World Music Day 2023: ಸಂಗೀತಕ್ಕೆ ಒಂದು ದಿನ, ಆಲಿಸುತ್ತಾ ಮನಸು ಹೂಬನ! - Vistara News

ದೇಶ

World Music Day 2023: ಸಂಗೀತಕ್ಕೆ ಒಂದು ದಿನ, ಆಲಿಸುತ್ತಾ ಮನಸು ಹೂಬನ!

ಇಂದು ವಿಶ್ವ ಸಂಗೀತ ದಿನ (World music Day 2023). ಸಂಗೀತದಿಂದ ಪಡೆಯುವ ಆನಂದ ಇನ್ಯಾವುದರಿಂದಲೂ ಸಿಗದು. ಅಂಥ ಸಂಗೀತದ ದಿನದ ಇತಿಹಾಸ, ಮಹತ್ವ ಇತ್ಯಾದಿ ಇಲ್ಲಿದೆ.

VISTARANEWS.COM


on

guitar music
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಗು ಜನಿಸುವ ಮೊದಲು ಸದಾ ಕೇಳುತ್ತಿರುವ ತಾಯಿಯ ಲಬ್‌ ಡಬ್‌ ಎದೆಬಡಿತ ಸಂಗೀತ. ಜನಿಸಿದ ಮೇಲೆ ಕೇಳುವ ಜೋಗುಳ ಸಂಗೀತ. ಹಕ್ಕಿಗಳ ಹಾಡು, ಮೃಗಗಳ ಕೂಗು, ಮಳೆಯ ನಾದ, ಮಗುವಿನ ಅಳು, ದುಃಖಿಯ ರೋದನ- ಎಲ್ಲವೂ ಸಂಗೀತ. ಬದುಕಿನ ಎಲ್ಲ ಆಚರಣೆಗಳಲ್ಲಿ ಸಂಗೀತ ಹಾಸುಹೊಕ್ಕು. ಸಂಗೀತವಿಲ್ಲದ ಪ್ರಕೃತಿಯಿಲ್ಲ. ಸಂಗೀತವಿಲ್ಲದ ಜೀವನವಿಲ್ಲ. ಎಲ್ಲ ದಿನಗಳೂ ಸಂಗೀತ ದಿನವೇ ಆದರೂ, ಸಂಗೀತದ ಆಚರಣೆಗೆ ಒಂದು ದಿನ ಬೇಡವೇ? ಅಂತಾರಾಷ್ಟ್ರೀಯ ಯೋಗ ದಿನವೇ (yoga day 2023) ಸಂಗೀತದ ದಿನವೂ (World music Day 2023) ಕೂಡ ಆಗಿರುವುದು ಒಂದು ಕಾಕತಾಳೀಯ.

ಆರಂಭವಾದದ್ದು ಹೇಗೆ?

ವಿಶ್ವ ಸಂಗೀತ ದಿನ ʼಫೆಟೆ ಡಿ ಲಾ ಮ್ಯೂಸಿಕೆ’ ಆರಂಭಗೊಂಡದ್ದು 1982ರ ವೇಳೆ ಫ್ರಾನ್ಸ್ ದೇಶದಲ್ಲಿ. ಅಲ್ಲಿನ ಸಂಸ್ಕೃತಿ ಸಚಿವರಾಗಿದ್ದ ಜ್ಯಾಕ್‌ ಲಾಂಗ್‌ ಅವರಿಗೆ ಇದು ಹೊಳೆದಿದ್ದು, ಜೂನ್ 21ನ್ನು ಸಂಗೀತ ದಿನವನ್ನಾಗಿ ಆಚರಿಸಲು ನಿರ್ಧರಿಸಿದರು. ಅದರಂತೆ ಮೊದಲ ಬಾರಿಗೆ ಅಮೆರಿಕನ್‌ ಸಂಗೀತಗಾರ ಜೋಯೆಲ್‌ ಕೊಹೆನ್‌ ಇಡೀ ರಾತ್ರಿ ಸಂಗೀತ ಕಾರ್ಯಕ್ರಮ ಏರ್ಪಡಿಸಿ, ವಿಶ್ವ ಸಂಗೀತ ದಿನಕ್ಕೆ ನಾಂದಿ ಹಾಡಿದರು. ನಂತರದಲ್ಲಿ ಸಂಗೀತದ ದಿನದ ಆಚರಣೆ ವಿಶ್ವದ 32 ದೇಶಗಳಿಗೆ ಹಬ್ಬಿತು. ಇದೀಗ ವಿಶ್ವದ ಬಹುತೇಕ ದೇಶಗಳು, ವಿಶ್ವ ಸಂಗೀತದ ಹೆಸರಿನಲ್ಲಿ ಹಲವಾರು ಶೈಲಿಯ ಸಂಗೀತಗಳ ಮೂಲಕ ಸಂಗೀತ ದಿನವನ್ನು ಆಚರಿಸುತ್ತಿವೆ.

ಸಾಮವೇದ ಸಂಗೀತ

ಭಾರತದಲ್ಲಿ ಸಂಗೀತಕ್ಕೆ ಇರುವ ಮಹತ್ವ ಅಷ್ಟಿಷ್ಟಲ್ಲ. ನಾವು ನೋಡುವಂತೆ, ನಮ್ಮ ದೇಶದಲ್ಲೇ ಶಾಸ್ತ್ರೀಯ ಸಂಗೀತದಲ್ಲಿ ಎರಡು ವಿಧಗಳನ್ನು ನೋಡಬಹುದು- ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ. ಇದರಲ್ಲೂ ಹತ್ತು ಹಲವಾರು ವೈವಿಧ್ಯಗಳು. ಇನ್ನು ಜಾನಪದ ಸಂಗೀತಗಳಂತೂ ಅಕ್ಷರಶಃ ಸಾವಿರಾರು. ಭಾಂಗ್ರಾ, ಭಜನೆ, ಭಕ್ತಿಗೀತೆ, ಗಝಲ್‌, ಕವ್ವಾಲಿ, ಇಂಡಿ-ಪಾಪ್‌, ಸಿನೆಮಾ ಹಾಡುಗಳು, ಸುಗಮ ಸಂಗೀತ, ರಿಮಿಕ್ಸ್‌, ಫ್ಯೂಶನ್‌ ಮುಂತಾದ ವೈವಿಧ್ಯಮಯ ಶೈಲಿಗಳೂ ಇವೆ. ಹಾಗೆಯೇ ಪಾಶ್ಚಿಮಾತ್ಯ ಪ್ರಾಕಾರಗಳಾದ ಮೆಟಲ್‌, ರಾಕ್‌, ಹಿಪ್‌ ಹಾಪ್‌, ಆಲ್ಟರ್‌ ನೇಟಿವ್‌, ಎಕ್ಸ್‌ಪರಿಮೆಂಟಲ್, ಕಂಟ್ರಿ, ಡಿಸ್ಕೋ, ಫೂಂತಕ್‌, ಕ್ಲಾಸಿಕಲ್, ಪ್ರೋಗ್ರೆಸ್ಸಿವ್‌, ಟ್ರಾನ್ಸ್‌, ಟೆಕ್ನೋ, ರೆಗ್ಗೆ ಮುಂತಾದ ಸಂಗೀತಗಳೂ ಇವೆ.

ಸಂಗೀತವನ್ನು ಗಾಂಧರ್ವವೇದ ಎನ್ನುತ್ತಾರೆ. ಗಂಧರ್ವರ ವಿದ್ಯೆಯಾದುದರಿಂದ ಇದಕ್ಕೆ ಈ ಹೆಸರು. ‘ಗಾಂಧರ್ವ ವಿದ್ಯೆ’ ಎಂದರೆ ‘ಗಾನವಿದ್ಯೆ’ ಅಥವಾ ಸಂಗೀತ ಎಂದರ್ಥ. ಕರ್ಣಾನಂದ ಉಂಟು ಮಾಡುವ ಗೀತೆಯೇ ಸಂಗೀತ. ಇದಕ್ಕೆ ಸಾಮವೇದವೇ ಮೂಲ ಎನ್ನುತ್ತಾರೆ. ಪರಮಾತ್ಮನಿಗೂ ಈ ಸಂಗೀತವಿರುವ ಸಾಮವೇದವೆಂದರೆ ಪ್ರಾಣ. ಹಾಗಾಗಿ ಭಗವದ್ಗೀತೆಯಲ್ಲಿ ‘ವೇದಾನಾಂ ಸಾಮವೇದೋಸ್ಮಿ’– ವೇದಗಳಲ್ಲಿ ನಾನು ಸಾಮವೇದ ಎಂಬ ಭಗವಂತನ ಉಕ್ತಿಯಿದೆ.

ದೇಹ- ಮನಸ್ಸಿನ ಆರೋಗ್ಯ

ಮನಸ್ಸಿನ ಆರೋಗ್ಯ- ಆನಂದ ಅನುಭವಿಸಲು ಸಂಗೀತ ಮೂಲ. ದೇಹದ ಅನಾರೋಗ್ಯ ನಿವಾರಣೆಯೂ ಇದರಿಂದ ಸಾಧ್ಯ ಎಂದು ಕೆಲವು ಅಧ್ಯಯನಗಳು ಕಂಡುಕೊಂಡಿವೆ. ʼಮ್ಯೂಸಿಕ್ ಥೆರಪಿʼ ಎಂಬ ವಿಧಾನವಿದೆ. ಇದು ಶರೀರ ಮತ್ತು ಮನಸ್ಸಿನ ಅಸಮತೋಲನವನ್ನು ಸರಿಪಡಿಸುವ ಸಂಗೀತದ ಶಾಸ್ತ್ರ. ಇದಕ್ಕೆ ಮನೋವಿಜ್ಞಾನ ಮತ್ತು ನರವಿಜ್ಞಾನದ ಬೆಂಬಲವಿದೆ. ವ್ಯಕ್ತಿ ಮಾನಸಿಕ, ದೈಹಿಕ ಅಥವಾ ಸಾಮಾಜಿಕವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಸಂಗೀತದ ಮೂಲಕ ಪರಿಹರಿಸುವುದೇ ಮ್ಯೂಸಿಕ್ ಥೆರಪಿ. ಇದರ ಮೂಲಕ ಹಲವು ರೋಗಗಳಿಗೆ ಚಿಕಿತ್ಸೆ ನೀಡಬಹುದಂತೆ.

ಮನಸ್ಸಿಗೆ ಒತ್ತಡವಾದಾಗ ರಕ್ತದಲ್ಲಿ ಕಾರ್ಟಿಸೋಲ್ ಎಂಬ ಹಾರ್ವೇನ್ ಮಟ್ಟ ಹೆಚ್ಚಾಗುತ್ತದೆ. ಸಂಶೋಧನೆಗಳ ಪ್ರಕಾರ ಮ್ಯೂಸಿಕ್ ಥೆರಪಿ ಕಾರ್ಟಿಸೋಲ್ ಮಟ್ಟವನ್ನು ತಗ್ಗಿಸಿ ಮಿದುಳನ್ನು ಜಾಗೃತಗೊಳಿಸುವ ಬೀಟಾ ಮತ್ತು ನಿರಾಳಗೊಳಿಸುವ ಆಲ್ಫಾ ತರಂಗಗಳನ್ನು ಹೆಚ್ಚು ಮಾಡುತ್ತದೆ. ಕ್ಯಾನ್ಸರ್ ಮತ್ತು ಎಚ್​ಐವಿಯಂಥ ರೋಗಗಳ ಉಪಶಮನದಲ್ಲಿ ಸಂಗೀತ ಚಿಕಿತ್ಸೆ ಬಹಳ ಫಲಕಾರಿ. ಹ್ಯಾಪಿ ಹಾರ್ಮೋನ್ ಎಂದೇ ಕರೆಯಲಾಗುವ ಎಂಡಾರ್ಫಿನ್ ಉತ್ಪತ್ತಿಯಿಂದ ನೋವು ಕಮ್ಮಿಯಾಗುತ್ತದೆ. ಟೊರೆಂಟೊ ವಿಶ್ವ ವಿದ್ಯಾಲಯದ ಸಂಗೀತ ಮತ್ತು ಆರೋಗ್ಯ ಸಂಶೋಧನಾ ಕೇಂದ್ರ ನಡೆಸಿದ ಒಂದು ಅಧ್ಯಯನದ ಪ್ರಕಾರ, ಮಾಮೂಲಿ ಶೈಲಿಯ ತರಬೇತಿ ಪಡೆದುಕೊಂಡವರಿಗೆ ಹೋಲಿಸಿದಾಗ ಸಂಗೀತವನ್ನು ಬಳಸಿಕೊಂಡು ಕಲಿತವರ ನೆನಪಿನ ಶಕ್ತಿ ಮತ್ತು ಉಚ್ಚಾರಣೆ ಉತ್ತಮವಾಗಿತ್ತು ಎಂಬುದು ಕಂಡುಬಂದಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದೇಶ

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ಮಿಸ್‌ ಮಾಡಿದ್ದರು ರತನ್‌ ಟಾಟಾ!

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ರತನ್‌ ಟಾಟಾ ಮಿಸ್‌ ಮಾಡಿದ್ದರು. ಬೀದಿ ನಾಯಿಗಳ ಅವರ ಕಾಳಜಿಗೆ ಇಡೀ ಲಂಡನ್‌ ಜನತೆ ತಲೆಬಾಗಿತ್ತು.

VISTARANEWS.COM


on

By

Ratan Tata missed england's royal honour to take care of sick dogs
Koo

ಭಾರತದ ಅತಿ ಶ್ರೇಷ್ಠ ಉದ್ಯಮಿಯಾದ ರತನ್ ಟಾಟಾ (Ratan Tata) ಅವರ ಮಾನವೀಯ ಗುಣಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ.. ತಮ್ಮ ಸಂಪತ್ತಿನ ಅರ್ಧ ಭಾಗವನ್ನು ದಾನ ಮಾಡಿದ್ದು, ಕೊರೊನಾ ಸಂಕಷ್ಟದ ಸಮಯದಲ್ಲಿ ಪ್ರಧಾನಿ ಪರಿಹಾರ ನಿಧಿಗೆ 500 ಕೋಟಿ ರೂ. ದಾನ ಮಾಡಿದ್ದು.. ಹೀಗೆ ನೂರಾರು ಉದಾಹರಣೆಗಳು ದೊರೆಯುತ್ತವೆ. ಅದಕ್ಕೆ ಇನ್ನೊಂದು ಪುರಾವೆಯು ಇಲ್ಲಿದೆ.

ರತನ್ ಟಾಟಾ ಅವರ ಜೀವಮಾನದ ಸಾಧನೆಗಳನ್ನು ಪರಿಗಣಿಸಿ 2018ರಲ್ಲಿ ಸನ್ಮಾನ ಮಾಡಲು ಇಂಗ್ಲೆಂಡಿನ ರಾಜಕುಮಾರ ಚಾರ್ಲ್ಸ್ ಅವರು ಇಂಗ್ಲೆಂಡಿಗೆ ಆಮಂತ್ರಿಸಿದ್ದರು. ಅದು ರಾಯಲ್ ಮನೆತನದ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಏರ್ಪಾಡಾಗಿದ್ದ ರಾಜಗೌರವದ ಸನ್ಮಾನ! ಪ್ರಿನ್ಸ್ ಚಾರ್ಲ್ಸ್ ಈ ಗೌರವದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ನೂರಾರು ಅತಿ ಗಣ್ಯ ವ್ಯಕ್ತಿಗಳನ್ನು ಕರೆದಿದ್ದರು. ರತನ್ ಟಾಟಾ ಅವರು ಕೂಡ ಈ ಆಮಂತ್ರಣವನ್ನು ಸ್ವೀಕರಿಸಿ ಲಂಡನ್ನಿಗೆ ಹೊರಡುವ ತಯಾರಿ ಮಾಡಿದ್ದರು.

ಅವರನ್ನು ಇಂಗ್ಲೆಂಡಿನಲ್ಲಿ ಸ್ವಾಗತ ಮಾಡಿ ಅವರ ಆತಿಥ್ಯದ ವ್ಯವಸ್ಥೆಯನ್ನು ಮಾಡಲು ಚಾರ್ಲ್ಸ್ ಅವರಿಂದ ನಿಯುಕ್ತ ಆದವರು ಖ್ಯಾತ ಉದ್ಯಮಿಗಳು ಮತ್ತು ಅಂಕಣಕಾರರಾದ ಸುಹೇಲ್ ಸೇಥ ಅವರು. ಸುಹೇಲ್ ಅವರು ನಾಲ್ಕು ದಿನ ಮೊದಲೇ ಲಂಡನ್ನಿಗೆ ಹೋಗಿ ಟಾಟಾ ಅವರನ್ನು ಸ್ವಾಗತ ಮಾಡಲು ಸಿದ್ಧತೆಯನ್ನೂ ಮಾಡಿದ್ದರು.

ಒಮ್ಮೆ ಸುಹೇಲ್ ಅವರು ಯಾವುದೋ ಒಂದು ಕೆಲಸದಲ್ಲಿ ಮುಳುಗಿದ್ದಾಗ ಅವರ ಮೊಬೈಲ್ ಫೋನ್ ಒಂದೇ ಸಮನೆ ಹೊಡೆದುಕೊಳ್ಳಲು ಆರಂಭ ಆಯಿತು. ಸುಹೇಲ್ ಸ್ವಲ್ಪ ಹೊತ್ತಿನ ನಂತರ ಮೊಬೈಲ್ ನೋಡಿದಾಗ ರತನ್ ಟಾಟಾ ಅವರ ಹನ್ನೊಂದು ಮಿಸ್ ಕಾಲ್ ಇತ್ತು! ಯಾಕೆಂದು ಸುಹೇಲ್ ಗಾಬರಿ ಬಿದ್ದು ಟಾಟಾ ಅವರಿಗೆ ಮರು ಕಾಲ್ ಮಾಡಿದರು. ಕಾಲ್ ಕನೆಕ್ಟ್ ಆಯಿತು. ಅಂದು ರತನ್ ಟಾಟಾ ಅವರ ಧ್ವನಿ ನಡುಗುತ್ತಿತ್ತು.

ಅವರು ಹೇಳುತ್ತಾ ಹೋದರು. “ಸುಹೇಲ್ ಸಾರಿ. ನಿಮಗೆ ತೊಂದರೆ ಕೊಡುತ್ತಾ ಇದ್ದೇನೆ. ನಿಮಗೆ ಹೇಗೆ ಹೇಳಬೇಕೋ ಗೊತ್ತಾಗುತ್ತಿಲ್ಲ. ನನ್ನ ಎರಡು ನಾಯಿಗಳಾದ ಟ್ಯಾಂಗೋ ಮತ್ತು ಟಿಟೋಗಳ ಪೈಕಿ ಒಂದು ಇಂದು ತೀವ್ರವಾಗಿ ಅಸ್ವಸ್ಥ ಆಗಿದೆ. ನಿಮಗೆ ಗೊತ್ತು ನಾನು ಎಷ್ಟು ಅವುಗಳನ್ನು ಪ್ರೀತಿ ಮಾಡುತ್ತೇನೆ ಎಂದು. ಇಂಥಹ ಸಂಕೀರ್ಣ ಸನ್ನಿವೇಶದಲ್ಲಿ ನಾನು ನಾಯಿಗಳನ್ನು ಬಿಟ್ಟು ಲಂಡನ್‌ಗೆ ಬರಲು ಸಾಧ್ಯ ಇಲ್ಲ. ನೀವಿದನ್ನು ದಯವಿಟ್ಟು ಪ್ರಿನ್ಸ್ ಚಾರ್ಲ್ಸ್ ಅವರಿಗೆ ತುರ್ತಾಗಿ ತಿಳಿಸಬೇಕು ಮತ್ತು ನಾನು ಅವರ ಕ್ಷಮೆಯನ್ನು ಕೇಳುತ್ತಿದ್ದೇನೆ ಎಂದು ಕೂಡ ತಿಳಿಸಬೇಕು” ಎಂದರು.

ಸುಹೇಲ್ ಅವರಿಗೆ ಏನು ಉತ್ತರ ಹೇಳಬೇಕು ಎಂದು ಗೊತ್ತಾಗಲಿಲ್ಲ. ಅವರು “ರತನ್ ಜಿ. ಇದು ಸಾಮಾನ್ಯ ಕಾರ್ಯಕ್ರಮ ಅಲ್ಲ. ಇಂಗ್ಲಿಷ್ ರಾಜಮನೆತನದ ಗೌರವದ ಕಾರ್ಯಕ್ರಮ. ಸ್ವತಃ ಪ್ರಿನ್ಸ್ ಚಾರ್ಲ್ಸ್ ಮುಂದೆ ನಿಂತು ಈ ಕಾರ್ಯಕ್ರಮ ಏರ್ಪಡಿಸುತ್ತಿದ್ದಾರೆ. ನೂರಕ್ಕೂ ಹೆಚ್ಚಿನ ವಿವಿಐಪಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ. ಸ್ವತಃ ಇಂಗ್ಲೆಂಡ್ ರಾಣಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ. ಆದ್ದರಿಂದ ನೀವು ನಾಯಿಗಳ ಬಗ್ಗೆ ಬೇರೇನಾದರೂ ವ್ಯವಸ್ಥೆಯನ್ನು ಮಾಡಿ ಲಂಡನ್ನಿಗೆ ಹೊರಡಬೇಕು ಎಂದು ವಿನಂತಿ ಮಾಡುತ್ತೇನೆ” ಎಂದರು.

ಆದರೆ ರತನ್ ಟಾಟಾ ತಮ್ಮ ನಿರ್ಧಾರವನ್ನು ಬದಲಾಯಿಸಲು ಒಪ್ಪಲಿಲ್ಲ. “ನಿಮಗೆ ಗೊತ್ತಿದೆ ನಾನು ನನ್ನ ನಾಯಿಗಳನ್ನು ಎಷ್ಟು ಪ್ರೀತಿ ಮಾಡುತ್ತೇನೆ ಎಂದು. ದಯವಿಟ್ಟು ನನಗೆ ಒತ್ತಾಯ ಮಾಡಬೇಡಿ. ನನ್ನ ಮಾತುಗಳನ್ನು ಪ್ರಿನ್ಸ್ ಚಾರ್ಲ್ಸ್ ಅವರಿಗೆ ವಿನೀತವಾಗಿ ತಲುಪಿಸಿ” ಅಂದು ಫೋನ್ ಇಟ್ಟರು. ಸುಹೇಲ್ ಅವರಿಗೆ ಈಗ ನಿಜವಾಗಿ ಉಭಯ ಸಂಕಟ ಆರಂಭ ಆಯಿತು. ಅವರು ಮರುದಿನವೇ ಮುಂಜಾನೆ ಬಕಿಂಗ್ ಹ್ಯಾಮ್ ಅರಮನೆಗೆ ಹೋದಾಗ ಅಲ್ಲಿ ಎಲ್ಲ ಸಿದ್ಧತೆಗಳೂ ಕೊನೆಯ ಹಂತದಲ್ಲಿ ಇದ್ದವು.

ಅವರು ಸಂಕೋಚದಿಂದ ಪ್ರಿನ್ಸ್ ಚಾರ್ಲ್ಸ್ ಮುಂದೆ ಹೋಗಿ ಟಾಟಾ ಹೇಳಿದ್ದನ್ನು ಪ್ರೀತಿಯಿಂದ ಹೇಳಿದರು. ಅದೇ ಕಾರಣವನ್ನು ಕೂಡ ನಿವೇದನೆ ಮಾಡಿಕೊಂಡರು. ಒಮ್ಮೆ ಚಾರ್ಲ್ಸ್ ಹಣೆಯ ಮೇಲೆ ನೆರಿಗೆಗಳು ಕಂಡುಬಂದವು. ತಕ್ಷಣ ಅವರ ಮೊದಲ ಉದ್ಗಾರ – That’s the man!

“ರತನ್ ಅವರಿಗೆ ಬರಲು ಆಗುವುದಿಲ್ಲ ಎಂದು ನೀವು ಹೇಳಿದಾಗ ನನಗೆ ಒಮ್ಮೆ ಬೇಜಾರು ಆಯಿತು. ಆದರೆ ಅವರು ನೀಡಿದ ಕಾರಣ ನೋಡಿ ನನಗೆ ಅವರ ಬಗ್ಗೆ ತುಂಬ ಹೆಮ್ಮೆ ಅನ್ನಿಸಿತು. ನನಗೆ ಅವರ ಬಗ್ಗೆ ಇರುವ ಗೌರವ, ಪ್ರೀತಿ ಇಮ್ಮಡಿ ಆಗಿದೆ. ನೋ ಪ್ರಾಬ್ಲಂ. ಈ ಕಾರ್ಯಕ್ರಮವನ್ನು ಮುಂದಕ್ಕೆ ಹಾಕೋಣ” ಎಂದು ಚಾರ್ಲ್ಸ್ ಹೇಳಿದರು. ಕೊನೆಗೂ ರತನ್ ಟಾಟಾ ಆ ಕಾರ್ಯಕ್ರಮಕ್ಕೆ ಹೋಗಲಿಲ್ಲ ಮತ್ತು ಆ ಕಾರ್ಯಕ್ರಮವು ಮುಂದೆ ನಡೆಯಲೇ ಇಲ್ಲ!

ಟಾಟಾ ಒಮ್ಮೆ ತಮ್ಮ ಎರಡು ನಾಯಿಗಳ ಬಗ್ಗೆ ಮಾಡಿದ ಟ್ವೀಟ್ ಹೀಗಿದೆ – Tito and Tango seek nothing in return for their affection other than a little love and attention. I miss them terribly when I am away!

ಯಾರೂ ಸುಖಾಸುಮ್ಮನೆ ದೊಡ್ಡವರು ಆಗುವುದಿಲ್ಲ! ಅವೆರಡೂ ರತನ್ ಟಾಟಾ ಸಾಕಿದ ಬೀದಿ ನಾಯಿಗಳು ಆಗಿದ್ದವು!

ಟಾಟಾ ಅವರಿಗೆ ತಮ್ಮ ಜೀವನದ ಆದ್ಯತೆಗಳನ್ನು ನಿರ್ಧಾರ ಮಾಡಲು ಗೊತ್ತಿದೆ ಮತ್ತು ಅವರು ತಮ್ಮ ಆದ್ಯತೆಗಳಿಂದ ಒಂದಿಷ್ಟೂ ವಿಚಲಿತ ಆಗುವುದಿಲ್ಲ. ತಮ್ಮ ಕಂಪೆನಿಯ ಪ್ರತಿ ಉದ್ಯೋಗಿಯನ್ನೂ ಅವರು ಅದೇ ಮಾನವೀಯ ಅಂತಃಕರಣದಿಂದ ನೋಡಿಕೊಳ್ಳುತ್ತಾರೆ ಎಂದು ಅನೇಕರು ಹೇಳಿದ್ದಾರೆ. ಅಂದ ಹಾಗೆ ರತನ್ ಟಾಟಾ ಈವರೆಗೆ ಮದುವೆ ಆಗಿಲ್ಲ! ನಾನು ನಾಲ್ಕು ಬಾರಿ ಮದುವೆಯ ಹೊಸ್ತಿಲಿನ ತನಕ ಬಂದು ಭಯದಿಂದ ಹಿಂದೆ ಹೋಗಿದ್ದೆ ಎಂದವರು ತಮಾಷೆಗೆ ಹೇಳಿದ್ದಾರೆ!

Continue Reading

ದೇಶ

Ratan Tata : ರತನ್‌ ಟಾಟಾ ಕಂಪನಿ ಸೇರಿದ್ದು ಸಾಮಾನ್ಯ ಉದ್ಯೋಗಿಯಾಗಿ! ಉದ್ಯಮ ರಂಗದ ಗುರು ಆಗಿದ್ದೇಗೆ?

Ratan Tata : ತಮ್ಮ ಸಂಪತ್ತಿನ ಬಹುಪಾಲನ್ನು ಆಗಲೇ ದಾನ ಮಾಡಿರುವ ರತನ್‌ ಟಾಟಾ ಅವರು ತಮ್ಮದೇ ಕಂಪನಿಯನ್ನು ಸೇರಿದ್ದು ಒಬ್ಬ ಸಾಮಾನ್ಯ ಉದ್ಯೋಗಿಯಾಗಿ ಎನ್ನುವುದು ಅವರ ದೊಡ್ಡಸ್ತಿಕೆ.

VISTARANEWS.COM


on

By

Ratan Tata joined the company as an ordinary employee but Why is he the guru of the industry
Koo

ಭಾರತದ ಮಹೋನ್ನತ ಬಿಸಿನೆಸ್ ಮ್ಯಾಗ್ನೆಟ್ ರತನ್ ಟಾಟಾ ಪ್ರಧಾನಮಂತ್ರಿಗಳ ಕೊರೊನಾ ತುರ್ತು ಪರಿಹಾರ ನಿಧಿಗೆ 1500 ಕೋಟಿ ರೂಪಾಯಿ ಕೊಡುಗೆ ನೀಡಿದಾಗ ಎಲ್ಲರೂ ಮೂಗಿನ ಮೇಲೆ ಬೆರಳು ಇಟ್ಟಿದ್ದರು! (ಇದು ಎಷ್ಟೋ ರಾಷ್ಟ್ರಗಳ ವಾರ್ಷಿಕ ಬಜೆಟ್‌ಗಿಂತಲೂ ಅಧಿಕ!). ಎಷ್ಟೋ ಸಿರಿವಂತರು ಹೃದಯವಂತರು ಆಗಿರುವುದಿಲ್ಲ. ಆದರೆ ರತನ್ ಟಾಟಾ ಅದಕ್ಕೊಂದು ಅಪವಾದ. ಅವರು ತಮ್ಮ ಸಂಪತ್ತಿನ 60-65% ಭಾಗವನ್ನು ಈಗಾಗಲೇ ದಾನ ಮಾಡಿಯಾಗಿದೆ! ಬೇರೆ ಕಾರ್ಪೊರೇಟ್ ಕಂಪೆನಿಗಳು ತಮ್ಮ ಸಿ ಎಸ್ ಆರ್ ಯೋಜನೆಗಳನ್ನು ರೂಪಿಸಲು ಕೂಡ ರತನ್ ಟಾಟಾ ಮಾದರಿಯಾಗಿ ನಿಂತಿದ್ದರು.

ಟಾಟಾ ಕಂಪೆನಿಗೆ ಒಬ್ಬ ಸಾಮಾನ್ಯ ಉದ್ಯೋಗಿಯಾಗಿ ಸೇರಿದರು!

1937 ರಲ್ಲಿ ಸೂರತ್ ನಗರದಲ್ಲಿ ಜನಿಸಿದ ರತನ್ ಟಾಟಾ ವಿದೇಶಗಳಲ್ಲೇ ಹೆಚ್ಚು ಶಿಕ್ಷಣ ಪಡೆದವರು. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಕಲಿಕೆ. 1961 ರಲ್ಲಿ ಟಾಟಾ ಕಂಪನಿಯನ್ನು ಒಬ್ಬ ಸಾಮಾನ್ಯವಾದ ಉದ್ಯೋಗಿಯಾಗಿ ಸೇರಿದ ಅವರು ತಮ್ಮ ಕಾರ್ಯಕ್ಷಮತೆ, ಶಿಸ್ತು ಮತ್ತು ದಕ್ಷತೆಯಿಂದ ಎಲ್ಲರ ಮನಗೆದ್ದರು. 1991 ರಲ್ಲಿ ಟಾಟಾ ಸಮೂಹ ಸಂಸ್ಥೆಗಳ ಭೀಷ್ಮ ಜೆ. ಆರ್. ಡಿ. ಟಾಟಾ ಅವರು ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗುವಾಗ ತನ್ನ ಉತ್ತರಾಧಿಕಾರಿಯಾಗಿ ರತನ್ ಟಾಟಾ ಅವರನ್ನು ನೇಮಕ ಮಾಡಿದರು.

ಇದು ಟಾಟಾ ವಿವಿಧ ಕಂಪನಿಗಳ ಮುಖ್ಯಸ್ಥರ ಅಸಾಮಾಧಾನಕ್ಕೆ ಕಾರಣವಾಯಿತು. ಆದರೆ ರತನ್ ಟಾಟಾ ಇದಕ್ಕೆಲ್ಲ ಸೊಪ್ಪು ಹಾಕುವವರೇ ಅಲ್ಲ! ಎಲ್ಲ ಟಾಟಾ ಸಂಸ್ಥೆಗಳನ್ನು ಒಗ್ಗೂಡಿಸಿ ಟಾಟಾ ಸಮೂಹ ಸಂಸ್ಥೆಯಾಗಿ ರೂಪಿಸಿದ್ದು ಅವರ ಜಾಣ ನಡೆಯಾಗಿತ್ತು. ಹಿರಿಯ ತಲೆಗಳನ್ನು ನಿವೃತ್ತಿ ಮಾಡಿ ಹೊಸಬರಿಗೆ ಅವಕಾಶ ನೀಡಿದರು. ಹೊಸ ಆವಿಷ್ಕಾರ, ನಾವೀನ್ಯತೆ, ಜಾಗತಿಕ ದೃಷ್ಟಿಕೋನ, ಆರ್ಥಿಕ ಶಿಸ್ತು, ಪರಿಣಾಮಕಾರಿ ನಿರ್ಧಾರ, ಉತ್ತರದಾಯಿತ್ವ, ಜವಾಬ್ದಾರಿಗಳ ಹಂಚಿಕೆ ಇವುಗಳಿಗೆ ಆದ್ಯತೆ ನೀಡಿದರು. ಆರ್ಥಿಕ ಶಿಸ್ತು ಅವರಲ್ಲಿ ಎದ್ದುಕಾಣುವ ಗುಣ. ತನ್ನ ಉದ್ಯೋಗಿಗಳನ್ನು ತುಂಬಾ ಚೆನ್ನಾಗಿ ವಿಶ್ವಾಸಕ್ಕೆ ತೆಗೆದುಕೊಂಡರು. ಪರಿಣಾಮವಾಗಿ ಅವರ 21 ವರ್ಷಗಳ ಅಧಿಕಾರದ ಅವಧಿಯಲ್ಲಿ ಟಾಟಾ ಸಂಸ್ಥೆಯ ಆದಾಯವು 40 ಪಟ್ಟು ಅಧಿಕವಾಯಿತು! ಲಾಭವು 50 ಪಟ್ಟು ಅಧಿಕವಾಯಿತು! ರತನ್ ಟಾಟಾ ಅವರ ಅವಧಿಯನ್ನು ಭಾರತೀಯ ಉದ್ಯಮ ರಂಗದ ಸುವರ್ಣ ಯುಗ ಎಂದು ಕರೆಯಲಾಯಿತು.

ಟಾಟಾ ಜಗದಗಲ ಬೆಳೆಯಿತು!

ಟಾಟಾ ಸಂಸ್ಥೆಗಳು 100ಕ್ಕೂ ಅಧಿಕ ದೇಶಗಳಲ್ಲಿ ಸ್ಥಾಪನೆಯಾದವು. ಗುಂಡು ಪಿನ್‌ನಿಂದ ಆರಂಭಿಸಿ ಟ್ರಕ್‌ಗಳವರೆಗೆ, ಉಪ್ಪಿನಿಂದ ಆರಂಭಿಸಿ ವಿಮಾನದವರೆಗೆ, ಕೈ ಗಡಿಯಾರದಿಂದ ಆರಂಭಿಸಿ ಚಿನ್ನದ ಮಳಿಗೆಗಳವರೆಗೆ, ಹೋಟೆಲ್ ಉದ್ಯಮದಿಂದ ಆರಂಭ ಮಾಡಿ ನ್ಯಾನೋ ಕಾರುಗಳವರೆಗೆ ಉದ್ಯಮವನ್ನು ವಿಸ್ತಾರ ಮಾಡಿದ ಕೀರ್ತಿಯು ಅವರಿಗೆ ಸಲ್ಲುತ್ತದೆ! ನಷ್ಟದಲ್ಲಿ ಇದ್ದ ಏರ್ ಇಂಡಿಯಾ ಸಂಸ್ಥೆಯನ್ನು ವಹಿಸಿಕೊಂಡು ಭಾರಿ ಲಾಭಕ್ಕೆ ಪರಿವರ್ತನೆ ಮಾಡಿದ ಕೀರ್ತಿ ಟಾಟಾ ಅವರಿಗೆ ಸಲ್ಲುತ್ತದೆ. ಅದೇ ರೀತಿಯಲ್ಲಿ ಬೆಳೆಯುತ್ತಿರುವ ಹಲವು ಉದ್ಯಮಿಗಳಿಗೆ ಅವರು ತಮ್ಮ ಗೆಲುವಿನ ಗುಟ್ಟನ್ನು ಯಾವ ಮುಚ್ಚುಮರೆ ಮಾಡುವುದರಲ್ಲಿ ಟಾಟಾ ಇಂದು ಉದ್ಯಮರಂಗದ ಗುರು ಎಂದು ಕೂಡ ಕರೆಸಿಕೊಂಡಿದ್ದರು.

ಕೊಟ್ಟ ಮಾತಿನಂತೆ ನಡೆದುಕೊಂಡರು ರತನ್ ಟಾಟಾ

75ನೆಯ ವಯಸ್ಸಿನಲ್ಲಿ ಅವರು ತಾವು ಕೊಟ್ಟ ಮಾತಿನಂತೆ ಸೇವಾ ನಿವೃತ್ತಿಯನ್ನು ಘೋಷಿಸಿ ತನ್ನ ಉತ್ತರಾಧಿಕಾರಿಯನ್ನು ನೇಮಿಸಿದರು. ಆದರೆ ಆಡಳಿತ ಮಂಡಳಿ, ಶೇರ್ ಹೋಲ್ಡರ್ಸ್, ಸಹಯೋಗಿ ಸಂಸ್ಥೆಗಳು ಅವರ ಮೇಲೆ ಪೂರ್ತಿ ಭರವಸೆ ಇಟ್ಟು ಅವರನ್ನೇ ಟಾಟಾ ಸಂಸ್ಥೆಗಳು ಹಾಗೂ ಟ್ರಸ್ಟ್‌ಗಳ ‌ಹೆಡ್ ಆಗಿ ಮುಂದುವರಿಸಿಕೊಂಡು ಬಂದಿದ್ದರು. ಸಂಸ್ಥೆಗಳ ಲಾಭದ 51% ಗಿಂತ ಅಧಿಕ ಪಾಲನ್ನು ಅವರು ಟಾಟಾ ಸಮಾಜಸೇವಾ ಟ್ರಸ್ಟ್ ಗಳಿಗೆ ಹಂಚಿಕೆ ಮಾಡುತ್ತಿದ್ದರು. ಕೇವಲ 1% ಗಿಂತ ಕಡಿಮೆ ಲಾಭವನ್ನು ಪಡೆಯುತ್ತಿದ್ದರು. ಅವರಿಗೆ ಪದ್ಮಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗಳು ಈಗಾಗಲೇ ದೊರೆತಿದ್ದು ಭಾರತರತ್ನ ಮಾತ್ರ ಬಾಕಿಯಿದೆ!

ನೊಂದವರ, ಬಡವರ ಬಗ್ಗೆ ಕಾಳಜಿ ಅವರಿಗೆ ರಕ್ತದಲ್ಲೇ ಬಂದಿದ್ದು ಜಗತ್ತಿನ ಅತೀ ಕಡಿಮೆ ಬೆಲೆಯ ಟಾಟಾ ನ್ಯಾನೋ ಬಡವರ ಕಾರು( ಬೆಲೆ ಕೇವಲ ಒಂದು ಲಕ್ಷ ರೂಪಾಯಿ) ರೂಪಿಸಿದ ಕೀರ್ತಿ ಅವರದ್ದು! ಬೀದಿ ನಾಯಿಗಳನ್ನು ಪೋಷಣೆ ಮಾಡುವುದರಲ್ಲಿ ಕೂಡ ಅವರು ಮಾದರಿ ಆಗಿದ್ದರು. ಒಮ್ಮೆ ತನ್ನ ಬೀದಿನಾಯಿಗಳ ಅನಾರೋಗ್ಯದ ಕಾರಣಕ್ಕೆ ಇಂಗ್ಲೆಂಡ್ ಅರಮನೆಯ ಅದ್ದೂರಿ ಸನ್ಮಾನ ನಿರಾಕರಿಸಿ ಅವರು ಭಾರೀ ಸುದ್ದಿಯಾಗಿದ್ದರು.

ರತನ್ ಟಾಟಾ ಎಲ್ಲರಂತಲ್ಲ!

ಸಂಪೂರ್ಣ ಸಸ್ಯಾಹಾರಿ ಆದ, ಮದ್ಯಪಾನದಿಂದ ಗಾವುದ ದೂರ ಇರುವ, ನಾಚಿಕೆ ಸ್ವಭಾವದ, ಹೆಚ್ಚು ಏಕಾಂತವನ್ನು ಬಯಸುವ, ಸಾಮಾಜಿಕ ಕಾರ್ಯಕ್ರಮಗಳಿಗೆ ಕಡಿಮೆ ಬರುವ, ಪ್ರಚಾರದಿಂದ ದೂರ ಇರುವ, ಪಿಯಾನೋ ನುಡಿಸುವ, ಹಳೆ ಹಿಂದಿ ಸಿನಿಮಾ ಗೀತೆಗಳನ್ನು ಗುನುಗುವ, ಸರಳವಾಗಿ ಬದುಕುತ್ತಿರುವ, ಬೀದಿ ನಾಯಿಗಳನ್ನು ಪೋಷಿಸುವ, ತುಂಬಾ ಓದುವ ಅಭ್ಯಾಸವಿರುವ ರತನ್ ಟಾಟಾ ತಮ್ಮ 86ನೇ ವಯಸ್ಸಿಗೆ ವಿದಾಯ ಹೇಳಿದ್ದಾರೆ. ಕೊರೊನಾ ಸಂದರ್ಭದಲ್ಲಿ ಬೇರೆಲ್ಲ ಕಂಪನಿಗಳು ತನ್ನ ಉದ್ಯೋಗಿಗಳಿಗೆ ವೇತನ ಕಡಿತ ಮಾಡಿದ್ದರೆ ಟಾಟಾ ಕಂಪೆನಿಯು ಪೂರ್ಣ ವೇತನ ಕೊಟ್ಟು ಮಾದರಿ ಆಗಿತ್ತು. ತನ್ನ ಜೀವನದಲ್ಲಿ 4 ಹುಡುಗಿಯರನ್ನು ಪ್ರೀತಿ ಮಾಡಿದ್ದೆ ಎಂದು ಹೇಳಿಕೊಳ್ಳುವ ಅವರಿನ್ನೂ ಮದುವೆಯಾಗದೇ ಏಕಾಂಗಿಯಾಗಿ ಜೀವಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಇನ್ನಿಲ್ಲ; ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರ ಸಂತಾಪ

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಅಸುನೀಗಿದ್ದಾರೆ. ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

By

Ratan Tata
Koo

ಬೆಂಗಳೂರು: ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ದೇಶದಲ್ಲಿ ಕೈಗಾರಿಕಾ ಸಂಸ್ಕೃತಿಯನ್ನು ಉನ್ನತ ಮೌಲ್ಯಗಳೊಂದಿಗೆ ಕಟ್ಟಿದ ಟಾಟಾ

ದೇಶದಲ್ಲಿ ಕೈಗಾರಿಕಾ ಸಂಸ್ಕೃತಿಯನ್ನು ಉನ್ನತ ಮೌಲ್ಯಗಳೊಂದಿಗೆ ಕಟ್ಟಿದ ಟಾಟಾ ಸಮೂಹದ ಆಧಾರಸ್ತಂಭಗಳಲ್ಲಿ ಒಬ್ಬರಾಗಿದ್ದ ರತನ್ ಟಾಟಾ ಅವರ ನಿಧನದಿಂದ ನಿರ್ವಾತ ಸೃಷ್ಟಿಯಾಗಿದೆ. ಅವರ ಭೌತಿಕ ಅನುಪಸ್ಥಿತಿಯು ಭಾರತಕ್ಕೂ ಕರ್ನಾಟಕಕ್ಕೂ ಬಹುದೊಡ್ಡ ನಷ್ಟ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶೋಕ ವ್ಯಕ್ತಪಡಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಎಂ.ಬಿ ಅಲ್ಲಿಂದಲೇ ತಮ್ಮ ಶೋಕ ಸಂದೇಶ ಕಳಿಸಿದ್ದು, ಉದ್ಯಮ ಲೋಕದ ದಿಗ್ಗಜನ‌ ಸಾವಿಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದರು.

ಜಮ್ಷೆಡ್ಜಿ ಟಾಟಾ ಮತ್ತು ಜೆ ಆರ್ ಡಿ ಟಾಟಾ ತಮ್ಮ ವೈವಿಧ್ಯಮಯ ಉದ್ಯಮಗಳ ಮೂಲಕ ಆಧುನಿಕ ಭಾರತವನ್ನು ಕಟ್ಟಿದರು. ಇವರ ಬಳಿಕ ಎರಡು ದಶಕಗಳ ಕಾಲ‌ ಟಾಟಾ ಸಮೂಹದ ಚುಕ್ಕಾಣಿ ಹಿಡಿದಿದ್ದ ರತನ್ ಟಾಟಾ ಅವರು, ತಮ್ಮ ಸಮೂಹವನ್ನು ಜಾಗತಿಕ ಸ್ತರದಲ್ಲಿ ವಿಸ್ತರಿಸಿದರು ಎಂದು ಸಚಿವ ಎಂ.ಬಿ ಪಾಟೀಲ್‌ ಸ್ಮರಿಸಿದ್ದರು.

ಟಾಟಾ ಸಮೂಹವು ಕರ್ನಾಟಕದಲ್ಲಿ ಕೂಡ ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿದ್ದು, ಅಪಾರ ಪ್ರಮಾಣದ ಉದ್ಯೋಗಗಳನ್ನು ಸೃಷ್ಟಿಸಿದೆ. ರತನ್ ಟಾಟಾ ಕೂಡ ಉದ್ಯಮಶೀಲತೆಯನ್ನು ಉನ್ನತ ಮಟ್ಟದ ಮೌಲ್ಯಗಳ ಜತೆ ಪ್ರತಿನಿಧಿಸುತ್ತಿದ್ದರು. ಅವರು ಸದಾ ದೇಶ ಮತ್ತು ಸಮಾಜದ ಹಿತವನ್ನು ಕೂಡ ಪರಿಗಣಿಸುತ್ತಿದ್ದರು. ಇದರೊಂದಿಗೆ ಅವರು ಟಾಟಾ ಪರಂಪರೆಯ ವಾರಸುದಾರರಾಗಿದ್ದರು ಎಂದು ಅವರು ಅಗಲಿದ ಉದ್ಯಮಿಯ ಗುಣಗಾನ ಮಾಡಿದ್ದಾರೆ.

ಉದ್ಯಮಿ ರತನ್ ಟಾಟಾ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ಸೂಚಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Ratan Tata: ರತನ್ ಟಾಟಾ ಯಾಕೆ ಮದ್ವೆ ಆಗಲಿಲ್ಲ! ತಮ್ಮ ಪ್ರೀತಿಯ ಕತೆ ಬಗ್ಗೆ ಹೇಳಿದ್ದೇನು?

Ratan Tata: ರತನ್ ಟಾಟಾ ಅವರು ಅವಿವಾಹಿತವಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದರೆ, ಅವರು ಆಲ್ಮೋಸ್ಟ್ ಮದುವೆಯಾಗಿರುವ ಕತೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಹ್ಯೂಮನ್ಸ್ ಆಫ್ ಬಾಂಬೆಗೆ (Humans of Bombay) ನೀಡಿದ ಸಂದರ್ಶನದಲ್ಲಿ ತಮ್ಮ ಆಲ್ಮೋಸ್ಟ್ ಮದುವೆ (Marriage) ಹಾಗೂ ಪ್ರೀತಿಯ (Love) ಕತೆಯನ್ನು ರತನ್ ಟಾಟಾ ಬಿಚ್ಚಿಟ್ಟಿದ್ದರು.

VISTARANEWS.COM


on

By

Why Ratan Tata didn't get married
Koo

ನವದೆಹಲಿ/ಮುಂಬೈ: ಭಾರತದ ಪ್ರಖ್ಯಾತ ಉದ್ಯಮಿ ಹಾಗೂ ಟಾಟಾ ಸನ್ಸ್‌ನ (Tata Sons) ಮಾಜಿ ಚೇರ್ಮನ್ ರತನ್ ಟಾಟಾ (Ratan Tata) ಅವರು ತಮ್ಮ ಸರಳತೆ ಹಾಗೂ ಧರ್ಮದರ್ಶಿ ಕೆಲಸಗಳಿಂದಾಗಿ ಮನ್ನಣೆ ಗಳಿಸಿದ್ದರು. ತೀವ್ರ ಅನಾರೋಗ್ಯದಿಂದ ರತನ್‌ ಟಾಟಾ ಮುಂಬೈನಲ್ಲಿ ನಿಧನ (ಅ.9) ಹೊಂದಿದ್ದಾರೆ. ಕೈಗಾರಿಕ ಉದ್ಯಮದಲ್ಲಿ ರತ್ನದಂತಿದ್ದ ರತನ್‌ ಟಾಟಾ ಅಗಲಿಕೆಗೆ ಕೋಟ್ಯಂತರ ಹೃದಯಗಳು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ರತನ್‌ ಸರಳತೆಗೆ ಹೆಸರುವಾಸಿಯಾದವರು. ರತನ್ ಟಾಟಾ ಅವರು ಅವಿವಾಹಿತವಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದರೆ, ಅವರು ಆಲ್ಮೋಸ್ಟ್ ಮದುವೆಯಾಗಿರುವ ಕತೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಹ್ಯೂಮನ್ಸ್ ಆಫ್ ಬಾಂಬೆಗೆ (Humans of Bombay) ನೀಡಿದ ಸಂದರ್ಶನದಲ್ಲಿ ತಮ್ಮ ಆಲ್ಮೋಸ್ಟ್ ಮದುವೆ (Marriage) ಹಾಗೂ ಪ್ರೀತಿಯ (Love) ಕತೆಯನ್ನು ರತನ್ ಟಾಟಾ ಬಿಚ್ಚಿಟ್ಟಿದ್ದರು.

ಲಾಸ್ ಏಂಜಲೀಸ್‌ನಲ್ಲಿ ನಾನು ಆಲ್ಮೋಸ್ಟ್ ಮದುವೆಯಾಗಿದ್ದೆ! ಆದರೆ ನನ್ನ ಅಜ್ಜಿಯೊಂದಿಗೆ ನಾನು ತಕ್ಷಣಕ್ಕೆ ಭಾರತಕ್ಕೆ ಹಿಂತಿರುಗಿದ್ದರಿಂದ ಆ ಮದುವೆಯು ಮುಂದುವರಿಯುವುದನ್ನು ಸಾಧ್ಯವಾಗಲಿಲ್ಲ. ನಾನು ಮದುವೆಯಾಗಲು ಇಚ್ಛಿಸಿದ ವ್ಯಕ್ತಿ ಸ್ವಲ್ಪ ಸಮಯದ ನಂತರ ನನ್ನೊಂದಿಗೆ ಭಾರತಕ್ಕೆ ಬರಬೇಕಾಗಿತ್ತು ಎಂದು ಅವರು ಸಂದರ್ಶನದಲ್ಲಿ ಹೇಳಿದರು.

1962ರಲ್ಲಿ ಭಾರತ-ಚೀನಾ ಯುದ್ಧವು ಪ್ರಾರಂಭವಾದ ನಂತರ ಅವರ ಸಂಗಾತಿಯು ಭಾರತಕ್ಕೆ ಭೇಟಿ ನೀಡಲು ಆಕೆಯ ಪೋಷಕರು ಅನುಮತಿಸದ ಕಾರಣ ಸಂಬಂಧವು ಮುರಿದುಬಿತ್ತು ಎಂದು ರತನ್ ಟಾಟ್ ಹೇಳಿಕೊಂಡಿದ್ದರು. ಹಾಗಾಗಿ, ನಮ್ಮೊಂದಿಗೆ ಆಲ್ಮೋಸ್ಟ್ ಮದುವೆ ಎಂಬುದಷ್ಟು ಉಳಿಯಿತು ಎಂದು ಹೇಳಿಕೊಂಡಿದ್ದರು.

ಆ ಸಂಬಂಧ ಬಳಿಕ ನಾನು, ನನ್ನ ಹೆಂಡತಿ ಎಂದು ಕರೆಯುವಂಥ ಯಾವುದೇ ವ್ಯಕ್ತಿ ನನಗೆ ದೊರೆಯಲಿಲ್ಲ. ಆ ಬಳಿಕ ನನ್ನ ಜೀವನವೇ ಒಂದು ಸಂಘರ್ಷಕ್ಕೆ ಸಿಲುಕಿಕೊಂಡಿತು. ನಾನು ನಿರಂತರವಾಗಿ ಕೆಲಸ ಮಾಡುತ್ತಾ, ಪ್ರಯಾಣ ಮಾಡುತ್ತಿದ್ದೆ. ಹಾಗಾಗಿ, ನನಗಾಗಿ ಅಂತ ಸಮಯ ತುಂಬಾ ಕಡಿಮೆ ಉಳಿಯುತ್ತಿತ್ತು. ಇಂದು, ನಾನು ನನ್ನ ಕಳೆದ ಹೋದ ದಿನಗಳ ಬಗ್ಗೆ ಯೋಚಿಸಿದರೆ, ನನಗೇನೂ ಆ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ. ಒಂದು ಕ್ಷಣಕ್ಕೆ ಆ ರೀತಿ ನನಗೆ ಅನ್ನಿಸುವುದಿಲ್ಲ ಎಂದು ರತನ್ ಟಾಟಾ ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka Weather Forecast
ಮಳೆ9 ಗಂಟೆಗಳು ago

Karnataka Weather : ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ; ನಾಳೆಗೂ ಭಾರಿ ವರ್ಷಧಾರೆ

Actor Darshan
ಬೆಂಗಳೂರು9 ಗಂಟೆಗಳು ago

Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ; ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್‌

Fake journalist arrested for targeting bakeries For money
ಬೆಂಗಳೂರು10 ಗಂಟೆಗಳು ago

Fake journalist : ಜನ ಸಾಮಾನ್ಯರ ಬಳಿ ಸುಲಿಗೆ ಮಾಡುತ್ತಿದ್ದ ನಕಲಿ‌ ಪತ್ರಕರ್ತ ಅರೆಸ್ಟ್‌

Murder case
ತುಮಕೂರು12 ಗಂಟೆಗಳು ago

Murder Case : ಬುದ್ದಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

Ratan Tata missed england's royal honour to take care of sick dogs
ದೇಶ14 ಗಂಟೆಗಳು ago

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ಮಿಸ್‌ ಮಾಡಿದ್ದರು ರತನ್‌ ಟಾಟಾ!

Ratan Tata joined the company as an ordinary employee but Why is he the guru of the industry
ದೇಶ15 ಗಂಟೆಗಳು ago

Ratan Tata : ರತನ್‌ ಟಾಟಾ ಕಂಪನಿ ಸೇರಿದ್ದು ಸಾಮಾನ್ಯ ಉದ್ಯೋಗಿಯಾಗಿ! ಉದ್ಯಮ ರಂಗದ ಗುರು ಆಗಿದ್ದೇಗೆ?

Ratan Tata
ದೇಶ15 ಗಂಟೆಗಳು ago

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಇನ್ನಿಲ್ಲ; ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರ ಸಂತಾಪ

Why Ratan Tata didn't get married
ದೇಶ15 ಗಂಟೆಗಳು ago

Ratan Tata: ರತನ್ ಟಾಟಾ ಯಾಕೆ ಮದ್ವೆ ಆಗಲಿಲ್ಲ! ತಮ್ಮ ಪ್ರೀತಿಯ ಕತೆ ಬಗ್ಗೆ ಹೇಳಿದ್ದೇನು?

Dina Bhavishya
ಭವಿಷ್ಯ16 ಗಂಟೆಗಳು ago

Dina Bhavishya : ಈ ದಿನ ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ

Heavy rain forecast in Uttara Kannada
ಮಳೆ2 ದಿನಗಳು ago

Karnataka Weather : ಇಂದು ಉತ್ತರಕನ್ನಡದಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್‌ ಘೋಷಣೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ವಾರ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌