Manish Sisodia: ಮನೀಷ್‌ ಸಿಸೋಡಿಯಾ ನಿರ್ವಹಿಸುತ್ತಿದ್ದ 18 ಖಾತೆಗಳ ಜವಾಬ್ದಾರಿ ಯಾರಿಗೆ? - Vistara News

ದೇಶ

Manish Sisodia: ಮನೀಷ್‌ ಸಿಸೋಡಿಯಾ ನಿರ್ವಹಿಸುತ್ತಿದ್ದ 18 ಖಾತೆಗಳ ಜವಾಬ್ದಾರಿ ಯಾರಿಗೆ?

Manish Sisodia: ಮನೀಷ್‌ ಸಿಸೋಡಿಯಾ ರಾಜೀನಾಮೆಯಿಂದ ಅರವಿಂದ್‌ ಕೇಜ್ರಿವಾಲ್‌ ಸಂಪುಟದ ಹಲವು ಖಾತೆಗಳು ಬಾಕಿ ಉಳಿದಿವೆ. ಹಾಗಾಗಿ, ಅವುಗಳನ್ನು ಇಬ್ಬರು ಸಚಿವರಿಗೆ ನೀಡಲು ಕೇಜ್ರಿವಾಲ್‌ ತೀರ್ಮಾನಿಸಿದ್ದಾರೆ.

VISTARANEWS.COM


on

Economic offenders Manish Sisodia Mallya and others will get unique code why-how
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್‌ ‌ಸಚಿವ ಸಂಪುಟದ ಇಬ್ಬರು ಸದಸ್ಯರು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ನಡೆದಿರುವ ಆರೋಪದಲ್ಲಿ ಬಂಧಿತರಾಗಿರುವ ಮನೀಷ್ ಸಿಸೋಡಿಯಾ (Manish Sisodia) ಹಾಗೂ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ಜೈಲುಪಾಲಾಗಿರುವ ಸತ್ಯೇಂದರ್‌ ಸಿಂಗ್‌ ಜೈನ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮನೀಷ್‌ ಸಿಸೋಡಿಯಾ ನಿಭಾಯಿಸುತ್ತಿದ್ದ 18 ಖಾತೆಗಳನ್ನು ಕೇಜ್ರಿವಾಲ್‌ ಅವರು ಕೈಲಾಶ್‌ ಗೆಹ್ಲೋಟ್‌ ಹಾಗೂ ರಾಜಕುಮಾರ್‌ ಆನಂದ್‌ ಅವರಿಗೆ ವಹಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಗೃಹ, ಹಣಕಾಸು, ಶಿಕ್ಷಣ, ಪಿಡಬ್ಲ್ಯೂಡಿ, ಅಬಕಾರಿ, ಜಾಗೃತ ದಳ, ಕಾರ್ಮಿಕ ಇಲಾಖೆ, ಉದ್ಯೋಗ ಖಾತೆ, ಪ್ರವಾಸೋದ್ಯಮ ಸೇರಿ 18 ಖಾತೆಗಳನ್ನು ಸಿಸೋಡಿಯಾ ನಿಭಾಯಿಸುತ್ತಿದ್ದರು. ಈ ಖಾತೆಗಳನ್ನು ಹೆಚ್ಚುವರಿಯಾಗಿ ಕೈಲಾಶ್‌ ಗೆಹ್ಲೋಟ್‌ ಹಾಗೂ ರಾಜಕುಮಾರ್‌ ಆನಂದ್‌ ಅವರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಸತ್ಯೇಂದರ್‌ ಜೈನ್‌ ಅವರಿಗೆ ನೀಡಲಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಯಾರಿಗೆ ನೀಡಲು ತೀರ್ಮಾನಿಸಿದ್ದಾರೆ ಎಂಬುದು ತಿಳಿದುಬಂದಿಲ್ಲ.

ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿರುವ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಗಂಭೀರ ಆರೋಪ ಕೇಳಿಬಂದಿರುವ ಕಾರಣ ಸಿಬಿಐ ಅಧಿಕಾರಿಗಳು ಮನೀಷ್‌ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಅಲ್ಲದೆ, ಸಿಬಿಐ ಬಂಧನ ಪ್ರಶ್ನಿಸಿ ಮನೀಷ್‌ ಸಿಸೋಡಿಯಾ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

ಇದನ್ನೂ ಓದಿ: Manish Sisodia Resigns: ಬಂಧನದ ಬೆನ್ನಲ್ಲೇ ಡಿಸಿಎಂ ಸ್ಥಾನಕ್ಕೆ ಮನೀಷ್‌ ಸಿಸೋಡಿಯಾ ರಾಜೀನಾಮೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Terrorist Attack : ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ: ನಾಲ್ವರು ವಾಯುಪಡೆ ಸಿಬ್ಬಂದಿಗೆ ಗಾಯ

ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಶಹಸಿತಾರ್ ಬಳಿಯ ಸಾಮಾನ್ಯ ಪ್ರದೇಶದ ವಾಯುನೆಲೆಯೊಳಗೆ ವಾಹನಗಳನ್ನು ಸುರಕ್ಷಿತಗೊಳಿಸಲಾಗಿದೆ. ಸೇನಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.

VISTARANEWS.COM


on

Terrorist Attack
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ಭಾರಿ ಗುಂಡಿನ ದಾಳಿ ನಡೆಸಿದ (Terrorist Attack) ಪರಿಣಾಮ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶಕ್ಕೆ ಇನ್ನಷ್ಟು ಸೇನಾ ಪಡೆಯನ್ನು ಕಳುಹಿಸಲಾಗಿದ್ದು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ.

ಕಳೆದ ವರ್ಷ ಸೇನೆಯ ಮೇಲೆ ಸರಣಿ ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾದ ಈ ಪ್ರದೇಶದಲ್ಲಿ ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ವಾಹನಗಳ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಶಹಸಿತಾರ್ ಬಳಿಯ ಸಾಮಾನ್ಯ ಪ್ರದೇಶದ ವಾಯುನೆಲೆಯೊಳಗೆ ವಾಹನಗಳನ್ನು ಸುರಕ್ಷಿತಗೊಳಿಸಲಾಗಿದೆ. ಸೇನಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

ಈ ದಾಳಿಯಲ್ಲಿ ಯಾವುದೇ ಹಾನಿ ಅಥವಾ ಸಾವುನೋವು ವರದಿಯಾಗಿಲ್ಲ. ಗಾಯಗೊಂಡ ಸೈನಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಎರಡು ವಾರದ ಹಿಂದೆ ಉಗ್ರನ ದಾಳಿಗೆ ಸರ್ಕಾರಿ ನೌಕರ ಬಲಿಯಾಗಿದ್ದರು

ಎರಡು ವಾರದ ಹಿಂದೆ ಜಮ್ಮು-ಕಾಶ್ಮೀರ (Jammu and Kashmir)ದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿತ್ತು . ಭಯೋತ್ಪಾದಕನ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. (Terrorist Attack). ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಗುಂಡಿನ ದಾಳಿಗೆ ಸರ್ಕಾರಿ ನೌಕರ ಮೊಹಮ್ಮದ್ ರಜಾಕ್ ಬಲಿಯಾಗಿದ್ದರು. ರಾಜೌರಿಯ ಶದ್ರಾ ಶರೀಫ್ ಪ್ರದೇಶದ ಮಸೀದಿಯಿಂದ ಹೊರಬಂದ ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

40 ವರ್ಷದ ಮೊಹಮ್ಮದ್ ರಜಾಕ್ ಸಮಾಜ ಕಲ್ಯಾಣ ಇಲಾಖೆಯ ಉದ್ಯೋಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಮೃತ ರಝಾಕ್ ಅವರ ಸಹೋದರ ಪ್ರಾದೇಶಿಕ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

Latest

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Lok Sabha Election: ಎಎಪಿ ಜೊತೆಗಿನ ಮೈತ್ರಿ ಮತ್ತು ಹೈಕಮಾಂಡ್ ಸ್ಥಳೀಯ ನಾಯಕತ್ವಕ್ಕಿಂತ ಹೊರಗಿನವರಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿ ಅವರೆಲ್ಲರೂ ಕಾಂಗ್ರೆಸ್ ತೊರೆದಿದ್ದರು. ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮತ್ತು ಇತರ ಪಕ್ಷದ ವ್ಯವಹಾರಗಳಲ್ಲಿ ದೆಹಲಿ ಕಾಂಗ್ರೆಸ್ ಘಟಕವು ಬೇಸತ್ತಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕ ಸಭಾ ಚುನಾವಣೆಯ (Lok Sabha Election) ಮೈತ್ರಿ ವಿಚಾರದಲ್ಲಿ ಅಸಮಾಧಾನ ಹೊಂದಿದ್ದ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್ ಸಿಂಗ್ ಲವ್ಲಿ ಶನಿವಾರ ಭಾರತೀಯ ಜನತಾ ಪಕ್ಷ (BJP) ಸೇರಿದರು. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್, ನೀರಜ್ ಬಸೋಯಾ ಮತ್ತು ಅಮಿತ್ ಮಲಿಕ್ ಸೇರಿದಂತೆ ಇತರ ನಾಲ್ವರು ಮಾಜಿ ಕಾಂಗ್ರೆಸ್ ನಾಯಕರು ಲವ್ಲಿ ಅವರೊಂದಿಗೆ ಪಕ್ಷಾಂತರಗೊಂಡರು.

ತಮಗೆ ಮತ್ತು ತಮ್ಮ ಸಹೋದ್ಯೋಗಿಗಳಿಗೆ ಬಿಜಪಿ ಸೇರಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಲವ್ಲಿ ಧನ್ಯವಾದ ಅರ್ಪಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಬಿಜೆಪಿಯ ಬ್ರಾಂಡ್​ ಅಡಿಯಲ್ಲಿ ಮತ್ತು ಪ್ರಧಾನಿಯ ನಾಯಕತ್ವದಲ್ಲಿ ದೆಹಲಿಯ ಜನರಿಗಾಗಿ ಹೋರಾಡಲು ನಮಗೆ ಅವಕಾಶ ನೀಡಲಾಗಿದೆ” ಎಂದು ಅವರು ಹೇಳಿಕೊಂಡಿದ್ದಾರೆ. “ನನಗೆ ಸಂಪೂರ್ಣ ಭರವಸೆ ಇದೆ ಮತ್ತು ದೇಶದಲ್ಲಿ ಬಿಜೆಪಿ ಸರ್ಕಾರವು ಭಾರಿ ಬಹುಮತದೊಂದಿಗೆ ರಚನೆಯಾಗುತ್ತಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಮುಂಬರುವ ದಿನಗಳಲ್ಲಿ ದೆಹಲಿಯಲ್ಲೂ ಬಿಜೆಪಿಯ ಬಾವುಟ ಹಾರಾಡಲಿದೆ” ಎಂದು ಮಾಜಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಎಎಪಿ ಜೊತೆಗಿನ ಮೈತ್ರಿ ಮತ್ತು ಹೈಕಮಾಂಡ್ ಸ್ಥಳೀಯ ನಾಯಕತ್ವಕ್ಕಿಂತ ಹೊರಗಿನವರಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿ ಅವರೆಲ್ಲರೂ ಕಾಂಗ್ರೆಸ್ ತೊರೆದಿದ್ದರು. ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮತ್ತು ಇತರ ಪಕ್ಷದ ವ್ಯವಹಾರಗಳಲ್ಲಿ ದೆಹಲಿ ಕಾಂಗ್ರೆಸ್ ಘಟಕವು ಬೇಸತ್ತಿದೆ.

ಕನ್ಹಯ್ಯ ಕುಮಾರ್ ಮತ್ತು ಉದಿತ್ ರಾಜ್ ಸೇರಿದಂತೆ ಅಭ್ಯರ್ಥಿಗಳ ಆಯ್ಕೆಯಿಂದ ಲವ್ಲಿ ಮತ್ತು ಇತರ ಕೆಲವು ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ದೆಹಲಿ ಘಟಕದ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಲವ್ಲಿ ಭಾನುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ದೆಹಲಿಯ ಮಾಜಿ ಶಾಸಕರಾದ ನಸೀಬ್ ಸಿಂಗ್ ಮತ್ತು ನೀರಜ್ ಬಸೋಯಾ ಅವರಂತಹ ನಾಯಕರೂ ಪಕ್ಷ ತೊರೆದಿದ್ದಾರೆ.

Continue Reading

ಪ್ರಮುಖ ಸುದ್ದಿ

Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

Lok Sabha Election: ವೇಣುಗೋಪಾಲ್​ ಕಾಂಗ್ರೆಸ್ ಸದಸ್ಯರಿಗೆ ಹುದ್ದೆಗಳನ್ನು ನೀಡಲು ಹಣ ಪಡೆಯುತ್ತಾರೆ. ಪ್ರತಿ ಕೆಲಸಕ್ಕೆ ರಾಜ್ಯ ಸರ್ಕಾರಗಳ ಪ್ರತಿಯೊಬ್ಬ ಸಚಿವರಿಂದ ಕಮಿಷನ್ ಪಡೆಯುವ ಡೀಲರ್ ಅವರು. ಅಲ್ಲದೆ ಮಹಿಳಾ ಅಭ್ಯರ್ಥಿಯನ್ನು (ಸುಚರಿತಾ ಮೊಹಾಂತಿ) ಗದರಿಸಿದ್ದಾರೆ. ಹೀಗಾಗಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ” ಎಂದು ಶಿವಸೇನೆಗೆ ಸೇರಿದ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

VISTARANEWS.COM


on

Lok Sabha Election
Koo

ನವದೆಹಲಿ: ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಲ್ಲಿ (Lok Sabha Election) ಕಾಂಗ್ರೆಸ್​ಗೆ ದೊಡ್ಡ ಹಿನ್ನಡೆ ಉಂಟಾಗಿದ್ದು, ಪಕ್ಷವು ಚುನಾವಣಾ ಖರ್ಚಿಗೆ ಹಣ ನೀಡಿಲ್ಲವೆಂದು ಅಲ್ಲಿನ ಅಭ್ಯರ್ಥಿ ತನ್ನ ಟಿಕೆಟ್ ಅನ್ನು ಹಿಂದಿರುಗಿಸಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದರೂ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಭ್ಯರ್ಥಿ ಸುಚರಿತಾ ಮೊಹಾಂತಿ ಹೇಳಿದ್ದಾರೆ. ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್​ನ ಮಾಜಿ ನಾಯಕ ಸಂಜಯ್ ನಿರುಪಮ್ ಅವರು ಕೆ.ಸಿ.ವೇಣುಗೋಪಾಲ್ ಅವರನ್ನು ‘ಡೀಲರ್’ ಎಂದು ಕರೆದಿದ್ದಾರೆ. ಇದು ‘ಇಂದಿನ ಬಡ ಕಾಂಗ್ರೆಸ್’ ಎಂದು ಹೇಳಿದ್ದಾರೆ.

ವೇಣುಗೋಪಾಲ್​ ಕಾಂಗ್ರೆಸ್ ಸದಸ್ಯರಿಗೆ ಹುದ್ದೆಗಳನ್ನು ನೀಡಲು ಹಣ ಪಡೆಯುತ್ತಾರೆ. ಪ್ರತಿ ಕೆಲಸಕ್ಕೆ ರಾಜ್ಯ ಸರ್ಕಾರಗಳ ಪ್ರತಿಯೊಬ್ಬ ಸಚಿವರಿಂದ ಕಮಿಷನ್ ಪಡೆಯುವ ಡೀಲರ್ ಅವರು. ಅಲ್ಲದೆ ಮಹಿಳಾ ಅಭ್ಯರ್ಥಿಯನ್ನು (ಸುಚರಿತಾ ಮೊಹಾಂತಿ) ಗದರಿಸಿದ್ದಾರೆ. ಹೀಗಾಗಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ” ಎಂದು ಶಿವಸೇನೆಗೆ ಸೇರಿದ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

ಸುಚರಿತಾ ಮೊಹಾಂತಿ ಟಿಕೆಟ್ ನಿರಾಕರಿಸಿದ್ದು ಯಾಕೆ?

ಸುಚರಿತಾ ಮೊಹಾಂತಿ 10 ವರ್ಷಗಳ ಹಿಂದೆ ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಪತ್ರಕರ್ತೆಯಾಗಿದ್ದರು. ಈ ಚುನಾವಣೆಯಲ್ಲಿ ಅವರು ಕಾಂಗ್ರೆಸ್​ ಟಿಕೆಟ್ ಪಡೆದಿದ್ದರು. ಆದರೆ ಈಗ ಪ್ರಚಾರಕ್ಕಾಗಿ ತನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ಅವರು ಹೇಳಿದ್ದಾರೆ. “ಪಕ್ಷವು ನನಗೆ ಹಣ ನೀಡದ ಕಾರಣ ನಾನು ಟಿಕೆಟ್ ಹಿಂದಿರುಗಿಸಿದ್ದೇನೆ. ಮತ್ತೊಂದು ಕಾರಣವೆಂದರೆ, ಏಳು ವಿಧಾನಸಭಾ ಕ್ಷೇತ್ರಗಳ ಕೆಲವು ಸ್ಥಾನಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿಲ್ಲ. ಬದಲಾಗಿ, ಕೆಲವು ದುರ್ಬಲ ಅಭ್ಯರ್ಥಿಗಳಿಗೆ ಟಿಕೆಟ್ ಸಿಕ್ಕಿದೆ. ನಾನು ಈ ರೀತಿ ಸ್ಪರ್ಧಿಸಲು ಸಾಧ್ಯವಿಲ್ಲ” ಎಂದು ಸುಚರಿತಾ ಹೇಳಿದ್ದಾರೆ.

“ಪುರಿ ಸಂಸದೀಯ ಕ್ಷೇತ್ರದಲ್ಲಿ ನಮ್ಮ ಪ್ರಚಾರಕ್ಕೆ ತೀವ್ರ ಹೊಡೆತ ಬಿದ್ದಿದೆ ಏಕೆಂದರೆ ಪಕ್ಷವು ನನಗೆ ಹಣವನ್ನು ನಿರಾಕರಿಸಿದೆ. ಎಐಸಿಸಿ ಒಡಿಶಾ ಉಸ್ತುವಾರಿ ಅಜಯ್ ಕುಮಾರ್ ಜಿ ಸಲಹೆ ಕೊಟ್ಟಿದ್ದಾರೆ. ನಾನು ಸಂಬಳ ಪಡೆಯುವ ವೃತ್ತಿಪರ ಪತ್ರಕರ್ತಳಾಗಿದ್ದೆ, 10 ವರ್ಷಗಳ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ. ಪುರಿಯಲ್ಲಿನ ನನ್ನ ಪ್ರಚಾರಕ್ಕಾಗಿ ನನ್ನಲ್ಲಿರುವ ಎಲ್ಲವನ್ನೂ ನೀಡಿದ್ದೇನೆ” ಎಂದು ಮೊಹಾಂತಿ ಕೆಸಿ ವೇಣುಗೋಪಾಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

ಪ್ರಗತಿಪರ ರಾಜಕೀಯಕ್ಕಾಗಿ ನನ್ನ ಅಭಿಯಾನವನ್ನು ಬೆಂಬಲಿಸಲು ನಾನು ಸಾರ್ವಜನಿಕ ದೇಣಿಗೆ ಅಭಿಯಾನ ಪ್ರಯತ್ನಿಸಿದೆ ಆದರೆ ಇಲ್ಲಿಯವರೆಗೆ ಹೆಚ್ಚಿನ ಯಶಸ್ಸು ಸಿಗಲಿಲ್ಲ. ಪ್ರಚಾರ ವೆಚ್ಚವನ್ನು ಕನಿಷ್ಠ ಮಟ್ಟಕ್ಕೆ ಕಡಿತಗೊಳಿಸಲು ನಾನು ಪ್ರಯತ್ನಿಸಿದೆ” ಎಂದು ಅವರು ಹೇಳಿದರು.

“ನಾನು ಸ್ವಂತವಾಗಿ ಹಣವನ್ನು ಸಂಗ್ರಹಿಸಲು ಸಾಧ್ಯವಾಗದ ಕಾರಣ, ಪುರಿ ಸಂಸತ್ ಕ್ಷೇತ್ರದಲ್ಲಿ ಪರಿಣಾಮಕಾರಿ ಪ್ರಚಾರಕ್ಕಾಗಿ ಅಗತ್ಯವಾದ ಪಕ್ಷದ ನಿಧಿಯನ್ನು ನೀಡುವಂತೆ ಒತ್ತಾಯಿಸಿ ನಮ್ಮ ಪಕ್ಷದ ಕೇಂದ್ರ ನಾಯಕತ್ವಕ್ಕೆ ಮನವಿ ಮಾಡಿದ್ದೆ. ಈ 2024 ರ ಚುನಾವಣೆಯಲ್ಲಿ, ಜನರು ಎರಡು ಭ್ರಷ್ಟ ಮತ್ತು ಹಗರಣಕೋರ ಆಡಳಿತ ಪಕ್ಷಗಳಾದ ಬಿಜೆಪಿ ಮತ್ತು ಬಿಜೆಡಿ ಹೊರಹಾಕಲು ಸಜ್ಜಾಗಿದ್ದಾರೆ. ಕಾಂಗ್ರೆಸ್​​ನ 5 ನ್ಯಾಯಗಳು ಮತ್ತು 25 ಗ್ಯಾರಂಟಿಗಳಿಗೆ ಮತ ಚಲಾಯಿಸಲಿದ್ದಾರೆ” ಎಂದು ಮೊಹಾಂತಿ ಹೇಳಿದರು.

ಹಣದ ಕೊರತೆ ಪುರಿಯಲ್ಲಿನ ನಮ್ಮ ಗೆಲುವನ್ನು ತಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ. ಪಕ್ಷದ ಧನಸಹಾಯವಿಲ್ಲದೆ, ಪುರಿಯಲ್ಲಿ ಪ್ರಚಾರವನ್ನು ನಡೆಸಲು ಸಾಧ್ಯವಾಗುವುದಿಲ್ಲ ಎಂದು ನಾನು ವಿಷಾದಿಸುತ್ತೇನೆ. ಆದ್ದರಿಂದ ನಾನು ಪುರಿ ಸಂಸದೀಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಹಿಂದಿರುಗಿಸುತ್ತೇನೆ” ಎಂದಿರುವ ಸುಚರಿತಾ ಪಕ್ಷ ಮತ್ತು ರಾಹುಲ್ ಗಾಂಧಿಗೆ ತಮ್ಮ ಬೆಂಬಲ ಮುಂದುವರಿಸಿದ್ದಾರೆ.

ಪ್ರಸ್ತುತ ಬಿಜು ಜನತಾ ದಳದ (ಬಿಜೆಡಿ) ಪಿನಾಕಿ ಮಿಶ್ರಾ ಅವರ ವಶದಲ್ಲಿರುವ ಪುರಿ ಕ್ಷೇತ್ರದಿಂದ ಬಿಜೆಪಿ ಸಂಬಿತ್ ಪಾತ್ರಾ ಅವರನ್ನು ಕಣಕ್ಕಿಳಿಸಿದೆ. ಪುರಿಯಲ್ಲಿ ಮೇ 25 ರಂದು ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

VISTARANEWS.COM


on

Lok Sabha Election
Koo

ನವದೆಹಲಿ: ಹಿಂದಿನ ಕಾಂಗ್ರೆಸ್​ ಸರ್ಕಾರಗಳು ಪಾಕಿಸ್ತಾನದ ಭಯೋತ್ಪಾದನೆಯನ್ನು ನಿಗ್ರಹಿಸಲು ಯಾವುದೇ ಪ್ರಯತ್ನ ಮಾಡುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಹಿಂದಿನ ಸರ್ಕಾರಗಳು ಶಾಂತಿಯ ಭರವಸೆಯೊಂದಿಗೆ ಪಾಕಿಸ್ತಾನಕ್ಕೆ “ಪ್ರೇಮ ಪತ್ರಗಳನ್ನು” ಕಳುಹಿಸುತ್ತಿದ್ದವು. ಪ್ರತಿಯಾಗಿ ಅವರು ಹೆಚ್ಚಿನ ಭಯೋತ್ಪಾದಕರನ್ನು ಕಳುಹಿಸುತ್ತಿದ್ದರು ಎಂದು ಅವರು ಲೇವಡಿ ಮಾಡಿದರು. ಮುಂದುವರಿದ ಮೋದಿ. ಈ ಚುನಾವಣೆಯಲ್ಲಿ (Lok Sabha Election ) ರಾಹುಲ್ ಪ್ರಧಾನಿಯಾಗಬೇಕು ಎಂದು ಪಾಕಿಸ್ತಾನ ಬಯಸುತ್ತಿದೆ. ಆದರೆ, ಬಲಿಷ್ಠ ಭಾರತ ಬಲವಾದ ಸರ್ಕಾರ ಬಯಸಿದೆ ಎಂದು ನುಡಿದಿದ್ದಾರೆ.

ಜಾರ್ಖಂಡ್​​ನ ಪಲಮುದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭಯೋತ್ಪಾದಕರು ನಮ್ಮ ದೇಶದ ಮುಗ್ಧರನ್ನು ಮುಕ್ತವಾಗಿ ಕೊಲ್ಲುತ್ತಿದ್ದರು. ಪ್ರತಿಯಾಗಿ ಇಲ್ಲಿನ ಸರ್ಕಾರವು ಪಾಕಿಸ್ತಾನಕ್ಕೆ ಪ್ರೇಮ ಪತ್ರಗಳನ್ನು ಬರೆಯುತ್ತಿತ್ತು. ಆದರೆ ಪಾಕಿಸ್ತಾನವು ಪತ್ರಗಳಿಗೆ ಪ್ರತಿಕ್ರಿಯೆಯಾಗಿ ಇನ್ನಷ್ಟು ಭಯೋತ್ಪಾದಕರನ್ನು ಕಳುಹಿಸುತ್ತಿತ್ತು. ಆದರೆ ನಾವು ನಿಮ್ಮ ಒಂದು ಮತದ ಶಕ್ತಿಯಿಂದ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದ್ದೆವು. ಅಂತೆಯೇ ನವಭಾರತ ಪಾಕ್​ಗೆ ನುಗ್ಗಿ ಹೊಡೆಯುತ್ತಿದೆ ಎಂದು ಹೇಳಿದರು.

ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋಗುತ್ತಿದ್ದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ಸಾಯುತ್ತಿದ್ದ ಸಮಯವಿತ್ತು. ಅದೊಂದು ನಾಚಿಕೆಯ ವಿಷಯವಾಗಿತ್ತು. ಕಾಂಗ್ರೆಸ್​ನ ಹೇಡಿ ಸರ್ಕಾರಗಳು ಜಗತ್ತಿನ ಮುಂದೆ ಇದರ ಬಗ್ಗೆ ಅಳುತ್ತಿದ್ದವು” ಎಂದು ಪ್ರಧಾನಿ ಲೇವಡಿ ಮಾಡಿದರು.

ಸರ್ಜಿಕಲ್ ಮತ್ತು ಬಾಲಕೋಟ್ ದಾಳಿಗಳು ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಈಗ ವಿಶ್ವಾದ್ಯಂತ ಸಹಾಯವನ್ನು ಕೋರುತ್ತಿದೆ ಮತ್ತು “ಬಚಾವೋ, ಬಚಾವೋ (ಕಾಪಾಡಿ ಕಾಪಾಡಿ )” ಎಂದು ಕೂಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

ಪಾಕಿಸ್ತಾನದ ನಾಯಕರು ಕಾಂಗ್ರೆಸ್​​ನ ಶೆಹಜಾದಾ (ರಾಹುಲ್ ಗಾಂಧಿ) ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಬಲಿಷ್ಠ ಭಾರತವು ಈಗ ಬಲವಾದ ಸರ್ಕಾರವನ್ನು ಬಯಸುತ್ತದೆ” ಎಂದು ಅವರು ಹೇಳಿದರು.

ಮೋದಿ ಜತೆಗಾರರಿಗೆ ಅವರ ಬಗ್ಗೆಯೇ ಭಯವಿದೆ: ಪ್ರಿಯಾಂಕಾ ಗಾಂಧಿ

ಇದಕ್ಕೂ ಮುನ್ನ ಶನಿವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿಯವರನ್ನು “ಅರಮನೆಯಲ್ಲಿ ವಾಸಿಸುವ ಚಕ್ರವರ್ತಿ” ಎಂದು ಕರೆದಿದ್ದಾರೆ. “ಪ್ರಧಾನಿ ಮೋದಿ ನನ್ನ ಸಹೋದರನನ್ನು (ರಾಹುಲ್​) ರಾಜಕುಮಾರ ಎಂದು ಕರೆಯುತ್ತಾರೆ. ನನ್ನ ಸಹೋದರ 4,000 ಕಿಲೋಮೀಟರ್ ನಡೆದು, ದೇಶದ ಜನರನ್ನು ಭೇಟಿಯಾಗಿದ್ದಾರೆ. ಅವರ ಸಮಸ್ಯೆಗಳೇನು ಎಂದು ಆಲಿಸಿದ್ದಾರೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಮತ್ತೊಂದೆಡೆ, ಚಕ್ರವರ್ತಿ ನರೇಂದ್ರ ಮೋದಿ ಅರಮನೆಗಳಲ್ಲಿ ಬೀಡು ಬಿಡುತ್ತಾರೆ. ರೈತರು ಮತ್ತು ಮಹಿಳೆಯರ ಅಸಹಾಯಕತೆಯನ್ನು ಅವರು ಹೇಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ?” ಎಂದು ಅವರು ಗುಜರಾತ್​ನ ಬನಸ್ಕಥಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದರು

“ನರೇಂದ್ರ ಮೋದಿ ಅಧಿಕಾರದಿಂದ ಮೆರೆಯುತ್ತಿದ್ದಾರೆ. ಅವನ ಸುತ್ತಲಿನ ಜನರು ಅವರಿಗೆ ಹೆದರುತ್ತಾರೆ. ಯಾರೂ ಅವನಿಗೆ ಏನನ್ನೂ ಹೇಳುವುದಿಲ್ಲ. ಯಾರಾದರೂ ಧ್ವನಿ ಎತ್ತಿದರೆ ಆ ಧ್ವನಿಯನ್ನೇ ನಿಗ್ರಹಿಸಲಾಗುತ್ತದೆ ಎಂದು ಅವರು ಹೇಳಿದರು.

Continue Reading
Advertisement
Shivamogga BJP
ಶಿವಮೊಗ್ಗ1 min ago

Lok Sabha Election 2024: ಶಿವಮೊಗ್ಗದಲ್ಲಿ ಪ್ರಚಾರದ ವೇಳೆ ಕಿರಿಕ್; ಬಿಜೆಪಿ ವಾಹನ ಹಿಮ್ಮೆಟ್ಟಿಸಿದ ಈಶ್ವರಪ್ಪ ಅಭಿಮಾನಿಗಳು

HD Revanna
ಕರ್ನಾಟಕ31 mins ago

HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Terrorist Attack
ಪ್ರಮುಖ ಸುದ್ದಿ32 mins ago

Terrorist Attack : ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ: ನಾಲ್ವರು ವಾಯುಪಡೆ ಸಿಬ್ಬಂದಿಗೆ ಗಾಯ

HD Revanna
ಕರ್ನಾಟಕ51 mins ago

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Drown in River
ಕರ್ನಾಟಕ59 mins ago

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Champions Trophy
ಪ್ರಮುಖ ಸುದ್ದಿ1 hour ago

Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

Davanagere lok sabha constituency bjp candidate gayatri siddeshwar election campaign
ದಾವಣಗೆರೆ1 hour ago

Lok Sabha Election: ಚುನಾವಣೆಯಲ್ಲಿ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ್ ಮನವಿ

HD Revanna
ಕರ್ನಾಟಕ1 hour ago

HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

Prajwal Revanna Case
ಕರ್ನಾಟಕ2 hours ago

Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Village Administrative Officer
ಪ್ರಮುಖ ಸುದ್ದಿ2 hours ago

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌