Cyrus Mistry Death | ಸೈರಸ್ ಮಿಸ್ತ್ರಿ: ಉದ್ಯಮ ಜಗತ್ತನ್ನು ಬಿಟ್ಟು ನಡೆದ ದಿಗ್ಗಜ - Vistara News

ದೇಶ

Cyrus Mistry Death | ಸೈರಸ್ ಮಿಸ್ತ್ರಿ: ಉದ್ಯಮ ಜಗತ್ತನ್ನು ಬಿಟ್ಟು ನಡೆದ ದಿಗ್ಗಜ

ಸೈರಸ್ ಮಿಸ್ತ್ರಿ (Cyrus Mistry Death) ಅವರು ಟಾಟಾ ಸನ್ಸ್ ಕಂಪನಿಯ ಚೇರ್ಮನ್ ಆಗಿದ್ದರು. ಬಿಸಿನೆಸ್ ಕುಟುಂಬದ ಹಿನ್ನೆಲೆ ಮಿಸ್ತ್ರಿ ಅವರಿಗಿತ್ತು.

VISTARANEWS.COM


on

Cyrus Mistry Family
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾದ 54 ವರ್ಷದ ಸೈರಸ್ ಮಿಸ್ತ್ರಿ (Cyrus Mistry Death) ಅವರಿಗೆ ಬಿಸಿನೆಸ್ ಕುಟುಂಬದ ಹಿನ್ನೆಲೆ ಇದೆ. ಅವರು 2013ರಲ್ಲಿ ಟಾಟಾ ಸನ್ಸ್ ಚೇರ್ಮನ್‌ ಆಗಿ ಅಧಿಕಾರ ವಹಿಸಿಕೊಂಡ ಮೇಲೆ, ಬಿಸಿನೆಸ್ ವರ್ಲ್ಡ್ ಹೊರತಾಗಿಯೂ ಚಿರಪರಿಚಿತರಾದರು. ಟಾಟಾ ಕಂಪನಿಯ ಚೇರ್ಮನ್ ಆಗುವುದು ಮತ್ತು ಅಲ್ಲಿಂದ ಹೊರ ಬೀಳುವುದು ಎರಡೂ ಸೈರಸ್ ಮಿಸ್ತ್ರಿ ವೃತ್ತಿ ಬದುಕಿನಲ್ಲಿ ದಕ್ಕಿದ ಸಿಹಿ-ಕಹಿ ಅನುಭವಗಳು.

ಸೈರಸ್ ಮಿಸ್ತ್ರಿ ಅವರ ಪೂರ್ತಿ ಸೈರಸ್ ಪಲ್ಲೊಂಜಿ ಮಿಸ್ತ್ರಿ. ಇವರು ಭಾರತೀಯ ಮೂಲದ ಐರಿಷ್ ವ್ಯಾಪಾರೋದ್ಯಮಿ. 1968ರ ಜುಲೈ 4ರಂದು ಮುಂಬೈನಲ್ಲಿ ಸೈರಸ್ ಮಿಸ್ತ್ರಿ ಜನಿಸಿದರು. ಇವರದ್ದು ಪಾರ್ಸಿ ಫ್ಯಾಮಿಲಿ. ತಂದೆ ಕೋಟ್ಯಧೀಶ ಮತ್ತು ಕಟ್ಟಡ ನಿರ್ಮಾಣ ಕ್ಷೇತ್ರದ ದೈತ್ಯ ಉದ್ಯಮಿ ಪಲ್ಲೋಂಜಿ ಮಿಸ್ತ್ರಿ. ತಾಯಿ ಪರಿನ್ ದುಬಾಶ್.

ತಾಯಿ ಐರ್ಲೆಂಡ್‌ನವರು
ಸೈರಸ್ ಮಿಸ್ತ್ರಿ ಅವರ ತಾಯಿ ಪೆರಿನ್ ದುಬಾಶ್ ಐರ್ಲೆಂಡ್‌ನವರು. ತಂದೆ ತಾಯಿ ಇಬ್ಬರು ಝೋರಾಸ್ಟ್ರಿಯನ್ ನಂಬಿಕೆಯುಳ್ಳವರು. ತಂದೆ ಐರಿಷ್ ನಾಗರಿಕತ್ವವನ್ನು ಪಡೆದುಕೊಂಡಿದ್ದಾರೆ. ಸೈರಸ್ ಮಿಸ್ತ್ರಿ ಹಿರಿಯ ಸಹೋದರ ಶಾಪೂರ್ ಮಿಸ್ತ್ರಿ. ಇವರೂ ಐರಿಷ್ ಕೂಡ ಪ್ರಜೆಯಾಗಿದ್ದಾರೆ. ಪಾರ್ಸಿ ಲಾಯರ್ ರೂಸಿ ಸೆಥ್ನಾ ಅವರ ಪುತ್ರಿ ಬೆಹ್ರೋಜ್ ಸೇತ್ನಾ ಅವರನ್ನು ಮದುವೆಯಾಗಿದ್ದಾರೆ. ಲೈಲಾ ಮತ್ತು ಆಲೂ ಎಂಬ ಇಬ್ಬರು ಸಹೋದರಿಯರಿದ್ದಾರೆ.

ಸೈರಸ್ ಶೈಕ್ಷಣಿಕ ಹಿನ್ನೆಲೆ ಏನು?
ಸೈರಸ್ ಮಿಸ್ತ್ರಿ ಅವರು ದಕ್ಷಿಣ ಮುಂಬೈನ ಪ್ರಖ್ಯಾತ ಕ್ಯಾಥೆಡ್ರಲ್ ಮತ್ತು ಜಾನ್ ಕಾನನ್ ಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದುಕೊಂಡರು. ಆ ಬಳಿಕ ಸೈರಸ್ ಅವರು, ಲಂಡನ್‌ಗೆ ತೆರಳಿ ಇಂಪೀರಿಯಲ್ ಕಾಲೇಜ್‌ನಲ್ಲಿ ಓದಿದರು. 1990ರಲ್ಲಿ ಲಂಡನ್ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದುಕೊಂಡರು. ಸೈರಸ್ ಮಿಸ್ತ್ರಿ ಅವರು ಲಂಡನ್ ಬ್ಯೂಸಿನೆಸ್ ಸ್ಕೂಲ್‌ನಲ್ಲೂ ಓದಿದ್ದಾರೆ. 1996ರಲ್ಲಿ ಲಂಡನ್ ವಿವಿಯಿಂದ ಇಂಟರ್‌ನ್ಯಾಷನಲ್ ಎಕ್ಸಿಕ್ಯೂಟಿವ್ ಮಾಸ್ಟರ್ಸ್ ಪದವಿ ಪಡೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜತೆ ಮಿಸ್ತ್ರಿ ಮತ್ತು ರತನ್ ಟಾಟಾ

ತಮ್ಮ ತಂದೆಯ ಕಟ್ಟಡ ನಿರ್ಮಾಣ ಕಂಪನಿಯಾದ ಶಪೂರ್ಜಿ ಪಲ್ಲೊಂಜಿ ಆ್ಯಂಡ್ ಕಂಪನಿಯಿಂದಲೇ ಸೈರಸ್ ಮಿಸ್ತ್ರಿ ಅವರು ತಮ್ಮ ವೃತ್ತಿಯನ್ನು 1991ರಲ್ಲಿ ಆರಂಭಿಸಿದರು. ಶಪೂರ್ಜಿ ಪಲ್ಲೊಂಜಿ ಗ್ರೂಪ್‌ನ ಅಂಗಸಂಸ್ಥೆಯಾದ ಶಪೂರ್ಜಿ ಪಲ್ಲೊಂಜಿ ಆ್ಯಂಡ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದರು. ಮುಂದೆ 2012ರಲ್ಲ ಟಾಟಾ ಸನ್ಸ್ ಕಂಪನಿಯ ಚೇರ್ಮನ್ನರಾದರು. ವಿಶೇಷ ಏನೆಂದರೆ, ಟಾಟಾ ಕಂಪನಿಯ ಇತಿಹಾಸದಲ್ಲೇ ಟಾಟಾ ಅಡ್ಡ ಹೆಸರು ಇರದ ಚೇರ್ಮನ್ ಆದ ಎರಡನೇ ವ್ಯಕ್ತಿ ಇವರು.

ಕಟ್ಟಡ ನಿರ್ಮಾಣ ಕಂಪನಿ
ಮಿಸ್ತ್ರಿಯವರ ಮುತ್ತಾತ ಸಣ್ಣ ನಿರ್ಮಾಣ ಕಂಪನಿ ಸ್ಥಾಪಿಸಿದ್ದರು. ಅವರ ಬಳಿಕ, ಪಲ್ಲೊಂಜಿ ಅವರು ತಮ್ಮದೇ ಶಾಪೋರ್ಜಿ ಪಲ್ಲೊಂಜಿ ಕಂಪನಿಯನ್ನು ಆರಂಭಿಸಿದರು. ಈ ಕಂಪನಿಯು ಆರಂಭದಲ್ಲಿ ಮಿಲಿಟರಿ ಮತ್ತು ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳನ್ನು ಮಾತ್ರ ಕೈಗೆತ್ತಿಕೊಳ್ಳುತ್ತಿತ್ತು. ಆ ಬಳಿಕ ತನ್ನ ನಿರ್ಮಾಣ ಕಾರ್ಯವನ್ನು ಬೇರೆ ಕ್ಷೇತ್ರಗಳಿಗೂ ವಿಸ್ತರಿಸಿತು. ಮುಂಬೈನ ಬಹುತೇಕ ಐಕಾನಿಕ್ ಕಟ್ಟಡಗಳ ನಿರ್ಮಾಣ ಹಿಂದೆ ಸೈರಸ್ ಮಿಸ್ತ್ರಿ ಅವರ ತಂದೆ ಸ್ಥಾಪಿಸಿದ ಪಲ್ಲೊಂಜಿ ಗ್ರೂಪ್ ಕಂಪನಿಯ ಚಾಕಚಕ್ಯತೆ ಇದೆ. ಮುಂಬೈನ ಸೆಂಟ್ರಲ್ ರೈಲ್ವೆ ಸ್ಟೇಷನ್, ಎಸ್‌ಬಿಐ ಪ್ರಧಾನ ಕಚೇರಿ, ಆರ್‌ಬಿಐ, ಬ್ಯಾಂಕ್ ಆಫ್ ಇಂಡಿಯಾ, ಎಚ್‌ಎಸ್‌ಬಿಸಿ ಸೇರಿದಂತೆ ಅನೇಕ ಕಟ್ಟಡಗಳನ್ನು ಈ ಕಂಪನಿಯೇ ನಿರ್ಮಾಣ ಮಾಡಿದೆ.

ವಿವಾಹ ಸಂಬಂಧ
ಸೈರಸ್ ಮಿಸ್ತ್ರಿ ಅವರ ಸಹೋದರಿ ಆಲೂ ಅವರನ್ನು ನೋಯೆಲ್ ಟಾಟಾ ಅವರು ಮದುವೆಯಾಗಿದ್ದಾರೆ. ಈ ನೋಯೆಲ್ ಯಾರು ಅಂದರೆ, ರತನ್ ಟಾಟಾ ಅವರ ಮಲಸಹೋದರ. ಟಾಟಾ ಸನ್ಸ್ ಕಂಪನಿಯಲ್ಲಿ ಶೇ.18ರಷ್ಟು ಷೇರು ಶಾಪೂರ್ಜಿ ಪಲ್ಲೊಂಜಿ ಗ್ರೂಪ್ ಹೊಂದಿದೆ. ಟಾಟಾ ಸನ್ಸ್ ಕಂಪನಿಯಲ್ಲಿ ಟಾಟಾ ಕುಟುಂಬದ ನಂತರ ಅತಿ ಹೆಚ್ಚುಷೇರು ಇರುವುದು ಸೈರಸ್ ಮಿಸ್ತ್ರಿ ಅವರ ಕಂಪನಿಯದ್ದೇ.

ಟಾಟಾ ಕಂಪನಿಗೆ 6ನೇ ಚೇರ್ಮನ್
154 ವರ್ಷಗಳ ಇತಿಹಾಸ ಹೊಂದಿರುವ ಟಾಟಾ ಸನ್ಸ್ ಕಂಪನಿಗೆ ಈವರೆಗೆ ಬೆರಳೆಣಿಕೆಯಷ್ಟು ಜನರು ಚೇರ್ಮನ್ನರಾಗಿದ್ದಾರೆ. ಈಗ ರಸ್ತೆ ಅಪಘಾತದಲ್ಲಿ ನಿಧನರಾಗಿರುವ ಸೈರಸ್ ಮಿಸ್ತ್ರಿ ಅವರು ಟಾಟಾ ಕಂಪನಿಗೆ ಆರನೇ ಅಧ್ಯಕ್ಷರಾಗಿದ್ದರು. ಅವರಿಗಿಂತ ಮುಂಚೆ, ರತನ್ ಟಾಟಾ, ಜೆಆರ್‌ಡಿ ಟಾಟಾ, ಸರ್ ನವರೋಜಿ ಸಕಲಟ್ ವಾಲಾ, ಸರ್ ದೊರಾಬ್ ಟಾಟಾ ಮತ್ತು ಜೇಮ್‌ಶೇಡಜೀ ಟಾಟಾ ಅಧ್ಯಕ್ಷರಾಗಿದ್ದರು. ಸದ್ಯ ನಟರಾಜನ್ ಚಂದ್ರಶೇಖನರ್ ಅವರು ಹಾಲಿ ಚೇರ್ಮನ್ನರಾಗಿದ್ದಾರೆ. 2006ರಲ್ಲಿ ಸೈರಸ್ ಮಿಸ್ತ್ರಿ ಅವರು ಟಾಟಾ ಸನ್ಸ್ ಬೋರ್ಡ್ ಸೇರಿದರು. ಇದಕ್ಕೂ ಒಂದು ವರ್ಷ ಮೊದಲು ಸೈರಸ್ ಅವರ ತಂದೆ ಟಾಟಾ ಸನ್ಸ್ ಬೋರ್ಡ್‌ನಿಂದ ನಿವೃತ್ತರಾಗಿದ್ದರು. 1990ರಿಂದ 2009ರವರೆಗೆ ಟಾಟಾ ಟೆಕ್ಸ್‌ಟೈಲ್ ಲಿ.ನ ನಿರ್ದೇಶಕರಾಗಿದ್ದರು. ಇದಕ್ಕೂ ಮೊದಲು 2006ರವರೆಗೆ ಅವರು ಟಾಟಾ ಪವರ್ ಕಂಪನಿಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

Ratan Tata
ರತನ್ ಟಾಟಾ ಜತೆ

2013ರಲ್ಲಿ ಟಾಟಾ ಆಡಳಿತ ಮಂಡಳಿಯು ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ಚೇರ್ಮನ್ನರಾಗಿ ಆಯ್ಕೆ ಮಾಡಿತು. 2012ರಲ್ಲಿ ರತನ್ ಟಾಟಾ ನಿವೃತ್ತಿಯಾಗಿದ್ದರು. ಟಾಟಾ ಸನ್ಸ್ ಕಂಪನಿಯ ಚೇರ್ಮನ್ ಮಾತ್ರವಲ್ಲದೇ ಸೈರಸ್ ಅವರಿಗೆ ಟಾಟಾ ಇಂಡಸ್ಟ್ರೀಸ್, ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಕನ್ಸಲ್ಟನ್ಸಿ ಸರ್ವೀಸಸ್, ಟಾಟಾ ಪವರ್, ಟಾಟಾ ಟೆಲಿಸರ್ವೀಸ್, ಇಂಡಿಯನ್ ಹೋಟೆಲ್ಸ್, ಟಾಟಾ ಗ್ಲೋಬಲ್ ಬೆವರೇಜ್ ಮತ್ತು ಟಾಟಾ ಕೆಮಿಕಲ್ಸ್ ಸೇರಿದಂತೆ ಟಾಟಾ ಗ್ರೂಪ್‌ನ ಎಲ್ಲ ಕಂಪನಿಗಳ ಜವಾಬ್ದಾರಿಯನ್ನು ಸೈರಸ್ ಮಿಸ್ತ್ರಿ ಅವರಿಗೆ ವಹಿಸಲಾಗಿತ್ತು..

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಜತೆಗೆ ಸೈರಸ್ ಮಿಸ್ತ್ರಿ

ಟಾಟಾ ಕಂಪನಿ ಅಧ್ಯಕ್ಷರಾಗಿದ್ದು ಹೇಗೆ?
ಭಾರತದ ಪ್ರತಿಷ್ಠಿತ ಕಂಪನಿಯಾಗಿರುವ ಟಾಟಾ ಸನ್ಸ್‌ ಜವಾಬ್ದಾರಿಯಿಂದ ರತನ್ ಟಾಟಾ ಅವರು ನಿವೃತ್ತರಾಗಲು ಬಯಸಿದ್ದರು. ಹಾಗಾಗಿ, ತಮ್ಮ ಉತ್ತರಾಧಿಕಾರಿಯ ಹುಡುಕಾಟಕ್ಕೆ ಅವರು 2010ರಲ್ಲಿ ಐವರು ಸದಸ್ಯರ ಸಮಿತಿಯನ್ನು ರಚಿಸಿದರು. ಈ ಸಮಿತಿಯು ಹೆಚ್ಚು ಕಡಿಮೆ ಒಂದೂವರೆ ವರ್ಷಗಳ ಕಾಲ ಹಲವು ವ್ಯಕ್ತಿಗಳನ್ನು ಪಟ್ಟಿ ಮಾಡಿ, ಅವರ ಆಯ್ಕೆಯ ಲಾಭ ಮತ್ತು ನಷ್ಟಗಳೆನ್ನಲ್ಲ ಪರಿಶೀಲಿಸಿತು. ಆಗ ರತನ್ ಟಾಟಾ ಅವರ ಮಲಸಹೋದರ ನೋಯೆಲ್ ಟಾಟಾ, ಪೆಪ್ಸಿಕೋ ಮುಖ್ಯಸ್ಥೆಯಾಗಿದ್ದ ಇಂದಿರಾ ನೋಯಿ, ಸಿಟಿ ಗ್ರೂಪ್‌ನ ಅಂದಿನ ಚೇರ್ಮನ್ ವಿಕ್ರಮ್ ಪಂಡಿತ್ ಸೇರಿದಂತೆ ಅನೇಕರ ಹೆಸರು ಟಾಟಾ ಸನ್ಸ್ ಕಂಪನಿ ಚೇರ್ಮನ್ ಹುದ್ದೆಗೆ ಕೇಳಿ ಬಂದಿತ್ತು. ಆದರೆ, ಅಂತಿಮವಾಗಿ ಆಯ್ಕೆಯಾಗಿದ್ದು ಸೈರಸ್ ಮಿಸ್ತ್ರಿ ಅವರು.

ಕಿರಿಯ ವಯಸ್ಸಿನಲ್ಲೇ ಹಿರಿಯ ಜವಾಬ್ದಾರಿ
ಸೈರಸ್ ಮಿಸ್ತ್ರಿಯತ್ತ ಒಲವು ತೋರಿಸಲು ರತನ್ ಟಾಟಾ ಅವರಿಗೆ ಕಾರಣವಿತ್ತು. ಸೈರಸ್ ತಮ್ಮ ಪಲ್ಲೊಂಜಿ ಗ್ರೂಪ್ ಅನ್ನು ಲಾಭದಾಯಕವಾಗಿ ಬೆಳೆಸಿದ್ದರು. ಕಿರಿಯ ವಯಸ್ಸಿನಲ್ಲಿ ಅವರು ನಾಯಕತ್ವದ ಗುಣಗಳನ್ನು ಪ್ರದರ್ಶಿಸಿದ್ದರು. ಅದೇ ಕಾರಣಕ್ಕಾಗಿ ಟಾಟಾ ಸನ್ಸ್‌ನ ತಮ್ಮ ಉತ್ತರಾಧಿಕಾರಿಯಾಗಿ ಸೈರಸ್ ಮಿಸ್ತ್ರಿ ಅವರನ್ನು ಆಯ್ಕೆ ಮಾಡಿಕೊಂಡಿದ್ದರು. ಹಾಗಾಗಿ ಅತಿ ಕಿರಿಯ ವಯಸ್ಸಿನಲ್ಲೇ ಸೈರಸ್ ಮಿಸ್ತ್ರಿ ಜಗತ್ತಿನ ಬಹುದೊಡ್ಡ ಕಂಪನಿಯ ಜವಾಬ್ದಾರಿ ಹೆಗಲೇರಿತ್ತು.

ನ್ಯಾನೋ ಕಾರು ತಂದ ಭಿನ್ನಾಭಿಪ್ರಾಯ
ರತನ್ ಟಾಟಾ ಅವರ ಕನಸಿನ ಕಾರು ನ್ಯಾನೋ. ಭಾರತದ ಬಡವ ಕೂಡ ಕಾರಿನಲ್ಲಿ ಓಡಾಡಬೇಕು ಎಂಬ ಗುರಿಯೊಂದಿಗೆ ಒಂದು ಲಕ್ಷ ರೂ.ನಲ್ಲಿ ಕಾರು ಮಾರಾಟ ಮಾಡಲು ಮುಂದಾದರು ಮತ್ತದು ಮಾರುಕಟ್ಟೆಗೆ ಬಿಡುಗಡೆಯಾಯಿತು. ಆದರೆ, ನಿರೀಕ್ಷೆಯಂತೆ ನ್ಯಾನೋ ಕಾರು ಸಕ್ಸೆಸ್ ಆಗಲಿಲ್ಲ. ಬದಲಿಗೆ ಕಂಪನಿಗೆ ನಷ್ಟ ಉಂಟಾಯಿತು. ಈ ವಿಷಯವೇ ರತನ್ ಟಾಟಾ ಮತ್ತು ಸೈರಸ್ ಮಿಸ್ತ್ರಿ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು. ಭಾರೀ ನಷ್ಟದಲ್ಲಿರುವ ನ್ಯಾನೋ ಕಾರ್ ಉತ್ಪಾದನೆಯನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಮುಂದಾಗಿದ್ದ ಅಂದಿನ ಚೇರ್ಮನ್ ಸೈರಸ್ ಅವರಿಗೆ ರತನ್ ಟಾಟಾ ಒಪ್ಪಿಗೆ ನೀಡಲಿಲ್ಲ. ಮಂಡಳಿಯಿಂದ ಬೆಂಬಲ ಸಿಗಲಿಲ್ಲ. ಅಂತಿಮವಾಗಿ ಅವರು ಚೇರ್ಮನ್ ಹುದ್ದೆ ಜವಾಬ್ದಾರಿಯಿಂದ ಹೊರಬರಬೇಕಾಯಿತು

ಇದನ್ನೂ ಓದಿ | Cyrus Mistry | ಟಾಟಾ ಸಂಸ್ಥೆ ಮಾಜಿ ಚೇರ್ಮನ್‌ ಸೈರಸ್‌ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ವಿಧಿವಶ, ಮೋದಿ ಸಂತಾಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Public Sector Banks :ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಎಲ್ಒಸಿಗಳ (ಸುಸ್ತಿದಾರರ ವಿರುದ್ಧ ಬ್ಯಾಂಕುಗಳು ಹೊರಡಿಸಿದ) ಮೇಲೆ ಬ್ಯೂರೋ ಆಫ್ ಇಮಿಗ್ರೇಷನ್ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

VISTARANEWS.COM


on

Public Sector Banks
Koo

ಮುಂಬೈ: ವಿದೇಶದಲ್ಲಿರುವ ಸುಸ್ತಿ ಸಾಲಗಾರರ ವಿರುದ್ಧ ಲುಕ್ ಔಟ್ ನೋಟಿಸ್​ (LOC) ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ (Public Sector Banks) ಕಾನೂನಿನಲ್ಲಿ ಅಧಿಕಾರವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹೈಕೋರ್ಟ್​ ತೀರ್ಪಿನಿಂದಾಗಿ ಸಾಲ ಕಟ್ಟದೇ ವಿದೇಶಗಳಲ್ಲಿ ವಾಸವಿರುವವರಿಗೆ ನೀಡಲಾಗಿರುವ ಎಲ್ಲ ನೋಟಿಸ್​ಗಳು ರದ್ದಾಗಲಿವೆ.

ಸುಸ್ತಿ ಸಾಲಗಾರರ ವಿರುದ್ಧ ಲುಕ್​ಔಟ್​ ನೋಟಿಸ್​ ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳ ಅಧ್ಯಕ್ಷರಿಗೆ ಅಧಿಕಾರ ನೀಡುವಂಥ ಕೇಂದ್ರ ಸರ್ಕಾರ ಹೊರಡಿಸಿದ ಕಚೇರಿ ಜ್ಞಾಪಕ ಪತ್ರದ ಷರತ್ತು ಅಸಂವಿಧಾನಿಕ ಎಂದು ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲ ಆದಿತ್ಯ ಠಕ್ಕರ್ ಅವರು ಹೈಕೋರ್ಟ್ ಆದೇಶವನ್ನು ತಡೆಹಿಡಿಯಬೇಕೆಂದು ಕೋರಿದರು. ಆದರೆ ನ್ಯಾಯಪೀಠ ನಿರಾಕರಿಸಿತು.

ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಎಲ್ಒಸಿಗಳ (ಸುಸ್ತಿದಾರರ ವಿರುದ್ಧ ಬ್ಯಾಂಕುಗಳು ಹೊರಡಿಸಿದ) ಮೇಲೆ ಬ್ಯೂರೋ ಆಫ್ ಇಮಿಗ್ರೇಷನ್ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಯಾವುದೇ ಸುಸ್ತಿದಾರರ ವಿರುದ್ಧ ನ್ಯಾಯಮಂಡಳಿ ಅಥವಾ ಕ್ರಿಮಿನಲ್ ನ್ಯಾಯಾಲಯವು ವಿದೇಶಕ್ಕೆ ಪ್ರಯಾಣಿಸದಂತೆ ನಿರ್ಬಂಧಿಸುವ ಆದೇಶಗಳ ಮೇಲೆ ತನ್ನ ತೀರ್ಪು ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : Diamond Smuggling : ನೂಡಲ್ಸ್​ ಪ್ಯಾaಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

ಕೇಂದ್ರವು ಹೊರಡಿಸಿದ ಕಚೇರಿ ಜ್ಞಾಪಕ ಪತ್ರವು ಸಂವಿಧಾನಕ್ಕೆ ವಿರುದ್ಧವಾಗಿಲ್ಲವಾದರೂ, ಎಲ್ಒಸಿ ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕಿನ ಅಧ್ಯಕ್ಷರಿಗೆ ಅಧಿಕಾರ ನೀಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಕೇಂದ್ರದ ಕಚೇರಿ ಜ್ಞಾಪಕ ಪತ್ರವು 2018 ರಲ್ಲಿ ಮಾಡಿದ ತಿದ್ದುಪಡಿಯಲ್ಲಿ, “ಭಾರತದ ಆರ್ಥಿಕ ಹಿತದೃಷ್ಟಿಯಿಂದ” ಎಲ್ಒಸಿಗಳನ್ನು ನೀಡಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಅಧಿಕಾರ ನೀಡಿತ್ತು.

ಒಬ್ಬ ವ್ಯಕ್ತಿಯ ನಿರ್ಗಮನವು ದೇಶದ ಆರ್ಥಿಕ ಹಿತಾಸಕ್ತಿಗೆ ಹಾನಿಕಾರಕವಾಗಿದ್ದರೆ ಅವನು/ ಅವಳು ವಿದೇಶಕ್ಕೆ ಪ್ರಯಾಣಿಸುವುದನ್ನು ನಿರ್ಬಂಧಿಸುತ್ತದೆ ಎಂದು ಹೇಳಿತ್ತು “ಭಾರತದ ಆರ್ಥಿಕ ಹಿತಾಸಕ್ತಿ” ಎಂಬ ಪದಗಳನ್ನು ಯಾವುದೇ ಬ್ಯಾಂಕಿನ “ಆರ್ಥಿಕ ಹಿತಾಸಕ್ತಿಗಳೊಂದಿಗೆ” ತುಲನೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

Continue Reading

ಪ್ರಮುಖ ಸುದ್ದಿ

Look between H and L : ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್​ ಆದ H ಮತ್ತು L; ಏನಿದರ ಗಮ್ಮತ್ತು?

Look between H and L : ನಿಮ್ಮ ಕೀಬೋರ್ಡ್​​ನಲ್ಲಿ ಎಚ್ ಮತ್ತು ಎಲ್ ನಡುವೆ ನೋಡಿ” ಟ್ರೆಂಡ್ ಕೂಡ ಗೊಂದಲ ಸೃಷ್ಟಿಸಿತು. ಯಾಕೆಂದರೆ ಸ್ವಿಗ್ಗಿ, ಯೂಟ್ಯೂಬ್, ಬ್ಲಿಂಕಿಟ್ ಮತ್ತು ಇತರ ಬ್ರಾಂಡ್​ಗಳು ಕೂಡ ತಮ್ಮದೂ ಇರಲಿ ಎಂದು ಪೋಸ್ಟ್​​ ಮಾಡಿದವು. ಹೀಗಾಗಿ ವಿಷಯವೇನೆಂದು ತಿಳಿದುಕೊಳ್ಳುವುದು ಅಗತ್ಯ.

VISTARANEWS.COM


on

ook between H and L
Koo

ಬೆಂಗಳೂರು: ಮೇಣದ ಅರಮನೆಗೆ ಬೆಂಕಿ ಹಿಡಿದಷ್ಟೇ ವೇಗವಾಗಿ ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್ ಗಳು ಸೃಷ್ಟಿಯಾಗುತ್ತವೆ. ವ್ಯಕ್ತಿಯೊಬ್ಬರು ಶೇರ್ ಮಾಡುವ ಯಾವುದೊ ಒಂದು ಕಾನ್ಸೆಪ್ಟ್​ ಬೆಳೆಬೆಳೆದು ವಿಶ್ವ ವ್ಯಾಪಿಯಾಗುತ್ತದೆ. ಆ ವಿಷಯಕ್ಕೆ ತಲೆ, ಕಾಲು ಮತ್ತು ಬಾಲಗಳೂ ಸೇರಿಕೊಳ್ಳುತ್ತವೆ. ಮುಂದೆ ಅದು ಎಲ್ಲರ ಮನಸ್ಸನ್ನೂ ಗೆಲ್ಲುವ ಸೋಶಿಯಲ್​ ಮೀಡಿಯಾ ಟ್ರೆಂಡ್ ಆಗಿ ಉಳಿಯುತ್ತದೆ. ಅಂತೆಯೇ ಮಂಗಳವಾರ (ಏಪ್ರಿಲ್ 23ರಂದು) ಸೋಶಿಯಲ್​ ಮೀಟಿಯಾ ವೇದಿಕೆಯಾಗಿರುವ ಎಕ್ಸ್​​ನಲ್ಲಿ ಎಚ್​​ ಮತ್ತು ಎಲ್ ಮಧ್ಯೆ ನೋಡಿ (Look between H and L) ಟ್ರೆಂಡ್​ ಕಿಡಿ ಹಚ್ಚಿತ್ತು. ಎಲ್ಲಿ ನೋಡಿದರೂ ಇದೇ ರೀತಿಯ ಪೋಸ್ಟ್​ಗಳು ಕಾಣಿಸುತ್ತಿದ್ದವು. ಆರಂಭದಲ್ಲಿ ಪೋಸ್ಟ್​​ ನೋಡಿ ಗಾಬರಿ ಬಿದ್ದಿದ್ದರು ಹಲವರು. ಅರ್ಥ ಮಾಡಿಕೊಂಡ ಬಳಿಕ ಅದು ದೊಡ್ಡ ವಿನೋದವಾಗಿ ಮಾರ್ಪಾಡಾಯಿತು.

ಸೋಶಿಯಲ್​ ಮೀಡಿಯಾಗಳಲ್ಲಿ ಆಗಾಗ್ಗೆ ಮೀಮ್ ಗಳು, ವೀಡಿಯೊಗಳು ಮತ್ತು ನೆಟ್ಟಿಗರು ಹಂಚಿಕೊಳ್ಳುವ ವಿಷಯಗಳು ಸಮೃದ್ಧವಾಗಿರುತ್ತವೆ. ಆದಾಗ್ಯೂ, ಈ ಕೆಲವು ಸಂಗತಿಗಳ ಅರ್ಥದ ಬಗ್ಗೆ ತಿಳಿದಿಲ್ಲದ ಬಹಳಷ್ಟು ಜನರಿಗೆ ಇದೇನು ಅನಿಸುವುದು ಸಹಜ. ಅಂತೆಯೇ “ನಿಮ್ಮ ಕೀಬೋರ್ಡ್​​ನಲ್ಲಿ ಎಚ್ ಮತ್ತು ಎಲ್ ನಡುವೆ ನೋಡಿ” ಟ್ರೆಂಡ್ ಕೂಡ ಗೊಂದಲ ಸೃಷ್ಟಿಸಿತು. ಯಾಕೆಂದರೆ ಸ್ವಿಗ್ಗಿ, ಯೂಟ್ಯೂಬ್, ಬ್ಲಿಂಕಿಟ್ ಮತ್ತು ಇತರ ಬ್ರಾಂಡ್​ಗಳು ಕೂಡ ತಮ್ಮದೂ ಇರಲಿ ಎಂದು ಪೋಸ್ಟ್​​ ಮಾಡಿದವು. ಹೀಗಾಗಿ ವಿಷಯವೇನೆಂದು ತಿಳಿದುಕೊಳ್ಳುವುದು ಅಗತ್ಯ.

ಏನಿದು Look between H and L?

ನಿಮ್ಮ ಕಂಪ್ಯೂಟರ್ ಅಥವಾ ಮೊಬೈಲ್ ಕಿ ಪ್ಯಾಡ್​ನಲ್ಲಿ ಇಂಗ್ಲಿಷ್​ನ H ಮತ್ತು L ನಡುವೆ J ಮತ್ತು K ಇದೆ. ಹಾಗಾದರೆ ಜೆ.ಕೆ ಎಂದರೇನು? ಇಂಗ್ಲಿಷ್​ನಲ್ಲಿ Just Kidding ( ಕೇವಲ ತಮಾಷೆಗಾಗಿ) ಎಂಬ ಮಾತಿದೆ. ಅದನ್ನು ನೇರವಾಗಿ ಹೇಳುವ ಬದಲು Look between H and L ಟ್ರೆಂಡ್​ ಸೃಷ್ಟಿ ಮಾಡಲಾಗಿದೆ. ಅಂದ ಹಾಗೆ ಇದಕ್ಕೂ ಒಂದು ಕಾರಣವಿದೆ. ಇತ್ತೀಚೆಗೆ ಮಲಯಾಳಂನಲ್ಲಿ ‘ಪ್ರೇಮಾಲು’ ಎಂಬ ಸಿನಿಮಾ ಬಿಡುಗಡೆಯಾಗಿತ್ತು. ಅದು ಈಗ ಒಟಿಟಿಯಲ್ಲೂ ಲಭ್ಯ. ಅದಲ್ಲಿ ಭಗ್ನ ಪ್ರೇಮಿ ಹಾಗೂ ಐಟಿ ಕಂಪನಿಯೊಂದರ ಪ್ರಾಜೆಕ್ಟ್​ ಮ್ಯಾನೇಜರ್​ ಆದಿ ಎಂಬ ಪಾತ್ರವನ್ನು Just Kidding ಅನ್ನು ಪದೇ ಪದೆ ಬಳಸುತ್ತಾನೆ. ಗಂಭೀರವಾದ ವಿಷಯವನ್ನು ಹೇಳಿ just kidding ಎಂದು ಹೇಳುತ್ತಿದ್ದಾನೆ.

ಇದನ್ನೂ ಓದಿ: Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

ಇದೇ ವೇಳೆ Look Between T and O ಟ್ರೆಂಡ್​ ಕೂಡ ಆಗಿದೆ. ಇದು 2021ರಲ್ಲಿ ಆರಂಭಗೊಂಡಿತು. 4Chan ಎಂಬ ಚಿತ್ರ ಆಧಾರಿತ ವೆಬ್​​ ಸರಣಿಯದ್ದಾಗಿದೆ. ಕೀಬೋರ್ಡ್​​ನಲ್ಲಿ T ಮತ್ತು O ನಡುವಿನ Y, U ಮತ್ತು I ಅಕ್ಷರಗಳಿವೆ. ಇದು ಅನಿಮೆ ಸರಣಿಯ ಪಾತ್ರವಾದ Yui ಹೆಸರಾಗಿದೆ. ಇದು ತಮ್ಮ ಪ್ರೌಢ ಶಾಲೆಯ ಸಂಗೀತ ಕ್ಲಬ್ ಮೂಲಕ ಬ್ಯಾಂಡ್ ನುಡಿಸುವು ಹುಡುಗಿಯ ಕುರಿತದ್ದು.

ಬಹಳಷ್ಟು ಜನರು ಈ ಟ್ರೆಂಡ್​ ತಮ್ಮ ಪ್ರತಿಕ್ರಿಯೆಗಳನ್ನು ಸಹ ವ್ಯಕ್ತಪಡಿಸಿದರು. ಕೆಲವರು ಅದರ ಬಗ್ಗೆ ಗೊಂದಲಕ್ಕೊಳಗಾಗಿದ್ದರೆ ಇತರರು ಇದು “ಕಿರಿಕಿರಿ” ಎಂದು ಎಂದೂ ಕಾಮೆಂಟ್​ ಮಾಡಿದ್ದಾರೆ.

Continue Reading

ರಾಜಕೀಯ

Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಯಾವವು? ಇಲ್ಲಿದೆ ಅಂತಿಮ ಚಿತ್ರಣ

Lok Sabha Election 2024: ಏಕತೆಯನ್ನು ತೋರ್ಪಡಿಸಲು ದೇಶದ ಎರಡು ಬಲಿಷ್ಠ ಪಕ್ಷಗಳು ತನ್ನದೇ ಆದ ಮೈತ್ರಿ ಕೂಟವನ್ನು ರಚಿಸಿಕೊಂಡಿದೆ. ಈ ಬಾರಿ ಲೋಕಸಭೆ ಚುನಾವಣೆ- 2024ಕ್ಕೆ ಮುಂಚಿತವಾಗಿ ಎನ್ ಡಿಎ ಮತ್ತು ಕಾಂಗ್ರೆಸ್ ತನ್ನ ಸಾಮರ್ಥ್ಯ ತೋರ್ಪಡಿಸಲು ಮೈತ್ರಿಗೆ ಹೆಚ್ಚಿನ ಗಮನ ಹರಿಸಿ ಶಕ್ತಿ ಪ್ರದರ್ಶನ ಮಾಡಿವೆ. ಬಿಜೆಪಿ ಮತ್ತು ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಪಟ್ಟಿ ಇಲ್ಲಿದೆ.

VISTARANEWS.COM


on

By

Lok Sabha Election-2024
Koo

ಹೊಸದಿಲ್ಲಿ: ಲೋಕಸಭಾ ಚುನಾವಣೆ 2024ರಲ್ಲಿ (Lok Sabha Election 2024) ಈ ಬಾರಿ ದೇಶದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಪರಸ್ಪರ ಹೋರಾಡುತ್ತಿದ್ದು, ಸಣ್ಣ ಪಕ್ಷಗಳನ್ನು ತನ್ನ ತೆಕ್ಕೆಯೊಳಗೆ ಸೇರಿಸಿಕೊಂಡಿವೆ. ಹಿಂದಿನ ಚುನಾವಣೆಯಲ್ಲಿ ಎರಡು ಬಾರಿ ಅಧಿಕಾರಕ್ಕೆ ಏರಿರುವ ಎನ್‌ಡಿಎಯನ್ನು (NDA) ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ (congress) ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟವನ್ನು (India alliance) ರಚಿಸಲಾಗಿದೆ. ಅದೇ ರೀತಿ ಎನ್‌ಡಿಎ ಕೂಡ ತನ್ನ ಸಾಮರ್ಥ್ಯವನ್ನು ವೃದ್ಧಿಸಲು ಕೆಲವು ಪಕ್ಷಗಳನ್ನು ತನ್ನೊಳಗೆ ಸೇರಿಸಿಕೊಂಡಿದೆ.

ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾದ ಬಳಿಕ ಎನ್‌ಡಿಎ ಕೂಡ ಹಳೆಯ ಮತ್ತು ಹೊಸ ಘಟಕಗಳನ್ನು ಸೇರಿಸಿ ತನ್ನ ಸಾಮರ್ಥ್ಯವನ್ನು ವೃದ್ಧಿಸಿಕೊಂಡಿದೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ನವ ಭಾರತವನ್ನು (N-New India), ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ( D-Developed Nation) ಮಾಡಲು ಬಯಸುವ ಆಕಾಂಕ್ಷೆಯುಳ್ಳ ಭಾರತದ ಜನರು (A-Aspiration of People of India) ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂಡಿಯಾ ಮೈತ್ರಿ ಕೂಟ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಘೋಷಿದ್ದರು.


ಇದನ್ನೂ ಓದಿ: CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ


ಇಂಡಿಯಾ

2024ರ ಲೋಕಸಭೆ ಚುನಾವಣೆಗಾಗಿ ವಿರೋಧ ಪಕ್ಷಗಳು ಒಗ್ಗೂಡಿ ರಚಿಸಿದ ಮೈತ್ರಿ ಕೂಟ. 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು, ಸಂವಿಧಾನವನ್ನು ರಕ್ಷಿಸುವುದು, ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯನ್ನು ಉತ್ತೇಜಿಸುವುದು ಮತ್ತು ಜಾತ್ಯತೀತತೆಯನ್ನು ಎತ್ತಿಹಿಡಿಯುವುದು ಇದರ ಮುಖ್ಯ ಉದ್ದೇಶ ಎಂದು ಘೋಷಿಸಿದೆ.

ಇಂಡಿಯಾ ಒಕ್ಕೂಟದಲ್ಲಿವೆ 26 ಪಕ್ಷಗಳು

ಕಾಂಗ್ರೆಸ್ ನೇತೃತ್ವದಲ್ಲಿ 26 ವಿರೋಧ ಪಕ್ಷಗಳು ಒಗ್ಗೂಡಿವೆ. ಅವುಗಳೆಂದರೆ:

  • – ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ)
  • – ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)
  • – ಆಮ್ ಆದ್ಮಿ ಪಕ್ಷ (ಎಎಪಿ)
  • – ರಾಷ್ಟ್ರೀಯ ಜನತಾ ದಳ (RJD)
  • – ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)
  • – ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಶರದ್ ಪವಾರ್ ಬಣ
  • – ಶಿವಸೇನೆ (UBT)
  • – ಸಮಾಜವಾದಿ ಪಕ್ಷ (SP)
  • – ರಾಷ್ಟ್ರೀಯ ಲೋಕದಳ (RLD)
  • – ಅಪ್ನಾ ದಳ (ಕಾಮೆರವಾಡಿ)
  • – ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಕಾನ್ಫರೆನ್ಸ್‌ (NC)
  • – ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)
  • – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ)
  • – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)
  • – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್
  • – ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)
  • – ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)
  • – ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ)
  • – ಕೊಂಗುನಾಡು ಮಕ್ಕಳ್ ದೇಸಿಯ ಕಚ್ಚಿ (KMDK)
  • – ಮನಿತನೇಯ ಮಕ್ಕಳ್ ಕಚ್ಚಿ (ಎಂಎಂಕೆ)
  • – ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)
  • – ಕೇರಳ ಕಾಂಗ್ರೆಸ್ (ಎಂ)
  • – ಕೇರಳ ಕಾಂಗ್ರೆಸ್ (ಜೋಸೆಫ್)


ಎನ್‌ಡಿಎ ಬಣದಲ್ಲಿ 38 ಪಕ್ಷಗಳು

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆಡಳಿತಾರೂಢ ಎನ್‌ಡಿಎಯ 38 ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಭಾಗವಹಿಸುತ್ತಿದೆ. ಮೈತ್ರಿಯಲ್ಲಿ ಭಾರತೀಯ ಜನತಾ ಪಕ್ಷದ ಬಹುದೊಡ್ಡ ಶಕ್ತಿಯಾಗಿದೆ.

ಎನ್‌ಡಿಎ ಘಟಕದಲ್ಲಿ ಇವರು ಪಕ್ಷಗಳು ಹೀಗಿವೆ:

-ಭಾರತೀಯ ಜನತಾ ಪಕ್ಷ

  • – ಶಿವಸೇನೆ (ಏಕನಾಥ್ ಶಿಂಧೆ ಬಣ)
  • – ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಎನ್‌ಸಿಪಿ (ಅಜಿತ್ ಪವಾರ್ ಬಣ)
  • – ಜನತಾ ದಳ ಸಂಯುಕ್ತ (ನಿತೀಶ್‌ ಕುಮಾರ್‌)
  • – ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಪಶುಪತಿ ಕುಮಾರ್ ಪರಸ್ ಬಣ)
  • – ಅಪ್ನಾ ದಲ್ (ಸೋನೆಲಾಲ್)
  • -ನ್ಯಾಷನಲ್ ಪೀಪಲ್ಸ್ ಪಾರ್ಟಿ
  • – ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ನೈಫಿಯು ರಿಯೊ)
  • – ಜಾರ್ಖಂಡ್ ವಿದ್ಯಾರ್ಥಿಗಳ ಒಕ್ಕೂಟ
  • – ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ
  • – ಮಿಜೋ ನ್ಯಾಷನಲ್ ಫ್ರಂಟ್‌
  • – ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ
  • – ನಾಗಾ ಪೀಪಲ್ಸ್ ಫ್ರಂಟ್
  • – ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ),
  • -ಅಸೋಮ್ ಗಣ ಪರಿಷತ್
  • – ಪಟ್ಟಾಲಿ ಮಕ್ಕಳ್ ಕಚ್ಚಿ
  • – ತಮಿಳು ಮಾನಿಲ ಕಾಂಗ್ರೆಸ್
  • – ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್
  • – ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ (ಓಂ ಪ್ರಕಾಶ್ ರಾಜಭರ್)
  • – ಶಿರೋಮಣಿ ಅಕಾಲಿ ದಳ (ಸಂಯುಕ್ತ)
  • – ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ
  • – ಜನನಾಯಕ ಜನತಾ ಪಾರ್ಟಿ
  • – ಪ್ರಹಾರ್ ಜನಶಕ್ತಿ ಪಾರ್ಟಿ
  • – ರಾಷ್ಟ್ರೀಯ ಸಮಾಜ ಪಕ್ಷ
  • – ಜನ ಸುರಾಜ್ಯ ಶಕ್ತಿ ಪಾರ್ಟಿ
  • – ಕುಕಿ ಪೀಪಲ್ಸ್ ಅಲೈಯನ್ಸ್ (ಮಣಿಪುರ)
  • – ಯುನೈಟೆಡ್ ಡೆಮಾಕ್ರಟಿಕ್ ಪಕ್ಷ
  • – ಹಿಲ್ ಸ್ಟೇಟ್ ಪೀಪಲ್ಸ್, ಡೆಮಾಕ್ರಟಿಕ್ ಪಾರ್ಟಿ
  • – ನಿಶಾದ್ ಪಾರ್ಟಿ
  • – ಅಖಿಲ ಭಾರತ ಎನ್ ಆರ್ ಕಾಂಗ್ರೆಸ್
  • – ಹಿಂದೂಸ್ತಾನ್ ಅವಾಮ್ ಮೋರ್ಚಾ
  • – ಜನಸೇನಾ ಪಕ್ಷ
  • – ಹರಿಯಾಣ ಲೋಕ್‌ಹಿತ್ ಪಾರ್ಟಿ
  • -ಭಾರತ ಧರ್ಮ ಜನ ಸೇನೆ
  • -ಕೇರಳ ಕಾಮರಾಜ್ ಕಾಂಗ್ರೆಸ್
  • – ಪುಟ್ಟಿಯ ತಮಿಳಗಂ
  • – ಲೋಕ ಜನಶಕ್ತಿ ಪಕ್ಷ
  • – ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್
Continue Reading

ಕ್ರೀಡೆ

Fantasy Gaming : 8ನೇ ಕ್ಲಾಸ್​ ಫೇಲ್​, ಕ್ರಿಕೆಟ್​ ಗೊತ್ತಿಲ್ಲ; ಆದ್ರೂ ಒಲಿಯಿತು ಕ್ರಿಕೆಟ್​ ಫ್ಯಾಂಟಸಿ ಗೇಮ್​ನಲ್ಲಿ 1.5 ಕೋಟಿ ರೂ!

Fantasy Gaming: ನನಗೆ ತುಂಬಾ ಸಂತೋಷವಾಯಿತು. ನಂಬಲಾಗಲಿಲ್ಲ. ಆರಂಭದಲ್ಲಿ ಇದು ವಂಚನೆ ಎಂದು ಭಾವಿಸಿದೆ. ಅಪ್ಲಿಕೇಶನ್ ಗಳಲ್ಲಿ ಎಂದಿಗೂ ಹಣ ಬರುವುದಿಲ್ಲ ಎಂದು ನಂಬಿದ್ದೆ .ನಾನು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತೇನೆ. ನಡುವೆ ನಾನು ಕಳೆದ ಆರು ತಿಂಗಳಿನಿಂದ ಫ್ಯಾಂಟಸಿ ಗೇಮಿಂಗ್ ಆಡುತ್ತಿದ್ದೇನೆ. ಭಾನುವಾರ, ನನಗೆ ಯಾವುದೇ ಕೆಲಸವಿರಲಿಲ್ಲ ಎಂದು ಓಜಾ ಹೇಳಿದ್ದಾನೆ.

VISTARANEWS.COM


on

Fantasy Gaming
Koo

ಬೆಂಗಳೂರು: ಅದೃಷ್ಟ ಯಾವಾಗ ಬಾಗಿಲು ಬಡಿದು ಮನೆಯೊಳಗೆ ನುಗ್ಗುತ್ತದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಯಾಕೆಂದರೆ ಅದು ಅನಿರೀಕ್ಷಿತ, ಅಚ್ಚರಿ ಮತ್ತು ಅಪರೂಪ. ಇಂಥದ್ದೇ ಒಬ್ಬ ಅದೃಷ್ಟ ಶಾಲಿಯ ಪರಿಚಯವನ್ನು ನಿಮಗೆ ಮಾಡಿಸಬೇಕಾಗಿದೆ. ಅವರೇ ಬಿಹಾರದ ದೀಪು ಓಜಾ. ಭಾನುವಾರ ನಡೆದ ಕೆಕೆಆರ್ ಮತ್ತು ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಗೇಮಿಂಗ್ ಅಪ್ಲಿಕೇಶನ್​ನಲ್ಲಿ (Fantasy Gaming) ಐಪಿಎಲ್ ಫ್ಯಾಂಟಸಿ ಗೇಮಿಂಗ್ (Fantasy Gaming) ಆಡುವ ಮೂಲಕ ಬಿಹಾರದ ಅರ್ರಾ ಜಿಲ್ಲೆಯ ಕೊಹ್ಡಾ ಗ್ರಾಮದ ಈತ 1.5 ಕೋಟಿ ರೂಪಾಯಿ ಬಹುಮಾನ ಗೆದ್ದಿದ್ದಾನೆ. ಅವರು ಪಂದ್ಯದಲ್ಲಿ ಆಂಡ್ರೆ ರಸೆಲ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿ ಅದೃಷ್ಟಶಾಲಿ ಎನಿಸಿಕೊಂಡಿದ್ದಾರೆ. ಅಂದ ಹಾಗೆ ಓಜಾ 8 ನೇ ತರಗತಿಯಲ್ಲಿ ಫೇಲ್​, ಹಾಗೂ ಕಾರ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಾನೆ. ಕ್ರಿಕೆಟ್​ನ ಗಂಧ ಗಾಳಿ ಗೊತ್ತಿಲ್ಲ.

ಕ್ರಿಕೆಟ್ ಬಗ್ಗೆ ನನಗೆ ಏನೂ ತಿಳಿದಿಲ್ಲ ಎಂಬುದಾಗಿ ಓಜಾ ಹೇಳಿದ್ದಾನೆ. ನನಗೆ ಬೇರೆ ಕೆಲಸವಿಲ್ಲದ ಕಾರಣ ಆಕಸ್ಮಿಕವಾಗಿ ತಂಡವನ್ನು ಆಯ್ಕೆ ಮಾಡಿದೆ ಎಂದಿದ್ದಾನೆ. “ನನಗೆ ತುಂಬಾ ಸಂತೋಷವಾಯಿತು. ನಂಬಲಾಗಲಿಲ್ಲ. ಆರಂಭದಲ್ಲಿ ಇದು ವಂಚನೆ ಎಂದು ಭಾವಿಸಿದೆ. ಅಪ್ಲಿಕೇಶನ್ ಗಳಲ್ಲಿ ಎಂದಿಗೂ ಹಣ ಬರುವುದಿಲ್ಲ ಎಂದು ನಂಬಿದ್ದೆ .ನಾನು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತೇನೆ. ನಡುವೆ ನಾನು ಕಳೆದ ಆರು ತಿಂಗಳಿನಿಂದ ಫ್ಯಾಂಟಸಿ ಗೇಮಿಂಗ್ ಆಡುತ್ತಿದ್ದೇನೆ. ಭಾನುವಾರ, ನನಗೆ ಯಾವುದೇ ಕೆಲಸವಿರಲಿಲ್ಲ. ಹೀಗಾಗಿ ತಂಡವನ್ನು ರಚಿಸಿದೆ. ಇದು ಕೆಕೆಆರ್ ಮತ್ತು ಆರ್​​ಸಿಬಿ ನಡುವಿನ ಪಂದ್ಯ ಎಂದು ಎಂದು ಓಜಾ ಹೇಳಿದ್ದಾನೆ.

ಇದನ್ನೂ ಓದಿ: Mohammad Rizwan : ಪಾಕ್​ ಬ್ಯಾಟರ್​ನನ್ನು ಬ್ರಾಡ್ಮನ್ ಎಂದು ಹೊಗಳಿದ ನಾಯಕ; ಗೊಳ್ಳೆಂದು ನಗುತ್ತಿರುವ ನೆಟ್ಟಿಗರು!

ಸಿಕ್ಕಿರುವ ದುಡ್ಡನ್ನು ಏನು ಮಾಡಬೇಕೆಂದು ಆತ ಇನ್ನೂ ನಿರ್ಧರಿಸಿಲ್ಲವಂತೆ. ಅಂದ ಹಾಗೆ ಫ್ಯಾಂಟಿಸಿ ಗೇಮ್​ಗಳು ಲೀಗ್​ ಕ್ರಿಕೆಟ್​ ಬೆಳವಣಿಗೆ ಬಳಿಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕ್ರಿಕೆಟ್​ ನೋಡುವ ಜತೆಗೆ ಆಟ ಆರಂಭಕ್ಕೆ ಮೊದಲು ತಂಡಗಳನ್ನು ರಚಿಸಿ ಬಹುಮಾನಗಳನ್ನು ಗೆಲ್ಲುತ್ತಿದ್ದಾರೆ. ಫ್ಯಾಂಟಸಿ ಗೇಮ್​ಗಳು ಒಂದರ್ಥದಲ್ಲಿ ಬದಲಾದ ಜಗತ್ತಿನಲ್ಲಿ ಹೊಸ ಸ್ಪರ್ಧಾ ವೇದಿಕೆಯಾಗಿದೆ. ಆದರೆ, ಅಪಾಯಕಾರಿಯೂ ಹೌದು. ಆ್ಯಪ್​​ಗಳಲ್ಲಿ ಆಡುವಾಗ ಅದಕ್ಕಾಗಿ ನಿರ್ದಿಷ್ಟ ಮೊತ್ತವನ್ನು ಕಷ್ಟಬೇಕಾಗುತ್ತದೆ. ಒಂದರ್ಥದಲ್ಲಿ ಕಾನೂನುಬದ್ಧ ಜೂಜು. ಹಣದಾಸೆಗೆ ಬೀಳುವ ಕೆಲವರು ಇದೇ ವೇದಿಕೆಗಳ ಮೂಲಕ ಲಕ್ಷಾಂತರ ರೂಪಾಯಿ ನಷ್ಟ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಆಗಿವೆ. ಮದ್ಯಪಾನದ ರೀತಿಯಲ್ಲಿಯೇ ಫ್ಯಾಂಟಸಿ ಗೇಮ್​ಗಳ ಜಾಹೀರಾತು ನೀಡುವಾಗ ಮುಂದಾಗುವ ಅಪಾಯಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ.

Rohit Sharma : ಇಶಾನ್​ ಕಿಶನ್ ಜತೆ ಮಗುವಿನಂತೆ ಕ್ರಿಕೆಟ್​ ಆಡಿದ ರೋಹಿತ್​ ಶರ್ಮಾ

ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ (Rajastan Royals ) ಮತ್ತು ಮುಂಬೈ ಇಂಡಿಯನ್ಸ್ (Mumbai Indians ) ನಡುವಿನ ಬಹುನಿರೀಕ್ಷಿತ ಐಪಿಎಲ್​ 2024ರ (IPL 2024) ಮುಖಾಮುಖಿಗೆ ಸಿದ್ಧತೆ ನಡೆಸುವ ವೇಳೆ ರೋಹಿತ್ ಶರ್ಮಾ (Rohit Sharma) ಅವರ ಬ್ಯಾಟಿಂಗ್​ ನೆಟ್ಟಿಗರ ಗಮನ ಸೆಳೆದಿದೆ. ಅವರ ಇಶಾನ್ ಕಿಶನ್​ಗೆ ವಿಕೆಟ್​ಕೀಪಿಂಗ್​ ಅಭ್ಯಾಸ ಮಾಡಲು ಮಕ್ಕಳಂತೆ ಬ್ಯಾಟ್ ಹಿಡಿದು ಬೀಸಿದ ಪ್ರಸಂಗ ನಡೆಯಿತು. ಏಪ್ರಿಲ್ 22 ರ ಸೋಮವಾರ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಮುಖಾಮುಖಿಗೆ ಮುಂಚಿತವಾಗಿ ಇವರಿಬ್ಬರು ಕ್ಯಾಚಿಂಗ್ ಅಭ್ಯಾಸದಲ್ಲಿ ತೊಡಗಿದ್ದರು. ಅದು ಸಣ್ಣ ಮಕ್ಕಳು ಆಡುವಂತೆ ಕಂಡು ಬಂತು.

ಮುಂಬೈ ಇಂಡಿಯನ್ಸ್ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರೋಹಿತ್ ಶರ್ಮಾ ಇಶಾನ್ ಕಿಶನ್ ಅವರ ವಿಕೆಟ್ ಕೀಪಿಂಗ್ ಕೌಶಲವನ್ನು ಹೆಚ್ಚಿಸಲು ಬ್ಯಾಟ್​ನಿಂದ ಸಣ್ಣ ಸಣ್ಣ ಹೊಡೆತಗಳನ್ನು ಹೊಡೆಯುತ್ತಿದ್ದರು. ಅದನ್ನು ಇಶಾನ್​ ಹಿಡಿಯುತ್ತಿದ್ದರು. ಈ ಅಭ್ಯಾಸದಿಂದ ಇಬ್ಬರಿಗೂ ಸಾಕಷ್ಟು ಲಾಭವಾಗುತ್ತದೆ.

ಇಶಾನ್ ರೋಹಿತ್ ಕಡೆಗೆ ಚೆಂಡುಗಳನ್ನು ಎಸೆದಾಗ ಇಬ್ಬರು ಆಟಗಾರರ ನಡುವಿನ ಸ್ನೇಹವು ಸ್ಪಷ್ಟವಾಯಿತು. ರೋಹಿತ್ ಶರ್ಮಾ ಕಿಶನ್​​ಗೆ ಕಡಿಮೆ ಅಂತರ ಕ್ಯಾಚ್​ಗಳನ್ನು ನೀಡುವಲ್ಲಿ ಅತಿ ಹೆಚ್ಚು ಉತ್ಸಾ ಹ ತೋರಿದ್ದರು. ಹಿರಿಯ ಆಟಗಾರರು ಯುವ ಪ್ರತಿಭೆಗಳಿಗೆ ಮಾರ್ಗದರ್ಶನ ನೀಡುವ ಇಂತಹ ನಿದರ್ಶನಗಳು ಮುಂಬೈ ಇಂಡಿಯನ್ಸ್ ನಂಥ ತಂಡಗಳಲ್ಲಿ ಮಾತ್ರ ಕಾಣಿಸುತ್ತದೆ. ಉಳಿದಂತೆ ತರಬೇತುದಾರರು ಹಾಗೂ ಸಹಾಯಕ ಸಿಬ್ಬಂದಿ ಇಂಥದ್ದಕ್ಕೆಲ್ಲ ನೆರವಾಗುತ್ತಾರೆ.

Continue Reading
Advertisement
Public Sector Banks
ಪ್ರಮುಖ ಸುದ್ದಿ14 mins ago

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Union Minister Pralhad Joshi visit Sri Nuggikeri Anjaneya Swamy Temple in dharwad
ಕರ್ನಾಟಕ16 mins ago

Pralhad Joshi: ಸಚಿವ ಪ್ರಲ್ಹಾದ್‌ ಜೋಶಿಗೆ ಶ್ರೀ ಆಂಜನೇಯ ಸ್ವಾಮಿಯ ಆಶೀರ್ವಾದ; ತಾವರೆ ಹೂ ರೂಪದಲ್ಲಿ ಪ್ರಸಾದ!

Kanguva Budget
ಸಿನಿಮಾ18 mins ago

Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

ook between H and L
ಪ್ರಮುಖ ಸುದ್ದಿ45 mins ago

Look between H and L : ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್​ ಆದ H ಮತ್ತು L; ಏನಿದರ ಗಮ್ಮತ್ತು?

Lok Sabha Election-2024
ರಾಜಕೀಯ46 mins ago

Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಯಾವವು? ಇಲ್ಲಿದೆ ಅಂತಿಮ ಚಿತ್ರಣ

Neha Murder Case How can a mobile photo be leaked when accused Fayaz is in jail
ಹುಬ್ಬಳ್ಳಿ1 hour ago

Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

Money Guide
ಮನಿ-ಗೈಡ್1 hour ago

Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Lok Sabha Election 2024
ಕರ್ನಾಟಕ1 hour ago

Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

Virat Kohli
ಪ್ರಮುಖ ಸುದ್ದಿ2 hours ago

Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

The Legend of Hanuman
ಸಿನಿಮಾ2 hours ago

The Legend of Hanuman: ಹನುಮ ಜಯಂತಿಯಂದೇ ‘ದಿ ಲೆಜೆಂಡ್ ಆಫ್ ಹನುಮಾನ್’ ಸೀಸನ್ 4 ಘೋಷಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ17 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌