ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಬಾಳ ಸಂಗಾತಿ ಡಾ. ಗುರುಪ್ರೀತ್‌ ಕೌರ್‌: ಯಾರೀ ಚೆಲುವೆ, ಮೊದಲ ಭೇಟಿ ಎಲ್ಲಿ? - Vistara News

ದೇಶ

ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಬಾಳ ಸಂಗಾತಿ ಡಾ. ಗುರುಪ್ರೀತ್‌ ಕೌರ್‌: ಯಾರೀ ಚೆಲುವೆ, ಮೊದಲ ಭೇಟಿ ಎಲ್ಲಿ?

ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಸಿಂಗ್‌ ಮಾನ್‌ ಮನೆಯಲ್ಲಿ ಅಮ್ಮ ಹೇಳಿದ ಹುಡುಗಿಯನ್ನೇ ಮದುವೆಯಾಗಿದ್ದಾರೆ. ಹಾಗಿದ್ದರೆ ಯಾರು ಈ ಗುರುಪ್ರೀತ್‌ ಕೌರ್‌? ಅವರೂ ರಾಜಕೀಯಕ್ಕೆ ಬರ್ತಾರಾ?

VISTARANEWS.COM


on

ಭಗವಂತ್‌ ಮಾನ್‌ ಮದುವೆ ಸಂಭ್ರಮ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಮತ್ತು ಡಾ. ಗುರುಪ್ರೀತ್‌ ಕೌರ್‌ ಹೊಸ ಬಾಳಿನ ಹೊಸಿಲು ತುಳಿದು ಸಂಭ್ರಮಿಸಿದ್ದಾರೆ. ಗುರುವಾರ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಅತ್ಯಂತ ಆತ್ಮೀಯರ ಉಪಸ್ಥಿತಿಯಲ್ಲಿ ವೈವಾಹಿಕ ಜೀವನವನ್ನು ಪ್ರವೇಶಿಸಿದರು. ಹಾಗಿದ್ದರೆ, ಮಾನ್‌ ಅವರ ಬಾಳ ಸಂಗಾತಿಯಾಗಿರುವ ಡಾ. ಗುರುಪ್ರೀತ್‌ ಯಾರು? ಅವರಿಬ್ಬರ ಮೊದಲ ಭೇಟಿ ಎಲ್ಲಾಯ್ತು? ಈ ನವ ಜೋಡಿಯ ಕುತೂಹಲಕಾರಿ ಮಾಹಿತಿ ಇಲ್ಲಿದೆ.

೧. ಗುರುಪ್ರೀತ್‌ ಕೌರ್‌ ಅವರು ಮೂಲತಃ ಹರಿಯಾಣದ ಕುರುಕ್ಷೇತ್ರದ ಪಿಹೋವಾ ಗ್ರಾಮದವರು. ಪ್ರಸಕ್ತ ಪಂಜಾಬ್‌ನ ರಾಜಪುರದಲ್ಲಿ ನೆಲೆಸಿದ್ದಾರೆ. ಕೃಷಿ ಹಿನ್ನೆಲೆಯ ಕುಟುಂಬದ ಮೂರನೇ ಮಗಳು ಈಕೆ. ಇಡೀ ಕುಟುಂಬವೇ ಈ ಹರಿಯಾಣದಿಂದ ರಾಜಪುರಕ್ಕೆ ಶಿಫ್ಟ್‌ ಆಗಿದೆ.

ಮದುವೆ ಮುನ್ನ ನೇರಳೆ ದಿರಸಿನಲ್ಲಿ ಮಿಂಚಿದ ಗುರುಪ್ರೀತ್‌

೨. ಅಂಬಾಲಾ ಜಿಲ್ಲೆಯ ಮುಲ್ಲಾನಾದಲ್ಲಿರುವ ಮಹರ್ಷಿ ಮಾರ್ಕಾಂಡೇಯ ವಿವಿಯ ಮೆಡಿಕಲ್‌ ಕಾಲೇಜಿನಲ್ಲಿ ಅವರು ವೈದ್ಯಕೀಯ ಪದವಿ ಪಡೆದಿದ್ದಾರೆ.

೩. ಗುರುಪ್ರೀತ್‌ ಅವರು ತುಂಬ ಹಿಂದಿನಿಂದಲೇ ಭಗವಂತ್‌ ಮಾನ್‌ ಕುಟುಂಬದ ಜತೆ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಮಾನ್‌ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ದಿನವೂ ಉಪಸ್ಥಿತರಿದ್ದರು.

೪. ಗುರುಪ್ರೀತ್‌ ಸಿಂಗ್‌ ಅವರಿಗೆ ಮಾನ್‌ ಕುಟುಂಬದ ಪರಿಚಯ ಆಗಿರುವುದು ಒಂದೂವರೆ ವರ್ಷದ ಹಿಂದೆ. ಮಾನ್‌ ಅವರ ತಾಯಿಯೇ ಮಗನಿಗೆ ಈ ವಧುವನ್ನು ಹುಡುಕಿದ್ದಾರಂತೆ.

೫. ಡಾ. ಗುರುಪ್ರೀತ್‌ ಅವರಿಗೆ ರಾಜಕೀಯದಲ್ಲಿ ಭಾರಿ ಆಸಕ್ತಿ ಇದ್ಯಂತೆ. ಆದರೆ, ಮದುವೆ ಆಗುವವರೆಗೆ ಅದೆಲ್ಲ ಬೇಡ ಅಂದಿದ್ದರಂತೆ ಅಪ್ಪ-ಅಮ್ಮ. ಈಗ ಮಾನ್‌ ಅವರ ಜತೆಗೆ ಮದುವೆ ಆಗಿರುವುದರಿಂದ ರಾಜಕೀಯದ ಬಾಗಿಲು ತೆರೆಯಬಹುದು.

೬. ಮಾನ್‌ ಅವರ ವಿಚಾರದಲ್ಲಿ ಏನಿಷ್ಟ ಅಂತ ಕೇಳಿದರೆ, ಅವರು ತೆಗೆದುಕೊಳ್ಳುವ ದೃಢ ಮತ್ತು ಧೈರ್ಯವಂತ ನಿರ್ಧಾರಗಳು ಎನ್ನುತ್ತಾರೆ ಗುರುಪ್ರೀತ್.‌ ಸ್ಟಾಂಡ್‌ ಅಪ್‌ ಕಾಮಿಡಿಯನ್‌ ಆಗಿಯೂ ಇಷ್ಟಪಡುತ್ತಾರಂತೆ ಮಾನ್‌ ಅವರನ್ನು.

೭. ಭಗವಂತ್‌ ಮಾನ್‌ಗೆ ಇದು ಎರಡನೇ ಮದುವೆ. ೨೦೧೫ರ ಮಾರ್ಚ್‌ನಲ್ಲಿ ಅವರು ತಮ್ಮ ಮೊದಲ ಪತ್ನಿ ಇಂದ್ರಪ್ರೀತ್‌ ಕೌರ್‌ಗೆ ವಿಚ್ಛೇದನ ನೀಡಿದ್ದರು. ಇಬ್ಬರೂ ಪರಸ್ಪರ ಸಮ್ಮತಿಯಿಂದಲೇ ದೂರವಾಗಿದ್ದರು.

೮. ಭಗವಂತ್‌ ಮಾನ್‌ ಅವರಿಗೆ ಮೊದಲ ಪತ್ನಿಯಲ್ಲಿ ಇಬ್ಬರು ಮಕ್ಕಳಿದ್ದಾರೆ. ೨೧ ವರ್ಷ ಮಗಳು ಸೀರತ್‌ ಕೌರ್‌ ಮಾನ್‌ ಮತ್ತು ೧೭ ವರ್ಷದ ಮಗ ದಿಲ್ಶಾನ್‌ ಸಿಂಗ್‌ ಮಾನ್‌. ಇಬ್ಬರೂ ಅಮೆರಿಕದಲ್ಲಿದ್ದಾರೆ. ಮಾರ್ಚ್‌ನಲ್ಲಿ ನಡೆದ ಪ್ರಮಾಣವಚನ ಸ್ವೀಕಾರಕ್ಕೆ ಅವರೂ ಬಂದಿದ್ದರು.

ಮದುಮಗನಾಗಿ ಮಿಂಚಿದ ಭಗವಂತ್

೯. ಇಂದ್ರಪ್ರೀತ್‌ ಕೌರ್‌ ಅವರು ಅಮೆರಿಕದಲ್ಲಿ ಉದ್ಯೋಗಿಯಾಗಿದ್ದಾರೆ. ಅವರು ಮಾನ್‌ ಅವರನ್ನೂ ಅಲ್ಲಿಗೆ ಬರುವಂತೆ ಒತ್ತಾಯಿಸುತ್ತಿದ್ದರು. ಆದರೆ, ರಾಜಕೀಯ ಮಹತ್ವಾಕಾಂಕ್ಷೆ ಹೊಂದಿದ್ದ ಮಾನ್‌ ಇದಕ್ಕೆ ಒಪ್ಪಿರಲಿಲ್ಲ. ಜತೆಯಾಗಿ ಬಾಳುವುದು ಕಷ್ಟ ಎಂದು ಅರಿತು ಅವರಿಬ್ಬರು ಬೇರೆ ಬೇರೆಯಾಗಿದ್ದರು.

10. ಸಂಗ್ರೂರ್‌ನ ಸತೌಜ್‌ ಗ್ರಾಮದ ಭಗವಂತ್‌ ಮಾನ್‌ ಅವರಿಗೆ ಏಳು ವರ್ಷ ಇದ್ದಾಗಲೇ ಅವರ ಅಣ್ಣ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದರು.

೧೧. ಸ್ಟಾಂಡ್‌ ಅಪ್‌ ಕಾಮೆಡಿಯನ್‌ ಆಗಿದ್ದ ಮಾನ್‌ ೧೭ ವರ್ಷದಲ್ಲೇ ಸೆಲೆಬ್ರಿಟಿ ಸ್ಥಾನಮಾನ ಪಡೆದಿದ್ದರು.

೧೨. ೨೦೧೧-೧೨ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು ಮಾನ್‌. ಬಳಿಕ ೨೦೧೪ರಲ್ಲೂ ಸ್ಪರ್ಧಿಸಿದಾಗ ಪತ್ನಿ ಇಂದ್ರಜಿತ್‌ ಕೌರ್‌ ಆಕ್ಷೇಪಿಸಿದ್ದರು. ನಾನು ಸೋತರೆ ಅಮೆರಿಕಕ್ಕೆ ಬಂದಿರ್ತೇನೆ ಅಂದಿದ್ದರು ಮಾನ್‌. ಅದರೆ, ಗೆದ್ದುಬಿಟ್ಟರು! ಕೊನೆಗೆ ಪತ್ನಿಯನ್ನೇ ಬಿಡಬೇಕಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Maldives: ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

VISTARANEWS.COM


on

Maldives
Koo

ಮಾಲೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೆಲ ತಿಂಗಳ ಹಿಂದೆ ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ (Lakshadweep) ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ (Maldives Tourism) ಭಾರಿ ಹೊಡೆತ ಬಿದ್ದಿದೆ. ಇಷ್ಟಾದರೂ, ಚೀನಾ ಯೋಜನೆ, ದುಡ್ಡಿನ ಮುಲಾಜಿನಿಂದಾಗಿ ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೈನಿಕರನ್ನು ವಾಪಸ್‌ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, “ಭಾರತವು ಮಾಲ್ಡೀವ್ಸ್‌ಗೆ ನೀಡಿರುವ ಮೂರು ಯುದ್ಧವಿಮಾನಗಳನ್ನು ನಿರ್ವಹಿಸುವ ಪೈಲಟ್‌ಗಳೇ ನಮ್ಮಲ್ಲಿಲ್ಲ” ಎಂಬುದಾಗಿ ಮಾಲ್ಡೀವ್ಸ್‌ ತಿಳಿಸಿದೆ. ಇದು ಮಾಲ್ಡೀವ್ಸ್‌ (Maldives) ಸೇನೆಯ ಅದಕ್ಷತೆಗೆ ನಿದರ್ಶನ ಎಂದು ಹೇಳಲಾಗುತ್ತಿದೆ.

ಮಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಸ್ಸನ್‌ ಮೌಮೂನ್‌, “ಭಾರತ ನೀಡಿದ ಮೂರು ವಿಮಾನಗಳನ್ನು ಹಾರಿಸುವ ಕೌಶಲವು ನಮ್ಮ ಪೈಲಟ್‌ಗಳಿಗೆ ಇಲ್ಲ. ಅಂತಹ ಪರವಾನಗಿ ಹೊಂದಿರುವ ಪೈಲಟ್‌ಗಳು ಮಾಲ್ಡೀವ್ಸ್‌ ಸೇನೆಯಲ್ಲಿ ಇಲ್ಲ” ಎಂದು ಹೇಳಿದ್ದಾರೆ. ಇದುವರೆಗೆ ಮಾಲ್ಡೀವ್ಸ್‌ನಲ್ಲಿದ್ದ ಭಾರತದ ಯೋಧರು ವಿಮಾನಗಳನ್ನು ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಯೋಧರು ಭಾರತಕ್ಕೆ ವಾಪಸಾಗಿದ್ದಾರೆ. ಭಾರತವು ಅವುಗಳನ್ನು ದೇಣಿಗೆ ನೀಡಿದ ಕಾರಣ ಯುದ್ಧವಿಮಾನಗಳನ್ನು ಅಲ್ಲಿಯೇ ಬಿಟ್ಟಿದ್ದಾರೆ. ಆದರೆ, ಇವುಗಳನ್ನು ನಿಭಾಯಿಸುವ ಕೌಶಲವೂ ಮಾಲ್ಡೀವ್ಸ್‌ ವಾಯುಪಡೆ ಪೈಲಟ್‌ಗಳಿಗೆ ಇಲ್ಲ ಎಂಬುದು ಬಯಲಾಗಿದೆ.

ಭಾರತೀಯರ ಭೇಟಿ ಕುಸಿತ

ಮಾಲ್ಡೀವ್ಸ್‌ಗೆ ತೆರಳುವ ಪ್ರವಾಸಿಗರಲ್ಲಿ ಭಾರತೀಯರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಬಾಯ್ಕಾಟ್‌ ಅಭಿಯಾನದ ಬಳಿಕ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2024ರ ಏಪ್ರಿಲ್‌ 10ರವರೆಗೆ ಮಾಲ್ಡೀವ್ಸ್‌ಗೆ 6.63 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಚೀನಾದ 71 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಬ್ರಿಟನ್‌, ರಷ್ಯಾ, ಇಟಲಿ, ಜರ್ಮನಿ ಹಾಗೂ ಭಾರತದ ಪ್ರವಾಸಿಗರಿದ್ದಾರೆ.

ಮಾಲ್ಡೀವ್ಸ್‌ ಪ್ರವಾಸೋದ್ಯಮ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2023ರಲ್ಲಿ ಭಾರತದಿಂದ ಮಾಲ್ಡೀವ್ಸ್‌ಗೆ 2,09,198 ಜನ ಭೇಟಿ ನೀಡಿದರೆ, ರಷ್ಯಾದಿಂದ 2,09,146 ಪ್ರವಾಸಿಗರು ಭೇಟಿ ನೀಡಿದ್ದಾರೆ. ಇನ್ನು, ಚೀನಾದಿಂದ ಕಳೆದ ವರ್ಷ 1,87,118 ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ಕಾರಣಕ್ಕಾಗಿಯೇ ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಂಘವು, ಭಾರತದ ವಿರುದ್ಧ ಸಚಿವರು ನೀಡಿದ ಉದ್ಧಟತನದ ಹೇಳಿಕೆಯನ್ನು ಖಂಡಿಸಿದೆ. ಅಲ್ಲದೆ, ಭಾರತದ ಮನವೊಲಿಸಲು ಯತ್ನಿಸುತ್ತಿದೆ.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಇದನ್ನೂ ಓದಿ: Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Continue Reading

ದೇಶ

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Rahul Gandhi:ರಾಯ್‌ ಬರೇಲಿಯಲ್ಲಿ ಇಂದು ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಆಪ್ತ ಕೆ.ಎಲ್‌ ಶರ್ಮಾ ಜೊತೆ ಭಾಗಿಯಾದ ರಾಹುಲ್‌ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಭಾಷಣದ ಕೊನೆಯಲ್ಲಿ ಕಾರ್ಯಕರ್ತರು ರಾಹುಲ್‌ ಗಾಂಧಿಯವರನ್ನು ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಗ ವೇದಿಕೆಯಲ್ಲಿದ್ದ ಪ್ರಿಯಾಂಕಾ, ರಾಹುಲ್‌ ಬಳಿಗೆ ಬಂದು ಸಭಿಕರು ಏನೋ ಕೇಳುತ್ತಿದ್ದಾರೆ ನೋಡಿ ಅಂದಿದ್ದಾರೆ. ತಕ್ಷಣ ರಾಹುಲ್‌ ಏನು ಎಂದು ಪ್ರಶ್ನಿಸಿದ್ದಾರೆ. ಆಗ ಕಾರ್ಯಕರ್ತರು ನಿಮ್ಮ‌ ಮದುವೆ ಯಾವಾಗ ಎಂದು ಮತ್ತೊಮ್ಮೆ ಕೇಳಿದ್ದಾರೆ. ಆಗ ನಗುತ್ತಾ ಉತ್ತರಿಸಿದ ಅಬ್‌ ಜಲ್ದೀ ಹೀ ಕರ್ನೀ ಪಡೇಗಿ(ಬೇಗ ಮದುವೆ ಆಗ್ಲೇ ಬೇಕಿದೆ) ಎಂದು ಹೇಳಿದ್ದಾರೆ.

VISTARANEWS.COM


on

Rahul Gandhi
Koo

ರಾಯ್‌ಬರೇಲಿ: ಸದಾ ರಾಜಕೀಯದಲ್ಲಿ ಸಕ್ರಿಯರಾಗಿರುವ ಕಾಂಗ್ರೆಸ್‌ ಮುಖಂಡ(Congress Leader) ರಾಹುಲ್‌ ಗಾಂಧಿ(Rahul Gandhi) ಇನ್ನೂ ಎಲಿಜಿಬಲ್‌ ಬ್ಯಾಚುರಲ್‌ ಆಗಿಯೇ ಉಳಿದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರು ಯಾವಾಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ ಎಂಬ ಪ್ರಶ್ನೆ ಅವರ ಬೆಂಬಲಿಗರಲ್ಲಿ ಇದ್ದೇ ಇದೆ. ಆದರೂ ಅದ್ಯಾವುದಕ್ಕೂ ತಲೆಗೆಡಿಸಿಕೊಳ್ಳದ ರಾಹುಲ್‌ ಆ ಬಗ್ಗೆ ಮೌನ ತಳೆದಿದ್ದರು. ಈ ಬಾರಿ ಲೋಕಸಭಾ ಚುನಾವಣೆ(Lok Sabha Election 2024)ಯಲ್ಲಿ ರಾಯ್‌ ಬರೇಲಿಯಿಂದಲೂ ಕಣಕ್ಕಿಳಿದಿರುವ ರಾಹುಲ್‌ ಗಾಂಧಿ ಇಂದು ಭಾಗಿಯಾದ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ತಮ್ಮ ಮದುವೆ ಬಗ್ಗೆ ಮೌನ ಮುರಿದಿದ್ದಾರೆ.

ರಾಯ್‌ ಬರೇಲಿಯಲ್ಲಿ ಇಂದು ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಆಪ್ತ ಕೆ.ಎಲ್‌ ಶರ್ಮಾ ಜೊತೆ ಭಾಗಿಯಾದ ರಾಹುಲ್‌ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಭಾಷಣದ ಕೊನೆಯಲ್ಲಿ ಕಾರ್ಯಕರ್ತರು ರಾಹುಲ್‌ ಗಾಂಧಿಯವರನ್ನು ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಗ ವೇದಿಕೆಯಲ್ಲಿದ್ದ ಪ್ರಿಯಾಂಕಾ, ರಾಹುಲ್‌ ಬಳಿಗೆ ಬಂದು ಸಭಿಕರು ಏನೋ ಕೇಳುತ್ತಿದ್ದಾರೆ ನೋಡಿ ಅಂದಿದ್ದಾರೆ. ತಕ್ಷಣ ರಾಹುಲ್‌ ಏನು ಎಂದು ಪ್ರಶ್ನಿಸಿದ್ದಾರೆ. ಆಗ ಕಾರ್ಯಕರ್ತರು ನಿಮ್ಮ‌ ಮದುವೆ ಯಾವಾಗ ಎಂದು ಮತ್ತೊಮ್ಮೆ ಕೇಳಿದ್ದಾರೆ. ಆಗ ನಗುತ್ತಾ ಉತ್ತರಿಸಿದ ಅಬ್‌ ಜಲ್ದೀ ಹೀ ಕರ್ನೀ ಪಡೇಗಿ(ಬೇಗ ಮದುವೆ ಆಗ್ಲೇ ಬೇಕಿದೆ) ಎಂದು ಹೇಳಿದ್ದಾರೆ.

ರಾಯ್ ಬರೇಲಿಯಲ್ಲಿ ರಾಹುಲ್‌ ಭಾವುಕ ಮಾತು

ರಾಯ್‌ಬರೇಲಿಯ ಮಹಾರಾಜ್‌ಗಂಜ್‌ನಲ್ಲಿ ಭಾವನಾತ್ಮಕವಾಗಿ ಮಾತನಾಡಿದ ರಾಹುಲ್‌ ಗಾಂಧಿ, ರಾಯ್‌ ಬರೇಲಿಯ ಜೊತೆ ನಮಗೆ 100 ವರ್ಷಗಳ ನಂಟಿದೆ. ಕೆಲವು ದಿನಗಳ ಹಿಂದೆ ನಾನು ನನ್ನ ಅಮ್ಮನ ಜೊತೆ ಕುಳಿತು ಮಾತನಾಡುವಾಗ ನನಗೆ ಇಬ್ಬರು ತಾಯಂದಿರು ಒಬ್ಬರು ಸೋನಿಯಾ ಮತ್ತೊಬ್ಬರು ಇಂದಿರಾ ಗಾಂಧಿ ಎಂದು ಹೇಳಿದ್ದೆ. ಆ ಮಾತು ನನ್ನ ತಾಯಿಗೆ ಇಷ್ಟ ಆಗಿರಲಿಲ್ಲ. ನಾನು ಆಮೇಲೆ ನಿಧಾನವಾಗಿ ಅವರಿಗೆ ವಿವರಿಸಿದೆ.. ತನ್ನ ಮಕ್ಕಳಿಗೆ ಸರಿಯಾದ ದಾರಿ ತೋರಿಸಿ ಅವರನ್ನು ರಕ್ಷಿಸುವವಳೇ ನಿಜವಾದ ತಾಯಿ. ನನ್ನ ಇಬ್ಬರು ತಾಯಂದಿರೂ ನನಗೆ ಅದನ್ನು ಮಾಡಿದ್ದಾರೆ. ಈ ಕ್ಷೇತ್ರ ನನ್ನ ಇಬ್ಬರೂ ತಾಯಂದಿರಿಗೂ ಕರ್ಮಭೂಮಿ. ಹೀಗಾಗಿಯೇ ನಾನು ರಾಯ್‌ ಬರೇಲಿಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದರು

ಇದನ್ನೂ ಓದಿ:Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

ಬಿಜೆಪಿ ಮತ್ತು ಆರ್‌ ಎಸ್‌ಎಸ್‌ ಸಂವಿಧಾನವನ್ನು ಕೊನೆಗೊಳಿಸುವುದಾಗಿ ಘೋಷಿಸಿದೆ. ಅವರು ಅಧಿಕಾರಕ್ಕೆ ಬಂದ ಕೂಡಲೇ ಸಂವಿಧಾನವನ್ನೇ ಬದಲಿಸುತ್ತೇವೆ ಎಂದಿದ್ದರು. ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ನಾನು ಘೋಷಿಸುತ್ತೇನೆ ಎಂದರು

Continue Reading

ರಾಜಕೀಯ

Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Karnataka Politics: ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ರಾಜಕೀಯ ದ್ರವೀಕರಣ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.

VISTARANEWS.COM


on

Karnataka Politics Operation Kamala is not possible says CM Siddaramaiah
Koo

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ (Karnataka Politics) ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ (Operation Kamala) ಮಾಡಲು ಸಾಧ್ಯವಿಲ್ಲ. ಏಕೆಂದರೆ ಈ ಬಾರಿ ಎನ್‌ಡಿಎ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಎಂದು ಸ್ಪಷ್ಟನೆ ನೀಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ (Maharashtra CM Eknath Shinde) ಹೇಳಿಕೆ ಬಗ್ಗೆ ಸಿಎಂ ಈ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ? ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ರಾಜಕೀಯ ದ್ರವೀಕರಣ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಉತ್ತರಿಸಿದರು.

ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ

ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಎಲ್ಲ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.

ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ರಾಜ್ಯ ಕಾಂಗ್ರೆಸ್ (Karnataka Congress) ಸರ್ಕಾರದ ಪತನಕ್ಕೆ (Karnataka politics) ಸಮಯ ಸನ್ನಿಹಿತವಾಗಿದೆ. ಈ ಸಂದರ್ಭದಲ್ಲಿ ತನ್ನ ನೆರವನ್ನು ರಾಜ್ಯದ ಬಿಜೆಪಿ (BJP) ನಾಯಕರು ಕೋರಿದ್ದಾರೆ ಎಂಬ ಸುಳಿವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Maharashtra CM Eknath Shinde) ಬಿಟ್ಟುಕೊಟ್ಟಿದ್ದಾರೆ. ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಮಾತನಾಡಿ ಅವರು ಈ ಸೂಚನೆ ನೀಡಿದ್ದಾರೆ.

ಅತ್ತ ಬಿಜೆಪಿ ನಾಯಕರಿಂದಲೂ ಪದೇ ಪದೆ ಸರ್ಕಾರ ಬೀಳಿಸುವ ಕುರಿತ ಹೇಳಿಕೆ ಬರುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ಒಂದು ಸಭೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಅವರು ಮಾತನಾಡುತ್ತಿದ್ದರು. “ಕರ್ನಾಟಕ ಸರ್ಕಾರ ಬೀಳುವುದು ಖಚಿತ” ಎಂದು ಏಕನಾಥ ಶಿಂಧೆ ಹೇಳಿದ್ದಾರೆ. “ಈ ಕುರಿತು ನನ್ನ‌ ಅನುಭವ ಬೇಕು ಅಂತ ಹೇಳಿದ್ದಾರೆ” ಎಂದು ಶಿಂಧೆ ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ಚರ್ಚೆಯಾದ ಗುಟ್ಟನ್ನು ಅವರು ಈ ಮೂಲಕ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ. “ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ ಹೋಗಿದ್ದೆ. ಕರ್ನಾಟಕದಲ್ಲಿಯೂ ʼಆಪರೇಶನ್‌ ನಾಥʼ ನಡೆಸುವುದಿದೆ ಎಂದು ಅಲ್ಲಿನ ನಾಯಕರು ಹೇಳಿದರು. ಹಾಗೆಂದರೇನು ಎಂದು ವಿಚಾರಿಸಿದಾಗ, ಮಹಾರಾಷ್ಟ್ರದಲ್ಲಿ ಹಿಂದಿನ ಸರ್ಕಾರ ಪತನ ಮಾಡಿದಂತೆ ಇಲ್ಲಿಯೂ ಮಾಡುವುದಿದೆ ಎಂದಿದ್ದರು. ಅದಕ್ಕೆ ನಿಮ್ಮ ಅನುಭವ ಅಗತ್ಯ ಎಂದಿದ್ದರುʼʼ ಎಂದು ಶಿಂಧೆ ಹೇಳಿದ್ದಾರೆ. ಇದಕ್ಕಾಗಿ ಚುನಾವಣೆ ಮುಗಿದ ಮೇಲೆ ಮತ್ತೆ ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದಿದ್ದೇನೆ ಎಂದವರು ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡುತ್ತ ರಾಜ್ಯ ವಿಪಕ್ಷ ನಾಯಕ ಆರ್. ಅಶೋಕ್ ಅವರು, “ಈ ಸರ್ಕಾರಕ್ಕೆ ಆಯುಷ್ಯವಿಲ್ಲ” ಎಂದಿದ್ದರು. ಅದಕ್ಕೂ ಮೊದಲು ಬೆಳಗಾವಿಯಲ್ಲಿ “ಈ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ಬೀಳುವುದು ಖಚಿತ” ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಇದೀಗ ಶಿಂಧೆ ಹೇಳಿಕೆ ಇನ್ನಷ್ಟು ಕುತೂಹಲ ಮೂಡಿಸಿದೆ.

ಆದರೆ, ಈ ಹೇಳಿಕೆಗಳ ಅಸಲಿಯತ್ತಿನ ಬಗ್ಗೆ ಅನುಮಾನ ಮೂಡುವಂತಿದೆ. ಸದ್ಯ ಕಾಂಗ್ರೆಸ್‌ ವಿಧಾನಸಭೆಯಲ್ಲಿ 136 ಸ್ಥಾನ ಹೊಂದಿದ್ದು, ಬಹುಮತ ಹೊಂದಿದೆ. ಒಟ್ಟು 224 ಶಾಸಕ ಸ್ಥಾನಗಳಲ್ಲಿ ಬಿಜೆಪಿ ಕೇವಲ 66 ಸ್ಥಾನ ಹೊಂದಿದ್ದು, ಜೆಡಿಎಸ್‌ 19 ಶಾಸಕ ಬಲ ಹೊಂದಿದೆ. ಎರಡೂ ಪಕ್ಷಗಳು ಒಟ್ಟಾದರೂ 85 ಸ್ಥಾನಗಳು ಆಗುತ್ತವೆ. ಇದು ಬಹುಮತದ ಹತ್ತಿರಕ್ಕೂ ಬರುವುದಿಲ್ಲ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಬೀಳಿಸುವುದು ಅಷ್ಟೊಂದು ಸುಲಭವಲ್ಲ.

ಹಾಗಾದರೆ ಇದು ಕೇವಲ ರಾಜಕೀಯ ಹೇಳಿಕೆಯಾ? ಇಲ್ಲದಿದ್ದರೆ 45 ಶಾಸಕರನ್ನು ಸೆಳೆದು ಸರ್ಕಾರ ಪತನ ಮಾಡುವುದು ಅಷ್ಟೊಂದು ಸುಲಭವಾ? ಅತೃಪ್ತ ಶಾಸಕರನ್ನು ಸೆಳೆದು ಸರ್ಕಾರ ಬೀಳಿಸುವ ಸರ್ಕಸ್ ಶುರು ಮಾಡುತ್ತಾರಾ? ಸಿಎಂ ಆಗುವ ಕನಸು ಕಾಣುತ್ತಿರುವ ನಾಯಕನಿಗೆ ಬಿಜೆಪಿ ಗಾಳ ಹಾಕಲಿದೆಯಾ? ರಾಜ್ಯದಲ್ಲೂ ಒಬ್ಬ ಶಿಂಧೆಯನ್ನು ಕಾಂಗ್ರೆಸ್‌ನಲ್ಲಿ ಬಿಜೆಪಿ ಹುಟ್ಟು ಹಾಕಲಿದೆಯಾ? ಹಾಗಿದ್ದರೆ ಅಂಥವರು ಯಾರು? ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ದೆಹಲಿಯಲ್ಲಿ ಅಧಿಕಾರ ಹಿಡಿದರೆ ರಾಜ್ಯದಲ್ಲೂ ಕಾಂಗ್ರೆಸ್‌ನೊಳಗೆ ಬಂಡಾಯ ಖಚಿತವಾ? ರಾಜ್ಯ ಕಾಂಗ್ರೆಸ್‌ನಲ್ಲಿ ಶಿಂಧೆಗಾಗಿ ಹುಡುಕಾಟ ನಡೆದಿದೆಯಾ? ಮುಂತಾದ ಪ್ರಶ್ನೆಗಳು ಈಗ ಎದ್ದಿವೆ.

ಇದನ್ನೂ ಓದಿ: Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ 2019ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದವು. ಬಿಜೆಪಿ 105 ಸ್ಥಾನಗಳನ್ನು ಹಾಗೂ ಶಿವಸೇನೆ 56 ಸ್ಥಾನಗಳನ್ನು ಗೆದ್ದಿದ್ದವು. ಸರ್ಕಾರ ರಚನೆಯ ಸಂದರ್ಭದಲ್ಲಿ ಬಿರುಕು ಉಂಟಾಗಿತ್ತು. ಬಳಿಕ ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಸೇರಿ ಸರ್ಕಾರ ರಚಿಸಿದ್ದವು. ನಂತರ ಶಿವಸೇನೆ ನಾಯಕ ಏಕನಾಥ ಶಿಂಧೆ ಮೂರನೇ ಎರಡರಷ್ಟು ಶಾಸಕರ ಜೊತೆಗೆ ಹೊರಬಿದ್ದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರು. ಇದರಿಂದ ಮಹಾ ವಿಕಾಸ್‌ ಅಘಾಡಿ ಸರ್ಕಾರ ಪತನವಾಗಿ ಬಿಜೆಪಿ- ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಎನ್‌ಸಿಪಿಯ ಅಜಿತ್‌ ಪವಾರ್‌ ಕೂಡ ಇದಕ್ಕೆ ಕೈ ಜೋಡಿಸಿದ್ದರು.

Continue Reading

ದೇಶ

Swati Maliwal: ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲೇ ಆಪ್‌ ಸಂಸದೆ ಸ್ವಾತಿ ಮೇಲೆ ಹಲ್ಲೆ!

Swati Maliwal: ವೈಭವ್‌ ಕುಮಾರ್‌ ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿಯಾಗಿದ್ದಾರೆ. ಇವರು ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಸ್ವಾತಿ ಮಾಲಿವಾಲ್‌ ಕರೆಯಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Swati Maliwal
Koo

ನವದೆಹಲಿ: ರಾಜ್ಯಸಭೆ ಆಪ್‌ ಸದಸ್ಯೆ, ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಾಲಿವಾಲ್‌ (Swati Maliwal) ಅವರ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ನಿವಾಸದಲ್ಲಿಯೇ ಹಲ್ಲೆ ನಡೆದಿದೆ ಎಂದು ದೆಹಲಿ ಪೊಲೀಸರು (Delhi Police) ತಿಳಿಸಿದ್ದಾರೆ. “ದೆಹಲಿ ಮುಖ್ಯಮಂತ್ರಿ ನಿವಾಸದ ಸಿವಿಲ್‌ ಲೈನ್‌ನಿಂದಲೇ ಕರೆ ಬಂದಿದ್ದು, ಸ್ವಾತಿ ಮಾಲಿವಾಲ್‌ ಅವರ ಹೆಸರಿನಲ್ಲಿ ಹಲ್ಲೆ ಕುರಿತು ಮಾಹಿತಿ ನೀಡಲಾಗಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ಬೆಳಗ್ಗೆ 9.34ರ ಸುಮಾರಿಗೆ ಪಿಎಸ್‌ ಸಿವಿಲ್‌ ಲೈನ್‌ಗಳಿಂದ ಮೊದಲ ಕರೆ ಬಂತು. ಮಹಿಳೆಯೊಬ್ಬರು ಕರೆ ಮಾಡಿ, ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಿದರು. ಇದಾದ ಬಳಿಕ, ಸಂಸದೆ ಮಾಲಿವಾಲ್‌ ಅವರು ಸಿವಿಲ್‌ ಲೈನ್‌ಗೆ ಬಂದರು. ನಾನು ದೂರು ನೀಡುತ್ತೇನೆ ಎಂಬುದಾಗಿ ತಿಳಿಸಿದರು. ನಂತರ ಪೊಲೀಸರ ತಂಡವು ದೆಹಲಿ ಸಿಎಂ ನಿವಾಸದ ಬಳಿ ತೆರಳಿ ಸ್ವಾತಿ ಮಾಲಿವಾಲ್‌ ಅವರನ್ನು ಪೊಲೀಸ್‌ ಸ್ಟೇಷನ್‌ಗೆ ಕರೆದುಕೊಂಡು ಹೋದರು. ಶಿಷ್ಟಾಚಾರದ ಪ್ರಕಾರ ದೆಹಲಿ ಪೊಲೀಸರು ಅನುಮತಿ ಇಲ್ಲದೆ ದೆಹಲಿ ಸಿಎಂ ನಿವಾಸದೊಳಗೆ ಹೋಗುವಂತಿರಲಿಲ್ಲ. ಅದಕ್ಕಾಗಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಲಾಯಿತು” ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಬೆಳಗ್ಗೆ ಎರಡು ಕರೆಗಳು ಬಂದಿದ್ದು, 9.30ರ ಸುಮಾರಿಗೆ ಬಂದ ಕರೆಯಲ್ಲಿ ದೆಹಲಿ ಸಿಎಂ ಅವರ ಆಪ್ತ ವೈಭವ್‌ ಕುಮಾರ್‌ ಅವರಿಂದಲೇ ಹಲ್ಲೆ ನಡೆಸಲಾಗಿದೆ” ಎಂಬ ಮಾಹಿತಿ ನೀಡಲಾಯಿತು ಎಂದಿದ್ದಾರೆ. ಆದಾಗ್ಯೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ವೈಭವ್‌ ಕುಮಾರ್‌ ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿಯಾಗಿದ್ದಾರೆ. ಇವರು ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಸ್ವಾತಿ ಮಾಲಿವಾಲ್‌ ಕರೆಯಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ವಾಗ್ದಾಳಿ

ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಾಗ್ದಾಳಿ ನಡೆಸಿದೆ. “ಆಮ್‌ ಆದ್ಮಿ ಪಕ್ಷದಲ್ಲಿ ನಾರಿ ಶಕ್ತಿಯು ಸುರಕ್ಷಿತವಾಗಿಲ್ಲ. ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆಗೇ ದೆಹಲಿ ಸಿಎಂ ನಿವಾಸದಲ್ಲಿ ರಕ್ಷಣೆ ಇಲ್ಲದಿದ್ದರೆ, ಅವರ ಮೇಲೆ ಹಲ್ಲೆ ನಡೆಯುತ್ತದೆ ಎಂದಾದರೆ, ಸಾಮಾನ್ಯ ಜನರ ಪಾಡೇನು? ಇದರಿಂದಾಗಿ ಆಮ್‌ ಆದ್ಮಿ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಬಯಲಾಗಿದೆ” ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಟೀಕಿಸಿದ್ದಾರೆ. ಆದಾಗ್ಯೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸ್ವಾತಿ ಮಾಲಿವಾಲ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Swati Maliwal: ತಂದೆಯಿಂದಲೇ ನನ್ನ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಹೇಳಿಕೆ

Continue Reading
Advertisement
Prajwal Revanna Case
ಕರ್ನಾಟಕ6 mins ago

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Pushpa 2 Allu Arjun fan recreates hook step on graduation day
ಟಾಲಿವುಡ್6 mins ago

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

IPL 2024
ಪ್ರಮುಖ ಸುದ್ದಿ11 mins ago

IPL 2024 : ಮೈದಾನದಿಂದಲೇ ಅನುಷ್ಕಾಗೆ ಕೈ ಸನ್ನೆ ಮಾಡಿದ ಕೊಹ್ಲಿ; ಇಲ್ಲಿದೆ ವಿಡಿಯೊ

Maldives
ದೇಶ22 mins ago

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Rahul Gandhi
ದೇಶ34 mins ago

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Health Tips Kannada
ಆರೋಗ್ಯ40 mins ago

Health Tips Kannada: ಕಣ್ಣಿನ ಕೆಳಗಿನ ಕಪ್ಪು ಕಲೆ ನಿವಾರಿಸುವುದು ಹೇಗೆ?

Gautam Gambhir
ಪ್ರಮುಖ ಸುದ್ದಿ50 mins ago

Gautam Gambhir : ಕೊಹ್ಲಿ ಜತೆಗಿನ ಜಗಳವಲ್ಲ, ಇನ್ನೊಂದು ವಿಚಾರದ ಬಗ್ಗೆ ಗಂಭೀರ್​ಗೆ ಸಿಕ್ಕಾಪಟ್ಟೆ ಪಶ್ಚಾತಾಪವಿದೆ

Karnataka Politics Operation Kamala is not possible says CM Siddaramaiah
ರಾಜಕೀಯ1 hour ago

Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Ujjaini Sri Marulasiddeshwara Rathotsava
ವಿಜಯನಗರ1 hour ago

Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

Swati Maliwal
ದೇಶ1 hour ago

Swati Maliwal: ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲೇ ಆಪ್‌ ಸಂಸದೆ ಸ್ವಾತಿ ಮೇಲೆ ಹಲ್ಲೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ10 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ12 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ22 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ23 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ23 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌