದ ಪ್ರಸಿದ್ಧ ವ್ಯಕ್ತಿಗಳು ಮತ್ತು ಗಣ್ಯರನ್ನು ಆಕರ್ಷಿಸಿತು.

Continue Reading
Advertisement
Summer Tour
ಪ್ರವಾಸ15 mins ago

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

IPL 2024
ಕ್ರೀಡೆ18 mins ago

IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

Tips for bedroom corner
ಲೈಫ್‌ಸ್ಟೈಲ್21 mins ago

Tips for Bedroom Corner: ಮಲಗುವ ಕೋಣೆಯ ಮೂಲೆಗಳನ್ನು ಆಕರ್ಷಕವಾಗಿಸಲು ಕೆಲವು ಟಿಪ್ಸ್

Viral Video
ವೈರಲ್ ನ್ಯೂಸ್24 mins ago

Viral Video: ಪ್ರಿನ್ಸಿಪಾಲ್ ಆದರೇನು, ಟೀಚರ್ ಆದರೇನು? ಹೆಂಗಸರ ಬಡಿದಾಟ ಇರೋದೇ ಹೀಗೆ! ವಿಡಿಯೊ ನೋಡಿ

Rohit Sharma
ಪ್ರಮುಖ ಸುದ್ದಿ33 mins ago

Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

Prajwal Revanna Case face not visible in videos says HD Kumaraswamy
ಕ್ರೈಂ38 mins ago

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Covishield Vaccine
ಪ್ರಮುಖ ಸುದ್ದಿ50 mins ago

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

T20 World Cup
ಪ್ರಮುಖ ಸುದ್ದಿ55 mins ago

T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

Namesakes
ದೇಶ58 mins ago

Namesake: ರಾಹುಲ್‌ಗಳು, ಲಾಲುಗಳು; ಒಂದೇ ಹೆಸರಿನವರ ಸ್ಪರ್ಧೆ ಕುರಿತು ಕೋರ್ಟ್‌ ಮಹತ್ವದ ಹೇಳಿಕೆ

Saanya Iyer
ಫ್ಯಾಷನ್1 hour ago

Saanya Iyer: ಗ್ರ್ಯಾಂಡ್‌ ಲೆಹೆಂಗಾದಲ್ಲಿ ರಾಣಿಯಂತೆ ಕಂಗೊಳಿಸಿದ ನಟಿ ಸಾನ್ಯಾ ಅಯ್ಯರ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ2 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ13 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ23 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌