Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ...ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯಾನಾಥ್‌ - Vistara News

ದೇಶ

Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ…ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯಾನಾಥ್‌

Yogi Adityanath: ಪಾಕಿಸ್ತಾನವು ಭಾರತದೊಂದಿಗೆ ವಿಲೀನಗೊಳ್ಳುತ್ತದೆ ಅಥವಾ ಅದು ಶಾಶ್ವತವಾಗಿ ಅಸ್ತಿತ್ವದಲ್ಲಿ ಇರುವುದಿಲ್ಲ ಎಂಬ ವಾರ್ಸಿ ಅರವಿಂದ್ ಅವರ 1947 ರ ಭವಿಷ್ಯ ನಿಜವಾಗಲಿದೆ ಎಂದು ಯೋಗಿ ಆದಿತ್ಯಾನಾಥ್‌ ಹೇಳಿದರು

VISTARANEWS.COM


on

yogi adityanath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಕಾಂಗ್ರೆಸ್‌ ಪಕ್ಷದ ಅಧಿಕಾರ ದಾಹದಿಂದ ದೇಶ ವಿಭಜನೆಯೆಂಬ ಬೆಂಕಿಯ ಕೆನ್ನಾಲಿಗೆ ಇಡೀ ದೇಶವೇ ಹೊತ್ತಿ ಉರಿಯುವಂತಹ ಸ್ಥಿತಿ ನಿರ್ಮಾಣವಾಗಿತ್ತು ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ(Uttar Pradesh Chief Minister) ಯೋಗಿ ಆದಿತ್ಯಾನಾಥ್‌(Yogi Adityanath) ಎಂದು ವಾಗ್ದಾಳಿ ನಡೆಸಿದ್ದಾರೆ. ಲಖನೌದಲ್ಲಿ ದೇಶ ವಿಭಜನೆ ಕರಾಳ ದಿನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಭಯೋತ್ಪಾದನೆಯ ರೂಪದಲ್ಲಿ ಇಂದಿಗೂ ಕಾಟ ಎದುರಿಸುತ್ತಿರುವ ಭಾರತಕ್ಕೆ ಕಾಂಗ್ರೆಸ್‌ ಪಕ್ಷ ಗಾಯವನ್ನುಂಟು ಮಾಡಿದೆ. ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಎದುರಿಸುತ್ತಿರುವ ದೌರ್ಜನ್ಯದ ಬಗ್ಗೆ ಪ್ರತಿಪಕ್ಷಗಳ ಮೌನದ ಬಗ್ಗೆಯೂ ಅವರು ಪ್ರಶ್ನೆ ಎತ್ತಿದರು.

1947 ರಲ್ಲಿ ಪಾಕಿಸ್ತಾನದಲ್ಲಿ ನಡೆದಿದ್ದು, ಈಗ ಬಾಂಗ್ಲಾದೇಶದಲ್ಲಿ ನಡೆಯುತ್ತಿದೆ. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳು ದೌರ್ಜನ್ಯವನ್ನು ಎದುರಿಸುತ್ತಿದ್ದಾರೆ. ಆದರೆ ರಾಜಕೀಯ ಹಿತಾಸಕ್ತಿಗಳಿಂದಾಗಿ, ಭಾರತದಲ್ಲಿ ಕೆಲವರು ಮೌನ ವಹಿಸುತ್ತಿದ್ದಾರೆ. 1947ರಲ್ಲಿ ಪಾಕಿಸ್ತಾನದಲ್ಲಿ ಮಿಲಿಯನ್ ಹಿಂದೂಗಳು ಮತ್ತು ಸಿಖ್ಖರನ್ನು ಕಗ್ಗೊಲೆ ಮಾಡಲಾಯಿತು. ಇಂದಿಗೂ ನಮ್ಮ ಅಕ್ಕ-ತಂಗಿಯರ ಮೇಲೆ ಅದೇ ರೀತಿಯ ಅತ್ಯಾಚಾರ, ಲೂಟಿ, ದೌರ್ಜನ್ಯಗಳು ನಡೆಯುತ್ತಿವೆ. ಅದೇ ರೀತಿಯ ದುರಂತ ಇಂದಿಗೂ ತೆರೆದುಕೊಳ್ಳುತ್ತಿದೆ. ಬಾಂಗ್ಲಾದೇಶದ 15 ಮಿಲಿಯನ್ ಹಿಂದೂಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹತಾಶವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಯೋಗಿ ಸೇರಿಸಿದರು.

ಪ್ರತಿಪಕ್ಷಗಳನ್ನು ಗುರಿಯಾಗಿಸಿ ಸಿಎಂ ಯೋಗಿ, ಭಾರತದ ‘ಜಾತ್ಯತೀತ ಜನರು’ ತಮ್ಮ ಮತ ಬ್ಯಾಂಕ್ ಕಳೆದುಕೊಳ್ಳುವ ಭಯದಿಂದ ಈ ವಿಷಯದ ಬಗ್ಗೆ ಮೌನವಾಗಿದ್ದಾರೆ. ಇಂದು ಭಾರತದಲ್ಲಿ ಜಾತ್ಯತೀತ ಜನರ ಬಾಯಿ ಮುಚ್ಚಿದೆ. ದುರ್ಬಲರ ಪರವಾಗಿ ಮಾತನಾಡಿದರೆ ತಮ್ಮ ವೋಟ್ ಬ್ಯಾಂಕ್ ಅನ್ನು ಕಳೆದುಕೊಳ್ಳುತ್ತಾರೆ ಎಂದು ಅವರು ಹೆದರುತ್ತಾರೆ, ಅವರು ತಮ್ಮ ಮತಬ್ಯಾಂಕ್ ಬಗ್ಗೆ ಕಾಳಜಿ ಹೊಂದಿದ್ದಾರೆ, ಆದರೆ ಅವರ ಮಾನವ ಸಂವೇದನೆ ಸತ್ತಿದೆ” ಪಾಕಿಸ್ತಾನವು ಭಾರತದೊಂದಿಗೆ ವಿಲೀನಗೊಳ್ಳುತ್ತದೆ ಅಥವಾ ಅದು ಶಾಶ್ವತವಾಗಿ ಅಸ್ತಿತ್ವದಲ್ಲಿ ಇರುವುದಿಲ್ಲ ಎಂಬ ವಾರ್ಸಿ ಅರವಿಂದ್ ಅವರ 1947 ರ ಭವಿಷ್ಯ ನಿಜವಾಗಲಿದೆ ಎಂದು ಅವರು ಹೇಳಿದರು.

1947ರಲ್ಲಿ ಭಾರತ ಮತ್ತು ಪಾಕಿಸ್ತಾನ ವಿಭಜನೆಯಾದಾಗ ಸುಮಾರು 15 ಲಕ್ಷ ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಬೇಕಾಯಿತು. ವಿಶೇಷವಾಗಿ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಸಮೃದ್ಧವಾಗಿರುವ ಪಂಜಾಬ್‌ನಲ್ಲಂತೂ ಪರಿಸ್ಥಿತಿ ಭೀಕರವಾಗಿತ್ತು. ವಿಭಜನೆಯಿಂದಾಗಿ ಅನೇಕ ಕಡೆ ಗಲಭೆಗಳೂ ನಡೆದವು. ಈ ಗಲಭೆಗಳಿಂದಾಗಿ ಲಕ್ಷಾಂತರ ಜನರು ಸ್ಥಳಾಂತರಗೊಳ್ಳಬೇಕಾಯಿತು. ಈ ಅವಧಿಯಲ್ಲಿ ಹಲವು ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದರು.

ಇದನ್ನೂ ಓದಿ: PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Terror Attack: ಕ್ಯಾಪ್ಟನ್‌ ಹುತಾತ್ಮರಾಗಿರುವ ಬೆನ್ನಲ್ಲೇ ಉಗ್ರನನ್ನು ಹೊಡೆದುರುಳಿಸಿದ ಸೇನೆ; ಮುಂದುವರೆದ ಕಾರ್ಯಾಚರಣೆ

Terror Attack: ನಾಲ್ವರು ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭಾರತೀಯ ಸೇನೆಯ ಯೋಧರು ದಾಳಿ ನಡೆಸಿದರು. ಗುಂಡಿನ ಚಕಮಕಿ ವೇಳೆ ಓರ್ವ ಭಯೋತ್ಪಾದಕ ಗಾಯಗೊಂಡಿರುವುದಾಗಿ ಸೇನೆ ಮಾಹಿತಿ ನೀಡಿದೆ. ಉಗ್ರರ ಜತೆಗಿನ ಕಾಳಗದಲ್ಲಿ ಹುತಾತ್ಮರಾದವರು ಭಾರತೀಯ ಸೇನೆಯ ಕ್ಯಾಪ್ಟನ್ ದೀಪಕ್‌ ಸಿಂಗ್‌ ಎಂದು ತಿಳಿದು ಬಂದಿದೆ.

VISTARANEWS.COM


on

Terror Attack
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಸೇನಾ ಕಾರ್ಯಾಚರಣೆ ವೇಳೆ ಕ್ಯಾಪ್ಟನ್‌ವೊಬ್ಬರು ಹುತಾತ್ಮರಾಗಿದ್ದಾರೆ. ಇನ್ನು ಗುಂಡಿನ ಚಕಮಕಿ(Terror Attack)ಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದ್ದು, ಮೂವರು ಉಗ್ರರು ಎಸ್ಕೇಪ್‌ ಆಗಿದ್ದಾರೆ. ಘಟನೆಯಲ್ಲಿ ಓರ್ವ ನಾಗರಿಕನೂ ಗಾಯಗೊಂಡಿದ್ದಾನೆ. ಇನ್ನು ಉಗ್ರರ ಪತ್ತೆಗೆ ಸೇನೆ ಭರ್ಜರಿ ಕಾರ್ಯಾಚರಣೆ ಕೈಗೆತ್ತಿಕೊಂಡಿದೆ.

ನಾಲ್ವರು ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭಾರತೀಯ ಸೇನೆಯ ಯೋಧರು ದಾಳಿ ನಡೆಸಿದರು. ಗುಂಡಿನ ಚಕಮಕಿ ವೇಳೆ ಓರ್ವ ಭಯೋತ್ಪಾದಕ ಗಾಯಗೊಂಡಿರುವುದಾಗಿ ಸೇನೆ ಮಾಹಿತಿ ನೀಡಿದೆ. ಉಗ್ರರ ಜತೆಗಿನ ಕಾಳಗದಲ್ಲಿ ಹುತಾತ್ಮರಾದವರು ಭಾರತೀಯ ಸೇನೆಯ ಕ್ಯಾಪ್ಟನ್ ದೀಪಕ್‌ ಸಿಂಗ್‌ ಎಂದು ತಿಳಿದು ಬಂದಿದೆ. . ಶಿವಘರ್ – ಅಸಾರ್ ವಲಯದಲ್ಲಿ ಈ ಕಾರ್ಯಾಚರಣೆ ನಡೆಯಿತು ಎಂದು ಭಾರತೀಯ ಸೇನೆಯ ಮೂಲಗಳು ಮಾಹಿತಿ ನೀಡಿವೆ.

ಅಮೆರಿಕ ಶಸ್ತ್ರಾಸ್ತ್ರ ಪತ್ತೆ

ಎನ್‌ಕೌಂಟರ್‌ ನಡೆದ ಸ್ಥಳದಿಂದ ಅಮೆರಿಕ ನಿರ್ಮಿತ ಎಂ 4 ಅಸಾಲ್ಟ್ ರೈಫಲ್, ವಿವಿಧ ಉಪಕರಣಗಳು ಹಾಗೂ ಲಾಜಿಸ್ಟಿಕ್ಸ್ ಹೊಂದಿರುವ ಮೂರು ರಕ್ತಸಿಕ್ತ ಚೀಲಗಳನ್ನು ವಶಪಡಿಸಿಕೊಳ್ಳುವಲ್ಲಿ ಸೇನೆ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಸಂಜೆ ಭಯೋತ್ಪಾದಕರ ಅಡಗುತಾಣದ ಬಗ್ಗೆ ಸೇನೆಗೆ ಸುಳಿವು ಲಭಿಸಿತ್ತು. ಹೀಗಾಗಿ ರಾತ್ರಿಯೇ ಸ್ವಲ್ಪ ಸಮಯ ಗುಂಡಿನ ಚಕಮಕಿ ನಡೆದಿತ್ತು. ಇಂದು ಬೆಳಿಗ್ಗೆ ಕಾರ್ಯಾಚರಣೆ ಪುನರಾರಂಭಿಸಲಾಯಿತು.

ಜಮ್ಮು ಮತ್ತು ಕಾಶ್ಮೀಶರದಲ್ಲಿ ಇತ್ತೀಚೆಗೆ ಉಗ್ರರ ಚಟುವಟಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಿರಿಯ ಅಧಿಕಾರಿಗಳು, ಪ್ರಮುಖ ನಾಯಕರು ಭಾಗವಹಿಸಿದರು.

ಜಮ್ಮು ಮತ್ತು ಕಾಶ್ಮೀರ ಪೀರ್ ಪಂಜಾಲ್ ರೇಂಜ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿವೆ. ಈ ವಲಯದಲ್ಲಿ ಸಾಕಷ್ಟು ಅರಣ್ಯ ಪ್ರದೇಶಗಳು ಹಾಗೂ ಬೆಟ್ಟ ಗುಡ್ಡಗಳು ಇದ್ದು, ಉಗ್ರರು ತಮ್ಮ ಅಡಗುತಾಣವನ್ನಾಗಿ ಮಾಡಿಕೊಳ್ಳಲು ಅನುಕೂಲವಾಗುವಂತಿದೆ. ಉಗ್ರರನ್ನು ನಿಯಂತ್ರಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಭದ್ರತಾ ಮ್ಯಾಟ್ರಿಕ್ಸ್ ಅನ್ನು ರೂಪಿಸಲಾಗುತ್ತಿದೆ ಎಂದು ಈ ತಿಂಗಳ ಆರಂಭದಲ್ಲಿ ಸರ್ಕಾರ ಹೇಳಿತ್ತು. ಕಳೆದ ತಿಂಗಳು ಕುಪ್ವಾರಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದರು.

ಜೂನ್‌ 16ರಂದು ಸಭೆ ನಡೆಸಿದ್ದ ಗೃಹ ಸಚಿವ ಅಮಿತ್‌ ಶಾ ಅವರು, “ಜಮ್ಮುವಿನಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿಗ್ರಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. “ಜಮ್ಮು-ಕಾಶ್ಮೀರದಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಕಾಶ್ಮೀರದಲ್ಲಿ ನಿಗ್ರಹಿಸಿದಂತೆ ಜಮ್ಮುವಿನಲ್ಲೂ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು. ಗಡಿಗಳನ್ನು ಇನ್ನಷ್ಟು ಭದ್ರಗೊಳಿಸಬೇಕು. ಒಳನುಸುಳುಕೋರರ ಮೇಲೆ ಹದ್ದಿನ ಕಣ್ಣಿಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು” ಎಂದು ಭದ್ರತಾ ಪಡೆಗಳಿಗೆ ಅಮಿತ್‌ ಶಾ ಸೂಚಿಸಿದ್ದರು. ಕೆಲ ದಿನಗಳ ಹಿಂದಷ್ಟೇ ನರೇಂದ್ರ ಮೋದಿ ಅವರು ಕೂಡ ಜಮ್ಮು-ಕಾಶ್ಮೀರ ಭದ್ರತೆ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿದ್ದರು. ಎಲ್ಲ ಸೈನಿಕರನ್ನು ಗಡಿ ಸೇರಿ ಆಯಕಟ್ಟಿನ ಪ್ರದೇಶಗಳಿಗೆ ನಿಯೋಜಿಸಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: Terrorist Attack: ಕುಪ್ವಾರ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮ: ಪಾಕ್‌ ಉಗ್ರನನ್ನು ಹೊಡೆದುರುಳಿಸಿದ ಸೇನೆ

Continue Reading

ದೇಶ

Kolkata Doctor Murder Case: ದೇಹದಲ್ಲಿ 150 ಮಿಲಿ ಗ್ರಾಂ ವೀರ್ಯ ಪತ್ತೆ- ಟ್ರೈನಿ ವೈದ್ಯೆಯ ಮೇಲೆ ಗ್ಯಾಂಗ್‌ರೇಪ್‌ ಆಗಿತ್ತಾ?

Kolkata Doctor Murder Case: ಪೋಷಕರು ಕಲ್ಕತ್ತಾ ಹೈಕೋರ್ಟ್‌ನಲ್ಲಿ ತಮ್ಮ ಪುತ್ರಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ. ಮರಣೋತ್ತರ ಪರೀಕ್ಷೆ ವರದಿ ಕೇಸ್‌ನ ದಿಕ್ಕನ್ನೇ ಬದಲಿಸಿದೆ. ಮಗಳ ದೇಹವು ಹಲವಾರು ಗಾಯದ ಗುರುತುಗಳನ್ನು ಇದ್ದು, ಇದು ಕ್ರೂರ ಮತ್ತು ಹಿಂಸಾತ್ಮಕ ದಾಳಿಯಂತೆ ಕಂಡು ಬಂದಿದೆ. ಆಕೆಯ ಕತ್ತಿನ ಮೇಲೆ ಕಚ್ಚಿರುವ ಗುರುತು ಕಂಡುಬಂದಿದೆ ಎಂದು ಹೇಳಿದ್ದಾರೆ.

VISTARANEWS.COM


on

kolkata doctor murder case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಮತ್ತು ಕೊಲೆಯಾಗಿರುವ(Kolkata Doctor Murder Case) ಟ್ರೈನಿ ವೈದ್ಯೆಯ ದೇಹದಲ್ಲಿ 150 ಮಿಲಿ ಗ್ರಾಂ ವೀರ್ಯ(Semen) ಪತ್ತೆಯಾಗಿದೆ. ಹೀಗಾಗಿ ಇದು ಒಬ್ಬನಿಂದ ಆಗಿರುವ ಕೃತ್ಯ ಅಲ್ಲ. ಇದು ಸಾಮೂಹಿಕ ಅತ್ಯಾಚಾರ(Gangrape) ಎಂದು ಸಂತ್ರಸ್ತೆಯ ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ.

ಪೋಷಕರು ಕಲ್ಕತ್ತಾ ಹೈಕೋರ್ಟ್‌ನಲ್ಲಿ ತಮ್ಮ ಪುತ್ರಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ. ಮರಣೋತ್ತರ ಪರೀಕ್ಷೆ ವರದಿ ಕೇಸ್‌ನ ದಿಕ್ಕನ್ನೇ ಬದಲಿಸಿದೆ. ಮಗಳ ದೇಹವು ಹಲವಾರು ಗಾಯದ ಗುರುತುಗಳನ್ನು ಇದ್ದು, ಇದು ಕ್ರೂರ ಮತ್ತು ಹಿಂಸಾತ್ಮಕ ದಾಳಿಯಂತೆ ಕಂಡು ಬಂದಿದೆ. ಆಕೆಯ ಕತ್ತಿನ ಮೇಲೆ ಕಚ್ಚಿರುವ ಗುರುತು ಕಂಡುಬಂದಿದೆ ಎಂದು ಹೇಳಿದ್ದಾರೆ.

ಪ್ರಕರಣವನ್ನು ಹೈಕೋರ್ಟ್‌ ಸಿಬಿಐ(CBI Probe) ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ಸಿಬಿಐ ಆರೋಪಿಯನ್ನು ತನ್ನ ವಶಕ್ಕೆ ಪಡೆದಿದೆ. ಮತ್ತೊಂದೆಡೆ ಘಟನೆಯನ್ನು ಖಂಡಿಸಿ ಇಂದು ರಾತ್ರಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಜನ ಪ್ರತಿಭಟನೆ ನಡೆಸಲಿದ್ದಾರೆ.

ಬುಧವಾರ ಮಧ್ಯಾಹ್ನ, ಮಣಿಪಾಲ, ಮೆಡಿಕಾ, ಪೀರ್‌ಲೆಸ್ ಮತ್ತು ಆರ್‌ಎನ್ ಟ್ಯಾಗೋರ್ ಸೇರಿದಂತೆ ಕೋಲ್ಕತ್ತಾದ ಪೂರ್ವ ಮೆಟ್ರೋಪಾಲಿಟನ್ ಬೈಪಾಸ್‌ನ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳು ಮುಕುಂದಪುರದಿಂದ ಬೃಹತ್‌ ಮೆರವಣಿಗೆ ಕೈಗೊಂಡರು.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ನೋ ಸೇಫ್ಟಿ…ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ

Continue Reading

ದೇಶ

Independence day 2024: ಆಗಸ್ಟ್ 15ರ ಕುರಿತ 8 ಪ್ರಶ್ನೆಗಳಿಗೆ ಇಲ್ಲಿದೆ ಕುತೂಹಲಕರ ಉತ್ತರ!

ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಗೆ (Independence day 2024) ದೇಶ ಮತ್ತೊಮ್ಮೆ ಸಾಕ್ಷಿಯಾಗುತ್ತಿದೆ. ಈ ವಿಶೇಷ ದಿನದಂದು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ನೀಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಿಚಾರಗೋಷ್ಠಿಗಳನ್ನು ನಡೆಸಲಾಗುತ್ತದೆ. ಹಲವು ಶಾಲೆ, ಕಾಲೇಜುಗಳಲ್ಲಿ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳನ್ನೂ ನಡೆಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೇಳಬಹುದಾದ ಕೆಲವು ಕುತೂಹಲಕರ ಪ್ರಶ್ನೆ, ಉತ್ತರಗಳು ಇಲ್ಲಿವೆ.

VISTARANEWS.COM


on

By

Independence Day 2024
Koo

78ನೇ ಸ್ವಾತಂತ್ರ್ಯ ದಿನಾಚರಣೆಯ (Independence day 2024) ಸಂಭ್ರಮ ಪ್ರಾರಂಭವಾಗಲು ಕ್ಷಣಗಣನೆ ಪ್ರಾರಂಭವಾಗಿದೆ. ಪ್ರತಿ ವರ್ಷ ಆಗಸ್ಟ್ 15ರಂದು (August 15) ಆಚರಿಸಲಾಗುವ ಈ ದಿನದಂದು ರಾಷ್ಟ್ರಧ್ವಜ ಹಾರಿಸುವುದು, ದೇಶ ಭಕ್ತಿ ಗೀತೆಗಳನ್ನು ಹಾಡುವುದು, ಮೆರವಣಿಗೆ, ವಿವಿಧ ಸ್ಪರ್ಧೆಗಳನ್ನು ನಡೆಸುವುದು ವಾಡಿಕೆ. ಈ ವಿಶೇಷ ದಿನದಂದು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ನೀಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಲು ಜನರು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಿಚಾರಗೋಷ್ಠಿಗಳನ್ನು ನಡೆಸುತ್ತಾರೆ. ಹಲವು ಶಾಲೆ, ಕಾಲೇಜುಗಳಲ್ಲಿ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳನ್ನೂ ನಡೆಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೇಳಬಹುದಾದ ಕೆಲವು ಪ್ರಶ್ನೆ ಮತ್ತು ಉತ್ತರಗಳು ಇಂತಿವೆ.

1947ರ ಆಗಸ್ಟ್ 15 ಭಾರತ ಸ್ವತಂತ್ರವಾದಾಗ ಅದು ಯಾವ ದಿನ(ವಾರ)ವಾಗಿತ್ತು?

1947ರ ಆಗಸ್ಟ್ 15ರಂದು ಭಾರತವು ಬ್ರಿಟಿಷ್ ವಸಾಹತುಶಾಹಿ ನಿಯಂತ್ರಣದಿಂದ ತನ್ನ ಸ್ವಾತಂತ್ರ್ಯವನ್ನು ಅಧಿಕೃತವಾಗಿ ಗುರುತಿಸಿತು. ಇದು ವಿಶ್ವ ಇತಿಹಾಸದಲ್ಲಿ ಒಂದು ಮಹತ್ವದ ದಿನ ಮತ್ತು ಭಾರತೀಯ ಉಪಖಂಡಕ್ಕೆ ಒಂದು ಮಹತ್ವದ ತಿರುವು. ಶತಮಾನಗಳ ವಿದೇಶಿ ಪ್ರಾಬಲ್ಯವನ್ನು ಕೊನೆಗೊಳಿಸಿದ ಮತ್ತು ಸ್ವರಾಜ್ಯದ ಹೊಸ ಅವಧಿಗೆ ನಾಂದಿ ಹಾಡಿದ ಈ ಐತಿಹಾಸಿಕ ಘಟನೆ ʼಶುಕ್ರವಾರʼ ನಡೆಯಿತು.


ಭಾರತದ ರಾಷ್ಟ್ರಧ್ವಜವನ್ನು ಮೊದಲ ಬಾರಿಗೆ ಎಲ್ಲಿ ಹಾರಿಸಲಾಯಿತು?

ಭಾರತದ ರಾಷ್ಟ್ರಧ್ವಜವನ್ನು 1906ರ ಆಗಸ್ಟ್ 7ರಂದು ಕೋಲ್ಕತ್ತಾದ ಪಾರ್ಸಿ ಬಗಾನ್ ಚೌಕದಲ್ಲಿ ಹಾರಿಸಲಾಯಿತು. ಹಸಿರು, ಹಳದಿ ಮತ್ತು ಕೆಂಪು ಧ್ವಜವು ಎಂಟು ಬಿಳಿ ಕಮಲಗಳನ್ನು ಅದು ಹೊಂದಿತ್ತು. ಬಳಿಕ ದೇವನಾಗರಿ ಬರವಣಿಗೆಯಲ್ಲಿ “ವಂದೇ ಮಾತರಂ” ಪದಗಳು, ಅರ್ಧಚಂದ್ರ ಮತ್ತು ಸೂರ್ಯ ಧ್ವಜದ ವಿನ್ಯಾಸವನ್ನು ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ ಅಭಿವೃದ್ಧಿಗೊಂಡಿತು. 1947ರಲ್ಲಿ ಈಗಿರುವ ಧ್ವಜ ರೂಪುಗೊಂಡಿತ್ತು.

ಭಾರತದ ರಾಷ್ಟ್ರಗೀತೆಯನ್ನು ಯಾವಾಗ ಅಧಿಕೃತವಾಗಿ ಅಂಗೀಕರಿಸಲಾಯಿತು?

ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ಅಧಿಕೃತ ರಾಷ್ಟ್ರಗೀತೆ ಇರಲಿಲ್ಲ. ರವೀಂದ್ರನಾಥ ಟ್ಯಾಗೋರ್ ಅವರು 1911ರಲ್ಲಿ ಜನ ಗಣ ಮನವನ್ನು ಬರೆದರೂ ಅದನ್ನು ಔಪಚಾರಿಕವಾಗಿ 1950ರ ಜನವರಿ 25ರಂದು ರಾಷ್ಟ್ರಗೀತೆಯಾಗಿ ಅಂಗೀಕರಿಸಲಾಯಿತು.

ಜನ ಗಣ ಮನವನ್ನು ಹಾಡಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ?

ಸರಿಯಾದ ವೇಗದಲ್ಲಿ ಹಾಡಿದಾಗ ಭಾರತೀಯ ರಾಷ್ಟ್ರಗೀತೆ ಜನ ಗಣ ಮನ, ಪೂರ್ಣಗೊಳ್ಳಲು ಸುಮಾರು 52 ಸೆಕೆಂಡುಗಳನ್ನು ಬೇಕಾಗುತ್ತವೆ.

ಲಾರ್ಡ್ ಮೌಂಟ್ ಬ್ಯಾಟನ್ ಭಾರತಕ್ಕೆ ಅಧಿಕಾರ ಹಸ್ತಾಂತರಿಸಲು ಆಗಸ್ಟ್ 15ನ್ನು ಏಕೆ ಆರಿಸಿಕೊಂಡರು?
ಬ್ರಿಟಿಷ್ ಪಾರ್ಲಿಮೆಂಟ್ ಲಾರ್ಡ್ ಮೌಂಟ್‌ಬ್ಯಾಟನ್ ಅವರಿಗೆ ಜವಾಬ್ದಾರಿಯನ್ನು ವರ್ಗಾಯಿಸಲು 1948ರ ಜೂನ್ 30ರವರೆಗೆ ಅಧಿಕಾರ ನೀಡಿತು. ಆದರೆ ಅವರು 1947ರ ಆಗಸ್ಟ್ 15 ಅನ್ನು ಆಯ್ಕೆ ಮಾಡಿದರು. ಯಾಕೆಂದರೆ ಇದು ಜಪಾನ್ ದೇಶವು ಮಿತ್ರ ಪಡೆಗಳಿಗೆ ಶರಣಾದ ಎರಡನೇ ವಾರ್ಷಿಕೋತ್ಸವವಾಗಿತ್ತು.

Independence Day 2024
Independence Day 2024


1947ರ ಆಗಸ್ಟ್ 15ರಂದು ಡಾಲರ್ ಮತ್ತು ರೂಪಾಯಿ ವಿನಿಮಯ ದರ ಎಷ್ಟಿತ್ತು?

1947ರ ಆಗಸ್ಟ್ 15ರ ಐತಿಹಾಸಿಕ ದಿನದಂದು, ಭಾರತವು ಸಾರ್ವಭೌಮತ್ವದ ಹೊಸ ಯುಗವನ್ನು ಪ್ರವೇಶಿಸಿದಾಗ 1 ಯುಎಸ್ ಡಾಲರ್ 1 ಭಾರತೀಯ ರೂಪಾಯಿ ವಿನಿಮಯ ದರವನ್ನು ಹೊಂದಿತ್ತು! ಭಾರತೀಯ ರೂಪಾಯಿ ತನ್ನ ಸ್ವತಂತ್ರ ಪ್ರಯಾಣವನ್ನು ಪ್ರಮುಖ ಜಾಗತಿಕ ಕರೆನ್ಸಿಯೊಂದಿಗೆ ಸಮಾನವಾಗಿ ಪ್ರಾರಂಭಿಸಿತು. ಆದರೆ ಈಗ ಒಂದು ಡಾಲರ್‌ ವಿನಿಮಯ ದರ ಸುಮಾರು 84 ರೂ. ಆಗಿದೆ!

ಭಾರತವನ್ನು ಹೊರತುಪಡಿಸಿ ಎಷ್ಟು ದೇಶಗಳು ಆಗಸ್ಟ್ 15ರಂದು ತಮ್ಮ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತವೆ?

ಹಲವಾರು ದೇಶಗಳು ಪ್ರಮುಖ ರಾಷ್ಟ್ರೀಯ ರಜಾದಿನಗಳನ್ನು ಅಥವಾ ತಮ್ಮ ವಿಶಿಷ್ಟ ಸ್ವಾತಂತ್ರ್ಯದ ದಿನಗಳನ್ನು ಆಗಸ್ಟ್ 15 ರಂದು ಆಚರಿಸುತ್ತವೆ.

ಇದನ್ನೂ ಓದಿ: Independence Day 2024: ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸ್ಟಿಕ್ಕರ್‌, ಮೆಸೆಜ್‌, ಇಮೇಜ್‌ ಪಡೆಯುವುದು ಹೇಗೆ?

ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಆಚರಿಸುತ್ತಿರುವಾಗ ದಕ್ಷಿಣ ಮತ್ತು ಉತ್ತರ ಕೊರಿಯಾಗಳು ಜಪಾನಿನ ಆಕ್ರಮಣದಿಂದ ತಮ್ಮ ವಿಮೋಚನೆಯನ್ನು ನೆನಪಿಸಿಕೊಳ್ಳುತ್ತವೆ. ಕಾಂಗೋ ಗಣರಾಜ್ಯವು ಫ್ರಾನ್ಸ್‌ನಿಂದ ಪಡೆದ ಸ್ವಾತಂತ್ರ್ಯವನ್ನು ಸ್ಮರಿಸುತ್ತದೆ. ಆದರೆ ಬಹ್ರೇನ್ ಬ್ರಿಟಿಷ್ ಒಪ್ಪಂದದ ಸಂಬಂಧಗಳನ್ನು ಅನುಸರಿಸಿ ಸಾರ್ವಭೌಮ ರಾಷ್ಟ್ರವೆಂದು ಗುರುತಿಸಲ್ಪಟ್ಟ ದಿನವನ್ನು ಗುರುತಿಸುತ್ತದೆ. ಗಮನಾರ್ಹವಾಗಿ, ಲಿಚ್ಟೆನ್‌ಸ್ಟೈನ್‌ನ ಪುಟ್ಟ ರಾಷ್ಟ್ರವು ತನ್ನ ರಾಷ್ಟ್ರೀಯ ದಿನವನ್ನು ಸ್ಮರಿಸುತ್ತದೆ.

Continue Reading

ದೇಶ

Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪಿ ಸಿಬಿಐ ವಶಕ್ಕೆ

Kolkata Doctor Murder Case: ಬುಧವಾರ ಮಧ್ಯಾಹ್ನ, ಮಣಿಪಾಲ, ಮೆಡಿಕಾ, ಪೀರ್‌ಲೆಸ್ ಮತ್ತು ಆರ್‌ಎನ್ ಟ್ಯಾಗೋರ್ ಸೇರಿದಂತೆ ಕೋಲ್ಕತ್ತಾದ ಪೂರ್ವ ಮೆಟ್ರೋಪಾಲಿಟನ್ ಬೈಪಾಸ್‌ನ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳು ಮುಕುಂದಪುರದಿಂದ ಬೃಹತ್‌ ಮೆರವಣಿಗೆ ಕೈಗೊಂಡರು.

VISTARANEWS.COM


on

kolkata doctor murder case
Koo

ಕೋಲ್ಕತಾ: ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣವನ್ನು ಹೈಕೋರ್ಟ್‌ ಸಿಬಿಐ(CBI Probe) ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ಸಿಬಿಐ ಆರೋಪಿಯನ್ನು ತನ್ನ ವಶಕ್ಕೆ ಪಡೆದಿದೆ. ಮತ್ತೊಂದೆಡೆ ಘಟನೆಯನ್ನು ಖಂಡಿಸಿ ಇಂದು ರಾತ್ರಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಜನ ಪ್ರತಿಭಟನೆ ನಡೆಸಲಿದ್ದಾರೆ.

ಬುಧವಾರ ಮಧ್ಯಾಹ್ನ, ಮಣಿಪಾಲ, ಮೆಡಿಕಾ, ಪೀರ್‌ಲೆಸ್ ಮತ್ತು ಆರ್‌ಎನ್ ಟ್ಯಾಗೋರ್ ಸೇರಿದಂತೆ ಕೋಲ್ಕತ್ತಾದ ಪೂರ್ವ ಮೆಟ್ರೋಪಾಲಿಟನ್ ಬೈಪಾಸ್‌ನ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳು ಮುಕುಂದಪುರದಿಂದ ಬೃಹತ್‌ ಮೆರವಣಿಗೆ ಕೈಗೊಂಡರು.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

Continue Reading
Advertisement
Terror Attack
ದೇಶ22 mins ago

Terror Attack: ಕ್ಯಾಪ್ಟನ್‌ ಹುತಾತ್ಮರಾಗಿರುವ ಬೆನ್ನಲ್ಲೇ ಉಗ್ರನನ್ನು ಹೊಡೆದುರುಳಿಸಿದ ಸೇನೆ; ಮುಂದುವರೆದ ಕಾರ್ಯಾಚರಣೆ

Viral Video
Latest24 mins ago

Viral Video: ಶಾಲೆಯಲ್ಲಿ ಶಿಕ್ಷಕಿ, ಶಿಕ್ಷಕನ ನಡುವೆ ಭೀಕರ ಮಾರಾಮಾರಿ! ವಿಡಿಯೊ ನೋಡಿದವರಿಗೆ ಗಾಬರಿ!

Sexual Abuse
Latest51 mins ago

Sexual Abuse: ದಲಿತ ಬಾಲಕಿಯನ್ನು ಅಪಹರಿಸಿ ಇಸ್ಲಾಂಗೆ ಮತಾಂತರ; ಮುಸ್ಲಿಂ ಧರ್ಮಗುರು ಬಂಧನ

Government Employees
ಕರ್ನಾಟಕ1 hour ago

Government Employees: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ.17ಕ್ಕೆ ಅಭಿನಂದನಾ ಸಮಾರಂಭ, ಕಾರ್ಯಾಗಾರ: ಸಿ.ಎಸ್. ಷಡಾಕ್ಷರಿ

Viral News
Latest1 hour ago

Viral News: ಭರತನಾಟ್ಯ ರಂಗಪ್ರವೇಶ ಮಾಡಿ ಇತಿಹಾಸ ನಿರ್ಮಿಸಿದ 13 ವರ್ಷದ ಚೀನೀ ಬಾಲಕಿ

kolkata doctor murder case
ದೇಶ1 hour ago

Kolkata Doctor Murder Case: ದೇಹದಲ್ಲಿ 150 ಮಿಲಿ ಗ್ರಾಂ ವೀರ್ಯ ಪತ್ತೆ- ಟ್ರೈನಿ ವೈದ್ಯೆಯ ಮೇಲೆ ಗ್ಯಾಂಗ್‌ರೇಪ್‌ ಆಗಿತ್ತಾ?

Sexual Abuse
Latest1 hour ago

Sexual Abuse: ಹಿಂದೂ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಬಲವಂತವಾಗಿ ಗೋಮಾಂಸ ತಿನ್ನಿಸಿ ದೌರ್ಜನ್ಯ

Independence Day 2024
ದೇಶ2 hours ago

Independence day 2024: ಆಗಸ್ಟ್ 15ರ ಕುರಿತ 8 ಪ್ರಶ್ನೆಗಳಿಗೆ ಇಲ್ಲಿದೆ ಕುತೂಹಲಕರ ಉತ್ತರ!

Disha Patani Goes Bold in Strapless Gown As She Flaunts Her Curves During Sexy Photoshoot
ಬಾಲಿವುಡ್2 hours ago

Disha Patani: ಬೋಲ್ಡ್‌ ಫೋಟೊಶೂಟ್‌ನಲ್ಲಿ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ದಿಶಾ ಪಟಾನಿ!

Google AI Robot
ತಂತ್ರಜ್ಞಾನ2 hours ago

Google AI Robot: ಟೇಬಲ್ ಟೆನಿಸ್ ಅಂಗಳಕ್ಕೂ ಇಳಿದ ರೋಬೋಟ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌