ಸೆಗಣಿಯಿಂದ CNG‌ : ಸಿಎಂ ಯೋಗಿ ಪ್ಲ್ಯಾನ್, ಮಸೀದಿಯ ಲೌಡ್ ಸ್ಪೀಕರ್ ಶಾಲೆ, ಆಸ್ಪತ್ರೆಗೆ - Vistara News

ದೇಶ

ಸೆಗಣಿಯಿಂದ CNG‌ : ಸಿಎಂ ಯೋಗಿ ಪ್ಲ್ಯಾನ್, ಮಸೀದಿಯ ಲೌಡ್ ಸ್ಪೀಕರ್ ಶಾಲೆ, ಆಸ್ಪತ್ರೆಗೆ

ಸೆಗಣಿಯಿಂದ CNG: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರ ಪ್ಲ್ಯಾನ್‌ ಭಾರಿ ಕುತೂಹಲ ಕೆರಳಿಸಿದೆ. ಒಂದು ಕೆಜಿ ಸೆಗಣಿಗೆ 1 ರೂ ಕೊಟ್ಟು ಖರೀದಿಯೂ ನಡೆಯಲಿದೆಯಂತೆ.

VISTARANEWS.COM


on

Yogi adityanath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಲಖನೌ: ಉತ್ತರ ಪ್ರದೇಶದಲ್ಲಿ ಗೋವುಗಳ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಗೋವುಗಳು ಸರ್ವೋಪಯೋಗಿ ಎನ್ನುವುದನ್ನು ಶ್ರುತಪಡಿಸುವ ನಿಟ್ಟಿನಲ್ಲಿ ಇನ್ನೊಂದು ಹೆಜ್ಜೆ ಮುಂದಿಟ್ಟಿರುವ ಅವರು ಸೆಗಣಿಯಿಂದ ಸಿಎನ್‌ಜಿ (ಸೆಗಣಿಯಿಂದ CNG) ಅನಿಲ ತಯಾರಿಸುವ ಹೊಸ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸಂಬಂಧಿಸಿದ ಪಾಂಚಜನ್ಯ ಮತ್ತು ಆರ್ಗನೈಜರ್‌ ಪತ್ರಿಕೆಗಳು ಆಯೋಜಿಸಿದ ಮಾಧ್ಯಮ ಸಮಾವೇಶದಲ್ಲಿ ವರ್ಚುವಲ್‌ ಆಗಿ ಮಾತನಾಡಿದ ಅವರು, ಗೋ ರಕ್ಷಣಾ ಕಾಯಿದೆ ಜಾರಿಗೆ ಬಂದ ಬಳಿಕ ರಾಜ್ಯದ ಬೀದಿಗಳಲ್ಲಿ ಹೆಚ್ಚುತ್ತಿರುವ ಗೋವುಗಳ ಓಡಾಟದ ಸಮಸ್ಯೆ ನಿವಾರಣೆಗೆ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು.

ಇದನ್ನೂ ಓದಿ|ಉತ್ತರ ಪ್ರದೇಶದಲ್ಲಿ ಈ ಬಾರಿ ರಸ್ತೆಯಲ್ಲಿ ನಮಾಜ್‌ ನಡೆದಿಲ್ಲ: ಇತಿಹಾಸದಲ್ಲೆ ಮೊದಲು

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚಲಾಗಿದೆ. ಇದರಿಂದಾಗಿ ಗೋವುಗಳ ಕಳ್ಳಸಾಗಣೆ ಕಡಿಮೆಯಾಗಿದೆ. ಹೀಗಾಗಿ ಬೀದಿಗಳಲ್ಲಿ ತಿರುಗಾಡುವ, ಹೊಲಗಳಿಗೆ ನುಗ್ಗುವ ಗೋವುಗಳ ಕಾಟ ಜಾಸ್ತಿಯಾಗಿದೆ. ಈ ಸಮಸ್ಯೆಯ ನಿವಾರಣೆಗೆ ರಾಜ್ಯದಲ್ಲಿ 5600 ಗೋಶಾಲೆಗಳನ್ನು ನಿರ್ಮಿಸಲಾಗಿದೆ ಎಂದು ಅವರು ವಿವರಿಸಿದರು.

ಗೋವುಗಳ ಸಂಖ್ಯೆ ಹೆಚ್ಚಳದಿಂದ ಸೆಗಣಿ ಯಥೇಚ್ಛವಾಗಿ ಸಿಗುತ್ತಿದೆ. ಒಂದು ರೂಪಾಯಿಗೆ ಒಂದು ಕೆಜಿ ಸೆಗಣಿಯನ್ನು ಖರೀದಿಸಬಹುದಾಗಿದೆ. ಇದನ್ನು ಬಳಸಿಕೊಂಡು ವಾಹನಗಳಿಗೆ ಅಗತ್ಯವಾದ ಸಿಎನ್‌ಜಿ ಅನಿಲ ಉತ್ಪಾದನೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಲೌಡ್‌ ಸ್ಪೀಕರ್‌ ವಿಲೇವಾರಿ
ರಾಜ್ಯದಲ್ಲಿ ಮುಂಜಾನೆ ಹೊತ್ತು ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಮಸೀದಿಗಳ ಅನಧಿಕೃತ ಲೌಡ್‌ ಸ್ಪೀಕರ್‌ಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಹೀಗೆ ತೆರವುಗೊಳಿಸಿದ ಮೈಕ್‌ಗಳನ್ನು ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಹಸ್ತಾಂತರಿಸಲಾಗುವುದು ಎಂದು ಸಿಎಂ ಯೋಗಿ ಹೇಳಿದರು.

ಬಹುತೇಕ ರಾಜ್ಯಗಳಲ್ಲಿ ಚುನಾವಣೆ ಬಳಿಕ ದೊಂಬಿಗಳು ನಡೆಯುತ್ತಿದೆ. ಆದರೆ, ಉತ್ತರ ಪ್ರದೇಶದಲ್ಲಿ ಅದು ನಡೆದಿಲ್ಲ. ಬಿಜೆಪಿ ಸರಕಾರ ಬಂದ ಮೇಲೆ ರಾಮನವಮಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಹನುಮಾನ್‌ ಜಯಂತಿ ಅತ್ಯಂತ ಶಾಂತವಾಗಿ ನಡೆದುಹೋಗುತ್ತಿದೆ. ಹಿಂದೆ ನಿರಂತರ ಹಿಂಸಾಚಾರ, ದೊಂಬಿ ನಡೆಯುತ್ತಿದ್ದ ಉತ್ತರ ಪ್ರದೇಶದ ಈಗಿನ ಸ್ಥಿತಿ ಇದು ಎಂದು ವಿವರಿಸಿದರು.

ಎಲ್ಲರೂ ನೋಡಿರುವಂತೆ ಇದೇ ಮೊದಲ ಬಾರಿಗೆ ಈ ಸಲ ಈದ್‌ ನಮಾಜ್‌ ರಸ್ತೆಗಳ ಮೇಲೆ ನಡೆದಿಲ್ಲ. ಈಗ ಮಸೀದಿಗಳ ಆಜಾನ್‌ನ ಸದ್ದು ಕಡಿಮೆಯಾಗಿದೆ. ಅನಧಿಕೃತ ಲೌಡ್‌ ಸ್ಪೀಕರ್‌ಗಳನ್ನು ಕಿತ್ತೇ ಹಾಕಲಾಗಿದೆ ಎಂದು ವಿವರಿಸಿದರು. ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಒಂದೊಂದು ಯಾತ್ರಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಹೊಸ ಮದರಸಾಗಳಿಗೆ ಇಲ್ಲ ಅನುದಾನ; ಯೋಗಿ ಆದಿತ್ಯನಾಥ್‌ ಸರ್ಕಾರದ ನೂತನ ನಿಯಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

VISTARANEWS.COM


on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರ ರಚನೆ ಕಸರತ್ತುಗಳು ತೀವ್ರಗೊಳ್ಳುತ್ತಿವೆ. ಮೇ 9ರಂದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಗಳಿವೆ. ಶನಿವಾರ ಪ್ರಮಾಣವಚನ ಸಮಾರಂಭ ನೆರವೇರಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಶುಕ್ರವಾರಕ್ಕೂ ಮೊದಲು ಹೊಸ ಸಿಎಂ ಹೆಸರು ಘೋಷಣೆಯಾಗಲಿದೆ. ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್‌ ಶಾ ಪಶ್ಚಿಮ ಬಂಗಾಳದಲ್ಲಿ ಗೆಲುವು ಸಾಧಿಸಿರುವ ಎಲ್ಲಾ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಆ ಬಳಿಕ ಹೊಸ ಮುಖ್ಯಮಂತ್ರಿಯ ಘೋಷಣೆಯಾಗಲಿದೆ. ಮುಖ್ಯಮಂತ್ರಿ ರೇಸ್‌ನಲ್ಲಿ ಸುವೆಂದು ಅಧಿಕಾರಿ ಮುಂಚೂಣಿಯಲ್ಲಿದ್ದಾರೆ. ದಿಲೀಪ್‌ ಘೋಷ್‌, ಶಮಿಕ್‌ ಭಟ್ಟಾಚಾರ್ಯ, ರೂಪಾ ಗಂಗೂಲಿ ಹೆಸರುಗಳೂ ಕೇಳಿಬರುತ್ತಿವೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕವೂ ತಾನು ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎನ್ನುತ್ತಿದ್ದಾರೆ ಮಮತಾ ಬ್ಯಾನರ್ಜಿ. ಇದೇ ವೇಳೆ ಶುಕ್ರವಾರ ಪಶ್ಚಿಮ ಬಂಗಾಳ ವಿಧಾನಸಭೆ ಅವಧಿ ಮುಗಿಯಲಿದೆ. ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡಲಿ, ಕೊಡದೇ ಇರಲಿ, ಅದು ಯಾವುದೇ ಪರಿಣಾಮ ಬೀರಲ್ಲ. ಯಾಕಂದರೆ, ವಿಧಾನಸಭೆಯ ಅವಧಿ ಮುಗಿದ ಬಳಿಕ ಸಂಪೂರ್ಣ ಮಂತ್ರಿ ಮಂಡಲವೇ ಮಾಜಿ ಆಗಲಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ತನಕ ಕೇರ್‌ ಟೇಕರ್‌ ಆಗಿ ಮಮತಾ ಬ್ಯಾನರ್ಜಿ ಇರಬಹುದು, ಅಷ್ಟೇ. ಹಾಗಾಗಿ ಈಗ ಮಮತಾ ಬ್ಯಾನರ್ಜಿ ರಾಜೀನಾಮೆ ಪ್ರಶ್ನೆಯೇ ಅಪ್ರಸ್ತುತ.

Continue Reading

Latest

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

VISTARANEWS.COM


on

ತಮಿಳುನಾಡಿನಲ್ಲಿ ಇದೀಗ ಹೊಸ ಶಕೆ ಆರಂಭವಾಗಲಿದೆ. ಜೆನ್‌ ಜಿ ಹಾಗೂ ಮಿಲೇನಿಯಲ್‌ ಗಳ ಫೇವರಿಟ್‌ ಜೋಸೆಫ್‌ ವಿಜಯ್‌ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮೇ.7 ಗುರುವಾರ ದಳಪತಿ ವಿಜಯ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ.

ಕಲರ್‌ಫುಲ್‌ ರಾಜಕಾರಣಕ್ಕೆ ಹೆಸರಾದ ದ್ರಾವಿಡ ನಾಡಿನಲ್ಲಿ ಮತ್ತೊಮ್ಮೆ ಚಿತ್ರನಟ ಸಿಎಂ ಆಗಿ ಅಧಿಕಾರದ ಗದ್ದುಗೆ ಏರಲಿದ್ದಾರೆ. 234 ಕ್ಷೇತ್ರಗಳನ್ನು ಹೊಂದಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್‌ ಅವರ ಟಿವಿಕೆ 108 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಅಗ್ರ ಸ್ಥಾನದಲ್ಲಿ ನಿಂತಿದೆ. ಆದರೆ, ಅಧಿಕಾರಕ್ಕೇರಲು ಇನ್ನೂ 10 ಸ್ಥಾನಗಳ ಕೊರತೆಯಿದ್ದು, ಕಾಂಗ್ರೆಸ್‌ ಸೇರಿದಂತೆ ವಿಸಿಕೆ, ಸಿಪಿಐ, ಸಿಪಿಎಂ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಲು ದಳಪತಿ ಸೇನೆ ಸಿದ್ದತೆ ನಡೆಸುತ್ತಿದೆ. ಮತ್ತೊಂದೆಡೆ ಎಐಎಡಿಎಂಕೆ ಹಲವು ಶಾಸಕರು ಟಿವಿಕೆ ಗೆ ಬೆಂಬಲ ನೀಡುವ ಯೋಚನೆಯಲ್ಲಿದ್ದು, ಈ ವಿಚಾರದಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಸದ್ಯ ಭಿನ್ನಮತ ಕಾಣಿಸಿಕೊಂಡಿದೆ.

ಮೇ 7 ಗುರುವಾರ ದಳಪತಿ ಖ್ಯಾತಿಯ ವಿಜಯ್‌ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಜಯ್‌ ಜೊತೆಗೆ 9 ಜನ ಕ್ಯಾಬಿನೆಟ್‌ ಸಚಿವರು ಸಹ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ವಿಜಯ್‌ ಕ್ಯಾಬಿನೆಟ್‌ನಲ್ಲಿ ಕಾಂಗ್ರೆಸ್‌ ಸಹ ಸೇರಲಿದೆ ಎನ್ನಲಾಗುತ್ತಿದೆ. ಈಗಾಗಲೇ ವಿಜಯ್‌ ಪ್ರಮಾಣ ಸ್ವೀಕಾರಕ್ಕೆ ಚೆನ್ನೈನಲ್ಲಿ ಸಿದ್ಧತೆಗಳನ್ನು ಆರಂಭಿಸಲಾಗಿದೆ.

ನಿಷ್ಠಾವಂತ ಹಿರಿಯ ನಾಯಕರು ಹಾಗೂ ಹೊಸಬರ ಸಮ್ಮಿಲನದೊಂದಿಗೆ ವಿಜಯ್‌ ಅವರ ಕ್ಯಾಬಿನೆಟ್‌ ರಚನೆಯಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡು ಟಿವಿಕೆ ಸೇರಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಹಿರಿಯ ನಾಯಕ ಕೆ.ಎ.ಸೆಂಗೋಟ್ಟೈಯನ್‌ ಅವರಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇದರ ಜೊತೆಗೆ ಜೆನ್‌ ಜಿ ಗಳ ಪ್ರತಿನಿಧಿಗಳಾಗಿ ಚುನಾವಣೆಯಲ್ಲಿ ಗೆದ್ದ ಯುವ ನಾಯಕರಿಗೆ ವಿಜಯ್‌ ಕ್ಯಾಬಿನೆಟ್‌ ನಲ್ಲಿ ಪ್ರಾಮುಖ್ಯತೆ ಸಿಗುವ ಸಾಧ್ಯತೆಯಿದೆ.

ಇದರ ಜೊತೆಗೆ ಟಿವಿಕೆ ಚುನಾವಣಾ ಪ್ರಣಾಳಿಕೆಯ ವೇಳೆ ತಮಿಳುನಾಡಿನ ಜನರಿಗೆ ಘೋಷಿಸಿರುವ ಉಚಿತ ಭರವಸೆಗಳನ್ನ ಹೇಗೆ ಜಾರಿಗೆ ತರಲಿದೆ, ಅವುಗಳಲ್ಲಿ ಯಾವುದಾದ್ರೂ ಒಂದು ಯೋಜನೆಯನ್ನು ಮೊದಲ ದಿನವೇ ಜಾರಿಗೆ ತರುತ್ತಾರಾ ಎಂಬ ಕುತೂಹಲವೂ ಇದೆ.

ಒಟ್ಟಿನಲ್ಲಿ ನಾಳೆಯ ವಿಜಯ್‌ ಪ್ರಮಾಣ ವಚನದ ಕಡೆಗೆ ತಮಿಳುನಾಡು ಸೇರಿದಂತೆ ದೇಶದ ಜನತೆಯ ದೃಷ್ಠಿ ನೆಟ್ಟಿದೆ. ವಿಜಯ್‌ ಅಧಿಕಾರ ಸ್ವೀಕರಿಸಿದ ನಂತರ ಫಸ್ಟ್‌ ಡೇ ಫಸ್ಟ್‌ ಶೋ ಹೇಗಿರಲಿದೆ ಅನ್ನೋದಕ್ಕೆ ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.

Continue Reading

Latest

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯವಾಗಿ ಸೋಲನುಭವಿಸಿದರೂ ತಾನು ಮಾತ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಇಂದು ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಾವು ಪಶ್ಚಿಮ ಬಂಗಾಳದಲ್ಲಿ ಸೋತಿಲ್ಲ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆದಿಲ್ಲ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೆ. ಆದರೆ ಈಗ ರಾಜಭವನಕ್ಕೆ ಹೋಗುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಇವಿಎಂಗಳ ಲೂಟಿ ಮಾಡಲಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಸೇರಿಕೊಂಡಿದೆ. ಆದರೆ ನೈತಿಕವಾಗಿ ನಾವು ಗೆಲುವನ್ನು ಸಾಧಿಸಿದ್ದೇವೆ ಎಂದಿದ್ದಾರೆ.

Continue Reading

Latest

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ 206 ಸೀಟುಗಳನ್ನು ಗೆದ್ದಿದೆ. ಮೂರನೇ ಎರಡರಷ್ಟು ಬಹುಮತ ಪಕ್ಷಕ್ಕೆ ಸಿಕ್ಕಿದೆ. ಮಮತಾ ಬ್ಯಾನರ್ಜಿ ತನ್ನ ತವರು ಕ್ಷೇತ್ರ ಭವಾನಿಪುರದಲ್ಲೇ ಸೋತಿದ್ದಾರೆ. ಮಮತಾ ಬ್ಯಾನರ್ಜಿಯನ್ನೇ ಸೋಲಿಸಿ ಬಿಜೆಪಿಯ ಸುವೇಂದು ಅಧಿಕಾರಿ, ರಣಧೀರ ಅನ್ನಿಸಿಕೊಂಡಿದ್ದಾರೆ. ನಂದಿಗ್ರಾಮದಲ್ಲೂ ಸುವೇಂದು ಅಧಿಕಾರಿ ಜಯಭೇರಿ ಬಾರಿಸಿದ್ದಾರೆ. ಹಾಗಾದರೆ, ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾ?. ಬಿಜೆಪಿಯ ಯಾವತ್ತಿಗೂ ಅಚ್ಚರಿಯ ನಿರ್ಧಾರ ಪ್ರಕಟಿಸುವಲ್ಲಿ ಎತ್ತಿದ ಕೈ. ಹಾಗಾಗಿ, ಪಶ್ಚಿಮ ಬಂಗಾಳದ ಸಿಎಂ ಯಾರಾಗಬಹುದು? ರೇಸ್‌ನಲ್ಲಿ ಇರೋರು ಯಾರು?
1. ಸುವೇಂದು ಅಧಿಕಾರಿ:
ಸದ್ಯ ಪಶ್ಚಿಮ ಬಂಗಾಳದ ಪ್ರತಿಪಕ್ಷ ನಾಯಕ. ಒಂದು ಕಾಲದಲ್ಲಿ ಟಿಎಂಸಿಯಲ್ಲಿದ್ದಾಗ ಮಮತಾ ಬ್ಯಾನರ್ಜಿ ಪರಮಾಪ್ತ. ಬಿಜೆಪಿಗೆ ಬಂದ ನಂತರ ದೀದಿಯ ಪ್ರಥಮ ಎದುರಾಳಿ. ದೀದಿಯನ್ನು ಅವರ ಭದ್ರಕೋಟೆ ಭವಾನಿಪುರದಲ್ಲೇ ಸೋಲಿಸಿದ ಖ್ಯಾತಿ. ನಂದಿಗ್ರಾಮವನ್ನೂ ಸಹ ಗೆದ್ದಿದ್ದಾರೆ. ಬಿಜೆಪಿಯ ಚುನಾವಣಾ ಯಂತ್ರ ಮುನ್ನಡೆಸಿದ ನೇತಾರ. ಮಮತಾಗೆ ತಕ್ಕ ಟಕ್ಕರ್‌ ಕೊಡಬಲ್ಲ ಬಿಜೆಪಿಯ ಫೈರ್‌ಬ್ರಾಂಡ್‌ ನಾಯಕ. ಸದ್ಯ ರೇಸ್‌ನಲ್ಲಿ ಮುಂಚೂಣಿಯಲ್ಲಿರುವುದು ಸುವೇಂದು ಅಧಿಕಾರಿ.
2. ಶಮಿಕ್‌ ಭಟ್ಟಾಚಾರ್ಯ:
ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ. ಬಿಜೆಪಿಯನ್ನು ತಳಮಟ್ಟದಲ್ಲಿ ಸಂಘಟಿಸಿದ ಲೀಡರ್‌. ಬೂತ್‌ ಮ್ಯಾನೇಜ್ಮೆಂಟ್‌, ಚುನಾವಣಾ ರಣತಂತ್ರ, ಕಾರ್ಯಕರ್ತರ ನಾಡಿ ಮಿಡಿತ ಅರಿಯಬಲ್ಲ ನಾಯಕ. ಗುಪ್ತಗಾಮಿನಿಯಾಗಿ ಬಿಜೆಪಿಯ ಪ್ರಚಾರ ತಂತ್ರ ನಿರ್ವಹಿಸಿದ್ದರು.
3. ದಿಲೀಪ್‌ ಘೋಷ್‌:
2019ರಿಂದ ಬಂಗಾಳದಲ್ಲಿ ಬಿಜೆಪಿಯನ್ನು ಸಂಘಟಿಸಿದ್ದವರು ದಿಲೀಪ್‌ ಘೋಷ್‌. ಬಿಜೆಪಿ ಬಂಗಾಳದಲ್ಲಿ ಮೂರು ಸ್ಥಾನಗಳಿಂದ 206 ಸ್ಥಾನಗಳಿಗೇರುವಲ್ಲಿ ದಿಲೀಪ್‌ ಘೋಷ್‌ ಪಾತ್ರ ದೊಡ್ಡದು. ಕಾರ್ಯಕರ್ತರಿಗೆ ಕನೆಕ್ಟ್‌ ಆಗುವ ಅನುಭವಿ ನಾಯಕ.
4. ರೂಪಾ ಗಂಗೂಲಿ:
ಮಹಾಭಾರತ ಧಾರಾವಾಹಿಯ “ದ್ರೌಪದಿ” ಪಾತ್ರಧಾರಿಯೇ ರೂಪಾ ಗಂಗೂಲಿ. ಕಿರುತೆರೆ ಧಾರಾವಾಹಿ ಕಾರಣದಿಂದ ಜನಮನದಲ್ಲಿರುವ ನಾಯಕಿ. ಮಮತಾಗೆ ಪರ್ಯಾಯವಾಗಿ ಮಹಿಳಾ ನಾಯಕಿಯನ್ನೇ ಬೆಳೆಸಬೇಕು ಎಂಬ ರಣತಂತ್ರ ಬಿಜೆಪಿಯಲ್ಲಿದ್ದರೆ, ರೂಪಾ ಗಂಗೂಲಿ ಹೆಸರು ಪ್ರಸ್ತಾಪವಾದರೆ ಅಚ್ಚರಿಯಿಲ್ಲ.
5. ಅಗ್ನಿಮಿತ್ರಾ ಪೌಲ್‌:
ಬಿಜೆಪಿಯ ಹೊಸ ತಲೆಮಾರಿನ ಫೈರ್‌ ಬ್ರಾಂಡ್‌ ನಾಯಕಿ. ಮಹಿಳಾ ವಿಷಯಗಳ ಬಗ್ಗೆ ಖಡಕ್‌ ಧ್ವನಿ ಎತ್ತುವ ಅಗ್ನಿಮಿತ್ರಾ, ಮಾಧ್ಯಮಗಳಲ್ಲಿ ಬಿಜೆಪಿ ಇಮೇಜ್‌ ಬೆಳೆಸುವಲ್ಲಿ ದೊಡ್ಡ ಹೆಸರು. ಮಹಿಳಾ ನಾಯಕಿ ಎಂಬ ಕೆಟಗರಿಯಲ್ಲಿ ಅಗ್ನಿಮಿತ್ರಾ ಪೌಲ್‌ ಸ್ಪರ್ಧೆಯಲ್ಲಿದ್ದಾರಂತೆ.

Continue Reading
Advertisement
Latest1 hour ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 hours ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest21 hours ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest1 day ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest1 day ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest2 days ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest2 days ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest2 days ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest2 days ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌